Robbery Case: ಕಾರಿನಲ್ಲಿ ಬಂದ ಡಕಾಯಿತರು; ಬ್ಯಾಗ್‌ ಕಸಿಯಲು ವಿದ್ಯಾರ್ಥಿನಿಯನ್ನು 20 ಅಡಿ ದೂರ ಎಳೆದೊಯ್ದರು! ಆಘಾತಕಾರಿ ವಿಡಿಯೊ - Vistara News

ಕ್ರೈಂ

Robbery Case: ಕಾರಿನಲ್ಲಿ ಬಂದ ಡಕಾಯಿತರು; ಬ್ಯಾಗ್‌ ಕಸಿಯಲು ವಿದ್ಯಾರ್ಥಿನಿಯನ್ನು 20 ಅಡಿ ದೂರ ಎಳೆದೊಯ್ದರು! ಆಘಾತಕಾರಿ ವಿಡಿಯೊ

Robbery Case: ದುಡಿದು ಜೀವನ ಸಾಗಿಸುವುದಕ್ಕೆ ಸಾವಿರ ದಾರಿಯಿದ್ದರೂ, ಕೆಲವರು ಕಳ್ಳತನವನ್ನೇ ಕಾಯಕವನ್ನಾಗಿಸಿಕೊಂಡಿದ್ದಾರೆ. ಬಸ್‌ಗಾಗಿ ಕಾಯುತ್ತಿದ್ದ ಕಾಲೇಜು ವಿದ್ಯಾರ್ಥಿನಿಯಿಂದ ದರೋಡೆಕೋರರು ಸರ, ಮೊಬೈಲ್ ಫೋನ್ ಮತ್ತು ಪರ್ಸ್ ಕಸಿದುಕೊಳ್ಳಲು ಪ್ರಯತ್ನಿಸಿದ್ದಾರೆ. ಅವಳ ಕುತ್ತಿಗೆಯಲ್ಲಿದ್ದ ಬ್ಯಾಗ್ ಅನ್ನು ಕಸಿದುಕೊಳ್ಳಲು ಪ್ರಯತ್ನಿಸಿದ್ದಾರೆ. ಈ ಯತ್ನದಲ್ಲಿ ಅವರು ಆಕೆಯನ್ನು ಹಿಡಿದುಕೊಂಡೇ ಕಾರನ್ನು ಓಡಿಸಿದ್ದಾರೆ. ಈ ವಿಡಿಯೊ ಬೆಚ್ಚ ಬೀಳಿಸುತ್ತದೆ.

VISTARANEWS.COM


on

Robbery Case
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮಂಡಿ-ಪಠಾಣ್ಕೋಟ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಘಟನೆ ನಡೆದಿದೆ. ಘಟನೆಯ ವಿಡಿಯೊ ವೈರಲ್ ಆದ ನಂತರ ಮೂವರನ್ನು ಬಂಧಿಸಲಾಗಿದೆ. ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಪಂಜಾಬ್ ಮೂಲದ ಮೂವರು ವ್ಯಕ್ತಿಗಳು, ಶುಕ್ರವಾರ ಮಧ್ಯಾಹ್ನ 3:00 ರ ಸುಮಾರಿಗೆ ಸುಜಾ ಸಂದ್ರಾಹಲ್ ಗ್ರಾಮದ ನಿವಾಸಿ ನೇಹಾ ವರ್ಮಾ (20) ಎಂಬ ಕಾಲೇಜು ವಿದ್ಯಾರ್ಥಿನಿ ಬಸ್‍ಗಾಗಿ ಕಾಯುತ್ತಿದ್ದಾಗ ಅವಳನ್ನು ಗುರಿಯಾಗಿಸಿಕೊಂಡರು. ನಂತರ ಅವಳಿಂದ ಸರ, ಮೊಬೈಲ್ ಪೋನ್ ಮತ್ತು ಪರ್ಸ್ ಕಸಿದುಕೊಂಡಿದ್ದಾರೆ. ಅವಳ ಕುತ್ತಿಗೆಯಲ್ಲಿದ್ದ ಬ್ಯಾಗ್ ಅನ್ನು ಕಸಿದುಕೊಳ್ಳಲು ಅವರಿಗೆ ಸಾಧ್ಯವಾಗಲಿಲ್ಲ. ಆಗ ಅವರು ಆಕೆಯನ್ನು ಹಿಡಿದುಕೊಂಡೇ ಕಾರನ್ನು ಓಡಿಸಿದರು, ನೇಹಾಳನ್ನು ಸುಮಾರು 20 ಅಡಿಗಳಷ್ಟು ಎಳೆದುಕೊಂಡು ಹೋಗಿ ರಸ್ತೆಗೆ ಎಸೆದಿದ್ದಾರೆ.

ಈ ಘಟನೆಯ ನಂತರ, ಶಂಕಿತರು ಜೋಗಿಂದರ್ ನಗರದತ್ತ ತೆರಳಿದರು, ಅಲ್ಲಿ ಅವರು ಸಾಯಿ ಬಜಾರ್‌ನಲ್ಲಿ ಸ್ಕೂಟರ್ ನಲ್ಲಿ ಹೋಗುತ್ತಿದ್ದ ಹೋಮ್ ಗಾರ್ಡ್ ಅಧಿಕಾರಿ ಮತ್ತು ಮಹಿಳೆಯ ಮೇಲೆ ದಾಳಿ ಮಾಡಲು ಪ್ರಯತ್ನಿಸಿದರು. ಹೋಮ್‌ಗಾರ್ಡ್ ಅಧಿಕಾರಿ ಶಂಕಿತರಲ್ಲಿ ಒಬ್ಬನನ್ನು ಬಂಧಿಸುವಲ್ಲಿ ಯಶಸ್ವಿಯಾದರು, ಆದರೆ ಗೊಂದಲದಲ್ಲಿ, ದಾಳಿಕೋರರು ಅಲ್ಲಿ ನಿಲ್ಲಿಸಿದ್ದ ಐದು ವಾಹನಗಳಿಗೆ ಡಿಕ್ಕಿ ಹೊಡೆದು ಸ್ಥಳದಿಂದ ಪರಾರಿಯಾಗಿದ್ದಾರೆ.

ಇದನ್ನೂ ಓದಿ: ಸ್ಕೂಟರ್‌ಗೆ ಅಪ್ಪಳಿಸಿದ ಕಾರು; 30 ಅಡಿ ದೂರ ಎಗರಿ ಬಿದ್ದ ಮಹಿಳಾ ಕಾನ್‌ಸ್ಟೇಬಲ್‌

ಅವರು ಅಪ್ರೋಚ್ ರಸ್ತೆಯ ಬಳಿ ಮತ್ತೊಂದು ವಾಹನಕ್ಕೆ ಡಿಕ್ಕಿ ಹೊಡೆದರು. ಪೊಲೀಸರಿಂದ ತಪ್ಪಿಸಿಕೊಳ್ಳಲು ಕಾರಿನ ನಂಬರ್ ಪ್ಲೇಟನ್ನು ಕೂಡ ಬದಲಾಯಿಸಿದರೂ, ಅಂತಿಮವಾಗಿ ಗುಮ್ಮಾದಲ್ಲಿ ಪೊಲೀಸರು ಶಂಕಿತರನ್ನು ಸೆರೆಹಿಡಿದಿದ್ದಾರೆ. ಮೂವರು ವ್ಯಕ್ತಿಗಳನ್ನು ಪಂಜಾಬ್ ಮೂಲದವರು ಎಂದು ಗುರುತಿಸಲಾಗಿದ್ದು, ಈಗ ಪೊಲೀಸ್ ಕಸ್ಟಡಿಯಲ್ಲಿದ್ದು, ವಿಚಾರಣೆ ನಡೆಸಲಾಗುತ್ತಿದೆ. ಗಾಯಗೊಂಡ ವಿದ್ಯಾರ್ಥಿಯನ್ನು ಚಿಕಿತ್ಸೆಗಾಗಿ ಬೈಜನಾಥ್ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ವೈರಲ್ ನ್ಯೂಸ್

Viral Video: ಏಳು ತಿಂಗಳ ಮಗುವಿನ ಮೇಲೆ ಗುಂಡು ಹಾರಿಸಿದ ಕ್ರೂರ ಮಹಿಳೆ!

ಅಮೆರಿಕದ ಫಿಲಡೆಲ್ಫಿಯಾ ನಗರದ ಈಶಾನ್ಯ ಭಾಗದಲ್ಲಿ ಏಳು ತಿಂಗಳ ಗಂಡು ಮಗುವನ್ನು ಸ್ಟ್ರೋಲರ್ ನಲ್ಲಿ ಮಲಗಿಸಿ ಸುತ್ತಾಡಿ ಬರಲು ಕರೆದುಕೊಂಡು ಹೋಗುತ್ತಿದ್ದ ಮಹಿಳೆ ಮೇಲೆ ದರೋಡೆಕೋರ ಮಹಿಳೆ ಗುಂಡಿನ ದಾಳಿ ನಡೆಸಿದ್ದಾಳೆ. ಗುಂಡು ಮಗುವಿನ ಕಾಲಿಗೆ ತಾಗಿದೆ. ಈ ಘಟನೆಯ ದೃಶ್ಯ ಸಿಸಿಟಿವಿ ಕೆಮರಾದಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ವೈರಲ್ (Viral Video) ಆಗಿದೆ.

VISTARANEWS.COM


on

By

Viral video
Koo

ಮಗುವಿನೊಂದಿಗೆ ಸುತ್ತಾಡಿ ಬರಲು ಹೋಗುತ್ತಿದ್ದ ತಾಯಿಯ ಮೇಲೆ ಮಹಿಳೆಯೊಬ್ಬಳು ಗುಂಡಿನ ದಾಳಿ ನಡೆಸಿದ್ದು, ಗುಂಡು ಮಗುವಿನ ಕಾಲಿಗೆ (Shoots Baby) ತಾಗಿದೆ. ಅಮೆರಿಕದ ಫಿಲಿಡೆಲ್ಫಿಯಾದಲ್ಲಿ (Philadelphia) ನಡೆದ ಈ ಘಟನೆಯ ದೃಶ್ಯ ಸಿಸಿಟಿವಿ ಕೆಮರಾದಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ವೈರಲ್ (Viral Video) ಆಗಿದೆ.

ಏಳು ತಿಂಗಳ ಗಂಡು ಮಗುವನ್ನು ಸ್ಟ್ರೋಲರ್ ನಲ್ಲಿ ಮಲಗಿಸಿ ಸುತ್ತಾಡಿ ಬರಲು ಕರೆದುಕೊಂಡು ಹೋಗುತ್ತಿದ್ದ ಮಹಿಳೆ ಮೇಲೆ ದರೋಡೆಕೋರ ಮಹಿಳೆ ಗುಂಡಿನ ದಾಳಿ ನಡೆಸಿದ್ದಾಳೆ. ಗುಂಡು ಮಗುವಿನ ಕಾಲಿಗೆ ತಾಗಿದೆ. ಇದೀಗ ಮಗುವಿನ ಅರೋಗ್ಯ ಸ್ಥಿತಿ ಸ್ಥಿರವಾಗಿದೆ ಎನ್ನಲಾಗಿದೆ.

ಫಿಲಡೆಲ್ಫಿಯಾ ನಗರದ ಈಶಾನ್ಯ ಭಾಗದಲ್ಲಿ ಈ ಘಟನೆ ನಡೆದಿದ್ದು, ಗುಂಡು ಹಾರಿಸಿದ ದರೋಡೆಕೋರ ಮಹಿಳೆಯನ್ನು ಶುಕ್ರವಾರ ಪೊಲೀಸರು ಬಂಧಿಸಿದ್ದಾರೆ. ಮಗುವಿನ ಮೇಲೆ ಗುಂಡು ಹಾರಿಸಿರುವ ಭಯಾನಕ ದೃಶ್ಯ ಸಿಸಿಟಿವಿ ವಿಡಿಯೋದಲ್ಲಿ ಸೆರೆಯಾಗಿದೆ. ಮಗು ಮತ್ತು ಪೋಷಕ ಮಹಿಳೆ ನಡೆದುಕೊಂಡು ಹೋಗುತ್ತಿದ್ದಾಗ ಮಹಿಳೆಯೊಬ್ಬಳು ಏಕಾಏಕಿ ಬಂದು ಅವರ ಮೇಲೆ ಗುಂಡಿನ ದಾಳಿ ನಡೆಸಿರುವುದನ್ನು ವಿಡಿಯೋದಲ್ಲಿ ಕಾಣಬಹುದು. ದರೋಡೆಕೋರ ಮಹಿಳೆಯು ಹಲವು ಬಾರಿ ಗುಂಡು ಹಾರಿಸುತ್ತಿರುವುದನ್ನು ವಿಡಿಯೋದಲ್ಲಿ ಕಾಣಬಹುದು.


ಪೊಲೀಸರು ಈ ಕುರಿತು ವಿಡಿಯೋ ಬಿಡುಗಡೆ ಮಾಡಿದ್ದು, ಅದರಲ್ಲಿ ಹೀಗೆ ಬರೆದಿದ್ದರೆ. 2024ರ ಜುಲೈ 18ರಂದು ಮೆರಿಡಿಯನ್ ಸ್ಟ್ರೀಟ್‌ನ 4000 ಬ್ಲಾಕ್‌ನಲ್ಲಿ ಏಳು ತಿಂಗಳ ಮಗುವಿನ ಕಾಲಿನ ಮೇಲೆ ಮಹಿಳೆಯೊಬ್ಬಳು ಗುಂಡು ಹರಿಸಿದ್ದಾಳೆ. ಗುಂಡಿನ ದಾಳಿಯಲ್ಲಿ ಬೇರೆ ಯಾರಿಗೂ ಗಾಯವಾಗಿಲ್ಲ. ಕೂಡಲೇ ಮಗುವನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು, ಬಳಿಕ ಮತ್ತೊಂದು ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಪ್ರಸ್ತುತ ಮಗುವಿನ ಆರೋಗ್ಯ ಸ್ಥಿರವಾಗಿದೆ.

ಇದನ್ನೂ ಓದಿ: Udupi News : ಸತ್ತ ನಾಯಿಯನ್ನು ಸ್ಕೂಟರ್‌ಗೆ ಕಟ್ಟಿ ರಸ್ತೆಯುದ್ದಕ್ಕೂ ಎಳೆದೊಯ್ದ ಅಸಾಮಿ!

ಪೊಲೀಸರು ಆಗಮಿಸಿದಾಗ ಮಗುವಿನ ಪೋಷಕರು ಘಟನಾ ಸ್ಥಳದಲ್ಲಿ ಇರಲಿಲ್ಲ.ಗುಂಡಿನ ದಾಳಿ ನಡೆಸಿದ ಮಹಿಳೆ ತಾನು ಮಾಡಿದ್ದಕ್ಕೆ ಪಶ್ಚಾತ್ತಾಪ ಪಡದೆ ಸುಮ್ಮನೆ ಅಲ್ಲಿಂದ ಹೊರನಡೆದಳು. ಇದು ತುಂಬಾ ಭಯಾನಕವಾಗಿದೆ ಎಂದು ಪ್ರತ್ಯಕ್ಷದರ್ಶಿಯೊಬ್ಬರು ಹೇಳಿದ್ದಾರೆ.

Continue Reading

Latest

Sexual Abuse: ವಿದ್ಯಾರ್ಥಿನಿಯನ್ನು ಅಪಹರಿಸಿ 12 ದಿನ ಅತ್ಯಾಚಾರ ಎಸಗಿ ಪೊಲೀಸ್‌ ಠಾಣೆ ಮುಂದೆಯೇ ಬಿಟ್ಟು ಹೋದರು!

Sexual Abuse: ಗಾಜಿಯಾಬಾದ್‌ನಲ್ಲಿ ಕಾಲೇಜಿಗೆ ತೆರಳುತ್ತಿದ್ದ ಬಾಲಕಿಯನ್ನು ಅಪಹರಿಸಿ 12 ದಿನಗಳ ಕಾಲ ಅತ್ಯಾಚಾರ ನಡೆಸಿದ ದಾರುಣ ಘಟನೆಯೊಂದು ನಡೆದಿದೆ. ಮೀರತ್ ಮತ್ತು ಜಮ್ಮುವಿನ ವಿವಿಧ ಹೋಟೆಲ್‌ಗಳಲ್ಲಿ ನಾಲ್ವರು ಯುವಕರು ಬಾಲಕಿಯನ್ನು ಒತ್ತೆಯಾಳಾಗಿ ಇಟ್ಟುಕೊಂಡು ಅತ್ಯಾಚಾರ ಎಸಗಿದ್ದಾರೆ. ಈ ಸಮಯದಲ್ಲಿ, ಆರೋಪಿಗಳು ಅವಳ ಅಶ್ಲೀಲ ವಿಡಿಯೊವನ್ನು ಮಾಡಿದಲ್ಲದೇ ಅವಳು ವಿರೋಧಿಸಿದರೆ ಅವಳನ್ನು ಕೊಲ್ಲುವುದಾಗಿ ಮತ್ತು ವಿಡಿಯೊವನ್ನು ವೈರಲ್ ಮಾಡುವುದಾಗಿ ಬೆದರಿಕೆ ಹಾಕಿದ್ದಾರಂತೆ.

VISTARANEWS.COM


on

Sexual Abuse
Koo

ಗಾಜಿಯಾಬಾದ್‍ನಲ್ಲಿ ಕಾಲೇಜಿಗೆ ತೆರಳುತ್ತಿದ್ದ ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ಅಪಹರಿಸಿ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣ ಬೆಳಕಿಗೆ ಬಂದಿದೆ. ಜೂನ್ 24ರಂದು ಮೀರತ್‍ನ ಮೊಹಿಯುದ್ದೀನ್‌ಪುರದಿಂದ ಬಾಲಕಿಯನ್ನು ಅಪಹರಿಸಲಾಗಿತ್ತು. ಇದಾದ ಬಳಿಕ ಆಕೆಯನ್ನು ಜಮ್ಮುವಿಗೆ ಕರೆದೊಯ್ಯಲಾಯಿತು. ಮೀರತ್ ಮತ್ತು ಜಮ್ಮುವಿನ ವಿವಿಧ ಹೋಟೆಲ್‍ಗಳಲ್ಲಿ ನಾಲ್ವರು ಯುವಕರು ಬಾಲಕಿಯನ್ನು ಒತ್ತೆಯಾಳಾಗಿ ಇಟ್ಟುಕೊಂಡು ಅತ್ಯಾಚಾರ (Sexual Abuse) ಎಸಗಿದ್ದಾರೆ ಎಂದು ಆರೋಪಿಸಲಾಗಿದೆ. ಈ ಸಮಯದಲ್ಲಿ, ಆರೋಪಿಗಳು ಅವಳ ಅಶ್ಲೀಲ ವಿಡಿಯೊವನ್ನು ಮಾಡಿದಲ್ಲದೇ ಅವಳು ವಿರೋಧಿಸಿದರೆ ಕೊಲ್ಲುವುದಾಗಿ ಮತ್ತು ವಿಡಿಯೊವನ್ನು ವೈರಲ್ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ ಎಂಬುದಾಗಿ ತಿಳಿದುಬಂದಿದೆ.

ಮೋದಿನಗರ ಪ್ರದೇಶದ ಹಳ್ಳಿಯೊಂದರ ನಿವಾಸಿಯಾಗಿರುವ ಬಾಲಕಿ ಮೀರತ್‍ನ ಕಾಲೇಜೊಂದರಲ್ಲಿ ಓದುತ್ತಿದ್ದಾಳೆ. ಜೂನ್ 24ರಂದು ಕಾಲೇಜಿಗೆ ಹೋಗಲು ಮನೆಯಿಂದ ಹೊರಟಿದ್ದ ಆಕೆ ಅಂದಿನಿಂದ ನಾಪತ್ತೆಯಾಗಿದ್ದಳು. ಕುಟುಂಬವು ಸಾಕಷ್ಟು ಹುಡುಕಿತು ಮತ್ತು ಕಾಣೆಯಾದ ದೂರನ್ನು ಸಹ ದಾಖಲಿಸಿತು. ಆದರೆ, ಅವಳ ಬಗ್ಗೆ ಯಾವುದೇ ಸುಳಿವು ಸಿಗಲಿಲ್ಲ. ಇದರ ನಡುವೆ ಆರೋಪಿಗಳು ಜುಲೈ 6 ರಂದು ಬಾಲಕಿಯನ್ನು ಭೋಜ್ಪುರ ಪೊಲೀಸ್ ಠಾಣೆಯ ಬಳಿ ಬಿಟ್ಟಿದ್ದಾರೆ. ಪೊಲೀಸರು ಬಾಲಕಿ ಚೇತರಿಸಿಕೊಂಡ ನಂತರ ಆಕೆಯ ಕುಟುಂಬ ಸದಸ್ಯರನ್ನು ಕರೆದು ಮನೆಗೆ ಕಳುಹಿಸಿದ್ದಾರೆ.

ಜೂನ್ 24ರಂದು ಬೆಳಗ್ಗೆ 11 ಗಂಟೆ ಸುಮಾರಿಗೆ ಮೊಹಿಯುದ್ದೀನ್ ಪರ್ತಾಪುರದಿಂದ ಅದೇ ಗ್ರಾಮದ ಇಬ್ಬರು ಯುವಕರು ತನ್ನನ್ನು ಅಪಹರಿಸಿರುವುದಾಗಿ ಬಾಲಕಿ ಕುಟುಂಬಕ್ಕೆ ಬಹಿರಂಗಪಡಿಸಿದ್ದಾಳೆ. ಆರೋಪಿಗಳು ತನ್ನನ್ನು ಮೀರತ್‍ನಿಂದ ಅಪಹರಿಸಿ ಜಮ್ಮುವಿಗೆ ಕರೆದೊಯ್ದು ಅಲ್ಲಿನ ಹೋಟೆಲ್‍ನಲ್ಲಿ ಆರು ದಿನಗಳ ಕಾಲ ಒತ್ತೆಯಾಳಾಗಿ ಇರಿಸಿಕೊಂಡಿದ್ದರು. ಅಲ್ಲಿ ತನ್ನ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದೆ ಎಂದು ಬಾಲಕಿ ಆರೋಪಿಸಿದ್ದಾರೆ. ಇದರ ನಂತರ, ಆರೋಪಿಗಳು ಅವಳನ್ನು ಸಹರಾನ್ಪುರ ಮೂಲಕ ಮೀರತ್‍ಗೆ ಕರೆತಂದು ಹೆದ್ದಾರಿಯಲ್ಲಿರುವ ಹೋಟೆಲ್‍ನಲ್ಲಿ ಆರು ದಿನಗಳ ಕಾಲ ಒತ್ತೆಯಾಳಾಗಿ ಇರಿಸಿಕೊಂಡರು ಮತ್ತು ಅಲ್ಲಿ ನಾಲ್ವರು ಯುವಕರು ಅವಳ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದರು ಎಂಬುದಾಗಿ ತಿಳಿಸಿದ್ದಾಳೆ.

ಜುಲೈ 6ರಂದು ಆರೋಪಿಗಳು ಬಾಲಕಿಯನ್ನು ಗಾಜಿಯಾಬಾದ್‍ನ ಭೋಜ್ಪುರ ಪೊಲೀಸ್ ಠಾಣೆಯ ಬಳಿ ಬಿಟ್ಟಿದ್ದರು. ಸಂತ್ರಸ್ತೆಯ ಪೋಷಕರು ಈ ಬಗ್ಗೆ ಮೋದಿನಗರ ಪೊಲೀಸರಿಗೆ ದೂರು ನೀಡಿದ್ದರು. ಆದರೆ ಈ ಘಟನೆ ಮೀರತ್‍ನಲ್ಲಿ ನಡೆದಿದೆ ಎಂದು ಅವರು ಕೇಸು ದಾಖಲಿಸಲು ನಿರಾಕರಿಸಿದರು. ಅದೇ ಸಮಯದಲ್ಲಿ, ಪರ್ತಾಪುರ ಪೊಲೀಸರು ಸಹ ಪ್ರಕರಣ ದಾಖಲಿಸಲಿಲ್ಲ. ಈ ಪ್ರಕರಣದಲ್ಲಿ, ಗಾಜಿಯಾಬಾದ್ ಮತ್ತು ಮೀರತ್ ಪೊಲೀಸರು ಪರಸ್ಪರ ಕೇಸನ್ನು ವರ್ಗಾಯಿಸುತ್ತಲೇ ಇದ್ದರು.

ಇದನ್ನೂ ಓದಿ: ಬಿಸ್ಕೆಟ್‌ಗೆ ಆಸೆ ಪಟ್ಟು ಹೋಗಿದ್ದ ಪುಟ್ಟ ಬಾಲಕಿ ಕಾಮುಕನ ಕೈಗೆ ಸಿಕ್ಕಿ ಕೊಲೆಯಾದಳು

ಹಾಗಾಗಿ ಸಂತ್ರಸ್ತೆಯ ಕುಟುಂಬವು ಮೀರತ್ ಎಸ್ಎಸ್‌ಪಿಗೆ ದೂರು ನೀಡಿದೆ. ಅವರ ದೂರಿನ ಆಧಾರದ ಮೇಲೆ ತನಿಖೆ ನಡೆಸಲಾಗುತ್ತಿದೆ. ಹೋಟೆಲ್‍ಗಳ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿ ನಿಯಮಗಳ ಪ್ರಕಾರ ಕ್ರಮ ಕೈಗೊಳ್ಳಲಾಗುವುದು ಎಂದು ಮೀರತ್ ನಗರ ಎಸ್ ಪಿ ಆಯುಷ್ ವಿಕ್ರಮ್ ಸಿಂಗ್ ತಿಳಿಸಿದ್ದಾರೆ.

Continue Reading

Latest

Sexual Abuse: ʼಡೇರ್‌ ಆಂಡ್‌ ಟ್ರುತ್‌ʼ ಆಟ ಆಡೋಣವೆಂದು ಸ್ನೇಹಿತರ ಮುಂದೆ ಹೆಂಡತಿಯ ಬಟ್ಟೆ ಬಿಚ್ಚಿಸಿದ ಗಂಡ!

Sexual Abuse: ಪತಿ-ಪತ್ನಿಯ ಸಂಬಂಧ ಪವಿತ್ರವಾದದ್ದು. ಒಬ್ಬರ ಮೇಲೆ ಒಬ್ಬರು ನಂಬಿಕೆ ಇಟ್ಟುಕೊಂಡು ಸಂಸಾರದ ಬಂಡಿಯನ್ನು ಸಾಗಿಸಬೇಕು ಎನ್ನುತ್ತಾರೆ ಹಿರಿಯರು. ಆದರೆ ಇಲ್ಲೊಬ್ಬ ಐನಾತಿ ಪತಿ ತನ್ನ ಸ್ನೇಹಿತರ ಮುಂದೆಯೇ ಹೆಂಡತಿಗೆ ಬಟ್ಟೆ ಬಿಚ್ಚಲು ಒತ್ತಾಯಿಸಿದ್ದಾನೆ. ಪತಿ ತನ್ನ ಸ್ನೇಹಿತರನ್ನು ಪಾರ್ಟಿಗಳಿಗಾಗಿ ಮನೆಗೆ ಕರೆಯುತ್ತಿದ್ದ. ಪಾರ್ಟಿಗಳ ಸಮಯದಲ್ಲಿ “ಡೇರ್ ಆಂಡ್ ಟ್ರುತ್” ಆಟದ ಹೆಸರಿನಲ್ಲಿ ತನ್ನ ಪತಿ ತನ್ನ ಸ್ನೇಹಿತರ ಮುಂದೆ ತನ್ನ ಬಟ್ಟೆ ಬಿಚ್ಚಲು ಒತ್ತಾಯಿಸುತ್ತಿದ್ದ ಎಂದು ಮಹಿಳೆ ದೂರಿದ್ದಾಳೆ.

VISTARANEWS.COM


on

Sexual Abuse
Koo


ಮದುವೆಯ ನಂತರ ದಂಪತಿಗಳು ಅನ್ಯೋನ್ಯತೆಯಿಂದ ಇರುತ್ತಾರೆ. ಆದರೆ ಎಲ್ಲಾ ದಂಪತಿಗಳು ಹೀಗೇ ಇರುವುದಿಲ್ಲ. ಕೆಲವರ ವೈವಾಹಿಕ ಜೀವನದಲ್ಲಿ ಸಮಸ್ಯೆಗಳು ಕಾಡುತ್ತದೆ. ಕೆಲವು ಪುರುಷರು ಮದುವೆಯ ಬಳಿಕ ತಮ್ಮ ಪತ್ನಿಗೆ ಕಿರುಕುಳ ನೀಡುತ್ತಿರುತ್ತಾರೆ. ಅಂತಹದೊಂದು ಘಟನೆ ಗುಜರಾತ್‍ನ ಖೋರಾಜ್‍ನಲ್ಲಿ ನಡೆದಿದೆ. ಮಹಿಳೆಯೊಬ್ಬರು ಇತ್ತೀಚೆಗೆ ಪೊಲೀಸರನ್ನು ಸಂಪರ್ಕಿಸಿ ಪತಿಯ ವಿರುದ್ಧ ಕಿರುಕುಳದ(Sexual Abuse) ದೂರು ದಾಖಲಿಸಿದ್ದಾಳೆ. ಪಾರ್ಟಿ ಸಮಯದಲ್ಲಿ ತನ್ನ ಸ್ನೇಹಿತರ ಮುಂದೆ ಬಟ್ಟೆ ಚಿಚ್ಚಲು ಪತಿ ತನಗೆ ಒತ್ತಾಯಿಸಿದ್ದಾನೆ ಎಂದು ಮಹಿಳೆ ಆರೋಪಿಸಿದ್ದಾಳೆ.

35 ವರ್ಷದ ಸಂತ್ರಸ್ತ ಮಹಿಳೆ ವಿಎಫ್ಎಕ್ಸ್ ಕಲಾವಿದೆಯಾಗಿದ್ದು, ಚಲನಚಿತ್ರೋದ್ಯಮದಲ್ಲಿ ಕೆಲಸ ಮಾಡುತ್ತಿದ್ದಳು. ಈಕೆ ಖೋರಾಜ್‍ನಲ್ಲಿ ವಾಸವಾಗಿದ್ದಳು. ಆಕೆಯ ಪತಿ ಅಂತಾರಾಷ್ಟ್ರೀಯ ವಿಮಾನಯಾನ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದ ಎನ್ನಲಾಗಿದೆ. ಮೂಲತಃ ಉತ್ತರಾಖಂಡದ ಡೆಹ್ರಾಡೂನ್ ಮೂಲದ ಈ ದಂಪತಿ ಎಂಟು ವರ್ಷಗಳಿಂದ ಪರಸ್ಪರ ಪರಿಚಿತರಾಗಿದ್ದು, ಮದುವೆಯಾಗಿ ಐದು ವರ್ಷಗಳಾಗಿವೆ. ತನ್ನ ಪತಿ ಕಿರುಕುಳ ನೀಡುತ್ತಿರುವುದಾಗಿ ಆಕೆ ಆರೋಪ ಮಾಡಿದ್ದಾಳೆ. ಮದುವೆಯಾದ ಹೊಸದರಲ್ಲಿ ದಂಪತಿ ಮೊದಲು ಕೋಲ್ಕತ್ತಾಗೆ ಮತ್ತು ನಂತರ ಮುಂಬೈಗೆ ತೆರಳಿದರು. ಮುಂಬೈನಲ್ಲಿ ಮಹಿಳೆ ಚಲನಚಿತ್ರೋದ್ಯಮದಲ್ಲಿ ವಿಎಫ್ಎಕ್ಸ್ ಕಲಾವಿದೆಯಾಗಿ ಕೆಲಸ ಮಾಡಿದಳು. ಮದುವೆಯ ನಂತರ ಮುಂಬೈಗೆ ತೆರಳಿದಾಗ, ಪತಿ ತನ್ನ ಸ್ನೇಹಿತರನ್ನು ಪಾರ್ಟಿಗಳಿಗಾಗಿ ಮನೆಗೆ ಕರೆಯುತ್ತಿದ್ದ. ಪಾರ್ಟಿಗಳ ಸಮಯದಲ್ಲಿ “ಡೇರ್‌ ಆಂಡ್‌ ಟ್ರುತ್‌” ಆಟದ ಹೆಸರಿನಲ್ಲಿ ತನ್ನ ಪತಿ ತನ್ನ ಸ್ನೇಹಿತರ ಮುಂದೆ ತನ್ನ ಬಟ್ಟೆ ಬಿಚ್ಚಲು ಒತ್ತಾಯಿಸುತ್ತಿದ್ದ ಎಂದು ಮಹಿಳೆ ದೂರಿದ್ದಾಳೆ. ಒಂದು ವೇಳೆ ಅವಳು ನಿರಾಕರಿಸಿದರೆ ಅಥವಾ ಆಕ್ಷೇಪಿಸಿದರೆ ಪತಿ ತನ್ನನ್ನು ಹೊಡೆಯುತ್ತಾನೆ ಎಂದು ಆಕೆ ಆರೋಪಿಸಿದ್ದಾಳೆ. ತನ್ನ ಗಂಡನ ಈ ಅಶ್ಲೀಲ ಬೇಡಿಕೆಗಳಿಂದಾಗಿ ಅವರ ನಡುವೆ ಆಗಾಗ್ಗೆ ಜಗಳವಾಗುತ್ತಿತ್ತು ಎಂದು ತಿಳಿಸಿದ್ದಾಳೆ.

ಇದನ್ನೂ ಓದಿ:ಕಾರಿನಲ್ಲಿ ಬಂದ ಡಕಾಯಿತರು; ಬ್ಯಾಗ್‌ ಕಸಿಯಲು ವಿದ್ಯಾರ್ಥಿನಿಯನ್ನು 20 ಅಡಿ ದೂರ ಎಳೆದೊಯ್ದರು! ಆಘಾತಕಾರಿ ವಿಡಿಯೊ

ದಂಪತಿಗಳು ಇತ್ತೀಚೆಗೆ ಗುಜರಾತ್‍ನ ಖೋರಾಜ್‍ಗೆ ಸ್ಥಳಾಂತರಗೊಂಡಿದ್ದರು. ಖೋರಾಜ್‍ಗೆ ತೆರಳಿದ ನಂತರ, ಪತಿ ತನಗೆ ಕಿರುಕುಳ ನೀಡುವುದನ್ನು ಮುಂದುವರಿಸಿದ್ದಾನೆ. ಹಾಗಾಗಿ ಆತನ ವಿರುದ್ಧ ಮಹಿಳೆ ದೂರು ದಾಖಲಿಸಿದ್ದಾಳೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಪತಿಯ ವಿರುದ್ಧ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ ಎಂಬುದಾಗಿ ತಿಳಿದುಬಂದಿದೆ.

Continue Reading

ಕರ್ನಾಟಕ

Rakshit Shetty: ಕಾಪಿ ರೈಟ್ಸ್ ಉಲ್ಲಂಘನೆ; ಜಾಮೀನು ಕೋರಿ ರಕ್ಷಿತ್ ಶೆಟ್ಟಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ಜು.24ಕ್ಕೆ ಮುಂದೂಡಿಕೆ

Rakshit Shetty: ಪರಂವ್ಹ ಸ್ಟೂಡಿಯೋಸ್ ನಿರ್ಮಿಸಿರುವ ಬ್ಯಾಚುಲರ್ಸ್ ಪಾರ್ಟಿ ಸಿನಿಮಾಗಾಗಿ ಅನಧಿಕೃತವಾಗಿ ಹಾಡು ಬಳಕೆ ಆರೋಪ ನಟ ರಕ್ಷಿತ್‌ ಶೆಟ್ಟಿ ವಿರುದ್ಧ ಕೇಳಿಬಂದಿದೆ. ಹೀಗಾಗಿ ಯಶವಂತಪುರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿತ್ತು.

VISTARANEWS.COM


on

Rakshit Shetty
Koo

ಬೆಂಗಳೂರು: ಕಾಪಿ ರೈಟ್ಸ್ ಉಲ್ಲಂಘನೆ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಕೋರಿ ನಟ ರಕ್ಷಿತ್ ಶೆಟ್ಟಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಜುಲೈ 24ಕ್ಕೆ ಸೆಷನ್ಸ್ ಕೋರ್ಟ್‌ ಮುಂದೂಡಿದೆ. ಪ್ರಕರಣದಲ್ಲಿ ಬಂಧನ ಭೀತಿ ಎದುರಾದ ಹಿನ್ನೆಲೆಯಲ್ಲಿ ನಟ ರಕ್ಷಿತ್ ಶೆಟ್ಟಿ (Rakshit Shetty) ಅವರು ನಿರೀಕ್ಷಿತ ಜಾಮೀನಿಗಾಗಿ ಕೋರ್ಟ್‌ ಮೊರೆ ಹೋಗಿದ್ದಾರೆ.

ಪರಂವ್ಹ ಸ್ಟೂಡಿಯೋಸ್ ನಿರ್ಮಿಸಿರುವ ಬ್ಯಾಚುಲರ್ಸ್ ಪಾರ್ಟಿ ಸಿನಿಮಾಗಾಗಿ ಅನಧಿಕೃತವಾಗಿ ಹಾಡು ಬಳಕೆ ಆರೋಪ ನಟ ರಕ್ಷಿತ್‌ ಶೆಟ್ಟಿ ವಿರುದ್ಧ ಕೇಳಿಬಂದಿದೆ. ನ್ಯಾಯ ಎಲ್ಲಿದೆ ಚಿತ್ರದ ʼನ್ಯಾಯ ಎಲ್ಲಿದೆʼ ಹಾಡು ಹಾಗೂ ಗಾಳಿ ಮಾತು ಚಿತ್ರದ ʼಒಮ್ಮೆ ನಿನ್ನನ್ನುʼ ಹಾಡಿನ ಕಾಪಿ ರೈಟ್ಸ್ ಉಲ್ಲಂಘನೆ ಮಾಡಿದ್ದಾರೆ ಎಂದು ಆರೋಪಿಸಿ ಎಂಆರ್‌ಟಿ ಮ್ಯೂಸಿಕ್ ಸಂಸ್ಥೆಯ ನವೀನ್ ಕುಮಾರ್ ದೂರು ನೀಡಿದ್ದರು. ಹೀಗಾಗಿ ಯಶವಂತಪುರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿತ್ತು. ನಂತರ ನಿರೀಕ್ಷಣಾ ಜಾಮೀನು ಕೋರಿ ರಕ್ಷಿತ್‌ ಶೆಟ್ಟಿ, ಬೆಂಗಳೂರಿನ‌ ಸೆಷನ್ಸ್ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.

ರಕ್ಷಿತ್ ಶೆಟ್ಟಿ ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ಪಬ್ಲಿಕ್ ಪ್ರಾಸಿಕ್ಯೂಟರ್ ಕಾಲಾವಕಾಶ ಕೋರಿದ್ದು, ವಿಚಾರಣೆಯನ್ನು ಜುಲೈ 24ಕ್ಕೆ ಸೆಷನ್ಸ್ ಕೋರ್ಟ್‌ ಮುಂದೂಡಿದೆ.

ಇದನ್ನೂ ಓದಿ | Rakshit Shetty: ಬ್ಯಾಚಲರ್‌ ಪಾರ್ಟಿ ‌’ಕಿರಿಕ್’; ಕೇಸ್‌ ಬೆನ್ನಲ್ಲೇ ಕಾನೂನು ಹೋರಾಟ ಎಂದ ರಕ್ಷಿತ್‌ ಶೆಟ್ಟಿ; ಇಲ್ಲಿದೆ ಪತ್ರ

ನಟ ರಕ್ಷಿತ್ ಶೆಟ್ಟಿ ನಿರ್ಮಾಣದ ‘ಬ್ಯಾಚುಲರ್ ಪಾರ್ಟಿ’ ಜನವರಿ 26 ರಂದು ರಿಲೀಸ್‌ ಆಗಿತ್ತು. ಕಾಮಿಡಿ ಜಾನರ್‌ನ ಈ ಸಿನಿಮಾದಲ್ಲಿ ನಟ ದಿಗಂತ್, ಲೂಸ್ ಮಾದ ಯೋಗಿ, ಅಚ್ಯುತ್ ಕುಮಾ‌ರ್, ನಟಿ ಸಿರಿ ರವಿಕುಮಾರ್‌ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದರು. ಕಿರಿಕ್ ಪಾರ್ಟಿ’ ಚಿತ್ರದ ಬರಹಗಾರ ಅಭಿಜಿತ್ ಮಹೇಶ್ ಈ ಚಿತ್ರಕ್ಕೆ ಸಂಭಾಷಣೆ ಬರೆದಿದ್ದರು. ಕಿರಿಕ್‌ ಪಾರ್ಟಿಯ ಬರಹಗಾರರಲ್ಲಿ ಅಭಿಜಿತ್ ಮಹೇಶ್ ಕೂಡ ಒಬ್ಬರು. ಈ ಚಿತ್ರದ ಮೂಲಕ ಅವರು ಸ್ವತಂತ್ರ ನಿರ್ದೇಶಕರಾಗಿ ಬೆಳ್ಳಿ ಪರದೆಗೆ ಕಾಲಿಟ್ಟಿದ್ದರು. ಪರಂವಃ ಸ್ಟುಡಿಯೋಸ್ ಬ್ಯಾನರ್ ಅಡಿಯಲ್ಲಿ ರಕ್ಷಿತ್ ಶೆಟ್ಟಿ ಹಾಗೂ ಅಮಿತ್ ಗುಪ್ತ ಜಂಟಿಯಾಗಿ ಈ ಚಿತ್ರವನ್ನು ನಿರ್ಮಿಸಿದ್ದು, ಅರವಿಂದ್ ಛಾಯಾಗ್ರಹಣ, ಅರ್ಜುನ್ ರಾಮು ಸಂಗೀತ ನಿರ್ದೇಶನ ಈ ಚಿತ್ರಕ್ಕಿತ್ತು.

ಏನಿದು ಪ್ರಕರಣ?

ಈ ಹಿಂದೆ ‘ಸಿಂಪಲ್ ಸ್ಟಾರ್ರಕ್ಷಿತ್ ಶೆಟ್ಟಿ ಅಭಿನಯದ ರಿಷಬ್ ಶೆಟ್ಟಿ (Rakshit Shetty)ನಿರ್ದೇಶನದ ‘ಕಿರಿಕ್ ಪಾರ್ಟಿ’ 2016ರಲ್ಲಿ ತೆರೆಗೆ ಬಂದಿತ್ತು. ‘ಕಿರಿಕ್ ಪಾರ್ಟಿ’ ಸಿನಿಮಾ ‘ಕಾಪಿರೈಟ್’ ವಿಚಾರವಾಗಿ ವಿವಾದಕ್ಕೂ ಗ್ರಾಸವಾಗಿತ್ತು. ಇದೀಗ ನಟ ರಕ್ಷಿತ್ ಶೆಟ್ಟಿ ನಿರ್ಮಾಣದ ‘ಬ್ಯಾಚುಲರ್ ಪಾರ್ಟಿ’ ಚಿತ್ರದ ಸರದಿ.

ʻನ್ಯಾಯ ಎಲ್ಲಿದೆʼ ಟೈಟಲ್ ಸಾಂಗ್ ಹಾಗೂ ‘ಒಮ್ಮೆ ನಿನ್ನನ್ನು ಕಣ್ತುಂಬ ನೋಡುವಾಸೆ” ಹಾಡುಗಳನ್ನು ಕದ್ದಿದ್ದಾರೆ ಎನ್ನುವ ಆರೋಪ ನಟ ರಕ್ಷಿತ್‌ ಶೆಟ್ಟಿ ವಿರುದ್ಧ ಕೇಳಿ ಬಂದಿದೆ. ಈ ಹಿಂದೆ ನವೀನ್ ಕುಮಾರ್ ಎಂಬುವವರ ಜತೆ ಹಾಡುಗಳ ಬಗ್ಗೆ ಮಾತುಕತೆ ನಡೆದಿತ್ತು. ನವೀನ್ ಕುಮಾರ್ ಹಾಡುಗಳ ಕಾಪಿರೈಟ್ ಪಡೆದು ಮಾರಾಟ ಮಾಡುವ ಬ್ಯುಸಿನೆಸ್ ಮೆನ್ ಆಗಿದ್ದರು. ಇವರ ಜೊತೆ ಹಾಡಿಗೆ ಸಂಬಂಧಿಸಿದ ಮಾತುಕತೆ ನಡೆದಿತ್ತು. ಆದರೆ ನಾನಾ ಕಾರಣಕ್ಕೆ ಈ ಡೀಲ್ ಮುರಿದು ಬಿದ್ದಿತ್ತು. ಆದರೂ ಆ ಹಾಡನ್ನು ಮಾಲೀಕರ ಅನುಮತಿ ಇಲ್ಲದೆ ಬಳಕೆ ಆಗಿತ್ತು. ಚಿತ್ರದಲ್ಲಿ ಎರಡೂ ಹಾಡುಗಳನ್ನು ಅನುಮತಿ ಇಲ್ಲದೆ ಬಳಕೆ ಮಾಡಿದ್ದಾರೆಂದು ನವೀನ್‌ರಿಂದ ಆರೋಪ ಕೇಳಿ ಬಂದಿದೆ. ಈ ಬಗ್ಗೆ ಯಶವಂತಪುರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿತ್ತು.

ಇದನ್ನೂ ಓದಿ | Rakshit Shetty: ರಕ್ಷಿತ್‌ ಶೆಟ್ಟಿಗೆ ತಪ್ಪದ ಸಂಕಷ್ಟ; ಮತ್ತೊಂದು ದೂರು ದಾಖಲು!

ಈ ಮುಂಚೆ ‘ಕಿರಿಕ್ ಪಾರ್ಟಿ’ ಚಿತ್ರದಲ್ಲಿ ಬಳಕೆಯಾದ ಒಂದು ಹಾಡಿನ ವಿರುದ್ಧ ಲಹರಿ ಮ್ಯೂಸಿಕ್ ಸಂಸ್ಥೆ ಕೋರ್ಟ್ ಮೆಟ್ಟಿಲೇರಿತ್ತು. ‘ಕಿರಿಕ್ ಪಾರ್ಟಿ’ ಚಿತ್ರದಲ್ಲಿ ಕಾಪಿರೈಟ್ ನಿಯಮ ಉಲ್ಲಂಘಿಸಿ ತಮ್ಮ ಸಂಸ್ಥೆಯ ಹಾಡುಗಳನ್ನು ಅಕ್ರಮವಾಗಿ ಬಳಕೆ ಮಾಡಿಕೊಳ್ಳಲಾಗಿದೆ, ಅನುಮತಿ ಇಲ್ಲದೆ ಹಾಡು ಬಳಸಲಾಗಿದೆ ಎಂದು ಆರೋಪಿಸಿ ಲಹರಿ ಸಂಸ್ಥೆ ಕೇಸ್ ಹಾಕಿತ್ತು.

Continue Reading
Advertisement
CM Siddaramaiah
ಕರ್ನಾಟಕ2 mins ago

CM Siddaramaiah: ಬಿಜೆಪಿ ತನ್ನ ಅವಧಿಯ ಹಗರಣಗಳನ್ನು ಮುಚ್ಚಿ ಹಾಕಿದೆ: ಸಿಎಂ ಸಿದ್ದರಾಮಯ್ಯ

Viral video
ವೈರಲ್ ನ್ಯೂಸ್6 mins ago

Viral Video: ಏಳು ತಿಂಗಳ ಮಗುವಿನ ಮೇಲೆ ಗುಂಡು ಹಾರಿಸಿದ ಕ್ರೂರ ಮಹಿಳೆ!

Honor Released Honor 200 Pro 5G and Honor 200 5G Smartphones
ಬೆಂಗಳೂರು10 mins ago

Honor 200 Series : ಒಂದೇ ದಿನ 2 ಸ್ಮಾರ್ಟ್‌ಫೋನ್‌ ಬಿಡುಗಡೆ ಮಾಡಿದ ಹಾನರ್

Self Harming
Latest12 mins ago

Self Harming: ಹೆಂಡತಿಗೆ ಹೆದರಿಸಲು ಹೋಗಿ ಜೀವ ಕಳೆದುಕೊಂಡ ಲೋಕೋ ಪೈಲಟ್‍!

Health Tips Kannada
ಆರೋಗ್ಯ13 mins ago

Health Tips Kannada: ಮಳೆಗಾಲದಲ್ಲಿ ಹಾಗಲಕಾಯಿ ತಿಂದರೆ ಪ್ರಯೋಜನಗಳು ಎಷ್ಟೊಂದು!

Movie ticket price hike
ಕರ್ನಾಟಕ28 mins ago

Movie ticket price hike: ಸಿನಿಮಾ ಪ್ರೇಕ್ಷಕರ ಮೇಲೂ ತೆರಿಗೆ ಪ್ರಹಾರ; ಸಿನಿಮಾ ಟಿಕೆಟ್‌, OTT ಸಬ್‌ಸ್ಕ್ರಿಪ್ಶನ್ ಶುಲ್ಕ ಭಾರಿ ಏರಿಕೆ?

US Teacher
ವೈರಲ್ ನ್ಯೂಸ್32 mins ago

School Teacher: 14 ವರ್ಷದ ವಿದ್ಯಾರ್ಥಿಗೆ ತನ್ನ ಬೆತ್ತಲೆ ಫೋಟೊ ಕಳುಹಿಸಿದ ಶಿಕ್ಷಕಿ; ಈಗ ಜೈಲಿನ ಅತಿಥಿ

Mohammed Shami
ಕ್ರೀಡೆ40 mins ago

Mohammed Shami : ರೋಹಿತ್​ ಶರ್ಮಾಗೆ ನನ್ನ ಬೌಲಿಂಗ್​ ಎಂದರೆ ಭಯ; ಮೊಹಮ್ಮದ್ ಶಮಿ

Heavy rain in Chandragutti village and other places of Soraba taluk
ಶಿವಮೊಗ್ಗ43 mins ago

Karnataka Rain: ಸೊರಬ ತಾಲೂಕಿನ ವಿವಿಧೆಡೆ ಮಳೆ ಆರ್ಭಟ; ವರದಾ ನದಿ ತೀರದ ವ್ಯಾಪ್ತಿಯ ಕೃಷಿ ಭೂಮಿ ಜಲಾವೃತ

Sexual Abuse
Latest45 mins ago

Sexual Abuse: ವಿದ್ಯಾರ್ಥಿನಿಯನ್ನು ಅಪಹರಿಸಿ 12 ದಿನ ಅತ್ಯಾಚಾರ ಎಸಗಿ ಪೊಲೀಸ್‌ ಠಾಣೆ ಮುಂದೆಯೇ ಬಿಟ್ಟು ಹೋದರು!

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Rain
ಮಳೆ7 hours ago

Karnataka Rain : ಭಾರಿ ಮಳೆಗೆ ಮನೆ ಗೋಡೆ ಕುಸಿತ; ಕೊಟ್ಟಿಗೆಯಲ್ಲಿದ್ದ ಜಾನುವಾರುಗಳು ಸಾವು

karnataka Rain
ಮಳೆ8 hours ago

Karnataka Rain : ಹಳ್ಳ ದಾಟಲು ಹೋಗಿ ನೀರುಪಾಲಾದ ಜಾನುವಾರು; ಬಿರುಗಾಳಿಗೆ ಕಳಚಿದ ವಿಂಡ್‌ ಫ್ಯಾನ್‌

karnataka Rain
ಮಳೆ1 day ago

Karnataka Rain : ಬೀದಿಗೆ ತಂದ ರಣಮಳೆ; ಮನೆ ಕುಸಿದು ಬಿದ್ದು 9 ತಿಂಗಳ ಗರ್ಭಿಣಿ ನರಳಾಟ

Karnataka Rain
ಮಳೆ1 day ago

Karnataka Rain : ರಾಜ್ಯದಲ್ಲಿ ಮಳೆಯ ಆರ್ಭಟ; ರಾತ್ರಿ ಕಳೆದು ಬೆಳಗಾಗುವುದರೊಳಗೆ ಕಂದಕ ನಿರ್ಮಾಣ

Karnataka Rain
ಮಳೆ2 days ago

Karnataka Rain : ಭಾರಿ ಮಳೆ ಎಫೆಕ್ಟ್‌; ಉಕ್ಕಿ ಹರಿಯುತ್ತಿದ್ದ ನದಿಯಲ್ಲಿ ಕೊಚ್ಚಿ ಹೋದ ರಾಸು

Uttara Kannada Landslide
ಮಳೆ2 days ago

Uttara Kannada Landslide: ಶಿರೂರು ಗುಡ್ಡ ಕುಸಿತ; ಅಖಾಡಕ್ಕಿಳಿದ ಜಿಯೊಲಾಜಿಕಲ್ ಸರ್ವೆ ಆಫ್ ಇಂಡಿಯಾ ಟೀಂ

Karnataka Rain
ಮಳೆ4 days ago

Karnataka Rain : ಕಾರವಾರದಲ್ಲಿ ಮಳೆ ಅವಾಂತರ; ಮನೆ ಮೇಲೆ ಗುಡ್ಡ ಕುಸಿದು ವೃದ್ಧ ಸಾವು

karnataka Rain
ಮಳೆ4 days ago

Karnataka Rain : ಭಾರಿ ಮಳೆಗೆ ನಿಯಂತ್ರಣ ತಪ್ಪಿ ಕೆರೆಗೆ ಉರುಳಿ ಬಿದ್ದ ಕಾರು; ನಾಲ್ವರು ಪ್ರಾಣಾಪಾಯದಿಂದ ಪಾರು

karnataka Weather Forecast
ಮಳೆ5 days ago

Karnataka Weather : ವ್ಯಾಪಕ ಮಳೆ ಎಚ್ಚರಿಕೆ; ನಾಳೆಯೂ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

karnataka Rain
ಮಳೆ5 days ago

Karnataka Rain : ಶಾಲಾ-ಕಾಲೇಜಿಗೆ ಈ ದಿನ ರಜಾ; ಅಬ್ಬರಿಸುತ್ತಿರುವ ಮಳೆಗೆ ಮನೆಯಲ್ಲೇ ಎಲ್ಲರೂ ಸಜಾ!

ಟ್ರೆಂಡಿಂಗ್‌