SSLC Student : ಚಿತ್ರದುರ್ಗದಲ್ಲಿ ನೇಣಿಗೆ ಶರಣಾದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ - Vistara News

ಚಿತ್ರದುರ್ಗ

SSLC Student : ಚಿತ್ರದುರ್ಗದಲ್ಲಿ ನೇಣಿಗೆ ಶರಣಾದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ

SSLC Student : ವಿದ್ಯಾರ್ಥಿಯೊಬ್ಬ ಪರೀಕ್ಷೆಗೆ ಹಾಜರಾಗದ ಹಿನ್ನೆಲೆಯಲ್ಲಿ ಪೋಷಕರನ್ನು ಕರೆತರುವಂತೆ ಹೇಳಿದ್ದಕ್ಕೆ ಮನನೊಂದು ನೇಣಿಗೆ (Self Harming) ಶರಣಾಗಿದ್ದಾನೆ.

VISTARANEWS.COM


on

SSLC student commits suicide in Chitradurga
ಸಾಂದರ್ಭಿಕ ಚಿತ್ರ
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಚಿತ್ರದುರ್ಗ: ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ (SSLC Student) ಮನೆಯಲ್ಲಿ ಮಫ್ಲರ್‌ನಿಂದ‌ ನೇಣು ಬಿಗಿದುಕೊಂಡು ಆತ್ಮಹತ್ಯೆ (Self Harming) ಮಾಡಿಕೊಂಡಿದ್ದಾನೆ. ಚಿತ್ರದುರ್ಗದ ಹೊಳಲ್ಕೆರೆ ತಾಲೂಕಿನ ರಂಗಾಪುರ ಗ್ರಾಮದಲ್ಲಿ ಘಟನೆ ನಡೆದಿದೆ. ಪ್ರಜ್ವಲ್ (16) ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿಯಾಗಿದ್ದಾನೆ.

ರಂಗಾಪುರ ಗ್ರಾಮದ ಚಂದ್ರಶೇಖರ್ ಎಂಬುವವರ ಪುತ್ರ ಪ್ರಜ್ವಲ್‌ ಹೊಳಲ್ಕೆರೆ ವಾಗ್ದೇವಿ ಶಾಲೆಯಲ್ಲಿ ಎಸ್‌ಎಸ್‌ಎಲ್‌ಸಿ ಓದುತ್ತಿದ್ದ. ಪರೀಕ್ಷೆಗೆ ಪ್ರಜ್ವಲ್ ಹಾಜರಾಗದ ಹಿನ್ನೆಲೆಯಲ್ಲಿ ಶಾಲೆ ಶಿಕ್ಷಕರು ಪೋಷಕರನ್ನು ಕರೆದುಕೊಂಡು ಬಾ ಎಂದಿದ್ದಾರೆ.

ನಿನ್ನೆ ಸಂಜೆ ಓದಿಕೊಳ್ತೀನಿ ಎಂದೇಳಿ ಹೋದ ಪ್ರಜ್ವಲ್‌ ನೇಣಿಗೆ ಶರಣಾಗಿದ್ದಾನೆ. ಸ್ಥಳಕ್ಕೆ ಹೊಳಲ್ಕೆರೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆ ಬಳಿಕ ಕುಟುಂಬಸ್ಥರಿಗೆ ಹಸ್ತಾಂತರ ಮಾಡಲಾಗಿದೆ. ಹೊಳಲ್ಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ: Fraud Case : ಮಸಾಜ್‌ ಥೆರಪಿಸ್ಟ್‌ಗೆ ಬ್ಲ್ಯಾಕ್‌ಮೇಲ್‌ ಮಾಡಿ ಲಕ್ಷ ಲೂಟಿ ಮಾಡಿದ ನಕಲಿ ಪೊಲೀಸ್‌

ಬೆಳಗಾವಿಯಲ್ಲಿ ಹರಿದ ನೆತ್ತರು; ಯುವಕನ ಬರ್ಬರ ಹತ್ಯೆ

ಬೆಳಗಾವಿ: ಬೆಳಗಾವಿಯಲ್ಲಿ (Belgavi News) ಬೆಳ್ಳಂ‌ಬೆಳಗ್ಗೆ ನೆತ್ತರಕೋಡಿ ಹರಿದಿದೆ. ಮಾರಕಾಸ್ತ್ರಗಳಿಂದ‌ ಕೊಚ್ಚಿ ಯುವಕನನ್ನು ಬರ್ಬರ ಹತ್ಯೆ (Murder case) ಮಾಡಲಾಗಿದೆ. ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ಲಕ್ಷ್ಮೇಶ್ವರ ಬಳಿ ಈ ಕೃತ್ಯ ನಡೆದಿದೆ. ಲಕ್ಷ್ಮೇಶ್ವರ ನಿವಾಸಿ ಮೋಮಿನ್ (28) ಕೊಲೆಯಾದ ದುರ್ದೈವಿ.

ಹಾಡಹಗಲೇ ಮಚ್ಚು ಹಿಡಿದು ಬಂದ ವ್ಯಕ್ತಿಯೊಬ್ಬ ಏಕಾಏಕಿ ಯಾಸಿನ್‌ ಮೋಮಿನ್‌ ಮೇಲೆ ದಾಳಿ ಮಾಡಿದ್ದಾನೆ. ನೋಡ ನೋಡುತ್ತಿದ್ದಂತೆ ಎಲ್ಲರ ಮುಂದೆಯೇ ಯಾಸಿನ್‌ ಮೋಮಿನ್‌ ಮೇಲೆ ದಾಳಿ ಮಾಡಿ ಮಾರಕಾಸ್ತ್ರಗಳಿಂದ ಮನಸೋ ಇಚ್ಛೆ ಬೀಸಿ ಕೊಂದಿದ್ದಾನೆ.

ಇನ್ನೂ ಯಾಸಿನ್‌ ಮೋಮಿನ್‌ನನ್ನು ಕೊಂದ ಆರೋಪಿ ಅಮೋಘ ಢವಳೇಶ್ವರ ಎಂಬಾತನನ್ನು ಕುಲಗೋಡ ಪೊಲೀಸರು ಬಂಧಿಸಿದ್ದಾರೆ. ಆರೋಪಿ ಅಮೋಘನ ಪತ್ನಿ ಶಿಲ್ಪಾಳಾನ್ನು ಈ ಯಾಸಿನ್‌ ಮೋಮಿನ್‌ ಬೈಕ್ ಮೇಲೆ ಕರೆದೊಯ್ದುತ್ತಿದ್ದ. ಇದರಿಂದ ಸಿಟ್ಟಾದ ಅಮೋಘ, ಯಾಸಿನ್ ಮೋಮಿನ್‌ ಹಾಗೂ ಪತ್ನಿ ಶಿಲ್ಪಾ ಇಬ್ಬರ ಮೇಲೂ ಹಲ್ಲೆ ಮಾಡಿದ್ದಾನೆ.

ಘಟನೆಯಲ್ಲಿ ತೀವ್ರಗಾಯಗೊಂಡ ಶಿಲ್ಪಾ ಢವಳೇಶ್ವರ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಅಮೋಘ ಹೊಡೆತಕ್ಕೆ ಯಾಸಿನ್‌ ಮೋಮಿನ್‌ ಸ್ಥಳದಲ್ಲಿಯೇ ಪ್ರಾಣ ಬಿಟ್ಟಿದ್ದಾನೆ. ಅನೈತಿಕ ಸಂಬಂಧ ಹಿನ್ನೆಲೆಯಲ್ಲಿ ಕೊಲೆ ನಡೆದಿರುವ ಶಂಕೆ ವ್ಯಕ್ತವಾಗಿದೆ. ಈ ಘಟನೆಯಿಂದ ಲಕ್ಷ್ಮೇಶ್ವರ ಗ್ರಾಮಸ್ಥರು ಬೆಚ್ಚಿ ಬಿದ್ದಿದ್ದಾರೆ. ಸ್ಥಳೀಯರ ಮಾಹಿತಿ ಮೇರೆಗೆ ಸ್ಥಳಕ್ಕೆ ಕುಲಗೋಡ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ರಕ್ತಸಿಕ್ತವಾಗಿ ಬಿದ್ದಿದ್ದ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಕುಲಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮಳೆ

Karnataka Rain : ಆಲದ ಮರ ಬಿದ್ದು ಆಟೋ ಜಖಂ, ಚಾಲಕ ಪಾರು; ನಾಳೆಗೂ ಗಾಳಿ-ಮಳೆ ಎಚ್ಚರ

Karnataka Rain : ಕಾರ್ಕಳದಲ್ಲಿ ಭಾರಿ ಮಳೆ ಗಾಳಿಗೆ ಆಲದ ಮರವೊಂದು ಉರುಳಿ ಬಿದ್ದಿದ್ದು, ಆಟೋ ಜಖಂಗೊಂಡಿದೆ. ಚಾಲಕ ಪವಾಡ ಸದೃಶ ರೀತಿಯಲ್ಲಿ ಪಾರಾಗಿದ್ದಾರೆ. ಮುಂದಿನ 24 ಗಂಟೆಯಲ್ಲಿ ಗಾಳಿ ಜತೆಗೆ ಮಳೆಯಾಗುವ ಎಚ್ಚರಿಕೆಯನ್ನು ಹವಾಮಾನ ಇಲಾಖೆ (Karnataka weather Forecast) ನೀಡಿದೆ.

VISTARANEWS.COM


on

By

karnataka Rain
Koo

ಉಡುಪಿ/ಬೆಂಗಳೂರು: ಉಡುಪಿಯ ಕಾರ್ಕಳದಲ್ಲಿ ಸುರಿದ ಭಾರಿ ಗಾಳಿ- ಮಳೆಗೆ (Karnataka weather Forecast) ಮರವೊಂದು ಉರುಳಿದೆ. ತಾಲೂಕಿನಾದ್ಯಂತ ಹಲವಾರು ಕಡೆಗಳಲ್ಲಿ ಮರಗಳು (Rain News) ಧರೆಗುರುಳಿವೆ. ಕಾರ್ಕಳ ಬಸ್ ನಿಲ್ದಾಣದ ಬಳಿ ಆಲದ ಮರ ಬಿದ್ದು ರಿಕ್ಷಾ ಜಖಂಗೊಂಡಿದೆ. ಬೃಹತ್ ಗಾತ್ರದ ಮರ ಬೀಳುವಾಗಲೇ ರಿಕ್ಷಾ ಚಾಲಕ ಪವಾಡ ಸದೃಶ ಪಾರಾಗಿದ್ದಾರೆ.

ಮರ ಬಿದ್ದ ಪರಿಣಾಮ ವಿದ್ಯುತ್ ಕಂಬವು ದ್ವಿಚಕ್ರ ವಾಹನದ ಮೇಲೆ ಬಿದ್ದು ಅಪ್ಪಚ್ಚಿಯಾಗಿದೆ. ಹಲವು ವಿದ್ಯುತ್ ಕಂಬಗಳು ಧರೆಗೆ ಉರುಳಿದ ಪರಿಣಾಮ ವಿದ್ಯುತ್ ತಂತಿಗಳು ರಸ್ತೆ ತುಂಬೆಲ್ಲ ಇದ್ದವು. ಮರ ಜತೆಗೆ ವಿದ್ಯುತ್ ಕಂಬಗಳು ಬಿದ್ದು ಸಂಚಾರಕ್ಕೆ ಸಮಸ್ಯೆಯುಂಟು ಮಾಡಿತು.

ಮಳೆ ಬಂದರೆ ಮೆಸ್ಕಾಂ ಸಿಬ್ಬಂದಿಗಳ ಪರದಾಟ

ಮಳೆ ಹೆಚ್ಚಾದರೆ ಸಾಕು ಮೆಸ್ಕಾಂ ಸಿಬ್ಬಂದಿಗೆ ಪರದಾಟ ತಪ್ಪಿದಲ್ಲ. ವಿದ್ಯುತ್ ಲೈನ್ ಮೇಲೆ ಬಿದ್ದ ಮರ ತೆರವು ಮಾಡಲು ಮೆಸ್ಕಾಂ ಎಂಜಿನಿಯರ್‌ ಕತ್ತಿಯಿಂದಲೇ ಮರ ಕಡಿದರು. ವೆಂಕಮ್ಮ ತಳವಾರ ಎಂಬುವವರು ಕಟ್ಟಿಂಗ್ ಮಿಷನ್ ಇಲ್ಲದ ಕಾರಣ ಕತ್ತಿಯಿಂದಲೇ ಮರ ತೆರವು ಮಾಡಬೇಕಾಯಿತು. ಚಿಕ್ಕಮಗಳೂರಿನ ಮಲ್ಲಂದೂರು ಸಮೀಪದ ಗಾಳಿ ಪೇಟೆ -ಹೊಸಳ್ಳಿ ಪೇಟೆ ರಸ್ತೆಯಲ್ಲಿ ಘಟನೆ ನಡೆದಿದೆ.

ಮುಂದಿನ 24 ಗಂಟೆಯಲ್ಲಿ ಮಳೆ ಎಚ್ಚರಿಕೆ

ಮುಂದಿನ 24 ಗಂಟೆಯಲ್ಲಿ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳ ಪ್ರತ್ಯೇಕ ಕಡೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಗಾಳಿ ವೇಗವು 30-40 ಕಿಮೀ ತಲುಪುವ ಸಾಧ್ಯತೆಯಿದೆ. ಇನ್ನೂ ಮಲೆನಾಡಿನ ಶಿವಮೊಗ್ಗ, ಚಿಕ್ಕಮಗಳೂರು ಮತ್ತು ಕೊಡಗಿನಲ್ಲೂ ಮಳೆಯಾರ್ಭಟ ಮುಂದುವರಿಯಲಿದೆ. ಉತ್ತರ ಒಳನಾಡಿನ ಎಲ್ಲಾ ಜಿಲ್ಲೆಗಳ ಹಲವು ಸ್ಥಳಗಳಲ್ಲಿ ಮತ್ತು ದಕ್ಷಿಣ ಒಳನಾಡಿನ ಉಳಿದ ಕೆಲವು ಸ್ಥಳಗಳಲ್ಲಿ ಗಾಳಿಯ ವೇಗವು 30-40ಕಿ.ಮೀ ತಲುಪುವ ಸಾಧ್ಯತೆ ಇದ್ದು, ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಇದನ್ನೂ ಓದಿ: Rowdy Reels : 500 ರೂ. ಕೊಟ್ಟರೆ ರೌಡಿಗಳ ರೀಲ್ಸ್‌ ಅಪ್ಲೋಡ್‌; ಅಪ್ರಾಪ್ತರಿಗೆ ಬಿಸಿ ಮುಟ್ಟಿಸಿದ ಸಿಸಿಬಿ ಪೊಲೀಸರು

ನಿರಂತರ ಮಳೆಗೆ ಮೈಸೂರಿನ ಒಲಂಪಿಯಾ ಚಿತ್ರಮಂದಿರದ ಗೋಡೆ ಕುಸಿತ

ಮೈಸೂರು: ನಿರಂತರ ಮಳೆಗೆ ಮೈಸೂರಿನ ಒಲಂಪಿಯಾ ಚಿತ್ರಮಂದಿರದ ಹಿಂಬದಿ ಗೋಡೆ ಕುಸಿದು (Karnataka Rain) ಬಿದ್ದಿದೆ. ಚಿತ್ರಮಂದಿರ ಪಕ್ಕದಲ್ಲೇ ಬೀದಿ ಬದಿಯಲ್ಲಿ ವ್ಯಾಪಾರ ಮಾಡುತ್ತಿದ್ದ ನಾಲ್ವರು ಗಾಯಗೊಂಡಿದ್ದಾರೆ. ಇಬ್ಬರ ಸ್ಥಿತಿ ಗಂಭೀರವಾಗಿದ್ದು, ಗಾಯಾಳುಗಳನ್ನು ಕೆಆರ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

ಸೋಮವಾರ ಮಧ್ಯಾಹ್ನ ಈ ದುರ್ಘಟನೆ ನಡೆದಿದ್ದು, ತಬರೀಸ್ ಮತ್ತು ಅರ್ಮಾನ್ ಎಂಬುವವರು ಗಂಭೀರವಾಗಿ ಗಾಯಗೊಂಡವರು. ಸ್ಥಳಕ್ಕೆ ಪೊಲೀಸರು, ಅಗ್ನಿಶಾಮಕ ದಳ ದೌಡಾಯಿಸಿದ್ದು ಪರಿಶೀಲನೆ ನಡೆಸಿದ್ದಾರೆ. ಗೋಡೆ ಕೆಳಗೆ ಬಿದ್ದ ಪರಿಣಾಮ ಬಟ್ಟೆ ಅಂಗಡಿಯ ಸ್ಟಾಲ್‌ಗಳು ನೆಲಕಚ್ಚಿವೆ. ಜೆಸಿಬಿ ಯಂತ್ರದ ಮೂಲಕ ತೆರವು ಕಾರ್ಯಾಚರಣೆ ನಡೆಯುತ್ತಿದೆ.

ಹೆದ್ದಾರಿಗೆ ಬಿದ್ದ ಬೃಹತ್‌ ಮರ

ಉತ್ತರಕನ್ನಡ ಜಿಲ್ಲೆಯಲ್ಲಿ ವರುಣಾರ್ಭಟ ಮುಂದುವರಿದಿದ್ದು, ಶಿರಸಿ-ಹೊಸನಗರ ರಾಜ್ಯ ಹೆದ್ದಾರಿಗೆ ಬೃಹತ್ ಮರವೊಂದು ಬಿದ್ದಿದೆ. ಶಿರಸಿ ತಾಲೂಕಿನ ಗುಡ್ನಾಪುರ ಗ್ರಾಮದ ಬಳಿ ಘಟನೆ ನಡೆದಿದೆ. ಮರ ಬಿದ್ದ ಪರಿಣಾಮ ಶಿರಸಿ-ಬನವಾಸಿ ರಸ್ತೆ ಸಂಚಾರ ಬಂದ್ ಆಗಿದ್ದು, ಮರ ಬಿದ್ದ ಪರಿಣಾಮ ಹಲವು ವಿದ್ಯುತ್ ಕಂಬಗಳಿಗೆ ಹಾನಿಯಾಗಿದೆ. ಅರಣ್ಯ, ಲೋಕೋಪಯೋಗಿ ಇಲಾಖೆ, ಹೆಸ್ಕಾಂ, ಪೊಲೀಸ್ ಇಲಾಖೆಯಿಂದ ತೆರವು ಕಾರ್ಯಾಚರಣೆ ನಡೆದಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Rain : ನಿರಂತರ ಮಳೆಗೆ ಮೈಸೂರಿನ ಒಲಂಪಿಯಾ ಚಿತ್ರಮಂದಿರದ ಗೋಡೆ ಕುಸಿತ; ನಾಲ್ವರು ಗಂಭೀರ

Karnataka Rain : ಸತತವಾಗಿ ಸುರಿದ ಮಳೆಗೆ ಹಲವೆಡೆ ಗೋಡೆ ಕುಸಿತ ಪ್ರಕರಣಗಳು ಹೆಚ್ಚಾಗುತ್ತಿವೆ. ಮೈಸೂರಿನಲ್ಲಿ ಒಲಂಪಿಯಾ ಚಿತ್ರಮಂದಿರದ ಗೋಡೆ ಕುಸಿದು ನಾಲ್ವರು ಗಾಯಗೊಂಡಿದ್ದಾರೆ. ಹೆದ್ದಾರಿಗೆ ಬೃಹತ್‌ ಮರ ಬಿದ್ದಿದ್ದು, ಶಿರಸಿ-ಬನವಾಸಿ ರಸ್ತೆ ಸಂಚಾರ ಬಂದ್ ಆಗಿದೆ.

VISTARANEWS.COM


on

By

karnataka rain
Koo

ಮೈಸೂರು: ನಿರಂತರ ಮಳೆಗೆ ಮೈಸೂರಿನ ಒಲಂಪಿಯಾ ಚಿತ್ರಮಂದಿರದ ಹಿಂಬದಿ ಗೋಡೆ ಕುಸಿದು (Karnataka Rain) ಬಿದ್ದಿದೆ. ಚಿತ್ರಮಂದಿರ ಪಕ್ಕದಲ್ಲೇ ಬೀದಿ ಬದಿಯಲ್ಲಿ ವ್ಯಾಪಾರ ಮಾಡುತ್ತಿದ್ದ ನಾಲ್ವರು ಗಾಯಗೊಂಡಿದ್ದಾರೆ. ಇಬ್ಬರ ಸ್ಥಿತಿ ಗಂಭೀರವಾಗಿದ್ದು, ಗಾಯಾಳುಗಳನ್ನು ಕೆಆರ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

ಸೋಮವಾರ ಮಧ್ಯಾಹ್ನ ಈ ದುರ್ಘಟನೆ ನಡೆದಿದ್ದು, ತಬರೀಸ್ ಮತ್ತು ಅರ್ಮಾನ್ ಎಂಬುವವರು ಗಂಭೀರವಾಗಿ ಗಾಯಗೊಂಡವರು. ಸ್ಥಳಕ್ಕೆ ಪೊಲೀಸರು, ಅಗ್ನಿಶಾಮಕ ದಳ ದೌಡಾಯಿಸಿದ್ದು ಪರಿಶೀಲನೆ ನಡೆಸಿದ್ದಾರೆ. ಗೋಡೆ ಕೆಳಗೆ ಬಿದ್ದ ಪರಿಣಾಮ ಬಟ್ಟೆ ಅಂಗಡಿಯ ಸ್ಟಾಲ್‌ಗಳು ನೆಲಕಚ್ಚಿವೆ. ಜೆಸಿಬಿ ಯಂತ್ರದ ಮೂಲಕ ತೆರವು ಕಾರ್ಯಾಚರಣೆ ನಡೆಯುತ್ತಿದೆ.

ಹೆದ್ದಾರಿಗೆ ಬಿದ್ದ ಬೃಹತ್‌ ಮರ

ಉತ್ತರಕನ್ನಡ ಜಿಲ್ಲೆಯಲ್ಲಿ ವರುಣಾರ್ಭಟ ಮುಂದುವರಿದಿದ್ದು, ಶಿರಸಿ-ಹೊಸನಗರ ರಾಜ್ಯ ಹೆದ್ದಾರಿಗೆ ಬೃಹತ್ ಮರವೊಂದು ಬಿದ್ದಿದೆ. ಶಿರಸಿ ತಾಲೂಕಿನ ಗುಡ್ನಾಪುರ ಗ್ರಾಮದ ಬಳಿ ಘಟನೆ ನಡೆದಿದೆ. ಮರ ಬಿದ್ದ ಪರಿಣಾಮ ಶಿರಸಿ-ಬನವಾಸಿ ರಸ್ತೆ ಸಂಚಾರ ಬಂದ್ ಆಗಿದ್ದು, ಮರ ಬಿದ್ದ ಪರಿಣಾಮ ಹಲವು ವಿದ್ಯುತ್ ಕಂಬಗಳಿಗೆ ಹಾನಿಯಾಗಿದೆ. ಅರಣ್ಯ, ಲೋಕೋಪಯೋಗಿ ಇಲಾಖೆ, ಹೆಸ್ಕಾಂ, ಪೊಲೀಸ್ ಇಲಾಖೆಯಿಂದ ತೆರವು ಕಾರ್ಯಾಚರಣೆ ನಡೆದಿದೆ.

ಭಾರಿ ಮಳೆಗೆ ಸೋರುತ್ತಿರುವ ಗ್ರಂಥಾಲಯ

ಭಾರಿ ಮಳೆಗೆ ಹಾಸನ ಜಿಲ್ಲೆಯ ಸಕಲೇಶಪುರ ಪಟ್ಟಣದ ಸಕಲೇಶಪುರ ಪಟ್ಟಣದ ಐಬಿ ರಸ್ತೆಯಲ್ಲಿರುವ ಸ್ಕೌಟ್ ಅಂಡ್ ಗೈಡ್ ಕಟ್ಟಡದಲ್ಲಿರುವ ಗ್ರಂಥಾಲಯ ಸೋರುತಿದ್ದು, ಪುಸ್ತಕಗಳು ನೀರುಪಾಲಾಗಿವೆ. ಗ್ರಂಥಾಲಯದ ಹೆಂಚುಗಳು ಹೊಡೆದು ಹೋಗಿದ್ದು, ಯಾವ ಕ್ಷಣದಲ್ಲಾದರೂ ಲೈಬ್ರರಿ ಬೀಳುವ ಸಾಧ್ಯತೆ ಇದೆ. ಸೋರುತ್ತಿರುವ ಮಳೆ ನೀರಿನಿಂದ ಲಕ್ಷಾಂತರ ರೂ ಮೌಲ್ಯದ ಅಮೂಲ್ಯ ಪುಸ್ತಕಗಳಿಗೆ ಹಾನಿಯಾಗಿದೆ.

ಇದನ್ನೂ ಓದಿ: Karnataka Rain : ಭಾರಿ ಮಳೆ-ಗಾಳಿಗೆ ಯುವಕನ ತಲೆ ಮೇಲೆ ಮುರಿದು ಬಿದ್ದ ವಿದ್ಯುತ್‌ ಕಂಬ

ಊರ ಬಾಗಿಲಿಗೆ ಬಂದು‌ನಿಂತ ಘಟಪ್ರಭಾ ನದಿ ನೀರು

ಬೆಳಗಾವಿಯಲ್ಲಿ ಅಪಾಯದ ಮಟ್ಟ ಮೀರಿ ಘಟಪ್ರಭಾ ನದಿ ಹರಿಯುತ್ತಿದ್ದು, ಊರ ಬಾಗಿಲಿಗೆ ಬಂದು‌ನಿಂತಿದೆ. ಮುಸಗುಪ್ಪಿ ಗ್ರಾಮಕ್ಕೆ ಪ್ರವಾಹದ ಆತಂಕ ಶುರುವಾಗಿದೆ. ನದಿ ಪಕ್ಕದ ಕಬ್ಬು ಸೇರಿದಂತೆ ಹಲವು ಬೆಳೆಗಳು ಸಂಪೂರ್ಣ ಜಲಾವೃತಗೊಂಡಿದೆ. ಇನ್ನೂ ಮಹಾರಾಷ್ಟ್ರದ ಘಟ್ಟ ಪ್ರದೇಶದಲ್ಲಿ ಬಿಟ್ಟು ಬಿಡದೇ ಮಳೆ ಸುರಿಯುತ್ತಿದ್ದು, ಕೃಷ್ಣಾ ನದಿ ತೀರದಲ್ಲಿ ಪ್ರವಾಹದ ಆತಂಕ ಎದುರಾಗಿದೆ.

ಕೃಷ್ಣೆಯ ಜತೆಗೆ ದೂದಗಂಗಾ, ವೇದಗಂಗಾ ಹಾಗೂ ಹೀರಣ್ಯಕೇಶಿ ನದಿಗಳ ನೀರಿನ ಮಟ್ಟದಲ್ಲೂ ಏರಿಕೆಯಾಗಿದ್ದು, ಈಗಾಗಲೇ ಚಿಕ್ಕೋಡಿ ಉಪ ವಿಭಾಗ ವ್ಯಾಪ್ತಿಯ 7 ಸೇತುವೆಗಳು ಮುಳುಗಡೆಯಾಗಿವೆ. ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಕಲ್ಲೋಳ‌ ಗ್ರಾಮದವರಿಗೂ ನದಿ ತೀರಕ್ಕೆ ಹೋಗದಂತೆ ಜಿಲ್ಲಾಡಳಿತದಿಂದ ಕಟ್ಟು ನಿಟ್ಟಿನ ಎಚ್ಚರಿಕೆವಹಿಸಿದೆ.

ಹಾವೇರಿ ಜಿಲ್ಲೆಯಲ್ಲಿ ಮಳೆ ಮುಂದುವರಿದಿದ್ದು, ಧರ್ಮಾ ನದಿ ಉಕ್ಕಿ ಹರಿಯುತ್ತಿದೆ. ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನಲ್ಲಿ ಹರಿದಿರುವ ಧರ್ಮಾ ಕಾಲುವೆಯಲ್ಲಿ ನೀರಿನ ಹರಿವು ಹೆಚ್ಚಾಗಿದೆ. ಹಾನಗಲ್ ತಾಲೂಕಿನ ಕಂಚಿನೆಗಳೂರು ಬಳಿ ಜಲಪಾತ ಸೃಷ್ಟಿಯಾಗಿದೆ. ವರದಾನದಿಯ ಅಬ್ಬರಕ್ಕೆ ಹಾವೇರಿಯ ಹೊಸರಿತ್ತಿಯಲ್ಲಿರುವ ಮಂತ್ರಾಲಯ ರಾಘವೇಂದ್ರ ಸ್ವಾಮಿಗಳ ಮೂಲ ಸಂಸ್ಥಾನ ಮಟ ಜಲಾವೃತಗೊಂಡಿದೆ. ಮಠದ ಒಳಗೆ ನೀರು ನುಗ್ಗುವ ಆತಂಕಇದ್ದು, ನೂರಾರು ಎಕರೆ ಬೆಳೆ ಮುಳುಗಡೆಯಾಗಿದೆ.

ಕೆಆರ್‌ಎಸ್‌ ಬೋಟಿಂಗ್‌ ಪಾಯಿಂಟ್‌ಗೆ ನಿಷೇಧ

ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನಲ್ಲಿರುವ ಕೆಆರ್‌ಎಸ್‌ನ ಬೋಟಿಂಗ್ ಪಾಯಿಂಟ್‌ಗೆ ಸಾರ್ವಜನಿಕರಿಗೆ ನಿಷೇಧ ಹೇರಲಾಗಿದೆ. ಜನರು ಓಡಾಡುವ ಸ್ಥಳದಲ್ಲೂ ನೀರು ತುಂಬಿದೆ. ನೀರಿನ ಪ್ರಮಾಣ ಕಡಿಮೆ ಆಗುವವರೆಗೂ ಬೋಟಿಂಗ್ ಸ್ಥಗಿತ ಮಾಡಲಾಗಿದೆ.

ತುಮಕೂರಿನಲ್ಲಿ ಕೆಸರು ಗದ್ದೆಯಂತಾದ ರಸ್ತೆ

ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ತುಮಕೂರಿನ ಹಿರೇಹಳ್ಳಿಯಲ್ಲಿ ರಸ್ತೆಯು ಕೆಸರು ಗದ್ದೆಯಂತಾಗಿದೆ. ಹಿರೇಹಳ್ಳಿ ಇಂಡಸ್ಟ್ರಿಯಲ್ ಏರಿಯಾಗೆ ಕೆಲಸಕ್ಕೆ ಹೋಗಲು ಪ್ರತಿನಿತ್ಯ ನೂರಾರು ವಾಹನಗಳು ಓಡಾಟ ನಡೆಸುತ್ತವೆ. ರಸ್ತೆಯಲ್ಲಿ ಎರಡು ಮೂರು ಅಡಿಗಳಷ್ಟು ಗುಂಡಿ ಬಿದ್ದರು ರಸ್ತೆ ಸರಿಪಡಿಸದೆ ಅಧಿಕಾರಿಗಳು ನಿರ್ಲಕ್ಷ್ಯ ತೋರಿದ್ದಾರೆ.

ಇದನ್ನೂ ಓದಿ: Forced Conversion : ಮಂತ್ರಾಲಯಕ್ಕೆ ಪಾದಯಾತ್ರೆ ತೆರಳುತ್ತಿದ್ದವರಿಗೆ ಬ್ರೈನ್‌ ವಾಶ್‌; ಮತಾಂತರಕ್ಕೆ ಯತ್ನಿಸಿದ ಇಬ್ಬರು ಅರೆಸ್ಟ್‌

ನಿರಂತರ ಜಡಿ ಮಳೆ ಎಫೆಕ್ಟ್‌; ಅಡಿಕೆ ಕೊಯ್ಲಿಗೆ ತೊಂದರೆ

ದಾವಣಗೆರೆ ಜಿಲ್ಲೆಯ ಚನ್ನಗಿರಿ ರಾಜ್ಯದಲ್ಲಿ ಅತಿ ಹೆಚ್ಚು ಅಡಿಕೆ ಬೆಳೆಯುವ ತಾಲೂಕಾಗಿದೆ. 36 ಸಾವಿರ ಹೆಕ್ಟೇರ್ ಪ್ರದೇಶದಲ್ಲಿನ ಅಡಿಕೆ ಬೆಳೆ ಕೊಯ್ಲಿಗೆ ಬಂದಿದೆ. ಆದರೆ ನಿರಂತರ ಜಡಿ ಮಳೆಯಿಂದಾಗಿ ಕೊಯ್ಲಿಗೆ ತೊಂದರೆ ಆಗುತ್ತಿದೆ. ರೈತರು ಕಳೆದ ವರ್ಷ ಮಳೆಯಿಲ್ಲದೇ ಟ್ಯಾಂಕರ್ ಮೂಲಕ ನೀರು ಪೂರೈಸಿ ಅಡಿಕೆ ತೋಟ ಉಳಿಸಿಕೊಂಡಿದ್ದರು. ಈ ವರ್ಷ ಉತ್ತಮ‌ ಮಳೆಯಾಗುತ್ತಿದ್ದು, ನಿರಂತರ ಜಡಿ ಮಳೆಯಾಗುತ್ತಿರುವ ಹಿನ್ನೆಲೆ ಅಡಿಕೆ ತೋಟಗಳಲ್ಲಿ ಹೆಜ್ಜೆ ಇಡದ ಸ್ಥಿತಿ ನಿರ್ಮಾಣವಾಗಿದೆ. ಅಡಿಕೆ ಕೊಯ್ಲಿ ಮಾಡದಿದ್ದರೇ ಅಡಿಕೆ ಗೋಟು ಆಗುವ ಭಯವಿದೆ. ಅಡಿಕೆ ಗೋಟು ಆದರೆ ಮಾರುಕಟ್ಟೆಯಲ್ಲಿ ದರ ಕಡಿಮೆಯಾಗಲಿದೆ.

ಬಿರುಗಾಳಿಗೆ ಮುರಿದು ಬಿದ್ದ ವಿದ್ಯುತ್‌ ಕಂಬ

ಕಾಫಿನಾಡು ಚಿಕ್ಕಮಗಳೂರಲ್ಲಿ ಮಳೆ ತಗ್ಗಿದ್ದರೂ ಗಾಳಿ ವೇಗ ತಗ್ಗುತ್ತಿಲ್ಲ. ಭಾರಿ ಗಾಳಿಗೆ ಬೃಹತ್ ವಿದ್ಯುತ್ ಕಂಬ ಮುರಿದು ಬಿದ್ದಿದೆ. 66 ಕೆ.ವಿ. ವಿದ್ಯುತ್ ಟವರ್ ಅರ್ಧಕ್ಕೆ ಮುರಿದು ಬಿದ್ದಿದೆ. ಚಿಕ್ಕಮಗಳೂರು ತಾಲೂಕಿನ ವಸ್ತಾರೆ ಸಮೀಪದ ಆಮೆಕಟ್ಟೆ ಬಳಿ ಘಟನೆ ನಡೆದಿದೆ. ಆಲ್ದೂರು ಹೋಬಳಿಯ ಹತ್ತಾರು ಹಳ್ಳಿಗಳಿಗೆ ವಿದ್ಯುತ್ ಸಂಪರ್ಕ ಬಂದ್ ಆಗಿದೆ. ಇನ್ನು ಎರಡು ದಿನ ಕತ್ತಲಲ್ಲಿ ಕಳೆಯುವಂತಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Weather : ಬೆಂಗಳೂರಿನಲ್ಲಿ ಗಾಳಿ ಸಹಿತ ಮಳೆ; ಕರಾವಳಿ, ಮಲೆನಾಡಿಗೂ ಎಚ್ಚರಿಕೆ

Karnataka Weather Forecast: ಕರಾವಳಿ ಮತ್ತು ಮಲೆನಾಡು ಭಾಗದಲ್ಲಿ ವ್ಯಾಪಕ ಮಳೆಯಾಗುವ( rain news) ಸಾಧ್ಯತೆ ಇದ್ದು, ಉತ್ತರ ಒಳನಾಡಿನ ಜಿಲ್ಲೆಗಳಿಗೂ ಅಲರ್ಟ್‌ ನೀಡಲಾಗಿದೆ. ಎಲ್ಲೆಲ್ಲಿ ಮಳೆಯ ಅಬ್ಬರ ಇರಲಿದೆ ಎಂಬುದರ ಮಾಹಿತಿ ಇಲ್ಲಿದೆ.

VISTARANEWS.COM


on

By

karnataka weather Forecast
Koo

ಬೆಂಗಳೂರು: ರಾಜ್ಯಾದ್ಯಂತ ಮಳೆ ಅಬ್ಬರ (Karnataka Weather Forecast) ಮುಂದುವರಿಯಲಿದೆ. ಜು.22ರಂದು ಕರ್ನಾಟಕದ ಕರಾವಳಿಯಲ್ಲಿ ಸಾಧಾರಣದಿಂದ ಭಾರೀ ಮಳೆಯಾದರೆ, ಮಲೆನಾಡಿನಲ್ಲಿ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗುವ (Rain News) ಸಾಧ್ಯತೆ ಇದೆ. ಉಳಿದಂತೆ ಉತ್ತರ ಒಳನಾಡಿನಲ್ಲಿ ಪ್ರತ್ಯೇಕವಾಗಿ ಭಾರಿ ಮಳೆಯಾಗುವ ನಿರೀಕ್ಷೆ ಇದ್ದು, ದಕ್ಷಿಣ ಒಳನಾಡಿನಲ್ಲಿ ಬಲವಾದ ಮೇಲ್ಮೈ ಗಾಳಿಯೊಂದಿಗೆ ಪ್ರತ್ಯೇಕವಾಗಿ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ.

ದಾವಣಗೆರೆ, ಬೆಳಗಾವಿಯಲ್ಲಿ ಅಬ್ಬರಿಸುವ ಮಳೆ

ದಕ್ಷಿಣ ಒಳನಾಡಿನ ದಾವಣಗೆರೆ ಜಿಲ್ಲೆಯಾದ್ಯಂತ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಉಳಿದ ಜಿಲ್ಲೆಗಳಲ್ಲಿ ಹಗುರವಾದ ಮಳೆಯಾಗಲಿದೆ. ಉತ್ತರ ಒಳನಾಡಿನ ಬೆಳಗಾವಿ ಜಿಲ್ಲೆಯಾದ್ಯಂತ ಚದುರಿದಂತೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಉಳಿದ ಜಿಲ್ಲೆಗಳಲ್ಲಿ ಮಧ್ಯಮ ಮಳೆಯಾಗಲಿದೆ.

ಮಲೆನಾಡಿನ ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಲಿದೆ. ಕೊಡಗು ಮತ್ತು ಹಾಸನ ಜಿಲ್ಲೆಗಳಲ್ಲಿ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಕರಾವಳಿಯ ಉಡುಪಿ ಮತ್ತು ದಕ್ಷಿಣ ಕನ್ನಡ , ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ.

ಇದನ್ನೂ ಓದಿ: Karnataka Rain : ಭರ್ತಿಯತ್ತ ಜಲಾಶಯಗಳು; ಪ್ರವಾಹ ಭೀತಿ ಹಿನ್ನೆಲೆ ನದಿ ತೀರದಲ್ಲಿ ಹೈ ಅಲರ್ಟ್

ಬೆಂಗಳೂರಲ್ಲಿ ಗಾಳಿ ಜತೆಗೆ ಮಳೆ

ಬೆಂಗಳೂರು ಸುತ್ತಮುತ್ತ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿದ್ದು, ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 27 ಡಿಗ್ರಿ ಸೆಲ್ಸಿಯಸ್ ಮತ್ತು 21 ಡಿಗ್ರಿ ಸೆಲ್ಸಿಯಸ್ ಇರಲಿದೆ. ಇನ್ನೂ ಗಂಟೆಗೆ 40-50 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ.

ಆರೆಂಜ್‌ ಅಲರ್ಟ್‌ ಘೋಷಣೆ

ಭಾರೀ ಮಳೆಯೊಂದಿಗೆ ಗಂಟೆಗೆ 40-50 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದೆ. ಹೀಗಾಗಿ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಜತೆಗೆ ಬೆಳಗಾವಿ, ಬೀದರ್, ಕಲಬುರಗಿ, ಹಾಸನ, ಕೊಡಗು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Weather : ಥಂಡಿ ಮಿಶ್ರಿತ ಗಾಳಿ-ಮಳೆಗೆ ಹೈರಣಾದ ಜನತೆ; ಜು.25ರವರಗೆ ಮಳೆ ಮುಂದುವರಿಕೆ

Karnataka Weather Forecast : ರಾಜ್ಯಾದ್ಯಂತ ಮಳೆಯಾಟ (Rain News) ಮುಂದುವರಿದಿದ್ದು, ಜನರು ತತ್ತರಿಸಿ ಹೋಗಿದ್ದಾರೆ. ಮಳೆಗೆ ಮನೆಯಿಂದ ಹೊರಬರಲು ಆಗದೆ ಒಳಗೆ ಕೂರಲು ಆಗದೆ ಚಡಪಡಿಸುವಂತಾಗಿದೆ. ಸದ್ಯ ಮುಂದಿನ ಐದು ದಿನಗಳಿಗೆ ಮಳೆ ಮುನ್ಸೂಚನೆಯನ್ನು ನೀಡಲಾಗಿದೆ.

VISTARANEWS.COM


on

By

karnataka Weather Forecast
Koo

ಬೆಂಗಳೂರು/ವಿಜಯನಗರ: ಭಾನುವಾರ ಬೆಂಗಳೂರು ಸೇರಿದಂತೆ ಹಲವೆಡೆ ಮಳೆಯು (Karnataka Weather Forecast) ಅಬ್ಬರಿಸಿದೆ. ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ಮಧ್ಯಾಹ್ನದಿಂದ ಜಿಟಿಜಿಟಿ ಮಳೆಯಾಗಿತ್ತು. ಥಂಡಿ ಮಿಶ್ರಿತ ಗಾಳಿ ಜತೆಗೆ ಜಿಟಿ ಜಿಟಿ ಮಳೆಗೆ (Rain news) ಜನರು ಹೈರಾಣಾದರು. ಹಡಗಲಿ, ಹರಪನಹಳ್ಳಿ, ಕೂಡ್ಲಿಗಿ, ಕೊಟ್ಟೂರು, ಹಗರಿಬೊಮ್ಮನಹಳ್ಳಿ ತಾಲೂಕುಗಳಲ್ಲಿಯೂ ಇದೇ ರೀತಿಯ ವಾತಾವರಣ ಇತ್ತು.

ಇನ್ನೂ ಜು.22ರಂದು ಕರಾವಳಿಯ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಪ್ರತ್ಯೇಕವಾದ ಭಾರೀ ಮಳೆಯೊಂದಿಗೆ ನಿರಂತರ ಗಾಳಿಯ ವೇಗ 30-40 ಕಿಮೀ ತಲುಪುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಬಹುತೇಕ ಸ್ಥಳಗಳಲ್ಲಿ ಲಘುವಾಗಿ ಮಧ್ಯಮ ಮಳೆ ಜತೆಗೆ ಗಾಳಿಯು ಸಾಥ್‌ ನೀಡಲಿದೆ. ದಕ್ಷಿಣ ಒಳನಾಡಿನ ಎಲ್ಲಾ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ.

ಬೆಂಗಳೂರಲ್ಲಿ ಹಗುರ ಮಳೆ

ಬೆಂಗಳೂರಿನಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ. ಥಂಡಿ ಗಾಳಿ ಜತೆಗೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 27 ಮತ್ತು 21 ಡಿ.ಸೆ ಇರಲಿದೆ.

ಇದನ್ನೂ ಓದಿ: Karnataka Rain : ಭರ್ತಿಯತ್ತ ಜಲಾಶಯಗಳು; ಪ್ರವಾಹ ಭೀತಿ ಹಿನ್ನೆಲೆ ನದಿ ತೀರದಲ್ಲಿ ಹೈ ಅಲರ್ಟ್

ಬೆಳಗಾವಿಯಲ್ಲಿ 17 ಸಂಪರ್ಕ ಸೇತುವೆಗಳು ಜಲಾವೃತ

ಬೆಳಗಾವಿ: ಭಾರಿ ಮಳೆಗೆ (Karnataka Rain) ಬೆಳಗಾವಿ ಜಿಲ್ಲೆಗೆ ಸಪ್ತ ನದಿಗಳ ನೆರೆ ಭೀತಿ ಶುರುವಾಗಿದೆ. ಬೆಳಗಾವಿ ಜಿಲ್ಲೆಯಲ್ಲಿ ಕೇವಲ ಐದು ದಿನದಲ್ಲಿ 17 ಸಂಪರ್ಕ ಸೇತುವೆಗಳು ಜಲಾವೃತಗೊಂಡಿದೆ. ಚಿಕ್ಕೋಡಿ ಉಪವಿಭಾಗ ವ್ಯಾಪ್ತಿಯ ಏಳು ಸೇತುವೆಗಳು ಹಾಗೂ ಬೆಳಗಾವಿ ವ್ಯಾಪ್ತಿಯಲ್ಲಿ ಹತ್ತು ಸಂಪರ್ಕ ಸೇತುವೆ ಮುಳುಗಡೆಯಾಗಿವೆ.

ದೂದಗಂಗಾ ನದಿಗೆ ದತ್ತವಾಡ-ಮಲ್ಲಿಕವಾಡ, ಬೋಜ್-ಕಾರದಗಾ, ಬೋಜವಾಡಿ-ಕುಣ್ಣೂರ ಹಾಗೂ ವೇದಗಂಗಾ ನದಿಗೆ ಜತ್ರಾಟ-ಭೀವಶಿ, ಅಕ್ಕೋಳ-ಸಿದ್ನಾಳ, ಕೃಷ್ಣಾ ನದಿಗೆ ಮಾಂಜರಿ-ಬಾವನಸೌದತ್ತಿ, ಹಿರಣ್ಯಕೇಶಿ ನದಿಗೆ ಯರನಾಳ-ಮದಮಕ್ಕನಾಳ ಸೇರಿ ಘಟಪ್ರಭಾ ನದಿಗೆ ಸುಣಧೋಳಿ – ಮೂಡಲಗಿ, ಅವರಾದಿ- ನಂದಗಾಂವ, ಕಮಲದಿನ್ನಿ – ಹುಣಶ್ಯಾಳ ಪಿವೈ, ವಡ್ಡರಹಟ್ಟಿ- ಉದಗಟ್ಟಿ, ಗೋಕಾಕ್-ಶಿಂಗಳಾಪುರ, ಮಲಪ್ರಭಾಗೆ ಖಾನಾಪುರ-ಹೆಮ್ಮಡಗಾ, ಸಾತ್ನಾಳಿ-ಮಾಸಾಳಿ ಸಂಪರ್ಕ ಕಡಿತಗೊಂಡಿದೆ. ಇದರಿಂದ ಬರೋಬ್ಬರಿ 34 ಗ್ರಾಮಗಳಿಗೆ ಸಂಪರ್ಕ ಕಡಿತವಾಗಿದ್ದು, ಕಿ.ಮೀ ಗಟ್ಟಲೇ ಸುತ್ತಿ ಹಾಕಿ ಓಡಾಡುವಂತಾಗಿದೆ.

ಕೊಡಗಿನಲ್ಲಿ ಕರೆಂಟ್‌ ಶಾಕ್‌ಗೆ ಎತ್ತು ಸಾವು

ಕೊಡಗು: ಗದ್ದೆಯಲ್ಲಿ ವಿದ್ಯುತ್ ಸ್ಪರ್ಶಿಸಿ ಎತ್ತೊಂದು ಮೃತಪಟ್ಟಿದೆ. ಮತ್ತೊಂದು ಎತ್ತು ಹಾಗೂ ರೈತನ ಕುಟುಂಬ ಹಾಗೂಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕೊಡಗಿನ ಸೋಮವಾರಪೇಟೆ ತಾಲೂಕಿನ ದೊಡ್ಡಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ.

ಗದ್ದೆಯಲ್ಲಿ ಉಳುಮೆ ಮಾಡುತ್ತಿದ್ದ ಸಂದರ್ಭದಲ್ಲಿ ಕರೆಂಟ್‌ ಶಾಕ್‌ ಹೊಡೆದಿದೆ. ಈ ವೇಳೆ ಒಂದು ಎತ್ತು ಮೃತಪಟ್ಟರೆ, ಕುಂಬಗೌಡನ ಸದಾ ಅವರ ಪತ್ನಿ ವೀಣಾ, ಮತ್ತೊಂದು ಎತ್ತು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಭಾರಿ ಮಳೆ ಹಿನ್ನೆಲೆಯಲ್ಲಿ ಕಂಬದಿಂದ ವಿದ್ಯುತ್ ಲೀಕೇಜ್‌ ಆಗಿದ್ದೆ ಈ ಅವಘಡಕ್ಕೆ ಕಾರಣ ಎನ್ನಲಾಗಿದೆ. ಸ್ಥಳಕ್ಕೆ ಚೆಸ್ಕಾಂ ಸಿಬ್ಬಂದಿ ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Chaluvadi Narayanaswamy
ಕರ್ನಾಟಕ51 mins ago

Chaluvadi Narayanaswamy : ಛಲವಾದಿ ನಾರಾಯಣಸ್ವಾಮಿ ವಿಧಾನ ಪರಿಷತ್​​ನ ಪ್ರತಿಪಕ್ಷದ ನಾಯಕ

NEET
ಕರ್ನಾಟಕ1 hour ago

NEET: ನೀಟ್‌ ಪರೀಕ್ಷೆಗೆ ವಿರೋಧ, ಬೆಂಗಳೂರು ವಿಭಜನೆಗೆ ಅಸ್ತು; ರಾಜ್ಯ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ

DK Shivakumar
ಕರ್ನಾಟಕ1 hour ago

DK Shivakumar: ರೈತನಿಗೆ ಪ್ರವೇಶ ನಿರ್ಬಂಧ ಖಂಡನೀಯ; ಮಾಲ್ ಸೇರಿ ಇತರೆಡೆ ಶೀಘ್ರ ವಸ್ತ್ರ ಸಂಹಿತೆ ಜಾರಿ ಎಂದ ಡಿಕೆಶಿ

Veerabaswanthreddy Mudnal
ಶ್ರದ್ಧಾಂಜಲಿ2 hours ago

Veerabaswanthreddy Mudnal: ಮಾಜಿ ಶಾಸಕ ಡಾ.ವೀರಬಸವಂತರೆಡ್ಡಿ ಮುದ್ನಾಳ ಅನಾರೋಗ್ಯದಿಂದ ನಿಧನ

Rahat Fateh Ali Khan
ವಿದೇಶ2 hours ago

Rahat Fateh Ali Khan: ದುಬೈನಲ್ಲಿ ಪಾಕಿಸ್ತಾನದ ಗಾಯಕನ ಬಂಧನ; ಎಸಗಿದ ಕೃತ್ಯವೇನು?

Valmiki Corporation Scam
ಕರ್ನಾಟಕ2 hours ago

Valmiki Corporation Scam: ಬಿ. ನಾಗೇಂದ್ರ ಹೆಸರೇಳುವಂತೆ ಒತ್ತಡ; ಇಡಿ ಅಧಿಕಾರಿಗಳ ವಿರುದ್ಧ ಎಫ್‌ಐಆರ್‌

Tata Curvv
ಆಟೋಮೊಬೈಲ್2 hours ago

Tata Curvv : ಎಸ್​ಯುವಿ ವಿಭಾಗದಲ್ಲಿ ವಿಭಿನ್ನ ವಿನ್ಯಾಸದ ಕಾರನ್ನು ಪರಿಚಯಿಸಿದ ಮಾಡಿದ ಟಾಟಾ

Kempambudi lake encroachment cleared soon says DCM DK Shivakumar
ಕರ್ನಾಟಕ2 hours ago

Assembly Session 2024: ಕೆಂಪಾಂಬುದಿ ಕೆರೆ ಒತ್ತುವರಿ ಶೀಘ್ರ ತೆರವು; ಡಿ.ಕೆ.ಶಿವಕುಮಾರ್

Viral Video
ವೈರಲ್ ನ್ಯೂಸ್2 hours ago

Viral Video: ಸ್ಕೂಟರ್‌ಗೆ ಅಪ್ಪಳಿಸಿದ ಕಾರು; 10 ಅಡಿ ಮೇಲಕ್ಕೆ ಹಾರಿ ಬಿದ್ದ ತಾಯಿ, ಮಗ

TA Sharavana questioned about the continuous variation in the service of 108 Ambulance even after 7 years there is no new tender
ಬೆಂಗಳೂರು3 hours ago

TA Sharavana: 108 ಆಂಬ್ಯುಲೆನ್ಸ್‌ಗೆ 7 ವರ್ಷ ಕಳೆದರೂ ಹೊಸ ಟೆಂಡರ್‌ ಇಲ್ಲ ಯಾಕೆ? ಟಿ. ಎ. ಶರವಣ ಪ್ರಶ್ನೆ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Rain
ಮಳೆ2 days ago

Karnataka Rain : ಭಾರಿ ಮಳೆಗೆ ಮನೆ ಗೋಡೆ ಕುಸಿತ; ಕೊಟ್ಟಿಗೆಯಲ್ಲಿದ್ದ ಜಾನುವಾರುಗಳು ಸಾವು

karnataka Rain
ಮಳೆ2 days ago

Karnataka Rain : ಹಳ್ಳ ದಾಟಲು ಹೋಗಿ ನೀರುಪಾಲಾದ ಜಾನುವಾರು; ಬಿರುಗಾಳಿಗೆ ಕಳಚಿದ ವಿಂಡ್‌ ಫ್ಯಾನ್‌

karnataka Rain
ಮಳೆ3 days ago

Karnataka Rain : ಬೀದಿಗೆ ತಂದ ರಣಮಳೆ; ಮನೆ ಕುಸಿದು ಬಿದ್ದು 9 ತಿಂಗಳ ಗರ್ಭಿಣಿ ನರಳಾಟ

Karnataka Rain
ಮಳೆ3 days ago

Karnataka Rain : ರಾಜ್ಯದಲ್ಲಿ ಮಳೆಯ ಆರ್ಭಟ; ರಾತ್ರಿ ಕಳೆದು ಬೆಳಗಾಗುವುದರೊಳಗೆ ಕಂದಕ ನಿರ್ಮಾಣ

Karnataka Rain
ಮಳೆ4 days ago

Karnataka Rain : ಭಾರಿ ಮಳೆ ಎಫೆಕ್ಟ್‌; ಉಕ್ಕಿ ಹರಿಯುತ್ತಿದ್ದ ನದಿಯಲ್ಲಿ ಕೊಚ್ಚಿ ಹೋದ ರಾಸು

Uttara Kannada Landslide
ಮಳೆ4 days ago

Uttara Kannada Landslide: ಶಿರೂರು ಗುಡ್ಡ ಕುಸಿತ; ಅಖಾಡಕ್ಕಿಳಿದ ಜಿಯೊಲಾಜಿಕಲ್ ಸರ್ವೆ ಆಫ್ ಇಂಡಿಯಾ ಟೀಂ

Karnataka Rain
ಮಳೆ6 days ago

Karnataka Rain : ಕಾರವಾರದಲ್ಲಿ ಮಳೆ ಅವಾಂತರ; ಮನೆ ಮೇಲೆ ಗುಡ್ಡ ಕುಸಿದು ವೃದ್ಧ ಸಾವು

karnataka Rain
ಮಳೆ6 days ago

Karnataka Rain : ಭಾರಿ ಮಳೆಗೆ ನಿಯಂತ್ರಣ ತಪ್ಪಿ ಕೆರೆಗೆ ಉರುಳಿ ಬಿದ್ದ ಕಾರು; ನಾಲ್ವರು ಪ್ರಾಣಾಪಾಯದಿಂದ ಪಾರು

karnataka Weather Forecast
ಮಳೆ1 week ago

Karnataka Weather : ವ್ಯಾಪಕ ಮಳೆ ಎಚ್ಚರಿಕೆ; ನಾಳೆಯೂ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

karnataka Rain
ಮಳೆ1 week ago

Karnataka Rain : ಶಾಲಾ-ಕಾಲೇಜಿಗೆ ಈ ದಿನ ರಜಾ; ಅಬ್ಬರಿಸುತ್ತಿರುವ ಮಳೆಗೆ ಮನೆಯಲ್ಲೇ ಎಲ್ಲರೂ ಸಜಾ!

ಟ್ರೆಂಡಿಂಗ್‌