Guru Purnima 2024: ಭಾರತದ ಮಹೋನ್ನತ ಕ್ರೀಡಾ ತಾರೆಗಳನ್ನು ಸೃಷ್ಟಿಸಿದ 6 'ಗುರು'ಗಳಿವರು - Vistara News

ಕ್ರೀಡೆ

Guru Purnima 2024: ಭಾರತದ ಮಹೋನ್ನತ ಕ್ರೀಡಾ ತಾರೆಗಳನ್ನು ಸೃಷ್ಟಿಸಿದ 6 ‘ಗುರು’ಗಳಿವರು

Guru Purnima 2024: ಗುರು ಪೂರ್ಣಿಮೆ ಹಬ್ಬ. ಹಿಂದೂ ಪಂಚಾಂಗದ ಪ್ರಕಾರ ಆಷಾಢ ಮಾಸದ ಹುಣ್ಣಿಮೆಯನ್ನು ಹಿಂದೂಗಳು ಸಾಂಪ್ರದಾಯಿಕವಾಗಿ ಗುರು ಪೂರ್ಣಿಮೆ ಎಂದು ಆಚರಿಸುತ್ತಾರೆ. ಈ ದಿನದಂದು, ಹಿಂದೂಗಳು ಮತ್ತು ಬೌದ್ಧರು ಸಹ ತಮ್ಮ ಗುರುವಿಗೆ ಪೂಜೆ ಸಲ್ಲಿಸುತ್ತಾರೆ.

VISTARANEWS.COM


on

Guru Purnima 2024
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಗುರು ಪೂರ್ಣಿಮೆ(Guru Purnima 2024) ಅಂಗವಾಗಿ ಇಂದು ಬಹುತೇಕರು ತಮ್ಮ ಜೀವನವನ್ನು ರೂಪಿಸುವಲ್ಲಿ ಪ್ರಮುಖ ಪಾತ್ರವಹಿಸಿದ ಗುರುಗಳ ಸೇವೆಯನ್ನು ಸ್ಮರಿಸುವ ಮೂಲಕ ಅವರಿಗೆ ಕೃತಜ್ಞತೆ ಸಲ್ಲಿಸುತ್ತಿದ್ದಾರೆ. ಭಾರತದ ಮಹೋನ್ನತ ಕ್ರೀಡಾ ತಾರೆಗಳನ್ನು ಸೃಷ್ಟಿಸಿದ 6 ಪ್ರಮುಖ ಗುರುಗಳ ಕುರಿತ ಕಿರು ಪರಿಚಯವೊಂದು ಇಂತಿದೆ.

ರಮಾಕಾಂತ್‌ ಅಚ್ರೇಕರ್(ಸಚಿನ್ ತೆಂಡೂಲ್ಕರ್​ ಗುರು)


ಕ್ರಿಕೆಟ್‌ ದೇವರು ಎಂದು ಕರೆಯಲ್ಪಡುವ ಸಚಿನ್​ ತೆಂಡೂಲ್ಕರ್(Sachin Tendulkar)​ ವಿಶ್ವ ಕ್ರಿಕೆಟ್​ನಲ್ಲಿ ಹಲವು ಸಾಧನೆ ಮಾಡಲು ಕಾರಣ ಅವರ ಗುರು ರಮಾಕಾಂತ್‌ ಅಚ್ರೇಕರ್(Ramakant Achrekar). ಬಾಲ್ಯದಿಂದಲೇ ಅಚ್ರೇಕರ್ ಗರಡಿಯಲ್ಲಿ ಪಳಗಿದ ಸಚಿನ್​ ಇಂದು ವಿಶ್ವ ಶ್ರೇಷ್ಠ ಆಟಗಾರರ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿ ಕಾಣಿಸಿಕೊಳ್ಳುವಂತಾಗಿದೆ. 1932ರಲ್ಲಿ ಜನಿಸಿದ ಅಚ್ರೇಕರ್ ಮುಂಬೈ ಸ್ಥಳೀಯ ಕ್ರಿಕೆಟ್‍ನಲ್ಲಿ ಉತ್ತಮ ಆಟಗಾರರಾಗಿ ಹೆಸರು ಗಳಿಸಿದವರಾಗಿದ್ದರು. ಸಚಿನ್ ತೆಂಡೂಲ್ಕರ್ ಸೇರಿದಂತೆ ವಿನೋದ್ ಕಾಂಬ್ಳಿ, ಅಜಿತ್ ಆಗರ್ಕರ್, ಪ್ರವೀಣ್‌ ಆಮ್ರೆ, ಸಮೀರ್‌ ದಿಘೆ, ಬಲ್ವಿಂದರ್‌ ಸಿಂಗ್‌ ಸಂಧು ಸೇರಿದಂತೆ ಹಲವಾರು ಕ್ರಿಕೆಟಿಗರನ್ನು ದೇಶಕ್ಕೆ ಪರಿಚಯಿಸಿದ ಹೆಗ್ಗಳಿಕೆ ಅಚ್ರೇಕರ್ ಅವರದ್ದು.


1990ರಲ್ಲಿ ಭಾರತ ಸರ್ಕಾರ ಅಚ್ರೇಕರ್ ಅವರಿಗೆ ದ್ರೋಣಾಚಾರ್ಯ ಪ್ರಶಸ್ತಿ ನೀಡಿ ಗೌರವಿಸಿತ್ತು.2010ರಲ್ಲಿ ಪದ್ಮಶ್ರೀ ಪ್ರಶಸ್ತಿಗೆ ಇವರು ಭಾಜನರಾಗಿದ್ದರು. ಸಚಿನ್​ ಎಷ್ಟೇ ದೊಡ್ಡ ಖ್ಯಾತಿ ಗಳಿಸಿದರೂ ಕೂಡ ತಮ್ಮ ಗುರುವಿನ ತ್ಯಾಗವನ್ನು ಸದಾ ನೆನಪಿಸಿಕೊಳ್ಳುತ್ತಿರುತ್ತಾರೆ. ಅಚ್ರೇಕರ್ ಅಂತಿಮ ಸಂಸ್ಕಾರಕ್ಕೆ ಶವವನ್ನು ತೆಗೆದುಕೊಂಡು ಹೋಗುವ ವೇಳೆ ಪಾರ್ಥೀವ ಶರೀರಕ್ಕೆ ಸಚಿನ್‌ ತೆಂಡುಲ್ಕರ್‌ ಕೂಡ ಹೆಗಲು ಕೊಡುವ ಮೂಲಕ ಗುರುವಿನ ಮೇಲಿನ ಪ್ರೀತಿಯನ್ನು ಮೆರೆದಿದ್ದರು. ಅಚ್ರೇಕರ್ 2019ರಲ್ಲಿ ನಿಧನ ಹೊಂದಿದ್ದರು.

ಎಸ್. ಎಂ ಆರಿಫ್(ಗೋಪಿಚಂದ್‌ ಗುರು)


ಭಾರತ ಕಂಡ ಶ್ರೇಷ್ಠ ಬ್ಯಾಡ್ಮಿಂಟನ್‌ ಆಟಗಾರರಲ್ಲಿ ಪಿ.ಗೋಪಿಚಂದ್‌(Pullela Gopichand) ಕೂಡ ಒಬ್ಬರು. ಇವರನ್ನು ಈ ಮಟ್ಟಕ್ಕೆ ಬೆಳೆಸಿದ್ದ ಇವರ ಗುರುಗಳಾದ ಎಸ್. ಎಂ ಆರಿಫ್(coach SM Arif.). ಇವರ ಕೋಚಿಂಗ್ ಮಾರ್ಗದರ್ಶನದಲ್ಲೇ ಗೋಪಿಚಂದ್ 2001 ರಲ್ಲಿ ಪ್ರತಿಷ್ಠಿತ ಆಲ್ ಇಂಗ್ಲೆಂಡ್ ಓಪನ್ ಚಾಂಪಿಯನ್‌ಶಿಪ್ ಗೆದ್ದು ಐತಿಹಾಸಿಕ ಸಾಧನೆ ಮಾಡಿದ್ದು. 11 ವಯಸ್ಸಿನಲ್ಲಿಯೇ ಬ್ಯಾಡ್ಮಿಂಟನ್ ಗೀಳಿಗೆ ಬಿದಿದ್ದ ಗೋಪಿಚಂದ್‌ ಅವರನ್ನು ಶ್ರೇಷ್ಠ ಬ್ಯಾಡ್ಮಿಂಟನ್​ ಆಟಗಾರನಾಗಿ ಮಾಡಿದ್ದು ಅವರ ಕೋಚ್​ ಆರಿಫ್. ಇವರ ಮಾರ್ಗದಶದಲ್ಲಿ ಗೋಪಿಚಂದ್‌ ಕೇವಲ 18 ವರ್ಷ ವಯಸ್ಸಿರುವಾಗ ರಾಷ್ಟ್ರೀಯ ಜೂನಿಯರ್ ಚಾಂಪಿಯನ್ ಆಗಿ ಹೊಮ್ಮಿದ್ದರು. ಮೂರು ವರ್ಷದ ನಂತರ ರಾಷ್ಟ್ರೀಯ ಬ್ಯಾಡ್ಮಿಂಟನ್ ಚಾಂಪಿಯನ್‌ಷಿಪ್ ಗೆದ್ದು ಬೀಗಿದ್ದರು. ಸತತವಾಗಿ ಐದು ವರ್ಷ ಅವರು ಆ ಪಟ್ಟವನ್ನು ಬೇರೆ ಯಾರಿಗೂ ಬಿಟ್ಟುಕೊಟ್ಟಿರಲಿಲ್ಲ.


ಚಾಂಪಿಯನ್ನರ ಗುರು ಗೋಪಿಚಂದ್‌


ಭಾರತ ಕಂಡ ಶ್ರೇಷ್ಠ ಬ್ಯಾಡ್ಮಿಂಟನ್‌ ಆಟಗಾರರಲ್ಲಿ ಪಿ.ಗೋಪಿಚಂದ್‌ ಕೂಡ ಒಬ್ಬರು. ಅವರು ಆಟಗಾರರಾಗಿ ಮಿಂಚಿದ್ದಕ್ಕಿಂತ ತರಬೇತುದಾರರಾಗಿ ಮೆರೆದಿದ್ದೇ ಹೆಚ್ಚು. ಅವರ ಗರಡಿಯಲ್ಲಿ ಸೈನಾ ನೆಹ್ವಾಲ್‌(Saina Nehwal) ಪಿ.ವಿ.ಸಿಂಧು(PV Sindhu), ಕೆ.ಶ್ರೀಕಾಂತ್‌, ಎಚ್‌.ಎಸ್‌.ಪ್ರಣಯ್‌, ಸಾಯಿ ಪ್ರಣೀತ್‌ರಂತಹ ಖ್ಯಾತ ಆಟಗಾರರು ಬೆಳಕಿಗೆ ಬಂದಿದ್ದು. ಇದರಲ್ಲಿ ಸೈನಾ ಮತ್ತು ಪಿವಿ ಸಿಂಧು ಪ್ರತಿಷ್ಠಿತ ಒಲಿಂಪಿಕ್ಸ್​ ಕ್ರೀಡಾಕೂಟದಲ್ಲಿ ಐತಿಹಾಸಿಕ ಪದಕ ಗೆದ್ದ ಸಾಧನೆ ಮಾಡಿದ್ದಾರೆ. ವಿಶ್ವಮಟ್ಟದಲ್ಲಿ ಭಾರತದ ಹೆಸರು ಬೆಳಗಿದ್ದೇ ಈ ತಾರೆಯರಿಂದ. ಭಾರತೀಯರು ಬ್ಯಾಡ್ಮಿಂಟನ್‌ನಲ್ಲಿ ಏನೆಲ್ಲ ಸಾಧಿಸಬಹುದೋ, ಅಷ್ಟೆಲ್ಲ ಸಾಧಿಸಿದ್ದಾರೆ. ಅದರ ಹಿಂದಿರುವುದು ಹೈದರಾಬಾದ್‌ನಲ್ಲಿರುವ ಗೋಪಿಚಂದ್‌ ಅಕಾಡೆಮಿ. ತರಬೇತುದಾರರಾಗಿ ಅಸಾಮಾನ್ಯ ಸಾಧನೆಯನ್ನೇ ಮಾಡಿದ ಕೀರ್ತಿ ಇವರದ್ದು.


ಸತ್ಪಾಲ್‌ ಸಿಂಗ್‌

ಒಲಿಂಪಿಕ್ಸ್‌ನಲ್ಲಿ ಎರಡು ಚಿನ್ನ ಗೆದ್ದಿರುವ ಸುಶೀಲ್‌ ಕುಮಾರ್(Sushil Kumar) ಮತ್ತು ಯೋಗೇಶ್ವರ ದತ್‌(Yogeshwar Dutt,) ಅವರನ್ನು ಭಾರತೀಯ ಕುಸ್ತಿಗೆ ಪರಿಚಯಿಸಿದ ಕೀರ್ತಿ ಮಾಜಿ ಕುಸ್ತಿಪಟು ಮತ್ತು ತರಬೇತುದಾರ ಸತ್ಪಾಲ್‌ ಸಿಂಗ್‌(Satpal Singh) ಅವರಿಗೆ ಸಲ್ಲುತ್ತದೆ. ಕುಸ್ತಿಪಟುವಾಗಿದ್ದ ಸತ್ಪಾಲ್‌ ಸಿಂಗ್‌, 1982 ಏಷ್ಯನ್‌ ಕ್ರೀಡಾಕೂಟದಲ್ಲಿ ಭಾರತಕ್ಕೆ ಚಿನ್ನ ಗೆದ್ದಿದ್ದರು. ಇದಕ್ಕೂ ಮುನ್ನ 1974ರ ಕೂಟದಲ್ಲಿ ಕಂಚು ಜಯಿಸಿದ್ದರು. ಭಾರತೀಯ ಕುಸ್ತಿಗೆ ನೀಡಿದ ಮಹೋನ್ನತ ಕೊಡುಗೆಗಾಗಿ ಅವರಿಗೆ 1983ರಲ್ಲಿ ‘ಪದ್ಮ ಶ್ರೀ’ ಪುರಸ್ಕಾರ ನೀಡಿ ಗೌರವಿಸಲಾಗಿತ್ತು. 2009ರಲ್ಲಿ ‘ದ್ರೋಣಾಚಾರ್ಯ’ ಪ್ರಶಸ್ತಿಯೂ ಅವರಿಗೆ ಅರಸಿ ಬಂದಿತ್ತು.


ಜಗದೀಶ್ ಸಿಂಗ್(ವಿಜೇಂದರ್ ಸಿಂಗ್ ಕೋಚ್​)


2008ರ ಬೀಜಿಂಗ್ ಒಲಿಂಪಿಕ್ಸ್‌ನಲ್ಲಿ ಬಾಕ್ಸರ್ ವಿಜೇಂದರ್ ಸಿಂಗ್ ಕಂಚಿನ ಪದಕ ಗೆಲ್ಲುವಲ್ಲಿ ಪ್ರಮುಖ ಪಾತ್ರವಹಿಸಿದ್ದು ಅವರ ಕೋಚ್​ ಜಗದೀಶ್ ಸಿಂಗ್. ಕ್ರೀಡಾಪಟುವಾಗಿದ್ದ ಜಗದೀಶ್ ಸಿಂಗ್ ದೇಶಕ್ಕೆ ಶ್ರೇಷ್ಠ ಬಾಕ್ಸರ್​ಗಳನ್ನು ನೀಡಬೇಕು ಎನ್ನುವ ಉದ್ದೇಶದಿಂದ ತಮ್ಮ ಮನೆ ಮತ್ತು ಜಮೀನನ್ನು ಅಡಮಾನವಿಟ್ಟು ಗ್ರಾಮೀಣ ಬ್ಯಾಂಕ್‌ನಿಂದ ನಾಲ್ಕು ಲಕ್ಷ ಸಾಲ ಪಡೆದು ಬಾಕ್ಸಿಂಗ್​ ಕ್ಲಬ್ ಆರಂಭಿಸಿದ್ದರು. ಇದೇ ಕ್ಲಬ್​ನಲ್ಲಿ ಪಳಗಿದ ವಿಜೇಂದರ್ ಒಲಿಂಪಿಕ್ಸ್​ನಲ್ಲಿ ಪದಕ ಗೆದ್ದು ಸಂಭ್ರಮಿಸಿದ್ದರು. 2007 ರಲ್ಲಿ, ಭಾರತ ಸರ್ಕಾರವು ಜಗದೀಶ್​ ಸಿಂಗ್ ಅವರಿಗೆ ಪ್ರತಿಷ್ಠಿತ ದ್ರೋಣಾಚಾರ್ಯ ಪ್ರಶಸ್ತಿಯನ್ನು ನೀಡಿ ಗೌರವಿಸಿತ್ತು.

ಇದನ್ನೂ ಓದಿ ರಾಜ ಮಾರ್ಗ ಅಂಕಣ : ಅಪವಾದ ಎಲ್ಲರ ಬದುಕಿನಲ್ಲಿಯೂ ಬರುತ್ತವೆ, ಅದನ್ನು ಮೀರಿ ನಿಲ್ಲುವುದು ಹೇಗೆ?


ರಾಹುಲ್ ದ್ರಾವಿಡ್​


ಆಟಗಾರನಾಗಿ ಮತ್ತು ಮಾರ್ಗದರ್ಶಕರಾಗಿ ಭಾರತದ ಕ್ರಿಕೆಟ್​ಗೆ ಅಪಾರ ಸೇವೆ ಸಲ್ಲಿಸಿದ್ದ ಕೀರ್ತಿ ರಾಹುಲ್​ ದ್ರಾವಿಡ್(Rahul Dravid)​ಗೆ ಸಲ್ಲುತ್ತದೆ. ಇವರು ಕರ್ನಾಟಕದವರು ಎಂಬುದು ಕನ್ನಡಿಗರ ಹೆಮ್ಮೆ. ಅಂಡರ್​-19 ಕೋಚ್​ ಆಗಿ, ಆ ಬಳಿಕ ಸೀನಿಯರ್​ ತಂಡದ ಕೋಚ್​ ಆಗಿ ಭಾರತಕ್ಕೆ ವಿಶ್ವಕಪ್​ ಗೆಲ್ಲಿಸಿಕೊಟ್ಟ ಹೆಗ್ಗಳಿಕೆ ದ್ರಾವಿಡ್​ ಅವರದ್ದಾಗಿದೆ. ಇಂದು ಭಾರತ ತಂಡದಲ್ಲಿ ಮಿಂಚುತ್ತಿರುವ ಹಲವು ಕ್ರಿಕೆಟ್​ ಆಟಗಾರರು ದ್ರಾವಿಡ್​ ಗರಡಿಯಲ್ಲೇ ಪಳಗಿದ ಆಟಗಾರರಾಗಿದ್ದಾರೆ. ಕಳೆದ ತಿಂಗಳು ಮುಕ್ತಾಯ ಕಂಡಿದ್ದ ಟಿ20 ವಿಶ್ವಕಪ್​ನಲ್ಲಿ ಭಾರತ ತಂಡ ಚಾಂಪಿಯನ್ ಆಗಿ ಹೊರಹೊಮ್ಮಿತ್ತು. ಈ ಸಾಧನೆಯ ಹಿಂದೆ ದ್ರಾವಿಡ್​ ಅವರ ಮಾರ್ಗದರ್ಶನ ಮುಖ್ಯವಾಗಿತ್ತು. ತಂಡ ಒಂದೇ ಒಂದು ಪಂದ್ಯ ಸೋಲದೆ ಕಪ್​ ಗೆದ್ದು ಇತಿಹಾಸ ನಿರ್ಮಿಸಿತ್ತು. ಒಬ್ಬ ಜಂಟಲ್ ಮ್ಯಾನ್ ಕ್ರಿಕೆಟರ್ ಆಗಿ, ಕ್ಯಾಪ್ಟನ್ ಆಗಿ, ಕೋಚ್ ಆಗಿ ಭಾರತೀಯ ಕ್ರಿಕೆಟನ್ನು ಶ್ರೀಮಂತಗೊಳಿಸಿದ ಅವರಿಗೆ ಭಾರತರತ್ನ ಪ್ರಶಸ್ತಿ(bharatha ratna award) ನೀಡಬೇಕು ಎನ್ನುವುದು ಹಲವು ಮಾಜಿ ಕ್ರಿಕೆಟಿಗರ ಆಗ್ರಹವಾಗಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಪ್ರಮುಖ ಸುದ್ದಿ

Women’s Asia Cup : ಯುಎಇ ವಿರುದ್ಧ ಭಾರತದ ವನಿತೆಯರಿಗೆ ಭರ್ಜರಿ 78 ರನ್ ವಿಜಯ

Women’s Asia Cup : ಅಬ್ಬರದ ಬ್ಯಾಟಿಂಗ್ ಪ್ರದರ್ಶನ ನೀಡಿ ನಿಗದಿತ 20 ಓವರ್​​ಗಳಲ್ಲಿ 5 ವಿಕೆಟ್​ ನಷ್ಟಕ್ಕೆ 201 ರನ್ ಬಾರಿಸಿತು. ಇದು ಭಾರತ ಮಹಿಳೆಯರ ಕ್ರಿಕೆಟ್ ತಂಡದ ಇದುವರೆಗಿನ ಗರಿಷ್ಠ ಸ್ಕೋರ್ ಆಗಿದೆ. ಪ್ರತಿಯಾಗಿ ಬ್ಯಾಟ್ ಮಾಡಿದ ಯುಎಇ ವನಿತೆಯರು ತಮ್ಮ ಪಾಲಿನ ಓವರ್​ಗಳು ಮುಕ್ತಾಯಗೊಂಡಾಗ 7 ವಿಕೆಟ್​ಗೆ 123 ರನ್​ ಬಾರಿಸಿ ಹೀನಾಯವಾಗಿ ಸೋಲೊಪ್ಪಿಕೊಂಡರು.

VISTARANEWS.COM


on

Women's Asia Cup
Koo

ಡಂಬುಲ್ಲಾ: ಭಾರತದ ಮಹಿಳೆಯರ ಕ್ರಿಕೆಟ್ ತಂಡ ಏಷ್ಯಾ ಕಪ್​ನಲ್ಲಿ (Women’s Asia Cup) ತನ್ನ ಎರಡನೇ ಗೆಲುವು ಸಾಧಿಸಿದೆ. ಈ ಮೂಲಕ ಸೆಮೀಸ್​ ಪ್ರವೇಶವನ್ನು ಸುಲಭಗೊಳಿಸಿದೆ. ಯುಎಇ (UAE Women’s Cricket Team) ತಂಡದ ವಿರುದ್ಧ ನಡೆದ ಪಂದ್ಯದಲ್ಲಿ ಅಮೋಘ 78 ರನ್​ ಗೆಲುವು ಸಾಧಿಸಿ ಗುಂಪು ಹಂತದಲ್ಲಿ ಒಟ್ಟು 4 ಅಂಕಗಳನ್ನು ಗಳಿಸಿದೆ. ಭಾರತ ತಂಡದ ಆಟಗಾರರು ಪಂದ್ಯದಲ್ಲಿ ಬ್ಯಾಟಿಂಗ್ ಹಾಗೂ ಬೌಲಿಂಗ್ ಎರಡರಲ್ಲೂ ಪಾರಮ್ಯ ಸಾಧಿಸಿ ತನ್ನ ಅಜೇಯ ಓಟ ಮುಂದುವರಿಸಿದೆ. ಇತ್ತೀಚಿನ ದಿನಗಳಲ್ಲಿ ಅತ್ಯುತ್ತಮ ಪ್ರದರ್ಶನ ನೀಡುತ್ತಿರುವ ಭಾರತ ತಂಡ ಮತ್ತೊಂದು ಸ್ಮರಣೀಯ ವಿಜಯವನ್ನು ತನ್ನದಾಗಿಸಿಕೊಂಡಿತು.

ಇಲ್ಲಿನ ರಣಗಿರಿ ಕ್ರಿಕೆಟ್ ಸ್ಟೇಡಿಯಮ್​ನಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಸೋತ ಭಾರತ ತಂಡ ಮೊದಲು ಬ್ಯಾಟ್ ಮಾಡಲು ಆಹ್ವಾನ ಪಡೆಯಿತು. ಅಂತೆಯೇ ಅಬ್ಬರದ ಬ್ಯಾಟಿಂಗ್ ಪ್ರದರ್ಶನ ನೀಡಿ ನಿಗದಿತ 20 ಓವರ್​​ಗಳಲ್ಲಿ 5 ವಿಕೆಟ್​ ನಷ್ಟಕ್ಕೆ 201 ರನ್ ಬಾರಿಸಿತು. ಇದು ಭಾರತ ಮಹಿಳೆಯರ ಕ್ರಿಕೆಟ್ ತಂಡದ ಇದುವರೆಗಿನ ಗರಿಷ್ಠ ಸ್ಕೋರ್ ಆಗಿದೆ. ಪ್ರತಿಯಾಗಿ ಬ್ಯಾಟ್ ಮಾಡಿದ ಯುಎಇ ವನಿತೆಯರು ತಮ್ಮ ಪಾಲಿನ ಓವರ್​ಗಳು ಮುಕ್ತಾಯಗೊಂಡಾಗ 7 ವಿಕೆಟ್​ಗೆ 123 ರನ್​ ಬಾರಿಸಿ ಹೀನಾಯವಾಗಿ ಸೋಲೊಪ್ಪಿಕೊಂಡರು.

ಮೊದಲು ಬ್ಯಾಟ್ ಮಾಡಿದ ಭಾರತ ತಂಡ ವಿಸ್ಫೋಟಕ ಬ್ಯಾಟಿಂಗ್ ಪ್ರದರ್ಶನ ನೀಡಿತು. ಶಫಾಲಿ ವರ್ಮಾ 18 ಎಸೆತಕ್ಕೆ 37 ರನ್ ಬಾರಿಸಿದರೆ ಸ್ಮೃತಿ ಮಂಧಾನಾ 9 ಎಸೆತಕ್ಕೆ 13 ರನ್ ಗಳಿಸಿದರು. ಆದರೆ, ಸ್ಮೃತಿ ಬೇಗ ನಿರ್ಗಮಿಸಿದರು. ಈ ವೇಳೆ ಭಾರತದ ಸ್ಕೋರ್​ 23. ಆದರೆ, ನಂತರ ಬಂದ ದಯಾಳನ್ ಹೇಮಲತಾ 4 ಎಸೆತಗಳನ್ನು ಎದುರಿಸಿ 2 ರನ್ ಬಾರಿಸುವ ಮೂಲಕ ನಿರಾಸೆ ಮೂಡಿಸಿದರು. 52 ರನ್​ಗೆ 2 ವಿಕೆಟ್​ ಕಳೆದುಕೊಂಡ ಹೊರತಾಗಿಯೂ ಭಾರತದ ರನ್​ ಗಳಿಕೆ ವೇಗ ಕಡಿಮೆ ಆಗಲಿಲ್ಲ. ನಾಯಕಿ ಹರ್ಮನ್​ಪ್ರೀತ್ ಕೌರ್​ (66 ರನ್​) ಅರ್ಧ ಶತಕ ಬಾರಿಸಿದರು. ತಾವೆದುರಿಸಿದ 47 ಎಸೆತಗಳಲ್ಲಿ 7 ಫೋರ್ ಹಾಗೂ 1 ಸಿಕ್ಸರ್ ಬಾರಿಸಿದರು. ಹೀಗಾಗಿ ನಾಲ್ಕನೇ ವಿಕೆಟ್ ಪತನಗೊಳ್ಳುವಾಗ ಭಾರತ 104 ರನ್ ಬಾರಿಸಿತು.

ಜೆಮಿಮಾ ರೋಡ್ರಿಗಸ್​ 14 ರನ್​ಗೆ ಸೀಮಿತಗೊಂಡರೆ ಕೊನೆಯಲ್ಲಿ ವಿಕೆಟ್​ ಕೀಪರ್​ ರಿಚಾ ಘೋಷ್​ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶನ ನೀಡಿದರು. ಕೇವಲ 29 ಎಸೆತಗಳನ್ನು ಎದುರಿಸಿದ ಅವರು 12 ಫೋರ್ ಹಾಗೂ 1 ಸಿಕ್ಸರ್ ಮೂಲಕ 64 ರನ್ ಬಾರಿಸಿದರು. ಇವರ ಬ್ಯಾಟಿಂಗ್​ ವೇಗಕ್ಕೆ ಯುಎಇ ಬೌಲರ್​ಗಳು ಸಂಪುರ್ಣವಾಗಿ ಮಂಕಾದರು. ಅಲ್ಲದೆ ಭಾರತ ತಂಡಕ್ಕೆ ದಾಖಲೆಯ 200 ರನ್​ಗಳ ಗುರಿ ದಾಟಲು ನೆರವಾದರು.

ಬೌಲರ್​ಗಳ ಪಾರಮ್ಯ

ದೊಡ್ಡ ಮೊತ್ತವನ್ನು ಬೆನ್ನಟ್ಟಲು ಮುಂದಾದ ಯುಎಇ ತಂಡವೂ ವೇಗದ ಆಟಕ್ಕೆ ಮೊರೆ ಹೋಗುವ ಪ್ರಯತ್ನ ಮಾಡಿತು. ಆದರೆ, ಭಾರತೀಯ ಬೌಲರ್​ಗಳು ಅದಕ್ಕೆ ಸೊಪ್ಪು ಹಾಕಲಿಲ್ಲ. ಆರಂಭಿಕ ಬ್ಯಾಟರ್​ ಇಶ್ ಒಜಾ 3 ರನ್ ಬಾರಿಸಿದ ಹೊರತಾಗಿಯೂ ತೀರ್ಥ ಸತೀಶ್​ (4), ರಿನಿತಾ ರಜಿತ್​ (7 ರನ್​), ಸಮೈರಾ (5 ರನ್​) ಬೇಗನೆ ವಿಕೆಟ್ ಒಪ್ಪಿಸಿದರು. 36ಕ್ಕೆ 3 ವಿಕೆಟ್​ ನಷ್ಟ ಮಾಡಿಕೊಂಡರ ಯುಎಇ ಸಂಕಷ್ಟಕ್ಕೆ ಒಳಗಾಯಿತು. ಆದರೆ ಮಧ್ಯಮ ಕ್ರಮಾಂಕದಲ್ಲಿ ಕವಿಶಾ ಎಗೋಡ್ಗೆ 32 ಎಸೆತಕ್ಕೆ 40 ರನ್ ಬಾರಿಸಿ ಮಿಂಚಿದರು. ಆದರೆ, ಉಳಿದವರಿಂದ ಹೆಚ್ಚಿನ ನೆರವು ಸಿಗದ ಕಾರಣ ಅವರಿಗೆ ಪಂದ್ಯ ಗೆಲ್ಲಿಸಲು ಸಾಧ್ಯವಾಗಲಿಲ್ಲ.

ಇದನ್ನೂ ಓದಿ: Paris Olympics 2024 : ಒಲಿಂಪಿಕ್ಸ್​ನಲ್ಲಿ ಅತಿ ಹೆಚ್ಚು ಪದಕಗಳನ್ನು ಪಡೆದ ಅಥ್ಲೀಟ್​ ಯಾರು? ಇಲ್ಲಿದೆ ಈ ಶ್ರೇಷ್ಠ ಕ್ರೀಡಾಪಟುವಿನ ವಿವರ

ಎ ಗುಂಪಿನಲ್ಲಿರುವ ಭಾರತ ತಂಡ ತನ್ನ ಮುಂದಿನ ಪಂದ್ಯದಲ್ಲಿ ನೇಪಾಳ ತಂಡವನ್ನು ಎದುರಿಸಲಿದೆ. ಈಗಾಗಲೇ ಎರಡು ಪಂದ್ಯ ಗೆದ್ದಿರುವ ಕಾರಣ ಭಾರತ ಬಹುತೇಕ ಸೆಮಿಫೈನಲ್ ತಲುಪಿದೆ. ಭಾರತ ಹಾಲಿ ಚಾಂಪಿಯನ್ ತಂಡವಾಗಿದ್ದು ಕಪ್ ಉಳಿಸಲು ಯತ್ನಿಸಲಿದೆ.

Continue Reading

ಕ್ರೀಡೆ

VVS Laxman: ಲಕ್ನೋ ತಂಡದ ಕೋಚ್​ ಆಗಲಿದ್ದಾರೆ ವಿವಿಎಸ್​ ಲಕ್ಷ್ಮಣ್!

VVS Laxman: ಲಕ್ಷ್ಮಣ್ ಅವರನ್ನು ಲಕ್ನೋ ಫ್ರಾಂಚೈಸಿ ಈಗಾಗಲೇ ಸಂಪರ್ಕಿಸಿದ್ದು, ಕೋಚ್​ ಆಗುವಂತೆ ಕೇಳಿಕೊಂಡಿದೆ ಎನ್ನಲಾಗಿದೆ. ಕೋಚ್​ ಆಗಲು ಲಕ್ಷ್ಮಣ್ ಕೂಡ ಒಪ್ಪಿಕೊಂಡಿದ್ದಾರೆ ಎಂದು ಕೆಲ ಆಂಗ್ಲ ಮಾಧ್ಯಮಗಳು ವರದಿ ಮಾಡಿದೆ.

VISTARANEWS.COM


on

VVS Laxman
Koo

ಬೆಂಗಳೂರು: ಪ್ರಸ್ತುತ ಎನ್​ಸಿಎ(NCA) ಅಧ್ಯಕ್ಷರಾಗಿರುವ ವಿವಿಎಸ್​ ಲಕ್ಷ್ಮಣ್​(VVS Laxman) ಅವರ ಅಧಿಕಾರಾವಧಿಯು ಸೆಪ್ಟೆಂಬರ್‌ನಲ್ಲಿ ಕೊನೆಗೊಳ್ಳಲಿದೆ. ಐಪಿಎಲ್​ನಲ್ಲಿ ಕೋಚಿಂಗ್​ ನಡೆಸುವ ಸಲುವಾಗಿ ಲಕ್ಷ್ಮಣ್​ ಮತ್ತೊಂದು ಅವಧಿಗೆ ಈ ಹುದ್ದೆಯಲ್ಲಿ ಮುಂದುವರಿಯಲು ಆಸಕ್ತಿ(VVS Laxman To Quit NCA) ಹೊಂದಿಲ್ಲ ಎನ್ನಲಾಗಿದೆ. ಮೂಲಗಳ ಪ್ರಕಾರ ಲಕ್ಷ್ಮಣ್ ಮುಂದಿನ ಆವೃತ್ತಿಯಲ್ಲಿ ಲಕ್ನೋ ಸೂಪರ್​ ಜೈಂಟ್ಸ್​(Lucknow Super Giants) ತಂಡದ ಕೋಚ್​ ಆಗಿ ಕಾರ್ಯನಿರ್ವಹಿಸಲಿದ್ದಾರೆ ಎನ್ನಲಾಗಿದೆ.

ಲಕ್ಷ್ಮಣ್ ಅವರನ್ನು ಲಕ್ನೋ ಫ್ರಾಂಚೈಸಿ ಈಗಾಗಲೇ ಸಂಪರ್ಕಿಸಿದ್ದು, ಕೋಚ್​ ಆಗುವಂತೆ ಕೇಳಿಕೊಂಡಿದೆ ಎನ್ನಲಾಗಿದೆ. ಕೋಚ್​ ಆಗಲು ಲಕ್ಷ್ಮಣ್ ಕೂಡ ಒಪ್ಪಿಕೊಂಡಿದ್ದಾರೆ ಎಂದು ಕೆಲ ಆಂಗ್ಲ ಮಾಧ್ಯಮಗಳು ವರದಿ ಮಾಡಿದೆ. ಎನ್​ಸಿಎ ಅಧ್ಯಕ್ಷರಾಗುವ ಮುನ್ನ ಲಕ್ಷ್ಮಣ್ ಸನ್​ರೈಸರ್ಸ್​ ಹೈದರಾಬಾದ್​ ತಂಡದ ಪರ ಕೆಲವು ವರ್ಷ ಮೆಂಟರ್​ ಆಗಿ ಕಾರ್ಯನಿರ್ವಹಿಸಿದ್ದರು. ಇದೀಗ ಕೋಚಿಂಗ್​ ಕಡೆ ಗಮನಹರಿಸಿದ್ದಾರೆ ಎನ್ನಲಾಗಿದೆ.

ಲಕ್ನೋ ಸೂಪರ್​ ಜೈಂಟ್ಸ್​ ತಂಡಕ್ಕೆ ಪ್ರಸ್ತುತ ಆಸ್ಟ್ರೇಲಿಯಾದ ಜಸ್ಟೀನ್​ ಲ್ಯಾಂಗ್​ ಮುಖ್ಯ ಕೋಚ್​ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಕಳೆದ ವರ್ಷ ಅವರನ್ನು ತಂಡಕ್ಕೆ ಕೋಚ್​ ಆಗಿ ನೇಮಕ ಮಾಡಿಕೊಳ್ಳಲಾಗಿತ್ತು. ಆದರೆ, ಇವರ ಮಾರ್ಗದರ್ಶನದಲ್ಲಿ ತಂಡ ನಿರೀಕ್ಷಿತ ಪ್ರದರ್ಶನ ತೋರುವಲ್ಲಿ ವಿಫಲವಾಗಿತ್ತು. ಲೀಗ್​ ಹಂತದಲ್ಲೇ ಮುಗ್ಗರಿಸಿ ಹೊರಬಿದ್ದಿತ್ತು. ಹೀಗಾಗಿ ಫ್ರಾಂಚೈಸಿ ಹೊಸ ಕೋಚ್​ ಹುಡುಕಾಟ ಆರಂಭಿಸಿದೆ ಎಂದು ತಿಳಿದುಬಂದಿದೆ.

ಟೀಮ್​ ಇಂಡಿಯಾದ ಮುಖ್ಯ ಕೋಚ್ ಆಗಿದ್ದ ರಾಹುಲ್ ದ್ರಾವಿಡ್ ಟಿ20 ವಿಶ್ವಕಪ್​ ಬಳಿಕ ತಮ್ಮ ಹುದ್ದೆಯಿಂದ ನಿವೃತ್ತರಾಗಿದ್ದರು. ದ್ರಾವಿಡ್​ ಬಳಿಕ ಲಕ್ಷ್ಮಣ್ ಅವರೇ ಭಾರತ ತಂಡದ ಮುಂದಿನ ಕೋಚ್​ ಎಂದು ಹೇಳಲಾಗಿತ್ತು. ಆದರೆ, ಅವರು ಈ ಆಫರ್​ ತಿರಸ್ಕರಿಸಿದ್ದರು. ಹೀಗಾಗಿ ಗಂಭೀರ್​ಗೆ ಈ ಅವಕಾಶ ಲಭಿಸಿತು.

ಮತ್ತೆ ಐಪಿಎಲ್​ನತ್ತ ದ್ರಾವಿಡ್​?​

ರಾಹುಲ್ ದ್ರಾವಿಡ್ ಕೂಡ ಐಪಿಎಲ್​ನಲ್ಲಿ ಕೋಚ್ ಆಗಲು ಉತ್ಸುಕರಾಗಿದ್ದಾರೆ ಎಂದು ಆಂಗ್ಲ ಮಾಧ್ಯಮವೊಂದು ವರದಿ ಮಾಡಿದೆ. ಅಲ್ಲದೆ ದ್ರಾವಿಡ್​ ಅವರು ಈಗಾಗಲೇ ಎರಡು ವರ್ಷಗಳ ಒಪ್ಪಂದಕ್ಕಾಗಿ ಐಪಿಎಲ್ ಫ್ರಾಂಚೈಸಿಯೊಂದಿಗೆ ಮಾತುಕತೆ ನಡೆಸುತ್ತಿದ್ದಾರೆ ಎಂದು ವರದಿ ಹೇಳಿದೆ.

ಇದನ್ನೂ ಓದಿ Rahul Dravid: ಮತ್ತೆ ಐಪಿಎಲ್​ ಕೋಚಿಂಗ್​ನತ್ತ ಮುಖ ಮಾಡಿದ ರಾಹುಲ್‌ ದ್ರಾವಿಡ್‌!

“ರಾಹುಲ್​ ದ್ರಾವಿಡ್​ ಅವರು ಎರಡು ವರ್ಷಗಳ ಒಪ್ಪಂದಕ್ಕಾಗಿ ಐಪಿಎಲ್ ತಂಡದೊಂದಿಗೆ ಮಾತುಕತೆ ನಡೆಸುತ್ತಿದ್ದಾರೆ. ಮೂಲಗಳ ಪ್ರಕಾರ ಒಂದು ಸುತ್ತಿನ ಮಾತುಕತೆ ಕೂಡ ನಡೆದಿದೆ” ಎಂದು ಕ್ರಿಕ್​ಬಜ್​ ವರದಿ ಮಾಡಿದೆ. ರಾಹುಲ್ ದ್ರಾವಿಡ್ ಅವರು ಈ ಹಿಂದೆ ಐಪಿಎಲ್​ನಲ್ಲಿ ರಾಜಸ್ಥಾನ ರಾಯಲ್ಸ್​ ತಂಡದ ಕೋಚ್​ ಆಗಿ ಕರ್ತವ್ಯ ನಿರ್ವಹಿಸಿದ್ದರು. ಬಳಿಕ ಅವರು ಅಂಡರ್​-19 ಮತ್ತು ಎನ್​ಸಿಎಯಲ್ಲಿ ಕಾರ್ಯನಿರ್ವಹಿಸಿದ್ದರು.

ಭಾರತಕ್ಕೆ 17 ವರ್ಷಗಳ ಬಳಿಕ ಟಿ20 ವಿಶ್ವಕಪ್​ ಗೆಲ್ಲಿಸಿದ ಕೋಚ್​ ದ್ರಾವಿಡ್​ ಅವರನ್ನು ಕೆಕೆಆರ್​ ಮಾತ್ರವಲ್ಲದೆ ಇದುವರೆಗೂ ಕಪ್​ ಗೆಲ್ಲದ ಆರ್​ಸಿಬಿ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ಕೂಡ ಕೋಚ್​ ಮಾಡಲು ರೇಸ್​ನಲ್ಲಿವೆ ಎಂದು ಹೇಳಲಾಗಿದೆ. ಡೆಲ್ಲಿ ತಂಡದ ಮೆಂಟರ್​ ಆಗಿರುವ ಸೌರವ್​ ಗಂಗೂಲಿ ಅವರು ದ್ರಾವಿಡ್​ ಮನವೊಲಿಸಿ ಕೋಚ್​ ಆಗುವಂತೆ ಒಪ್ಪಿಸುವ ಸಾಧ್ಯತೆಯೂ ಇದೆ. ಏಕೆಂದರೆ ದ್ರಾವಿಡ್​ ಅವರನ್ನು ಟೀಮ್​ ಇಂಡಿಯಾದ ಕೋಚ್​ ಆಗಿ ಮಾಡಿದ್ದು ಕೂಡ ಗಂಗೂಲಿ. ಬಿಸಿಸಿಐ ಅಧ್ಯಕ್ಷರಾಗಿದ್ದ ವೇಳೆ ಗಂಗೂಲಿ ಒತ್ತಾಯ ಪೂರ್ವಕವಾಗಿ ದ್ರಾವಿಡ್​ ಅವರನ್ನು ಕೋಚ್​ ಆಗುವಂತೆ ಒಪ್ಪಿಸಿದ್ದರು. ಕುಟುಂಬಕ್ಕೆ ಹೆಚ್ಚಿನ ಒತ್ತು ನೀಡಲು ಸಾಧ್ಯವಾಗುತ್ತಿಲ್ಲ ಎನ್ನುವ ಕಾರಣಕ್ಕೆ ಕೋಚಿಂಗ್​ ಹುದ್ದೆಯಲ್ಲಿ ಮುಂದುವರಿಯಲು ಹಿಂದೇಟು ಹಾಕಿರುವ ದ್ರಾವಿಡ್​ ಐಪಿಎಲ್​ ಕೋಚಿಂಗ್​ ನಡೆಸಲಿದ್ದಾರಾ ಎಂದು ಕಾದು ನೋಡಬೇಕಿದೆ.

Continue Reading

ಪ್ರಮುಖ ಸುದ್ದಿ

Paris Olympics 2024 : ಒಲಿಂಪಿಕ್ಸ್​ನಲ್ಲಿ ಅತಿ ಹೆಚ್ಚು ಪದಕಗಳನ್ನು ಪಡೆದ ಅಥ್ಲೀಟ್​ ಯಾರು? ಇಲ್ಲಿದೆ ಈ ಶ್ರೇಷ್ಠ ಕ್ರೀಡಾಪಟುವಿನ ವಿವರ

Paris Olympics 2024 : ಈ ಪಟ್ಟಿಯಲ್ಲಿ ಅಮೆರಿಕದ ಖ್ಯಾತ ಈಜುಗಾರ ಮೈಕೆಲ್ ಫೆಲ್ಪ್ಸ್ ಅಗ್ರಸ್ಥಾನದಲ್ಲಿದ್ದಾರೆ. ಒಲಿಂಪಿಕ್ಸ್​ನಲ್ಲಿ 23 ಚಿನ್ನ ಸೇರಿದಂತೆ ಒಟ್ಟು 28 ಪದಕಗಳನ್ನು ಗೆದ್ದಿದ್ದಾರೆ. 2004 ರ ಅಥೆನ್ಸ್ ಒಲಿಂಪಿಕ್ಸ್ ನಲ್ಲಿ, ಫೆಲ್ಪ್ಸ್ 6 ಚಿನ್ನದ ಪದಕಗಳು ಮತ್ತು 2 ಕಂಚಿನ ಪದಕಗಳನ್ನು ಗೆದ್ದುಕೊಂಡಿದ್ದರು. 2008 ರ ಆವೃತ್ತಿಯಲ್ಲಿ, ಫೆಲ್ಪ್ಸ್ ಮಾರ್ಕ್ ಸ್ಪಿಟ್ಜ್ ಅವರ ದಾಖಲೆಯನ್ನು ಮುರಿದರು ಮತ್ತು 8 ಚಿನ್ನದ ಪದಕಗಳನ್ನು ಗಳಿಸಿದ್ದರು.

VISTARANEWS.COM


on

Paris Olympics 2024
Koo

ಬೆಂಗಳೂರು: ಪ್ಯಾರಿಸ್​​ನಲ್ಲಿ ನಡೆಯಲಿರುವ 2024ನೇ ಆವೃತ್ತಿಯ (Paris Olympics 2024) ಒಲಿಂಪಿಕ್ಸ್​ ಆರಂಭಕ್ಕೆ ಕೆಲವೇ ದಿನಗಳು ಉಳಿದಿವೆ. ವಿಶ್ವದಾದ್ಯಂತದ ಕ್ರೀಡಾಪಟುಗಳು ತಮ್ಮ ಜೀವನದ ಗುರಿಯಾಗಿರುವ ಒಲಿಂಪಿಕ್​​ ಪದಕಗಳನ್ನು ಪಡೆಯುವ ಭರವಸೆಯೊಂದಿಗೆ ಪ್ರೇಮಿಗಳ ನಗರಕ್ಕೆ ಹೊರಟಿದ್ದಾರೆ. ಜುಲೈ 26 ರಂದು ಪ್ಯಾರಿಸ್​​ನಲ್ಲಿ ಉದ್ಘಾಟನಾ ಸಮಾರಂಭದೊಂದಿಗೆ ಒಲಿಂಪಿಕ್ಸ್ ಪ್ರಾರಂಭವಾಗಲಿದ್ದು, 27 ರಿಂದ ಕ್ರೀಡಾಕೂಟಗಳು ಪ್ರಾರಂಭವಾಗಲಿವೆ.

ಪದಕಗಳು ಎಲ್ಲಾ ಕ್ರೀಡಾಪಟುಗಳಿಗೆ ದೃಢವಾದ ನಂಬಿಕೆಯಾಗಿದೆ. ಈ ನಡುವೆ ಒಲಿಂಪಿಕ್ಸ್​ ಇತಿಹಾಸದಲ್ಲಿ ​​ ಹೆಚ್ಚಿನ ಪದಕಗಳನ್ನು ಗಳಿಸಿದ ಕ್ರೀಡಾಪಟುಗಳು ಮತ್ತು ತಂಡಗಳನ್ನು ಯಾವುದು ಎಂಬುದನ್ನು ನೋಡೊಣ.

ಅತಿ ಹೆಚ್ಚು ಪದಕಗಳನ್ನು ಗೆದ್ದ ಕ್ರೀಡಾಪಟುಗಳು

ಈ ಪಟ್ಟಿಯಲ್ಲಿ ಅಮೆರಿಕದ ಖ್ಯಾತ ಈಜುಗಾರ ಮೈಕೆಲ್ ಫೆಲ್ಪ್ಸ್ ಅಗ್ರಸ್ಥಾನದಲ್ಲಿದ್ದಾರೆ. ಒಲಿಂಪಿಕ್ಸ್​ನಲ್ಲಿ 23 ಚಿನ್ನ ಸೇರಿದಂತೆ ಒಟ್ಟು 28 ಪದಕಗಳನ್ನು ಗೆದ್ದಿದ್ದಾರೆ. 2004 ರ ಅಥೆನ್ಸ್ ಒಲಿಂಪಿಕ್ಸ್ ನಲ್ಲಿ, ಫೆಲ್ಪ್ಸ್ 6 ಚಿನ್ನದ ಪದಕಗಳು ಮತ್ತು 2 ಕಂಚಿನ ಪದಕಗಳನ್ನು ಗೆದ್ದುಕೊಂಡಿದ್ದರು. 2008 ರ ಆವೃತ್ತಿಯಲ್ಲಿ, ಫೆಲ್ಪ್ಸ್ ಮಾರ್ಕ್ ಸ್ಪಿಟ್ಜ್ ಅವರ ದಾಖಲೆಯನ್ನು ಮುರಿದರು ಮತ್ತು 8 ಚಿನ್ನದ ಪದಕಗಳನ್ನು ಗಳಿಸಿದ್ದರು.

ಮಹಿಳಾ ಕ್ರೀಡಾಪಟುಗಳ ವಿಷಯಕ್ಕೆ ಬಂದಾಗ, ಸೋವಿಯತ್ ಒಕ್ಕೂಟದ ಲಾರಿಸಾ ಲ್ಯಾಟಿನಿನಾ ಅತಿ ಹೆಚ್ಚು ಪದಕಗಳನ್ನು ಗೆದ್ದ ದಾಖಲೆಯನ್ನು ಹೊಂದಿದ್ದಾರೆ. ಆರ್ಟಿಸ್ಟಿಕ್​ ಜಿಮ್ಯಾಸ್ಟಿಕ್​ ಪಟು ಲ್ಯಾಟಿನಿನಾ 18 ಪದಕಗಳನ್ನು ಗೆದ್ದಿದ್ದಾರೆ. ಅದರಲ್ಲಿ 9 ಕ್ಕೆ ಚಿನ್ನ. ಚಿನ್ನದ ಪದಕ ಹಾಗೂ ಒಟ್ಟು ಪದಕಗಳ ವಿಚಾರಕ್ಕೆ ಬಂದಾಗ ಮಹಿಳಾ ಕ್ರೀಡಾಪಟುವಾಗಿ ಗರಿಷ್ಠ ಸಾಧನೆಯಾಗಿದೆ.

ಇದನ್ನೂ ಓದಿ: Paris Olympics 2024 : ಒಲಿಂಪಿಕ್ಸ್​ನಲ್ಲಿ ಸ್ಪರ್ಧಿಸಲಿರುವ ರಾಜ್ಯದ ಕ್ರೀಡಾಪಟುಗಳಿಗೆ ತಲಾ 5 ಲಕ್ಷ ರೂ. ಪ್ರೋತ್ಸಾಹಧನ

ಒಲಿಂಪಿಕ್ಸ್​​ನಲ್ಲಿ ಅತಿ ಹೆಚ್ಚು ಪದಕಗಳನ್ನು ಗೆದ್ದವರ ಪಟ್ಟಿಯಲ್ಲಿ ಮಾರಿಟ್ ಜೋರ್ಗೆನ್ ಮೂರನೇ ಸ್ಥಾನದಲ್ಲಿದ್ದಾರೆ. ನಾರ್ವೆಯ ಕ್ರಾಸ್ ಕಂಟ್ರಿ ಸ್ಕೇಟಿಂಗ್​ ಮಹಿಳಾ ಸ್ಪರ್ಧಿಯಾಗಿರುವ ಇವರು 15 ಪದಕಗಳನ್ನು ಗೆದ್ದಿದ್ದಾರೆ. ಇದರಲ್ಲಿ 8 ಚಿನ್ನದ ಪದಕಗಳು.

ಅಧಿಕ ಪದಕಗಳನ್ನು ಹೊಂದಿರುವ ರಾಷ್ಟ್ರ

ಹೆಚ್ಚಿನ ಪದಕಗಳನ್ನು ಹೊಂದಿರುವ ರಾಷ್ಟ್ರಗಳ ವಿಷಯಕ್ಕೆ ಬಂದಾಗ ಅಮೆರಿಕ ಒಲಿಂಪಿಕ್ಸ್​ ಇತಿಹಾಸದಲ್ಲಿ ಅತ್ಯಂತ ಪ್ರಬಲವಾಗಿದೆ. ಯುಎಸ್ಎ ಇದುವರೆಗೆ 2,522 ಪದಕಗಳನ್ನು ಗೆದ್ದಿದೆ, ಅದರಲ್ಲಿ 1,022 ಚಿನ್ನ. ಇದು ಒಲಿಂಪಿಕ್ಸ್​​ನಲ್ಲಿ ರಾಷ್ಟ್ರವೊಂದು ಅತಿ ಹೆಚ್ಚು ಚಿನ್ನದ ಪದಕಗಳನ್ನು ಗೆದ್ದ ದಾಖಲೆಯಾಗಿದೆ. ಜರ್ಮನಿ 1083 ಪದಕಗಳು (351 ಚಿನ್ನ,371 ಬೆಳ್ಳಿ, 361 ಕಂಚು) ಎರಡನೇ ಸ್ಥಾನದಲ್ಲಿದೆ. ಯುನೈಟೆಡ್ ಕಿಂಗ್​ಡಮ್​ 965 (304 ಚಿನ್ನ, 329 ಬೆಳ್ಳಿ, 332 ಕಂಚು) ಮೂರನೇ ಸ್ಥಾನ ಹೊಂದಿದೆ. ಫ್ರಾನ್ಸ್​ (910 ಪದಕ), ಇಟಲಿ (713 ಪದಕ), ಚೀನಾ (713 ಪದಕ) ನಂತರದಲ್ಲಿ ಸ್ಥಾನಗಳಲ್ಲಿವೆ.

ಒಂದೇ ಆವೃತ್ತಿಯಲ್ಲಿ ಅತಿ ಹೆಚ್ಚು ಚಿನ್ನದ ಪದಕಗಳನ್ನು ಗೆದ್ದ ಕ್ರೀಡಾಪಟುಗಳು

ಫೆಲ್ಪ್ಸ್ ಒಂದೇ ಆವೃತ್ತಿಯಲ್ಲಿ ಅತಿ ಹೆಚ್ಚು ಚಿನ್ನದ ಪದಕಗಳನ್ನು ಗೆದ್ದ ದಾಖಲೆ ಹೊಂದಿದ್ದಾರೆ. ಮಹಿಳಾ ಅಥ್ಲೀಟ್​​ಗಳ ವಿಷಯಕ್ಕೆ ಬಂದರೆ, ಜರ್ಮನಿಯ ಈಜುಗಾರ್ತಿ ಕ್ರಿಸ್ಟಿನ್ ಒಟ್ಟೊ 1988ರ ಒಲಿಂಪಿಕ್ಸ್​ನಲ್ಲಿ 6 ಅಂಕಗಳೊಂದಿಗೆ ದಾಖಲೆಯನ್ನು ಹೊಂದಿದ್ದಾರೆ.

1984ರ ಲಾಸ್ ಏಂಜಲೀಸ್ ಒಲಿಂಪಿಕ್ಸ್​​ನಲ್ಲಿ 83 ಚಿನ್ನದ ಪದಕಗಳನ್ನು ಗೆದ್ದಿದ್ದ ಅಮೆರಿಕ, ಒಂದೇ ಆವೃತ್ತಿಯಲ್ಲಿ ಅತಿ ಹೆಚ್ಚು ಚಿನ್ನದ ಪದಕಗಳನ್ನು ಗೆದ್ದ ದಾಖಲೆ ತನ್ನದಾಗಿಸಿಕೊಂಡಿದೆ.

Continue Reading

ಕ್ರೀಡೆ

Women’s T20 World Cup: ಬಾಂಗ್ಲಾದಲ್ಲಿ ಭುಗಿಲೆದ್ದ ಹಿಂಸಾಚಾರ; ಮಹಿಳಾ ಟಿ20 ವಿಶ್ವಕಪ್ ​ಸ್ಥಳಾಂತರ ಸಾಧ್ಯತೆ!

Women’s T20 World Cup: ಒಂದೊಮ್ಮೆ ಬಾಂಗ್ಲಾದೇಶದಲ್ಲಿ ಶಾಂತಿ ನೆಲೆಸದೇ ಹೋದರೆ, ಭದ್ರತಾ ಕಾರಣದಿಂದ ಟೂರ್ನಿಯನ್ನು ಬಾಂಗ್ಲಾದೇಶದಿಂದ ಬೇರೆ ದೇಶಕ್ಕೆ ಸ್ಥಳಾಂತರಗೊಳ್ಳುವ ಸಾಧ್ಯತೆ ಇದೆ.

VISTARANEWS.COM


on

Women's T20 World Cup
Koo

ಢಾಕಾ: ಬಹುನಿರೀಕ್ಷಿತ ಮಹಿಳಾ ಟಿ20 ವಿಶ್ವಕಪ್‌ ಟೂರ್ನಿ(Women’s T20 World Cup) ಅಕ್ಟೋಬರ್‌ನಲ್ಲಿ ಬಾಂಗ್ಲಾದೇಶ ಆತಿಥ್ಯದಲ್ಲಿ ನಡೆಯಲಿದೆ. ಆದರೆ, ಬಾಂಗ್ಲಾದೇಶದಲ್ಲಿ(bangladesh violence)  ಸರ್ಕಾರಿ ಉದ್ಯೋಗಗಳಲ್ಲಿನ ಮೀಸಲಾತಿ ವ್ಯವಸ್ಥೆಯಲ್ಲಿ ಸುಧಾರಣೆಗೆ ಒತ್ತಾಯಿಸಿ ಅಲ್ಲಿನ ನಾಗರೀಕರು ನಡೆಸುತ್ತಿರುವ ಪ್ರತಿಭಟನೆ, ಗಲಭೆಗಳು ಹಿಂಸಾತ್ಮಕ ರೂಪ ತಳೆದಿದೆ. ಇದೇ ಕಾರಣಕ್ಕೆ ಬಾಂಗ್ಲಾದೇಶದಲ್ಲಿನ ಭದ್ರತೆ ಪರಿಸ್ಥಿತಿಯ ಬಗ್ಗೆ ಗಮನ ಹರಿಸುವುದಾಗಿ ಅಂತಾರಾಷ್ಟ್ರೀಯ ಕ್ರಿಕೆಟ್‌ ಸಮಿತಿ (ICC) ಹೇಳಿದೆ.

ಒಂದೊಮ್ಮೆ ಬಾಂಗ್ಲಾದೇಶದಲ್ಲಿ ಶಾಂತಿ ನೆಲೆಸದೇ ಹೋದರೆ, ಭದ್ರತಾ ಕಾರಣದಿಂದ ಟೂರ್ನಿಯನ್ನು ಬಾಂಗ್ಲಾದೇಶದಿಂದ ಬೇರೆ ದೇಶಕ್ಕೆ ಸ್ಥಳಾಂತರಗೊಳ್ಳುವ ಸಾಧ್ಯತೆ ಇದೆ. ಮೂಲಗಳ ಪ್ರಕಾರ ಟೂರ್ನಿ ಸ್ಥಳಾಂತರಗೊಂಡರೆ ಭಾರತದಲ್ಲಿ ನಡೆಯಲಿದೆ ಎನ್ನಲಾಗಿದೆ. ಸದ್ಯ ಪೊಲೀಸರು ಢಾಕಾದಲ್ಲಿ ನಿಷೇಧಾಜ್ಞೆ ಜಾರಿ ಮಾಡಿದ್ದು. ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿರುವವರ ಮೇಲೆ ಲಾಠಿ ಚಾರ್ಜ್​ ನಡೆಸುತ್ತಿದ್ದಾರೆ. ಕೆಲವರು ಪೊಲೀಸ ಮೇಲೆಯೇ ದಾಳಿ ನಡೆಸುತ್ತಿರುವ ವಿಡಿಯೊಗಳು ಕೂಡ ವೈರಲ್​ ಆಗುತ್ತಿದೆ. ಇದುವರೆಗೆ ಹಿಂಸಾಚಾರದಲ್ಲಿ 150ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದಾರೆ.

ಬಾಂಗ್ಲಾ ವಿಮೋಚನೆ ಹೋರಾಟದಲ್ಲಿ (Bangladesh Protests) ಭಾಗಿಯಾಗಿದ್ದವರ ಕುಟುಂಬದವರಿಗೆ ಸರ್ಕಾರಿ ಉದ್ಯೋಗದಲ್ಲಿ ಶೇ. 30ರಷ್ಟು ಮೀಸಲಾತಿ (Job Reservation) ನೀಡುವ ನಿಯಮವನ್ನು ಕೋರ್ಟ್‌ ಹಿಂತೆಗೆದುಕೊಂಡಿದೆ. ಆದರೆ ಸಂಪೂರ್ಣ ರದ್ದುಗೊಳಿಸಲಿಲ್ಲ. ಶೇ. 30ರಷ್ಟಿದ್ದ ಮೀಸಲಾತಿಯನ್ನು ಶೇ. 5ಕ್ಕೆ ಇಳಿಸಲಾಗಿದೆ. ಇದೇ ಕಾರಣಕ್ಕೆ ಇಲ್ಲಿ ಹೋರಾಟ ನಡೆಸುತ್ತಿದ್ದಾರೆ.

ಏನಿದು ವಿವಾದ?

1971ರಲ್ಲಿ ಪಾಕಿಸ್ತಾನದಿಂದ ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಯೋಧರು ಮತ್ತು ಹೋರಾಟಗಾರರ ಸಂಬಂಧಿಕರಿಗೆ ಉದ್ಯೋಗಗಳಲ್ಲಿ ಶೇ. 30ರಷ್ಟು ಮೀಸಲಾತಿ ಘೋಷಣೆಯಾದ ಬಳಿಕ ವಿದ್ಯಾರ್ಥಿಗಳು ಪ್ರತಿಭಟನೆಗೆ ಇಳಿದಿದ್ದರು. ರಾಜಧಾನಿ ಢಾಕಾ ಮತ್ತು ಇತರ ನಗರಗಳಲ್ಲಿ ನೂರಾರು ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಕಳೆದ ತಿಂಗಳಿನಿಂದ ರ‍್ಯಾಲಿಗಳನ್ನು ಪ್ರಾರಂಭಿಸಿದರು. ಶಾಂತವಾಗಿಯೇ ನಡೆಯುತ್ತಿದ್ದ ಪ್ರತಿಭಟನೆಕಾರರ ಮೇಲೆ ಪ್ರಧಾನಿ ಶೇಖ್‌ ಹಸೀನಾ ಅವರ ಆಡಳಿತರೂಢ ಅವಾಮಿ ಲೀಗ್‌ ಪಕ್ಷದ ಕಾರ್ಯಕರ್ತರು ದಾಳಿ ನಡೆಸಿದರು. ಆ ಬಳಿಕ ಪ್ರತಿಭಟನೆ ಹಿಂಸೆಯ ರೂಪ ತಾಳಿತು.

ಇದನ್ನೂ ಓದಿ Bangla Agitation Explainer: ಬಾಂಗ್ಲಾದೇಶ ಏಕೆ ಹೊತ್ತಿ ಉರಿಯುತ್ತಿದೆ? ವಿದ್ಯಾರ್ಥಿಗಳು ಏಕೆ ಹಿಂಸಾಚಾರಕ್ಕಿಳಿದಿದ್ದಾರೆ?

ದೇಶದ ವಿವಿಧ ಸ್ಥಳಗಳಲ್ಲಿ ಪ್ರತಿಭಟನೆಗಳು ಮತ್ತು ಗಲಭೆಗಳು ನಡೆಯುತ್ತಿರುವ ಕಾರಣ ಸುಮಾರು 1,000ರಷ್ಟು ಆತಂಕಿತ ಭಾರತೀಯ ವಿದ್ಯಾರ್ಥಿಗಳು ಭಾರತಕ್ಕೆ ಮರಳಿದ್ದಾರೆ. 778 ಭಾರತೀಯರು ಭೂಮಾರ್ಗದಲ್ಲಿ ತಾಯ್ನೆಲಕ್ಕೆ ಬಂದು ಸೇರಿದ್ದು, 200ಕ್ಕೂ ಅಧಿಕ ವಿದ್ಯಾರ್ಥಿಗಳು ವಿಮಾನದಲ್ಲಿ ಮರಳಿದ್ದಾರೆ.

ಈ ಪ್ರತಿಭಟನೆಯ ಹಿಂದೆ ರಾಜಕೀಯದ ಛಾಯೆಯೂ ಇದೆ. 1971ರ ಬಾಂಗ್ಲಾ ವಿಮೋಚನೆ ಹೋರಾಟದಲ್ಲಿ ಮುಂಚೂಣಿಯಲ್ಲಿ ಇದ್ದುದು ಶೇಖ್‌ ಮುಜಿಬುರ್‌ ರೆಹಮಾನ್‌ ಅವರ ಅವಾಮಿ ಲೀಗ್‌ ಪಕ್ಷ. ಈಗ ಪ್ರಧಾನಿ ಆಗಿರುವ ಶೇಖ್‌ ಹಸೀನಾ ಇವರ ಮಗಳು. ಹಾಗಾಗಿ ಅವಾಮಿ ಲೀಗ್‌ನ ಬೆಂಬಲಿಗರಿಗೆ ಮಾತ್ರ ಈ ಮೀಸಲಾತಿಯಿಂದ ಲಾಭ ಆಗುತ್ತದೆ ಎನ್ನುವುದು ಪ್ರತಿಪಕ್ಷಗಳ ಆರೋಪ.

Continue Reading
Advertisement
Vande Mataram
ದೇಶ6 mins ago

Vande Mataram: ಸಂಸತ್ತಿನಲ್ಲಿ ವಂದೇ ಮಾತರಂ, ಥ್ಯಾಂಕ್ಸ್‌ ಎಂದು ಹೇಳುವಂತಿಲ್ಲ; ಏಕಿಂಥ ಆದೇಶ?

karnataka Weather Forecast
ಮಳೆ32 mins ago

Karnataka Weather : ಥಂಡಿ ಮಿಶ್ರಿತ ಗಾಳಿ-ಮಳೆಗೆ ಹೈರಣಾದ ಜನತೆ; ಜು.25ರವರಗೆ ಮಳೆ ಮುಂದುವರಿಕೆ

Karnataka Rain
ಕರ್ನಾಟಕ58 mins ago

Karnataka Rain: ಶಿರೂರು ಗುಡ್ಡ ಕುಸಿತದ ಸ್ಥಳ ವೀಕ್ಷಿಸಿದ ಸಿಎಂ; NDRF-SDRF ತಂಡಗಳ ಕಾರ್ಯಕ್ಕೆ ಮೆಚ್ಚುಗೆ

Women's Asia Cup
ಪ್ರಮುಖ ಸುದ್ದಿ58 mins ago

Women’s Asia Cup : ಯುಎಇ ವಿರುದ್ಧ ಭಾರತದ ವನಿತೆಯರಿಗೆ ಭರ್ಜರಿ 78 ರನ್ ವಿಜಯ

karnataka rain
ಮಳೆ58 mins ago

Karnataka Rain : ಭರ್ತಿಯತ್ತ ಜಲಾಶಯಗಳು; ಪ್ರವಾಹ ಭೀತಿ ಹಿನ್ನೆಲೆ ನದಿ ತೀರದಲ್ಲಿ ಹೈ ಅಲರ್ಟ್

Guru Purnima 2024
ಅಂಕಣ1 hour ago

Guru Purnima 2024: ಗುರು ಎಂದರೆ ವ್ಯಕ್ತಿಯಲ್ಲ, ಅದ್ಭುತವಾದ ಶಕ್ತಿ!

Fatty liver disease
ಆರೋಗ್ಯ1 hour ago

Fatty Liver Problem: ಫ್ಯಾಟಿ ಲಿವರ್‌ ಸಮಸ್ಯೆ ಎದುರಿಸುತ್ತಿದ್ದೀರಾ? ಈ ಮೂರು ಪೇಯಗಳಿಂದ ಎಂದೆಂದಿಗೂ ದೂರವಿರಿ

Lakshmi Hebbalkar
ಉಡುಪಿ1 hour ago

Lakshmi Hebbalkar: ಮಳೆಗೆ ತತ್ತರಿಸಿದ ಉಡುಪಿ; ನನ್ನ ಅವಶ್ಯಕತೆ ಇದ್ದಾಗಷ್ಟೇ ಬರ್ತೀನಿ ಎಂದ ಲಕ್ಷ್ಮೀ ಹೆಬ್ಬಾಳಕರ್

Kanwar Yatra
ದೇಶ2 hours ago

Kanwar Yatra: ನೇಮ್‌ಪ್ಲೇಟ್‌ ಅಳವಡಿಕೆಗೆ ಆದೇಶ ಪ್ರಶ್ನಿಸಿ ಅರ್ಜಿ; ಸುಪ್ರೀಂ ಕೋರ್ಟ್‌ನಲ್ಲಿ ನಾಳೆ ವಿಚಾರಣೆ

HD Kumaraswamy
ಕರ್ನಾಟಕ2 hours ago

HD Kumaraswamy: ದರೋಡೆ, ಲೂಟಿ ತಡೆಯಲು ಸೇನೆ ಕರೆಸಬೇಕಿತ್ತಾ? ಡಿಕೆಶಿಗೆ ತಿರುಗೇಟು ಕೊಟ್ಟ ಎಚ್‌ಡಿಕೆ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Rain
ಮಳೆ1 day ago

Karnataka Rain : ಭಾರಿ ಮಳೆಗೆ ಮನೆ ಗೋಡೆ ಕುಸಿತ; ಕೊಟ್ಟಿಗೆಯಲ್ಲಿದ್ದ ಜಾನುವಾರುಗಳು ಸಾವು

karnataka Rain
ಮಳೆ1 day ago

Karnataka Rain : ಹಳ್ಳ ದಾಟಲು ಹೋಗಿ ನೀರುಪಾಲಾದ ಜಾನುವಾರು; ಬಿರುಗಾಳಿಗೆ ಕಳಚಿದ ವಿಂಡ್‌ ಫ್ಯಾನ್‌

karnataka Rain
ಮಳೆ2 days ago

Karnataka Rain : ಬೀದಿಗೆ ತಂದ ರಣಮಳೆ; ಮನೆ ಕುಸಿದು ಬಿದ್ದು 9 ತಿಂಗಳ ಗರ್ಭಿಣಿ ನರಳಾಟ

Karnataka Rain
ಮಳೆ2 days ago

Karnataka Rain : ರಾಜ್ಯದಲ್ಲಿ ಮಳೆಯ ಆರ್ಭಟ; ರಾತ್ರಿ ಕಳೆದು ಬೆಳಗಾಗುವುದರೊಳಗೆ ಕಂದಕ ನಿರ್ಮಾಣ

Karnataka Rain
ಮಳೆ3 days ago

Karnataka Rain : ಭಾರಿ ಮಳೆ ಎಫೆಕ್ಟ್‌; ಉಕ್ಕಿ ಹರಿಯುತ್ತಿದ್ದ ನದಿಯಲ್ಲಿ ಕೊಚ್ಚಿ ಹೋದ ರಾಸು

Uttara Kannada Landslide
ಮಳೆ3 days ago

Uttara Kannada Landslide: ಶಿರೂರು ಗುಡ್ಡ ಕುಸಿತ; ಅಖಾಡಕ್ಕಿಳಿದ ಜಿಯೊಲಾಜಿಕಲ್ ಸರ್ವೆ ಆಫ್ ಇಂಡಿಯಾ ಟೀಂ

Karnataka Rain
ಮಳೆ5 days ago

Karnataka Rain : ಕಾರವಾರದಲ್ಲಿ ಮಳೆ ಅವಾಂತರ; ಮನೆ ಮೇಲೆ ಗುಡ್ಡ ಕುಸಿದು ವೃದ್ಧ ಸಾವು

karnataka Rain
ಮಳೆ5 days ago

Karnataka Rain : ಭಾರಿ ಮಳೆಗೆ ನಿಯಂತ್ರಣ ತಪ್ಪಿ ಕೆರೆಗೆ ಉರುಳಿ ಬಿದ್ದ ಕಾರು; ನಾಲ್ವರು ಪ್ರಾಣಾಪಾಯದಿಂದ ಪಾರು

karnataka Weather Forecast
ಮಳೆ6 days ago

Karnataka Weather : ವ್ಯಾಪಕ ಮಳೆ ಎಚ್ಚರಿಕೆ; ನಾಳೆಯೂ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

karnataka Rain
ಮಳೆ6 days ago

Karnataka Rain : ಶಾಲಾ-ಕಾಲೇಜಿಗೆ ಈ ದಿನ ರಜಾ; ಅಬ್ಬರಿಸುತ್ತಿರುವ ಮಳೆಗೆ ಮನೆಯಲ್ಲೇ ಎಲ್ಲರೂ ಸಜಾ!

ಟ್ರೆಂಡಿಂಗ್‌