Actor Naresh: ನನ್ನ ಬೇಬಿಯನ್ನು ದಯವಿಟ್ಟು ಹುಡುಕಿಕೊಡಿ ಎಂದು ಗಳಗಳನೇ ಅತ್ತ ನಟ ನರೇಶ್‌! - Vistara News

ಟಾಲಿವುಡ್

Actor Naresh: ನನ್ನ ಬೇಬಿಯನ್ನು ದಯವಿಟ್ಟು ಹುಡುಕಿಕೊಡಿ ಎಂದು ಗಳಗಳನೇ ಅತ್ತ ನಟ ನರೇಶ್‌!

Actor Naresh: ಇದೀಗ ನಟ ಎಕ್ಸ್‌ ಖಾತೆಯಲ್ಲಿ ಭಾವನಾತ್ಮಕ ವಿಡಿಯೋವೊಂದನ್ನು ಹಂಚಿಕೊಂಡಿದ್ದಾರೆ. ತನ್ನ ʻಬೇಬಿ ಎಲ್ಲೋ ಕಾಣೆಯಾಗಿದೆ. ದಯವಿಟ್ಟು ಹುಡುಕಿಕೊಡಿʼ ಎಂದು ಕಣ್ಣೀರಾಗಿದ್ದಾರೆ.

VISTARANEWS.COM


on

Actor Naresh Shares Emotional Video About His Baby And Taged Director Nag Ashwin
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ನಟ ನರೇಶ್ (Actor Naresh) ಅವರು ಸಿನಿಮಾಗಳಲ್ಲದೆ ವೈಯಕ್ತಿಕ ಜೀವನ ವಿಚಾರವಾಗಿಯೂ ಸಾಕಷ್ಟು ಸುದ್ದಿಯಲ್ಲಿ ಇರುತ್ತಾರೆ. ಪವಿತ್ರಾ ಲೋಕೇಶ್‌ ವಿಚಾರವಾಗಿಯೂ ಕರ್ನಾಟಕ ರಾಜ್ಯದಲ್ಲಿ ಸಾಕಷ್ಟು ಚರ್ಚೆಗೆ ಗುರಿಯಾಗಿದ್ದರು. ಇದೀಗ ನಟ ಎಕ್ಸ್‌ ಖಾತೆಯಲ್ಲಿ ಭಾವನಾತ್ಮಕ ವಿಡಿಯೋವೊಂದನ್ನು ಹಂಚಿಕೊಂಡಿದ್ದಾರೆ. ತನ್ನ ʻಬೇಬಿ ಎಲ್ಲೋ ಕಾಣೆಯಾಗಿದೆ. ದಯವಿಟ್ಟು ಹುಡುಕಿಕೊಡಿʼ ಎಂದು ಕಣ್ಣೀರಾಗಿದ್ದಾರೆ.

ವಿಡಿಯೊದಲ್ಲಿ ಏನಿದೆ?

“ನನ್ನ ಬೇಬಿ ಎಲ್ಲೋ ಕಾಣೆಯಾಗಿದೆ. ಆ ಬೇಬಿಯನ್ನು ಒಂದೇ ಒಂದು ದಿನ ನೋಡದಿದ್ದರೂ ನಾನು ಏನನ್ನೋ ಕಳೆದುಕೊಂಡ ಭಾವ ನನ್ನನ್ನು ಕಾಡುತ್ತದೆ. ದಯಮಾಡಿ ನನ್ನ ಬೇಬಿಯನ್ನು ಹುಡುಕಿಕೊಡಿ. ಕಲ್ಕಿ 2898 AD ಸಿನಿಮಾ ಬೇರೆ ಬಿಡುಗಡೆ ಆಗಿದೆ. ನಮಗೆ ಬುಜ್ಜಿ ಗೊತ್ತು ಈ ಬೇಬಿ ಗೊತ್ತಿಲ್ಲ ಎನ್ನುತ್ತಿದ್ದಾರೆ. ನಿಮ್ಮ ಬುಜ್ಜಿಯಂತೆಯೇ ನನ್ನ ಬೇಬಿ ಕೂಡ ,ನಾಗ್ ಅಶ್ವಿನ್‌ ಅವರೇ ಹೇಗಾದರೂ ಮಾಡಿ ನಮ್ಮ ಮಗುವನ್ನು ಹುಡುಕಿಕೊಡಿ. ಯಾರಾದರೂ ನನ್ನ ಬೇಬಿ ನಿಮ್ಮ ಕಣ್ಣಿಗೆ ಬಿದ್ದರೆ ಹುಡುಕಿಕೊಡಿ ಸಾಕು” ಎಂದು ನರೇಶ್‌ ತಮ್ಮ ಎಕ್ಸ್‌ನಲ್ಲಿ ವಿಡಿಯೋ ಶೇರ್‌ ಮಾಡಿದ್ದು, ಸದ್ಯ ಎಲ್ಲೆಡೆ ಅದು ವೈರಲ್‌ ಆಗಿದೆ.

ಅಸಲಿಗೆ ಈ ವಿಡಿಯೊ ಮಾಡಿದ್ದು ಸಿನಿಮಾ ಪ್ರಚಾರ ವಿಚಾರವಾಗಿ. ವೀರಾಂಜನೆಯಲು ವಿಹಾರಯಾತ್ರ ಎಂಬ ಹೊಸ ಸಿನಿಮಾದಲ್ಲಿ ನಟ ನರೇಶ್‌ ನಟಿಸುತ್ತಿದ್ದಾರೆ. ಇವರ ಜತೆಗೆ ಹಾಸ್ಯ ನಟ ಬ್ರಹ್ಮಾನಂದಂ ಸಹ ಜತೆಯಾಗಿದ್ದಾರೆ. ಈ ಸಿನಿಮಾದ ಬಗ್ಗೆ ಇದೀಗ ವಿಭಿನ್ನ ರೀತಿಯಲ್ಲಿ ಪ್ರಚಾರ ಮಾಡಿದ್ದಾರೆ ನರೇಶ್.

ಇದನ್ನೂ ಓದಿ: Pavithra Naresh: ಒಟಿಟಿಯಲ್ಲಿ ನಾಪತ್ತೆಯಾದ ‘ಮದುವೆ’; ಗನ್ ಲೈಸೆನ್ಸ್ ಕೇಳಿದ ನರೇಶ್‌!

ನರೇಶ್‌ ಈ ರೀತಿ ವಿಭಿನ್ನವಾಗಿ ಪ್ರಚಾರ ಮಾಡುತ್ತಿರುವುದು ಹೊಸತೇನಲ್ಲ. ಮಲ್ಲಿ ಪೆಳ್ಳಿ ಸಿನಿಮಾದ ವೇಳೆ ಪವಿತ್ರಾ ಲೋಕೇಶ್‌ ಅವರ ಜತೆಗೆ ಮದುವೆ ಆದ ಸಿನಿಮಾದಲ್ಲಿನ ವಿಡಿಯೋವೊಂದನ್ನು ಶೇರ್‌ ಮಾಡಿ ಎಲ್ಲರಿಗೂ ಶಾಕ್‌ ನೀಡಿದ್ದರು.

ತೆಲುಗು ಹಾಗೂ ಕನ್ನಡ ಎರಡು ಭಾಷೆಯಲ್ಲಿ ಮೂಡಿಬಂದಿದ್ದ ಮತ್ತೆ ಮದುವೆಗೆ ಚಿತ್ರಮಂದಿರಗಳಲ್ಲಿ ಮೆಚ್ಚುಗೆ ವ್ಯಕ್ತವಾಗಿತ್ತು. ತೆಲುಗಿನಲ್ಲಿ ʻಮಳ್ಳಿಪೆಳ್ಳಿʼ ಎಂಬ ಟೈಟಲ್‌ನಡಿ ಮೇ 26ರಂದು ಬಿಡುಗಡೆಯಾಗಿತ್ತು. ತಮ್ಮ ಜೀವನದ ಕಥೆಯನ್ನೇ ಪತಿ ನರೇಶ್ ಮತ್ತು ನಟಿ ಪವಿತ್ರಾ ಲೋಕೇಶ್ ಸಿನಿಮಾ ಮಾಡಿದ್ದಾರೆ. 

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಟಾಲಿವುಡ್

Kalki 2898 AD: ಅಮಿತಾಭ್‌, ಪ್ರಭಾಸ್‌ಗೆ ಲೀಗಲ್ ನೋಟಿಸ್ ಕಳುಹಿಸಿದ ಕಾಂಗ್ರೆಸ್ ಮಾಜಿ ನಾಯಕ!

Kalki 2898 AD: ಚಿತ್ರದಲ್ಲಿ ದೇವರನ್ನು ತಪ್ಪಾಗಿ ಚಿತ್ರಿಸಲಾಗಿದೆ ಮತ್ತು ಹಿಂದೂ ಪುರಾಣಗಳಿಗಿಂತ ವಿಭಿನ್ನವಾಗಿ ಚಿತ್ರಿಸಲಾಗಿದೆ ಎಂದು ಆರೋಪಿಸಿದ್ದಾರೆ. ‘ಕಲ್ಕಿ 2898 ಎಡಿ’ ಚಿತ್ರ ತೆಲುಗು, ತಮಿಳು, ಮಲಯಾಳಂ, ಕನ್ನಡ, ಹಿಂದಿ ಹಾಗೂ ಇಂಗ್ಲಿಷ್ ಭಾಷೆಗಳಲ್ಲಿ ರಿಲೀಸ್ ಆಗಿದೆ. ವೈಜಯಂತಿ ಮೂವಿಸ್ ಮೂಲಕ ಅಶ್ವಿನಿ ದತ್ ಸಿನಿಮಾ ನಿರ್ಮಾಣ ಮಾಡಿದ್ದಾರೆ.

VISTARANEWS.COM


on

Kalki 2898 AD makers served legal notice Kalki Dham Peethadheeshwar Acharya Pramod Krishnam
Koo

ಬೆಂಗಳೂರು: ಮಾಜಿ ಕಾಂಗ್ರೆಸ್ ನಾಯಕ ಮತ್ತು ಕಲ್ಕಿಧಾಮ ಪೀಠಾಧೀಶ್ವರ ಆಚಾರ್ಯ ಪ್ರಮೋದ್ ಕೃಷ್ಣಂ ಅವರು ಹಿಂದೂ ಧಾರ್ಮಿಕ (Kalki 2898 AD) ಭಾವನೆಗಳಿಗೆ ಧಕ್ಕೆ ತಂದಿದ್ದಾರೆ ಎಂದು ಆರೋಪಿಸಿ ಬ್ಲಾಕ್ ಬಸ್ಟರ್ ಚಿತ್ರ ಕಲ್ಕಿ 2898 ಚಿತ್ರದ ನಿರ್ಮಾಪಕರು ಮತ್ತು ನಟರಿಗೆ ಲೀಗಲ್ ನೋಟಿಸ್ ಕಳುಹಿಸಿದ್ದಾರೆ. ಚಿತ್ರದಲ್ಲಿ ದೇವರನ್ನು ತಪ್ಪಾಗಿ ಚಿತ್ರಿಸಲಾಗಿದೆ ಮತ್ತು ಹಿಂದೂ ಪುರಾಣಗಳಿಗಿಂತ ವಿಭಿನ್ನವಾಗಿ ಚಿತ್ರಿಸಲಾಗಿದೆ ಎಂದು ಆರೋಪಿಸಿದ್ದಾರೆ.

ʻʻ”ನಿಮ್ಮ ಚಲನಚಿತ್ರವು ಭಗವಾನ್ ಕಲ್ಕಿಯ ಪರಿಕಲ್ಪನೆಯನ್ನು ಬದಲಾಯಿಸಿರುವಂತೆ ಇದೆ, ಹಿಂದೂ ಪುರಾಣ ಗ್ರಂಥಗಳಲ್ಲಿ ಬರೆದ ಮತ್ತು ವಿವರಿಸಿದ ಕಾರಣಗಳಿಗಾಗಿ, ಭಗವಾನ್ ಕಲ್ಕಿಯ ಕಥೆಯ ಚಿತ್ರಣ ಮತ್ತು ಚಿತ್ರಣವು ಸಂಪೂರ್ಣವಾಗಿ ತಪ್ಪಾಗಿದೆ. ಹಾಗಾಗಿ ಈ ಪವಿತ್ರ ಗ್ರಂಥಗಳಿಗೆ ಅಗೌರವವಾಗಿದೆ. ಕಲ್ಕಿಯ ಕಥೆಯನ್ನು ಸಂಪೂರ್ಣವಾಗಿ ತಪ್ಪಾಗಿ ನಿರೂಪಿಸಲಾಗಿದೆ. ಇದು ಪವಿತ್ರ ಗ್ರಂಥಗಳಿಗೆ ಅಪಮಾನ ಮಾಡಿದಂತಾಗುತ್ತದೆ.” ಎಂದು ನೋಟಿಸ್ ನೀಡಿದ್ದಾರೆ.

ಆಚಾರ್ಯ ಪ್ರಮೋದ್ ಕೃಷ್ಣಂ ಈ ಬಗ್ಗೆ ಮಾತನಾಡಿ “ಕಲ್ಕಿ ಅವತಾರವು ವಿಷ್ಣುವಿನ ಕೊನೆಯ ಅವತಾರವಾಗಿದೆ. ನಮ್ಮ ಹಲವಾರು ‘ಪುರಾಣ’ಗಳು ಆತನಿಗೆ ಸಮರ್ಪಿತವಾಗಿವೆ. ಪ್ರಧಾನಿ ಮೋದಿ ಅವರು ಫೆಬ್ರವರಿ 19 ರಂದು ಯುಪಿಯ ಸಂಭಾಲ್‌ನಲ್ಲಿ ಶ್ರೀ ಕಲ್ಕಿ ಧಾಮ್ ದೇವಾಲಯದ ಉದ್ಘಾಟನೆ ಮಾಡಿದರು. ಅಲ್ಲಿ ಭಗವಾನ್ ಕಲ್ಕಿ ಜನಿಸಲಿದ್ದಾರೆ. ಇಡೀ ಜಗತ್ತು ಅವನಿಗಾಗಿ ಕಾಯುತ್ತಿದೆ. ಆದರೆ ಈ ಚಿತ್ರವು ಜನರಿಗೆ ತಪ್ಪು ಸಂದೇಶವನ್ನು ನೀಡುತ್ತಿದೆʼʼಎಂದು ಎಂದು ಮಾಜಿ ಕಾಂಗ್ರೆಸ್ ನಾಯಕ ಹೇಳಿಕೆ ನೀಡಿದರು. ಆಚಾರ್ಯ ಪ್ರಮೋದ್ ಕೃಷ್ಣಂ ಪರವಾಗಿ ಸುಪ್ರೀಂ ಕೋರ್ಟ್ ವಕೀಲ ಉಜ್ಜವಲ್ ಆನಂದ್ ಶರ್ಮಾ ಅವರು ನೋಟಿಸ್ ನೀಡಿದ್ದಾರೆ.

ಇದನ್ನೂ ಓದಿ: Kalki 2898 AD: ನೀವಿಲ್ಲದೆ ನಾನು ಶೂನ್ಯ ಎಂದು ಅಭಿಮಾನಿಗಳಿಗೆ ಧನ್ಯವಾದ ಹೇಳಿದ ನಟ ಪ್ರಭಾಸ್‌!

ನಾಗ್ ಅಶ್ವಿನ್ ಅವರು ‘ಕಲ್ಕಿ 2898 ಎಡಿ’ ಚಿತ್ರವನ್ನು ನಿರ್ದೇಶನ ಮಾಡಿದ್ದಾರೆ. 2ಡಿ ಜೊತೆಗೆ 3ಡಿಯಲ್ಲೂ ಸಿನಿಮಾ ವೀಕ್ಷಣೆಗೆ ಲಭ್ಯವಿದೆ. ಈ ಚಿತ್ರದ ಬಜೆಟ್ 600 ಕೋಟಿ ರೂಪಾಯಿ ಎನ್ನಲಾಗಿದೆ. ಈ ಕಾರಣದಿಂದಲೇ ಸಿನಿಮಾ ದೊಡ್ಡ ಮೊತ್ತದ ಗಳಿಕೆ ಮಾಡೋ ಅವಶ್ಯಕತೆ ಇತ್ತು. ಸದ್ಯ ಆಗಿರೋ ಗಳಿಕೆಯಿಂದ ನಿರ್ಮಾಪಕರಿಗೆ ಇನ್ನೂ ದೊಡ್ಡ ಲಾಭವೇನು ಆಗಿಲ್ಲ. ‘ಕಲ್ಕಿ 2898 ಎಡಿ’ ಚಿತ್ರ ತೆಲುಗು, ತಮಿಳು, ಮಲಯಾಳಂ, ಕನ್ನಡ, ಹಿಂದಿ ಹಾಗೂ ಇಂಗ್ಲಿಷ್ ಭಾಷೆಗಳಲ್ಲಿ ರಿಲೀಸ್ ಆಗಿದೆ. ವೈಜಯಂತಿ ಮೂವಿಸ್ ಮೂಲಕ ಅಶ್ವಿನಿ ದತ್ ಸಿನಿಮಾ ನಿರ್ಮಾಣ ಮಾಡಿದ್ದಾರೆ.

ಸಲಾರ್’ ನಂತರ ಬಿಡುಗಡೆಯಾದ ಕಲ್ಕಿ ಸಿನಿಮಾ ಮೂಲಕ, ಪ್ರಭಾಸ್ ಚಿತ್ರೋದ್ಯಮದಲ್ಲಿ ಮತ್ತೊಂದು ಹೊಸ ಮೈಲಿಗಲ್ಲು ತಲುಪಿದ್ದಾರೆ. ಗಲ್ಲಾಪೆಟ್ಟಿಗೆಯಲ್ಲಿ ದೊಡ್ಡ ಮಟ್ಟದ ಓಪನಿಂಗ್ ಪ್ರಭಾಸ್‌ ಸಿನಿಮಾಗಳಿಗೆ ಸಿಗುತ್ತಿವೆ. ಇದೀಗ ‘ಕಲ್ಕಿ 2898 AD’ ಸಿನಿಮಾ ಸಹ ಇದಕ್ಕೆ ಹೊರತಾಗಿಲ್ಲ, ಇದು ಭಾರತೀಯ ಚಿತ್ರರಂಗದಲ್ಲಿ ಅವರ ಮೂರನೇ ಅತಿದೊಡ್ಡ ಕಲೆಕ್ಷನ್‌ ಮಾಡಿದ ಸಿನಿಮಾವಾಗಿದೆ.

Continue Reading

ಸಿನಿಮಾ

Tollywood Films: ಹಾಲಿವುಡ್‌ಗೆ ಸೆಡ್ಡು ಹೊಡೆದ ಟಾಲಿವುಡ್‌ನ 4 ಪೌರಾಣಿಕ ಕಥೆಯ ಸಿನೆಮಾಗಳಿವು

ಭಾರತೀಯರು ಹೆಚ್ಚಾಗಿ ಪೌರಾಣಿಕ ಪರಿಕಲ್ಪನೆಗಳನ್ನು ಹೊಂದಿರುವ ಸಿನಿಮಾಗಳನ್ನು ಇಷ್ಟಪಡುತ್ತಾರೆ. ಯಾಕೆಂದರೆ ಅದು ಅವರಿಗೆ ತಮ್ಮ ಹಿರಿಯರ, ತಾವು ಬೆಳೆದು ಬಂದ ದಾರಿಯ ನೆನಪು ಮಾಡಿಕೊಡುತ್ತದೆ. ಪ್ರೇಕ್ಷಕರಿಗೆ ಹೆಚ್ಚು ಇಷ್ಟವಾದ ಕೆಲವು ಟಾಲಿವುಡ್ ಪೌರಾಣಿಕ ಕಥಾ ಹಂದರವನ್ನು ಒಳಗೊಂಡ ಚಿತ್ರಗಳ (Tollywood Films) ಕುರಿತು ಮಾಹಿತಿ ಇಲ್ಲಿದೆ. ನಿಮಗೆ ಅವಕಾಶ ಸಿಕ್ಕಾಗ ನೋಡುವುದನ್ನು ಮಿಸ್ ಮಾಡಿಕೊಳ್ಳಬೇಡಿ.

VISTARANEWS.COM


on

By

Tollywood Films
Koo

ತೆಲುಗು ಚಿತ್ರರಂಗದಲ್ಲಿ (Tollywood Films) ಪೌರಾಣಿಕ ಕಥೆಗಳು (mythological concepts) ತನ್ನದೇ ಆದ ಪ್ರೇಕ್ಷಕ ಬಳಗವನ್ನು ಹೊಂದಿವೆ. ಕೆಲವರಿಗೆ ಥ್ರಿಲರ್, ಇನ್ನು ಕೆಲವರಿಗೆ ಆಕ್ಷ್ಯನ್ ಮತ್ತೆ ಕೆಲವರಿಗೆ ರೋಮ್ಯಾಂಟಿಕ್, ಹಾಸ್ಯ ಚಿತ್ರಗಳು ಇಷ್ಟವಾಗುತ್ತವೆ. ಇವೆಲ್ಲದರ ಸಮ್ಮಿಶ್ರಣದೊಂದಿಗೆ ಮೂಡಿ ಬರುವ ಪೌರಾಣಿಕ ಕಥೆಗಳನ್ನು ಬಹುತೇಕ ಪ್ರೇಕ್ಷಕ ವರ್ಗ ಇಷ್ಟ ಪಡುತ್ತದೆ ಎಂಬುದನ್ನು ಇತ್ತೀಚೆಗೆ ತೆರೆ ಕಂಡಿರುವ ಹಲವು ಚಿತ್ರಗಳು ಸಾಬೀತುಪಡಿಸಿದೆ.

ಭಾರತೀಯರು ಹೆಚ್ಚಾಗಿ ಪೌರಾಣಿಕ ಪರಿಕಲ್ಪನೆಗಳನ್ನು ಹೊಂದಿರುವ ಸಿನಿಮಾಗಳನ್ನು ಇಷ್ಟಪಡುತ್ತಾರೆ. ಯಾಕೆಂದರೆ ಅದು ಅವರಿಗೆ ತಮ್ಮ ಹಿರಿಯರ, ತಾವು ಬೆಳೆದು ಬಂದ ದಾರಿಯ ನೆನಪು ಮಾಡಿಕೊಡುತ್ತದೆ. ಪ್ರೇಕ್ಷಕರಿಗೆ ಹೆಚ್ಚು ಇಷ್ಟವಾದ ಕೆಲವು ಟಾಲಿವುಡ್ ಪೌರಾಣಿಕ ಕಥಾ ಹಂದರವನ್ನು ಒಳಗೊಂಡ ಚಿತ್ರಗಳ ಕುರಿತು ಮಾಹಿತಿ ಇಲ್ಲಿದೆ. ನಿಮಗೆ ಅವಕಾಶ ಸಿಕ್ಕಾಗ ನೋಡುವುದನ್ನು ಮಿಸ್ ಮಾಡಿಕೊಳ್ಳಬೇಡಿ.


ಕಲ್ಕಿ 2898ಎಡಿ

ಸಾಕಷ್ಟು ನಿರೀಕ್ಷೆಗಳನ್ನು ಹೊಂದಿದ್ದ ಪ್ರಭಾಸ್ ಅಭಿನಯದ ಚಿತ್ರ ಕಳೆದ ತಿಂಗಳು ಬಿಡುಗಡೆಯಾಗಿತ್ತು. ಗಲ್ಲಾಪೆಟ್ಟಿಗೆಯ ಕಲೆಕ್ಷನ್‌ಗಳನ್ನು ಗಮನಿಸಿದರೆ ಚಿತ್ರವು ಬಿಡುಗಡೆಯಾದ ಕೆಲವೇ ದಿನಗಳಲ್ಲಿ ಬ್ಲಾಕ್‌ಬಸ್ಟರ್ ಹಿಟ್ ಆಯಿತು. ನಾಗ್ ಅಶ್ವಿನ್ ನಿರ್ದೇಶನದ ಈ ಚಿತ್ರದಲ್ಲಿ ಅಮಿತಾಬ್ ಬಚ್ಚನ್, ದೀಪಿಕಾ ಪಡುಕೋಣೆ, ಕಮಲ್ ಹಾಸನ್ ಮತ್ತು ದಿಶಾ ಪಟಾನಿ ಗಮನಾರ್ಹ ಪಾತ್ರಗಳ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ.


ಹನುಮಾನ್

ಈ ವರ್ಷದ ಆರಂಭದಲ್ಲಿ ಬಿಡುಗಡೆಯಾದ ಹನುಮಾನ್ ಈ ವರ್ಷದ ಅತಿದೊಡ್ಡ ಭಾರತೀಯ ಚಲನಚಿತ್ರಗಳಲ್ಲಿ ಒಂದಾಗಿದೆ. ಚಿತ್ರದಲ್ಲಿ ತೇಜ ಸಜ್ಜ, ಅಮೃತಾ ಅಯ್ಯರ್, ವರಲಕ್ಷ್ಮಿ ಶರತ್‌ಕುಮಾರ್, ಸಮುದ್ರಕಣಿ, ವಿನಯ್ ರೈ ಮತ್ತು ವೆನ್ನೆಲ ಕಿಶೋರ್ ನಟಿಸಿದ್ದಾರೆ. ಪ್ರಶಾಂತ್ ವರ್ಮಾ ಅವರ ನಿರ್ದೇಶನದಲ್ಲಿ ನಿರ್ಮಾಣವಾಗಿರುವ ಈ ಚಿತ್ರ ಭಗವಾನ್ ಹನುಮಾನ್ ಕಥೆಯಿಂದ ಪ್ರೇರಿತವಾಗಿದೆ.


ಅಖಂಡ 2

2021ರ ಸೂಪರ್‌ಹಿಟ್ ಅಖಂಡದ ಮುಂದುವರಿದ ಭಾಗ ಅಖಂಡ 2ನಲ್ಲಿ ನಂದಮೂರಿ ಬಾಲಕೃಷ್ಣ ನಾಯಕನಾಗಿ ನಟಿಸಿದ್ದಾರೆ. ಇನ್ನೂ ಬಿಡುಗಡೆಯಾಗಬೇಕಿರುವ ಈ ಚಿತ್ರವನ್ನು ಅನಿಲ್ ರವಿಪುಡಿ ಅವರು ನಿರ್ದೇಶಿಸುತ್ತಿದ್ದು, ಹರೀಶ್ ಪೆದ್ದಿ ನಿರ್ಮಾಪಕರಾಗಿದ್ದಾರೆ. ಇದು ಎಸ್ ಜೆ ಸೂರ್ಯ, ಜಗಪತಿ ಬಾಬು, ಕಾವ್ಯ ಥಾಪರ್, ಪ್ರಜ್ಞಾ ಜೈಸ್ವಾಲ್ ಮತ್ತು ಇತರರ ಹಲವು ಪ್ರಮುಖ ನಟನಟಿಯರನ್ನು ಒಳಗೊಂಡಿದೆ. ವರದಿಗಳ ಪ್ರಕಾರ ಈ ಚಿತ್ರವು ವರ್ಷಾಂತ್ಯಕ್ಕೆ ಥಿಯೇಟರ್‌ಗಳಿಗೆ ಬರಬಹುದು ಎನ್ನಲಾಗಿದೆ.


ವಿಶ್ವಂಭರ

ಫ್ಯಾಂಟಸಿ ಎಂದು ಡಬ್ ಮಾಡಲಾಗಿರುವ ವಿಶ್ವಂಭರ ಚಿತ್ರ ಕೂಡ ಶೀಘ್ರದಲ್ಲಿ ಬಿಡುಗಡೆಯಾಗಲಿದೆ. ಮೆಗಾಸ್ಟಾರ್ ಚಿರಂಜೀವಿ ಅವರು ದೊರಬಾಬು ಪಾತ್ರದಲ್ಲಿ ಕಾಣಿಕೊಂಡಿದ್ದಾರೆ. ಈ ಚಿತ್ರವನ್ನು ಮಲ್ಲಿಡಿ ವಸಿಷ್ಟ ಅವರು ನಿರ್ದೇಶಿಸುತ್ತಿದ್ದು, ಇವರೇ ಇ6ದರ ಬರಹಗಾರರಾಗಿಯೂ ಗುರುತಿಸಿಕೊಂಡಿದ್ದಾರೆ. ತಾರಾಗಣದಲ್ಲಿ ತ್ರಿಶಾ ಕೃಷ್ಣನ್, ಮೀನಾಕ್ಷಿ ಚೌಧರಿ, ಸುರಭಿ ಪುರಾಣಿಕ್, ಹರ್ಷ ವರ್ಧನ್ ಸೇರಿದಂತೆ ಹಲವರು ಇದ್ದಾರೆ.

ಇದನ್ನೂ ಓದಿ: Bhama Kurup: ಡಿವೋರ್ಸ್‌ ಆದ ಬೆನ್ನಲ್ಲೇ ಹೆಣ್ಣು ಮಕ್ಕಳಿಗೆ ಮದುವೆ ಬೇಕಾ? ಎಂದು ಪೋಸ್ಟ್‌ ಮಾಡಿದ ʻಶೈಲೂʼ ನಟಿ!

ಯುವಿ ಕ್ರಿಯೇಷನ್ಸ್ ಬ್ಯಾನರ್ ಅಡಿಯಲ್ಲಿ ವಿ. ವಂಶಿ ಕೃಷ್ಣಾ ರೆಡ್ಡಿ, ಪ್ರಮೋದ್ ಉಪ್ಪಲಪತಿ ಮತ್ತು ವಿಕ್ರಮ್ ರೆಡ್ಡಿ ನಿರ್ಮಿಸಿದ್ದಾರೆ. ಮುಂದಿನ ವರ್ಷ ಜನವರಿಯಲ್ಲಿ ಚಿತ್ರ ಬಿಡುಗಡೆಯಾಗುವ ನಿರೀಕ್ಷೆಯಿದೆ.

Continue Reading

ಟಾಲಿವುಡ್

Ram Pothineni: `ಡಬಲ್ ಇಸ್ಮಾರ್ಟ್’ ಸಿನಿಮಾದ ಎರಡನೇ ಹಾಡು ರಿಲೀಸ್!

Ram Pothineni: ಇಸ್ಮಾರ್ಟ್ ಶಂಕರ್ ಸಿನಿಮಾದ ಮುಂದುವರೆದ ಭಾಗವೇ ಈ ಡಬಲ್ ಇಸ್ಮಾರ್ಟ್ ಚಿತ್ರ. ಈ ಮೂಲಕ ಡೈರೆಕ್ಟರ್ ಪೂರಿ ಜಗನ್ನಾಥ್ ಹೊಸ ರೀತಿಯಲ್ಲಿಯೆ ಶಂಕರ್‌ನ ಕಥೆ ಹೇಳಲು ಹೊರಟ್ಟಿದ್ದಾರೆ. 2019ರಲ್ಲಿ ‘ಇಸ್ಮಾರ್ಟ್ ಶಂಕರ್’ ಸಿನಿಮಾ ರಿಲೀಸ್ ಆಗಿತ್ತು. ಇದರಲ್ಲಿ ಕನ್ನಡತಿ ನಭಾ ನಟೇಶ್ ಅಭಿನಯಿಸಿದ್ದರು.

VISTARANEWS.COM


on

Ram Pothineni double ismart second song out
Koo

ಬೆಂಗಳೂರು: ʻಡಬಲ್ ಇಸ್ಮಾರ್ಟ್ʼ ಸಿನಿಮಾದ ಸ್ಟೆಪ್ಪಮಾರ್ ಹಾಡಿಗೆ ಭರ್ಜರಿ ರೆಸ್ಪಾನ್ಸ್ ಸಿಕ್ಕಿದೆ. ಇದೀಗ ಚಿತ್ರತಂಡ ಎರಡನೇ ಹಾಡನ್ನು ಬಿಡುಗಡೆ ಮಾಡಿದೆ. ʻಮಾರ್ ಮುಂತಾ ಚೋಡ್ ಚಿಂತಾʼ ಎಂಬ ಗಾನಬಜಾನಕ್ಕೆ ನಾಯಕ ಉಸ್ತಾದ್ ರಾಮ್ ಪೋತಿನೇನಿ ಹಾಗೂ ನಾಯಕಿ ಕಾವ್ಯಾ ಥಾಪರ್ (Ram Pothineni) ಸಖತ್ ಆಗಿ ಕುಣಿದು ಕುಪ್ಪಳಿಸಿದ್ದಾರೆ. ಕಾಸರ್ಲ ಶ್ಯಾಮ್ ಸಾಹಿತ್ಯದ ದೇಸಿ ನಂಬರ್ ಗೆ ಮಣಿ ಶರ್ಮಾ ಟ್ಯೂನ್ ಹಾಕಿದ್ದು, ರಾಹುಲ್ ಸಿಪ್ಲಿಗುಂಜ್ ಮತ್ತು ಕೀರ್ತನಾ ಶರ್ಮಾ ಧ್ವನಿಯಾಗಿದ್ದಾರೆ. ಮಾರ್ ಮುಂತಾ ಚೋಡ್ ಚಿಂತಾ ಲಿರಿಕಲ್ ವಿಡಿಯೋದ ಜೊತೆಗೆ ಮೇಕಿಂಗ್ ವಿಡಿಯೋ ಕೂಡ ಇರೋದು ವಿಶೇಷವಾಗಿದೆ.

ಇಸ್ಮಾರ್ಟ್ ಶಂಕರ್ ಸಿನಿಮಾದ ಮುಂದುವರೆದ ಭಾಗವೇ ಈ ಡಬಲ್ ಇಸ್ಮಾರ್ಟ್ ಚಿತ್ರ. ಈ ಮೂಲಕ ಡೈರೆಕ್ಟರ್ ಪೂರಿ ಜಗನ್ನಾಥ್ ಹೊಸ ರೀತಿಯಲ್ಲಿಯೆ ಶಂಕರ್‌ನ ಕಥೆ ಹೇಳಲು ಹೊರಟ್ಟಿದ್ದಾರೆ. 2019ರಲ್ಲಿ ‘ಇಸ್ಮಾರ್ಟ್ ಶಂಕರ್’ ಸಿನಿಮಾ ರಿಲೀಸ್ ಆಗಿತ್ತು. ಇದರಲ್ಲಿ ಕನ್ನಡತಿ ನಭಾ ನಟೇಶ್ ಅಭಿನಯಿಸಿದ್ದರು. ಆಗ ಈ ಸಿನಿಮಾ ಕರ್ಮಷಿಯಲಿ ಸಕ್ಸಸ್ ಆಗಿತ್ತು. ಆದರೆ ಈ ಸಿನಿಮಾ ಬಂದು 5 ವರ್ಷದ ಬಳಿಕ ಪಾರ್ಟ್-2 ಡಬಲ್ ಇಸ್ಮಾರ್ಟ್ ಸಿನಿಮಾ ಬರುತ್ತಿದೆ. ಟಾಲಿವುಡ್‌ನಲ್ಲಿ ಈಗಾಗಲೇ ನಿರೀಕ್ಷೆಯನ್ನು ಕೂಡ ಹುಟ್ಟುಹಾಕಿದೆ.

ತೆಲುಗು ಮಾತ್ರವಲ್ಲದೇ ಕನ್ನಡ, ತಮಿಳು, ಮಲಯಾಳಂ ಹಾಗೂ ಹಿಂದಿ ಭಾಷೆಗಳಲ್ಲಿ ‘ಡಬಲ್ ಇಸ್ಮಾರ್ಟ್’ ಸಿನಿಮಾ ಬಿಡುಗಡೆ ಆಗಲಿದೆ. ಮಣಿ ಶರ್ಮಾ ಅವರು ಈ ಸಿನಿಮಾಗೆ ಸಂಗೀತ ನಿರ್ದೇಶನ ಮಾಡಿದ್ದಾರೆ. ‘ಪುರಿ ಕನೆಕ್ಟ್ಸ್’ ಬ್ಯಾನರ್ ಮೂಲಕ ಪುರಿ ಜಗನ್ನಾಥ್, ಚಾರ್ಮಿ ಕೌರ್ ಅವರು ಈ ಸಿನಿಮಾವನ್ನು ನಿರ್ಮಿಸಿದ್ದಾರೆ. ಈ ಚಿತ್ರದಲ್ಲಿ ರಾಮ್‌ ಪೊತೀನೇನಿಗೆ ನಟಿ ಕಾವ್ಯಾ ಥಾಪರ್ ಜೋಡಿ ಆಗಿದ್ದಾದೆ. ಸಂಜಯ್ ದತ್ ಈ ಸಿನಿಮಾದಲ್ಲಿ ಖಡಕ್ ವಿಲನ್ ಆಗಿಯೇ ಕಾಣಿಸುತ್ತಿದ್ದಾರೆ. ಇವರ ಈ ಸಿನಿಮಾ ಬಗ್ಗೆ ಕೂಡ ನಿರೀಕ್ಷೆ ಇದ್ದೇ ಇದೆ.

ಇದನ್ನೂ ಓದಿ: The Birthday Boy: ಹೆಸರು ಬದಲಾಯಿಸಿ ಕದ್ದು ಮುಚ್ಚಿ ಸಿನಿಮಾ ಮಾಡಿ, ಮಾಸ್ಕ್‌ ಧರಿಸಿ ಬಂದ ನಿರ್ದೇಶಕ! ಏನು ಕಥೆ?

ಡಬಲ್ ಇಸ್ಮಾರ್ಟ್ ಸಿನಿಮಾದ ಶೂಟಿಂಗ್ ಇನ್ನು ನಡೆಯುತ್ತಿದೆ. ಭರದಿಂದಲೇ ಚಿತ್ರೀಕರಣ ನಡೆಯುತ್ತಿರೋ ಈ ಸಿನಿಮಾ ರಿಲೀಸ್ ಡೇಟ್ ಕೂಡ ಫಿಕ್ಸ್ ಆಗಿದೆ. ಆಗಸ್ಟ್-15 ರಂದು ಚಿತ್ರ ಎಲ್ಲೆಡೆ ರಿಲೀಸ್ ಮಾಡಲಾಗುತ್ತಿದೆ. ವಿಶ್ವದಾದ್ಯಂತ ಬರ್ತಿರೋ ಈ ಚಿತ್ರದ ಪ್ರಚಾರ ಕೂಡ ಈಗಾಗಲೇ ಶುರು ಆಗಿದೆ.

Continue Reading

ಟಾಲಿವುಡ್

Tharun Sudhir: ದರ್ಶನ್‌ಗೆ ಮದುವೆ ಇನ್ವಿಟೇಶನ್‌ ಕಾರ್ಡ್‌ ಕೊಟ್ಟು, ಆಶೀರ್ವಾದ ಪಡೆಯಲು ಜೈಲಿಗೆ ಭೇಟಿ ಕೊಡಲಿದ್ದಾರಂತೆ ತರುಣ್ ಸುಧೀರ್

Tharun Sudhir: ದರ್ಶನ್ ಜೈಲು ಪಾಲಾದ ನಂತರ ಮೊದಲ ಬಾರಿಗೆ ತರುಣ್ ಸುಧೀರ್ ಭೇಟಿ ಮಾಡುತ್ತಿದ್ದಾರೆ. ತರುಣ್ ಸುಧೀರ್ ಲವ್ ಸ್ಟೋರಿ ಟ್ರ್ಯಾಕ್‌ಗೆ ತಂದಿದ್ದೆ ದರ್ಶನ್. ಸದ್ಯ ಭೇಟಿಯ ವೇಳೆ ಮದುವೆ ವಿಚಾರ ಬಹಿರಂಗ ಪಡಿಸಲಿದ್ದಾರಂತೆ ತರುಣ್‌. ತರುಣ್ ಹಾಗೂ ನಟಿ ಸೋನಲ್ ಮದುವೆಗೆ ದರ್ಶನ್ ಮುದ್ರೆ ಒತ್ತಿದ್ದರು.

VISTARANEWS.COM


on

Tharun Sudhir gives Darshan a wedding invitation card and visits Jail
Koo

ಬೆಂಗಳೂರು: ರೇಣುಕಾ ಸ್ವಾಮಿ ಕೊಲೆ ಆರೋಪದಲ್ಲಿ ಪರಪ್ಪನ (Actor Darshan) ಅಗ್ರಹಾರ ಜೈಲು ಸೇರಿರುವ ನಟ ದರ್ಶನ್‌ (Tharun Sudhir) ಹಾಗೂ ಗ್ಯಾಂಗ್‌ಗೆ ನ್ಯಾಯಾಂಗ ಬಂಧನ ವಿಸ್ತರಣೆ ಆಗಿದೆ. ಮತ್ತೆ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಸ್ತರಿಸಿ ಆದೇಶ ನೀಡಿದೆ. ಆರ್ಥಿಕ ಅಪರಾಧಗಳ ವಿಶೇಷ ನ್ಯಾಯಾಲಯ ನ್ಯಾಯಾಧೀಶ ವಿಶ್ವನಾಥ‌ ಸಿ ಗೌಡರ್ ಆದೇಶವಾಗಿದೆ. ಇದೀಗ ಕೊಲೆ ಪ್ರಕರಣದಲ್ಲಿ ಜೈಲನಲ್ಲಿರುವ ದರ್ಶನ್ ಅವರನ್ನು ʻಕಾಟೇರʼ ನಿರ್ದೇಶಕ ತರುಣ್ ಸುಧೀರ್ ಭೇಟಿ ಮಾಡಲಿದ್ದಾರೆ.

ದರ್ಶನ್ ಜೈಲು ಪಾಲಾದ ನಂತರ ಮೊದಲ ಬಾರಿಗೆ ತರುಣ್ ಸುಧೀರ್ ಭೇಟಿ ಮಾಡುತ್ತಿದ್ದಾರೆ. ತರುಣ್ ಸುಧೀರ್ ಲವ್ ಸ್ಟೋರಿ ಟ್ರ್ಯಾಕ್‌ಗೆ ತಂದಿದ್ದೆ ದರ್ಶನ್. ಸದ್ಯ ಭೇಟಿಯ ವೇಳೆ ಮದುವೆ ವಿಚಾರ ಬಹಿರಂಗ ಪಡಿಸಲಿದ್ದಾರಂತೆ ತರುಣ್‌. ತರುಣ್ ಹಾಗೂ ನಟಿ ಸೋನಲ್ ಮದುವೆಗೆ ದರ್ಶನ್ ಮುದ್ರೆ ಒತ್ತಿದ್ದರು. ದರ್ಶನ್ ಇಲ್ಲದೆ ಮದುವೆಯನ್ನು ಮುಂದಕ್ಕೆ ಹಾಕಲು ತರುಣ್ ಸಜ್ಜಾಗಿದ್ದರು ಎನ್ನಲಾಗಿತ್ತು. ಹಿರಿಯರ ಸಲಹೆ ನಂತರ ತರುಣ್‌ ಮುದುವೆಗೆ ಮುಂದಾಗಿದ್ದಾರೆ. ಅಗಸ್ಟ್ 10,11ಕ್ಕೆ ತರುಣ್ ,ಸೋನಾಲ್ ಮದುವೆಗೆ ಮುಹೂರ್ತ ಫಿಕ್ಸ್ ಆಗಿದೆ.

ಮದುವೆಯ ಮೊದಲ ಆಮಂತ್ರಣ ಪತ್ರಿಕೆಯನ್ನ ದರ್ಶನ್‌ಗೆ ಕೊಡಲು ತರುಣ್ ನಿರ್ಧರಿಸಿದ್ದಾರೆ ಎನ್ನಲಾಗಿದೆ. ಇಂದು 11 ಗಂಟೆ ವೇಳೆಗೆ ಪರಪ್ಪನ ಅಗ್ರಹಾರದ ಜೈಲಿಗೆ ಭೇಟಿ ನೀಡಲಿದ್ದಾರಂತೆ ತರುಣ್‌. ಜೈಲಿನಲ್ಲೆ ದರ್ಶನ್ ಗೆ ಮದುವೆ ಇನ್ವಿಟೇಶನ್‌ ಕೊಟ್ಟು, ಆಶೀರ್ವಾದ ಪಡೆಯಲಿದ್ದಾರಂತೆ. ಸೋನಲ್‌ ಕೂಡ ಬರುವರಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ: Tharun Sudhir: ಮದುವೆ ಬಗ್ಗೆ ಬಿಗ್‌ ಅಪ್‌ಡೇಟ್‌ ಕೊಟ್ಟ ತರುಣ್ ಸುಧೀರ್; ಹುಡುಗಿ ಹೇಗಿರಬೇಕು ಅಂದ್ರೆ….

ನಟಿ ಸೋನಾಲ್ ಮಂಥೆರೊ (sonal monteiro) ಹಾಗೂ ನಿರ್ದೇಶಕ ತರುಣ್ ಸುಧೀರ್ (Tharun Sudhir) ಮದುವೆಯಾಗಲಿದ್ದಾರೆ ಎಂದು ಬಹಳ ದಿನಗಳಿಂದ ಸುದ್ದಿ ಆಗುತ್ತಲೇ ಇದೆ. ಈ ಮುಂಚೆ ತರುಣ್‌ ಸುಧೀರ್‌ ಅವರ ತಾಯಿ ಮದುವೆಯ ದಿನಾಂಕ ಇನ್ನೂ ನಿಗದಿಯಾಗಿಲ್ಲ ಎಂದಿದ್ದಾರೆ. ಈಗ ಆಷಾಢ ಬಂತು. ಮಾತಾಡಲು ಆಗಲ್ಲ. ಆಷಾಢ ಮುಗಿದ್ಮೇಲೆ ಮಾತುಕತೆ ಮಾಡಬೇಕು ಅಂದಿದ್ದರು. 

ರಾಬರ್ಟ್’ ಚಿತ್ರದಲ್ಲಿ ಸೋನಲ್ ಕಾಣಿಸಿಕೊಂಡಿದ್ದರು. ಈ ಸಿನಿಮಾ ಶೂಟಿಂಗ್ ಸಮಯದಲ್ಲೇ ತರುಣ್- ಸೋನಲ್ ನಡುವೆ ಪ್ರೀತಿ ಹುಟ್ಟಿತ್ತು ಎಂದು ಹೇಳಲಾಗುತ್ತಿದೆ. ಇನ್ನು ದರ್ಶನ್‌ ಕೂಡ ಆಗಾಗ ತರುಣ್‌ಗೆ ಮದುವೆ ಮಾಡಿಸಬೇಕು ಎನ್ನುತ್ತಿದ್ದರಂತೆ. ಹಾಗಾಗಿ ಶೂಟಿಂಗ್‌ ಸೆಟ್‌ನಲ್ಲಿ ತರುಣ್- ಸೋನಲ್ ಇಬ್ಬರನ್ನು ತಮಾಷೆಯಾಗಿ ರೇಗಿಸುತ್ತಿದ್ದರು, ಇದೇ ಸಮಯದಲ್ಲಿ ಇಬ್ಬರ ನಡುವೆ ಪ್ರೀತಿ ಮೂಡಿರಬಹುದು ಎನ್ನಲಾಗಿದೆ.

ಚೌಕ’ ಚಿತ್ರದ ಮೂಲಕ ಡೈರೆಕ್ಟರ್ ಕ್ಯಾಪ್ ತೊಟ್ಟಿದ್ದ ತರುಣ್ ಮುಂದೆ ಒಂದರ ಹಿಂದೆಯಂತೆ ಎರಡು ಹಿಟ್ ಸಿನಿಮಾಗಳನ್ನು ಕೊಟ್ಟರು. ಇದೀಗ ತರುಣ್ 4ನೇ ಸಿನಿಮಾ ತಯಾರಿಯಲ್ಲಿದ್ದಾರೆ. 

Continue Reading
Advertisement
Ankola landslide
ಕರ್ನಾಟಕ7 mins ago

Ankola landslide: ಉತ್ತರ ಕನ್ನಡದ ರಾ. ಹೆದ್ದಾರಿ; ಕಾಮಗಾರಿ ಮುಗಿಸದೆ ಟೋಲ್ ಸಂಗ್ರಹ ಏಕೆ? ಗುತ್ತಿಗೆದಾರ ಕಂಪನಿಗೆ ಸಿಎಂ ತರಾಟೆ

Mamata Banerjee
ದೇಶ24 mins ago

Mamata Banerjee: ‘ನಾನು ಕಾಫಿರ್‌ ಅಲ್ಲ’ ಎಂದ ಮಮತಾ ಬ್ಯಾನರ್ಜಿಗೆ ಬಿಜೆಪಿ ತಿರುಗೇಟು; ಏನಿದು ವಿವಾದ?

Joe Root
ಪ್ರಮುಖ ಸುದ್ದಿ37 mins ago

Joe Root : ವೆಸ್ಟ್​ ಇಂಡೀಸ್ ವಿರುದ್ಧ ಶತಕ ಬಾರಿಸಿ ಸ್ಟೀವ್​ ವಾ ದಾಖಲೆ ಸರಿಗಟ್ಟಿದ ಜೋ ರೂಟ್​

ಕರ್ನಾಟಕ39 mins ago

Karnataka Rain: ಮಳೆ ಅನಾಹುತ; ಜೀವ, ಬೆಳೆ ಹಾನಿಯ ವರದಿ ಕೂಡಲೇ ಸಲ್ಲಿಸುವಂತೆ ಸಿಎಂ ಸೂಚನೆ

Paris Olympics 2024 :
ಕ್ರೀಡೆ1 hour ago

Paris Olympics 2024 : ಒಲಿಂಪಿಕ್ಸ್​ ಸ್ಪರ್ಧೆಗೆ ಹೊರಟಿರುವ ಅಥ್ಲೀಟ್​ಗೆ 8.5 ಕೋಟಿ ರೂ. ಪ್ರೋತ್ಸಾಹಧನ ನೀಡಿದ ಬಿಸಿಸಿಐ

ಕರ್ನಾಟಕ1 hour ago

Renaming Ramanagara: ರಾಮನಗರದಲ್ಲಿ ಬೆಂಗಳೂರಿನ ಕಸ ಸುರಿಯಲು ಹುನ್ನಾರ: ಎಚ್‌.ಡಿ. ಕುಮಾರಸ್ವಾಮಿ

Budget Session 2024
ದೇಶ2 hours ago

Budget Session 2024: ನಾಳೆಯಿಂದ ಬಜೆಟ್‌ ಅಧಿವೇಶನ; ಕೇಂದ್ರದ ಅಜೆಂಡಾ ಏನು? ಪ್ರತಿಪಕ್ಷಗಳ ತಂತ್ರವೇನು?

Paris Olympics 2024
ಕ್ರಿಕೆಟ್2 hours ago

Paris Olympics 2024 : ಒಲಿಂಪಿಕ್ಸ್​ನಲ್ಲಿ ಸ್ಪರ್ಧಿಸಲಿರುವ ಈ ಅಥ್ಲೀಟ್​ಗೆ ಕೇವಲ 11 ವರ್ಷ! ಇಲ್ಲಿದೆ ಆಕೆಯ ವಿವರ

HD Kumaraswamy
ಕರ್ನಾಟಕ2 hours ago

HD Kumaraswamy: ನನ್ನ ಮತ್ತು ದೇವೇಗೌಡರ ಸರ್ಕಾರ ಕೆಡವಿದ್ದು ಯಾರು ಅಂತ ಹೇಳಿ; ಡಿಕೆಶಿ ವಿರುದ್ಧ ಎಚ್‌ಡಿಕೆ ಕಿಡಿ

Women's Asia Cup 2024
ಪ್ರಮುಖ ಸುದ್ದಿ2 hours ago

Women’s Asia Cup 2024 : ದಾಖಲೆ ಬರೆದ ರಿಚಾ ಘೋಷ್​, ಇತಿಹಾಸ ಸೃಷ್ಟಿಸಿದ ಭಾರತ ತಂಡ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Rain
ಮಳೆ1 day ago

Karnataka Rain : ಭಾರಿ ಮಳೆಗೆ ಮನೆ ಗೋಡೆ ಕುಸಿತ; ಕೊಟ್ಟಿಗೆಯಲ್ಲಿದ್ದ ಜಾನುವಾರುಗಳು ಸಾವು

karnataka Rain
ಮಳೆ1 day ago

Karnataka Rain : ಹಳ್ಳ ದಾಟಲು ಹೋಗಿ ನೀರುಪಾಲಾದ ಜಾನುವಾರು; ಬಿರುಗಾಳಿಗೆ ಕಳಚಿದ ವಿಂಡ್‌ ಫ್ಯಾನ್‌

karnataka Rain
ಮಳೆ2 days ago

Karnataka Rain : ಬೀದಿಗೆ ತಂದ ರಣಮಳೆ; ಮನೆ ಕುಸಿದು ಬಿದ್ದು 9 ತಿಂಗಳ ಗರ್ಭಿಣಿ ನರಳಾಟ

Karnataka Rain
ಮಳೆ2 days ago

Karnataka Rain : ರಾಜ್ಯದಲ್ಲಿ ಮಳೆಯ ಆರ್ಭಟ; ರಾತ್ರಿ ಕಳೆದು ಬೆಳಗಾಗುವುದರೊಳಗೆ ಕಂದಕ ನಿರ್ಮಾಣ

Karnataka Rain
ಮಳೆ3 days ago

Karnataka Rain : ಭಾರಿ ಮಳೆ ಎಫೆಕ್ಟ್‌; ಉಕ್ಕಿ ಹರಿಯುತ್ತಿದ್ದ ನದಿಯಲ್ಲಿ ಕೊಚ್ಚಿ ಹೋದ ರಾಸು

Uttara Kannada Landslide
ಮಳೆ3 days ago

Uttara Kannada Landslide: ಶಿರೂರು ಗುಡ್ಡ ಕುಸಿತ; ಅಖಾಡಕ್ಕಿಳಿದ ಜಿಯೊಲಾಜಿಕಲ್ ಸರ್ವೆ ಆಫ್ ಇಂಡಿಯಾ ಟೀಂ

Karnataka Rain
ಮಳೆ5 days ago

Karnataka Rain : ಕಾರವಾರದಲ್ಲಿ ಮಳೆ ಅವಾಂತರ; ಮನೆ ಮೇಲೆ ಗುಡ್ಡ ಕುಸಿದು ವೃದ್ಧ ಸಾವು

karnataka Rain
ಮಳೆ5 days ago

Karnataka Rain : ಭಾರಿ ಮಳೆಗೆ ನಿಯಂತ್ರಣ ತಪ್ಪಿ ಕೆರೆಗೆ ಉರುಳಿ ಬಿದ್ದ ಕಾರು; ನಾಲ್ವರು ಪ್ರಾಣಾಪಾಯದಿಂದ ಪಾರು

karnataka Weather Forecast
ಮಳೆ6 days ago

Karnataka Weather : ವ್ಯಾಪಕ ಮಳೆ ಎಚ್ಚರಿಕೆ; ನಾಳೆಯೂ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

karnataka Rain
ಮಳೆ6 days ago

Karnataka Rain : ಶಾಲಾ-ಕಾಲೇಜಿಗೆ ಈ ದಿನ ರಜಾ; ಅಬ್ಬರಿಸುತ್ತಿರುವ ಮಳೆಗೆ ಮನೆಯಲ್ಲೇ ಎಲ್ಲರೂ ಸಜಾ!

ಟ್ರೆಂಡಿಂಗ್‌