Women's Asia Cup 2024 : ದಾಖಲೆ ಬರೆದ ರಿಚಾ ಘೋಷ್​, ಇತಿಹಾಸ ಸೃಷ್ಟಿಸಿದ ಭಾರತ ತಂಡ - Vistara News

ಪ್ರಮುಖ ಸುದ್ದಿ

Women’s Asia Cup 2024 : ದಾಖಲೆ ಬರೆದ ರಿಚಾ ಘೋಷ್​, ಇತಿಹಾಸ ಸೃಷ್ಟಿಸಿದ ಭಾರತ ತಂಡ

Women’s Asia Cup 2024 : ಈ ಹಿಂದೆ ಭಾರತ ಇಂಗ್ಲೆಂಡ್ ವಿರುದ್ಧ 198 ರನ್​ ಬಾರಿಸಿತ್ತು. ಇದೇ ವೇಳೆ ಭಾರತದ ವಿಕೆಟ್​ ಕೀಪರ್ ರಿಚಾ ಘೋಷ್​ ಕೂಡ ವಿನೂತನ ಸಾಧನೆ ಮಾಡಿದ್ದಾರೆ. ಅವರು ಮಹಿಳಾ ಏಷ್ಯಾಕಪ್​​ನಲ್ಲಿ ಅರ್ಧಶತಕ ಬಾರಿಸಿದ ಭಾರತದ ಮೊದಲ ವಿಕೆಟ್ ಕೀಪರ್ ಬ್ಯಾಟರ್​ ಎಂಬ ಹೆಗ್ಗಳಿಕೆಗೆ ರಿಚಾ ಪಾತ್ರರಾಗಿದ್ದಾರೆ.

VISTARANEWS.COM


on

Women's Asia Cup 2024
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಡಂಬುಲ್ಲಾ: ಮಹಿಳೆಯರ ಏಷ್ಯಾಕಪ್ 2024ರಲ್ಲಿ (Women’s Asia Cup 2024) ಭಾರತ ತಂಡ ವಿನೂತನ ಸಾಧನೆ ಮಾಡಿದೆ. ಯುಎಇ ವಿರುದ್ಧದ ಗುಂಪು ಹಂತದ ಪಂದ್ಯದಲ್ಲಿ ಮೊದಲು ಬ್ಯಾಟ್​ ಮಾಡಿ 200 ರನ್ ದಾಖಲಿಸುವ ಮೂಲಕ ಟಿ20 ಕ್ರಿಕೆಟ್ ಇತಿಹಾಸದಲ್ಲಿ ಮೊದಲ ಬಾರಿಗೆ ದೊಡ್ಡ ಮೊತ್ತವನ್ನು ಪೇರಿಸಿದೆ. ಈ ಹಿಂದೆ ಭಾರತ ಇಂಗ್ಲೆಂಡ್ ವಿರುದ್ಧ 198 ರನ್​ ಬಾರಿಸಿತ್ತು. ಇದೇ ವೇಳೆ ಭಾರತದ ವಿಕೆಟ್​ ಕೀಪರ್ ರಿಚಾ ಘೋಷ್​ ಕೂಡ ವಿನೂತನ ಸಾಧನೆ ಮಾಡಿದ್ದಾರೆ. ಅವರು ಮಹಿಳಾ ಏಷ್ಯಾಕಪ್​​ನಲ್ಲಿ ಅರ್ಧಶತಕ ಬಾರಿಸಿದ ಭಾರತದ ಮೊದಲ ವಿಕೆಟ್ ಕೀಪರ್ ಬ್ಯಾಟರ್​ ಎಂಬ ಹೆಗ್ಗಳಿಕೆಗೆ ರಿಚಾ ಪಾತ್ರರಾಗಿದ್ದಾರೆ.

ಟಾಸ್ ಗೆದ್ದ ಯುಎಇ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿತು. ಭಾರತಕ್ಕೆ ಶಫಾಲಿ ವರ್ಮಾ ಮತ್ತು ಸ್ಮೃತಿ ಮಂದಾನ ಅವರು ಬಲವಾದ ಆರಂಭ ನೀಡಿದ್ದರು. ಆದರೆ ಎಡಗೈ ಆರಂಭಿಕ ಆಟಗಾರ್ತಿ ಮಂಧಾನಾ ಬೇಗನೆ ನಿರ್ಗಮಿಸಿದರು. ಶೆಫಾಲಿ ಕೇವಲ 18 ಎಸೆತಗಳಲ್ಲಿ 37 ರನ್ ಗಳಿಸಿದರು. ಅವರು ಔಟಾಗುವ ಮೊದಲು ಭಾರತ 5 ಓವರ್​ಗಳಲ್ಲಿ 52 ರನ್ ಗಳಿಸಿತು. ಹೇಮಲತಾ 2 ರನ್​ಗೆ ಔಟಾದ ಕಾರಣ ಭಾರತ ತೊಂದರೆಗೆ ಸಿಲುಕಿತು. ಹರ್ಮನ್ ಪ್ರೀತ್ ಮತ್ತು ಜೆಮಿಮಾ ಅವರು ಆಕ್ರಮಣಕಾರಿ ಆಟ ಆಡುವುದರೊಂದಿಗೆ ಇನಿಂಗ್ಸ್​​​ ಸ್ಥಿರಗೊಳಿಸಿದರು.

ಜೆಮಿಮಾ ಮತ್ತು ಕೌರ್​ ತಮ್ಮ ಪಾಲುದಾರಿಕೆಯಲ್ಲಿ 54 ರನ್ ಗಳಿಸಿದರು. ಜೆಮಿಮಾ 8 ಓವರ್​ಗಳು ಬಾಕಿ ಇರುವಾಗಲೇ ನಿರ್ಗಮಿಸಿದರು. ಈ ಸಮಯದಲ್ಲಿ ರಿಚಾ ಎಂಟ್ರಿ ಪಡೆದರು. ಭಾರತೀಯ ವಿಕೆಟ್ ಕೀಪರ್ ಬೌಂಡರಿ ಬಾರಿಸುವ ಮೊದಲು ಒಂದೆರಡು ಸಿಂಗಲ್ಸ್ ತೆಗೆದರು. ಇದರ ನಂತರ 15 ನೇ ಓವರ್​ನಲ್ಲಿ ಸಿಕ್ಸರ್ ಬಾರಿಸಿದರು. ನಂತರದ ಓವರ್​ನಲ್ಲಿ ಅವರು ಯುಎಇ ನಾಯಕಿ ಇಶಾ ಓಜಾ ಅವರಿಗೆ 4 ಫೋರ್ ಬಾರಿಸಿದರು.

ಇವರಿಬ್ಬರು ತಮ್ಮ ೫೦ ರನ್ ಗಳ ಜೊತೆಯಾಟವನ್ನು ತ್ವರಿತವಾಗಿ ದಾಖಲಿಸಿದರು. ರಿಚಾ ತನ್ನ ನಾಯಕಿಯೊಂದಿಗೆ ಸ್ಟ್ರೈಕ್ ಬದಲಾಯಿಸುವ ಯತ್ನ ಮಾಡಿದರು. ಒಂದು ಹಂತದಲ್ಲಿ ಭಾರತ 200 ರನ್​ಗಳ ಗಡಿ ದಾಟುವುದಿಲ್ಲ ಎಂದು ಅನಿಸಿತ್ತು. ಆದಾಗ್ಯೂ, ಭಾರತೀಯ ನಾಯಕಿ ಕೊನೆಯ 3 ಎಸೆತಗಳಲ್ಲಿ 2 ಬೌಂಡರಿ ಮತ್ತು ಒಂದು ಸಿಕ್ಸರ್ ಬಾರಿಸುವ ಮೂಲಕ ಮೊದಲ ಬಾರಿ 200 ರನ್ ಬಾರಿಸಿದ ದಾಖಲೆ ಬರೆದರು. ರಿಚಾ 29 ಎಸೆತಗಳಲ್ಲಿ 64 ರನ್ ಗಳಿಸಿ ಅಜೇಯರಾಗಿ ಉಳಿದರು. ಅವರ ಇನಿಂಗ್ಸ್​​ 12 ಬೌಂಡರಿ ಮತ್ತು ಒಂದು ಸಿಕ್ಸರ್ ಒಳಗೊಂಡಿತ್ತು. ಭಾರತ 20 ಓವರ್​ನಲ್ಲಿ 5 ವಿಕೆಟ್ ಕಳೆದುಕೊಂಡು 201 ರನ್ ಕಲೆಹಾಕಿತು.

ಇದನ್ನೂ ಓದಿ: Women’s Asia Cup : ಯುಎಇ ವಿರುದ್ಧ ಭಾರತದ ವನಿತೆಯರಿಗೆ ಭರ್ಜರಿ 78 ರನ್ ವಿಜಯ

2018ರಲ್ಲಿ ಮುಂಬೈನಲ್ಲಿ ನಡೆದ ಇಂಗ್ಲೆಂಡ್ ವಿರುದ್ಧ ದ ಪಂದ್ಯದಲ್ಲಿ ಭಾರತ 20 ಓವರ್​ಗಳಲ್ಲಿ 4 ವಿಕೆಟ್ ನಷ್ಟಕ್ಕೆ 198 ರನ್ ಗಳಿಸಿದ್ದೇ ಇದುವರೆಗಿನ ಗರಿಷ್ಠ ಮೊತ್ತವಾಗಿತ್ತು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Kamala Harris: ಅಮೆರಿಕ ಅಧ್ಯಕ್ಷ ಸ್ಥಾನಕ್ಕೆ ಭಾರತ ಮೂಲದ ಕಮಲಾ ಹ್ಯಾರಿಸ್‌ ಹೆಸರು ಸೂಚಿಸಿದ ಜೋ ಬೈಡೆನ್!

Kamala Harris: ಅಮೆರಿಕ ಅಧ್ಯಕ್ಷನಾಗಿ ದೇಶದ ಏಳಿಗೆಗೆ ದುಡಿದಿದ್ದೇನೆ. ನಿಮ್ಮೆಲ್ಲರ ಅಧ್ಯಕ್ಷನಾಗಿ ಇಷ್ಟು ದಿನಗಳವರೆಗೆ ಸೇವೆ ಮಾಡಿದ್ದು ನನಗೆ ಖುಷಿಯಾಗಿದೆ. ಎರಡನೇ ಬಾರಿ ಆಯ್ಕೆಗೂ ನಾನು ಮನಸ್ಸು ಮಾಡಿದ್ದೆ. ಆದರೆ, ದೇಶ ಹಾಗೂ ಪಕ್ಷದ ಹಿತದೃಷ್ಟಿಯಿಂದಾಗಿ ನಾನು ಅಮೆರಿಕ ಅಧ್ಯಕ್ಷೀಯ ಚುನಾವಣೆಯಿಂದ ಹಿಂದೆ ಸರಿದಿದ್ದೇನೆ ಎಂಬುದಾಗಿ ಜೋ ಬೈಡೆನ್‌ ಅವರು ಎಕ್ಸ್‌ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿದ್ದಾರೆ. ಹಾಗೆಯೇ, ಕಮಲಾ ಹ್ಯಾರಿಸ್‌ ಅವರು ಅಧ್ಯಕ್ಷೀಯ ಅಭ್ಯರ್ಥಿಯಾಗಲಿ ಎಂದು ಅವರು ಹೇಳಿದ್ದಾರೆ.

VISTARANEWS.COM


on

Kamala Harris
Koo

ವಾಷಿಂಗ್ಟನ್:‌ ನವೆಂಬರ್‌ನಲ್ಲಿ ಅಮೆರಿಕ ಅಧ್ಯಕ್ಷೀಯ ಚುನಾವಣೆಗೆ (US Presidential Election 2024) ದಿನಾಂಕ ನಿಗದಿಯಾಗಿರುವ ಬೆನ್ನಲ್ಲೇ ಹಾಲಿ ಅಧ್ಯಕ್ಷ, ಡೆಮಾಕ್ರಟಿಕ್‌ ಪಕ್ಷದ ಜೋ ಬೈಡೆನ್‌ (Joe Biden) ಅವರು ಚುನಾವಣೆ ಸ್ಪರ್ಧೆಯಿಂದ ಹಿಂದೆ ಸರಿದಿದ್ದಾರೆ. ದೇಶ ಹಾಗೂ ಪಕ್ಷದ ಹಿತಕ್ಕಾಗಿ ಅವರು ಚುನಾವಣೆಯಿಂದ ಹಿಂದೆ ಸರಿದಿರುವುದಾಗಿ ತಿಳಿಸಿದ್ದಾರೆ. ಅಷ್ಟೇ ಅಲ್ಲ, “ಪಕ್ಷದಿಂದ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಲು ಉಪಾಧ್ಯಕ್ಷೆ ಕಮಲಾ ಹ್ಯಾರಿಸ್‌ (Kamala Harris) ಅವರು ಉತ್ತಮ ಆಯ್ಕೆ” ಎಂದು ಕೂಡ ಹೇಳಿದ್ದಾರೆ. ಆ ಮೂಲಕ ಎಲ್ಲವೂ ಅಂದುಕೊಂಡಂತೆ ಆದರೆ, ಅಮೆರಿಕಕ್ಕೆ ಭಾರತ ಮೂಲದ ಕಮಲಾ ಹ್ಯಾರಿಸ್‌ ಅವರು ಅಧ್ಯಕ್ಷೆಯಾಗಲಿದ್ದಾರೆ.

“ಡೆಮಾಕ್ರಟಿಕ್‌ ಪಕ್ಷದ ಸದಸ್ಯರು, ನಾಯಕರೇ, ನಾನು ಈಗಿನ ಅವಧಿಗೆ ಮಾತ್ರ ಅಧ್ಯಕ್ಷನಾಗಿ ಇರುತ್ತೇನೆ. ಚುನಾವಣೆ ಮರು ಸ್ಪರ್ಧೆಯಿಂದ ನಾನು ಹಿಂದೆ ಸರಿದಿದ್ದೇನೆ. ನಾನು 2020ರಲ್ಲಿ ಪಕ್ಷದ ಅಭ್ಯರ್ಥಿಯಾಗಿ ಆಯ್ಕೆಯಾದಾಗ, ಉಪಾಧ್ಯಕ್ಷರ ಸ್ಥಾನಕ್ಕೆ ಕಮಲಾ ಹ್ಯಾರಿಸ್‌ ಅವರನ್ನು ಆಯ್ಕೆ ಮಾಡಿಕೊಂಡಿದ್ದು ನನ್ನ ಮೊದಲ ಹಾಗೂ ಉತ್ತಮ ನಿರ್ಧಾರವಾಗಿತ್ತು. ಈಗಲೂ ಅಷ್ಟೇ, ಡೆಮಾಕ್ರಟಿಕ್‌ ಪಕ್ಷದಿಂದ ಕಮಲಾ ಹ್ಯಾರಿಸ್‌ ಅವರೇ ಅಧ್ಯಕ್ಷೀಯ ಅಭ್ಯರ್ಥಿಯಾಗಿ ಎಂಬುದು ನನ್ನ ಅಭಿಲಾಷೆ ಹಾಗೂ ಆಯ್ಕೆಯಾಗಿದೆ” ಎಂದು ಜೋ ಬೈಡೆನ್‌ ಪೋಸ್ಟ್‌ ಮಾಡಿದ್ದಾರೆ.

ಅಮೆರಿಕ ಅಧ್ಯಕ್ಷೀಯ ಚುನಾವಣೆಯಿಂದ ಹಿಂದೆ ಸರಿಯುವ ಕುರಿತು ಜೋ ಬೈಡೆನ್‌ ಅವರೇ ಎಕ್ಸ್‌ ಸಾಮಾಜಿಕ ಜಾಲತಾಣದಲ್ಲಿ ಸುದೀರ್ಘ ಪತ್ರದ ಮೂಲಕ ಘೋಷಿಸಿದ್ದಾರೆ. “ನಾನು ಕಳೆದ ಮೂರುವರೆ ವರ್ಷಗಳಿಂದ ಅಮೆರಿಕ ಅಧ್ಯಕ್ಷನಾಗಿ, ದೇಶದ ಏಳಿಗೆಗೆ ದುಡಿದಿದ್ದೇನೆ. ನಿಮ್ಮೆಲ್ಲರ ಅಧ್ಯಕ್ಷನಾಗಿ ಸೇವೆ ಮಾಡಿದ್ದು ನನಗೆ ಖುಷಿಯಾಗಿದೆ. ಎರಡನೇ ಬಾರಿ ಆಯ್ಕೆಗೂ ನಾನು ಮನಸ್ಸು ಮಾಡಿದ್ದೆ. ಆದರೆ, ದೇಶ ಹಾಗೂ ಪಕ್ಷದ ಹಿತದೃಷ್ಟಿಯಿಂದಾಗಿ ನಾನು ಅಮೆರಿಕ ಅಧ್ಯಕ್ಷೀಯ ಚುನಾವಣೆಯಿಂದ ಹಿಂದೆ ಸರಿದಿದ್ದೇನೆ” ಎಂದು ಅವರು ಹೇಳಿದ್ದಾರೆ.

ಜೋ ಬೈಡೆನ್‌ ಅವರಿಗೆ ಇತ್ತೀಚೆಗೆ ಮರೆವು ಜಾಸ್ತಿಯಾಗಿದೆ. ಅಲ್ಲದೆ, 81 ವರ್ಷದ ಜೋ ಬೈಡೆನ್‌ ಅವರ ಮರು ಸ್ಪರ್ಧೆಗೆ ಪಕ್ಷದಲ್ಲೇ ವಿರೋಧ ವ್ಯಕ್ತವಾಗಿತ್ತು. ಜಾಗತಿಕ ವೇದಿಕೆಗಳಲ್ಲಿ ಜೋ ಬೈಡೆನ್‌ ಅವರು ಮುಜುಗರ ಅನುಭವಿಸಿದ್ದರು. ಹಾಗಾಗಿ, ಅವರೇ ಸ್ಪರ್ಧೆಯಿಂದ ಹಿಂದೆ ಸರಿಯುವ ತೀರ್ಮಾನ ತೆಗೆದುಕೊಂಡಿದ್ದಾರೆ ಎನ್ನಲಾಗಿದೆ. ಇನ್ನು, ಉಪಾಧ್ಯಕ್ಷೆ ಕಮಲಾ ಹ್ಯಾರಿಸ್‌ ಅವರೇ ಅಧ್ಯಕ್ಷ ಸ್ಥಾನದ ಅಭ್ಯರ್ಥಿಯಾಗಲಿದ್ದಾರೆ ಎಂದು ಮೊದಲಿನಿಂದಲೂ ಹೇಳಲಾಗುತ್ತಿತ್ತು. ಈಗ ಪಕ್ಷದ ಎಲ್ಲರೂ ಸಹಮತದಿಂದ ಒಪ್ಪಿದರೆ, ಚುನಾವಣೆಯಲ್ಲಿ ಗೆದ್ದರೆ, ಭಾರತ ಮೂಲದವರು ಅಮೆರಿಕ ಅಧ್ಯಕ್ಷರಾಗಲಿದ್ದಾರೆ. ಭಾರತ ಮೂಲದ ರಿಷಿ ಸುನಕ್‌ ಅವರು ಬ್ರಿಟನ್‌ ಪ್ರಧಾನಿಯಾಗಿದ್ದರು.

ಇದನ್ನೂ ಓದಿ: Joe Biden: ಅಮೆರಿಕ ಅಧ್ಯಕ್ಷೀಯ ಚುನಾವಣೆಯಿಂದ ಹಿಂದೆ ಸರಿದ ಜೋ ಬೈಡೆನ್

Continue Reading

ವಿದೇಶ

Joe Biden: ಅಮೆರಿಕ ಅಧ್ಯಕ್ಷೀಯ ಚುನಾವಣೆಯಿಂದ ಹಿಂದೆ ಸರಿದ ಜೋ ಬೈಡೆನ್;‌ ಕಮಲಾ ಹ್ಯಾರಿಸ್‌ಗೆ ಚಾನ್ಸ್?

Joe Biden: ಅಮೆರಿಕ ಅಧ್ಯಕ್ಷನಾಗಿ ದೇಶದ ಏಳಿಗೆಗೆ ದುಡಿದಿದ್ದೇನೆ. ನಿಮ್ಮೆಲ್ಲರ ಅಧ್ಯಕ್ಷನಾಗಿ ಇಷ್ಟು ದಿನಗಳವರೆಗೆ ಸೇವೆ ಮಾಡಿದ್ದು ನನಗೆ ಖುಷಿಯಾಗಿದೆ. ಎರಡನೇ ಬಾರಿ ಆಯ್ಕೆಗೂ ನಾನು ಮನಸ್ಸು ಮಾಡಿದ್ದೆ. ಆದರೆ, ದೇಶ ಹಾಗೂ ಪಕ್ಷದ ಹಿತದೃಷ್ಟಿಯಿಂದಾಗಿ ನಾನು ಅಮೆರಿಕ ಅಧ್ಯಕ್ಷೀಯ ಚುನಾವಣೆಯಿಂದ ಹಿಂದೆ ಸರಿದಿದ್ದೇನೆ ಎಂಬುದಾಗಿ ಜೋ ಬೈಡೆನ್‌ ಅವರು ಎಕ್ಸ್‌ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿದ್ದಾರೆ.

VISTARANEWS.COM


on

Joe Biden
Koo

ವಾಷಿಂಗ್ಟನ್: ಅಮೆರಿಕ ಅಧ್ಯಕ್ಷೀಯ ಚುನಾವಣೆಗೆ (US Presidential Election 2024) ದಿನಗಣನೆ ಆರಂಭವಾಗಿದೆ. ರಿಪಬ್ಲಿಕನ್‌ ಪಕ್ಷದ ಡೊನಾಲ್ಡ್‌ ಟ್ರಂಪ್‌ (Donald Trump) ಅವರು ಅಬ್ಬರದ ಪ್ರಚಾರ ಕೈಗೊಳ್ಳುತ್ತಿದ್ದಾರೆ. ಗುಂಡಿನ ದಾಳಿಯ ಮಧ್ಯೆಯೂ ಅವರು ಪ್ರಚಾರದಲ್ಲಿ ತೊಡಗಿದ್ದಾರೆ. ಇದರ ಮಧ್ಯೆಯೇ, ಅಮೆರಿಕ ಅಧ್ಯಕ್ಷ, ಡೆಮಾಕ್ರಟಿಕ್‌ ಪಕ್ಷದ ಜೋ ಬೈಡೆನ್‌ (Joe Biden) ಅವರು ಚುನಾವಣೆ ರೇಸ್‌ನಿಂದಲೇ ಹಿಂದೆ ಸರಿದಿದ್ದಾರೆ. ಇದು ಅಮೆರಿಕ ಮಾತ್ರವಲ್ಲ, ಜಗತ್ತಿನಾದ್ಯಂತ ಸಂಚಲನ ಮೂಡಿಸಿದೆ.

ಹೌದು, ಅಮೆರಿಕ ಅಧ್ಯಕ್ಷೀಯ ಚುನಾವಣೆಯಿಂದ ಹಿಂದೆ ಸರಿಯುವ ಕುರಿತು ಜೋ ಬೈಡೆನ್‌ ಅವರೇ ಎಕ್ಸ್‌ ಸಾಮಾಜಿಕ ಜಾಲತಾಣದಲ್ಲಿ ಸುದೀರ್ಘ ಪತ್ರದ ಮೂಲಕ ಘೋಷಿಸಿದ್ದಾರೆ. “ನಾನು ಕಳೆದ ಮೂರುವರೆ ವರ್ಷಗಳಿಂದ ಅಮೆರಿಕ ಅಧ್ಯಕ್ಷನಾಗಿ, ದೇಶದ ಏಳಿಗೆಗೆ ದುಡಿದಿದ್ದೇನೆ. ನಿಮ್ಮೆಲ್ಲರ ಅಧ್ಯಕ್ಷನಾಗಿ ಸೇವೆ ಮಾಡಿದ್ದು ನನಗೆ ಖುಷಿಯಾಗಿದೆ. ಎರಡನೇ ಬಾರಿ ಆಯ್ಕೆಗೂ ನಾನು ಮನಸ್ಸು ಮಾಡಿದ್ದೆ. ಆದರೆ, ದೇಶ ಹಾಗೂ ಪಕ್ಷದ ಹಿತದೃಷ್ಟಿಯಿಂದಾಗಿ ನಾನು ಅಮೆರಿಕ ಅಧ್ಯಕ್ಷೀಯ ಚುನಾವಣೆಯಿಂದ ಹಿಂದೆ ಸರಿದಿದ್ದೇನೆ” ಎಂದು ಅವರು ಹೇಳಿದ್ದಾರೆ.

ಜೋ ಬೈಡೆನ್‌ ಅವರಿಗೆ ಇತ್ತೀಚೆಗೆ ಮರೆವು ಜಾಸ್ತಿಯಾಗಿದೆ. ಅಲ್ಲದೆ, 81 ವರ್ಷದ ಜೋ ಬೈಡೆನ್‌ ಅವರ ಮರು ಸ್ಪರ್ಧೆಗೆ ಪಕ್ಷದಲ್ಲೇ ವಿರೋಧ ವ್ಯಕ್ತವಾಗಿತ್ತು. ಜಾಗತಿಕ ವೇದಿಕೆಗಳಲ್ಲಿ ಜೋ ಬೈಡೆನ್‌ ಅವರು ಮುಜುಗರ ಅನುಭವಿಸಿದ್ದರು. ಹಾಗಾಗಿ, ಅವರೇ ಸ್ಪರ್ಧೆಯಿಂದ ಹಿಂದೆ ಸರಿಯುವ ತೀರ್ಮಾನ ತೆಗೆದುಕೊಂಡಿದ್ದಾರೆ ಎನ್ನಲಾಗಿದೆ. ಇನ್ನು, ಉಪಾಧ್ಯಕ್ಷೆ ಕಮಲಾ ಹ್ಯಾರಿಸ್‌ ಅವರೇ ಅಧ್ಯಕ್ಷ ಸ್ಥಾನದ ಅಭ್ಯರ್ಥಿಯಾಗಲಿದ್ದಾರೆ ಎಂದು ಹೇಳಲಾಗುತ್ತಿದೆ. ಇವರು ಭಾರತ ಮೂಲದವರು ಎಂಬುದು ಗಮನಾರ್ಹವಾಗಿದೆ.

ಇತ್ತೀಚೆಗೆ ಹೆಚ್ಚಾದ ಮರೆವು

ಡೊನಾಲ್ಡ್‌ ಟ್ರಂಪ್‌ ಅವರಿಗೆ ಇತ್ತೀಚೆಗೆ ಮರೆವು ಜಾಸ್ತಿಯಾಗಿದೆ. ಕೆಲ ದಿನಗಳ ಹಿಂದೆ ನ್ಯಾಟೋ ಶೃಂಗಸಭೆ ನಡೆದಿದ್ದು, ಜಾಗತಿಕ ನಾಯಕರು ಭಾಗವಹಿಸಿದ್ದರು. ವೇದಿಕೆ ಮೇಲೆ ಭಾಷಣ ಮಾಡಿದ ಜೋ ಬೈಡೆನ್‌ ಅವರು ವೊಲೊಡಿಮಿರ್‌ ಜೆಲೆನ್‌ಸ್ಕಿ ಅವರನ್ನು ಸ್ವಾಗತಿಸಬೇಕಿತ್ತು. “ಉಕ್ರೇನ್‌ ಅಧ್ಯಕ್ಷ ವೊಲೊಡಿಮಿರ್‌ ಜೆಲೆನ್‌ಸ್ಕಿ ಅವರು ತುಂಬ ಧೈರ್ಯಶಾಲಿ” ಎಂದು ಇದೇ ವೇಳೆ ಬೈಡೆನ್‌ ಬಣ್ಣಿಸಿದರು. ಆದರೆ, ವೇದಿಕೆಗೆ ಆಹ್ವಾನಿಸುವ ವೇಳೆ ಅವರು ಪ್ರೆಸಿಡೆಂಟ್‌ ಪುಡಿನ್‌ ಅವರಿಗೆ ಸ್ವಾಗತ ಎಂದು ಹೇಳಿದ್ದು ಪ್ರಮಾದಕ್ಕೆ ಕಾರಣವಾಯಿತು. ಕೂಡಲೇ ಅವರು ಪ್ರಮಾದವನ್ನು ಸರಿಪಡಿಸಿಕೊಂಡರು. ವೇದಿಕೆ ಮೇಲೆಯೇ ಇದ್ದ ವೊಲೊಡಿಮಿರ್‌ ಜೆಲೆನ್‌ಸ್ಕಿ ಅವರು ಜೋ ಬೈಡೆನ್‌ ಪ್ರಮಾದದಿಂದ ನಕ್ಕು, ಮಾತನಾಡಿದರು. ಈ ವಿಡಿಯೊ ಈಗ ಭಾರಿ ವೈರಲ್‌ ಆಗಿತ್ತು.

ಕಮಲಾ ಹ್ಯಾರಿಸ್‌ ಅವರ ಹೆಸರು ಪ್ರಸ್ತಾಪಿಸುವ ವೇಳೆಯೂ ಜೋ ಬೈಡೆನ್‌ ನಗೆಪಾಟಲಿಗೀಡಾಗಿದ್ದರು. ವಾಷಿಂಗ್ಟನ್‌ನಲ್ಲಿ ನಡೆದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡುವಾಗ, ಉಪಾಧ್ಯಕ್ಷೆ ಕಮಲಾ ಹ್ಯಾರೀಸ್‌ ಹೆಸರಿಗೆ ಬದಲಾಗಿ ಮಾಜಿ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಹೆಸರು ಪ್ರಸ್ತಾಪಿಸಿದ್ದರು.

ಇದನ್ನೂ ಓದಿ: Donald Trump: ಅಮೆರಿಕವೂ ಐರನ್ ಡೋಮ್ ಕ್ಷಿಪಣಿ ತಯಾರಿಸಲಿದೆ; ಡೊನಾಲ್ಡ್‌ ಟ್ರಂಪ್‌ ಸೂಚನೆ

Continue Reading

ಕರ್ನಾಟಕ

Hubballi News: ಹುಬ್ಬಳ್ಳಿಯಲ್ಲಿ ಮತ್ತೆ ಹರಿಯಿತು ನೆತ್ತರು; ಚಾಕು ಇರಿದು ದೇಗುಲದ ಪೂಜಾರಿಯ ಕೊಲೆ

Hubballi News: ದೇವೇಂದ್ರಪ್ಪ ಹೊನ್ನಳ್ಳಿ ಅವರು ಈಶ್ವರ ನಗರದ ವೈಷ್ಣೋದೇವಿ ದೇವಸ್ಥಾನದಲ್ಲಿ ಪೂಜಾರಿಯಾಗಿದ್ದರು. ನವನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನೆ ಬಳಿಕ ಸ್ಥಳಕ್ಕೆ ನಗರ ಪೊಲೀಸ್‌ ಆಯುಕ್ತ ಶಶಿಕುಮಾರ್‌ ಅವರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

VISTARANEWS.COM


on

Hubballi News
Koo

ಹುಬ್ಬಳ್ಳಿ: ಯುವತಿ ನೇಹಾ ಹಿರೇಮಠ (Neha Hiremath) ಕೊಲೆಯ ಬಳಿಕ ದೇಶಾದ್ಯಂತ ಸುದ್ದಿಯಾಗಿದ್ದ ಹುಬ್ಬಳ್ಳಿಯಲ್ಲೀಗ (Hubballi News) ಮತ್ತೆ ನೆತ್ತರು ಹರಿದಿದೆ. ಹುಬ್ಬಳ್ಳಿಯ ಈಶ್ವರ ನಗರದಲ್ಲಿರುವ ದೇವಾಲಯದ ಪೂಜಾರಿ ಆಗಿದ್ದ ದೇವೇಂದ್ರಪ್ಪ ಹೊನ್ನಳ್ಳಿ (Devendrappa Honnalli) ಎಂಬುವರನ್ನು ದುಷ್ಕರ್ಮಿಯೊಬ್ಬ ಭಾನುವಾರ (ಜುಲೈ 21) ಸಂಜೆ ಚಾಕುವಿನಿಂದ ಇರಿದು ಭೀಕರವಾಗಿ ಹತ್ಯೆ ನಡೆಸಿದ್ದಾನೆ. ಈಶ್ವರಿ ನಗರದಲ್ಲಿ ಬೆಚ್ಚಿಬೀಳಿಸುವ ಘಟನೆ ನಡೆದಿದೆ.

ದೇವೇಂದ್ರಪ್ಪ ಹೊನ್ನಳ್ಳಿ ಅವರು ಈಶ್ವರ ನಗರದ ವೈಷ್ಣೋದೇವಿ ದೇವಸ್ಥಾನದಲ್ಲಿ ಪೂಜಾರಿಯಾಗಿದ್ದರು. ನವನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನೆ ಬಳಿಕ ಸ್ಥಳಕ್ಕೆ ನಗರ ಪೊಲೀಸ್‌ ಆಯುಕ್ತ ಶಶಿಕುಮಾರ್‌ ಅವರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. “ಕೊಲೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಒಬ್ಬ ವ್ಯಕ್ತಿ ಕೃತ್ಯ ಎಸಗಿದ್ದಾನೆ ಎಂದು ತಿಳಿದುಬಂದಿದೆ” ಎಂದು ಅವರು ಮಾಹಿತಿ ನೀಡಿದ್ದಾರೆ.

crime Scene Occasional photo

“ಆರೋಪಿಯ ಬಂಧನಕ್ಕೆ ಪ್ರತ್ಯೇಕ ತಂಡವನ್ನು ರಚಿಸಲಾಗಿದೆ. ಶೀಘ್ರದಲ್ಲೇ ಆರೋಪಿಯನ್ನು ಬಂಧಿಸಲಾಗುತ್ತದೆ. ಚಾಕುವಿನಿಂದ ಇರಿದು ಆರೋಪಿಯು ಪರಾರಿಯಾಗಿದ್ದಾನೆ. ಇದಕ್ಕೂ ಮೊದಲು ಕೂಡ ದೇವೇಂದ್ರಪ್ಪ ಮೇಲೆ ಹಲ್ಲೆ ನಡೆದಿತ್ತು. ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಲಾಗಿದೆ” ಎಂಬುದಾಗಿ ಪೊಲೀಸ್‌ ಆಯುಕ್ತ ಶಶಿಕುಮಾರ್‌ ಅವರು ತಿಳಿಸಿದ್ದಾರೆ.

ಮಾರಕಾಸ್ತ್ರದಿಂದ ಕೊಚ್ಚಿ ಯುವಕನ ಕೊಲೆ

ಕೆಲ ದಿನಗಳ ಹಿಂದಷ್ಟೇ, ಬೆಂಗಳೂರಿನಲ್ಲಿ ಮಾರಕಾಸ್ತ್ರಗಳಿಂದ ಹಲ್ಲೆ‌ ನಡೆಸಿ ಯುವಕನೊಬ್ಬನ ಕೊಲೆ ಮಾಡಲಾಗಿತ್ತು. ಕೋಣನಕುಂಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿತ್ತು. ನೇಪಾಳಿ ಮೂಲದ ಬಾಲಾಜಿ ಮೃತ. ವೃತ್ತಿಯಲ್ಲಿ ವೆಲ್ಡಿಂಗ್ ಕೆಲಸ ಮಾಡುತ್ತಿದ್ದ ಬಾಲಾಜಿ ಸ್ನೇಹಿತರೊಂದಿಗೆ ಸೇರಿ ಎಣ್ಣೆ ಪಾರ್ಟಿ ಮಾಡಿದ್ದ. ಬಳಿಕ ಕುಡಿದ ಅಮಲಿನಲ್ಲಿ ಕ್ಯಾತೆ ತೆಗೆದು ಸ್ನೇಹಿತರೊಟ್ಟಿಗೆ ಜಗಳ ಶುರು ಮಾಡಿದ್ದ. ಜಗಳವು ವಿಕೋಪಕ್ಕೆ ತಿರುಗಿದ್ದು, ಬಾಲಜಿಯನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಮಾಡಲಾಗಿತ್ತು.

ಕೋಣನಕುಂಟೆ ಸಮುದಾಯ ಭವನ ಬಳಿ ಘಟನೆ ನಡೆದಿದ್ದು, ಸ್ಥಳಕ್ಕೆ ಕೋಣನಕುಂಟೆ ಪೊಲೀಸರು ಹಾಗೂ ಡಿಸಿಪಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನೆ ಮಾಡಲಾಗಿದ್ದು, ಈ ಸಂಬಂಧ ಕೋಣನಕುಂಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹತ್ಯೆಕೋರರಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.

ಇದನ್ನೂ ಓದಿ: Director Arrest: ಕೊಲೆ ಕೇಸ್​​ನಲ್ಲಿ 20 ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ಸ್ಯಾಂಡಲ್​ವುಡ್ ನಿರ್ದೇಶಕ ಅರೆಸ್ಟ್​!

Continue Reading

ಕರ್ನಾಟಕ

ವಿದ್ಯುತ್ ಬಿಲ್‌ನಲ್ಲಿರುವ ಹೆಚ್ಚುವರಿ ಭದ್ರತಾ ಠೇವಣಿ ಕುರಿತು ಗೊಂದಲ; ಗ್ರಾಹಕರ ಪ್ರಶ್ನೆಗಳಿಗೆ ಇಲ್ಲಿದೆ ಬೆಸ್ಕಾಂ ಉತ್ತರ

ಪ್ರಸ್ತುತ ಗೃಹಜ್ಯೋತಿ ಯೋಜನೆ ಜಾರಿಯಲ್ಲಿರುವುದರಿಂದ, ಶೂನ್ಯ ಬಿಲ್ ಪಡೆಯುತ್ತಿರುವ ಗ್ರಾಹಕರಿಗೆ ಅವರ ಖಾತೆಯಲ್ಲೇ ಭದ್ರತಾ ಠೇವಣಿಯ ಬಡ್ಡಿ ಹಣ ಜಮಾ ಆಗಿರುತ್ತದೆ. ಗ್ರಾಹಕರು ಶೂನ್ಯ ಬಿಲ್‌ನಿಂದ ಹೊರಬಂದಾಗ, ಅವರ ಖಾತೆಯಲ್ಲಿ ಜಮೆಯಾಗಿರುವ ಬಡ್ಡಿಯ ಹಣವನ್ನು ವಿದ್ಯುತ್ ಶುಲ್ಕದೊಂದಿಗೆ ಹೊಂದಿಸಲಾಗುತ್ತದೆ ಎಂದು ಬೆಸ್ಕಾಂ ಹೆಚ್ಚುವರಿ ಭದ್ರತಾ ಠೇವಣಿ ಕುರಿತು ಮಾಹಿತಿ ನೀಡಿದೆ.

VISTARANEWS.COM


on

Bescom
Koo

ಬೆಂಗಳೂರು: ಜೂನ್‌ ತಿಂಗಳ ವಿದ್ಯುತ್‌ ಬಿಲ್‌ನಲ್ಲಿ ಹೆಚ್ಚುವರಿ ಭದ್ರತಾ ಠೇವಣಿಯ (ASD – Additional Security Deposit) ಮೊತ್ತ ಏರಿಕೆಯಾಗಿರುವುದಕ್ಕೆ ಗ್ರಾಹಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಇದೇ ಆಕ್ರೋಶ ವ್ಯಕ್ತವಾಗಿದೆ. ಉಚಿತವಾಗಿ ವಿದ್ಯುತ್‌ ಕೊಡುವ ಬೆಸ್ಕಾಂ ಸೇರಿ ರಾಜ್ಯದ ಹಲವು ವಿದ್ಯುತ್‌ ಸರಬರಾಜು ನಿಗಮಗಳು ಸುಲಿಗೆ ಮಾಡುತ್ತಿವೆ ಎಂಬ ಆರೋಪ ಕೇಳಿಬಂದಿದೆ. ಇದರ ಬೆನ್ನಲ್ಲೇ, ಹೆಚ್ಚುವರಿ ಭದ್ರತಾ ಠೇವಣಿ ನಿಗದಿ ಕುರಿತು ಬೆಸ್ಕಾಂ ಸ್ಪಷ್ಟನೆ ನೀಡಿದೆ. ಆ ಮೂಲಕ ಗ್ರಾಹಕರ ಪ್ರಶ್ನೆ, ಗೊಂದಲಗಳಿಗೆ ಪರಿಹಾರ ನೀಡುವ ಪ್ರಯತ್ನ ಮಾಡಿದೆ. ಬೆಸ್ಕಾಂ ಪ್ರಕಟಣೆಯ ಅಂಶಗಳು ಇಲ್ಲಿವೆ.

  • ನೂತನ ಗ್ರಾಹಕರ ವಿದ್ಯುತ್ ಬೇಡಿಕೆಯನ್ನು ಆಧರಿಸಿ, ಹೆಚ್ಚುವರಿ ಭದ್ರತಾ ಠೇವಣಿ ‌(ASD – Additional Security Deposit) ಯನ್ನು ನಿರ್ಧರಿಸಲಾಗುತ್ತದೆ ಹಾಗೂ ಮುಂದಿನ ಹಣಕಾಸು ವರ್ಷದ ಆರಂಭದಲ್ಲಿ, ಗ್ರಾಹಕರ ಹಿಂದಿನ ವಾರ್ಷಿಕ ಸರಾಸರಿ ಬಳಕೆಯನ್ನು ಆಧರಿಸಿ, ಗ್ರಾಹಕರು ಹೆಚ್ಚುವರಿ ಭದ್ರತಾ ಠೇವಣಿಯನ್ನು ಪಾವತಿಸಬೇಕೇ ಅಥವಾ ಅವರ ಬೇಡಿಕೆ ಕಡಿಮೆ ಇದ್ದಲ್ಲಿ ಗ್ರಾಹಕರಿಗೆ ಮರುಪಾವತಿಸಬೇಕೇ ಎನ್ನುವುದನ್ನು ಬೆಸ್ಕಾಂ ನಿರ್ಧರಿಸುತ್ತದೆ.
  • ಗ್ರಾಹಕರ ಹೆಚ್ಚುವರಿ ಭದ್ರತಾ ಠೇವಣಿಗೆ, ನೂತನ ಹಣಕಾಸು ವರ್ಷದ‌ ಮೊದಲ ತ್ರೈಮಾಸಿಕದ ಅಂತ್ಯದಲ್ಲಿ ಠೇವಣಿಯ ಮೇಲಿನ ಬಡ್ಡಿ (IOD – Interest On Deposit) ಯನ್ನು ಗ್ರಾಹಕರ ಖಾತೆಗೆ ಪಾವತಿಸಲಾಗುತ್ತದೆ.
  • ಪ್ರಸ್ತುತ ಗೃಹಜ್ಯೋತಿ ಯೋಜನೆ ಜಾರಿಯಲ್ಲಿರುವುದರಿಂದ, ಶೂನ್ಯ ಬಿಲ್ ಪಡೆಯುತ್ತಿರುವ ಗ್ರಾಹಕರಿಗೆ ಅವರ ಖಾತೆಯಲ್ಲೇ ಭದ್ರತಾ ಠೇವಣಿಯ ಬಡ್ಡಿ ಹಣ ಜಮಾ ಆಗಿರುತ್ತದೆ. ಗ್ರಾಹಕರು ಶೂನ್ಯ ಬಿಲ್‌ನಿಂದ ಹೊರಬಂದಾಗ, ಅವರ ಖಾತೆಯಲ್ಲಿ ಜಮೆಯಾಗಿರುವ ಬಡ್ಡಿಯ ಹಣವನ್ನು ವಿದ್ಯುತ್ ಶುಲ್ಕದೊಂದಿಗೆ ಹೊಂದಿಸಲಾಗುತ್ತದೆ.
Escom Online Services
  • ಹೆಚ್ಚುವರಿ ಭದ್ರತಾ ಠೇವಣಿಯು ಯಾವುದೇ ರೀತಿಯ ತೆರಿಗೆ ಅಥವಾ ಗ್ರಾಹಕರಿಂದ ಹೆಚ್ಚುವರಿಯಾಗಿ ವಸೂಲಿ ಮಾಡುವ ಮೊತ್ತವಲ್ಲ. ಬದಲಾಗಿ, ಗ್ರಾಹಕರ ವಿದ್ಯುತ್ ಬಳಕೆಗೆ ಅನುಗುಣವಾಗಿ, ಅವರ ವಾರ್ಷಿಕ ಸರಾಸರಿ ಬಳಕೆಯನ್ನು ಆಧರಿಸಿ, ನಿರ್ಧರಿಸಲಾಗುವ ಭದ್ರತಾ ಠೇವಣಿ. ವರ್ಷಾಂತ್ಯದಲ್ಲಿ ಆ ಠೇವಣಿ ಹಣಕ್ಕೆ ಗ್ರಾಹಕರಿಗೇ ಬಡ್ಡಿಯ ಲಾಭಾಂಶ ‌(IOD) ನೀಡಲಾಗುತ್ತದೆ.
  • ಜೂನ್ ತಿಂಗಳಲ್ಲಿ ಸಾಮಾನ್ಯ ಪ್ರಮಾಣಕ್ಕಿಂತ ಹೆಚ್ಚು ವಿದ್ಯುತ್ ಬಿಲ್ ಬರುವ ಯಾವುದೇ ಕಾರಣಗಳು ಇಲ್ಲವಾಗಿದ್ದು, ವಿದ್ಯುತ್ ಬಿಲ್‌ ಗೃಹಜ್ಯೋತಿಯಡಿ ಶೂನ್ಯವಾಗಿದ್ದೂ, ನಿಮ್ಮ ವಿದ್ಯುತ್ ಬಿಲ್‌ನಲ್ಲಿ ಋಣಾತ್ಮಕ (-) ಮೊತ್ತ ನಮೂದಾಗಿದ್ದರೆ, ಅದು ಜೂನ್ ತಿಂಗಳ ಅಂತ್ಯದಲ್ಲಿ ನಿಮ್ಮ ಹೆಚ್ಚುವರಿ ಭದ್ರತಾ ಠೇವಣಿಗೆ ಬೆಸ್ಕಾಂ ನೀಡುವ ಬಡ್ಡಿದರವಾಗಿದೆ. ಅದನ್ನು ಮುಂದೆ ಶೂನ್ಯ ಬಿಲ್‌ನಿಂದ ಹೊರಬಂದಾಗ, ವಿದ್ಯುತ್ ಶುಲ್ಕಕ್ಕೆ ಸರಿಹೊಂದಿಸಲಾಗುವುದು. ಈ ಋಣಾತ್ಮಕ (-) ಮೊತ್ತವನ್ನು ಗ್ರಾಹಕರು ಪಾವತಿಸಬೇಕಿರುವುದಿಲ್ಲ (ಶೂನ್ಯ ಬಿಲ್ ಇದ್ದರೆ, ಬಿಲ್‌ನ‌ ಕೆಳಭಾಗದಲ್ಲಿ, ಠೇವಣಿ ಮೇಲಿನ ಬಡ್ಡಿ IOD ಎಂದು ಋಣಾತ್ಮಕ ಮೊತ್ತವನ್ನು ನಮೂದಿಸಲಾಗಿರುತ್ತದೆ.)
  • ಕೆ.ಇ.ಆರ್.ಸಿ ಆದೇಶಗಳನ್ವಯ, ಗ್ರಾಹಕರ ಹೆಚ್ಚುವರಿ ಭದ್ರತಾ ಠೇವಣಿಯನ್ನು ಅವರ ವಾರ್ಷಿಕ ವಿದ್ಯುತ್ ಬಳಕೆಯ ಸರಾಸರಿಯನ್ನು ಆಧರಿಸಿ ನಿರ್ಧರಿಸಬೇಕಿದ್ದು, ಬೇಡಿಕೆಗಿಂತ ಸರಾಸರಿ ಕಡಿಮೆಯಿದ್ದಲ್ಲಿ, ಗ್ರಾಹಕರಿಗೆ ಭದ್ರತಾ ಠೇವಣಿ ಹಣವನ್ನು ಮರುಪಾವತಿಸಲಾಗುತ್ತದೆ ಅಥವಾ ಸರಾಸರಿಯು ಬೇಡಿಕೆಗಿಂತ ಹೆಚ್ಚಿದ್ದಲ್ಲಿ, ಅದರನ್ವಯ ಬೇಡಿಕೆಯ ಭದ್ರತಾ ಠೇವಣಿಯನ್ನು ಗ್ರಾಹಕರಿಗೆ ವಿಧಿಸಲಾಗುತ್ತದೆ.
  • ಇನ್ನು, ಹೆಚ್ಚುವರಿ ಭದ್ರತಾ ಠೇವಣಿಯನ್ನು ನಿರ್ಧರಿಸಿ, ಗ್ರಾಹಕರಿಗೆ ನೋಟಿಸ್ ನೀಡುವ ಜವಾಬ್ದಾರಿ ಆಯಾ ಉಪವಿಭಾಗಗಳಿಗೆ ಸಂಬಂಧಿಸಿದ್ದು, ಉಪವಿಭಾಗದಿಂದ ಸಹಾಯಕ ಅಭಿಯಂತರರು ನೋಟಿಸ್ ಹೊರಡಿಸುತ್ತಾರೆಯೇ ವಿನಃ, ಬೆಸ್ಕಾಂನ ನಿಗಮ ಕಚೇರಿಯ ಅಧಿಕೃತ ಜ್ಞಾಪನ ಪತ್ರದ ಮೂಲಕ ಈ ರೀತಿಯ ನೋಟಿಸ್ ನೀಡಲಾಗುವುದಿಲ್ಲ.
  • ನೂತನವಾಗಿ ನಿರ್ಧರಿಸಲಾಗುವ ಭದ್ರತಾ ಠೇವಣಿಯನ್ನು ಆನ್‌ಲೈನ್ ಮೂಲಕವೂ ಪಾವತಿಸಬಹುದಾಗಿದ್ದು, ಬೆಸ್ಕಾಂ ಮಿತ್ರ ಮೊಬೈಲ್ ಆ್ಯಪ್ ಅಥವಾ ಬೆಸ್ಕಾಂನ ಅಧಿಕೃತ ವೆಬ್‌ಸೈಟ್ ಮೂಲಕ ಪಾವತಿಸಬಹುದಾಗಿದೆ
  • ಬೆಸ್ಕಾಂಗೆ ಸರ್ಕಾರದ ಸಬ್ಸಿಡಿಗಳು ಕೇವಲ ಕೃಷಿ‌ ಪಂಪ್‌ಸೆಟ್ ಹಾಗೂ ಗೃಹ ಜ್ಯೋತಿ ಯೋಜನೆಯಿಂದ ಮಾತ್ರ ಅನ್ವಯವಾಗುತ್ತಿದ್ದು, ಇತರೆ ಅನುದಾನವನ್ನು ಗ್ರಾಹಕರಿಗೆ ವಿದ್ಯುತ್ ಪೂರೈಕೆಯ ಮೊತ್ತದ ಮೂಲಕವೇ ಬೆಸ್ಕಾಂ ಪಡೆಯಬೇಕಿರುತ್ತದೆ.
  • ಹೆಚ್ಚುವರಿ ಭದ್ರತಾ ಠೇವಣಿ (ASD) ಕುರಿತಾದ ಯಾವುದೇ ಗೊಂದಲಗಳಿದ್ದಲ್ಲಿ, ಬೆಸ್ಕಾಂನ 24×7 ಸಹಾಯವಾಣಿ 1912 ಕ್ಕೆ ಕರೆಮಾಡಿ ಪರಿಹರಿಸಿಕೊಳ್ಳಬಹುದಾಗಿದೆ.

ಇದನ್ನೂ ಓದಿ: BESCOM Order : ವಿದ್ಯುತ್‌ ಕಂಬಗಳ ಮೇಲೆ ಅನಧಿಕೃತ ಕೇಬಲ್‌ ತೆರವಿಗೆ ಗಡುವು; ಬಿಸಿ ಮುಟ್ಟಿಸಲು ಸಜ್ಜಾದ ಬೆಸ್ಕಾಂ

Continue Reading
Advertisement
Kamala Harris
ಪ್ರಮುಖ ಸುದ್ದಿ44 mins ago

Kamala Harris: ಅಮೆರಿಕ ಅಧ್ಯಕ್ಷ ಸ್ಥಾನಕ್ಕೆ ಭಾರತ ಮೂಲದ ಕಮಲಾ ಹ್ಯಾರಿಸ್‌ ಹೆಸರು ಸೂಚಿಸಿದ ಜೋ ಬೈಡೆನ್!

Joe Biden
ವಿದೇಶ60 mins ago

Joe Biden: ಅಮೆರಿಕ ಅಧ್ಯಕ್ಷೀಯ ಚುನಾವಣೆಯಿಂದ ಹಿಂದೆ ಸರಿದ ಜೋ ಬೈಡೆನ್;‌ ಕಮಲಾ ಹ್ಯಾರಿಸ್‌ಗೆ ಚಾನ್ಸ್?

Hubballi News
ಕರ್ನಾಟಕ1 hour ago

Hubballi News: ಹುಬ್ಬಳ್ಳಿಯಲ್ಲಿ ಮತ್ತೆ ಹರಿಯಿತು ನೆತ್ತರು; ಚಾಕು ಇರಿದು ದೇಗುಲದ ಪೂಜಾರಿಯ ಕೊಲೆ

Bescom
ಕರ್ನಾಟಕ2 hours ago

ವಿದ್ಯುತ್ ಬಿಲ್‌ನಲ್ಲಿರುವ ಹೆಚ್ಚುವರಿ ಭದ್ರತಾ ಠೇವಣಿ ಕುರಿತು ಗೊಂದಲ; ಗ್ರಾಹಕರ ಪ್ರಶ್ನೆಗಳಿಗೆ ಇಲ್ಲಿದೆ ಬೆಸ್ಕಾಂ ಉತ್ತರ

Sairaj Bahutule :
ಕ್ರೀಡೆ3 hours ago

Sairaj Bahutule : ಭಾರತ ತಂಡದ ಮಧ್ಯಂತರ ಬೌಲಿಂಗ್​ ಕೋಚ್ ಆಗಿ ಸಾಯಿರಾಜ್ ಬಹುತುಲೆ ನೇಮಕ?

Harmanpreet Kaur
ಕ್ರೀಡೆ3 hours ago

Harmanpreet Kaur : ಟಿ20 ಐ ರನ್​ ಗಳಿಕೆಯಲ್ಲಿ ಸ್ಮೃತಿ ಮಂಧಾನಾ ಹಿಂದಿಕ್ಕಿದ ಹರ್ಮನ್​ಪ್ರೀತ್ ಕೌರ್​

Sameer Nigam
ಕರ್ನಾಟಕ3 hours ago

Sameer Nigam: ಕನ್ನಡಿಗರ ಕ್ಷಮೆಯಾಚಿಸಿದ PhonePe ಸಿಇಒ ಸಮೀರ್‌ ನಿಗಮ್‌; ಬಾಯ್ಕಾಟ್‌ ಪೆಟ್ಟಿಗೆ ಥಂಡಾ

Ankola landslide
ಕರ್ನಾಟಕ4 hours ago

Ankola landslide: ಉತ್ತರ ಕನ್ನಡದ ರಾ. ಹೆದ್ದಾರಿ; ಕಾಮಗಾರಿ ಮುಗಿಸದೆ ಟೋಲ್ ಸಂಗ್ರಹ ಏಕೆ? ಗುತ್ತಿಗೆದಾರ ಕಂಪನಿಗೆ ಸಿಎಂ ತರಾಟೆ

Mamata Banerjee
ದೇಶ4 hours ago

Mamata Banerjee: ‘ನಾನು ಕಾಫಿರ್‌ ಅಲ್ಲ’ ಎಂದ ಮಮತಾ ಬ್ಯಾನರ್ಜಿಗೆ ಬಿಜೆಪಿ ತಿರುಗೇಟು; ಏನಿದು ವಿವಾದ?

Joe Root
ಪ್ರಮುಖ ಸುದ್ದಿ4 hours ago

Joe Root : ವೆಸ್ಟ್​ ಇಂಡೀಸ್ ವಿರುದ್ಧ ಶತಕ ಬಾರಿಸಿ ಸ್ಟೀವ್​ ವಾ ದಾಖಲೆ ಸರಿಗಟ್ಟಿದ ಜೋ ರೂಟ್​

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Rain
ಮಳೆ1 day ago

Karnataka Rain : ಭಾರಿ ಮಳೆಗೆ ಮನೆ ಗೋಡೆ ಕುಸಿತ; ಕೊಟ್ಟಿಗೆಯಲ್ಲಿದ್ದ ಜಾನುವಾರುಗಳು ಸಾವು

karnataka Rain
ಮಳೆ2 days ago

Karnataka Rain : ಹಳ್ಳ ದಾಟಲು ಹೋಗಿ ನೀರುಪಾಲಾದ ಜಾನುವಾರು; ಬಿರುಗಾಳಿಗೆ ಕಳಚಿದ ವಿಂಡ್‌ ಫ್ಯಾನ್‌

karnataka Rain
ಮಳೆ2 days ago

Karnataka Rain : ಬೀದಿಗೆ ತಂದ ರಣಮಳೆ; ಮನೆ ಕುಸಿದು ಬಿದ್ದು 9 ತಿಂಗಳ ಗರ್ಭಿಣಿ ನರಳಾಟ

Karnataka Rain
ಮಳೆ3 days ago

Karnataka Rain : ರಾಜ್ಯದಲ್ಲಿ ಮಳೆಯ ಆರ್ಭಟ; ರಾತ್ರಿ ಕಳೆದು ಬೆಳಗಾಗುವುದರೊಳಗೆ ಕಂದಕ ನಿರ್ಮಾಣ

Karnataka Rain
ಮಳೆ3 days ago

Karnataka Rain : ಭಾರಿ ಮಳೆ ಎಫೆಕ್ಟ್‌; ಉಕ್ಕಿ ಹರಿಯುತ್ತಿದ್ದ ನದಿಯಲ್ಲಿ ಕೊಚ್ಚಿ ಹೋದ ರಾಸು

Uttara Kannada Landslide
ಮಳೆ3 days ago

Uttara Kannada Landslide: ಶಿರೂರು ಗುಡ್ಡ ಕುಸಿತ; ಅಖಾಡಕ್ಕಿಳಿದ ಜಿಯೊಲಾಜಿಕಲ್ ಸರ್ವೆ ಆಫ್ ಇಂಡಿಯಾ ಟೀಂ

Karnataka Rain
ಮಳೆ5 days ago

Karnataka Rain : ಕಾರವಾರದಲ್ಲಿ ಮಳೆ ಅವಾಂತರ; ಮನೆ ಮೇಲೆ ಗುಡ್ಡ ಕುಸಿದು ವೃದ್ಧ ಸಾವು

karnataka Rain
ಮಳೆ6 days ago

Karnataka Rain : ಭಾರಿ ಮಳೆಗೆ ನಿಯಂತ್ರಣ ತಪ್ಪಿ ಕೆರೆಗೆ ಉರುಳಿ ಬಿದ್ದ ಕಾರು; ನಾಲ್ವರು ಪ್ರಾಣಾಪಾಯದಿಂದ ಪಾರು

karnataka Weather Forecast
ಮಳೆ6 days ago

Karnataka Weather : ವ್ಯಾಪಕ ಮಳೆ ಎಚ್ಚರಿಕೆ; ನಾಳೆಯೂ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

karnataka Rain
ಮಳೆ7 days ago

Karnataka Rain : ಶಾಲಾ-ಕಾಲೇಜಿಗೆ ಈ ದಿನ ರಜಾ; ಅಬ್ಬರಿಸುತ್ತಿರುವ ಮಳೆಗೆ ಮನೆಯಲ್ಲೇ ಎಲ್ಲರೂ ಸಜಾ!

ಟ್ರೆಂಡಿಂಗ್‌