Nipah Virus: ಕೇರಳದಲ್ಲಿ ನಿಫಾ ಕೇಸ್ ಪತ್ತೆ; ಡೆಂಗ್ಯೂ ಬೆನ್ನಲ್ಲೇ ಕರ್ನಾಟಕಕ್ಕೆ ಮತ್ತೊಂದು ಭೀತಿ - Vistara News

ದೇಶ

Nipah Virus: ಕೇರಳದಲ್ಲಿ ನಿಫಾ ಕೇಸ್ ಪತ್ತೆ; ಡೆಂಗ್ಯೂ ಬೆನ್ನಲ್ಲೇ ಕರ್ನಾಟಕಕ್ಕೆ ಮತ್ತೊಂದು ಭೀತಿ

Nipah Virus: ಇನ್ನು ಈ ಬಗ್ಗೆ ಕೇರಳ ಆರೋಗ್ಯ ಸಚಿವೆ ವೀಣಾ ಚಾರ್ಜ್‌ ಪ್ರತಿಕ್ರಿಯಿಸಿದ್ದು, 14 ವರ್ಷದ ಬಾಲಕನಲ್ಲಿ ನಿಫಾ ವೈರಸ್ ಪತ್ತೆಯಾಗಿದೆ. ಬಾಲಕನ ಮೊದಲ ಸಂಪರ್ಕಿತರನ್ನು ಪತ್ತೆ ಹಚ್ಚೆ ಕ್ವಾರಂಟೈನ್ ಮಾಡಲು ಸೂಚಿಸಲಾಗಿದೆ ಎಂದು ಹೇಳಿದ್ದಾರೆ.

VISTARANEWS.COM


on

Nipah Virus
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ತಿರುವನಂತಪುರಂ: ನೆರೆಯ ರಾಜ್ಯ ಕೇರಳದಲ್ಲಿ ಮತ್ತೆ ನಿಫಾ ವೈರಸ್‌(Nipah Virus) ಆತಂಕ ಹೆಚ್ಚುತ್ತಿದ್ದು, 14 ವರ್ಷದ ಬಾಲಕನಲ್ಲಿ ಈ ಮಾರಣಾಂತಿಕ ವೈರಸ್‌ ಪತ್ತೆ ಆಗಿದೆ. ಈಗಾಗಲೇ ಡೆಂಗ್ಯೂ ವೈರಸ್‌ ಕೇಸ್‌ಗಳು ದಿನೇ ದಿನೇ ಹೆಚ್ಚುತ್ತಿರುವ ಭೀತಿಯಲ್ಲಿರುವ ಕರ್ನಾಟಕಕ್ಕೆ ಇದೀಗ ನಿಫಾ ವೈರಸ್‌ ಆತಂಕ ಕಾಡಿದೆ. ಕೇರಳ(Kerala)ದ ಮಲಪ್ಪುರಂ ಜಿಲ್ಲೆಯಲ್ಲಿ ನಿಫಾ ವೈರಸ್ ಪತ್ತೆಯಾಗಿದೆ. ಇದರ ಪರಿಣಾಮ ಇದೀಗ ಹೈ ಅಲರ್ಟ್ ಘೋಷಿಸಲಾಗಿದೆ.

ಇನ್ನು ಈ ಬಗ್ಗೆ ಕೇರಳ ಆರೋಗ್ಯ ಸಚಿವೆ ವೀಣಾ ಚಾರ್ಜ್‌ ಪ್ರತಿಕ್ರಿಯಿಸಿದ್ದು, 14 ವರ್ಷದ ಬಾಲಕನಲ್ಲಿ ನಿಫಾ ವೈರಸ್ ಪತ್ತೆಯಾಗಿದೆ. ಬಾಲಕನ ಮೊದಲ ಸಂಪರ್ಕಿತರನ್ನು ಪತ್ತೆ ಹಚ್ಚೆ ಕ್ವಾರಂಟೈನ್ ಮಾಡಲು ಸೂಚಿಸಲಾಗಿದೆ ಎಂದು ಹೇಳಿದ್ದಾರೆ.

ಇನ್ನು ಸಂಭವನೀಯ ವೈರಸ್ ಹರಡುವಿಕೆಯ ಬಗ್ಗೆ ರಾಜ್ಯ ಸರ್ಕಾರ ಜಾಗರೂಕತೆ ವಹಿಸಿದೆ. ನಿಫಾ ವೈರಸ್ ಹರಡುವುದನ್ನು ತಡೆಯಲು ತೆಗೆದುಕೊಳ್ಳಬೇಕಾದ ಕ್ರಮಗಳ ಕುರಿತು ಚರ್ಚಿಸಲು ಕೇರಳ ಆರೋಗ್ಯ ಸಚಿವೆ ವೀಣಾ ಜಾರ್ಜ್ ಉನ್ನತ ಮಟ್ಟದ ಸಭೆ ನಡೆಸಿದ್ದಾರೆ. ಸಾರ್ವಜನಿಕ ಸುರಕ್ಷತೆಯನ್ನು ಖಾತರಿಪಡಿಸುವುದು, ಪ್ರಸ್ತುತ ಪರಿಸ್ಥಿತಿಯನ್ನು ಪರಿಶೀಲಿಸುವುದು ಮತ್ತು ನಿಯಂತ್ರಣದ ಕ್ರಮಗಳ ಬಗ್ಗೆ ಚರ್ಚಿಸಲಾಯಿತು. ಮಲಪ್ಪುರಂನಲ್ಲಿರುವ ಸರ್ಕಾರಿ ತಂಗುದಾಣದಲ್ಲಿ 24 ಗಂಟೆಗಳ ನಿಯಂತ್ರಣ ಕೊಠಡಿಯನ್ನು ಸ್ಥಾಪಿಸಲಾಗಿದೆ.

ಸೋಂಕಿತ ಬಾಲಕನ ಸಂಪರ್ಕದಲ್ಲಿದ್ದವರ ಪಟ್ಟಿ ಸಿದ್ಧಪಡಿಸಲಾಗಿದೆ. ಹೆಚ್ಚಿನ ಅಪಾಯದ ಪ್ರದೇಶಗಳಲ್ಲಿರುವ ಜನರ ಮಾದರಿಗಳನ್ನು ಪರೀಕ್ಷೆಗೆ ಕಳುಹಿಸಲು ಕ್ರಮವಹಿಸಲಾಗಿದೆ. ಬಾಲಕನಿಗೆ ಸೋಂಕು ತಗುಲಿದ ಪ್ರದೇಶದ 3 ಕಿಮೀ ವ್ಯಾಪ್ತಿಯಲ್ಲಿ ನಿರ್ಬಂಧ ವಿಧಿಸಬೇಕೆ ಎಂಬ ಬಗ್ಗೆಯೂ ಸಭೆಯಲ್ಲಿ ಚರ್ಚಿಸಲಾಗಿದೆ.

ಸಚಿವೆ ವೀಣಾ ಜಾರ್ಜ್ ಅವರು ಮಲಪ್ಪುರಂಗೆ ತೆರಳಿದ್ದಾರೆ. ವೈರಸ್ ನಿಯಂತ್ರಣಕ್ಕಾಗಿ ಸ್ಟ್ಯಾಂಡರ್ಡ್ ಆಪರೇಟಿಂಗ್ ಪ್ರೊಸೀಜರ್ಸ್ (ಎಸ್‌ಒಪಿ) ಅನುಷ್ಠಾನವನ್ನು ಮೇಲ್ವಿಚಾರಣೆ ಮಾಡಲು ಸರ್ಕಾರವು ಸಮಿತಿಗಳನ್ನು ರಚಿಸಿದೆ.
ಬಾಲಕನ ಸ್ಥಿತಿ ಗಂಭೀರವಾಗಿದೆ. ಆತನನ್ನು ಕೋಝಿಕ್ಕೋಡ್‌ ವೈದ್ಯಕೀಯ ಕಾಲೇಜಿಗೆ ವರ್ಗಾಯಿಸುವ ಸಾಧ್ಯತೆ ಇದೆ ಎನ್ನಲಾಗಿದೆ.

ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ 14 ವರ್ಷದ ಬಾಲಕನ ಮಾದರಿಗಳನ್ನು ಪುಣೆ ಎನ್‌ಐವಿ ಕೇಂದ್ರಕ್ಕೆ ಕಳುಹಿಸಿಕೊಡಲಾಗಿದೆ. ಇದೀಗ ವರದಿ ಬಂದಿದ್ದು, ನಿಫಾ ವೈರಸ್ ದೃಢಪಟ್ಟಿದೆ. ನಿಫಾ ವೈರಸ್ ಖಚಿತವಾಗುತ್ತಿದ್ದಂತ ಆರೋಗ್ಯ ಇಲಾಖೆ ಅಲರ್ಟ್ ಆಗಿದೆ. ಬಾಲಕನನ್ನು ಇದೀಗ ಕೋಝಿಕೋಡ್ ಸರ್ಕಾರಿ ಮೆಡಿಕಲ್ ಕಾಲೇಜಿಗೆ ಸ್ಥಳಾಂತರಿಸಲು ಸೂಚಿಸಲಾಗಿದೆ. ಇದೀಗ ಬಾಲಕನ ಸಂಪರ್ಕಿತರನ್ನು ಪತ್ತೆ ಹಚ್ಚಲಾಗುತ್ತಿದೆ. ಪೋಷಕರು ಸೇರಿದಂತೆ ಮೊದಲ ಸಂಪರ್ಕಿತರನ್ನು ಈಗಾಗಲೇ ಐಸೋಲೇಶನ್ ಮಾಡಲಾಗಿದೆ. ಇವರ ಮಾದರಿಗಳನ್ನು ಸಂಗ್ರಹಿಸಿ ಪುಣೆಗೆ ಕಳುಹಿಸಲಾಗಿದೆ.

ಕೇರಳದಲ್ಲಿ ಸುಮಾರು ಹತ್ತು ತಿಂಗಳ ಹಿಂದೆ ನಿಫಾ ಸೋಂಕಿನಿಂದಾಗಿ ಮೂವರು ಮೃತಪಟ್ಟಿದ್ದರು. ಹಾಗಾಗಿ, ರಾಜ್ಯ ಸರ್ಕಾರವು ಕಂಟೇನ್‌ಮೆಂಟ್‌ ವಲಯಗಳಲ್ಲಿ ಶಾಲೆಗಳಿಗೆ ರಜೆ ಘೋಷಿಸುವ ಮೂಲಕ ಸೋಂಕು ಹರಡುವುದನ್ನು ತಡೆಯಲು ಮುಂದಾಗಿತ್ತು. ಕಲ್ಲಿಕೋಟೆಯಲ್ಲಿಯೇ ಆರು ಜನರಿಗೆ ಸೋಂಕು ತಗುಲಿದ ಕಾರಣ ಶಾಲೆ-ಕಾಲೇಜುಗಳಿಗೆ ರಜೆ ಘೋಷಿಸಲಾಗಿತ್ತು. ಸುಮಾರು 9 ಗ್ರಾಮಗಳನ್ನು ಕಂಟೇನ್‌ಮೆಂಟ್‌ ವಲಯಗಳು ಎಂದು ಗುರುತಿಸಲಾಗಿತ್ತು.

ಇದನ್ನೂ ಓದಿ: Foreign Secretary: ಕೇರಳಕ್ಕಾಗಿ ‘ವಿದೇಶಾಂಗ ಕಾರ್ಯದರ್ಶಿ’ಯನ್ನು ನೇಮಿಸಿದ ಪಿಣರಾಯಿ; ಭುಗಿಲೆದ್ದ ವಿವಾದ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ದೇಶ

Nipah Virus: ಕೇರಳದಲ್ಲಿ ನಿಫಾ ವೈರಸ್‌ ತಗುಲಿದ್ದ ಬಾಲಕ ಸಾವು

Nipah Virus: ಎನ್‌ಐವಿ-ಪುಣೆ ಶನಿವಾರ ಬಾಲಕನಿಗೆ ನಿಪಾ ವೈರಸ್ ಇರುವುದು ದೃಢಪಡಿಸಿದ ನಂತರ, ಖಾಸಗಿ ಆಸ್ಪತ್ರೆಯಿಂದ ಕೋಝಿಕ್ಕೋಡ್‌ನ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು. ಆತನನ್ನು ವೆಂಟಿಲೇಟರ್‌ನಲ್ಲಿಡಲಾಗಿತ್ತು. ಇಂದು ಬೆಳಗ್ಗೆ ಮೂತ್ರದ ಪ್ರಮಾಣ ಕಡಿಮೆಯಾಗಿದ್ದು, ಭಾರೀ ಹೃದಯಾಘಾತದಿಂದಾಗಿ ಆತನ ಬೆಳಗ್ಗೆ ಕೊನೆಯುಸಿರೆಳೆದಿದ್ದಾನೆ. ಅಂತರಾಷ್ಟ್ರೀಯ ಪ್ರೋಟೋಕಾಲ್ ಪ್ರಕಾರ ಆತನ ಅಂತ್ಯಕ್ರಿಯೆ ನಡೆಯಲಿದೆ ಎಂದಿದ್ದಾರೆ.

VISTARANEWS.COM


on

nipah virus
Koo

ತಿರುವನಂತಪುರಂ: ಕೇರಳದಲ್ಲಿ ನಿಫಾ ಸೋಂಕು(Nipah Virus) ತಗುಲಿದ್ದ 14ವರ್ಷದ ಬಾಲಕ ಹೃದಯಾಘಾತ(Cardiac Arrest)ದಿಂದ ಸಾವನ್ನಪ್ಪಿದ್ದಾನೆ. ಈ ಬಗ್ಗೆ ಆರೋಗ್ಯ ಸಚಿವೆ ವೀಣಾ ಜಾರ್ಜ್‌ ಮಾಹಿತಿ ನೀಡಿದ್ದು, ನಿಫಾ ಸೋಂಕು ತಗುಲಿದ್ದ ಪಾಲಕ್ಕಾಡು ಮಲಪ್ಪುರಂ ಜಿಲ್ಲೆಯ ಬಾಲಕ ಹೃದಯಾಘಾತದಿಂದ ಸಾವನ್ನಪ್ಪಿದ್ದಾನೆ. ಇಂದು ಬೆಳಗ್ಗೆ 10:50 ಚಿಕಿತ್ಸೆ ಫಲಕಾರಿಗದೇ ಕೊನೆಯುಸಿರೆಳೆದಿದ್ದಾನೆ ಎಂದಿದ್ದಾರೆ.

ಎನ್‌ಐವಿ-ಪುಣೆ ಶನಿವಾರ ಬಾಲಕನಿಗೆ ನಿಪಾ ವೈರಸ್ ಇರುವುದು ದೃಢಪಡಿಸಿದ ನಂತರ, ಖಾಸಗಿ ಆಸ್ಪತ್ರೆಯಿಂದ ಕೋಝಿಕ್ಕೋಡ್‌ನ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು. ಆತನನ್ನು ವೆಂಟಿಲೇಟರ್‌ನಲ್ಲಿಡಲಾಗಿತ್ತು. ಇಂದು ಬೆಳಗ್ಗೆ ಮೂತ್ರದ ಪ್ರಮಾಣ ಕಡಿಮೆಯಾಗಿದ್ದು, ಭಾರೀ ಹೃದಯಾಘಾತದಿಂದಾಗಿ ಆತನ ಬೆಳಗ್ಗೆ ಕೊನೆಯುಸಿರೆಳೆದಿದ್ದಾನೆ. ಅಂತರಾಷ್ಟ್ರೀಯ ಪ್ರೋಟೋಕಾಲ್ ಪ್ರಕಾರ ಆತನ ಅಂತ್ಯಕ್ರಿಯೆ ನಡೆಯಲಿದೆ ಎಂದಿದ್ದಾರೆ.

ಜಿಲ್ಲಾಧಿಕಾರಿಗಳು ಬಾಲಕನ ಪೋಷಕರು ಮತ್ತು ಕುಟುಂಬದೊಂದಿಗೆ ಚರ್ಚೆ ನಡೆಸಿದ ನಂತರವೇ ಅಂತ್ಯಕ್ರಿಯೆಯ ಕುರಿತು ಹೆಚ್ಚಿನ ನಿರ್ಧರಿಸಲಾಗುತ್ತದೆ ಎಂದು ಜಾರ್ಜ್ ಹೇಳಿದರು. ಇನ್ನು ಬಾಲಕನ ಜೊತೆ ಪ್ರಾಥಮಿಕ ಸಂಪರ್ಕದಲ್ಲಿದ್ದವರನ್ನು ಪ್ರಸ್ತುತ ಕೋಝಿಕ್ಕೋಡ್ ವೈದ್ಯಕೀಯ ಕಾಲೇಜಿನಲ್ಲಿ ಐಸೋಲೇಶನ್‌ನಲ್ಲಿಡಲಾಗಿದೆ.

ಸೋಂಕಿತ ಬಾಲಕನ ಸಂಪರ್ಕದಲ್ಲಿದ್ದವರ ಪಟ್ಟಿ ಸಿದ್ಧಪಡಿಸಲಾಗಿದೆ. ಹೆಚ್ಚಿನ ಅಪಾಯದ ಪ್ರದೇಶಗಳಲ್ಲಿರುವ ಜನರ ಮಾದರಿಗಳನ್ನು ಪರೀಕ್ಷೆಗೆ ಕಳುಹಿಸಲು ಕ್ರಮವಹಿಸಲಾಗಿದೆ. ಬಾಲಕನಿಗೆ ಸೋಂಕು ತಗುಲಿದ ಪ್ರದೇಶದ 3 ಕಿಮೀ ವ್ಯಾಪ್ತಿಯಲ್ಲಿ ನಿರ್ಬಂಧ ವಿಧಿಸಬೇಕೆ ಎಂಬ ಬಗ್ಗೆಯೂ ಸಭೆಯಲ್ಲಿ ಚರ್ಚಿಸಲಾಗಿದೆ. ಸಚಿವೆ ವೀಣಾ ಜಾರ್ಜ್ ಅವರು ಮಲಪ್ಪುರಂಗೆ ತೆರಳಿದ್ದಾರೆ. ವೈರಸ್ ನಿಯಂತ್ರಣಕ್ಕಾಗಿ ಸ್ಟ್ಯಾಂಡರ್ಡ್ ಆಪರೇಟಿಂಗ್ ಪ್ರೊಸೀಜರ್ಸ್ (ಎಸ್‌ಒಪಿ) ಅನುಷ್ಠಾನವನ್ನು ಮೇಲ್ವಿಚಾರಣೆ ಮಾಡಲು ಸರ್ಕಾರವು ಸಮಿತಿಗಳನ್ನು ರಚಿಸಿದೆ.

ಬಾಲಕನ ಮಾದರಿಗಳನ್ನು ಪುಣೆ ಎನ್‌ಐವಿ ಕೇಂದ್ರಕ್ಕೆ ಕಳುಹಿಸಿಕೊಡಲಾಗಿದೆ. ಇದೀಗ ವರದಿ ಬಂದಿದ್ದು, ನಿಫಾ ವೈರಸ್ ದೃಢಪಟ್ಟಿದೆ. ನಿಫಾ ವೈರಸ್ ಖಚಿತವಾಗುತ್ತಿದ್ದಂತ ಆರೋಗ್ಯ ಇಲಾಖೆ ಅಲರ್ಟ್ ಆಗಿದೆ. ಬಾಲಕನನ್ನು ಇದೀಗ ಕೋಝಿಕೋಡ್ ಸರ್ಕಾರಿ ಮೆಡಿಕಲ್ ಕಾಲೇಜಿಗೆ ಸ್ಥಳಾಂತರಿಸಲು ಸೂಚಿಸಲಾಗಿದೆ. ಇದೀಗ ಬಾಲಕನ ಸಂಪರ್ಕಿತರನ್ನು ಪತ್ತೆ ಹಚ್ಚಲಾಗುತ್ತಿದೆ. ಪೋಷಕರು ಸೇರಿದಂತೆ ಮೊದಲ ಸಂಪರ್ಕಿತರನ್ನು ಈಗಾಗಲೇ ಐಸೋಲೇಶನ್ ಮಾಡಲಾಗಿದೆ. ಇವರ ಮಾದರಿಗಳನ್ನು ಸಂಗ್ರಹಿಸಿ ಪುಣೆಗೆ ಕಳುಹಿಸಲಾಗಿದೆ.

ಇದನ್ನೂ ಓದಿ: HD Kumaraswamy: ಕೇಂದ್ರ ಸಚಿವರಾದ ಬಳಿಕ ಮೊದಲ ಬಾರಿಗೆ ಹಾಸನಕ್ಕೆ ಎಚ್‌ಡಿಕೆ ಭೇಟಿ; ಮಳೆಯಿಂದ ಹಾನಿಯಾದ ಪ್ರದೇಶಗಳ ಪರಿಶೀಲನೆ

Continue Reading

ದೇಶ

Kedarnath Landslide: ಕೇದಾರನಾಥದಲ್ಲಿ ಭೀಕರ ಭೂಕುಸಿತ; ಮೂವರು ಯಾತ್ರಿಕರು ದುರ್ಮರಣ

Kedarnath Landslide: ರಾಜ್ಯ ವಿಪತ್ತು ನಿರ್ವಹಣಾ ಪಡೆ ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದು, ಯಾತ್ರಿಕರು ಇಂದು ಬೆಳಗ್ಗೆ ಗೌರಿಕುಂಡಾದಿಂದ ತಮ್ಮ ಪ್ರಯಾಣವನ್ನು ಆರಂಭಿಸಿದ್ದರು. ಚಿರ್‌ಬಾಸಾ ಪ್ರದೇಶದ ಸಮೀಪ ಭಾರೀ ಭೂ ಕುಸಿತ ಸಂಭವಿಸಿದ್ದು, ಮೂವರು ಯಾತ್ರಿಕರು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ ಎನ್ನಲಾಗಿದೆ.

VISTARANEWS.COM


on

Kedarnath Landslide
Koo

ಉತ್ತರಾಖಂಡ: ಭಾರೀ ಮಳೆಗೆ ಕೇದಾರನಾಥ(Kedarnath Landslide)ದಲ್ಲಿ ಭೀಕರ ಭೂಕುಸಿತ(Landslide) ಸಂಭವಿಸಿದ್ದು, ಮೂವರು ಯಾತ್ರಿಕರು ಮೃತಪಟ್ಟಿದ್ದಾರೆ. ದುರ್ಘಟನೆಯಲ್ಲಿ ಕೆಲವು ಯಾತ್ರಿಕರಿಗೆ ಗಂಭೀರ ಗಾಯಗಳಾಗಿವೆ.

ರಾಜ್ಯ ವಿಪತ್ತು ನಿರ್ವಹಣಾ ಪಡೆ ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದು, ಯಾತ್ರಿಕರು ಇಂದು ಬೆಳಗ್ಗೆ ಗೌರಿಕುಂಡಾದಿಂದ ತಮ್ಮ ಪ್ರಯಾಣವನ್ನು ಆರಂಭಿಸಿದ್ದರು. ಚಿರ್‌ಬಾಸಾ ಪ್ರದೇಶದ ಸಮೀಪ ಭಾರೀ ಭೂ ಕುಸಿತ ಸಂಭವಿಸಿದ್ದು, ಮೂವರು ಯಾತ್ರಿಕರು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ ಎನ್ನಲಾಗಿದೆ. ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ಮುಂದುವರೆದಿದ್ದು, ಯಾತ್ರಿಕರನ್ನು ಸುರಕ್ಷಿತ ಸ್ಥಳಕ್ಕೆ ರವಾನಿಸಲಾಗುತ್ತಿದೆ ಎಂದಿದ್ದಾರೆ. ಇನ್ನು ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.

ಇನ್ನು ಮೃತರಲ್ಲಿ ಇಬ್ಬರು ಮಹಾರಾಷ್ಟ್ರ ಮೂಲದವರರಾಗಿದ್ದು, ಅರುಣ್‌ ಪರಾಠೆ ಮತ್ತು ಸುನಿಲ್‌ ಮಹಾದೇವ್‌ ಕಾಲೆ ಎಂದು ಗುರುತಿಸಲಾಗಿದೆ. ಮತ್ತೊರ್ವನನ್ನು ರುದ್ರಪ್ರಯಾಗ್‌ ಮೂಲದ ಅನುರಾಗ್‌ ಬಿಶ್ತ್‌ ಎಂದು ಗುರುತಿಸಲಾಗಿದೆ. ಘಟನೆ ಬಗ್ಗೆ ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್‌ ಸಿಂಗ್‌ ಧಾಮಿ ಸಂತಾಪ ಸೂಚಿಸಿದ್ದಾರೆ.

ಇದನ್ನೂ ಓದಿ: Karnataka HC: ನ್ಯಾಯಮೂರ್ತಿಗಳು ಕೂಡ ಮನುಷ್ಯರೇ; ಮಕ್ಕಳ ಅಶ್ಲೀಲ ದೃಶ್ಯ ವೀಕ್ಷಣೆ ಅಪರಾಧವಲ್ಲ ಆದೇಶ ಹಿಂಪಡೆದ ಹೈಕೋರ್ಟ್

Continue Reading

ದೇಶ

Kanwar Yatra: ಮುಸ್ಲಿಮರ ವಿರುದ್ಧ ಬಿಜೆಪಿಯ ದ್ವೇಷದ ರಾಜಕೀಯ ಎಂದ ಓವೈಸಿ; ಜಿನ್ನಾರಂತೆ ವರ್ತನೆ ಎಂದು ಬಿಜೆಪಿ ಟಾಂಗ್‌

Kanwar Yatra: ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಓವೈಸಿ, ಭಾರತೀಯ ಮುಸ್ಲಿಮರ ವಿರುದ್ಧ ದ್ವೇಷ ಯಾವ ಮಟ್ಟದಲ್ಲಿದೆ ಎಂಬುದಕ್ಕೆ ಇದೇ ಸಾಕ್ಷಿ. ಇದರ ಬಹುದೊಡ್ಡ ಕ್ರೆಡಿಟ್‌ ಜಾತ್ಯಾತೀತ ಪಕ್ಷ ಎಂದು ಕರೆಸಿಕೊಳ್ಳುವ ಬಿಜೆಪಿ ಮತ್ತು ಹಿಂದೂತ್ವದ ನಾಯಕರಿಗೆ ಸಲ್ಲುತ್ತದೆ ಎಂದು ಪೋಸ್ಟ್‌ ಮಾಡಿದ್ದಾರೆ.

VISTARANEWS.COM


on

Kanwar Yatra
Koo

ಹೊಸದಿಲ್ಲಿ: ಹಿಂದೂಗಳ ಪವಿತ್ರ ಯಾತ್ರೆಯಾಗಿರುವ ಕನ್ವರ್ ಯಾತ್ರೆ (Kanwar Yatra) ಸಾಗುವ ಮಾರ್ಗದಲ್ಲಿನ ಹೋಟೆಲ್‌, ರೆಸ್ಟೋರೆಂಟ್‌ ಮತ್ತು ತಿನಿಸು ಮಾರಾಟಗಾರರು ತಮ್ಮ ಮಾಲೀಕರ ಹೆಸರನ್ನು ಪ್ರದರ್ಶಿಸಬೇಕು ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ (Yogi Adityanath) ಶುಕ್ರವಾರ ಆದೇಶ ಹೊರಡಿಸಿರುವ ಬಗ್ಗೆ ಎಐಎಂಐಎಂ(AIMIM) ಅಧ್ಯಕ್ಷ ಅಸಾದುದ್ದೀನ್‌ ಓವೈಸಿ(Asaduddin Owaisi) ಕಿಡಿ ಕಾರಿದ್ದಾರೆ. ಇದು ಮುಸ್ಲಿಂ ಸಮುದಾಯದ ವಿರುದ್ಧ ಬಿಜೆಪಿ ಸರ್ಕಾರದ ದ್ವೇಷವನ್ನು ತೋರಿಸುತ್ತಿದೆ ಎಂದು ಆಕ್ರೋಶ ಹೊರಹಾಕಿದ್ದಾರೆ.

ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಓವೈಸಿ, ಭಾರತೀಯ ಮುಸ್ಲಿಮರ ವಿರುದ್ಧ ದ್ವೇಷ ಯಾವ ಮಟ್ಟದಲ್ಲಿದೆ ಎಂಬುದಕ್ಕೆ ಇದೇ ಸಾಕ್ಷಿ. ಇದರ ಬಹುದೊಡ್ಡ ಕ್ರೆಡಿಟ್‌ ಜಾತ್ಯಾತೀತ ಪಕ್ಷ ಎಂದು ಕರೆಸಿಕೊಳ್ಳುವ ಬಿಜೆಪಿ ಮತ್ತು ಹಿಂದೂತ್ವದ ನಾಯಕರಿಗೆ ಸಲ್ಲುತ್ತದೆ ಎಂದು ಪೋಸ್ಟ್‌ ಮಾಡಿದ್ದಾರೆ.

ಓವೈಸಿಯನ್ನು ಜಿನ್ನಾಗೆ ಹೋಲಿಕೆ

ಓವೈಸಿ ಟ್ವೀಟ್‌ ಬೆನ್ನಲ್ಲೇ ಬಿಜೆಪಿ ಮುಖಂಡ ಸುಖಾಂತಾ ಮಜುಮ್ದಾರ್‌ ಓವೈಸಿ ವಿರುದ್ಧ ಕಿಡಿ ಕಾರಿದ್ದಾರೆ. ಪ್ರತಿಪಕ್ಷಗಳು ಜನರನ್ನು ದಾರಿ ತಪ್ಪಿಸುವ ನಿಟ್ಟಿನಲ್ಲಿ ಕೆಲಸ ಮಾಡುತ್ತಿದೆ. ಇಂತಹದ್ದೇ ಪ್ರಕಟಣೆಯನ್ನು ಸಮಾಜವಾದಿ ಪಕ್ಷ ಅಧಿಕಾರದಲ್ಲಿರುವಾಗಲೂ ಹೊರಡಿಸಲಾಗಿತ್ತು. ಓವೈಸಿ ಪಾಕಿಸ್ತಾನ ಸ್ಥಾಪಕ ಮೊಹಮ್ಮದ್‌ ಅಲಿ ಜಿನ್ಹಾರಂತೆ ವರ್ತಿಸುತ್ತಿದ್ದಾರೆ ಎಂದಿದ್ದಾರೆ.

ಕನ್ವರ್ ಯಾತ್ರೆ ಶ್ರಾವಣ ಮಾಸದಲ್ಲಿ ನಡೆಯುತ್ತದೆ. ಈ ಯಾತ್ರೆಯ ಮೂಲಕ ಶಿವಭಕ್ತರು ಹರಿದ್ವಾರದಿಂದ ಪುಣ್ಯ ತೀರ್ಥ ತಂದು ಉತ್ತರ ಪ್ರದೇಶದ ಮುಜಾಫರ್‌ನಗರದ ಮಾರ್ಗವಾಗಿ ತೆರಳುತ್ತಾರೆ. ಈ ವರ್ಷದ ಕನ್ವರ್ ಯಾತ್ರೆಯು ಜುಲೈ 22ರಂದು ಪ್ರಾರಂಭವಾಗಿ ಆಗಸ್ಟ್ 2ರವರೆಗೆ ನಡೆಯಲಿದೆ.ಕನ್ವರ್ ಯಾತ್ರೆ ಸಾಗುವ ಮಾರ್ಗದಲ್ಲಿರುವ ಹೋಟೆಲ್, ಢಾಬಾಗಳು ಮತ್ತು ಇತರ ವ್ಯಾಪಾರಿಗಳು ಮಾಲೀಕರು ಮತ್ತು ಸಿಬ್ಬಂದಿಯ ಹೆಸರನ್ನು ಕಡ್ಡಾಯವಾಗಿ ಪ್ರದರ್ಶಿಸುವಂತೆ ಉತ್ತರ ಪ್ರದೇಶದ ಮುಜಾಫರ್‌ನಗರ ಜಿಲ್ಲೆಯ ಪೊಲೀಸರು ಹೊರಡಿಸಿದ್ದ ಆದೇಶಕ್ಕೆ ಪ್ರತಿಪಕ್ಷಗಳಿಂದ ವ್ಯಾಪಕ ಟೀಕೆ ವ್ಯಕ್ತವಾದ ಒಂದು ದಿನದ ಬಳಿಕ ಈ ಬೆಳವಣಿಗೆ ನಡೆದಿದೆ.

ಕನ್ವರ್ ಯಾತ್ರೆಯಲ್ಲಿ ಪಾಲ್ಗೊಳ್ಳುವ ಭಕ್ತರ ಗೊಂದಲವನ್ನು ತಪ್ಪಿಸಲು ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಮುಜಾಫರ್‌ನಗರದ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಅಭಿಷೇಕ್ ಸಿಂಗ್ ಗುರುವಾರ ತಿಳಿಸಿದ್ದರು. ಅದಾಗ್ಯೂ ಪ್ರತಿಪಕ್ಷಗಳು ಈ ನಡೆಯನ್ನು ಖಂಡಿಸಿದ್ದವು. ಇದೀಗ ಸ್ವತಃ ಮುಖ್ಯಮಂತ್ರಿಯೇ ಈ ಆದೇಶ ಹೊರಡಿಸಿರುವುದು ಕುತೂಹಲ ಮೂಡಿಸಿದೆ.

ʼʼಧಾರ್ಮಿಕ ಯಾತ್ರಾರ್ಥಿಗಳ ಪಾವಿತ್ರ್ಯವನ್ನು ಕಾಪಾಡುವ ಉದ್ದೇಶದ ಹಿನ್ನೆಲೆಯಲ್ಲಿ ಮುಜಾಫರ್‌ನಗರ ಪೊಲೀಸರು ಈ ನಿರ್ಧಾರ ತೆಗೆದುಕೊಂಡಿದ್ದಾರೆ ಎನ್ನುವುದನ್ನು ಸಿಎಂ ಯೋಗಿ ಆದಿತ್ಯನಾಥ್‌ ಗಮನಿಸಿದರು. ಹೀಗಾಗಿ ಅವರು ರೆಸ್ಟೋರೆಂಟ್, ಹೋಟೆಲ್‌, ರಸ್ತೆಬದಿಯ ಢಾಬಾ ಅಥವಾ ಆಹಾರದ ಗಾಡಿ ಸೇರಿದಂತೆ ಪ್ರತಿಯೊಂದು ಕಡೆ ಮಾಲೀಕರ ಹೆಸರು ಮತ್ತು ವಿವರಗಳನ್ನು ಪ್ರದರ್ಶಿಸುವಂತೆ ಸೂಚಿಸಿದ್ದಾರೆʼʼ ಎಂದು ಮೂಲಗಳು ತಿಳಿಸಿವೆ.

ಇದಕ್ಕೂ ಮುನ್ನ ಉತ್ತರ ಪ್ರದೇಶದ ಸಚಿವ ಕಪಿಲ್ ದೇವ್ ಅಗರ್ವಾಲ್ ಅವರು ಮಾತನಾಡಿ, ಮುಸ್ಲಿಂ ಮಾರಾಟಗಾರರು ಹಿಂದುಗಳಂತೆ ನಟಿಸಿ ಯಾತ್ರಾರ್ಥಿಗಳಿಗೆ ಮಾಂಸಾಹಾರವನ್ನು ಮಾರಾಟ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದರು. “ಅವರು ವೈಷ್ಣೋ ಡಾಬಾ ಭಂಡಾರ್, ಶಕುಂಭರಿ ದೇವಿ ಹೋಟೆಲ್‌ ಮತ್ತು ಶುದ್ಧ ಸಸ್ಯಾಹಾರಿ ಎಂದು ಬೋರ್ಡ್‌ ಸ್ಥಾಪಿಸಿ ಮಾಂಸಾಹಾರ ಮಾರಾಟ ಮಾಡುತ್ತಾರೆ” ಎಂದು ಅವರು ತಿಳಿಸಿದ್ದರು.

ಮುಜಾಫರ್‌ನಗರ ಪೊಲೀಸರ ಆದೇಶಕ್ಕೆ ಕಿಡಿ ಕಾರಿದ ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್, “ಕನ್ವರ್ ಯಾತ್ರೆಯ ಉದ್ದಕ್ಕೂ ಇರುವ ಹೊಟೇಲ್‌ಗಳಲ್ಲಿ ಮಾಲೀಕರು ಮತ್ತು ಸಿಬ್ಬಂದಿಯ ಹೆಸರನ್ನು ಪ್ರದರ್ಶಿಸಬೇಕೆಂಬ ಉತ್ತರ ಪ್ರದೇಶ ಪೊಲೀಸರು ನೀಡಿರುವ ಆದೇಶವು ‘ಸಾಮಾಜಿಕ ಅಪರಾಧ’. ಜನರ ನಡುವಿನ ಸಾಮರಸ್ಯವನ್ನು ಕೆಡಿಸಲು ಇಂತಹ ಆದೇಶಗಳನ್ನು ತಹೊರಡಿಲಾಗುತ್ತಿದೆʼʼ ಎಂದು ಅವರು ಕಿಡಿಕಾರಿದ್ದಾರೆ.

ಇದನ್ನೂ ಓದಿ:Karnataka HC: ನ್ಯಾಯಮೂರ್ತಿಗಳು ಕೂಡ ಮನುಷ್ಯರೇ; ಮಕ್ಕಳ ಅಶ್ಲೀಲ ದೃಶ್ಯ ವೀಕ್ಷಣೆ ಅಪರಾಧವಲ್ಲ ಆದೇಶ ಹಿಂಪಡೆದ ಹೈಕೋರ್ಟ್

Continue Reading

ದೇಶ

Kanwar Yatra: “ಹೆಸರು ಬಹಿರಂಗ ಪಡಿಸುವಲ್ಲಿ ರಾಮನಿಗಿಲ್ಲದ ಸಮಸ್ಯೆ ರೆಹಮಾನ್‌ಗೆ ಏಕೆ?”-ಬಾಬಾ ರಾಮ್‌ ದೇವ್‌ ಪ್ರಶ್ನೆ

Kanwar Yatra: ರಾಮ್‌ದೇವ್‌ಗೆ ತನ್ನ ಗುರುತು ಬಹಿರಂಗ ಪಡಿಸುವಲ್ಲಿ ಸಮಸ್ಯೆ ಇಲ್ಲವೆಂದ ಮೇಲೆ ರೆಹ್ಮಾನ್‌ಗೆ ಏಕೆ ಸಮಸ್ಯೆ ಆಗುತ್ತಿದೆ? ಪ್ರತಿಯೊಬ್ಬರಿಗೆ ತಮ್ಮ ಹೆಸರಿನ ಬಗ್ಗೆ ಹೆಮ್ಮೆ ಇರಬೇಕು. ಹೆಸರು ಮುಚ್ಚಿಡುವ ಅವಶ್ಯಕತೆ ಇಲ್ಲ. ಮಾಡುವ ಕೆಲಸದಲ್ಲಿ ಶುದ್ದತೆ ಇರಬೇಕು. ನಮ್ಮ ಕೆಲಸದಲ್ಲಿ ನೀಯತ್ತು ಇದ್ದರೆ ನಾವು ಹಿಂದೂವೋ ಅಥವಾ ಮುಸ್ಲಿಮರೋ ಎಂಬ ವಿಚಾರ ಮುಖ್ಯವಾಗುವುದಿಲ್ಲ ಎಂದಿದ್ದಾರೆ.

VISTARANEWS.COM


on

Kanwar Yatra
Koo

ಲಖನೌ: ಕನ್ವರ್ ಯಾತ್ರೆ (Kanwar Yatra) ಸಾಗುವ ಮಾರ್ಗದಲ್ಲಿನ ಹೋಟೆಲ್‌, ರೆಸ್ಟೋರೆಂಟ್‌ ಮತ್ತು ತಿನಿಸು ಮಾರಾಟಗಾರರು ತಮ್ಮ ಮಾಲೀಕರ ಹೆಸರನ್ನು ಪ್ರದರ್ಶಿಸಬೇಕು ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ (Yogi Adityanath) ಶುಕ್ರವಾರ ಆದೇಶ ಹೊರಡಿಸಿರುವುದು ರಾಷ್ಟ್ರವ್ಯಾಪಿ ಚರ್ಚೆಗೆ ಕಾರಣವಾಗಿದೆ. ಯೋಗಿ ನಡೆಗೆ ಹಲವು ವಿರೋಧಗಳು ಕೇಳಿ ಬಂದಿರುವ ಬೆನ್ನಲ್ಲೇ ಯೋಗ ಗುರು ಬಾಬಾ ರಾಮದೇವ್‌(Baba Ramdev) ಕೂಡ ಬೆಂಬಲ ಸೂಚಿಸಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಬಾಬಾ ರಾಮ್‌ದೇವ್‌, ತಮ್ಮ ಹೆಸರಿನ ಬಗ್ಗೆ ಎಲ್ಲರಿಗೂ ಗೌರವ ಇರಬೇಕು. ರಾಮ್‌ದೇವ್‌ಗೆ ತನ್ನ ಗುರುತು ಬಹಿರಂಗ ಪಡಿಸುವಲ್ಲಿ ಸಮಸ್ಯೆ ಇಲ್ಲವೆಂದ ಮೇಲೆ ರೆಹ್ಮಾನ್‌ಗೆ ಏಕೆ ಸಮಸ್ಯೆ ಆಗುತ್ತಿದೆ? ಪ್ರತಿಯೊಬ್ಬರಿಗೆ ತಮ್ಮ ಹೆಸರಿನ ಬಗ್ಗೆ ಹೆಮ್ಮೆ ಇರಬೇಕು. ಹೆಸರು ಮುಚ್ಚಿಡುವ ಅವಶ್ಯಕತೆ ಇಲ್ಲ. ಮಾಡುವ ಕೆಲಸದಲ್ಲಿ ಶುದ್ದತೆ ಇರಬೇಕು. ನಮ್ಮ ಕೆಲಸದಲ್ಲಿ ನೀಯತ್ತು ಇದ್ದರೆ ನಾವು ಹಿಂದೂವೋ ಅಥವಾ ಮುಸ್ಲಿಮರೋ ಎಂಬ ವಿಚಾರ ಮುಖ್ಯವಾಗುವುದಿಲ್ಲ ಎಂದಿದ್ದಾರೆ.

ಕನ್ವರ್ ಯಾತ್ರೆ ಶ್ರಾವಣ ಮಾಸದಲ್ಲಿ ನಡೆಯುತ್ತದೆ. ಈ ಯಾತ್ರೆಯ ಮೂಲಕ ಶಿವಭಕ್ತರು ಹರಿದ್ವಾರದಿಂದ ಪುಣ್ಯ ತೀರ್ಥ ತಂದು ಉತ್ತರ ಪ್ರದೇಶದ ಮುಜಾಫರ್‌ನಗರದ ಮಾರ್ಗವಾಗಿ ತೆರಳುತ್ತಾರೆ. ಈ ವರ್ಷದ ಕನ್ವರ್ ಯಾತ್ರೆಯು ಜುಲೈ 22ರಂದು ಪ್ರಾರಂಭವಾಗಿ ಆಗಸ್ಟ್ 2ರವರೆಗೆ ನಡೆಯಲಿದೆ.ಕನ್ವರ್ ಯಾತ್ರೆ ಸಾಗುವ ಮಾರ್ಗದಲ್ಲಿರುವ ಹೋಟೆಲ್, ಢಾಬಾಗಳು ಮತ್ತು ಇತರ ವ್ಯಾಪಾರಿಗಳು ಮಾಲೀಕರು ಮತ್ತು ಸಿಬ್ಬಂದಿಯ ಹೆಸರನ್ನು ಕಡ್ಡಾಯವಾಗಿ ಪ್ರದರ್ಶಿಸುವಂತೆ ಉತ್ತರ ಪ್ರದೇಶದ ಮುಜಾಫರ್‌ನಗರ ಜಿಲ್ಲೆಯ ಪೊಲೀಸರು ಹೊರಡಿಸಿದ್ದ ಆದೇಶಕ್ಕೆ ಪ್ರತಿಪಕ್ಷಗಳಿಂದ ವ್ಯಾಪಕ ಟೀಕೆ ವ್ಯಕ್ತವಾದ ಒಂದು ದಿನದ ಬಳಿಕ ಈ ಬೆಳವಣಿಗೆ ನಡೆದಿದೆ.

ಕನ್ವರ್ ಯಾತ್ರೆಯಲ್ಲಿ ಪಾಲ್ಗೊಳ್ಳುವ ಭಕ್ತರ ಗೊಂದಲವನ್ನು ತಪ್ಪಿಸಲು ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಮುಜಾಫರ್‌ನಗರದ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಅಭಿಷೇಕ್ ಸಿಂಗ್ ಗುರುವಾರ ತಿಳಿಸಿದ್ದರು. ಅದಾಗ್ಯೂ ಪ್ರತಿಪಕ್ಷಗಳು ಈ ನಡೆಯನ್ನು ಖಂಡಿಸಿದ್ದವು. ಇದೀಗ ಸ್ವತಃ ಮುಖ್ಯಮಂತ್ರಿಯೇ ಈ ಆದೇಶ ಹೊರಡಿಸಿರುವುದು ಕುತೂಹಲ ಮೂಡಿಸಿದೆ.

ʼʼಧಾರ್ಮಿಕ ಯಾತ್ರಾರ್ಥಿಗಳ ಪಾವಿತ್ರ್ಯವನ್ನು ಕಾಪಾಡುವ ಉದ್ದೇಶದ ಹಿನ್ನೆಲೆಯಲ್ಲಿ ಮುಜಾಫರ್‌ನಗರ ಪೊಲೀಸರು ಈ ನಿರ್ಧಾರ ತೆಗೆದುಕೊಂಡಿದ್ದಾರೆ ಎನ್ನುವುದನ್ನು ಸಿಎಂ ಯೋಗಿ ಆದಿತ್ಯನಾಥ್‌ ಗಮನಿಸಿದರು. ಹೀಗಾಗಿ ಅವರು ರೆಸ್ಟೋರೆಂಟ್, ಹೋಟೆಲ್‌, ರಸ್ತೆಬದಿಯ ಢಾಬಾ ಅಥವಾ ಆಹಾರದ ಗಾಡಿ ಸೇರಿದಂತೆ ಪ್ರತಿಯೊಂದು ಕಡೆ ಮಾಲೀಕರ ಹೆಸರು ಮತ್ತು ವಿವರಗಳನ್ನು ಪ್ರದರ್ಶಿಸುವಂತೆ ಸೂಚಿಸಿದ್ದಾರೆʼʼ ಎಂದು ಮೂಲಗಳು ತಿಳಿಸಿವೆ.

ಇದಕ್ಕೂ ಮುನ್ನ ಉತ್ತರ ಪ್ರದೇಶದ ಸಚಿವ ಕಪಿಲ್ ದೇವ್ ಅಗರ್ವಾಲ್ ಅವರು ಮಾತನಾಡಿ, ಮುಸ್ಲಿಂ ಮಾರಾಟಗಾರರು ಹಿಂದುಗಳಂತೆ ನಟಿಸಿ ಯಾತ್ರಾರ್ಥಿಗಳಿಗೆ ಮಾಂಸಾಹಾರವನ್ನು ಮಾರಾಟ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದರು. “ಅವರು ವೈಷ್ಣೋ ಡಾಬಾ ಭಂಡಾರ್, ಶಕುಂಭರಿ ದೇವಿ ಹೋಟೆಲ್‌ ಮತ್ತು ಶುದ್ಧ ಸಸ್ಯಾಹಾರಿ ಎಂದು ಬೋರ್ಡ್‌ ಸ್ಥಾಪಿಸಿ ಮಾಂಸಾಹಾರ ಮಾರಾಟ ಮಾಡುತ್ತಾರೆ” ಎಂದು ಅವರು ತಿಳಿಸಿದ್ದರು.

ಮುಜಾಫರ್‌ನಗರ ಪೊಲೀಸರ ಆದೇಶಕ್ಕೆ ಕಿಡಿ ಕಾರಿದ ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್, “ಕನ್ವರ್ ಯಾತ್ರೆಯ ಉದ್ದಕ್ಕೂ ಇರುವ ಹೊಟೇಲ್‌ಗಳಲ್ಲಿ ಮಾಲೀಕರು ಮತ್ತು ಸಿಬ್ಬಂದಿಯ ಹೆಸರನ್ನು ಪ್ರದರ್ಶಿಸಬೇಕೆಂಬ ಉತ್ತರ ಪ್ರದೇಶ ಪೊಲೀಸರು ನೀಡಿರುವ ಆದೇಶವು ‘ಸಾಮಾಜಿಕ ಅಪರಾಧ’. ಜನರ ನಡುವಿನ ಸಾಮರಸ್ಯವನ್ನು ಕೆಡಿಸಲು ಇಂತಹ ಆದೇಶಗಳನ್ನು ತಹೊರಡಿಲಾಗುತ್ತಿದೆʼʼ ಎಂದು ಅವರು ಕಿಡಿಕಾರಿದ್ದಾರೆ.

ಉಜ್ಜೈನಿಯಲ್ಲೂ ನಿಯಮ ಜಾರಿ

ಉತ್ತರಾಖಂಡ ಮತ್ತು ಯುಪಿ ಸರ್ಕಾರದ ಕ್ರಮದ ನಂತರ, ಉಜ್ಜಯಿನಿ ಮಹಾನಗರ ಪಾಲಿಕೆಯೂ ಅಂಗಡಿಯವರಿಗೆ ತಮ್ಮ ಹೆಸರನ್ನು ಪ್ರದರ್ಶಿಸಲು ಆದೇಶಿಸಿದೆ. ಉಜ್ಜಯಿನಿ ಮೇಯರ್ ಮುಖೇಶ್ ತತ್ವಾಲ್ ಅವರು ಶನಿವಾರ, ಉಲ್ಲಂಘಿಸುವವರು ಮೊದಲ ಅಪರಾಧಕ್ಕೆ ₹ 2,000 ಮತ್ತೆ ಮತ್ತೆ ಈ ಆದೇಶವನ್ನು ಉಲ್ಲಂಘಿಸಿದರೆ ₹ 5,000 ದಂಡವನ್ನು ಪಾವತಿಸಬೇಕಾಗುತ್ತದೆ ಎಂದಿದ್ದಾರೆ.

ಉಜ್ಜಯಿನಿ ಧಾರ್ಮಿಕ ಮತ್ತು ಪವಿತ್ರ ನಗರ. ಜನರು ಧಾರ್ಮಿಕ ಆಸ್ತ (ನಂಬಿಕೆ) ಯೊಂದಿಗೆ ಇಲ್ಲಿಗೆ ಬರುತ್ತಾರೆ. ಅವರು ಯಾರ ಸೇವೆಯನ್ನು ಪಡೆಯುತ್ತಿದ್ದಾರೆಂದು ಅಂಗಡಿಯ ಮಾಲೀಕರ ಬಗ್ಗೆ ತಿಳಿದುಕೊಳ್ಳುವ ಹಕ್ಕಿದೆ. ಗ್ರಾಹಕರು ಅತೃಪ್ತರಾಗಿದ್ದರೆ ಅಥವಾ ಮೋಸ ಹೋದರೆ, ಅಂಗಡಿಯ ಮಾಲೀಕರ ವಿವರಗಳನ್ನು ತಿಳಿದುಕೊಳ್ಳುವುದರಿಂದ ಪರಿಹಾರವನ್ನು ಪಡೆಯಲು ಅವರಿಗೆ ಅವಕಾಶ ನೀಡುತ್ತದೆ ಎಂದು ಅವರು ಹೇಳಿದರು.

ಇದನ್ನೂ ಓದಿ:Bangla Agitation Explainer: ಬಾಂಗ್ಲಾದೇಶ ಏಕೆ ಹೊತ್ತಿ ಉರಿಯುತ್ತಿದೆ? ವಿದ್ಯಾರ್ಥಿಗಳು ಏಕೆ ಹಿಂಸಾಚಾರಕ್ಕಿಳಿದಿದ್ದಾರೆ?

Continue Reading
Advertisement
PM Narendra Modi
ಬೆಂಗಳೂರು12 mins ago

PM Narendra Modi: ಬೆಂಗಳೂರಿಗೆ ಪ್ರಧಾನಿ ನರೇಂದ್ರ ಮೋದಿ ಸಹೋದರ ಭೇಟಿ

IPL 2025
ಕ್ರೀಡೆ25 mins ago

IPL 2025: ರಾಹುಲ್​ ಆರ್​ಸಿಬಿಗೆ, ಪಂತ್​ ಸಿಎಸ್​ಕೆ ಸೇರ್ಪಡೆ ಖಚಿತ

nipah virus
ದೇಶ52 mins ago

Nipah Virus: ಕೇರಳದಲ್ಲಿ ನಿಫಾ ವೈರಸ್‌ ತಗುಲಿದ್ದ ಬಾಲಕ ಸಾವು

HD Kumaraswamy
ಹಾಸನ1 hour ago

HD Kumaraswamy: ಸಮಯ ಬಂದಾಗ ಮಿಲಿಟರಿಯನ್ನೂ ಕರೆ ತರುತ್ತೇವೆ; ಡಿಕೆಶಿಗೆ ತಿರುಗೇಟು ಕೊಟ್ಟ ಎಚ್‌ಡಿಕೆ

Police viral video
ಕರ್ನಾಟಕ1 hour ago

Police viral video: ಫುಲ್ ಟೈಟ್ ಆಗಿ ಬೈಕ್ ಎತ್ತೋಕೆ ಪೊಲೀಸಪ್ಪ ಒದ್ದಾಟ! ವಿಡಿಯೊ ನೋಡಿ

kalaburagi News
ಕಲಬುರಗಿ1 hour ago

Kalaburagi News : ಕಾಮಗಾರಿ ವೇಳೆ ಕಟ್ಟಡದ ಮೇಲಿಂದ ಬಿದ್ದು ಕಾರ್ಮಿಕ ಸಾವು

Guru Purnima 2024
ಕ್ರೀಡೆ2 hours ago

Guru Purnima 2024: ಭಾರತದ ಮಹೋನ್ನತ ಕ್ರೀಡಾ ತಾರೆಗಳನ್ನು ಸೃಷ್ಟಿಸಿದ 6 ‘ಗುರು’ಗಳಿವರು

Divya Vasanthamother requests darshan fans not get troll her daughter
ಸಿನಿಮಾ2 hours ago

Divya Vasantha: ನನ್ನ ಮಗಳ ಬಗ್ಗೆ ಕೆಟ್ಟದ್ದಾಗಿ ಮಾತನಾಡಿರುವುದು ದರ್ಶನ್‌ ಫ್ಯಾನ್ಸ್‌ ಎಂದು ಕಣ್ಣೀರಿಟ್ಟ ದಿವ್ಯಾ ವಸಂತ ಅಮ್ಮ!

Kedarnath Landslide
ದೇಶ2 hours ago

Kedarnath Landslide: ಕೇದಾರನಾಥದಲ್ಲಿ ಭೀಕರ ಭೂಕುಸಿತ; ಮೂವರು ಯಾತ್ರಿಕರು ದುರ್ಮರಣ

HD Kumaraswamy
ಹಾಸನ2 hours ago

HD Kumaraswamy: ಕೇಂದ್ರ ಸಚಿವರಾದ ಬಳಿಕ ಮೊದಲ ಬಾರಿಗೆ ಹಾಸನಕ್ಕೆ ಎಚ್‌ಡಿಕೆ ಭೇಟಿ; ಮಳೆಯಿಂದ ಹಾನಿಯಾದ ಪ್ರದೇಶಗಳ ಪರಿಶೀಲನೆ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Rain
ಮಳೆ1 day ago

Karnataka Rain : ಭಾರಿ ಮಳೆಗೆ ಮನೆ ಗೋಡೆ ಕುಸಿತ; ಕೊಟ್ಟಿಗೆಯಲ್ಲಿದ್ದ ಜಾನುವಾರುಗಳು ಸಾವು

karnataka Rain
ಮಳೆ1 day ago

Karnataka Rain : ಹಳ್ಳ ದಾಟಲು ಹೋಗಿ ನೀರುಪಾಲಾದ ಜಾನುವಾರು; ಬಿರುಗಾಳಿಗೆ ಕಳಚಿದ ವಿಂಡ್‌ ಫ್ಯಾನ್‌

karnataka Rain
ಮಳೆ2 days ago

Karnataka Rain : ಬೀದಿಗೆ ತಂದ ರಣಮಳೆ; ಮನೆ ಕುಸಿದು ಬಿದ್ದು 9 ತಿಂಗಳ ಗರ್ಭಿಣಿ ನರಳಾಟ

Karnataka Rain
ಮಳೆ2 days ago

Karnataka Rain : ರಾಜ್ಯದಲ್ಲಿ ಮಳೆಯ ಆರ್ಭಟ; ರಾತ್ರಿ ಕಳೆದು ಬೆಳಗಾಗುವುದರೊಳಗೆ ಕಂದಕ ನಿರ್ಮಾಣ

Karnataka Rain
ಮಳೆ3 days ago

Karnataka Rain : ಭಾರಿ ಮಳೆ ಎಫೆಕ್ಟ್‌; ಉಕ್ಕಿ ಹರಿಯುತ್ತಿದ್ದ ನದಿಯಲ್ಲಿ ಕೊಚ್ಚಿ ಹೋದ ರಾಸು

Uttara Kannada Landslide
ಮಳೆ3 days ago

Uttara Kannada Landslide: ಶಿರೂರು ಗುಡ್ಡ ಕುಸಿತ; ಅಖಾಡಕ್ಕಿಳಿದ ಜಿಯೊಲಾಜಿಕಲ್ ಸರ್ವೆ ಆಫ್ ಇಂಡಿಯಾ ಟೀಂ

Karnataka Rain
ಮಳೆ5 days ago

Karnataka Rain : ಕಾರವಾರದಲ್ಲಿ ಮಳೆ ಅವಾಂತರ; ಮನೆ ಮೇಲೆ ಗುಡ್ಡ ಕುಸಿದು ವೃದ್ಧ ಸಾವು

karnataka Rain
ಮಳೆ5 days ago

Karnataka Rain : ಭಾರಿ ಮಳೆಗೆ ನಿಯಂತ್ರಣ ತಪ್ಪಿ ಕೆರೆಗೆ ಉರುಳಿ ಬಿದ್ದ ಕಾರು; ನಾಲ್ವರು ಪ್ರಾಣಾಪಾಯದಿಂದ ಪಾರು

karnataka Weather Forecast
ಮಳೆ6 days ago

Karnataka Weather : ವ್ಯಾಪಕ ಮಳೆ ಎಚ್ಚರಿಕೆ; ನಾಳೆಯೂ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

karnataka Rain
ಮಳೆ6 days ago

Karnataka Rain : ಶಾಲಾ-ಕಾಲೇಜಿಗೆ ಈ ದಿನ ರಜಾ; ಅಬ್ಬರಿಸುತ್ತಿರುವ ಮಳೆಗೆ ಮನೆಯಲ್ಲೇ ಎಲ್ಲರೂ ಸಜಾ!

ಟ್ರೆಂಡಿಂಗ್‌