Lakshmi Hebbalkar: ಮಳೆಗೆ ತತ್ತರಿಸಿದ ಉಡುಪಿ; ನನ್ನ ಅವಶ್ಯಕತೆ ಇದ್ದಾಗಷ್ಟೇ ಬರ್ತೀನಿ ಎಂದ ಲಕ್ಷ್ಮೀ ಹೆಬ್ಬಾಳಕರ್ - Vistara News

ಉಡುಪಿ

Lakshmi Hebbalkar: ಮಳೆಗೆ ತತ್ತರಿಸಿದ ಉಡುಪಿ; ನನ್ನ ಅವಶ್ಯಕತೆ ಇದ್ದಾಗಷ್ಟೇ ಬರ್ತೀನಿ ಎಂದ ಲಕ್ಷ್ಮೀ ಹೆಬ್ಬಾಳಕರ್

Karnataka rain : ಉಡುಪಿಯಲ್ಲಿ ಸುರಿಯುತ್ತಿರುವ ಭಾರಿ ಮಳೆಗೆ ವಿವಿಧೆಡೆ ನೆರೆ ಸೃಷ್ಟಿಯಾಗಿದ್ದು, ಜನ-ಜೀವನ ಅಸ್ತವ್ಯಸ್ತಗೊಂಡಿದೆ. ಈ ಹಿನ್ನೆಲೆಯಲ್ಲಿ ಭಾನುವಾರ ಮಳೆ ಹಾನಿ ಪ್ರದೇಶಗಳಿಗೆ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಪರಿಶೀಲನೆ (Lakshmi Hebbalkar) ನಡೆಸಿದರು.

VISTARANEWS.COM


on

Lakshmi Hebbalkar
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಉಡುಪಿ: ಸಿಎಂ ಸಿದ್ದರಾಮಯ್ಯ ಕಟ್ಟುನಿಟ್ಟಿನ ಸೂಚನೆ ಬೆನ್ನಲ್ಲೇ ಲಕ್ಷ್ಮೀ ಹೆಬ್ಬಾಳ್ಕರ್ (Lakshmi Hebbalkar) ಭಾನುವಾರ ಉಡುಪಿಗೆ ಭೇಟಿ ನೀಡಿದರು. ಎರಡು ವಾರಗಳಿಂದ ಸುರಿದ ಭಾರೀ ಮಳೆಗೆ (Karnataka Rain) ಉಡುಪಿ ಜಿಲ್ಲೆ ತತ್ತರಿಸಿ ಹೋಗಿತ್ತು. ಬೈಂದೂರು ತಾಲೂಕಿನಲ್ಲಿ ಸಾವಿರಕ್ಕೂ ಅಧಿಕ ಮರಗಳು ಧರಶಾಹಿಯಾಗಿತ್ತು. ಜೀವನದಿಗಳ ಹರಿವಿನಿಂದ ಕೃತಕ ನೆರೆ ಸೃಷ್ಟಿಯಾಗಿತ್ತು. ಉಸ್ತುವಾರಿ ಸಚಿವೆ ಭೇಟಿಯಾಗದಿರುವ ಬಗ್ಗೆ ಭಾರಿ ವಿರೋಧ ಕೇಳಿ ಬಂದಿತ್ತು. ಕೊನೆಗೂ ನೆರೆ, ಪ್ರವಾಹ ಕಡಿಮೆ ಆಗುತ್ತಲೇ‌ ಉಡುಪಿಗೆ ಸಚಿವೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಪರಿಶೀಲನೆ ಬಳಿಕ ಮಾತನಾಡಿದ ಅವರು ನನ್ನ ಅವಶ್ಯಕತೆ ಇದ್ದಾಗ ಇಲ್ಲಿಗೆ ಬರುತ್ತೇನೆ. ದಿನದ 24 ಗಂಟೆಯೂ ಜಿಲ್ಲಾಡಳಿತ, ಸರ್ಕಾರ ಎಚ್ಚರವಾಗಿವೆ. ಎಲ್ಲೂ ಯಾವ ತೊಂದರೆ ಆಗಬಾರದು. ಪ್ರಾಣ ಹಾನಿ ಆಗಬಾರದು ಎಂದು ಮುನ್ನೆಚ್ಚರಿಕೆ ಕೈಗೊಂಡಿದ್ದೇವೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ಇನ್ನೂ ಮಳೆಯಿಂದ ಯಾವುದೇ ಅನಾಹುತ ಸಂಭವಿಸದಂತೆ ತಡೆಯಲು ಉಡುಪಿ ಜಿಲ್ಲಾಡಳಿತ ದಿನದ 24 ಗಂಟೆಯೂ ಕಾರ್ಯನಿರ್ವಹಿಸುತ್ತಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ (Lakshmi Hebbalkar) ಹೇಳಿದ್ದಾರೆ.

lakshmi hebbalkar

ಭಾನುವಾರ ರಜೆ ಆದರೂ ಪರಿಶೀಲನೆಗೆ ಬಂದಿರುವೆ

ಮಳೆಯಿಂದ ಹಾನಿಗೊಳಗಾಗಿರುವ ವಿವಿಧ ಪ್ರದೇಶಗಳಿಗೆ ಅಧಿಕಾರಗಳೊಂದಿಗೆ ಭಾನುವಾರ ಭೇಟಿ ನೀಡಿದ ಲಕ್ಷ್ಮೀ ಹೆಬ್ಬಾಳಕರ್‌, ಮಳೆ ಹಾನಿಯಿಂದ ಆದ ನಷ್ಟದ ಕುರಿತು ಮಾಹಿತಿ ಪಡೆದುಕೊಂಡರು. ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಧಾನ ಮಂಡಲ ಅಧಿವೇಶನ ನಡೀತಾ ಇದೆ. ಮಳೆ ಪರಿಸ್ಥಿತಿ ಕುರಿತು ಜಿಲ್ಲಾಡಳಿತದೊಂದಿಗೆ ನಿರಂತರ ಸಂಪರ್ಕದಲ್ಲಿದ್ದೇನೆ. ಭಾನುವಾರ ರಜೆ ಇದ್ದರೂ ಪರಿಶೀಲನೆ ಮಾಡಲು ಬಂದಿರುವೆ ಎಂದರು.

25 ದಿನಗಳ ಹಿಂದೆಯೇ ಜಿಲ್ಲಾ ಮಟ್ಟದ ಮುಂಜಾಗ್ರತಾ ಸಭೆ ನಡೆಸಿದ್ದೆ. ಬೀಳುವ ಹಂತದಲ್ಲಿರುವ ಮರಗಳನ್ನು ಕಡಿಯುವಂತೆ ಸೂಚಿಸಿದ್ದೆ. ಹೀಗಾಗಿ ಅರಣ್ಯ ಇಲಾಖೆ ವತಿಯಿಂದ 500 ರಿಂದ 600 ಮರಗಳನ್ನು ತೆರವು ಮಾಡಲಾಗಿದೆ. ಶಾಲೆಯ ಪಕ್ಕ ಇರುವ ವಯರ್‌ಗಳನ್ನು ತೆರವು ಮಾಡಲು ಮೆಸ್ಕಾಂನವರಿಗೆ ಈ ಮೊದಲೇ ಸೂಚನೆ ಕೊಟ್ಟಿದ್ದೇನೆ. ಅವರು ಕೂಡ ಅಪಾಯ ಇರುವಲ್ಲಿ ತೆರವು ಮಾಡಿದ್ದಾರೆ ಎಂದು ಮಾಹಿತಿ ನೀಡಿದರು.

ನಗರದಲ್ಲಿ ಚರಂಡಿಯಿಂದ ಸಮಸ್ಯೆ ಆಗಿತ್ತು, ಸ್ವಚ್ಛಗೊಳಿಸಿದ್ದಾರೆ. ಕಾಲು ಸಂಕಗಳ ಸಮಸ್ಯೆ ಆಗದಂತೆ ನೋಡಿಕೊಂಡಿದ್ದೇವೆ. ಜಿಲ್ಲಾಡಳಿತದಿಂದ ಹೆಲ್ಪ್ ಲೈನ್ ತೆರೆಯಲಾಗಿದೆ. ಮಳೆ ಹಾನಿಗೆ ಸಂಬಂಧಿಸಿದಂತೆ ಪರಿಹಾರ ನೀಡುವ ವಿಚಾರದಲ್ಲಿ ಯಾವುದೇ ತಾರತಮ್ಯ ಆಗಿಲ್ಲ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸ್ಪಷ್ಟ ಪಡಿಸಿದರು.

ಇದನ್ನೂ ಓದಿ: HD Kumaraswamy: ದರೋಡೆ, ಲೂಟಿ ತಡೆಯಲು ಸೇನೆ ಕರೆಸಬೇಕಿತ್ತಾ? ಡಿಕೆಶಿಗೆ ತಿರುಗೇಟು ಕೊಟ್ಟ ಎಚ್‌ಡಿಕೆ

ಈ ವೇಳೆ ಬೈಂದೂರು ಮಾಜಿ ಶಾಸಕ ಗೋಪಾಲ್ ಪೂಜಾರಿ, ಉಡುಪಿ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಕೆ.ಅರುಣ್, ಜಿಲ್ಲಾ ಪಂಚಾಯತ್ ಸಿಇಒ ಪ್ರತೀಕ್ ಬಯಲ್, ಕುಂದಾಪುರ ವಿಭಾಗದ ಸಹಾಯಕ ಆಯುಕ್ತರಾದ ಎಸ್.ಆರ್. ರಶ್ಮಿ, ಡಿಎಫ್‌ಒ ಗಣಪತಿ, ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

ಪರಿಶೀಲನೆ ಬಳಿಕ ಗೃಹ ಕಚೇರಿಯಲ್ಲಿ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಕೆ.ಅರುಣ್, ಜಿಲ್ಲಾ ಪಂಚಾಯತ್ ಕಾರ್ಯ ನಿರ್ವಹಣಾಧಿಕಾರಿ ಪ್ರತೀಕ್ ಬಯಲ್ ಜತೆ ಸಭೆ ನಡೆಸಿ, ಹೆಚ್ಚಿನ ಮಾಹಿತಿ ಪಡೆದು ಕೊಂಡರು. ಇದೇ ವೇಳೆ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಹಟ್ಟಿಯಂಗಡಿಯಲ್ಲಿರುವ ಶ್ರೀ ಸಿದ್ಧಿ ವಿನಾಯಕ ದೇವಸ್ಥಾನಕ್ಕೆ ಭೇಟಿ ನೀಡಿದ , ಸಚಿವರು ವಿಶೇಷ ಪೂಜೆ ಸಲ್ಲಿಸಿದರು.

ಸಚಿವರು ಬೀಚ್‌, ದೇವಸ್ಥಾನ ನೋಡಲು ಬಂದಿದ್ದಾ?

ಬೈಂದೂರಿಗೆ ಭೇಟಿ ನೀಡಿದ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಸೋಮೇಶ್ವರ ಗುಡ್ಡ ಕುಸಿತವನ್ನು ದೂರದಿಂದ ವೀಕ್ಷಿಸಿ ತೆರಳಿದರು. ಜರಿಯುತ್ತಿರುವ ಗುಡ್ಡದ ಬುಡದಲ್ಲಿ ಕಾಯುತ್ತಿದ್ದ ಗ್ರಾಮಸ್ಥರು ಅಸಮಾಧಾನ ಹೊರಹಾಕಿದರು. ಕಡಲ ತೀರ ಪ್ರದೇಶದಿಂದ ಗುಡ್ಡ ವೀಕ್ಷಿಸಿ ವಾಪಸ್‌ ಆದ ಸಚಿವರು ಬೀಚ್, ದೇವಸ್ಥಾನ ನೋಡಲು ಬಂದದ್ದಾ? ಗುಡ್ಡ ನೋಡಲು ಬಂದದ್ದಾ? ಎಂದು ಆಕ್ರೋಶ ವ್ಯಕ್ತಪಡಿಸಿದರು. ಕಳೆದ ನಾಲ್ಕು ದಿನಗಳಿಂದ ಸೋಮೇಶ್ವರ ಗುಡ್ಡ ಕುಸಿಯುತ್ತಿದೆ. ಖಾಸಗಿ ರೆಸಾರ್ಟ್ ನಿರ್ಮಾಣದಿಂದ ಈ ಅವ್ಯವಸ್ಥೆ ಉಂಟಾಗಿದೆ. ಗುಡ್ಡಜರಿತಕ್ಕೆ ಶೀಘ್ರ ಪರಿಹಾರ ಕಲ್ಪಿಸುವಂತೆ ಒತ್ತಾಯಿಸಿದರು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮಳೆ

Karnataka Weather : ಥಂಡಿ ಮಿಶ್ರಿತ ಗಾಳಿ-ಮಳೆಗೆ ಹೈರಣಾದ ಜನತೆ; ಜು.25ರವರಗೆ ಮಳೆ ಮುಂದುವರಿಕೆ

Karnataka Weather Forecast : ರಾಜ್ಯಾದ್ಯಂತ ಮಳೆಯಾಟ (Rain News) ಮುಂದುವರಿದಿದ್ದು, ಜನರು ತತ್ತರಿಸಿ ಹೋಗಿದ್ದಾರೆ. ಮಳೆಗೆ ಮನೆಯಿಂದ ಹೊರಬರಲು ಆಗದೆ ಒಳಗೆ ಕೂರಲು ಆಗದೆ ಚಡಪಡಿಸುವಂತಾಗಿದೆ. ಸದ್ಯ ಮುಂದಿನ ಐದು ದಿನಗಳಿಗೆ ಮಳೆ ಮುನ್ಸೂಚನೆಯನ್ನು ನೀಡಲಾಗಿದೆ.

VISTARANEWS.COM


on

By

karnataka Weather Forecast
Koo

ಬೆಂಗಳೂರು/ವಿಜಯನಗರ: ಭಾನುವಾರ ಬೆಂಗಳೂರು ಸೇರಿದಂತೆ ಹಲವೆಡೆ ಮಳೆಯು (Karnataka Weather Forecast) ಅಬ್ಬರಿಸಿದೆ. ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ಮಧ್ಯಾಹ್ನದಿಂದ ಜಿಟಿಜಿಟಿ ಮಳೆಯಾಗಿತ್ತು. ಥಂಡಿ ಮಿಶ್ರಿತ ಗಾಳಿ ಜತೆಗೆ ಜಿಟಿ ಜಿಟಿ ಮಳೆಗೆ (Rain news) ಜನರು ಹೈರಾಣಾದರು. ಹಡಗಲಿ, ಹರಪನಹಳ್ಳಿ, ಕೂಡ್ಲಿಗಿ, ಕೊಟ್ಟೂರು, ಹಗರಿಬೊಮ್ಮನಹಳ್ಳಿ ತಾಲೂಕುಗಳಲ್ಲಿಯೂ ಇದೇ ರೀತಿಯ ವಾತಾವರಣ ಇತ್ತು.

ಇನ್ನೂ ಜು.22ರಂದು ಕರಾವಳಿಯ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಪ್ರತ್ಯೇಕವಾದ ಭಾರೀ ಮಳೆಯೊಂದಿಗೆ ನಿರಂತರ ಗಾಳಿಯ ವೇಗ 30-40 ಕಿಮೀ ತಲುಪುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಬಹುತೇಕ ಸ್ಥಳಗಳಲ್ಲಿ ಲಘುವಾಗಿ ಮಧ್ಯಮ ಮಳೆ ಜತೆಗೆ ಗಾಳಿಯು ಸಾಥ್‌ ನೀಡಲಿದೆ. ದಕ್ಷಿಣ ಒಳನಾಡಿನ ಎಲ್ಲಾ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ.

ಬೆಂಗಳೂರಲ್ಲಿ ಹಗುರ ಮಳೆ

ಬೆಂಗಳೂರಿನಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ. ಥಂಡಿ ಗಾಳಿ ಜತೆಗೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 27 ಮತ್ತು 21 ಡಿ.ಸೆ ಇರಲಿದೆ.

ಇದನ್ನೂ ಓದಿ: Karnataka Rain : ಭರ್ತಿಯತ್ತ ಜಲಾಶಯಗಳು; ಪ್ರವಾಹ ಭೀತಿ ಹಿನ್ನೆಲೆ ನದಿ ತೀರದಲ್ಲಿ ಹೈ ಅಲರ್ಟ್

ಬೆಳಗಾವಿಯಲ್ಲಿ 17 ಸಂಪರ್ಕ ಸೇತುವೆಗಳು ಜಲಾವೃತ

ಬೆಳಗಾವಿ: ಭಾರಿ ಮಳೆಗೆ (Karnataka Rain) ಬೆಳಗಾವಿ ಜಿಲ್ಲೆಗೆ ಸಪ್ತ ನದಿಗಳ ನೆರೆ ಭೀತಿ ಶುರುವಾಗಿದೆ. ಬೆಳಗಾವಿ ಜಿಲ್ಲೆಯಲ್ಲಿ ಕೇವಲ ಐದು ದಿನದಲ್ಲಿ 17 ಸಂಪರ್ಕ ಸೇತುವೆಗಳು ಜಲಾವೃತಗೊಂಡಿದೆ. ಚಿಕ್ಕೋಡಿ ಉಪವಿಭಾಗ ವ್ಯಾಪ್ತಿಯ ಏಳು ಸೇತುವೆಗಳು ಹಾಗೂ ಬೆಳಗಾವಿ ವ್ಯಾಪ್ತಿಯಲ್ಲಿ ಹತ್ತು ಸಂಪರ್ಕ ಸೇತುವೆ ಮುಳುಗಡೆಯಾಗಿವೆ.

ದೂದಗಂಗಾ ನದಿಗೆ ದತ್ತವಾಡ-ಮಲ್ಲಿಕವಾಡ, ಬೋಜ್-ಕಾರದಗಾ, ಬೋಜವಾಡಿ-ಕುಣ್ಣೂರ ಹಾಗೂ ವೇದಗಂಗಾ ನದಿಗೆ ಜತ್ರಾಟ-ಭೀವಶಿ, ಅಕ್ಕೋಳ-ಸಿದ್ನಾಳ, ಕೃಷ್ಣಾ ನದಿಗೆ ಮಾಂಜರಿ-ಬಾವನಸೌದತ್ತಿ, ಹಿರಣ್ಯಕೇಶಿ ನದಿಗೆ ಯರನಾಳ-ಮದಮಕ್ಕನಾಳ ಸೇರಿ ಘಟಪ್ರಭಾ ನದಿಗೆ ಸುಣಧೋಳಿ – ಮೂಡಲಗಿ, ಅವರಾದಿ- ನಂದಗಾಂವ, ಕಮಲದಿನ್ನಿ – ಹುಣಶ್ಯಾಳ ಪಿವೈ, ವಡ್ಡರಹಟ್ಟಿ- ಉದಗಟ್ಟಿ, ಗೋಕಾಕ್-ಶಿಂಗಳಾಪುರ, ಮಲಪ್ರಭಾಗೆ ಖಾನಾಪುರ-ಹೆಮ್ಮಡಗಾ, ಸಾತ್ನಾಳಿ-ಮಾಸಾಳಿ ಸಂಪರ್ಕ ಕಡಿತಗೊಂಡಿದೆ. ಇದರಿಂದ ಬರೋಬ್ಬರಿ 34 ಗ್ರಾಮಗಳಿಗೆ ಸಂಪರ್ಕ ಕಡಿತವಾಗಿದ್ದು, ಕಿ.ಮೀ ಗಟ್ಟಲೇ ಸುತ್ತಿ ಹಾಕಿ ಓಡಾಡುವಂತಾಗಿದೆ.

ಕೊಡಗಿನಲ್ಲಿ ಕರೆಂಟ್‌ ಶಾಕ್‌ಗೆ ಎತ್ತು ಸಾವು

ಕೊಡಗು: ಗದ್ದೆಯಲ್ಲಿ ವಿದ್ಯುತ್ ಸ್ಪರ್ಶಿಸಿ ಎತ್ತೊಂದು ಮೃತಪಟ್ಟಿದೆ. ಮತ್ತೊಂದು ಎತ್ತು ಹಾಗೂ ರೈತನ ಕುಟುಂಬ ಹಾಗೂಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕೊಡಗಿನ ಸೋಮವಾರಪೇಟೆ ತಾಲೂಕಿನ ದೊಡ್ಡಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ.

ಗದ್ದೆಯಲ್ಲಿ ಉಳುಮೆ ಮಾಡುತ್ತಿದ್ದ ಸಂದರ್ಭದಲ್ಲಿ ಕರೆಂಟ್‌ ಶಾಕ್‌ ಹೊಡೆದಿದೆ. ಈ ವೇಳೆ ಒಂದು ಎತ್ತು ಮೃತಪಟ್ಟರೆ, ಕುಂಬಗೌಡನ ಸದಾ ಅವರ ಪತ್ನಿ ವೀಣಾ, ಮತ್ತೊಂದು ಎತ್ತು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಭಾರಿ ಮಳೆ ಹಿನ್ನೆಲೆಯಲ್ಲಿ ಕಂಬದಿಂದ ವಿದ್ಯುತ್ ಲೀಕೇಜ್‌ ಆಗಿದ್ದೆ ಈ ಅವಘಡಕ್ಕೆ ಕಾರಣ ಎನ್ನಲಾಗಿದೆ. ಸ್ಥಳಕ್ಕೆ ಚೆಸ್ಕಾಂ ಸಿಬ್ಬಂದಿ ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Rain : ಭಾರಿ ಮಳೆ ಎಫೆಕ್ಟ್‌; ಬೆಳಗಾವಿಯಲ್ಲಿ 17 ಸಂಪರ್ಕ ಸೇತುವೆಗಳು ಜಲಾವೃತ

Karnataka Rain : ಭಾರಿ ಮಳೆಗೆ ಅವಾಂತರವೇ ಸೃಷ್ಟಿಯಾಗಿದ್ದು, ಬಹುತೇಕ ಕಡೆಗಳಲ್ಲಿ ಸೇತುವೆಗಳು ಮುಳುಗಡೆಯಾಗಿವೆ. ಕೊಡಗಿನಲ್ಲಿ ಕರೆಂಟ್‌ ಶಾಕ್‌ಗೆ ಎತ್ತು ಮೃತಪಟ್ಟಿದೆ.

VISTARANEWS.COM


on

By

karnataka rain
Koo

ಬೆಳಗಾವಿ: ಭಾರಿ ಮಳೆಗೆ (Karnataka Rain) ಬೆಳಗಾವಿ ಜಿಲ್ಲೆಗೆ ಸಪ್ತ ನದಿಗಳ ನೆರೆ ಭೀತಿ ಶುರುವಾಗಿದೆ. ಬೆಳಗಾವಿ ಜಿಲ್ಲೆಯಲ್ಲಿ ಕೇವಲ ಐದು ದಿನದಲ್ಲಿ 17 ಸಂಪರ್ಕ ಸೇತುವೆಗಳು ಜಲಾವೃತಗೊಂಡಿದೆ. ಚಿಕ್ಕೋಡಿ ಉಪವಿಭಾಗ ವ್ಯಾಪ್ತಿಯ ಏಳು ಸೇತುವೆಗಳು ಹಾಗೂ ಬೆಳಗಾವಿ ವ್ಯಾಪ್ತಿಯಲ್ಲಿ ಹತ್ತು ಸಂಪರ್ಕ ಸೇತುವೆ ಮುಳುಗಡೆಯಾಗಿವೆ.

ದೂದಗಂಗಾ ನದಿಗೆ ದತ್ತವಾಡ-ಮಲ್ಲಿಕವಾಡ, ಬೋಜ್-ಕಾರದಗಾ, ಬೋಜವಾಡಿ-ಕುಣ್ಣೂರ ಹಾಗೂ ವೇದಗಂಗಾ ನದಿಗೆ ಜತ್ರಾಟ-ಭೀವಶಿ, ಅಕ್ಕೋಳ-ಸಿದ್ನಾಳ, ಕೃಷ್ಣಾ ನದಿಗೆ ಮಾಂಜರಿ-ಬಾವನಸೌದತ್ತಿ, ಹಿರಣ್ಯಕೇಶಿ ನದಿಗೆ ಯರನಾಳ-ಮದಮಕ್ಕನಾಳ ಸೇರಿ ಘಟಪ್ರಭಾ ನದಿಗೆ ಸುಣಧೋಳಿ – ಮೂಡಲಗಿ, ಅವರಾದಿ- ನಂದಗಾಂವ, ಕಮಲದಿನ್ನಿ – ಹುಣಶ್ಯಾಳ ಪಿವೈ, ವಡ್ಡರಹಟ್ಟಿ- ಉದಗಟ್ಟಿ, ಗೋಕಾಕ್-ಶಿಂಗಳಾಪುರ, ಮಲಪ್ರಭಾಗೆ ಖಾನಾಪುರ-ಹೆಮ್ಮಡಗಾ, ಸಾತ್ನಾಳಿ-ಮಾಸಾಳಿ ಸಂಪರ್ಕ ಕಡಿತಗೊಂಡಿದೆ. ಇದರಿಂದ ಬರೋಬ್ಬರಿ 34 ಗ್ರಾಮಗಳಿಗೆ ಸಂಪರ್ಕ ಕಡಿತವಾಗಿದ್ದು, ಕಿ.ಮೀ ಗಟ್ಟಲೇ ಸುತ್ತಿ ಹಾಕಿ ಓಡಾಡುವಂತಾಗಿದೆ.

ಕೊಡಗಿನಲ್ಲಿ ಕರೆಂಟ್‌ ಶಾಕ್‌ಗೆ ಎತ್ತು ಸಾವು

ಕೊಡಗು: ಗದ್ದೆಯಲ್ಲಿ ವಿದ್ಯುತ್ ಸ್ಪರ್ಶಿಸಿ ಎತ್ತೊಂದು ಮೃತಪಟ್ಟಿದೆ. ಮತ್ತೊಂದು ಎತ್ತು ಹಾಗೂ ರೈತನ ಕುಟುಂಬ ಹಾಗೂಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕೊಡಗಿನ ಸೋಮವಾರಪೇಟೆ ತಾಲೂಕಿನ ದೊಡ್ಡಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ.

ಗದ್ದೆಯಲ್ಲಿ ಉಳುಮೆ ಮಾಡುತ್ತಿದ್ದ ಸಂದರ್ಭದಲ್ಲಿ ಕರೆಂಟ್‌ ಶಾಕ್‌ ಹೊಡೆದಿದೆ. ಈ ವೇಳೆ ಒಂದು ಎತ್ತು ಮೃತಪಟ್ಟರೆ, ಕುಂಬಗೌಡನ ಸದಾ ಅವರ ಪತ್ನಿ ವೀಣಾ, ಮತ್ತೊಂದು ಎತ್ತು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಭಾರಿ ಮಳೆ ಹಿನ್ನೆಲೆಯಲ್ಲಿ ಕಂಬದಿಂದ ವಿದ್ಯುತ್ ಲೀಕೇಜ್‌ ಆಗಿದ್ದೆ ಈ ಅವಘಡಕ್ಕೆ ಕಾರಣ ಎನ್ನಲಾಗಿದೆ. ಸ್ಥಳಕ್ಕೆ ಚೆಸ್ಕಾಂ ಸಿಬ್ಬಂದಿ ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ: Bengaluru News : ಓವರ್‌ ನೈಟ್‌ ಪಾರ್ಟಿ; ವಿರಾಟ್‌ ಕೊಹ್ಲಿ ಮಾಲಿಕತ್ವದ ಪಬ್‌ ಸೇರಿ 10ಕ್ಕೂ ಹೆಚ್ಚು ಪಬ್‌ಗಳ ಮೇಲೆ ಎಫ್‌ಐಆರ್‌

ದ್ವೀಪದಂತೆ ಆದ ಮಂಡಕಳಲೆ ಗ್ರಾಮ

ಶಿವಮೊಗ್ಗದಲ್ಲಿ ಮಳೆಯಾರ್ಭಟಕ್ಕೆ ಮಂಡಕಳಲೆ ಗ್ರಾಮ ದ್ವೀಪದಂತೆ ಆಗಿದೆ. ಜತೆಗೆ ಎರಡು ಮನೆಗಳು ನೆಲಸಮವಾಗಿದ್ದು, ಕುಟುಂಬಸ್ಥರು ಕಂಗಲಾಗಿದ್ದಾರೆ. ಪ್ರಕಾಶ್ ಹಾಗೂ ಜಯಲಕ್ಷ್ಮಿ ಎಂಬುವವರ ಮನೆ ನೆಲಸಮವಾಗಿದೆ. ಜಿಲ್ಲಾಡಳಿತ ಮಂಡಕಳಲೆ ಗ್ರಾಮದಲ್ಲಿ ಪ್ರಾಥಮಿಕ ಶಾಲೆಯಲ್ಲಿ ನಿರಾಶ್ರಿತರಿಗೆ ಕಾಳಜಿ ಕೇಂದ್ರ ಸ್ಥಾಪನೆ ಮಾಡಿದೆ. ಇನ್ನೂ ಸಚಿವ ಮಧುಬಂಗಾರಪ್ಪ ಪ್ರತಿ ಕುಟುಂಬಕ್ಕೆ 5 ಸಾವಿರ ವೈಯಕ್ತಿಕ ಪರಿಹಾರ ನೀಡಿದ್ದು, ಮನೆ ಕಳೆದು ಕೊಂಡವರಿಗೆ 5 ಲಕ್ಷ ರೂ. ಹಣ ಪರಿಹಾರ ನೀಡುವುದಾಗಿ ಭರವಸೆ ನೀಡಿದ್ದಾರೆ.

ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಕಾನಲೆ ಗ್ರಾಮದಲ್ಲಿ ಅಪಾಯ ಮಟ್ಟ ಮೀರಿ ವರದಾ ನದಿ ಹರಿಯುತ್ತಿದ್ದು, ಕೆಲವೇ – ಕನ್ನಳ್ಳಿ ಮಾರ್ಗದ ಸೇತುವೆ ಮುಳಗಡೆಯಾಗಿದೆ. ಸೇತುವೆ ಮೇಲೆ ನೀರು ರಭಸವಾಗಿ ಹರಿಯುತ್ತಿದ್ದು, ಕೆಲವೇ – ಕನ್ನಳ್ಳಿ ಮಾರ್ಗದ ಸಂಪರ್ಕಕ್ಕೆ ಅಡಚಣೆ ಉಂಟಾಗಿದೆ.

ಇತ್ತ ವರದಾ ನದಿಯಲ್ಲಿ ನೀರು ಹೆಚ್ಚಾದ ಹಿನ್ನೆಲೆಯಲ್ಲಿ ಹಾನಗಲ್ ತಾಲೂಕಿನಲ್ಲಿ ಹಲವು ಸೇತುವೆ ಮುಳುಗಡೆಯಾಗಿದೆ. ಬಾಳಂಬೀಡ, ಅರೆಲಕಮಾಪುರ ಸಂಪರ್ಕ ಸೇತುವೆ ಮುಳುಗಡೆ ಆಗಿದ್ದರಿಂದ ಹತ್ತಕ್ಕೂ ಹೆಚ್ಚು ಗ್ರಾಮಗಳ ಸಂಪರ್ಕ ಬಂದ್ ಆಗಿದೆ. ನೂರಾರು ಎಕರೆ ಬೆಳೆ ನೀರುಪಾಲಾಗಿದೆ. ದೇವಸ್ಥಾನ, ವಿದ್ಯುತ್ ಕಂಬ, ವಿದ್ಯುತ್ ಟ್ರಾನ್ಸ್ ಫಾರ್ಮರ್, ರೈತರ ಪಂಪ್ ಸೆಟ್‌ಗಳು ನೀರುಪಾಲಾಗಿವೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Rain : ಭಾರಿ ಮಳೆಗೆ ಮುಂದುವರಿದ ಸಾವು-ನೋವು; ಮನೆ ಗೋಡೆ ಕುಸಿದು ವ್ಯಕ್ತಿ ಸಾವು

Karnataka Rain : ವ್ಯಾಪಕ ಮಳೆಯಿಂದ ಸಾವು-ನೋವು ಮುಂದುವರಿದಿದ್ದು, ಚಿಕ್ಕೋಡಿಯಲ್ಲಿ ಮನೆ ಗೋಡೆ ಕುಸಿದು ವ್ಯಕ್ತಿಯೊರ್ವ ಮೃತಪಟ್ಟಿದ್ದಾರೆ. ಹಾಗಾದರೆ ಯಾವ್ಯಾವ ಜಿಲ್ಲೆಯಲ್ಲಿ ಏನೇನು ಅನಾಹುತ ಸಂಭವಿಸಿದೆ ಎಂಬ ಮಾಹಿತಿ ಇಲ್ಲಿದೆ.

VISTARANEWS.COM


on

By

karnataka Rain
Koo

ಚಿಕ್ಕೋಡಿ: ಶನಿವಾರ ರಾತ್ರಿಯಿಡಿ ಸುರಿದ ಭಾರಿ ಮಳೆಗೆ (Karnataka Rain) ಮನೆ ಗೋಡೆ ಕುಸಿದು ವ್ಯಕ್ತಿಯೊರ್ವ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಚಿಕ್ಕೋಡಿಯ ನಿಪ್ಪಾಣಿ ನಗರದ ಜತ್ರಾಟ್ ವೇಸ್‌ನಲ್ಲಿ ಗೋಡೆ ಕುಸಿದು ತಿರುಪತಿ ಹತ್ಕರ (45) ಎಂಬುವವರು ಮೃತಪಟ್ಟಿದ್ದಾರೆ.

ತಿರುಪತಿ ತಗಡಿನ ಶೆಡ್‌ನಲ್ಲಿ ವಾಸವಾಗಿದ್ದರು. ಊಟ ಮುಗಿಸಿ ನಿದ್ರೆ ಜಾರಿದಾಗ ತಡರಾತ್ರಿ 2:30ರ ಸುಮಾರು ಪಕ್ಕದ ಗೋಡೆ ಕುಸಿದಿದೆ. ಈ ವೇಳೆ ಗಂಭೀರ ಗಾಯಗೊಂಡ ತಿರುಪತಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬೆಳಗಾವಿ ಜಿಲ್ಲೆಯ ನಿಪ್ಪಾಣಿ ನಗರದಲ್ಲಿ ಈ ಘಟನೆ ನಡೆದಿದ್ದು, ಸ್ಥಳಕ್ಕೆ ತಹಸೀಲ್ದಾರ್‌, ಉಪ ವಿಭಾಗಾಧಿಕಾರಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ನಿಪ್ಪಾಣಿ ಬಸವೇಶ್ವರ ಚೌಕ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದ್ದು, ತನಿಖೆಯನ್ನು ನಡೆಸುತ್ತಿದ್ದಾರೆ.

ಹಾವೇರಿಯಲ್ಲೂ ಕುಸಿದು ಬಿದ್ದ ಮನೆ

ಹಾವೇರಿ ಜಿಲ್ಲೆಯಲ್ಲಿ ಮಳೆ ಆರ್ಭಟ ಮುಂದುವರಿದಿದ್ದು, ಮನೆಯೊಂದು ಕುಸಿದು ಬಿದ್ದಿದೆ. ರಾಣೇಬೆನ್ನೂರ ತಾಲೂಕಿನ ನೂಕಾಪುರ ಗ್ರಾಮದಲ್ಲಿ ರುದ್ರಪ್ಪ ಚೌವ್ಹಾಣ್ ಎನ್ನುವವರಿಗೆ ಸೇರಿದ ಮನೆ ಕುಸಿದಿದೆ. ಅದೃಷ್ಟವಶಾತ್‌ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಇನ್ನೂ ರುದ್ರಪ್ಪ ಮನೆ ಕಳೆದುಕೊಂಡು ಕಂಗಲಾಗಿದ್ದಾರೆ.

ಚಿಕ್ಕಮಗಳೂರಲ್ಲಿ ನೆಲಕಚ್ಚುತ್ತಿವೆ ಮನೆಗಳು

ಚಿಕ್ಕಮಗಳೂರು ಜಿಲ್ಲೆಯಲ್ಲಿ ಮಳೆ ಅಬ್ಬರಕ್ಕೆ ಮನೆಗಳು ಕುಸಿಯುತ್ತಿವೆ. ಭಾರೀ ಗಾಳಿ, ಮಳೆಗೆ ಮನೆ ಗೋಡೆ ಕುಸಿದು, ಚಾವಣೆ ನೆಲಕ್ಕೆ ಕುಸಿಯುತ್ತಿದೆ. ದಿನ್ಯನಿತ್ಯ ಬಳಸುವ ಅಗತ್ಯವಸ್ತುಗಳು ಮಣ್ಣು ಪಾಲಾಗುತ್ತಿವೆ. ಹಳುವಳ್ಳಿ ಗ್ರಾಮದ ತಾರಿಕೊಂಡ ಉಮಾ ರಮೇಶ್ ಎಂಬುವವರ ಮನೆಗೆ ಹಾನಿಯಾಗಿದೆ. ಮನೆ‌ ಕುಸಿತದಿಂದ ಕಂಗಾಲಾಗಿರುವ ಉಮಾ ರಮೇಶ್ ಕುಟುಂಬದವರು ಸಹಾಯದ ನಿರೀಕ್ಷೆಯಲ್ಲಿದ್ದಾರೆ. ಸದ್ಯ ಮನೆ ಇಲ್ಲದೆ ಕೊಟ್ಟಿಗೆಯಲ್ಲಿ ವಾಸಿಸುತ್ತಿದ್ದಾರೆ.

ಇದನ್ನೂ ಓದಿ: Drowned in water : ಉಕ್ಕಿ ಹರಿಯುತ್ತಿದ್ದ ತುಂಗಭದ್ರ ನದಿಯಲ್ಲಿ ಕೊಚ್ಚಿ ಹೋದ ಯುವಕ

ಪ್ರವಾಹದ ಎಚ್ಚರಿಕೆ

ಪ್ರವಾಹದ ಭೀತಿ ಹಿನ್ನೆಲೆಯಲ್ಲಿ ಕಾವೇರಿ ನೀರಾವರಿ ನಿಗಮದ ಅಧಿಕಾರಿಗಳಿಂದ ನದಿ ಪಾತ್ರದ ಜನರಿಗೆ ಎಚ್ಚರಿಕೆ ನೀಡಿದ್ದಾರೆ. ಕೆ.ಆರ್.ಎಸ್ ಜಲಾಶಯದಿಂದ 50,000 ಕ್ಯೂಸೆಕ್ಸ್ ನೀರನ್ನು ಕಾವೇರಿ ನದಿಗೆ ಬಿಡಲಾಗುತ್ತಿದೆ. ಹೀಗಾಗಿ ಕಾವೇರಿ ನದಿಯ ತಗ್ಗು ಪ್ರದೇಶ ಹಾಗೂ ನದಿಯ ಎರಡೂ ದಂಡೆಗಳಲ್ಲಿರುವ ಸಾರ್ವಜನಿಕರು ತಮ್ಮ ಆಸ್ತಿ ಪಾಸ್ತಿ ಜಾನುವಾರುಗಳ ರಕ್ಷಣೆಗೆ ಎಚ್ಚರಿಕೆ ವಹಿಸಿ, ಸುರಕ್ಷಿತ ಸ್ಥಾನಗಳಿಗೆ ತೆರಳಲು ಸೂಚನೆ ನೀಡಿದ್ದಾರೆ.

ಮೈದುಂಬಿ ಹರಿಯುತ್ತಿರುವ ತುಂಗಾಭದ್ರಾ

ಮಲೆನಾಡು ಭಾಗದಲ್ಲಿ ನಿರಂತರ ಮಳೆಯಿಂದಾಗಿ ದಾವಣಗೆರೆಯ ಹರಿಹರದ ಬಳಿ ತುಂಗಾಭದ್ರ ನದಿ ಮೈದುಂಬಿ ಹರಿಯುತ್ತಿದೆ. ತುಂಗಾ ಜಲಾಶಯದಿಂದ 70 ಸಾವಿರ ಕ್ಯೂಸೆಕ್ ನೀರು ಹೊರಬಿಟ್ಟ ಹಿನ್ನೆಲೆಯಲ್ಲಿ ಹರಿಹರ ಭಾಗದಲ್ಲಿ ಮೈದುಂಬಿ ಹರಿಯುತ್ತಿದೆ. ತುಂಗಾ ಆರತಿ ಮಂಟಪದ ಮೆಟ್ಟಿಲು ಸಂಪೂರ್ಣ ಜಲಾವೃತಗೊಂಡಿದೆ. ನೀರಿನ ಮಟ್ಟ 12 ರಿಂದ 13 ಮೀಟರ್ ಏರಿಕೆಯಾದರೆ ಜಿಲ್ಲೆಯ 38 ಗ್ರಾಮಗಳು ಮುಳುಗಡೆ ಆಗುವ ಸಾಧ್ಯತೆ ದೆ. ಹೀಗಾಗಿ ಜಿಲ್ಲೆಯ ಹೊನ್ನಾಳಿಯ ಬಾಲರಾಜ್ ಘಾಟ್, ಹರಿಹರದ ಗಂಗಾ ನಗರದಲ್ಲಿ ಆರೈಕೆ ಕೇಂದ್ರ ತೆರೆಯಲು ಜಿಲ್ಲಾಡಳಿತದಿಂದ ಸೂಚನೆ ನೀಡಿದೆ. ರಾಘವೇಂದ್ರ ಮಠದ ಹಿಂಬದಿಯ ಪೂಜಾ ಮಂಟಪ ಜಲಾವೃತವಾಗುವ ಸಾಧ್ಯತೆ ಇದೆ. ಇನ್ನೂ ಮಹಿಳೆಯರು ತುಂಗಭದ್ರಾ ನದಿಗೆ ಗಂಗಾ ಪೂಜಾ ಮಾಡುತ್ತಿದ್ದಾರೆ. ಈಗಾಗಲೇ ಹರಿಹರದ ಗಂಗಾ ನಗರದ ಮೂವತ್ತಕ್ಕೂ ಅಧಿಕ ಮನೆಗಳು ಮುಳುಗಡೆ ಆಗುವ ಸಾಧ್ಯತೆ ಇದ್ದು, ಗಂಗಾ ನಗರ ನಿವಾಸಿಗಳಿಗೆ ಕಾಳಜಿ ಕೇಂದ್ರವನ್ನು ತೆರೆಯಲಾಗಿದೆ.

ಜಮೀನಿಗೆ ನುಗ್ಗಿದ ನೀರು

ಕಾಲುವೆ ನೀರು ಜಮೀನಿಗೆ ನುಗ್ಗಿ ಬೆಳೆ ಜಲಾವೃತಗೊಂಡಿದೆ. ಕಾಲುವೆ ಸಮರ್ಪಕವಾಗಿ ನಿರ್ಮಾಣ ಮಾಡದ ಹಿನ್ನೆಲೆಯಲ್ಲಿ ಕಾಲುವೆಗೆ ನೀರು ಬಿಟ್ಟಿರುವ ವೇಳೆ ಜಮೀನಿಗೆ ನುಗ್ಗಿದೆ. ವಿಜಯಪುರ ಜಿಲ್ಲೆಯ ಕೊಲ್ಹಾರ ತಾಲೂಕಿನ ರೋಣಿಹಾಳ ಗ್ರಾಮದ ನಾಗಯ್ಯ ಹಿರೇಮಠ ಎಂಬುವರ ಜಮೀನಿಗೆ ಕಾಲುವೆ ನೀರು ನುಗ್ಗಿದೆ. 8 ಎಕರೆ ಜಮೀನಿನಲ್ಲಿ ಮೆಕ್ಕೆಜೋಳ ಬಿತ್ತನೆ ಮಾಡಿದ್ದ ರೈತ ಕಂಗಲಾಗಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ದಕ್ಷಿಣ ಕನ್ನಡ

Dinesh Gundu Rao: ಸಚಿವ ದಿನೇಶ್ ಗುಂಡೂರಾವ್ ದಕ್ಷಿಣ ಕನ್ನಡ ಜಿಲ್ಲಾ ಪ್ರವಾಸ ರದ್ದು

Dinesh Gundu Rao: ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರ ಮಂಗಳೂರು ಭೇಟಿ ರದ್ದಾಗಿದೆ. ಅವರು ಇಂದು (ಜುಲೈ 21) ಜಿಲ್ಲೆಯ ಮಳೆ ಹಾನಿ ಪ್ರದೇಶಗಳಿಗೆ ಭೇಟಿ ನೀಡಬೇಕಿತ್ತು. ಬೆಂಗಳೂರು ಏರ್‌ಪೋರ್ಟ್‌ ರೋಡ್ ಬ್ಲಾಕ್ ಆದ ಹಿನ್ನೆಲೆಯಲ್ಲಿ ದಿನೇಶ್ ಗುಂಡೂರಾವ್ ಅವರ ಜಿಲ್ಲಾ ಭೇಟಿ ರದ್ದುಗೊಳಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

VISTARANEWS.COM


on

Dinesh Gundu Rao
Koo

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ (Dinesh Gundu Rao) ಅವರ ಮಂಗಳೂರು ಭೇಟಿ ರದ್ದಾಗಿದೆ. ಅವರು ಇಂದು (ಜುಲೈ 21) ಜಿಲ್ಲೆಯ ಮಳೆ ಹಾನಿ ಪ್ರದೇಶಗಳಿಗೆ ಭೇಟಿ ನೀಡಬೇಕಿತ್ತು. ಆದರೆ ಕೊನೆಯ ಕ್ಷಣದಲ್ಲಿ ಪ್ರವಾಸ ರದ್ದಾಗಿದೆ ಎಂದು ಮೂಲಗಳು ತಿಳಿಸಿವೆ (Karnataka Rain).

ಬೆಂಗಳೂರು ಏರ್‌ಪೋರ್ಟ್‌ ರೋಡ್ ಬ್ಲಾಕ್ ಆದ ಹಿನ್ನೆಲೆಯಲ್ಲಿ ದಿನೇಶ್ ಗುಂಡೂರಾವ್ ಅವರ ಜಿಲ್ಲಾ ಭೇಟಿ ರದ್ದುಗೊಳಿಸಲಾಗಿದೆ. ಅವರು ಇಂದು ಅದ್ಯಪಾಡಿ, ಕೆತ್ತಿಕಲ್, ಪಾಣೆಮಂಗಳೂರು ಪ್ರದೇಶಗಳಿಗೆ ಭೇಟಿ ನೀಡಿ ಮಳೆಯಿಂದ ಹಾನಿಗೊಳಗಾದ ಪ್ರದೇಶಗಳನ್ನು ಪರಿಶೀಲನೆ ನಡೆಸಬೇಕಿತ್ತು. ಮಳೆ ಹಾನಿ, ಪರಿಹಾರ ಕಾರ್ಯಗಳ ಬಗ್ಗೆ ಅಧಿಕಾರಿಗಳೊಂದಿಗೆ ಸಭೆ ನಿಗದಿಯಾಗಿತ್ತು. ಇದಕ್ಕಾಗಿ ಸಿದ್ಧತೆಯನ್ನೂ ಕೈಗೊಳ್ಳಲಾಗಿತ್ತು. ಆದರೆ ಇದೀಗ ಡಿಢೀರ್‌ ಆಗಿ ಭೇಟಿ ರದ್ದಾಗಿದೆ.

ಉಡುಪಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೇಟಿ

ಉಡುಪಿ: ಜಿಲ್ಲೆಗೆ ಕೊನೆಗೂ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಆಗಮಿಸಿದ್ದಾರೆ. ಎರಡು ವಾರಗಳಿಂದ ಭಾರೀ ಮಳೆಗೆ ತುತ್ತಾಗಿದ್ದ ಉಡುಪಿ ಜಿಲ್ಲೆಯಲ್ಲಿ ಸದ್ಯ ಮಳೆಗೆ ಕೊಂಚ ವಿರಾಮ ಸಿಕ್ಕಿದೆ. ಎರಡು ವಾರಗಳಿಂದ ಭಾರಿ ಮಳೆಗೆ ತುತ್ತಾಗಿದ್ದ ಜಿಲ್ಲೆಗೆ ಸಚಿವೆ ಆಗಮಿಸದ ಹಿನ್ನೆಲೆಯಲ್ಲಿ ಆಕ್ರೋಶ ವ್ಯಕ್ತವಾಗಿತ್ತು.

ನೆರೆ, ಪ್ರವಾಹ ಕಡಿಮೆ ಆಗುತ್ತಲೇ‌ ಉಡುಪಿಗೆ ಸಚಿವೆ ಆಗಮಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಟ್ಟುನಿಟ್ಟಿನ ಸೂಚನೆ ಬೆನ್ನಲ್ಲೇ ಲಕ್ಷ್ಮೀ ಹೆಬ್ಬಾಳ್ಕರ್ ಭೇಟಿ ನೀಡಿದ್ದಾರೆ. ಜಿಲ್ಲೆಯಲ್ಲಿ ಸುರಿದ ಧಾರಾಕಾರ ಮಳೆಯಿಂದ ಉಡುಪಿ ನಗರ ಸೇರಿದಂತೆ ಹಲವೆಡೆ ಹಾನಿಯಾಗಿವೆ. ಬೈಂದೂರು ತಾಲೂಕಿನಲ್ಲಿ ಸಾವಿರಕ್ಕೂ ಅಧಿಕ ಮರಗಳು ಧರಶಾಹಿಯಾಗಿವೆ. ನದಿಗಳು ಅಪಾಯ ಮಟ್ಟವನ್ನು ಮೀರಿ ಕೃತಕ ನೆರೆ ಸೃಷ್ಟಿಯಾಗಿದೆ. ಕಡಲ್ಕೊರೆತವೂ ತೀವ್ರವಾಗಿದೆ. ಇದರಿಂದ ನೂರಾರು ಮಂದಿ ತೊಂದರೆಗೆ ಒಳಗಾಗಿದ್ದಾರೆ.

ಬೈಂದೂರು ಭಾಗದಲ್ಲಿ ಸೇತುವೆಗಳಿಲ್ಲದೇ ಹಲವು ರೀತಿಯ ಸಂಕಷ್ಟ ಎದುರಾಗಿದೆ. ಪಡುಬಿದ್ರಿ, ಮಲ್ಪೆ ಕಡಲ್ಕೊರೆತಕ್ಕೆ ಸಿಕ್ಕಿ ಅಪಾರ ಪ್ರಮಾಣದಲ್ಲಿ ಹಾನಿಗೊಳಗಾಗಿದೆ. ಇಷ್ಟಾಗಿಯೂ ಉಸ್ತುವಾರಿ ಸಚಿವೆ ಭೇಟಿಯಾಗದಿರುವ ಬಗ್ಗೆ ಭಾರಿ ವಿರೋಧ ಕೇಳಿ ಬಂದಿತ್ತು. ಇದೀಗ ಕೊನೆಗೂ ಇಂದು ಉಡುಪಿ ಜಿಲ್ಲೆಗೆ ಸಚಿವೆ ಆಗಮಿಸಿದ್ದಾರೆ.

ಕೃಷಿ ಭೂಮಿಗೆ ಹಾನಿ

ವಾರಗಳ ಕಾಲ ನಿರಂತರವಾಗಿ ಸುರಿದ ಭಾರಿ ಮಳೆ ಹಿನ್ನೆಲೆಯಲ್ಲಿ ಬ್ರಹ್ಮಾವರ ತಾಲೂಕಿನ ಕೃಷಿ ಭೂಮಿಗಳು ಜಲಾವೃತಗೊಂಡಿವೆ. ಸಾಲಿಗ್ರಾಮ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿನ ಭತ್ತದ ಗದ್ದೆಗಳು ನೀರಿನಲ್ಲಿ ಕೊಳೆಯುತ್ತಿವೆ. ಪಟ್ಟಣ ಪಂಚಾಯತ್ ವ್ಯಾಪ್ತಿಯ ಕಾರ್ಕಡ, ಪಾರಂಪಳ್ಳಿ, ಗುಂಡ್ಮಿ ಭಾಗದಲ್ಲಿ ನೆರೆ ಕಾಣಿಸಿಕೊಂಡಿದೆ. ಸದ್ಯ ಮಳೆ ಕಡಿಮೆಯಾಗಿರುವ ಹಿನ್ನಲೆಯಲ್ಲಿ ನೀರಿನ ಮಟ್ಟ ನಿಧಾನವಾಗಿ ಇಳಿಯುತ್ತಿರುವುದು ಸ್ಥಳೀಯರಿಗೆ ಸಮಾಧಾನ ತಂದಿತ್ತಿದೆ.

ಶಿರೂರು ಗುಡ್ಡಕುಸಿತ ಪ್ರಕರಣ; ಇಂದು ಮುಖ್ಯಮಂತ್ರಿ ಭೇಟಿ

ಕಾರವಾರ: ಅಂಕೋಲಾ ಶಿರೂರು ಗುಡ್ಡ ಕುಸಿದ ಜಾಗಕ್ಕೆ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ ನೀಡಲಿದ್ದಾರೆ. ಭೂ ಕುಸಿತದಿಂದ ದುರಂತ ಸಂಭವಿಸಿದ ಸ್ಥಳ ಪರಿಶೀಲನೆ ನಡೆಸಲಿರುವ ಸಿದ್ಧರಾಮಯ್ಯ, ಮೃತಪಟ್ಟ ಸಂತ್ರಸ್ತರ ಕುಟುಂಬಗಳನ್ನ ಭೇಟಿಯಾಗಲಿದ್ದಾರೆ. ಸದ್ಯ 6ನೇ ದಿನಕ್ಕೆ ಮಣ್ಣು ತೆರವು ಕಾರ್ಯ ಕಾಲಿಟ್ಟಿದೆ. ಮಳೆ ಕೊಂಚ ಕಡಿಮೆಯಿರುವ ಹಿನ್ನಲೆಯಲ್ಲಿ ಕಾರ್ಯಾಚರಣೆ ಭರದಿಂದ ಸಾಗಿದೆ. 6 ಹಿಟಾಚಿಗಳ ಮೂಲಕ ಮಣ್ಣು ತೆರವು ಕಾರ್ಯ ನಡೆಯುತ್ತಿದೆ. ಒಂದು ಬದಿ ರಸ್ತೆ ಮಣ್ಣು ತೆರವು ಕಾರ್ಯ ಬಹುತೇಕ ಪೂರ್ಣಗೊಂಡಿದೆ.

ಇದನ್ನೂ ಓದಿ: Karnataka Rain: ರಾಜ್ಯದ ವಿವಿಧೆಡೆ ಮುಂದುವರಿದ ಮಳೆಯ ಅಬ್ಬರ; ಮನೆ ಕುಸಿದು ಬಿದ್ದು ನಾಲ್ವರಿಗೆ ಗಾಯ

Continue Reading
Advertisement
Bescom
ಕರ್ನಾಟಕ45 mins ago

ವಿದ್ಯುತ್ ಬಿಲ್‌ನಲ್ಲಿರುವ ಹೆಚ್ಚುವರಿ ಭದ್ರತಾ ಠೇವಣಿ ಕುರಿತು ಗೊಂದಲ; ಗ್ರಾಹಕರ ಪ್ರಶ್ನೆಗಳಿಗೆ ಇಲ್ಲಿದೆ ಬೆಸ್ಕಾಂ ಉತ್ತರ

Sairaj Bahutule :
ಕ್ರೀಡೆ56 mins ago

Sairaj Bahutule : ಭಾರತ ತಂಡದ ಮಧ್ಯಂತರ ಬೌಲಿಂಗ್​ ಕೋಚ್ ಆಗಿ ಸಾಯಿರಾಜ್ ಬಹುತುಲೆ ನೇಮಕ?

Harmanpreet Kaur
ಕ್ರೀಡೆ2 hours ago

Harmanpreet Kaur : ಟಿ20 ಐ ರನ್​ ಗಳಿಕೆಯಲ್ಲಿ ಸ್ಮೃತಿ ಮಂಧಾನಾ ಹಿಂದಿಕ್ಕಿದ ಹರ್ಮನ್​ಪ್ರೀತ್ ಕೌರ್​

Sameer Nigam
ಕರ್ನಾಟಕ2 hours ago

Sameer Nigam: ಕನ್ನಡಿಗರ ಕ್ಷಮೆಯಾಚಿಸಿದ PhonePe ಸಿಇಒ ಸಮೀರ್‌ ನಿಗಮ್‌; ಬಾಯ್ಕಾಟ್‌ ಪೆಟ್ಟಿಗೆ ಥಂಡಾ

Ankola landslide
ಕರ್ನಾಟಕ2 hours ago

Ankola landslide: ಉತ್ತರ ಕನ್ನಡದ ರಾ. ಹೆದ್ದಾರಿ; ಕಾಮಗಾರಿ ಮುಗಿಸದೆ ಟೋಲ್ ಸಂಗ್ರಹ ಏಕೆ? ಗುತ್ತಿಗೆದಾರ ಕಂಪನಿಗೆ ಸಿಎಂ ತರಾಟೆ

Mamata Banerjee
ದೇಶ2 hours ago

Mamata Banerjee: ‘ನಾನು ಕಾಫಿರ್‌ ಅಲ್ಲ’ ಎಂದ ಮಮತಾ ಬ್ಯಾನರ್ಜಿಗೆ ಬಿಜೆಪಿ ತಿರುಗೇಟು; ಏನಿದು ವಿವಾದ?

Joe Root
ಪ್ರಮುಖ ಸುದ್ದಿ2 hours ago

Joe Root : ವೆಸ್ಟ್​ ಇಂಡೀಸ್ ವಿರುದ್ಧ ಶತಕ ಬಾರಿಸಿ ಸ್ಟೀವ್​ ವಾ ದಾಖಲೆ ಸರಿಗಟ್ಟಿದ ಜೋ ರೂಟ್​

ಕರ್ನಾಟಕ3 hours ago

Karnataka Rain: ಮಳೆ ಅನಾಹುತ; ಜೀವ, ಬೆಳೆ ಹಾನಿಯ ವರದಿ ಕೂಡಲೇ ಸಲ್ಲಿಸುವಂತೆ ಸಿಎಂ ಸೂಚನೆ

Paris Olympics 2024 :
ಕ್ರೀಡೆ3 hours ago

Paris Olympics 2024 : ಒಲಿಂಪಿಕ್ಸ್​ ಸ್ಪರ್ಧೆಗೆ ಹೊರಟಿರುವ ಅಥ್ಲೀಟ್​ಗೆ 8.5 ಕೋಟಿ ರೂ. ಪ್ರೋತ್ಸಾಹಧನ ನೀಡಿದ ಬಿಸಿಸಿಐ

ಕರ್ನಾಟಕ3 hours ago

Renaming Ramanagara: ರಾಮನಗರದಲ್ಲಿ ಬೆಂಗಳೂರಿನ ಕಸ ಸುರಿಯಲು ಹುನ್ನಾರ: ಎಚ್‌.ಡಿ. ಕುಮಾರಸ್ವಾಮಿ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Rain
ಮಳೆ1 day ago

Karnataka Rain : ಭಾರಿ ಮಳೆಗೆ ಮನೆ ಗೋಡೆ ಕುಸಿತ; ಕೊಟ್ಟಿಗೆಯಲ್ಲಿದ್ದ ಜಾನುವಾರುಗಳು ಸಾವು

karnataka Rain
ಮಳೆ1 day ago

Karnataka Rain : ಹಳ್ಳ ದಾಟಲು ಹೋಗಿ ನೀರುಪಾಲಾದ ಜಾನುವಾರು; ಬಿರುಗಾಳಿಗೆ ಕಳಚಿದ ವಿಂಡ್‌ ಫ್ಯಾನ್‌

karnataka Rain
ಮಳೆ2 days ago

Karnataka Rain : ಬೀದಿಗೆ ತಂದ ರಣಮಳೆ; ಮನೆ ಕುಸಿದು ಬಿದ್ದು 9 ತಿಂಗಳ ಗರ್ಭಿಣಿ ನರಳಾಟ

Karnataka Rain
ಮಳೆ2 days ago

Karnataka Rain : ರಾಜ್ಯದಲ್ಲಿ ಮಳೆಯ ಆರ್ಭಟ; ರಾತ್ರಿ ಕಳೆದು ಬೆಳಗಾಗುವುದರೊಳಗೆ ಕಂದಕ ನಿರ್ಮಾಣ

Karnataka Rain
ಮಳೆ3 days ago

Karnataka Rain : ಭಾರಿ ಮಳೆ ಎಫೆಕ್ಟ್‌; ಉಕ್ಕಿ ಹರಿಯುತ್ತಿದ್ದ ನದಿಯಲ್ಲಿ ಕೊಚ್ಚಿ ಹೋದ ರಾಸು

Uttara Kannada Landslide
ಮಳೆ3 days ago

Uttara Kannada Landslide: ಶಿರೂರು ಗುಡ್ಡ ಕುಸಿತ; ಅಖಾಡಕ್ಕಿಳಿದ ಜಿಯೊಲಾಜಿಕಲ್ ಸರ್ವೆ ಆಫ್ ಇಂಡಿಯಾ ಟೀಂ

Karnataka Rain
ಮಳೆ5 days ago

Karnataka Rain : ಕಾರವಾರದಲ್ಲಿ ಮಳೆ ಅವಾಂತರ; ಮನೆ ಮೇಲೆ ಗುಡ್ಡ ಕುಸಿದು ವೃದ್ಧ ಸಾವು

karnataka Rain
ಮಳೆ5 days ago

Karnataka Rain : ಭಾರಿ ಮಳೆಗೆ ನಿಯಂತ್ರಣ ತಪ್ಪಿ ಕೆರೆಗೆ ಉರುಳಿ ಬಿದ್ದ ಕಾರು; ನಾಲ್ವರು ಪ್ರಾಣಾಪಾಯದಿಂದ ಪಾರು

karnataka Weather Forecast
ಮಳೆ6 days ago

Karnataka Weather : ವ್ಯಾಪಕ ಮಳೆ ಎಚ್ಚರಿಕೆ; ನಾಳೆಯೂ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

karnataka Rain
ಮಳೆ6 days ago

Karnataka Rain : ಶಾಲಾ-ಕಾಲೇಜಿಗೆ ಈ ದಿನ ರಜಾ; ಅಬ್ಬರಿಸುತ್ತಿರುವ ಮಳೆಗೆ ಮನೆಯಲ್ಲೇ ಎಲ್ಲರೂ ಸಜಾ!

ಟ್ರೆಂಡಿಂಗ್‌