Kalaburagi News : ಕಾಮಗಾರಿ ವೇಳೆ ಕಟ್ಟಡದ ಮೇಲಿಂದ ಬಿದ್ದು ಕಾರ್ಮಿಕ ಸಾವು - Vistara News

ಕಲಬುರಗಿ

Kalaburagi News : ಕಾಮಗಾರಿ ವೇಳೆ ಕಟ್ಟಡದ ಮೇಲಿಂದ ಬಿದ್ದು ಕಾರ್ಮಿಕ ಸಾವು

Kalaburagi News : ಕಲಬುರಗಿಯಲ್ಲಿ ಕಟ್ಟಡ ನಿರ್ಮಾಣ ಕಾಮಗಾರಿ ವೇಳೆ ಕಬ್ಬಿಣದ ರಾಡ್‌ ಕಳಚಿ ಬಿದ್ದ ಪರಿಣಾಮ ಕಾರ್ಮಿಕನೊರ್ವ ಮೇಲಿಂದ ಬಿದ್ದು ಮೃತಪಟ್ಟಿದ್ದಾರೆ.

VISTARANEWS.COM


on

kalaburagi News
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಕಲಬುರಗಿ: ಕಲಬುರಗಿಯಲ್ಲಿ (Kalaburagi News) ಬೃಹತ್ ಟ್ಯಾಂಕರ್ ಕಟ್ಟಡ ನಿರ್ಮಾಣ ಮಾಡುವಾಗ ಮೇಲಿಂದ ಕಬ್ಬಿಣದ ರಾಡು ಕಳಚಿ ಬಿದ್ದಿದ್ದು, ಕಾರ್ಮಿಕನೊರ್ವ ಸ್ಥಳದಲ್ಲೇ ಮೃತಪಟ್ಟಿದಾರೆ. ಜಾರ್ಖಂಡ ಮೂಲದ ರಾಜಕುಮಾರ (26) ಮೃತ ದುರ್ದೈವಿ.

ಶ್ರೀ‌ ಸಿಮೆಂಟ್‌ ಕಾರ್ಖಾನೆಯಲ್ಲಿ ಮರಣ ಮೃದಂಗ ಮುಂದುವರಿದಿದ್ದು, ಎರಡೇ ತಿಂಗಳಲ್ಲಿ ನಾಲ್ವರು ಮೃತಪಟ್ಟಿದ್ದಾರೆ. ಸರಿಯಾದ ಸುರಕ್ಷತಾ ಕ್ರಮ ಕೈಗೊಳ್ಳದ ಪರಿಣಾಮ ಜಾರ್ಖಂಡ ಮೂಲದ ರಾಜಕುಮಾರ ಬಲಿಯಾಗಿದ್ದಾರೆ. ಕೆಲ‌ ದಿನಗಳ ಹಿಂದಷ್ಟೆ ಬೆನಕನಹಳ್ಳಿ ನಿವಾಸಿ ಇಂದ್ರಕುಮಾರ ಎಂಬಾತ ಮೃತಪಟ್ಟಿದ್ದ. ಈಗ ಮತ್ತೋರ್ವನನ್ನು ಶ್ರೀಸಿಮೆಂಟ್ ಕಾರ್ಖಾನೆ ಬಲಿ ಪಡೆದಿದೆ.

ಸರಣಿ ಸಾವುಗಳಾಗುತ್ತಿದ್ದರೂ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಹಾಗು ಸ್ಥಳೀಯ ಶಾಸಕ ಸಚಿವ ಡಾ. ಶರಣಪ್ರಕಾಶ ಪಾಟೀಲ ತಿರುಗಿ ನೋಡಿಲ್ಲ. ಮುಡಾ ಹಗರಣದಲ್ಲೇ ಬ್ಯುಸಿಯಾಗಿರುವ ಸಚಿವರಿಗೆ ಕ್ಷೇತ್ರದ ಪರಿವೇ ಇಲ್ಲ ಎಂದು ಸ್ಥಳೀಯರು ಕಿಡಿಕಾರಿದ್ದಾರೆ. ಮೃತಪಟ್ಟವರ ಪೈಕಿ ಇಬ್ಬರು ಸೇಡಂನವರೇ ಆಗಿದ್ದರೂ, ಸಚಿವರು ಕಾರ್ಖಾನೆಗೂ ಭೇಟಿ ನೀಡಿಲ್ಲ. ಮೃತರಿಗೂ ಸಾಂತ್ವನ ಹೇಳಲು‌ ಸಹ ಮುಂದಾಗಿಲ್ಲ. ಸದ್ಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದು, ಸೇಡಂ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.

ಸೇಡಂ ತಾಲೂಕಿನ ಶ್ರೀಸಿಮೆಂಟ್ ಕಾರ್ಖಾನೆಯಲ್ಲಿ ಸರಣಿ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಗ್ರಾಮಸ್ಥರು ಆಕ್ರೋಶ ಹೊರಹಾಕಿದ್ದಾರೆ. ಯಾವುದೇ ಸುರಕ್ಷತಾ ಕ್ರಮ ಕೈಗೊಳ್ಳದ‌ ಕಾರ್ಖಾನೆಯನ್ನು ಬಂದ್ ಮಾಡುವಂತೆ ಆಗ್ರಹಿಸಿದ್ದಾರೆ. ಸಾಕಷ್ಟು ಬಾರಿ ದೂರು ಕೊಟ್ಟರು ಯಾವುದೇ ಕ್ರಮ ಕೈಗೊಳ್ಳದ ಜಿಲ್ಲಾಡಳಿತದ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ. ಶ್ರೀಸಿಮೆಂಟ್ ಕಾರ್ಖಾನೆಯು ಅನುಮತಿ ಇಲ್ಲದೆ ನಿರ್ಮಿಸಿದ್ದಾರೆ ಎಂದು ಮಳಖೇಡ ಗ್ರಾಮ ಪಂಚಾಯತ್ ಸದಸ್ಯ ಉಮೇಶ್ ಪಾಂಡುಸಿಂಗ್ ಚೌಹಾಣ್ ಆರೋಪಿಸಿದ್ದಾರೆ.

ಇದನ್ನೂ ಓದಿ: Assault Case : ಬೈಕ್ ಗುದ್ದಿದ್ದನ್ನು ಪ್ರಶ್ನಿಸಿದಕ್ಕೆ ಡ್ರ್ಯಾಗರ್‌ನಿಂದ ಅಟ್ಯಾಕ್ ಮಾಡಿದ ಪುಡಿರೌಡಿಗಳು

ಮನೆ ಕುಸಿದು ಬಿದ್ದು ನಾಲ್ವರಿಗೆ ಗಾಯ

ಶಿವಮೊಗ್ಗ: ರಾಜ್ಯದ ವಿವಿಧ ಭಾಗಗಳಲ್ಲಿ ಮಳೆಯ ಅಬ್ಬರ ಮುಂದುವರಿದೆ. ಜತೆಗೆ ಅಲ್ಲಲ್ಲಿ ಅವಾಂತರವೂ ಸೃಷ್ಟಿಯಾಗಿದೆ. ಮಲೆನಾಡಲ್ಲಿ ಸುರಿದ ಧಾರಾಕಾರ ಮಳೆಯಿಂದ ಶಿವಮೊಗ್ಗದ ಶಿಕಾರಿಪುರದಲ್ಲಿ ಮನೆ ಕುಸಿದು ಬಿದ್ದು ನಾಲ್ವರು ಗಾಯಗೊಂಡಿದ್ದಾರೆ (Karnataka Rain).

ಶಿಕಾರಿಪುರ ತಾಲೂಕಿನ ಕಪ್ಪನಹಳ್ಳಿ ಗ್ರಾಮದಲ್ಲಿ ಮಳೆಯಿಂದಾಗಿ ಶಿವಮೂರ್ತಿ ಎಂಬುವರಿಗೆ ಸೇರಿದ ಮನೆ ಕುಸಿದು ಬಿದ್ದು ನಾಲ್ಕು ಮಂದಿಗೆಗೆ ಗಾಯಗಳಾಗಿದ್ದು, ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಶಿವಮೂರ್ತಿ, ಪತ್ನಿ ಸೇರಿ ಇಬ್ಬರು ಮಕ್ಕಳಿಗೆ ಗಾಯಗಳಾಗಿದ್ದು, ಚೇತರಿಸಿಕೊಳ್ಳುತ್ತಿದ್ದಾರೆ. ಗಾಯಾಳುಗಳು ಚಿಕಿತ್ಸೆ ಪಡೆಯುತ್ತಿರುವ ಮೆಗ್ಗಾನ್ ಆಸ್ಪತ್ರೆಗೆ ಭೇಟಿ ನೀಡಿದ ಸಂಸದ ಬಿ.ವೈ.ರಾಘವೇಂದ್ರ ಆರೋಗ್ಯ ವಿಚಾರಿಸಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಮಳೆ

Karnataka Weather : ಥಂಡಿ ಮಿಶ್ರಿತ ಗಾಳಿ-ಮಳೆಗೆ ಹೈರಣಾದ ಜನತೆ; ಜು.25ರವರಗೆ ಮಳೆ ಮುಂದುವರಿಕೆ

Karnataka Weather Forecast : ರಾಜ್ಯಾದ್ಯಂತ ಮಳೆಯಾಟ (Rain News) ಮುಂದುವರಿದಿದ್ದು, ಜನರು ತತ್ತರಿಸಿ ಹೋಗಿದ್ದಾರೆ. ಮಳೆಗೆ ಮನೆಯಿಂದ ಹೊರಬರಲು ಆಗದೆ ಒಳಗೆ ಕೂರಲು ಆಗದೆ ಚಡಪಡಿಸುವಂತಾಗಿದೆ. ಸದ್ಯ ಮುಂದಿನ ಐದು ದಿನಗಳಿಗೆ ಮಳೆ ಮುನ್ಸೂಚನೆಯನ್ನು ನೀಡಲಾಗಿದೆ.

VISTARANEWS.COM


on

By

karnataka Weather Forecast
Koo

ಬೆಂಗಳೂರು/ವಿಜಯನಗರ: ಭಾನುವಾರ ಬೆಂಗಳೂರು ಸೇರಿದಂತೆ ಹಲವೆಡೆ ಮಳೆಯು (Karnataka Weather Forecast) ಅಬ್ಬರಿಸಿದೆ. ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ಮಧ್ಯಾಹ್ನದಿಂದ ಜಿಟಿಜಿಟಿ ಮಳೆಯಾಗಿತ್ತು. ಥಂಡಿ ಮಿಶ್ರಿತ ಗಾಳಿ ಜತೆಗೆ ಜಿಟಿ ಜಿಟಿ ಮಳೆಗೆ (Rain news) ಜನರು ಹೈರಾಣಾದರು. ಹಡಗಲಿ, ಹರಪನಹಳ್ಳಿ, ಕೂಡ್ಲಿಗಿ, ಕೊಟ್ಟೂರು, ಹಗರಿಬೊಮ್ಮನಹಳ್ಳಿ ತಾಲೂಕುಗಳಲ್ಲಿಯೂ ಇದೇ ರೀತಿಯ ವಾತಾವರಣ ಇತ್ತು.

ಇನ್ನೂ ಜು.22ರಂದು ಕರಾವಳಿಯ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಪ್ರತ್ಯೇಕವಾದ ಭಾರೀ ಮಳೆಯೊಂದಿಗೆ ನಿರಂತರ ಗಾಳಿಯ ವೇಗ 30-40 ಕಿಮೀ ತಲುಪುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಬಹುತೇಕ ಸ್ಥಳಗಳಲ್ಲಿ ಲಘುವಾಗಿ ಮಧ್ಯಮ ಮಳೆ ಜತೆಗೆ ಗಾಳಿಯು ಸಾಥ್‌ ನೀಡಲಿದೆ. ದಕ್ಷಿಣ ಒಳನಾಡಿನ ಎಲ್ಲಾ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ.

ಬೆಂಗಳೂರಲ್ಲಿ ಹಗುರ ಮಳೆ

ಬೆಂಗಳೂರಿನಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ. ಥಂಡಿ ಗಾಳಿ ಜತೆಗೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 27 ಮತ್ತು 21 ಡಿ.ಸೆ ಇರಲಿದೆ.

ಇದನ್ನೂ ಓದಿ: Karnataka Rain : ಭರ್ತಿಯತ್ತ ಜಲಾಶಯಗಳು; ಪ್ರವಾಹ ಭೀತಿ ಹಿನ್ನೆಲೆ ನದಿ ತೀರದಲ್ಲಿ ಹೈ ಅಲರ್ಟ್

ಬೆಳಗಾವಿಯಲ್ಲಿ 17 ಸಂಪರ್ಕ ಸೇತುವೆಗಳು ಜಲಾವೃತ

ಬೆಳಗಾವಿ: ಭಾರಿ ಮಳೆಗೆ (Karnataka Rain) ಬೆಳಗಾವಿ ಜಿಲ್ಲೆಗೆ ಸಪ್ತ ನದಿಗಳ ನೆರೆ ಭೀತಿ ಶುರುವಾಗಿದೆ. ಬೆಳಗಾವಿ ಜಿಲ್ಲೆಯಲ್ಲಿ ಕೇವಲ ಐದು ದಿನದಲ್ಲಿ 17 ಸಂಪರ್ಕ ಸೇತುವೆಗಳು ಜಲಾವೃತಗೊಂಡಿದೆ. ಚಿಕ್ಕೋಡಿ ಉಪವಿಭಾಗ ವ್ಯಾಪ್ತಿಯ ಏಳು ಸೇತುವೆಗಳು ಹಾಗೂ ಬೆಳಗಾವಿ ವ್ಯಾಪ್ತಿಯಲ್ಲಿ ಹತ್ತು ಸಂಪರ್ಕ ಸೇತುವೆ ಮುಳುಗಡೆಯಾಗಿವೆ.

ದೂದಗಂಗಾ ನದಿಗೆ ದತ್ತವಾಡ-ಮಲ್ಲಿಕವಾಡ, ಬೋಜ್-ಕಾರದಗಾ, ಬೋಜವಾಡಿ-ಕುಣ್ಣೂರ ಹಾಗೂ ವೇದಗಂಗಾ ನದಿಗೆ ಜತ್ರಾಟ-ಭೀವಶಿ, ಅಕ್ಕೋಳ-ಸಿದ್ನಾಳ, ಕೃಷ್ಣಾ ನದಿಗೆ ಮಾಂಜರಿ-ಬಾವನಸೌದತ್ತಿ, ಹಿರಣ್ಯಕೇಶಿ ನದಿಗೆ ಯರನಾಳ-ಮದಮಕ್ಕನಾಳ ಸೇರಿ ಘಟಪ್ರಭಾ ನದಿಗೆ ಸುಣಧೋಳಿ – ಮೂಡಲಗಿ, ಅವರಾದಿ- ನಂದಗಾಂವ, ಕಮಲದಿನ್ನಿ – ಹುಣಶ್ಯಾಳ ಪಿವೈ, ವಡ್ಡರಹಟ್ಟಿ- ಉದಗಟ್ಟಿ, ಗೋಕಾಕ್-ಶಿಂಗಳಾಪುರ, ಮಲಪ್ರಭಾಗೆ ಖಾನಾಪುರ-ಹೆಮ್ಮಡಗಾ, ಸಾತ್ನಾಳಿ-ಮಾಸಾಳಿ ಸಂಪರ್ಕ ಕಡಿತಗೊಂಡಿದೆ. ಇದರಿಂದ ಬರೋಬ್ಬರಿ 34 ಗ್ರಾಮಗಳಿಗೆ ಸಂಪರ್ಕ ಕಡಿತವಾಗಿದ್ದು, ಕಿ.ಮೀ ಗಟ್ಟಲೇ ಸುತ್ತಿ ಹಾಕಿ ಓಡಾಡುವಂತಾಗಿದೆ.

ಕೊಡಗಿನಲ್ಲಿ ಕರೆಂಟ್‌ ಶಾಕ್‌ಗೆ ಎತ್ತು ಸಾವು

ಕೊಡಗು: ಗದ್ದೆಯಲ್ಲಿ ವಿದ್ಯುತ್ ಸ್ಪರ್ಶಿಸಿ ಎತ್ತೊಂದು ಮೃತಪಟ್ಟಿದೆ. ಮತ್ತೊಂದು ಎತ್ತು ಹಾಗೂ ರೈತನ ಕುಟುಂಬ ಹಾಗೂಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕೊಡಗಿನ ಸೋಮವಾರಪೇಟೆ ತಾಲೂಕಿನ ದೊಡ್ಡಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ.

ಗದ್ದೆಯಲ್ಲಿ ಉಳುಮೆ ಮಾಡುತ್ತಿದ್ದ ಸಂದರ್ಭದಲ್ಲಿ ಕರೆಂಟ್‌ ಶಾಕ್‌ ಹೊಡೆದಿದೆ. ಈ ವೇಳೆ ಒಂದು ಎತ್ತು ಮೃತಪಟ್ಟರೆ, ಕುಂಬಗೌಡನ ಸದಾ ಅವರ ಪತ್ನಿ ವೀಣಾ, ಮತ್ತೊಂದು ಎತ್ತು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಭಾರಿ ಮಳೆ ಹಿನ್ನೆಲೆಯಲ್ಲಿ ಕಂಬದಿಂದ ವಿದ್ಯುತ್ ಲೀಕೇಜ್‌ ಆಗಿದ್ದೆ ಈ ಅವಘಡಕ್ಕೆ ಕಾರಣ ಎನ್ನಲಾಗಿದೆ. ಸ್ಥಳಕ್ಕೆ ಚೆಸ್ಕಾಂ ಸಿಬ್ಬಂದಿ ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Rain : ಭಾರಿ ಮಳೆ ಎಫೆಕ್ಟ್‌; ಬೆಳಗಾವಿಯಲ್ಲಿ 17 ಸಂಪರ್ಕ ಸೇತುವೆಗಳು ಜಲಾವೃತ

Karnataka Rain : ಭಾರಿ ಮಳೆಗೆ ಅವಾಂತರವೇ ಸೃಷ್ಟಿಯಾಗಿದ್ದು, ಬಹುತೇಕ ಕಡೆಗಳಲ್ಲಿ ಸೇತುವೆಗಳು ಮುಳುಗಡೆಯಾಗಿವೆ. ಕೊಡಗಿನಲ್ಲಿ ಕರೆಂಟ್‌ ಶಾಕ್‌ಗೆ ಎತ್ತು ಮೃತಪಟ್ಟಿದೆ.

VISTARANEWS.COM


on

By

karnataka rain
Koo

ಬೆಳಗಾವಿ: ಭಾರಿ ಮಳೆಗೆ (Karnataka Rain) ಬೆಳಗಾವಿ ಜಿಲ್ಲೆಗೆ ಸಪ್ತ ನದಿಗಳ ನೆರೆ ಭೀತಿ ಶುರುವಾಗಿದೆ. ಬೆಳಗಾವಿ ಜಿಲ್ಲೆಯಲ್ಲಿ ಕೇವಲ ಐದು ದಿನದಲ್ಲಿ 17 ಸಂಪರ್ಕ ಸೇತುವೆಗಳು ಜಲಾವೃತಗೊಂಡಿದೆ. ಚಿಕ್ಕೋಡಿ ಉಪವಿಭಾಗ ವ್ಯಾಪ್ತಿಯ ಏಳು ಸೇತುವೆಗಳು ಹಾಗೂ ಬೆಳಗಾವಿ ವ್ಯಾಪ್ತಿಯಲ್ಲಿ ಹತ್ತು ಸಂಪರ್ಕ ಸೇತುವೆ ಮುಳುಗಡೆಯಾಗಿವೆ.

ದೂದಗಂಗಾ ನದಿಗೆ ದತ್ತವಾಡ-ಮಲ್ಲಿಕವಾಡ, ಬೋಜ್-ಕಾರದಗಾ, ಬೋಜವಾಡಿ-ಕುಣ್ಣೂರ ಹಾಗೂ ವೇದಗಂಗಾ ನದಿಗೆ ಜತ್ರಾಟ-ಭೀವಶಿ, ಅಕ್ಕೋಳ-ಸಿದ್ನಾಳ, ಕೃಷ್ಣಾ ನದಿಗೆ ಮಾಂಜರಿ-ಬಾವನಸೌದತ್ತಿ, ಹಿರಣ್ಯಕೇಶಿ ನದಿಗೆ ಯರನಾಳ-ಮದಮಕ್ಕನಾಳ ಸೇರಿ ಘಟಪ್ರಭಾ ನದಿಗೆ ಸುಣಧೋಳಿ – ಮೂಡಲಗಿ, ಅವರಾದಿ- ನಂದಗಾಂವ, ಕಮಲದಿನ್ನಿ – ಹುಣಶ್ಯಾಳ ಪಿವೈ, ವಡ್ಡರಹಟ್ಟಿ- ಉದಗಟ್ಟಿ, ಗೋಕಾಕ್-ಶಿಂಗಳಾಪುರ, ಮಲಪ್ರಭಾಗೆ ಖಾನಾಪುರ-ಹೆಮ್ಮಡಗಾ, ಸಾತ್ನಾಳಿ-ಮಾಸಾಳಿ ಸಂಪರ್ಕ ಕಡಿತಗೊಂಡಿದೆ. ಇದರಿಂದ ಬರೋಬ್ಬರಿ 34 ಗ್ರಾಮಗಳಿಗೆ ಸಂಪರ್ಕ ಕಡಿತವಾಗಿದ್ದು, ಕಿ.ಮೀ ಗಟ್ಟಲೇ ಸುತ್ತಿ ಹಾಕಿ ಓಡಾಡುವಂತಾಗಿದೆ.

ಕೊಡಗಿನಲ್ಲಿ ಕರೆಂಟ್‌ ಶಾಕ್‌ಗೆ ಎತ್ತು ಸಾವು

ಕೊಡಗು: ಗದ್ದೆಯಲ್ಲಿ ವಿದ್ಯುತ್ ಸ್ಪರ್ಶಿಸಿ ಎತ್ತೊಂದು ಮೃತಪಟ್ಟಿದೆ. ಮತ್ತೊಂದು ಎತ್ತು ಹಾಗೂ ರೈತನ ಕುಟುಂಬ ಹಾಗೂಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕೊಡಗಿನ ಸೋಮವಾರಪೇಟೆ ತಾಲೂಕಿನ ದೊಡ್ಡಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ.

ಗದ್ದೆಯಲ್ಲಿ ಉಳುಮೆ ಮಾಡುತ್ತಿದ್ದ ಸಂದರ್ಭದಲ್ಲಿ ಕರೆಂಟ್‌ ಶಾಕ್‌ ಹೊಡೆದಿದೆ. ಈ ವೇಳೆ ಒಂದು ಎತ್ತು ಮೃತಪಟ್ಟರೆ, ಕುಂಬಗೌಡನ ಸದಾ ಅವರ ಪತ್ನಿ ವೀಣಾ, ಮತ್ತೊಂದು ಎತ್ತು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಭಾರಿ ಮಳೆ ಹಿನ್ನೆಲೆಯಲ್ಲಿ ಕಂಬದಿಂದ ವಿದ್ಯುತ್ ಲೀಕೇಜ್‌ ಆಗಿದ್ದೆ ಈ ಅವಘಡಕ್ಕೆ ಕಾರಣ ಎನ್ನಲಾಗಿದೆ. ಸ್ಥಳಕ್ಕೆ ಚೆಸ್ಕಾಂ ಸಿಬ್ಬಂದಿ ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ: Bengaluru News : ಓವರ್‌ ನೈಟ್‌ ಪಾರ್ಟಿ; ವಿರಾಟ್‌ ಕೊಹ್ಲಿ ಮಾಲಿಕತ್ವದ ಪಬ್‌ ಸೇರಿ 10ಕ್ಕೂ ಹೆಚ್ಚು ಪಬ್‌ಗಳ ಮೇಲೆ ಎಫ್‌ಐಆರ್‌

ದ್ವೀಪದಂತೆ ಆದ ಮಂಡಕಳಲೆ ಗ್ರಾಮ

ಶಿವಮೊಗ್ಗದಲ್ಲಿ ಮಳೆಯಾರ್ಭಟಕ್ಕೆ ಮಂಡಕಳಲೆ ಗ್ರಾಮ ದ್ವೀಪದಂತೆ ಆಗಿದೆ. ಜತೆಗೆ ಎರಡು ಮನೆಗಳು ನೆಲಸಮವಾಗಿದ್ದು, ಕುಟುಂಬಸ್ಥರು ಕಂಗಲಾಗಿದ್ದಾರೆ. ಪ್ರಕಾಶ್ ಹಾಗೂ ಜಯಲಕ್ಷ್ಮಿ ಎಂಬುವವರ ಮನೆ ನೆಲಸಮವಾಗಿದೆ. ಜಿಲ್ಲಾಡಳಿತ ಮಂಡಕಳಲೆ ಗ್ರಾಮದಲ್ಲಿ ಪ್ರಾಥಮಿಕ ಶಾಲೆಯಲ್ಲಿ ನಿರಾಶ್ರಿತರಿಗೆ ಕಾಳಜಿ ಕೇಂದ್ರ ಸ್ಥಾಪನೆ ಮಾಡಿದೆ. ಇನ್ನೂ ಸಚಿವ ಮಧುಬಂಗಾರಪ್ಪ ಪ್ರತಿ ಕುಟುಂಬಕ್ಕೆ 5 ಸಾವಿರ ವೈಯಕ್ತಿಕ ಪರಿಹಾರ ನೀಡಿದ್ದು, ಮನೆ ಕಳೆದು ಕೊಂಡವರಿಗೆ 5 ಲಕ್ಷ ರೂ. ಹಣ ಪರಿಹಾರ ನೀಡುವುದಾಗಿ ಭರವಸೆ ನೀಡಿದ್ದಾರೆ.

ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಕಾನಲೆ ಗ್ರಾಮದಲ್ಲಿ ಅಪಾಯ ಮಟ್ಟ ಮೀರಿ ವರದಾ ನದಿ ಹರಿಯುತ್ತಿದ್ದು, ಕೆಲವೇ – ಕನ್ನಳ್ಳಿ ಮಾರ್ಗದ ಸೇತುವೆ ಮುಳಗಡೆಯಾಗಿದೆ. ಸೇತುವೆ ಮೇಲೆ ನೀರು ರಭಸವಾಗಿ ಹರಿಯುತ್ತಿದ್ದು, ಕೆಲವೇ – ಕನ್ನಳ್ಳಿ ಮಾರ್ಗದ ಸಂಪರ್ಕಕ್ಕೆ ಅಡಚಣೆ ಉಂಟಾಗಿದೆ.

ಇತ್ತ ವರದಾ ನದಿಯಲ್ಲಿ ನೀರು ಹೆಚ್ಚಾದ ಹಿನ್ನೆಲೆಯಲ್ಲಿ ಹಾನಗಲ್ ತಾಲೂಕಿನಲ್ಲಿ ಹಲವು ಸೇತುವೆ ಮುಳುಗಡೆಯಾಗಿದೆ. ಬಾಳಂಬೀಡ, ಅರೆಲಕಮಾಪುರ ಸಂಪರ್ಕ ಸೇತುವೆ ಮುಳುಗಡೆ ಆಗಿದ್ದರಿಂದ ಹತ್ತಕ್ಕೂ ಹೆಚ್ಚು ಗ್ರಾಮಗಳ ಸಂಪರ್ಕ ಬಂದ್ ಆಗಿದೆ. ನೂರಾರು ಎಕರೆ ಬೆಳೆ ನೀರುಪಾಲಾಗಿದೆ. ದೇವಸ್ಥಾನ, ವಿದ್ಯುತ್ ಕಂಬ, ವಿದ್ಯುತ್ ಟ್ರಾನ್ಸ್ ಫಾರ್ಮರ್, ರೈತರ ಪಂಪ್ ಸೆಟ್‌ಗಳು ನೀರುಪಾಲಾಗಿವೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Rain : ಭಾರಿ ಮಳೆಗೆ ಮುಂದುವರಿದ ಸಾವು-ನೋವು; ಮನೆ ಗೋಡೆ ಕುಸಿದು ವ್ಯಕ್ತಿ ಸಾವು

Karnataka Rain : ವ್ಯಾಪಕ ಮಳೆಯಿಂದ ಸಾವು-ನೋವು ಮುಂದುವರಿದಿದ್ದು, ಚಿಕ್ಕೋಡಿಯಲ್ಲಿ ಮನೆ ಗೋಡೆ ಕುಸಿದು ವ್ಯಕ್ತಿಯೊರ್ವ ಮೃತಪಟ್ಟಿದ್ದಾರೆ. ಹಾಗಾದರೆ ಯಾವ್ಯಾವ ಜಿಲ್ಲೆಯಲ್ಲಿ ಏನೇನು ಅನಾಹುತ ಸಂಭವಿಸಿದೆ ಎಂಬ ಮಾಹಿತಿ ಇಲ್ಲಿದೆ.

VISTARANEWS.COM


on

By

karnataka Rain
Koo

ಚಿಕ್ಕೋಡಿ: ಶನಿವಾರ ರಾತ್ರಿಯಿಡಿ ಸುರಿದ ಭಾರಿ ಮಳೆಗೆ (Karnataka Rain) ಮನೆ ಗೋಡೆ ಕುಸಿದು ವ್ಯಕ್ತಿಯೊರ್ವ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಚಿಕ್ಕೋಡಿಯ ನಿಪ್ಪಾಣಿ ನಗರದ ಜತ್ರಾಟ್ ವೇಸ್‌ನಲ್ಲಿ ಗೋಡೆ ಕುಸಿದು ತಿರುಪತಿ ಹತ್ಕರ (45) ಎಂಬುವವರು ಮೃತಪಟ್ಟಿದ್ದಾರೆ.

ತಿರುಪತಿ ತಗಡಿನ ಶೆಡ್‌ನಲ್ಲಿ ವಾಸವಾಗಿದ್ದರು. ಊಟ ಮುಗಿಸಿ ನಿದ್ರೆ ಜಾರಿದಾಗ ತಡರಾತ್ರಿ 2:30ರ ಸುಮಾರು ಪಕ್ಕದ ಗೋಡೆ ಕುಸಿದಿದೆ. ಈ ವೇಳೆ ಗಂಭೀರ ಗಾಯಗೊಂಡ ತಿರುಪತಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬೆಳಗಾವಿ ಜಿಲ್ಲೆಯ ನಿಪ್ಪಾಣಿ ನಗರದಲ್ಲಿ ಈ ಘಟನೆ ನಡೆದಿದ್ದು, ಸ್ಥಳಕ್ಕೆ ತಹಸೀಲ್ದಾರ್‌, ಉಪ ವಿಭಾಗಾಧಿಕಾರಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ನಿಪ್ಪಾಣಿ ಬಸವೇಶ್ವರ ಚೌಕ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದ್ದು, ತನಿಖೆಯನ್ನು ನಡೆಸುತ್ತಿದ್ದಾರೆ.

ಹಾವೇರಿಯಲ್ಲೂ ಕುಸಿದು ಬಿದ್ದ ಮನೆ

ಹಾವೇರಿ ಜಿಲ್ಲೆಯಲ್ಲಿ ಮಳೆ ಆರ್ಭಟ ಮುಂದುವರಿದಿದ್ದು, ಮನೆಯೊಂದು ಕುಸಿದು ಬಿದ್ದಿದೆ. ರಾಣೇಬೆನ್ನೂರ ತಾಲೂಕಿನ ನೂಕಾಪುರ ಗ್ರಾಮದಲ್ಲಿ ರುದ್ರಪ್ಪ ಚೌವ್ಹಾಣ್ ಎನ್ನುವವರಿಗೆ ಸೇರಿದ ಮನೆ ಕುಸಿದಿದೆ. ಅದೃಷ್ಟವಶಾತ್‌ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಇನ್ನೂ ರುದ್ರಪ್ಪ ಮನೆ ಕಳೆದುಕೊಂಡು ಕಂಗಲಾಗಿದ್ದಾರೆ.

ಚಿಕ್ಕಮಗಳೂರಲ್ಲಿ ನೆಲಕಚ್ಚುತ್ತಿವೆ ಮನೆಗಳು

ಚಿಕ್ಕಮಗಳೂರು ಜಿಲ್ಲೆಯಲ್ಲಿ ಮಳೆ ಅಬ್ಬರಕ್ಕೆ ಮನೆಗಳು ಕುಸಿಯುತ್ತಿವೆ. ಭಾರೀ ಗಾಳಿ, ಮಳೆಗೆ ಮನೆ ಗೋಡೆ ಕುಸಿದು, ಚಾವಣೆ ನೆಲಕ್ಕೆ ಕುಸಿಯುತ್ತಿದೆ. ದಿನ್ಯನಿತ್ಯ ಬಳಸುವ ಅಗತ್ಯವಸ್ತುಗಳು ಮಣ್ಣು ಪಾಲಾಗುತ್ತಿವೆ. ಹಳುವಳ್ಳಿ ಗ್ರಾಮದ ತಾರಿಕೊಂಡ ಉಮಾ ರಮೇಶ್ ಎಂಬುವವರ ಮನೆಗೆ ಹಾನಿಯಾಗಿದೆ. ಮನೆ‌ ಕುಸಿತದಿಂದ ಕಂಗಾಲಾಗಿರುವ ಉಮಾ ರಮೇಶ್ ಕುಟುಂಬದವರು ಸಹಾಯದ ನಿರೀಕ್ಷೆಯಲ್ಲಿದ್ದಾರೆ. ಸದ್ಯ ಮನೆ ಇಲ್ಲದೆ ಕೊಟ್ಟಿಗೆಯಲ್ಲಿ ವಾಸಿಸುತ್ತಿದ್ದಾರೆ.

ಇದನ್ನೂ ಓದಿ: Drowned in water : ಉಕ್ಕಿ ಹರಿಯುತ್ತಿದ್ದ ತುಂಗಭದ್ರ ನದಿಯಲ್ಲಿ ಕೊಚ್ಚಿ ಹೋದ ಯುವಕ

ಪ್ರವಾಹದ ಎಚ್ಚರಿಕೆ

ಪ್ರವಾಹದ ಭೀತಿ ಹಿನ್ನೆಲೆಯಲ್ಲಿ ಕಾವೇರಿ ನೀರಾವರಿ ನಿಗಮದ ಅಧಿಕಾರಿಗಳಿಂದ ನದಿ ಪಾತ್ರದ ಜನರಿಗೆ ಎಚ್ಚರಿಕೆ ನೀಡಿದ್ದಾರೆ. ಕೆ.ಆರ್.ಎಸ್ ಜಲಾಶಯದಿಂದ 50,000 ಕ್ಯೂಸೆಕ್ಸ್ ನೀರನ್ನು ಕಾವೇರಿ ನದಿಗೆ ಬಿಡಲಾಗುತ್ತಿದೆ. ಹೀಗಾಗಿ ಕಾವೇರಿ ನದಿಯ ತಗ್ಗು ಪ್ರದೇಶ ಹಾಗೂ ನದಿಯ ಎರಡೂ ದಂಡೆಗಳಲ್ಲಿರುವ ಸಾರ್ವಜನಿಕರು ತಮ್ಮ ಆಸ್ತಿ ಪಾಸ್ತಿ ಜಾನುವಾರುಗಳ ರಕ್ಷಣೆಗೆ ಎಚ್ಚರಿಕೆ ವಹಿಸಿ, ಸುರಕ್ಷಿತ ಸ್ಥಾನಗಳಿಗೆ ತೆರಳಲು ಸೂಚನೆ ನೀಡಿದ್ದಾರೆ.

ಮೈದುಂಬಿ ಹರಿಯುತ್ತಿರುವ ತುಂಗಾಭದ್ರಾ

ಮಲೆನಾಡು ಭಾಗದಲ್ಲಿ ನಿರಂತರ ಮಳೆಯಿಂದಾಗಿ ದಾವಣಗೆರೆಯ ಹರಿಹರದ ಬಳಿ ತುಂಗಾಭದ್ರ ನದಿ ಮೈದುಂಬಿ ಹರಿಯುತ್ತಿದೆ. ತುಂಗಾ ಜಲಾಶಯದಿಂದ 70 ಸಾವಿರ ಕ್ಯೂಸೆಕ್ ನೀರು ಹೊರಬಿಟ್ಟ ಹಿನ್ನೆಲೆಯಲ್ಲಿ ಹರಿಹರ ಭಾಗದಲ್ಲಿ ಮೈದುಂಬಿ ಹರಿಯುತ್ತಿದೆ. ತುಂಗಾ ಆರತಿ ಮಂಟಪದ ಮೆಟ್ಟಿಲು ಸಂಪೂರ್ಣ ಜಲಾವೃತಗೊಂಡಿದೆ. ನೀರಿನ ಮಟ್ಟ 12 ರಿಂದ 13 ಮೀಟರ್ ಏರಿಕೆಯಾದರೆ ಜಿಲ್ಲೆಯ 38 ಗ್ರಾಮಗಳು ಮುಳುಗಡೆ ಆಗುವ ಸಾಧ್ಯತೆ ದೆ. ಹೀಗಾಗಿ ಜಿಲ್ಲೆಯ ಹೊನ್ನಾಳಿಯ ಬಾಲರಾಜ್ ಘಾಟ್, ಹರಿಹರದ ಗಂಗಾ ನಗರದಲ್ಲಿ ಆರೈಕೆ ಕೇಂದ್ರ ತೆರೆಯಲು ಜಿಲ್ಲಾಡಳಿತದಿಂದ ಸೂಚನೆ ನೀಡಿದೆ. ರಾಘವೇಂದ್ರ ಮಠದ ಹಿಂಬದಿಯ ಪೂಜಾ ಮಂಟಪ ಜಲಾವೃತವಾಗುವ ಸಾಧ್ಯತೆ ಇದೆ. ಇನ್ನೂ ಮಹಿಳೆಯರು ತುಂಗಭದ್ರಾ ನದಿಗೆ ಗಂಗಾ ಪೂಜಾ ಮಾಡುತ್ತಿದ್ದಾರೆ. ಈಗಾಗಲೇ ಹರಿಹರದ ಗಂಗಾ ನಗರದ ಮೂವತ್ತಕ್ಕೂ ಅಧಿಕ ಮನೆಗಳು ಮುಳುಗಡೆ ಆಗುವ ಸಾಧ್ಯತೆ ಇದ್ದು, ಗಂಗಾ ನಗರ ನಿವಾಸಿಗಳಿಗೆ ಕಾಳಜಿ ಕೇಂದ್ರವನ್ನು ತೆರೆಯಲಾಗಿದೆ.

ಜಮೀನಿಗೆ ನುಗ್ಗಿದ ನೀರು

ಕಾಲುವೆ ನೀರು ಜಮೀನಿಗೆ ನುಗ್ಗಿ ಬೆಳೆ ಜಲಾವೃತಗೊಂಡಿದೆ. ಕಾಲುವೆ ಸಮರ್ಪಕವಾಗಿ ನಿರ್ಮಾಣ ಮಾಡದ ಹಿನ್ನೆಲೆಯಲ್ಲಿ ಕಾಲುವೆಗೆ ನೀರು ಬಿಟ್ಟಿರುವ ವೇಳೆ ಜಮೀನಿಗೆ ನುಗ್ಗಿದೆ. ವಿಜಯಪುರ ಜಿಲ್ಲೆಯ ಕೊಲ್ಹಾರ ತಾಲೂಕಿನ ರೋಣಿಹಾಳ ಗ್ರಾಮದ ನಾಗಯ್ಯ ಹಿರೇಮಠ ಎಂಬುವರ ಜಮೀನಿಗೆ ಕಾಲುವೆ ನೀರು ನುಗ್ಗಿದೆ. 8 ಎಕರೆ ಜಮೀನಿನಲ್ಲಿ ಮೆಕ್ಕೆಜೋಳ ಬಿತ್ತನೆ ಮಾಡಿದ್ದ ರೈತ ಕಂಗಲಾಗಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Rain: ರಾಜ್ಯದ ವಿವಿಧೆಡೆ ಮುಂದುವರಿದ ಮಳೆಯ ಅಬ್ಬರ; ಮನೆ ಕುಸಿದು ಬಿದ್ದು ನಾಲ್ವರಿಗೆ ಗಾಯ

Karnataka Rain: ರಾಜ್ಯದ ವಿವಿಧ ಭಾಗಗಳಲ್ಲಿ ಮಳೆಯ ಅಬ್ಬರ ಮುಂದುವರಿದೆ. ಜತೆಗೆ ಅಲ್ಲಲ್ಲಿ ಅವಾಂತರವೂ ಸೃಷ್ಟಿಯಾಗಿದೆ. ಮಲೆನಾಡಲ್ಲಿ ಸುರಿದ ಧಾರಾಕಾರ ಮಳೆಯಿಂದ ಶಿವಮೊಗ್ಗದ ಶಿಕಾರಿಪುರದಲ್ಲಿ ಮನೆ ಕುಸಿದು ಬಿದ್ದು ನಾಲ್ವರು ಗಾಯಗೊಂಡಿದ್ದಾರೆ.

VISTARANEWS.COM


on

Karnataka Rain
Koo

ಶಿವಮೊಗ್ಗ: ರಾಜ್ಯದ ವಿವಿಧ ಭಾಗಗಳಲ್ಲಿ ಮಳೆಯ ಅಬ್ಬರ ಮುಂದುವರಿದೆ. ಜತೆಗೆ ಅಲ್ಲಲ್ಲಿ ಅವಾಂತರವೂ ಸೃಷ್ಟಿಯಾಗಿದೆ. ಮಲೆನಾಡಲ್ಲಿ ಸುರಿದ ಧಾರಾಕಾರ ಮಳೆಯಿಂದ ಶಿವಮೊಗ್ಗದ ಶಿಕಾರಿಪುರದಲ್ಲಿ ಮನೆ ಕುಸಿದು ಬಿದ್ದು ನಾಲ್ವರು ಗಾಯಗೊಂಡಿದ್ದಾರೆ (Karnataka Rain).

ಶಿಕಾರಿಪುರ ತಾಲೂಕಿನ ಕಪ್ಪನಹಳ್ಳಿ ಗ್ರಾಮದಲ್ಲಿ ಮಳೆಯಿಂದಾಗಿ ಶಿವಮೂರ್ತಿ ಎಂಬುವರಿಗೆ ಸೇರಿದ ಮನೆ ಕುಸಿದು ಬಿದ್ದು ನಾಲ್ಕು ಮಂದಿಗೆಗೆ ಗಾಯಗಳಾಗಿದ್ದು, ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಶಿವಮೂರ್ತಿ, ಪತ್ನಿ ಸೇರಿ ಇಬ್ಬರು ಮಕ್ಕಳಿಗೆ ಗಾಯಗಳಾಗಿದ್ದು, ಚೇತರಿಸಿಕೊಳ್ಳುತ್ತಿದ್ದಾರೆ. ಗಾಯಾಳುಗಳು ಚಿಕಿತ್ಸೆ ಪಡೆಯುತ್ತಿರುವ ಮೆಗ್ಗಾನ್ ಆಸ್ಪತ್ರೆಗೆ ಭೇಟಿ ನೀಡಿದ ಸಂಸದ ಬಿ.ವೈ.ರಾಘವೇಂದ್ರ ಆರೋಗ್ಯ ವಿಚಾರಿಸಿದ್ದಾರೆ.

ಹಾಸನಕ್ಕೆ ಇಂದು ಕುಮಾರಸ್ವಾಮಿ, ಆರ್‌.ಅಶೋಕ್‌ ಭೇಟಿ

ಹಾಸನ: ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಮತ್ತು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಇಂದು (ಜುಲೈ 21) ಹಾಸನಕ್ಕೆ ಭೇಟಿ ನೀಡಿ ಮಳೆ ಹಾನಿಯನ್ನು ಪರಿಶೀಲಿಸಲಿದ್ದಾರೆ. ಕೇಂದ್ರ ಸಚಿವರಾದ ಬಳಿಕ ಮೊದಲ ಬಾರಿಗೆ ಹಾಸನಕ್ಕೆ ಎಚ್‌.ಡಿ.ಕುಮಾರಸ್ವಾಮಿ ಭೇಟಿ ನೀಡಲಿದ್ದಾರೆ. ಲೋಕಸಭಾ ಚುನಾವಣೆ ನಂತರ‌ ಮೊದಲ ಬಾರಿಗೆ‌ ಎಚ್‌ಡಿಕೆ ತವರಿಗೆ ಆಗಮಿಸಲಿದ್ದು, ಸಕಲೇಶಪುರ‌ ತಾಲೂಕಿನ ಮಳೆ ಹಾನಿ ಪ್ರದೇಶಕ್ಕೆ ಭೇಟಿ ನೀಡಿ ಪರಿಸ್ಥಿತಿ ಅವಲೋಕಿಸಲಿದ್ದಾರೆ. ಮಳೆಯಿಂದ ರಸ್ತೆ ಕುಸಿದಿರುವ, ಹಾನಿಯಾಗಿರುವ ಪ್ರದೇಶಗಳನ್ನು ಪರಿಶೀಲಿಸಲಿದ್ದಾರೆ.

ಎಲ್ಲಿಗೆಲ್ಲ ಭೇಟಿ?

ಸಕಲೇಶಪುರ ತಾಲೂಕಿನ‌ ಕೊಲ್ಲಹಳ್ಳಿ, ದೊಡ್ಡತಪ್ಲು‌ ಸೇರಿದಂತೆ ಅನೇಕ ಭಾಗಗಳಿಗೆ ಎಚ್‌ಡಿಕೆ ಭೇಟಿ ನೀಡಲಿದ್ದಾರೆ. ರಾಷ್ಟ್ರೀಯ ‌ಹೆದ್ದಾರಿ 75ರಲ್ಲಿ ಆಗಿರೋ ಅವಾಂತರ, ಶಿರಾಡಿ ಘಾಟ್‌ನಲ್ಲಾದ ಹಾನಿಯನ್ನು ವೀಕ್ಷಿಸಲಿದ್ದಾರೆ. ಬಳಿಕ ಮಳೆ‌ ಅನಾಹುತದ ಸಂಕಷ್ಟದಲ್ಲಿರೋ ರೈತರ ಸಮಸ್ಯೆ ಆಲಿಸಲಿದ್ದಾರೆ. ಜಿಲ್ಲೆಗೆ ಆಗಮಿಸಲಿರು ತಮ್ಮ ನಾಯಕನ್ನು ಸ್ವಾಗತಿಸಲು ಜೆಡಿಎಸ್ ಕಾರ್ಯಕರ್ತರು ಸಜ್ಜಾಗಿದ್ದಾರೆ.

ಹಾಸನ ಜಿಲ್ಲೆಯಲ್ಲಿ ಆರ್.ಅಶೋಕ್ ಪ್ರವಾಸ

ಹಾಸನ ಜಿಲ್ಲೆಯಲ್ಲಿ ಇಂದು ವಿರೋಧಪಕ್ಷದ ನಾಯಕ ಆರ್.ಅಶೋಕ್ ಕೂಡ ಪ್ರವಾಸ ಕೈಗೊಳ್ಳಲಿದ್ದಾರೆ. ಅವರು ಹಾಸನ ಜಿಲ್ಲೆಯ ಮಳೆಹಾನಿ ಪ್ರದೇಶಗಳಿಗೆ ಭೇಟಿ ನೀಡಲಿದ್ದಾರೆ. ಸಕಲೇಶಪುರ ತಾಲೂಕಿನ‌ ಹಲವು ಪ್ರದೇಶಗಳಿಗೆ ತೆರಳಿ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಲಿದ್ದಾರೆ. ಜಿಲ್ಲಾಡಳಿತದ ಅಧಿಕಾರಿಗಳೊಂದಿಗೆ ಪರಿಹಾರ ಕ್ರಮದ ಬಗ್ಗೆ ಚರ್ಚಿಸಲಿರುವ ಅಶೋಕ್ ಅವರು ರಾಷ್ಟ್ರೀಯ ಹೆದ್ದಾರಿಯಲ್ಲಿ ಭೂಕುಸಿತವಾಗಿರೋ‌ ಸ್ಥಳಗಳ ಪರಿಶೀಲನೆ ನಡೆಸಲಿದ್ದಾರೆ.

ರಸ್ತೆ ಪಕ್ಕದಲ್ಲಿಯೇ ನಿಂತ ನೂರಾರು ಲಾರಿಗಳು

ಬೆಳಗಾವಿ: ಪಶ್ಚಿಮ‌ ಘಟ್ಟಗಳಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಸೇತುವೆ ಶಿಥಿಲವಾಗಿದ್ದು, ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಜಾಂಬೋಟಿ ಬಳಿ ಲಾರಿಗಳನ್ನು ತಡೆದು ನಿಲ್ಲಿಸಲಾಗಿದೆ. ಚೋರ್ಲಾ ಮಾರ್ಗವಾಗಿ ಬೆಳಗಾವಿಗೆ ಬರುವ ವಾಹನಗಳನ್ನು ಅಧಿಕಾರಿಗಳು ತಡೆದಿದ್ದು, ಇದರಿಂದ ಕಳೆದ 24 ಗಂಟೆಗಳಿಂದ ಸರಕು ಹೊತ್ತು ನೂರಾರು ಲಾರಿಗಳು ನಿಂತಲ್ಲಿಯೇ ನಿಂತಿವೆ. ಏಕಾಏಕಿ ಭಾರಿ ವಾಹನಗಳನ್ನು ತಡೆದಿದ್ದರಿಂದ ಲಾರಿ ಚಾಲಕರ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ರಸ್ತೆ ಬಂದ್ ಮಾಡುವುದನ್ನು ಅಧಿಕಾರಿಗಳು ಮೊದಲೇ ಹೇಳಬೇಕಿತ್ತು. ಏಕಾಏಕಿ ಬಂದ್ ಮಾಡಿದರೆ ನಾವು ಎಲ್ಲಿಗೆ ಹೋಗಬೇಕು ಎಂದು ಚಾಲಕರು ಪ್ರಶ್ನಿಸಿದ್ದಾರೆ. ಲಾರಿಯಲ್ಲಿರುವ ಸರಕೆಲ್ಲ ಮಳೆಯಲ್ಲಿ ನೆನೆದು ಹೋಗುವ ಭೀತಿಯೂ ಚಾಲಕರನ್ನು ಕಾಡುತ್ತಿದೆ.

ಇದನ್ನೂ ಓದಿ: Karnataka Rain : ಗುಡ್ಡ ಕುಸಿತದಿಂದ ಅಂಕೋಲಾ ಹೆದ್ದಾರಿ ಬಂದ್‌; ಕೊಂಕಣ ರೈಲ್ವೆಯಿಂದ ರೈಲು ವ್ಯವಸ್ಥೆ

Continue Reading
Advertisement
Vande Mataram
ದೇಶ10 mins ago

Vande Mataram: ಸಂಸತ್ತಿನಲ್ಲಿ ವಂದೇ ಮಾತರಂ, ಥ್ಯಾಂಕ್ಸ್‌ ಎಂದು ಹೇಳುವಂತಿಲ್ಲ; ಏಕಿಂಥ ಆದೇಶ?

karnataka Weather Forecast
ಮಳೆ37 mins ago

Karnataka Weather : ಥಂಡಿ ಮಿಶ್ರಿತ ಗಾಳಿ-ಮಳೆಗೆ ಹೈರಣಾದ ಜನತೆ; ಜು.25ರವರಗೆ ಮಳೆ ಮುಂದುವರಿಕೆ

Karnataka Rain
ಕರ್ನಾಟಕ1 hour ago

Karnataka Rain: ಶಿರೂರು ಗುಡ್ಡ ಕುಸಿತದ ಸ್ಥಳ ವೀಕ್ಷಿಸಿದ ಸಿಎಂ; NDRF-SDRF ತಂಡಗಳ ಕಾರ್ಯಕ್ಕೆ ಮೆಚ್ಚುಗೆ

Women's Asia Cup
ಪ್ರಮುಖ ಸುದ್ದಿ1 hour ago

Women’s Asia Cup : ಯುಎಇ ವಿರುದ್ಧ ಭಾರತದ ವನಿತೆಯರಿಗೆ ಭರ್ಜರಿ 78 ರನ್ ವಿಜಯ

karnataka rain
ಮಳೆ1 hour ago

Karnataka Rain : ಭರ್ತಿಯತ್ತ ಜಲಾಶಯಗಳು; ಪ್ರವಾಹ ಭೀತಿ ಹಿನ್ನೆಲೆ ನದಿ ತೀರದಲ್ಲಿ ಹೈ ಅಲರ್ಟ್

Guru Purnima 2024
ಅಂಕಣ1 hour ago

Guru Purnima 2024: ಗುರು ಎಂದರೆ ವ್ಯಕ್ತಿಯಲ್ಲ, ಅದ್ಭುತವಾದ ಶಕ್ತಿ!

Fatty liver disease
ಆರೋಗ್ಯ1 hour ago

Fatty Liver Problem: ಫ್ಯಾಟಿ ಲಿವರ್‌ ಸಮಸ್ಯೆ ಎದುರಿಸುತ್ತಿದ್ದೀರಾ? ಈ ಮೂರು ಪೇಯಗಳಿಂದ ಎಂದೆಂದಿಗೂ ದೂರವಿರಿ

Lakshmi Hebbalkar
ಉಡುಪಿ2 hours ago

Lakshmi Hebbalkar: ಮಳೆಗೆ ತತ್ತರಿಸಿದ ಉಡುಪಿ; ನನ್ನ ಅವಶ್ಯಕತೆ ಇದ್ದಾಗಷ್ಟೇ ಬರ್ತೀನಿ ಎಂದ ಲಕ್ಷ್ಮೀ ಹೆಬ್ಬಾಳಕರ್

Kanwar Yatra
ದೇಶ2 hours ago

Kanwar Yatra: ನೇಮ್‌ಪ್ಲೇಟ್‌ ಅಳವಡಿಕೆಗೆ ಆದೇಶ ಪ್ರಶ್ನಿಸಿ ಅರ್ಜಿ; ಸುಪ್ರೀಂ ಕೋರ್ಟ್‌ನಲ್ಲಿ ನಾಳೆ ವಿಚಾರಣೆ

HD Kumaraswamy
ಕರ್ನಾಟಕ2 hours ago

HD Kumaraswamy: ದರೋಡೆ, ಲೂಟಿ ತಡೆಯಲು ಸೇನೆ ಕರೆಸಬೇಕಿತ್ತಾ? ಡಿಕೆಶಿಗೆ ತಿರುಗೇಟು ಕೊಟ್ಟ ಎಚ್‌ಡಿಕೆ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Rain
ಮಳೆ1 day ago

Karnataka Rain : ಭಾರಿ ಮಳೆಗೆ ಮನೆ ಗೋಡೆ ಕುಸಿತ; ಕೊಟ್ಟಿಗೆಯಲ್ಲಿದ್ದ ಜಾನುವಾರುಗಳು ಸಾವು

karnataka Rain
ಮಳೆ1 day ago

Karnataka Rain : ಹಳ್ಳ ದಾಟಲು ಹೋಗಿ ನೀರುಪಾಲಾದ ಜಾನುವಾರು; ಬಿರುಗಾಳಿಗೆ ಕಳಚಿದ ವಿಂಡ್‌ ಫ್ಯಾನ್‌

karnataka Rain
ಮಳೆ2 days ago

Karnataka Rain : ಬೀದಿಗೆ ತಂದ ರಣಮಳೆ; ಮನೆ ಕುಸಿದು ಬಿದ್ದು 9 ತಿಂಗಳ ಗರ್ಭಿಣಿ ನರಳಾಟ

Karnataka Rain
ಮಳೆ2 days ago

Karnataka Rain : ರಾಜ್ಯದಲ್ಲಿ ಮಳೆಯ ಆರ್ಭಟ; ರಾತ್ರಿ ಕಳೆದು ಬೆಳಗಾಗುವುದರೊಳಗೆ ಕಂದಕ ನಿರ್ಮಾಣ

Karnataka Rain
ಮಳೆ3 days ago

Karnataka Rain : ಭಾರಿ ಮಳೆ ಎಫೆಕ್ಟ್‌; ಉಕ್ಕಿ ಹರಿಯುತ್ತಿದ್ದ ನದಿಯಲ್ಲಿ ಕೊಚ್ಚಿ ಹೋದ ರಾಸು

Uttara Kannada Landslide
ಮಳೆ3 days ago

Uttara Kannada Landslide: ಶಿರೂರು ಗುಡ್ಡ ಕುಸಿತ; ಅಖಾಡಕ್ಕಿಳಿದ ಜಿಯೊಲಾಜಿಕಲ್ ಸರ್ವೆ ಆಫ್ ಇಂಡಿಯಾ ಟೀಂ

Karnataka Rain
ಮಳೆ5 days ago

Karnataka Rain : ಕಾರವಾರದಲ್ಲಿ ಮಳೆ ಅವಾಂತರ; ಮನೆ ಮೇಲೆ ಗುಡ್ಡ ಕುಸಿದು ವೃದ್ಧ ಸಾವು

karnataka Rain
ಮಳೆ5 days ago

Karnataka Rain : ಭಾರಿ ಮಳೆಗೆ ನಿಯಂತ್ರಣ ತಪ್ಪಿ ಕೆರೆಗೆ ಉರುಳಿ ಬಿದ್ದ ಕಾರು; ನಾಲ್ವರು ಪ್ರಾಣಾಪಾಯದಿಂದ ಪಾರು

karnataka Weather Forecast
ಮಳೆ6 days ago

Karnataka Weather : ವ್ಯಾಪಕ ಮಳೆ ಎಚ್ಚರಿಕೆ; ನಾಳೆಯೂ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

karnataka Rain
ಮಳೆ6 days ago

Karnataka Rain : ಶಾಲಾ-ಕಾಲೇಜಿಗೆ ಈ ದಿನ ರಜಾ; ಅಬ್ಬರಿಸುತ್ತಿರುವ ಮಳೆಗೆ ಮನೆಯಲ್ಲೇ ಎಲ್ಲರೂ ಸಜಾ!

ಟ್ರೆಂಡಿಂಗ್‌