Kannada New Movie: 'ಫಾರೆಸ್ಟ್' ಸಿನಿಮಾದ "ಓಡೋ ಓಡೋ" ಹಾಡಿಗೆ ಅಭಿಮಾನಿಗಳು ಫಿದಾ - Vistara News

ಕರ್ನಾಟಕ

Kannada New Movie: ‘ಫಾರೆಸ್ಟ್’ ಸಿನಿಮಾದ “ಓಡೋ ಓಡೋ” ಹಾಡಿಗೆ ಅಭಿಮಾನಿಗಳು ಫಿದಾ

Kannada New Movie: ಚಿಕ್ಕಣ್ಣ, ಅನೀಶ್ ತೇಜೇಶ್ವರ್, ಗುರುನಂದನ್ ಹಾಗೂ ರಂಗಾಯಣ ರಘು ಮುಖ್ಯ ಭೂಮಿಕೆಯಲ್ಲಿ ನಟಿಸಿರುವ “ಫಾರೆಸ್ಟ್” ಚಿತ್ರ ಆರಂಭದಿಂದಲೂ ಸಾಕಷ್ಟು ಸದ್ದು ಮಾಡುತ್ತಿದೆ. ಇತ್ತೀಚೆಗಷ್ಟೇ ಈ ಚಿತ್ರಕ್ಕಾಗಿ ಪುನೀತ್ ಆರ್ಯ ಅವರು ಬರೆದು ಧರ್ಮವಿಶ್ ಸಂಗೀತ ನೀಡಿರುವ, ಖ್ಯಾತ ಗಾಯಕ ಕೈಲಾಶ್ ಖೇರ್ ಹಾಡಿರುವ “ಓಡೋ ಓಡೋ” ಹಾಡು ಎನ್.ಎಂ.ಕೆ. ಸಿನಿಮಾಸ್ ಯೂಟ್ಯೂಬ್ ಚಾನಲ್‌ನಲ್ಲಿ ಬಿಡುಗಡೆಯಾಗಿದ್ದು, ಹಾಡಿಗೆ ಅಭಿಮಾನಿಗಳು ಫಿದಾ ಆಗಿದ್ದಾರೆ.

VISTARANEWS.COM


on

Kannada New Movie Forest Kannada movie Odo Odo song hit
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಕನ್ನಡದಲ್ಲೀಗ ಕಂಟೆಂಟ್ ಓರಿಯಂಟೆಡ್ ಚಿತ್ರಗಳದೇ ಕಾರುಬಾರು. ಉತ್ತಮ ಕಂಟೆಂಟ್ ಇರುವ ಚಿತ್ರಗಳು ಇತ್ತೀಚಿಗೆ ಯಶಸ್ವಿಯಾಗಿರುವ ಉದಾಹರಣೆಗಳು ಕನ್ನಡದಲ್ಲಿ ಸಾಕಷ್ಟಿದೆ. ಅಂತಹುದೇ ಉತ್ತಮ ಕಂಟೆಂಟ್‌ನೊಂದಿಗೆ ಕನ್ನಡಿಗರ ಮುಂದೆ ಬರಲಿದೆ “ಫಾರೆಸ್ಟ್” (Kannada New Movie) ಚಿತ್ರ.

ಎನ್.ಎಂ.ಕೆ ಸಿನಿಮಾಸ್ ಲಾಂಛನದಲ್ಲಿ ಎನ್.ಎಂ. ಕಾಂತರಾಜ್ ನಿರ್ಮಾಣದ, ಚಂದ್ರ ಮೋಹನ್ ನಿರ್ದೇಶನದ ಹಾಗೂ ಚಿಕ್ಕಣ್ಣ, ಅನೀಶ್ ತೇಜೇಶ್ವರ್, ಗುರುನಂದನ್ ಹಾಗೂ ರಂಗಾಯಣ ರಘು ಮುಖ್ಯ ಭೂಮಿಕೆಯಲ್ಲಿ ನಟಿಸಿರುವ “ಫಾರೆಸ್ಟ್” ಚಿತ್ರ ಆರಂಭದಿಂದಲೂ ಸಾಕಷ್ಟು ಸದ್ದು ಮಾಡುತ್ತಿದೆ.

ಇತ್ತೀಚೆಗಷ್ಟೇ ಈ ಚಿತ್ರಕ್ಕಾಗಿ ಪುನೀತ್ ಆರ್ಯ ಅವರು ಬರೆದು ಧರ್ಮವಿಶ್ ಸಂಗೀತ ನೀಡಿರುವ “ಓಡೋ ಓಡೋ” ಹಾಡು ಎನ್.ಎಂ.ಕೆ. ಸಿನಿಮಾಸ್ ಯೂಟ್ಯೂಬ್ ಚಾನಲ್‌ನಲ್ಲಿ ಬಿಡುಗಡೆಯಾಗಿದೆ.

ಖ್ಯಾತ ಗಾಯಕ ಕೈಲಾಶ್ ಖೇರ್ ಹಾಡಿರುವ ಈ ಹಾಡನ್ನು ಈಗಾಗಲೇ ಹನ್ನೊಂದು ಲಕ್ಷಕ್ಕೂ ಅಧಿಕ ಜನರು ವೀಕ್ಷಿಸಿದ್ದಾರೆ. ಹಾಡಿಗೆ ಮೆಚ್ಚುಗೆಯ ಮಹಾಪೂರವೇ ಹರಿದು ಬರುತ್ತಿದೆ.

ಈ ಮಲ್ಟಿಸ್ಟಾರರ್ ಸಿನಿಮಾದ ಚಿತ್ರೀಕರಣ ಮುಕ್ತಾಯವಾಗಿದೆ. ಮಡಿಕೇರಿ, ಎಂ.ಎಂ.ಹಿಲ್ಸ್, ಸಂಪಾಜೆ ಫಾರೆಸ್ಟ್ ಹಾಗೂ ಬೆಂಗಳೂರಿನಲ್ಲಿ ಚಿತ್ರೀಕರಣ ನಡೆದಿದೆ.

ನಿರ್ದೇಶಕ ಚಂದ್ರಮೋಹನ್ ಅವರು ಸತ್ಯಶೌರ್ಯ ಸಾಗರ್ ಅವರ ಜತೆಗೂಡಿ ಕಥೆ, ಚಿತ್ರಕಥೆ ರಚಿಸಿದ್ದಾರೆ. ಸಂಭಾಷಣೆಯನ್ನು ಸತ್ಯಶೌರ್ಯ ಸಾಗರ್ ಅವರೇ ಬರೆದಿದ್ದಾರೆ. ಚಿತ್ರದಲ್ಲಿ ಎರಡು ಹಾಡುಗಳಿದ್ದು, ಧರ್ಮವಿಶ್ ಸಂಗೀತ ನೀಡಿದ್ದಾರೆ. ಹಿನ್ನೆಲೆ ಸಂಗೀತ ಆನಂದ್ ರಾಜವಿಕ್ರಮ್ ಅವರದು. ರವಿಕುಮಾರ್ ಛಾಯಾಗ್ರಹಣ, ಅರ್ಜುನ್ ಕಿಟ್ಟು ಸಂಕಲನ, ಅಮರ್ ಕಲಾ ನಿರ್ದೇಶನ ಹಾಗೂ ಡಾ.ರವಿವರ್ಮ ಅವರ ಸಾಹಸ ನಿರ್ದೇಶನ “ಫಾರೆಸ್ಟ್” ಚಿತ್ರಕ್ಕಿದೆ.

ಇದನ್ನೂ ಓದಿ: Samsung Galaxy: ಸ್ಯಾಮ್‌ಸಂಗ್‌ನಿಂದ ಗ್ಯಾಲಕ್ಸಿ ವಾಚ್7, ಗ್ಯಾಲಕ್ಸಿ ವಾಚ್ ಅಲ್ಟ್ರಾ, ಬಡ್ಸ್ 3 ಸರಣಿ ಬಿಡುಗಡೆ

ಚಿಕ್ಕಣ್ಣ, ಅನೀಶ್ ತೇಜೇಶ್ವರ್, ಗುರುನಂದನ್, ಶರಣ್ಯ ಶೆಟ್ಟಿ, ಅರ್ಚನಾ ಕೊಟ್ಟಿಗೆ, ರಂಗಾಯಣ ರಘು, ಅವಿನಾಶ್, ಪ್ರಕಾಶ್ ತುಮ್ಮಿನಾಡು, ದೀಪಕ್ ರೈ ಪಾಣಂಜೆ, ಸೂರಜ್ ಪಾಪ್ಸ್, ಸುನೀಲ್ ಕುಮಾರ್ ಮುಂತಾದವರು ಚಿತ್ರದ ತಾರಾಬಳಗದಲ್ಲಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೈಂ

Road Accident: ಕಾರು-ಬಸ್‌ ನಡುವೆ ಮುಖಾಮುಖಿ ಡಿಕ್ಕಿ; ಇಬ್ಬರ ಸಾವು

Road Accident: ಕಾರು ಚಾಲಕನ ಓವರ್‌ ಸ್ಪೀಡ್‌ ಇಬ್ಬರ ಪ್ರಾಣ ಕಸಿದಿದೆ. ಎರ್ಟಿಗಾ ಕಾರು ಮತ್ತು ಕೆಎಸ್‌ಆರ್‌ಟಿಸಿ ಬಸ್‌ ಮುಖಾಮುಖಿ ಡಿಕ್ಕಿಯಾಗಿ ಇಬ್ಬರು ಮೃತಪಟ್ಟಿರುವ ಘಟನೆ ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ಊಟಿ ರಸ್ತೆಯಲ್ಲಿ ಶನಿವಾರ ತಡರಾತ್ರಿ ನಡೆದಿದೆ. ಗುಂಡ್ಲುಪೇಟೆ ಎಪಿಎಂಸಿ ಮಾರ್ಕೆಟ್ ಬಳಿ ಈ ಅವಘಡ ಸಂಭವಿಸಿದ್ದು, ವೇಗವಾಗಿ ಬಂದ ಎರ್ಟಿಗಾ ಕಾರು ಕೆಎಸ್‌ಆರ್‌ಟಿಸಿ ಬಸ್‌ಗೆ ಡಿಕ್ಕಿ ಹೊಡೆದಿದೆ. ಸದ್ಯ ಮೃತರ ಗುರುತು ಪತ್ತೆಯಾಗಿಲ್ಲ.

VISTARANEWS.COM


on

Road Accident
Koo

ಚಾಮರಾಜನಗರ: ಕಾರು ಚಾಲಕನ ಓವರ್‌ ಸ್ಪೀಡ್‌ ಇಬ್ಬರ ಪ್ರಾಣ ಕಸಿದಿದೆ. ಎರ್ಟಿಗಾ ಕಾರು ಮತ್ತು ಕೆಎಸ್‌ಆರ್‌ಟಿಸಿ ಬಸ್‌ ಮುಖಾಮುಖಿ ಡಿಕ್ಕಿಯಾಗಿ ಇಬ್ಬರು ಮೃತಪಟ್ಟಿರುವ ಘಟನೆ ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ಊಟಿ ರಸ್ತೆಯಲ್ಲಿ ಶನಿವಾರ ತಡರಾತ್ರಿ ನಡೆದಿದೆ (Road Accident).

ಗುಂಡ್ಲುಪೇಟೆ ಎಪಿಎಂಸಿ ಮಾರ್ಕೆಟ್ ಬಳಿ ಈ ಅವಘಡ ಸಂಭವಿಸಿದ್ದು, ವೇಗವಾಗಿ ಬಂದ ಎರ್ಟಿಗಾ ಕಾರು ಕೆಎಸ್‌ಆರ್‌ಟಿಸಿ ಬಸ್‌ಗೆ ಡಿಕ್ಕಿ ಹೊಡೆದಿದೆ. ಸ್ಥಳಕ್ಕೆ ಗುಂಡ್ಲುಪೇಟೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಸದ್ಯ ಮೃತರ ಗುರುತು ಪತ್ತೆಯಾಗಿಲ್ಲ.

ಬೆಳಗಾವಿಯಲ್ಲಿ ಬೈಕ್‌ ಮುಖಾಮುಖಿ ಡಿಕ್ಕಿ, ಸವಾರರಿಬ್ಬರು ಸಾವು

ಬೆಳಗಾವಿ: ಬೈಕ್‌ಗಳ ನಡುವೆ ಅಪಘಾತ ಸಂಭವಿಸಿದ್ದು, ‌ಇಬ್ಬರು ಸವಾರರು ದಾರುಣವಾಗಿ ಮೃತಪಟ್ಟಿದ್ದಾರೆ. ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಉಗರಗೋಳ ಬಳಿ ಘಟನೆ ನಡೆದಿದೆ. ಬಸವರಾಜ ಪ್ರಭುನವರ್(48), ಯಲ್ಲಪ್ಪ ಕೊರವಿನಕೊಪ್ಪ( 46) ಮೃತ ದುರ್ದೈವಿಗಳು. ಮತ್ತಿಬ್ಬರು ಬೈಕ್ ಸವಾರಿಗೆ ಗಂಭೀರ ‌ಗಾಯವಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸ್ಥಳಕ್ಕೆ ರಾಮದುರ್ಗ ಡಿವೈಎಸ್ಪಿ, ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸವದತ್ತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಬಾಗಲಕೋಟೆಯಲ್ಲಿ ಟ್ರಕ್ – ಬೊಲೆರೊ ಮುಖಾಮುಖಿ ಡಿಕ್ಕಿ

ಬಾಗಲಕೋಟೆ: ಟ್ರಕ್ ಹಾಗೂ ಬೊಲೆರೊ ವಾಹನಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ. ಡಿಕ್ಕಿ ರಭಸಕ್ಕೆ ಬೊಲೆರೋ ವಾಹನದ ಮುಂಭಾಗ ನಜ್ಜು ಗುಜ್ಜಾಗಿದೆ. ಬಾಗಲಕೋಟೆ ಜಿಲ್ಲೆಯ ಮುಧೋಳ‌ ತಾಲೂಕಿನ ಬೆಳಗಲಿ ಪಟ್ಟಣದ ಬಳಿ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಅದೃಷ್ಟವಶಾತ್ ಬೊಲೆರೋ ಚಾಲಕ ಸಣ್ಣಪುಟ್ಟ ಗಾಯದೊಂದಿಗೆ ಪಾರಾಗಿದ್ದಾರೆ. ಗಾಯಾಳನ್ನು ಮುಧೋಳ ತಾಲ್ಲೂಕಾಸ್ಪತ್ರೆಗೆ ದಾಖಲು ಮಾಡಲಾಗಿದೆ. ಸ್ಥಳಕ್ಕೆ ಮುಧೋಳ‌ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಕುಡಿದ ಮತ್ತಿನಲ್ಲಿ ಕಾರು ಚಲಾಯಿಸಿ ಪಾದಚಾರಿಗಳಿಗೆ ಡಿಕ್ಕಿ

ವಿಜಯಪುರ: ಕುಡಿದ ಮತ್ತಿನಲ್ಲಿ ಅಡ್ಡಾದಿಡ್ಡಿಯಾಗಿ ಕಾರು ಚಲಾಯಿಸಿದ್ದಲ್ಲದೇ ಕುಡುಕನೊಬ್ಬ ಮಹಿಳೆಯರಿಗೆ ಗುದ್ದಿದ್ದಾನೆ. ವಿಜಯಪುರ ಜಿಲ್ಲೆಯ ದೇವರ ಹಿಪ್ಪರಗಿ ನಗರದ ಟಿಪ್ಪು ನಗರದಲ್ಲಿ ಘಟನೆ ನಡೆದಿದೆ. ಕುಡಿದ ಮತ್ತಿನಲ್ಲಿ ಇಬ್ಬರು ಮಹಿಳೆಯರಿಗೆ ಗುದ್ದಿ ಮುಂದೆ ಬೈಕ್ ಸವಾರನಿಗೆ ಡಿಕ್ಕಿ ಹೊಡೆದಿದೆ.

ರಿಯಾಜ್ ದುಮ್ಮಾದ್ರಿ ಎಂಬಾತ ಕುಡಿದು ವಾಹನ ಚಲಾಯಿಸಿದವನು. ಕಾರು ಅಪಘಾತದ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ನಿನ್ನೆ ಶುಕ್ರವಾರ ರಾತ್ರಿ 9 ಗಂಟೆ ಸುಮಾರಿಗೆ ಅಪಘಾತ ನಡೆದಿದೆ. ಐಶ್ವರ್ಯ ರಾಮಚಂದ್ರ ಗೊಲ್ಲರ್ (16), ಯಲ್ಲವ್ವ ಪರಶುರಾಮ ಗೊಲ್ಲರ್ (50) ಎಂಬುವವರಿಗೆ ಗಂಭೀರ ಗಾಯವಾಗಿದ್ದು, ಅವರನ್ನು ವಿಜಯಪುರದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ನಂತರ ಹೆಚ್ಚಿನ ಚಿಕಿತ್ಸೆಗೆ ಮೀರಜ್‌ಗೆ ಕರದೊಯ್ಯಲಾಗಿದೆ. ಸದ್ಯ ದೇವರ ಹಿಪ್ಪರಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿ ಹಾಗೂ ಕಾರನ್ನು ದೇವರ ಹಿಪ್ಪರಗಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಪ್ರಕರಣದ ಬಗ್ಗೆ ಹೆಚ್ಚಿನ ವಿವಾರಣೆ ನಡೆಯುತ್ತಿದೆ.

ಇದನ್ನೂ ಓದಿ: Vinod Dondale: ಕನ್ನಡ ಕಿರುತೆರೆಯ ಖ್ಯಾತ ನಿರ್ದೇಶಕ ವಿನೋದ್ ದೊಂಡಾಲೆ ಆತ್ಮಹತ್ಯೆಗೆ ಶರಣು

Continue Reading

ಕ್ರೈಂ

Road Accident: ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಡಿಕ್ಕಿ ಹೊಡೆದ ಜೀಪು; ಬಸ್‌ ನಿಲ್ಲಿಸದ ಕೋಪಕ್ಕೆ ಕಲ್ಲು ತೂರಿದವ ಪೊಲೀಸ್‌ ಅತಿಥಿ

Road Accident: ಚಾಲಕನ ನಿಯಂತ್ರಣ ತಪ್ಪಿ ಥಾರ್ ಜೀಪೊಂದು ಡಿವೈಡರ್‌ಗೆ ಡಿಕ್ಕಿ ಹೊಡೆದ ಘಟನೆ ಶಾಂತಿನಗರದಿಂದ ರಿಚ್‌ಮಂಡ್‌ ಸರ್ಕಲ್‌ಗೆ ಹೋಗುವ ಮಾರ್ಗದಲ್ಲಿ ನಡೆದಿದೆ. ಅಪಘಾತದ ವೇಳೆ ಏರ್‌ಬ್ಯಾಗ್ ಓಪನ್ ಆಗಿರುವುದರಿಂದ ಅದೃಷ್ಟವಶಾತ್‌ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ಮೂಲಗಳು ತಿಳಿಸಿವೆ.

VISTARANEWS.COM


on

Road Accident
Koo

ಬೆಂಗಳೂರು: ಚಾಲಕನ ನಿಯಂತ್ರಣ ತಪ್ಪಿ ಥಾರ್ ಜೀಪೊಂದು ಡಿವೈಡರ್‌ಗೆ ಡಿಕ್ಕಿ ಹೊಡೆದ ಘಟನೆ ಶಾಂತಿನಗರದಿಂದ ರಿಚ್‌ಮಂಡ್‌ ಸರ್ಕಲ್‌ಗೆ ಹೋಗುವ ಮಾರ್ಗದಲ್ಲಿ ನಡೆದಿದೆ. ಅಪಘಾತದ ವೇಳೆ ಏರ್‌ಬ್ಯಾಗ್ ಓಪನ್ ಆಗಿರುವುದರಿಂದ ಅದೃಷ್ಟವಶಾತ್‌ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ಮೂಲಗಳು ತಿಳಿಸಿವೆ (Road Accident).

ಶಾಂತಿನಗರದಿಂದ ರಿಚ್‌ಮಂಡ್ ಸರ್ಕಲ್‌ಗೆ ಹೋಗುವ ಶಾಂತಿನಗರ ಡಬಲ್ ರೋಡ್ ಬಳಿ ನಡೆದ ಘಟನೆ ನಡೆದಿದ್ದು, ಚಾಲಕನ ನಿಯಂತ್ರಣ ತಪ್ಪಿ ಜೀಪು ಡಿವೈಡರ್‌ಗೆ ಡಿಕ್ಕಿ ಹೊಡೆದಿದೆ. ಥಾರ್‌ನಲ್ಲಿ ಕೇರಳ ಮೂಲದ ಆರು ಜನರು ಪ್ರಯಾಣಿಸುತ್ತಿದ್ದರು. ಅಪಘಾತ ನಡೆದ ತಕ್ಷಣ ಏರ್‌ಬ್ಯಾಗ್ ಓಪನ್ ಆಗಿರುವುದರಿಂದ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಭೇಟಿ ನೀಡಿ ಪೊಲೀಸರು ವಾಹನ ತೆರವುಗೊಳಿಸಿದ್ದಾರೆ. ಹಲಸೂರು ಗೇಟ್ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ತಮಿಳುನಾಡು ಸರ್ಕಾರಿ ಬಸ್‌ಗೆ ಕಲ್ಲೇಟು

ಬೆಂಗಳೂರು: ತಮಿಳುನಾಡಿಗೆ ತೆರಳುತ್ತಿದ್ದ ಆ ರಾಜ್ಯದ ಸರ್ಕಾರಿ ಬಸ್‌ಗೆ ಯುವಕನೋರ್ವ ಕಲ್ಲು ತೂರಿರುವ ಘಟನೆ ನಡೆದಿದೆ. ಕಲ್ಲೇಟಿಗೆ ಬಸ್‌ನ ಹಿಂಬದಿ ಗಾಜು ಪುಡಿ ಪುಡಿಯಾಗಿದ್ದು, ಕೃತ್ಯ ಎಸಗಿದವರು ಸದ್ಯ ಪೊಲೀಸರ ಅತಿಥಿಯಾಗಿದ್ದಾನೆ.

ಬಸ್‌ ಟೌನ್‌ಹಾಲ್ ಬಳಿ ಬರುತ್ತಿದ್ದಂತೆ ಮಹಾರಾಜ ಎನ್ನುವ ಯುವಕ ಬಸ್‌ಗೆ ಕಲ್ಲು ಹೊಡೆದು ಪರಾರಿಯಾಗಲು ಯತ್ನಿಸಿದ್ದ. ಕೂಡಲೇ ಆತನನ್ನು ಹಿಡಿದ ಪ್ರಯಾಣಿಕರು ಪೊಲೀಸರಿಗೆ ಒಪ್ಪಿಸಿದರು. ಬೆಂಗಳೂರಿನಿಂದ ತಿರುವಣ್ಣಮಲೈಗೆ ಹೋಗುತ್ತಿದ್ದ ತಮಿಳುನಾಡಿನ ಸರ್ಕಾರಿ ಬಸ್ ಇದಾಗಿದ್ದು, ಸ್ಯಾಟ್‌ಲೈಟ್‌ನಲ್ಲೇ ಫುಲ್ ರಶ್ ಆಗಿದ್ದ ಕಾರಣ ನಿಲ್ಲಿಸಿರಲಿಲ್ಲ.

ಬಸ್ ನಿಲ್ಲಿಸಲಿಲ್ಲ ಎನ್ನುವ ಕಾರಣಕ್ಕೆ ಕೋಪಗೊಂಡ ಮಹಾರಾಜ ಬಸ್‌ಗೆ ಕಲ್ಲು ತೂರಾಟ ನಡೆಸಿದ್ದ. ಆತನ್ನು ತಮಿಳುನಾಡು ಮೂಲದವನು ಎಂದು ಗುರುತಿಸಲಾಗಿದ್ದು, ಎಸ್‌ಜೆ ಪಾರ್ಕ್ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಯುವರಾಜನಿಂದಾಗಿ ಊರಿಗೆ ಹೋಗಬೇಕೆಂದು ಬಸ್ ಹತ್ತಿದ್ದ ಪ್ರಯಾಣಿಕರು ಠಾಣೆ ಮುಂದೆ ಕಾಯುವ ಸ್ಥಿತಿ ನಿರ್ಮಾಣವಾಗಿತ್ತು. ಪ್ರಯಾಣಿಕರ ಸಮೇತ ಬಸ್‌ ಅನ್ನು ಚಾಲಕ ಎಸ್‌ಜೆ ಪಾರ್ಕ್ ಸ್ಟೇಷನ್‌ಗೆ ತಂದಿದ್ದ. ಹೀಗಾಗಿ ಪ್ರಯಾಣಿಕರು ಸ್ಟೇಷನ್ ಮುಂದೆಯೆ ಗಂಟೆಗೂ ಹೆಚ್ಚು ಕಾಲ ಕಾದು ನಿಂತಿದ್ದರು. ಘಟನೆ ಸಂಬಂಧ ಎಸ್‌ಜೆ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಫುಟ್‌ಪಾತ್ ಮೇಲೆ ನಿಂತಿದ್ದ ಕಾರ್ಮಿಕರ ಮೇಲೆ ಹರಿದ ಟಾಟಾ ಏಸ್

ಚಿಕ್ಕಬಳ್ಳಾಪುರ: ಫುಟ್‌ಪಾತ್‌ ಮೇಲೆ ನಿಂತಿದ್ದ ಕೂಲಿ ಕಾರ್ಮಿಕರ ಮೇಲೆ ಟಾಟಾ ಏಸ್‌ ವಾಹನವೊಂದು ಹರಿದಿದೆ. ಅಪಘಾತದ ತೀವ್ರತೆಗೆ ಕಾರ್ಮಿಕನೊಬ್ಬ ಸ್ಥಳದಲ್ಲೇ ಮೃತಪಟ್ಟರೆ, ನಾಲ್ವರು ಗಂಭೀರ ಗಾಯಗೊಂಡಿದ್ದಾರೆ. ಚಿಕ್ಕಬಳ್ಳಾಪುರದ ಪೋಶೆಟ್ಟಿಹಳ್ಳಿ ಗೇಟ್ ಬಳಿ ಘಟನೆ ನಡೆದಿದೆ. ಚಿಂತಾಮಣಿ ತಾಲೂಕಿನ ನರಸಿಂಹ (50) ಮೃತ ದುರ್ದೈವಿ. ಬೆಳಗ್ಗೆ ಕೂಲಿಗೆ ಹೋಗಲು ಬಸ್‌ಗಾಗಿ ಫುಟ್ ಪಾತ್ ಮೇಲೆ ನಿಂತಿದ್ದರು. ಈ ವೇಳೆ ವೇಗವಾಗಿ ಬಂದ ಟಾಟಾಏಸ್‌ ವಾಹನವು ಏಕಾಏಕಿ ನಿಯಂತ್ರಣ ತಪ್ಪಿ ಕೂಲಿ ಕಾರ್ಮಿಕರಿಗೆ ಗುದ್ದಿದೆ. ಗುದ್ದಿದ ರಭಸಕ್ಕೆ ನರಸಿಂಹ ಸ್ಥಳದಲ್ಲೇ ಮೃತಪಟ್ಟರೆ, ಅದೃಷ್ಟವಶಾತ್ ಪ್ರಾಣಾಪಾಯದಿಂದ ನಾಲ್ವರು ಪಾರಾಗಿದ್ದಾರೆ. ಇತ್ತ ನರಸಿಂಹ ಮೃತದೇಹದ ಮುಂದೆ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು. ಮಂಚೇನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಈ ಸಂಬಂಧ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: Udupi News : ಸತ್ತ ನಾಯಿಯನ್ನು ಸ್ಕೂಟರ್‌ಗೆ ಕಟ್ಟಿ ರಸ್ತೆಯುದ್ದಕ್ಕೂ ಎಳೆದೊಯ್ದ ಅಸಾಮಿ!

Continue Reading

ಕ್ರೈಂ

Crime News: ಗುರಾಯಿಸಿದ್ದನ್ನು ಪ್ರಶ್ನಿಸಿದ್ದಕ್ಕೆ ಚಾಕುವಿನಿಂದ ಇರಿದು ಕೊಂದೇ ಬಿಟ್ಟರು

Crime News: ಗುರಾಯಿಸಿದ್ದನ್ನು ಪ್ರಶ್ನೆ ಮಾಡಿದ್ದಕ್ಕೆ ಯುವಕನನ್ನು ಕೊಲೆ ಮಾಡಿರುವ ಘಟನೆ ಬೆಂಗಳೂರಿನ ರಾಮಮೂರ್ತಿ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಹೊಯ್ಸಳ ನಗರದ ಮನೋಜ್ (22) ಕೊಲೆಯಾದ ವ್ಯಕ್ತಿ. ಶನಿವಾರ ಮುಂಜಾನೆ 3 ಗಂಟೆಗೆ ಹೊಯ್ಸಳ ನಗರ ಮೂರನೇ ಮುಖ್ಯ ರಸ್ತೆಯಲ್ಲಿ ಘಟನೆ ನಡೆದಿದೆ. ʼʼಹೊಯ್ಸಳ ನಗರದ 13 ಕ್ರಾಸ್‌ನಲ್ಲಿ ಮನೋಜ್ ಮತ್ತು ಸ್ನೇಹಿತರೊಂದಿಗೆ ನಡೆದುಕೊಂಡು ಬರುತ್ತಿದ್ದಾಗ ಅದೇ ಏರಿಯಾದ ಹುಡುಗರೊಂದಿಗೆ ಜಗಳ ನಡೆದಿದೆ. ಈ ವೇಳೆ ಆರೋಪಿಗಳು ಚಾಕುವಿನಿಂದ ಹಲ್ಲೆ ನಡೆಸಿದ್ದಾರೆ. ಮನೋಜ್ ಸಾವನ್ನಪ್ಪಿದರೆ ಸ್ನೇಹಿತ ಆಂಟೋನಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆʼʼ ಎಂದು ಪೊಲೀಸರು ತಿಳಿದ್ದಾರೆ.

VISTARANEWS.COM


on

Crime News
Koo

ಬೆಂಗಳೂರು: ಗುರಾಯಿಸಿದ್ದನ್ನು ಪ್ರಶ್ನೆ ಮಾಡಿದ್ದಕ್ಕೆ ಯುವಕನನ್ನು ಕೊಲೆ ಮಾಡಿರುವ ಘಟನೆ ರಾಮಮೂರ್ತಿ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಹೊಯ್ಸಳ ನಗರದ ಮನೋಜ್ (22) ಕೊಲೆಯಾದ ವ್ಯಕ್ತಿ. ಶನಿವಾರ ಮುಂಜಾನೆ 3 ಗಂಟೆಗೆ ಹೊಯ್ಸಳ ನಗರ ಮೂರನೇ ಮುಖ್ಯ ರಸ್ತೆಯಲ್ಲಿ ಘಟನೆ ನಡೆದಿದೆ. ಪ್ರಕರಣ ಸಂಬಂಧ ಸದ್ಯ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ (Crime News).

ಘಟನೆ ವಿವರ

ಮನೋಜ್ ಮತ್ತು ಆತನ ಸ್ನೇಹಿತ ಆಂಟೋನಿ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದರು. ಈ ವೇಳೆ ಎದುರಿನಿಂದ ಬಂದ ವ್ಯಕ್ತಿ ಮನೋಜ್‌ನನ್ನು ಗುರಾಯಿಸಿದ್ದಾನೆ. ಇದರಿಂದ ಇಬ್ಬರ ನಡುವೆ ಮಾತಿಗೆ ಮಾತು ಬೆಳೆದು ಜಗಳ ಆರಂಭವಾಗಿದೆ. ಪರಿಸ್ಥಿತಿ ಕೈ ಮೀರಿ ಆರೋಪಿಗಳು ಮನೋಜ್‌ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ.

ಆರೋಪಿಗಳು ಚಾಕುವಿನಿಂದ ಮನೋಜ್ ಮತ್ತು ಆಂಟೋನಿಗೆ ಚುಚ್ಚಿದ್ದಾರೆ. ಹಳೆ ದ್ವೇಷದ ಹಿನ್ನೆಲೆಯಲ್ಲಿ ಎರಡು ಗುಂಪುಗಳ ನಡುವೆ ಜಗಳ ನಡೆದಿರುವ ಶಂಕೆ ವ್ಯಕ್ತವಾಗಿದೆ. ಗಂಭೀರವಾಗಿ ಗಾಯಗೊಂಡಿದ್ದ ಮನೋಜ್‌ನನ್ನು ಕೂಡಲೇ ಸ್ನೇಹಿತರು ಹತ್ತಿರದ ಆಸ್ಪತ್ರೆಗೆ ರವಾನಿಸಿದ್ದರು. ಆದರೆ ತೀವ್ರ ರಕ್ತಸ್ರಾವವಾಗಿದ್ದರಿಂದ ಚಿಕಿತ್ಸೆ ಫಲಿಸದೆ ಮನೋಜ್ ಮೃತಪಟ್ಟಿದ್ದಾನೆ. ಈ ಸಂಬಂಧ ಇಬ್ಬರನ್ನು ವಶಕ್ಕೆ ಪಡೆದಿರುವ ರಾಮಮೂರ್ತಿನಗರ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ʼʼಹೊಯ್ಸಳ ನಗರದ 13 ಕ್ರಾಸ್‌ನಲ್ಲಿ ಮನೋಜ್ ಮತ್ತು ಸ್ನೇಹಿತರೊಂದಿಗೆ ನಡೆದುಕೊಂಡು ಬರುತ್ತಿದ್ದಾಗ ಅದೇ ಏರಿಯಾದ ಹುಡುಗರೊಂದಿಗೆ ಜಗಳ ನಡೆದಿದೆ. ಈ ವೇಳೆ ಆರೋಪಿಗಳು ಚಾಕುವಿನಿಂದ ಹಲ್ಲೆ ನಡೆಸಿದ್ದಾರೆ. ಮನೋಜ್ ಸಾವನ್ನಪ್ಪಿದರೆ ಸ್ನೇಹಿತ ಆಂಟೋನಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆʼʼ ಎಂದು ಪೊಲೀಸರು ತಿಳಿದ್ದಾರೆ.

ಒನ್ ವೇಯಲ್ಲಿ ಬಂದು ಬೈಕ್ ಸವಾರನಿಗೆ ಅವಾಜ್ ಹಾಕಿದ ಕಾರು ಚಾಲಕ

ಬೆಂಗಳೂರು: ಒನ್ ವೇಯಲ್ಲಿ ಬಂದ ಕಾರು ಚಾಲಕ ಬೈಕ್‌ ಸವಾರನಿಗೆ ಅವಾಜ್‌ ಹಾಕಿರುವ ಘಟನೆ ಮಹದೇವಪುರದಲ್ಲಿ ನಡೆದಿದೆ. ಒನ್ ವೇಯಲ್ಲಿ ಬರುತ್ತಿದ್ದ ಸ್ವಿಫ್ಟ್ ಕಾರು ಚಾಲಕನನ್ನು ಬೈಕ್ ಸವಾರ ಪ್ರಶ್ನಿಸಿದ್ದ. ಈ ವೇಳೆ ರೊಚ್ಚಿಗೆದ್ದ ಕಾರು ಚಾಲಕ ನಾನು ಹೇಗಾದ್ರು ಬರ್ತೀನಿ ನಿಂಗೇನು ಎಂದು ಜಗಳವಾಡಿ ಹಲ್ಲೆ‌ ಮಾಡಲು ಮುಂದಾಗಿದ್ದ.

ಇದೆಲ್ಲವನ್ನೂ ಬೈಕ್‌ ಸವಾರ ಮೊಬೈಲ್‌ನಲ್ಲಿ ರೆಕಾರ್ಡ್ ಮಾಡಿದ್ದಾನೆ. ತನ್ನ ತಪ್ಪಿದ್ದರೂ ಹಲ್ಲೆಗೆ ಮುಂದಾದ ಕಾರು ಚಾಲಕನ ವಿರುದ್ದ ಇದೀಗ ಬೈಕ್‌ ಸವಾರ ದೂರು ದಾಖಲಿಸಿದ್ದಾನೆ. ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್ ಮಾಡಿ ಪೊಲೀಸರನ್ನು ಟ್ಯಾಗ್ ಮಾಡಿ ದೂರು ನೀಡಿದ್ದಾನೆ. ಸದ್ಯ ಘಟನೆ‌ ಬಗ್ಗೆ ಮಾಹಿತಿ ಸಂಚಾರಿ ಪೊಲೀಸರು ಮಾಹಿತಿ ಕಲೆ ಹಾಕುತ್ತಿದ್ದಾರೆ.

ಬೆಳಗಾವಿಯಲ್ಲಿ ಮದ್ದು ಕುಟ್ಟುವಾಗ ಭಾರಿ ಸ್ಫೋಟ

ಬೆಳಗಾವಿ: ಮದ್ದು ತಯಾರಿಸುವ ವೇಳೆ ಆಕಸ್ಮಿಕವಾಗಿ ಸ್ಫೋಟಗೊಂಡು ವ್ಯಕ್ತಿಯೊಬ್ಬರು ಸಜೀವ ದಹನವಾಗಿದ್ದಾರೆ. ಬೆಳಗಾವಿಯ ಗೋಕಾಕ ತಾಲೂಕಿನ ಪಾಮಲದಿನ್ನಿ ಗ್ರಾಮದಲ್ಲಿ ಈ ದುರ್ಘಟನೆ ನಡೆದಿದೆ. ಮಲ್ಲಪ್ಪ ಸತ್ಯಪ್ಪ ಕಂಕಣವಾಡಿ (38) ಮೃತ ದುರ್ದೈವಿ. ಮಲ್ಲಪ್ಪ ಪಂಚಮಿ ಹಬ್ಬದಂದು ಮದ್ದು ಹಾರಿಸಲು ತಯಾರು ಮಾಡುತ್ತಿದ್ದರು. ಮದ್ದು ತಯಾರಿಸುವ ವೇಳೆ ಆಕಸ್ಮಿಕವಾಗಿ ಸ್ಫೋಟಗೊಂಡು ದುರ್ಘಟನೆ ಸಂಭವಿಸಿದೆ. ಏಕಾಏಕಿ ಬೆಂಕಿ ಎಲ್ಲೆಡೆ ಆವರಿಸಿದ್ದರಿಂದ ಮಲ್ಲಪ್ಪ ಸುಟ್ಟು ಭಸ್ಮವಾಗಿದ್ದಾರೆ. ಸ್ಥಳಕ್ಕೆ ಘಟಪ್ರಭಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಗ್ನಿಶಾಮಕದಳ ಸಿಬ್ಬಂದಿ ಬೆಂಕಿಯನ್ನು ನಂದಿಸಿದ್ದಾರೆ.

ಇದನ್ನೂ ಓದಿ: Karnataka Rain : ಭಾರಿ ಮಳೆಗೆ ಮನೆ ಗೋಡೆ ಕುಸಿತ; ಕೊಟ್ಟಿಗೆಯಲ್ಲಿದ್ದ ಜಾನುವಾರುಗಳು ಸಾವು

Continue Reading

ಮಳೆ

Karnataka Rain: ರಾಜ್ಯದ ವಿವಿಧೆಡೆ ಮುಂದುವರಿದ ಮಳೆಯ ಅಬ್ಬರ; ಮನೆ ಕುಸಿದು ಬಿದ್ದು ನಾಲ್ವರಿಗೆ ಗಾಯ

Karnataka Rain: ರಾಜ್ಯದ ವಿವಿಧ ಭಾಗಗಳಲ್ಲಿ ಮಳೆಯ ಅಬ್ಬರ ಮುಂದುವರಿದೆ. ಜತೆಗೆ ಅಲ್ಲಲ್ಲಿ ಅವಾಂತರವೂ ಸೃಷ್ಟಿಯಾಗಿದೆ. ಮಲೆನಾಡಲ್ಲಿ ಸುರಿದ ಧಾರಾಕಾರ ಮಳೆಯಿಂದ ಶಿವಮೊಗ್ಗದ ಶಿಕಾರಿಪುರದಲ್ಲಿ ಮನೆ ಕುಸಿದು ಬಿದ್ದು ನಾಲ್ವರು ಗಾಯಗೊಂಡಿದ್ದಾರೆ.

VISTARANEWS.COM


on

Karnataka Rain
Koo

ಶಿವಮೊಗ್ಗ: ರಾಜ್ಯದ ವಿವಿಧ ಭಾಗಗಳಲ್ಲಿ ಮಳೆಯ ಅಬ್ಬರ ಮುಂದುವರಿದೆ. ಜತೆಗೆ ಅಲ್ಲಲ್ಲಿ ಅವಾಂತರವೂ ಸೃಷ್ಟಿಯಾಗಿದೆ. ಮಲೆನಾಡಲ್ಲಿ ಸುರಿದ ಧಾರಾಕಾರ ಮಳೆಯಿಂದ ಶಿವಮೊಗ್ಗದ ಶಿಕಾರಿಪುರದಲ್ಲಿ ಮನೆ ಕುಸಿದು ಬಿದ್ದು ನಾಲ್ವರು ಗಾಯಗೊಂಡಿದ್ದಾರೆ (Karnataka Rain).

ಶಿಕಾರಿಪುರ ತಾಲೂಕಿನ ಕಪ್ಪನಹಳ್ಳಿ ಗ್ರಾಮದಲ್ಲಿ ಮಳೆಯಿಂದಾಗಿ ಶಿವಮೂರ್ತಿ ಎಂಬುವರಿಗೆ ಸೇರಿದ ಮನೆ ಕುಸಿದು ಬಿದ್ದು ನಾಲ್ಕು ಮಂದಿಗೆಗೆ ಗಾಯಗಳಾಗಿದ್ದು, ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಶಿವಮೂರ್ತಿ, ಪತ್ನಿ ಸೇರಿ ಇಬ್ಬರು ಮಕ್ಕಳಿಗೆ ಗಾಯಗಳಾಗಿದ್ದು, ಚೇತರಿಸಿಕೊಳ್ಳುತ್ತಿದ್ದಾರೆ. ಗಾಯಾಳುಗಳು ಚಿಕಿತ್ಸೆ ಪಡೆಯುತ್ತಿರುವ ಮೆಗ್ಗಾನ್ ಆಸ್ಪತ್ರೆಗೆ ಭೇಟಿ ನೀಡಿದ ಸಂಸದ ಬಿ.ವೈ.ರಾಘವೇಂದ್ರ ಆರೋಗ್ಯ ವಿಚಾರಿಸಿದ್ದಾರೆ.

ಹಾಸನಕ್ಕೆ ಇಂದು ಕುಮಾರಸ್ವಾಮಿ, ಆರ್‌.ಅಶೋಕ್‌ ಭೇಟಿ

ಹಾಸನ: ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಮತ್ತು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಇಂದು (ಜುಲೈ 21) ಹಾಸನಕ್ಕೆ ಭೇಟಿ ನೀಡಿ ಮಳೆ ಹಾನಿಯನ್ನು ಪರಿಶೀಲಿಸಲಿದ್ದಾರೆ. ಕೇಂದ್ರ ಸಚಿವರಾದ ಬಳಿಕ ಮೊದಲ ಬಾರಿಗೆ ಹಾಸನಕ್ಕೆ ಎಚ್‌.ಡಿ.ಕುಮಾರಸ್ವಾಮಿ ಭೇಟಿ ನೀಡಲಿದ್ದಾರೆ. ಲೋಕಸಭಾ ಚುನಾವಣೆ ನಂತರ‌ ಮೊದಲ ಬಾರಿಗೆ‌ ಎಚ್‌ಡಿಕೆ ತವರಿಗೆ ಆಗಮಿಸಲಿದ್ದು, ಸಕಲೇಶಪುರ‌ ತಾಲೂಕಿನ ಮಳೆ ಹಾನಿ ಪ್ರದೇಶಕ್ಕೆ ಭೇಟಿ ನೀಡಿ ಪರಿಸ್ಥಿತಿ ಅವಲೋಕಿಸಲಿದ್ದಾರೆ. ಮಳೆಯಿಂದ ರಸ್ತೆ ಕುಸಿದಿರುವ, ಹಾನಿಯಾಗಿರುವ ಪ್ರದೇಶಗಳನ್ನು ಪರಿಶೀಲಿಸಲಿದ್ದಾರೆ.

ಎಲ್ಲಿಗೆಲ್ಲ ಭೇಟಿ?

ಸಕಲೇಶಪುರ ತಾಲೂಕಿನ‌ ಕೊಲ್ಲಹಳ್ಳಿ, ದೊಡ್ಡತಪ್ಲು‌ ಸೇರಿದಂತೆ ಅನೇಕ ಭಾಗಗಳಿಗೆ ಎಚ್‌ಡಿಕೆ ಭೇಟಿ ನೀಡಲಿದ್ದಾರೆ. ರಾಷ್ಟ್ರೀಯ ‌ಹೆದ್ದಾರಿ 75ರಲ್ಲಿ ಆಗಿರೋ ಅವಾಂತರ, ಶಿರಾಡಿ ಘಾಟ್‌ನಲ್ಲಾದ ಹಾನಿಯನ್ನು ವೀಕ್ಷಿಸಲಿದ್ದಾರೆ. ಬಳಿಕ ಮಳೆ‌ ಅನಾಹುತದ ಸಂಕಷ್ಟದಲ್ಲಿರೋ ರೈತರ ಸಮಸ್ಯೆ ಆಲಿಸಲಿದ್ದಾರೆ. ಜಿಲ್ಲೆಗೆ ಆಗಮಿಸಲಿರು ತಮ್ಮ ನಾಯಕನ್ನು ಸ್ವಾಗತಿಸಲು ಜೆಡಿಎಸ್ ಕಾರ್ಯಕರ್ತರು ಸಜ್ಜಾಗಿದ್ದಾರೆ.

ಹಾಸನ ಜಿಲ್ಲೆಯಲ್ಲಿ ಆರ್.ಅಶೋಕ್ ಪ್ರವಾಸ

ಹಾಸನ ಜಿಲ್ಲೆಯಲ್ಲಿ ಇಂದು ವಿರೋಧಪಕ್ಷದ ನಾಯಕ ಆರ್.ಅಶೋಕ್ ಕೂಡ ಪ್ರವಾಸ ಕೈಗೊಳ್ಳಲಿದ್ದಾರೆ. ಅವರು ಹಾಸನ ಜಿಲ್ಲೆಯ ಮಳೆಹಾನಿ ಪ್ರದೇಶಗಳಿಗೆ ಭೇಟಿ ನೀಡಲಿದ್ದಾರೆ. ಸಕಲೇಶಪುರ ತಾಲೂಕಿನ‌ ಹಲವು ಪ್ರದೇಶಗಳಿಗೆ ತೆರಳಿ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಲಿದ್ದಾರೆ. ಜಿಲ್ಲಾಡಳಿತದ ಅಧಿಕಾರಿಗಳೊಂದಿಗೆ ಪರಿಹಾರ ಕ್ರಮದ ಬಗ್ಗೆ ಚರ್ಚಿಸಲಿರುವ ಅಶೋಕ್ ಅವರು ರಾಷ್ಟ್ರೀಯ ಹೆದ್ದಾರಿಯಲ್ಲಿ ಭೂಕುಸಿತವಾಗಿರೋ‌ ಸ್ಥಳಗಳ ಪರಿಶೀಲನೆ ನಡೆಸಲಿದ್ದಾರೆ.

ರಸ್ತೆ ಪಕ್ಕದಲ್ಲಿಯೇ ನಿಂತ ನೂರಾರು ಲಾರಿಗಳು

ಬೆಳಗಾವಿ: ಪಶ್ಚಿಮ‌ ಘಟ್ಟಗಳಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಸೇತುವೆ ಶಿಥಿಲವಾಗಿದ್ದು, ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಜಾಂಬೋಟಿ ಬಳಿ ಲಾರಿಗಳನ್ನು ತಡೆದು ನಿಲ್ಲಿಸಲಾಗಿದೆ. ಚೋರ್ಲಾ ಮಾರ್ಗವಾಗಿ ಬೆಳಗಾವಿಗೆ ಬರುವ ವಾಹನಗಳನ್ನು ಅಧಿಕಾರಿಗಳು ತಡೆದಿದ್ದು, ಇದರಿಂದ ಕಳೆದ 24 ಗಂಟೆಗಳಿಂದ ಸರಕು ಹೊತ್ತು ನೂರಾರು ಲಾರಿಗಳು ನಿಂತಲ್ಲಿಯೇ ನಿಂತಿವೆ. ಏಕಾಏಕಿ ಭಾರಿ ವಾಹನಗಳನ್ನು ತಡೆದಿದ್ದರಿಂದ ಲಾರಿ ಚಾಲಕರ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ರಸ್ತೆ ಬಂದ್ ಮಾಡುವುದನ್ನು ಅಧಿಕಾರಿಗಳು ಮೊದಲೇ ಹೇಳಬೇಕಿತ್ತು. ಏಕಾಏಕಿ ಬಂದ್ ಮಾಡಿದರೆ ನಾವು ಎಲ್ಲಿಗೆ ಹೋಗಬೇಕು ಎಂದು ಚಾಲಕರು ಪ್ರಶ್ನಿಸಿದ್ದಾರೆ. ಲಾರಿಯಲ್ಲಿರುವ ಸರಕೆಲ್ಲ ಮಳೆಯಲ್ಲಿ ನೆನೆದು ಹೋಗುವ ಭೀತಿಯೂ ಚಾಲಕರನ್ನು ಕಾಡುತ್ತಿದೆ.

ಇದನ್ನೂ ಓದಿ: Karnataka Rain : ಗುಡ್ಡ ಕುಸಿತದಿಂದ ಅಂಕೋಲಾ ಹೆದ್ದಾರಿ ಬಂದ್‌; ಕೊಂಕಣ ರೈಲ್ವೆಯಿಂದ ರೈಲು ವ್ಯವಸ್ಥೆ

Continue Reading
Advertisement
Kalki 2898 AD makers served legal notice Kalki Dham Peethadheeshwar Acharya Pramod Krishnam
ಟಾಲಿವುಡ್9 mins ago

Kalki 2898 AD: ಅಮಿತಾಭ್‌, ಪ್ರಭಾಸ್‌ಗೆ ಲೀಗಲ್ ನೋಟಿಸ್ ಕಳುಹಿಸಿದ ಕಾಂಗ್ರೆಸ್ ಮಾಜಿ ನಾಯಕ!

ದೇಶ14 mins ago

Central Budget 2024: ಸಚಿವೆ ನಿರ್ಮಲಾ ಸೀತಾರಾಮನ್‌ ಬಜೆಟ್‌ ಟೀಂನಲ್ಲಿ ಯಾರೆಲ್ಲಾ ಇದ್ದಾರೆ ಗೊತ್ತಾ? ಇಲ್ಲಿದೆ ಕಂಪ್ಲೀಟ್‌ ಡಿಟೇಲ್ಸ್

ರಾಜಮಾರ್ಗ ಅಂಕಣ
ಕ್ರೀಡೆ49 mins ago

ರಾಜಮಾರ್ಗ ಅಂಕಣ: ರಾಹುಲ್ ದ್ರಾವಿಡ್ ಎಂಬ ಮಹಾಗುರುವಿಗೆ ಸಲಾಂ; ಭಾರತರತ್ನ ನೀಡಲು ಇದು ಸಕಾಲ

Road Accident
ಕ್ರೈಂ50 mins ago

Road Accident: ಕಾರು-ಬಸ್‌ ನಡುವೆ ಮುಖಾಮುಖಿ ಡಿಕ್ಕಿ; ಇಬ್ಬರ ಸಾವು

Road Rage Case
ದೇಶ58 mins ago

Road Rage Case: ನಡು ರಸ್ತೆಯಲ್ಲೇ ಮಹಿಳೆಯ ಕೂದಲು ಎಳೆದು ಮೂಗಿಗೆ ಪಂಚ್‌; ವೈರಲಾಗ್ತಿದೆ ಈ ವಿಡಿಯೋ

Pawan Kalyan Go To Singapore Anna Lezhneva graduation ceremony
ಕಾಲಿವುಡ್60 mins ago

Pawan Kalyan: ಸಿಂಗಾಪುರದಲ್ಲಿ ಪವನ್ ಕಲ್ಯಾಣ್ ಮೂರನೇ ಪತ್ನಿ ಪಡೆದ ಪದವಿ ಯಾವುದು?

Women's Asia Cup
ಕ್ರೀಡೆ1 hour ago

Women’s Asia Cup: ಏಷ್ಯಾಕಪ್​ನಿಂದ ಹೊರಬಿದ್ದ ಕನ್ನಡತಿ ಶ್ರೇಯಾಂಕಾ ಪಾಟೀಲ್

Road Accident
ಕ್ರೈಂ2 hours ago

Road Accident: ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಡಿಕ್ಕಿ ಹೊಡೆದ ಜೀಪು; ಬಸ್‌ ನಿಲ್ಲಿಸದ ಕೋಪಕ್ಕೆ ಕಲ್ಲು ತೂರಿದವ ಪೊಲೀಸ್‌ ಅತಿಥಿ

Nipah Virus
ದೇಶ2 hours ago

Nipah Virus: ಕೇರಳದಲ್ಲಿ ನಿಫಾ ಕೇಸ್ ಪತ್ತೆ; ಡೆಂಗ್ಯೂ ಬೆನ್ನಲ್ಲೇ ಕರ್ನಾಟಕಕ್ಕೆ ಮತ್ತೊಂದು ಭೀತಿ

Payal Malik declares she’s ready to divorce Armaan Malik
ಬಿಗ್ ಬಾಸ್2 hours ago

Payal Malik: ಇನ್ನೊಬ್ಬಳ ಜತೆ ಹಾಯಾಗಿರಲಿ ಎಂದು ಪತಿಗೆ ವಿಚ್ಛೇದನ ಕೊಡೋಕೆ ಮುಂದಾದ ಪಾಯಲ್!

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Rain
ಮಳೆ21 hours ago

Karnataka Rain : ಭಾರಿ ಮಳೆಗೆ ಮನೆ ಗೋಡೆ ಕುಸಿತ; ಕೊಟ್ಟಿಗೆಯಲ್ಲಿದ್ದ ಜಾನುವಾರುಗಳು ಸಾವು

karnataka Rain
ಮಳೆ23 hours ago

Karnataka Rain : ಹಳ್ಳ ದಾಟಲು ಹೋಗಿ ನೀರುಪಾಲಾದ ಜಾನುವಾರು; ಬಿರುಗಾಳಿಗೆ ಕಳಚಿದ ವಿಂಡ್‌ ಫ್ಯಾನ್‌

karnataka Rain
ಮಳೆ2 days ago

Karnataka Rain : ಬೀದಿಗೆ ತಂದ ರಣಮಳೆ; ಮನೆ ಕುಸಿದು ಬಿದ್ದು 9 ತಿಂಗಳ ಗರ್ಭಿಣಿ ನರಳಾಟ

Karnataka Rain
ಮಳೆ2 days ago

Karnataka Rain : ರಾಜ್ಯದಲ್ಲಿ ಮಳೆಯ ಆರ್ಭಟ; ರಾತ್ರಿ ಕಳೆದು ಬೆಳಗಾಗುವುದರೊಳಗೆ ಕಂದಕ ನಿರ್ಮಾಣ

Karnataka Rain
ಮಳೆ3 days ago

Karnataka Rain : ಭಾರಿ ಮಳೆ ಎಫೆಕ್ಟ್‌; ಉಕ್ಕಿ ಹರಿಯುತ್ತಿದ್ದ ನದಿಯಲ್ಲಿ ಕೊಚ್ಚಿ ಹೋದ ರಾಸು

Uttara Kannada Landslide
ಮಳೆ3 days ago

Uttara Kannada Landslide: ಶಿರೂರು ಗುಡ್ಡ ಕುಸಿತ; ಅಖಾಡಕ್ಕಿಳಿದ ಜಿಯೊಲಾಜಿಕಲ್ ಸರ್ವೆ ಆಫ್ ಇಂಡಿಯಾ ಟೀಂ

Karnataka Rain
ಮಳೆ5 days ago

Karnataka Rain : ಕಾರವಾರದಲ್ಲಿ ಮಳೆ ಅವಾಂತರ; ಮನೆ ಮೇಲೆ ಗುಡ್ಡ ಕುಸಿದು ವೃದ್ಧ ಸಾವು

karnataka Rain
ಮಳೆ5 days ago

Karnataka Rain : ಭಾರಿ ಮಳೆಗೆ ನಿಯಂತ್ರಣ ತಪ್ಪಿ ಕೆರೆಗೆ ಉರುಳಿ ಬಿದ್ದ ಕಾರು; ನಾಲ್ವರು ಪ್ರಾಣಾಪಾಯದಿಂದ ಪಾರು

karnataka Weather Forecast
ಮಳೆ6 days ago

Karnataka Weather : ವ್ಯಾಪಕ ಮಳೆ ಎಚ್ಚರಿಕೆ; ನಾಳೆಯೂ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

karnataka Rain
ಮಳೆ6 days ago

Karnataka Rain : ಶಾಲಾ-ಕಾಲೇಜಿಗೆ ಈ ದಿನ ರಜಾ; ಅಬ್ಬರಿಸುತ್ತಿರುವ ಮಳೆಗೆ ಮನೆಯಲ್ಲೇ ಎಲ್ಲರೂ ಸಜಾ!

ಟ್ರೆಂಡಿಂಗ್‌