Rajakaluve Encroachment: ರಾಜಕಾಲುವೆ ಒತ್ತುವರಿದಾರರಿಗೆ ಮತ್ತೆ ನಡುಕ, ತೆರವಿಗೆ ಬಿಬಿಎಂಪಿ ಸಿದ್ಧತೆ - Vistara News

ಬೆಂಗಳೂರು

Rajakaluve Encroachment: ರಾಜಕಾಲುವೆ ಒತ್ತುವರಿದಾರರಿಗೆ ಮತ್ತೆ ನಡುಕ, ತೆರವಿಗೆ ಬಿಬಿಎಂಪಿ ಸಿದ್ಧತೆ

Rajakaluve Encroachment: ಇದುವರೆಗೆ ಮಾಡಿರುವ ಸಮೀಕ್ಷೆಯಲ್ಲಿ 3182 ಕಟ್ಟಡಗಳನ್ನು ಡೆಮಾಲಿಷನ್‌ಗಾಗಿ ಗುರುತು ಮಾಡಲಾಗಿದೆ. ರಾಜಕಾಲುವೆ ಒತ್ತುವರಿ ಮಾಡಿಕೊಂಡು ಕಟ್ಟಡ ನಿರ್ಮಾಣ ಮಾಡಿರುವುದರಿಂದ ಮಳೆ ನೀರು ಹರಿಯಲು ತಡೆ ಉಂಟಾಗಿ ನಗರದಲ್ಲಿ ಪ್ರವಾಹ ಸೃಷ್ಟಿಯಾಗುವ ಭೀತಿ ಸೃಷ್ಟಿಯಾಗಿದೆ.

VISTARANEWS.COM


on

Rajakaluve Encroachment
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ರಾಜಕಾಲುವೆ ಒತ್ತುವರಿದಾರರಿಗೆ (rainwater drain) ಮತ್ತೆ ನಡುಕ ಆರಂಭವಾಗಿದೆ. ಬಿಬಿಎಂಪಿಯಿಂದ (BBMP) ರಾಜಕಾಲುವೆ ಒತ್ತುವರಿ (Rajakaluve Encroachment) ಸರ್ವೆ ನಡೆಯುತ್ತಿದ್ದು, ಮಳೆ ನಿಂತ ನಂತರ ಒತ್ತುವರಿ ತೆರವು (Rajakaluve clearance) ಮಾಡಲು ಬಿಬಿಎಂಪಿ ಸನ್ನದ್ಧವಾಗಿದೆ.

ಇದುವರೆಗೆ ಮಾಡಿರುವ ಸಮೀಕ್ಷೆಯಲ್ಲಿ 3182 ಕಟ್ಟಡಗಳನ್ನು ಡೆಮಾಲಿಷನ್‌ಗಾಗಿ ಗುರುತು ಮಾಡಲಾಗಿದೆ. ರಾಜಕಾಲುವೆ ಒತ್ತುವರಿ ಮಾಡಿಕೊಂಡು ಕಟ್ಟಡ ನಿರ್ಮಾಣ ಮಾಡಿರುವುದರಿಂದ ಮಳೆ ನೀರು ಹರಿಯಲು ತಡೆ ಉಂಟಾಗಿ ನಗರದಲ್ಲಿ ಪ್ರವಾಹ ಸೃಷ್ಟಿಯಾಗುವ ಭೀತಿ ಸೃಷ್ಟಿಯಾಗಿದೆ. ಹೀಗಾಗಿ ಒತ್ತುವರಿ ತೆರವು ಮಾಡಲು ಬಿಬಿಎಂಪಿ ತೀರ್ಮಾನಿಸಿದೆ. ಸಿಎಂ ಸಿದ್ದರಾಮಯ್ಯ ಹಾಗೂ ಬೆಂಗಳೂರು ಉಸ್ತುವಾರಿಯೂ ಆಗಿರುವ ಡಿಸಿಎಂ ಡಿಕೆ ಶಿವಕುಮಾರ್‌ ಅವರು ಕೂಡ ಒತ್ತುವರಿ ತೆರವು ಮಾಡಲು ಬಿಬಿಎಂಪಿಗೆ ಕಠಿಣ ಸೂಚನೆ ನೀಡಿದ್ದಾರೆ.

ಯಾವ ವಲಯದಲ್ಲಿ ಎಷ್ಟು ಕಟ್ಟಡ ಡೆಮಾಲಿಷನ್‌ಗೆ ಗುರುತು?

ಮಹಾದೇವಪುರ ವಲಯದಲ್ಲಿ 1651 ಕಟ್ಟಡಗಳ ಗುರುತು
ಯಲಹಂಕ ವಲಯದಲ್ಲಿ 588 ಕಟ್ಟಡಗಳು ಗುರುತು.
ಬೊಮ್ಮನಹಳ್ಳಿ ವಲಯದ 368 ಕಟ್ಟಡಗಳ ಗುರುತು
ಪೂರ್ವ ವಲಯ 237 ಕಟ್ಟಡಗಳ ಗುರುತು
ಆರ್ ಆರ್ ನಗರ 75 ಕಟ್ಟಡಗಳ ಗುರುತು

ಇಷ್ಟು ಕಟ್ಟಡಗಳನ್ನು ಕೆಡವಲು ಬಿಬಿಎಂಪಿ ಗುರುತು ಮಾಡಿಕೊಂಡಿದೆ. ಇದರಲ್ಲಿ ಪ್ರಭಾವಿಗಳ, ಶ್ರೀಮಂತರ ಒತ್ತುವರಿಗಳು ಕೂಡ ಸೇರಿವೆ. ಕೆಲವು ಕಡೆ ಭಾರಿ ಅಪಾರ್ಟ್‌ಮೆಂಟ್‌ಗಳು ಒತ್ತುವರಿ ಮಾಡಿಕೊಂಡಿದ್ದು, ಕಾನೂನು ತಗಾದೆಯೂ ಇದೆ. ಆಗಸ್ಟ್‌ನಿಂದ‌ ಡೆಮಾಲಿಷನ್ ಕಾರ್ಯಾಚರಣೆ ಶುರುವಾಗಲಿದೆ. ಮಳೆಗಾಲದ ಹಿನ್ನೆಲೆಯಲ್ಲಿ ಪ್ರವಾಹ ಪ್ರದೇಶದಲ್ಲಿರುವ ಒತ್ತುವರಿ ಮೊದಲು ತೆರವು ಮಾಡಿಕೊಳ್ಳಲಾಗುತ್ತದೆ. ತಹಶಿಲ್ದಾರರ ಮುಖಾಂತರ ತೆರವು ಕಾರ್ಯಾಚರಣೆಗೆ ಆದೇಶ ನೀಡಲಾಗಿದೆ.

ಒತ್ತುವರಿ ಕಂಡರೆ ತಿಳಿಸಿ

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ರಾಜಕಾಲುವೆಗಳ ಒತ್ತುವರಿ ಅಥವಾ ಅತಿಕ್ರಮಣ ಗುರುತಿಸಲು ಸಹಾಯ ಮಾಡುವಂತೆ ಸಾರ್ವಜನಿಕರನ್ನು ಮಹಾನಗರ ಪಾಲಿಕೆ ಈ ಹಿಂದೆ ಕೋರಿತ್ತು. ರಾಜಕಾಲುವೆ ಒತ್ತುವರೆ ಮಾಡಿ ಅಲ್ಲಿ ಕಟ್ಟಡ ನಿರ್ಮಿಸಿರುವುದು ಯಾರಿಗಾದರೂ ತಿಳಿದಿದ್ದರೆ ಅಥವಾ ಗಮನಕ್ಕೆ ಬಂದರೆ ವಲಯಗಳ ಈ ನಿರ್ದಿಷ್ಟ ಕಚೇರಿಗಳ ಅಧಿಕಾರಿಗಳಿಗೆ ದೂರನ್ನು ನೀಡುವಂತೆ ಬಿಬಿಎಂಪಿ ಪತ್ರಿಕಾ ಪ್ರಕಟಣೆ ನೀಡಿತ್ತು.

ಕಳೆದ ವರ್ಷ ಹೈಕೋರ್ಟ್, ರಾಜಕಾಲುವೆಯನ್ನು ಅತಿಕ್ರಮಣ ಮಾಡಿರುವ ಬಗ್ಗೆ ಸಮೀಕ್ಷೆ ನಡೆಸಿ ಗುರುತಿಸಿ 10 ದಿನಗಳ ಒಳಗೆ ವರದಿ ನೀಡುವಂತೆ ಬಿಬಿಎಂಪಿಗೆ ಆದೇಶ ನೀಡಿತ್ತು. ಈ ಹಿನ್ನೆಲೆಯಲ್ಲಿ ಬಿಬಿಎಂಪಿ ಸಾರ್ವಜನಿಕರ ಸಹಕಾರ ಕೋರಿದ್ದು, ಸಾರ್ವಜನಿಕರು ಅತಿಕ್ರಮಣವಾದ ರಾಜಕಾಲುವೆ ಪ್ರದೇಶವನ್ನು ಸ್ಪಷ್ಟವಾಗಿ ಫೋಟೋ ಸಹಿತ ನಿರ್ದಿಷ್ಟ ಅಧಿಕಾರಿಗಳಿಗೆ ಕಳುಹಿಸುವಂತೆ ತಿಳಿಸಿತ್ತು. ನೂರಾರು ಫೋಟೋಗಳು ಬಂದಿದ್ದವು.

ಇದನ್ನೂ ಓದಿ: Road Accident: ರಾಜಕಾಲುವೆಗೆ ಬಿದ್ದ ಬೈಕ್‌ ಸವಾರನ ಮೃತದೇಹ ಪತ್ತೆ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಕರ್ನಾಟಕ

R Ashok: ವಾಲ್ಮೀಕಿ ಹಗರಣ; ಮುಖ್ಯಮಂತ್ರಿ ಏನು ಕತ್ತೆ ಕಾಯುತ್ತಿದ್ದರೇ ಎಂದ ಆರ್‌. ಅಶೋಕ್‌

R Ashok: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣವನ್ನು ಮುಚ್ಚಿಹಾಕುವ ಸ್ಪಷ್ಟ ತೀರ್ಮಾನವನ್ನು ಕಾಂಗ್ರೆಸ್‌ ಮಾಡಿದೆ. ಅದಕ್ಕೆ ಕ್ಲೀನ್‌ಚಿಟ್‌ ಕೊಟ್ಟುಕೊಂಡ ಮುಖ್ಯಮಂತ್ರಿ ಸಿದ್ದರಾಮಯ್ಯ, ಎಲ್ಲ ತಪ್ಪನ್ನು ಅಧಿಕಾರಿಗಳ ಮೇಲೆ ಹಾಕಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮುಖವಾಡ ಕಳಚಿ ಬಿದ್ದಿದ್ದು, ಅವರೆಷ್ಟು ಶುದ್ಧ ಹಸ್ತರು ಎಂದು ಬಯಲಾಗಿದೆ ಎಂದು ಪ್ರತಿಪಕ್ಷ ನಾಯಕ ಆರ್‌. ಅಶೋಕ್‌ ಆರೋಪಿಸಿದ್ದಾರೆ.

VISTARANEWS.COM


on

Opposition Party leader R Ashok pressmeet about Valmiki Development Corporation scam
Koo

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣವನ್ನು ಅಧಿಕಾರಿಗಳ ಮೇಲೆ ಎತ್ತಿ ಹಾಕುವ ಕೆಲಸವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಡುತ್ತಿದ್ದಾರೆ. ಅವರ 40 ವರ್ಷಗಳ ಶುದ್ಧ ಹಸ್ತದ ಮುಖವಾಡ ಈಗ ಕಳಚಿ ಬಿದ್ದಿದೆ ಎಂದು ಪ್ರತಿಪಕ್ಷ ನಾಯಕ ಆರ್‌. ಅಶೋಕ್‌ (R Ashok) ಆರೋಪಿಸಿದ್ದಾರೆ. ಎಲ್ಲ ತಪ್ಪುಗಳನ್ನು ಸಿದ್ದರಾಮಯ್ಯ ಅಧಿಕಾರಿಗಳ ಮೇಲೆ ಹಾಕಿದ್ದಾರೆ. ಎಲ್ಲ ಅಧಿಕಾರಿಗಳೇ ಮಾಡಿದ್ದರೆ ಮುಖ್ಯಮಂತ್ರಿ ಏನು ಕತ್ತೆ ಕಾಯುತ್ತಿದ್ದರೇ ಎಂದು ಆರ್‌ ಅಶೋಕ್‌ ಪ್ರಶ್ನಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣವನ್ನು ಮುಚ್ಚಿಹಾಕುವ ಸ್ಪಷ್ಟ ತೀರ್ಮಾನವನ್ನು ಕಾಂಗ್ರೆಸ್‌ ಮಾಡಿದೆ. ಅದಕ್ಕೆ ಕ್ಲೀನ್‌ಚಿಟ್‌ ಕೊಟ್ಟುಕೊಂಡ ಮುಖ್ಯಮಂತ್ರಿ ಸಿದ್ದರಾಮಯ್ಯ, ಎಲ್ಲ ತಪ್ಪನ್ನು ಅಧಿಕಾರಿಗಳ ಮೇಲೆ ಹಾಕಿದ್ದಾರೆ. ಎಲ್ಲ ಅಧಿಕಾರಿಗಳೇ ಮಾಡಿದ್ದರೆ, ಮುಖ್ಯಮಂತ್ರಿಯೇನು ಕತ್ತೆ ಕಾಯುತ್ತಿದ್ದರೇ? ಆ ಅಧಿಕಾರಿ ಹಿಂದೆಯೇ ತಪ್ಪು ಮಾಡಿದ್ದರೆ ಅದೇ ಹುದ್ದೆಯಲ್ಲಿ ಉಳಿಸಿಕೊಂಡಿದ್ದು ಏಕೆ? ಎಂದು ಪ್ರಶ್ನಿಸಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮುಖವಾಡ ಕಳಚಿ ಬಿದ್ದಿದ್ದು, ಅವರೆಷ್ಟು ಶುದ್ಧ ಹಸ್ತರು ಎಂದು ಬಯಲಾಗಿದೆ. ರಾಜ್ಯದ ಜನರ ಹಣವನ್ನು ಕಳ್ಳ ಖಾತೆಯಲ್ಲಿ ಇಟ್ಟಿದ್ದು ರಾಜ್ಯ ಸರ್ಕಾರ. ಇದರಲ್ಲಿ ಕೇಂದ್ರ ಆರ್ಥಿಕ ಸಚಿವೆ ನಿರ್ಮಲಾ ಸೀತಾರಾಮನ್‌ ಅವರ ಪಾತ್ರವೇ ಇಲ್ಲ. ಬ್ಯಾಂಕ್‌ ಅಧಿಕಾರಿಗಳು ಹಗರಣದ ತನಿಖೆಯನ್ನು ಸಿಬಿಐಗೆ ವಹಿಸಿದರು. ಆದರೆ ಸರ್ಕಾರ ವಿಶೇಷ ತನಿಖಾ ದಳಕ್ಕೆ ನೀಡಿ ಮುಚ್ಚಿ ಹಾಕಿದ್ದಾರೆ ಎಂದು ದೂರಿದರು.

ಇದನ್ನೂ ಓದಿ: NEET UG 2024 Result: ಕ್ಷೇತ್ರವಾರು ನೀಟ್‌ ಪರೀಕ್ಷಾ ಫಲಿತಾಂಶ ಪ್ರಕಟ

ಸಿಎಂ ಸಿದ್ದರಾಮಯ್ಯ ಪುಟಗಟ್ಟಲೆ ಜಾಹೀರಾತು ನೀಡಿ ಸ್ಪಷ್ಟನೆ ಕೊಟ್ಟಿದ್ದಾರೆ. ಜತೆಗೆ, ಜಾತಿ ಬಗ್ಗೆ ಹೇಳಿದ್ದಾರೆ. ನಿರ್ದಿಷ್ಟ ಜಾತಿಯ ವಿರುದ್ಧ ಯಾವುದೇ ಆಪಾದನೆ ಮಾಡಬಾರದು ಎಂದು ಸಂವಿಧಾನದಲ್ಲೇ ತಿದ್ದುಪಡಿ ಮಾಡಲಿ. ಸಿಎಂ ಸಿದ್ದರಾಮಯ್ಯ ಬೆಚ್ಚಿ ಬಿದ್ದಿರುವುದರಿಂದ ಹೀಗೆ ಮಾತಾಡುತ್ತಿದ್ದಾರೆ. 40 ಕ್ಕೂ ಅಧಿಕ ದಾಖಲೆಗಳನ್ನು ನಾನು ಕೊಟ್ಟಿದ್ದು, ಈ ಬಗ್ಗೆ ಸಿಎಂ ಸ್ಪಷ್ಟೀಕರಣ ಕೊಡದೆ ಎಲ್ಲಕ್ಕೂ ಪದ್ಮನಾಭ ಕಾರಣ ಎಂದು ಹೇಳಿದ್ದಾರೆ ಎಂದು ಆರೋಪಿಸಿದರು.

ಸಚಿವರ ತಪ್ಪಿಲ್ಲ ಎಂದ ಮೇಲೆ ಬಿ. ನಾಗೇಂದ್ರ ರಾಜೀನಾಮೆ ಯಾಕೆ ಕೊಟ್ಟರು? ಹಾಗಾದರೆ ಸಿಎಂ ಅವರನ್ನು ಅರ್ಧ ದಾರಿಯಲ್ಲೇ ಕೈ ಬಿಟ್ಟಿದ್ದಾರೆ ಎಂದರ್ಥ. ಲೋಕಸಭೆ ಚುನಾವಣೆಗಾಗಿ ನಾಗೇಂದ್ರ ಹಾಗೂ ಬಸವನಗೌಡ ದದ್ದಲ್‌ ಶ್ರಮ ವಹಿಸಿ, ಕಾಂಗ್ರೆಸ್‌ ಪಕ್ಷಕ್ಕಾಗಿ ಹಣ ಸಂಗ್ರಹ ಮಾಡಿ ತೆಲಂಗಾಣಕ್ಕೆ ಕಳುಹಿಸಿದ್ದಾರೆ ಎಂದು ದೂರಿದರು.

ತನಿಖೆ ಮಾಡಿ

ಬಿಜೆಪಿ ಸರ್ಕಾರದಲ್ಲಿ ಹಗರಣಗಳ ಸರಮಾಲೆ ಎಂದು ಆರೋಪ ಮಾಡಿ, ಅಧಿಕಾರಕ್ಕೆ ಬಂದು 15 ತಿಂಗಳಾದರೂ 40 ಪರ್ಸೆಂಟ್‌ ಆರೋಪದ ತನಿಖೆ ಇನ್ನೂ ಮುಗಿಸಿಲ್ಲ. ಹಿಂದಿನ ಸರ್ಕಾರ ಹಗರಣ ಮಾಡಿದ್ದರೆ, ಅದನ್ನು ತನಿಖೆ ಮಾಡಲು ಇಷ್ಟು ಸಮಯ ಬೇಕೆ ಎಂದು ಪ್ರಶ್ನೆ ಮಾಡಿದರು.

ಬಿಜೆಪಿಗೆ ಯಾವ ಒತ್ತಡವೂ ಇಲ್ಲ. ಆದರೆ ರಾಜ್ಯದ ಜನರ ಒತ್ತಡ ಮಾತ್ರ ಇದೆ. ಜನರಿಗಾಗಿ ಹಾಗೂ ದಲಿತರಿಗಾಗಿ ಈ ಮಟ್ಟಕ್ಕೆ ಹೋರಾಟ ಮಾಡುತ್ತಿದ್ದೇವೆ. ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು, ದಲಿತರ ಹಣ ವಾಪಸ್‌ ಸಿಗಬೇಕು, ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಯಾಗಬೇಕು ಎನ್ನುವುದು ನಮ್ಮ ಪಕ್ಷದ ಉದ್ದೇಶ ಎಂದು ತಿಳಿಸಿದರು.

ಸಿಎಂ ಸಿದ್ದರಾಮಯ್ಯ ಮಾಡಿರುವ ಆರೋಪದ 21 ಹಗರಣಗಳನ್ನು ನಾವೇ ತನಿಖೆ ಮಾಡುತ್ತೇವೆ. ಅವರು ಅಧಿಕಾರದಿಂದ‌ ಕೆಳಕ್ಕಿಳಿದು ನಮಗೆ ಅಧಿಕಾರ ನೀಡಲಿ ಎಂದು ಆರ್‌.ಅಶೋಕ್‌ ಸವಾಲು ಹಾಕಿದರು.

ಇದನ್ನೂ ಓದಿ: Paris Olympics: ಪ್ಯಾರಿಸ್​ ಒಲಿಂಪಿಕ್ಸ್​ನಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ನಡೆಸಿಕೊಡಲಿದ್ದಾರೆ ಕನ್ನಡತಿ ಭಾವನಾ ಪ್ರದ್ಯುಮ್ನ

ಬ್ರ್ಯಾಂಡ್ ಬೆಂಗಳೂರು ಆಗಬೇಕೆಂದರೆ ಎಲ್ಲ ಕ್ಷೇತ್ರಗಳು ಅಭಿವೃದ್ಧಿಯಾಗಬೇಕು. ಬೆಂಗಳೂರಿನಲ್ಲಿ ಬಿಜೆಪಿ ಶಾಸಕರೇ ಹೆಚ್ಚಿದ್ದು, ಡಿಸಿಎಂ ಡಿ.ಕೆ. ಶಿವಕುಮಾರ್ ಎಲ್ಲರ‌‌ ಬಳಿ ಚರ್ಚೆ ಮಾಡಿ ಅನುದಾನ ನೀಡಲಿ. ಕಾಂಗ್ರೆಸ್ ಶಾಸಕರಿಗೆ ಬಿಜೆಪಿ ಸರ್ಕಾರ ಅನುದಾನ ನೀಡಿತ್ತು. ಅದೇ ರೀತಿ ಕಾಂಗ್ರೆಸ್ ಕೂಡ ನಡೆದುಕೊಳ್ಳಲಿ. ಈಗಾಗಲೇ‌ ನಗರದಲ್ಲಿ ಕಸದ ರಾಶಿ ಹೆಚ್ಚಿದ್ದು, ವಿಲೇವಾರಿ ಮಾಡಲು ಕೂಡಲೇ ಕ್ರಮ ವಹಿಸಲಿ ಎಂದು ಆಗ್ರಹಿಸಿದರು.

Continue Reading

ಕರ್ನಾಟಕ

LKG UKG in Anganwadis: ದೇಶದಲ್ಲೇ ಮೊದಲ ಬಾರಿ ಅಂಗನವಾಡಿಗಳಲ್ಲಿ ಎಲ್‌‌ಕೆಜಿ, ಯುಕೆಜಿ; ಜು.22ಕ್ಕೆ ಉದ್ಘಾಟನೆ

LKG UKG in Anganwadis: ಬೆಂಗಳೂರಿನ ಗೋವಿಂದರಾಜನಗರ ಕ್ಷೇತ್ರದಲ್ಲಿ ಜುಲೈ 22ರಂದು ನಡೆಯಲಿರುವ ಕಾರ್ಯಕ್ರಮದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಪೂರ್ವ ಪ್ರಾಥಮಿಕ ಶಾಲೆಗಳಿಗೆ ಚಾಲನೆ ನೀಡಲಿದ್ದಾರೆ.

VISTARANEWS.COM


on

LKG UKG in Anganwadis
Koo

ಬೆಂಗಳೂರು: ದೇಶದಲ್ಲೇ ಮೊಟ್ಟ ಮೊದಲ ಬಾರಿಗೆ ಕರ್ನಾಟಕದ ಅಂಗನವಾಡಿ ಕೇಂದ್ರಗಳಲ್ಲಿ ಪೂರ್ವ ಪ್ರಾಥಮಿಕ ತರಗತಿ (ಎಲ್‌ಕೆಜಿ, ಯುಕೆಜಿ) ಗಳನ್ನು ರಾಜ್ಯ ಸರ್ಕಾರವು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಮೂಲಕ ಆರಂಭಿಸುತ್ತಿದ್ದು, ಜುಲೈ 22ರಂದು ಸೋಮವಾರ ಬೆಂಗಳೂರಿನ ಗೋವಿಂದರಾಜನಗರ ಕ್ಷೇತ್ರದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಪೂರ್ವ ಪ್ರಾಥಮಿಕ ಶಾಲೆಗಳಿಗೆ (LKG UKG in Anganwadis) ಚಾಲನೆ ನೀಡಲಿದ್ದಾರೆ.

ಗೋವಿಂದರಾಜನಗರದ ಪಟ್ಟೆಗಾರಪಾಳ್ಯ ಮುಖ್ಯರಸ್ತೆಯ ಕಾವೇರಿಪುರ 4ನೇ ಕ್ರಾಸ್‌ನ ಬಾಲಯ್ಯ ಪಾರ್ಕ್ ಎದುರು ಜುಲೈ 22ರಂದು ಮಧ್ಯಾಹ್ನ 12ಗಂಟೆಗೆ ಪೂರ್ವ ಪ್ರಾಥಮಿಕ ತರಗತಿಗೆ ಚಾಲನೆ ಕಾರ್ಯಕ್ರಮ ನಡೆಯಲಿದ್ದು, ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರದ ಶಾಸಕ ಪ್ರಿಯಕೃಷ್ಣ ಅವರು ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದಾರೆ.

ಸರ್ಕಾರದಿಂದಲೇ ಬ್ಯಾಗ್, ಪುಸ್ತಕ, ಸಮವಸ್ತ್ರ ಉಚಿತ

ಇಡೀ ದೇಶಕ್ಕೆ ಮಾದರಿಯಾಗಿರುವ ಕರ್ನಾಟಕದ ಅಂಗನವಾಡಿ ಕೇಂದ್ರಗಳ ಉನ್ನತೀಕರಣದ (LKG UKG in Anganwadis) ಮೊದಲ ಭಾಗವಾಗಿ ಜುಲೈ 22 ರಂದು ರಾಜ್ಯದ 250 ಅಂಗನವಾಡಿ ಕೇಂದ್ರಗಳಲ್ಲಿ ಪೂರ್ವ ಪ್ರಾಥಮಿಕ (ಎಲ್‌ಕೆಜಿ, ಯುಕೆಜಿ) ತರಗತಿಗಳನ್ನು ಸಾಂಕೇತಿಕವಾಗಿ ಆರಂಭಿಸಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಇತ್ತೀಚೆಗೆ ತಿಳಿಸಿದ್ದರು.

ಪೂರ್ವ ಪ್ರಾಥಮಿಕ ಶಾಲಾ ಮಕ್ಕಳಿಗೆ ಇಲಾಖೆ ವತಿಯಿಂದಲೇ ಬ್ಯಾಗ್, ಪುಸ್ತಕ ಹಾಗೂ ಸಮವಸ್ತ್ರಗಳನ್ನು ವಿತರಿಸಲಾಗುವುದು. ಮೊದಲ ಹಂತದಲ್ಲಿ 15 ರಿಂದ 20 ಸಾವಿರ ಶಾಲೆಗಳಲ್ಲಿ ಗವರ್ನಮೆಂಟ್ ಮಾಂಟೆಸ್ಸರಿ ಆರಂಭಿಸಲಾಗುತ್ತಿದೆ. ಅಂಗನವಾಡಿ ಕೇಂದ್ರಗಳನ್ನು ಉನ್ನತೀಕರಣ ಮಾಡುವುದೇ ಇಲಾಖೆಯ ಉದ್ದೇಶ. ಈಗಾಗಲೇ ಇಲಾಖೆ ವತಿಯಿಂದ ಅಂಗನವಾಡಿ ಕೇಂದ್ರಗಳ ಮಕ್ಕಳಿಗೆ ಗುಣಮಟ್ಟದ ಆಹಾರ, ಶಿಕ್ಷಕಿಯರಿಗೆ ಸೀರೆ ನೀಡಲಾಗಿದೆ. ಯಾವುದೇ ಕಾರಣಕ್ಕೂ ಅಂಗನವಾಡಿ ಶಿಕ್ಷಕಿಯರನ್ನು ತೆಗೆಯುವ ಪ್ರಶ್ನೆಯೇ ಇಲ್ಲ ಎಂದು ಹೇಳಿದ್ದರು.

30 ವರ್ಷಕ್ಕಿಂತ ಮೇಲ್ಪಟ್ಟ ಅಂಗನವಾಡಿ ಕೇಂದ್ರಗಳನ್ನು ಉನ್ನತ ದರ್ಜೆಗೆ ಏರಿಸಲಾಗುವುದು. ನನ್ನ ಅಧಿಕಾರ ಅವಧಿಯಲ್ಲಿ ಇಲಾಖೆಗೆ ಕೈಲಾದಷ್ಟು ಉತ್ತಮ ಕೆಲಸ ಮಾಡುವೆ. ಕಾರ್ಯಕರ್ತೆಯರ ಹೋರಾಟದ ಶಕ್ತಿಯೇ ಅಂಗನವಾಡಿ ಉನ್ನತೀಕರಣಕ್ಕೆ ಕಾರಣ ಎಂದು ಹೇಳಿದ್ದರು.

ಇದನ್ನೂ ಓದಿ | Karnataka Job Reservation: ಕನ್ನಡಿಗರಿಗೆ ಮೀಸಲಾತಿ ನೀಡಲು ಕರವೇ ಆಗ್ರಹ; ʼಫೋನ್ ಪೇʼ ಬಾಯ್ಕಾಟ್ ಅಭಿಯಾನ ಶುರು!

ಈ ಮೊದಲು ಪ್ರಾಥಮಿಕ ಶಾಲೆಗಳಲ್ಲೇ ಎಲ್‌ಕೆಜಿ, ಯುಕೆಜಿ ತರಗತಿ ಆರಂಭಿಸಲು ಸರ್ಕಾರ ನಿರ್ಧರಿಸಿತ್ತು. ಆದರೆ, ಇದಕ್ಕೆ ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರು ವಿರೋಧ ವ್ಯಕ್ತಪಡಿಸಿದ್ದರು. ಶಾಲೆಗಳಲ್ಲಿ ಎಲ್‌ಕೆಜಿ, ಯುಕೆಜಿ ತರಗತಿ ಆರಂಭಿಸಿದರೆ ಅಂಗನವಾಡಿ ಕೇಂದ್ರಗಳ ಅಸ್ತಿತ್ವಕ್ಕೆ ಧಕ್ಕೆಯಾಗಲಿದೆ. ಹೀಗಾಗಿ ಅಂಗನವಾಡಿಗಳಲ್ಲೇ ಎಲ್‌ಕೆಜಿ, ಯುಕೆಜಿ ಆರಂಭಿಸಬೇಕು ಎಂದು ಒತ್ತಾಯ ಕೇಳಿಬಂದಿತ್ತು. ಹೀಗಾಗಿ ಅಂಗನವಾಡಿ ಕೇಂದ್ರಗಳಲ್ಲೇ ಪೂರ್ವ ಪ್ರಾಥಮಿಕ ತರಗತಿ ಆರಂಭಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ.

Continue Reading

ಕರ್ನಾಟಕ

CM Siddaramaiah: ವಾರದಲ್ಲಿ 4 ದಿನ ಶಾಲೆಗಳಿಗೆ ಮೊಟ್ಟೆ ಪೂರೈಸಲು ಅಜೀಂ ಪ್ರೇಮ್‌ಜಿ ಫೌಂಡೇಶನ್ ಜತೆ ಒಪ್ಪಂದ: ಸಿಎಂ

CM Siddaramaiah: ಸರ್ಕಾರಿ ಶಾಲೆಗಳು ಹಾಗೂ ಸರ್ಕಾರಿ ಅನುದಾನಿತ ಶಾಲೆಗಳಿಗೆ ಮೊಟ್ಟೆಯನ್ನು ಸರಬರಾಜು ಮಾಡುವ ಕಾರ್ಯಕ್ರಮವನ್ನು ಸಿಎಂ ಸಿದ್ದರಾಮಯ್ಯ ಅವರು ಶನಿವಾರ ಉದ್ಘಾಟಿಸಿದ್ದಾರೆ.

VISTARANEWS.COM


on

Siddaramaiah
Koo

ಬೆಂಗಳೂರು: ವಾರದಲ್ಲಿ 4 ದಿನಗಳು ಸರ್ಕಾರಿ ಶಾಲೆಗಳು ಹಾಗೂ ಸರ್ಕಾರಿ ಅನುದಾನಿತ ಶಾಲೆಗಳಿಗೆ ಮೊಟ್ಟೆಯನ್ನು ಸರಬರಾಜು ಮಾಡಲು ಅಜೀಂ ಪ್ರೇಮ್‌ಜಿ ಪ್ರತಿಷ್ಠಾನದೊಂದಿಗೆ ಒಪ್ಪಂದ ಮಾಡಿಕೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ತಿಳಿಸಿದರು.

ನಗರದ ಖಾಸಗಿ ಹೋಟೆಲ್‌ನಲ್ಲಿ ನಡೆದ ಸರ್ಕಾರಿ ಶಾಲೆಗಳಲ್ಲಿ ವಾರದಲ್ಲಿ 6 ದಿನ ಪೌಷ್ಟಿಕ ಆಹಾರ ವಿತರಣೆ ಕಾರ್ಯಕ್ರಮಕ್ಕೆ ಚಾಲನೆ ಮಾತನಾಡಿದ ಅವರು, ಮಕ್ಕಳು ಆರೋಗ್ಯವಂತರಾಗಿರಲು ಪೌಷ್ಟಿಕ ಆಹಾರ ಅಗತ್ಯ. ಮಾನಸಿಕ ಆರೋಗ್ಯ ಮತ್ತು ಉತ್ತಮ‌ ಶಿಕ್ಷಣಕ್ಕೆ ಗುಣಮಟ್ಟದ ಆಹಾರ ಮುಖ್ಯ. ಉಪಹಾರ ಇಲ್ಲದೆ ಶಾಲೆಗೆ ಬಂದು, ಊಟ ಇಲ್ಲದೆ ಮಧ್ಯಾಹ್ನದವರೆಗೂ ಶಾಲೆಯಲ್ಲಿರುವ ಮಕ್ಕಳನ್ನು ನಾನು ನೋಡಿದ್ದೇನೆ. ಹೀಗಾಗಿ ವಾರದಲ್ಲಿ ಎರಡು ದಿನ ಊಟ ಮತ್ತು ಮೊಟ್ಟೆ ಕೊಡಲು ಮುಂದಾದೆವು. ಈಗ ಅಜೀಂ ಪ್ರೇಮ್‌ಜಿ ಫೌಂಡೇಷನ್ ಅವರು ವಾರದಲ್ಲಿ ನಾಲ್ಕು ದಿನ ಮಕ್ಕಳಿಗೆ ಮೊಟ್ಟೆ ನೀಡಲು ಮತ್ತು ಪೂರಕ ಪೌಷ್ಠಿಕ ಆಹಾರ ಒದಗಿಸುವ ಪುಣ್ಯದ ಕಾರ್ಯಕ್ಕೆ ಸರ್ಕಾರದ ಜೊತೆಗೆ ಕೈಜೋಡಿಸಿದ್ದಾರೆ. ಅವರಿಗೆ ಧನ್ಯವಾದಗಳು ಎಂದು ತಿಳಿಸಿದರು.

ವೈಜ್ಞಾನಿಕವಾಗಿ, ವೈಚಾರಿಕವಾಗಿ ಮಕ್ಕಳು ವಿಕಾಸ ಹೊಂದಬೇಕು. ಆಗ ಮಾತ್ರ ಸಮಾಜಮುಖಿ ಆಗಲು ಸಾಧ್ಯ. ಬಡವರ ಮಕ್ಕಳಿಗೆ ಉತ್ತಮ ಶಿಕ್ಷಣಕ್ಕಾಗಿ ಅವಕಾಶಗಳನ್ನು ಸೃಷ್ಟಿಸುವುದು ನಮ್ಮ ಆಶಯ. ಈ ಕಾರಣಕ್ಕೆ ಸಮವಸ್ತ್ರ, ಶೂ, ಸಾಕ್ಸ್ ಕೊಡುವ ಜೊತೆಗೆ ಹೆಚ್ಚೆಚ್ಚು ವಸತಿ ಶಾಲೆಗಳನ್ನು ತೆರೆಯುತ್ತಿದ್ದೇವೆ ಎಂದರು.

ನಾಳೆ ಅಂಕೋಲಾಕ್ಕೆ ಭೇಟಿ

ಮಳೆಯಿಂದ ರಸ್ತೆ, ಮನೆ ಬಿದ್ದಿರುವುದು ಹಾಗೂ ಬೆಳೆ ಹಾನಿಯಾಗಿರುವುದಕ್ಕೆ ಪರಿಹಾರ ಕಾರ್ಯಗಳನ್ನು ತುರ್ತಾಗಿ ಕೈಬೇಕೆಂದು ಸೂಚಿಸಲಾಗಿದೆ ಎಂದ ಮುಖ್ಯಮಂತ್ರಿಗಳು, ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ಸೇತುವೆ ಪರಿಶೀಲಿಸಲು ನಾಳೆ (ಜುಲೈ 21) ತೆರಳುತ್ತಿರುವುದಾಗಿ ತಿಳಿಸಿದರು.

ಕಾರ್ಯಕ್ರಮದಲ್ಲಿ ಈ ವೇಳೆ ಶಿಕ್ಷಣ ಸಚಿವ ಮಧು ಬಂಗಾರಪ್ಪ, ವಿಪ್ರೋ ಮುಖ್ಯಸ್ಥರಾದ ಅಜೀಂ ಪ್ರೇಮ್ ಜಿ ದಂಪತಿ, ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ.ಅತೀಕ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್, ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷರಾದ ಮೆಹರೂಜ್ ಖಾನ್ ಸೇರಿ ಹಲವು ಗಣ್ಯರು ಉಪಸ್ಥಿತರಿದ್ದರು.

ಇದನ್ನೂ ಓದಿ | Karnataka Rain : ಭಾರಿ ಮಳೆಗೆ ಮನೆ ಗೋಡೆ ಕುಸಿತ; ಕೊಟ್ಟಿಗೆಯಲ್ಲಿದ್ದ ಜಾನುವಾರುಗಳು ಸಾವು

ರಾಜಕಾಲುವೆ ಒತ್ತುವರಿದಾರರಿಗೆ ಮತ್ತೆ ನಡುಕ, ತೆರವಿಗೆ ಬಿಬಿಎಂಪಿ ಸಿದ್ಧತೆ

Rajakaluve Encroachment

ಬೆಂಗಳೂರು: ರಾಜಕಾಲುವೆ ಒತ್ತುವರಿದಾರರಿಗೆ (rainwater drain) ಮತ್ತೆ ನಡುಕ ಆರಂಭವಾಗಿದೆ. ಬಿಬಿಎಂಪಿಯಿಂದ (BBMP) ರಾಜಕಾಲುವೆ ಒತ್ತುವರಿ (Rajakaluve Encroachment) ಸರ್ವೆ ನಡೆಯುತ್ತಿದ್ದು, ಮಳೆ ನಿಂತ ನಂತರ ಒತ್ತುವರಿ ತೆರವು (Rajakaluve clearance) ಮಾಡಲು ಬಿಬಿಎಂಪಿ ಸನ್ನದ್ಧವಾಗಿದೆ.

ಇದುವರೆಗೆ ಮಾಡಿರುವ ಸಮೀಕ್ಷೆಯಲ್ಲಿ 3182 ಕಟ್ಟಡಗಳನ್ನು ಡೆಮಾಲಿಷನ್‌ಗಾಗಿ ಗುರುತು ಮಾಡಲಾಗಿದೆ. ರಾಜಕಾಲುವೆ ಒತ್ತುವರಿ ಮಾಡಿಕೊಂಡು ಕಟ್ಟಡ ನಿರ್ಮಾಣ ಮಾಡಿರುವುದರಿಂದ ಮಳೆ ನೀರು ಹರಿಯಲು ತಡೆ ಉಂಟಾಗಿ ನಗರದಲ್ಲಿ ಪ್ರವಾಹ ಸೃಷ್ಟಿಯಾಗುವ ಭೀತಿ ಸೃಷ್ಟಿಯಾಗಿದೆ. ಹೀಗಾಗಿ ಒತ್ತುವರಿ ತೆರವು ಮಾಡಲು ಬಿಬಿಎಂಪಿ ತೀರ್ಮಾನಿಸಿದೆ. ಸಿಎಂ ಸಿದ್ದರಾಮಯ್ಯ ಹಾಗೂ ಬೆಂಗಳೂರು ಉಸ್ತುವಾರಿಯೂ ಆಗಿರುವ ಡಿಸಿಎಂ ಡಿಕೆ ಶಿವಕುಮಾರ್‌ ಅವರು ಕೂಡ ಒತ್ತುವರಿ ತೆರವು ಮಾಡಲು ಬಿಬಿಎಂಪಿಗೆ ಕಠಿಣ ಸೂಚನೆ ನೀಡಿದ್ದಾರೆ.

ಯಾವ ವಲಯದಲ್ಲಿ ಎಷ್ಟು ಕಟ್ಟಡ ಡೆಮಾಲಿಷನ್‌ಗೆ ಗುರುತು?

ಮಹಾದೇವಪುರ ವಲಯದಲ್ಲಿ 1651 ಕಟ್ಟಡಗಳ ಗುರುತು
ಯಲಹಂಕ ವಲಯದಲ್ಲಿ 588 ಕಟ್ಟಡಗಳು ಗುರುತು.
ಬೊಮ್ಮನಹಳ್ಳಿ ವಲಯದ 368 ಕಟ್ಟಡಗಳ ಗುರುತು
ಪೂರ್ವ ವಲಯ 237 ಕಟ್ಟಡಗಳ ಗುರುತು
ಆರ್ ಆರ್ ನಗರ 75 ಕಟ್ಟಡಗಳ ಗುರುತು

ಇಷ್ಟು ಕಟ್ಟಡಗಳನ್ನು ಕೆಡವಲು ಬಿಬಿಎಂಪಿ ಗುರುತು ಮಾಡಿಕೊಂಡಿದೆ. ಇದರಲ್ಲಿ ಪ್ರಭಾವಿಗಳ, ಶ್ರೀಮಂತರ ಒತ್ತುವರಿಗಳು ಕೂಡ ಸೇರಿವೆ. ಕೆಲವು ಕಡೆ ಭಾರಿ ಅಪಾರ್ಟ್‌ಮೆಂಟ್‌ಗಳು ಒತ್ತುವರಿ ಮಾಡಿಕೊಂಡಿದ್ದು, ಕಾನೂನು ತಗಾದೆಯೂ ಇದೆ. ಆಗಸ್ಟ್‌ನಿಂದ‌ ಡೆಮಾಲಿಷನ್ ಕಾರ್ಯಾಚರಣೆ ಶುರುವಾಗಲಿದೆ. ಮಳೆಗಾಲದ ಹಿನ್ನೆಲೆಯಲ್ಲಿ ಪ್ರವಾಹ ಪ್ರದೇಶದಲ್ಲಿರುವ ಒತ್ತುವರಿ ಮೊದಲು ತೆರವು ಮಾಡಿಕೊಳ್ಳಲಾಗುತ್ತದೆ. ತಹಶಿಲ್ದಾರರ ಮುಖಾಂತರ ತೆರವು ಕಾರ್ಯಾಚರಣೆಗೆ ಆದೇಶ ನೀಡಲಾಗಿದೆ.

ಒತ್ತುವರಿ ಕಂಡರೆ ತಿಳಿಸಿ

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ರಾಜಕಾಲುವೆಗಳ ಒತ್ತುವರಿ ಅಥವಾ ಅತಿಕ್ರಮಣ ಗುರುತಿಸಲು ಸಹಾಯ ಮಾಡುವಂತೆ ಸಾರ್ವಜನಿಕರನ್ನು ಮಹಾನಗರ ಪಾಲಿಕೆ ಈ ಹಿಂದೆ ಕೋರಿತ್ತು. ರಾಜಕಾಲುವೆ ಒತ್ತುವರೆ ಮಾಡಿ ಅಲ್ಲಿ ಕಟ್ಟಡ ನಿರ್ಮಿಸಿರುವುದು ಯಾರಿಗಾದರೂ ತಿಳಿದಿದ್ದರೆ ಅಥವಾ ಗಮನಕ್ಕೆ ಬಂದರೆ ವಲಯಗಳ ಈ ನಿರ್ದಿಷ್ಟ ಕಚೇರಿಗಳ ಅಧಿಕಾರಿಗಳಿಗೆ ದೂರನ್ನು ನೀಡುವಂತೆ ಬಿಬಿಎಂಪಿ ಪತ್ರಿಕಾ ಪ್ರಕಟಣೆ ನೀಡಿತ್ತು.

ಇದನ್ನೂ ಓದಿ: Road Accident: ರಾಜಕಾಲುವೆಗೆ ಬಿದ್ದ ಬೈಕ್‌ ಸವಾರನ ಮೃತದೇಹ ಪತ್ತೆ

ಕಳೆದ ವರ್ಷ ಹೈಕೋರ್ಟ್, ರಾಜಕಾಲುವೆಯನ್ನು ಅತಿಕ್ರಮಣ ಮಾಡಿರುವ ಬಗ್ಗೆ ಸಮೀಕ್ಷೆ ನಡೆಸಿ ಗುರುತಿಸಿ 10 ದಿನಗಳ ಒಳಗೆ ವರದಿ ನೀಡುವಂತೆ ಬಿಬಿಎಂಪಿಗೆ ಆದೇಶ ನೀಡಿತ್ತು. ಈ ಹಿನ್ನೆಲೆಯಲ್ಲಿ ಬಿಬಿಎಂಪಿ ಸಾರ್ವಜನಿಕರ ಸಹಕಾರ ಕೋರಿದ್ದು, ಸಾರ್ವಜನಿಕರು ಅತಿಕ್ರಮಣವಾದ ರಾಜಕಾಲುವೆ ಪ್ರದೇಶವನ್ನು ಸ್ಪಷ್ಟವಾಗಿ ಫೋಟೋ ಸಹಿತ ನಿರ್ದಿಷ್ಟ ಅಧಿಕಾರಿಗಳಿಗೆ ಕಳುಹಿಸುವಂತೆ ತಿಳಿಸಿತ್ತು. ನೂರಾರು ಫೋಟೋಗಳು ಬಂದಿದ್ದವು.

Continue Reading

ವಾಣಿಜ್ಯ

Gold Rate Today: ಚಿನ್ನದ ದರದಲ್ಲಿ ಮತ್ತೆ ಇಳಿಕೆ; ಸ್ವರ್ಣ ಪ್ರಿಯರಿಗೆ ಶುಭ ಸುದ್ದಿ

Gold Rate Today:ಇಂದು ಬೆಂಗಳೂರಿನಲ್ಲಿ 22 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆಯು ₹ 6,780 ಮತ್ತು 24 ಕ್ಯಾರಟ್‌ನ ಒಂದು ಗ್ರಾಂ ಚಿನ್ನದ ಬೆಲೆಯು ₹ 7,397 ಇದೆ. 22 ಕ್ಯಾರೆಟ್‌ನ 8 ಗ್ರಾಂ ಚಿನ್ನದ ಬೆಲೆ ₹ 54,240 ಇದೆ.

VISTARANEWS.COM


on

gold rate today
Koo

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಚಿನ್ನದ ದರ ಇಂದು ಮತ್ತೆ ಇಳಿಕೆಯಾಗಿದೆ (Gold Rate Today). ಚಿನ್ನದ ಬೆಲೆ ಇಳಿಮುಖವಾಗಿ ಗ್ರಾಹಕರು ಕೊಂಚ ನಿರಾಳವಾಗಿದ್ದಾರೆ. 22 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆಯು ₹ 35 ಮತ್ತು 24 ಕ್ಯಾರಟ್‌ನ ಒಂದು ಗ್ರಾಂ ಚಿನ್ನದ ಬೆಲೆಯು ₹ 38ಗಳಷ್ಟು ಕಡಿಮೆಯಾಗಿದೆ.

ಇಂದು ಬೆಂಗಳೂರಿನಲ್ಲಿ 22 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆಯು ₹ 6,780 ಮತ್ತು 24 ಕ್ಯಾರಟ್‌ನ ಒಂದು ಗ್ರಾಂ ಚಿನ್ನದ ಬೆಲೆಯು ₹ 7,397 ಇದೆ. 22 ಕ್ಯಾರೆಟ್‌ನ 8 ಗ್ರಾಂ ಚಿನ್ನದ ಬೆಲೆ ₹ 54,240 ಇದೆ. ಇನ್ನು 10 ಗ್ರಾಂ ಮತ್ತು 100 ಗ್ರಾಂನ 22 ಕ್ಯಾರಟ್‌ ಚಿನ್ನವನ್ನು ₹ 67,800 ಮತ್ತು ₹ 6,78,000 ದರದಲ್ಲಿ ಖರೀದಿಸಬಹುದು. 24 ಕ್ಯಾರಟ್‌ ಎಂಟು ಗ್ರಾಂ ಚಿನ್ನದ ಬೆಲೆ ₹ 59,176 ಇದೆ. 10 ಗ್ರಾಂ ಮತ್ತು 100 ಗ್ರಾಂನ 24 ಕ್ಯಾರಟ್‌ ಚಿನ್ನವನ್ನು ₹ 73,970 ಮತ್ತು ₹ 73,970 ತಲುಪಿದೆ.

ನಗರ22 ಕ್ಯಾರಟ್ (1 ಗ್ರಾಂ)24 ಕ್ಯಾರಟ್ (1 ಗ್ರಾಂ)
ದಿಲ್ಲಿ₹ 6,830₹ 7,457
ಮುಂಬೈ₹ 6,780₹ 7,397
ಬೆಂಗಳೂರು₹ 6,780₹ 7,397
ಚೆನ್ನೈ₹ 6,835₹ 7,457

ಬೆಳ್ಳಿ ಧಾರಣೆ

ಬೆಳ್ಳಿಯ ಬೆಲೆಯಲ್ಲಿತೈ ಕೊಂಚ ಇಳಿಕೆಯಾಗಿದೆ. ಬೆಳ್ಳಿ ಒಂದು ಗ್ರಾಂಗೆ ₹ 91.65 ಹಾಗೂ 8 ಗ್ರಾಂಗೆ ₹ 733.20 ಇದೆ. 10 ಗ್ರಾಂಗೆ ₹ 916.50 ಹಾಗೂ 1 ಕಿಲೋಗ್ರಾಂಗೆ ₹ 91,650 ಬೆಲೆ ಬಾಳುತ್ತದೆ.

ಚಿನ್ನ ಖರೀದಿಸುವ ಮುನ್ನ ಈ ಅಂಶಗಳನ್ನು ಗಮನಿಸಿ

ಮೇಕಿಂಗ್‌ ಚಾರ್ಜಸ್‌: ಚಿನ್ನಾಭರಣ ಬೆಲೆಯಲ್ಲಿ ಮೇಕಿಂಗ್‌ ಚಾರ್ಜಸ್‌ (Making Charges) ಪ್ರಧಾನ ಪಾತ್ರ ವಹಿಸುತ್ತದೆ. ಚಿನ್ನದ ತೂಕ ಮತ್ತು ಪರಿಶುದ್ಧತೆಯ ಜತೆಗೆ ಆಭರಣಗಳನ್ನು ತಯಾರಿಸುವ ಶುಲ್ಕವನ್ನೂ ಖರೀದಿ ಸಂದರ್ಭದಲ್ಲಿ ವಿಧಿಸಲಾಗುತ್ತದೆ. ಇದನ್ನು ಮೇಕಿಂಗ್‌ ಚಾರ್ಜಸ್‌ ಎಂದು ಕರೆಯುತ್ತಾರೆ. ಸಾಮಾನ್ಯವಾಗಿ ಚಿನ್ನದ ಬೆಲೆಯನ್ನು ಆಧರಿಸಿ ತಯಾರಿಕಾ ಶುಲ್ಕವನ್ನು ನಿರ್ಧರಿಸಲಾಗುತ್ತದೆ. ತಯಾರಿಕಾ ಶುಲ್ಕಗಳಲ್ಲಿ ಹಣವನ್ನು ಉಳಿಸಲು ಅವುಗಳನ್ನು ಹೇಗೆ ಲೆಕ್ಕ ಹಾಕಲಾಗುತ್ತದೆ ಎಂಬುದನ್ನು ಅರ್ಥಮಾಡಿಕೊಳ್ಳುವುದು ಅತ್ಯಗತ್ಯ. ಉದಾಹರಣೆಗೆ 8 ಗ್ರಾಂ ಚಿನ್ನದ ಸರದ ಬೆಲೆ 40,000 ರೂ. ಎಂದಿಟ್ಟುಕೊಳ್ಳೋಣ. ಪ್ರತಿ ಗ್ರಾಂಗೆ 300 ರೂ. ಫ್ಲಾಟ್ ದರದಲ್ಲಿ ತಯಾರಿಕಾ ಶುಲ್ಕವು 2,400 ರೂ. ಆಗಿರುತ್ತದೆ. 12%ದಂತೆ ಲೆಕ್ಕ ಹಾಕಿದರೆ ಇದು ಗರಿಷ್ಠ 4,800 ರೂ.ವರೆಗೆ ಹೆಚ್ಚಾಗುತ್ತದೆ.

ಬೆಲೆ ಲೆಕ್ಕ ಹಾಕಿ: ಚಿನ್ನದ ದರ ಅದರ ಶುದ್ಧತೆಯ ಮೇಲೆ ನಿರ್ಧಾರವಾಗುತ್ತದೆ. ಮಾರುಕಟ್ಟೆಯ ದರಕ್ಕೆ ಅನುಗುಣವಾಗಿ ಚಿನ್ನದ ಬೆಲೆ ಪ್ರತಿದಿನ ಬದಲಾಗುತ್ತಿರುತ್ತದೆ. ಜ್ಯುವೆಲ್ಲರಿಗಳು ದಿನಂಪ್ರತಿ ಆಯಾ ದಿನದ ಬೆಲೆ ಪ್ರದರ್ಶಿಸುತ್ತವೆ. ಇದನ್ನು ಗಮನಿಸಿ. ಆಭರಣದ ವಿನ್ಯಾಸವೂ ಬೆಲೆಯ ಮೇಲೆ ಪರಿಣಾಮ ಬೀರುವ ಪ್ರಮುಖ ಅಂಶ. ಹೀಗಾಗಿ ಖರೀದಿಗೆ ತೆರಳುವ ಮುನ್ನ ಈ ಎಲ್ಲ ಅಂಶಗಳತ್ತ ಗಮನ ಹರಿಸುವುದು ಮುಖ್ಯ.

ಬೆಲೆಗಳನ್ನು ಹೋಲಿಸಿ: ಮೊದಲೇ ಹೇಳಿದಂತೆ ಆಭರಣದ ಬೆಲೆಯಲ್ಲಿ ತಯಾರಿಕಾ ವೆಚ್ಚವೂ ಸೇರಿರುತ್ತದೆ. ಸಾಮಾನ್ಯವಾಗಿ ಯಂತ್ರದಿಂದ ತಯಾರಿಸಿದ ಆಭರಣಗಳು ಅಥವಾ ಕಡಿಮೆ ವಿನ್ಯಾಸವನ್ನು ಹೊಂದಿರುವ ಆಭರಣಗಳಿಗೆ ಕಡಿಮೆ ಮೇಕಿಂಗ್ ಚಾರ್ಜ್ ಇರುತ್ತದೆ. ಪ್ರಸ್ತುತ ಭಾರತದಲ್ಲಿ ಮೇಕಿಂಗ್ ಚಾರ್ಜಸ್ ಶೇ. 6ರಿಂದ ಶೇ. 20ರ ವರೆಗೆ ಇದೆ. ಆದ್ದರಿಂದ ವಿವಿಧ ಹಂತಗಳಲ್ಲಿನ ಶುಲ್ಕಗಳನ್ನು ಹೋಲಿಸಿ.

ಇದನ್ನೂ ಓದಿ:Union Budget 2024: ಬಜೆಟ್‌ಗೂ ಮೊದಲು, ನಂತರ ಹೂಡಿಕೆ ಮಾಡುವುದು ಲಾಭವೇ? ತಜ್ಞರು ಹೇಳೋದಿಷ್ಟು

Continue Reading
Advertisement
Ravindra Jadeja
ಕ್ರಿಕೆಟ್14 mins ago

Ravindra Jadeja: ಟೀಮ್​ ಇಂಡಿಯಾ ಪರ ಜಡೇಜಾ ಇನ್ನು ಏಕದಿನ ಆಡುವುದು ಅನುಮಾನ; ಕಾರಣವೇನು?

Bangladesh protests
ವಿದೇಶ15 mins ago

Bangladesh Protests: ಬಾಂಗ್ಲಾದಲ್ಲಿ ನಿಲ್ಲದ ಹಿಂಸಾಚಾರ; 1000 ವಿದ್ಯಾರ್ಥಿಗಳು ಭಾರತಕ್ಕೆ ವಾಪಸ್‌; ಸಾವಿನ ಸಂಖ್ಯೆ 115ಕ್ಕೆ ಏರಿಕೆ

Star suvarna Ravi Shankar entered television suvarna grahamanthri
ಕಿರುತೆರೆ26 mins ago

Star Suvarna: `ಸುವರ್ಣ ಗೃಹಮಂತ್ರಿ’ಯ ಸಾರಥಿಯಾಗಿ ಕಿರುತೆರೆಗೆ ಎಂಟ್ರಿ ಕೊಟ್ಟ ನಟ ರವಿಶಂಕರ್

Paris Olympics 2024
ಕ್ರೀಡೆ33 mins ago

Paris Olympics 2024 : ಒಲಿಂಪಿಕ್ಸ್​ಗೆ ತೆರಳಿರುವ ಭಾರತದ ಹಿರಿಯ ಮತ್ತು ಕಿರಿಯ ಸ್ಪರ್ಧಿಗಳು ಯಾರು ಗೊತ್ತೇ? ಇಲ್ಲಿದೆ ಅವರ ವಿವರ

Union Budget 2024
ದೇಶ47 mins ago

Union Budget 2024: ಸ್ಟಾಂಡರ್ಡ್‌ ಡಿಡಕ್ಷನ್‌, 80 ಸಿ ಮೊತ್ತ ಹೆಚ್ಚಳ; ಬಜೆಟ್‌ನಲ್ಲಿ ಏನೆಲ್ಲ ತರಿಗೆ ರಿಲೀಫ್?

Kanguva Movie Suriya to have 3 different looks in Siva
ಕಾಲಿವುಡ್54 mins ago

Kanguva Movie: ʻಕಂಗುವʼ ಚಿತ್ರದಲ್ಲಿ ಮೂರು ಅವತಾರಗಳಲ್ಲಿ ಮಿಂಚಲಿದ್ದಾರಂತೆ ಸೂರ್ಯ

Building Collapsed
ದೇಶ59 mins ago

Building Collapsed: ಭಾರೀ ಮಳೆಗೆ ನಾಲ್ಕು ಅಂತಸ್ತಿಗೆ ಕಟ್ಟಡ ಧರಾಶಾಹಿ; ಮಹಿಳೆ ಬಲಿ

Opposition Party leader R Ashok pressmeet about Valmiki Development Corporation scam
ಕರ್ನಾಟಕ1 hour ago

R Ashok: ವಾಲ್ಮೀಕಿ ಹಗರಣ; ಮುಖ್ಯಮಂತ್ರಿ ಏನು ಕತ್ತೆ ಕಾಯುತ್ತಿದ್ದರೇ ಎಂದ ಆರ್‌. ಅಶೋಕ್‌

King Cobra Rescue
ವೈರಲ್ ನ್ಯೂಸ್1 hour ago

King Cobra Rescue: 12 ಅಡಿ ಉದ್ದದ ದೈತ್ಯ ಕಾಳಿಂಗ ಸರ್ಪವನ್ನು ಹಿಡಿದದ್ದು ಹೇಗೆ? ವಿಡಿಯೊ ನೋಡಿ

ಕ್ರೀಡೆ1 hour ago

Mohammed Shami: ಪಾಕ್​ ಮಾಜಿ ನಾಯಕ ಇಂಜಮಾಮ್ ಬೆಂಡೆತ್ತಿದ ಮೊಹಮ್ಮದ್​ ಶಮಿ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Rain
ಮಳೆ3 hours ago

Karnataka Rain : ಭಾರಿ ಮಳೆಗೆ ಮನೆ ಗೋಡೆ ಕುಸಿತ; ಕೊಟ್ಟಿಗೆಯಲ್ಲಿದ್ದ ಜಾನುವಾರುಗಳು ಸಾವು

karnataka Rain
ಮಳೆ4 hours ago

Karnataka Rain : ಹಳ್ಳ ದಾಟಲು ಹೋಗಿ ನೀರುಪಾಲಾದ ಜಾನುವಾರು; ಬಿರುಗಾಳಿಗೆ ಕಳಚಿದ ವಿಂಡ್‌ ಫ್ಯಾನ್‌

karnataka Rain
ಮಳೆ1 day ago

Karnataka Rain : ಬೀದಿಗೆ ತಂದ ರಣಮಳೆ; ಮನೆ ಕುಸಿದು ಬಿದ್ದು 9 ತಿಂಗಳ ಗರ್ಭಿಣಿ ನರಳಾಟ

Karnataka Rain
ಮಳೆ1 day ago

Karnataka Rain : ರಾಜ್ಯದಲ್ಲಿ ಮಳೆಯ ಆರ್ಭಟ; ರಾತ್ರಿ ಕಳೆದು ಬೆಳಗಾಗುವುದರೊಳಗೆ ಕಂದಕ ನಿರ್ಮಾಣ

Karnataka Rain
ಮಳೆ2 days ago

Karnataka Rain : ಭಾರಿ ಮಳೆ ಎಫೆಕ್ಟ್‌; ಉಕ್ಕಿ ಹರಿಯುತ್ತಿದ್ದ ನದಿಯಲ್ಲಿ ಕೊಚ್ಚಿ ಹೋದ ರಾಸು

Uttara Kannada Landslide
ಮಳೆ2 days ago

Uttara Kannada Landslide: ಶಿರೂರು ಗುಡ್ಡ ಕುಸಿತ; ಅಖಾಡಕ್ಕಿಳಿದ ಜಿಯೊಲಾಜಿಕಲ್ ಸರ್ವೆ ಆಫ್ ಇಂಡಿಯಾ ಟೀಂ

Karnataka Rain
ಮಳೆ4 days ago

Karnataka Rain : ಕಾರವಾರದಲ್ಲಿ ಮಳೆ ಅವಾಂತರ; ಮನೆ ಮೇಲೆ ಗುಡ್ಡ ಕುಸಿದು ವೃದ್ಧ ಸಾವು

karnataka Rain
ಮಳೆ4 days ago

Karnataka Rain : ಭಾರಿ ಮಳೆಗೆ ನಿಯಂತ್ರಣ ತಪ್ಪಿ ಕೆರೆಗೆ ಉರುಳಿ ಬಿದ್ದ ಕಾರು; ನಾಲ್ವರು ಪ್ರಾಣಾಪಾಯದಿಂದ ಪಾರು

karnataka Weather Forecast
ಮಳೆ5 days ago

Karnataka Weather : ವ್ಯಾಪಕ ಮಳೆ ಎಚ್ಚರಿಕೆ; ನಾಳೆಯೂ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

karnataka Rain
ಮಳೆ5 days ago

Karnataka Rain : ಶಾಲಾ-ಕಾಲೇಜಿಗೆ ಈ ದಿನ ರಜಾ; ಅಬ್ಬರಿಸುತ್ತಿರುವ ಮಳೆಗೆ ಮನೆಯಲ್ಲೇ ಎಲ್ಲರೂ ಸಜಾ!

ಟ್ರೆಂಡಿಂಗ್‌