Union Budget 2024: ಕೇಂದ್ರ ಬಜೆಟ್‌ನಲ್ಲಿ ರೈಲ್ವೇ ವಲಯದ 9 ಪ್ರಮುಖ ನಿರೀಕ್ಷೆಗಳಿವು - Vistara News

ಬಜೆಟ್ 2024

Union Budget 2024: ಕೇಂದ್ರ ಬಜೆಟ್‌ನಲ್ಲಿ ರೈಲ್ವೇ ವಲಯದ 9 ಪ್ರಮುಖ ನಿರೀಕ್ಷೆಗಳಿವು

ಈ ವರ್ಷ ಮಧ್ಯಂತರ ಬಜೆಟ್‌ನಲ್ಲಿ (Union Budget 2024) ರೈಲ್ವೇ ವಲಯಕ್ಕೆ 2,52,200 ಕೋಟಿ ರೂ. ನೊಂದಿಗೆ ಹೆಚ್ಚುವರಿಯಾಗಿ 10,000 ಕೋಟಿ ರೂ. ಮೀಸಲಿಡಲಾಗಿತ್ತು. ಹಾಗಾಗಿ ಮಂಗಳವಾರ ಮಂಡನೆಯಾಗಲಿರುವ ಬಜೆಟ್ ಕುರಿತು ನಿರೀಕ್ಷೆಗಳು ಹೆಚ್ಚಾಗಿವೆ. ರೈಲ್ವೇ ವಲಯದ ಯಾವೆಲ್ಲ ಚಟುವಟಿಕೆಗಳಿಗೆ ಪ್ರೋತ್ಸಾಹ ಸಿಗಬಹುದು ಎನ್ನುವ ಮಾಹಿತಿ ಇಲ್ಲಿದೆ.

VISTARANEWS.COM


on

Union Budget 2024
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವದೆಹಲಿ: ಸಂಸತ್ತಿನಲ್ಲಿ ಬಜೆಟ್ ಅಧಿವೇಶನ (Union Budget 2024) ಇಂದು ಪ್ರಾರಂಭ ಆಗಿದ್ದು, ಎಲ್ಲರ ನಿರೀಕ್ಷೆ ಹಣಕಾಸು ಸಚಿವೆ (Finance Minister) ನಿರ್ಮಲಾ ಸೀತಾರಾಮನ್ (Nirmala Sitharaman) ಮಂಗಳವಾರ ಮಂಡಿಸಲಿರುವ ಆರ್ಥಿಕ ಬಜೆಟ್ ಮೇಲಿದೆ. ಕೇಂದ್ರ ಬಜೆಟ್ 2024-25ರ ಹಣಕಾಸು ವರ್ಷದಲ್ಲಿ ರೈಲ್ವೇಯಲ್ಲಿ (Railway Budget) ಪ್ರಯಾಣಿಕರ ಸಾಮರ್ಥ್ಯವನ್ನು ಹೆಚ್ಚಿಸಲು, ಮೂಲಸೌಕರ್ಯದಲ್ಲಿ ಸುರಕ್ಷತಾ ಕ್ರಮಗಳಿಗೆ ಹೆಚ್ಚಿನ ಒತ್ತು ನೀಡುವ ನಿರೀಕ್ಷೆ ಇದೆ. ಈ ವರ್ಷದ ಮಧ್ಯಂತರ ಬಜೆಟ್‌ನಲ್ಲಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಒಟ್ಟು ಬಜೆಟ್‌ನಲ್ಲಿ ರೈಲ್ವೆಗೆ 2,52,200 ಕೋಟಿ ರೂ. ಹಾಗೂ ಬಜೆಟ್ ಸಂಪನ್ಮೂಲಗಳಿಂದ ಹೆಚ್ಚುವರಿಯಾಗಿ 10,000 ಕೋಟಿ ರೂ. ಮೀಸಲಿಟ್ಟಿದ್ದರು.

ಕೇಂದ್ರ ರೈಲ್ವೇ ಸಚಿವ ಅಶ್ವಿನಿ ವೈಷ್ಣವ್ ಅವರು ಮುಂಬರುವ ಎರಡು ಹಣಕಾಸು ವರ್ಷಗಳಲ್ಲಿ ರಾಷ್ಟ್ರೀಯ ಸಾರಿಗೆಯಿಂದ 10,000 ಹವಾನಿಯಂತ್ರಿತವಲ್ಲದ ಕೋಚ್‌ಗಳನ್ನು ಮಾಡುವ ಯೋಜನೆಗಳ ಬಗ್ಗೆ ಇತ್ತೀಚೆಗೆ ಬಹಿರಂಗಪಡಿಸಿದ್ದರು.

ರೈಲ್ವೇ ಬಜೆಟ್‌ನಲ್ಲಿನ ಪ್ರಮುಖ ನಿರೀಕ್ಷೆಗಳು


1. ಸಂಚಾರ ಜಾಲ ವಿಸ್ತರಣೆ

ಈ ಮೂಲಕ ರೈಲು ಸಾಮರ್ಥ್ಯವನ್ನು ಹೆಚ್ಚಿಸುವ ಪ್ರಯತ್ನ ನಡೆಸಬಹುದು. ಸಾರ್ವಜನಿಕರಿಗೆ ಸೌಲಭ್ಯಗಳನ್ನು ವಿಸ್ತರಿಸಲು ಸರ್ಕಾರವು ಗಮನಾರ್ಹ ಪ್ರಮಾಣದ ಹಣವನ್ನು ಮೀಸಲಿಡುವ ಸಾಧ್ಯತೆ ಇದೆ. ಪ್ರಯಾಣಿಕರ ದಟ್ಟಣೆಯನ್ನು ಕಡಿಮೆ ಮಾಡಲು, ಅಪಘಾತಗಳನ್ನು ತಡೆಗಟ್ಟಲು ಮತ್ತು ಸಾರ್ವಜನಿಕರಿಗೆ ಅತ್ಯತ್ತಮ ಸಾರಿಗೆ ಅನುಭವವನ್ನು ಹೆಚ್ಚಿಸುವ ನಿರೀಕ್ಷೆ ಇದೆ.

2. ರೈಲ್ವೇ ಕಾರಿಡಾರ್

ಮಧ್ಯಂತರ ಬಜೆಟ್‌ನಲ್ಲಿ 11 ಲಕ್ಷ ಕೋಟಿ ರೂ. ಮೊತ್ತದ ರೈಲ್ವೆ ಕಾರಿಡಾರ್‌ಗಳನ್ನು ಸರ್ಕಾರದ ಮುಂಬರುವ ಯೋಜನೆಗಳಲ್ಲಿ ಸೇರಿಸಲಾಗುವುದು ಎಂದು ಘೋಷಿಸಲಾಗಿತ್ತು. ಪ್ರಸ್ತುತ ತಯಾರಿ ಹಂತದಲ್ಲಿರುವ ಒಟ್ಟು 400 ಯೋಜನೆಗಳನ್ನು ಈ ಬಾರಿಯ ಬಜೆಟ್ ಒಳಗೊಳ್ಳುವ ನಿರೀಕ್ಷೆ ಇದೆ.

3. ಸೌಲಭ್ಯ ಆಧುನೀಕರಣ

ಮೂಲಸೌಕರ್ಯ, ಸಾರಿಗೆ ಮತ್ತು ಲಾಜಿಸ್ಟಿಕ್ಸ್ ಪಿಡಬ್ಲ್ಯುಸಿ ಇಂಡಿಯಾದ ಪಾಲುದಾರರಾಗಿರುವ ಮನೀಷ್ ಆರ್ ಶರ್ಮಾ ಅವರ ಪ್ರಕಾರ, , ರೈಲ್ವೇ ಜಾಲವು ವಿಸ್ತಾರವಾಗಿರುವುದರಿಂದ ಸರ್ಕಾರವು ಕನಿಷ್ಠ ಐದು ವರ್ಷಗಳವರೆಗೆ ಸೌಲಭ್ಯಗಳ ಆಧುನೀಕರಣದತ್ತ ಗಮನ ಹರಿಸುವುದನ್ನು ಮುಂದುವರಿಸಬಹುದು ಎಂದು ತಿಳಿಸಿದ್ದಾರೆ.

Union Budget 2024


4. ಹೆಚ್ಚಿನ ರೈಲು ಸಂಚಾರ

ಪ್ರಯಾಣಿಕರ ವೇಟಿಂಗ್‌ ಲಿಸ್ಟ್‌ ಪ್ರಮಾಣ ಕಡಿಮೆ ಮಾಡಲು ರೈಲು ಸಂಚಾರವನ್ನು ಹೆಚ್ಚಿಸಬಹುದು. ಭಾರತೀಯ ರೈಲ್ವೆಯು 10,754 ದೈನಂದಿನ ರೈಲು ಪ್ರಯಾಣಗಳನ್ನು ನಡೆಸುತ್ತಿದೆ. ವಾರ್ಷಿಕವಾಗಿ ಸುಮಾರು 700 ಕೋಟಿ ಪ್ರಯಾಣಿಕರಿಗೆ ಸೇವೆ ಸಲ್ಲಿಸುತ್ತಿದೆ. 2030ರ ವೇಳೆಗೆ ವೇಟಿಂಗ್‌ ಲಿಸ್ಟ್‌ ಸಮಸ್ಯೆಯನ್ನು ಸಂಪೂರ್ಣವಾಗಿ ಪರಿಹರಿಸುವ ಮೂಲಕ ವಾರ್ಷಿಕ 1,000 ಕೋಟಿ ಪ್ರಯಾಣಿಕರಿಗೆ ಅವಕಾಶ ಕಲ್ಪಿಸಲು ರೈಲು ಸೇವೆಗಳನ್ನು ಹೆಚ್ಚಿಸುವ ಗುರಿಯನ್ನು ಹೊಂದಿದೆ. ಪ್ರಯಾಣಿಕರ ಕಾಯುವ ಅವಧಿ ಕಡಿಮೆ ಮಾಡುವ ಸವಾಲನ್ನು ಎದುರಿಸಲು ಕನಿಷ್ಠ ಶೇ. 30ರಷ್ಟು ಅಂದರೆ ಸುಮಾರು 3,000 ಹೆಚ್ಚುವರಿ ಟ್ರಿಪ್‌ಗಳ ಸಂಖ್ಯೆಯನ್ನು ಹೆಚ್ಚಿಸುವ ಅಗತ್ಯವಿದೆ ಎಂದು ಸಚಿವ ವೈಷ್ಣವ್ ಹೇಳಿದ್ದಾರೆ.

5. ಅಭಿವೃದ್ಧಿ ಕಾಮಗಾರಿ

ಮೆಟ್ರೋ ನೆಟ್‌ವರ್ಕ್‌ ಹೆಚ್ಚಳ, ನಮೋ ಭಾರತ್ ಕಾರಿಡಾರ್‌ಗಳ ಅಭಿವೃದ್ಧಿ, ವಂದೇ ಭಾರತ್ ರೈಲುಗಳ ವಿಸ್ತರಣೆ, ಹೈಸ್ಪೀಡ್ ಕಾರಿಡಾರ್‌ಗಳ ಸ್ಥಾಪನೆ ಮತ್ತು ಆರ್ಥಿಕ ಕಾರಿಡಾರ್‌ಗಳ ರಚನೆಗೆ ಆರ್ಥಿಕ ಸಂಪನ್ಮೂಲಗಳನ್ನು ಬಜೆಟ್ ನಲ್ಲಿ ಮೀಸಲಿಡುವ ಸಾಧ್ಯತೆ ಇದೆ.

6. ಪಿಎಲ್‌ಐ ಯೋಜನೆ

ಬಜೆಟ್‌ನಲ್ಲಿ ಈ ಬಾರಿ ಪಿಎಲ್‌ಐ ಯೋಜನೆಯ ಅಡಿಯಲ್ಲಿ ಸರ್ಕಾರವು ಸಾಮಾನ್ಯವಾಗಿ ಆಮದು ಮಾಡಿಕೊಳ್ಳುವ ಉತ್ಪನ್ನಗಳನ್ನು ತಯಾರಿಸಲು ಪ್ರೋತ್ಸಾಹ ನೀಡುವ ನೀಡಲಿದೆ.

7. ಸುರಕ್ಷತೆಗೆ ಆದ್ಯತೆ

ಕೇಂದ್ರ ಬಜೆಟ್ 2024ರಲ್ಲಿ ರೈಲ್ವೇ ವಲಯದ ಪ್ರಮುಖ ನಿರೀಕ್ಷೆಗಳಲ್ಲಿ ಸುರಕ್ಷತೆ ಪ್ರಮುಖವಾಗಿದೆ. ಇದಕ್ಕಾಗಿ ರೈಲ್ವೇಯ ಯಂತ್ರೋಪಕರಣಗಳು, ಉಪಕರಣಗಳು, ಕಟ್ಟಡ, ಆರೋಗ್ಯ ಸೌಲಭ್ಯ, ಶಿಕ್ಷಣ ಮೊದಲಾದವುಗಳ ಅಭಿವೃದ್ಧಿಗೆ ಸರ್ಕಾರವು ಹೆಚ್ಚು ಖರ್ಚು ಮಾಡುವ ನಿರೀಕ್ಷೆ ಇದೆ. ಇದರೊಂದಿಗೆ ಅಪಘಾತಗಳನ್ನು ತಡೆಯಲು ಸುರಕ್ಷತೆಗಾಗಿ ಹೆಚ್ಚಿನ ಹಣ ವಿನಿಯೋಗಿಸಬಹುದು.

ಹೊಸ ವಂದೇ ಭಾರತ್ ಮತ್ತು ಅಮೃತ್ ಭಾರತ್ ರೈಲುಗಳನ್ನು ಪ್ರಾರಂಭಿಸುವುದು, ಸರಕು ವ್ಯಾಗನ್ ಗಳನ್ನು ಹೆಚ್ಚಿಸುವುದು, ಪ್ರಯಾಣಿಕರ ವಿಭಾಗ, ದಟ್ಟಣೆಯ ನೆಟ್‌ವರ್ಕ್‌ಗಳಲ್ಲಿ ಸುರಕ್ಷಿತ ಮತ್ತು ವೇಗವಾದ ಟ್ರ್ಯಾಕ್‌ಗಳಿಗೆ ಹೆಚ್ಚಿನ ಆದ್ಯತೆ ನೀಡಬಹುದು ಎನ್ನುತ್ತಾರೆ ಬಜೆಟ್ ವಿಶ್ಲೇಷಕ ಅಜಯ್ ಬಗ್ಗಾ.


8. ಖಾಸಗಿ ಸಹಭಾಗಿತ್ವ

ಕೇಂದ್ರ ಬಜೆಟ್‌ನಲ್ಲಿ ಶೇ. 12- 15ರಷ್ಟು ಹೆಚ್ಚಿನ ಬಜೆಟ್ ಹಂಚಿಕೆಯನ್ನು ನಿರೀಕ್ಷಿಸಲಾಗಿದೆ. ಆಸ್ತಿ, ಹಣ ಗಳಿಕೆಯ ಪ್ರಯತ್ನಗಳಲ್ಲದೆ ರೈಲ್ವೆ ವಿಭಾಗದಲ್ಲಿ ಸಾರ್ವಜನಿಕ- ಖಾಸಗಿ ಭಾಗವಹಿಸುವಿಕೆ ಯೋಜನೆಗಳಿಗೆ ಉತ್ತೇಜನ ನೀಡುವ ಸಾಧ್ಯತೆ ಇದೆ.

ಇದನ್ನೂ ಓದಿ: Union Budget 2024: ಬಜೆಟ್‌ಗೂ ಮೊದಲು, ನಂತರ ಹೂಡಿಕೆ ಮಾಡುವುದು ಲಾಭವೇ? ತಜ್ಞರು ಹೇಳೋದಿಷ್ಟು

9. ರೈಲಿನ ಸಾಮರ್ಥ್ಯ ಹೆಚ್ಚಳ

ವಂದೇ ಭಾರತ್‌ ಗುಣಮಟ್ಟಕ್ಕೆ ಪೂರಕವಾಗಿ ರೈಲು ಬೋಗಿಗಳ ಸುಧಾರಣೆಗೆ ಆದ್ಯತೆ ನೀಡುವ ಸಾಧ್ಯತೆ ಇದೆ. ಆರ್ಥಿಕ ರೈಲು ಕಾರಿಡಾರ್‌ಗಳ ಮೇಲೆ ಗಮನ ಕೇಂದ್ರೀಕರಿಸುವ ನಿರೀಕ್ಷೆ ಇದೆ. ನಿಲ್ದಾಣಗಳ ಅಭಿವೃದ್ಧಿಗೆ ಬಜೆಟ್‌ನಲ್ಲಿ ಹೆಚ್ಚಿನ ಪ್ರೋತ್ಸಾಹ ಸಿಗಲಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Union Budget 2024: ನಾಳೆ ಕೇಂದ್ರ ಬಜೆಟ್;‌ ಎಷ್ಟು ಗಂಟೆಗೆ ಮಂಡನೆ? ಲೈವ್‌ ವೀಕ್ಷಣೆ ಎಲ್ಲಿ? ಇಲ್ಲಿದೆ ಮಾಹಿತಿ

Union Budget 2024: ಉದ್ಯೋಗಿಗಳು, ಬಡವರು, ಉದ್ಯಮಿಗಳಿಂದ ಹಿಡಿದು ಪ್ರತಿಯೊಬ್ಬರ ಗಮನವೂ ಕೇಂದ್ರ ಸರ್ಕಾರದ ಬಜೆಟ್‌ ಮೇಲಿದೆ. ಮಂಗಳವಾರ ಬೆಳಗ್ಗೆ 11 ಗಂಟೆಗೇ ನಿರ್ಮಲಾ ಸೀತಾರಾಮನ್‌ ಅವರು ಏಳನೇ ಬಾರಿಗೆ ಬಜೆಟ್‌ ಮಂಡಿಸಲಿದ್ದಾರೆ. ಇನ್ನು, ಬಜೆಟ್‌ನ ಪ್ರತಿಕ್ಷಣದ ಅಪ್‌ಡೇಟ್‌ಅನ್ನು ಲೈವ್‌ ವೀಕ್ಷಿಸಬಹುದಾಗಿದೆ.

VISTARANEWS.COM


on

Union Budget 2024
Koo

ನವದೆಹಲಿ: ನರೇಂದ್ರ ಮೋದಿ ನೇತೃತ್ವದ ಸತತ ಮೂರನೇ ಅವಧಿಯ ಸರ್ಕಾರದ ಮೊದಲ ಬಜೆಟ್‌ಅನ್ನು (Union Budget 2024) ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ (Nirmala Sitharaman) ಅವರು ಮಂಗಳವಾರ (ಜುಲೈ 22) ಮಂಡಿಸಲಿದ್ದಾರೆ. ಉದ್ಯೋಗಿಗಳು, ಬಡವರು, ಉದ್ಯಮಿಗಳಿಂದ ಹಿಡಿದು ಪ್ರತಿಯೊಬ್ಬರ ಗಮನವೂ ಕೇಂದ್ರ ಸರ್ಕಾರದ ಬಜೆಟ್‌ ಮೇಲಿದೆ. ಮಂಗಳವಾರ ಬೆಳಗ್ಗೆ 11 ಗಂಟೆಗೇ ನಿರ್ಮಲಾ ಸೀತಾರಾಮನ್‌ ಅವರು ಏಳನೇ ಬಾರಿಗೆ ಬಜೆಟ್‌ ಮಂಡಿಸಲಿದ್ದಾರೆ. ಇನ್ನು, ಬಜೆಟ್‌ನ ಪ್ರತಿಕ್ಷಣದ ಮಾಹಿತಿಯನ್ನು ಲೈವ್‌ ವೀಕ್ಷಣೆ ಮೂಲಕ ಪಡೆಯಬಹುದಾಗಿದೆ.

ಲೈವ್‌ ಇಲ್ಲಿ ವೀಕ್ಷಿಸಿ

ಸಂಸತ್‌ ಟಿವಿ ಜತೆಗೆ ವಿಸ್ತಾರ ನ್ಯೂಸ್‌ ಚಾನೆಲ್‌ನಲ್ಲೂ ಬೆಳಗ್ಗೆಯಿಂದಲೇ ಲೈವ್‌ ಮಾಹಿತಿ, ಕ್ಷಣ ಕ್ಷಣದ ಅಪ್‌ಡೇಟ್‌, ಬಜೆಟ್‌ ಕುರಿತ ವಿಶ್ಲೇಷಣೆ ಇರಲಿದೆ. ವಿಸ್ತಾರ ನ್ಯೂಸ್ ವೆಬ್‌ಸೈಟ್‌ನಲ್ಲೂ ಪ್ರತಿಪಕ್ಷಣದ ಮಾಹಿತಿ ಲಭ್ಯವಾಗಲಿದೆ. ಮತ್ತೊಂದೆಡೆ, ಬಜೆಟ್‌ನಲ್ಲಿ ಏನೆಲ್ಲ ಘೋಷಣೆ ಮಾಡಲಾಗುತ್ತದೆ ಎಂಬ ನಿರೀಕ್ಷೆಗಳು ಹೆಚ್ಚಾಗಿವೆ. ಮಧ್ಯಮ ವರ್ಗದವರ ಅನುಕೂಲಕ್ಕಾಗಿ ಹೊಸ ತೆರಿಗೆ (Income Tax) ಸ್ಲ್ಯಾಬ್‌ಅನ್ನು ಪರಿಚಯಿಸಲಾಗುತ್ತದೆ ಎಂದು ತಿಳಿದುಬಂದಿದೆ. ಇದರ ಜತೆಗೆ ಸ್ಟಾಂಡರ್ಡ್‌ ಡಿಡಕ್ಷನ್‌ ಮೊತ್ತವನ್ನೂ ಏರಿಕೆ ಮಾಡುವ ನಿರೀಕ್ಷೆ ಇದೆ.

ಹೊಸ ದಾಖಲೆ ಬರೆಯಲಿದ್ದಾರೆ ನಿರ್ಮಲಾ

ನಿರ್ಮಲಾ ಸೀತಾರಾಮನ್‌ ಅವರು ಇಂದು ಪೂರ್ಣಪ್ರಮಾಣದ ಬಜೆಟ್‌ ಮಂಡಿಸುವ ಮೂಲಕ ಹೊಸ ದಾಖಲೆ ಬರೆಯಲಿದ್ದಾರೆ. ಇದುವರೆಗೆ ನಿರ್ಮಲಾ ಸೀತಾರಾಮನ್‌ ಅವರು ಹಣಕಾಸು ಸಚಿವೆಯಾಗಿ ಐದು ಪೂರ್ಣ ಪ್ರಮಾಣದ ಹಾಗೂ ಒಂದು ಮಧ್ಯಂತರ ಬಜೆಟ್‌ ಮಂಡಿಸಿದ್ದಾರೆ. ಈಗ ಏಳನೇ ಬಾರಿಗೆ ಬಜೆಟ್‌ ಮಂಡಿಸಿದರೆ, ದೇಶದ ಇತಿಹಾಸದಲ್ಲಿಯೇ ಅತಿ ಹೆಚ್ಚು ಬಾರಿ ಬಜೆಟ್‌ ಮಂಡಿಸಿದ ಖ್ಯಾತಿಗೆ ಭಾಜನರಾಗಲಿದ್ದಾರೆ. ಮೊರಾರ್ಜಿ ದೇಸಾಯಿ ಅವರು ಆರು ಬಾರಿ ಬಜೆಟ್‌ ಮಂಡಿಸಿದ ದಾಖಲೆ ಮಾಡಿದ್ದಾರೆ. ಇದನ್ನು ನಿರ್ಮಲಾ ಸೀತಾರಾಮನ್‌ ಅವರು ಮುರಿಯಲಿದ್ದಾರೆ.

ನಿರ್ಮಲಾ ಸೀತಾರಾಮನ್‌ ಅವರು ಫೆಬ್ರವರಿ 1ರಂದು ನರೇಂದ್ರ ಮೋದಿ ನೇತೃತ್ವದ ಎರಡನೇ ಅವಧಿಯ ಕೊನೆಯ ಬಜೆಟ್‌ ಮಂಡಿಸಿದ್ದರು. ಇದು ಮಧ್ಯಂತರ ಬಜೆಟ್‌ ಆದ ಕಾರಣ ಮಹತ್ವದ ಘೋಷಣೆಗಳನ್ನು ಮಾಡಿರಲಿಲ್ಲ. ಆದರೆ, ನೂತನ ಸರ್ಕಾರ ರಚನೆಯಾಗಿದ್ದು, ಪೂರ್ಣ ಪ್ರಮಾಣದ ಬಜೆಟ್‌ ಮಂಡಿಸಲಾಗುತ್ತದೆ. ಉದ್ಯೋಗ ಸೃಷ್ಟಿ, ಬಡವರು ಹಾಗೂ ಮಧ್ಯಮ ವರ್ಗದವರಿಗೆ ಕೊಡುಗೆ, ತೆರಿಗೆ ಹೊರೆ ಇಳಿಸುವುದು ಸೇರಿ ಹಲವು ಅಂಶಗಳು ಮೂರನೇ ಅವಧಿಯ ಸರ್ಕಾರದ ಮೊದಲ ಬಜೆಟ್‌ನ ಪ್ರಮುಖ ಅಂಶಗಳಾಗಿವೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ: Economic Survey 2023-24: ಉದ್ಯೋಗ ಸೃಷ್ಟಿ, ಕೃಷಿ ಏಳಿಗೆ; ಬಜೆಟ್‌ಗೂ ಮುನ್ನ ಕೇಂದ್ರದಿಂದ ಮಹತ್ವದ ಸುಳಿವು

Continue Reading

ದೇಶ

Economic Survey 2023-24: ಉದ್ಯೋಗ ಸೃಷ್ಟಿ, ಕೃಷಿ ಏಳಿಗೆ; ಬಜೆಟ್‌ಗೂ ಮುನ್ನ ಕೇಂದ್ರದಿಂದ ಮಹತ್ವದ ಸುಳಿವು

Economic Survey 2023-24: ದೇಶದ ಜನ ಕುತೂಹಲದಿಂದ ಕಾಯುತ್ತಿದ್ದ ಆರ್ಥಿಕ ಸಮೀಕ್ಷೆಯನ್ನು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಸಂಸತ್‌ನಲ್ಲಿ ಮಂಡಿಸಿದ್ದಾರೆ. ಭಾರತದ ಆರ್ಥಿಕತೆ ಹೇಗಿದೆ? ಬಡ-ಮಧ್ಯಮ ವರ್ಗದವರಿಗೆ ಆಶಾದಾಯಕ ಬೆಳವಣಿಗೆಗಳು ಏನಿವೆ ಎಂಬುದರ ಕುರಿತು ಕೂಡ ಕೇಂದ್ರ ಸಚಿವೆ ಮಾಹಿತಿ ನೀಡಿದ್ದಾರೆ. ಸರ್ಕಾರದ ಆದ್ಯತೆಗಳು ಏನು ಎಂಬುದರ ಕುರಿತ ವಿವರ ಇಲ್ಲಿದೆ.

VISTARANEWS.COM


on

Economic Survey 2023-24
Koo

ನವದೆಹಲಿ: ದೇಶದ ಜನ ಕುತೂಹಲದಿಂದ ಕಾಯುತ್ತಿರುವ ಕೇಂದ್ರ ಬಜೆಟ್‌ ಮಂಡನೆಗೆ (Union Budget 2024) ಮುನ್ನಾ ದಿನವಾದ ಸೋಮವಾರ (ಜುಲೈ 22) ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ (Nirmala Sitharaman) ಅವರು ಸಂಸತ್‌ನಲ್ಲಿ ಆರ್ಥಿಕ ಸಮೀಕ್ಷಾ (Economic Survey 2023-24) ವರದಿಯನ್ನು ಮಂಡಿಸಿದ್ದಾರೆ. ದೇಶದ ಆರ್ಥಿಕತೆ ಸುಭದ್ರವಾಗಿದೆ ಎಂದು ಸಮೀಕ್ಷೆಯಲ್ಲಿ ಉಲ್ಲೇಖಿಸಲಾಗಿದೆ. ಇನ್ನು, ಮುಂದಿನ ದಿನಗಳಲ್ಲಿ ದೇಶದಲ್ಲಿ ಉದ್ಯೋಗ ಸೃಷ್ಟಿ, ಕೃಷಿಗೆ ಆದ್ಯತೆ ಹಾಗೂ ಕೌಶಲ ಅಭಿವೃದ್ಧಿಗೆ ಒತ್ತು ನೀಡುವುದಾಗಿ ಕೇಂದ್ರ ಸರ್ಕಾರ ತಿಳಿಸಿದೆ.

ಉದ್ಯೋಗ ಸೃಷ್ಟಿಗೆ ಆದ್ಯತೆ

2024-25ನೇ ಸಾಲಿನಲ್ಲಿ ಉದ್ಯೋಗ ಸೃಷ್ಟಿಗೆ ಆದ್ಯತೆ ನೀಡಲಾಗುವುದು ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಹೇಳಿದ್ದಾರೆ. ಆರ್ಥಿಕ ಸಮೀಕ್ಷೆ ಪ್ರಕಾರ, ಉದ್ಯೋಗ ಸೃಷ್ಟಿಯ ಪ್ರಮಾಣ ಏರಿಕೆಯಾಗಿದೆ. ದೇಶದಲ್ಲಿ ಪ್ರಸ್ತುತ 56.5 ಕೋಟಿ ಉದ್ಯೋಗಿಗಳಿದ್ದು, ಕೃಷಿ ಕ್ಷೇತ್ರದಲ್ಲಿಯೇ ಶೇ.45ರಷ್ಟು ಜನ ತೊಡಗಿದ್ದಾರೆ. ಇನ್ನು ಶೇ.11.4ರಷ್ಟು ಜನ ಉತ್ಪಾದನೆ, ಶೇ.28.9 ಮಂದಿ ಸೇವೆಗಳು ಹಾಗೂ ಶೇ.13ರಷ್ಟು ಜನ ನಿರ್ಮಾಣ ಕ್ಷೇತ್ರದಲ್ಲಿ ತೊಡಗಿಕೊಂಡಿದ್ದಾರೆ. ಮುಂದಿನ ದಿನಗಳಲ್ಲೂ ಉದ್ಯೋಗ ಸೃಷ್ಟಿಗೆ ಆದ್ಯತೆ ನೀಡಲಾಗುವುದು ಎಂದು ಸರ್ಕಾರ ತಿಳಿಸಿದೆ.

ಕೌಶಲ ವೃದ್ಧಿಗೆ ಪ್ರಾಮುಖ್ಯತೆ

ಆರ್ಥಿಕ ಸಮೀಕ್ಷೆಯ ವರದಿಯನ್ನು ಅವಲೋಕಿಸಿ ದೇಶಾದ್ಯಂತ ಕೌಶಲ ವೃದ್ಧಿಗೆ ಇನ್ನಷ್ಟು ಪ್ರಾಮುಖ್ಯತೆ ನೀಡುವುದಾಗಿ ಕೇಂದ್ರ ಸರ್ಕಾರ ತಿಳಿಸಿದೆ. ದೇಶದಲ್ಲಿ 35 ವರ್ಷಕ್ಕಿಂತ ಕಡಿಮೆ ವಯಸ್ಸಿನವರ ಪ್ರಮಾಣವು ಶೇ.65ರಷ್ಟಿದೆ. ಹಾಗಾಗಿ, ಆಧುನಿಕ ಆರ್ಥಿಕತೆಯ ಸೃಜನೆಗೆ ಯುವಕರಿಗೆ ಕೌಶಲ ಅಭಿವೃದ್ಧಿಯು ಪ್ರಮುಖವಾಗಿದೆ. ಕಳೆದ ಒಂದು ದಶಕದಲ್ಲಿ ಶೇ.34ರಿಂದ ಶೇ.51.3ಕ್ಕೆ ಕೌಶಲ ವೃದ್ಧಿ ಪ್ರಮಾಣ ಏರಿಕೆಯಾಗಿದೆ. ಇದಕ್ಕೆ ಇನ್ನಷ್ಟು ಒತ್ತು ನೀಡಲಾಗುವುದು ಎಂದು ಸರ್ಕಾರ ತಿಳಿಸಿದೆ.

ಕೃಷಿ ಕ್ಷೇತ್ರದ ಏಳಿಗೆಗೆ ಒತ್ತು

ದೇಶದ ಆರ್ಥಿಕತೆಗೆ ಬಹುಮುಖ್ಯ ಪಾತ್ರ ವಹಿಸುವ ಕೃಷಿ ಕ್ಷೇತ್ರದ ಅಭಿವೃದ್ಧಿಗೆ ಒತ್ತು ನೀಡಲಾಗುವುದು ಎಂದು ಕೇಂದ್ರ ಸರ್ಕಾರ ತಿಳಿಸಿದೆ. ರೈತರ ಬೆಳೆಗಳಿಗೆ ಬೆಂಬಲ ಬೆಲೆ, ಕೃಷಿ ಉತ್ಪಾದನೆ ಹೆಚ್ಚಳ, ಉದ್ಯೋಗ ಸೃಷ್ಟಿ, ವಿವಿಧ ಬೆಳೆಗಳನ್ನು ಬೆಳೆಯಲು ಉತ್ತೇಜನ, ಆಧುನಿಕ ತಂತ್ರಜ್ಞಾನದ ಅಳವಡಿಕೆ, ಆಧುನಿಕ ಕೃಷಿಗಾಗಿ ಕೌಶಲ ವೃದ್ಧಿ, ಸಾವಯವ ಗೊಬ್ಬರದ ಬಳಕೆಗೆ ಪ್ರೋತ್ಸಾಹ ಸೇರಿ ಹಲವು ದಿಸೆಯಲ್ಲಿ ಸರ್ಕಾರವು ಕೃಷಿ ಅಭಿವೃದ್ಧಿಗೆ ಶ್ರಮಿಸುತ್ತದೆ ಎಂದು ನಿರ್ಮಲಾ ಸೀತಾರಾಮನ್‌ ಹೇಳಿದ್ದಾರೆ.

ಕೃಷಿ, ಉದ್ಯೋಗ ಸೃಷ್ಟಿಯ ಜತೆಗೆ ಸಣ್ಣ, ಅತಿ ಸಣ್ಣ ಹಾಗೂ ಮಧ್ಯಮ ಶ್ರೇಣಿ ಉದ್ಯಮಗಳಿಗೆ (MSME) ಪ್ರೋತ್ಸಾಹ, ಆರ್ಥಿಕ ನೆರವು, ಪರಿಸರ ಮಾಲಿನ್ಯ, ಹವಾಮಾನ ಬದಲಾವಣೆ ನಿಯಂತ್ರಣ, ಸುಸ್ಥಿರ ಅಭಿವೃದ್ಧಿಗೆ ತೆಗೆದುಕೊಳ್ಳಬೇಕಾದ ಕ್ರಮಗಳ ಕುರಿತು ಗಮನ ಹರಿಸುವುದು ಸೇರಿ ಕೇಂದ್ರ ಸರ್ಕಾರವು ಹಲವು ನಿರ್ಧಾರಗಳನ್ನು ಘೋಷಣೆ ಮಾಡಿದೆ. ಇವುಗಳನ್ನು ಬಜೆಟ್‌ನಲ್ಲಿ ಹೇಗೆ ಸಾಕಾರಗೊಳಿಸುತ್ತದೆ ಎಂಬುದು ಈಗ ಕುತೂಹಲ ಕೆರಳಿಸಿದೆ.

ಆರ್ಥಿಕ ಸಮೀಕ್ಷೆಯ ಹೈಲೈಟ್ಸ್‌….

  • ಪ್ರಸಕ್ತ ಸಾಲಿನಲ್ಲಿ ಉತ್ತಮ ಮುಂಗಾರು, ನೀತಿ-ನಿರೂಪಣೆಗಳ ಬದಲಾವಣೆ ಇಲ್ಲದ ಕಾರಣ 2024-25ನೇ ಹಣಕಾಸು ವರ್ಷದಲ್ಲಿ ದೇಶದ ಹಣದುಬ್ಬರ ಪ್ರಮಾಣವು ಶೇ.4.5ರಿಂದ ಶೇ.4.1ಕ್ಕೆ ಇಳಿಕೆಯಾಗಲಿದೆ ಎಂಬುದಾಗಿ ಆರ್‌ಬಿಐ ಉಲ್ಲೇಖಿಸಿದೆ. ಅಂತಾರಾಷ್ಟ್ರೀಯ ಹಣಕಾಸು ಸಂಸ್ಥೆ (IMF) ವರದಿ ಕೂಡ ಹಣದುಬ್ಬರವು ಶೇ.4.2ಕ್ಕೆ ಇಳಿಯಲಿದೆ ಎಂಬುದಾಗಿ ತಿಳಿಸಿದೆ. ಇದರಿಂದಾಗಿ ದೇಶದ ಜನರ ಮೇಲಿನ ಹೊರೆ ಕಡಿಮೆಯಾಗಲಿದೆ.
  • ಕೊರೊನಾ ಬಿಕ್ಕಟ್ಟಿನ ನಂತರ ಭಾರತದ ಆರ್ಥಿಕ ಚಟುವಟಿಕೆಗಳು ಗರಿಗೆದರಿವೆ. ಇದರಿಂದಾಗಿ ದೇಶದ ವಿತ್ತೀಯ ವ್ಯವಸ್ಥೆಯಲ್ಲಿ ಗಣನೀಯವಾಗಿ ಚೇತರಿಕೆ ಕಂಡಿದೆ. ಹಾಗಾಗಿ, 2024-25ನೇ ಹಣಕಾಸು ವರ್ಷದಲ್ಲಿ ದೇಶದ ಜಿಡಿಪಿಯು ಶೇ.6.5ರಿಂದ ಶೇ.7ಕ್ಕೆ ಏರಿಕೆಯಾಗುವ ಅಂದಾಜಿದೆ.
  • ಸೇವಾ ವಲಯದಲ್ಲಿ ದೇಶದಲ್ಲೇ ಅತಿ ಹೆಚ್ಚಿನ ಪ್ರಮಾಣದ ಉದ್ಯೋಗ ಸೃಷ್ಟಿಯಾಗುತ್ತಿದೆ. ನಿರ್ಮಾಣ, ಉತ್ಪಾದನೆ ಸೇರಿ ಹಲವು ಕ್ಷೇತ್ರಗಳಲ್ಲೂ ಉದ್ಯೋಗ ಸೃಷ್ಟಿಯಾಗುತ್ತಿರುವುದು ಸಕಾರಾತ್ಮಕ ಬೆಳವಣಿಗೆಯಾಗಿದೆ. ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಪ್ರಮಾಣದಲ್ಲಿ ಉದ್ಯೋಗ ಸೃಷ್ಟಿಯಾಗುವ ನಿರೀಕ್ಷೆ ಇದೆ.
  • 2023ರ ಹಣಕಾಸು ವರ್ಷದಲ್ಲಿ ಭಾರತದಲ್ಲಿ ಹೊಸ ಬಂಡವಾಳ ಹೂಡಿಕೆ ಪ್ರಮಾಣವು 47.6 ಶತಕೋಟಿ ಡಾಲರ್‌ ಇತ್ತು. ಆದರೆ, ಇದು 2024ನೇ ಹಣಕಾಸು ವರ್ಷದಲ್ಲಿ 45.8 ಶತಕೋಟಿ ಡಾಲರ್‌ಗೆ ಇಳಿಕೆಯಾಗಿದೆ. ಜಾಗತಿಕ ಬೆಳವಣಿಗೆಗಳು ಇದಕ್ಕೆ ಕಾರಣವಾಗಿವೆ. ಪ್ರಸಕ್ತ ಹಣಕಾಸು ವರ್ಷದಲ್ಲಿ ಹೂಡಿಕೆ ಪ್ರಮಾಣ ಜಾಸ್ತಿಯಾಗುವ ಸಾಧ್ಯತೆ ಇದೆ.

ಇದನ್ನೂ ಓದಿ: Economic Survey 2023-24: ದೇಶದ ಆರ್ಥಿಕತೆ, ಜಿಡಿಪಿ, ಹೂಡಿಕೆ; ಆರ್ಥಿಕ ಸಮೀಕ್ಷೆಯ ಪ್ರಮುಖಾಂಶಗಳು ಇಲ್ಲಿವೆ

Continue Reading

ದೇಶ

Economic Survey 2023-24: ದೇಶದ ಆರ್ಥಿಕತೆ, ಜಿಡಿಪಿ, ಹೂಡಿಕೆ; ಆರ್ಥಿಕ ಸಮೀಕ್ಷೆಯ ಪ್ರಮುಖಾಂಶಗಳು ಇಲ್ಲಿವೆ

Economic Survey 2023-24: ದೇಶದ ಜನ ಕುತೂಹಲದಿಂದ ಕಾಯುತ್ತಿದ್ದ ಆರ್ಥಿಕ ಸಮೀಕ್ಷೆಯನ್ನು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಸಂಸತ್‌ನಲ್ಲಿ ಮಂಡಿಸಿದ್ದಾರೆ. ಭಾರತದ ಆರ್ಥಿಕತೆ ಹೇಗಿದೆ? ಬಡ-ಮಧ್ಯಮ ವರ್ಗದವರಿಗೆ ಆಶಾದಾಯಕ ಬೆಳವಣಿಗೆಗಳು ಏನಿವೆ ಎಂಬುದರ ಮಾಹಿತಿ ಇಲ್ಲಿದೆ.

VISTARANEWS.COM


on

Economic Survey 2023-24
Koo

ನವದೆಹಲಿ: ಕೇಂದ್ರ ಬಜೆಟ್‌ ಮಂಡನೆಗೆ (Union Budget 2024) ಮುನ್ನಾ ದಿನವಾದ ಸೋಮವಾರ (ಜುಲೈ 22) ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ (Nirmala Sitharaman) ಅವರು ಸಂಸತ್‌ನಲ್ಲಿ ಆರ್ಥಿಕ ಸಮೀಕ್ಷಾ (Economic Survey 2023-24) ವರದಿಯನ್ನು ಮಂಡಿಸಿದ್ದು, ಭಾರತದ ಆರ್ಥಿಕತೆಯು ಸಕಾರಾತ್ಮಕ ಏಳಿಗೆ ಹೊಂದುತ್ತಿದೆ ಎಂಬುದಾಗಿ ಅವರು ಮಾಹಿತಿ ನೀಡಿದ್ದಾರೆ. ಭಾರತದ ಆರ್ಥಿಕತೆ, ವಿದೇಶಿ ನೇರ ಬಂಡವಾಳ ಹೂಡಿಕೆ, ಹಣದುಬ್ಬರ, ಉದ್ಯೋಗ ಸೇರಿ ಹಲವು ವಿಷಯಗಳನ್ನು ಆರ್ಥಿಕ ಸಮೀಕ್ಷೆಯು ಒಳಗೊಂಡಿದೆ. ಆರ್ಥಿಕ ಸಮೀಕ್ಷೆಯ ಪ್ರಮುಖ ಅಂಶಗಳು ಇಲ್ಲಿವೆ.

ಆರ್ಥಿಕ ಸಮೀಕ್ಷೆಯ ಹೈಲೈಟ್ಸ್‌….

  • ಪ್ರಸಕ್ತ ಸಾಲಿನಲ್ಲಿ ಉತ್ತಮ ಮುಂಗಾರು, ನೀತಿ-ನಿರೂಪಣೆಗಳ ಬದಲಾವಣೆ ಇಲ್ಲದ ಕಾರಣ 2024-25ನೇ ಹಣಕಾಸು ವರ್ಷದಲ್ಲಿ ದೇಶದ ಹಣದುಬ್ಬರ ಪ್ರಮಾಣವು ಶೇ.4.5ರಿಂದ ಶೇ.4.1ಕ್ಕೆ ಇಳಿಕೆಯಾಗಲಿದೆ ಎಂಬುದಾಗಿ ಆರ್‌ಬಿಐ ಉಲ್ಲೇಖಿಸಿದೆ. ಅಂತಾರಾಷ್ಟ್ರೀಯ ಹಣಕಾಸು ಸಂಸ್ಥೆ (IMF) ವರದಿ ಕೂಡ ಹಣದುಬ್ಬರವು ಶೇ.4.2ಕ್ಕೆ ಇಳಿಯಲಿದೆ ಎಂಬುದಾಗಿ ತಿಳಿಸಿದೆ. ಇದರಿಂದಾಗಿ ದೇಶದ ಜನರ ಮೇಲಿನ ಹೊರೆ ಕಡಿಮೆಯಾಗಲಿದೆ.
  • ಕೊರೊನಾ ಬಿಕ್ಕಟ್ಟಿನ ನಂತರ ಭಾರತದ ಆರ್ಥಿಕ ಚಟುವಟಿಕೆಗಳು ಗರಿಗೆದರಿವೆ. ಇದರಿಂದಾಗಿ ದೇಶದ ವಿತ್ತೀಯ ವ್ಯವಸ್ಥೆಯಲ್ಲಿ ಗಣನೀಯವಾಗಿ ಚೇತರಿಕೆ ಕಂಡಿದೆ. ಹಾಗಾಗಿ, 2024-25ನೇ ಹಣಕಾಸು ವರ್ಷದಲ್ಲಿ ದೇಶದ ಜಿಡಿಪಿಯು ಶೇ.6.5ರಿಂದ ಶೇ.7ಕ್ಕೆ ಏರಿಕೆಯಾಗುವ ಅಂದಾಜಿದೆ.
  • ಸೇವಾ ವಲಯದಲ್ಲಿ ದೇಶದಲ್ಲೇ ಅತಿ ಹೆಚ್ಚಿನ ಪ್ರಮಾಣದ ಉದ್ಯೋಗ ಸೃಷ್ಟಿಯಾಗುತ್ತಿದೆ. ನಿರ್ಮಾಣ, ಉತ್ಪಾದನೆ ಸೇರಿ ಹಲವು ಕ್ಷೇತ್ರಗಳಲ್ಲೂ ಉದ್ಯೋಗ ಸೃಷ್ಟಿಯಾಗುತ್ತಿರುವುದು ಸಕಾರಾತ್ಮಕ ಬೆಳವಣಿಗೆಯಾಗಿದೆ. ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಪ್ರಮಾಣದಲ್ಲಿ ಉದ್ಯೋಗ ಸೃಷ್ಟಿಯಾಗುವ ನಿರೀಕ್ಷೆ ಇದೆ.
  • 2023ರ ಹಣಕಾಸು ವರ್ಷದಲ್ಲಿ ಭಾರತದಲ್ಲಿ ಹೊಸ ಬಂಡವಾಳ ಹೂಡಿಕೆ ಪ್ರಮಾಣವು 47.6 ಶತಕೋಟಿ ಡಾಲರ್‌ ಇತ್ತು. ಆದರೆ, ಇದು 2024ನೇ ಹಣಕಾಸು ವರ್ಷದಲ್ಲಿ 45.8 ಶತಕೋಟಿ ಡಾಲರ್‌ಗೆ ಇಳಿಕೆಯಾಗಿದೆ. ಜಾಗತಿಕ ಬೆಳವಣಿಗೆಗಳು ಇದಕ್ಕೆ ಕಾರಣವಾಗಿವೆ. ಪ್ರಸಕ್ತ ಹಣಕಾಸು ವರ್ಷದಲ್ಲಿ ಹೂಡಿಕೆ ಪ್ರಮಾಣ ಜಾಸ್ತಿಯಾಗುವ ಸಾಧ್ಯತೆ ಇದೆ.

  • ಜಾಗತಿಕ ರಾಜಕೀಯ ಬಿಕ್ಕಟ್ಟು, ಆಕ್ರಮಣಗಳ ಹಿನ್ನೆಲೆಯಲ್ಲಿ ವಿದೇಶಿ ವ್ಯಾಪಾರ ಪ್ರಮಾಣವೂ ಇಳಿಕೆ ಕಂಡಿದೆ. 2023ನೇ ಸಾಲಿನ ಹಣಕಾಸು ವರ್ಷಕ್ಕೆ ಹೋಲಿಸಿದರೆ 2024ನೇ ಸಾಲಿನಲ್ಲಿ ವ್ಯಾಪಾರದ ಕೊರತೆಯು ಶೇ.0.07ರಷ್ಟಿದೆ.

ಇದನ್ನೂ ಓದಿ: Economic Survey 2023-24: ದೇಶದ ಆರ್ಥಿಕತೆ ಸುಭದ್ರ, ಜಿಡಿಪಿ 7% ಬೆಳವಣಿಗೆ; ಆರ್ಥಿಕ ಸಮೀಕ್ಷೆ ಪ್ರಕಟ

Continue Reading

ದೇಶ

Economic Survey 2023-24: ದೇಶದ ಆರ್ಥಿಕತೆ ಸುಭದ್ರ, ಜಿಡಿಪಿ 7% ಬೆಳವಣಿಗೆ; ಆರ್ಥಿಕ ಸಮೀಕ್ಷೆ ಪ್ರಕಟ

Economic Survey 2023-24: ಭಾರತದ ಆರ್ಥಿಕತೆಯು ಸಮತೋಲನದಿಂದ ಕೂಡಿದೆ. ಮುಂದಿನ ದಿನಗಳಲ್ಲಿ ಸಕಾರಾತ್ಮಕ ಬೆಳವಣಿಗೆಯನ್ನು ನಿರೀಕ್ಷಿಸಲಾಗಿದೆ. ಜಾಗತಿಕವಾಗಿ ರಾಜಕೀಯ ಬೆಳವಣಿಗೆ, ಕೊರೊನಾ ಬಿಕ್ಕಟ್ಟಿನ ನಂತರದ ಸವಾಲುಗಳ ಮಧ್ಯೆಯೂ ಭಾರತದ ಆರ್ಥಿಕತೆಯು ಸದೃಢವಾಗಿದೆ ಎಂದು ನಿರ್ಮಲಾ ಸೀತಾರಾಮನ್‌ ಅವರು ಆರ್ಥಿಕ ಸಮೀಕ್ಷೆ ಪ್ರಕಟಿಸುವ ವೇಳೆ ತಿಳಿಸಿದ್ದಾರೆ.

VISTARANEWS.COM


on

Economic Survey 2023-24
Koo

ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ (Nirmala Sitharaman) ಅವರು ಸಂಸತ್‌ನಲ್ಲಿ 2023-24ನೇ ಸಾಲಿನ ಆರ್ಥಿಕ ಸಮೀಕ್ಷೆಯನ್ನು (Economic Survey 2023-24) ಪ್ರಕಟಿಸಿದ್ದಾರೆ. ಬಜೆಟ್‌ ಮಂಡನೆಗೂ (Union Budget 2024_ ಒಂದು ದಿನ ಮಂಡನೆಯಾಗುವ ಆರ್ಥಿಕ ಸಮೀಕ್ಷೆಯು ದೇಶದ ಆರ್ಥಿಕತ ಸ್ಥಿತಿಗತಿಗೆ ಕನ್ನಡಿಯಾಗಿರುವ ಕಾರಣ ಪ್ರಾಮುಖ್ಯತೆ ಪಡೆದಿದೆ. ಇನ್ನು, ಆರ್ಥಿಕ ಸಮೀಕ್ಷೆಯ ಪ್ರಕಾರ, ಭಾರತದ ಆರ್ಥಿಕತೆಯು ಸದೃಢವಾಗಿದ್ದು, 2024-25ನೇ ಹಣಕಾಸು ವರ್ಷದಲ್ಲಿ ದೇಶದ ಜಿಡಿಪಿಯು ಶೇ.6.5ರಿಂದ ಶೇ.7ಕ್ಕೆ ಏರಿಕೆಯಾಗುವ ಅಂದಾಜಿದೆ ಎಂದು ನಿರ್ಮಲಾ ಸೀತಾರಾಮನ್‌ ಅವರು ತಿಳಿಸಿದ್ದಾರೆ.

“ಭಾರತದ ಆರ್ಥಿಕತೆಯು ಸಮತೋಲನದಿಂದ ಕೂಡಿದೆ. ಮುಂದಿನ ದಿನಗಳಲ್ಲಿ ಸಕಾರಾತ್ಮಕ ಬೆಳವಣಿಗೆಯನ್ನು ನಿರೀಕ್ಷಿಸಲಾಗಿದೆ. ಜಾಗತಿಕವಾಗಿ ರಾಜಕೀಯ ಬೆಳವಣಿಗೆ, ಕೊರೊನಾ ಬಿಕ್ಕಟ್ಟಿನ ನಂತರದ ಸವಾಲುಗಳ ಮಧ್ಯೆಯೂ ಭಾರತದ ಆರ್ಥಿಕತೆಯು ಸದೃಢವಾಗಿದೆ. ಹೂಡಿಕೆ, ವ್ಯಾಪಾರ ಸೇರಿ ಎಲ್ಲ ಕ್ಷೇತ್ರಗಳಲ್ಲೂ ಭಾರತವು ವೇಗವಾಗಿ ಅಭಿವೃದ್ಧಿ ಹೊಂದುತ್ತಿದೆ” ಎಂಬುದಾಗಿ ಆರ್ಥಿಕ ಸಮೀಕ್ಷೆ ತಿಳಿಸಿದೆ ಎಂದು ನಿರ್ಮಲಾ ಸೀತಾರಾಮನ್‌ ಅವರು ಸಂಸತ್ತಿಗೆ ಮಾಹಿತಿ ನೀಡಿದರು.

ಉದ್ಯೋಗದ ಕುರಿತು ಆರ್ಥಿಕ ಸಮೀಕ್ಷೆಯ ಮಾಹಿತಿಯನ್ನು ಸಚಿವೆ ಹಂಚಿಕೊಂಡರು. “ಕಾಲೇಜಿನಿಂದ ಹೊರಬರುತ್ತಲೇ ಭಾರತದಲ್ಲಿ ಸರಾಸರಿ ಇಬ್ಬರಲ್ಲಿ ಒಬ್ಬರು ಉದ್ಯೋಗ ಕೈಗೊಳ್ಳುವಷ್ಟು ಕೌಶಲಗಳನ್ನು ಹೊಂದಿರುವುದಿಲ್ಲ. ಇದರ ಕುರಿತು ಕೇಂದ್ರ ಸರ್ಕಾರ ಗಮನ ಹರಿಸುತ್ತಿದೆ. ಇನ್ನು, ಸೇವಾ ವಲಯದಲ್ಲಿ ದೇಶದಲ್ಲೇ ಅತಿ ಹೆಚ್ಚಿನ ಪ್ರಮಾಣದ ಉದ್ಯೋಗ ಸೃಷ್ಟಿಯಾಗುತ್ತಿದೆ. ನಿರ್ಮಾಣ, ಉತ್ಪಾದನೆ ಸೇರಿ ಹಲವು ಕ್ಷೇತ್ರಗಳಲ್ಲೂ ಉದ್ಯೋಗ ಸೃಷ್ಟಿಯಾಗುತ್ತಿರುವುದು ಸಕಾರಾತ್ಮಕ ಬೆಳವಣಿಗೆ” ಎಂದು ತಿಳಿಸಿದರು.

ವಿದೇಶಿ ಬಂಡವಾಳ ಹೂಡಿಕೆಯಲ್ಲಿ ಇಳಿಕೆ

ವಿದೇಶಿ ನೇರ ಬಂಡವಾಳ ಹೂಡಿಕೆಯ ಪ್ರಮಾಣ ತುಸು ಕಡಿಮೆಯಾಗಿದೆ ಎಂಬುದಾಗಿ ಆರ್ಥಿಕ ಸಮೀಕ್ಷೆಯಲ್ಲಿ ಉಲ್ಲೇಖಿಸಲಾಗಿದೆ. “2023ರ ಹಣಕಾಸು ವರ್ಷದಲ್ಲಿ ಭಾರತದಲ್ಲಿ ಹೊಸ ಬಂಡವಾಳ ಹೂಡಿಕೆ ಪ್ರಮಾಣವು 47.6 ಶತಕೋಟಿ ಡಾಲರ್‌ ಇತ್ತು. ಆದರೆ, ಇದು 2024ನೇ ಹಣಕಾಸು ವರ್ಷದಲ್ಲಿ 45.8 ಶತಕೋಟಿ ಡಾಲರ್‌ಗೆ ಇಳಿಕೆಯಾಗಿದೆ. ಜಾಗತಿಕ ಬೆಳವಣಿಗೆಗಳು ಇದಕ್ಕೆ ಕಾರಣವಾಗಿವೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಹೂಡಿಕೆ ಹರಿದುಬರುವ ನಿರೀಕ್ಷೆ ಇದೆ” ಎಂದು ನಿರ್ಮಲಾ ಸೀತಾರಾಮನ್‌ ಅವರು ಸಮೀಕ್ಷೆಯನ್ನು ಮಂಡಿಸುವ ವೇಳೆ ತಿಳಿಸಿದರು.

ಇದನ್ನೂ ಓದಿ: NEET UG 2024: ಅಧಿವೇಶನದಲ್ಲಿ ‘ನೀಟ್‌’ ಪ್ರಸ್ತಾಪಿಸಿದ ರಾಹುಲ್‌ ಗಾಂಧಿ; ಪ್ರತ್ಯುತ್ತರ ಕೊಟ್ಟ ಕೇಂದ್ರ ಸಚಿವ

Continue Reading
Advertisement
Rahat Fateh Ali Khan
ವಿದೇಶ2 mins ago

Rahat Fateh Ali Khan: ದುಬೈನಲ್ಲಿ ಪಾಕಿಸ್ತಾನದ ಗಾಯಕನ ಬಂಧನ; ಎಸಗಿದ ಕೃತ್ಯವೇನು?

Valmiki Corporation Scam
ಕರ್ನಾಟಕ8 mins ago

Valmiki Corporation Scam: ಬಿ. ನಾಗೇಂದ್ರ ಹೆಸರೇಳುವಂತೆ ಒತ್ತಡ; ಇಡಿ ಅಧಿಕಾರಿಗಳ ವಿರುದ್ಧ ಎಫ್‌ಐಆರ್‌

Tata Curvv
ಆಟೋಮೊಬೈಲ್8 mins ago

Tata Curvv : ಎಸ್​ಯುವಿ ವಿಭಾಗದಲ್ಲಿ ವಿಭಿನ್ನ ವಿನ್ಯಾಸದ ಕಾರನ್ನು ಪರಿಚಯಿಸಿದ ಮಾಡಿದ ಟಾಟಾ

Kempambudi lake encroachment cleared soon says DCM DK Shivakumar
ಕರ್ನಾಟಕ16 mins ago

Assembly Session 2024: ಕೆಂಪಾಂಬುದಿ ಕೆರೆ ಒತ್ತುವರಿ ಶೀಘ್ರ ತೆರವು; ಡಿ.ಕೆ.ಶಿವಕುಮಾರ್

Viral Video
ವೈರಲ್ ನ್ಯೂಸ್34 mins ago

Viral Video: ಸ್ಕೂಟರ್‌ಗೆ ಅಪ್ಪಳಿಸಿದ ಕಾರು; 10 ಅಡಿ ಮೇಲಕ್ಕೆ ಹಾರಿ ಬಿದ್ದ ತಾಯಿ, ಮಗ

TA Sharavana questioned about the continuous variation in the service of 108 Ambulance even after 7 years there is no new tender
ಬೆಂಗಳೂರು38 mins ago

TA Sharavana: 108 ಆಂಬ್ಯುಲೆನ್ಸ್‌ಗೆ 7 ವರ್ಷ ಕಳೆದರೂ ಹೊಸ ಟೆಂಡರ್‌ ಇಲ್ಲ ಯಾಕೆ? ಟಿ. ಎ. ಶರವಣ ಪ್ರಶ್ನೆ

INS Brahmaputra
ದೇಶ56 mins ago

INS Brahmaputra: ನೌಕಾಪಡೆಯ ಐಎನ್‌ಎಸ್‌ ಯುದ್ಧನೌಕೆಯಲ್ಲಿ ಭೀಕರ ಅಗ್ನಿ ದುರಂತ; ನಾವಿಕ ನಾಪತ್ತೆ

Chamari Athapaththu
ಕ್ರೀಡೆ1 hour ago

Chamari Athapaththu : ಏಷ್ಯಾ ಕಪ್​ನಲ್ಲಿ ಶತಕ ಬಾರಿಸಿ ವಿಶ್ವ ದಾಖಲೆ ಬರೆದ ಲಂಕಾದ ಮಹಿಳಾ ಕ್ರಿಕೆಟರ್​​

Monsoon fashion
ಫ್ಯಾಷನ್1 hour ago

Monsoon fashion: ಶರ್ಟ್ ಸ್ಟೈಲ್‌ ಜಾಕೆಟ್ಸ್; ಇವು ಯುವಕರ ಮಳೆಗಾಲದ ಫ್ಯಾಷನ್‌ ಟ್ರೆಂಡ್‌

Raghu Dixit
ಕ್ರೀಡೆ1 hour ago

Raghu Dixit : ಪ್ಯಾರಿಸ್​ ಒಲಿಂಪಿಕ್ಸ್​ಗೆ ಕನ್ನಡ ಹಾಡುಗಳ ಮೆರುಗು ; ರಘು ದೀಕ್ಷಿತ್ ತಂಡದಿಂದ ವಿಶೇಷ ಕಾರ್ಯಕ್ರಮ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Rain
ಮಳೆ2 days ago

Karnataka Rain : ಭಾರಿ ಮಳೆಗೆ ಮನೆ ಗೋಡೆ ಕುಸಿತ; ಕೊಟ್ಟಿಗೆಯಲ್ಲಿದ್ದ ಜಾನುವಾರುಗಳು ಸಾವು

karnataka Rain
ಮಳೆ2 days ago

Karnataka Rain : ಹಳ್ಳ ದಾಟಲು ಹೋಗಿ ನೀರುಪಾಲಾದ ಜಾನುವಾರು; ಬಿರುಗಾಳಿಗೆ ಕಳಚಿದ ವಿಂಡ್‌ ಫ್ಯಾನ್‌

karnataka Rain
ಮಳೆ3 days ago

Karnataka Rain : ಬೀದಿಗೆ ತಂದ ರಣಮಳೆ; ಮನೆ ಕುಸಿದು ಬಿದ್ದು 9 ತಿಂಗಳ ಗರ್ಭಿಣಿ ನರಳಾಟ

Karnataka Rain
ಮಳೆ3 days ago

Karnataka Rain : ರಾಜ್ಯದಲ್ಲಿ ಮಳೆಯ ಆರ್ಭಟ; ರಾತ್ರಿ ಕಳೆದು ಬೆಳಗಾಗುವುದರೊಳಗೆ ಕಂದಕ ನಿರ್ಮಾಣ

Karnataka Rain
ಮಳೆ4 days ago

Karnataka Rain : ಭಾರಿ ಮಳೆ ಎಫೆಕ್ಟ್‌; ಉಕ್ಕಿ ಹರಿಯುತ್ತಿದ್ದ ನದಿಯಲ್ಲಿ ಕೊಚ್ಚಿ ಹೋದ ರಾಸು

Uttara Kannada Landslide
ಮಳೆ4 days ago

Uttara Kannada Landslide: ಶಿರೂರು ಗುಡ್ಡ ಕುಸಿತ; ಅಖಾಡಕ್ಕಿಳಿದ ಜಿಯೊಲಾಜಿಕಲ್ ಸರ್ವೆ ಆಫ್ ಇಂಡಿಯಾ ಟೀಂ

Karnataka Rain
ಮಳೆ6 days ago

Karnataka Rain : ಕಾರವಾರದಲ್ಲಿ ಮಳೆ ಅವಾಂತರ; ಮನೆ ಮೇಲೆ ಗುಡ್ಡ ಕುಸಿದು ವೃದ್ಧ ಸಾವು

karnataka Rain
ಮಳೆ6 days ago

Karnataka Rain : ಭಾರಿ ಮಳೆಗೆ ನಿಯಂತ್ರಣ ತಪ್ಪಿ ಕೆರೆಗೆ ಉರುಳಿ ಬಿದ್ದ ಕಾರು; ನಾಲ್ವರು ಪ್ರಾಣಾಪಾಯದಿಂದ ಪಾರು

karnataka Weather Forecast
ಮಳೆ1 week ago

Karnataka Weather : ವ್ಯಾಪಕ ಮಳೆ ಎಚ್ಚರಿಕೆ; ನಾಳೆಯೂ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

karnataka Rain
ಮಳೆ1 week ago

Karnataka Rain : ಶಾಲಾ-ಕಾಲೇಜಿಗೆ ಈ ದಿನ ರಜಾ; ಅಬ್ಬರಿಸುತ್ತಿರುವ ಮಳೆಗೆ ಮನೆಯಲ್ಲೇ ಎಲ್ಲರೂ ಸಜಾ!

ಟ್ರೆಂಡಿಂಗ್‌