Kanguva Movie: ʻಕಂಗುವʼ ಚಿತ್ರದಲ್ಲಿ ಮೂರು ಅವತಾರಗಳಲ್ಲಿ ಮಿಂಚಲಿದ್ದಾರಂತೆ ಸೂರ್ಯ - Vistara News

ಕಾಲಿವುಡ್

Kanguva Movie: ʻಕಂಗುವʼ ಚಿತ್ರದಲ್ಲಿ ಮೂರು ಅವತಾರಗಳಲ್ಲಿ ಮಿಂಚಲಿದ್ದಾರಂತೆ ಸೂರ್ಯ

Kanguva Movie: ಶಿವ-ನಿರ್ದೇಶನದ ಈ ಸಿನಿಮಾ ಅಕ್ಟೋಬರ್ 10 ರಂದು ಥಿಯೇಟರ್‌ಗಳಲ್ಲಿ ಬಿಡುಗಡೆಯಾಗಲಿದೆ. ಕಂಗುವಾದಲ್ಲಿ ಬಾಲಿವುಡ್ ನಟಿ ದಿಶಾ ಪಟಾನಿ ನಟಿಸಿದ್ದಾರೆ. ಈ ಸಿನಿಮಾ 38 ಜಾಗತಿಕ ಭಾಷೆಗಳಲ್ಲಿ 3D ನಲ್ಲಿ ಬಿಡುಗಡೆಯಾಗಲಿದೆ.

VISTARANEWS.COM


on

Kanguva Movie Suriya to have 3 different looks in Siva
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಈಗಾಗಲೇ ಸೂರ್ಯ ಅಭಿನಯದ ಕಂಗುವ ಸಿನಿಮಾ (Kanguva vs Alia Bhatt) ರಿಲೀಸ್‌ ಡೇಟ್‌ ಅನೌನ್ಸ್‌ ಆಗಿದೆ. “ಕಂಗುವ” ಪ್ರೇಕ್ಷಕರಿಗೆ ಹೆಚ್ಚು ನಿರೀಕ್ಷಿತ ಚಿತ್ರವಾಗಿದೆ. ಶಿವ ನಿರ್ದೇಶನದ ಈ ಚಿತ್ರದಲ್ಲಿ ಸೂಪರ್‌ಸ್ಟಾರ್ ಸೂರ್ಯ ಸಂಪೂರ್ಣವಾಗಿ (Kanguva Movie) ಹೊಸ ಅವತಾರದಲ್ಲಿ ನಟಿಸಿದ್ದಾರೆ. ಮೂರು ಅವತಾರದಲ್ಲಿ ಸೂರು ಮಿಂಚುತ್ತಿದ್ದಾರೆ. ಈಗಾಗಲೇ ಚಿತ್ರತಂಡ ಸೂರ್ಯ ಅವರ ಪ್ರತಿಯೊಂದು ಪಾತ್ರವು ಹಿಂದೆಂದೂ ನೋಡಿರದ ವಿಭಿನ್ನ ಲುಕ್‌ ಇರಲಿದೆ ಎಂದಿದ್ದಾರೆ.

ಶಿವ-ನಿರ್ದೇಶನದ ಈ ಸಿನಿಮಾ ಅಕ್ಟೋಬರ್ 10 ರಂದು ಥಿಯೇಟರ್‌ಗಳಲ್ಲಿ ಬಿಡುಗಡೆಯಾಗಲಿದೆ. ಕಂಗುವಾದಲ್ಲಿ ಬಾಲಿವುಡ್ ನಟಿ ದಿಶಾ ಪಟಾನಿ ನಟಿಸಿದ್ದಾರೆ. ಈ ಸಿನಿಮಾ 38 ಜಾಗತಿಕ ಭಾಷೆಗಳಲ್ಲಿ 3D ನಲ್ಲಿ ಬಿಡುಗಡೆಯಾಗಲಿದೆ.

ಮೂಲಗಳ ಪ್ರಕಾರ ಅಮೆಜಾನ್‌ ಪ್ರೈಂ ಸಂಸ್ಥೆ ಬರೋಬ್ಬರಿ 80 ಕೋಟಿ ರೂ. ಖರೀದಿ ಮಾಡಿದೆಯಂತೆ. ಇದು ಎಲ್ಲ ಭಾಷೆಯ ಹಕ್ಕುಗಳನ್ನೂ ಒಳಗೊಂಡಿದೆ ಎನ್ನಲಾಗುತ್ತಿದೆ. ಮೂಲಗಳ ಪ್ರಕಾರ ಈ ಸಿನಿಮಾದಲ್ಲಿ ನಟ ಐದು ಅವತಾರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ವೆಂಕಟೇರ್, ಅರತಾರ್, ಮಂದಾಂಕರ್, ಮುಕಾತಾರ್ ಮತ್ತು ಪೆರುಮಾನಾಥರ್ ಎಂಬ ಐದು ಪಾತ್ರಗಳನ್ನು ನಿರ್ವಹಿಸಲಿದ್ದಾರೆ. ದಿಶಾ ಪಟಾನಿ ಈ ಚಿತ್ರದ ಮೂಲಕ ತಮಿಳಿಗೆ ಪದಾರ್ಪಣೆ ಮಾಡುತ್ತಿದ್ದಾರೆ. ಇದರಲ್ಲಿ ಕೋವೈ ಸರಳಾ, ಯೋಗಿ ಬಾಬು, ಆನಂದ್ ರಾಜ್, ರೆಡಿನ್ ಕಿಂಗ್ಸ್ಲಿ, ರವಿ ರಾಘವೇಂದ್ರ ಮತ್ತು ಇತರರು ಪೋಷಕ ಪಾತ್ರಗಳಲ್ಲಿ ನಟಿಸಿದ್ದಾರೆ.

ಕಂಗುವ ಈ ವರ್ಷದ ಅತಿ ದೊಡ್ಡ ಮತ್ತು ದುಬಾರಿ ಚಿತ್ರ. ಅಂದಾಜು 350 ಕೋಟಿ ಬಜೆಟ್‌ನೊಂದಿಗೆ, ಇದು ಪುಷ್ಪ, ಸಿಂಗಂ ಮತ್ತು ಇತರ ಹಲವಾರು ದೊಡ್ಡ ಚಿತ್ರಗಳಿಗಿಂತ ದೊಡ್ಡ ಬಜೆಟ್‌ ಸಿನಿಮಾ ಅದಾಗಿದೆ. ಇದಲ್ಲದೆ, ಚಿತ್ರವನ್ನು ಏಳು ವಿವಿಧ ದೇಶಗಳಲ್ಲಿ ಚಿತ್ರೀಕರಿಸಲಾಗಿದೆ. 10,000 ಕ್ಕೂ ಹೆಚ್ಚು ಜನರನ್ನು ಒಳಗೊಂಡಿರುವ ಅತ್ಯಂತ ದೊಡ್ಡ ಬಜೆಟ್‌ ಸಿನಿಮಾ.

ಇದನ್ನೂ ಓದಿ: Actor Darshan: ರೇಣುಕಾ ಸ್ವಾಮಿ ಹಲ್ಲೆ ದೃಶ್ಯ ಐಫೋನ್‌ನಲ್ಲಿ ರೆಕಾರ್ಡ್‌; ಸಿನಿಮಾ ಶೈಲಿಯಲ್ಲಿ ನಡೆದಿತ್ತು ಕೃತ್ಯ!

ವೆಟ್ರಿ ಪಳನಿಸಾಮಿ ಅವರ ಅದ್ಭುತ ಛಾಯಾಗ್ರಹಣ ಮತ್ತು ಗಾಯಕ ರಾಕ್‌ಸ್ಟಾರ್ ದೇವಿ ಶ್ರೀ ಪ್ರಸಾದ್ ಅವರ ಸಂಗೀತ ಸಂಯೋಜನೆಯಲ್ಲಿ ಈ ಚಿತ್ರವು ಹೆಚ್ಚು ಪ್ರದರ್ಶನವನ್ನು ಕಾಣುವ ನಿರೀಕ್ಷೆಯಿದೆ.

ಸ್ಟುಡಿಯೋ ಗ್ರೀನ್‌ ಬೆಂಬಲದಿಂದ ನಿರ್ದೇಶಕ ಶಿವ ಅವರ ವಿಶಿಷ್ಟ ಕಲ್ಪನೆಗೆ ಜೀವ ತುಂಬಿದೆ. ಹಾಲಿವುಡ್ ಶೈಲಿಯಲ್ಲಿ ಮೂಡಿ ಬಂದಿರುವ ಚಿತ್ರ ಸಿನಿರಸಿಕರ ಮನ ಗೆಲ್ಲುವುದರಲ್ಲಿ ಸಂದೇಹವಿಲ್ಲ.

ದಕ್ಷಿಣ ಭಾರತದ ಚಲನಚಿತ್ರೋದ್ಯಮದಲ್ಲಿ ಪ್ರಮುಖರಾಗಿರುವ ಸ್ಟುಡಿಯೋ ಗ್ರೀನ್ ಮಾಲಕ ಕೆ.ಇ. ಜ್ಞಾನವೇಲ್ ರಾಜಾ ಅವರು ಕಳೆದ 16 ವರ್ಷಗಳಲ್ಲಿ ಸತತವಾಗಿ “ಸಿಂಗಂ” ಸರಣಿ, “ಪರುತಿ ವೀರನ್,” “ಸಿರುತೈ,” “ಕೊಂಬನ್,” “ನಾನ್ ಮಹನ್ ಅಲ್ಲಾ,” “ಮದ್ರಾಸ್,” “ಟೆಡ್ಡಿ,” ಮತ್ತು ತೀರಾ ಇತ್ತೀಚೆಗೆ ಬ್ಲಾಕ್ಬಸ್ಟರ್ ಹಿಟ್ ಗಳನ್ನು ನೀಡಿದ್ದಾರೆ.

“ಪಾತು ತಾಲಾ.” ಅವರು “ಬಾಹುಬಲಿ: ದಿ ಬಿಗಿನಿಂಗ್” ನಂತಹ ಪ್ರಮುಖ ಬ್ಲಾಕ್‌ಬಸ್ಟರ್‌ಗಳನ್ನು ವಿತರಿಸಿದ ಕಾರಣ ಅವರಿಂದಲೇ ಚಿತ್ರ ಬಿಡುಗಡೆ ಮಾಡಿಸಬೇಕು ಎಂದು ಹಲವಾರು ಮಂದಿ ನಿರ್ದೇಶಕರು ಕಾಯುವಂತಾಗಿದೆ.
ಸ್ಟುಡಿಯೋ ಗ್ರೀನ್ ಕಂಗುವಕ್ಕಾಗಿ ವಿಶ್ವದಾದ್ಯಂತ ಇರುವ ಪ್ರಮುಖ ವಿತರಕರೊಂದಿಗೆ ಕೈಜೋಡಿಸಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಕಾಲಿವುಡ್

Vijay Sethupathi: ವಿಜಯ್​ ಸೇತುಪತಿ ನಟನೆಯ’ʻವಿಡುತಲೈ 2ʼ ಫಸ್ಟ್‌ ಲುಕ್‌ ಔಟ್‌!

vijay sethupathi: ಆರ್‌ಎಸ್ ಇನ್‌ಫರ್‌ಟೈನ್‌ಮೆಂಟ್ ಪ್ರೈ. ಲಿಮಿಟೆಡ್ ಬ್ಯಾನರ್‌ದಲ್ಲಿ ಸಿದ್ದಗೊಳ್ಳುತ್ತಿರುವ ಸಿನಿಮಾದ ಫಸ್ಟ್ ಲುಕ್ ಯಾವ ರೀತಿ ಇರಬಹುದೆಂಬ ಕುತೂಹಲ ಎಲ್ಲರಿಗೂ ಕಾಡುತ್ತಿದೆ. ಮಿಕ್ಕಂತೆ ವಿವರಗಳನ್ನು ಮುಂದಿನ ದಿನಗಳಲ್ಲಿ ತಿಳಿಸುವುದಾಗಿ ತಂಡವು ಹೇಳಿಕೊಂಡಿದೆ.

VISTARANEWS.COM


on

Vijay Sethupathi 'Viduthalai 2' first look out now
Koo

ಬೆಂಗಳೂರು: ಕಳೆದ ವರ್ಷ ಬಿಡುಗಡೆಗೊಂಡಿದ್ದ ’ʻವಿಡುತಲೈʼ ’ ಚಿತ್ರವು ಯಶಸ್ಸು ಕಂಡು ಕಲಾವಿದರು ಸೇರಿದಂತೆ ತಂತ್ರಜ್ಞರುಗಳಿಗೆ ಅವಕಾಶಗಳು ಒಲಿದು ಬಂದವು. ಇದರಿಂದ ಸ್ಪೂರ್ತಿಗೊಂಡ ನಿರ್ದೇಶಕ ವೆಟ್ರಿ ಮಾರನ್ ಮತ್ತು ನಿರ್ಮಾಪಕ ಎಲ್ರಡ್ ಕುಮಾರ್ ಭಾಗ-2 ಬರುವುದಾಗಿ (Vijay Sethupathi) ಘೋಷಣೆ ಮಾಡಿದ್ದರು. ಬಹುತೇಕ ಹಿಂದಿನ ಚಿತ್ರದಲ್ಲಿ ಕೆಲಸ ಮಾಡಿದವರು ಇದರಲ್ಲೂ ಮುಂದುವರೆದಿದ್ದಾರೆ. ಪ್ರಚಾರದ ಮೊದಲ ಹಂತವಾಗಿ ಸಿನಿಮಾದ ಫಸ್ಟ್ ಲುಕ್‌ನ ಎರಡು ಪೋಸ್ಟರ್‌ನ್ನು ಅನಾವರಣಗೊಳಿಸಲಿದ್ದಾರೆ. ಎರಡು ಲುಕ್‌ಗಳಲ್ಲಿ ವಿಜಯ್ ಸೇತುಪತಿ ಕಾಣಿಸಿಕೊಂಡಿದ್ದಾರೆ.

ತಾರಾಗಣದಲ್ಲಿ ವಿಜಯ್ ಸೇತುಪತಿ, ಸೂರಿ, ಮಂಜುವಾರಿಯರ್, ಅನುರಾಗ್ ಕಶ್ಯಪ್, ಕಿಶೋರ್, ಗೌತಂ ವಾಸುದೇವ್‌ಮೆನನ್, ರಾಜೀವ್ ಮೆನನ್, ಚೇತನ್ ಮುಂತಾದವರು ನಟಿಸಿದ್ದಾರೆ. ಸಂಗೀತ ಇಳಯರಾಜ, ಛಾಯಾಗ್ರಹಣ ಆರ್.ವೆಲ್ವರಾಜ್, ಕಲೆ ಜಾಕಿ, ಸಂಕಲನ ರಮರ್, ವಸ್ರ್ತಾಂಲಕಾರ ಉತ್ತರ ಮೆನನ್, ಸಾಹಸ ಪೀಟರ್ ಹೈನ್-ಸ್ವಂಟ್ ಶಿವ, ವಿಎಫ್‌ಎಕ್ಸ್ ಆರ್.ಹರಿಹರಸುಧನ್ ಅವರದಾಗಿದೆ.

ಆರ್‌ಎಸ್ ಇನ್‌ಫರ್‌ಟೈನ್‌ಮೆಂಟ್ ಪ್ರೈ. ಲಿಮಿಟೆಡ್ ಬ್ಯಾನರ್‌ದಲ್ಲಿ ಸಿದ್ದಗೊಳ್ಳುತ್ತಿರುವ ಸಿನಿಮಾದ ಫಸ್ಟ್ ಲುಕ್ ಯಾವ ರೀತಿ ಇರಬಹುದೆಂಬ ಕುತೂಹಲ ಎಲ್ಲರಿಗೂ ಕಾಡುತ್ತಿದೆ. ಮಿಕ್ಕಂತೆ ವಿವರಗಳನ್ನು ಮುಂದಿನ ದಿನಗಳಲ್ಲಿ ತಿಳಿಸುವುದಾಗಿ ತಂಡವು ಹೇಳಿಕೊಂಡಿದೆ.

ಇದನ್ನೂ ಓದಿ: Actor  Karthi: ನಟ ಕಾರ್ತಿ ಸಿನಿಮಾ ಸೆಟ್‌ನಲ್ಲಿ ಅವಘಡ; 20 ಅಡಿಯಿಂದ ಬಿದ್ದು ಸ್ಟಂಟ್‌ ಮ್ಯಾನ್‌ ಸಾವು

ಈ ಚಿತ್ರಕ್ಕೆ ಎಲ್‌ರೆಡ್‌ ಕುಮಾರ್‌ ಬಂಡವಾಳ ಹೂಡಿದ್ದಾರೆ. ಜಿಯಾ ಮೆನನ್‌ ಬರೆದ ʻತುನೈವನ್‌ʼ ಸಣ್ಣ ಕಥೆ ಆಧರಿಸಿ ಸಿನಿಮಾ ಕಟ್ಟಿಕೊಡಲಾಗಿದೆ.

ದೊಡ್ಡ ಬಜೆಟ್‌ ಸಿನಿಮಾ ʻವಿಡುತಲೈʼ!
ಎರಡು ಭಾಗಗಳಲ್ಲಿ ಬಿಡುಗಡೆಯಾಗುವ ಈ ಚಿತ್ರ ದೊಡ್ಡ ಬಜೆಟ್​ನಲ್ಲಿ ನಿರ್ಮಾಣವಾಗಿದೆ. ತಮಿಳಿನ ದುಬಾರಿ ಚಿತ್ರಗಳ ಪೈಕಿಗೆ ‘ವಿಡುತಲೈ’ ಸೇರ್ಪಡೆಯಾಗಲಿದೆ. ಈ ಚಿತ್ರವನ್ನು ಕೋಟ್ಯಂತರ ವೆಚ್ಚದಲ್ಲಿ ಅದ್ಧೂರಿಯಾಗಿ ನಿರ್ಮಿಸಲಾಗಿದ್ದು, ಚಿತ್ರಕ್ಕಾಗಿ ವಿಶೇಷವಾಗಿ 10 ಕೋಟಿ ರೂ. ವೆಚ್ಚದ ರೈಲು ಮತ್ತು ರೈಲ್ವೇ ಸೇತುವೆಯ ಸೆಟ್​ ನಿರ್ಮಾಣ ಮಾಡಲಾಗಿತ್ತು. ನಿಜವಾದ ರೈಲ್ವೆ ಬೋಗಿಗಳು ಮತ್ತು ಸೇತುವೆಯನ್ನು ನಿರ್ಮಿಸುವುದಕ್ಕೆ ಬಳಸಲಾಗುವ ಪರಿಕರಗಳನ್ನೇ ಈ ಸೆಟ್​ ನಿರ್ಮಾಣಕ್ಕೂ ಬಳಸಲಾಗಿದೆ ಎನ್ನಲಾಗಿತ್ತು.

ಸಾವಿರಕ್ಕೂ ಹೆಚ್ಚು ಚಿತ್ರಗಳಿಗೆ ಸಂಗೀತ ಸಂಯೋಜಿಸಿರುವ ಇಳಯರಾಜ ಅವರು ಈ ಚಿತ್ರದ ಸಂಗೀತದ ಜವಾಬ್ದಾರಿ ಹೊತ್ತಿದ್ದಾರೆ. ವೇಲ್​ರಾಜ್​ ಛಾಯಾಗ್ರಹಣ ಮಾಡುತ್ತಿದ್ದಾರೆ. ಈ ಚಿತ್ರದ ವಿತರಣೆಯ ಜವಾಬ್ದಾರಿಯನ್ನು ರೆಡ್​ ಜೈಂಟ್​ ಮೂವೀಸ್​ ವಹಿಸಿಕೊಂಡಿದೆ.

Continue Reading

ಕಾಲಿವುಡ್

Actor  Karthi: ನಟ ಕಾರ್ತಿ ಸಿನಿಮಾ ಸೆಟ್‌ನಲ್ಲಿ ಅವಘಡ; 20 ಅಡಿಯಿಂದ ಬಿದ್ದು ಸ್ಟಂಟ್‌ ಮ್ಯಾನ್‌ ಸಾವು

Actor  Karthi: ಚೆನ್ನೈನ ಸಾಲಿಗ್ರಾಮದಲ್ಲಿರುವ ಎಲ್ ವಿ ಪ್ರಸಾದ್ ಸ್ಟುಡಿಯೋದಲ್ಲಿ ಚಿತ್ರದ ಶೂಟಿಂಗ್ ನಡೆಯುತ್ತಿತ್ತು. ಅಪಘಾತದ ಬಗ್ಗೆ ವಿರುಗಂಬಕ್ಕಂ ಪೊಲೀಸ್ ಅಧಿಕಾರಿಗಳಿಗೆ ಮಾಹಿತಿ ನೀಡಲಾಗಿದ್ದು, ತನಿಖೆ ನಡೆಯುತ್ತಿದೆ. ಎಲುಮಲೈ ಅವರಿಗೆ 54 ವರ್ಷ ವಯಸ್ಸಾಗಿತ್ತು.

VISTARANEWS.COM


on

Actor  Karthi Stuntman falls 20 ft to his death
Koo

ಬೆಂಗಳೂರು: ಪಿಎಸ್ ಮಿತ್ರನ್ ಅವರ ಕಾರ್ತಿ ಅಭಿನಯದ ಸರ್ದಾರ್ 2ರ ( Sardar 2) ಸೆಟ್‌ನಲ್ಲಿ ಸ್ಟಂಟ್‌ಮ್ಯಾನ್ ಮೃತಪಟ್ಟಿದ್ದಾರೆ. ಚಿತ್ರೀಕರಣದಲ್ಲಿ ಅವಘಡ ಸಂಭವಿಸಿ ಈ ದುರ್ಘಟನೆ ಸಂಭವಿಸಿದೆ ಎಂದು ವರದಿಯಾಗಿದೆ. ಎಲುಮಲೈ (Elumalai ) ಎಂಬ ಸ್ಟಂಟ್‌ಮ್ಯಾನ್ ಆಕ್ಷನ್ ಸೀಕ್ವೆನ್ಸ್ ಚಿತ್ರೀಕರಣ ಮಾಡುವಾಗ ರೋಸ್ಟ್ರಮ್‌ನಿಂದ 20 ಅಡಿ ಕೆಳಗೆ ಬಿದ್ದಿದ್ದಾರೆ. ಕೂಡಲೇ ಆಸ್ಪತ್ರೆಗೆ ಸಾಗಿಸಿದರೂ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.

ಚೆನ್ನೈನ ಸಾಲಿಗ್ರಾಮದಲ್ಲಿರುವ ಎಲ್ ವಿ ಪ್ರಸಾದ್ ಸ್ಟುಡಿಯೋದಲ್ಲಿ ಚಿತ್ರದ ಶೂಟಿಂಗ್ ನಡೆಯುತ್ತಿತ್ತು. ಅಪಘಾತದ ಬಗ್ಗೆ ವಿರುಗಂಬಕ್ಕಂ ಪೊಲೀಸ್ ಅಧಿಕಾರಿಗಳಿಗೆ ಮಾಹಿತಿ ನೀಡಲಾಗಿದ್ದು, ತನಿಖೆ ನಡೆಯುತ್ತಿದೆ. ಎಲುಮಲೈ ಅವರಿಗೆ 54 ವರ್ಷ ವಯಸ್ಸಾಗಿತ್ತು. ಅವರು ಬಿದ್ದ ನಂತರ ಗಂಭೀರ ಗಾಯಗೊಂಡರು. ರಾತ್ರಿ 11:30ಕ್ಕೆ ರಕ್ತಸ್ರಾವದಿಂದ ಅವರು ನಿಧನರಾದರು. ಇದೀಗ ಸರ್ದಾರ್ 2 ಚಿತ್ರೀಕರಣ ಸ್ಥಗಿತಗೊಂಡಿದೆ.

ಸರ್ದಾರ್ 2ರ ಪ್ರೊಡಕ್ಷನ್ ಹೌಸ್ ಪ್ರಿನ್ಸ್ ಪಿಕ್ಚರ್ಸ್ ಈ ಸುದ್ದಿಯನ್ನು ಖಚಿತಪಡಿಸಿದೆ, “ನಮ್ಮ ಸರ್ದಾರ್ 2 ಚಿತ್ರದ ಸೆಟ್‌ಗಳಲ್ಲಿ ಸ್ಟಂಟ್ ರಿಗ್ ಮ್ಯಾನ್ ಆಗಿ ಕೆಲಸ ಮಾಡಿದ ಸ್ಟಂಟ್ ಯೂನಿಯನ್ ಸದಸ್ಯ ಎಲುಮಲೈ ಅವರ ಸಾವಿನ ಬಗ್ಗೆ ತಿಳಿಸಲು ವಿಷಾದಿಸುತ್ತೇವೆ. ಜುಲೈ 16 ರ ಮಂಗಳವಾರ ಸಂಜೆ, ಸ್ಟಂಟ್ ಸೀಕ್ವೆನ್ಸ್ ಚಿತ್ರೀಕರಣದ ನಂತರ, ಎಲುಮಲೈ ಅವರು 20 ಅಡಿ ಎತ್ತರದ ರೋಸ್ಟ್ರಮ್ನಿಂದ ಆಕಸ್ಮಿಕವಾಗಿ ಬಿದ್ದು ಗಾಯಗೊಂಡರು. ನರಬಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಗೆ ಕೂಡಲೇ ಸಾಗಿಸಿದರೂ ಚಿಕಿತ್ಸೆ ಫಲಕಾರಿಯಾಗಿಲ್ಲ. ರಾತ್ರಿ 11.30 ರ ಸುಮಾರಿಗೆ ನಿಧನರಾದರು. ನಮ್ಮ ಇಡೀ ತಂಡವು ಎಲುಮಲೈ ಅವರ ಕುಟುಂಬಕ್ಕೆ ಸಂತಾಪವನ್ನು ಸೂಚಿಸುತ್ತದೆ ಎಂದುʼʼಬರೆದುಕೊಂಡಿದೆ. ಕಾರ್ತಿ ಈ ಬಗ್ಗೆ ಯಾವುದೇ ಹೇಳಿಕೆ ನೀಡಿಲ್ಲ.

ಇದನ್ನೂ ಓದಿ: Kannada New Movie: ರಾಜವರ್ಧನ್ ‘ಹಿರಣ್ಯ’ ಸಿನಿಮಾದಲ್ಲಿ ಮೈ ಚಳಿ ಬಿಟ್ಟು ಡ್ಯಾನ್ಸ್‌ ಮಾಡಿದ ದಿವ್ಯಾ ಸುರೇಶ್!

ಜುಲೈ 12 ರಂದು ಮಿತ್ರನ್ ಮತ್ತು ಕಾರ್ತಿ ಈ ಸಿನಿಮಾ ಮುಹೂರ್ತ ನೆರವೇರಿಸಿದ್ದರು. ಕಾರ್ಯಕ್ರಮದಲ್ಲಿ ಕಾರ್ತಿ ಅವರ ತಂದೆ ನಟ ಶಿವಕುಮಾರ್ ಕೂಡ ಭಾಗವಹಿಸಿದ್ದರು. ಚಿತ್ರದ ಶೂಟಿಂಗ್ ಜುಲೈ 15 ರಂದು ಚೆನ್ನೈನಲ್ಲಿ ಪ್ರಾರಂಭವಾಯಿತು. ಈ ಚಿತ್ರವು ಮಿತ್ರನ್ ಮತ್ತು ಕಾರ್ತಿ ಅವರ 2022 ರ ಚಲನಚಿತ್ರ ಸರ್ದಾರ್‌ನ ಮುಂದುವರಿದ ಭಾಗವಾಗಿದೆ. ನಟನನ್ನು ದ್ವಿಪಾತ್ರಗಳಲ್ಲಿ ಕಂಡ ಸ್ಪೈ ಥ್ರಿಲ್ಲರ್ ಆಗಿದೆ.

Continue Reading

ಕಾಲಿವುಡ್

Kamal Haasan: ಇಂದೇ ಒಟಿಟಿಯಲ್ಲಿ ಸ್ಟ್ರೀಮಿಂಗ್‌ ಆಗುತ್ತಿದೆ ಕಮಲ್ ಹಾಸನ್ ನಟನೆಯ ʻಇಂಡಿಯನ್’ ಸಿನಿಮಾ?

Kamal Haasan: ಇಂಡಿಯನ್ 2ನ ಡಿಜಿಟಲ್ ಸ್ಟ್ರೀಮಿಂಗ್ ಹಕ್ಕುಗಳನ್ನು ನೆಟ್‌ಫ್ಲಿಕ್ಸ್ ಪಡೆದುಕೊಂಡಿದೆ. ಇದೀಗ ‘ಇಂಡಿಯನ್’-2ಗಿಂತ 28 ವರ್ಷಗಳ ಹಿಂದೆ ಬಂದಿದ್ದ ಪ್ರೀಕ್ವೆಲ್ ಸೂಪರ್ ಎನ್ನುತ್ತಿದ್ದಾರೆ. ‘ಇಂಡಿಯನ್’ ಸಿನಿಮಾ ನೋಡದವರು ನೋಡಲು ಬಯಸುತ್ತಿದ್ದಾರೆ. ಇಂಡಿಯನ್ 2 ಬಿಡುಗಡೆಯಾದ ಮೊದಲ ದಿನದಲ್ಲಿ ಭಾರತದಾದ್ಯಂತ 26 ಕೋಟಿ ರೂ. ಗಳಿಸಿದೆ. ಅದರಲ್ಲಿ 17 ಕೋಟಿ ರೂ. ತಮಿಳು ಆವೃತ್ತಿಯಿಂದ ಬಂದಿದೆ.

VISTARANEWS.COM


on

Kamal Haasan Indian cinema release OTT today
Koo

ಬೆಂಗಳೂರು: “ಇಂಡಿಯನ್ 2,” ಎಸ್. ಶಂಕರ್ ನಿರ್ದೇಶನದ ಸಿನಿಮಾ. ನಟ ಕಮಲ್ ಹಾಸನ್ ಅವರ ಇತ್ತೀಚಿನ ಚಿತ್ರ, ಇಂಡಿಯನ್‌ 2 (Indian 2 box office) ಅಂತಿಮವಾಗಿ ಶುಕ್ರವಾರ (ಜು. 12) ಭಾರತದಾದ್ಯಂತ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಯಿತು. ‘ಇಂಡಿಯನ್ 2’ ಸಿನಿಮಾ ಮೇಲೆ ಫ್ಯಾನ್ಸ್ ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದರು. ಆದರೆ, ಈ ನಿರೀಕ್ಷೆಗಳನ್ನು ಸಿನಿಮಾ ಹುಸಿ ಮಾಡಿದೆ. ವಿಮರ್ಶಕರು ಮತ್ತು ಪ್ರೇಕ್ಷಕರಿಂದ ನೆಗೆಟಿವ್‌ ಪ್ರತಿಕ್ರಿಯೆ ಪಡೆದುಕೊಂಡಿದೆ.  ಇಂಡಿಯನ್ 2ನ ಡಿಜಿಟಲ್ ಸ್ಟ್ರೀಮಿಂಗ್ ಹಕ್ಕುಗಳನ್ನು ನೆಟ್‌ಫ್ಲಿಕ್ಸ್ ಪಡೆದುಕೊಂಡಿದೆ. ಇದೀಗ ‘ಇಂಡಿಯನ್’-2ಗಿಂತ 28 ವರ್ಷಗಳ ಹಿಂದೆ ಬಂದಿದ್ದ ಪ್ರೀಕ್ವೆಲ್ ಸೂಪರ್ ಎನ್ನುತ್ತಿದ್ದಾರೆ. ‘ಇಂಡಿಯನ್’ ಸಿನಿಮಾ ನೋಡದವರು ನೋಡಲು ಬಯಸುತ್ತಿದ್ದಾರೆ. ಹಾಗಾಗಿ ನೆಟ್‌ಫ್ಲಿಕ್ಸ್‌ನಲ್ಲಿ ಸಿನಿಮಾ ಸ್ಟ್ರೀಮಿಂಗ್ ಆಗುತ್ತಿದೆ ಎಂದು ವರದಿಯಾಗಿದೆ.

ಕೆಲವರು ಇನ್ನು 10 ಬಾರಿ ‘ಇಂಡಿಯನ್’ ನೋಡಬಹುದು. ಸೀಕ್ವೆಲ್ ನೋಡಲು ಆಗುವುದಿಲ್ಲ ಎನ್ನುತ್ತಿದ್ದಾರೆ. ಇದೆಲ್ಲದರ ಮಧ್ಯೆ ಕೆಲವರು ‘ಇಂಡಿಯನ್’ ಸಿನಿಮಾ ನೋಡಬೇಕು ಎಂದು ಬಯಸುತ್ತಿದ್ದಾರೆ. ಹಾಗಾಗಿ ನೆಟ್‌ಫ್ಲಿಕ್ಸ್‌ನಲ್ಲಿ ಸಿನಿಮಾ ಸ್ಟ್ರೀಮಿಂಗ್ ಆಗುತ್ತಿದೆ. ಜುಲೈ 14ರಿಂದ ಅಂದರೆ ಇಂದು ರಾತ್ರಿಯಿಂದಲೇ ‘ಇಂಡಿಯನ್’ ಸಿನಿಮಾ ರಿಲೀಸ್ ಆಗಲಿದೆ. ರೀ ಮಾಸ್ಟರ್ಸ್‌ 4K ವರ್ಷನ್‌ ನೋಡಲು ಸಿಗಲಿದೆ ಎಂದು ವರದಿಯಾಗಿದೆ.

ಇನ್ನು ಕೆಲವೇ ದಿನಗಳಲ್ಲಿ ‘ಇಂಡಿಯನ್-2’ ನೆಟ್‌ಫ್ಲಿಕ್ಸ್‌ಗೆ ಬರಲಿದೆ. ಆಗಸ್ಟ್ 15ಕ್ಕೆ ಸ್ಟ್ರೀಮಿಂಗ್ ಆಗುವ ಸಾಧ್ಯತೆಯಿದೆ. “ಇಂಡಿಯನ್ 2” ನ ಸಮಗ್ರ ಪಾತ್ರವರ್ಗವು ಆಕರ್ಷಕವಾಗಿದೆ.

ಇದನ್ನೂ ಓದಿ: Shiva Rajkumar: ಶಿವರಾಜ್ ಕುಮಾರ್ ಜನುಮದಿನಕ್ಕೆ 131ನೇ ಸಿನಿಮಾದ ಮೊದಲ ಝಲಕ್ ರಿಲೀಸ್!

ಇಂಡಿಯನ್ 2 ಬಿಡುಗಡೆಯಾದ ಮೊದಲ ದಿನದಲ್ಲಿ ಭಾರತದಾದ್ಯಂತ 26 ಕೋಟಿ ರೂ. ಗಳಿಸಿದೆ. ಅದರಲ್ಲಿ 17 ಕೋಟಿ ರೂ. ತಮಿಳು ಆವೃತ್ತಿಯಿಂದ ಬಂದಿದೆ. 1.1 ಕೋಟಿ ರೂ. ಹಿಂದಿ ಆವೃತ್ತಿಯಿಂದ ಮತ್ತು 7.9 ಕೋಟಿ ರೂ. ತೆಲುಗು ಆವೃತ್ತಿಯಿಂದ ಬಂದಿದೆ.ಕೆಲವೊಮ್ಮೆ ಸಿನಿಮಾ ಉತ್ತಮವಾಗಿ ಇರದೇ ಇದ್ದರೂ ಹೀರೋಗಳ ಪಾತ್ರದಿಂದ ಸಿನಿಮಾ ಇಷ್ಟ ಆಗುತ್ತದೆ. ಆದರೆ, ‘ಇಂಡಿಯನ್ 2’ ಚಿತ್ರದಲ್ಲಿ ಕಮಲ್ ಹಾಸನ್ ವಿವಿಧ ಗೆಟಪ್​ನಲ್ಲಿ ಬರೋದಷ್ಟೇ ಹೊರತು ಮತ್ತಿನ್ನೇನೂ ಇಲ್ಲ ಎಂದು ಫ್ಯಾನ್ಸ್ ಮಾತನಾಡಿಕೊಂಡಿದ್ದಾರೆ. ಈ ಸಿನಿಮಾದಲ್ಲಿ ಊರ್ಮಿಳಾ ಮಾತೋಂಡ್ಕರ್ ಮತ್ತು ಮನೀಶಾ ಕೊಯಿರಾಲಾ ಕೂಡ ನಟಿಸಿದ್ದಾರೆ.

ಚಿತ್ರದಲ್ಲಿ ರಕುಲ್ ಪ್ರೀತ್ ಸಿಂಗ್, ಕಾಜಲ್ ಅಗರ್ವಾಲ್, ಎಸ್.ಜೆ.ಸೂರ್ಯ, ಪ್ರಿಯಾ ಭವಾನಿ ಶಂಕರ್, ನೆಡುಮುಡಿ ವೇಣು, ವಿವೇಕ್, ಕಾಳಿದಾಸ್ ಜಯರಾಮ್, ಗುಲ್ಶನ್ ಗ್ರೋವರ್, ಸಮುದ್ರಕನಿ, ಬಾಬಿ ಸಿಂಹ, ಬ್ರಹ್ಮಾನಂದಂ, ವೆನ್ನೆಲ ಕಿಶೋರ್, ಜಾಕಿರ್ ಹುಸೇನ್, ಗುರು ಸೋಮಸುಂದರಾಮ್, ದೆಹಲಿ, ಗುರು ಸೋಮಸುಂದರಾಮ್ ಮಿಶ್ರಾ, , ಜಯಪ್ರಕಾಶ್, ಮನೋಬಾಲಾ, ಮತ್ತು ಅಶ್ವಿನಿ ತಂಗರಾಜ್ ಇದ್ದಾರೆ.

Continue Reading

ಕಾಲಿವುಡ್

Indian 2 box office: ನೆಲಕಚ್ಚಿದ ‘ಇಂಡಿಯನ್ 2’; ಫ್ಯಾನ್ಸ್‌ಗೆ ಭಾರಿ ನಿರಾಸೆ,  ಮೊದಲ ದಿನದ ಗಳಿಕೆ ಎಷ್ಟು?

Indian 2: ಕೆಲವೊಮ್ಮೆ ಸಿನಿಮಾ ಉತ್ತಮವಾಗಿ ಇರದೇ ಇದ್ದರೂ ಹೀರೋಗಳ ಪಾತ್ರದಿಂದ ಸಿನಿಮಾ ಇಷ್ಟ ಆಗುತ್ತದೆ. ಆದರೆ, ‘ಇಂಡಿಯನ್ 2’ ಚಿತ್ರದಲ್ಲಿ ಕಮಲ್ ಹಾಸನ್ ವಿವಿಧ ಗೆಟಪ್​ನಲ್ಲಿ ಬರೋದಷ್ಟೇ ಹೊರತು ಮತ್ತಿನ್ನೇನೂ ಇಲ್ಲ ಎಂದು ಫ್ಯಾನ್ಸ್ ಮಾತನಾಡಿಕೊಂಡಿದ್ದಾರೆ. ಈ ಸಿನಿಮಾದಲ್ಲಿ ಊರ್ಮಿಳಾ ಮಾತೋಂಡ್ಕರ್ ಮತ್ತು ಮನೀಶಾ ಕೊಯಿರಾಲಾ ಕೂಡ ನಟಿಸಿದ್ದಾರೆ.

VISTARANEWS.COM


on

Indian 2 box office collection Day Kamal Haasan’s critically panned
Koo

ಬೆಂಗಳೂರು: ನಟ ಕಮಲ್ ಹಾಸನ್ ಅವರ ಇತ್ತೀಚಿನ ಚಿತ್ರ, ಇಂಡಿಯನ್‌ 2 (Indian 2 box office) ಅಂತಿಮವಾಗಿ ಶುಕ್ರವಾರ (ಜು. 12) ಭಾರತದಾದ್ಯಂತ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಯಿತು. ‘ಇಂಡಿಯನ್ 2’ ಸಿನಿಮಾ ಮೇಲೆ ಫ್ಯಾನ್ಸ್ ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದರು. ಆದರೆ, ಈ ನಿರೀಕ್ಷೆಗಳನ್ನು ಸಿನಿಮಾ ಹುಸಿ ಮಾಡಿದೆ. ವಿಮರ್ಶಕರು ಮತ್ತು ಪ್ರೇಕ್ಷಕರಿಂದ ನೆಗೆಟಿವ್‌ ಪ್ರತಿಕ್ರಿಯೆ ಪಡೆದುಕೊಂಡಿದೆ. ಇಂಡಿಯನ್ 2 ಬಿಡುಗಡೆಯಾದ ಮೊದಲ ದಿನದಲ್ಲಿ ಭಾರತದಾದ್ಯಂತ 26 ಕೋಟಿ ರೂ. ಗಳಿಸಿದೆ. ಅದರಲ್ಲಿ 17 ಕೋಟಿ ರೂ. ತಮಿಳು ಆವೃತ್ತಿಯಿಂದ ಬಂದಿದೆ. 1.1 ಕೋಟಿ ರೂ. ಹಿಂದಿ ಆವೃತ್ತಿಯಿಂದ ಮತ್ತು 7.9 ಕೋಟಿ ರೂ. ತೆಲುಗು ಆವೃತ್ತಿಯಿಂದ ಬಂದಿದೆ.

ಇಂಡಿಯನ್ 2 ಸಿನಿಮಾ ಕಮಲ್ ಹಾಸನ್ ಅವರ ಕೊನೆಯ ಚಿತ್ರ ʻವಿಕ್ರಮ್ʼ ಕ್ಕಿಂತ ಕಡಿಮೆ ಗಳಿಕೆ ಕಂಡಿದೆ. 2022 ರಲ್ಲಿ ವಿಕ್ರಮ್‌ ಸಿನಿಮಾ ತನ್ನ ಆರಂಭಿಕ ದಿನದಂದು 28 ಕೋಟಿ ರೂ. ಗಳಿಕೆ ಕಂಡಿತ್ತು. ವಿಕ್ರಮ್ ಸಕಾರಾತ್ಮಕ ವಿಮರ್ಶೆಗಳನ್ನು ಪಡೆದಿತ್ತು. ವಿಶ್ವಾದ್ಯಂತ 430 ಕೋಟಿ ರೂ. ಗಳಿಕೆ ಕಂಡಿತ್ತು. ಅದಕ್ಕೂ ಮೊದಲು, ಕಮಲ್ ಹಾಸನ್ ಕೊನೆಯದಾಗಿ 2018 ರ ವಿಶ್ವರೂಪಂ ಚಿತ್ರದಲ್ಲಿ ನಟಿಸಿದ್ದರು. ಇಂಡಿಯನ್ 2’ ಸಿನಿಮಾಗೆ ಮೊದಲ ದಿನ ಕೇವಲ 26 ಕೋಟಿ ರೂಪಾಯಿ ಗಳಿಕೆ ಆಗಿದೆ. ಕಮಲ್ ಹಾಸನ್ ಅವರಂಥ ಸಿನಿಮಾಗೆ ಇದು ತುಂಬಾನೇ ಸಣ್ಣ ಮೊತ್ತ. 

ಕೆಲವೊಮ್ಮೆ ಸಿನಿಮಾ ಉತ್ತಮವಾಗಿ ಇರದೇ ಇದ್ದರೂ ಹೀರೋಗಳ ಪಾತ್ರದಿಂದ ಸಿನಿಮಾ ಇಷ್ಟ ಆಗುತ್ತದೆ. ಆದರೆ, ‘ಇಂಡಿಯನ್ 2’ ಚಿತ್ರದಲ್ಲಿ ಕಮಲ್ ಹಾಸನ್ ವಿವಿಧ ಗೆಟಪ್​ನಲ್ಲಿ ಬರೋದಷ್ಟೇ ಹೊರತು ಮತ್ತಿನ್ನೇನೂ ಇಲ್ಲ ಎಂದು ಫ್ಯಾನ್ಸ್ ಮಾತನಾಡಿಕೊಂಡಿದ್ದಾರೆ. ಈ ಸಿನಿಮಾದಲ್ಲಿ ಊರ್ಮಿಳಾ ಮಾತೋಂಡ್ಕರ್ ಮತ್ತು ಮನೀಶಾ ಕೊಯಿರಾಲಾ ಕೂಡ ನಟಿಸಿದ್ದಾರೆ.

ಇದನ್ನೂ ಓದಿ: Indian 2: ಇಂಡಿಯನ್ 2ನಲ್ಲಿ ಸೆನ್ಸಾರ್ ಮಂಡಳಿ ಕೇಳಿದೆ ಆ ಐದು ಬದಲಾವಣೆ!

ಸ್ಯಾಕ್‌ನಿಲ್ಕ್ ಪ್ರಕಾರ, ಇಂಡಿಯನ್ 2 ತಮಿಳು ಆವೃತ್ತಿಗೆ ಒಟ್ಟಾರೆ 55% ಆಕ್ಯುಪೆನ್ಸಿಯನ್ನು ಹೊಂದಿತ್ತು, ಹೆಚ್ಚು ರಾತ್ರಿ ಪ್ರದರ್ಶನಗಳಿಂದ ಬಂದಿದೆ. ಚೆನ್ನೈ ಶೇ 68ರಷ್ಟು , ಹಿಂದಿ ಶೇ 11 ರಷ್ಟು ಆಕ್ಯುಪೆನ್ಸಿ , ಮುಂಬೈ ಮತ್ತು ದೆಹಲಿ-ಎನ್‌ಸಿಆರ್ ಕ್ರಮವಾಗಿ ಶೇ. 12.5ರಷ್ಟು ​​ಮತ್ತು ಶೇ. 8ರಷ್ಟು ಆಕ್ಯುಪೆನ್ಸಿ ಇತ್ತು. ಚಿತ್ರದ ತೆಲುಗು ಆವೃತ್ತಿಯು ಉತ್ತಮ ಪ್ರದರ್ಶನ ನೀಡಿದೆ. ಶೇ. 58ರಷ್ಟು ಆಕ್ಯುಪೆನ್ಸಿ ಇತ್ತು ಎನ್ನಲಾಗಿದೆ. ಕಮಲ್ ಹಾಸನ್ ಇತ್ತೀಚೆಗೆ ಕಲ್ಕಿ 2898 ಎಡಿ ಚಿತ್ರದಲ್ಲಿ ಕಾಣಿಸಿಕೊಂಡಿದ್ದಾರೆ, ಇದು ಜಾಗತಿಕವಾಗಿ 1000 ಕೋಟಿ ರೂ. ಕಲೆಕ್ಷನ್‌ ಮಾಡಿದೆ.

ಚಿತ್ರದಲ್ಲಿ ರಕುಲ್ ಪ್ರೀತ್ ಸಿಂಗ್, ಕಾಜಲ್ ಅಗರ್ವಾಲ್, ಎಸ್.ಜೆ.ಸೂರ್ಯ, ಪ್ರಿಯಾ ಭವಾನಿ ಶಂಕರ್, ನೆಡುಮುಡಿ ವೇಣು, ವಿವೇಕ್, ಕಾಳಿದಾಸ್ ಜಯರಾಮ್, ಗುಲ್ಶನ್ ಗ್ರೋವರ್, ಸಮುದ್ರಕನಿ, ಬಾಬಿ ಸಿಂಹ, ಬ್ರಹ್ಮಾನಂದಂ, ವೆನ್ನೆಲ ಕಿಶೋರ್, ಜಾಕಿರ್ ಹುಸೇನ್, ಗುರು ಸೋಮಸುಂದರಾಮ್, ದೆಹಲಿ, ಗುರು ಸೋಮಸುಂದರಾಮ್ ಮಿಶ್ರಾ, , ಜಯಪ್ರಕಾಶ್, ಮನೋಬಾಲಾ, ಮತ್ತು ಅಶ್ವಿನಿ ತಂಗರಾಜ್ ಇದ್ದಾರೆ.

Continue Reading
Advertisement
CM Siddaramaiah
ಕರ್ನಾಟಕ10 mins ago

CM Siddaramaiah: ಬಿಜೆಪಿ ತನ್ನ ಅವಧಿಯ ಹಗರಣಗಳನ್ನು ಮುಚ್ಚಿ ಹಾಕಿದೆ: ಸಿಎಂ ಸಿದ್ದರಾಮಯ್ಯ

Viral video
ವೈರಲ್ ನ್ಯೂಸ್14 mins ago

Viral Video: ಏಳು ತಿಂಗಳ ಮಗುವಿನ ಮೇಲೆ ಗುಂಡು ಹಾರಿಸಿದ ಕ್ರೂರ ಮಹಿಳೆ!

Honor Released Honor 200 Pro 5G and Honor 200 5G Smartphones
ಬೆಂಗಳೂರು18 mins ago

Honor 200 Series : ಒಂದೇ ದಿನ 2 ಸ್ಮಾರ್ಟ್‌ಫೋನ್‌ ಬಿಡುಗಡೆ ಮಾಡಿದ ಹಾನರ್

Self Harming
Latest20 mins ago

Self Harming: ಹೆಂಡತಿಗೆ ಹೆದರಿಸಲು ಹೋಗಿ ಜೀವ ಕಳೆದುಕೊಂಡ ಲೋಕೋ ಪೈಲಟ್‍!

Health Tips Kannada
ಆರೋಗ್ಯ21 mins ago

Health Tips Kannada: ಮಳೆಗಾಲದಲ್ಲಿ ಹಾಗಲಕಾಯಿ ತಿಂದರೆ ಪ್ರಯೋಜನಗಳು ಎಷ್ಟೊಂದು!

Movie ticket price hike
ಕರ್ನಾಟಕ36 mins ago

Movie ticket price hike: ಸಿನಿಮಾ ಪ್ರೇಕ್ಷಕರ ಮೇಲೂ ತೆರಿಗೆ ಪ್ರಹಾರ; ಸಿನಿಮಾ ಟಿಕೆಟ್‌, OTT ಸಬ್‌ಸ್ಕ್ರಿಪ್ಶನ್ ಶುಲ್ಕ ಭಾರಿ ಏರಿಕೆ?

US Teacher
ವೈರಲ್ ನ್ಯೂಸ್40 mins ago

School Teacher: 14 ವರ್ಷದ ವಿದ್ಯಾರ್ಥಿಗೆ ತನ್ನ ಬೆತ್ತಲೆ ಫೋಟೊ ಕಳುಹಿಸಿದ ಶಿಕ್ಷಕಿ; ಈಗ ಜೈಲಿನ ಅತಿಥಿ

Mohammed Shami
ಕ್ರೀಡೆ48 mins ago

Mohammed Shami : ರೋಹಿತ್​ ಶರ್ಮಾಗೆ ನನ್ನ ಬೌಲಿಂಗ್​ ಎಂದರೆ ಭಯ; ಮೊಹಮ್ಮದ್ ಶಮಿ

Heavy rain in Chandragutti village and other places of Soraba taluk
ಶಿವಮೊಗ್ಗ51 mins ago

Karnataka Rain: ಸೊರಬ ತಾಲೂಕಿನ ವಿವಿಧೆಡೆ ಮಳೆ ಆರ್ಭಟ; ವರದಾ ನದಿ ತೀರದ ವ್ಯಾಪ್ತಿಯ ಕೃಷಿ ಭೂಮಿ ಜಲಾವೃತ

Sexual Abuse
Latest53 mins ago

Sexual Abuse: ವಿದ್ಯಾರ್ಥಿನಿಯನ್ನು ಅಪಹರಿಸಿ 12 ದಿನ ಅತ್ಯಾಚಾರ ಎಸಗಿ ಪೊಲೀಸ್‌ ಠಾಣೆ ಮುಂದೆಯೇ ಬಿಟ್ಟು ಹೋದರು!

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Rain
ಮಳೆ7 hours ago

Karnataka Rain : ಭಾರಿ ಮಳೆಗೆ ಮನೆ ಗೋಡೆ ಕುಸಿತ; ಕೊಟ್ಟಿಗೆಯಲ್ಲಿದ್ದ ಜಾನುವಾರುಗಳು ಸಾವು

karnataka Rain
ಮಳೆ9 hours ago

Karnataka Rain : ಹಳ್ಳ ದಾಟಲು ಹೋಗಿ ನೀರುಪಾಲಾದ ಜಾನುವಾರು; ಬಿರುಗಾಳಿಗೆ ಕಳಚಿದ ವಿಂಡ್‌ ಫ್ಯಾನ್‌

karnataka Rain
ಮಳೆ1 day ago

Karnataka Rain : ಬೀದಿಗೆ ತಂದ ರಣಮಳೆ; ಮನೆ ಕುಸಿದು ಬಿದ್ದು 9 ತಿಂಗಳ ಗರ್ಭಿಣಿ ನರಳಾಟ

Karnataka Rain
ಮಳೆ1 day ago

Karnataka Rain : ರಾಜ್ಯದಲ್ಲಿ ಮಳೆಯ ಆರ್ಭಟ; ರಾತ್ರಿ ಕಳೆದು ಬೆಳಗಾಗುವುದರೊಳಗೆ ಕಂದಕ ನಿರ್ಮಾಣ

Karnataka Rain
ಮಳೆ2 days ago

Karnataka Rain : ಭಾರಿ ಮಳೆ ಎಫೆಕ್ಟ್‌; ಉಕ್ಕಿ ಹರಿಯುತ್ತಿದ್ದ ನದಿಯಲ್ಲಿ ಕೊಚ್ಚಿ ಹೋದ ರಾಸು

Uttara Kannada Landslide
ಮಳೆ2 days ago

Uttara Kannada Landslide: ಶಿರೂರು ಗುಡ್ಡ ಕುಸಿತ; ಅಖಾಡಕ್ಕಿಳಿದ ಜಿಯೊಲಾಜಿಕಲ್ ಸರ್ವೆ ಆಫ್ ಇಂಡಿಯಾ ಟೀಂ

Karnataka Rain
ಮಳೆ4 days ago

Karnataka Rain : ಕಾರವಾರದಲ್ಲಿ ಮಳೆ ಅವಾಂತರ; ಮನೆ ಮೇಲೆ ಗುಡ್ಡ ಕುಸಿದು ವೃದ್ಧ ಸಾವು

karnataka Rain
ಮಳೆ4 days ago

Karnataka Rain : ಭಾರಿ ಮಳೆಗೆ ನಿಯಂತ್ರಣ ತಪ್ಪಿ ಕೆರೆಗೆ ಉರುಳಿ ಬಿದ್ದ ಕಾರು; ನಾಲ್ವರು ಪ್ರಾಣಾಪಾಯದಿಂದ ಪಾರು

karnataka Weather Forecast
ಮಳೆ5 days ago

Karnataka Weather : ವ್ಯಾಪಕ ಮಳೆ ಎಚ್ಚರಿಕೆ; ನಾಳೆಯೂ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

karnataka Rain
ಮಳೆ5 days ago

Karnataka Rain : ಶಾಲಾ-ಕಾಲೇಜಿಗೆ ಈ ದಿನ ರಜಾ; ಅಬ್ಬರಿಸುತ್ತಿರುವ ಮಳೆಗೆ ಮನೆಯಲ್ಲೇ ಎಲ್ಲರೂ ಸಜಾ!

ಟ್ರೆಂಡಿಂಗ್‌