Paris Olympics 2024: ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಮೊದಲ ಬಾರಿ ನೇರಳೆ ಬಣ್ಣದ ಟ್ರ್ಯಾಕ್; ಏನಿದರ ವಿಶೇಷತೆ? - Vistara News

ಕ್ರೀಡೆ

Paris Olympics 2024: ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಮೊದಲ ಬಾರಿ ನೇರಳೆ ಬಣ್ಣದ ಟ್ರ್ಯಾಕ್; ಏನಿದರ ವಿಶೇಷತೆ?

Paris Olympics 2024:1976ರಿಂದಲೂ ಇಟಲಿಯ ಮೊಂಡೊ ಸಂಸ್ಥೆಯು ಒಲಿಂಪಿಕ್ಸ್‌ಗೆ ಟ್ರ್ಯಾಕ್‌ ಅಳವಡಿಕೆ ಕಾರ್ಯ ಮಾಡುತ್ತಿದ್ದು, ನೇರಳೆ ಬಣ್ಣದ ಟ್ರ್ಯಾಕ್‌ ಅನ್ನು ಆಧುನಿಕ ತಂತ್ರಜ್ಞಾನ ಬಳಸಿ ತಯಾರಿಸಿದೆ. ಈ ಟ್ರ್ಯಾಕ್​ನಲ್ಲಿ ವಿಶ್ವ ಹಾಗೂ ಒಲಿಂಪಿಕ್ಸ್‌ ದಾಖಲೆಗಳು ನಿರ್ಮಾಣಗೊಳ್ಳಲಿವೆ ಎಂದು ಮೊಂಡೊ ಸಂಸ್ಥೆ ವಿಶ್ವಾಸ ವ್ಯಕ್ತಪಡಿಸಿದೆ.

VISTARANEWS.COM


on

Paris Olympics 2024
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಪ್ಯಾರಿಸ್​: ಈ ಬಾರಿಯ ಒಲಿಂಪಿಕ್ಸ್(Paris Olympics 2024)​ ಕ್ರೀಡಾಕೂಟ ಉದ್ಘಾಟನಾ ಸಮಾರಂಭದಲ್ಲಿ ಮಾತ್ರವಲ್ಲದೆ ಅಥ್ಲೆಟಿಕ್ಸ್​ ಸ್ಪರ್ಧೆಗಳ ವಿಷಯದಲ್ಲೂ ವಿಶೇಷವಾಗಿದೆ. ಹೌದು, ಇದೇ ಮೊದಲ ಬಾರಿಗೆ ಒಲಿಂಪಿಕ್ಸ್‌ನಲ್ಲಿ ಸಂಪ್ರದಾಯಿಕ ಇಟ್ಟಿಗೆ-ಕೆಂಪು ಬಣ್ಣದ ಟ್ರ್ಯಾಕ್‌ ಬದಲಾಗಿ ನೇರಳೆ ಬಣ್ಣದ ಸಿಂಥೆಟಿಕ್‌ ಟ್ರ್ಯಾಕ್‌ ಬಳಕೆಯಾಗಲಿದೆ. ಅಥ್ಲೀಟ್​ಗಳು ಲ್ಯಾವೆಂಡರ್​ ಬಣ್ಣದ ಟ್ರ್ಯಾಕ್​ನಲ್ಲಿ(purple track) ಮೊದಲ ಬಾರಿಗೆ ಓಡಲಿದ್ದಾರೆ. ಭಾರತದ ಜಾವೆಲಿನ್​ ಥ್ರೋ ತಾರೆ ನೀರಜ್​ ಚೋಪ್ರಾ ಅವರ ಎಸೆತದ ಶೈಲಿಗೂ ಈ ಟ್ರ್ಯಾಕ್​ ನೆರವಾಗಲಿದೆ ಎಂದು ಹೇಳಲಾಗಿದೆ.

1976ರಿಂದಲೂ ಇಟಲಿಯ ಮೊಂಡೊ ಸಂಸ್ಥೆಯು ಒಲಿಂಪಿಕ್ಸ್‌ಗೆ ಟ್ರ್ಯಾಕ್‌ ಅಳವಡಿಕೆ ಕಾರ್ಯ ಮಾಡುತ್ತಿದ್ದು, ನೇರಳೆ ಬಣ್ಣದ ಟ್ರ್ಯಾಕ್‌ ಅನ್ನು ಆಧುನಿಕ ತಂತ್ರಜ್ಞಾನ ಬಳಸಿ ತಯಾರಿಸಿದೆ. ಈ ಟ್ರ್ಯಾಕ್​ನಲ್ಲಿ ವಿಶ್ವ ಹಾಗೂ ಒಲಿಂಪಿಕ್ಸ್‌ ದಾಖಲೆಗಳು ನಿರ್ಮಾಣಗೊಳ್ಳಲಿವೆ ಎಂದು ಮೊಂಡೊ ಸಂಸ್ಥೆ ವಿಶ್ವಾಸ ವ್ಯಕ್ತಪಡಿಸಿದೆ.

2016ರಲ್ಲಿ ನೀಲಿ ಟ್ರ್ಯಾಕ್​ ಬಳಕೆ


ಸಾಮಾನ್ಯವಾಗಿ ಒಲಿಂಪಿಕ್ಸ್​ ಅಥ್ಲೆಟಿಕ್ಸ್​ ಸ್ಪರ್ಧೆಗಳು ಹೆಚ್ಚಾಗಿ ಇಟ್ಟಿಗೆ ಬಣ್ಣದ ಟ್ರ್ಯಾಕ್​ನಲ್ಲಿ ನಡೆಯುತ್ತಿತ್ತು. ಆದರೆ, ಇಂಥದ್ದೇ ರ್ನಿದಿಷ್ಟ ಬಣ್ಣದ ಟ್ರ್ಯಾಕ್​ನಲ್ಲಿ ಅಥ್ಲೆಟಿಕ್ಸ್​ ಸ್ಪರ್ಧೆ ನಡೆಸಬೇಕೆಂಬ ನಿಯಮವಿಲ್ಲ. 2016ರ ರಿಯೋ ಒಲಿಂಪಿಕ್ಸ್​ ವೇಳೆ ಮೊದಲ ಬಾರಿಗೆ ಇಟ್ಟಿಗೆ ಬಣ್ಣದ ಸಿಂಥೆಟಿಕ್​ ಟ್ರ್ಯಾಕ್​ ಬದಲು ನೀಲಿ ಟ್ರ್ಯಾಕ್​ ಮೇಲೆ ಅಥ್ಲೆಟಿಕ್ಸ್​ ಸ್ಪರ್ಧೆ ನಡೆದಿತ್ತು. ಈ ಬಾರಿ ನೇರಳೆ ಬಣ್ಣದ ಟ್ರ್ಯಾಕ್​ನಲ್ಲಿ ಅಥ್ಲೆಟಿಕ್ಸ್​ ಸ್ಪರ್ಧೆ ನಡೆಯಲಿದೆ. ಈ ವಿನೂತನ ತಂತ್ರಜ್ಞಾನದ ಹೊಸ ಟ್ರ್ಯಾಕ್​ಗಳು ಅಥ್ಲೀಟ್​ಗಳಿಗೆ ಅತ್ಯಂತ ವೇಗವಾಗಿ ಓಡಲು ನೆರವಾಗಲಿದೆ ಎಂದು ಮೊಂಡೋ ಕಂಪನಿ ತಿಳಿಸಿದೆ. ನೇರಳೆ ಬಣ್ಣದ ಅಥ್ಲೆಟಿಕ್ಸ್​ ಟ್ರ್ಯಾಕ್​ನಲ್ಲಿ ಲೇನ್​ಗಳ ಸಂಖ್ಯೆಯನ್ನು 8ರಿಂದ 9ಕ್ಕೆ ಏರಿಸಲಾಗಿದೆ. ಕ್ರೀಡಾಂಗಣದಲ್ಲಿ ಒಟ್ಟಾರೆ 17,000 ಚದರ ಮೀಟರ್​ ವಿಸ್ತೀರ್ಣದಲ್ಲಿ ಈ ನೇರಳೆ ಬಣ್ಣ ವ್ಯಾಪಿಸಿದೆ.

ಇದನ್ನೂ ಓದಿ Paris Olympics 2024 : ಪ್ಯಾರಿಸ್​ ಒಲಿಂಪಿಕ್ಸ್​ನ ಸ್ಪರ್ಧಾ ಪಟ್ಟಿಯಲ್ಲಿರುವ ಕ್ರೀಡೆಗಳು ಯಾವುವು? ಇವುಗಳಲ್ಲಿ ಅತ್ಯಂತ ಪ್ರಾಚೀನ ಕ್ರೀಡೆಗಳು ಯಾವುದೆಲ್ಲ?

ನೇರಳ ಬಣ್ಣ ಬಳಕೆಗೆ ಕಾರಣವೇನು?

ಪ್ಯಾರಿಸ್​ ಒಲಿಂಪಿಕ್ಸ್​ನ ಅಥ್ಲೆಟಿಕ್ಸ್​ ಟ್ರ್ಯಾಕ್​ಗೆ ನೇರಳೆ ಬಣ್ಣ ಬಳಸಲು ಕೂಡ ಒಂದು ಪ್ರಮುಖ ಕಾರಣವಿದೆ. ಅದೇನೆಂದರೆ, ಈ ಸಲದ ಒಲಿಂಪಿಕ್ಸ್​ ಗೇಮ್ಸ್​ ನೀಲಿ, ಹಸಿರು ಮತ್ತು ನೇರಳ ಬಣ್ಣದ ಥೀಮ್​ ಒಳಗೊಂಡಿದೆ. ಕ್ರೀಡಾಕೂಟದ ಎಲ್ಲ ತಾಣಗಳಲ್ಲಿ ಇದೇ ಬಣ್ಣಗಳು ಎದ್ದು ಕಾಣಲಿವೆ. ಇದೇ ನಿಟ್ಟಿನಲ್ಲಿ ಅಥ್ಲೆಟಿಕ್ಸ್​ ಟ್ರ್ಯಾಕ್​ಗೂ ದೃಶ್ಯ ಆಕರ್ಷಣೆಯ ನೇರಳ ಬಣ್ಣವನ್ನು ನೀಡಲಾಗಿದೆ. ಜತೆಗೆ ಮನೋವೈಜ್ಞಾನಿಕ ಕಾರಣವೂ ಇದೆ. ನೇರಳೆ ಬಣ್ಣವನ್ನು ಧೈರ್ಯಶಾಲಿ, ಶಕ್ತಿಯುತ ಮತ್ತು ಸೃಜನಾತ್ಮಕತೆಯ ಪ್ರತಿಕ ಎನ್ನಲಾಗಿದೆ.

ಇದನ್ನೂ ಓದಿ Paris Olympics: ಪ್ಯಾರಿಸ್‌ ಒಲಿಂಪಿಕ್ಸ್​ ಭದ್ರತಾ ಕಾರ್ಯದಲ್ಲಿ ಭಾರತದ ಶ್ವಾನದಳ; ಬೆಂಗಳೂರಿನಲ್ಲಿ ತರಬೇತಿ

100 ವರ್ಷಗಳ ಬಳಿಕ ಪ್ಯಾರಿಸ್​ ಆತಿಥ್ಯ


ಪ್ಯಾರಿಸ್‌ ಆತಿಥ್ಯದಲ್ಲಿ ನಡೆಯಲಿರುವ 3ನೇ ಒಲಿಂಪಿಕ್ಸ್‌ ಕೀಡಾಕೂಟ ಇದಾಗಿದೆ. ಮೊದಲ ಒಲಿಂಪಿಕ್ಸ್‌ ನಡೆದದ್ದು 1900ರಲ್ಲಿ. ಇದಾದ ಬಳಿಕ 1924ರಲ್ಲಿ ಆತಿಥ್ಯ ವಹಿಸಿತ್ತು. ಇದೀಗ ಬರೋಬ್ಬರಿ 100 ವರ್ಷಗಳ ಬಳಿಕ ಇಲ್ಲಿ ಪ್ಯಾರಿಸ್​ನಲ್ಲಿ ಒಲಿಂಪಿಕ್ಸ್​ ನಡೆಯುತ್ತಿದೆ. ಈ ಬಾರಿಯ ಒಲಿಂಪಿಕ್ಸ್​ ಕ್ರೀಡಾಕೂಟದ ಉದ್ಘಾಟನಾ ಸಮಾರಂಭ ಒಲಿಂಪಿಕ್ಸ್​ ಇತಿಹಾಸದಲ್ಲೇ ವಿಶೇಷ ಮಹತ್ವ ಪಡೆದಿದೆ. ಇದೇ ಮೊದಲ ಬಾರಿಗೆ ಕ್ರೀಡಾಂಗಣದ ಹೊರಗಡೆ ನಡೆಯುವ ಉದ್ಘಾಟನಾ ಸಮಾರಂಭ ಇದಾಗಿದೆ. 10,500ಕ್ಕೂ ಹೆಚ್ಚು ಅಥ್ಲೀಟ್‌ಗಳು ಪ್ಯಾರಿಸ್‌ನಿಂದ ಸುಮಾರು 6 ಕಿಲೋಮೀಟರ್‌ ವರೆಗೆ ಬೋಟ್‌ಗಳಲ್ಲೇ ಪರೇಡ್‌ ನಡೆಸಿ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Paris Olympics 2024 : ಒಲಿಂಪಿಕ್ಸ್​ನಲ್ಲಿ ಅತಿ ಹೆಚ್ಚು ಪದಕಗಳನ್ನು ಪಡೆದ ಅಥ್ಲೀಟ್​ ಯಾರು? ಇಲ್ಲಿದೆ ಈ ಶ್ರೇಷ್ಠ ಕ್ರೀಡಾಪಟುವಿನ ವಿವರ

Paris Olympics 2024 : ಈ ಪಟ್ಟಿಯಲ್ಲಿ ಅಮೆರಿಕದ ಖ್ಯಾತ ಈಜುಗಾರ ಮೈಕೆಲ್ ಫೆಲ್ಪ್ಸ್ ಅಗ್ರಸ್ಥಾನದಲ್ಲಿದ್ದಾರೆ. ಒಲಿಂಪಿಕ್ಸ್​ನಲ್ಲಿ 23 ಚಿನ್ನ ಸೇರಿದಂತೆ ಒಟ್ಟು 28 ಪದಕಗಳನ್ನು ಗೆದ್ದಿದ್ದಾರೆ. 2004 ರ ಅಥೆನ್ಸ್ ಒಲಿಂಪಿಕ್ಸ್ ನಲ್ಲಿ, ಫೆಲ್ಪ್ಸ್ 6 ಚಿನ್ನದ ಪದಕಗಳು ಮತ್ತು 2 ಕಂಚಿನ ಪದಕಗಳನ್ನು ಗೆದ್ದುಕೊಂಡಿದ್ದರು. 2008 ರ ಆವೃತ್ತಿಯಲ್ಲಿ, ಫೆಲ್ಪ್ಸ್ ಮಾರ್ಕ್ ಸ್ಪಿಟ್ಜ್ ಅವರ ದಾಖಲೆಯನ್ನು ಮುರಿದರು ಮತ್ತು 8 ಚಿನ್ನದ ಪದಕಗಳನ್ನು ಗಳಿಸಿದ್ದರು.

VISTARANEWS.COM


on

Paris Olympics 2024
Koo

ಬೆಂಗಳೂರು: ಪ್ಯಾರಿಸ್​​ನಲ್ಲಿ ನಡೆಯಲಿರುವ 2024ನೇ ಆವೃತ್ತಿಯ (Paris Olympics 2024) ಒಲಿಂಪಿಕ್ಸ್​ ಆರಂಭಕ್ಕೆ ಕೆಲವೇ ದಿನಗಳು ಉಳಿದಿವೆ. ವಿಶ್ವದಾದ್ಯಂತದ ಕ್ರೀಡಾಪಟುಗಳು ತಮ್ಮ ಜೀವನದ ಗುರಿಯಾಗಿರುವ ಒಲಿಂಪಿಕ್​​ ಪದಕಗಳನ್ನು ಪಡೆಯುವ ಭರವಸೆಯೊಂದಿಗೆ ಪ್ರೇಮಿಗಳ ನಗರಕ್ಕೆ ಹೊರಟಿದ್ದಾರೆ. ಜುಲೈ 26 ರಂದು ಪ್ಯಾರಿಸ್​​ನಲ್ಲಿ ಉದ್ಘಾಟನಾ ಸಮಾರಂಭದೊಂದಿಗೆ ಒಲಿಂಪಿಕ್ಸ್ ಪ್ರಾರಂಭವಾಗಲಿದ್ದು, 27 ರಿಂದ ಕ್ರೀಡಾಕೂಟಗಳು ಪ್ರಾರಂಭವಾಗಲಿವೆ.

ಪದಕಗಳು ಎಲ್ಲಾ ಕ್ರೀಡಾಪಟುಗಳಿಗೆ ದೃಢವಾದ ನಂಬಿಕೆಯಾಗಿದೆ. ಈ ನಡುವೆ ಒಲಿಂಪಿಕ್ಸ್​ ಇತಿಹಾಸದಲ್ಲಿ ​​ ಹೆಚ್ಚಿನ ಪದಕಗಳನ್ನು ಗಳಿಸಿದ ಕ್ರೀಡಾಪಟುಗಳು ಮತ್ತು ತಂಡಗಳನ್ನು ಯಾವುದು ಎಂಬುದನ್ನು ನೋಡೊಣ.

ಅತಿ ಹೆಚ್ಚು ಪದಕಗಳನ್ನು ಗೆದ್ದ ಕ್ರೀಡಾಪಟುಗಳು

ಈ ಪಟ್ಟಿಯಲ್ಲಿ ಅಮೆರಿಕದ ಖ್ಯಾತ ಈಜುಗಾರ ಮೈಕೆಲ್ ಫೆಲ್ಪ್ಸ್ ಅಗ್ರಸ್ಥಾನದಲ್ಲಿದ್ದಾರೆ. ಒಲಿಂಪಿಕ್ಸ್​ನಲ್ಲಿ 23 ಚಿನ್ನ ಸೇರಿದಂತೆ ಒಟ್ಟು 28 ಪದಕಗಳನ್ನು ಗೆದ್ದಿದ್ದಾರೆ. 2004 ರ ಅಥೆನ್ಸ್ ಒಲಿಂಪಿಕ್ಸ್ ನಲ್ಲಿ, ಫೆಲ್ಪ್ಸ್ 6 ಚಿನ್ನದ ಪದಕಗಳು ಮತ್ತು 2 ಕಂಚಿನ ಪದಕಗಳನ್ನು ಗೆದ್ದುಕೊಂಡಿದ್ದರು. 2008 ರ ಆವೃತ್ತಿಯಲ್ಲಿ, ಫೆಲ್ಪ್ಸ್ ಮಾರ್ಕ್ ಸ್ಪಿಟ್ಜ್ ಅವರ ದಾಖಲೆಯನ್ನು ಮುರಿದರು ಮತ್ತು 8 ಚಿನ್ನದ ಪದಕಗಳನ್ನು ಗಳಿಸಿದ್ದರು.

ಮಹಿಳಾ ಕ್ರೀಡಾಪಟುಗಳ ವಿಷಯಕ್ಕೆ ಬಂದಾಗ, ಸೋವಿಯತ್ ಒಕ್ಕೂಟದ ಲಾರಿಸಾ ಲ್ಯಾಟಿನಿನಾ ಅತಿ ಹೆಚ್ಚು ಪದಕಗಳನ್ನು ಗೆದ್ದ ದಾಖಲೆಯನ್ನು ಹೊಂದಿದ್ದಾರೆ. ಆರ್ಟಿಸ್ಟಿಕ್​ ಜಿಮ್ಯಾಸ್ಟಿಕ್​ ಪಟು ಲ್ಯಾಟಿನಿನಾ 18 ಪದಕಗಳನ್ನು ಗೆದ್ದಿದ್ದಾರೆ. ಅದರಲ್ಲಿ 9 ಕ್ಕೆ ಚಿನ್ನ. ಚಿನ್ನದ ಪದಕ ಹಾಗೂ ಒಟ್ಟು ಪದಕಗಳ ವಿಚಾರಕ್ಕೆ ಬಂದಾಗ ಮಹಿಳಾ ಕ್ರೀಡಾಪಟುವಾಗಿ ಗರಿಷ್ಠ ಸಾಧನೆಯಾಗಿದೆ.

ಇದನ್ನೂ ಓದಿ: Paris Olympics 2024 : ಒಲಿಂಪಿಕ್ಸ್​ನಲ್ಲಿ ಸ್ಪರ್ಧಿಸಲಿರುವ ರಾಜ್ಯದ ಕ್ರೀಡಾಪಟುಗಳಿಗೆ ತಲಾ 5 ಲಕ್ಷ ರೂ. ಪ್ರೋತ್ಸಾಹಧನ

ಒಲಿಂಪಿಕ್ಸ್​​ನಲ್ಲಿ ಅತಿ ಹೆಚ್ಚು ಪದಕಗಳನ್ನು ಗೆದ್ದವರ ಪಟ್ಟಿಯಲ್ಲಿ ಮಾರಿಟ್ ಜೋರ್ಗೆನ್ ಮೂರನೇ ಸ್ಥಾನದಲ್ಲಿದ್ದಾರೆ. ನಾರ್ವೆಯ ಕ್ರಾಸ್ ಕಂಟ್ರಿ ಸ್ಕೇಟಿಂಗ್​ ಮಹಿಳಾ ಸ್ಪರ್ಧಿಯಾಗಿರುವ ಇವರು 15 ಪದಕಗಳನ್ನು ಗೆದ್ದಿದ್ದಾರೆ. ಇದರಲ್ಲಿ 8 ಚಿನ್ನದ ಪದಕಗಳು.

ಅಧಿಕ ಪದಕಗಳನ್ನು ಹೊಂದಿರುವ ರಾಷ್ಟ್ರ

ಹೆಚ್ಚಿನ ಪದಕಗಳನ್ನು ಹೊಂದಿರುವ ರಾಷ್ಟ್ರಗಳ ವಿಷಯಕ್ಕೆ ಬಂದಾಗ ಅಮೆರಿಕ ಒಲಿಂಪಿಕ್ಸ್​ ಇತಿಹಾಸದಲ್ಲಿ ಅತ್ಯಂತ ಪ್ರಬಲವಾಗಿದೆ. ಯುಎಸ್ಎ ಇದುವರೆಗೆ 2,522 ಪದಕಗಳನ್ನು ಗೆದ್ದಿದೆ, ಅದರಲ್ಲಿ 1,022 ಚಿನ್ನ. ಇದು ಒಲಿಂಪಿಕ್ಸ್​​ನಲ್ಲಿ ರಾಷ್ಟ್ರವೊಂದು ಅತಿ ಹೆಚ್ಚು ಚಿನ್ನದ ಪದಕಗಳನ್ನು ಗೆದ್ದ ದಾಖಲೆಯಾಗಿದೆ. ಜರ್ಮನಿ 1083 ಪದಕಗಳು (351 ಚಿನ್ನ,371 ಬೆಳ್ಳಿ, 361 ಕಂಚು) ಎರಡನೇ ಸ್ಥಾನದಲ್ಲಿದೆ. ಯುನೈಟೆಡ್ ಕಿಂಗ್​ಡಮ್​ 965 (304 ಚಿನ್ನ, 329 ಬೆಳ್ಳಿ, 332 ಕಂಚು) ಮೂರನೇ ಸ್ಥಾನ ಹೊಂದಿದೆ. ಫ್ರಾನ್ಸ್​ (910 ಪದಕ), ಇಟಲಿ (713 ಪದಕ), ಚೀನಾ (713 ಪದಕ) ನಂತರದಲ್ಲಿ ಸ್ಥಾನಗಳಲ್ಲಿವೆ.

ಒಂದೇ ಆವೃತ್ತಿಯಲ್ಲಿ ಅತಿ ಹೆಚ್ಚು ಚಿನ್ನದ ಪದಕಗಳನ್ನು ಗೆದ್ದ ಕ್ರೀಡಾಪಟುಗಳು

ಫೆಲ್ಪ್ಸ್ ಒಂದೇ ಆವೃತ್ತಿಯಲ್ಲಿ ಅತಿ ಹೆಚ್ಚು ಚಿನ್ನದ ಪದಕಗಳನ್ನು ಗೆದ್ದ ದಾಖಲೆ ಹೊಂದಿದ್ದಾರೆ. ಮಹಿಳಾ ಅಥ್ಲೀಟ್​​ಗಳ ವಿಷಯಕ್ಕೆ ಬಂದರೆ, ಜರ್ಮನಿಯ ಈಜುಗಾರ್ತಿ ಕ್ರಿಸ್ಟಿನ್ ಒಟ್ಟೊ 1988ರ ಒಲಿಂಪಿಕ್ಸ್​ನಲ್ಲಿ 6 ಅಂಕಗಳೊಂದಿಗೆ ದಾಖಲೆಯನ್ನು ಹೊಂದಿದ್ದಾರೆ.

1984ರ ಲಾಸ್ ಏಂಜಲೀಸ್ ಒಲಿಂಪಿಕ್ಸ್​​ನಲ್ಲಿ 83 ಚಿನ್ನದ ಪದಕಗಳನ್ನು ಗೆದ್ದಿದ್ದ ಅಮೆರಿಕ, ಒಂದೇ ಆವೃತ್ತಿಯಲ್ಲಿ ಅತಿ ಹೆಚ್ಚು ಚಿನ್ನದ ಪದಕಗಳನ್ನು ಗೆದ್ದ ದಾಖಲೆ ತನ್ನದಾಗಿಸಿಕೊಂಡಿದೆ.

Continue Reading

ಕ್ರೀಡೆ

Women’s T20 World Cup: ಬಾಂಗ್ಲಾದಲ್ಲಿ ಭುಗಿಲೆದ್ದ ಹಿಂಸಾಚಾರ; ಮಹಿಳಾ ಟಿ20 ವಿಶ್ವಕಪ್ ​ಸ್ಥಳಾಂತರ ಸಾಧ್ಯತೆ!

Women’s T20 World Cup: ಒಂದೊಮ್ಮೆ ಬಾಂಗ್ಲಾದೇಶದಲ್ಲಿ ಶಾಂತಿ ನೆಲೆಸದೇ ಹೋದರೆ, ಭದ್ರತಾ ಕಾರಣದಿಂದ ಟೂರ್ನಿಯನ್ನು ಬಾಂಗ್ಲಾದೇಶದಿಂದ ಬೇರೆ ದೇಶಕ್ಕೆ ಸ್ಥಳಾಂತರಗೊಳ್ಳುವ ಸಾಧ್ಯತೆ ಇದೆ.

VISTARANEWS.COM


on

Women's T20 World Cup
Koo

ಢಾಕಾ: ಬಹುನಿರೀಕ್ಷಿತ ಮಹಿಳಾ ಟಿ20 ವಿಶ್ವಕಪ್‌ ಟೂರ್ನಿ(Women’s T20 World Cup) ಅಕ್ಟೋಬರ್‌ನಲ್ಲಿ ಬಾಂಗ್ಲಾದೇಶ ಆತಿಥ್ಯದಲ್ಲಿ ನಡೆಯಲಿದೆ. ಆದರೆ, ಬಾಂಗ್ಲಾದೇಶದಲ್ಲಿ(bangladesh violence)  ಸರ್ಕಾರಿ ಉದ್ಯೋಗಗಳಲ್ಲಿನ ಮೀಸಲಾತಿ ವ್ಯವಸ್ಥೆಯಲ್ಲಿ ಸುಧಾರಣೆಗೆ ಒತ್ತಾಯಿಸಿ ಅಲ್ಲಿನ ನಾಗರೀಕರು ನಡೆಸುತ್ತಿರುವ ಪ್ರತಿಭಟನೆ, ಗಲಭೆಗಳು ಹಿಂಸಾತ್ಮಕ ರೂಪ ತಳೆದಿದೆ. ಇದೇ ಕಾರಣಕ್ಕೆ ಬಾಂಗ್ಲಾದೇಶದಲ್ಲಿನ ಭದ್ರತೆ ಪರಿಸ್ಥಿತಿಯ ಬಗ್ಗೆ ಗಮನ ಹರಿಸುವುದಾಗಿ ಅಂತಾರಾಷ್ಟ್ರೀಯ ಕ್ರಿಕೆಟ್‌ ಸಮಿತಿ (ICC) ಹೇಳಿದೆ.

ಒಂದೊಮ್ಮೆ ಬಾಂಗ್ಲಾದೇಶದಲ್ಲಿ ಶಾಂತಿ ನೆಲೆಸದೇ ಹೋದರೆ, ಭದ್ರತಾ ಕಾರಣದಿಂದ ಟೂರ್ನಿಯನ್ನು ಬಾಂಗ್ಲಾದೇಶದಿಂದ ಬೇರೆ ದೇಶಕ್ಕೆ ಸ್ಥಳಾಂತರಗೊಳ್ಳುವ ಸಾಧ್ಯತೆ ಇದೆ. ಮೂಲಗಳ ಪ್ರಕಾರ ಟೂರ್ನಿ ಸ್ಥಳಾಂತರಗೊಂಡರೆ ಭಾರತದಲ್ಲಿ ನಡೆಯಲಿದೆ ಎನ್ನಲಾಗಿದೆ. ಸದ್ಯ ಪೊಲೀಸರು ಢಾಕಾದಲ್ಲಿ ನಿಷೇಧಾಜ್ಞೆ ಜಾರಿ ಮಾಡಿದ್ದು. ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿರುವವರ ಮೇಲೆ ಲಾಠಿ ಚಾರ್ಜ್​ ನಡೆಸುತ್ತಿದ್ದಾರೆ. ಕೆಲವರು ಪೊಲೀಸ ಮೇಲೆಯೇ ದಾಳಿ ನಡೆಸುತ್ತಿರುವ ವಿಡಿಯೊಗಳು ಕೂಡ ವೈರಲ್​ ಆಗುತ್ತಿದೆ. ಇದುವರೆಗೆ ಹಿಂಸಾಚಾರದಲ್ಲಿ 150ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದಾರೆ.

ಬಾಂಗ್ಲಾ ವಿಮೋಚನೆ ಹೋರಾಟದಲ್ಲಿ (Bangladesh Protests) ಭಾಗಿಯಾಗಿದ್ದವರ ಕುಟುಂಬದವರಿಗೆ ಸರ್ಕಾರಿ ಉದ್ಯೋಗದಲ್ಲಿ ಶೇ. 30ರಷ್ಟು ಮೀಸಲಾತಿ (Job Reservation) ನೀಡುವ ನಿಯಮವನ್ನು ಕೋರ್ಟ್‌ ಹಿಂತೆಗೆದುಕೊಂಡಿದೆ. ಆದರೆ ಸಂಪೂರ್ಣ ರದ್ದುಗೊಳಿಸಲಿಲ್ಲ. ಶೇ. 30ರಷ್ಟಿದ್ದ ಮೀಸಲಾತಿಯನ್ನು ಶೇ. 5ಕ್ಕೆ ಇಳಿಸಲಾಗಿದೆ. ಇದೇ ಕಾರಣಕ್ಕೆ ಇಲ್ಲಿ ಹೋರಾಟ ನಡೆಸುತ್ತಿದ್ದಾರೆ.

ಏನಿದು ವಿವಾದ?

1971ರಲ್ಲಿ ಪಾಕಿಸ್ತಾನದಿಂದ ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಯೋಧರು ಮತ್ತು ಹೋರಾಟಗಾರರ ಸಂಬಂಧಿಕರಿಗೆ ಉದ್ಯೋಗಗಳಲ್ಲಿ ಶೇ. 30ರಷ್ಟು ಮೀಸಲಾತಿ ಘೋಷಣೆಯಾದ ಬಳಿಕ ವಿದ್ಯಾರ್ಥಿಗಳು ಪ್ರತಿಭಟನೆಗೆ ಇಳಿದಿದ್ದರು. ರಾಜಧಾನಿ ಢಾಕಾ ಮತ್ತು ಇತರ ನಗರಗಳಲ್ಲಿ ನೂರಾರು ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಕಳೆದ ತಿಂಗಳಿನಿಂದ ರ‍್ಯಾಲಿಗಳನ್ನು ಪ್ರಾರಂಭಿಸಿದರು. ಶಾಂತವಾಗಿಯೇ ನಡೆಯುತ್ತಿದ್ದ ಪ್ರತಿಭಟನೆಕಾರರ ಮೇಲೆ ಪ್ರಧಾನಿ ಶೇಖ್‌ ಹಸೀನಾ ಅವರ ಆಡಳಿತರೂಢ ಅವಾಮಿ ಲೀಗ್‌ ಪಕ್ಷದ ಕಾರ್ಯಕರ್ತರು ದಾಳಿ ನಡೆಸಿದರು. ಆ ಬಳಿಕ ಪ್ರತಿಭಟನೆ ಹಿಂಸೆಯ ರೂಪ ತಾಳಿತು.

ಇದನ್ನೂ ಓದಿ Bangla Agitation Explainer: ಬಾಂಗ್ಲಾದೇಶ ಏಕೆ ಹೊತ್ತಿ ಉರಿಯುತ್ತಿದೆ? ವಿದ್ಯಾರ್ಥಿಗಳು ಏಕೆ ಹಿಂಸಾಚಾರಕ್ಕಿಳಿದಿದ್ದಾರೆ?

ದೇಶದ ವಿವಿಧ ಸ್ಥಳಗಳಲ್ಲಿ ಪ್ರತಿಭಟನೆಗಳು ಮತ್ತು ಗಲಭೆಗಳು ನಡೆಯುತ್ತಿರುವ ಕಾರಣ ಸುಮಾರು 1,000ರಷ್ಟು ಆತಂಕಿತ ಭಾರತೀಯ ವಿದ್ಯಾರ್ಥಿಗಳು ಭಾರತಕ್ಕೆ ಮರಳಿದ್ದಾರೆ. 778 ಭಾರತೀಯರು ಭೂಮಾರ್ಗದಲ್ಲಿ ತಾಯ್ನೆಲಕ್ಕೆ ಬಂದು ಸೇರಿದ್ದು, 200ಕ್ಕೂ ಅಧಿಕ ವಿದ್ಯಾರ್ಥಿಗಳು ವಿಮಾನದಲ್ಲಿ ಮರಳಿದ್ದಾರೆ.

ಈ ಪ್ರತಿಭಟನೆಯ ಹಿಂದೆ ರಾಜಕೀಯದ ಛಾಯೆಯೂ ಇದೆ. 1971ರ ಬಾಂಗ್ಲಾ ವಿಮೋಚನೆ ಹೋರಾಟದಲ್ಲಿ ಮುಂಚೂಣಿಯಲ್ಲಿ ಇದ್ದುದು ಶೇಖ್‌ ಮುಜಿಬುರ್‌ ರೆಹಮಾನ್‌ ಅವರ ಅವಾಮಿ ಲೀಗ್‌ ಪಕ್ಷ. ಈಗ ಪ್ರಧಾನಿ ಆಗಿರುವ ಶೇಖ್‌ ಹಸೀನಾ ಇವರ ಮಗಳು. ಹಾಗಾಗಿ ಅವಾಮಿ ಲೀಗ್‌ನ ಬೆಂಬಲಿಗರಿಗೆ ಮಾತ್ರ ಈ ಮೀಸಲಾತಿಯಿಂದ ಲಾಭ ಆಗುತ್ತದೆ ಎನ್ನುವುದು ಪ್ರತಿಪಕ್ಷಗಳ ಆರೋಪ.

Continue Reading

ಕ್ರೀಡೆ

Viral Video: ವಿಂಡೀಸ್​ ವೇಗಿಯ ಸಿಕ್ಸರ್​ ಹೊಡೆತಕ್ಕೆ ಸ್ಟೇಡಿಯಂನ ಮೇಲ್ಛಾವಣಿಯ ಹೆಂಚುಗಳು ಪುಡಿಪುಡಿ

Viral Video: ಶಮಾರ್‌ ಜೋಸೆಫ್‌(Shamar Joseph) ಅವರ ಕ್ರಿಕೆಟ್​ ಜರ್ನಿಯೇ ಒಂದು ರೋಚಕ. ಅವರ ಕ್ರಿಕೆಟ್​ ಬದುಕಿನ ಸ್ಟೋರಿ ಯಾವ ಸಿನಿಮಾ ಕಥೆಗೂ ಕಡಿಮೆಯೇನಲ್ಲ. ಶಮಾರ್‌ ಜೋಸೆಫ್‌ ಶ್ರೀಮಂತ ಕುಟುಂಬದಲ್ಲಿ ಅಥವಾ ಕ್ರಿಕೆಟ್​ ಹಿನ್ನೆಲೆಯಿಂದ ಬಂದ ಪ್ರತಿಭೆಯಲ್ಲ.

VISTARANEWS.COM


on

Viral Video
Koo

ಲಂಡನ್​: ಇಂಗ್ಲೆಂಡ್​ ವಿರುದ್ಧ ಸಾಗುತ್ತಿರುವ ದ್ವಿತೀಯ ಟೆಸ್ಟ್​(England vs West Indies 2nd Test) ಪಂದ್ಯದಲ್ಲಿ ವಿಂಡೀಸ್​ ವೇಗಿ ಶಮರ್‌ ಜೋಸೆಫ್‌(Shamar Joseph) ಬಾರಿಸಿದ ಸಿಕ್ಸರ್​ನ(shamar joseph six) ವಿಡಿಯೊವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್(Viral Video)​ ಆಗಿದೆ. ಅವರ ಈ ಸಿಕ್ಸರ್​ ಹೊಡೆತಕ್ಕೆ ನಾಟಿಂಗ್‌ಹ್ಯಾಮ್​ನ ಟ್ರೆಂಟ್ ಬ್ರಿಡ್ಜ್ ಸ್ಟೇಡಿಯಂನ(Trent Bridge, Nottingham) ಮೇಲ್ಛಾವಣಿಯ ಹೆಂಚುಗಳು ಪುಡಿಪುಡಿಯಾಗಿದೆ.

ಇಂಗ್ಲೆಂಡ್‌ನ ಸ್ಟಾರ್ ಬೌಲರ್ ಗಸ್ ಅಟ್ಕಿನ್ಸನ್ ಓವರ್​ನ ಎರಡನೇ ಎಸೆತದಲ್ಲಿ ಶಮರ್ ಜೋಸೆಫ್ ಈ ಗಗನಚುಂಬಿ ಸಿಕ್ಸರ್ ಬಾರಿಸಿದರು. ಈ ಸಿಕ್ಸರ್​ಗೆ ಸ್ಟೇಡಿಯಂನ ಮೇಲ್ಛಾವಣಿಯ ಹೆಂಚುಗಳು ಪುಡಿಪುಡಿಯಾಗಿ ಗ್ಯಾಲರಿಯಲ್ಲಿ ಕುಳಿತಿದ್ದ ಪ್ರೇಕ್ಷಕರ ತಲೆ ಮೇಲೆ ಬಿದ್ದಿದೆ. ಈ ದೃಶ್ಯವನ್ನು ವಿಡಿಯೊದಲ್ಲಿ ನೋಡಬಹುದಾಗಿದೆ. ಜೋಸೆಫ್‌ ಈ ಪಂದ್ಯದಲ್ಲಿ 27 ಎಸೆತಗಳಿಂದ 33 ರನ್​ ಬಾರಿಸಿದರು. ಅವರ ಈ ಬ್ಯಾಟಿಂಗ್​ ಇನಿಂಗ್ಸ್​ನಲ್ಲಿ 2 ಸಿಕ್ಸರ್​ ಮತ್ತು 5 ಬೌಂಡರಿ ದಾಖಲಾಯಿತು.

ಸದ್ಯ ಈ ಪಂದ್ಯ ಡ್ರಾಗೊಳ್ಳುವ ಸ್ಥಿತಿಯಲ್ಲಿದೆ. ಮೊದಲು ಬ್ಯಾಟಿಂಗ್​ ನಡೆಸಿದ ಇಂಗ್ಲೆಂಡ್​ ಮೊದಲ ಇನಿಂಗ್ಸ್​ನಲ್ಲಿ 416 ರನ್​ ಬಾರಿಸಿತ್ತು. ಇದಕ್ಕುತ್ತರವಾಗಿ ಬ್ಯಾಟಿಂಗ್​ ನಡೆಸಿದ್ದ ವಿಂಡೀಸ್​ 457 ರನ್​ ಬಾರಿಸಿ 41 ರನ್​ ಮುನ್ನಡೆ ಸಾಧಿಸಿತ್ತು. ಇದೀಗ ದ್ವಿತೀಯ ಇನಿಂಗ್ಸ್​ ಆರಂಭಿಸಿರುವ ಇಂಗ್ಲೆಂಡ್​ 3 ವಿಕೆಟ್​ಗೆ 250 ಗಡಿ ದಾಡಿ ಬ್ಯಾಟಿಂಗ್​ ನಡೆಸುತ್ತಿದೆ. ಇಂದು ನಾಲ್ಕನೇ ದಿನವಾಗಿದ್ದು ಇನ್ನೊಂದು ದಿನದ ಆಟ ಮಾತ್ರ ಬಾಕಿ ಉಳಿದಿದೆ. ಹೀಗಾಗಿ ಪಂದ್ಯ ಡ್ರಾಗೊಳ್ಳುವ ಸಾಧ್ಯತೆ ಅಧಿಕ.

ಶಮಾರ್‌ ಜೋಸೆಫ್‌(Shamar Joseph) ಅವರ ಕ್ರಿಕೆಟ್​ ಜರ್ನಿಯೇ ಒಂದು ರೋಚಕ. ಅವರ ಕ್ರಿಕೆಟ್​ ಬದುಕಿನ ಸ್ಟೋರಿ ಯಾವ ಸಿನಿಮಾ ಕಥೆಗೂ ಕಡಿಮೆಯೇನಲ್ಲ. ಶಮಾರ್‌ ಜೋಸೆಫ್‌ ಶ್ರೀಮಂತ ಕುಟುಂಬದಲ್ಲಿ ಅಥವಾ ಕ್ರಿಕೆಟ್​ ಹಿನ್ನೆಲೆಯಿಂದ ಬಂದ ಪ್ರತಿಭೆಯಲ್ಲ. ಅಚ್ಚರಿ ಎಂದರೆ ಯಾವುದೇ ವೃತ್ತಿಪರ ಕ್ರಿಕೆಟ್‌ ಕೂಡ ಆಟದೆ ಅವರು ರಾಷ್ಟ್ರೀಯ ತಂಡಕ್ಕೆ ಪದಾರ್ಪಣೆ ಮಾಡಲು ನೆರವಾದದ್ದು ಕೆರಿಬಿಯನ್‌ ಪ್ರೀಮಿಯರ್‌ ಲೀಗ್‌. ಈ ಟೂರ್ನಿಗೆ ಆಯ್ಕೆಯಾದ ಬಳಿಕ ಶಮಾರ್‌ ಅವರ ಬದುಕಿನ ದಿಕ್ಕೇ ಬದಲಾಯಿತು.

ಇದನ್ನೂ ಓದಿ IPL 2025: ರಾಹುಲ್​ ಆರ್​ಸಿಬಿಗೆ, ಪಂತ್​ ಸಿಎಸ್​ಕೆ ಸೇರ್ಪಡೆ ಖಚಿತ

ಸಾವನ್ನೇ ಗೆದಿದ್ದ ಶಮಾರ್‌ ಜೋಸೆಫ್‌


ಜೋಸೆಫ್‌ ಅವರು ಊರಲ್ಲಿ ಕೆಲಸ ಮಾಡುತ್ತಿದ್ದ ವೇಳೆ ತಮ್ಮ ಮೇಲೆ ಮರ ಬೀಳುವುದರಿಂದ ಅಲ್ಪದರಲ್ಲೇ ಪಾರಾಗಿ, ಸಾವಿನಿಂದ ಬಚಾವಾಗಿದ್ದರು. ಕೇವಲ 400 ಜನಸಂಖ್ಯೆಯುಳ್ಳ ಕೆರಿಬಿಯನ್‌ನ ಹಳ್ಳಿಯೊಂದರ ಪ್ರತಿಭೆಯಾಗಿರುವ ಜೋಸೆಫ್​ ಕಾಡಲ್ಲಿ ಮರ ಕಡಿಯುವ ವೃತ್ತಿ ಮಾಡುತ್ತಿದ್ದರು. ಇದಾದ ಬಳಿಕ ಅವರು 2021ರ ವರೆಗೆ ಬಾರ್ಬಿಸ್‌ ಎಂಬಲ್ಲಿ ಭದ್ರತಾ ಸಿಬ್ಬಂದಿಯಾಗಿ ಕೆಲಸ ಮಾಡುತ್ತಿದ್ದರು.

ಹಣ್ಣು, ಬಾಟಲ್​ ಮೂಲಕ ಬೌಲಿಂಗ್​ ಅಭ್ಯಾಸ


ಜೋಸೆಫ್​ ಅವರು ಕ್ರಿಕೆಟ್​ಗೆ ಮರಳಿದ್ದು ಮತ್ತು ಬೌಲಿಂಗ್​ ಅಭ್ಯಾಸ ನಡೆಸಿದ್ದು ಪ್ಲಾಸ್ಟಿಕ್‌ ಬಾಟಲ್‌ ಮತ್ತು ಹಣ್ಣುಗಳನ್ನೇ ಎಸೆದು. ಈ ವಿಚಾರ ನಂಬಲು ಕಷ್ಟವಾದರೂ ಕೂಡ ಇದನ್ನು ನಂಬಲೇ ಬೇಕು. 2018ರ ವರೆಗೂ ಅವರ ಊರಿನಲ್ಲಿ ಮೊಬೈಲ್, ಇಂಟರ್ನೆಟ್‌ ಸೇವೆ ಕೂಡ ಇರಲಿಲ್ಲ. ಇಂತಹ ಕುಗ್ರಾಮದಿಂದ ಬಂದ ಜೋಸೆಫ್ ಇಂದು ವಿಂಡೀಸ್‌ನ ಆಪತ್ಬಾಂಧವ. ಅವರ ಪ್ರದರ್ಶನಕ್ಕೆ ಇಡೀ ಕ್ರಿಕೆಟ್​ ಜಗತ್ತೇ ಸಲಾಂ ಹೊಡೆದಿದೆ. ಸಚಿನ್‌ ತೆಂಡೂಲ್ಕರ್‌, ಬ್ರಿಯಾನ್​ ಲಾರಾ, ಕಾರ್ಲ್‌ ಹೂಪರ್‌ ಸೇರಿದಂತೆ ಹಲವರು ಜೋಸೆಫ್​ ಕ್ರಿಕೆಟ್​ ಸಾಧನೆಗೆ ಶ್ಲಾಘನೆ ವ್ಯಕ್ತಪಡಿಸಿದ್ದಾರೆ.

Continue Reading

ಕ್ರೀಡೆ

IPL 2025: ರಾಹುಲ್​ ಆರ್​ಸಿಬಿಗೆ, ಪಂತ್​ ಸಿಎಸ್​ಕೆ ಸೇರ್ಪಡೆ ಖಚಿತ

IPL 2025: ಈ ಬಾರಿ ಎಲ್ಲ 10 ತಂಡಗಳಿಗೆ ಗರಿಷ್ಠ 3 ಆಟಗಾರರನ್ನು ರಿಟೇನ್​ ಮಾಡಿಕೊಳ್ಳಲು ಬಿಸಿಸಿಐ ಅವಕಾಶ ಕಲ್ಪಿಸಲಿದೆ ಎಂದು ವರದಿಯಾಗಿದೆ. ಜತೆಗೆ ಹರಾಜಿನಲ್ಲಿ ಒಂದು ರೈಟ್​ ಟು ಮ್ಯಾಚ್​ (ಆರ್​ಟಿಎಂ) ಕಾರ್ಡ್​ ಬಳಸಲು ಅವಕಾಶ ನೀಡಲಾಗುತ್ತದೆ ಎನ್ನಲಾಗಿದೆ.

VISTARANEWS.COM


on

IPL 2025
Koo

ಬೆಂಗಳೂರು: ಮುಂದಿನ ವರ್ಷ ನಡೆಯುವ 18ನೇ ಆವೃತ್ತಿಯ ಐಪಿಎಲ್​ ಟೂರ್ನಿಗೆ(IPL 2025 Mega Auction) ಇದೇ ವರ್ಷಾಂತ್ಯದಲ್ಲಿ ಆಟಗಾರರ ಮಿನಿ ಹರಾಜು ನಡೆಯಲಿದೆ. ಈಗಾಗಲೇ ಕೆಲ ಫ್ರಾಂಚೈಸಿಗಳು ಸ್ಟಾರ್​ ಆಟಗಾರರನ್ನು ಸಂಪರ್ಕಿಸಿದ್ದು ತಮ್ಮ ತಂಡಕ್ಕೆ ಸೆಳೆಯುವ ಕಸರತ್ತು ಆರಂಭಿಸಿವೆ. ಈ ಮಧ್ಯೆ ಕನ್ನಡಿಗ ಕೆ.ಎಲ್​ ರಾಹುಲ್​(KL Rahul) ತವರು ತಂಡವಾದ ಆರ್​ಸಿಬಿಗೆ, ಡೆಲ್ಲಿ ಕ್ಯಾಪಿಟಲ್ಸ್​ ತಂಡದ ರಿಷಭ್​ ಪಂತ್​ ಚೆನ್ನೈ ಸೂಪರ್​ ಕಿಂಗ್ಸ್​ಗೆ ಸೇರ್ಪಡೆಗೊಳ್ಳಲಿದ್ದಾರೆ ಎಂದು ಸಾಮಾಜಿಕ ಜಾಲತಾಣದಲ್ಲಿ ಭಾರೀ ಚರ್ಚೆಗಳು ಆರಂಭವಾಗಿದೆ.

ಈ ಬಾರಿ ಎಲ್ಲ 10 ತಂಡಗಳಿಗೆ ಗರಿಷ್ಠ 3 ಆಟಗಾರರನ್ನು ರಿಟೇನ್​ ಮಾಡಿಕೊಳ್ಳಲು ಬಿಸಿಸಿಐ ಅವಕಾಶ ಕಲ್ಪಿಸಲಿದೆ ಎಂದು ವರದಿಯಾಗಿದೆ. ಜತೆಗೆ ಹರಾಜಿನಲ್ಲಿ ಒಂದು ರೈಟ್​ ಟು ಮ್ಯಾಚ್​ (ಆರ್​ಟಿಎಂ) ಕಾರ್ಡ್​ ಬಳಸಲು ಅವಕಾಶ ನೀಡಲಾಗುತ್ತದೆ ಎನ್ನಲಾಗಿದೆ. ಆಟಗಾರರು ಮೂಲ ತಂಡವನ್ನು ತೊರೆದು ಬೇರೆ ತಂಡದ ಪರ ಆಡಲು ಬಯಸಿದರೆ ಇದಕ್ಕೆ ಫ್ರಾಂಚೈಸಿ ಕೂಡ ಒಪ್ಪಿಗೆ ನೀಡಬೇಕು ಎಂಬ ನಿಯಮ ಚಾಲ್ತಿಯಲ್ಲಿರುವ ಕಾರಣ ಕೆಲ ಆಟಗಾರರು ತಮ್ಮನ್ನು ಸಂಪರ್ಕಿಸಿದ ತಂಡ ಸೇರಲು ತುದಿಗಾಲಲ್ಲಿ ನಿಂತಿದ್ದಾರೆ ಎನ್ನಲಾಗಿದೆ.

ಕೆಲ ಫ್ರಾಂಚೈಸಿಗಳು 6-8 ಆಟಗಾರರನ್ನೂ ರಿಟೇನ್​ ಮಾಡಿಕೊಳ್ಳಲು ಅವಕಾಶ ನೀಡುವಂತೆ ಒತ್ತಾಯಿಸಿದ್ದಾರೆ. ಆದರೆ, ಐಪಿಎಲ್​ ಮತ್ತು ಬಿಸಿಸಿಐ ಕೇವಲ 3 ಆಟಗಾರರನ್ನು ರಿಟೇನ್​ ಮಾಡಿಕೊಳ್ಳುವ ಅವಕಾಶ ಮಾತ್ರ ನೀಡಲಿದೆ ಎನ್ನಲಾಗಿದೆ. ಒಂದೊಮ್ಮೆ 6-8 ಆಟಗಾರರ ರಿಟೇನ್​ಗೆ ಅವಕಾಶ ಕೊಟ್ಟರೆ ಸ್ಟಾರ್​ ಆಟಗಾರರು ಕೆಲ ಸೀಮಿತ ತಂಡದಲ್ಲಿಯೇ ಉಳಿದುಕೊಳ್ಳುತ್ತಾರೆ. ಹೀಗಾಗಿ 3 ರಿಟೇನ್​ಗೆ ಮಾತ್ರ ಅವಕಾಶ ಸಿಗಬಹುದು.

ಆರ್​ಸಿಬಿ ಸೇರಲಿದ್ದಾರಾ ರಾಹುಲ್​?

ಲಕ್ನೋ ತಂಡದ ಮಾಲಿಕ ಗೋಯೆಂಕಾ ತೋರಿದ್ದ ವರ್ತನೆನಿಂದ ಬೇಸರಗೊಂಡಿರು ರಾಹುಲ್ ಈ ಬಾರಿ ಲಕ್ನೋ ತೊರೆಯುವುದು ಖಚಿತವಾಗಿದೆ. ಮೂಲ್ಳ ಪ್ರಕಾರ ಅವರು ಆರ್​ಸಿಬಿ ತಂಡ ಸೇರಲಿದ್ದಾರೆ ಎನ್ನಲಾಗಿದೆ. ಆರ್​ಸಿಬಿ ಪರ ಆಡುವುದು ಕೂಡ ಅವರ ಬಯಕೆಯಾಗಿದೆ. ಇದೇ ವರ್ಷ ನಡೆದಿದ್ದ ಐಪಿಎಲ್​ ವೇಳೆ ಆರ್.ಅಶ್ವಿನ್ ಜತೆಗಿನ ಕುಟ್ಟಿ ಸ್ಟೋರೀಸ್ ಕಾರ್ಯಕ್ರಮದಲ್ಲಿ ಮಾತನಾಡಿದ್ದ ಕೆಎಲ್ ರಾಹುಲ್, 2013ರಲ್ಲಿ ವಿರಾಟ್ ಕೊಹ್ಲಿ ಅವರು ತನ್ನನ್ನು ಆರ್​ಸಿಬಿ ತಂಡಕ್ಕೆ ಸೇರಿಸಿಕೊಂಡರು. ನಾನು ಬೆಂಗಳೂರು ತಂಡದಲ್ಲಿ ಆಡಲು ಇಷ್ಟಪಡುತ್ತೇನೆ. ನಾನು ಅಲ್ಲಿದಂದಲೇ ಈ ಪಯಣ ಆರಂಭಿಸಿದೆ. ಅಲ್ಲಿಯೇ ಇದನ್ನು ಅಂತ್ಯಗೊಳಿಸಲು ಬಯುಸುತ್ತೇನೆ. ಅದು ತನ್ನ ತಲೆಯಲ್ಲಿದೆ ಎಂದು ಹೇಳಿದ್ದರು. 

ರಾಹುಲ್​ ಆರ್​ಸಿಬಿ ಸೇರಲಿದ್ದಾರೆ ಎಂಬ ಸುದ್ದಿ ಕೇಳಿದ್ದೇ ತಡ ಕನ್ನಡಿಗರು ಮತ್ತು ಆರ್​ಸಿಬಿ ಅಭಿಮಾನಿಗಳು ಆರ್​ಸಿಬಿ ಜೆರ್ಸಿಯಲ್ಲಿ ರಾಹುಲ್​ ಅವರ ಫೋಟೊ ಎಡಿಟ್​ ಮಾಡಿ ತವರಿಗೆ ಸ್ವಾಗತ ಎನ್ನುವ ಪೋಸ್ಟರ್​ ಶೇರ್​ ಮಾಡಲಾರಂಭಿಸಿದ್ದಾರೆ. ಈ ಪೋಸ್ಟರ್​ಗಳು ವೈರಲ್​ ಆಗುತ್ತಿವೆ.

ಇದನ್ನೂ ಓದಿ IPL 2025: ಕೆಕೆಆರ್​ ತಂಡದ ಮೆಂಟರ್​ ಆಗಲಿದ್ದಾರಾ ರಾಹುಲ್ ದ್ರಾವಿಡ್?

ಡೆಲ್ಲಿ ಕ್ಯಾಪಿಟಲ್ಸ್(Delhi Capitals)​ ತಂಡದ ನಾಯಕನಾಗಿರುವ ರಿಷಭ್ ಪಂತ್(Rishabh Pant) ರಿಟೈನ್​ ಆಗಲು ಆಸಕ್ತಿ ಹೊಂದಿಲ್ಲ, ಅವರು ಚೆನ್ನೈ ಸೂಪರ್​ ಕಿಂಗ್ಸ್​ ಪರ ಆಡಲಿದ್ದಾರೆ ಎಂದು ವರದಿಯಾಗಿದೆ. ಮಹೇಂದ್ರ ಸಿಂಗ್​ ಧೋನಿ ಮುಂದಿನ ವರ್ಷ ಐಪಿಎಲ್​ ಆಡುವುದು ಖಚಿತತೆ ಇಲ್ಲ. ಇಂಪ್ಯಾಕ್ಟ್​ ನಿಯಮ ಇದ್ದರೆ ಆಡುವುದಾಗಿ ಫ್ರಾಂಚೈಸಿ ಮೂಲಗಳು ಈಗಾಗಲೇ ಮಾಹಿತಿ ನೀಡಿದೆ. ಈ ಬಾರಿಯೇ ಧೋನಿ ನಿವೃತ್ತಿಯಾಗಬೇಕಿತ್ತು. ಆದರೆ ಅವರು ಇನ್ನೂ ನಿವೃತ್ತಿ ಪ್ರಕಟಿಸಿಲ್ಲ. ತಂಡದಲ್ಲಿ ಸೂಕ್ತ ವಿಕೆಟ್​ ಕೀಪರ್​ ಇಲ್ಲದ ಕಾರಣ ಧೋನಿ ತಮ್ಮ ಕಾಲು ನೋವಿನ ಮಧ್ಯೆಯೂ ಸಂಪೂರ್ಣವಾಗಿ ಕೀಪಿಂಗ್​ ನಡೆಸಿದ್ದರು. ಧೋನಿ ಸ್ಥಾನಕ್ಕೆ ಪಂತ್​ ಅವರನ್ನು ಆಯ್ಕೆ ಮಾಡುವ ಸಾಧ್ಯತೆಯೊಂದು ಕಂಡುಬಂದಿದೆ.

Continue Reading
Advertisement
Guru Purnima 2024 mahotsava celebrated in different parts of the country
ಬೆಂಗಳೂರು ಗ್ರಾಮಾಂತರ12 mins ago

Guru Purnima 2024 : ವಿವಿಧೆಡೆ ಅದ್ಧೂರಿಯಾಗಿ ನೆರವೇರಿದ ಗುರುಪೂರ್ಣಿಮಾ ಮಹೋತ್ಸವ

Paris Olympics 2024
ಪ್ರಮುಖ ಸುದ್ದಿ24 mins ago

Paris Olympics 2024 : ಒಲಿಂಪಿಕ್ಸ್​ನಲ್ಲಿ ಅತಿ ಹೆಚ್ಚು ಪದಕಗಳನ್ನು ಪಡೆದ ಅಥ್ಲೀಟ್​ ಯಾರು? ಇಲ್ಲಿದೆ ಈ ಶ್ರೇಷ್ಠ ಕ್ರೀಡಾಪಟುವಿನ ವಿವರ

Viral Video
ವಿದೇಶ24 mins ago

Viral Video: ಎರಡು ವಾರಗಳ ಹಿಂದೆಯಷ್ಟೇ ಮದುವೆಯಾಗಿದ್ದ ಭಾರತೀಯ ಯುವಕ ಅಮೆರಿಕದಲ್ಲಿ ಗುಂಡೇಟಿಗೆ ಬಲಿ; ವಿಡಿಯೋ ಫುಲ್‌ ವೈರಲ್‌

Jasmine Bhasin says her corneas got damaged
ಸಿನಿಮಾ25 mins ago

Jasmin Bhasin: ಲೆನ್ಸ್‌ ಧರಿಸಿ ಎಡವಟ್ಟು; ಕಣ್ಣು ಕಳೆದುಕೊಂಡ್ರಾ ಖ್ಯಾತ ನಟಿ?

Women's T20 World Cup
ಕ್ರೀಡೆ32 mins ago

Women’s T20 World Cup: ಬಾಂಗ್ಲಾದಲ್ಲಿ ಭುಗಿಲೆದ್ದ ಹಿಂಸಾಚಾರ; ಮಹಿಳಾ ಟಿ20 ವಿಶ್ವಕಪ್ ​ಸ್ಥಳಾಂತರ ಸಾಧ್ಯತೆ!

karnataka rain
ಮಳೆ44 mins ago

Karnataka Rain : ಭಾರಿ ಮಳೆ ಎಫೆಕ್ಟ್‌; ಬೆಳಗಾವಿಯಲ್ಲಿ 17 ಸಂಪರ್ಕ ಸೇತುವೆಗಳು ಜಲಾವೃತ

Actor Naresh Shares Emotional Video About His Baby And Taged Director Nag Ashwin
ಟಾಲಿವುಡ್1 hour ago

Actor Naresh: ನನ್ನ ಬೇಬಿಯನ್ನು ದಯವಿಟ್ಟು ಹುಡುಕಿಕೊಡಿ ಎಂದು ಗಳಗಳನೇ ಅತ್ತ ನಟ ನರೇಶ್‌!

Viral Video
ಕ್ರೀಡೆ1 hour ago

Viral Video: ವಿಂಡೀಸ್​ ವೇಗಿಯ ಸಿಕ್ಸರ್​ ಹೊಡೆತಕ್ಕೆ ಸ್ಟೇಡಿಯಂನ ಮೇಲ್ಛಾವಣಿಯ ಹೆಂಚುಗಳು ಪುಡಿಪುಡಿ

IT Employees
ಕರ್ನಾಟಕ1 hour ago

IT Employees: ಐಟಿ ನೌಕರರಿಗೆ ದಿನಕ್ಕೆ 14 ಗಂಟೆ ಕೆಲಸ; ಉದ್ಯೋಗಿಗಳ ಒಕ್ಕೂಟ ಆಕ್ರೋಶ, ಅದರ ವಾದ ಹೀಗಿದೆ

Kiccha Sudeep
ಸಿನಿಮಾ1 hour ago

Kiccha Sudeep: ಕನ್ನಡಿಗರ ಸ್ವಾಭಿಮಾನವೇ ಮುಖ್ಯ; ಫೋನ್ ಪೇ ಬ್ರ್ಯಾಂಡ್‌ ಅಂಬಾಸಿಡರ್ ಸ್ಥಾನ ತ್ಯಜಿಸುತ್ತಾರಾ ಕಿಚ್ಚ ಸುದೀಪ್?

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Rain
ಮಳೆ1 day ago

Karnataka Rain : ಭಾರಿ ಮಳೆಗೆ ಮನೆ ಗೋಡೆ ಕುಸಿತ; ಕೊಟ್ಟಿಗೆಯಲ್ಲಿದ್ದ ಜಾನುವಾರುಗಳು ಸಾವು

karnataka Rain
ಮಳೆ1 day ago

Karnataka Rain : ಹಳ್ಳ ದಾಟಲು ಹೋಗಿ ನೀರುಪಾಲಾದ ಜಾನುವಾರು; ಬಿರುಗಾಳಿಗೆ ಕಳಚಿದ ವಿಂಡ್‌ ಫ್ಯಾನ್‌

karnataka Rain
ಮಳೆ2 days ago

Karnataka Rain : ಬೀದಿಗೆ ತಂದ ರಣಮಳೆ; ಮನೆ ಕುಸಿದು ಬಿದ್ದು 9 ತಿಂಗಳ ಗರ್ಭಿಣಿ ನರಳಾಟ

Karnataka Rain
ಮಳೆ2 days ago

Karnataka Rain : ರಾಜ್ಯದಲ್ಲಿ ಮಳೆಯ ಆರ್ಭಟ; ರಾತ್ರಿ ಕಳೆದು ಬೆಳಗಾಗುವುದರೊಳಗೆ ಕಂದಕ ನಿರ್ಮಾಣ

Karnataka Rain
ಮಳೆ3 days ago

Karnataka Rain : ಭಾರಿ ಮಳೆ ಎಫೆಕ್ಟ್‌; ಉಕ್ಕಿ ಹರಿಯುತ್ತಿದ್ದ ನದಿಯಲ್ಲಿ ಕೊಚ್ಚಿ ಹೋದ ರಾಸು

Uttara Kannada Landslide
ಮಳೆ3 days ago

Uttara Kannada Landslide: ಶಿರೂರು ಗುಡ್ಡ ಕುಸಿತ; ಅಖಾಡಕ್ಕಿಳಿದ ಜಿಯೊಲಾಜಿಕಲ್ ಸರ್ವೆ ಆಫ್ ಇಂಡಿಯಾ ಟೀಂ

Karnataka Rain
ಮಳೆ5 days ago

Karnataka Rain : ಕಾರವಾರದಲ್ಲಿ ಮಳೆ ಅವಾಂತರ; ಮನೆ ಮೇಲೆ ಗುಡ್ಡ ಕುಸಿದು ವೃದ್ಧ ಸಾವು

karnataka Rain
ಮಳೆ5 days ago

Karnataka Rain : ಭಾರಿ ಮಳೆಗೆ ನಿಯಂತ್ರಣ ತಪ್ಪಿ ಕೆರೆಗೆ ಉರುಳಿ ಬಿದ್ದ ಕಾರು; ನಾಲ್ವರು ಪ್ರಾಣಾಪಾಯದಿಂದ ಪಾರು

karnataka Weather Forecast
ಮಳೆ6 days ago

Karnataka Weather : ವ್ಯಾಪಕ ಮಳೆ ಎಚ್ಚರಿಕೆ; ನಾಳೆಯೂ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

karnataka Rain
ಮಳೆ6 days ago

Karnataka Rain : ಶಾಲಾ-ಕಾಲೇಜಿಗೆ ಈ ದಿನ ರಜಾ; ಅಬ್ಬರಿಸುತ್ತಿರುವ ಮಳೆಗೆ ಮನೆಯಲ್ಲೇ ಎಲ್ಲರೂ ಸಜಾ!

ಟ್ರೆಂಡಿಂಗ್‌