CM Siddaramaiah: ಜಾತಿ ವ್ಯವಸ್ಥೆ ದೇವರ ಸೃಷ್ಟಿಯಲ್ಲ, ಸ್ವಾರ್ಥಿ ಮನುಷ್ಯರ ಸೃಷ್ಟಿ: ಸಿಎಂ - Vistara News

ರಾಜಕೀಯ

CM Siddaramaiah: ಜಾತಿ ವ್ಯವಸ್ಥೆ ದೇವರ ಸೃಷ್ಟಿಯಲ್ಲ, ಸ್ವಾರ್ಥಿ ಮನುಷ್ಯರ ಸೃಷ್ಟಿ: ಸಿಎಂ

CM Siddaramaiah: ಶತಮಾನಗಳ ಕಾಲ ಗುಲಾಮಗಿರಿ ಇದ್ದುದರಿಂದ ತಳಸಮುದಾಯಗಳು ಹಿಂದೆ ಉಳಿದವು. ಈಗಲೂ ಶಿಕ್ಷಣದ ಕೊರತೆಯಿಂದ ಆ ಗುಲಾಮಗಿರಿ ಮನಸ್ಥಿತಿಯಿಂದ ಹೊರಗೆ ಬರಲು ಸಾಧ್ಯವಾಗಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

VISTARANEWS.COM


on

CM Siddaramaiah
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಚಿತ್ರದುರ್ಗ: ಜಾತಿ ವ್ಯವಸ್ಥೆ ದೇವರ ಸೃಷ್ಟಿಯಲ್ಲ. ಸ್ವಾರ್ಥಿ ಮನುಷ್ಯರ ಸೃಷ್ಟಿ. ಅಸಮಾನತೆ ಹೋಗಲಾಡಿಸದೆ ಶೋಷಿತ ಸಮುದಾಯಗಳ ಏಳಿಗೆ ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಹೇಳಿದರು.

ಭೋವಿ ಗುರುಪೀಠದ ಜಗದ್ಗುರು ಸಿದ್ಧರಾಮೇಶ್ವರ ಮಹಾಸಂಸ್ಥಾನದ ಶ್ರೀ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿಯವರ ದೀಕ್ಷಾ ರಜತ ಮಹೋತ್ಸವವನ್ನು ಉದ್ಘಾಟಿಸಿ ಮಾತನಾಡಿದ ಅವರು, ವಿದ್ಯೆ ಕಲಿಯಲು ಅವಕಾಶ ಸಿಕ್ಕ ಕೆಲವರು ಮಾತ್ರ ಆರ್ಥಿಕವಾಗಿ ಮೇಲೆ ಬಂದರು. ಅವಕಾಶ ಇಲ್ಲದವರು ಕುಲ ಕಸುಬನ್ನಷ್ಟೆ ಮಾಡಿಕೊಂಡು ಹಿಂದುಳಿದರು. ಶೋಷಿತ ಸಮುದಾಯಗಳ ವಿಮೋಚನೆಗೆ ಹೋರಾಡಿದ ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಶಿಕ್ಷಣದಿಂದಲೇ ಮೇಧಾವಿಯಾದರು ಎಂದು ವಿವರಿಸಿದರು.

ಶತಮಾನಗಳ ಕಾಲ ಗುಲಾಮಗಿರಿ ಇದ್ದುದರಿಂದ ತಳಸಮುದಾಯಗಳು ಹಿಂದೆ ಉಳಿದವು. ಈಗಲೂ ಶಿಕ್ಷಣದ ಕೊರತೆಯಿಂದ ಆ ಗುಲಾಮಗಿರಿ ಮನಸ್ಥಿತಿಯಿಂದ ಹೊರಗೆ ಬರಲು ಸಾಧ್ಯವಾಗಿಲ್ಲ. ಆದ್ದರಿಂದ ಸ್ವಾಭಿಮಾನ ಬೆಳೆಸಿಕೊಂಡು ಗುಲಾಮಗಿರಿ ಮನಸ್ಥಿತಿಯಿಂದ ಹೊರಗೆ ಬರಬೇಕು ಎಂದರು.

ಹಿಂದುಳಿದವರು, ದಲಿತರು, ಅಲ್ಪಸಂಖ್ಯಾತರು ಶಿಕ್ಷಣ ಪಡೆಯಲು ಸಾಧ್ಯವಾಗಿಲ್ಲ. ಶಿಕ್ಷಣ ಪ್ರತಿಯೊಬ್ಬರ ಮೂಲಭೂತ ಹಕ್ಕು ಎಂದರು.

ಎಸ್‌ಸಿ/ಎಸ್‌ಟಿ ಸಮುದಾಯಗಳ‌ ಜನಸಂಖ್ಯೆ ರಾಜ್ಯದಲ್ಲಿ ಶೇ.24 ಇದ್ದಾರೆ. ಈ ಜನಸಂಖ್ಯೆಗೆ ಸಮವಾಗಿ ಅಭಿವೃದ್ಧಿ ಆಯವ್ಯಯದ ಶೇ.24 ರಷ್ಟು ಹಣವನ್ನು ಈ ಸಮುದಾಯಗಳ ಏಳಿಗೆಗಾಗಿ ಮೀಸಲಿಟ್ಟಿದ್ದು ನಮ್ಮ ಸರ್ಕಾರ. ಭೋವಿ ಅಭಿವೃದ್ಧಿ ನಿಗಮವನ್ನು ಸ್ಥಾಪಿಸಿದ್ದು ನಮ್ಮ ಸರ್ಕಾರ. ಭೋವಿ ಸಮುದಾಯದ ಪ್ರತಿನಿಧಿಯನ್ನು ಕೆಪಿಎಸ್‌ಸಿ ಸದಸ್ಯರನ್ನಾಗಿ ಮಾಡಿದ್ದು ನಮ್ಮ ಸರ್ಕಾರ ಎಂದರು.

ಭೋವಿ ಅಭಿವೃದ್ಧಿ ನಿಗಮವನ್ನು ಭೋವಿ-ವಡ್ಡರ ಅಭಿವೃದ್ಧಿ ನಿಗಮವಾಗಿ ಮರುನಾಮಕರಣ ಮಾಡುಬೇಕು ಎನ್ನುವ ಬೇಡಿಕೆ ಇದೆ. ಈ ಬೇಡಿಕೆಯನ್ನು ಈಡೇರಿಸಲಾಗುವುದು. ಇನ್ನು ಸಿದ್ಧರಾಮೇಶ್ವರ ಅಧ್ಯಯನ‌ಪೀಠಕ್ಕಾಗಿ ಬೇಡಿಕೆ ಇದೆ. ಈ ಬೇಡಿಕೆಯನ್ನೂ ಈಡೇರಿಸಲಾಗುವುದು ಎಂದರು.

ಸಚಿವರಾದ ಶಿವರಾಜ್ ತಂಗಡಗಿ, ಡಿ.ಸುಧಾಕರ್, ಸತೀಶ್ ಜಾರಕಿಹೊಳಿ, ಶಾಸಕರಾದ ರಘುಮೂರ್ತಿ, ವೀರೇಂದ್ರ ಪಪ್ಪಿ, ಎಚ್.ವಿ.ವೆಂಕಟೇಶ್, ಶ್ರೀನಿವಾಸ್, ಭೋವಿ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ರವಿಕುಮಾರ್, ಮಾಜಿ ಸಚಿವ ಅರವಿಂದ ಲಿಂಬಾವಳಿ, ಮಾಜಿ ಸಂಸದರಾದ ಚಂದ್ರಣ್ಣ ಸೇರಿ ಹಲವು ಮಂದಿ ಸಮಾಜದ ಮುಖಂಡರು ಮತ್ತು ಸಮುದಾಯದ ಶ್ರೀಗಳು ಹಾಗೂ ನಾನಾ ಸಮುದಾಯಗಳ ಮುಖಂಡರು ಉಪಸ್ಥಿತರಿದ್ದರು.

ವಾರದಲ್ಲಿ 4 ದಿನ ಶಾಲೆಗಳಿಗೆ ಮೊಟ್ಟೆ ಪೂರೈಸಲು ಅಜೀಂ ಪ್ರೇಮ್‌ಜಿ ಫೌಂಡೇಶನ್ ಜತೆ ಒಪ್ಪಂದ: ಸಿಎಂ

ಬೆಂಗಳೂರು: ವಾರದಲ್ಲಿ 4 ದಿನಗಳು ಸರ್ಕಾರಿ ಶಾಲೆಗಳು ಹಾಗೂ ಸರ್ಕಾರಿ ಅನುದಾನಿತ ಶಾಲೆಗಳಿಗೆ ಮೊಟ್ಟೆಯನ್ನು ಸರಬರಾಜು ಮಾಡಲು ಅಜೀಂ ಪ್ರೇಮ್‌ಜಿ ಪ್ರತಿಷ್ಠಾನದೊಂದಿಗೆ ಒಪ್ಪಂದ ಮಾಡಿಕೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ತಿಳಿಸಿದರು.

ನಗರದ ಖಾಸಗಿ ಹೋಟೆಲ್‌ನಲ್ಲಿ ನಡೆದ ಸರ್ಕಾರಿ ಶಾಲೆಗಳಲ್ಲಿ ವಾರದಲ್ಲಿ 6 ದಿನ ಪೌಷ್ಟಿಕ ಆಹಾರ ವಿತರಣೆ ಕಾರ್ಯಕ್ರಮಕ್ಕೆ ಚಾಲನೆ ಮಾತನಾಡಿದ ಅವರು, ಮಕ್ಕಳು ಆರೋಗ್ಯವಂತರಾಗಿರಲು ಪೌಷ್ಟಿಕ ಆಹಾರ ಅಗತ್ಯ. ಮಾನಸಿಕ ಆರೋಗ್ಯ ಮತ್ತು ಉತ್ತಮ‌ ಶಿಕ್ಷಣಕ್ಕೆ ಗುಣಮಟ್ಟದ ಆಹಾರ ಮುಖ್ಯ. ಉಪಹಾರ ಇಲ್ಲದೆ ಶಾಲೆಗೆ ಬಂದು, ಊಟ ಇಲ್ಲದೆ ಮಧ್ಯಾಹ್ನದವರೆಗೂ ಶಾಲೆಯಲ್ಲಿರುವ ಮಕ್ಕಳನ್ನು ನಾನು ನೋಡಿದ್ದೇನೆ. ಹೀಗಾಗಿ ವಾರದಲ್ಲಿ ಎರಡು ದಿನ ಊಟ ಮತ್ತು ಮೊಟ್ಟೆ ಕೊಡಲು ಮುಂದಾದೆವು. ಈಗ ಅಜೀಂ ಪ್ರೇಮ್‌ಜಿ ಫೌಂಡೇಷನ್ ಅವರು ವಾರದಲ್ಲಿ ನಾಲ್ಕು ದಿನ ಮಕ್ಕಳಿಗೆ ಮೊಟ್ಟೆ ನೀಡಲು ಮತ್ತು ಪೂರಕ ಪೌಷ್ಠಿಕ ಆಹಾರ ಒದಗಿಸುವ ಪುಣ್ಯದ ಕಾರ್ಯಕ್ಕೆ ಸರ್ಕಾರದ ಜೊತೆಗೆ ಕೈಜೋಡಿಸಿದ್ದಾರೆ. ಅವರಿಗೆ ಧನ್ಯವಾದಗಳು ಎಂದು ತಿಳಿಸಿದರು.

ವೈಜ್ಞಾನಿಕವಾಗಿ, ವೈಚಾರಿಕವಾಗಿ ಮಕ್ಕಳು ವಿಕಾಸ ಹೊಂದಬೇಕು. ಆಗ ಮಾತ್ರ ಸಮಾಜಮುಖಿ ಆಗಲು ಸಾಧ್ಯ. ಬಡವರ ಮಕ್ಕಳಿಗೆ ಉತ್ತಮ ಶಿಕ್ಷಣಕ್ಕಾಗಿ ಅವಕಾಶಗಳನ್ನು ಸೃಷ್ಟಿಸುವುದು ನಮ್ಮ ಆಶಯ. ಈ ಕಾರಣಕ್ಕೆ ಸಮವಸ್ತ್ರ, ಶೂ, ಸಾಕ್ಸ್ ಕೊಡುವ ಜೊತೆಗೆ ಹೆಚ್ಚೆಚ್ಚು ವಸತಿ ಶಾಲೆಗಳನ್ನು ತೆರೆಯುತ್ತಿದ್ದೇವೆ ಎಂದರು.

ನಾಳೆ ಅಂಕೋಲಾಕ್ಕೆ ಭೇಟಿ

ಮಳೆಯಿಂದ ರಸ್ತೆ, ಮನೆ ಬಿದ್ದಿರುವುದು ಹಾಗೂ ಬೆಳೆ ಹಾನಿಯಾಗಿರುವುದಕ್ಕೆ ಪರಿಹಾರ ಕಾರ್ಯಗಳನ್ನು ತುರ್ತಾಗಿ ಕೈಬೇಕೆಂದು ಸೂಚಿಸಲಾಗಿದೆ ಎಂದ ಮುಖ್ಯಮಂತ್ರಿಗಳು, ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ಸೇತುವೆ ಪರಿಶೀಲಿಸಲು ನಾಳೆ (ಜುಲೈ 21) ತೆರಳುತ್ತಿರುವುದಾಗಿ ತಿಳಿಸಿದರು.

ಇದನ್ನೂ ಓದಿ | Karnataka Rain : ಭಾರಿ ಮಳೆಗೆ ಮನೆ ಗೋಡೆ ಕುಸಿತ; ಕೊಟ್ಟಿಗೆಯಲ್ಲಿದ್ದ ಜಾನುವಾರುಗಳು ಸಾವು

ಕಾರ್ಯಕ್ರಮದಲ್ಲಿ ಈ ವೇಳೆ ಶಿಕ್ಷಣ ಸಚಿವ ಮಧು ಬಂಗಾರಪ್ಪ, ವಿಪ್ರೋ ಮುಖ್ಯಸ್ಥರಾದ ಅಜೀಂ ಪ್ರೇಮ್ ಜಿ ದಂಪತಿ, ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ.ಅತೀಕ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್, ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷರಾದ ಮೆಹರೂಜ್ ಖಾನ್ ಸೇರಿ ಹಲವು ಗಣ್ಯರು ಉಪಸ್ಥಿತರಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

CM Siddaramaiah: ಬಿಜೆಪಿ ತನ್ನ ಅವಧಿಯ ಹಗರಣಗಳನ್ನು ಮುಚ್ಚಿ ಹಾಕಿದೆ: ಸಿಎಂ ಸಿದ್ದರಾಮಯ್ಯ

CM Siddaramaiah: ಈ ಹಿಂದೆ ಭೋವಿ ಅಭಿವೃದ್ಧಿ ನಿಗಮದಲ್ಲಿ 60 ಕೋಟಿ, ಅರಸು ಟ್ರಕ್ ಟರ್ಮಿನಲ್‌ನಲ್ಲಿ 47 ಕೋಟಿಗೂ ಹೆಚ್ಚು ಹಣ ತಿಂದು ಜೈಲಿಗೆ ಹೋದವರು ಯಾವ ಪಕ್ಷವರು ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

VISTARANEWS.COM


on

CM Siddaramaiah
Koo

ಚಿತ್ರದುರ್ಗ: ಈಗಿನ ಹಗರಣಗಳ ಬಗ್ಗೆ ತನಿಖೆ ನಡೆಯುತ್ತಿದೆ. ತಪ್ಪಿತಸ್ಥರ ಮೇಲೆ ಕಾನೂನು ಕ್ರಮ ಆಗುತ್ತದೆ. ಆದರೆ, ಬಿಜೆಪಿಯವರು ತಮ್ಮ ಕಾಲದಲ್ಲಿ ನಡೆದ ಹಗರಣಗಳನ್ನು ಮುಚ್ಚಿಹಾಕಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಆರೋಪಿಸಿದ್ದಾರೆ.

ಕಾಂಗ್ರೆಸ್ ಸರ್ಕಾರ ಬಿಜೆಪಿ ಸರ್ಕಾರದ ಹಿಂದಿನ ಹಗರಣಗಳನ್ನು ಬೆಳಕಿಗೆ ತರುತ್ತಿದೆ ಎಂಬ ವಿರೋಧ ಪಕ್ಷಗಳ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು, ಹಾಗಾದರೆ ಅವುಗಳು ಹಗರಣಗಳಲ್ಲವೇ? ಹಗರಣಗಳು ಎಂದು ಅವರು ಒಪ್ಪುತ್ತಾರೆಯೇ ಎಂದು ಪ್ರಶ್ನಿಸಿದ್ದಾರೆ.

ಈಗಿನ ಹಗರಣಗಳ ಬಗ್ಗೆ ತನಿಖೆ ನಡೆಯುತ್ತಿದೆ. ಅವರ ಕಾಲದ ಅಕ್ರಮಗಳನ್ನು ಉಲ್ಲೇಖ ಮಾಡಿದ್ದು ಏಕೆಂದರೆ, ಅವರ ಕಾಲದಲ್ಲಿ ಜಾರಿ ನಿರ್ದೇಶನಾಲಯ ಮಧ್ಯ ಪ್ರವೇಶ ಮಾಡಲಿಲ್ಲ. ಭೋವಿ ಅಭಿವೃದ್ಧಿ ನಿಗಮದಲ್ಲಿ 60 ಕೋಟಿ ರೂ.ಗಳನ್ನು ನುಂಗಿಹಾಕಿದ್ದಾರೆ. ದೇವರಾಜ ಅರಸ್ ಟ್ರಕ್ ಟರ್ಮಿನಲ್‌ನಲ್ಲಿ 47 ಕೋಟಿ ರೂ.ಗಳಿಗೂ ಹೆಚ್ಚು ಹಣ ತಿಂದು ಜೈಲಿಗೆ ಹೋದವರು ಯಾವ ಪಕ್ಷವರು? ಇದನ್ನೆಲ್ಲಾ ಹೇಳಬಾರದೆ? ಎಂದರು. ಈಗಿನ ಹಗರಣಗಳ ಬಗ್ಗೆ ತನಿಖೆ ನಡೆಯುತ್ತಿದೆ. ತಪ್ಪಿತಸ್ಥರ ಮೇಲೆ ಕಾನೂನು ಕ್ರಮ ಆಗುತ್ತದೆ ಎಂದು ತಿರುಗೇಟು ನೀಡಿದರು.

ಇದನ್ನೂ ಓದಿ | LKG UKG in Anganwadis: ದೇಶದಲ್ಲೇ ಮೊದಲ ಬಾರಿ ಅಂಗನವಾಡಿಗಳಲ್ಲಿ ಎಲ್‌‌ಕೆಜಿ, ಯುಕೆಜಿ; ಜು.22ಕ್ಕೆ ಉದ್ಘಾಟನೆ

ಬೆದರಿಸುತ್ತಿಲ್ಲ, ವಸ್ತುಸ್ಥಿತಿಯನ್ನು ಮುಂದಿಟ್ಟಿದ್ದೇನೆ

ಮುಖ್ಯಮಂತ್ರಿಗಳು ಬೆದರಿಸುತ್ತಿದ್ದಾರೆ ಎಂದು ಬಿಜೆಪಿ ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿಕೆಗೆ ಉತ್ತರಿಸಿದ ಸಿಎಂ ಬೆದರಿಸುತ್ತಿಲ್ಲ, ವಸ್ತುಸ್ಥಿತಿಯನ್ನು ಮುಂದಿಟ್ಟಿದ್ದೇನೆ ಎಂದರು.

ದೇವರಾಜ ಟ್ರಕ್ ಟರ್ಮಿನಲ್ ಅಧ್ಯಕ್ಷರಾಗಿದ್ದ ಡಿ.ಎಸ್.ವೀರಯ್ಯ ಹಾಗೂ ಎಂ.ಡಿ ಶಂಕರಪ್ಪ ಜೈಲಿಗೆ ಹೋಗಿದ್ದಾರೆ. ಅದನ್ನು ಯಾಕೆ ಪ್ರಸ್ತಾಪಿಸಿಲ್ಲ ? ಅದು ಕೂಡ ತೆರಿಗೆ ಹಣವಲ್ಲವೇ? ವಿರೋಧ ಪಕ್ಷವಾಗಿ ಅದನ್ನು ಯಾಕೆ ಪ್ರಶ್ನಿಸಲಿಲ್ಲ ಎಂದು ಮುಖ್ಯಮಂತ್ರಿಗಳು ಪ್ರಶ್ನಿಸಿದರು.

ಜಾತಿ ವ್ಯವಸ್ಥೆ ದೇವರ ಸೃಷ್ಟಿಯಲ್ಲ, ಸ್ವಾರ್ಥಿ ಮನುಷ್ಯರ ಸೃಷ್ಟಿ: ಸಿಎಂ

ಚಿತ್ರದುರ್ಗ: ಜಾತಿ ವ್ಯವಸ್ಥೆ ದೇವರ ಸೃಷ್ಟಿಯಲ್ಲ. ಸ್ವಾರ್ಥಿ ಮನುಷ್ಯರ ಸೃಷ್ಟಿ. ಅಸಮಾನತೆ ಹೋಗಲಾಡಿಸದೆ ಶೋಷಿತ ಸಮುದಾಯಗಳ ಏಳಿಗೆ ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಹೇಳಿದರು.

ಭೋವಿ ಗುರುಪೀಠದ ಜಗದ್ಗುರು ಸಿದ್ಧರಾಮೇಶ್ವರ ಮಹಾಸಂಸ್ಥಾನದ ಶ್ರೀ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿಯವರ ದೀಕ್ಷಾ ರಜತ ಮಹೋತ್ಸವವನ್ನು ಉದ್ಘಾಟಿಸಿ ಮಾತನಾಡಿದ ಅವರು, ವಿದ್ಯೆ ಕಲಿಯಲು ಅವಕಾಶ ಸಿಕ್ಕ ಕೆಲವರು ಮಾತ್ರ ಆರ್ಥಿಕವಾಗಿ ಮೇಲೆ ಬಂದರು. ಅವಕಾಶ ಇಲ್ಲದವರು ಕುಲ ಕಸುಬನ್ನಷ್ಟೆ ಮಾಡಿಕೊಂಡು ಹಿಂದುಳಿದರು. ಶೋಷಿತ ಸಮುದಾಯಗಳ ವಿಮೋಚನೆಗೆ ಹೋರಾಡಿದ ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಶಿಕ್ಷಣದಿಂದಲೇ ಮೇಧಾವಿಯಾದರು ಎಂದು ವಿವರಿಸಿದರು.

ಶತಮಾನಗಳ ಕಾಲ ಗುಲಾಮಗಿರಿ ಇದ್ದುದರಿಂದ ತಳಸಮುದಾಯಗಳು ಹಿಂದೆ ಉಳಿದವು. ಈಗಲೂ ಶಿಕ್ಷಣದ ಕೊರತೆಯಿಂದ ಆ ಗುಲಾಮಗಿರಿ ಮನಸ್ಥಿತಿಯಿಂದ ಹೊರಗೆ ಬರಲು ಸಾಧ್ಯವಾಗಿಲ್ಲ. ಆದ್ದರಿಂದ ಸ್ವಾಭಿಮಾನ ಬೆಳೆಸಿಕೊಂಡು ಗುಲಾಮಗಿರಿ ಮನಸ್ಥಿತಿಯಿಂದ ಹೊರಗೆ ಬರಬೇಕು ಎಂದರು.

ಹಿಂದುಳಿದವರು, ದಲಿತರು, ಅಲ್ಪಸಂಖ್ಯಾತರು ಶಿಕ್ಷಣ ಪಡೆಯಲು ಸಾಧ್ಯವಾಗಿಲ್ಲ. ಶಿಕ್ಷಣ ಪ್ರತಿಯೊಬ್ಬರ ಮೂಲಭೂತ ಹಕ್ಕು ಎಂದರು.

ಎಸ್‌ಸಿ/ಎಸ್‌ಟಿ ಸಮುದಾಯಗಳ‌ ಜನಸಂಖ್ಯೆ ರಾಜ್ಯದಲ್ಲಿ ಶೇ.24 ಇದ್ದಾರೆ. ಈ ಜನಸಂಖ್ಯೆಗೆ ಸಮವಾಗಿ ಅಭಿವೃದ್ಧಿ ಆಯವ್ಯಯದ ಶೇ.24 ರಷ್ಟು ಹಣವನ್ನು ಈ ಸಮುದಾಯಗಳ ಏಳಿಗೆಗಾಗಿ ಮೀಸಲಿಟ್ಟಿದ್ದು ನಮ್ಮ ಸರ್ಕಾರ. ಭೋವಿ ಅಭಿವೃದ್ಧಿ ನಿಗಮವನ್ನು ಸ್ಥಾಪಿಸಿದ್ದು ನಮ್ಮ ಸರ್ಕಾರ. ಭೋವಿ ಸಮುದಾಯದ ಪ್ರತಿನಿಧಿಯನ್ನು ಕೆಪಿಎಸ್‌ಸಿ ಸದಸ್ಯರನ್ನಾಗಿ ಮಾಡಿದ್ದು ನಮ್ಮ ಸರ್ಕಾರ ಎಂದರು.

ಇದನ್ನೂ ಓದಿ | CM Siddaramaiah: ಅಧಿಕಾರ ದುರುಪಯೋಗ ಆರೋಪ; ಸಿಎಂ ವಿರುದ್ಧ ಲೋಕಾಯುಕ್ತಕ್ಕೆ ದೂರು

ಭೋವಿ ಅಭಿವೃದ್ಧಿ ನಿಗಮವನ್ನು ಭೋವಿ-ವಡ್ಡರ ಅಭಿವೃದ್ಧಿ ನಿಗಮವಾಗಿ ಮರುನಾಮಕರಣ ಮಾಡುಬೇಕು ಎನ್ನುವ ಬೇಡಿಕೆ ಇದೆ. ಈ ಬೇಡಿಕೆಯನ್ನು ಈಡೇರಿಸಲಾಗುವುದು. ಇನ್ನು ಸಿದ್ಧರಾಮೇಶ್ವರ ಅಧ್ಯಯನ‌ಪೀಠಕ್ಕಾಗಿ ಬೇಡಿಕೆ ಇದೆ. ಈ ಬೇಡಿಕೆಯನ್ನೂ ಈಡೇರಿಸಲಾಗುವುದು ಎಂದರು.

Continue Reading

ಕರ್ನಾಟಕ

Movie ticket price hike: ಸಿನಿಮಾ ಪ್ರೇಕ್ಷಕರ ಮೇಲೂ ತೆರಿಗೆ ಪ್ರಹಾರ; ಸಿನಿಮಾ ಟಿಕೆಟ್‌, OTT ಸಬ್‌ಸ್ಕ್ರಿಪ್ಶನ್ ಶುಲ್ಕ ಭಾರಿ ಏರಿಕೆ?

Movie ticket price hike: ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಮ್ಮ ಸಿ.ಎಂ ಸೀಟನ್ನು ಉಳಿಸಿಕೊಳ್ಳಲು ನಾಡಿನ ಸಿನಿ ಪ್ರಿಯರ ಬೆನ್ನಿಗೂ ತೆರಿಗೆ ಬರೆ ಎಳೆಯಲು ಮುಂದಾಗಿದ್ದಾರೆ ಎಂದು ರಾಜ್ಯ ಬಿಜೆಪಿ ಟೀಕಿಸಿದೆ.

VISTARANEWS.COM


on

Movie ticket price hike
Koo

ಬೆಂಗಳೂರು: ಪೆಟ್ರೋಲ್‌, ಡೀಸೆಲ್‌ ಏರಿಕೆ ಬೆನ್ನಲ್ಲೇ ಇದೀಗ ಮನರಂಜನೆ ಕ್ಷೇತ್ರದ ಮೇಲೆ ರಾಜ್ಯ ಸರ್ಕಾರ ಕಣ್ಣಿಟ್ಟಿದೆ. ಸಿನಿಮಾ ಟಿಕೆಟ್ ಮತ್ತು ಒಟಿಟಿ ಸಬ್‌ಸ್ಕ್ರಿಪ್ಶನ್ ಮೇಲೆ ಸೆಸ್ ವಿಧಿಸಲು ಸರ್ಕಾರ ಮುಂದಾಗಿದ್ದು, ಇದಕ್ಕೆ ಭಾರಿ ವಿರೋಧ ವ್ಯಕ್ತವಾಗಿದೆ. ರಾಜ್ಯ ಸರ್ಕಾರದ ನಿರ್ಧಾರವನ್ನು ತೀವ್ರವಾಗಿ ಖಂಡಿಸಿರುವ ರಾಜ್ಯ ಬಿಜೆಪಿ, ಎಲ್ಲದರ ಮೇಲೂ ತೆರಿಗೆಯನ್ನು ಹೇರಿರುವ ಸಿದ್ದರಾಮಯ್ಯ ಸರ್ಕಾರ, ಇದೀಗ ಸಿನಿಮಾ ಪ್ರೇಕ್ಷಕರ ಮೇಲೂ ತೆರಿಗೆ ಪ್ರಹಾರ (Movie ticket price hike) ಮಾಡಲು ‘ಕೈ’ ಎತ್ತಿರುವುದು ನಾಚಿಕೆಗೇಡಿನ ಸಂಗತಿ ಎಂದು ಕಿಡಿಕಾರಿದೆ.

ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯಿಸಿರುವ ರಾಜ್ಯ ಬಿಜೆಪಿ, ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಮ್ಮ ಸಿ.ಎಂ ಸೀಟನ್ನು ಉಳಿಸಿಕೊಳ್ಳಲು ನಾಡಿನ ಸಿನಿ ಪ್ರಿಯರ ಬೆನ್ನಿಗೂ ತೆರಿಗೆ ಬರೆ ಎಳೆಯಲು ಮುಂದಾಗಿದ್ದಾರೆ. ಕನ್ನಡ ಚಿತ್ರರಂಗ ಸಂಕಷ್ಟಗಳಿಂದ ಬಳಲುತ್ತಿದ್ದರೂ, ಅವುಗಳಿಗೆ ಕಿವಿಗೊಡದ ಸಿಎಂ, ಸಿನಿಮಾ ಟಿಕೆಟ್, ಒಟಿಟಿಗಳ ಚಂದಾದಾರಿಕೆಯ ಮೇಲೆ ಶೇ.2ರಷ್ಟು ತೆರಿಗೆಯನ್ನು ವಿಧಿಸಿ ಹಣದೋಚಲು ಮುಂದಾಗಿದ್ದಾರೆ. ಇದಕ್ಕಾಗಿ ವಿಧಾನಸಭೆಯಲ್ಲಿ ಕರ್ನಾಟಕ ಸಿನಿಮಾ ಮತ್ತು ಸಾಂಸ್ಕೃತಿಕ ಹೋರಾಟಗಾರರ (ಕ್ಷೇಮಾಭಿವೃದ್ಧಿ) ಮಸೂದೆ-2024 ಅನ್ನು ಅನುಮೋದನೆಗೆ ಇಟ್ಟಿದ್ದಾರೆ. ಈಗಾಗಲೇ ಎಲ್ಲದರ ಮೇಲೂ ತೆರಿಗೆಯನ್ನು ಹೇರಿರುವ ರಣಹೇಡಿ ಕಾಂಗ್ರೆಸ್‌ ಸರ್ಕಾರ, ಈಗ ಸಿನಿಮಾ ಪ್ರೇಕ್ಷಕರ ಮೇಲೂ ತೆರಿಗೆ ಪ್ರಹಾರ ಮಾಡಲು ‘ಕೈ’ ಎತ್ತಿರುವುದು ನಾಚಿಕೆಗೇಡಿನ ಸಂಗತಿ ಎಂದು ಕಿಡಿಕಾರಿದೆ.

ಮಸೂದೆ ಮಂಡನೆ

ರಾಜ್ಯ ಸರ್ಕಾರ, ಕರ್ನಾಟಕ ಸಿನಿ, ಸಾಂಸ್ಕೃತಿಕ ಕಾರ್ಯಕರ್ತರ (ಕಲ್ಯಾಣ) ಮಸೂದೆ 2024 ಅನ್ನು ಶುಕ್ರವಾರ ವಿಧಾನಸಭೆಯಲ್ಲಿ ಮಂಡಿಸಿದೆ. ಈ ಮಸೂದೆಯಲ್ಲಿ ಸಿನಿಮಾ, ಸಾಂಸ್ಕೃತಿಕ ಕಲಾವಿದರ ಅನುಕೂಲಕ್ಕಾಗಿ ಸಿನಿಮಾ ಟಿಕೆಟ್‌ ಮತ್ತು ಒಟಿಟಿ ಸಬ್‌ಸ್ಕ್ರಿಪ್ಶನ್ ಶುಲ್ಕದ ಮೇಲೆ ಶೇಕಡ 1ರಿಂದ 2ರಷ್ಟು ಹೊಸ ಸೆಸ್ ವಿಧಿಸುವ ಪ್ರಸ್ತಾಪವನ್ನು ಮುಂದಿಟ್ಟಿದೆ. ಇದರಿಂದ ಸಿನಿಮಾ, ಸಾಂಸ್ಕೃತಿಕ ಕಲಾವಿದರಿಗೆ ಇಎಸ್ಐ, ಪಿಎಫ್ ಸೇರಿದಂತೆ ಅನೇಕ ಅನುಕೂಲಗಳನ್ನು ಕಲ್ಪಿಸಲಾಗುವುದು ಎಂದು ತಿಳಿಸಿದೆ.

ಇದನ್ನೂ ಓದಿ | Rakshit Shetty: ಕಿರುತೆರೆಗೂ ಲಗ್ಗೆ ಇಟ್ಟ ʼಸಪ್ತ ಸಾಗರದಾಚೆ ಎಲ್ಲೋ ಸೈಡ್‌ ಬಿʼ ಚಿತ್ರ; ಎಲ್ಲಿ, ಯಾವಾಗ ಪ್ರಸಾರ?

ರಾಜ್ಯದಲ್ಲಿನ ಸಿನಿಮಾ, ಸಾಂಸ್ಕೃತಿಕ ಕಾರ್ಯಕರ್ತರಿಗೆ ಅನುಕೂಲವಾಗುವ ರೀತಿಯಲ್ಲಿ ಕರ್ನಾಟಕ ಸಿನಿ, ಸಾಂಸ್ಕೃತಿಕ ಕಾರ್ಯಕರ್ತರ ಸಾಮಾಜಿಕ ಭದ್ರತೆ & ಕಲ್ಯಾಣ ನಿಧಿ ಎಂಬ ನಿಧಿ ಸ್ಥಾಪಿಸಲಾಗುವುದು ಎಂದು ಮಸೂದೆಯಲ್ಲಿ ತಿಳಿಸಲಾಗಿದೆ. ಇದರಿಂದ ಸಿನಿಮಾ ಟಿಕೆಟ್ ಹಾಗೂ ಒಟಿಟಿ ಚಂದಾದಾರಿಕೆ ಮೇಲೆ ಶೇಕಡ 2 ಪರ್ಸೆಂಟ್ ಮೀರದಂತೆ ಶೇಕಡ 1 ಪರ್ಸೆಂಟ್​ಗಿಂತ ಕಡಿಮೆಯಾಗದಂತೆ ಸೆಸ್‌ ವಿಧಿಸಲಿದೆ. ಈ ಸೆಸ್ ಅನ್ನು ಕರ್ನಾಟಕ ಸಿನಿ, ಸಾಂಸ್ಕೃತಿಕ ಕಾರ್ಯಕರ್ತರ ಸಾಮಾಜಿಕ ಭದ್ರತೆ & ಕಲ್ಯಾಣ ನಿಧಿಗೆ ವರ್ಗಾವಣೆ ಮಾಡಲಾಗುವುದು ಎಂದು ತಿಳಿಸಿದೆ.

Continue Reading

ಕರ್ನಾಟಕ

CM Siddaramaiah: ಅಧಿಕಾರ ದುರುಪಯೋಗ ಆರೋಪ; ಸಿಎಂ ವಿರುದ್ಧ ಲೋಕಾಯುಕ್ತಕ್ಕೆ ದೂರು

CM Siddaramaiah: ಮುಡಾ ನಿಯಮಗಳ ವಿರುದ್ಧ ನಿವೇಶನಗಳನ್ನು ಪತ್ನಿ ಹೆಸರಿಗೆ ನೋಂದಣಿ ಮಾಡಿಸಿಕೊಂಡಿದ್ದಾರೆ. ಹೀಗಾಗಿ ಸಿಎಂ ಸಿದ್ದರಾಮಯ್ಯ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಬಿಜೆಪಿ ಮುಖಂಡ ಎನ್.ಆರ್. ರಮೇಶ್ ದೂರು ನೀಡಿದ್ದಾರೆ.

VISTARANEWS.COM


on

Koo

ಬೆಂಗಳೂರು: ಅಧಿಕಾರ ದುರುಪಯೋಗ ಮಾಡಿಕೊಂಡಿದ್ದಾರೆ ಎಂದು ಆರೋಪಿಸಿ ಸಿಎಂ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತಕ್ಕೆ ದೂರು ನೀಡಲಾಗಿದೆ. ಸಿಎಂ ಸಿದ್ದರಾಮಯ್ಯನವರು (CM Siddaramaiah) ಕಾನೂನಿನ ಎಲ್ಲಾ ನಿಯಮ ಗಾಳಿಗೆ ತೂರಿ ಪತ್ನಿ ಹೆಸರಿಗೆ ಮೂಡ ನಿವೇಶನ ನೋಂದಣಿ ಮಾಡಿಸಿಕೊಂಡಿದ್ದಾರೆ. ಹೀಗಾಗಿ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಬಿಜೆಪಿ ಮುಖಂಡ ಎನ್.ಆರ್. ರಮೇಶ್ ದೂರು ಸಲ್ಲಿಸಿದ್ದಾರೆ.

ಜೆ.ಎಚ್. ಪಟೇಲ್ ಸರ್ಕಾರ ಹಾಗೂ ಧರ್ಮಸಿಂಗ್ ಸರ್ಕಾರದಲ್ಲಿ ಸಿದ್ದರಾಮಯ್ಯ ಅವರು ಉಪ ಮುಖ್ಯಮಂತ್ರಿ ಆಗಿದ್ದಾಗ ಹಾಗೂ 2017-18ರಲ್ಲಿ ಸಿಎಂ ಆಗಿದ್ದಾಗ ಅಧಿಕಾರ ದುರುಪಯೋಗ ಪಡಿಸಿಕೊಂಡಿದ್ದಾರೆ. ವಿಜಯನಗರ ಬಡಾವಣೆಯಲ್ಲಿ ಮುಡಾ ನಿಯಮಗಳ ವಿರುದ್ಧ ನಿವೇಶನಗಳನ್ನು ಪತ್ನಿ ಹೆಸರಿಗೆ ಮಾಡಿಸಿಕೊಂಡಿದ್ದಾರೆ. 39 ಚದರ ಅಡಿಯ 14 ನಿವೇಶನಗಳನ್ನು ನೊಂದಣಿ ಮಾಡಿಕೊಂಡಿದ್ದಾರೆ. ಹೀಗಾಗಿ ಸಿಎಂ ಹಾಗೂ ಮುಡಾ ಅಧಿಕಾರಿಗಳ ವಿರುದ್ಧ ದೂರು ಕೊಟ್ಟಿದ್ದೇನೆ ಎಂದು ಬಿಜೆಪಿ ಮುಖಂಡ ಎನ್.ಆರ್. ರಮೇಶ್ ತಿಳಿಸಿದ್ದಾರೆ.

ಇದನ್ನೂ ಓದಿ | DK Shivakumar: ನಮ್ಮ ಅಧಿಕಾರಿಗಳು ಬಹಳ ಖದೀಮರಿದ್ದಾರೆ, ಡಿ ಗ್ರೇಡ್ ಕ್ಲರ್ಕ್‌ಗಳೆಲ್ಲಾ ಅಧೀಕ್ಷಕ, ಎಂಡಿಗಳಾಗಿದ್ದಾರೆ ಎಂದ ಡಿಕೆಶಿ

ವಾರದಲ್ಲಿ 4 ದಿನ ಶಾಲೆಗಳಿಗೆ ಮೊಟ್ಟೆ ಪೂರೈಸಲು ಅಜೀಂ ಪ್ರೇಮ್‌ಜಿ ಫೌಂಡೇಶನ್ ಜತೆ ಒಪ್ಪಂದ: ಸಿಎಂ

ಬೆಂಗಳೂರು: ವಾರದಲ್ಲಿ 4 ದಿನಗಳು ಸರ್ಕಾರಿ ಶಾಲೆಗಳು ಹಾಗೂ ಸರ್ಕಾರಿ ಅನುದಾನಿತ ಶಾಲೆಗಳಿಗೆ ಮೊಟ್ಟೆಯನ್ನು ಸರಬರಾಜು ಮಾಡಲು ಅಜೀಂ ಪ್ರೇಮ್‌ಜಿ ಪ್ರತಿಷ್ಠಾನದೊಂದಿಗೆ ಒಪ್ಪಂದ ಮಾಡಿಕೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ತಿಳಿಸಿದರು.

ನಗರದ ಖಾಸಗಿ ಹೋಟೆಲ್‌ನಲ್ಲಿ ನಡೆದ ಸರ್ಕಾರಿ ಶಾಲೆಗಳಲ್ಲಿ ವಾರದಲ್ಲಿ 6 ದಿನ ಪೌಷ್ಟಿಕ ಆಹಾರ ವಿತರಣೆ ಕಾರ್ಯಕ್ರಮಕ್ಕೆ ಚಾಲನೆ ಮಾತನಾಡಿದ ಅವರು, ಮಕ್ಕಳು ಆರೋಗ್ಯವಂತರಾಗಿರಲು ಪೌಷ್ಟಿಕ ಆಹಾರ ಅಗತ್ಯ. ಮಾನಸಿಕ ಆರೋಗ್ಯ ಮತ್ತು ಉತ್ತಮ‌ ಶಿಕ್ಷಣಕ್ಕೆ ಗುಣಮಟ್ಟದ ಆಹಾರ ಮುಖ್ಯ. ಉಪಹಾರ ಇಲ್ಲದೆ ಶಾಲೆಗೆ ಬಂದು, ಊಟ ಇಲ್ಲದೆ ಮಧ್ಯಾಹ್ನದವರೆಗೂ ಶಾಲೆಯಲ್ಲಿರುವ ಮಕ್ಕಳನ್ನು ನಾನು ನೋಡಿದ್ದೇನೆ. ಹೀಗಾಗಿ ವಾರದಲ್ಲಿ ಎರಡು ದಿನ ಊಟ ಮತ್ತು ಮೊಟ್ಟೆ ಕೊಡಲು ಮುಂದಾದೆವು. ಈಗ ಅಜೀಂ ಪ್ರೇಮ್‌ಜಿ ಫೌಂಡೇಷನ್ ಅವರು ವಾರದಲ್ಲಿ ನಾಲ್ಕು ದಿನ ಮಕ್ಕಳಿಗೆ ಮೊಟ್ಟೆ ನೀಡಲು ಮತ್ತು ಪೂರಕ ಪೌಷ್ಠಿಕ ಆಹಾರ ಒದಗಿಸುವ ಪುಣ್ಯದ ಕಾರ್ಯಕ್ಕೆ ಸರ್ಕಾರದ ಜೊತೆಗೆ ಕೈಜೋಡಿಸಿದ್ದಾರೆ. ಅವರಿಗೆ ಧನ್ಯವಾದಗಳು ಎಂದು ತಿಳಿಸಿದರು.

ವೈಜ್ಞಾನಿಕವಾಗಿ, ವೈಚಾರಿಕವಾಗಿ ಮಕ್ಕಳು ವಿಕಾಸ ಹೊಂದಬೇಕು. ಆಗ ಮಾತ್ರ ಸಮಾಜಮುಖಿ ಆಗಲು ಸಾಧ್ಯ. ಬಡವರ ಮಕ್ಕಳಿಗೆ ಉತ್ತಮ ಶಿಕ್ಷಣಕ್ಕಾಗಿ ಅವಕಾಶಗಳನ್ನು ಸೃಷ್ಟಿಸುವುದು ನಮ್ಮ ಆಶಯ. ಈ ಕಾರಣಕ್ಕೆ ಸಮವಸ್ತ್ರ, ಶೂ, ಸಾಕ್ಸ್ ಕೊಡುವ ಜೊತೆಗೆ ಹೆಚ್ಚೆಚ್ಚು ವಸತಿ ಶಾಲೆಗಳನ್ನು ತೆರೆಯುತ್ತಿದ್ದೇವೆ ಎಂದರು.

ನಾಳೆ ಅಂಕೋಲಾಕ್ಕೆ ಭೇಟಿ

ಮಳೆಯಿಂದ ರಸ್ತೆ, ಮನೆ ಬಿದ್ದಿರುವುದು ಹಾಗೂ ಬೆಳೆ ಹಾನಿಯಾಗಿರುವುದಕ್ಕೆ ಪರಿಹಾರ ಕಾರ್ಯಗಳನ್ನು ತುರ್ತಾಗಿ ಕೈಬೇಕೆಂದು ಸೂಚಿಸಲಾಗಿದೆ ಎಂದ ಮುಖ್ಯಮಂತ್ರಿಗಳು, ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ಸೇತುವೆ ಪರಿಶೀಲಿಸಲು ನಾಳೆ (ಜುಲೈ 21) ತೆರಳುತ್ತಿರುವುದಾಗಿ ತಿಳಿಸಿದರು.

ಇದನ್ನೂ ಓದಿ | Karnataka Rain : ಭಾರಿ ಮಳೆಗೆ ಮನೆ ಗೋಡೆ ಕುಸಿತ; ಕೊಟ್ಟಿಗೆಯಲ್ಲಿದ್ದ ಜಾನುವಾರುಗಳು ಸಾವು

ಕಾರ್ಯಕ್ರಮದಲ್ಲಿ ಈ ವೇಳೆ ಶಿಕ್ಷಣ ಸಚಿವ ಮಧು ಬಂಗಾರಪ್ಪ, ವಿಪ್ರೋ ಮುಖ್ಯಸ್ಥರಾದ ಅಜೀಂ ಪ್ರೇಮ್ ಜಿ ದಂಪತಿ, ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ.ಅತೀಕ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್, ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷರಾದ ಮೆಹರೂಜ್ ಖಾನ್ ಸೇರಿ ಹಲವು ಗಣ್ಯರು ಉಪಸ್ಥಿತರಿದ್ದರು.

Continue Reading

ದೇಶ

UP Minister Resigns: ಯೋಗಿ ಸರ್ಕಾರದಿಂದ ಒಂದು ವಿಕೆಟ್‌ ಪತನ; ಸಚಿವೆ ಸೋನಮ್‌ ಚಿಶ್ಟಿ ರಾಜೀನಾಮೆ

UP Minister Resigns: ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವರಿಗೆ ಸಲ್ಲಿಸಿದ ರಾಜೀನಾಮೆ ಪತ್ರದಲ್ಲಿ ಸೋನಂ ಕಿನ್ನರ್ ಎಂದೇ ಖ್ಯಾತರಾಗಿರುವ ಚಿಶ್ಟಿ ಅವರು ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯ ಸೋಲಿನ ಹೊಣೆಯನ್ನು ಹೊತ್ತುಕೊಂಡು ತಮ್ಮ ಆತ್ಮಸಾಕ್ಷಿಗೆ ಘಾಸಿಯಾಗಿರುವ ಕಾರಣ ರಾಜೀನಾಮೆ ನೀಡುವುದಾಗಿ ತಿಳಿಸಿದ್ದಾರೆ.

VISTARANEWS.COM


on

UP Minister Resigns
Koo

ಲಖನೌ:ಲೋಕಸಭೆ ಚುನಾವಣೆ(Lok Sabha Election)ಯಲ್ಲಿ ಹೀನಾಯ ಸೋಲಿನ ಬಳಿಕ ಉತ್ತರಪ್ರದೇಶದಲ್ಲಿ ರಾಜಕೀಯ ಬಿಕ್ಕಟ್ಟು ದಿನೇ ದಿನೇ ಹೆಚ್ಚಾಗುತ್ತಿದೆ. ಸಿಎಂ ಯೋಗಿ ಆದಿತ್ಯಾನಾಥ್‌(Yogi Adityanath) ಮತ್ತು ಡಿಸಿಎಂ ಕೇಶವ್‌ ಪ್ರಸಾದ್‌ ಮೌರ್ಯ(Keshav Prasad Mourya) ನಡುವಿನ ಭಿನ್ನಮತದ ಬೆನ್ನಲ್ಲೇ ಉತ್ತರಪ್ರದೇಶ ಮಂಗಳಮುಖಿಯರ ಕಲ್ಯಾಣ ಮಂಡಳಿಯ ಉಪಾಧ್ಯಕ್ಷೆ, ಯೋಗಿ ಸರ್ಕಾರದ ಸಚಿವೆ(UP Minister Resigns) ಸೋನಮ್‌ ಚಿಶ್ಟಿ (Sonam Chishti) ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ತಮ್ಮ ಇಲಾಖೆಯಲ್ಲಿ ಎಗ್ಗಿಲ್ಲದೇ ಭ್ರಷ್ಟಾಚಾರ ನಡೆಯುತ್ತಿದೆ ಮತ್ತು ಅಧಿಕಾರಿಗಳು ತಮ್ಮ ಮಾತು ಕೇಳುತ್ತಿಲ್ಲ ಹೀಗಾಗಿ ರಾಜೀನಾಮೆ ಸಲ್ಲಿಸುತ್ತಿರುವುದಾಗಿ ಹೇಳಿದ್ದಾರೆ.

ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವರಿಗೆ ಸಲ್ಲಿಸಿದ ರಾಜೀನಾಮೆ ಪತ್ರದಲ್ಲಿ ಸೋನಂ ಕಿನ್ನರ್ ಎಂದೇ ಖ್ಯಾತರಾಗಿರುವ ಚಿಶ್ಟಿ ಅವರು ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯ ಸೋಲಿನ ಹೊಣೆಯನ್ನು ಹೊತ್ತುಕೊಂಡು ತಮ್ಮ ಆತ್ಮಸಾಕ್ಷಿಗೆ ಘಾಸಿಯಾಗಿರುವ ಕಾರಣ ರಾಜೀನಾಮೆ ನೀಡುವುದಾಗಿ ತಿಳಿಸಿದ್ದಾರೆ.

“ವಿವಿಧ ಜಿಲ್ಲೆಗಳು/ಲೋಕಸಭಾ ಸ್ಥಾನಗಳಲ್ಲಿ ಭಾರತೀಯ ಜನತಾ ಪಕ್ಷದ ಸೋಲು ಮತ್ತು ಕಾರ್ಯಕ್ಷಮತೆಯ ಜವಾಬ್ದಾರಿಯನ್ನು ನಾನು ತೆಗೆದುಕೊಳ್ಳುತ್ತೇನೆ ಮತ್ತು ನಾನು MoS ಆಗಿ ಪಕ್ಷವನ್ನು ಬಲಪಡಿಸುವಲ್ಲಿ ವಿಫಲಳಾಗಿದ್ದೇನೆ. ನಾನು ರಾಜೀನಾಮೆ ನೀಡುತ್ತಿದ್ದೇನೆ. ಇದರ ನಂತರ, ನಾನು ಬಿಜೆಪಿಯ ಸಂಘಟನೆಯನ್ನು ಬಲಪಡಿಸಲು ಕೆಲಸ ಮಾಡುವುದನ್ನು ಮುಂದುವರಿಸುತ್ತೇನೆ ಮತ್ತು ಯುಪಿ ಬಿಜೆಪಿ ನನಗೆ ನೀಡುವ ಯಾವುದೇ ಜವಾಬ್ದಾರಿಯನ್ನು ಪೂರೈಸುತ್ತೇನೆ ಎಂದು ಬರೆದಿದ್ದಾರೆ.

ನನ್ನ ಇಲಾಖೆಯಲ್ಲಿ ದೊಡ್ಡ ಮಟ್ಟದಲ್ಲಿ ಭ್ರಷ್ಟಾಚಾರ ನಡೆದಿರುವ ಕಾರಣ ನಾನು ರಾಜೀನಾಮೆ ನೀಡಿದ್ದೇನೆ. ನನ್ನ ಇಲಾಖೆಗೆ ಬಜೆಟ್ ಮಂಜೂರು ಮಾಡಿದಾಗ, ನನ್ನ ಒಪ್ಪಿಗೆಯಿಲ್ಲದೆ ಕೆಲವು ಕಾರ್ಯಗಳು ನಡೆದಿವೆ. ನನ್ನ ಆಡಳಿತ ಮಂಡಳಿಯಲ್ಲಿ ಸಿಬ್ಬಂದಿ ಇಲ್ಲ,’’ ಎಂದು ಹೇಳಿದರು.

“ಅಖಿಲೇಶ್ ಯಾದವ್ ಆಡಳಿತದಲ್ಲಿ ನನಗೆ ಮನೆ ಮಂಜೂರು ಮಾಡಲಾಗಿತ್ತು ಆದರೆ ಅದರ ನಿರ್ವಹಣೆಗೆ ತಗಲುವ ವೆಚ್ಚಕ್ಕೆ ಭಾರಿ ಬಿಲ್ ನೀಡಲಾಯಿತು. ನನಗೆ ಸರ್ಕಾರದಿಂದ ಮನೆ ಮಂಜೂರು ಮಾಡುವಾಗ, ಅದರ ನಿರ್ವಹಣೆಗೆ ಸರ್ಕಾರವೇ ವೆಚ್ಚವನ್ನು ಭರಿಸಬೇಕು ಎಂದು ಹೇಳಲಾಗಿತ್ತು. ಸರ್ಕಾರದ ಎಸ್ಟೇಟ್ ಇಲಾಖೆಯು ಸಮಾಜ ಕಲ್ಯಾಣ ಇಲಾಖೆ ವೆಚ್ಚವನ್ನು ಭರಿಸುವುದಾಗಿ ಹೇಳುತ್ತಿದೆ ಆದರೆ ಸಮಾಜ ಕಲ್ಯಾಣ ಇಲಾಖೆಯು ಯೋಗಿಜಿ (ಯೋಗಿ ಆದಿತ್ಯನಾಥ್ ಅವರ ಮುಖ್ಯಮಂತ್ರಿ ಕಚೇರಿ ಭರಿಸಲಿದೆ ಎಂದು ಹೇಳುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಇದನ್ನೂ ಓದಿ:Vinod Dondale: ಕನ್ನಡ ಕಿರುತೆರೆಯ ಖ್ಯಾತ ನಿರ್ದೇಶಕ ವಿನೋದ್ ದೊಂಡಾಲೆ ಆತ್ಮಹತ್ಯೆಗೆ ಶರಣು

Continue Reading
Advertisement
Samsung Launches Galaxy Watch 7 Galaxy Watch Ultra Buds 3 Series
ವಾಣಿಜ್ಯ23 mins ago

Samsung Galaxy: ಸ್ಯಾಮ್‌ಸಂಗ್‌ನಿಂದ ಗ್ಯಾಲಕ್ಸಿ ವಾಚ್7, ಗ್ಯಾಲಕ್ಸಿ ವಾಚ್ ಅಲ್ಟ್ರಾ, ಬಡ್ಸ್ 3 ಸರಣಿ ಬಿಡುಗಡೆ

Smriti Mandhana
ಕ್ರೀಡೆ40 mins ago

Smriti Mandhana : ಶ್ರೀಲಂಕಾದ ಅಂಗವಿಕಲ ಕ್ರಿಕೆಟ್​ ಅಭಿಮಾನಿಗೆ ಮೊಬೈಲ್ ಕೊಟ್ಟ ಸ್ಮೃತಿ ಮಂದಾನಾ

One Day Information Programme on Banking Examination at Shivamogga
ಶಿವಮೊಗ್ಗ46 mins ago

Shivamogga News: ಬ್ಯಾಂಕುಗಳಲ್ಲಿ ಕನ್ನಡಿಗರ ಸಂಖ್ಯೆ ಗಣನೀಯವಾಗಿ ಕ್ಷೀಣ: ಎಂ.ಎನ್. ನಾಗರಾಜ್ ಆತಂಕ

Paris Olympics 2024
ಕ್ರೀಡೆ1 hour ago

Paris Olympics 2024 : ಒಲಿಂಪಿಕ್ಸ್​ನಲ್ಲಿ ಸ್ಪರ್ಧಿಸಲಿರುವ ರಾಜ್ಯದ ಕ್ರೀಡಾಪಟುಗಳಿಗೆ ತಲಾ 5 ಲಕ್ಷ ರೂ. ಪ್ರೋತ್ಸಾಹಧನ

Union Minister Pralhad Joshi slams the state Congress government
ಕರ್ನಾಟಕ1 hour ago

Pralhad joshi: ಕಾಂಗ್ರೆಸಿಗರಿಗೆ ರಾಮನ ಹೆಸರೆಂದರೆ ಅಲರ್ಜಿ; ಪ್ರಲ್ಹಾದ್‌ ಜೋಶಿ ವಾಗ್ದಾಳಿ

Talent is not the property of any caste community says CM Siddaramaiah
ಕರ್ನಾಟಕ1 hour ago

CM Siddaramaiah: ಪ್ರತಿಭೆ ಯಾವುದೇ ಒಂದು ಜಾತಿ-ಸಮುದಾಯದ ಸ್ವತ್ತಲ್ಲ: ಸಿಎಂ ಸಿದ್ದರಾಮಯ್ಯ

250 Anganwadis selected to start pre primary school says Minister Lakshmi Hebbalkar
ಕರ್ನಾಟಕ1 hour ago

Lakshmi Hebbalkar: ಪೂರ್ವ ಪ್ರಾಥಮಿಕ ಶಾಲೆ ಆರಂಭಿಸಲು 250 ಅಂಗನವಾಡಿ ಆಯ್ಕೆ; ಜು.22ಕ್ಕೆ ಚಾಲನೆ

NEET UG 2024
ದೇಶ1 hour ago

NEET UG 2024: ನೀಟ್‌ ಪ್ರಶ್ನೆಪತ್ರಿಕೆ ಟ್ರಂಕ್‌ ಕದ್ದ ಮತ್ತೊಬ್ಬ ಕಿಂಗ್‌ಪಿನ್‌ ಸೇರಿ ಮೂವರನ್ನು ಬಂಧಿಸಿದ ಸಿಬಿಐ!

Cauvery Dispute
ಕರ್ನಾಟಕ2 hours ago

Cauvery Dispute: 2-3 ದಿನದಲ್ಲಿ ಕೆಆರ್‌ಎಸ್ ಡ್ಯಾಂ ಭರ್ತಿ; ಕೆರೆಗಳನ್ನು ತುಂಬಿಸಲು ಕ್ರಮ ಎಂದ ಡಿಕೆಶಿ

Royal Enfield Guerrilla 450
ಆಟೋಮೊಬೈಲ್2 hours ago

Royal Enfield Guerrilla 450 : ರಾಯಲ್ ಎನ್‌ಫೀಲ್ಡ್ ಗೆರಿಲ್ಲಾ 450 ಖರೀದಿ ಮಾಡಲು ಐದು ಕಾರಣ ಇಲ್ಲಿದೆ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Rain
ಮಳೆ9 hours ago

Karnataka Rain : ಭಾರಿ ಮಳೆಗೆ ಮನೆ ಗೋಡೆ ಕುಸಿತ; ಕೊಟ್ಟಿಗೆಯಲ್ಲಿದ್ದ ಜಾನುವಾರುಗಳು ಸಾವು

karnataka Rain
ಮಳೆ10 hours ago

Karnataka Rain : ಹಳ್ಳ ದಾಟಲು ಹೋಗಿ ನೀರುಪಾಲಾದ ಜಾನುವಾರು; ಬಿರುಗಾಳಿಗೆ ಕಳಚಿದ ವಿಂಡ್‌ ಫ್ಯಾನ್‌

karnataka Rain
ಮಳೆ1 day ago

Karnataka Rain : ಬೀದಿಗೆ ತಂದ ರಣಮಳೆ; ಮನೆ ಕುಸಿದು ಬಿದ್ದು 9 ತಿಂಗಳ ಗರ್ಭಿಣಿ ನರಳಾಟ

Karnataka Rain
ಮಳೆ1 day ago

Karnataka Rain : ರಾಜ್ಯದಲ್ಲಿ ಮಳೆಯ ಆರ್ಭಟ; ರಾತ್ರಿ ಕಳೆದು ಬೆಳಗಾಗುವುದರೊಳಗೆ ಕಂದಕ ನಿರ್ಮಾಣ

Karnataka Rain
ಮಳೆ2 days ago

Karnataka Rain : ಭಾರಿ ಮಳೆ ಎಫೆಕ್ಟ್‌; ಉಕ್ಕಿ ಹರಿಯುತ್ತಿದ್ದ ನದಿಯಲ್ಲಿ ಕೊಚ್ಚಿ ಹೋದ ರಾಸು

Uttara Kannada Landslide
ಮಳೆ2 days ago

Uttara Kannada Landslide: ಶಿರೂರು ಗುಡ್ಡ ಕುಸಿತ; ಅಖಾಡಕ್ಕಿಳಿದ ಜಿಯೊಲಾಜಿಕಲ್ ಸರ್ವೆ ಆಫ್ ಇಂಡಿಯಾ ಟೀಂ

Karnataka Rain
ಮಳೆ4 days ago

Karnataka Rain : ಕಾರವಾರದಲ್ಲಿ ಮಳೆ ಅವಾಂತರ; ಮನೆ ಮೇಲೆ ಗುಡ್ಡ ಕುಸಿದು ವೃದ್ಧ ಸಾವು

karnataka Rain
ಮಳೆ4 days ago

Karnataka Rain : ಭಾರಿ ಮಳೆಗೆ ನಿಯಂತ್ರಣ ತಪ್ಪಿ ಕೆರೆಗೆ ಉರುಳಿ ಬಿದ್ದ ಕಾರು; ನಾಲ್ವರು ಪ್ರಾಣಾಪಾಯದಿಂದ ಪಾರು

karnataka Weather Forecast
ಮಳೆ5 days ago

Karnataka Weather : ವ್ಯಾಪಕ ಮಳೆ ಎಚ್ಚರಿಕೆ; ನಾಳೆಯೂ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

karnataka Rain
ಮಳೆ5 days ago

Karnataka Rain : ಶಾಲಾ-ಕಾಲೇಜಿಗೆ ಈ ದಿನ ರಜಾ; ಅಬ್ಬರಿಸುತ್ತಿರುವ ಮಳೆಗೆ ಮನೆಯಲ್ಲೇ ಎಲ್ಲರೂ ಸಜಾ!

ಟ್ರೆಂಡಿಂಗ್‌