Budget Session 2024: ನಾಳೆಯಿಂದ ಬಜೆಟ್‌ ಅಧಿವೇಶನ; ಕೇಂದ್ರದ ಅಜೆಂಡಾ ಏನು? ಪ್ರತಿಪಕ್ಷಗಳ ತಂತ್ರವೇನು? - Vistara News

ದೇಶ

Budget Session 2024: ನಾಳೆಯಿಂದ ಬಜೆಟ್‌ ಅಧಿವೇಶನ; ಕೇಂದ್ರದ ಅಜೆಂಡಾ ಏನು? ಪ್ರತಿಪಕ್ಷಗಳ ತಂತ್ರವೇನು?

Budget Session 2024: ಜುಲೈ 22ರಿಂದ ಆರಂಭವಾಗುವ ಬಜೆಟ್‌ ಅಧಿವೇಶನವು ಆಗಸ್ಟ್‌ 12ರವರೆಗೆ ನಡೆಯಲಿದೆ. ಜುಲೈ 23ರಂದು ಬಜೆಟ್‌ ಮಂಡಿಸಲಾಗುತ್ತದೆ. ಅಧಿವೇಶನದಲ್ಲಿ 16 ಕಲಾಪಗಳು ನಡೆಯಲಿವೆ. ಮತ್ತೊಂದೆಡೆ, ಸಾಲು ಸಾಲು ವಿಷಯಗಳನ್ನು ಮುಂದಿಟ್ಟುಕೊಂಡು ಕೇಂದ್ರ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಲು ಇಂಡಿಯಾ ಒಕ್ಕೂಟವು ಸಜ್ಜಾಗಿದೆ.

VISTARANEWS.COM


on

Budget Session 2024
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವದೆಹಲಿ: ಸಂಸತ್ತಿನ ಬಜೆಟ್‌ ಅಧಿವೇಶನವು (Budget Session 2024) ಸೋಮವಾರದಿಂದ (ಜುಲೈ 22) ಆರಂಭವಾಗಲಿದ್ದು, ಎನ್‌ಡಿಎ ಸರ್ಕಾರದ ಮೂರನೇ ಅವಧಿಯ ಮೊದಲ ಬಜೆಟ್‌ ಮಂಡಿಸಲು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ (Nirmala Sitharaman) ಅವರು ಸಜ್ಜಾಗಿದ್ದಾರೆ. ಇನ್ನು, ಪ್ರತಿಪಕ್ಷಗಳೂ ಅಷ್ಟೇ, ದೇಶದ ಪ್ರಮುಖ ವಿಷಯಗಳನ್ನು ಇಟ್ಟುಕೊಂಡು ಸಂಸತ್ತಿನಲ್ಲಿ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಲು ಸಜ್ಜಾಗಿವೆ. ಹಾಗಾಗಿ, ಬಜೆಟ್‌ ಅಧಿವೇಶನವು ತೀವ್ರ ಕುತೂಹಲ ಕೆರಳಿಸಿದೆ.

ಜುಲೈ 22ರಿಂದ ಆರಂಭವಾಗುವ ಬಜೆಟ್‌ ಅಧಿವೇಶನವು ಆಗಸ್ಟ್‌ 12ರವರೆಗೆ ನಡೆಯಲಿದೆ. ಜುಲೈ 23ರಂದು ಬಜೆಟ್‌ ಮಂಡಿಸಲಾಗುತ್ತದೆ. ಅಧಿವೇಶನದಲ್ಲಿ 16 ಕಲಾಪಗಳು ನಡೆಯಲಿವೆ. ಸೋಮವಾರವೇ ಆರ್ಥಿಕ ಸಮೀಕ್ಷೆ ಪ್ರಕಟಿಸಲಾಗುತ್ತದೆ. ಅಧಿವೇಶನದ ವೇಳೆ ಕೇಂದ್ರ ಸರ್ಕಾರವು ವಿಪತ್ತು ನಿರ್ವಹಣಾ (ತಿದ್ದುಪಡಿ) ವಿಧೇಯಕ, ಭಾರತೀಯ ವಾಯುಯಾನ ವಿಧೇಯಕ ಸೇರಿ ಒಟ್ಟು ಆರು ವಿಧೇಯಕಗಳನ್ನು ಮಂಡಿಸಲಿದೆ ಎಂದು ತಿಳಿದುಬಂದಿದೆ.

Union Budget 2024

ಪ್ರತಿಪಕ್ಷಗಳ ಮುಂದಿರುವ ವಿಷಯಗಳು ಯಾವವು?

ಸಾಲು ಸಾಲು ವಿಷಯಗಳನ್ನು ಮುಂದಿಟ್ಟುಕೊಂಡು ಕೇಂದ್ರ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಲು ಇಂಡಿಯಾ ಒಕ್ಕೂಟವು ಸಜ್ಜಾಗಿದೆ. ಅದರಲ್ಲೂ, ಮಣಿಪುರ ಹಿಂಸಾಚಾರ, ನೀಟ್‌ ಪ್ರಶ್ನೆಪತ್ರಿಕೆ ಪ್ರಕರಣ, ಬೆಲೆ ಏರಿಕೆ, ಯುಪಿಎಸ್‌ಸಿ ಅಕ್ರಮ ಸೇರಿ ಹಲವು ವಿಷಯಗಳನ್ನು ಪ್ರತಿಪಕ್ಷಗಳು ಚರ್ಚೆಗೆ ತರಲಿವೆ. ಸರ್ಕಾರಕ್ಕೆ ಚಾಟಿ ಬೀಸಲು ಪ್ರತಿಪಕ್ಷ ನಾಯಕ ರಾಹುಲ್‌ ಗಾಂಧಿ ಅವರೂ ಸಜ್ಜಾಗಿದ್ದಾರೆ ಎನ್ನಲಾಗುತ್ತಿದೆ.

India Bloc Meeting

ಹೊಸ ದಾಖಲೆ ಬರೆಯಲಿದ್ದಾರೆ ನಿರ್ಮಲಾ

ನಿರ್ಮಲಾ ಸೀತಾರಾಮನ್‌ ಅವರು ಇದೇ ತಿಂಗಳು ಪೂರ್ಣಪ್ರಮಾಣದ ಬಜೆಟ್‌ ಮಂಡಿಸಿದರೆ ಹೊಸ ದಾಖಲೆ ಬರೆಯಲಿದ್ದಾರೆ. ಇದುವರೆಗೆ ನಿರ್ಮಲಾ ಸೀತಾರಾಮನ್‌ ಅವರು ಹಣಕಾಸು ಸಚಿವೆಯಾಗಿ ಐದು ಪೂರ್ಣ ಪ್ರಮಾಣದ ಹಾಗೂ ಒಂದು ಮಧ್ಯಂತರ ಬಜೆಟ್‌ ಮಂಡಿಸಿದ್ದಾರೆ. ಈಗ ಏಳನೇ ಬಾರಿಗೆ ಬಜೆಟ್‌ ಮಂಡಿಸಿದರೆ, ದೇಶದ ಇತಿಹಾಸದಲ್ಲಿಯೇ ಅತಿ ಹೆಚ್ಚು ಬಾರಿ ಬಜೆಟ್‌ ಮಂಡಿಸಿದ ಖ್ಯಾತಿಗೆ ಭಾಜನರಾಗಲಿದ್ದಾರೆ. ಮೊರಾರ್ಜಿ ದೇಸಾಯಿ ಅವರು ಆರು ಬಾರಿ ಬಜೆಟ್‌ ಮಂಡಿಸಿದ ದಾಖಲೆ ಮಾಡಿದ್ದಾರೆ. ಇದನ್ನು ನಿರ್ಮಲಾ ಸೀತಾರಾಮನ್‌ ಅವರು ಮುರಿಯಲಿದ್ದಾರೆ.

ನಿರ್ಮಲಾ ಸೀತಾರಾಮನ್‌ ಅವರು ಫೆಬ್ರವರಿ 1ರಂದು ನರೇಂದ್ರ ಮೋದಿ ನೇತೃತ್ವದ ಎರಡನೇ ಅವಧಿಯ ಕೊನೆಯ ಬಜೆಟ್‌ ಮಂಡಿಸಿದ್ದರು. ಇದು ಮಧ್ಯಂತರ ಬಜೆಟ್‌ ಆದ ಕಾರಣ ಮಹತ್ವದ ಘೋಷಣೆಗಳನ್ನು ಮಾಡಿರಲಿಲ್ಲ. ಆದರೆ, ನೂತನ ಸರ್ಕಾರ ರಚನೆಯಾಗಿದ್ದು, ಪೂರ್ಣ ಪ್ರಮಾಣದ ಬಜೆಟ್‌ ಮಂಡಿಸಲಾಗುತ್ತದೆ. ಉದ್ಯೋಗ ಸೃಷ್ಟಿ, ಬಡವರು ಹಾಗೂ ಮಧ್ಯಮ ವರ್ಗದವರಿಗೆ ಕೊಡುಗೆ, ತೆರಿಗೆ ಹೊರೆ ಇಳಿಸುವುದು ಸೇರಿ ಹಲವು ಅಂಶಗಳು ಮೂರನೇ ಅವಧಿಯ ಸರ್ಕಾರದ ಮೊದಲ ಬಜೆಟ್‌ನ ಪ್ರಮುಖ ಅಂಶಗಳಾಗಿವೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ: Union Budget 2024: ಸ್ಟಾಂಡರ್ಡ್‌ ಡಿಡಕ್ಷನ್‌, 80 ಸಿ ಮೊತ್ತ ಹೆಚ್ಚಳ; ಬಜೆಟ್‌ನಲ್ಲಿ ಏನೆಲ್ಲ ತೆರಿಗೆ ರಿಲೀಫ್?

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Kamala Harris: ಅಮೆರಿಕ ಅಧ್ಯಕ್ಷ ಸ್ಥಾನಕ್ಕೆ ಭಾರತ ಮೂಲದ ಕಮಲಾ ಹ್ಯಾರಿಸ್‌ ಹೆಸರು ಸೂಚಿಸಿದ ಜೋ ಬೈಡೆನ್!

Kamala Harris: ಅಮೆರಿಕ ಅಧ್ಯಕ್ಷನಾಗಿ ದೇಶದ ಏಳಿಗೆಗೆ ದುಡಿದಿದ್ದೇನೆ. ನಿಮ್ಮೆಲ್ಲರ ಅಧ್ಯಕ್ಷನಾಗಿ ಇಷ್ಟು ದಿನಗಳವರೆಗೆ ಸೇವೆ ಮಾಡಿದ್ದು ನನಗೆ ಖುಷಿಯಾಗಿದೆ. ಎರಡನೇ ಬಾರಿ ಆಯ್ಕೆಗೂ ನಾನು ಮನಸ್ಸು ಮಾಡಿದ್ದೆ. ಆದರೆ, ದೇಶ ಹಾಗೂ ಪಕ್ಷದ ಹಿತದೃಷ್ಟಿಯಿಂದಾಗಿ ನಾನು ಅಮೆರಿಕ ಅಧ್ಯಕ್ಷೀಯ ಚುನಾವಣೆಯಿಂದ ಹಿಂದೆ ಸರಿದಿದ್ದೇನೆ ಎಂಬುದಾಗಿ ಜೋ ಬೈಡೆನ್‌ ಅವರು ಎಕ್ಸ್‌ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿದ್ದಾರೆ. ಹಾಗೆಯೇ, ಕಮಲಾ ಹ್ಯಾರಿಸ್‌ ಅವರು ಅಧ್ಯಕ್ಷೀಯ ಅಭ್ಯರ್ಥಿಯಾಗಲಿ ಎಂದು ಅವರು ಹೇಳಿದ್ದಾರೆ.

VISTARANEWS.COM


on

Kamala Harris
Koo

ವಾಷಿಂಗ್ಟನ್:‌ ನವೆಂಬರ್‌ನಲ್ಲಿ ಅಮೆರಿಕ ಅಧ್ಯಕ್ಷೀಯ ಚುನಾವಣೆಗೆ (US Presidential Election 2024) ದಿನಾಂಕ ನಿಗದಿಯಾಗಿರುವ ಬೆನ್ನಲ್ಲೇ ಹಾಲಿ ಅಧ್ಯಕ್ಷ, ಡೆಮಾಕ್ರಟಿಕ್‌ ಪಕ್ಷದ ಜೋ ಬೈಡೆನ್‌ (Joe Biden) ಅವರು ಚುನಾವಣೆ ಸ್ಪರ್ಧೆಯಿಂದ ಹಿಂದೆ ಸರಿದಿದ್ದಾರೆ. ದೇಶ ಹಾಗೂ ಪಕ್ಷದ ಹಿತಕ್ಕಾಗಿ ಅವರು ಚುನಾವಣೆಯಿಂದ ಹಿಂದೆ ಸರಿದಿರುವುದಾಗಿ ತಿಳಿಸಿದ್ದಾರೆ. ಅಷ್ಟೇ ಅಲ್ಲ, “ಪಕ್ಷದಿಂದ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಲು ಉಪಾಧ್ಯಕ್ಷೆ ಕಮಲಾ ಹ್ಯಾರಿಸ್‌ (Kamala Harris) ಅವರು ಉತ್ತಮ ಆಯ್ಕೆ” ಎಂದು ಕೂಡ ಹೇಳಿದ್ದಾರೆ. ಆ ಮೂಲಕ ಎಲ್ಲವೂ ಅಂದುಕೊಂಡಂತೆ ಆದರೆ, ಅಮೆರಿಕಕ್ಕೆ ಭಾರತ ಮೂಲದ ಕಮಲಾ ಹ್ಯಾರಿಸ್‌ ಅವರು ಅಧ್ಯಕ್ಷೆಯಾಗಲಿದ್ದಾರೆ.

“ಡೆಮಾಕ್ರಟಿಕ್‌ ಪಕ್ಷದ ಸದಸ್ಯರು, ನಾಯಕರೇ, ನಾನು ಈಗಿನ ಅವಧಿಗೆ ಮಾತ್ರ ಅಧ್ಯಕ್ಷನಾಗಿ ಇರುತ್ತೇನೆ. ಚುನಾವಣೆ ಮರು ಸ್ಪರ್ಧೆಯಿಂದ ನಾನು ಹಿಂದೆ ಸರಿದಿದ್ದೇನೆ. ನಾನು 2020ರಲ್ಲಿ ಪಕ್ಷದ ಅಭ್ಯರ್ಥಿಯಾಗಿ ಆಯ್ಕೆಯಾದಾಗ, ಉಪಾಧ್ಯಕ್ಷರ ಸ್ಥಾನಕ್ಕೆ ಕಮಲಾ ಹ್ಯಾರಿಸ್‌ ಅವರನ್ನು ಆಯ್ಕೆ ಮಾಡಿಕೊಂಡಿದ್ದು ನನ್ನ ಮೊದಲ ಹಾಗೂ ಉತ್ತಮ ನಿರ್ಧಾರವಾಗಿತ್ತು. ಈಗಲೂ ಅಷ್ಟೇ, ಡೆಮಾಕ್ರಟಿಕ್‌ ಪಕ್ಷದಿಂದ ಕಮಲಾ ಹ್ಯಾರಿಸ್‌ ಅವರೇ ಅಧ್ಯಕ್ಷೀಯ ಅಭ್ಯರ್ಥಿಯಾಗಿ ಎಂಬುದು ನನ್ನ ಅಭಿಲಾಷೆ ಹಾಗೂ ಆಯ್ಕೆಯಾಗಿದೆ” ಎಂದು ಜೋ ಬೈಡೆನ್‌ ಪೋಸ್ಟ್‌ ಮಾಡಿದ್ದಾರೆ.

ಅಮೆರಿಕ ಅಧ್ಯಕ್ಷೀಯ ಚುನಾವಣೆಯಿಂದ ಹಿಂದೆ ಸರಿಯುವ ಕುರಿತು ಜೋ ಬೈಡೆನ್‌ ಅವರೇ ಎಕ್ಸ್‌ ಸಾಮಾಜಿಕ ಜಾಲತಾಣದಲ್ಲಿ ಸುದೀರ್ಘ ಪತ್ರದ ಮೂಲಕ ಘೋಷಿಸಿದ್ದಾರೆ. “ನಾನು ಕಳೆದ ಮೂರುವರೆ ವರ್ಷಗಳಿಂದ ಅಮೆರಿಕ ಅಧ್ಯಕ್ಷನಾಗಿ, ದೇಶದ ಏಳಿಗೆಗೆ ದುಡಿದಿದ್ದೇನೆ. ನಿಮ್ಮೆಲ್ಲರ ಅಧ್ಯಕ್ಷನಾಗಿ ಸೇವೆ ಮಾಡಿದ್ದು ನನಗೆ ಖುಷಿಯಾಗಿದೆ. ಎರಡನೇ ಬಾರಿ ಆಯ್ಕೆಗೂ ನಾನು ಮನಸ್ಸು ಮಾಡಿದ್ದೆ. ಆದರೆ, ದೇಶ ಹಾಗೂ ಪಕ್ಷದ ಹಿತದೃಷ್ಟಿಯಿಂದಾಗಿ ನಾನು ಅಮೆರಿಕ ಅಧ್ಯಕ್ಷೀಯ ಚುನಾವಣೆಯಿಂದ ಹಿಂದೆ ಸರಿದಿದ್ದೇನೆ” ಎಂದು ಅವರು ಹೇಳಿದ್ದಾರೆ.

ಜೋ ಬೈಡೆನ್‌ ಅವರಿಗೆ ಇತ್ತೀಚೆಗೆ ಮರೆವು ಜಾಸ್ತಿಯಾಗಿದೆ. ಅಲ್ಲದೆ, 81 ವರ್ಷದ ಜೋ ಬೈಡೆನ್‌ ಅವರ ಮರು ಸ್ಪರ್ಧೆಗೆ ಪಕ್ಷದಲ್ಲೇ ವಿರೋಧ ವ್ಯಕ್ತವಾಗಿತ್ತು. ಜಾಗತಿಕ ವೇದಿಕೆಗಳಲ್ಲಿ ಜೋ ಬೈಡೆನ್‌ ಅವರು ಮುಜುಗರ ಅನುಭವಿಸಿದ್ದರು. ಹಾಗಾಗಿ, ಅವರೇ ಸ್ಪರ್ಧೆಯಿಂದ ಹಿಂದೆ ಸರಿಯುವ ತೀರ್ಮಾನ ತೆಗೆದುಕೊಂಡಿದ್ದಾರೆ ಎನ್ನಲಾಗಿದೆ. ಇನ್ನು, ಉಪಾಧ್ಯಕ್ಷೆ ಕಮಲಾ ಹ್ಯಾರಿಸ್‌ ಅವರೇ ಅಧ್ಯಕ್ಷ ಸ್ಥಾನದ ಅಭ್ಯರ್ಥಿಯಾಗಲಿದ್ದಾರೆ ಎಂದು ಮೊದಲಿನಿಂದಲೂ ಹೇಳಲಾಗುತ್ತಿತ್ತು. ಈಗ ಪಕ್ಷದ ಎಲ್ಲರೂ ಸಹಮತದಿಂದ ಒಪ್ಪಿದರೆ, ಚುನಾವಣೆಯಲ್ಲಿ ಗೆದ್ದರೆ, ಭಾರತ ಮೂಲದವರು ಅಮೆರಿಕ ಅಧ್ಯಕ್ಷರಾಗಲಿದ್ದಾರೆ. ಭಾರತ ಮೂಲದ ರಿಷಿ ಸುನಕ್‌ ಅವರು ಬ್ರಿಟನ್‌ ಪ್ರಧಾನಿಯಾಗಿದ್ದರು.

ಇದನ್ನೂ ಓದಿ: Joe Biden: ಅಮೆರಿಕ ಅಧ್ಯಕ್ಷೀಯ ಚುನಾವಣೆಯಿಂದ ಹಿಂದೆ ಸರಿದ ಜೋ ಬೈಡೆನ್

Continue Reading

ದೇಶ

Mamata Banerjee: ‘ನಾನು ಕಾಫಿರ್‌ ಅಲ್ಲ’ ಎಂದ ಮಮತಾ ಬ್ಯಾನರ್ಜಿಗೆ ಬಿಜೆಪಿ ತಿರುಗೇಟು; ಏನಿದು ವಿವಾದ?

Mamata Banerjee: ಕಾಫಿರ್‌ ಎಂದರೆ ಮುಸ್ಲಿಮೇತರ ಅಥವಾ ಇಸ್ಲಾಂನಲ್ಲಿ ನಂಬಿಕೆ ಇರದವರು ಎಂಬ ಅರ್ಥವಿದೆ. ಹಾಗಾಗಿ, ಮಮತಾ ಬ್ಯಾನರ್ಜಿ ಅವರು ನಾನು ಕಾಫಿರ್‌ ಅಲ್ಲ, ಹೇಡಿ ಅಲ್ಲ ಎಂಬುದಾಗಿ ಹೇಳಿರುವುದು ಈಗ ಭಾರಿ ವಿವಾದಕ್ಕೆ ಕಾರಣವಾಗಿದೆ. ಬಿಜೆಪಿಯ ಹಲವು ನಾಯಕರು ಮಮತಾ ಬ್ಯಾನರ್ಜಿ ಅವರ ಹೇಳಿಕೆಯನ್ನು ಟೀಕಿಸಿದ್ದಾರೆ.

VISTARANEWS.COM


on

Mamata Banerjee
Koo

ನವದೆಹಲಿ: ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ (Mamata Banerjee) ಅವರು ನೀಡಿದ ಒಂದು ಹೇಳಿಕೆ ಈಗ ಭಾರಿ ವಿವಾದಕ್ಕೆ ಕಾರಣವಾಗಿದೆ. ಇದು ಬಿಜೆಪಿ ಆಕ್ರೋಶಕ್ಕೂ ಗುರಿಯಾಗಿದೆ. “ನಾನು ಕಾಫಿರ್‌ ಅಲ್ಲ” ಎಂದು ಮಮತಾ ಬ್ಯಾನರ್ಜಿ ಅವರು ಹೇಳಿದ್ದು, ಇದಕ್ಕೆ ಬಿಜೆಪಿ ನಾಯಕ ಅಮಿತ್‌ ಮಾಳವಿಯ (Amit Malviya) ಅವರು ತಿರುಗೇಟು ನೀಡಿದ್ದು, “ಸಾಮಾಜಿಕ ಸಾಮರಸ್ಯವನ್ನು ಮಮತಾ ಬ್ಯಾನರ್ಜಿ ಅವರು ಹಾಳು ಮಾಡುತ್ತಿದ್ದಾರೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕಾಫಿರ್‌ ಎಂದರೆ ಮುಸ್ಲಿಮೇತರ ಅಥವಾ ಇಸ್ಲಾಂನಲ್ಲಿ ನಂಬಿಕೆ ಇರದವರು ಎಂಬ ಅರ್ಥವಿದೆ. ಸಮಾವೇಶವೊಂದರಲ್ಲಿ ಮಾತನಾಡಿದ ಮಮತಾ ಬ್ಯಾನರ್ಜಿ, “ಯಾರು ಹೆದರುತ್ತಾರೋ, ಅವರು ಸಾಯುತ್ತಾರೆ. ನಾನು ಕಾಫಿರ್‌ ಅಲ್ಲ. ನಾನು ದೇಶದ್ರೋಹಿ ಅಲ್ಲ” ಎಂಬುದಾಗಿ ಅವರು ಹೇಳಿದ್ದರು. ಅಷ್ಟೇ ಅಲ್ಲ, “ನಾನು ಪಶ್ಚಿಮ ಬಂಗಾಳದ ಸಂಬಂಧವು ಭಾರತದ ಜತೆ ಉತ್ತಮವಾಗಿರಲಿ ಎಂದೇ ಬಯಸುತ್ತೇನೆ. ಅಖಿಲೇಶ್‌ ಯಾದವ್‌ ಅವರು ಇಲ್ಲಿಗೆ ಬಂದರು, ಅವರಿಗೆ ನಾನು ಧನ್ಯವಾದ ತಿಳಿಸುತ್ತೇನೆ” ಎಂದಿದ್ದಾರೆ. ಹಾಗಾಗಿ, “ಪಶ್ಚಿಮ ಬಂಗಾಳವು ಭಾರತದ ಭಾಗವಲ್ಲವೇ? ಅದೊಂದು ಪ್ರತ್ಯೇಕ ದೇಶವೇ” ಎಂಬುದಾಗಿ ಬಿಜೆಪಿಯ ಶೆಹಜಾದ್‌ ಪೂನಾವಾಲಾ ಅವರು ಪ್ರಶ್ನಿಸಿದ್ದಾರೆ.

ಅಮಿತ್‌ ಮಾಳವೀಯ ವಾದ ಹೀಗಿದೆ…

“ನಾನು ಕಾಫಿರ್‌ ಅಲ್ಲ ಎಂಬುದಾಗಿ ಮಮತಾ ಬ್ಯಾನರ್ಜಿ ಅವರು ಹೇಳಿದ್ದಾರೆ. ಆ ಮೂಲಕ ಅವರು ಕಾಫಿರರು ಹೇಡಿಗಳು ಎಂಬಂತೆ ಮಮತಾ ಬ್ಯಾನರ್ಜಿ ಬಿಂಬಿಸಿದ್ದಾರೆ. ಕೆಲ ದಿನಗಳ ಹಿಂದಷ್ಟೇ ಅವರು ಕೋಲ್ಕೊತಾ ಮೇಯರ್‌ ಪಕ್ಕದಲ್ಲಿ ಕೂತು, ಎಲ್ಲರೂ ಇಸ್ಲಾಂ ಧರ್ಮಕ್ಕೆ ಮತಾಂತರಗೊಳ್ಳಬೇಕು ಎಂಬುದಾಗಿ ಕರೆ ನೀಡಿದ್ದರು. ಅಷ್ಟೇ ಅಲ್ಲ, ಅವರು ಬಹಿರಂಗವಾಗಿಯೇ ಮುಸ್ಲಿಮೇತರರ ವಿರುದ್ಧ ಮಾತನಾಡುತ್ತಿದ್ದಾರೆ. ತೃಣಮೂಲ ಕಾಂಗ್ರೆಸ್‌ ಪಕ್ಷವು ದೇಶದ ಸಾಮಾಜಿಕ ಸಾಮರಸ್ಯವನ್ನೇ ಹಾಳು ಮಾಡುತ್ತಿದೆ” ಎಂದು ಅಮಿತ್‌ ಮಾಳವೀಯ ಹೇಳಿದ್ದಾರೆ.

“ಪಶ್ಚಿಮ ಬಂಗಾಳವು ಭಾರತದ ಅವಿಭಾಜ್ಯ ಅಂಗವಾಗಿದೆ. ಇದನ್ನು ಮಮತಾ ಬ್ಯಾನರ್ಜಿ ಅವರು ಅರ್ಥ ಮಾಡಿಕೊಳ್ಳಬೇಕು. ಲಕ್ಷಾಂತರ ಹಿಂದು ಬೆಂಗಾಲಿಗಳು ತಾಯ್ನಾಡಿಗಾಗಿ ಹೋರಾಟ ಮಾಡಿದ್ದಾರೆ. ಹಾಗಾಗಿ, ಮಮತಾ ಬ್ಯಾನರ್ಜಿ ಅವರು ಪಶ್ಚಿಮ ಬಂಗಾಳವನ್ನು, ಆ ರಾಜ್ಯದ ಜನರನ್ನು ಕಡೆಗಣಿಸಿ ಮಾತನಾಡಬಾರದು. ಒಬ್ಬ ಮುಖ್ಯಮಂತ್ರಿಯಾಗಿ ಈ ರೀತಿಯ ದೇಶದ್ರೋಹದ ಮಾತುಗಳನ್ನು ಆಡಬಾರದು. ಇಂತಹ ರಾಜಕೀಯ ಮೇಲಾಟಗಳ ಮೂಲಕ ಅವರು ಗದ್ದುಗೆ ಏರುತ್ತೇನೆ ಎಂಬ ಕನಸು ಕಾಣುತ್ತಿದ್ದಾರೆ. ಆದರೆ ಅದು ಕೈಗೂಡುವುದಿಲ್ಲ” ಎಂದು ಅಮಿತ್‌ ಮಾಳವೀಯ ತಿರುಗೇಟು ನೀಡಿದ್ದಾರೆ.

ಇದನ್ನೂ ಓದಿ: Viral Video: ಪ.ಬಂಗಾಳದಲ್ಲಿ ಮತ್ತೊಬ್ಬ ಮಹಿಳೆ ಮೇಲೆ ಬರ್ಬರ ಹಲ್ಲೆ; ರಾಹುಲ್ ಗಾಂಧಿ, ಮಮತಾ ಬ್ಯಾನರ್ಜಿ‌ ಮೇಲೆ ಕಿಡಿಕಾರಿದ ಜನ

Continue Reading

ದೇಶ

Vande Mataram: ಸಂಸತ್ತಿನಲ್ಲಿ ವಂದೇ ಮಾತರಂ, ಥ್ಯಾಂಕ್ಸ್‌ ಎಂದು ಹೇಳುವಂತಿಲ್ಲ; ಏಕಿಂಥ ಆದೇಶ?

Vande Mataram: ಸದನದ ಕಾರ್ಯಕಲಾಪಗಳ ಶಿಸ್ತು, ಪ್ರಕ್ರಿಯೆ ಹಾಗೂ ಶಿಷ್ಟಾಚಾರಗಳನ್ನು ಪಾಲಿಸುವ ದೃಷ್ಟಿಯಿಂದ ಹಲವು ಘೋಷಣೆಗಳನ್ನು ಸದಸ್ಯರು ಕೂಗಬಾರದು. ಥ್ಯಾಂಕ್ಸ್‌, ಥ್ಯಾಂಕ್‌ ಯು, ಜೈ ಹಿಂದ್‌, ವಂದೇ ಮಾತರಂ ಸೇರಿ ಯಾವುದೇ ಘೋಷಣೆಗಳನ್ನು ಕೂಗಬಾರದು ಎಂದು ಸದಸ್ಯರಿಗೆ ಸೂಚಿಸಲಾಗಿದೆ.

VISTARANEWS.COM


on

Vande Mataram
Koo

ನವದೆಹಲಿ: ಜುಲೈ 22ರಿಂದ ಆಗಸ್ಟ್‌ 12ರವರೆಗೆ ಸಂಸತ್‌ ಬಜೆಟ್‌ ಅಧಿವೇಶನ (Parliament Session 2024) ನಡೆಯಲಿದೆ. ಜುಲೈ 23ರಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಬಜೆಟ್‌ ಮಂಡಿಸಲಿದ್ದಾರೆ. ಕೇಂದ್ರ ಸರ್ಕಾರವು ಬಜೆಟ್‌ ಮೂಲಕ ಜನರ ಗಮನ ಸೆಳೆಯಲು ಸಜ್ಜಾಗಿದ್ದರೆ, ಬೆಲೆಯೇರಿಕೆ, ನೀಟ್‌ ಹಗರಣ ಸೇರಿ ಹಲವು ವಿಷಯಗಳನ್ನು ಪ್ರಸ್ತಾಪಿಸಿ, ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಲು ಮುಂದಾಗಿವೆ. ಇದರ ಬೆನ್ನಲ್ಲೇ, ಅಧಿವೇಶನದ ವೇಳೆ ವಂದೇ ಮಾತರಂ, ಜೈ ಹಿಂದ್‌ ಸೇರಿ ಹಲವು ಘೋಷಣೆಗಳನ್ನು ಕೂಗದಂತೆ ಉಭಯ ಸದನಗಳ ಸದಸ್ಯರಿಗೆ ಸೂಚಿಸಲಾಗಿದೆ.

ಘೋಷಣೆಗಳನ್ನು ಕೂಗಬಾರದು ಎಂದು ರಾಜ್ಯಸಭೆಯ ಸಭಾಧ್ಯಕ್ಷರು ಜುಲೈ 15ರಂದೇ ಬುಲೆಟಿನ್‌ ಹೊರಡಿಸಿದ್ದಾರೆ. “ಸದನದ ಕಾರ್ಯಕಲಾಪಗಳ ಶಿಸ್ತು, ಪ್ರಕ್ರಿಯೆ ಹಾಗೂ ಶಿಷ್ಟಾಚಾರಗಳನ್ನು ಪಾಲಿಸುವ ದೃಷ್ಟಿಯಿಂದ ಹಲವು ಘೋಷಣೆಗಳನ್ನು ಸದಸ್ಯರು ಕೂಗಬಾರದು. ಥ್ಯಾಂಕ್ಸ್‌, ಥ್ಯಾಂಕ್‌ ಯು, ಜೈ ಹಿಂದ್‌, ವಂದೇ ಮಾತರಂ ಸೇರಿ ಯಾವುದೇ ಘೋಷಣೆಗಳನ್ನು ಕೂಗಬಾರದು. ಅಧಿವೇಶನ ನಡೆಯುವಾಗ ಸದನದ ಒಳಗೆ ಹಾಗೂ ಸಂಸತ್‌ ಆವರಣದಲ್ಲಿಯೂ ಘೋಷಣೆಗಳನ್ನು ಕೂಗುವಂತಿಲ್ಲ” ಎಂದು ಸದಸ್ಯರಿಗೆ ಸೂಚಿಸಲಾಗಿದೆ.

Parliament Security

ಹೊಸ ದಾಖಲೆ ಬರೆಯಲಿದ್ದಾರೆ ನಿರ್ಮಲಾ

ನಿರ್ಮಲಾ ಸೀತಾರಾಮನ್‌ ಅವರು ಇದೇ ತಿಂಗಳು ಪೂರ್ಣಪ್ರಮಾಣದ ಬಜೆಟ್‌ ಮಂಡಿಸಿದರೆ ಹೊಸ ದಾಖಲೆ ಬರೆಯಲಿದ್ದಾರೆ. ಇದುವರೆಗೆ ನಿರ್ಮಲಾ ಸೀತಾರಾಮನ್‌ ಅವರು ಹಣಕಾಸು ಸಚಿವೆಯಾಗಿ ಐದು ಪೂರ್ಣ ಪ್ರಮಾಣದ ಹಾಗೂ ಒಂದು ಮಧ್ಯಂತರ ಬಜೆಟ್‌ ಮಂಡಿಸಿದ್ದಾರೆ. ಈಗ ಏಳನೇ ಬಾರಿಗೆ ಬಜೆಟ್‌ ಮಂಡಿಸಿದರೆ, ದೇಶದ ಇತಿಹಾಸದಲ್ಲಿಯೇ ಅತಿ ಹೆಚ್ಚು ಬಾರಿ ಬಜೆಟ್‌ ಮಂಡಿಸಿದ ಖ್ಯಾತಿಗೆ ಭಾಜನರಾಗಲಿದ್ದಾರೆ. ಮೊರಾರ್ಜಿ ದೇಸಾಯಿ ಅವರು ಆರು ಬಾರಿ ಬಜೆಟ್‌ ಮಂಡಿಸಿದ ದಾಖಲೆ ಮಾಡಿದ್ದಾರೆ. ಇದನ್ನು ನಿರ್ಮಲಾ ಸೀತಾರಾಮನ್‌ ಅವರು ಮುರಿಯಲಿದ್ದಾರೆ.

ಹಾಗೆಯೇ, ಬಜೆಟ್‌ನಲ್ಲಿ ತೆರಿಗೆ ವಿನಾಯಿತಿ ಸೇರಿ ಹಲವು ನಿರೀಕ್ಷೆಗಳನ್ನು ಜನ ಇಟ್ಟುಕೊಂಡಿದ್ದಾರೆ. “ಬಜೆಟ್‌ನಲ್ಲಿ ಕೇಂದ್ರ ಸರ್ಕಾರವು ಹೊಸ ತೆರಿಗೆ ಸ್ಲ್ಯಾಬ್‌ ಘೋಷಣೆ ಮಾಡುತ್ತದೆ. ಆದಾಯ ತೆರಿಗೆ ವಿನಾಯಿತಿ ಮಿತಿಯನ್ನು 5 ಲಕ್ಷ ರೂ.ಗೆ ಏರಿಸುವ ಜತೆಗೆ, 15 ಲಕ್ಷ ರೂ.ಗಿಂತ ಹೆಚ್ಚಿನ ಆದಾಯ ಗಳಿಸುವವರಿಗೆ ಹಲವು ರೀತಿಯ ಡಿಡಕ್ಷನ್‌ಗಳ ಮೂಲಕ ತೆರಿಗೆ ಹೊರೆಯನ್ನು ಕಡಿಮೆ ಮಾಡಿಕೊಳ್ಳಬಹುದಾಗಿದೆ” ಎಂದು ಉನ್ನತ ಮೂಲಗಳು ತಿಳಿಸಿವೆ. ಅಷ್ಟೇ ಅಲ್ಲ, 15 ಲಕ್ಷ ರೂ.ಗಿಂತ ಹೆಚ್ಚಿನ ಆದಾಯ ಇರುವವರಿಗೆ ಈಗ ಇರುವ ಶೇ.30ರ ತೆರಿಗೆ ಬದಲು ಶೇ.25ರಷ್ಟು ತೆರಿಗೆ ವಿಧಿಸಲಾಗುತ್ತದೆ. ಇದು ಕೂಡ ಹೊಸ ಸ್ಲ್ಯಾಬ್‌ನಲ್ಲಿ ಇರಲಿದೆ ಎಂದು ಹೇಳಲಾಗುತ್ತಿದೆ. ಹಳೆಯ ತೆರಿಗೆ ಪದ್ಧತಿಯಲ್ಲಿ 2.5 ಲಕ್ಷ ರೂ.ವರೆಗೆ ತೆರಿಗೆ ವಿನಾಯಿತಿ ಇದ್ದು, ಈ ಮೊತ್ತವನ್ನು 5 ಲಕ್ಷ ರೂ.ಗೆ ಏರಿಕೆ ಮಾಡಲಾಗುತ್ತದೆ ಎನ್ನಲಾಗುತ್ತಿದೆ. ಇವುಗಳ ಜತೆಗೆ ನೌಕರರ ಮನೆ ಬಾಡಿಗೆ ಭತ್ಯೆ (HRA) ಹಾಗೂ 80 ಟಿಟಿಎ ಅಡಿಯಲ್ಲಿ ಮೊತ್ತವನ್ನು 10 ಸಾವಿರ ರೂ.ನಿಂದ 50 ಸಾವಿರ ರೂ.ಗೆ ಏರಿಕೆ ಮಾಡುವುದು ಸೇರಿ ಹಲವು ನಿರೀಕ್ಷೆಗಳಿವೆ.

ಇದನ್ನೂ ಓದಿ: Mahua Moitra: ಸುಮ್ನೆ ಕೂತ್ಕೊಳ್ಳಿ ರಾಹುಲ್‌ ಗಾಂಧಿ; ಸಂಸತ್ತಲ್ಲೇ ಮಹುವಾ ಮೊಯಿತ್ರಾ ಹೀಗೆ ಸಿಟ್ಟಾಗಿದ್ದೇಕೆ?

Continue Reading

ದೇಶ

Kanwar Yatra: ನೇಮ್‌ಪ್ಲೇಟ್‌ ಅಳವಡಿಕೆಗೆ ಆದೇಶ ಪ್ರಶ್ನಿಸಿ ಅರ್ಜಿ; ಸುಪ್ರೀಂ ಕೋರ್ಟ್‌ನಲ್ಲಿ ನಾಳೆ ವಿಚಾರಣೆ

Kanwar Yatra: ಯೋಗಿ ಸರ್ಕಾರ ಹೊರಡಿಸಿರುವ ಆದೇಶ ಪ್ರಶ್ನಿಸಿ ನಾಗರಿಕ ಹಕ್ಕುಗಳ ರಕ್ಷಣಾ ಸಂಘಟನೆಯ ಎನ್‌ಜಿಒವೊಂದು ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ. ನ್ಯಾಯಮೂರ್ತಿಗಳಾದ ಹೃಷಿಕೇಶ್‌ ರಾಯ್‌ ಮತ್ತು ಎಸ್‌ವಿಎನ್‌ ಭಟ್ಟಿ ಇರುವ ನ್ಯಾಯಪೀಠ ಅರ್ಜಿ ವಿಚಾರಣೆ ನಡೆಸಲಿದೆ.

VISTARANEWS.COM


on

Kanwar Yatra
Koo

ಹೊಸದಿಲ್ಲಿ: ಕನ್ವರ್ ಯಾತ್ರೆ (Kanwar Yatra) ಸಾಗುವ ಮಾರ್ಗದಲ್ಲಿನ ಹೋಟೆಲ್‌, ರೆಸ್ಟೋರೆಂಟ್‌ ಮತ್ತು ತಿನಿಸು ಮಾರಾಟಗಾರರು ತಮ್ಮ ಮಾಲೀಕರ ಹೆಸರನ್ನು ಪ್ರದರ್ಶಿಸಬೇಕು ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ (Yogi Adityanath) ಶುಕ್ರವಾರ ಆದೇಶ ಹೊರಡಿಸಿರುವುದು ಇದೀಗ ಕಾನೂನು ಸಮರಕ್ಕೆ ಕಾರಣವಾಗಿದೆ. ಸರ್ಕಾರದ ಆದೇಶ ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿ ವಿಚಾರಣೆ ನಾಳೆ ಸುಪ್ರೀಂ ಕೋರ್ಟ್‌ನಲ್ಲಿ ನಡೆಯಲಿದೆ.

ಯೋಗಿ ಸರ್ಕಾರ ಹೊರಡಿಸಿರುವ ಆದೇಶ ಪ್ರಶ್ನಿಸಿ ನಾಗರಿಕ ಹಕ್ಕುಗಳ ರಕ್ಷಣಾ ಸಂಘಟನೆಯ ಎನ್‌ಜಿಒವೊಂದು ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ. ನ್ಯಾಯಮೂರ್ತಿಗಳಾದ ಹೃಷಿಕೇಶ್‌ ರಾಯ್‌ ಮತ್ತು ಎಸ್‌ವಿಎನ್‌ ಭಟ್ಟಿ ಇರುವ ನ್ಯಾಯಪೀಠ ಅರ್ಜಿ ವಿಚಾರಣೆ ನಡೆಸಲಿದೆ.

ಕನ್ವರ್ ಯಾತ್ರೆ ಶ್ರಾವಣ ಮಾಸದಲ್ಲಿ ನಡೆಯುತ್ತದೆ. ಈ ಯಾತ್ರೆಯ ಮೂಲಕ ಶಿವಭಕ್ತರು ಹರಿದ್ವಾರದಿಂದ ಪುಣ್ಯ ತೀರ್ಥ ತಂದು ಉತ್ತರ ಪ್ರದೇಶದ ಮುಜಾಫರ್‌ನಗರದ ಮಾರ್ಗವಾಗಿ ತೆರಳುತ್ತಾರೆ. ಈ ವರ್ಷದ ಕನ್ವರ್ ಯಾತ್ರೆಯು ಜುಲೈ 22ರಂದು ಪ್ರಾರಂಭವಾಗಿ ಆಗಸ್ಟ್ 2ರವರೆಗೆ ನಡೆಯಲಿದೆ.ಕನ್ವರ್ ಯಾತ್ರೆ ಸಾಗುವ ಮಾರ್ಗದಲ್ಲಿರುವ ಹೋಟೆಲ್, ಢಾಬಾಗಳು ಮತ್ತು ಇತರ ವ್ಯಾಪಾರಿಗಳು ಮಾಲೀಕರು ಮತ್ತು ಸಿಬ್ಬಂದಿಯ ಹೆಸರನ್ನು ಕಡ್ಡಾಯವಾಗಿ ಪ್ರದರ್ಶಿಸುವಂತೆ ಉತ್ತರ ಪ್ರದೇಶದ ಮುಜಾಫರ್‌ನಗರ ಜಿಲ್ಲೆಯ ಪೊಲೀಸರು ಹೊರಡಿಸಿದ್ದ ಆದೇಶಕ್ಕೆ ಪ್ರತಿಪಕ್ಷಗಳಿಂದ ವ್ಯಾಪಕ ಟೀಕೆ ವ್ಯಕ್ತವಾದ ಒಂದು ದಿನದ ಬಳಿಕ ಈ ಬೆಳವಣಿಗೆ ನಡೆದಿದೆ.

ಕನ್ವರ್ ಯಾತ್ರೆಯಲ್ಲಿ ಪಾಲ್ಗೊಳ್ಳುವ ಭಕ್ತರ ಗೊಂದಲವನ್ನು ತಪ್ಪಿಸಲು ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಮುಜಾಫರ್‌ನಗರದ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಅಭಿಷೇಕ್ ಸಿಂಗ್ ಗುರುವಾರ ತಿಳಿಸಿದ್ದರು. ಅದಾಗ್ಯೂ ಪ್ರತಿಪಕ್ಷಗಳು ಈ ನಡೆಯನ್ನು ಖಂಡಿಸಿದ್ದವು. ಇದೀಗ ಸ್ವತಃ ಮುಖ್ಯಮಂತ್ರಿಯೇ ಈ ಆದೇಶ ಹೊರಡಿಸಿರುವುದು ಕುತೂಹಲ ಮೂಡಿಸಿದೆ.

ʼʼಧಾರ್ಮಿಕ ಯಾತ್ರಾರ್ಥಿಗಳ ಪಾವಿತ್ರ್ಯವನ್ನು ಕಾಪಾಡುವ ಉದ್ದೇಶದ ಹಿನ್ನೆಲೆಯಲ್ಲಿ ಮುಜಾಫರ್‌ನಗರ ಪೊಲೀಸರು ಈ ನಿರ್ಧಾರ ತೆಗೆದುಕೊಂಡಿದ್ದಾರೆ ಎನ್ನುವುದನ್ನು ಸಿಎಂ ಯೋಗಿ ಆದಿತ್ಯನಾಥ್‌ ಗಮನಿಸಿದರು. ಹೀಗಾಗಿ ಅವರು ರೆಸ್ಟೋರೆಂಟ್, ಹೋಟೆಲ್‌, ರಸ್ತೆಬದಿಯ ಢಾಬಾ ಅಥವಾ ಆಹಾರದ ಗಾಡಿ ಸೇರಿದಂತೆ ಪ್ರತಿಯೊಂದು ಕಡೆ ಮಾಲೀಕರ ಹೆಸರು ಮತ್ತು ವಿವರಗಳನ್ನು ಪ್ರದರ್ಶಿಸುವಂತೆ ಸೂಚಿಸಿದ್ದಾರೆʼʼ ಎಂದು ಮೂಲಗಳು ತಿಳಿಸಿವೆ.

ಇದಕ್ಕೂ ಮುನ್ನ ಉತ್ತರ ಪ್ರದೇಶದ ಸಚಿವ ಕಪಿಲ್ ದೇವ್ ಅಗರ್ವಾಲ್ ಅವರು ಮಾತನಾಡಿ, ಮುಸ್ಲಿಂ ಮಾರಾಟಗಾರರು ಹಿಂದುಗಳಂತೆ ನಟಿಸಿ ಯಾತ್ರಾರ್ಥಿಗಳಿಗೆ ಮಾಂಸಾಹಾರವನ್ನು ಮಾರಾಟ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದರು. “ಅವರು ವೈಷ್ಣೋ ಡಾಬಾ ಭಂಡಾರ್, ಶಕುಂಭರಿ ದೇವಿ ಹೋಟೆಲ್‌ ಮತ್ತು ಶುದ್ಧ ಸಸ್ಯಾಹಾರಿ ಎಂದು ಬೋರ್ಡ್‌ ಸ್ಥಾಪಿಸಿ ಮಾಂಸಾಹಾರ ಮಾರಾಟ ಮಾಡುತ್ತಾರೆ” ಎಂದು ಅವರು ತಿಳಿಸಿದ್ದರು.

ಮುಜಾಫರ್‌ನಗರ ಪೊಲೀಸರ ಆದೇಶಕ್ಕೆ ಕಿಡಿ ಕಾರಿದ ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್, “ಕನ್ವರ್ ಯಾತ್ರೆಯ ಉದ್ದಕ್ಕೂ ಇರುವ ಹೊಟೇಲ್‌ಗಳಲ್ಲಿ ಮಾಲೀಕರು ಮತ್ತು ಸಿಬ್ಬಂದಿಯ ಹೆಸರನ್ನು ಪ್ರದರ್ಶಿಸಬೇಕೆಂಬ ಉತ್ತರ ಪ್ರದೇಶ ಪೊಲೀಸರು ನೀಡಿರುವ ಆದೇಶವು ‘ಸಾಮಾಜಿಕ ಅಪರಾಧ’. ಜನರ ನಡುವಿನ ಸಾಮರಸ್ಯವನ್ನು ಕೆಡಿಸಲು ಇಂತಹ ಆದೇಶಗಳನ್ನು ತಹೊರಡಿಲಾಗುತ್ತಿದೆʼʼ ಎಂದು ಅವರು ಕಿಡಿಕಾರಿದ್ದಾರೆ.

ಇದನ್ನೂ ಓದಿ: Bangladesh Protests: ಸರ್ಕಾರಿ ಉದ್ಯೋಗದಲ್ಲಿನ ಶೇ. 30 ಮೀಸಲಾತಿ ಕಡಿತಗೊಳಿಸಿದ ಬಾಂಗ್ಲಾದೇಶದ ಸರ್ವೋಚ್ಚ ನ್ಯಾಯಾಲಯ

Continue Reading
Advertisement
Kamala Harris
ಪ್ರಮುಖ ಸುದ್ದಿ59 mins ago

Kamala Harris: ಅಮೆರಿಕ ಅಧ್ಯಕ್ಷ ಸ್ಥಾನಕ್ಕೆ ಭಾರತ ಮೂಲದ ಕಮಲಾ ಹ್ಯಾರಿಸ್‌ ಹೆಸರು ಸೂಚಿಸಿದ ಜೋ ಬೈಡೆನ್!

Joe Biden
ವಿದೇಶ1 hour ago

Joe Biden: ಅಮೆರಿಕ ಅಧ್ಯಕ್ಷೀಯ ಚುನಾವಣೆಯಿಂದ ಹಿಂದೆ ಸರಿದ ಜೋ ಬೈಡೆನ್;‌ ಕಮಲಾ ಹ್ಯಾರಿಸ್‌ಗೆ ಚಾನ್ಸ್?

Hubballi News
ಕರ್ನಾಟಕ2 hours ago

Hubballi News: ಹುಬ್ಬಳ್ಳಿಯಲ್ಲಿ ಮತ್ತೆ ಹರಿಯಿತು ನೆತ್ತರು; ಚಾಕು ಇರಿದು ದೇಗುಲದ ಪೂಜಾರಿಯ ಕೊಲೆ

Bescom
ಕರ್ನಾಟಕ3 hours ago

ವಿದ್ಯುತ್ ಬಿಲ್‌ನಲ್ಲಿರುವ ಹೆಚ್ಚುವರಿ ಭದ್ರತಾ ಠೇವಣಿ ಕುರಿತು ಗೊಂದಲ; ಗ್ರಾಹಕರ ಪ್ರಶ್ನೆಗಳಿಗೆ ಇಲ್ಲಿದೆ ಬೆಸ್ಕಾಂ ಉತ್ತರ

Sairaj Bahutule :
ಕ್ರೀಡೆ3 hours ago

Sairaj Bahutule : ಭಾರತ ತಂಡದ ಮಧ್ಯಂತರ ಬೌಲಿಂಗ್​ ಕೋಚ್ ಆಗಿ ಸಾಯಿರಾಜ್ ಬಹುತುಲೆ ನೇಮಕ?

Harmanpreet Kaur
ಕ್ರೀಡೆ4 hours ago

Harmanpreet Kaur : ಟಿ20 ಐ ರನ್​ ಗಳಿಕೆಯಲ್ಲಿ ಸ್ಮೃತಿ ಮಂಧಾನಾ ಹಿಂದಿಕ್ಕಿದ ಹರ್ಮನ್​ಪ್ರೀತ್ ಕೌರ್​

Sameer Nigam
ಕರ್ನಾಟಕ4 hours ago

Sameer Nigam: ಕನ್ನಡಿಗರ ಕ್ಷಮೆಯಾಚಿಸಿದ PhonePe ಸಿಇಒ ಸಮೀರ್‌ ನಿಗಮ್‌; ಬಾಯ್ಕಾಟ್‌ ಪೆಟ್ಟಿಗೆ ಥಂಡಾ

Ankola landslide
ಕರ್ನಾಟಕ4 hours ago

Ankola landslide: ಉತ್ತರ ಕನ್ನಡದ ರಾ. ಹೆದ್ದಾರಿ; ಕಾಮಗಾರಿ ಮುಗಿಸದೆ ಟೋಲ್ ಸಂಗ್ರಹ ಏಕೆ? ಗುತ್ತಿಗೆದಾರ ಕಂಪನಿಗೆ ಸಿಎಂ ತರಾಟೆ

Mamata Banerjee
ದೇಶ4 hours ago

Mamata Banerjee: ‘ನಾನು ಕಾಫಿರ್‌ ಅಲ್ಲ’ ಎಂದ ಮಮತಾ ಬ್ಯಾನರ್ಜಿಗೆ ಬಿಜೆಪಿ ತಿರುಗೇಟು; ಏನಿದು ವಿವಾದ?

Joe Root
ಪ್ರಮುಖ ಸುದ್ದಿ4 hours ago

Joe Root : ವೆಸ್ಟ್​ ಇಂಡೀಸ್ ವಿರುದ್ಧ ಶತಕ ಬಾರಿಸಿ ಸ್ಟೀವ್​ ವಾ ದಾಖಲೆ ಸರಿಗಟ್ಟಿದ ಜೋ ರೂಟ್​

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Rain
ಮಳೆ1 day ago

Karnataka Rain : ಭಾರಿ ಮಳೆಗೆ ಮನೆ ಗೋಡೆ ಕುಸಿತ; ಕೊಟ್ಟಿಗೆಯಲ್ಲಿದ್ದ ಜಾನುವಾರುಗಳು ಸಾವು

karnataka Rain
ಮಳೆ2 days ago

Karnataka Rain : ಹಳ್ಳ ದಾಟಲು ಹೋಗಿ ನೀರುಪಾಲಾದ ಜಾನುವಾರು; ಬಿರುಗಾಳಿಗೆ ಕಳಚಿದ ವಿಂಡ್‌ ಫ್ಯಾನ್‌

karnataka Rain
ಮಳೆ2 days ago

Karnataka Rain : ಬೀದಿಗೆ ತಂದ ರಣಮಳೆ; ಮನೆ ಕುಸಿದು ಬಿದ್ದು 9 ತಿಂಗಳ ಗರ್ಭಿಣಿ ನರಳಾಟ

Karnataka Rain
ಮಳೆ3 days ago

Karnataka Rain : ರಾಜ್ಯದಲ್ಲಿ ಮಳೆಯ ಆರ್ಭಟ; ರಾತ್ರಿ ಕಳೆದು ಬೆಳಗಾಗುವುದರೊಳಗೆ ಕಂದಕ ನಿರ್ಮಾಣ

Karnataka Rain
ಮಳೆ3 days ago

Karnataka Rain : ಭಾರಿ ಮಳೆ ಎಫೆಕ್ಟ್‌; ಉಕ್ಕಿ ಹರಿಯುತ್ತಿದ್ದ ನದಿಯಲ್ಲಿ ಕೊಚ್ಚಿ ಹೋದ ರಾಸು

Uttara Kannada Landslide
ಮಳೆ3 days ago

Uttara Kannada Landslide: ಶಿರೂರು ಗುಡ್ಡ ಕುಸಿತ; ಅಖಾಡಕ್ಕಿಳಿದ ಜಿಯೊಲಾಜಿಕಲ್ ಸರ್ವೆ ಆಫ್ ಇಂಡಿಯಾ ಟೀಂ

Karnataka Rain
ಮಳೆ5 days ago

Karnataka Rain : ಕಾರವಾರದಲ್ಲಿ ಮಳೆ ಅವಾಂತರ; ಮನೆ ಮೇಲೆ ಗುಡ್ಡ ಕುಸಿದು ವೃದ್ಧ ಸಾವು

karnataka Rain
ಮಳೆ6 days ago

Karnataka Rain : ಭಾರಿ ಮಳೆಗೆ ನಿಯಂತ್ರಣ ತಪ್ಪಿ ಕೆರೆಗೆ ಉರುಳಿ ಬಿದ್ದ ಕಾರು; ನಾಲ್ವರು ಪ್ರಾಣಾಪಾಯದಿಂದ ಪಾರು

karnataka Weather Forecast
ಮಳೆ6 days ago

Karnataka Weather : ವ್ಯಾಪಕ ಮಳೆ ಎಚ್ಚರಿಕೆ; ನಾಳೆಯೂ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

karnataka Rain
ಮಳೆ7 days ago

Karnataka Rain : ಶಾಲಾ-ಕಾಲೇಜಿಗೆ ಈ ದಿನ ರಜಾ; ಅಬ್ಬರಿಸುತ್ತಿರುವ ಮಳೆಗೆ ಮನೆಯಲ್ಲೇ ಎಲ್ಲರೂ ಸಜಾ!

ಟ್ರೆಂಡಿಂಗ್‌