Self Harming: ಹೆಂಡತಿಗೆ ಹೆದರಿಸಲು ಹೋಗಿ ಜೀವ ಕಳೆದುಕೊಂಡ ಲೋಕೋ ಪೈಲಟ್‍! - Vistara News

Latest

Self Harming: ಹೆಂಡತಿಗೆ ಹೆದರಿಸಲು ಹೋಗಿ ಜೀವ ಕಳೆದುಕೊಂಡ ಲೋಕೋ ಪೈಲಟ್‍!

Self Harming: ಕೆಲವೊಮ್ಮೆ ಅಣಕಿಸಲು ಮಾಡುವ ಕೆಲಸವೇ ಜೀವಕ್ಕೆ ಕುತ್ತು ತರುತ್ತದೆಯಂತೆ. ಹೀಗೆ ಸುಮ್ಮನೆ ಹೆಂಡತಿಗೆ ಹೆದರಿಸಲು ಹೋಗಿ ವ್ಯಕ್ತಿಯೊಬ್ಬ ಜೀವ ಕಳೆದುಕೊಂಡಿದ್ದಾನೆ. ಮಕ್ಕಳು ತುಂಬಾ ಹಟ ಮಾಡುತ್ತಿದ್ದರಿಂದ ಗಂಡ-ಹೆಂಡತಿಯ ನಡುವೆ ಆಗಾಗ ಜಗಳವಾಗುತ್ತಿತಂತೆ. ಹೆಂಡತಿಯು ಮಕ್ಕಳ ಪರ ವಹಿಸಿದ್ದಕ್ಕೆ ಕೋಪಗೊಂಡ ಗಂಡ ಕುಟುಂಬದವರನ್ನು ಹೆದರಿಸಲು ತನ್ನ ಕುತ್ತಿಗೆಗೆ ಸೀರೆಯನ್ನು ಕಟ್ಟಿ, ಇನ್ನೊಂದು ತುದಿಯನ್ನು ಸೀಲಿಂಗ್ ಫ್ಯಾನ್ ಹುಕ್‌ಗೆ ಕಟ್ಟಿದ್ದ. ಆದರೆ ಪ್ರಾಣವೇ ಹೋಯಿತು.

VISTARANEWS.COM


on

Self Harming
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo


ಕೆಲವರು ತಮ್ಮವರನ್ನು ಹೆದರಿಸುವ ಸಲುವಾಗಿ ಆಗಾಗ ಸಾಯುವುದಾಗಿ ತಮಾಷೆ ಮಾಡುತ್ತಿರುತ್ತಾರೆ. ಆದರೆ ಇಲ್ಲೊಬ್ಬ ವ್ಯಕ್ತಿಗೆ ಈ ತಮಾಷೆಯೇ ಘೋರವಾಗಿ ಬಿಟ್ಟಿದೆ. ಬಿಹಾರದ 33 ವರ್ಷದ ವ್ಯಕ್ತಿಯೊಬ್ಬ ತನ್ನ ಪತ್ನಿ ಮತ್ತು ಮಕ್ಕಳನ್ನು ಬೆದರಿಸುವ ಪ್ರಯತ್ನದಲ್ಲಿ ನೇಣು ಬಿಗಿದು ಆತ್ಮಹತ್ಯೆ(Self Harming) ಮಾಡಿಕೊಳ್ಳುವಂತೆ ನಟಿಸಲು ಹೋಗಿ ದುರಂತವಾಗಿ ಪ್ರಾಣ ಕಳೆದುಕೊಂಡಿರುವ ಘಟನೆ ಗೋಪಾಲಪಟ್ಟಣಂನ ಕೊಟ್ಟಪಲೆಂ ಪ್ರದೇಶದಲ್ಲಿರುವ ಗಣೇಶ್ ನಗರದಲ್ಲಿ ನಡೆದಿದೆ.

ಬಿಹಾರದ 33 ವರ್ಷದ ಸಹಾಯಕ ಲೋಕೋ ಪೈಲಟ್ ಚಂದನ್ ಕುಮಾರ್ ದುರಂತವಾಗಿ ಪ್ರಾಣ ಕಳೆದುಕೊಂಡ ವ್ಯಕ್ತಿ. ಕಳೆದ ಐದು ವರ್ಷಗಳಿಂದ ಕುಟುಂಬದ ಜೊತೆ ವಾಸಿಸುತ್ತಿದ್ದ ಚಂದನ್ ಅವರು ಪತ್ನಿ ಲಾಲ್ ಮುನ್ನಿ ಕುಮಾರಿ ಮತ್ತು ಇಬ್ಬರು ಚಿಕ್ಕ ಮಕ್ಕಳನ್ನು ಅಗಲಿದ್ದಾರೆ. ಪೊಲೀಸ್ ವರದಿ ಪ್ರಕಾರ, ಚಂದನ್ ಅವರ ಮಕ್ಕಳು ತುಂಬಾ ಗಲಾಟೆ ಮಾಡುತ್ತಿದ್ದ ಕಾರಣ ಈ ವಿಚಾರಕ್ಕೆ ಅವರ ಮತ್ತು ಅವರ ಹೆಂಡತಿಯ ನಡುವೆ ವಾಗ್ವಾದ ಉಂಟಾಯಿತು. ಆರಂಭದಲ್ಲಿ, ಮುನ್ನಿ ಕುಮಾರಿ ಮಕ್ಕಳ ಪರವಾಗಿ ನಿಂತರು. ಇದರಿಂದ ಕೋಪಗೊಂಡ ಚಂದನ್ ಆಕೆಗೆ ಪಾಠ ಕಲಿಸಲು ಮತ್ತು ಕುಟುಂಬದವರನ್ನು ಹೆದರಿಸಲು, ತನ್ನ ಕುತ್ತಿಗೆಗೆ ಸೀರೆಯನ್ನು ಕಟ್ಟಿ, ಇನ್ನೊಂದು ತುದಿಯನ್ನು ಸೀಲಿಂಗ್ ಫ್ಯಾನ್ ಹುಕ್‍ಗೆ ಕಟ್ಟಿದರು. ದುರದೃಷ್ಟವಶಾತ್, ಸೀರೆ ಆಕಸ್ಮಿಕವಾಗಿ ಬಿಗಿಯಾಗಿ ಇದು ಚಂದನ್ ಸಾವಿಗೆ ಕಾರಣವಾಯಿತು.

ತುಂಬಾ ಸಮಯವಾದರೂ ಆತನ ಮಲಗುವ ಕೋಣೆಯ ಬಾಗಿಲು ತೆರೆಯದ ಕಾರಣ ಮುನ್ನಿ ಕುಮಾರಿ, ನೆರೆಹೊರೆಯವರ ಸಹಾಯದಿಂದ ಅದನ್ನು ಬಲವಂತವಾಗಿ ತೆರೆಸಿದಳು, ಆದರೆ ಅಲ್ಲಿ ಚಂದನ್ ನೇಣಿಗೆ ಶರಣಾಗಿರುವುದು ಕಂಡುಬಂದಿದೆ. ತಕ್ಷಣ ಆತನನ್ನು ಪರೀಕ್ಷಿಸಿದಾಗ ಆತ ಈಗಾಗಲೇ ಮೃತಪಟ್ಟಿರುವುದಾಗಿ ಎಂದು ತಿಳಿದುಬಂದಿದೆ.

ಇದನ್ನೂ ಓದಿ: ಅಡಿ ಉದ್ದದ ದೈತ್ಯ ಕಾಳಿಂಗ ಸರ್ಪವನ್ನು ಹಿಡಿದದ್ದು ಹೇಗೆ? ವಿಡಿಯೊ ನೋಡಿ

ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದ್ದು, ಪೊಲೀಸರು ಸ್ಥಳಕ್ಕೆ ಬಂದು, ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ ಮತ್ತು ಘಟನೆಯ ಬಗ್ಗೆ ತನಿಖೆಯನ್ನು ಪ್ರಾರಂಭಿಸಿದ್ದಾರೆ. ಈ ದುರಂತ ಘಟನೆಯು ಕುಟುಂಬವನ್ನು ತೀವ್ರ ಆಘಾತ ಮತ್ತು ದುಃಖದಲ್ಲಿ ಮುಳುಗಿಸಿದೆ. ಪತ್ನಿಯೊಂದಿಗೆ ಜಗಳವಾಡಿದ ನಂತರ ಚಂದನ್ ಆತ್ಮಹತ್ಯೆಗೆ ಯತ್ನಿಸಿದ್ದಾನೆ ಎಂದು ಸಹಾಯಕ ಪೊಲೀಸ್ ಆಯುಕ್ತ ಅಣ್ಣೆಪು ನರಸಿಂಹ ಮೂರ್ತಿ ತಿಳಿಸಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಆಟೋಮೊಬೈಲ್

Royal Enfield Guerrilla 450 : ರಾಯಲ್ ಎನ್‌ಫೀಲ್ಡ್ ಗೆರಿಲ್ಲಾ 450 ಖರೀದಿ ಮಾಡಲು ಐದು ಕಾರಣ ಇಲ್ಲಿದೆ

ಯುವಪೀಳಿಗೆಯನ್ನು ಆಕರ್ಷಿಸಲು ಹೊಸ ಮಾದರಿ, ಕ್ಲಾಸಿಕ್ ಮೋಡಿಯೊಂದಿಗೆ ಬಂದಿರುವ ರಾಯಲ್ ಎನ್‌ಫೀಲ್ಡ್ ಗೆರಿಲ್ಲಾ 450 (Royal Enfield Guerrilla 450) ಖರೀದಿ ಮಾಡಲೇಬೇಕು ಎಂದೆನಿಸಲು ಐದು ಪ್ರಮುಖ ಕಾರಣಗಳಿವೆ. ಎನ್‌ಫೀಲ್ಡ್ ನ ಈ ಹೊಸ ಮಾದರಿಯು ರೋಮಾಂಚಕವಾದ ಪ್ರಯಾಣದ ಭರವಸೆಯನ್ನು ಕೊಡುತ್ತದೆ.

VISTARANEWS.COM


on

By

Royal Enfield Guerrilla 450
Koo

ಬೆಂಗಳೂರು: ಹಲವಾರು ದಿನಗಳ ಊಹಾಪೋಹಗಳು, ಸೋಶಿಯಲ್​ ಮೀಡಿಯಾಗಳಲ್ಲಿ ಹರಿ ಬಿಡಲಾಗಿದ್ದ ರೀಲ್ಸ್​ಗಳ ಬಳಿಕ ಅಂತಿಮವಾಗಿ ರಾಯಲ್ ಎನ್‌ಫೀಲ್ಡ್ ಗೆರಿಲ್ಲಾ 450 (Royal Enfield Guerrilla 450) ಬೈಕ್​ ಮಾರುಕಟ್ಟೆಗೆ ಬಿಡುಗಡೆಗೊಂಡಿದೆ. ಈ ಬೈಕ್​ ಸಾಕಷ್ಟು ಕುತೂಹಲ ಮೂಡಿಸಿತ್ತು. ಈ ಹೊಸ ಮಾದರಿಯು (new model Royal Enfield) ರೋಮಾಂಚಕ ಪ್ರಯಾಣದ ಭರವಸೆಯನ್ನು ನೀಡುವ ಜತೆಗೆ ಹಲವಾರು ವಿಶೇಷ ಫೀಚರ್​ಗಳನ್ನು ನೀಡಿದೆ. ರಾಯಲ್ ಎನ್‌ಫೀಲ್ಡ್ ಗೆರಿಲ್ಲಾ 450 ವಿನ್ಯಾಸ ಮತ್ತು ನೋಟದಲ್ಲಿ ಸಂಪೂರ್ಣ ಹೊಸತನವನ್ನು ಅಳವಡಿಸಿಕೊಂಡಿದೆ. ಇತ್ತೀಚಿನ ಸಬ್-500ಸಿಸಿ ರೋಡ್‌ಸ್ಟರ್ ಆಗಿ ರಾಯಲ್ ಎನ್‌ಫೀಲ್ಡ್ ಮಾರುಕಟ್ಟೆಯಲ್ಲಿ ಸೂಕ್ತವಾದ ಆಯ್ಕೆ ಎಂಬಂತೆ ರಸ್ತೆಗೆ ಇಳಿದಿದೆ.

Royal Enfield Guerrilla 450


ವಿನ್ಯಾಸ ಹೇಗಿದೆ?

ಸಾಂಪ್ರದಾಯಿಕ ರಾಯಲ್ ಎನ್‌ಫೀಲ್ಡ್ ಮಾದರಿಯ ಬದಲಿಗೆ ಗೆರಿಲ್ಲಾ 450 ಸಂಪೂರ್ಣವಾಗಿ ಹೊಸ ವಿನ್ಯಾಸದೊದಿಗೆ ಬಂದಿದೆ. ಆಕ್ರಮಣಕಾರಿ ಸ್ಟೈಲಿಂಗ್​ನೊಂದಿಗೆ ನಯವಾದ, ಆಧುನಿಕ ನೋಟವನ್ನು ಹೊಂದಿತ್ತು. ವಿಶಿಷ್ಟವಾದ ರೌಂಡ್ ಹೆಡ್‌ಲ್ಯಾಂಪ್, ಅತ್ಯಾಕರ್ಷಕ ಪೆಟ್ರೋಲ್​ ಟ್ಯಾಂಕ್ ಮತ್ತು ಮಿನಿಮಮ್​ ಬಾಡಿವರ್ಕ್ ಒಳಗೊಂಡಿದೆ. ಈ ವಿನ್ಯಾಸವು ಯುವ ಪೀಳಿಗೆಯನ್ನು ಆಕರ್ಷಿಸುವ ಗುರಿ ಹೊಂದಿದೆ.

ಬೆಲೆ ಮತ್ತು ಬಣ್ಣ

ರಾಯಲ್ ಎನ್‌ಫೀಲ್ಡ್ ಗೆರಿಲ್ಲಾ 450 ಮೂರು ವಿಭಿನ್ನ ರೂಪಾಂತರಗಳಲ್ಲಿ ಲಭ್ಯವಿದೆ. ಅನಲಾಗ್ 2.39 ಲಕ್ಷ ರೂ., ಡ್ಯಾಶ್ 2.49 ಲಕ್ಷ ರೂ. ಮತ್ತು ಫ್ಲ್ಯಾಶ್ 2.54 ಲಕ್ಷ ರೂ. ಎಕ್ಸ್ ಶೋ ರೂಮ್ ಬೆಲೆಯಲ್ಲಿ ಲಭ್ಯವಿದೆ. ರಾಯಲ್ ಎನ್‌ಫೀಲ್ಡ್ ಗೆರಿಲ್ಲಾ 450 ಅದರ ಮೂರು ರೂಪಾಂತರಗಳಲ್ಲಿ ಐದು ವಿಭಿನ್ನ ಬಣ್ಣಗಳಲ್ಲಿ ಲಭ್ಯವಿದೆ. ಅನಲಾಗ್​ ವೇರಿಯೆಂಟ್​ ಸ್ಮೋಕ್ ಮತ್ತು ಪ್ಲಾಯಾ ಬ್ಲ್ಯಾಕ್‌ನಲ್ಲಿ, ಡ್ಯಾಶ್ ರೂಪಾಂತರವು ಪ್ಲಾಯಾ ಬ್ಲಾಕ್ ಮತ್ತು ಗೋಲ್ಡ್ ಡಿಪ್ ಅನ್ನು ನೀಡುತ್ತದೆ ಮತ್ತು ಫ್ಲ್ಯಾಶ್ ರೂಪಾಂತರವು ಹಳದಿ ರಿಬ್ಬನ್ ಮತ್ತು ಬ್ರಾವಾ ಬ್ಲೂನಲ್ಲಿ ಲಭ್ಯವಿದೆ.

Royal Enfield Guerrilla 450


ಎಂಜಿನ್ ಮತ್ತು ಯಂತ್ರ

ರಾಯಲ್ ಎನ್‌ಫೀಲ್ಡ್ ಗೆರಿಲ್ಲಾ 450 ಹಿಮಾಲಯದಲ್ಲಿ ಇರುವ 452ಸಿಸಿ, ಲಿಕ್ವಿಡ್-ಕೂಲ್ಡ್, ಸಿಂಗಲ್-ಸಿಲಿಂಡರ್ ಶೆರ್ಪಾ ಎಂಜಿನ್‌ ಹೊಂದಿದೆ. ಈ ಎಂಜಿನ್ 39.5 ಬಿಹೆಚ್ ಪಿ ಮತ್ತು 40ಎನ್ ಪಿ ಟಾರ್ಕ್ ಬಿಡುಗಡೆ ಮಾಡುತ್ತದೆ. ಜೊತೆಗೆ 6-ಸ್ಪೀಡ್ ಗೇರ್‌ಬಾಕ್ಸ್, ನಗರ ಪ್ರಯಾಣ ಮತ್ತು ದೂರದ ಸವಾರಿಗಳಿಗೆ ಸೂಕ್ತವಾಗಿದೆ.

ಬೈಕು ಮುಂಭಾಗದಲ್ಲಿ ಯುಎಸ್ಡಿ ಫೋರ್ಕ್ ಮತ್ತು ಟೆಲಿಸ್ಕೋಪಿಕ್ ಫೋರ್ಕ್ ಅನ್ನು ಹೊಂದಿದೆ. ಹಿಂಭಾಗದಲ್ಲಿ ಹೊಂದಾಣಿಕೆ ಮಾಡಬಹುದಾದ ಮೊನೊ-ಶಾಕ್ ನೀಡಲಾಗಿದೆ. 2,090 ಮಿಮೀ ಉದ್ದ, 833 ಎಂಎಂ ಅಗಲ ಮತ್ತು 1,125 ಎಂಎಂ ಎತ್ತರದ ಬೈಕ್ ಇದು. 1,440 ಎಂಎಂ ವ್ಹೀಲ್‌ಬೇಸ್, 780 ಎಂಎಂ ಸೀಟ್ ಎತ್ತರ, ಹಿಮಾಲಯಕ್ಕಿಂತ 45 ಎಂಎಂ ಕಡಿಮೆ ಮತ್ತು ಗ್ರೌಂಡ್ ಕ್ಲಿಯರೆನ್ಸ್ 169 ಎಂಎಂ ಇದೆ.

ಇದನ್ನೂ ಓದಿ: Bajaj Freedom 125 CNG Bike: ಬಜಾಜ್ ಸಿಎನ್‌ಜಿ ಬೈಕ್ ಬುಕ್‌ ಮಾಡಿದರೆ 3 ತಿಂಗಳು ಕಾಯಬೇಕು!

Royal Enfield Guerrilla 450


ವೈಶಿಷ್ಟ್ಯಗಳು

ರಾಯಲ್ ಎನ್‌ಫೀಲ್ಡ್ ಗೆರಿಲ್ಲಾ 450 ರೈಡ್-ಬೈ-ವೈರ್ ಥ್ರೊಟಲ್ ಮತ್ತು ಎರಡು ಆಯ್ಕೆ ಮಾಡಬಹುದಾದ ರೈಡ್ ಮೋಡ್‌ಗಳನ್ನು ಒಳಗೊಂಡಿದೆ. ಡ್ಯುಯಲ್-ಚಾನೆಲ್ ಎಬಿಎಸ್ ನೊಂದಿಗೆ ಬಂದಿರುವ ಇದು ಜಾರುವಿಕೆಯನ್ನು ತಡೆಯುತ್ತದೆ.

ಟಾಪ್​ ವೇರಿಯೆಂಟ್​ಗಳ ಗೂಗಲ್ ಮ್ಯಾಪ್​, ಮೀಡಿಯಾ ಕಂಟ್ರೋಲ್​, ಮತ್ತು ಬೈಕ್ ಸೆಟ್ಟಿಂಗ್ ವ್ಯವಸ್ಥೇ ಹೊಂದಿದೆ, ನ್ಯಾವಿಗೇಷನ್‌ಗಾಗಿ ಸ್ಮಾರ್ಟ್‌ಫೋನ್‌ಗಳೊಂದಿಗೆ ಕನೆಕ್ಟ್​ ಮಾಡಬಹುದಾದ ನಾಲ್ಕು-ಇಂಚಿನ ರೌಂಡ್ ಸ್ಕ್ರೀನ್​ ಇದರಲ್ಲದಿಎ. ಬೇಸ್​ ವೇರಿಯೆಂಟ್​ ಡಿಜಿಟಲ್-ಅನಲಾಗ್ ಇನ್ಸ್ಟ್ರುಮೆಂಟ್ ಕ್ಲಸ್ಟರ್ ಅನ್ನು ಹೊಂದಿದೆ.

Continue Reading

ವೈರಲ್ ನ್ಯೂಸ್

Viral Video: ಏಳು ತಿಂಗಳ ಮಗುವಿನ ಮೇಲೆ ಗುಂಡು ಹಾರಿಸಿದ ಕ್ರೂರ ಮಹಿಳೆ!

ಅಮೆರಿಕದ ಫಿಲಡೆಲ್ಫಿಯಾ ನಗರದ ಈಶಾನ್ಯ ಭಾಗದಲ್ಲಿ ಏಳು ತಿಂಗಳ ಗಂಡು ಮಗುವನ್ನು ಸ್ಟ್ರೋಲರ್ ನಲ್ಲಿ ಮಲಗಿಸಿ ಸುತ್ತಾಡಿ ಬರಲು ಕರೆದುಕೊಂಡು ಹೋಗುತ್ತಿದ್ದ ಮಹಿಳೆ ಮೇಲೆ ದರೋಡೆಕೋರ ಮಹಿಳೆ ಗುಂಡಿನ ದಾಳಿ ನಡೆಸಿದ್ದಾಳೆ. ಗುಂಡು ಮಗುವಿನ ಕಾಲಿಗೆ ತಾಗಿದೆ. ಈ ಘಟನೆಯ ದೃಶ್ಯ ಸಿಸಿಟಿವಿ ಕೆಮರಾದಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ವೈರಲ್ (Viral Video) ಆಗಿದೆ.

VISTARANEWS.COM


on

By

Viral video
Koo

ಮಗುವಿನೊಂದಿಗೆ ಸುತ್ತಾಡಿ ಬರಲು ಹೋಗುತ್ತಿದ್ದ ತಾಯಿಯ ಮೇಲೆ ಮಹಿಳೆಯೊಬ್ಬಳು ಗುಂಡಿನ ದಾಳಿ ನಡೆಸಿದ್ದು, ಗುಂಡು ಮಗುವಿನ ಕಾಲಿಗೆ (Shoots Baby) ತಾಗಿದೆ. ಅಮೆರಿಕದ ಫಿಲಿಡೆಲ್ಫಿಯಾದಲ್ಲಿ (Philadelphia) ನಡೆದ ಈ ಘಟನೆಯ ದೃಶ್ಯ ಸಿಸಿಟಿವಿ ಕೆಮರಾದಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ವೈರಲ್ (Viral Video) ಆಗಿದೆ.

ಏಳು ತಿಂಗಳ ಗಂಡು ಮಗುವನ್ನು ಸ್ಟ್ರೋಲರ್ ನಲ್ಲಿ ಮಲಗಿಸಿ ಸುತ್ತಾಡಿ ಬರಲು ಕರೆದುಕೊಂಡು ಹೋಗುತ್ತಿದ್ದ ಮಹಿಳೆ ಮೇಲೆ ದರೋಡೆಕೋರ ಮಹಿಳೆ ಗುಂಡಿನ ದಾಳಿ ನಡೆಸಿದ್ದಾಳೆ. ಗುಂಡು ಮಗುವಿನ ಕಾಲಿಗೆ ತಾಗಿದೆ. ಇದೀಗ ಮಗುವಿನ ಅರೋಗ್ಯ ಸ್ಥಿತಿ ಸ್ಥಿರವಾಗಿದೆ ಎನ್ನಲಾಗಿದೆ.

ಫಿಲಡೆಲ್ಫಿಯಾ ನಗರದ ಈಶಾನ್ಯ ಭಾಗದಲ್ಲಿ ಈ ಘಟನೆ ನಡೆದಿದ್ದು, ಗುಂಡು ಹಾರಿಸಿದ ದರೋಡೆಕೋರ ಮಹಿಳೆಯನ್ನು ಶುಕ್ರವಾರ ಪೊಲೀಸರು ಬಂಧಿಸಿದ್ದಾರೆ. ಮಗುವಿನ ಮೇಲೆ ಗುಂಡು ಹಾರಿಸಿರುವ ಭಯಾನಕ ದೃಶ್ಯ ಸಿಸಿಟಿವಿ ವಿಡಿಯೋದಲ್ಲಿ ಸೆರೆಯಾಗಿದೆ. ಮಗು ಮತ್ತು ಪೋಷಕ ಮಹಿಳೆ ನಡೆದುಕೊಂಡು ಹೋಗುತ್ತಿದ್ದಾಗ ಮಹಿಳೆಯೊಬ್ಬಳು ಏಕಾಏಕಿ ಬಂದು ಅವರ ಮೇಲೆ ಗುಂಡಿನ ದಾಳಿ ನಡೆಸಿರುವುದನ್ನು ವಿಡಿಯೋದಲ್ಲಿ ಕಾಣಬಹುದು. ದರೋಡೆಕೋರ ಮಹಿಳೆಯು ಹಲವು ಬಾರಿ ಗುಂಡು ಹಾರಿಸುತ್ತಿರುವುದನ್ನು ವಿಡಿಯೋದಲ್ಲಿ ಕಾಣಬಹುದು.


ಪೊಲೀಸರು ಈ ಕುರಿತು ವಿಡಿಯೋ ಬಿಡುಗಡೆ ಮಾಡಿದ್ದು, ಅದರಲ್ಲಿ ಹೀಗೆ ಬರೆದಿದ್ದರೆ. 2024ರ ಜುಲೈ 18ರಂದು ಮೆರಿಡಿಯನ್ ಸ್ಟ್ರೀಟ್‌ನ 4000 ಬ್ಲಾಕ್‌ನಲ್ಲಿ ಏಳು ತಿಂಗಳ ಮಗುವಿನ ಕಾಲಿನ ಮೇಲೆ ಮಹಿಳೆಯೊಬ್ಬಳು ಗುಂಡು ಹರಿಸಿದ್ದಾಳೆ. ಗುಂಡಿನ ದಾಳಿಯಲ್ಲಿ ಬೇರೆ ಯಾರಿಗೂ ಗಾಯವಾಗಿಲ್ಲ. ಕೂಡಲೇ ಮಗುವನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು, ಬಳಿಕ ಮತ್ತೊಂದು ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಪ್ರಸ್ತುತ ಮಗುವಿನ ಆರೋಗ್ಯ ಸ್ಥಿರವಾಗಿದೆ.

ಇದನ್ನೂ ಓದಿ: Udupi News : ಸತ್ತ ನಾಯಿಯನ್ನು ಸ್ಕೂಟರ್‌ಗೆ ಕಟ್ಟಿ ರಸ್ತೆಯುದ್ದಕ್ಕೂ ಎಳೆದೊಯ್ದ ಅಸಾಮಿ!

ಪೊಲೀಸರು ಆಗಮಿಸಿದಾಗ ಮಗುವಿನ ಪೋಷಕರು ಘಟನಾ ಸ್ಥಳದಲ್ಲಿ ಇರಲಿಲ್ಲ.ಗುಂಡಿನ ದಾಳಿ ನಡೆಸಿದ ಮಹಿಳೆ ತಾನು ಮಾಡಿದ್ದಕ್ಕೆ ಪಶ್ಚಾತ್ತಾಪ ಪಡದೆ ಸುಮ್ಮನೆ ಅಲ್ಲಿಂದ ಹೊರನಡೆದಳು. ಇದು ತುಂಬಾ ಭಯಾನಕವಾಗಿದೆ ಎಂದು ಪ್ರತ್ಯಕ್ಷದರ್ಶಿಯೊಬ್ಬರು ಹೇಳಿದ್ದಾರೆ.

Continue Reading

Latest

Sexual Abuse: ವಿದ್ಯಾರ್ಥಿನಿಯನ್ನು ಅಪಹರಿಸಿ 12 ದಿನ ಅತ್ಯಾಚಾರ ಎಸಗಿ ಪೊಲೀಸ್‌ ಠಾಣೆ ಮುಂದೆಯೇ ಬಿಟ್ಟು ಹೋದರು!

Sexual Abuse: ಗಾಜಿಯಾಬಾದ್‌ನಲ್ಲಿ ಕಾಲೇಜಿಗೆ ತೆರಳುತ್ತಿದ್ದ ಬಾಲಕಿಯನ್ನು ಅಪಹರಿಸಿ 12 ದಿನಗಳ ಕಾಲ ಅತ್ಯಾಚಾರ ನಡೆಸಿದ ದಾರುಣ ಘಟನೆಯೊಂದು ನಡೆದಿದೆ. ಮೀರತ್ ಮತ್ತು ಜಮ್ಮುವಿನ ವಿವಿಧ ಹೋಟೆಲ್‌ಗಳಲ್ಲಿ ನಾಲ್ವರು ಯುವಕರು ಬಾಲಕಿಯನ್ನು ಒತ್ತೆಯಾಳಾಗಿ ಇಟ್ಟುಕೊಂಡು ಅತ್ಯಾಚಾರ ಎಸಗಿದ್ದಾರೆ. ಈ ಸಮಯದಲ್ಲಿ, ಆರೋಪಿಗಳು ಅವಳ ಅಶ್ಲೀಲ ವಿಡಿಯೊವನ್ನು ಮಾಡಿದಲ್ಲದೇ ಅವಳು ವಿರೋಧಿಸಿದರೆ ಅವಳನ್ನು ಕೊಲ್ಲುವುದಾಗಿ ಮತ್ತು ವಿಡಿಯೊವನ್ನು ವೈರಲ್ ಮಾಡುವುದಾಗಿ ಬೆದರಿಕೆ ಹಾಕಿದ್ದಾರಂತೆ.

VISTARANEWS.COM


on

Sexual Abuse
Koo

ಗಾಜಿಯಾಬಾದ್‍ನಲ್ಲಿ ಕಾಲೇಜಿಗೆ ತೆರಳುತ್ತಿದ್ದ ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ಅಪಹರಿಸಿ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣ ಬೆಳಕಿಗೆ ಬಂದಿದೆ. ಜೂನ್ 24ರಂದು ಮೀರತ್‍ನ ಮೊಹಿಯುದ್ದೀನ್‌ಪುರದಿಂದ ಬಾಲಕಿಯನ್ನು ಅಪಹರಿಸಲಾಗಿತ್ತು. ಇದಾದ ಬಳಿಕ ಆಕೆಯನ್ನು ಜಮ್ಮುವಿಗೆ ಕರೆದೊಯ್ಯಲಾಯಿತು. ಮೀರತ್ ಮತ್ತು ಜಮ್ಮುವಿನ ವಿವಿಧ ಹೋಟೆಲ್‍ಗಳಲ್ಲಿ ನಾಲ್ವರು ಯುವಕರು ಬಾಲಕಿಯನ್ನು ಒತ್ತೆಯಾಳಾಗಿ ಇಟ್ಟುಕೊಂಡು ಅತ್ಯಾಚಾರ (Sexual Abuse) ಎಸಗಿದ್ದಾರೆ ಎಂದು ಆರೋಪಿಸಲಾಗಿದೆ. ಈ ಸಮಯದಲ್ಲಿ, ಆರೋಪಿಗಳು ಅವಳ ಅಶ್ಲೀಲ ವಿಡಿಯೊವನ್ನು ಮಾಡಿದಲ್ಲದೇ ಅವಳು ವಿರೋಧಿಸಿದರೆ ಕೊಲ್ಲುವುದಾಗಿ ಮತ್ತು ವಿಡಿಯೊವನ್ನು ವೈರಲ್ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ ಎಂಬುದಾಗಿ ತಿಳಿದುಬಂದಿದೆ.

ಮೋದಿನಗರ ಪ್ರದೇಶದ ಹಳ್ಳಿಯೊಂದರ ನಿವಾಸಿಯಾಗಿರುವ ಬಾಲಕಿ ಮೀರತ್‍ನ ಕಾಲೇಜೊಂದರಲ್ಲಿ ಓದುತ್ತಿದ್ದಾಳೆ. ಜೂನ್ 24ರಂದು ಕಾಲೇಜಿಗೆ ಹೋಗಲು ಮನೆಯಿಂದ ಹೊರಟಿದ್ದ ಆಕೆ ಅಂದಿನಿಂದ ನಾಪತ್ತೆಯಾಗಿದ್ದಳು. ಕುಟುಂಬವು ಸಾಕಷ್ಟು ಹುಡುಕಿತು ಮತ್ತು ಕಾಣೆಯಾದ ದೂರನ್ನು ಸಹ ದಾಖಲಿಸಿತು. ಆದರೆ, ಅವಳ ಬಗ್ಗೆ ಯಾವುದೇ ಸುಳಿವು ಸಿಗಲಿಲ್ಲ. ಇದರ ನಡುವೆ ಆರೋಪಿಗಳು ಜುಲೈ 6 ರಂದು ಬಾಲಕಿಯನ್ನು ಭೋಜ್ಪುರ ಪೊಲೀಸ್ ಠಾಣೆಯ ಬಳಿ ಬಿಟ್ಟಿದ್ದಾರೆ. ಪೊಲೀಸರು ಬಾಲಕಿ ಚೇತರಿಸಿಕೊಂಡ ನಂತರ ಆಕೆಯ ಕುಟುಂಬ ಸದಸ್ಯರನ್ನು ಕರೆದು ಮನೆಗೆ ಕಳುಹಿಸಿದ್ದಾರೆ.

ಜೂನ್ 24ರಂದು ಬೆಳಗ್ಗೆ 11 ಗಂಟೆ ಸುಮಾರಿಗೆ ಮೊಹಿಯುದ್ದೀನ್ ಪರ್ತಾಪುರದಿಂದ ಅದೇ ಗ್ರಾಮದ ಇಬ್ಬರು ಯುವಕರು ತನ್ನನ್ನು ಅಪಹರಿಸಿರುವುದಾಗಿ ಬಾಲಕಿ ಕುಟುಂಬಕ್ಕೆ ಬಹಿರಂಗಪಡಿಸಿದ್ದಾಳೆ. ಆರೋಪಿಗಳು ತನ್ನನ್ನು ಮೀರತ್‍ನಿಂದ ಅಪಹರಿಸಿ ಜಮ್ಮುವಿಗೆ ಕರೆದೊಯ್ದು ಅಲ್ಲಿನ ಹೋಟೆಲ್‍ನಲ್ಲಿ ಆರು ದಿನಗಳ ಕಾಲ ಒತ್ತೆಯಾಳಾಗಿ ಇರಿಸಿಕೊಂಡಿದ್ದರು. ಅಲ್ಲಿ ತನ್ನ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದೆ ಎಂದು ಬಾಲಕಿ ಆರೋಪಿಸಿದ್ದಾರೆ. ಇದರ ನಂತರ, ಆರೋಪಿಗಳು ಅವಳನ್ನು ಸಹರಾನ್ಪುರ ಮೂಲಕ ಮೀರತ್‍ಗೆ ಕರೆತಂದು ಹೆದ್ದಾರಿಯಲ್ಲಿರುವ ಹೋಟೆಲ್‍ನಲ್ಲಿ ಆರು ದಿನಗಳ ಕಾಲ ಒತ್ತೆಯಾಳಾಗಿ ಇರಿಸಿಕೊಂಡರು ಮತ್ತು ಅಲ್ಲಿ ನಾಲ್ವರು ಯುವಕರು ಅವಳ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದರು ಎಂಬುದಾಗಿ ತಿಳಿಸಿದ್ದಾಳೆ.

ಜುಲೈ 6ರಂದು ಆರೋಪಿಗಳು ಬಾಲಕಿಯನ್ನು ಗಾಜಿಯಾಬಾದ್‍ನ ಭೋಜ್ಪುರ ಪೊಲೀಸ್ ಠಾಣೆಯ ಬಳಿ ಬಿಟ್ಟಿದ್ದರು. ಸಂತ್ರಸ್ತೆಯ ಪೋಷಕರು ಈ ಬಗ್ಗೆ ಮೋದಿನಗರ ಪೊಲೀಸರಿಗೆ ದೂರು ನೀಡಿದ್ದರು. ಆದರೆ ಈ ಘಟನೆ ಮೀರತ್‍ನಲ್ಲಿ ನಡೆದಿದೆ ಎಂದು ಅವರು ಕೇಸು ದಾಖಲಿಸಲು ನಿರಾಕರಿಸಿದರು. ಅದೇ ಸಮಯದಲ್ಲಿ, ಪರ್ತಾಪುರ ಪೊಲೀಸರು ಸಹ ಪ್ರಕರಣ ದಾಖಲಿಸಲಿಲ್ಲ. ಈ ಪ್ರಕರಣದಲ್ಲಿ, ಗಾಜಿಯಾಬಾದ್ ಮತ್ತು ಮೀರತ್ ಪೊಲೀಸರು ಪರಸ್ಪರ ಕೇಸನ್ನು ವರ್ಗಾಯಿಸುತ್ತಲೇ ಇದ್ದರು.

ಇದನ್ನೂ ಓದಿ: ಬಿಸ್ಕೆಟ್‌ಗೆ ಆಸೆ ಪಟ್ಟು ಹೋಗಿದ್ದ ಪುಟ್ಟ ಬಾಲಕಿ ಕಾಮುಕನ ಕೈಗೆ ಸಿಕ್ಕಿ ಕೊಲೆಯಾದಳು

ಹಾಗಾಗಿ ಸಂತ್ರಸ್ತೆಯ ಕುಟುಂಬವು ಮೀರತ್ ಎಸ್ಎಸ್‌ಪಿಗೆ ದೂರು ನೀಡಿದೆ. ಅವರ ದೂರಿನ ಆಧಾರದ ಮೇಲೆ ತನಿಖೆ ನಡೆಸಲಾಗುತ್ತಿದೆ. ಹೋಟೆಲ್‍ಗಳ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿ ನಿಯಮಗಳ ಪ್ರಕಾರ ಕ್ರಮ ಕೈಗೊಳ್ಳಲಾಗುವುದು ಎಂದು ಮೀರತ್ ನಗರ ಎಸ್ ಪಿ ಆಯುಷ್ ವಿಕ್ರಮ್ ಸಿಂಗ್ ತಿಳಿಸಿದ್ದಾರೆ.

Continue Reading

Latest

Sexual Abuse: ʼಡೇರ್‌ ಆಂಡ್‌ ಟ್ರುತ್‌ʼ ಆಟ ಆಡೋಣವೆಂದು ಸ್ನೇಹಿತರ ಮುಂದೆ ಹೆಂಡತಿಯ ಬಟ್ಟೆ ಬಿಚ್ಚಿಸಿದ ಗಂಡ!

Sexual Abuse: ಪತಿ-ಪತ್ನಿಯ ಸಂಬಂಧ ಪವಿತ್ರವಾದದ್ದು. ಒಬ್ಬರ ಮೇಲೆ ಒಬ್ಬರು ನಂಬಿಕೆ ಇಟ್ಟುಕೊಂಡು ಸಂಸಾರದ ಬಂಡಿಯನ್ನು ಸಾಗಿಸಬೇಕು ಎನ್ನುತ್ತಾರೆ ಹಿರಿಯರು. ಆದರೆ ಇಲ್ಲೊಬ್ಬ ಐನಾತಿ ಪತಿ ತನ್ನ ಸ್ನೇಹಿತರ ಮುಂದೆಯೇ ಹೆಂಡತಿಗೆ ಬಟ್ಟೆ ಬಿಚ್ಚಲು ಒತ್ತಾಯಿಸಿದ್ದಾನೆ. ಪತಿ ತನ್ನ ಸ್ನೇಹಿತರನ್ನು ಪಾರ್ಟಿಗಳಿಗಾಗಿ ಮನೆಗೆ ಕರೆಯುತ್ತಿದ್ದ. ಪಾರ್ಟಿಗಳ ಸಮಯದಲ್ಲಿ “ಡೇರ್ ಆಂಡ್ ಟ್ರುತ್” ಆಟದ ಹೆಸರಿನಲ್ಲಿ ತನ್ನ ಪತಿ ತನ್ನ ಸ್ನೇಹಿತರ ಮುಂದೆ ತನ್ನ ಬಟ್ಟೆ ಬಿಚ್ಚಲು ಒತ್ತಾಯಿಸುತ್ತಿದ್ದ ಎಂದು ಮಹಿಳೆ ದೂರಿದ್ದಾಳೆ.

VISTARANEWS.COM


on

Sexual Abuse
Koo


ಮದುವೆಯ ನಂತರ ದಂಪತಿಗಳು ಅನ್ಯೋನ್ಯತೆಯಿಂದ ಇರುತ್ತಾರೆ. ಆದರೆ ಎಲ್ಲಾ ದಂಪತಿಗಳು ಹೀಗೇ ಇರುವುದಿಲ್ಲ. ಕೆಲವರ ವೈವಾಹಿಕ ಜೀವನದಲ್ಲಿ ಸಮಸ್ಯೆಗಳು ಕಾಡುತ್ತದೆ. ಕೆಲವು ಪುರುಷರು ಮದುವೆಯ ಬಳಿಕ ತಮ್ಮ ಪತ್ನಿಗೆ ಕಿರುಕುಳ ನೀಡುತ್ತಿರುತ್ತಾರೆ. ಅಂತಹದೊಂದು ಘಟನೆ ಗುಜರಾತ್‍ನ ಖೋರಾಜ್‍ನಲ್ಲಿ ನಡೆದಿದೆ. ಮಹಿಳೆಯೊಬ್ಬರು ಇತ್ತೀಚೆಗೆ ಪೊಲೀಸರನ್ನು ಸಂಪರ್ಕಿಸಿ ಪತಿಯ ವಿರುದ್ಧ ಕಿರುಕುಳದ(Sexual Abuse) ದೂರು ದಾಖಲಿಸಿದ್ದಾಳೆ. ಪಾರ್ಟಿ ಸಮಯದಲ್ಲಿ ತನ್ನ ಸ್ನೇಹಿತರ ಮುಂದೆ ಬಟ್ಟೆ ಚಿಚ್ಚಲು ಪತಿ ತನಗೆ ಒತ್ತಾಯಿಸಿದ್ದಾನೆ ಎಂದು ಮಹಿಳೆ ಆರೋಪಿಸಿದ್ದಾಳೆ.

35 ವರ್ಷದ ಸಂತ್ರಸ್ತ ಮಹಿಳೆ ವಿಎಫ್ಎಕ್ಸ್ ಕಲಾವಿದೆಯಾಗಿದ್ದು, ಚಲನಚಿತ್ರೋದ್ಯಮದಲ್ಲಿ ಕೆಲಸ ಮಾಡುತ್ತಿದ್ದಳು. ಈಕೆ ಖೋರಾಜ್‍ನಲ್ಲಿ ವಾಸವಾಗಿದ್ದಳು. ಆಕೆಯ ಪತಿ ಅಂತಾರಾಷ್ಟ್ರೀಯ ವಿಮಾನಯಾನ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದ ಎನ್ನಲಾಗಿದೆ. ಮೂಲತಃ ಉತ್ತರಾಖಂಡದ ಡೆಹ್ರಾಡೂನ್ ಮೂಲದ ಈ ದಂಪತಿ ಎಂಟು ವರ್ಷಗಳಿಂದ ಪರಸ್ಪರ ಪರಿಚಿತರಾಗಿದ್ದು, ಮದುವೆಯಾಗಿ ಐದು ವರ್ಷಗಳಾಗಿವೆ. ತನ್ನ ಪತಿ ಕಿರುಕುಳ ನೀಡುತ್ತಿರುವುದಾಗಿ ಆಕೆ ಆರೋಪ ಮಾಡಿದ್ದಾಳೆ. ಮದುವೆಯಾದ ಹೊಸದರಲ್ಲಿ ದಂಪತಿ ಮೊದಲು ಕೋಲ್ಕತ್ತಾಗೆ ಮತ್ತು ನಂತರ ಮುಂಬೈಗೆ ತೆರಳಿದರು. ಮುಂಬೈನಲ್ಲಿ ಮಹಿಳೆ ಚಲನಚಿತ್ರೋದ್ಯಮದಲ್ಲಿ ವಿಎಫ್ಎಕ್ಸ್ ಕಲಾವಿದೆಯಾಗಿ ಕೆಲಸ ಮಾಡಿದಳು. ಮದುವೆಯ ನಂತರ ಮುಂಬೈಗೆ ತೆರಳಿದಾಗ, ಪತಿ ತನ್ನ ಸ್ನೇಹಿತರನ್ನು ಪಾರ್ಟಿಗಳಿಗಾಗಿ ಮನೆಗೆ ಕರೆಯುತ್ತಿದ್ದ. ಪಾರ್ಟಿಗಳ ಸಮಯದಲ್ಲಿ “ಡೇರ್‌ ಆಂಡ್‌ ಟ್ರುತ್‌” ಆಟದ ಹೆಸರಿನಲ್ಲಿ ತನ್ನ ಪತಿ ತನ್ನ ಸ್ನೇಹಿತರ ಮುಂದೆ ತನ್ನ ಬಟ್ಟೆ ಬಿಚ್ಚಲು ಒತ್ತಾಯಿಸುತ್ತಿದ್ದ ಎಂದು ಮಹಿಳೆ ದೂರಿದ್ದಾಳೆ. ಒಂದು ವೇಳೆ ಅವಳು ನಿರಾಕರಿಸಿದರೆ ಅಥವಾ ಆಕ್ಷೇಪಿಸಿದರೆ ಪತಿ ತನ್ನನ್ನು ಹೊಡೆಯುತ್ತಾನೆ ಎಂದು ಆಕೆ ಆರೋಪಿಸಿದ್ದಾಳೆ. ತನ್ನ ಗಂಡನ ಈ ಅಶ್ಲೀಲ ಬೇಡಿಕೆಗಳಿಂದಾಗಿ ಅವರ ನಡುವೆ ಆಗಾಗ್ಗೆ ಜಗಳವಾಗುತ್ತಿತ್ತು ಎಂದು ತಿಳಿಸಿದ್ದಾಳೆ.

ಇದನ್ನೂ ಓದಿ:ಕಾರಿನಲ್ಲಿ ಬಂದ ಡಕಾಯಿತರು; ಬ್ಯಾಗ್‌ ಕಸಿಯಲು ವಿದ್ಯಾರ್ಥಿನಿಯನ್ನು 20 ಅಡಿ ದೂರ ಎಳೆದೊಯ್ದರು! ಆಘಾತಕಾರಿ ವಿಡಿಯೊ

ದಂಪತಿಗಳು ಇತ್ತೀಚೆಗೆ ಗುಜರಾತ್‍ನ ಖೋರಾಜ್‍ಗೆ ಸ್ಥಳಾಂತರಗೊಂಡಿದ್ದರು. ಖೋರಾಜ್‍ಗೆ ತೆರಳಿದ ನಂತರ, ಪತಿ ತನಗೆ ಕಿರುಕುಳ ನೀಡುವುದನ್ನು ಮುಂದುವರಿಸಿದ್ದಾನೆ. ಹಾಗಾಗಿ ಆತನ ವಿರುದ್ಧ ಮಹಿಳೆ ದೂರು ದಾಖಲಿಸಿದ್ದಾಳೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಪತಿಯ ವಿರುದ್ಧ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ ಎಂಬುದಾಗಿ ತಿಳಿದುಬಂದಿದೆ.

Continue Reading
Advertisement
IT Employees
ಕರ್ನಾಟಕ42 mins ago

IT Employees: ಕರ್ನಾಟಕದ ಐಟಿ ಉದ್ಯೋಗಿಗಳೇ, ದಿನಕ್ಕೆ 14 ಗಂಟೆ ಕೆಲಸ ಮಾಡಲು ಸಜ್ಜಾಗಿ; ರಾಜ್ಯ ಸರ್ಕಾರದ ನಿರ್ಧಾರ ಹೀಗಿದೆ

Manolo Marquez
ಕ್ರೀಡೆ1 hour ago

Manolo Marquez : ಮೊನೊಲೊ ಮಾರ್ಕ್ವೆಜ್​ ಭಾರತ ಫುಟ್ಬಾಲ್ ತಂಡದ ನೂತನ ಕೋಚ್​

Fire Accident
ವಿದೇಶ2 hours ago

Fire Accident: ಕುವೈತ್‌ ಅಪಾರ್ಟ್‌ಮೆಂಟ್‌ನಲ್ಲಿ ಅಗ್ನಿ ದುರಂತ; ಕೇರಳದ ಒಂದೇ ಕುಟುಂಬದ ನಾಲ್ವರ ಸಾವು

Samsung Launches Galaxy Watch 7 Galaxy Watch Ultra Buds 3 Series
ವಾಣಿಜ್ಯ3 hours ago

Samsung Galaxy: ಸ್ಯಾಮ್‌ಸಂಗ್‌ನಿಂದ ಗ್ಯಾಲಕ್ಸಿ ವಾಚ್7, ಗ್ಯಾಲಕ್ಸಿ ವಾಚ್ ಅಲ್ಟ್ರಾ, ಬಡ್ಸ್ 3 ಸರಣಿ ಬಿಡುಗಡೆ

Smriti Mandhana
ಕ್ರೀಡೆ3 hours ago

Smriti Mandhana : ಶ್ರೀಲಂಕಾದ ಅಂಗವಿಕಲ ಕ್ರಿಕೆಟ್​ ಅಭಿಮಾನಿಗೆ ಮೊಬೈಲ್ ಕೊಟ್ಟ ಸ್ಮೃತಿ ಮಂದಾನಾ

One Day Information Programme on Banking Examination at Shivamogga
ಶಿವಮೊಗ್ಗ3 hours ago

Shivamogga News: ಬ್ಯಾಂಕುಗಳಲ್ಲಿ ಕನ್ನಡಿಗರ ಸಂಖ್ಯೆ ಗಣನೀಯವಾಗಿ ಕ್ಷೀಣ: ಎಂ.ಎನ್. ನಾಗರಾಜ್ ಆತಂಕ

Paris Olympics 2024
ಕ್ರೀಡೆ3 hours ago

Paris Olympics 2024 : ಒಲಿಂಪಿಕ್ಸ್​ನಲ್ಲಿ ಸ್ಪರ್ಧಿಸಲಿರುವ ರಾಜ್ಯದ ಕ್ರೀಡಾಪಟುಗಳಿಗೆ ತಲಾ 5 ಲಕ್ಷ ರೂ. ಪ್ರೋತ್ಸಾಹಧನ

Union Minister Pralhad Joshi slams the state Congress government
ಕರ್ನಾಟಕ3 hours ago

Pralhad joshi: ಕಾಂಗ್ರೆಸಿಗರಿಗೆ ರಾಮನ ಹೆಸರೆಂದರೆ ಅಲರ್ಜಿ; ಪ್ರಲ್ಹಾದ್‌ ಜೋಶಿ ವಾಗ್ದಾಳಿ

Talent is not the property of any caste community says CM Siddaramaiah
ಕರ್ನಾಟಕ3 hours ago

CM Siddaramaiah: ಪ್ರತಿಭೆ ಯಾವುದೇ ಒಂದು ಜಾತಿ-ಸಮುದಾಯದ ಸ್ವತ್ತಲ್ಲ: ಸಿಎಂ ಸಿದ್ದರಾಮಯ್ಯ

250 Anganwadis selected to start pre primary school says Minister Lakshmi Hebbalkar
ಕರ್ನಾಟಕ4 hours ago

Lakshmi Hebbalkar: ಪೂರ್ವ ಪ್ರಾಥಮಿಕ ಶಾಲೆ ಆರಂಭಿಸಲು 250 ಅಂಗನವಾಡಿ ಆಯ್ಕೆ; ಜು.22ಕ್ಕೆ ಚಾಲನೆ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Rain
ಮಳೆ11 hours ago

Karnataka Rain : ಭಾರಿ ಮಳೆಗೆ ಮನೆ ಗೋಡೆ ಕುಸಿತ; ಕೊಟ್ಟಿಗೆಯಲ್ಲಿದ್ದ ಜಾನುವಾರುಗಳು ಸಾವು

karnataka Rain
ಮಳೆ13 hours ago

Karnataka Rain : ಹಳ್ಳ ದಾಟಲು ಹೋಗಿ ನೀರುಪಾಲಾದ ಜಾನುವಾರು; ಬಿರುಗಾಳಿಗೆ ಕಳಚಿದ ವಿಂಡ್‌ ಫ್ಯಾನ್‌

karnataka Rain
ಮಳೆ1 day ago

Karnataka Rain : ಬೀದಿಗೆ ತಂದ ರಣಮಳೆ; ಮನೆ ಕುಸಿದು ಬಿದ್ದು 9 ತಿಂಗಳ ಗರ್ಭಿಣಿ ನರಳಾಟ

Karnataka Rain
ಮಳೆ2 days ago

Karnataka Rain : ರಾಜ್ಯದಲ್ಲಿ ಮಳೆಯ ಆರ್ಭಟ; ರಾತ್ರಿ ಕಳೆದು ಬೆಳಗಾಗುವುದರೊಳಗೆ ಕಂದಕ ನಿರ್ಮಾಣ

Karnataka Rain
ಮಳೆ2 days ago

Karnataka Rain : ಭಾರಿ ಮಳೆ ಎಫೆಕ್ಟ್‌; ಉಕ್ಕಿ ಹರಿಯುತ್ತಿದ್ದ ನದಿಯಲ್ಲಿ ಕೊಚ್ಚಿ ಹೋದ ರಾಸು

Uttara Kannada Landslide
ಮಳೆ2 days ago

Uttara Kannada Landslide: ಶಿರೂರು ಗುಡ್ಡ ಕುಸಿತ; ಅಖಾಡಕ್ಕಿಳಿದ ಜಿಯೊಲಾಜಿಕಲ್ ಸರ್ವೆ ಆಫ್ ಇಂಡಿಯಾ ಟೀಂ

Karnataka Rain
ಮಳೆ4 days ago

Karnataka Rain : ಕಾರವಾರದಲ್ಲಿ ಮಳೆ ಅವಾಂತರ; ಮನೆ ಮೇಲೆ ಗುಡ್ಡ ಕುಸಿದು ವೃದ್ಧ ಸಾವು

karnataka Rain
ಮಳೆ5 days ago

Karnataka Rain : ಭಾರಿ ಮಳೆಗೆ ನಿಯಂತ್ರಣ ತಪ್ಪಿ ಕೆರೆಗೆ ಉರುಳಿ ಬಿದ್ದ ಕಾರು; ನಾಲ್ವರು ಪ್ರಾಣಾಪಾಯದಿಂದ ಪಾರು

karnataka Weather Forecast
ಮಳೆ5 days ago

Karnataka Weather : ವ್ಯಾಪಕ ಮಳೆ ಎಚ್ಚರಿಕೆ; ನಾಳೆಯೂ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

karnataka Rain
ಮಳೆ6 days ago

Karnataka Rain : ಶಾಲಾ-ಕಾಲೇಜಿಗೆ ಈ ದಿನ ರಜಾ; ಅಬ್ಬರಿಸುತ್ತಿರುವ ಮಳೆಗೆ ಮನೆಯಲ್ಲೇ ಎಲ್ಲರೂ ಸಜಾ!

ಟ್ರೆಂಡಿಂಗ್‌