Dr Bro: ಸೋಷಿಯಲ್​ ಮೀಡಿಯಾ ಸ್ಟಾರ್‌ಗಳ ಮೇಲೆ ಹೆಚ್ಚಾಯ್ತು ಕ್ರೇಜ್‌! ನಿಮಗ್ಯಾರಿಷ್ಟ? - Vistara News

ವೈರಲ್ ನ್ಯೂಸ್

Dr Bro: ಸೋಷಿಯಲ್​ ಮೀಡಿಯಾ ಸ್ಟಾರ್‌ಗಳ ಮೇಲೆ ಹೆಚ್ಚಾಯ್ತು ಕ್ರೇಜ್‌! ನಿಮಗ್ಯಾರಿಷ್ಟ?

Dr Bro:  ಇತ್ತೇಚೆಗೆ ಬೆಳ್ಳೆ ತೆರೆ ಮಾತ್ರವಲ್ಲ ಸೋಷಿಯಲ್‌ ಮೀಡಿಯಾ ಸ್ಟಾರ್‌ಗಳು ಉದ್ಭವವಾಗುತ್ತಿದ್ದಾರೆ. ಹಲವು ಕಂಟೆಂಟ್‌ ಕ್ರಿಯೇಟರ್‌ಗಳು ತಮ್ಮದೇ ಆದ ಫ್ಯಾನ್ಸ್‌ ಫಾಲೋವರ್ಸ್‌ ಹೊಂದಿದ್ದಾರೆ.

VISTARANEWS.COM


on

Dr Bro shreenaval kishori Craze social media stars
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಸಿನಿಮಾ ಸ್ಟಾರ್‌ಗಳಿಗೆ ಕ್ರಶ್‌ ಆಗಿರುವುದು ನಾವು ನೋಡಿದ್ದೇವೆ. ಅದೇ ರೀತಿ ತಮ್ಮ ಮೆಚ್ಚಿನ ನಟನ ನಟಿಯರನ್ನು ಫ್ಯಾನ್ಸ್‌ ಆರಾಧಿಸಿರುವುದನ್ನೂ ಕಂಡಿದ್ದೇವೆ. ಇತ್ತೇಚೆಗೆ ಬೆಳ್ಳೆ ತೆರೆ ಮಾತ್ರವಲ್ಲ ಸೋಷಿಯಲ್‌ ಮೀಡಿಯಾ ಸ್ಟಾರ್‌ಗಳು ಉದ್ಭವವಾಗುತ್ತಿದ್ದಾರೆ. ಹಲವು ಕಂಟೆಂಟ್‌ ಕ್ರಿಯೇಟರ್‌ಗಳು ತಮ್ಮದೇ ಆದ ಫ್ಯಾನ್ಸ್‌ ಫಾಲೋವರ್ಸ್‌ ಹೊಂದಿದ್ದಾರೆ. . ಅಶ್ಲೀಲತೆ, ಕೆಟ್ಟ ಸಂದೇಶ ಮೂಲಕ ರಾತ್ರೋರಾತ್ರಿ ಸ್ಟಾರ್​ ಆದವರೂ ಇದೇ ಸೋಷಿಯಲ್​ ಮೀಡಿಯಾದಲ್ಲಿ ಇದ್ದರೆ, ಕಠಿಣ ಪರಿಶ್ರಮದಿಂದ, ಜನರಿಗೆ ಹತ್ತಿರವಾಗಿರುವ ವರ್ಗ ಕೂಡ ಇದೆ. ಆ ಸಾಲಿಗೆ ಡಾ.ಬ್ರೋ ​ ಗಗನ್ (Dr Bro)​ ಹಾಗೂ ಇನ್ನೊಬ್ಬಾಕೆ ಧಾರ್ಮಿಕತೆಯಿಂದ ಯುವ ಮನಸ್ಸುಗಳನ್ನು ಕದಿಯುತ್ತಿರುವ ಶ್ರೀನವಲ್​ ಕಿಶೋರಿ (shreenaval kishori) ಸೇರಿದ್ದಾರೆ. ಯಾರಿವರು? ಫೇಮಸ್‌ ಆಗಿದ್ದೇಕೆ? ಎಂಬುದನ್ನು ತಿಳಿಯಲು ಮುಂದೆ ಓದಿ.

ನಮಸ್ಕಾರ ದೇವ್ರು’ ಎಂದು ಯೂಟ್ಯೂಬ್‌ನಲ್ಲಿ ವಿಡಿಯೊ ಆರಂಭಿಸುವ ಡಾ. ಬ್ರೋ (Dr Bro) ನಿಜವಾದ ಹೆಸರು ಗಗನ್‌ ಶ್ರೀನಿವಾಸ್‌. ವಿದೇಶಗಳಿಗೆ ಹೋಗಿ ಅಲ್ಲಿ ಅದ್ಭುತ ಸಾಹಸಗಳನ್ನು ಮಾಡುವ, ಅಲ್ಲಿನ ಪರಿಸರ, ಜನರ ಬದುಕು, ರೀತಿ ನೀತಿಗಳನ್ನು ಪರಿಚಯಿಸುವ ಕಾರ್ಯವನ್ನು ಅವರು ಮಾಡುತ್ತ ಬಂದಿದ್ದಾರೆ. ಡಾ. ಬ್ರೋಗೆ ಈಗಾಗಲೇ ದೊಡ್ಡ ಅಭಿಮಾನಿ ವರ್ಗವಿದೆ. ಡಾ. ಬ್ರೋ ಅವರನ್ನು ಬಿಗ್‌ ಬಾಸ್‌ನಲ್ಲಿ ನೋಡಬೇಕು ಎಂಬುದು ಅವರ ಫ್ಯಾನ್ಸ್‌ ಆಸೆ. ಅರ್ಚಕರ ಮಗನಾಗಿ   ಕುಟುಂಬದಲ್ಲಿ ಹುಟ್ಟಿ, ಪೌರೋಹಿತ್ಯ ಕಲಿತು, ಪೂಜಾ ಪುನಸ್ಕಾರ ಮಾಡುತ್ತ ಜೀವನ ಸಾಗಿಸುತ್ತಿದ್ದ ಸಾಮಾನ್ಯ ಹುಡುಗ ಇವರು.  ಇಂದು ಯೂಟ್ಯೂಬ್​ ಮೂಲಕ ಕೋಟ್ಯಂತರ ಕನ್ನಡಿಗರ ಹೃದಯ ಗೆಲ್ಲುತ್ತಿದ್ದಾರೆ. ವಿಶೇಷತೆ ಎಂದರೆ ಯಾವ ದೇಶಕ್ಕೆ ಹೋದರೂ ಅಲ್ಲಿ ಕನ್ನಡದಲ್ಲಿಯೇ ಮಾತನಾಡಿ ಕನ್ನಡಿಗರ ಹೃದಯ ಗೆಲ್ಲುತ್ತಿದ್ದಾರೆ. 

ಇದನ್ನೂ ಓದಿ: Chiyaan Vikram: ʻKGFʼ ಅಸಲಿ ಕಥೆ ಹೇಳಲು ಬರ್ತಾ ಇದೆ ‘ತಂಗಲಾನ್’; ಸಿನಿಮಾ ಬಿಡುಗಡೆಗೆ ಕೌಂಟ್ ಡೌನ್!

ಇನ್ನು ಶ್ರೀನವಲ್​ ಕಿಶೋರಿ ,  ಸಂಸ್ಕೃತ, ತಮಿಳು, ಕನ್ನಡ ಭಾಷೆಗಳಲ್ಲಿ ನಿರರ್ಗಳವಾಗಿ ಪಠಣ ಮಾಡಿದ್ದಾರೆ. ಕೆಲವೊಮ್ಮೆ ನಿಜಕ್ಕೂ ಇವರೇ ಈ ಹಾಡು ಹಾಡಿದ್ದು ಹೌದಾ ಎನ್ನುವಷ್ಟರ ಮಟ್ಟಿಗೆ ಕಾಣಿಸುವುದೂ ಇದೆ.ವಿಭಿನ್ನ ರೀತಿಯ ಮೇಕಪ್​ ಹಾಗೂ ಹಾಡುವ ಶೈಲಿ. ಗಾಯನದಿಂದಲೇ ಪ್ರಸಿದ್ಧಿ ಪಡೆದಿರುವ, ಅಂತರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಂಡಿರುವ ಸೂರ್ಯಮಾಲಾ ಅವರನ್ನೇ ಹೋಲುವ, ಅವರ ದನಿಯನ್ನೇ ಹೋಲುವ ಅದ್ಭುತ ಪ್ರತಿಭೆ ಈಕೆಯದ್ದು. 

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ವಿದೇಶ

Viral Video: ಎರಡು ವಾರಗಳ ಹಿಂದೆಯಷ್ಟೇ ಮದುವೆಯಾಗಿದ್ದ ಭಾರತೀಯ ಯುವಕ ಅಮೆರಿಕದಲ್ಲಿ ಗುಂಡೇಟಿಗೆ ಬಲಿ; ವಿಡಿಯೋ ಫುಲ್‌ ವೈರಲ್‌

Viral Video: ಜೂ.29ರಂದು ಮೆಕ್ಸಿಕನ್‌ ಯುವತಿ ವಿವಿಯಾನಾ ಜಾಮೋರಾ ಜೊತೆ ಗವಿನ್‌ ವಿವಾಹ ನಡೆದಿತ್ತು. ಇವರಿಬ್ಬರು ಮನೆಗೆ ಮರಳುತ್ತಿರುವಾಗ ರಸ್ತೆಯಲ್ಲಿ ಮತ್ತೊಂದು ವಾಹನದ ಚಾಲಕನ ಜೊತೆ ಸಣ್ಣ ಜಗಳ ನಡೆದಿತ್ತು. ಪರಸ್ಪರ ಮಾತಿಗೆ ಮಾತು ಬೆಳೆದು ಜಗಳ ತಾರಕ್ಕೇರಿದೆ. ಕೋಪದ ಭರದಲ್ಲಿ ವಾಹನದೊಳಗಿದ್ದ ಆರೋಪಿ ಗವಿನ್‌ ಮೇಲೆ ಗುಂಡು ಹಾರಿಸುತ್ತಾನೆ.

VISTARANEWS.COM


on

Viral Video
Koo

ವಾಷಿಂಗ್ಟನ್‌: ರಸ್ತೆಯಲ್ಲಿ ನಡೆದ ಜಗಳ ತಾರಕಕ್ಕೇರಿ ದುಷ್ಕರ್ಮಿಯೋರ್ವ ಭಾರತ ಮೂಲದ ಅಮೆರಿಕನ್‌ ಮೇಲೆ ಗುಂಡು ಹಾರಿಸಿ ಕೊಲೆಗೈದಿರುವ ಘಟನೆ ಅಮೆರಿಕ(America)ದ ಇಂಡಿಯಾನಾದಲ್ಲಿ ನಡೆದಿದೆ. ಎರಡು ವಾರಗಳ ಹಿಂದೆಯಷ್ಟೇ ಮದುವೆಯಾಗಿದ್ದ ಭಾರತೀಯ ಮೂಲದ ಗವಿನ್‌ ದಸೌರ್‌ ದುಷ್ಕರ್ಮಿಯ ಗುಂಡೇಟಿ(Shot Dead)ಗೆ ಬಲಿಯಾಗಿದ್ದಾನೆ. ಈ ಭೀಕರ ದೃಶ್ಯ ಮೊಬೈಲ್‌ನಲ್ಲಿ ಸೆರೆಯಾಗಿದ್ದು, ಎಲ್ಲೆಡೆ ವೈರಲ್‌(Viral Video) ಆಗುತ್ತಿದೆ.

ಜೂ.29ರಂದು ಮೆಕ್ಸಿಕನ್‌ ಯುವತಿ ವಿವಿಯಾನಾ ಜಾಮೋರಾ ಜೊತೆ ಗವಿನ್‌ ವಿವಾಹ ನಡೆದಿತ್ತು. ಇವರಿಬ್ಬರು ಮನೆಗೆ ಮರಳುತ್ತಿರುವಾಗ ರಸ್ತೆಯಲ್ಲಿ ಮತ್ತೊಂದು ವಾಹನದ ಚಾಲಕನ ಜೊತೆ ಸಣ್ಣ ಜಗಳ ನಡೆದಿತ್ತು. ಪರಸ್ಪರ ಮಾತಿಗೆ ಮಾತು ಬೆಳೆದು ಜಗಳ ತಾರಕ್ಕೇರಿದೆ. ಕೋಪದ ಭರದಲ್ಲಿ ವಾಹನದೊಳಗಿದ್ದ ಆರೋಪಿ ಗವಿನ್‌ ಮೇಲೆ ಗುಂಡು ಹಾರಿಸುತ್ತಾನೆ. ಗಂಭೀರವಾಗಿ ಗಾಯಗೊಂಡ ಗವನಿ ತಕ್ಷಣ ನೆಲಕ್ಕೆ ಕುಸಿದು ಬಿದ್ದಿದ್ದಾನೆ. ಗುಂಡೇಟಿನಿಂದ ಗಂಭೀರವಾಗಿ ಗಾಯಗೊಂಡಿದ್ದ ಆತನನ್ನು ಆಸ್ಪತ್ರೆಗೆ ಸಾಗಿಸಲಾಗಿತ್ತಾದರೂ ಚಿಕಿತ್ಸೆ ಫಲಕಾರಿಯಾಗದೇ ಆತ ಕೊನೆಯುಸಿರೆಳೆದಿದ್ದಾನೆ.

ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ವಿಡಿಯೊದಲ್ಲಿ ದಸೌರ್ ತನ್ನ ಕಾರಿನಿಂದ ಕೆಳಗೆ ಇಳಿದು ಪಿಕಪ್ ಟ್ರಕ್‌ನ ಚಾಲಕನ ಮೇಲೆ ಕಿರುಚಾಡುತ್ತಿರುವುದನ್ನು, ತನ್ನ ಕೈಯಲ್ಲಿದ್ದ ಗನ್‌ನಲ್ಲಿ ವಾಹನಕ್ಕೆ ಪಂಚ್‌ ಮಾಡುತ್ತಿರುವುದನ್ನು ವಿಡಿಯೋದಲ್ಲಿ ಕಾಣಬಹುದಾಗಿದೆ.

ಪೊಲೀಸರ ಪ್ರಕಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಅರೆಸ್ಟ್‌ ಮಾಡಲಾಗಿದೆ. ಇನ್ನು ಪೊಲೀಸರು ಹೇಳುವ ಪ್ರಕಾರ ಗವಿನ್‌ ಕೈಯಲ್ಲೂ ಗನ್‌ ಇದ್ದ ಕಾರಣ ತನ್ನ ಜೀವ ರಕ್ಷಣೆಗಾಗಿ ಆರೋಪಿ ಗುಂಡು ಹಾರಿಸಿರಬಹುದು. ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಮುಂದುವರೆದಿದ್ದು, ಆರೋಪಿಯನ್ನು ಕೋರ್ಟ್‌ ಮುಂದೆ ಹಾಜರುಪಡಿಸಲಾಗಿದೆ ಎಂದು ಪೊಲೀಸ್‌ ವಕ್ತಾರರು ಹೇಳಿದ್ದಾರೆ.

ಇದನ್ನೂ ಓದಿ: Viral Video: ಪಂದ್ಯದ ವೇಳೆ ಮೈದಾನಕ್ಕೆ ನುಗ್ಗಿದ ಗುಳ್ಳೆ ನರಿ; ವಿಡಿಯೊ ವೈರಲ್​

Continue Reading

ಕ್ರೀಡೆ

Viral Video: ವಿಂಡೀಸ್​ ವೇಗಿಯ ಸಿಕ್ಸರ್​ ಹೊಡೆತಕ್ಕೆ ಸ್ಟೇಡಿಯಂನ ಮೇಲ್ಛಾವಣಿಯ ಹೆಂಚುಗಳು ಪುಡಿಪುಡಿ

Viral Video: ಶಮಾರ್‌ ಜೋಸೆಫ್‌(Shamar Joseph) ಅವರ ಕ್ರಿಕೆಟ್​ ಜರ್ನಿಯೇ ಒಂದು ರೋಚಕ. ಅವರ ಕ್ರಿಕೆಟ್​ ಬದುಕಿನ ಸ್ಟೋರಿ ಯಾವ ಸಿನಿಮಾ ಕಥೆಗೂ ಕಡಿಮೆಯೇನಲ್ಲ. ಶಮಾರ್‌ ಜೋಸೆಫ್‌ ಶ್ರೀಮಂತ ಕುಟುಂಬದಲ್ಲಿ ಅಥವಾ ಕ್ರಿಕೆಟ್​ ಹಿನ್ನೆಲೆಯಿಂದ ಬಂದ ಪ್ರತಿಭೆಯಲ್ಲ.

VISTARANEWS.COM


on

Viral Video
Koo

ಲಂಡನ್​: ಇಂಗ್ಲೆಂಡ್​ ವಿರುದ್ಧ ಸಾಗುತ್ತಿರುವ ದ್ವಿತೀಯ ಟೆಸ್ಟ್​(England vs West Indies 2nd Test) ಪಂದ್ಯದಲ್ಲಿ ವಿಂಡೀಸ್​ ವೇಗಿ ಶಮರ್‌ ಜೋಸೆಫ್‌(Shamar Joseph) ಬಾರಿಸಿದ ಸಿಕ್ಸರ್​ನ(shamar joseph six) ವಿಡಿಯೊವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್(Viral Video)​ ಆಗಿದೆ. ಅವರ ಈ ಸಿಕ್ಸರ್​ ಹೊಡೆತಕ್ಕೆ ನಾಟಿಂಗ್‌ಹ್ಯಾಮ್​ನ ಟ್ರೆಂಟ್ ಬ್ರಿಡ್ಜ್ ಸ್ಟೇಡಿಯಂನ(Trent Bridge, Nottingham) ಮೇಲ್ಛಾವಣಿಯ ಹೆಂಚುಗಳು ಪುಡಿಪುಡಿಯಾಗಿದೆ.

ಇಂಗ್ಲೆಂಡ್‌ನ ಸ್ಟಾರ್ ಬೌಲರ್ ಗಸ್ ಅಟ್ಕಿನ್ಸನ್ ಓವರ್​ನ ಎರಡನೇ ಎಸೆತದಲ್ಲಿ ಶಮರ್ ಜೋಸೆಫ್ ಈ ಗಗನಚುಂಬಿ ಸಿಕ್ಸರ್ ಬಾರಿಸಿದರು. ಈ ಸಿಕ್ಸರ್​ಗೆ ಸ್ಟೇಡಿಯಂನ ಮೇಲ್ಛಾವಣಿಯ ಹೆಂಚುಗಳು ಪುಡಿಪುಡಿಯಾಗಿ ಗ್ಯಾಲರಿಯಲ್ಲಿ ಕುಳಿತಿದ್ದ ಪ್ರೇಕ್ಷಕರ ತಲೆ ಮೇಲೆ ಬಿದ್ದಿದೆ. ಈ ದೃಶ್ಯವನ್ನು ವಿಡಿಯೊದಲ್ಲಿ ನೋಡಬಹುದಾಗಿದೆ. ಜೋಸೆಫ್‌ ಈ ಪಂದ್ಯದಲ್ಲಿ 27 ಎಸೆತಗಳಿಂದ 33 ರನ್​ ಬಾರಿಸಿದರು. ಅವರ ಈ ಬ್ಯಾಟಿಂಗ್​ ಇನಿಂಗ್ಸ್​ನಲ್ಲಿ 2 ಸಿಕ್ಸರ್​ ಮತ್ತು 5 ಬೌಂಡರಿ ದಾಖಲಾಯಿತು.

ಸದ್ಯ ಈ ಪಂದ್ಯ ಡ್ರಾಗೊಳ್ಳುವ ಸ್ಥಿತಿಯಲ್ಲಿದೆ. ಮೊದಲು ಬ್ಯಾಟಿಂಗ್​ ನಡೆಸಿದ ಇಂಗ್ಲೆಂಡ್​ ಮೊದಲ ಇನಿಂಗ್ಸ್​ನಲ್ಲಿ 416 ರನ್​ ಬಾರಿಸಿತ್ತು. ಇದಕ್ಕುತ್ತರವಾಗಿ ಬ್ಯಾಟಿಂಗ್​ ನಡೆಸಿದ್ದ ವಿಂಡೀಸ್​ 457 ರನ್​ ಬಾರಿಸಿ 41 ರನ್​ ಮುನ್ನಡೆ ಸಾಧಿಸಿತ್ತು. ಇದೀಗ ದ್ವಿತೀಯ ಇನಿಂಗ್ಸ್​ ಆರಂಭಿಸಿರುವ ಇಂಗ್ಲೆಂಡ್​ 3 ವಿಕೆಟ್​ಗೆ 250 ಗಡಿ ದಾಡಿ ಬ್ಯಾಟಿಂಗ್​ ನಡೆಸುತ್ತಿದೆ. ಇಂದು ನಾಲ್ಕನೇ ದಿನವಾಗಿದ್ದು ಇನ್ನೊಂದು ದಿನದ ಆಟ ಮಾತ್ರ ಬಾಕಿ ಉಳಿದಿದೆ. ಹೀಗಾಗಿ ಪಂದ್ಯ ಡ್ರಾಗೊಳ್ಳುವ ಸಾಧ್ಯತೆ ಅಧಿಕ.

ಶಮಾರ್‌ ಜೋಸೆಫ್‌(Shamar Joseph) ಅವರ ಕ್ರಿಕೆಟ್​ ಜರ್ನಿಯೇ ಒಂದು ರೋಚಕ. ಅವರ ಕ್ರಿಕೆಟ್​ ಬದುಕಿನ ಸ್ಟೋರಿ ಯಾವ ಸಿನಿಮಾ ಕಥೆಗೂ ಕಡಿಮೆಯೇನಲ್ಲ. ಶಮಾರ್‌ ಜೋಸೆಫ್‌ ಶ್ರೀಮಂತ ಕುಟುಂಬದಲ್ಲಿ ಅಥವಾ ಕ್ರಿಕೆಟ್​ ಹಿನ್ನೆಲೆಯಿಂದ ಬಂದ ಪ್ರತಿಭೆಯಲ್ಲ. ಅಚ್ಚರಿ ಎಂದರೆ ಯಾವುದೇ ವೃತ್ತಿಪರ ಕ್ರಿಕೆಟ್‌ ಕೂಡ ಆಟದೆ ಅವರು ರಾಷ್ಟ್ರೀಯ ತಂಡಕ್ಕೆ ಪದಾರ್ಪಣೆ ಮಾಡಲು ನೆರವಾದದ್ದು ಕೆರಿಬಿಯನ್‌ ಪ್ರೀಮಿಯರ್‌ ಲೀಗ್‌. ಈ ಟೂರ್ನಿಗೆ ಆಯ್ಕೆಯಾದ ಬಳಿಕ ಶಮಾರ್‌ ಅವರ ಬದುಕಿನ ದಿಕ್ಕೇ ಬದಲಾಯಿತು.

ಇದನ್ನೂ ಓದಿ IPL 2025: ರಾಹುಲ್​ ಆರ್​ಸಿಬಿಗೆ, ಪಂತ್​ ಸಿಎಸ್​ಕೆ ಸೇರ್ಪಡೆ ಖಚಿತ

ಸಾವನ್ನೇ ಗೆದಿದ್ದ ಶಮಾರ್‌ ಜೋಸೆಫ್‌


ಜೋಸೆಫ್‌ ಅವರು ಊರಲ್ಲಿ ಕೆಲಸ ಮಾಡುತ್ತಿದ್ದ ವೇಳೆ ತಮ್ಮ ಮೇಲೆ ಮರ ಬೀಳುವುದರಿಂದ ಅಲ್ಪದರಲ್ಲೇ ಪಾರಾಗಿ, ಸಾವಿನಿಂದ ಬಚಾವಾಗಿದ್ದರು. ಕೇವಲ 400 ಜನಸಂಖ್ಯೆಯುಳ್ಳ ಕೆರಿಬಿಯನ್‌ನ ಹಳ್ಳಿಯೊಂದರ ಪ್ರತಿಭೆಯಾಗಿರುವ ಜೋಸೆಫ್​ ಕಾಡಲ್ಲಿ ಮರ ಕಡಿಯುವ ವೃತ್ತಿ ಮಾಡುತ್ತಿದ್ದರು. ಇದಾದ ಬಳಿಕ ಅವರು 2021ರ ವರೆಗೆ ಬಾರ್ಬಿಸ್‌ ಎಂಬಲ್ಲಿ ಭದ್ರತಾ ಸಿಬ್ಬಂದಿಯಾಗಿ ಕೆಲಸ ಮಾಡುತ್ತಿದ್ದರು.

ಹಣ್ಣು, ಬಾಟಲ್​ ಮೂಲಕ ಬೌಲಿಂಗ್​ ಅಭ್ಯಾಸ


ಜೋಸೆಫ್​ ಅವರು ಕ್ರಿಕೆಟ್​ಗೆ ಮರಳಿದ್ದು ಮತ್ತು ಬೌಲಿಂಗ್​ ಅಭ್ಯಾಸ ನಡೆಸಿದ್ದು ಪ್ಲಾಸ್ಟಿಕ್‌ ಬಾಟಲ್‌ ಮತ್ತು ಹಣ್ಣುಗಳನ್ನೇ ಎಸೆದು. ಈ ವಿಚಾರ ನಂಬಲು ಕಷ್ಟವಾದರೂ ಕೂಡ ಇದನ್ನು ನಂಬಲೇ ಬೇಕು. 2018ರ ವರೆಗೂ ಅವರ ಊರಿನಲ್ಲಿ ಮೊಬೈಲ್, ಇಂಟರ್ನೆಟ್‌ ಸೇವೆ ಕೂಡ ಇರಲಿಲ್ಲ. ಇಂತಹ ಕುಗ್ರಾಮದಿಂದ ಬಂದ ಜೋಸೆಫ್ ಇಂದು ವಿಂಡೀಸ್‌ನ ಆಪತ್ಬಾಂಧವ. ಅವರ ಪ್ರದರ್ಶನಕ್ಕೆ ಇಡೀ ಕ್ರಿಕೆಟ್​ ಜಗತ್ತೇ ಸಲಾಂ ಹೊಡೆದಿದೆ. ಸಚಿನ್‌ ತೆಂಡೂಲ್ಕರ್‌, ಬ್ರಿಯಾನ್​ ಲಾರಾ, ಕಾರ್ಲ್‌ ಹೂಪರ್‌ ಸೇರಿದಂತೆ ಹಲವರು ಜೋಸೆಫ್​ ಕ್ರಿಕೆಟ್​ ಸಾಧನೆಗೆ ಶ್ಲಾಘನೆ ವ್ಯಕ್ತಪಡಿಸಿದ್ದಾರೆ.

Continue Reading

ಕರ್ನಾಟಕ

Police viral video: ಫುಲ್ ಟೈಟ್ ಆಗಿ ಬೈಕ್ ಎತ್ತೋಕೆ ಪೊಲೀಸಪ್ಪ ಒದ್ದಾಟ! ವಿಡಿಯೊ ನೋಡಿ

Police viral video: ಬೆಂಗಳೂರಿನ ಪೀಣ್ಯ ಬಳಿ ಪೊಲೀಸ್ ಸಿಬ್ಬಂದಿ ಎಣ್ಣೆ ಏಟಿನಲ್ಲಿ ಪರದಾಡಿರುವುದು ಕಂಡುಬಂದಿದೆ. ತನ್ನ ಬೈಕ್ ಅನ್ನು ಎತ್ತಲೂ ಆಗದಷ್ಟು ನಶೆಯಲ್ಲಿ ತೇಲಾಡುತ್ತಿದ್ದ ಪೊಲೀಸಪ್ಪನ ಕಂಡು ಸ್ಥಳೀಯರು ವಿಡಿಯೊ ಮಾಡಿದ್ದಾರೆ.

VISTARANEWS.COM


on

Police viral video
Koo

ಬೆಂಗಳೂರು: ರಾತ್ರಿ ಕಂಠಪೂರ್ತಿ ಕುಡಿದ ಹಿನ್ನೆಲೆಯಲ್ಲಿ ಬೈಕ್ ಎತ್ತಲು ಪೊಲೀಸ್‌ ಸಿಬ್ಬಂದಿಯೊಬ್ಬರು ಒದ್ದಾಡಿರುವ ಘಟನೆ ರಾಜಧಾನಿಯಲ್ಲಿ ನಡೆದಿದೆ. ಕುಡಿತ ಮತ್ತಿನಲ್ಲಿ ಬೈಕ್‌ನಿಂದ ಕೆಳಗೆ ಬಿದ್ದಿರುವ ಪೊಲೀಸ್‌, ಮೇಲೇಳಲು ಸಾಧ್ಯವಾಗದೆ ಒದ್ದಾಡಿದ್ದಾರೆ. ಪೊಲೀಸಪ್ಪ ನಶೆಯಲ್ಲಿ ತೇಲಾಡುತ್ತಿದ್ದ ದೃಶ್ಯ ಸ್ಥಳೀಯರೊಬ್ಬರ ಮೊಬೈಲ್‌ನಲ್ಲಿ ಸೆರೆಯಾಗಿದ್ದು, ಸದ್ಯ ಈ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ (Police viral video) ಆಗಿದೆ.

ಪೀಣ್ಯ ಬಳಿ ಪೊಲೀಸ್ ಸಿಬ್ಬಂದಿ ಎಣ್ಣೆ ಏಟಿನಲ್ಲಿ ಪರದಾಡಿರುವುದು ನಡೆದಿದೆ. ತನ್ನ ಬೈಕ್ ಅನ್ನು ಎತ್ತಲೂ ಆಗದಷ್ಟು ನಶೆಯಲ್ಲಿ ತೇಲಾಡುತ್ತಿದ್ದ ಪೊಲೀಸಪ್ಪನ ಕಂಡು ಸ್ಥಳೀಯರು ವಿಡಿಯೊ ಮಾಡಿದ್ದಾರೆ. ಯಾವ ಠಾಣೆ ಸಿಬ್ಬಂದಿ ಎಂಬುವುದರ ಬಗ್ಗೆ ಮಾಹಿತಿ ತಿಳಿದುಬಂದಿಲ್ಲ. ಸದ್ಯ ವಿಡಿಯೊ ಪರಿಶೀಲನೆಯಲ್ಲಿ ಪೊಲೀಸರು ತೊಡಗಿದ್ದಾರೆ.

ವೇಗವಾಗಿ ಬಂದ ಟ್ರಕ್‌ ಬೈಕ್‌ಗಳ ಮೇಲೆ ಪಲ್ಟಿ; ಪವಾಡಸದೃಶ ಪಾರು! ವಿಡಿಯೊ ನೋಡಿ

Hit and Run Case


ಗುಜರಾತ್‌ನ ವಡೋದರ ನಗರದಲ್ಲಿ ವೇಗವಾಗಿ ಬರುತ್ತಿದ್ದ ಅಗ್ನಿಶಾಮಕ ದಳದ ಟ್ರಕ್ ಪಲ್ಟಿಯಾಗಿ ಬೈಕ್‌ಗೆ ಡಿಕ್ಕಿ ಹೊಡೆದಿದೆ. ಈ ಅಪಘಾತದಲ್ಲಿ ಅದೃಷ್ಟವಶಾತ್ ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಆದರೆ ಟ್ರಕ್‌ನ ಚಾಲಕ ಪರಾರಿ (Hit and Run Case)ಯಾಗಿದ್ದಾನೆ. ವಡೋದರಾದ ದಭೋಯ್ ರಸ್ತೆಯಲ್ಲಿ ಜುಲೈ 19ರಂದು ಈ ಅಪಘಾತ ಸಂಭವಿಸಿದೆ. ಈ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಅಗ್ನಿಶಾಮಕ ದಳದ ಚಾಲಕ ಮತ್ತು ಸಬ್ ಆಫೀಸರ್ ಬೆಂಕಿಯ ಅಪಘಾತದ ಬಗ್ಗೆ ಮಾಹಿತಿ ಪಡೆದು ನಂತರ ಗಜ್ರವಾಡಿಯಿಂದ ಹೊರಟಿದ್ದರು. ದಭೋಯ್ ರಸ್ತೆಯ ಗಣೇಶನಗರದ ಬಳಿ ಚಾಲಕ ತಿರುವು ತೆಗೆದುಕೊಂಡಾಗ ಈ ಅಪಘಾತ ಸಂಭವಿಸಿದೆ. ಅತಿಯಾದ ವೇಗದಲ್ಲಿದ್ದ ಕಾರಣ ಟ್ರಕ್‌ನ ವೇಗವನ್ನು ನಿಯಂತ್ರಿಸಲು ಸಾಧ್ಯವಾಗದಿದ್ದಾಗ ಟ್ರಕ್ ಪಲ್ಟಿಯಾಗಿ ಅಲ್ಲಿ ಬರುತ್ತಿದ್ದ ಬೈಕ್‌ಗೆ ಡಿಕ್ಕಿ ಹೊಡೆದಿದೆ. ಘಟನೆ ನಡೆದ ಕೂಡಲೇ ಟ್ರಕ್‌ನ ಚಾಲಕ ಕೃಷ್ಣ ಪಟೇಲ್ ಅಪಘಾತದ ಸ್ಥಳದಿಂದ ಪರಾರಿಯಾಗಿದ್ದಾನೆ. ಆದರೆ ಬೈಕ್ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ ಎಂಬುದಾಗಿ ತಿಳಿದುಬಂದಿದೆ. ಘಟನೆ ನಡೆದ ಕೂಡಲೇ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದು, ಪೊಲೀಸರು ಸ್ಥಳಕ್ಕೆ ಧಾವಿಸಿದ್ದಾರೆ.

ಇದೇರೀತಿಯ ಅಪಘಾತದ ಘಟನೆ ಮೇ 29ರಂದು ನಡೆದಿತ್ತು. ವಡೋದರಾ-ಹಲೋಲ್ ಹೆದ್ದಾರಿಯಲ್ಲಿ ಬೊಲೆರೊ ಪಿಕಪ್ ವ್ಯಾನ್ ಪಲ್ಟಿಯಾಗಿ ಕೊತಂಬಿ ಗ್ರಾಮದ ಬಳಿ ಕಾಲುವೆಗೆ ಬಿದ್ದ ಪರಿಣಾಮ ಇಬ್ಬರು ಮಕ್ಕಳು ಸೇರಿದಂತೆ ನಾಲ್ವರು ಸಾವನ್ನಪ್ಪಿದ್ದು, 15 ಕ್ಕೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡಿದ್ದರು. ಬೊಲೆರೊ ಚಾಲಕ ಸ್ಟೀರಿಂಗ್ ಮೇಲೆ ನಿಯಂತ್ರಣ ಕಳೆದುಕೊಂಡ ಪರಿಣಾಮ ಕಾರು ಕ್ರಿಕೆಟ್ ಕ್ರೀಡಾಂಗಣದ ಬಳಿ ಪಲ್ಟಿಯಾಗಿದೆ.

ಇದನ್ನೂ ಓದಿ: ಬಸ್‌ ಡ್ರೈವರ್‌ನ ರೀಲ್ಸ್‌ ಕ್ರೇಜ್‌ಗೆ 2 ಎತ್ತುಗಳು ಬಲಿ; ರೈತನ ಸ್ಥಿತಿ ಗಂಭೀರ

ಜರೋಡ್ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್ಪೆಕ್ಟರ್ ಕೃಪಾಲ್ಸಿನ್ಹ್ ಝಾಲಾ, ಈ ದುರಂತದಲ್ಲಿ ಇಬ್ಬರು ಮಕ್ಕಳು ಮತ್ತು ಇಬ್ಬರು ಪುರುಷರು ಸಾವನ್ನಪ್ಪಿದ್ದಾರೆ. ನಾವು ಸ್ಥಳಕ್ಕೆ ತಲುಪಿ ಗಾಯಾಳುಗಳನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ಸ್ಥಳಾಂತರಿಸಿದ್ದೇವೆ. ಸಮಸ್ಯೆಯ ಬಗ್ಗೆ ತನಿಖೆಯನ್ನು ಪ್ರಾರಂಭಿಸಿರುವುದಾಗಿ ತಿಳಿಸಿದ್ದರು.

Continue Reading

ಕ್ರೀಡೆ

Hardik Pandya: ಬಾಲಿವುಡ್​ ನಟಿಯೊಂದಿಗೆ ಚಾಟಿಂಗ್​, ಡೇಟಿಂಗ್​ ಆರಂಭಿಸಿದ ಹಾರ್ದಿಕ್​ ಪಾಂಡ್ಯ

Hardik Pandya: ವರದಿಗಳ ಪ್ರಕಾರ ಹಾರ್ದಿಕ್​ ಪಾಂಡ್ಯ ಬಾಲಿವುಡ್ ನಟಿ ಅನನ್ಯ ಪಾಂಡೆ(Ananya Panday) ಜತೆ ಚಾಟಿಂಗ್​, ಡೇಟಿಂಗ್​ ಆರಂಭಿಸಿದ್ದಾರೆ ಎನ್ನಲಾಗಿದೆ. ಇದಕ್ಕೆ ಸಾಕ್ಷಿ ಎಂಬಂತೆ ಪಾಂಡ್ಯ ಇನ್‌ಸ್ಟಾಗ್ರಾಂನಲ್ಲಿ ಅನನ್ಯ ಪಾಂಡೆ ಅವರನ್ನು ದೀಢಿರ್​ ಆಗಿ ಫಾಲೋ ಮಾಡಲಾರಂಭಿಸಿದ್ದು.

VISTARANEWS.COM


on

Hardik Pandya
Koo

ಮುಂಬಯಿ: ಹಾರ್ದಿಕ್​ ಪಾಂಡ್ಯ(Hardik Pandya) ಮತ್ತು ನತಾಶಾ ಸ್ಟಾಂಕೋವಿಕ್(Natasa Stankovic) ಅವರಿಗೆ ವಿಚ್ಛೇದನ(Hardik-Natasa Divorce) ನೀಡಿ ಒಂದು ವಾರ ಕಳೆಯುವ ಮುನ್ನವೇ ಇದೀಗ ಹಾರ್ದಿಕ್​ ಮತ್ತೊಂದು ಮದುವೆಯಾಗಲು ಸಿದ್ಧರಾಗಿದ್ದಾರೆ ಎಂಬ ಮಾತುಗಳು ಕೇಳಿಬಂದಿವೆ. ಬಾಲಿವುಡ್​ನ ಖ್ಯಾತ ನಟಿಯನ್ನು ಪಾಂಡ್ಯ ಮದುವೆಯಾಗಲಿದ್ದಾರೆ ಎಂದು ವರದಿಯಾಗಿದೆ. ಕಳೆದ ಗುರುವಾರ ಹಾರ್ದಿಕ್​ ಪಾಂಡ್ಯ ಮತ್ತು ನತಾಶಾ ಸ್ಟಾಂಕೋವಿಕ್ ಜಂಟಿ ಹೇಳಿಕೆ ಪ್ರಕಟಿಸುವ ಮೂಲಕ ತಮ್ಮ 4 ವರ್ಷಗಳ ದಾಂಪತ್ಯ ಜೀವನಕ್ಕೆ ಬ್ರೇಕ್ ಹಾಕಿದ್ದರು.

ಹೌದು, ವರದಿಗಳ ಪ್ರಕಾರ ಹಾರ್ದಿಕ್​ ಪಾಂಡ್ಯ ಬಾಲಿವುಡ್ ನಟಿ ಅನನ್ಯ ಪಾಂಡೆ(Ananya Panday) ಜತೆ ಚಾಟಿಂಗ್​, ಡೇಟಿಂಗ್​ ಆರಂಭಿಸಿದ್ದಾರೆ ಎನ್ನಲಾಗಿದೆ. ಇದಕ್ಕೆ ಸಾಕ್ಷಿ ಎಂಬಂತೆ ಪಾಂಡ್ಯ ಇನ್‌ಸ್ಟಾಗ್ರಾಂನಲ್ಲಿ ಅನನ್ಯ ಪಾಂಡೆ ಅವರನ್ನು ದೀಢಿರ್​ ಆಗಿ ಫಾಲೋ ಮಾಡಲಾರಂಭಿಸಿದ್ದು. ಅತ್ತ ಅನನ್ಯ ಪಾಂಡೆ ಕೂಡಾ ಹಾರ್ದಿಕ್ ಪಾಂಡ್ಯ ಅವರನ್ನು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲಾರಂಭಿಸಿದ್ದಾರೆ. ಈ ವಿಚಾರ ಇದೀಗ ಸೋಷಿಯಲ್ ಮೀಡಿಯಾಗಳಲ್ಲಿ ಹೊಸ ಸಂಚಲನ ಹುಟ್ಟುಹಾಕಿದ್ದು ಪಾಂಡ್ಯ ಸದ್ಯದಲ್ಲೇ ಅನನ್ಯ ಪಾಂಡೆ ಜತೆ ಹಸೆಮಣೆ ಏರಲಿದ್ದಾರೆ ಎನ್ನುವ ಮಾತುಗಳು ಕೇಳಿ ಬಂದಿವೆ.

ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್ ಮದುವೆಯ ಸಂದರ್ಭದಲ್ಲೂ ಹಾರ್ದಿಕ್ ಪಾಂಡ್ಯ ಹಾಗೂ ಅನನ್ಯ ಪಾಂಡೆ ಒಟ್ಟಾಗಿ ಕಾಣಿಸಿಕೊಂಡಿದ್ದರು. ಅಲ್ಲದೇ ಇಬ್ಬರೂ ಜತೆಯಾಗಿ ಬಿಂದಾಸ್ ಡ್ಯಾನ್ಸ್​ ಕೂಡ ಮಾಡಿದ್ದರು. ಈ ಘಟನೆ ನಡೆದ 2 ದಿನಗಳ ಬಳಿಕ ಇದೀಗ ಇಬ್ಬರು ಪರಸ್ಪರ ಇನ್​ಸ್ಟಾಗ್ರಾಮ್​ ಖಾತೆಯಲ್ಲಿ ಫೋಲೊ ಮಾಡಿಕೊಂಡಿದ್ದಾರೆ. ಸದ್ಯ ಚಾಟಿಂಗ್​ನಲ್ಲಿರುವ ಈ ಜೋಡಿ ಮುಂದೆ ಡೇಟಿಂಗ್​ ಮಾಡಲಿದ್ದಾರೆ ಎಂದು ಕೆಲ ನೆಟ್ಟಿಗರು ಕಮೆಂಟ್​ ಮಾಡಿದ್ದಾರೆ.

ಇದನ್ನೂ ಓದಿ Suryakumar Yadav : ಮುಂದಿನ ಆವೃತ್ತಿಯಲ್ಲಿ ಹಾರ್ದಿಕ್ ಪಾಂಡ್ಯಗೆ ಮುಂಬೈ ಇಂಡಿಯನ್ಸ್ ನಾಯಕತ್ವವೂ ನಷ್ಟ

ಅನನ್ಯ ಪಾಂಡೆ ನಟ ಆಧಿತ್ಯ ರಾಯ್ ಕಪೂರ್ ಜತೆ ಕೆಲವು ಸಮಯದಿಂದ ಡೇಟಿಂಗ್ ನಡೆಸುತ್ತಿದ್ದರು. ಆದರೆ ಈ ಜೋಡಿ ತಮ್ಮ ಸಂಬಂಧದ ಬಗ್ಗೆ ಎಲ್ಲೂ ತುಟಿಬಿಚ್ಚಿರಲಿಲ್ಲ. ಆದರೆ, ಕೆಲ ದಿನಗಳ ಹಿಂದಷ್ಟೇ ಅನನ್ಯ ಪಾಂಡೆ ಮತ್ತು ಆಧಿತ್ಯ ರಾಯ್​ ಜತೆ ಬ್ರೇಕಪ್ ಮಾಡಿಕೊಂಡಿದ್ದಾರೆ ಎನ್ನುವ ಸುದ್ದಿ ಸೋಷಿಯಲ್ ಮೀಡಿಯಾದಲ್ಲಿ ಸದ್ದು ಮಾಡಿತ್ತು. ಇದೀಗ ಪಾಂಡ್ಯ ಜತೆ ಡೇಟಿಂಗ್​ ನಡೆಸುತ್ತಿರುವುದಾಗಿ ವರದಿಯಾಗಿದೆ.

ಹಾರ್ದಿಕ್​ ಮತ್ತು ನತಾಶಾ ನಡುವಿನ ಬ್ರೇಕಪ್​ಗೆ ಸಂವಹನ ಕೊರತೆಯೇ ಮುಖ್ಯ ಕಾರಣ ಎಂದು ಆಪ್ತ ಮೂಲಗಳು ಮಾಹಿತಿ ನೀಡಿದೆ. ಇಬ್ಬರ ನಡುವಿನ ಮನಸ್ತಾಪ ಮತ್ತು ಜಗಳಕ್ಕೆ ಪರಿಹಾರ ಕಂಡುಕೊಳ್ಳುವ ತಾಳ್ಮೆ ಇಬ್ಬರಲ್ಲೂ ಇರಲಿಲ್ಲ. ಹೀಗಾಗಿ ಮನಸ್ತಾಪ ದೊಡ್ಡದಾಗಿ ಡಿವೋರ್ಸ್​ಗೆ ಕಾರಣವಾಯಿತು. ಇದನ್ನು ಬಿಟ್ಟು ಸಾಮಾಜಿಕ ಜಾಲತಾಣಗಳಲ್ಲಿ ಇವರಿಬ್ಬರ ಬಗ್ಗೆ ಯಾವುದೇ ತಪ್ಪು ಸುದ್ದಿ ಹಬ್ಬಿಸಬಾರದು ಎಂದು ಆಪ್ತ ಮೂಲಗಳು ತಿಳಿಸಿವೆ.

ಕಳೆದ ವರ್ಷ ಫೆ.14 ರಂದು ರಾಜಸ್ಥಾನದ ಉದಯ್‌ಪುರದಲ್ಲಿ ಕ್ರಿಷ್ಚಿಯನ್‌ ಸಂಪ್ರದಾಯದಂತೆ ಹಾರ್ದಿಕ್‌ ಮತ್ತು ನತಾಶಾ ಮತ್ತೊಮ್ಮೆ ಅದ್ದೂರಿಯಾಗಿ ಪುನರ್‌ ವಿವಾಹವಾಗಿದ್ದರು. ಕುಟುಂಬಸ್ಥರು ಮತ್ತು ಗೆಳೆಯರ ಸಮ್ಮುಖದಲ್ಲಿ ಮತ್ತೊಮ್ಮೆ ವಿವಾಹವಾಗಿದ್ದರು. ಇದಕ್ಕೂ ಮುನ್ನ ಈ ಜೋಡಿ 2020ರಲ್ಲೇ ರಿಜಿಸ್ಟರ್‌ ರೀತಿಯಲ್ಲಿ ವಿವಾಹವಾಗಿದ್ದರು.

Continue Reading
Advertisement
Guru Purnima 2024 mahotsava celebrated in different parts of the country
ಬೆಂಗಳೂರು ಗ್ರಾಮಾಂತರ7 mins ago

Guru Purnima 2024 : ವಿವಿಧೆಡೆ ಅದ್ಧೂರಿಯಾಗಿ ನೆರವೇರಿದ ಗುರುಪೂರ್ಣಿಮಾ ಮಹೋತ್ಸವ

Paris Olympics 2024
ಪ್ರಮುಖ ಸುದ್ದಿ19 mins ago

Paris Olympics 2024 : ಒಲಿಂಪಿಕ್ಸ್​ನಲ್ಲಿ ಅತಿ ಹೆಚ್ಚು ಪದಕಗಳನ್ನು ಪಡೆದ ಅಥ್ಲೀಟ್​ ಯಾರು? ಇಲ್ಲಿದೆ ಈ ಶ್ರೇಷ್ಠ ಕ್ರೀಡಾಪಟುವಿನ ವಿವರ

Viral Video
ವಿದೇಶ20 mins ago

Viral Video: ಎರಡು ವಾರಗಳ ಹಿಂದೆಯಷ್ಟೇ ಮದುವೆಯಾಗಿದ್ದ ಭಾರತೀಯ ಯುವಕ ಅಮೆರಿಕದಲ್ಲಿ ಗುಂಡೇಟಿಗೆ ಬಲಿ; ವಿಡಿಯೋ ಫುಲ್‌ ವೈರಲ್‌

Jasmine Bhasin says her corneas got damaged
ಸಿನಿಮಾ21 mins ago

Jasmin Bhasin: ಲೆನ್ಸ್‌ ಧರಿಸಿ ಎಡವಟ್ಟು; ಕಣ್ಣು ಕಳೆದುಕೊಂಡ್ರಾ ಖ್ಯಾತ ನಟಿ?

Women's T20 World Cup
ಕ್ರೀಡೆ28 mins ago

Women’s T20 World Cup: ಬಾಂಗ್ಲಾದಲ್ಲಿ ಭುಗಿಲೆದ್ದ ಹಿಂಸಾಚಾರ; ಮಹಿಳಾ ಟಿ20 ವಿಶ್ವಕಪ್ ​ಸ್ಥಳಾಂತರ ಸಾಧ್ಯತೆ!

karnataka rain
ಮಳೆ40 mins ago

Karnataka Rain : ಭಾರಿ ಮಳೆ ಎಫೆಕ್ಟ್‌; ಬೆಳಗಾವಿಯಲ್ಲಿ 17 ಸಂಪರ್ಕ ಸೇತುವೆಗಳು ಜಲಾವೃತ

Actor Naresh Shares Emotional Video About His Baby And Taged Director Nag Ashwin
ಟಾಲಿವುಡ್58 mins ago

Actor Naresh: ನನ್ನ ಬೇಬಿಯನ್ನು ದಯವಿಟ್ಟು ಹುಡುಕಿಕೊಡಿ ಎಂದು ಗಳಗಳನೇ ಅತ್ತ ನಟ ನರೇಶ್‌!

Viral Video
ಕ್ರೀಡೆ1 hour ago

Viral Video: ವಿಂಡೀಸ್​ ವೇಗಿಯ ಸಿಕ್ಸರ್​ ಹೊಡೆತಕ್ಕೆ ಸ್ಟೇಡಿಯಂನ ಮೇಲ್ಛಾವಣಿಯ ಹೆಂಚುಗಳು ಪುಡಿಪುಡಿ

IT Employees
ಕರ್ನಾಟಕ1 hour ago

IT Employees: ಐಟಿ ನೌಕರರಿಗೆ ದಿನಕ್ಕೆ 14 ಗಂಟೆ ಕೆಲಸ; ಉದ್ಯೋಗಿಗಳ ಒಕ್ಕೂಟ ಆಕ್ರೋಶ, ಅದರ ವಾದ ಹೀಗಿದೆ

Kiccha Sudeep
ಸಿನಿಮಾ1 hour ago

Kiccha Sudeep: ಕನ್ನಡಿಗರ ಸ್ವಾಭಿಮಾನವೇ ಮುಖ್ಯ; ಫೋನ್ ಪೇ ಬ್ರ್ಯಾಂಡ್‌ ಅಂಬಾಸಿಡರ್ ಸ್ಥಾನ ತ್ಯಜಿಸುತ್ತಾರಾ ಕಿಚ್ಚ ಸುದೀಪ್?

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Rain
ಮಳೆ1 day ago

Karnataka Rain : ಭಾರಿ ಮಳೆಗೆ ಮನೆ ಗೋಡೆ ಕುಸಿತ; ಕೊಟ್ಟಿಗೆಯಲ್ಲಿದ್ದ ಜಾನುವಾರುಗಳು ಸಾವು

karnataka Rain
ಮಳೆ1 day ago

Karnataka Rain : ಹಳ್ಳ ದಾಟಲು ಹೋಗಿ ನೀರುಪಾಲಾದ ಜಾನುವಾರು; ಬಿರುಗಾಳಿಗೆ ಕಳಚಿದ ವಿಂಡ್‌ ಫ್ಯಾನ್‌

karnataka Rain
ಮಳೆ2 days ago

Karnataka Rain : ಬೀದಿಗೆ ತಂದ ರಣಮಳೆ; ಮನೆ ಕುಸಿದು ಬಿದ್ದು 9 ತಿಂಗಳ ಗರ್ಭಿಣಿ ನರಳಾಟ

Karnataka Rain
ಮಳೆ2 days ago

Karnataka Rain : ರಾಜ್ಯದಲ್ಲಿ ಮಳೆಯ ಆರ್ಭಟ; ರಾತ್ರಿ ಕಳೆದು ಬೆಳಗಾಗುವುದರೊಳಗೆ ಕಂದಕ ನಿರ್ಮಾಣ

Karnataka Rain
ಮಳೆ3 days ago

Karnataka Rain : ಭಾರಿ ಮಳೆ ಎಫೆಕ್ಟ್‌; ಉಕ್ಕಿ ಹರಿಯುತ್ತಿದ್ದ ನದಿಯಲ್ಲಿ ಕೊಚ್ಚಿ ಹೋದ ರಾಸು

Uttara Kannada Landslide
ಮಳೆ3 days ago

Uttara Kannada Landslide: ಶಿರೂರು ಗುಡ್ಡ ಕುಸಿತ; ಅಖಾಡಕ್ಕಿಳಿದ ಜಿಯೊಲಾಜಿಕಲ್ ಸರ್ವೆ ಆಫ್ ಇಂಡಿಯಾ ಟೀಂ

Karnataka Rain
ಮಳೆ5 days ago

Karnataka Rain : ಕಾರವಾರದಲ್ಲಿ ಮಳೆ ಅವಾಂತರ; ಮನೆ ಮೇಲೆ ಗುಡ್ಡ ಕುಸಿದು ವೃದ್ಧ ಸಾವು

karnataka Rain
ಮಳೆ5 days ago

Karnataka Rain : ಭಾರಿ ಮಳೆಗೆ ನಿಯಂತ್ರಣ ತಪ್ಪಿ ಕೆರೆಗೆ ಉರುಳಿ ಬಿದ್ದ ಕಾರು; ನಾಲ್ವರು ಪ್ರಾಣಾಪಾಯದಿಂದ ಪಾರು

karnataka Weather Forecast
ಮಳೆ6 days ago

Karnataka Weather : ವ್ಯಾಪಕ ಮಳೆ ಎಚ್ಚರಿಕೆ; ನಾಳೆಯೂ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

karnataka Rain
ಮಳೆ6 days ago

Karnataka Rain : ಶಾಲಾ-ಕಾಲೇಜಿಗೆ ಈ ದಿನ ರಜಾ; ಅಬ್ಬರಿಸುತ್ತಿರುವ ಮಳೆಗೆ ಮನೆಯಲ್ಲೇ ಎಲ್ಲರೂ ಸಜಾ!

ಟ್ರೆಂಡಿಂಗ್‌