IND vs SL: ನಾಳೆ ಭಾರತ ತಂಡ ಶ್ರೀಲಂಕಾಕ್ಕೆ ಪ್ರಯಾಣ - Vistara News

ಕ್ರಿಕೆಟ್

IND vs SL: ನಾಳೆ ಭಾರತ ತಂಡ ಶ್ರೀಲಂಕಾಕ್ಕೆ ಪ್ರಯಾಣ

IND vs SL: ಕೋಚ್ ಗೌತಮ್ ಗಂಭೀರ್ ಅವರ ಉಸ್ತುವಾರಿಯಲ್ಲಿ ಭಾರತ ತಂಡ ಆಡುವ ಮೊದಲ ಸರಣಿ ಇದಾಗಲಿದೆ. ಹೀಗಾಗಿ ನಿರೀಕ್ಷೆ ಹೆಚ್ಚಾಗಿಯೇ ಇರಲಿದೆ. 2021ರ ಬಳಿಕ ಭಾರತ ಮೊದಲ ಬಾರಿಗೆ ಶ್ರೀಲಂಕಾದಲ್ಲಿ ದ್ವಿಪಕ್ಷೀಯ ಸರಣಿ ಆಡಲಿದೆ. ಉಭಯ ತಂಡಗಳು ಹೊಸ ಕೋಚ್​ ಮಾರ್ಗದರ್ಶನದಲ್ಲಿ ಕಣಕ್ಕಿಳಿಯಲಿದೆ.

VISTARANEWS.COM


on

IND vs SL
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮುಂಬಯಿ: ಶ್ರೀಲಂಕಾ(IND vs SL) ವಿರುದ್ಧದ ಏಕದಿನ ಮತ್ತು ಟಿ20 ಸರಣಿಯನ್ನಾಡಲು(India tour of Sri Lanka) ಭಾರತ ತಂಡ ನಾಳೆ(ಜುಲೈ 22 ಸೋಮವಾರ) ಲಂಕಾಗೆ ಪ್ರಯಾಣಿಸಲಿದೆ. ತಂಡ ಲಂಕಾಕ್ಕೆ ಹೊರಡುವುದಕ್ಕೂ ಮುನ್ನ ಸೋಮವಾರ, ಮುಂಬೈಯಲ್ಲಿ ನೂತನ ಕೋಚ್​ ಗೌತಮ್​ ಗಂಭೀರ್‌ ಸುದ್ದಿಗೋಷ್ಠಿ ನಡೆಸಲಿದ್ದಾರೆ ಎಂದು ಬಿಸಿಸಿಐ ಮೂಲಗಳು ತಿಳಿಸಿವೆ.

ಕೋಚ್ ಗೌತಮ್ ಗಂಭೀರ್ ಅವರ ಉಸ್ತುವಾರಿಯಲ್ಲಿ ಭಾರತ ತಂಡ ಆಡುವ ಮೊದಲ ಸರಣಿ ಇದಾಗಲಿದೆ. ಹೀಗಾಗಿ ನಿರೀಕ್ಷೆ ಹೆಚ್ಚಾಗಿಯೇ ಇರಲಿದೆ. 2021ರ ಬಳಿಕ ಭಾರತ ಮೊದಲ ಬಾರಿಗೆ ಶ್ರೀಲಂಕಾದಲ್ಲಿ ದ್ವಿಪಕ್ಷೀಯ ಸರಣಿ ಆಡಲಿದೆ. ಉಭಯ ತಂಡಗಳು ಹೊಸ ಕೋಚ್​ ಮಾರ್ಗದರ್ಶನದಲ್ಲಿ ಕಣಕ್ಕಿಳಿಯಲಿದೆ.

ಪ್ರವಾಸದ ಮೊದಲ 3 ಟಿ20 ಪಂದ್ಯಗಳು ಜುಲೈ 27, 28 ಮತ್ತು 30ರಂದು ಪಲ್ಲೆಕಿಲೆಯಲ್ಲಿ ನಡೆಯಲಿವೆ. ಮೊದಲು ಪ್ರಕಟಗೊಂಡಿದ್ದ ವೇಳಾಪಟ್ಟಿಯಲ್ಲಿ 26ರಿಂದ ಟಿ20 ಪಂದ್ಯ ಆರಂಭವಾಗಬೇಕಿತ್ತು. ಏಕದಿನ ಸರಣಿ ಕೂಡ ಒಂದು ದಿನ ತಡವಾಗಿ ಶುರುವಾಗಬೇಕಿತ್ತು. ಏಕದಿನ ಆಗಸ್ಟ್​ 1ರದ ಬದಲಾಗಿ ಆಗಸ್ಟ್​ 2ರಿಂದ ಆರಂಭಗೊಳ್ಳಲಿದೆ. ಉಳಿದ ಪಂದ್ಯಗಳ ದಿನಾಂಕ ಬದಲಾಗಲಿಲ್ಲ. ಈ ಹಿಂದಿನಂತೆ ಆಗಸ್ಟ್​ 4 ಮತ್ತು 7ರಂದೇ ನಡೆಯಲಿದೆ.

ಮುಂದಿನ ವರ್ಷ ಪಾಕಿಸ್ತಾನ ಆತಿಥ್ಯದಲ್ಲಿ ನಡೆಯಲಿರುವ ಐಸಿಸಿ ಚಾಂಪಿಯನ್ಸ್‌ ಟ್ರೋಫಿ ಟೂರ್ನಿಗೂ ಮೊದಲು ಭಾರತ ತಂಡ ಕೆಲವೇ ಏಕದಿನ ಪಂದ್ಯಗಳನ್ನು ಮಾತ್ರ ಆಡುತ್ತಿದೆ. ಹೆಚ್ಚಾಗಿ ಟಿ20 ಸರಣಿ ಮಾತ್ರ ಆಡಲಿದೆ. ಕಡಿಮೆ ಏಕದಿನ ಪಂದ್ಯ ಇರುವ ಕಾರಣ ಅನುಭವಿ ಆಟಗಾರರು ಈ ಪ್ರವಾಸದಲ್ಲಿ ಪಾಲ್ಗೊಳ್ಳಬೇಕು ಎಂದು ನೂತನ ಕೋಚ್​ ಗೌತಮ್ ಗಂಭೀರ್‌ ಖಡಕ್​ ಎಚ್ಚರಿಕೆ ನೀಡಿದ ಕಾರಣ ವಿಶ್ರಾಂತಿಯಲ್ಲಿದ್ದ ರೋಹಿತ್​ ಶರ್ಮ, ವಿರಾಟ್​ ಕೊಹ್ಲಿ, ಜಸ್​ಪ್ರೀತ್​ ಬುಮ್ರಾ ಮತ್ತು ರವೀಂದ್ರ ಜಡೇಜಾ ತಮ್ಮ ವಿಶ್ರಾಂತಿ ಮೊಟಕುಗೊಳಿಸಿ ತಂಡಕ್ಕೆ ಮರಳಿದ್ದಾರೆ.

ಇದನ್ನೂ ಓದಿ SL vs IND : ಲಂಕಾ ಪ್ರವಾಸಕ್ಕೆಅಭಿಷೇಕ್​ ನಾಯರ್​​ ಬ್ಯಾಟಿಂಗ್ ಕೋಚ್​​

ಕಳೆದ ಒಂದು ವರ್ಷಗಳಿಂದ ರೋಹಿತ್​ ಬಳಿಕ ಹಾರ್ದಿಕ್‌ ಪಾಂಡ್ಯರನ್ನೇ(Hardik Pandya) ಭವಿಷ್ಯದ ನಾಯಕ ಎಂದು ಬಿಂಬಿಸಲಾಗಿತ್ತು. ಆದರೆ, ಲಂಕಾ ಸರಣಿಗೆ ಸೂರ್ಯಕುಮಾರ್​ಗೆ ನಾಯಕತ್ವ ನೀಡಲಾಗಿದೆ. ಹೌದು, ಪಾಂಡ್ಯ ಅವರಿಗೆ ನಾಯಕತ್ವ ನೀಡದಿರಲು ಪ್ರಮುಖ ಕಾರಣ ಅವರ ಫಿಟ್ನೆಸ್‌ ಸಮಸ್ಯೆ. ಪಾಂಡ್ಯ ತಮ್ಮ 8 ವರ್ಷಗಳ ಕ್ರಿಕೆಟ್​ ವೃತ್ತಿಬದುಕಿನಲ್ಲಿ ಹಲವು ಬಾರಿ ಗಾಯದ ಸಮಸ್ಯೆಗೆ ತುತ್ತಾಗಿ ತಂಡದಿಂದ ಹೊರಗುಳಿದಿದ್ದರು. ಪದೇಪದೆ ಗಾಯಕ್ಕೆ ತುತ್ತಾಗುವ ಕಾರಣ ಪಾಂಡ್ಯ ನೇಮಕಕ್ಕೆ ಬಿಸಿಸಿಐನ ಕೆಲ ಪ್ರಮುಖ ಅಧಿಕಾರಿಗಳು ಹಾಗೂ ಆಯ್ಕೆ ಸಮಿತಿಯ ಕೆಲವರು ವಿರೋಧ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.

ಟಿ20 ತಂಡ

ಸೂರ್ಯಕುಮಾರ್ ಯಾದವ್ (ನಾಯಕ), ಶುಭಮನ್ ಗಿಲ್ (ಉಪ ನಾಯಕ), ಯಶಸ್ವಿ ಜೈಸ್ವಾಲ್, ರಿಂಕು ಸಿಂಗ್, ರಿಯಾನ್ ಪರಾಗ್, ರಿಷಭ್ ಪಂತ್ (ವಿ.ಕೀ ), ಸಂಜು ಸ್ಯಾಮ್ಸನ್ (ವಿ.ಕೀ), ಹಾರ್ದಿಕ್ ಪಾಂಡ್ಯ, ಶಿವಂ ದುಬೆ, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ರವಿ ಬಿಷ್ಣೋಯಿ , ಅರ್ಶದೀಪ್​ ಸಿಂಗ್, ಖಲೀಲ್ ಅಹ್ಮದ್, ಮೊಹಮ್ಮದ್​ ಸಿರಾಜ್.

ಏಕದಿನ ತಂಡ


ರೋಹಿತ್ ಶರ್ಮ (ನಾಯಕ), ಶುಭಮನ್ ಗಿಲ್ (ಉಪ ನಾಯಕ), ವಿರಾಟ್ ಕೊಹ್ಲಿ, ಕೆ.ಎಲ್. ರಾಹುಲ್ (ವಿ.ಕೀ), ರಿಷಬ್ ಪಂತ್ (ವಿ.ಕೀ), ಶ್ರೇಯಸ್ ಅಯ್ಯರ್, ಶಿವಂ ದುಬೆ, ಕುಲದೀಪ್ ಯಾದವ್, ಮೊಹಮ್ಮದ್ ಸಿರಾಜ್, ವಾಷಿಂಗ್ಟನ್ ಸುಂದರ್, ಅರ್ಷದೀಪ್ ಸಿಂಗ್, ರಿಯಾನ್ ಪರಾಗ್, ಅಕ್ಷರ್ ಪಟೇಲ್, ಖಲೀಲ್ ಅಹ್ಮದ್, ಹರ್ಷಿತ್ ರಾಣಾ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೀಡೆ

Hardik Pandya: ಬಾಲಿವುಡ್​ ನಟಿಯೊಂದಿಗೆ ಚಾಟಿಂಗ್​, ಡೇಟಿಂಗ್​ ಆರಂಭಿಸಿದ ಹಾರ್ದಿಕ್​ ಪಾಂಡ್ಯ

Hardik Pandya: ವರದಿಗಳ ಪ್ರಕಾರ ಹಾರ್ದಿಕ್​ ಪಾಂಡ್ಯ ಬಾಲಿವುಡ್ ನಟಿ ಅನನ್ಯ ಪಾಂಡೆ(Ananya Panday) ಜತೆ ಚಾಟಿಂಗ್​, ಡೇಟಿಂಗ್​ ಆರಂಭಿಸಿದ್ದಾರೆ ಎನ್ನಲಾಗಿದೆ. ಇದಕ್ಕೆ ಸಾಕ್ಷಿ ಎಂಬಂತೆ ಪಾಂಡ್ಯ ಇನ್‌ಸ್ಟಾಗ್ರಾಂನಲ್ಲಿ ಅನನ್ಯ ಪಾಂಡೆ ಅವರನ್ನು ದೀಢಿರ್​ ಆಗಿ ಫಾಲೋ ಮಾಡಲಾರಂಭಿಸಿದ್ದು.

VISTARANEWS.COM


on

Hardik Pandya
Koo

ಮುಂಬಯಿ: ಹಾರ್ದಿಕ್​ ಪಾಂಡ್ಯ(Hardik Pandya) ಮತ್ತು ನತಾಶಾ ಸ್ಟಾಂಕೋವಿಕ್(Natasa Stankovic) ಅವರಿಗೆ ವಿಚ್ಛೇದನ(Hardik-Natasa Divorce) ನೀಡಿ ಒಂದು ವಾರ ಕಳೆಯುವ ಮುನ್ನವೇ ಇದೀಗ ಹಾರ್ದಿಕ್​ ಮತ್ತೊಂದು ಮದುವೆಯಾಗಲು ಸಿದ್ಧರಾಗಿದ್ದಾರೆ ಎಂಬ ಮಾತುಗಳು ಕೇಳಿಬಂದಿವೆ. ಬಾಲಿವುಡ್​ನ ಖ್ಯಾತ ನಟಿಯನ್ನು ಪಾಂಡ್ಯ ಮದುವೆಯಾಗಲಿದ್ದಾರೆ ಎಂದು ವರದಿಯಾಗಿದೆ. ಕಳೆದ ಗುರುವಾರ ಹಾರ್ದಿಕ್​ ಪಾಂಡ್ಯ ಮತ್ತು ನತಾಶಾ ಸ್ಟಾಂಕೋವಿಕ್ ಜಂಟಿ ಹೇಳಿಕೆ ಪ್ರಕಟಿಸುವ ಮೂಲಕ ತಮ್ಮ 4 ವರ್ಷಗಳ ದಾಂಪತ್ಯ ಜೀವನಕ್ಕೆ ಬ್ರೇಕ್ ಹಾಕಿದ್ದರು.

ಹೌದು, ವರದಿಗಳ ಪ್ರಕಾರ ಹಾರ್ದಿಕ್​ ಪಾಂಡ್ಯ ಬಾಲಿವುಡ್ ನಟಿ ಅನನ್ಯ ಪಾಂಡೆ(Ananya Panday) ಜತೆ ಚಾಟಿಂಗ್​, ಡೇಟಿಂಗ್​ ಆರಂಭಿಸಿದ್ದಾರೆ ಎನ್ನಲಾಗಿದೆ. ಇದಕ್ಕೆ ಸಾಕ್ಷಿ ಎಂಬಂತೆ ಪಾಂಡ್ಯ ಇನ್‌ಸ್ಟಾಗ್ರಾಂನಲ್ಲಿ ಅನನ್ಯ ಪಾಂಡೆ ಅವರನ್ನು ದೀಢಿರ್​ ಆಗಿ ಫಾಲೋ ಮಾಡಲಾರಂಭಿಸಿದ್ದು. ಅತ್ತ ಅನನ್ಯ ಪಾಂಡೆ ಕೂಡಾ ಹಾರ್ದಿಕ್ ಪಾಂಡ್ಯ ಅವರನ್ನು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲಾರಂಭಿಸಿದ್ದಾರೆ. ಈ ವಿಚಾರ ಇದೀಗ ಸೋಷಿಯಲ್ ಮೀಡಿಯಾಗಳಲ್ಲಿ ಹೊಸ ಸಂಚಲನ ಹುಟ್ಟುಹಾಕಿದ್ದು ಪಾಂಡ್ಯ ಸದ್ಯದಲ್ಲೇ ಅನನ್ಯ ಪಾಂಡೆ ಜತೆ ಹಸೆಮಣೆ ಏರಲಿದ್ದಾರೆ ಎನ್ನುವ ಮಾತುಗಳು ಕೇಳಿ ಬಂದಿವೆ.

ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್ ಮದುವೆಯ ಸಂದರ್ಭದಲ್ಲೂ ಹಾರ್ದಿಕ್ ಪಾಂಡ್ಯ ಹಾಗೂ ಅನನ್ಯ ಪಾಂಡೆ ಒಟ್ಟಾಗಿ ಕಾಣಿಸಿಕೊಂಡಿದ್ದರು. ಅಲ್ಲದೇ ಇಬ್ಬರೂ ಜತೆಯಾಗಿ ಬಿಂದಾಸ್ ಡ್ಯಾನ್ಸ್​ ಕೂಡ ಮಾಡಿದ್ದರು. ಈ ಘಟನೆ ನಡೆದ 2 ದಿನಗಳ ಬಳಿಕ ಇದೀಗ ಇಬ್ಬರು ಪರಸ್ಪರ ಇನ್​ಸ್ಟಾಗ್ರಾಮ್​ ಖಾತೆಯಲ್ಲಿ ಫೋಲೊ ಮಾಡಿಕೊಂಡಿದ್ದಾರೆ. ಸದ್ಯ ಚಾಟಿಂಗ್​ನಲ್ಲಿರುವ ಈ ಜೋಡಿ ಮುಂದೆ ಡೇಟಿಂಗ್​ ಮಾಡಲಿದ್ದಾರೆ ಎಂದು ಕೆಲ ನೆಟ್ಟಿಗರು ಕಮೆಂಟ್​ ಮಾಡಿದ್ದಾರೆ.

ಇದನ್ನೂ ಓದಿ Suryakumar Yadav : ಮುಂದಿನ ಆವೃತ್ತಿಯಲ್ಲಿ ಹಾರ್ದಿಕ್ ಪಾಂಡ್ಯಗೆ ಮುಂಬೈ ಇಂಡಿಯನ್ಸ್ ನಾಯಕತ್ವವೂ ನಷ್ಟ

ಅನನ್ಯ ಪಾಂಡೆ ನಟ ಆಧಿತ್ಯ ರಾಯ್ ಕಪೂರ್ ಜತೆ ಕೆಲವು ಸಮಯದಿಂದ ಡೇಟಿಂಗ್ ನಡೆಸುತ್ತಿದ್ದರು. ಆದರೆ ಈ ಜೋಡಿ ತಮ್ಮ ಸಂಬಂಧದ ಬಗ್ಗೆ ಎಲ್ಲೂ ತುಟಿಬಿಚ್ಚಿರಲಿಲ್ಲ. ಆದರೆ, ಕೆಲ ದಿನಗಳ ಹಿಂದಷ್ಟೇ ಅನನ್ಯ ಪಾಂಡೆ ಮತ್ತು ಆಧಿತ್ಯ ರಾಯ್​ ಜತೆ ಬ್ರೇಕಪ್ ಮಾಡಿಕೊಂಡಿದ್ದಾರೆ ಎನ್ನುವ ಸುದ್ದಿ ಸೋಷಿಯಲ್ ಮೀಡಿಯಾದಲ್ಲಿ ಸದ್ದು ಮಾಡಿತ್ತು. ಇದೀಗ ಪಾಂಡ್ಯ ಜತೆ ಡೇಟಿಂಗ್​ ನಡೆಸುತ್ತಿರುವುದಾಗಿ ವರದಿಯಾಗಿದೆ.

ಹಾರ್ದಿಕ್​ ಮತ್ತು ನತಾಶಾ ನಡುವಿನ ಬ್ರೇಕಪ್​ಗೆ ಸಂವಹನ ಕೊರತೆಯೇ ಮುಖ್ಯ ಕಾರಣ ಎಂದು ಆಪ್ತ ಮೂಲಗಳು ಮಾಹಿತಿ ನೀಡಿದೆ. ಇಬ್ಬರ ನಡುವಿನ ಮನಸ್ತಾಪ ಮತ್ತು ಜಗಳಕ್ಕೆ ಪರಿಹಾರ ಕಂಡುಕೊಳ್ಳುವ ತಾಳ್ಮೆ ಇಬ್ಬರಲ್ಲೂ ಇರಲಿಲ್ಲ. ಹೀಗಾಗಿ ಮನಸ್ತಾಪ ದೊಡ್ಡದಾಗಿ ಡಿವೋರ್ಸ್​ಗೆ ಕಾರಣವಾಯಿತು. ಇದನ್ನು ಬಿಟ್ಟು ಸಾಮಾಜಿಕ ಜಾಲತಾಣಗಳಲ್ಲಿ ಇವರಿಬ್ಬರ ಬಗ್ಗೆ ಯಾವುದೇ ತಪ್ಪು ಸುದ್ದಿ ಹಬ್ಬಿಸಬಾರದು ಎಂದು ಆಪ್ತ ಮೂಲಗಳು ತಿಳಿಸಿವೆ.

ಕಳೆದ ವರ್ಷ ಫೆ.14 ರಂದು ರಾಜಸ್ಥಾನದ ಉದಯ್‌ಪುರದಲ್ಲಿ ಕ್ರಿಷ್ಚಿಯನ್‌ ಸಂಪ್ರದಾಯದಂತೆ ಹಾರ್ದಿಕ್‌ ಮತ್ತು ನತಾಶಾ ಮತ್ತೊಮ್ಮೆ ಅದ್ದೂರಿಯಾಗಿ ಪುನರ್‌ ವಿವಾಹವಾಗಿದ್ದರು. ಕುಟುಂಬಸ್ಥರು ಮತ್ತು ಗೆಳೆಯರ ಸಮ್ಮುಖದಲ್ಲಿ ಮತ್ತೊಮ್ಮೆ ವಿವಾಹವಾಗಿದ್ದರು. ಇದಕ್ಕೂ ಮುನ್ನ ಈ ಜೋಡಿ 2020ರಲ್ಲೇ ರಿಜಿಸ್ಟರ್‌ ರೀತಿಯಲ್ಲಿ ವಿವಾಹವಾಗಿದ್ದರು.

Continue Reading

ಕ್ರೀಡೆ

Women’s Asia Cup: ಏಷ್ಯಾಕಪ್​ನಿಂದ ಹೊರಬಿದ್ದ ಕನ್ನಡತಿ ಶ್ರೇಯಾಂಕಾ ಪಾಟೀಲ್

Women’s Asia Cup: ಶ್ರೇಯಾಂಕಾ ಪಾಟೀಲ್ ಟೂರ್ನಿಯಿಂದ ಹೊರ ಬಿದ್ದ ವಿಚಾರವನ್ನು ಏಷ್ಯನ್ ಕ್ರಿಕೆಟ್ ಕೌನ್ಸಿಲ್ ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದೆ. ಪಾಕಿಸ್ತಾನ ವಿರುದ್ಧ ಆಡಿದ ಮೊದಲ ಪಂದ್ಯದಲ್ಲಿ ಶ್ರೇಯಾಂಕಾ 3.4 ಓವರ್​ಗಳಲ್ಲಿ 14 ರನ್ ನೀಡಿ 2 ವಿಕೆಟ್ ಉರುಳಿಸಿದ್ದರು.

VISTARANEWS.COM


on

Women's Asia Cup
Koo

ಬೆಂಗಳೂರು: ಶ್ರೀಲಂಕಾದಲ್ಲಿ ನಡೆಯುತ್ತಿರುವ ಮಹಿಳಾ ಏಷ್ಯಾ ಕಪ್(Women’s Asia Cup)​ ಕ್ರಿಕೆಟ್​ ಟೂರ್ನಿಯಲ್ಲಿ ಭಾರತ ತಂಡಕ್ಕೆ ಆಘಾತವೊಂದು ಎದುರಾಗಿದೆ. ಆಲ್ ರೌಂಡರ್, ಕನ್ನಡತಿ, ಶ್ರೇಯಾಂಕಾ ಪಾಟೀಲ್(Shreyanka Patil)​ ಅವರು ಕೈ ಬೆರಳಿನ ಗಾಯಕ್ಕೆ ತುತ್ತಾಗಿ ಟೂರ್ನಿಯಿಂದ(Shreyanka Patil ruled out) ಹೊರಬಿದ್ದಿದ್ದಾರೆ. ಅವರ ಸ್ಥಾನಕ್ಕೆ ಬದಲಿ ಆಟಗಾರ್ತಿಯಾಗಿ ತನುಜಾ ಕನ್ವರ್ ಆಯ್ಕೆಯಾಗಿದ್ದಾರೆ.

ಶ್ರೇಯಾಂಕಾ ಪಾಟೀಲ್ ಟೂರ್ನಿಯಿಂದ ಹೊರ ಬಿದ್ದ ವಿಚಾರವನ್ನು ಏಷ್ಯನ್ ಕ್ರಿಕೆಟ್ ಕೌನ್ಸಿಲ್ ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದೆ. ಪಾಕಿಸ್ತಾನ ವಿರುದ್ಧ ಆಡಿದ ಮೊದಲ ಪಂದ್ಯದಲ್ಲಿ ಶ್ರೇಯಾಂಕಾ 3.4 ಓವರ್​ಗಳಲ್ಲಿ 14 ರನ್ ನೀಡಿ 2 ವಿಕೆಟ್ ಉರುಳಿಸಿದ್ದರು. ಇದೇ ಪಂದ್ಯದಲ್ಲಿ ಕ್ಯಾಚ್ ಹಿಡಿಯುವ ಯತ್ನದಲ್ಲಿ ಶ್ರೇಯಾಂಕಾ ಕೈ ಬೆರಳಿನ ಗಾಯಕ್ಕೆ ತುತ್ತಾಗಿದ್ದರು. ಎಡಗೈಯನ ಬೆರಳು ಮುರಿತವಾಗಿದ್ದು, ಶಸ್ತ್ರಚಿಕಿತ್ಸೆಯ ಅಗತ್ಯವಿದೆ ಎನ್ನಲಾಗಿದೆ.

ಉದಯೋನ್ಮುಖ ಆಟಗಾರ್ತಿಯಾಗಿ ಗುರುತಿಸಿಕೊಂಡಿರುವ ಶ್ರೇಯಾಂಕಾ ಭಾರತ ಪರ 12 ಟಿ20 ಪಂದ್ಯಗಳನ್ನಾಡಿದ್ದು 16 ವಿಕೆಟ್​ ಕಿತ್ತಿದ್ದಾರೆ. ಏಕದಿನದಲ್ಲಿ 5 ವಿಕೆಟ್​ ಕಲೆಹಾಕಿದ್ದಾರೆ. 21 ವರ್ಷದ ಶ್ರೇಯಾಂಕಾ ಪಾಟೀಲ್ ಚೊಚ್ಚಲ ಮಹಿಳಾ ಪ್ರೀಮಿಯರ್ ಲೀಗ್ ಆವೃತ್ತಿಯಲ್ಲಿ ಆರ್‌ಸಿಬಿ ಮಹಿಳಾ ತಂಡಕ್ಕೆ ಆಯ್ಕೆಯಾದರು. ಇಲ್ಲಿ ತೋರಿದ ಪ್ರದರ್ಶನದಿಂದ ಅವರು ಕೆರಿಬಿಯನ್ ಪ್ರೀಮಿಯರ್ ಲೀಗ್‌ನಲ್ಲಿಯೂ ಆಡುವಂತೆ ಮಾಡಿತ್ತು. ಹಂತ ಹಂತವಾಗಿ ಬೆಳೆದ ಇವರು 2023ರಲ್ಲಿ 21 ವಷದೊಳಗಿನ ಮಹಿಳಾ ಟಿ20 ವಿಶ್ವಕಪ್‌ ಪಂದ್ಯಾವಳಿಯಲ್ಲಿ ಅವಕಾಶ ಪಡೆದರು. ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ 2023ರ ಡಿಸೆಂಬರ್ 6ರಂದು ಇಂಗ್ಲೆಂಡ್ ವಿರುದ್ಧದ ಟಿ20 ಪಂದ್ಯದಲ್ಲಿ ಆಡುವ ಮೂಲಕ ಭಾರತ ಹಿರಿಯರ ಮಹಿಳಾ ತಂಡಕ್ಕೆ ಪದಾರ್ಪಣೆ ಮಾಡಿದ್ದರು.

ಇದನ್ನೂ ಓದಿ WPL 2024: ಶ್ರೇಯಾಂಕಾ ಪಾಟೀಲ್ ಅದ್ಭುತ ಫೀಲ್ಡಿಂಗ್​ ಕಂಡು ದಂಗಾದ ಆರ್​ಸಿಬಿ ಅಭಿಮಾನಿಗಳು

ಇಂದು ನಡೆಯುವ ಪಂದ್ಯದಲ್ಲಿ ಭಾರತ ತಂಡ ಯುಎಇ(United Arab Emirates Women) ತಂಡದ ಸವಾಲು ಎದುರಿಸಲಿದೆ. ಈ ಪಂದ್ಯ ಗೆದ್ದರೆ ಭಾರತ ಸೆಮಿಫೈನಲ್​ ಟಿಕೆಟ್​ ಖಾತ್ರಿಗೊಳ್ಳಲಿದೆ. ಭಾರತ ಬೌಲಿಂಗ್‌ ಮತ್ತು ಬ್ಯಾಟಿಂಗ್‌ನಲ್ಲಿ ಬಲಿಷ್ಠವಾಗಿದೆ. ರೇಣುಕಾ ಸಿಂಗ್‌, ಪೂಜಾ ವಸ್ತ್ರಾಕರ್‌, ದೀಪ್ತಿ ಶರ್ಮ, ರಾಧಾ ಯಾದವ್‌ ಎದುರಾಳಿಗಳನ್ನು ಕಟ್ಟಿಹಾಕುವಲ್ಲಿ ಸಮರ್ಥರಿದ್ದಾರೆ. ಬ್ಯಾಟಿಂಗ್ ವಿಭಾಗ​ ಕೂಡ ಉತ್ತಮ ರೀತಿಯಲ್ಲಿದೆ. ಶಫಾಲಿ ಶರ್ಮ ಮತ್ತು ಸ್ಮೃತಿ ಮಂಧಾನ ಉತ್ತಮ ಆರಂಭ ಒದಗಿಸಿದರೆ, ಮಧ್ಯಮ ಕ್ರಮಾಂಕದಲ್ಲಿ ನಾಯಕಿ ಹರ್ಮನ್​ಪ್ರೀತ್​ ಕೌರ್​, ಜೆಮಿಮಾ ರೋಡ್ರಿಗಸ್​, ರಿಚಾ ಘೋಷ್​ ತಂಡವನ್ನು ಆಧರಿಸಬಲ್ಲರು.

ಯುಎಇ ತಂಡಕ್ಕೆ ಈ ಪಂದ್ಯದಲ್ಲಿ ಗೆಲುವು ಅತ್ಯಗತ್ಯ. ತಾನಾಡಿದ ಮೊದಲ ಪಂದ್ಯದಲ್ಲಿ ನೇಪಾಳ ವಿರುದ್ಧ ಆರು ವಿಕೆಟ್‌ಗಳಿಂದ ಸೋಲನ್ನು ಕಂಡಿತ್ತು. ಇದೀಗ ಭಾರತ ವಿರುದ್ಧ ಸೋತರೆ ಕೂಟದಿಂದ ಹೊರಬೀಳುವ ಸಾಧ್ಯತೆಯಿದೆ. ಹೀಗಾಗಿ ಯುಎಇಗೆ ಇದು ಮಾಡು ಇಲ್ಲವೇ ಮಡಿ ಪಂದ್ಯ.

ಭಾರತ ಪರಿಷ್ಕೃತ ತಂಡ

ಹರ್ಮನ್‌ಪ್ರೀತ್ ಕೌರ್ (ನಾಯಕಿ), ರಿಚಾ ಘೋಷ್ (ವಿಕೆಟ್ ಕೀಪರ್), ಉಮಾ ಚೆಟ್ರಿ (ವಿಕೆಟ್ ಕೀಪರ್), ಸ್ಮೃತಿ ಮಂಧಾನ (ಉಪನಾಯಕಿ), ಶಫಾಲಿ ವರ್ಮಾ, ದೀಪ್ತಿ ಶರ್ಮಾ, ಪೂಜಾ ವಸ್ತ್ರಾಕರ್, ಅರುಂಧತಿ ರೆಡ್ಡಿ, ಜೆಮಿಮಾ ರೊಡ್ರಿಗಸ್, ರೇಣುಕಾ ಠಾಕೂರ್, ದಯಾಲನ್ ಹೇಮಲತಾ, ಆಶಾ ಶೋಭಾನಾ, ರಾಧಾ ಯಾದವ್, ತನುಜಾ ಕನ್ವರ್ , ಸಜನಾ ಸಜೀವನ್.

Continue Reading

ಕ್ರೀಡೆ

Womens Asia Cup T20: ಇಂದು ಭಾರತ-ಯುಎಇ ಸೆಣಸಾಟ; ಗೆದ್ದರೆ ಹರ್ಮನ್ ಪಡೆ ಸೆಮಿಫೈನಲ್​ಗೆ

Womens Asia Cup T20: ಯುಎಇ ತಂಡಕ್ಕೆ ಈ ಪಂದ್ಯದಲ್ಲಿ ಗೆಲುವು ಅತ್ಯಗತ್ಯ. ತಾನಾಡಿದ ಮೊದಲ ಪಂದ್ಯದಲ್ಲಿ ನೇಪಾಳ ವಿರುದ್ಧ ಆರು ವಿಕೆಟ್‌ಗಳಿಂದ ಸೋಲನ್ನು ಕಂಡಿತ್ತು. ಇದೀಗ ಭಾರತ ವಿರುದ್ಧ ಸೋತರೆ ಕೂಟದಿಂದ ಹೊರಬೀಳುವ ಸಾಧ್ಯತೆಯಿದೆ. ಹೀಗಾಗಿ ಯುಎಇಗೆ ಇದು ಮಾಡು ಇಲ್ಲವೇ ಮಡಿ ಪಂದ್ಯ.

VISTARANEWS.COM


on

Koo

ಡಂಬುಲಾ: (ಶ್ರೀಲಂಕಾ): ಮಹಿಳಾ ಏಷ್ಯಾಕಪ್​ನಲ್ಲಿ(Womens Asia Cup T20) ಆಡಿದ ಮೊದಲ ಪಂದ್ಯದಲ್ಲೇ ಪಾಕಿಸ್ತಾನ ವಿರುದ್ಧ 7 ವಿಕೆಟ್​ಗಳಿಂದ ಗೆದ್ದು ಶುಭಾರಂಭ ಮಾಡಿರುವ ಹಾಲಿ ಚಾಂಪಿಯನ್​ ಭಾರತ(India Women) ತಂಡ ಮತ್ತೊಂದು ಪಂದ್ಯವನ್ನಾಡಲು ಸಜ್ಜಾಗಿದೆ. ಇಂದು ನಡೆಯುವ ಪಂದ್ಯದಲ್ಲಿ ಯುಎಇ(United Arab Emirates Women) ತಂಡದ ಸವಾಲು ಎದುರಿಸಲಿದೆ. ಈ ಪಂದ್ಯದಲ್ಲೂ ಗೆಲುವು ಸಾಧಿಸಿ ಸೆಮಿಫೈನಲಿಗೇರುವ ವಿಶ್ವಾಸದಲ್ಲಿದೆ ಹರ್ಮನ್​ಪ್ರೀತ್​ ಪಡೆ.

ಭಾರತ ಬೌಲಿಂಗ್‌ ಮತ್ತು ಬ್ಯಾಟಿಂಗ್‌ನಲ್ಲಿ ಬಲಿಷ್ಠವಾಗಿದೆ. ರೇಣುಕಾ ಸಿಂಗ್‌, ಪೂಜಾ ವಸ್ತ್ರಾಕರ್‌, ದೀಪ್ತಿ ಶರ್ಮ, ರಾಧಾ ಯಾದವ್‌ ಎದುರಾಳಿಗಳನ್ನು ಕಟ್ಟಿಹಾಕುವಲ್ಲಿ ಸಮರ್ಥರಿದ್ದಾರೆ. ಬ್ಯಾಟಿಂಗ್ ವಿಭಾಗ​ ಕೂಡ ಉತ್ತಮ ರೀತಿಯಲ್ಲಿದೆ. ಶಫಾಲಿ ಶರ್ಮ ಮತ್ತು ಸ್ಮೃತಿ ಮಂಧಾನ ಉತ್ತಮ ಆರಂಭ ಒದಗಿಸಿದರೆ, ಮಧ್ಯಮ ಕ್ರಮಾಂಕದಲ್ಲಿ ನಾಯಕಿ ಹರ್ಮನ್​ಪ್ರೀತ್​ ಕೌರ್​, ಜೆಮಿಮಾ ರೋಡ್ರಿಗಸ್​, ರಿಚಾ ಘೋಷ್​ ತಂಡವನ್ನು ಆಧರಿಸಬಲ್ಲರು.

ಇದನ್ನೂ ಓದಿ IND vs SL: ನಾಳೆ ಭಾರತ ತಂಡ ಶ್ರೀಲಂಕಾಕ್ಕೆ ಪ್ರಯಾಣ

ಯುಎಇ ತಂಡಕ್ಕೆ ಈ ಪಂದ್ಯದಲ್ಲಿ ಗೆಲುವು ಅತ್ಯಗತ್ಯ. ತಾನಾಡಿದ ಮೊದಲ ಪಂದ್ಯದಲ್ಲಿ ನೇಪಾಳ ವಿರುದ್ಧ ಆರು ವಿಕೆಟ್‌ಗಳಿಂದ ಸೋಲನ್ನು ಕಂಡಿತ್ತು. ಇದೀಗ ಭಾರತ ವಿರುದ್ಧ ಸೋತರೆ ಕೂಟದಿಂದ ಹೊರಬೀಳುವ ಸಾಧ್ಯತೆಯಿದೆ. ಹೀಗಾಗಿ ಯುಎಇಗೆ ಇದು ಮಾಡು ಇಲ್ಲವೇ ಮಡಿ ಪಂದ್ಯ.

ಉಭಯ ತಂಡಗಳು

ಭಾರತ: ಹರ್ಮನ್‌ಪ್ರೀತ್ ಕೌರ್ (ನಾಯಕಿ), ರಿಚಾ ಘೋಷ್ (ವಿಕೆಟ್ ಕೀಪರ್), ಉಮಾ ಚೆಟ್ರಿ (ವಿಕೆಟ್ ಕೀಪರ್), ಸ್ಮೃತಿ ಮಂಧಾನ (ಉಪನಾಯಕಿ), ಶಫಾಲಿ ವರ್ಮಾ, ದೀಪ್ತಿ ಶರ್ಮಾ, ಪೂಜಾ ವಸ್ತ್ರಾಕರ್, ಅರುಂಧತಿ ರೆಡ್ಡಿ, ಜೆಮಿಮಾ ರೊಡ್ರಿಗಸ್, ರೇಣುಕಾ ಠಾಕೂರ್, ದಯಾಲನ್ ಹೇಮಲತಾ, ಆಶಾ ಶೋಭಾನಾ, ರಾಧಾ ಯಾದವ್, ಶ್ರೇಯಾಂಕಾ ಪಾಟೀಲ್, ಸಜನಾ ಸಜೀವನ್.

ಯುಎಇ: ಇಶಾ ರೋಹಿತ್ ಓಜಾ (ನಾಯಕಿ), ತೀರ್ಥ ಸತೀಶ್ (ವೀಕಿ), ರಿನಿತಾ ರಜಿತ್, ಸಮೈರಾ ಧರ್ಣಿಧರ್ಕಾ, ಕವಿಶಾ ಎಗೋಡಗೆ, ಖುಷಿ ಶರ್ಮಾ, ಹೀನಾ ಹೊಚ್ಚಂದನಿ, ವೈಷ್ಣವೆ ಮಹೇಶ್, ರಿತಿಕಾ ರಜಿತ್, ಲಾವಣ್ಯ ಕೇನಿ, ಇಂಧುಜಾ ನಂದಕುಮಾರ್, ಮೆಹಕ್ ಠಾಕೂರ್, ಎಮಿಲಿ ರಜಿತ್ ಥಾಮಸ್, ರಿಷಿತಾ ಥಾಮಸ್ ಕೊಟ್ಟೆ.

Continue Reading

ಕ್ರೀಡೆ

Manolo Marquez : ಮೊನೊಲೊ ಮಾರ್ಕ್ವೆಜ್​ ಭಾರತ ಫುಟ್ಬಾಲ್ ತಂಡದ ನೂತನ ಕೋಚ್​

Manolo Marquez : ಮಾರ್ಕ್ವೆಜ್ ಅವರನ್ನು ಈ ಪ್ರಮುಖ ಹುದ್ದೆಗೆ ಸ್ವಾಗತಿಸಲು ನಾವು ಸಂತೋಷಪಡುತ್ತೇವೆ. ಅವರನ್ನು ರಾಷ್ಟ್ರೀಯ ಕರ್ತವ್ಯಕ್ಕೆ ಬಿಡುಗಡೆ ಮಾಡಿದ ಔದಾರ್ಯಕ್ಕಾಗಿ ಎಫ್ಸಿ ಗೋವಾಗೆ ಕೃತಜ್ಞರಾಗಿದ್ದೇವೆ. ಮುಂಬರುವ ವರ್ಷಗಳಲ್ಲಿ ಮಾರ್ಕ್ವೆಜ್ ಅವರೊಂದಿಗೆ ಕೆಲಸ ಮಾಡಲು ನಾವು ಎದುರು ನೋಡುತ್ತಿದ್ದೇವೆ. ಎಐಎಫ್ಎಫ್, ಎಫ್ಸಿ ಗೋವಾ ಸೇರಿದಂತೆ ಎರಡೂ ಉದ್ಯೋಗಗಳ ನಡುವೆ ಕನಿಷ್ಠ ಪರಿಣಾಮ ಇರುವುದನ್ನು ಖಚಿತಪಡಿಸಿಕೊಳ್ಳಲಾಗುವುದು ಎಂದು” ಎಂದು ಚೌಬೆ ಹೇಳಿದ್ದಾರೆ.

VISTARANEWS.COM


on

Manolo Marquez
Koo

ಬೆಂಗಳೂರು: ಇಗೋರ್ ಸ್ಟಿಮಾಕ್​ ಅವರ ನಿರ್ಗಮನದ ಬಳಿಕ ಖಾಲಿಯಾಗಿ ಉಳಿದಿದ್ದ ಭಾರತ ಫುಟ್ಬಾಲ್ ತಂಡದ ಕೋಚ್ ಹುದ್ದೆಗೆ ಸ್ಪೇನ್ ಮೂಲದ ಮೊನೊಲೊ ಮಾರ್ಕೆಜ್​ ನೇಮಕಗೊಂಡಿದ್ದಾರೆ. ಪ್ರಸ್ತುತ ಎಫ್ ಸಿ ಗೋವಾ ಕೋಚ್ ಆಗಿರುವ ಮಾರ್ಕ್ವೆಜ್​ ಇನ್ನು ಮಂದೆ ಭಾರತ ರಾಷ್ಟ್ರೀಯ ತಂಡದಲ್ಲಿ ಕೆಲಸ ಮಾಡಲಿದ್ದಾರೆ. ಐಎಸ್ಎಲ್ ತಂಡದೊಂದಿಗಿನ ಒಪ್ಪಂದ ಮುಗಿಯುವ ತನಕ ಮಾರ್ಕ್ವೆಜ್ 2024-25ರ ಋತುವಿನಾದ್ಯಂತ ಎಫ್ಸಿ ಗೋವಾ ಮತ್ತು ಭಾರತೀಯ ಫುಟ್ಬಾಲ್ ತಂಡದ ತರಬೇತುದಾರರಾಗಿ ಏಕಕಾಲದಲ್ಲಿ ತಮ್ಮ ಕರ್ತವ್ಯಗಳನ್ನು ಮುಂದುವರಿಸಲಿದ್ದಾರೆ. ಇದರ ನಂತರ, ಮಾರ್ಕ್ವೆಜ್ ತನ್ನ ಸಂಪೂರ್ಣ ಗಮನವನ್ನು ರಾಷ್ಟ್ರೀಯ ತಂಡದ ಕಡೆಗೆ ತಿರುಗಿಸುತ್ತಾರೆ.

ಎಐಎಫ್ಎಫ್ ಅಧ್ಯಕ್ಷ ಕಲ್ಯಾಣ್ ಚೌಬೆ ಅವರು ಸ್ಪೇನ್​​ನ ಫುಟ್ಬಾಲ್​ ತಂತ್ರಜ್ಞನನ್ನು ಈ ಹುದ್ದೆಗೆ ನೇಮಿಸಿರುವುದನ್ನು ಖಚಿತಪಡಿಸಿದ್ದಾರೆ. ಅವರನ್ನು ಬಿಡುಗಡೆ ಮಾಡುವಲ್ಲಿ ಔದಾರ್ಯ ತೋರಿದ್ದಕ್ಕಾಗಿ ಎಫ್ಸಿ ಗೋವಾಗೆ ಧನ್ಯವಾದ ಹೇಳಿದ್ದಾರೆ.

ಮಾರ್ಕ್ವೆಜ್ ಅವರನ್ನು ಈ ಪ್ರಮುಖ ಹುದ್ದೆಗೆ ಸ್ವಾಗತಿಸಲು ನಾವು ಸಂತೋಷಪಡುತ್ತೇವೆ. ಅವರನ್ನು ರಾಷ್ಟ್ರೀಯ ಕರ್ತವ್ಯಕ್ಕೆ ಬಿಡುಗಡೆ ಮಾಡಿದ ಔದಾರ್ಯಕ್ಕಾಗಿ ಎಫ್ಸಿ ಗೋವಾಗೆ ಕೃತಜ್ಞರಾಗಿದ್ದೇವೆ. ಮುಂಬರುವ ವರ್ಷಗಳಲ್ಲಿ ಮಾರ್ಕ್ವೆಜ್ ಅವರೊಂದಿಗೆ ಕೆಲಸ ಮಾಡಲು ನಾವು ಎದುರು ನೋಡುತ್ತಿದ್ದೇವೆ. ಎಐಎಫ್ಎಫ್, ಎಫ್ಸಿ ಗೋವಾ ಸೇರಿದಂತೆ ಎರಡೂ ಉದ್ಯೋಗಗಳ ನಡುವೆ ಕನಿಷ್ಠ ಪರಿಣಾಮ ಇರುವುದನ್ನು ಖಚಿತಪಡಿಸಿಕೊಳ್ಳಲಾಗುವುದು ಎಂದು” ಎಂದು ಚೌಬೆ ಹೇಳಿದ್ದಾರೆ.

ಇದನ್ನೂ ಓದಿ: Smriti Mandhana : ಶ್ರೀಲಂಕಾದ ಅಂಗವಿಕಲ ಕ್ರಿಕೆಟ್​ ಅಭಿಮಾನಿಗೆ ಮೊಬೈಲ್ ಕೊಟ್ಟ ಸ್ಮೃತಿ ಮಂದಾನಾ

ಎಫ್ ಸಿ ಗೋವಾ ಈ ಸುದ್ದಿಯನ್ನು ದೃಢೀಕರಿಸುವ ಹೇಳಿಕೆ ಬಿಡುಗಡೆ ಮಾಡಿದೆ. ರಾಷ್ಟ್ರೀಯ ತಂಡದೊಂದಿಗಿನ ಸೇವೆಗಾಗಿ ಮಾರ್ಕ್ವೆಜ್ ಅವರನ್ನು ಬಿಟ್ಟುಕೊಡುವಂತೆ ಎಐಎಫ್ಎಫ್ ವಿನಂತಿಸಿದೆ ಎಂದು ಹೇಳಿದೆ.

ಮನೋಲೊ ಮಾರ್ಕ್ವೆಜ್ ಮುಖ್ಯ ಕೋಚ್ ಆಗಿ ಮುಂದುವರಿಯಲಿದ್ದಾರೆ, ಬ್ಲೂ ಟೈಗರ್ಸ್​​ನ ಉಸ್ತುವಾರಿಯನ್ನೂ ವಹಿಸಿಕೊಂಡಿದ್ದಾರೆ. ಕೋಚ್ ಮಾರ್ಕ್ವೆಜ್ ಅವರ ಪರಿಣತಿ ಮತ್ತು ನಾಯಕತ್ವವನ್ನು ರಾಷ್ಟ್ರೀಯ ತಂಡಕ್ಕೆ ತರುವಂತೆ ಅಖಿಲ ಭಾರತ ಫುಟ್ಬಾಲ್ ಫೆಡರೇಶನ್ (ಎಐಎಫ್ಎಫ್) ವಿನಂತಿಸಿದ ನಂತರ ಈ ಮಹತ್ವದ ಬೆಳವಣಿಗೆ ಸಂಭವಿಸಿದೆ” ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

ಮಾರ್ಕ್ವೆಜ್ ಏನು ಹೇಳಿದ್ದೇನು?

ಭಾರತ ತಂಡದ ಹೊಸ ತರಬೇತುದಾರನಾಗಿರುವುದು ನನಗೆ ಗೌರವವಾಗಿದೆ ಎಂದು ಮಾರ್ಕ್ವೆಜ್ ಹೇಳಿದರು ಮತ್ತು ಭಾರತವು ತನ್ನ ಎರಡನೇ ತವರು ಎಂದು ಹೇಳಿದರು. ಭಾರತದ ಹೊಸ ಮುಖ್ಯ ಕೋಚ್ ಅಭಿಮಾನಿಗಳಿಗೆ ಯಶಸ್ಸನ್ನು ತರಲು ತಮ್ಮ ಕೈಲಾದಷ್ಟು ಪ್ರಯತ್ನಿಸುವುದಾಗಿ ಹೇಳಿದರು.

ನನ್ನ ಎರಡನೇ ಮನೆ ಎಂದು ನಾನು ಪರಿಗಣಿಸುವ ಭಾರತದ ರಾಷ್ಟ್ರೀಯ ಫುಟ್ಬಾಲ್ ತಂಡದ ತರಬೇತುದಾರನಾಗಿರುವುದು ನನಗೆ ಗೌರವವಾಗಿದೆ. ಭಾರತ ಮತ್ತು ಅದರ ಜನರು ನನಗೆ ಅಂಟಿಕೊಂಡಿರುವ ವಿಷಯ ಮತ್ತು ನಾನು ಈ ಸುಂದರ ದೇಶಕ್ಕೆ ಮೊದಲು ಬಂದಾಗಿನಿಂದ ಅದರ ಒಂದು ಭಾಗವೆಂದು ಭಾವಿಸುತ್ತೇನೆ. ನಮ್ಮಲ್ಲಿರುವ ಲಕ್ಷಾಂತರ ಅಭಿಮಾನಿಗಳಿಗೆ ಯಶಸ್ಸನ್ನು ತರಲು ನಾನು ನನ್ನ ಕೈಲಾದಷ್ಟು ಮಾಡಲು ಬಯಸುತ್ತೇನೆ ಎಂದು ಮಾರ್ಕ್ವೆಜ್ ಹೇಳಿದ್ದಾರೆ.

ಮಾರ್ಕ್ವೆಜ್ 2020 ರಿಂದ ಭಾರತದಲ್ಲಿ ತರಬೇತಿ ಪಡೆಯುತ್ತಿದ್ದಾರೆ. ಅವರ ಅಧಿಕಾರಾವಧಿಯಲ್ಲಿ ಎರಡು ಇಂಡಿಯನ್ ಸೂಪರ್ ಲೀಗ್ (ಐಎಸ್ಎಲ್) ಕ್ಲಬ್​ಗಳನ್ನು ಮುನ್ನಡೆಸಿದ್ದಾರೆ. ಅವರು ಹೈದರಾಬಾದ್ ಎಫ್​​ಸಿಯೊಂದಿಗೆ ಪ್ರಾರಂಭಿಸಿದ್ದರು. ಅಲ್ಲಿ ಅವರು 2020 ರಿಂದ 2023 ರವರೆಗೆ ಸೇವೆ ಸಲ್ಲಿಸಿದರು ಮತ್ತು ಗಮನಾರ್ಹವಾಗಿ 2021-22 ಋತುವಿನಲ್ಲಿ ಐಎಸ್ಎಲ್ ಕಪ್ ಗೆದ್ದರು. ಹೈದರಾಬಾದ್​​ನೊಂದಿಗಿನ ಯಶಸ್ಸಿನ ನಂತರ ಅವರು 2023 ರಲ್ಲಿ ಎಫ್​​ಸಿ ಗೋವಾಕ್ಕೆ ತೆರಳಿದ್ದರು.

Continue Reading
Advertisement
theft case
ಚಿತ್ರದುರ್ಗ7 mins ago

Theft Case : ಅಡ್ಡಗಟ್ಟಿದ ಪೊಲೀಸ್‌ ಜೀಪ್‌ ಮೇಲೆ ಕಲ್ಲು ತೂರಿ ಆಂಧ್ರದ ಡೆಡ್ಲಿ ಕಳ್ಳರ ಗ್ಯಾಂಗ್‌ ಎಸ್ಕೇಪ್‌!

Niveditha Shivarajkumar Fire fly rachana inder Heroine
ಸ್ಯಾಂಡಲ್ ವುಡ್12 mins ago

Niveditha Shivarajkumar: ʻಫೈರ್ ಫ್ಲೈ’ ಸಿನಿಮಾಗೆ ‘ಹೆಂಗೆ ನಾವು’ ಹುಡುಗಿ ನಾಯಕಿ! ಯಾವಾಗ ತೆರೆಗೆ?

Kanwar Yatra
ದೇಶ18 mins ago

Kanwar Yatra: ಮುಸ್ಲಿಮರ ವಿರುದ್ಧ ಬಿಜೆಪಿಯ ದ್ವೇಷದ ರಾಜಕೀಯ ಎಂದ ಓವೈಸಿ; ಜಿನ್ನಾರಂತೆ ವರ್ತನೆ ಎಂದು ಬಿಜೆಪಿ ಟಾಂಗ್‌

Gold Rate Today
ಚಿನ್ನದ ದರ23 mins ago

Gold Rate Today: ಯಥಾಸ್ಥಿತಿ ಕಾಯ್ದುಕೊಂಡ ಚಿನ್ನದ ದರ; ಇಂದಿನ ಬೆಲೆ ತಿಳಿದುಕೊಳ್ಳಿ

Om shiva, Kannada movie team song out
ಸಿನಿಮಾ31 mins ago

Kannada New Movie: ಭಾರ್ಗವ್ ಕೃಷ್ಣ ಅಭಿನಯದ `ಓಂ ಶಿವಂ’ ಚಿತ್ರದ ಲಿರಿಕಲ್ ಸಾಂಗ್ ಬಿಡುಗಡೆ

Paris Olympics 2024
ಕ್ರೀಡೆ58 mins ago

Paris Olympics 2024: ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಮೊದಲ ಬಾರಿ ನೇರಳೆ ಬಣ್ಣದ ಟ್ರ್ಯಾಕ್; ಏನಿದರ ವಿಶೇಷತೆ?

Karnataka HC
ಕರ್ನಾಟಕ1 hour ago

Karnataka HC: ನ್ಯಾಯಮೂರ್ತಿಗಳು ಕೂಡ ಮನುಷ್ಯರೇ; ಮಕ್ಕಳ ಅಶ್ಲೀಲ ದೃಶ್ಯ ವೀಕ್ಷಣೆ ಅಪರಾಧವಲ್ಲ ಆದೇಶ ಹಿಂಪಡೆದ ಹೈಕೋರ್ಟ್

Dr Bro shreenaval kishori Craze social media stars
ವೈರಲ್ ನ್ಯೂಸ್1 hour ago

Dr Bro: ಸೋಷಿಯಲ್​ ಮೀಡಿಯಾ ಸ್ಟಾರ್‌ಗಳ ಮೇಲೆ ಹೆಚ್ಚಾಯ್ತು ಕ್ರೇಜ್‌! ನಿಮಗ್ಯಾರಿಷ್ಟ?

Kanwar Yatra
ದೇಶ1 hour ago

Kanwar Yatra: “ಹೆಸರು ಬಹಿರಂಗ ಪಡಿಸುವಲ್ಲಿ ರಾಮನಿಗಿಲ್ಲದ ಸಮಸ್ಯೆ ರೆಹಮಾನ್‌ಗೆ ಏಕೆ?”-ಬಾಬಾ ರಾಮ್‌ ದೇವ್‌ ಪ್ರಶ್ನೆ

karnataka Rain
ಮಳೆ1 hour ago

Karnataka Rain : ಭಾರಿ ಮಳೆಗೆ ಮುಂದುವರಿದ ಸಾವು-ನೋವು; ಮನೆ ಗೋಡೆ ಕುಸಿದು ವ್ಯಕ್ತಿ ಸಾವು

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Rain
ಮಳೆ23 hours ago

Karnataka Rain : ಭಾರಿ ಮಳೆಗೆ ಮನೆ ಗೋಡೆ ಕುಸಿತ; ಕೊಟ್ಟಿಗೆಯಲ್ಲಿದ್ದ ಜಾನುವಾರುಗಳು ಸಾವು

karnataka Rain
ಮಳೆ1 day ago

Karnataka Rain : ಹಳ್ಳ ದಾಟಲು ಹೋಗಿ ನೀರುಪಾಲಾದ ಜಾನುವಾರು; ಬಿರುಗಾಳಿಗೆ ಕಳಚಿದ ವಿಂಡ್‌ ಫ್ಯಾನ್‌

karnataka Rain
ಮಳೆ2 days ago

Karnataka Rain : ಬೀದಿಗೆ ತಂದ ರಣಮಳೆ; ಮನೆ ಕುಸಿದು ಬಿದ್ದು 9 ತಿಂಗಳ ಗರ್ಭಿಣಿ ನರಳಾಟ

Karnataka Rain
ಮಳೆ2 days ago

Karnataka Rain : ರಾಜ್ಯದಲ್ಲಿ ಮಳೆಯ ಆರ್ಭಟ; ರಾತ್ರಿ ಕಳೆದು ಬೆಳಗಾಗುವುದರೊಳಗೆ ಕಂದಕ ನಿರ್ಮಾಣ

Karnataka Rain
ಮಳೆ3 days ago

Karnataka Rain : ಭಾರಿ ಮಳೆ ಎಫೆಕ್ಟ್‌; ಉಕ್ಕಿ ಹರಿಯುತ್ತಿದ್ದ ನದಿಯಲ್ಲಿ ಕೊಚ್ಚಿ ಹೋದ ರಾಸು

Uttara Kannada Landslide
ಮಳೆ3 days ago

Uttara Kannada Landslide: ಶಿರೂರು ಗುಡ್ಡ ಕುಸಿತ; ಅಖಾಡಕ್ಕಿಳಿದ ಜಿಯೊಲಾಜಿಕಲ್ ಸರ್ವೆ ಆಫ್ ಇಂಡಿಯಾ ಟೀಂ

Karnataka Rain
ಮಳೆ5 days ago

Karnataka Rain : ಕಾರವಾರದಲ್ಲಿ ಮಳೆ ಅವಾಂತರ; ಮನೆ ಮೇಲೆ ಗುಡ್ಡ ಕುಸಿದು ವೃದ್ಧ ಸಾವು

karnataka Rain
ಮಳೆ5 days ago

Karnataka Rain : ಭಾರಿ ಮಳೆಗೆ ನಿಯಂತ್ರಣ ತಪ್ಪಿ ಕೆರೆಗೆ ಉರುಳಿ ಬಿದ್ದ ಕಾರು; ನಾಲ್ವರು ಪ್ರಾಣಾಪಾಯದಿಂದ ಪಾರು

karnataka Weather Forecast
ಮಳೆ6 days ago

Karnataka Weather : ವ್ಯಾಪಕ ಮಳೆ ಎಚ್ಚರಿಕೆ; ನಾಳೆಯೂ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

karnataka Rain
ಮಳೆ6 days ago

Karnataka Rain : ಶಾಲಾ-ಕಾಲೇಜಿಗೆ ಈ ದಿನ ರಜಾ; ಅಬ್ಬರಿಸುತ್ತಿರುವ ಮಳೆಗೆ ಮನೆಯಲ್ಲೇ ಎಲ್ಲರೂ ಸಜಾ!

ಟ್ರೆಂಡಿಂಗ್‌