Bengaluru News : ಓವರ್‌ ನೈಟ್‌ ಪಾರ್ಟಿ; ವಿರಾಟ್‌ ಕೊಹ್ಲಿ ಮಾಲಿಕತ್ವದ ಪಬ್‌ ಸೇರಿ 10ಕ್ಕೂ ಹೆಚ್ಚು ಪಬ್‌ಗಳ ಮೇಲೆ ಎಫ್‌ಐಆರ್‌ - Vistara News

ಬೆಂಗಳೂರು

Bengaluru News : ಓವರ್‌ ನೈಟ್‌ ಪಾರ್ಟಿ; ವಿರಾಟ್‌ ಕೊಹ್ಲಿ ಮಾಲಿಕತ್ವದ ಪಬ್‌ ಸೇರಿ 10ಕ್ಕೂ ಹೆಚ್ಚು ಪಬ್‌ಗಳ ಮೇಲೆ ಎಫ್‌ಐಆರ್‌

Bengaluru News : ವಿರಾಟ್‌ ಕೊಹ್ಲಿ (virat kohli) ಮಾಲಿಕತ್ವದ ಪಬ್‌ ಸೇರಿ 10ಕ್ಕೂ ಹೆಚ್ಚು ಪಬ್‌ಗಳ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ಸರ್ಕಾರ ನಿಗದಿಪಡಿಸಿದ ಅವಧಿಯನ್ನು ಮೀರಿ ತೆರೆದಿದ್ದ ಪಬ್ ಮತ್ತು ಬಾರ್ & ರೆಸ್ಟೋರೆಂಟ್ ಮೇಲೆ ಎಫ್‌ಐಆರ್‌ ದಾಖಲಾಗಿದೆ.

VISTARANEWS.COM


on

bengaluru news
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಓವರ್ ನೈಟ್ ಪಾರ್ಟಿಗೆ ಅವಕಾಶ ಮಾಡಿಕೊಡುತ್ತಿದ್ದ ಬಾರ್‌, ರೆಸ್ಟೋರೆಂಟ್‌, ಪಬ್‌ಗಳಿಗೆ ಸಿಟಿ ಪೊಲೀಸರು (Bengaluru News) ತಡರಾತ್ರಿ ಬಿಸಿ ಮುಟ್ಟಿಸಿದ್ದರು. ಪಬ್‌ ಓಪನ್ ಮಾಡಲು ಟೈಮ್‌ ಇದೆ, ಆದರೆ ಕ್ಲೋಸ್ ಮಾಡೋಕೆ ಟೈಮ್ ಫಾಲೋ ಮಾಡುತ್ತಿರಲಿಲ್ಲ. ಹೀಗೆ ಲೇಟ್ ನೈಟ್ ಪಾರ್ಟಿಗೆ ಅವಕಾಶ ನೀಡಿದ್ದ ಪಬ್‌ಗಳ ಮೇಲೆ ಪೊಲೀಸರು ದಾಳಿ ಮಾಡಿದ್ದರು. ವಿರಾಟ್ ಕೊಹ್ಲಿ ಪಬ್ ಸೇರಿ ಹಲವು ಪಬ್‌ಗಳ ಮೇಲೆ ಸೆಂಟ್ರಲ್ ಡಿವಿಷನ್‌ ಪೊಲೀಸರು ಸ್ಪೆಷಲ್ ರೈಡ್ ಮಾಡಿದರು.

ಬೆಂಗಳೂರಿನ ಚಿನ್ನಸ್ಚಾಮಿ ಸ್ಟೇಡಿಯಂ ಬಳಿ ಇರುವ ಕ್ರಿಕೆಟರ್ ವಿರಾಟ್‌ ಕೊಹ್ಲಿ ಒಡೆತನದ 18 ಪಬ್ ಮೇಲೆ ಕೇಂದ್ರ ವಿಭಾಗದ ಪೊಲೀಸರು ಶನಿವಾರ ರಾತ್ರಿ ರೇಡ್ ಮಾಡಿದ್ದಾರೆ. ಅವಧಿ ಮುಗಿದರೂ ಲೇಟ್ ನೈಟ್‌ವರೆಗೂ ಓಪನ್ ಮಾಡಿದ್ದ ಕೊಹ್ಲಿ ಪಬ್ ಸೇರಿ ಕೇಂದ್ರ ವಿಭಾಗದ ಹಲವು ಪಬ್‌ಗಳ ಮೇಲೆ ರೇಡ್ ಮಾಡಿ ಕೇಸ್ ಹಾಕಲಾಗಿದೆ.

ಅತಿಯಾದ ಡಿಜೆ ಸೌಂಡ್, ಓವರ್ ನೈಟ್ ಪಾರ್ಟಿಗಳಿಂದ ತೊಂದರೆ ಅನುಭವಿಸಿದ ಅಕ್ಕ-ಪಕ್ಕದ ಜನರಿಂದ ಈ ಬಗ್ಗೆ ಪೊಲೀಸರಿಗೆ ಸಾಲು ಸಾಲು ದೂರುಗಳು ಬರುತ್ತಿದ್ದವು. ಈ ಬೆನ್ನಲ್ಲೇ ಕೇಂದ್ರ ವಿಭಾಗದ ಡಿಸಿಪಿ ಶೇಖರ್ ನೇತೃತ್ವದಲ್ಲಿ ನಿನ್ನೆ ಶನಿವಾರ ರಾತ್ರಿ ಪಬ್‌ಗಳ ಮೇಲೆ‌ ದಾಳಿ ನಡೆಸಲಾಗಿದೆ. ಕೊಹ್ಲಿ ಒಡೆತನದ 18 ಪಬ್ ಸೇರಿ ಹಲವೆಡೆ ದಾಳಿ ನಡೆಸಿದ್ದ ಪೊಲೀಸರು ಬಂದ್ ಮಾಡಿ ಕ್ಲೋಸ್ ಮಾಡಿಸಿದ್ದಾರೆ.

ಇದನ್ನೂ ಓದಿ: Kalaburagi News : ಕಾಮಗಾರಿ ವೇಳೆ ಕಟ್ಟಡದ ಮೇಲಿಂದ ಬಿದ್ದು ಕಾರ್ಮಿಕ ಸಾವು

ಈ ಹಿಂದೆಯೂ ಕೊಹ್ಲಿ ಒಡೆತನದ 18ಪಬ್ ಅವಧಿ ಮೀರಿ ಪಾರ್ಟಿಗೆ ಅವಕಾಶ ನೀಡಿತ್ತು. ಆಗಲೂ ಪೊಲೀಸರು ಹೋಗಿ ಪಬ್‌ನ ಕ್ಲೋಸ್ ಮಾಡಿಸಿ ವಾರ್ನ್ ಮಾಡಿದ್ದಲ್ದೇ ಕೇಸ್ ಕೂಡ ದಾಖಲಿಸಿದ್ದರು. ಇಷ್ಟಾದರೂ ಮತ್ತೆ ಲೇಟ್ ನೈಟ್‌ವರೆಗೂ ಪಬ್‌ಅನ್ನು ತೆರೆದಿದ್ದರು. ಎಂಜಿ. ರೋಡ್ , ಬ್ರಿಗೇಡ್ ರೋಡ್ , ಚರ್ಚ್ ಸ್ಟ್ರೀಟ್‌ನಲ್ಲಿ  ವಿಶೇಷ ಕಾರ್ಯಾಚರಣೆ ನಡೆಸಿ, ಅವಧಿ ಮೀರಿ ನಡೆಯುತ್ತಿದ್ದ 15 ಪಬ್‌ಗಳ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

ಸದ್ಯ ಪಬ್‌ಗಳು ಹೆಚ್ಚಿರುವ ಕೇಂದ್ರ ವಿಭಾಗದ ಇಂದಿರಾನಗರ, ಕೋರಮಂಗಲ ಕಡೆ ಕೂಡ ಇದೆ ರೀತಿಯ ನಿಯಮ ಉಲ್ಲಂಘನೆ ನಡೆಯುತ್ತಿದೆ. ಹೀಗಾಗಿ ಈ ವಿಶೇಷ ಕಾರ್ಯಾಚರಣೆಯನ್ನು ಪೊಲೀಸರು ಮುಂದುವರಿಸಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮಳೆ

Karnataka Weather : ಥಂಡಿ ಮಿಶ್ರಿತ ಗಾಳಿ-ಮಳೆಗೆ ಹೈರಣಾದ ಜನತೆ; ಜು.25ರವರಗೆ ಮಳೆ ಮುಂದುವರಿಕೆ

Karnataka Weather Forecast : ರಾಜ್ಯಾದ್ಯಂತ ಮಳೆಯಾಟ (Rain News) ಮುಂದುವರಿದಿದ್ದು, ಜನರು ತತ್ತರಿಸಿ ಹೋಗಿದ್ದಾರೆ. ಮಳೆಗೆ ಮನೆಯಿಂದ ಹೊರಬರಲು ಆಗದೆ ಒಳಗೆ ಕೂರಲು ಆಗದೆ ಚಡಪಡಿಸುವಂತಾಗಿದೆ. ಸದ್ಯ ಮುಂದಿನ ಐದು ದಿನಗಳಿಗೆ ಮಳೆ ಮುನ್ಸೂಚನೆಯನ್ನು ನೀಡಲಾಗಿದೆ.

VISTARANEWS.COM


on

By

karnataka Weather Forecast
Koo

ಬೆಂಗಳೂರು/ವಿಜಯನಗರ: ಭಾನುವಾರ ಬೆಂಗಳೂರು ಸೇರಿದಂತೆ ಹಲವೆಡೆ ಮಳೆಯು (Karnataka Weather Forecast) ಅಬ್ಬರಿಸಿದೆ. ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ಮಧ್ಯಾಹ್ನದಿಂದ ಜಿಟಿಜಿಟಿ ಮಳೆಯಾಗಿತ್ತು. ಥಂಡಿ ಮಿಶ್ರಿತ ಗಾಳಿ ಜತೆಗೆ ಜಿಟಿ ಜಿಟಿ ಮಳೆಗೆ (Rain news) ಜನರು ಹೈರಾಣಾದರು. ಹಡಗಲಿ, ಹರಪನಹಳ್ಳಿ, ಕೂಡ್ಲಿಗಿ, ಕೊಟ್ಟೂರು, ಹಗರಿಬೊಮ್ಮನಹಳ್ಳಿ ತಾಲೂಕುಗಳಲ್ಲಿಯೂ ಇದೇ ರೀತಿಯ ವಾತಾವರಣ ಇತ್ತು.

ಇನ್ನೂ ಜು.22ರಂದು ಕರಾವಳಿಯ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಪ್ರತ್ಯೇಕವಾದ ಭಾರೀ ಮಳೆಯೊಂದಿಗೆ ನಿರಂತರ ಗಾಳಿಯ ವೇಗ 30-40 ಕಿಮೀ ತಲುಪುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಬಹುತೇಕ ಸ್ಥಳಗಳಲ್ಲಿ ಲಘುವಾಗಿ ಮಧ್ಯಮ ಮಳೆ ಜತೆಗೆ ಗಾಳಿಯು ಸಾಥ್‌ ನೀಡಲಿದೆ. ದಕ್ಷಿಣ ಒಳನಾಡಿನ ಎಲ್ಲಾ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ.

ಬೆಂಗಳೂರಲ್ಲಿ ಹಗುರ ಮಳೆ

ಬೆಂಗಳೂರಿನಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ. ಥಂಡಿ ಗಾಳಿ ಜತೆಗೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 27 ಮತ್ತು 21 ಡಿ.ಸೆ ಇರಲಿದೆ.

ಇದನ್ನೂ ಓದಿ: Karnataka Rain : ಭರ್ತಿಯತ್ತ ಜಲಾಶಯಗಳು; ಪ್ರವಾಹ ಭೀತಿ ಹಿನ್ನೆಲೆ ನದಿ ತೀರದಲ್ಲಿ ಹೈ ಅಲರ್ಟ್

ಬೆಳಗಾವಿಯಲ್ಲಿ 17 ಸಂಪರ್ಕ ಸೇತುವೆಗಳು ಜಲಾವೃತ

ಬೆಳಗಾವಿ: ಭಾರಿ ಮಳೆಗೆ (Karnataka Rain) ಬೆಳಗಾವಿ ಜಿಲ್ಲೆಗೆ ಸಪ್ತ ನದಿಗಳ ನೆರೆ ಭೀತಿ ಶುರುವಾಗಿದೆ. ಬೆಳಗಾವಿ ಜಿಲ್ಲೆಯಲ್ಲಿ ಕೇವಲ ಐದು ದಿನದಲ್ಲಿ 17 ಸಂಪರ್ಕ ಸೇತುವೆಗಳು ಜಲಾವೃತಗೊಂಡಿದೆ. ಚಿಕ್ಕೋಡಿ ಉಪವಿಭಾಗ ವ್ಯಾಪ್ತಿಯ ಏಳು ಸೇತುವೆಗಳು ಹಾಗೂ ಬೆಳಗಾವಿ ವ್ಯಾಪ್ತಿಯಲ್ಲಿ ಹತ್ತು ಸಂಪರ್ಕ ಸೇತುವೆ ಮುಳುಗಡೆಯಾಗಿವೆ.

ದೂದಗಂಗಾ ನದಿಗೆ ದತ್ತವಾಡ-ಮಲ್ಲಿಕವಾಡ, ಬೋಜ್-ಕಾರದಗಾ, ಬೋಜವಾಡಿ-ಕುಣ್ಣೂರ ಹಾಗೂ ವೇದಗಂಗಾ ನದಿಗೆ ಜತ್ರಾಟ-ಭೀವಶಿ, ಅಕ್ಕೋಳ-ಸಿದ್ನಾಳ, ಕೃಷ್ಣಾ ನದಿಗೆ ಮಾಂಜರಿ-ಬಾವನಸೌದತ್ತಿ, ಹಿರಣ್ಯಕೇಶಿ ನದಿಗೆ ಯರನಾಳ-ಮದಮಕ್ಕನಾಳ ಸೇರಿ ಘಟಪ್ರಭಾ ನದಿಗೆ ಸುಣಧೋಳಿ – ಮೂಡಲಗಿ, ಅವರಾದಿ- ನಂದಗಾಂವ, ಕಮಲದಿನ್ನಿ – ಹುಣಶ್ಯಾಳ ಪಿವೈ, ವಡ್ಡರಹಟ್ಟಿ- ಉದಗಟ್ಟಿ, ಗೋಕಾಕ್-ಶಿಂಗಳಾಪುರ, ಮಲಪ್ರಭಾಗೆ ಖಾನಾಪುರ-ಹೆಮ್ಮಡಗಾ, ಸಾತ್ನಾಳಿ-ಮಾಸಾಳಿ ಸಂಪರ್ಕ ಕಡಿತಗೊಂಡಿದೆ. ಇದರಿಂದ ಬರೋಬ್ಬರಿ 34 ಗ್ರಾಮಗಳಿಗೆ ಸಂಪರ್ಕ ಕಡಿತವಾಗಿದ್ದು, ಕಿ.ಮೀ ಗಟ್ಟಲೇ ಸುತ್ತಿ ಹಾಕಿ ಓಡಾಡುವಂತಾಗಿದೆ.

ಕೊಡಗಿನಲ್ಲಿ ಕರೆಂಟ್‌ ಶಾಕ್‌ಗೆ ಎತ್ತು ಸಾವು

ಕೊಡಗು: ಗದ್ದೆಯಲ್ಲಿ ವಿದ್ಯುತ್ ಸ್ಪರ್ಶಿಸಿ ಎತ್ತೊಂದು ಮೃತಪಟ್ಟಿದೆ. ಮತ್ತೊಂದು ಎತ್ತು ಹಾಗೂ ರೈತನ ಕುಟುಂಬ ಹಾಗೂಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕೊಡಗಿನ ಸೋಮವಾರಪೇಟೆ ತಾಲೂಕಿನ ದೊಡ್ಡಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ.

ಗದ್ದೆಯಲ್ಲಿ ಉಳುಮೆ ಮಾಡುತ್ತಿದ್ದ ಸಂದರ್ಭದಲ್ಲಿ ಕರೆಂಟ್‌ ಶಾಕ್‌ ಹೊಡೆದಿದೆ. ಈ ವೇಳೆ ಒಂದು ಎತ್ತು ಮೃತಪಟ್ಟರೆ, ಕುಂಬಗೌಡನ ಸದಾ ಅವರ ಪತ್ನಿ ವೀಣಾ, ಮತ್ತೊಂದು ಎತ್ತು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಭಾರಿ ಮಳೆ ಹಿನ್ನೆಲೆಯಲ್ಲಿ ಕಂಬದಿಂದ ವಿದ್ಯುತ್ ಲೀಕೇಜ್‌ ಆಗಿದ್ದೆ ಈ ಅವಘಡಕ್ಕೆ ಕಾರಣ ಎನ್ನಲಾಗಿದೆ. ಸ್ಥಳಕ್ಕೆ ಚೆಸ್ಕಾಂ ಸಿಬ್ಬಂದಿ ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Rain : ಭಾರಿ ಮಳೆ ಎಫೆಕ್ಟ್‌; ಬೆಳಗಾವಿಯಲ್ಲಿ 17 ಸಂಪರ್ಕ ಸೇತುವೆಗಳು ಜಲಾವೃತ

Karnataka Rain : ಭಾರಿ ಮಳೆಗೆ ಅವಾಂತರವೇ ಸೃಷ್ಟಿಯಾಗಿದ್ದು, ಬಹುತೇಕ ಕಡೆಗಳಲ್ಲಿ ಸೇತುವೆಗಳು ಮುಳುಗಡೆಯಾಗಿವೆ. ಕೊಡಗಿನಲ್ಲಿ ಕರೆಂಟ್‌ ಶಾಕ್‌ಗೆ ಎತ್ತು ಮೃತಪಟ್ಟಿದೆ.

VISTARANEWS.COM


on

By

karnataka rain
Koo

ಬೆಳಗಾವಿ: ಭಾರಿ ಮಳೆಗೆ (Karnataka Rain) ಬೆಳಗಾವಿ ಜಿಲ್ಲೆಗೆ ಸಪ್ತ ನದಿಗಳ ನೆರೆ ಭೀತಿ ಶುರುವಾಗಿದೆ. ಬೆಳಗಾವಿ ಜಿಲ್ಲೆಯಲ್ಲಿ ಕೇವಲ ಐದು ದಿನದಲ್ಲಿ 17 ಸಂಪರ್ಕ ಸೇತುವೆಗಳು ಜಲಾವೃತಗೊಂಡಿದೆ. ಚಿಕ್ಕೋಡಿ ಉಪವಿಭಾಗ ವ್ಯಾಪ್ತಿಯ ಏಳು ಸೇತುವೆಗಳು ಹಾಗೂ ಬೆಳಗಾವಿ ವ್ಯಾಪ್ತಿಯಲ್ಲಿ ಹತ್ತು ಸಂಪರ್ಕ ಸೇತುವೆ ಮುಳುಗಡೆಯಾಗಿವೆ.

ದೂದಗಂಗಾ ನದಿಗೆ ದತ್ತವಾಡ-ಮಲ್ಲಿಕವಾಡ, ಬೋಜ್-ಕಾರದಗಾ, ಬೋಜವಾಡಿ-ಕುಣ್ಣೂರ ಹಾಗೂ ವೇದಗಂಗಾ ನದಿಗೆ ಜತ್ರಾಟ-ಭೀವಶಿ, ಅಕ್ಕೋಳ-ಸಿದ್ನಾಳ, ಕೃಷ್ಣಾ ನದಿಗೆ ಮಾಂಜರಿ-ಬಾವನಸೌದತ್ತಿ, ಹಿರಣ್ಯಕೇಶಿ ನದಿಗೆ ಯರನಾಳ-ಮದಮಕ್ಕನಾಳ ಸೇರಿ ಘಟಪ್ರಭಾ ನದಿಗೆ ಸುಣಧೋಳಿ – ಮೂಡಲಗಿ, ಅವರಾದಿ- ನಂದಗಾಂವ, ಕಮಲದಿನ್ನಿ – ಹುಣಶ್ಯಾಳ ಪಿವೈ, ವಡ್ಡರಹಟ್ಟಿ- ಉದಗಟ್ಟಿ, ಗೋಕಾಕ್-ಶಿಂಗಳಾಪುರ, ಮಲಪ್ರಭಾಗೆ ಖಾನಾಪುರ-ಹೆಮ್ಮಡಗಾ, ಸಾತ್ನಾಳಿ-ಮಾಸಾಳಿ ಸಂಪರ್ಕ ಕಡಿತಗೊಂಡಿದೆ. ಇದರಿಂದ ಬರೋಬ್ಬರಿ 34 ಗ್ರಾಮಗಳಿಗೆ ಸಂಪರ್ಕ ಕಡಿತವಾಗಿದ್ದು, ಕಿ.ಮೀ ಗಟ್ಟಲೇ ಸುತ್ತಿ ಹಾಕಿ ಓಡಾಡುವಂತಾಗಿದೆ.

ಕೊಡಗಿನಲ್ಲಿ ಕರೆಂಟ್‌ ಶಾಕ್‌ಗೆ ಎತ್ತು ಸಾವು

ಕೊಡಗು: ಗದ್ದೆಯಲ್ಲಿ ವಿದ್ಯುತ್ ಸ್ಪರ್ಶಿಸಿ ಎತ್ತೊಂದು ಮೃತಪಟ್ಟಿದೆ. ಮತ್ತೊಂದು ಎತ್ತು ಹಾಗೂ ರೈತನ ಕುಟುಂಬ ಹಾಗೂಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕೊಡಗಿನ ಸೋಮವಾರಪೇಟೆ ತಾಲೂಕಿನ ದೊಡ್ಡಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ.

ಗದ್ದೆಯಲ್ಲಿ ಉಳುಮೆ ಮಾಡುತ್ತಿದ್ದ ಸಂದರ್ಭದಲ್ಲಿ ಕರೆಂಟ್‌ ಶಾಕ್‌ ಹೊಡೆದಿದೆ. ಈ ವೇಳೆ ಒಂದು ಎತ್ತು ಮೃತಪಟ್ಟರೆ, ಕುಂಬಗೌಡನ ಸದಾ ಅವರ ಪತ್ನಿ ವೀಣಾ, ಮತ್ತೊಂದು ಎತ್ತು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಭಾರಿ ಮಳೆ ಹಿನ್ನೆಲೆಯಲ್ಲಿ ಕಂಬದಿಂದ ವಿದ್ಯುತ್ ಲೀಕೇಜ್‌ ಆಗಿದ್ದೆ ಈ ಅವಘಡಕ್ಕೆ ಕಾರಣ ಎನ್ನಲಾಗಿದೆ. ಸ್ಥಳಕ್ಕೆ ಚೆಸ್ಕಾಂ ಸಿಬ್ಬಂದಿ ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ: Bengaluru News : ಓವರ್‌ ನೈಟ್‌ ಪಾರ್ಟಿ; ವಿರಾಟ್‌ ಕೊಹ್ಲಿ ಮಾಲಿಕತ್ವದ ಪಬ್‌ ಸೇರಿ 10ಕ್ಕೂ ಹೆಚ್ಚು ಪಬ್‌ಗಳ ಮೇಲೆ ಎಫ್‌ಐಆರ್‌

ದ್ವೀಪದಂತೆ ಆದ ಮಂಡಕಳಲೆ ಗ್ರಾಮ

ಶಿವಮೊಗ್ಗದಲ್ಲಿ ಮಳೆಯಾರ್ಭಟಕ್ಕೆ ಮಂಡಕಳಲೆ ಗ್ರಾಮ ದ್ವೀಪದಂತೆ ಆಗಿದೆ. ಜತೆಗೆ ಎರಡು ಮನೆಗಳು ನೆಲಸಮವಾಗಿದ್ದು, ಕುಟುಂಬಸ್ಥರು ಕಂಗಲಾಗಿದ್ದಾರೆ. ಪ್ರಕಾಶ್ ಹಾಗೂ ಜಯಲಕ್ಷ್ಮಿ ಎಂಬುವವರ ಮನೆ ನೆಲಸಮವಾಗಿದೆ. ಜಿಲ್ಲಾಡಳಿತ ಮಂಡಕಳಲೆ ಗ್ರಾಮದಲ್ಲಿ ಪ್ರಾಥಮಿಕ ಶಾಲೆಯಲ್ಲಿ ನಿರಾಶ್ರಿತರಿಗೆ ಕಾಳಜಿ ಕೇಂದ್ರ ಸ್ಥಾಪನೆ ಮಾಡಿದೆ. ಇನ್ನೂ ಸಚಿವ ಮಧುಬಂಗಾರಪ್ಪ ಪ್ರತಿ ಕುಟುಂಬಕ್ಕೆ 5 ಸಾವಿರ ವೈಯಕ್ತಿಕ ಪರಿಹಾರ ನೀಡಿದ್ದು, ಮನೆ ಕಳೆದು ಕೊಂಡವರಿಗೆ 5 ಲಕ್ಷ ರೂ. ಹಣ ಪರಿಹಾರ ನೀಡುವುದಾಗಿ ಭರವಸೆ ನೀಡಿದ್ದಾರೆ.

ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಕಾನಲೆ ಗ್ರಾಮದಲ್ಲಿ ಅಪಾಯ ಮಟ್ಟ ಮೀರಿ ವರದಾ ನದಿ ಹರಿಯುತ್ತಿದ್ದು, ಕೆಲವೇ – ಕನ್ನಳ್ಳಿ ಮಾರ್ಗದ ಸೇತುವೆ ಮುಳಗಡೆಯಾಗಿದೆ. ಸೇತುವೆ ಮೇಲೆ ನೀರು ರಭಸವಾಗಿ ಹರಿಯುತ್ತಿದ್ದು, ಕೆಲವೇ – ಕನ್ನಳ್ಳಿ ಮಾರ್ಗದ ಸಂಪರ್ಕಕ್ಕೆ ಅಡಚಣೆ ಉಂಟಾಗಿದೆ.

ಇತ್ತ ವರದಾ ನದಿಯಲ್ಲಿ ನೀರು ಹೆಚ್ಚಾದ ಹಿನ್ನೆಲೆಯಲ್ಲಿ ಹಾನಗಲ್ ತಾಲೂಕಿನಲ್ಲಿ ಹಲವು ಸೇತುವೆ ಮುಳುಗಡೆಯಾಗಿದೆ. ಬಾಳಂಬೀಡ, ಅರೆಲಕಮಾಪುರ ಸಂಪರ್ಕ ಸೇತುವೆ ಮುಳುಗಡೆ ಆಗಿದ್ದರಿಂದ ಹತ್ತಕ್ಕೂ ಹೆಚ್ಚು ಗ್ರಾಮಗಳ ಸಂಪರ್ಕ ಬಂದ್ ಆಗಿದೆ. ನೂರಾರು ಎಕರೆ ಬೆಳೆ ನೀರುಪಾಲಾಗಿದೆ. ದೇವಸ್ಥಾನ, ವಿದ್ಯುತ್ ಕಂಬ, ವಿದ್ಯುತ್ ಟ್ರಾನ್ಸ್ ಫಾರ್ಮರ್, ರೈತರ ಪಂಪ್ ಸೆಟ್‌ಗಳು ನೀರುಪಾಲಾಗಿವೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಸಿನಿಮಾ

Kiccha Sudeep: ಕನ್ನಡಿಗರ ಸ್ವಾಭಿಮಾನವೇ ಮುಖ್ಯ; ಫೋನ್ ಪೇ ಬ್ರ್ಯಾಂಡ್‌ ಅಂಬಾಸಿಡರ್ ಸ್ಥಾನ ತ್ಯಜಿಸುತ್ತಾರಾ ಕಿಚ್ಚ ಸುದೀಪ್?

‌Kiccha Sudeep: ಕನ್ನಡಿಗರಿಗೆ ಉದ್ಯೋಗ ಮೀಸಲು ಕುರಿತು ನೀಡಿರುವ ಹೇಳಿಕೆಗೆ ಫೋನ್ ಪೇ ಸಿಇಒ ಸಮೀರ್ ನಿಗಮ್ ಕನ್ನಡಿಗರ ಕ್ಷಮೆ ಕೇಳಬೇಕು’ ಹಾಗೂ ಕನ್ನಡಿಗರಿಗೆ ಮೀಸಲಾತಿ ಪ್ರಕಾರ ಉದ್ಯೋಗ ನೀಡಬೇಕು ಎಂಬ ನಿಲುವಿಗೆ ಕಿಚ್ಚ ಸುದೀಪ್ ಬೆಂಬಲ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.

VISTARANEWS.COM


on

Kiccha Sudeep
Koo

ಬೆಂಗಳೂರು: ಖಾಸಗಿ ಸಂಸ್ಥೆಗಳಲ್ಲಿ ಕನ್ನಡಿಗರಿಗೆ ಮೀಸಲಾತಿ ನೀಡುವ ಕರ್ನಾಟಕ ಸರ್ಕಾರದ ನಿರ್ಧಾರಕ್ಕೆ ಫೋನ್ ಪೇ ಸಿಇಒ ಸಮೀರ್ ನಿಗಮ್ ಅಸಮಾಧಾನ ಹೊರಹಾಕಿದ ಹಿನ್ನೆಲೆಯಲ್ಲಿ ಕನ್ನಡಿಗರು ಆಕ್ರೋಶ ಹೊರಹಾಕುತ್ತಿದ್ದಾರೆ. ಇದರ ಭಾಗವಾಗಿ ʼಬಾಯ್ಕಾಟ್‌ ಫೋನ್‌ ಪೇ ʼ ಅಭಿಯಾನ ಕೂಡ ಶುರುವಾಗಿದ್ದು, ಈ ನಡುವೆ ಕನ್ನಡಿಗರ ಪರ, ಕನ್ನಡಿಗರ ಅಭಿಯಾನಕ್ಕೆ ನಟ ಕಿಚ್ಚ ಸುದೀಪ್‌ (Kiccha Sudeep) ಬೆಂಬಲ ನೀಡಿದ್ದಾರೆ.

ಅಂತಾರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಂಡಿರುವ ಕನ್ನಡದ ನಟ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್‌ ಅವರು ನಾಡು-ನುಡಿಯ ವಿಚಾರ ಬಂದಾಗ ಸದಾ ಮುಂದಿರುತ್ತಾರೆ. ಕರ್ನಾಟಕದಲ್ಲಿ ಕನ್ನಡಿಗನೇ ಸಾರ್ವಭೌಮ. ʻʻಕಂಪನಿ, ಹಣಕ್ಕಿಂತ ಕನ್ನಡಿಗನಾಗಿ ನನ್ನ ಸ್ವಾಭಿಮಾನ ಮುಖ್ಯʼʼ ಎನ್ನುವುದು ಸುದೀಪ್ ಅವರ ನಿರ್ಧಾರವಾಗಿದೆ ಎನ್ನಲಾಗಿದೆ. ಈ ಕಾರಣದಿಂದ ಒಂದು ದಿನದ ಒಳಗಾಗಿ ಕಿಚ್ಚ ತಮ್ಮ ನಿರ್ಧಾರವನ್ನು ಅಧಿಕೃತವಾಗಿ ಘೋಷಿಸುವ ಸಾಧ್ಯತೆಯಿದೆ.

ಕನ್ನಡಿಗರ ಮೀಸಲಾತಿಗೆ ಫೋನ್‌ ಪೇ ಕಂಪನಿ ಸಿಇಒ ವಿರೋಧ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಸುದೀಪ್‌ ಅವರ ನಿರ್ಧಾರ ಏನಾಗುತ್ತದೆ ಅನ್ನೋದು ಹಲವರ ಪ್ರಶ್ನೆಯಾಗಿತ್ತು. ಕಿಚ್ಚ ಸುದೀಪ್ ಅವರು 2023ರಿಂದ ಫೋನ್‌ ಪೇ ಬ್ರ್ಯಾಂಡ್ ಅಂಬಾಸಿಡರ್ ಆಗಿದ್ದಾರೆ. ಹೀಗಾಗಿ ಫೋನ್ ಪೇ ಕಂಪನಿ ಇನ್ನು ಒಂದು ದಿನದ ಒಳಗಾಗಿ ಕನ್ನಡಿಗರ ಕ್ಷಮೆ ಕೋರಿ, ರಾಜ್ಯ ಸರ್ಕಾರದ ನಿಲುವಿಗೆ ಬದ್ಧವಾಗದಿದ್ದರೆ ತಾವು ಫೋನ್ ಪೇ ಬ್ರ್ಯಾಂಡ್ ಅಂಬಾಸಿಡರ್ ಆಗಿ ಮುಂದುವರೆಯದೇ ಇರಲು ನಿರ್ಧರಿಸಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ | Karnataka Job Reservation : ಹಗರಣಗಳನ್ನು ಮುಚ್ಚಿಡಲು ಕನ್ನಡಿಗರಿಗೆ ಮೀಸಲು ವಿಚಾರ ಮುನ್ನೆಲೆಗೆ ತಂದ ಸರ್ಕಾರ; ಸಿಟಿ ರವಿ ಆರೋಪ

ಕನ್ನಡಿಗರಿಗೆ ಉದ್ಯೋಗ ಮೀಸಲು ಕುರಿತು ನೀಡಿರುವ ಹೇಳಿಕೆಗೆ ಫೋನ್ ಪೇ ಸಿಇಒ ಸಮೀರ್ ನಿಗಮ್ ಕನ್ನಡಿಗರ ಕ್ಷಮೆ ಕೇಳಬೇಕು’ ಹಾಗೂ ಕನ್ನಡಿಗರಿಗೆ ಮೀಸಲಾತಿ ಪ್ರಕಾರ ಉದ್ಯೋಗ ನೀಡಬೇಕು ಎಂಬ ನಿಲುವಿಗೆ ಕಿಚ್ಚ ಸುದೀಪ್ ಬೆಂಬಲ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ. ಸದ್ಯ ಫೋನ್ ಪೇ ವಿರುದ್ಧ ಅಭಿಯಾನ ಜೋರಾಗಿದ್ದು. ಸಿಎಂ ಸಭೆ ಬಳಿಕ ನಿರ್ಧಾರ ಸುದೀಪ್‌ ಅವರು ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ ಎಂದು ಸುದೀಪ್ ಆಪ್ತ ಬಳಗದಿಂದ ಮಾಹಿತಿ ಸಿಕ್ಕಿದೆ.

ಫೋನ್ ಪೇ ಬಾಯ್ಕಾಟ್ ಮಾಡುವಂತೆ ಅಭಿಯಾನ ಆರಂಭ

ಬೆಂಗಳೂರು: ಖಾಸಗಿ ವಲಯದ ಉದ್ಯೋಗದಲ್ಲಿ ಕನ್ನಡಿಗರಿಗೆ ಮೀಸಲಾತಿ ವಿಚಾರಕ್ಕೆ ಫೋನ್ ಪೇ ಸಿಇಒ ಸಮೀರ್ ನಿಗಮ್ ಅಸಮಾಧಾನ ಹೊರಹಾಕಿದ ಹಿನ್ನೆಲೆಯಲ್ಲಿ ಸಾಮಾಜಿಕ ಜಾಲತಾಣದಲ್ಲಿ ಕನ್ನಡಿಗರು ಆಕ್ರೋಶ ಹೊರಹಾಕುತ್ತಿದ್ದಾರೆ. ಕನ್ನಡಿಗರ ವಿಷಯದಲ್ಲಿ ಫೋನ್ ಪೇ ಸಿಇಒ ಸಮೀರ್ ನಿಗಮ್ ಉದ್ಧಟತನ ತೋರಿದ್ದಾರೆ. ಹೀಗಾಗಿ ಫೋನ್‌ ಪೇ ಆ್ಯಪ್ ಅನ್ನು ಯಾರೂ ಬಳಸಬೇಡಿ. 1 ರೇಟಿಂಗ್ ನೀಡಿದ ಬಳಿಕ ಆ್ಯಪ್ ಡಿಲಿಟ್ ಮಾಡುವಂತೆ ಅಭಿಯಾನ ಶುರು ಮಾಡಲಾಗಿದೆ.

ಇನ್ನು ಕೆಲ ನೆಟ್ಟಿಗರು, ಯಾರಾದರೂ ನನ್ನ ಹೆಸರಲ್ಲಿ ಫೋನ್ ಪೇ ಮಾಡಿ ಎಂದರೆ ಯಾರು ಮಾಡಬೇಡಿ. ಯಾಕೆಂದರೆ ನನ್ನ ಹತ್ತಿರ ಫೋನ್ ಪೇ ಇಲ್ಲ. ಕನ್ನಡಿಗರಿಗೆ ಕೆಲಸದಲ್ಲಿ ಮೀಸಲಾತಿ ಕೊಡುವುದಕ್ಕೆ ಎದುರು ಮಾಡಿರುವ ಫೋನ್‌ಪೇ ಸಿಇಒಗೆ ಬುದ್ಧಿ ಕಲಿಸಲು ಫೋನ್‌ಪೇ ಅನ್‌ಇನ್ಸ್ಟಾಲ್ ಮಾಡಿ. ಕನ್ನಡಿಗರ ಬಲ ತೋರಿಸಿ ಎಂದು ನೆಟ್ಟಿಗರು ಆಕ್ರೋಶ ಹೊರಹಾಕಿದ್ದಾರೆ.

ಇದನ್ನೂ ಓದಿ | Karnataka Jobs Reservation: ಕನ್ನಡಿಗರಿಗೆ ಮೀಸಲು ಕಡ್ಡಾಯ ಮಾಡಲು ಕಾನೂನು ಸಮಸ್ಯೆ: ಖರ್ಗೆ

Continue Reading

ಬೆಂಗಳೂರು

PM Narendra Modi: ಬೆಂಗಳೂರಿಗೆ ಪ್ರಧಾನಿ ನರೇಂದ್ರ ಮೋದಿ ಸಹೋದರ ಭೇಟಿ

PM Narendra Modi: ಬೆಂಗಳೂರಿನ ಹೊರವಲಯದ ಯಲಹಂಕದ ಸಾಯಿಬಾಬಾ ದೇವಸ್ಥಾನ ಹಾಗೂ ಟ್ರಸ್ಟ್‌ ಉದ್ಘಾಟನೆ ಕಾರ್ಯಕ್ರಮದಲ್ಲಿ ಭಾಗವಹಿಸಲು ಧಾನಿ ನರೇಂದ್ರ ಮೋದಿ ಅವರ ಸಹೋದರ ಸೋಮಭಾಯಿ ಮೋದಿ ಅವರು ಆಗಮಿಸಿದ್ದಾರೆ.

VISTARANEWS.COM


on

PM Narendra Modi
Koo

ದೇವನಹಳ್ಳಿ: ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರ ಸಹೋದರ ಸೋಮಭಾಯಿ ಮೋದಿ ಅವರು ಭಾನುವಾರ ಬೆಂಗಳೂರಿಗೆ ಆಗಮಿಸಿದ್ದಾರೆ. ಗುಜರಾತ್‌ನಿನಿಂದ ಕೆಂಪೇಗೌಡ ಏರ್‌ಪೋರ್ಟ್‌ಗೆ ಅವರು ಆಗಮಿಸಿದ್ದು, ಯಲಹಂಕದ ಸಾಯಿಬಾಬಾ ದೇವಸ್ಥಾನ ಹಾಗೂ ಟ್ರಸ್ಟ್‌ ಉದ್ಘಾಟನೆ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.

ಮೊದಲು ಯಲಹಂಕದ ಸಾಯಿಬಾಬಾ ದೇವಸ್ಥಾನ ಮತ್ತು ಘಂಚಿ ಸಮಾಜ್ ಪೂರ್ಣೇಶ್ವರ ಧಾಮ್ ಟ್ರಸ್ಟ್ ಕಾರ್ಯಕ್ರಮದಲ್ಲಿ ಸೋಮಭಾಯಿ ಮೋದಿ ಅವರು ಭಾಗವಹಿಸಲಿದ್ದು, ಬಳಿಕ ಶ್ರೀಕ್ಷೇತ್ರ ಘಾಟಿ ಸುಬ್ರಮಣ್ಯಕ್ಕೂ‌ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಲಿದ್ದಾರೆ.

ಇದನ್ನೂ ಓದಿ | ಕೇಂದ್ರ ಸಚಿವರಾದ ಬಳಿಕ ಮೊದಲ ಬಾರಿಗೆ ಹಾಸನಕ್ಕೆ ಎಚ್‌ಡಿಕೆ ಭೇಟಿ; ಮಳೆಯಿಂದ ಹಾನಿಯಾದ ಪ್ರದೇಶಗಳ ಪರಿಶೀಲನೆ

HD Kumaraswamy
HD Kumaraswamy

ಹಾಸನ: ಕೇಂದ್ರ ಸಚಿವರಾದ ಬಳಿಕ ಮೊದಲ ಬಾರಿಗೆ ತವರು ಜಿಲ್ಲೆಗೆ ಆಗಮಿಸಿದ ಎಚ್‌.ಡಿ.ಕುಮಾರಸ್ವಾಮಿ (HD Kumaraswamy) ಅವರು ಮಳೆಯಿಂದ ಹಾನಿಯಾದ ವಿವಿಧ ಪ್ರದೇಶಗಳಿಗೆ ನೀಡಿ ನೀಡಿದರು. ಸಕಲೇಶಪುರ ತಾಲೂಕಿನ ಕೊಲ್ಲಹಳ್ಳಿ ಬಳಿ ಕುಸಿದಿದ್ದ ರಾಷ್ಟ್ರೀಯ ಹೆದ್ದಾರಿಯನ್ನು ಪರಿಶೀಲಿಸಿದ ಅವರು ಜತೆಗಿದ್ದ ಜಿಲ್ಲಾಧಿಕಾರಿ, ಎಸ್‌ಪಿ ಮತ್ತು ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳ ಜತೆ ಸಮಾಲೋಚನೆ ನಡೆಸಿದರು.

ಕುಮಾರಸ್ವಾಮಿ ಹೇಳಿದ್ದೇನು?

ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಕುಮಾರಸ್ವಾಮಿ ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿ, ʼʼಕಳೆದ ನಾಲ್ಕೈದು ದಿನಗಳಿಂದ ಧಾರಾಕಾರವಾಗಿ ಸುರಿದ ಮಳೆಯಿಂದ ಅಪಾರ ಹಾನಿ ಸಂಭವಿಸಿದೆ. ಸಕಲೇಶಪುರದ ಜತೆಗೆ ಶಿರಾಡಿಘಾಟ್ ರಸ್ತೆಯಲ್ಲಿ ಭೂ ಕುಸಿತವಾಗಿದೆ. ಕಳಪೆ, ಅವೈಜ್ಞಾನಿಕ ಕಾಮಗಾರಿ ನಡೆದಿದೆ ಎನ್ನುವುದು ಮೇಲ್ನೋಟಕ್ಕೆ ತಿಳಿದು ಬಂದಿದೆ. ಈ ಬಗ್ಗೆ ಪರಿಶೀಲಿಸಲಾಗುವುದುʼʼ ಎಂದು ಅವರು ತಿಳಿಸಿದರು.

ʼʼಕಳೆದ ಲೋಕಸಭಾ ‌ಚುನಾವಣೆ ನಂತರ ಪ್ರಥಮ ಬಾರಿಗೆ ಹಾಸನ ಜಿಲ್ಲೆಯಲ್ಲಿ ಆಗಿರುವ ಅನಾಹುತ ನೋಡಲು ಬಂದಿದ್ದೇನೆ. ಚುನಾವಣೆ ಆಸುಪಾಸಿನಲ್ಲಿ ನಡೆದ ಕೆಲವು ಅಹಿತರಕರ ಘಟನೆಗಳಿಂದ‌ ಪಕ್ಷದ ಕಾರ್ಯಕರ್ತರಲ್ಲಿ, ಮುಖಂಡರಲ್ಲಿ ನಿರಾಸೆ ಮೂಡಿಸಿದೆ. ಹಾಸನ ಜಿಲ್ಲೆಯ ಜನತೆ ದೇವೇಗೌಡರಿಗೆ ಕೆಂಪುಕೋಟೆ ಮೇಲೆ ಬಾವುಟ ಹಾರಿಸುವ ಶಕ್ತಿ‌ ಕೊಟ್ಟಿದ್ದಾರೆ. ಅರವತ್ತು ವರ್ಷಗಳ ಏಳುಬೀಳುಗಳಲ್ಲಿ ಅವರ ರಾಜಕೀಯ ಬೆಳವಣಿಗೆಗೆ ಪ್ರಮುಖ ಪಾತ್ರ ವಹಿಸಿರುವುದು ಹಾಸನ ಜಿಲ್ಲೆಯ ಜನ. ನಮ್ಮ ಬದುಕು ಇರುವವರೆಗೂ ನಾವು ಇದನ್ನು ಮರೆಯುವುದಿಲ್ಲʼʼ ಎಂದು ಎಚ್‌ಡಿಕೆ ಭರವಸೆ ನೀಡಿದರು.

ʼʼನಾನು ಮಳೆ ಹಾನಿ ಪ್ರದೇಶಕ್ಕೆ ಭೇಟಿ ನೀಡಿದ್ದೇನೆ. ಎಲ್ಲ ಮಾಹಿತಿಯನ್ನು ಕೇಂದ್ರಕ್ಕೆ ನೀಡುತ್ತೇನೆ. ಬಹಳ ದಿನಗಳಿಂದ ಈ ರಸ್ತೆಯಲ್ಲಿ ಸುರಂಗ ಮಾರ್ಗ ಆಗಬೇಕು ಎನ್ನುವ ಚರ್ಚೆಗಳಿವೆ. ಇದಕ್ಕೆ ಅರಣ್ಯ ಇಲಾಖೆಯ ತೊಡಕುಗಳಿವೆ. ಎಲ್ಲವನ್ನೂ ನಾನು ಚರ್ಚೆ ಮಾಡುತ್ತೇನೆ. ಮುಂದೆ ಹಾಸನ ಜಿಲ್ಲೆಯ ಕಾರ್ಯಕರ್ತರಿಗೆ ನೈತಿಕ ಸ್ಥೈರ್ಯ ತುಂಬಲು ಬರುತ್ತೇನೆʼʼ ಎಂದು ಕುಮಾರಸ್ವಾಮಿ ತಿಳಿಸಿದರು.

ʼʼಹಾಸನದಲ್ಲಿ ಬೃಹತ್ ಸಮಾವೇಶ ಮಾಡುವಂತೆ ಆಗ್ರಹ ಕೇಳಿ ಬಂದಿದೆ. ಕಲಾಪ ಮುಗಿದ ನಂತರ ಹಾಸನದಲ್ಲಿ ಬೃಹತ್ ಸಮಾವೇಶ ಮಾಡಲು ಯೋಚಿಸಿದ್ದೇನೆ. ರೇವಣ್ಣ ಅವರ ನೇತೃತ್ವದಲ್ಲೇ ಬೃಹತ್ ಸಮಾವೇಶ ಮಾಡುತ್ತೇವೆ. ಅವರ ಕುಟುಂಬದಲ್ಲಿ ಕೆಲವು ಸಮಸ್ಯೆಗಳಿವೆ. ಆದರೆ ರೇವಣ್ಣ ಅವರು ಮಾಡಿರುವ ಅಭಿವೃದ್ಧಿ ಕೆಲಸಗಳನ್ನು ಯಾರು ಮರೆಯುವಂತಿಲ್ಲ. ಎಲ್ಲರಿಗಿಂತ ಒಂದು ಹೆಜ್ಜೆ ಹೆಚ್ಚೇ ಅಭಿವೃದ್ಧಿ ಮಾಡಿದ್ದಾರೆ. ಬೆಂಗಳೂರಿನ ಮದರ್ ಡೈರಿ ಮೀರಿಸುವ ರೀತಿಯಲ್ಲಿ ಹಾಸನದಲ್ಲಿ ಮೆಗಾ ಡೈರಿ ನಿರ್ಮಾಣ ಮಾಡುತ್ತಿದ್ದಾರೆ. ಇಲ್ಲಿನ ರೈತರಿಗೆ ಆರ್ಥಿಕ ಶಕ್ತಿ ತುಂಬಲು ಮೆಗಾ ಡೈರಿ ಮಾಡುತ್ತಿದ್ದಾರೆ. ರೇವಣ್ಣ ಅವರ ನೇತೃತ್ವದಲ್ಲಿ ಶಾಸಕರುಗಳನ್ನೊಳಗೊಂಡು ನಾನು ಸೇರಿ ಪಕ್ಷ ಸಂಘಟನೆ ಮಾಡುತ್ತೇವೆ. ಈ ಮೂಲಕ ಜಿಲ್ಲೆಯ ಜನರ ಋಣವನ್ನು ತೀರಿಸುತ್ತೇವೆʼʼ ಎಂದು ಹೇಳಿದರು.

ಇದನ್ನೂ ಓದಿ: HD Kumaraswamy: ಪರಿಹಾರ ಕಾರ್ಯದಲ್ಲಿ ರಾಜಕಾರಣ ಮಾಡಬಾರದು; ಕುಮಾರಸ್ವಾಮಿ ಸಲಹೆ

ʼʼನರೇಂದ್ರ ಮೋದಿ ಅವರ ನಾಯಕತ್ವದಲ್ಲಿ ಹಲವು ಯೋಜನೆಗಳನ್ನು ಜಾರಿಗೆ ತರುವ ಸಿದ್ಧತೆ ನಡೆಯುತ್ತಿದೆ. ನನಗೂ ಸಹ ಜವಾಬ್ದಾರಿ ನೀಡಿದ್ದಾರೆ. ಎರಡು ಜವಾಬ್ದಾರಿ, ಎರಡು ಸಮಿತಿ ಜತೆಗೆ ದೇಶದ ಅಭಿವೃದ್ಧಿಗೆ ಕೆಲಸ ಮಾಡುವ ಶಕ್ತಿ ಕೊಟ್ಟಿದ್ದಾರೆ. ಆದ್ದರಿಂದ ದೇಶದ ಅಭಿವೃದ್ಧಿಗೆ ಪ್ರಾಮಾಣಿಕವಾಗಿ ಕೆಲಸ ಮಾಡುತ್ತೇನೆʼʼ ಎಂದು ಎಚ್‌ಡಿಕೆ ತಿಳಿಸಿದರು.

Continue Reading
Advertisement
Mamata Banerjee
ದೇಶ13 mins ago

Mamata Banerjee: ‘ನಾನು ಕಾಫಿರ್‌ ಅಲ್ಲ’ ಎಂದ ಮಮತಾ ಬ್ಯಾನರ್ಜಿಗೆ ಬಿಜೆಪಿ ತಿರುಗೇಟು; ಏನಿದು ವಿವಾದ?

Joe Root
ಪ್ರಮುಖ ಸುದ್ದಿ27 mins ago

Joe Root : ವೆಸ್ಟ್​ ಇಂಡೀಸ್ ವಿರುದ್ಧ ಶತಕ ಬಾರಿಸಿ ಸ್ಟೀವ್​ ವಾ ದಾಖಲೆ ಸರಿಗಟ್ಟಿದ ಜೋ ರೂಟ್​

ಕರ್ನಾಟಕ28 mins ago

Karnataka Rain: ಮಳೆ ಅನಾಹುತ; ಜೀವ, ಬೆಳೆ ಹಾನಿಯ ವರದಿ ಕೂಡಲೇ ಸಲ್ಲಿಸುವಂತೆ ಸಿಎಂ ಸೂಚನೆ

Paris Olympics 2024 :
ಕ್ರೀಡೆ59 mins ago

Paris Olympics 2024 : ಒಲಿಂಪಿಕ್ಸ್​ ಸ್ಪರ್ಧೆಗೆ ಹೊರಟಿರುವ ಅಥ್ಲೀಟ್​ಗೆ 8.5 ಕೋಟಿ ರೂ. ಪ್ರೋತ್ಸಾಹಧನ ನೀಡಿದ ಬಿಸಿಸಿಐ

ಕರ್ನಾಟಕ1 hour ago

Renaming Ramanagara: ರಾಮನಗರದಲ್ಲಿ ಬೆಂಗಳೂರಿನ ಕಸ ಸುರಿಯಲು ಹುನ್ನಾರ: ಎಚ್‌.ಡಿ. ಕುಮಾರಸ್ವಾಮಿ

Budget Session 2024
ದೇಶ1 hour ago

Budget Session 2024: ನಾಳೆಯಿಂದ ಬಜೆಟ್‌ ಅಧಿವೇಶನ; ಕೇಂದ್ರದ ಅಜೆಂಡಾ ಏನು? ಪ್ರತಿಪಕ್ಷಗಳ ತಂತ್ರವೇನು?

Paris Olympics 2024
ಕ್ರಿಕೆಟ್1 hour ago

Paris Olympics 2024 : ಒಲಿಂಪಿಕ್ಸ್​ನಲ್ಲಿ ಸ್ಪರ್ಧಿಸಲಿರುವ ಈ ಅಥ್ಲೀಟ್​ಗೆ ಕೇವಲ 11 ವರ್ಷ! ಇಲ್ಲಿದೆ ಆಕೆಯ ವಿವರ

HD Kumaraswamy
ಕರ್ನಾಟಕ2 hours ago

HD Kumaraswamy: ನನ್ನ ಮತ್ತು ದೇವೇಗೌಡರ ಸರ್ಕಾರ ಕೆಡವಿದ್ದು ಯಾರು ಅಂತ ಹೇಳಿ; ಡಿಕೆಶಿ ವಿರುದ್ಧ ಎಚ್‌ಡಿಕೆ ಕಿಡಿ

Women's Asia Cup 2024
ಪ್ರಮುಖ ಸುದ್ದಿ2 hours ago

Women’s Asia Cup 2024 : ದಾಖಲೆ ಬರೆದ ರಿಚಾ ಘೋಷ್​, ಇತಿಹಾಸ ಸೃಷ್ಟಿಸಿದ ಭಾರತ ತಂಡ

Vande Mataram
ದೇಶ2 hours ago

Vande Mataram: ಸಂಸತ್ತಿನಲ್ಲಿ ವಂದೇ ಮಾತರಂ, ಥ್ಯಾಂಕ್ಸ್‌ ಎಂದು ಹೇಳುವಂತಿಲ್ಲ; ಏಕಿಂಥ ಆದೇಶ?

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Rain
ಮಳೆ1 day ago

Karnataka Rain : ಭಾರಿ ಮಳೆಗೆ ಮನೆ ಗೋಡೆ ಕುಸಿತ; ಕೊಟ್ಟಿಗೆಯಲ್ಲಿದ್ದ ಜಾನುವಾರುಗಳು ಸಾವು

karnataka Rain
ಮಳೆ1 day ago

Karnataka Rain : ಹಳ್ಳ ದಾಟಲು ಹೋಗಿ ನೀರುಪಾಲಾದ ಜಾನುವಾರು; ಬಿರುಗಾಳಿಗೆ ಕಳಚಿದ ವಿಂಡ್‌ ಫ್ಯಾನ್‌

karnataka Rain
ಮಳೆ2 days ago

Karnataka Rain : ಬೀದಿಗೆ ತಂದ ರಣಮಳೆ; ಮನೆ ಕುಸಿದು ಬಿದ್ದು 9 ತಿಂಗಳ ಗರ್ಭಿಣಿ ನರಳಾಟ

Karnataka Rain
ಮಳೆ2 days ago

Karnataka Rain : ರಾಜ್ಯದಲ್ಲಿ ಮಳೆಯ ಆರ್ಭಟ; ರಾತ್ರಿ ಕಳೆದು ಬೆಳಗಾಗುವುದರೊಳಗೆ ಕಂದಕ ನಿರ್ಮಾಣ

Karnataka Rain
ಮಳೆ3 days ago

Karnataka Rain : ಭಾರಿ ಮಳೆ ಎಫೆಕ್ಟ್‌; ಉಕ್ಕಿ ಹರಿಯುತ್ತಿದ್ದ ನದಿಯಲ್ಲಿ ಕೊಚ್ಚಿ ಹೋದ ರಾಸು

Uttara Kannada Landslide
ಮಳೆ3 days ago

Uttara Kannada Landslide: ಶಿರೂರು ಗುಡ್ಡ ಕುಸಿತ; ಅಖಾಡಕ್ಕಿಳಿದ ಜಿಯೊಲಾಜಿಕಲ್ ಸರ್ವೆ ಆಫ್ ಇಂಡಿಯಾ ಟೀಂ

Karnataka Rain
ಮಳೆ5 days ago

Karnataka Rain : ಕಾರವಾರದಲ್ಲಿ ಮಳೆ ಅವಾಂತರ; ಮನೆ ಮೇಲೆ ಗುಡ್ಡ ಕುಸಿದು ವೃದ್ಧ ಸಾವು

karnataka Rain
ಮಳೆ5 days ago

Karnataka Rain : ಭಾರಿ ಮಳೆಗೆ ನಿಯಂತ್ರಣ ತಪ್ಪಿ ಕೆರೆಗೆ ಉರುಳಿ ಬಿದ್ದ ಕಾರು; ನಾಲ್ವರು ಪ್ರಾಣಾಪಾಯದಿಂದ ಪಾರು

karnataka Weather Forecast
ಮಳೆ6 days ago

Karnataka Weather : ವ್ಯಾಪಕ ಮಳೆ ಎಚ್ಚರಿಕೆ; ನಾಳೆಯೂ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

karnataka Rain
ಮಳೆ6 days ago

Karnataka Rain : ಶಾಲಾ-ಕಾಲೇಜಿಗೆ ಈ ದಿನ ರಜಾ; ಅಬ್ಬರಿಸುತ್ತಿರುವ ಮಳೆಗೆ ಮನೆಯಲ್ಲೇ ಎಲ್ಲರೂ ಸಜಾ!

ಟ್ರೆಂಡಿಂಗ್‌