Union Budget 2024: ಷೇರು ಮಾರುಕಟ್ಟೆ ಮೇಲೆ ಬಜೆಟ್ ದಿನದ ಎಫೆಕ್ಟ್‌ ಏನು? ಇಲ್ಲಿದೆ 10 ವರ್ಷಗಳ ಹಿನ್ನೋಟ - Vistara News

ಬಜೆಟ್ 2024

Union Budget 2024: ಷೇರು ಮಾರುಕಟ್ಟೆ ಮೇಲೆ ಬಜೆಟ್ ದಿನದ ಎಫೆಕ್ಟ್‌ ಏನು? ಇಲ್ಲಿದೆ 10 ವರ್ಷಗಳ ಹಿನ್ನೋಟ

Union Budget 2024: ಬಜೆಟ್ ಮಂಡನೆ ದಿನ ಷೇರು ಮಾರುಕಟ್ಟೆಯಲ್ಲಿ ಏನಾಗಬಹುದು ಎನ್ನುವ ಕುತೂಹಲ ಹೆಚ್ಚಾಗಿದೆ. ಈ ಬಗ್ಗೆ ಇತಿಹಾಸ ಏನು ಹೇಳುತ್ತದೆ ಎಂಬುದನ್ನು ನೋಡೋಣ. 2013ರಿಂದ ಬಜೆಟ್ ದಿನಗಳಲ್ಲಿ ಭಾರತೀಯ ಷೇರು ಮಾರುಕಟ್ಟೆಯಲ್ಲಿ ಆಗಿರುವ ಬದಲಾವಣೆಗಳು ಹೇಗಿತ್ತು ಎನ್ನುವ ಮಾಹಿತಿ ಇಲ್ಲಿದೆ.

VISTARANEWS.COM


on

union budget 2024
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಹಣಕಾಸು ಸಚಿವೆ (Finance Minister) ನಿರ್ಮಲಾ ಸೀತಾರಾಮನ್‌ (Nirmala Sitharaman) ಅವರು ಜುಲೈ 23ರಂದು ಮಂಗಳವಾರ ಕೇಂದ್ರ ಬಜೆಟ್ 2024-25 (Union Budget 2024) ಅನ್ನು ಮಂಡಿಸುವ ಸಿದ್ಧತೆಯಲ್ಲಿದ್ದಾರೆ. ಲೋಕಸಭಾ ಚುನಾವಣೆ ಬಳಿಕ ಏರಿಕೆ ಹಾದಿಯಲ್ಲಿ ಜಿಗಿಯುತ್ತಿರುವ ಭಾರತೀಯ ಷೇರು ಮಾರುಕಟ್ಟೆಯಲ್ಲಿ ಬಜೆಟ್‌ ಮಂಡನೆ ದಿನ ಕೊಂಚ ತಲ್ಲಣ ಉಂಟು ಮಾಡಬಹುದಾ ಎಂಬ ಪ್ರಶ್ನೆ ಎದ್ದಿದೆ. ಆದರೆ ಆರ್ಥಿಕ ತಜ್ಞರು ಈ ಬಜೆಟ್ ಭಾರತೀಯ ಷೇರು ಮಾರುಕಟ್ಟೆಯ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ, ಎಂದಿನಂತೆ ಅದು ನಡೆಯುತ್ತದೆ ಎನ್ನುತ್ತಿದ್ದಾರೆ.

ಹೀಗಾಗಿ ಬಜೆಟ್ ಮಂಡನೆ ದಿನ ಷೇರು ಮಾರುಕಟ್ಟೆಯಲ್ಲಿ ಏನಾಗಬಹುದು ಎನ್ನುವ ಕುತೂಹಲ ಹೆಚ್ಚಾಗಿದೆ. ಈ ಬಗ್ಗೆ ಈ ಹಿಂದಿನ ಷೇರು ಮಾರುಕಟ್ಟೆ ಇತಿಹಾಸ ಏನು ಹೇಳುತ್ತದೆ ಎಂಬುದನ್ನು ನೋಡೋಣ. 2013ರಿಂದ ಬಜೆಟ್ ದಿನಗಳಲ್ಲಿ ಭಾರತೀಯ ಷೇರು ಮಾರುಕಟ್ಟೆಯಲ್ಲಿ ಆಗಿರುವ ಬದಲಾವಣೆಗಳು ಹೇಗಿತ್ತು ಎನ್ನುವ ಮಾಹಿತಿ ಇಲ್ಲಿದೆ.

2013ರ ಬಜೆಟ್

ಪ್ರಮುಖ ಅಂಶ: ಬಂಡವಾಳ ಹಿಂತೆಗೆತ ಮತ್ತು ಸ್ಪೆಕ್ಟ್ರಮ್ ಮಾರಾಟದಿಂದ ಹೆಚ್ಚಿನ ಆದಾಯ, ಮ್ಯೂಚುವಲ್ ಫಂಡ್ ಮತ್ತು ಈಕ್ವಿಟಿ ಫ್ಯೂಚರ್ಸ್ ವಹಿವಾಟುಗಳಿಗೆ ಸೆಕ್ಯುರಿಟೀಸ್ ಟ್ರಾನ್ಸಾಕ್ಷನ್ ತೆರಿಗೆಯಲ್ಲಿ ಕಡಿತ.
ಬಜೆಟ್‌ ಮಂಡನೆ ದಿನ: 2013ರ ಫೆಬ್ರವರಿ 28
ಇಂಟ್ರಾ-ಡೇ ಸ್ವಿಂಗ್: ಶೇ. 2.8

2014ರ ಮಧ್ಯಂತರ ಬಜೆಟ್

ಮಾರುಕಟ್ಟೆ ಪ್ರತಿಕ್ರಿಯೆ: ದೇಶೀಯ ಷೇರು ಮಾರುಕಟ್ಟೆಯಲ್ಲಿ ಶೇ. 0.5ರಷ್ಟು ಏರಿಕೆಯಾಗಿದೆ.
ಬಜೆಟ್‌ ಮಂಡನೆ ದಿನ: 2014ರ ಫೆಬ್ರವರಿ 17
ಇಂಟ್ರಾ-ಡೇ ಸ್ವಿಂಗ್: ಶೇ. 0.8

2014ರ ಪೂರ್ಣ ಬಜೆಟ್

ಮುಖ್ಯಾಂಶಗಳು: ಹೊಸದಾಗಿ ರಚನೆಯಾದ ನರೇಂದ್ರ ಮೋದಿ ಸರ್ಕಾರದ ಮೊದಲ ಬಜೆಟ್.
ಮಾರುಕಟ್ಟೆ ಪ್ರತಿಕ್ರಿಯೆ: ಭಾರತೀಯ ಷೇರು ಮಾರುಕಟ್ಟೆಯಲ್ಲಿ ಶೇ. 0.3ರಷ್ಟು ಇಳಿಕೆಯಾಗಿದೆ.
ಬಜೆಟ್‌ ಮಂಡನೆ ದಿನ: 2014ರ ಜುಲೈ 10
ಇಂಟ್ರಾ-ಡೇ ಸ್ವಿಂಗ್: ಶೇ. 3.2


2015ರ ಬಜೆಟ್

ಮುಖ್ಯಾಂಶಗಳು: ಆರೋಗ್ಯ ಕ್ಷೇತ್ರ, ವೈದ್ಯಕೀಯ ಶಿಕ್ಷಣ, ಸಂಸ್ಥೆಗಳ ಸ್ಥಾಪನೆ, ಸೌರ ವಿದ್ಯುತ್ ಯೋಜನೆಗಳು ಮತ್ತು ನಮಾಮಿ ಗಂಗೆ ಯೋಜನೆಗೆ 2,037 ಕೋಟಿ ರೂ.
ಮಾರುಕಟ್ಟೆ ಪ್ರತಿಕ್ರಿಯೆ: ಬಿಎಸ್‌ಇ ಸೆನ್ಸೆಕ್ಸ್ ಶೇ.0.5ರಷ್ಟು ಏರಿಕೆ ಕಂಡಿದೆ.
ಬಜೆಟ್‌ ಮಂಡನೆ ದಿನ: 2015ರ: ಫೆಬ್ರವರಿ 28
ಇಂಟ್ರಾ-ಡೇ ಸ್ವಿಂಗ್: ಶೇ. 2.3

2016ರ ಬಜೆಟ್

ಮುಖ್ಯಾಂಶಗಳು: 2022ರ ವೇಳೆಗೆ ರೈತರ ಆದಾಯವನ್ನು ದ್ವಿಗುಣಗೊಳಿಸುವ ಭರವಸೆ, ಗ್ರಾಮೀಣ ನೈರ್ಮಲ್ಯಕ್ಕಾಗಿ ಸ್ವಚ್ಛ ಭಾರತ ಅಭಿಯಾನಕ್ಕೆ 9,000 ಕೋಟಿ ಅನುದಾನ.
ಮಾರುಕಟ್ಟೆ ಪ್ರತಿಕ್ರಿಯೆ: ಷೇರು ಮಾರುಕಟ್ಟೆ ಶೇ. 0.7ರಷ್ಟು ಕುಸಿತ
ಬಜೆಟ್‌ ಮಂಡನೆ ದಿನ: 2016ರ ಫೆಬ್ರವರಿ 29
ಇಂಟ್ರಾ-ಡೇ ಸ್ವಿಂಗ್‌: ಶೇ. 3.8

2017ರ ಬಜೆಟ್

ಮುಖ್ಯಾಂಶಗಳು: 2.5 ಲಕ್ಷ ರೂ. ನಿಂದ 5 ಲಕ್ಷ ರೂ. ನಡುವಿನ ಆದಾಯ ಹೊಂದಿರುವ ವ್ಯಕ್ತಿಗಳಿಗೆ ಆದಾಯ ತೆರಿಗೆ ದರವನ್ನು ಶೇ. 5ಕ್ಕೆ ಕಡಿತಗೊಳಿಸಲಾಗಿದೆ.
ಮಾರುಕಟ್ಟೆ ಪ್ರತಿಕ್ರಿಯೆ: ಸೆನ್ಸೆಕ್ಸ್ ಶೇ.1.8ರಷ್ಟು ಏರಿಕೆಯಾಗಿದೆ.
ಬಜೆಟ್‌ ಮಂಡನೆ ದಿನ: 2017ರ ಫೆಬ್ರವರಿ 1
ಇಂಟ್ರಾ-ಡೇ ಸ್ವಿಂಗ್: ಶೇ. 2.1

2018ರ ಬಜೆಟ್

ಮುಖ್ಯಾಂಶಗಳು: ಉತ್ಪಾದನೆ, ಸೇವೆಗಳು ಮತ್ತು ರಫ್ತುಗಳೊಂದಿಗೆ ಶೇ.8ಕ್ಕಿಂತ ಹೆಚ್ಚಿನ ಬೆಳವಣಿಗೆಯತ್ತ ಹೆಜ್ಜೆ.
ಮಾರುಕಟ್ಟೆ ಪ್ರತಿಕ್ರಿಯೆ: ಭಾರತೀಯ ಷೇರು ಮಾರುಕಟ್ಟೆಯು ಶೇ. 0.2ರಷ್ಟು ಕುಸಿತ
ಬಜೆಟ್‌ ಮಂಡನೆ ದಿನ: 2018ರ ಫೆಬ್ರವರಿ 1
ಇಂಟ್ರಾ-ಡೇ ಸ್ವಿಂಗ್: ಶೇ. 2.1

2019ರ ಮಧ್ಯಂತರ ಬಜೆಟ್

ಮುಖ್ಯಾಂಶಗಳು: ರೈತರಿಗೆ ಪ್ರಮುಖ ಯೋಜನೆ, ಆದಾಯ ತೆರಿಗೆ ಕೊಡುಗೆ, ಸೆಕ್ಷನ್ 87A ಅಡಿಯಲ್ಲಿ ವಾರ್ಷಿಕ ಆದಾಯವನ್ನು 5 ಲಕ್ಷ ರೂ.ವರೆಗೆ ತೆರಿಗೆ ಮುಕ್ತಗೊಳಿಸಲು ರಿಯಾಯಿತಿಯನ್ನು ಹೆಚ್ಚಿಸಲಾಗಿದೆ.
ಮಾರುಕಟ್ಟೆ ಪ್ರತಿಕ್ರಿಯೆ: ಭಾರತೀಯ ಷೇರು ಮಾರುಕಟ್ಟೆಯಲ್ಲಿ ಶೇ. 0.6% ಏರಿಕೆ.
ಬಜೆಟ್‌ ಮಂಡನೆ ದಿನ: 2019ರ ಫೆಬ್ರವರಿ 1
ಇಂಟ್ರಾ-ಡೇ ಸ್ವಿಂಗ್: ಶೇ. 1.5

2019ರ ಪೂರ್ಣ ಬಜೆಟ್

ಮುಖ್ಯಾಂಶಗಳು: ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮತ್ತು ಮೋದಿ 2.0 ಸರ್ಕಾರಕ್ಕೆ ಇದು ಮೊದಲ ಬಜೆಟ್.
ಮಾರುಕಟ್ಟೆ ಪ್ರತಿಕ್ರಿಯೆ: ಷೇರು ಮಾರುಕಟ್ಟೆ ಶೇ.1ರಷ್ಟು ಕುಸಿತ ಕಂಡಿದೆ.
ಬಜೆಟ್‌ ಮಂಡನೆ ದಿನ: 2019ರ ಜುಲೈ 5
ದಿನದ ವಹಿವಾಟು: ಶೇ. 1.5


2020ರ ಬಜೆಟ್

ಮುಖ್ಯಾಂಶಗಳು: ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ತೆರಿಗೆ ಹೆಚ್ಚಳ, ಚಿನ್ನದ ಮೇಲಿನ ಆಮದು ಸುಂಕ ಹೆಚ್ಚಳ, ಸೂಪರ್ ರಿಚ್‌ಗಳ ಮೇಲೆ ಹೆಚ್ಚುವರಿ ಸರ್ಚಾರ್ಜ್, ಹೆಚ್ಚಿನ ಮೌಲ್ಯದ ನಗದು ಹಿಂಪಡೆಯುವಿಕೆಯ ಮೇಲೆ ತೆರಿಗೆ, ಕಾರ್ಪೊರೇಟ್ ತೆರಿಗೆ ಕಡಿತ, ವಸತಿ ವಲಯ, ಸ್ಟಾರ್ಟ್‌ಅಪ್‌ಗಳು ಮತ್ತು ಎಲೆಕ್ಟ್ರಿಕ್ ವಾಹನಗಳಿಗೆ ತೆರಿಗೆ ಕಡಿತ.
ಮಾರುಕಟ್ಟೆ ಪ್ರತಿಕ್ರಿಯೆ: ಮಾರುಕಟ್ಟೆಯು ಶೇ. 2.4ರಷ್ಟು ಕುಸಿತ
ಬಜೆಟ್‌ ಮಂಡನೆ ದಿನ: 2020ರ ಫೆಬ್ರವರಿ 1
ದಿನದ ವಹಿವಾಟು: ಶೇ. 3.2

2021ರ ಬಜೆಟ್

ಮುಖ್ಯಾಂಶಗಳು: ಸಾಂಕ್ರಾಮಿಕ ರೋಗದ ಮಧ್ಯೆ ಭಾರತೀಯ ಆರ್ಥಿಕತೆಯನ್ನು ಪುನರುಜ್ಜೀವನಗೊಳಿಸುವ ದಿಟ್ಟ ಕ್ರಮಗಳು.
ಮಾರುಕಟ್ಟೆ ಪ್ರತಿಕ್ರಿಯೆ: ಷೇರು ಮಾರುಕಟ್ಟೆ ಶೇ. 4.7ರಷ್ಟು ಏರಿಕೆ
ಬಜೆಟ್‌ ಮಂಡನೆ ದಿನ: 2021ರ ಫೆಬ್ರವರಿ 1
ದಿನದ ವಹಿವಾಟು: ಶೇ. 4.9

2022ರ ಬಜೆಟ್

ಮುಖ್ಯಾಂಶಗಳು: ಮೂಲಸೌಕರ್ಯ ಅಭಿವೃದ್ಧಿ, ದೇಶೀಯ ರಕ್ಷಣಾ ವಲಯ, ಬಂಡವಾಳ ವೆಚ್ಚ ಹೆಚ್ಚಳದ ಮೇಲೆ ಕೇಂದ್ರೀಕರಣ
ಮಾರುಕಟ್ಟೆ ಪ್ರತಿಕ್ರಿಯೆ: ಷೇರು ಮಾರುಕಟ್ಟೆ ಶೇ. 1.4ರಷ್ಟು ಜಿಗಿತ.
ಬಜೆಟ್‌ ಮಂಡನೆ ದಿನ: 2022ರ ಫೆಬ್ರವರಿ 1
ಇಂಟ್ರಾ-ಡೇ ಸ್ವಿಂಗ್: ಶೇ. 1.4

2023ರ ಬಜೆಟ್

ಮುಖ್ಯಾಂಶಗಳು: ಹೊಸ ತೆರಿಗೆ ಪದ್ಧತಿಗೆ ಆದಾಯ ತೆರಿಗೆ ರಿಯಾಯಿತಿಯನ್ನು 7 ಲಕ್ಷ ರೂ.ಗೆ ಹೆಚ್ಚಿಸಲಾಗಿದೆ. ಹೊಸ ತೆರಿಗೆ ಪದ್ಧತಿಗೆ 50,000 ರೂ.ಗಳ ಪ್ರಮಾಣಿತ ಕಡಿತ.
ಮಾರುಕಟ್ಟೆ ಪ್ರತಿಕ್ರಿಯೆ: ಷೇರು ಮಾರುಕಟ್ಟೆಯು ಶೇ. 0.25ರಷ್ಟು ಕುಸಿತ
ಬಜೆಟ್‌ ಮಂಡನೆ ದಿನ: 2023ರ ಫೆಬ್ರವರಿ 1
ಇಂಟ್ರಾ-ಡೇ ಸ್ವಿಂಗ್: ಶೇ. 3.6


2024ರ ಮಧ್ಯಂತರ ಬಜೆಟ್

ಮುಖ್ಯಾಂಶಗಳು: ಲೋಕಸಭಾ ಚುನಾವಣೆಗೆ ಮುನ್ನ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಈ ಮಧ್ಯಂತರ ಬಜೆಟ್‌ ಪ್ರಸ್ತುತಪಡಿಸಿದರು.
ಮಾರುಕಟ್ಟೆ ಪ್ರತಿಕ್ರಿಯೆ: ಸ್ಟಾಕ್ ಮಾರುಕಟ್ಟೆ ಸೂಚ್ಯಂಕಗಳು ದಿನದಂದು ಕೆಳಮಟ್ಟಕ್ಕೆ ಕೊನೆಗೊಂಡಿವೆ.
ಬಜೆಟ್‌ ಮಂಡನೆ ದಿನ: 2024ರ ಫೆಬ್ರವರಿ 1
ಎಸ್ ಆಂಡ್ ಪಿಬಿಎಸ್‌ಇ ಸೆನ್ಸೆಕ್ಸ್: 106.81 ಪಾಯಿಂಟ್‌ಗಳ ಇಳಿಕೆಯೊಂದಿಗೆ 71,645.30 ಕ್ಕೆ ಕೊನೆಗೊಂಡಿತು.
ಎನ್‌ಎಸ್‌ಇ ನಿಫ್ಟಿ 50: 28.25 ಪಾಯಿಂಟ್‌ಗಳ ಇಳಿಕೆಯೊಂದಿಗೆ 21,697.45ಕ್ಕೆ ಸ್ಥಿರವಾಯಿತು.

ಇದನ್ನೂ ಓದಿ: Union Budget 2024: ಬಜೆಟ್‌ಗೂ ಮೊದಲು, ನಂತರ ಹೂಡಿಕೆ ಮಾಡುವುದು ಲಾಭವೇ? ತಜ್ಞರು ಹೇಳೋದಿಷ್ಟು

ಕೇಂದ್ರ ಬಜೆಟ್ 2024 ಮಂಡನೆಗೆ ಮುಂಚಿತವಾಗಿ ನಿಫ್ಟಿ ಮತ್ತು ಸೆನ್ಸೆಕ್ಸ್‌ನಲ್ಲಿನ ವೇಗವು ಕೊಂಚ ನಿಧಾನವಾಗಿದೆ. ಸಾಮಾನ್ಯ ತೆರಿಗೆದಾರರು, ಹೂಡಿಕೆದಾರರು, ಕೈಗಾರಿಕೆಗಳು, ರೈತರು, ಮಹಿಳೆಯರು ಮತ್ತು ಎಫ್‌ಎಂಸಿಜಿ, ರಿಯಲ್ ಎಸ್ಟೇಟ್ ಮತ್ತು ತಂತ್ರಜ್ಞಾನದಂತಹ ಪ್ರಮುಖ ಉದ್ಯಮ ವಲಯಗಳು ಸೇರಿದಂತೆ ವಿವಿಧ ಶ್ರೇಣಿಯ ಮಧ್ಯಸ್ಥಗಾರರ ಅಗತ್ಯತೆಗಳು ಮತ್ತು ನಿರೀಕ್ಷೆಗಳನ್ನು ಬಜೆಟ್ ಮೇಲೆ ಹೆಚ್ಚಾಗಿದೆ. ಪ್ರಸ್ತುತ ಬಿಎಸ್‌ಇ ಸೆನ್ಸೆಕ್ಸ್ ಮತ್ತು ಎನ್‌ಎಸ್‌ಇ ನಿಫ್ಟಿ ತಮ್ಮ ದಾಖಲೆಯ ಉನ್ನತ ಮಟ್ಟದಲ್ಲಿ ವಹಿವಾಟು ನಡೆಸುತ್ತಿವೆ. ಹಾಗಾಗಿ ಈ ಬಾರಿಯ ಕೇಂದ್ರ ಬಜೆಟ್‌ ಕುತೂಹಲ ಮೂಡಿಸಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಬಜೆಟ್ 2024

Central Budget 2024: 1997ರಲ್ಲಿ ʼಕ್ರಾಂತಿಕಾರಿ ಬಜೆಟ್ʼ ಮಂಡಿಸಿದ್ದ ಪಿ ಚಿದಂಬರಂ; ಆಗ ಪ್ರಧಾನಿಯಾಗಿದ್ದವರು ದೇವೇಗೌಡರು!

ಚಿದಂಬರಂ ಅವರ ಮಂಡಿಸಿದ ಕನಸಿನ ಬಜೆಟ್ ನಲ್ಲಿ (Dream Budget) ಗರಿಷ್ಠ ಆದಾಯ ತೆರಿಗೆ ದರದ ಸ್ಲ್ಯಾಬ್ ಅನ್ನು ಹಿಂದಿನ ಶೇ. 40ರಿಂದ ಶೇ. 30ಕ್ಕೆ ಇಳಿಸಲಾಗಿತ್ತು. ದೇಶೀಯ ಕಂಪೆನಿಗಳಿಗೆ ಕಾರ್ಪೊರೇಟ್ ತೆರಿಗೆ ದರವನ್ನು ಶೇ.40ರಿಂದ ಶೇ. 35ಕ್ಕೆ ಇಳಿಸಲಾಯಿತು. ಗರಿಷ್ಠ ಕಸ್ಟಮ್ಸ್ ಸುಂಕವನ್ನು ಶೇ. 50 ರಿಂದ ಶೇ. 40ಕ್ಕೆ ಇಳಿಸಲಾಯಿತು. ಅಬಕಾರಿ ಸುಂಕದ ರಚನೆಯನ್ನು ಸಹ ಸರಳಗೊಳಿಸಲಾಯಿತು. ಕನಸಿನ ಬಜೆಟ್ ಪರಿಣಾಮವಾಗಿ ಆದಾಯ ತೆರಿಗೆ ಸಂಗ್ರಹವು 1997ರಲ್ಲಿ 18,700 ರೂ. ಕೋಟಿ ಇದ್ದದ್ದು 2013ರಲ್ಲಿ 2 ಲಕ್ಷ ಕೋಟಿ ರೂ.ಗೆ ಏರಿತು!

VISTARANEWS.COM


on

By

Dream Budget
Koo

ಪಳನಿಯಪ್ಪನ್ ಚಿದಂಬರಂ (Palaniappan Chidambaram) ಅವರು ಹಣಕಾಸು ಸಚಿವರಾಗಿದ್ದಾಗ ಅಂದರೆ 1997ರಲ್ಲಿ ಮಂಡಿಸಿದ ಕೇಂದ್ರ ಬಜೆಟ್ (central budget) ಅನ್ನು ಹಲವಾರು ದಿಟ್ಟ ಸುಧಾರಣೆಗಳಿಗಾಗಿ ಕನಸಿನ ಬಜೆಟ್ (Dream Budget) ಎಂದು ಕರೆಯಲಾಗುತ್ತದೆ.

ಈ ಬಜೆಟ್‌ನಲ್ಲಿ ವ್ಯಕ್ತಿಗಳಿಗೆ ಗರಿಷ್ಠ ಆದಾಯ ತೆರಿಗೆ ದರವನ್ನು ಶೇ. 30ಕ್ಕೆ ಇಳಿಸಲಾಯಿತು. ದೇಶೀಯ ಕಂಪನಿಗಳಿಗೆ ಆದಾಯ ತೆರಿಗೆ ದರವನ್ನು ಶೇ. 35ಕ್ಕೆ, ಗರಿಷ್ಠ ಕಸ್ಟಮ್ಸ್ ಸುಂಕವನ್ನು ಶೇ. 40ಕ್ಕೆ ಇಳಿಸಲಾಯಿತು ಮತ್ತು ಅಬಕಾರಿ ಸುಂಕದ ರಚನೆಯನ್ನು ಸರಳಗೊಳಿಸಲಾಯಿತು.

ಆ ಸಮಯದಲ್ಲಿ ಕೇಂದ್ರದಲ್ಲಿ ಸಂಯುಕ್ತ ರಂಗ ಸರ್ಕಾರ ಇತ್ತು. ಅಸ್ಥಿರತೆಯ ನಡುವೆಯೂ ಈ ಸರ್ಕಾರ ದಿಟ್ಟ ಸುಧಾರಣೆಗಳನ್ನು ಪರಿಚಯಿಸಲು ಮುಂದಾಗಿತ್ತು. ಯುನೈಟೆಡ್ ಫ್ರಂಟ್ 13 ಪಕ್ಷಗಳ ಮೈತ್ರಿಕೂಟವಾಗಿದ್ದು, ಕರ್ನಾಟಕದ ಎಚ್‌.ಡಿ. ದೇವೇಗೌಡ ಅವರು ಪ್ರಧಾನಿಯಾಗಿದ್ದರು. ಚಿದಂಬರಂ ವಿತ್ತ ಸಚಿವರಾಗಿದದ್ದರು. ಮೂಲತಃ ಕಾಂಗ್ರೆಸ್‌ನಲ್ಲಿದ್ದ ಪಿ ಚಿದಂಬರಂ 1996ರಲ್ಲಿ ಕಾಂಗ್ರೆಸ್‌ ತೊರೆದು ತಮಿಳು ಮಾನಿಲ ಕಾಂಗ್ರೆಸ್‌ನಲ್ಲಿ ಸಕ್ರಿಯರಾಗಿದ್ದರು. ವಿತ್ತ ಸಚಿವರಾಗಿದ್ದಾಗ ಪಿ ಚಿದಂಬರಂ ಅವರ ಹಿಂದಿದ್ದ ಶಕ್ತಿ ಮನಮೋಹನ್ ಸಿಂಗ್. ಅವರು 1991ರಲ್ಲಿ ಭಾರತದ ಆರ್ಥಿಕ ಸುಧಾರಣೆಗಳಿಗೆ ಕಾರಣರಾಗಿದ್ದರು. ಇದು ಹೊರಗಿನ ಪ್ರಪಂಚಕ್ಕೆ ಭಾರತದ ಆರ್ಥಿಕತೆಯನ್ನು ತೆರೆಯಿತು. ಆ ಸಮಯದಲ್ಲಿ ಭಾರತದ ಜಿಡಿಪಿ ಬೆಳವಣಿಗೆಯು ಅದರ ಆಗ್ನೇಯ ಏಷ್ಯಾದ ಇತರ ಮಿತ್ರ ರಾಷ್ಟ್ರಗಳಿಗಿಂತ ಕಡಿಮೆಯಿತ್ತು. ಇದು ಆರ್ಥಿಕ ಬೆಳವಣಿಗೆಯನ್ನು ಉತ್ತೇಜಿಸುವ ತರ್ಕಬದ್ಧ ತೆರಿಗೆಗಳಂತಹ ನೀತಿಗಳಿಗಾಗಿ ಭಾರತದ ಉದ್ಯಮ ಜಗತ್ತನ್ನು ಸೆಳೆಯಲು ಕಾರಣವಾಯಿತು.

ಫೋರ್ಬ್ಸ್ ವರದಿಯ ಪ್ರಕಾರ, ಚಿದಂಬರಂ ಅವರು ತಮ್ಮ ಬಜೆಟ್ ಅನ್ನು ಮಂಡಿಸಿದ ಅನಂತರ ಬಿಎಸ್‌ಇ ಸೆನ್ಸೆಕ್ಸ್ ಶೇ. 6.5ರಷ್ಟು ಏರಿಕೆಯಾಯಿತು. ಆ ಸಮಯದಲ್ಲಿ ಬಜೆಟ್ ಬಗ್ಗೆ ಹೆಚ್ಚು ಸಕಾರಾತ್ಮಕ ಪ್ರತಿಕ್ರಿಯೆ ವ್ಯಕ್ತವಾಯಿತು.


ಬಜೆಟ್‌ನಲ್ಲಿನ ಸುಧಾರಣೆಗಳೇನು?

ಚಿದಂಬರಂ ಅವರು ಗರಿಷ್ಠ ಆದಾಯ ತೆರಿಗೆ ದರದ ಸ್ಲ್ಯಾಬ್ ಅನ್ನು ಹಿಂದಿನ ಶೇ. 40ರಿಂದ ಶೇ. 30ಕ್ಕೆ ಇಳಿಸಿದರು. ದೇಶೀಯ ಕಂಪನಿಗಳಿಗೆ ಕಾರ್ಪೊರೇಟ್ ತೆರಿಗೆ ದರವನ್ನು ಶೇ.40ರಿಂದ ಶೇ. 35ಕ್ಕೆ ಇಳಿಸಿದರು. ಗರಿಷ್ಠ ಕಸ್ಟಮ್ಸ್ ಸುಂಕವನ್ನು ಶೇ. 50 ರಿಂದ ಶೇ. 40ಕ್ಕೆ ಇಳಿಸಲಾಯಿತು ಮತ್ತು ಅಬಕಾರಿ ಸುಂಕದ ರಚನೆಯನ್ನು ಸಹ ಸರಳಗೊಳಿಸಲಾಯಿತು.

ಹೆಚ್ಚುವರಿ ಶುಲ್ಕವನ್ನು ತೆಗೆದುಹಾಕಿ ರಾಯಲ್ಟಿ ದರಗಳನ್ನು ಕಡಿಮೆ ಮಾಡಿದರು. ವಿದೇಶಿ ಸಾಂಸ್ಥಿಕ ಹೂಡಿಕೆದಾರರ ಹೂಡಿಕೆ ಮಿತಿಯನ್ನು ಸಹ ಹೆಚ್ಚಿಸಲಾಯಿತು. ಪಿಎಸ್ ಯುಗಳಲ್ಲಿ ಮೊದಲ ಸುತ್ತಿನ ಹೂಡಿಕೆಗೆ ಅಡಿಪಾಯವನ್ನು ರಚಿಸಲಾಯಿತು.

ಚಿದಂಬರಂ ಅವರು ಹೊಸ ಮಾನದಂಡವನ್ನು ಪರಿಚಯಿಸಿದರು. ಆದಾಯ ತೆರಿಗೆ ಸಲ್ಲಿಕೆ ಸರಳಗೊಳಿಸುವ ಮೂಲಕ ಜನರು ಹೆಚ್ಚು ಪ್ರಮಾಣದಲ್ಲಿ ತೆರಿಗೆ ರಿಟರ್ನ್ಸ್ ಸಲ್ಲಿಸುವಂತೆ ಮಾಡಿದರು. ಆದಾಯದ ಸ್ವಯಂಪ್ರೇರಿತ ಬಹಿರಂಗಪಡಿಸುವಿಕೆಯ ಯೋಜನೆಯನ್ನು (VDIS) ಪರಿಚಯಿಸಲಾಯಿತು. ಈ ಸ್ವಯಂ ಘೋಷಿತ ಆದಾಯಕ್ಕೆ ಯಾವುದೇ ಬಡ್ಡಿ ಅಥವಾ ದಂಡವಿಲ್ಲದೆ ಪರಿಷ್ಕೃತ ತೆರಿಗೆ ದರವನ್ನು ವಿಧಿಸಲಾಗುತ್ತದೆ ಎಂಬುದನ್ನು ಮನವರಿಕೆ ಮಾಡಲಾಯಿತು. ಇದರಿಂದಾಗಿ ಆದಾಯ ಬಚ್ಚಿಟ್ಟವರು ನಿರ್ಭಯವಾಗಿ ಸಂಪತ್ತು ಘೋಷಿಸಿಕೊಂಡು ತೆರಿಗೆ ವ್ಯಾಪ್ತಿಗೆ ಬರುವಂತಾಯಿತು.

ಇದನ್ನೂ ಓದಿ: Union Budget 2024: ಬಜೆಟ್‌ಗೂ ಮೊದಲು, ನಂತರ ಹೂಡಿಕೆ ಮಾಡುವುದು ಲಾಭವೇ? ತಜ್ಞರು ಹೇಳೋದಿಷ್ಟು

ಏಕೆ ತೆರಿಗೆ ಸುಧಾರಣೆ ತರಲಾಯಿತು?

ಈ ʼಕನಸಿನ ಬಜೆಟ್‌ʼನಲ್ಲಿ ತೆರಿಗೆ ಸುಧಾರಣೆಗಳಿಗೆ ಆದ್ಯತೆ ನೀಡಲಾಯಿತು. ಯಾಕೆಂದರೆ ಕಡಿಮೆ ತೆರಿಗೆ ದರಗಳು ಹೆಚ್ಚಿನ ಜನರಿಗೆ ತೆರಿಗೆ ಪಾವತಿ ಮಾಡಲು ಪ್ರೇರೇಪಿಸುತ್ತದೆ ಎಂಬುದು ಇದರ ಹಿಂದಿನ ಆಶಯವಾಗಿತ್ತು. ಇದು ಹೆಚ್ಚು ಜನರು ಮತ್ತು ಕಂಪನಿಗಳು ತೆರಿಗೆ ಪಾವತಿಸುವಂತೆ ಮಾಡುತ್ತದೆ ಎಂದು ಚಿದಂಬರಂ ನಂಬಿದ್ದರು.

ಏನು ಪರಿಣಾಮ?

ಕನಸಿನ ಬಜೆಟ್ ಪರಿಣಾಮವಾಗಿ ಆದಾಯ ತೆರಿಗೆ ಸಂಗ್ರಹವು 1997ರಲ್ಲಿ 18,700 ರೂ. ಕೋಟಿ ಇದ್ದದ್ದು 2013ರಲ್ಲಿ 2 ಲಕ್ಷ ಕೋಟಿ ರೂ.ಗೆ ಏರಿತು! ಇದು ಕನಸಿನ ಬಜೆಟ್‌ನ ಅತ್ಯಂತ ಮಹತ್ವದ ದೀರ್ಘಾವಧಿಯ ಫಲಿತಾಂಶವಾಗಿದೆ. ಹಾಗಾಗಿ ಭಾರತದ ಬಜೆಟ್‌ ಇತಿಹಾಸದಲ್ಲಿ 1997ರ ಆಯವ್ಯಯ ಮಂಡನೆ ಐತಿಹಾಸಿಕವಾಗಿದೆ.

Continue Reading

ದೇಶ

Union Budget 2024: ಬಜೆಟ್‌ಗೂ ಮೊದಲು, ನಂತರ ಹೂಡಿಕೆ ಮಾಡುವುದು ಲಾಭವೇ? ತಜ್ಞರು ಹೇಳೋದಿಷ್ಟು

Union Budget 2024: ನಿರ್ಮಲಾ ಸೀತಾರಾಮನ್‌ ಅವರು ಬಜೆಟ್‌ ಮಂಡಿಸಲು ಸಿದ್ಧತೆ ನಡೆಸುತ್ತಿದ್ದಾರೆ. ಜುಲೈ 23ರಂದು ದಿನಗಳಲ್ಲಿ ಬಜೆಟ್‌ ಮಂಡನೆ ಮಾಡಲಿದ್ದಾರೆ. ಇನ್ನು, ಬಜೆಟ್‌ನಲ್ಲಿ ಮಧ್ಯಮ ವರ್ಗದವರ ಅನುಕೂಲಕ್ಕಾಗಿ ಹೊಸ ತೆರಿಗೆ ಸ್ಲ್ಯಾಬ್‌ಅನ್ನು ಪರಿಚಯಿಸಲಾಗುತ್ತದೆ ಎಂದು ತಿಳಿದುಬಂದಿದೆ. ಇದರ ಜತೆಗೆ ಸ್ಟಾಂಡರ್ಡ್‌ ಡಿಡಕ್ಷನ್‌ ಮೊತ್ತವನ್ನೂ ಏರಿಕೆ ಮಾಡುವ ನಿರೀಕ್ಷೆ ಇದೆ. ಇನ್ನು ಷೇರುಪೇಟೆಯಲ್ಲಿ ಹೂಡಿಕೆ ಮಾಡುವ ಕುರಿತು ಕೂಡ ಚರ್ಚೆಗಳು ನಡೆಯುತ್ತಿವೆ.

VISTARANEWS.COM


on

Union Budget 2024
Koo

ನವದೆಹಲಿ: ಎನ್‌ಡಿಎ ಸರ್ಕಾರವು (NDA Government) ಕೇಂದ್ರದಲ್ಲಿ ಸತತ ಮೂರನೇ ಬಾರಿಗೆ ಅಧಿಕಾರಕ್ಕೆ ಬಂದಿದ್ದು, ಮೂರನೇ ಅವಧಿಯ ಮೊದಲ ಬಜೆಟ್‌ಅನ್ನು (Union Budget 2024) ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ (Nirmala Sitharaman) ಅವರು ಜುಲೈ 23ರಂದು ಮಂಡಿಸಲಿದ್ದಾರೆ. ಬಡವರು, ಮಧ್ಯಮ ವರ್ಗದವರಿಗೆ ಬಜೆಟ್‌ ಕುರಿತು ಭಾರಿ ನಿರೀಕ್ಷೆಗಳಿವೆ. ಇನ್ನು, ಬಜೆಟ್‌ಗೂ ಕೆಲ ದಿನಗಳ ಮೊದಲು ಹಾಗೂ ನಂತರ ಷೇರು ಮಾರುಕಟ್ಟೆಯಲ್ಲಿ (Stock Market) ಹೂಡಿಕೆ ಮಾಡುವ ಕುರಿತು ಚರ್ಚೆಗಳು ನಡೆಯುತ್ತಿದ್ದು, ಷೇರುಪೇಟೆ ತಜ್ಞರು ಈ ಕುರಿತು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ತಜ್ಞರು ಹೇಳುವುದಿಷ್ಟು…

ಷೇರುಪೇಟೆ ಬ್ರೋಕರೇಜ್‌ ಕಂಪನಿಯಾದ ಮಾರ್ಗನ್‌ ಸ್ಟ್ಯಾನ್ಲೆಯ ಹೂಡಿಕೆ ತಜ್ಞರು ಹಲವು ಸಲಹೆಗಳನ್ನು ನೀಡಿದ್ದಾರೆ. “ಕಳೆದ 30 ವರ್ಷಗಳ ಮಾಹಿತಿಯನ್ನು ಅವಲೋಕಿಸಿದರೆ, ಬಜೆಟ್‌ ಮಂಡನೆಯಾದ 30 ದಿನಗಳಲ್ಲಿ ಷೇರುಪೇಟೆಯಲ್ಲಿ ಶೇ.80ರಷ್ಟು ಬೆಳವಣಿಗೆ ಇರುತ್ತದೆ. ಈ ಅವಧಿಯಲ್ಲಿ ಎರಡು ಅಥವಾ ಮೂರು ಬಾರಿ ಮಾತ್ರ ಷೇರುಪೇಟೆಯಲ್ಲಿ ಕುಸಿತ ಉಂಟಾಗುತ್ತದೆ. 30 ವರ್ಷಗಳಲ್ಲಿ ಎರಡು ಬಾರಿ ಮಾತ್ರ ಬಜೆಟ್‌ಗೂ ಮುನ್ನ ಹಾಗೂ ನಂತರದಲ್ಲಿ ಷೇರುಪೇಟೆಯಲ್ಲಿ ಹೂಡಿಕೆದಾರರಿಗೆ ಲಾಭವಾಗಿತ್ತು” ಎಂದಿದ್ದಾರೆ. ಅದರಂತೆ, ಬಜೆಟ್‌ಗೂ ಮುನ್ನ ಹೂಡಿಕೆ ಮಾಡುವುದಕ್ಕಿಂತ ಬಜೆಟ್‌ ನಂತರ ಹೂಡಿಕೆ ಮಾಡುವುದು ಲೇಸು ಎಂಬುದಾಗಿ ತಜ್ಞರು ಸೂಚಿಸಿದ್ದಾರೆ.

Share Market

ವಿತ್ತೀಯ ಕೊರತೆಯು ಶೇ.5ಕ್ಕಿಂತ ಕಡಿಮೆ ಇದ್ದರೆ, ಷೇರು ಪೇಟೆ ಮಂದಿಗೆ ಸಂತಸ ತರುವುದಿಲ್ಲ. ಹಾಗೊಂದು ವೇಳೆ ಹೂಡಿಕೆ ಮಾಡುವುದಿದ್ದರೆ, ಉದ್ಯಮಗಳು ಹಾಗೂ ತಂತ್ರಜ್ಞಾನ ಕ್ಷೇತ್ರಗಳ ಮೇಲೆ ಹೂಡಿಕೆ ಮಾಡುವುದು ಒಳಿತು. ಒಟ್ಟಿನಲ್ಲಿ ಬಜೆಟ್‌ ನಂತರ ದಿಢೀರನೆ ಏರಿಕೆ ಕಾಣುವ ಷೇರುಪೇಟೆಯು ಆಗಾಗ ಕುಸಿತದ ಮೂಲಕ ಹೂಡಿಕೆದಾರರಿಗೆ ಆಘಾತ ನೀಡಲಿದೆ ಎಂದು ತಿಳಿಸಿದ್ದಾರೆ.

ಬಜೆಟ್‌ ಕುರಿತ ನಿರೀಕ್ಷೆಗಳು ಏನೇನು?

“ಬಜೆಟ್‌ನಲ್ಲಿ ಕೇಂದ್ರ ಸರ್ಕಾರವು ಹೊಸ ತೆರಿಗೆ ಸ್ಲ್ಯಾಬ್‌ ಘೋಷಣೆ ಮಾಡುತ್ತದೆ. ಆದಾಯ ತೆರಿಗೆ ವಿನಾಯಿತಿ ಮಿತಿಯನ್ನು 5 ಲಕ್ಷ ರೂ.ಗೆ ಏರಿಸುವ ಜತೆಗೆ, 15 ಲಕ್ಷ ರೂ.ಗಿಂತ ಹೆಚ್ಚಿನ ಆದಾಯ ಗಳಿಸುವವರಿಗೆ ಹಲವು ರೀತಿಯ ಡಿಡಕ್ಷನ್‌ಗಳ ಮೂಲಕ ತೆರಿಗೆ ಹೊರೆಯನ್ನು ಕಡಿಮೆ ಮಾಡಿಕೊಳ್ಳಬಹುದಾಗಿದೆ” ಎಂದು ಉನ್ನತ ಮೂಲಗಳು ತಿಳಿಸಿವೆ. ಅಷ್ಟೇ ಅಲ್ಲ, 15 ಲಕ್ಷ ರೂ.ಗಿಂತ ಹೆಚ್ಚಿನ ಆದಾಯ ಇರುವವರಿಗೆ ಈಗ ಇರುವ ಶೇ.30ರ ತೆರಿಗೆ ಬದಲು ಶೇ.25ರಷ್ಟು ತೆರಿಗೆ ವಿಧಿಸಲಾಗುತ್ತದೆ. ಇದು ಕೂಡ ಹೊಸ ಸ್ಲ್ಯಾಬ್‌ನಲ್ಲಿ ಇರಲಿದೆ ಎಂದು ಹೇಳಲಾಗುತ್ತಿದೆ.

Union Budget 2024

ನಿರ್ಮಲಾ ಸೀತಾರಾಮನ್‌ ಅವರು ಫೆಬ್ರವರಿ 1ರಂದು ನರೇಂದ್ರ ಮೋದಿ ನೇತೃತ್ವದ ಎರಡನೇ ಅವಧಿಯ ಕೊನೆಯ ಬಜೆಟ್‌ ಮಂಡಿಸಿದ್ದರು. ಇದು ಮಧ್ಯಂತರ ಬಜೆಟ್‌ ಆದ ಕಾರಣ ಮಹತ್ವದ ಘೋಷಣೆಗಳನ್ನು ಮಾಡಿರಲಿಲ್ಲ. ಆದರೆ, ನೂತನ ಸರ್ಕಾರ ರಚನೆಯಾಗಿದ್ದು, ಪೂರ್ಣ ಪ್ರಮಾಣದ ಬಜೆಟ್‌ ಮಂಡಿಸಲಾಗುತ್ತದೆ. ಉದ್ಯೋಗ ಸೃಷ್ಟಿ, ಬಡವರು ಹಾಗೂ ಮಧ್ಯಮ ವರ್ಗದವರಿಗೆ ಕೊಡುಗೆ, ತೆರಿಗೆ ಹೊರೆ ಇಳಿಸುವುದು ಸೇರಿ ಹಲವು ಅಂಶಗಳು ಮೂರನೇ ಅವಧಿಯ ಸರ್ಕಾರದ ಮೊದಲ ಬಜೆಟ್‌ನ ಪ್ರಮುಖ ಅಂಶಗಳಾಗಿವೆ ಎಂದು ತಿಳಿದುಬಂದಿದೆ.

ಹೊಸ ದಾಖಲೆ ಬರೆಯಲಿದ್ದಾರೆ ನಿರ್ಮಲಾ

ನಿರ್ಮಲಾ ಸೀತಾರಾಮನ್‌ ಅವರು ಇದೇ ತಿಂಗಳು ಪೂರ್ಣಪ್ರಮಾಣದ ಬಜೆಟ್‌ ಮಂಡಿಸಿದರೆ ಹೊಸ ದಾಖಲೆ ಬರೆಯಲಿದ್ದಾರೆ. ಇದುವರೆಗೆ ನಿರ್ಮಲಾ ಸೀತಾರಾಮನ್‌ ಅವರು ಹಣಕಾಸು ಸಚಿವೆಯಾಗಿ ಐದು ಪೂರ್ಣ ಪ್ರಮಾಣದ ಹಾಗೂ ಒಂದು ಮಧ್ಯಂತರ ಬಜೆಟ್‌ ಮಂಡಿಸಿದ್ದಾರೆ. ಈಗ ಏಳನೇ ಬಾರಿಗೆ ಬಜೆಟ್‌ ಮಂಡಿಸಿದರೆ, ದೇಶದ ಇತಿಹಾಸದಲ್ಲಿಯೇ ಅತಿ ಹೆಚ್ಚು ಬಾರಿ ಬಜೆಟ್‌ ಮಂಡಿಸಿದ ಖ್ಯಾತಿಗೆ ಭಾಜನರಾಗಲಿದ್ದಾರೆ. ಮೊರಾರ್ಜಿ ದೇಸಾಯಿ ಅವರು ಆರು ಬಾರಿ ಬಜೆಟ್‌ ಮಂಡಿಸಿದ ದಾಖಲೆ ಮಾಡಿದ್ದಾರೆ. ಇದನ್ನು ನಿರ್ಮಲಾ ಸೀತಾರಾಮನ್‌ ಅವರು ಮುರಿಯಲಿದ್ದಾರೆ.

ಇದನ್ನೂ ಓದಿ: Share Market Crash: ಷೇರು ಮಾರುಕಟ್ಟೆಯಲ್ಲಿ ರಕ್ತಪಾತ; ಹೂಡಿಕೆದಾರರಿಗೆ 7 ಲಕ್ಷ ಕೋಟಿ ರೂ. ನಷ್ಟ

Continue Reading

ದೇಶ

Pension Under NPS:‌ ಎನ್‌ಪಿಎಸ್‌ ಅಡಿಯಲ್ಲಿ ಕೇಂದ್ರ ನೌಕರರಿಗೆ ವೇತನದ ಅರ್ಧದಷ್ಟು ಪಿಂಚಣಿ; ಶೀಘ್ರವೇ ಆದೇಶ?

Pension Under NPS: ಕೇಂದ್ರ ನೌಕರರಿಗೆ ಪಿಂಚಣಿ ನೀಡುವ ಕುರಿತು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಹಣಕಾಸು ಕಾರ್ಯದರ್ಶಿ ಟಿ.ವಿ.ಸೋಮನಾಥನ್‌ ಅವರ ನೇತೃತ್ವದಲ್ಲಿ ಸಮಿತಿಯೊಂದು ರಚಿಸಿರುವ ಕಾರಣ ಶೀಘ್ರದಲ್ಲೇ ಘೋಷಣೆ ಮಾಡುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ. ಜಾಗತಿಕವಾಗಿ ನೌಕರರಿಗೆ ಸಿಗುತ್ತಿರುವ ಪಿಂಚಣಿ ಹಾಗೂ ಆಂಧ್ರಪ್ರದೇಶದಂತಹ ರಾಜ್ಯಗಳಲ್ಲಿ ಮಾಡಿರುವ ಬದಲಾವಣೆಗಳನ್ನು ಸೋಮನಾಥನ್‌ ಸಮಿತಿಯು ಅಧ್ಯಯನ ಮಾಡಿದೆ.

VISTARANEWS.COM


on

Pension Under NPS
Koo

ನವದೆಹಲಿ: ದೇಶದಲ್ಲಿ ಹಳೆಯ ಪಿಂಚಣಿ ಯೋಜನೆಯನ್ನು (Old Pension Scheme) ಮತ್ತೆ ಜಾರಿಗೆ ತರುವಂತೆ ಒತ್ತಾಯ ಕೇಳಿಬರುತ್ತಿವೆ. ಕೇಂದ್ರ ಸರ್ಕಾರವು ಹಳೆಯ ಪಿಂಚಣಿ ಯೋಜನೆಯ ಜಾರಿಗೆ ಮನಸ್ಸು ಮಾಡುತ್ತಿಲ್ಲ. ಆದರೆ, ರಾಷ್ಟ್ರೀಯ ಪಿಂಚಣಿ ಯೋಜನೆ (National Pension Scheme) ಅಡಿಯಲ್ಲಿ ಕೇಂದ್ರ ಸರ್ಕಾರಿ ನೌಕರರಿಗೆ (Central Government Employees) ನಿವೃತ್ತಿಯ ಬಳಿಕ ಅವರ ಕೊನೆಯ ಸಂಬಳದ ಶೇ.50ರಷ್ಟು ಮೊತ್ತವನ್ನು ಪಿಂಚಣಿಯಾಗಿ ನೀಡಲು ಕೇಂದ್ರ ಸರ್ಕಾರ ಮುಂದಾಗಿದೆ ಎಂಬುದಾಗಿ ವರದಿಗಳು ತಿಳಿಸಿವೆ.

ಕೇಂದ್ರ ನೌಕರರಿಗೆ ಪಿಂಚಣಿ ನೀಡುವ ಕುರಿತು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಹಣಕಾಸು ಕಾರ್ಯದರ್ಶಿ ಟಿ.ವಿ.ಸೋಮನಾಥನ್‌ ಅವರ ನೇತೃತ್ವದಲ್ಲಿ ಸಮಿತಿಯೊಂದು ರಚಿಸಿರುವ ಕಾರಣ ಶೀಘ್ರದಲ್ಲೇ ಘೋಷಣೆ ಮಾಡುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ. ಜಾಗತಿಕವಾಗಿ ನೌಕರರಿಗೆ ಸಿಗುತ್ತಿರುವ ಪಿಂಚಣಿ ಹಾಗೂ ಆಂಧ್ರಪ್ರದೇಶದಂತಹ ರಾಜ್ಯಗಳಲ್ಲಿ ಮಾಡಿರುವ ಬದಲಾವಣೆಗಳನ್ನು ಸೋಮನಾಥನ್‌ ಸಮಿತಿಯು ಅಧ್ಯಯನ ಮಾಡಿದೆ. ಹಾಗಾಗಿ. ಶೀಘ್ರದಲ್ಲೇ ಕೇಂದ್ರ ಸರ್ಕಾರವು ರಾಷ್ಟ್ರೀಯ ಪಿಂಚಣಿ ಯೋಜನೆ ಅಡಿಯಲ್ಲಿ 25-30 ವರ್ಷಗಳವರೆಗೆ ಸರ್ಕಾರಿ ಸೇವೆ ಸಲ್ಲಿಸಿದ ನೌಕರರಿಗೆ ಮಾಸಿಕ ಅವರ ವೇತನದ ಅರ್ಧದಷ್ಟು ಮೊತ್ತವನ್ನು ಪಿಂಚಣಿಯಾಗಿ ನೀಡಲು ಘೋಷಣೆ ಮಾಡಲಾಗುತ್ತದೆ ಎಂದು ಹೇಳಲಾಗುತ್ತಿದೆ.

ಪಿಂಚಣಿ ಜತೆಗೆ ಮತ್ತೊಂದು ಸೌಲಭ್ಯ

ಕೇಂದ್ರ ಸರ್ಕಾರಿ ನೌಕರರು ಸುಮಾರು 25-30 ವರ್ಷ ಸೇವೆ ಸಲ್ಲಿಸಿ, ನಿವೃತ್ತಿಯಾದ ಬಳಿಕ ಪಿಂಚಣಿ ಪಡೆಯುವ ಜತೆಗೆ ನಿಗದಿತ ಮೊತ್ತವನ್ನು ಕೂಡ ನೀಡಲು ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ ಎಂದು ತಿಳಿದುಬಂದಿದೆ. ನಿವೃತ್ತಿಯ ಬಳಿಕ ಕೇಂದ್ರ ಸರ್ಕಾರಿ ನೌಕರರು ಆರ್ಥಿಕವಾಗಿ ಸ್ಥಿರವಾಗಿರಬೇಕು ಎಂಬ ದೃಷ್ಟಿಯಿಂದ ಸರ್ಕಾರವು ನಿಗದಿತ ಮೊತ್ತವನ್ನು ನೀಡಲು ಚಿಂತನೆ ನಡೆಸಿದೆ. ಈ ಕುರಿತು ಬಜೆಟ್‌ನಲ್ಲಿಯೇ ನಿರ್ಮಲಾ ಸೀತಾರಾಮನ್‌ ಅವರು ಘೋಷಣೆ ಮಾಡಲಿದ್ದಾರೆ ಎಂದು ತಿಳಿದುಬಂದಿದೆ.

ಸ್ಟಾಂಡರ್ಡ್‌ ಡಿಡಕ್ಷನ್‌ ಮೊತ್ತ ಏರಿಕೆ?

ಸದ್ಯ, ಹೊಸ ಹಾಗೂ ಹಳೆಯ ತೆರಿಗೆ ಪದ್ಧತಿಯಲ್ಲೂ 50 ಸಾವಿರ ರೂ. ಸ್ಟಾಂಡರ್ಡ್‌ ಡಿಡಕ್ಷನ್‌ ಇದೆ. ಇದನ್ನು, 70 ಸಾವಿರ ರೂ.ಗೆ ಏರಿಕೆ ಮಾಡಿದರೆ, ಸಂಬಳದಾರರು ಹೆಚ್ಚಿನ ತೆರಿಗೆ ಹಣವನ್ನು ಉಳಿತಾಯ ಮಾಡಬಹುದಾಗಿದೆ. ಹಣದುಬ್ಬರ ಏರಿಕೆ ಸೇರಿ ಹಲವು ಕಾರಣಗಳಿಂದಾಗಿ ಸ್ಟಾಂಡರ್ಡ್‌ ಡಿಡಕ್ಷನ್‌ ಅಥವಾ ತೆರಿಗೆ ವಿನಾಯಿತಿ ಮೊತ್ತವನ್ನು ಏರಿಕೆ ಮಾಡಬೇಕು ಎಂಬುದು ಬೇಡಿಕೆಯಾಗಿದೆ. ಹಾಗಾಗಿ, ಮೊತ್ತವನ್ನು 70 ಸಾವಿರ ರೂ.ಗೆ ಏರಿಕೆ ಮಾಡಲು ನಿರ್ಮಲಾ ಸೀತಾರಾಮನ್‌ ಅವರು ಚಿಂತನೆ ನಡೆಸಿದ್ದಾರೆ ಎನ್ನಲಾಗಿದೆ. ಸ್ಟಾಂಡರ್ಡ್‌ ಡಿಡಕ್ಷನ್‌ ಎಂಬುದು ತೆರಿಗೆ ವಿನಾಯಿತಿ ಆಗಿದ್ದು, ಇದಕ್ಕಾಗಿ ನೌಕರರು ಹೂಡಿಕೆ ಮಾಡಬೇಕಿಲ್ಲ. ತೆರಿಗೆ ಪಾವತಿಸಲು ಅರ್ಹವಿರುವವರು ಸ್ಟಾಂಡರ್ಡ್‌ ಡಿಡಕ್ಷನ್‌ ಮೊತ್ತದ ಅಡಿಯಲ್ಲಿ ವಿನಾಯಿತಿ ಪಡೆಯಲಿದ್ದಾರೆ.

ಇದನ್ನೂ ಓದಿ: Retirement Planning: ನಿವೃತ್ತಿ ಬಳಿಕ 1 ಲಕ್ಷ ರೂ. ಪಿಂಚಣಿ ಗಳಿಸೋದು ಹೇಗೆ? ಸುಲಭ ಯೋಜನೆಯ ಮಾಹಿತಿ ಇಲ್ಲಿದೆ

Continue Reading

ದೇಶ

Union Budget 2024: ಕೇಂದ್ರ ಬಜೆಟ್‌ನಲ್ಲಿ ಉದ್ಯೋಗ, ಗ್ರಾಮೀಣಾಭಿವೃದ್ಧಿಗೆ ಒತ್ತು-ಅರ್ಥಶಾಸ್ತ್ರಜ್ಞರು ಹೇಳೋದೇನು?

Union Budget 2024: ಗೋಲ್ಡ್‌ಮನ್ ಅರ್ಥಶಾಸ್ತ್ರಜ್ಞರು ಸರ್ಕಾರವು ಮಧ್ಯಂತರ ಬಜೆಟ್‌ನಲ್ಲಿ ನಿಗದಿಪಡಿಸಿದ GDPಯ 5.1% ರಷ್ಟು ಹಣಕಾಸಿನ ಕೊರತೆಯ ಗುರಿಗೆ ಬದ್ಧವಾಗಿರುತ್ತದೆ ಎಂದು ನಿರೀಕ್ಷೆ ಇದೆ. ಕಾರ್ಮಿಕ-ತೀವ್ರ ಉತ್ಪಾದನೆ, ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ಯಮಗಳಿಗೆ ಸಾಲ, ಜಾಗತಿಕ ಸಾಮರ್ಥ್ಯ ಕೇಂದ್ರಗಳನ್ನು ವಿಸ್ತರಿಸುವ ಮೂಲಕ ಸೇವಾ ರಫ್ತಿನ ಮೇಲೆ ನಿರಂತರ ಗಮನ ಮತ್ತು ದೇಶೀಯ ಆಹಾರ ಪೂರೈಕೆ ಸರಪಳಿಯ ಮೇಲೆ ಒತ್ತು ನೀಡುವುದರ ಮೂಲಕ ಉದ್ಯೋಗ ಸೃಷ್ಟಿಗೆ ಒತ್ತು ನೀಡುವುದನ್ನು ನಾವು ನೋಡುತ್ತೇವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್ ಶಾಂತನು ಸೇನ್‌ಗುಪ್ತಾ ಉಲ್ಲೇಖಿಸಿದೆ.

VISTARANEWS.COM


on

Union Budget 2024
Koo

ಹೊಸದಿಲ್ಲಿ: ಮೂರನೇ ಬಾರಿ ಅಧಿಕಾರಕ್ಕೆ ಬಂದಿರುವ ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ಮೊದಲ ಬಜೆಟ್‌ಗೆ (Union Budget 2024) ದಿನಾಂಕ ದಿನಗಣನೆ ಶುರುವಾಗಿದೆ. ಜುಲೈ 23ರಿಂದ ಆಗಸ್ಟ್‌ 12ರವರೆಗೆ ಬಜೆಟ್‌ ಅಧಿವೇಶನ (Union Budget Session) ನಡೆಯಲಿದ್ದು, ಜುಲೈ 23ರಂದು ನಿರ್ಮಲಾ ಸೀತಾರಾಮನ್‌ (Nirmala Sitharaman) ಅವರು ದಾಖಲೆಯ ಏಳನೇ ಬಾರಿಗೆ ಬಜೆಟ್‌ ಮಂಡಿಸಲಿದ್ದಾರೆ. ಈ ಬಾರಿ ಬಜೆಟ್‌ ಉದ್ಯೋಗ ಸೃಷ್ಟಿ ಮತ್ತು ಗ್ರಾಮೀಣಾಭಿವೃದ್ಧಿಯನ್ನು ಕೇಂದ್ರೀಕರಿಸುವ ಸಾಧ್ಯತೆ ಇದೆ ಎಂದು ಗೋಲ್ಡ್‌ಮ್ಯನ್‌ ಸ್ಯಾಚ್ಸ್‌ನ ಅರ್ಥಶಾಸ್ತ್ರಜ್ಞರು ಅಂದಾಜಿಸಿದ್ದಾರೆ.

ಗೋಲ್ಡ್‌ಮನ್ ಅರ್ಥಶಾಸ್ತ್ರಜ್ಞರು ಸರ್ಕಾರವು ಮಧ್ಯಂತರ ಬಜೆಟ್‌ನಲ್ಲಿ ನಿಗದಿಪಡಿಸಿದ GDPಯ 5.1% ರಷ್ಟು ಹಣಕಾಸಿನ ಕೊರತೆಯ ಗುರಿಗೆ ಬದ್ಧವಾಗಿರುತ್ತದೆ ಎಂದು ನಿರೀಕ್ಷೆ ಇದೆ. ಕಾರ್ಮಿಕ-ತೀವ್ರ ಉತ್ಪಾದನೆ, ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ಯಮಗಳಿಗೆ ಸಾಲ, ಜಾಗತಿಕ ಸಾಮರ್ಥ್ಯ ಕೇಂದ್ರಗಳನ್ನು ವಿಸ್ತರಿಸುವ ಮೂಲಕ ಸೇವಾ ರಫ್ತಿನ ಮೇಲೆ ನಿರಂತರ ಗಮನ ಮತ್ತು ದೇಶೀಯ ಆಹಾರ ಪೂರೈಕೆ ಸರಪಳಿಯ ಮೇಲೆ ಒತ್ತು ನೀಡುವುದರ ಮೂಲಕ ಉದ್ಯೋಗ ಸೃಷ್ಟಿಗೆ ಒತ್ತು ನೀಡುವುದನ್ನು ನಾವು ನೋಡುತ್ತೇವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್ ಶಾಂತನು ಸೇನ್‌ಗುಪ್ತಾ ಉಲ್ಲೇಖಿಸಿದೆ.

ಈ ಬಾರಿ ಬಜೆಟ್‌ನಲ್ಲಿ ವಾಣಿಜ್ಯ ವಿಮಾನ ತಯಾರಿಕೆಯ ಜೊತೆಗೆ ಆಟಿಕೆಗಳು, ಜವಳಿ ಮತ್ತು ಉಡುಪುಗಳ ತಯಾರಿಕೆಯಂತಹ ಕೈಗಾರಿಕಾ ವಲಯಗಳಿಗೆ ಹಣಕಾಸಿನ ಪ್ರೋತ್ಸಾಹ ನೀಡುವ ನಿರೀಕ್ಷೆ ಇದೆ ಎಂದು ಅರ್ಥಶಾಸ್ತ್ರಜ್ಞರು ಹೇಳಿದ್ದಾರೆ.

ಜುಲೈ 22ರಿಂದ ಆಗಸ್ಟ್‌ 12ರವರೆಗೆ ಬಜೆಟ್‌ ಅಧಿವೇಶನ ನಡೆಯಲಿದೆ. ಜುಲೈ 23ರಂದು ಬಜೆಟ್‌ ಮಂಡಿಸಲಾಗುತ್ತದೆ. ಬಜೆಟ್‌ನಲ್ಲಿ ಕೇಂದ್ರ ಸರ್ಕಾರವು ಹೊಸ ತೆರಿಗೆ ಸ್ಲ್ಯಾಬ್‌ ಘೋಷಣೆ ಮಾಡುತ್ತದೆ. ಆದಾಯ ತೆರಿಗೆ ವಿನಾಯಿತಿ ಮಿತಿಯನ್ನು 5 ಲಕ್ಷ ರೂ.ಗೆ ಏರಿಸುವ ಜತೆಗೆ, 15 ಲಕ್ಷ ರೂ.ಗಿಂತ ಹೆಚ್ಚಿನ ಆದಾಯ ಗಳಿಸುವವರಿಗೆ ಹಲವು ರೀತಿಯ ಡಿಡಕ್ಷನ್‌ಗಳ ಮೂಲಕ ತೆರಿಗೆ ಹೊರೆಯನ್ನು ಕಡಿಮೆ ಮಾಡಿಕೊಳ್ಳಬಹುದಾಗಿದೆ” ಎಂದು ಉನ್ನತ ಮೂಲಗಳು ತಿಳಿಸಿವೆ. ಅಷ್ಟೇ ಅಲ್ಲ, 15 ಲಕ್ಷ ರೂ.ಗಿಂತ ಹೆಚ್ಚಿನ ಆದಾಯ ಇರುವವರಿಗೆ ಈಗ ಇರುವ ಶೇ.30ರ ತೆರಿಗೆ ಬದಲು ಶೇ.25ರಷ್ಟು ತೆರಿಗೆ ವಿಧಿಸಲಾಗುತ್ತದೆ. ಇದು ಕೂಡ ಹೊಸ ಸ್ಲ್ಯಾಬ್‌ನಲ್ಲಿ ಇರಲಿದೆ ಎಂದು ಹೇಳಲಾಗುತ್ತಿದೆ.

ನಿರ್ಮಲಾ ಸೀತಾರಾಮನ್‌ ಅವರು ಫೆಬ್ರವರಿ 1ರಂದು ನರೇಂದ್ರ ಮೋದಿ ನೇತೃತ್ವದ ಎರಡನೇ ಅವಧಿಯ ಕೊನೆಯ ಬಜೆಟ್‌ ಮಂಡಿಸಿದ್ದರು. ಇದು ಮಧ್ಯಂತರ ಬಜೆಟ್‌ ಆದ ಕಾರಣ ಮಹತ್ವದ ಘೋಷಣೆಗಳನ್ನು ಮಾಡಿರಲಿಲ್ಲ. ಆದರೆ, ನೂತನ ಸರ್ಕಾರ ರಚನೆಯಾಗಿದ್ದು, ಪೂರ್ಣ ಪ್ರಮಾಣದ ಬಜೆಟ್‌ ಮಂಡಿಸಲಾಗುತ್ತದೆ. ಉದ್ಯೋಗ ಸೃಷ್ಟಿ, ಬಡವರು ಹಾಗೂ ಮಧ್ಯಮ ವರ್ಗದವರಿಗೆ ಕೊಡುಗೆ, ತೆರಿಗೆ ಹೊರೆ ಇಳಿಸುವುದು ಸೇರಿ ಹಲವು ಅಂಶಗಳು ಮೂರನೇ ಅವಧಿಯ ಸರ್ಕಾರದ ಮೊದಲ ಬಜೆಟ್‌ನ ಪ್ರಮುಖ ಅಂಶಗಳಾಗಿವೆ ಎಂದು ತಿಳಿದುಬಂದಿದೆ.

ಹೊಸ ದಾಖಲೆ ಬರೆಯಲಿದ್ದಾರೆ ನಿರ್ಮಲಾ

ನಿರ್ಮಲಾ ಸೀತಾರಾಮನ್‌ ಅವರು ಇದೇ ತಿಂಗಳು ಪೂರ್ಣಪ್ರಮಾಣದ ಬಜೆಟ್‌ ಮಂಡಿಸಿದರೆ ಹೊಸ ದಾಖಲೆ ಬರೆಯಲಿದ್ದಾರೆ. ಇದುವರೆಗೆ ನಿರ್ಮಲಾ ಸೀತಾರಾಮನ್‌ ಅವರು ಹಣಕಾಸು ಸಚಿವೆಯಾಗಿ ಐದು ಪೂರ್ಣ ಪ್ರಮಾಣದ ಹಾಗೂ ಒಂದು ಮಧ್ಯಂತರ ಬಜೆಟ್‌ ಮಂಡಿಸಿದ್ದಾರೆ. ಈಗ ಏಳನೇ ಬಾರಿಗೆ ಬಜೆಟ್‌ ಮಂಡಿಸಿದರೆ, ದೇಶದ ಇತಿಹಾಸದಲ್ಲಿಯೇ ಅತಿ ಹೆಚ್ಚು ಬಾರಿ ಬಜೆಟ್‌ ಮಂಡಿಸಿದ ಖ್ಯಾತಿಗೆ ಭಾಜನರಾಗಲಿದ್ದಾರೆ. ಮೊರಾರ್ಜಿ ದೇಸಾಯಿ ಅವರು ಆರು ಬಾರಿ ಬಜೆಟ್‌ ಮಂಡಿಸಿದ ದಾಖಲೆ ಮಾಡಿದ್ದಾರೆ. ಇದನ್ನು ನಿರ್ಮಲಾ ಸೀತಾರಾಮನ್‌ ಅವರು ಮುರಿಯಲಿದ್ದಾರೆ.

ಇದನ್ನೂ ಓದಿ:Gururaj Gantihole: ಬೈಂದೂರಿನ ನೆರೆ ಸಂತ್ರಸ್ತ ಪ್ರದೇಶಗಳಿಗೆ ಶಾಸಕ ಗುರುರಾಜ ಗಂಟಿಹೊಳೆ ಭೇಟಿ; ಪರಿಹಾರ ನೀಡಲು ಸೂಚನೆ

Continue Reading
Advertisement
Samsung Launches Galaxy Watch 7 Galaxy Watch Ultra Buds 3 Series
ವಾಣಿಜ್ಯ27 mins ago

Samsung Galaxy: ಸ್ಯಾಮ್‌ಸಂಗ್‌ನಿಂದ ಗ್ಯಾಲಕ್ಸಿ ವಾಚ್7, ಗ್ಯಾಲಕ್ಸಿ ವಾಚ್ ಅಲ್ಟ್ರಾ, ಬಡ್ಸ್ 3 ಸರಣಿ ಬಿಡುಗಡೆ

Smriti Mandhana
ಕ್ರೀಡೆ43 mins ago

Smriti Mandhana : ಶ್ರೀಲಂಕಾದ ಅಂಗವಿಕಲ ಕ್ರಿಕೆಟ್​ ಅಭಿಮಾನಿಗೆ ಮೊಬೈಲ್ ಕೊಟ್ಟ ಸ್ಮೃತಿ ಮಂದಾನಾ

One Day Information Programme on Banking Examination at Shivamogga
ಶಿವಮೊಗ್ಗ49 mins ago

Shivamogga News: ಬ್ಯಾಂಕುಗಳಲ್ಲಿ ಕನ್ನಡಿಗರ ಸಂಖ್ಯೆ ಗಣನೀಯವಾಗಿ ಕ್ಷೀಣ: ಎಂ.ಎನ್. ನಾಗರಾಜ್ ಆತಂಕ

Paris Olympics 2024
ಕ್ರೀಡೆ1 hour ago

Paris Olympics 2024 : ಒಲಿಂಪಿಕ್ಸ್​ನಲ್ಲಿ ಸ್ಪರ್ಧಿಸಲಿರುವ ರಾಜ್ಯದ ಕ್ರೀಡಾಪಟುಗಳಿಗೆ ತಲಾ 5 ಲಕ್ಷ ರೂ. ಪ್ರೋತ್ಸಾಹಧನ

Union Minister Pralhad Joshi slams the state Congress government
ಕರ್ನಾಟಕ1 hour ago

Pralhad joshi: ಕಾಂಗ್ರೆಸಿಗರಿಗೆ ರಾಮನ ಹೆಸರೆಂದರೆ ಅಲರ್ಜಿ; ಪ್ರಲ್ಹಾದ್‌ ಜೋಶಿ ವಾಗ್ದಾಳಿ

Talent is not the property of any caste community says CM Siddaramaiah
ಕರ್ನಾಟಕ1 hour ago

CM Siddaramaiah: ಪ್ರತಿಭೆ ಯಾವುದೇ ಒಂದು ಜಾತಿ-ಸಮುದಾಯದ ಸ್ವತ್ತಲ್ಲ: ಸಿಎಂ ಸಿದ್ದರಾಮಯ್ಯ

250 Anganwadis selected to start pre primary school says Minister Lakshmi Hebbalkar
ಕರ್ನಾಟಕ1 hour ago

Lakshmi Hebbalkar: ಪೂರ್ವ ಪ್ರಾಥಮಿಕ ಶಾಲೆ ಆರಂಭಿಸಲು 250 ಅಂಗನವಾಡಿ ಆಯ್ಕೆ; ಜು.22ಕ್ಕೆ ಚಾಲನೆ

NEET UG 2024
ದೇಶ1 hour ago

NEET UG 2024: ನೀಟ್‌ ಪ್ರಶ್ನೆಪತ್ರಿಕೆ ಟ್ರಂಕ್‌ ಕದ್ದ ಮತ್ತೊಬ್ಬ ಕಿಂಗ್‌ಪಿನ್‌ ಸೇರಿ ಮೂವರನ್ನು ಬಂಧಿಸಿದ ಸಿಬಿಐ!

Cauvery Dispute
ಕರ್ನಾಟಕ2 hours ago

Cauvery Dispute: 2-3 ದಿನದಲ್ಲಿ ಕೆಆರ್‌ಎಸ್ ಡ್ಯಾಂ ಭರ್ತಿ; ಕೆರೆಗಳನ್ನು ತುಂಬಿಸಲು ಕ್ರಮ ಎಂದ ಡಿಕೆಶಿ

Royal Enfield Guerrilla 450
ಆಟೋಮೊಬೈಲ್2 hours ago

Royal Enfield Guerrilla 450 : ರಾಯಲ್ ಎನ್‌ಫೀಲ್ಡ್ ಗೆರಿಲ್ಲಾ 450 ಖರೀದಿ ಮಾಡಲು ಐದು ಕಾರಣ ಇಲ್ಲಿದೆ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Rain
ಮಳೆ9 hours ago

Karnataka Rain : ಭಾರಿ ಮಳೆಗೆ ಮನೆ ಗೋಡೆ ಕುಸಿತ; ಕೊಟ್ಟಿಗೆಯಲ್ಲಿದ್ದ ಜಾನುವಾರುಗಳು ಸಾವು

karnataka Rain
ಮಳೆ10 hours ago

Karnataka Rain : ಹಳ್ಳ ದಾಟಲು ಹೋಗಿ ನೀರುಪಾಲಾದ ಜಾನುವಾರು; ಬಿರುಗಾಳಿಗೆ ಕಳಚಿದ ವಿಂಡ್‌ ಫ್ಯಾನ್‌

karnataka Rain
ಮಳೆ1 day ago

Karnataka Rain : ಬೀದಿಗೆ ತಂದ ರಣಮಳೆ; ಮನೆ ಕುಸಿದು ಬಿದ್ದು 9 ತಿಂಗಳ ಗರ್ಭಿಣಿ ನರಳಾಟ

Karnataka Rain
ಮಳೆ1 day ago

Karnataka Rain : ರಾಜ್ಯದಲ್ಲಿ ಮಳೆಯ ಆರ್ಭಟ; ರಾತ್ರಿ ಕಳೆದು ಬೆಳಗಾಗುವುದರೊಳಗೆ ಕಂದಕ ನಿರ್ಮಾಣ

Karnataka Rain
ಮಳೆ2 days ago

Karnataka Rain : ಭಾರಿ ಮಳೆ ಎಫೆಕ್ಟ್‌; ಉಕ್ಕಿ ಹರಿಯುತ್ತಿದ್ದ ನದಿಯಲ್ಲಿ ಕೊಚ್ಚಿ ಹೋದ ರಾಸು

Uttara Kannada Landslide
ಮಳೆ2 days ago

Uttara Kannada Landslide: ಶಿರೂರು ಗುಡ್ಡ ಕುಸಿತ; ಅಖಾಡಕ್ಕಿಳಿದ ಜಿಯೊಲಾಜಿಕಲ್ ಸರ್ವೆ ಆಫ್ ಇಂಡಿಯಾ ಟೀಂ

Karnataka Rain
ಮಳೆ4 days ago

Karnataka Rain : ಕಾರವಾರದಲ್ಲಿ ಮಳೆ ಅವಾಂತರ; ಮನೆ ಮೇಲೆ ಗುಡ್ಡ ಕುಸಿದು ವೃದ್ಧ ಸಾವು

karnataka Rain
ಮಳೆ4 days ago

Karnataka Rain : ಭಾರಿ ಮಳೆಗೆ ನಿಯಂತ್ರಣ ತಪ್ಪಿ ಕೆರೆಗೆ ಉರುಳಿ ಬಿದ್ದ ಕಾರು; ನಾಲ್ವರು ಪ್ರಾಣಾಪಾಯದಿಂದ ಪಾರು

karnataka Weather Forecast
ಮಳೆ5 days ago

Karnataka Weather : ವ್ಯಾಪಕ ಮಳೆ ಎಚ್ಚರಿಕೆ; ನಾಳೆಯೂ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

karnataka Rain
ಮಳೆ5 days ago

Karnataka Rain : ಶಾಲಾ-ಕಾಲೇಜಿಗೆ ಈ ದಿನ ರಜಾ; ಅಬ್ಬರಿಸುತ್ತಿರುವ ಮಳೆಗೆ ಮನೆಯಲ್ಲೇ ಎಲ್ಲರೂ ಸಜಾ!

ಟ್ರೆಂಡಿಂಗ್‌