Guru Purnima 2024: ನಮ್ಮ ಆಚಾರ-ವಿಚಾರಗಳು ಹಿಂದೂ ಸಂಸ್ಕೃತಿಗನುಸಾರ ಇರಬೇಕು; ಮೋಹನ ಗೌಡ - Vistara News

ಬೆಂಗಳೂರು

Guru Purnima 2024: ನಮ್ಮ ಆಚಾರ-ವಿಚಾರಗಳು ಹಿಂದೂ ಸಂಸ್ಕೃತಿಗನುಸಾರ ಇರಬೇಕು; ಮೋಹನ ಗೌಡ

Guru Purnima 2024: ನಮ್ಮ ಆಚಾರ-ವಿಚಾರಗಳು ಹಿಂದೂ ಸಂಸ್ಕೃತಿಗನುಸಾರ ಇರಬೇಕು. ‘ರಾಮ-ಕೃಷ್ಣʼ ನಮ್ಮ ಆದರ್ಶವಾಗಿದ್ದಾರೆ. ನಮ್ಮ ನಿತ್ಯ ವ್ಯವಹಾರದಲ್ಲಿ ನಮ್ಮ ಸಂಸ್ಕೃತಿಯ ರಕ್ಷಣೆ ಮತ್ತು ಪಾಲನೆ ಮಾಡಬೇಕು ಎಂದು ಹಿಂದೂ ಜನಜಾಗೃತಿ ಸಮಿತಿ ರಾಜ್ಯ ವಕ್ತಾರ ಮೋಹನ ಗೌಡ ತಿಳಿಸಿದ್ದಾರೆ.

VISTARANEWS.COM


on

Hindu Jana Jagruti Samiti State Spokesperson Mohan Gowda speech
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ರಾಮರಾಜ್ಯಕ್ಕಾಗಿ ಸಾಧನೆ ಮಾಡುವುದರ ಜತೆಗೆ ಭ್ರಷ್ಟಾಚಾರ, ಅನೈತಿಕತೆ ಮತ್ತು ಅರಾಜಕತೆಯ ವಿರುದ್ಧ ಹೋರಾಡಬೇಕಿದೆ ಎಂದು ಹಿಂದೂ ಜನಜಾಗೃತಿ ಸಮಿತಿ ರಾಜ್ಯ ವಕ್ತಾರ ಮೋಹನ ಗೌಡ (Guru Purnima 2024) ತಿಳಿಸಿದರು.

ಹಿಂದೂ ಜನಜಾಗೃತಿ ಸಮಿತಿಯ ವತಿಯಿಂದ ನಗರದ ಕಾಮಾಕ್ಷಿಪಾಳ್ಯದ ಧನಂಜಯ ಪ್ಯಾಲೇಸ್‌ನಲ್ಲಿ ಆಯೋಜಿಸಲಾಗಿದ್ದ ಗುರುಪೂರ್ಣಿಮಾ ಮಹೋತ್ಸವದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ವೈಯಕ್ತಿಕ ಜೀವನದಲ್ಲಿ ಆಧ್ಯಾತ್ಮಿಕ ಸಾಧನೆಯಿಂದ ಅಂತರಂಗದಲ್ಲಿ ರಾಮರಾಜ್ಯದ ಸ್ಥಾಪನೆ ಮಾಡಬಹುದು ಆದರೆ ಸಾಮಾಜಿಕ ಮತ್ತು ರಾಷ್ಟ್ರೀಯ ಜೀವನದಲ್ಲಿ ರಾಮರಾಜ್ಯದ ಸ್ಥಾಪನೆಗಾಗಿ ನಾವು ಕರ್ತವ್ಯನಿಷ್ಠರಾಗಿ ನಿಭಾಯಿಸುವುದರೊಂದಿಗೆ ಭ್ರಷ್ಟಾಚಾರ, ಅನೈತಿಕತೆ ಮತ್ತು ಅರಾಜಕತೆಯ ವಿರುದ್ಧ ಹೋರಾಡಬೇಕಿದೆ.

ನಮ್ಮ ಆಚಾರ-ವಿಚಾರಗಳು ಹಿಂದೂ ಸಂಸ್ಕೃತಿಗನುಸಾರ ಇರಬೇಕು. ‘ರಾಮ-ಕೃಷ್ಣʼ ನಮ್ಮ ಆದರ್ಶವಾಗಿದ್ದಾರೆ. ನಮ್ಮ ನಿತ್ಯ ವ್ಯವಹಾರದಲ್ಲಿ ನಮ್ಮ ಸಂಸ್ಕೃತಿಯ ರಕ್ಷಣೆ ಮತ್ತು ಪಾಲನೆ ಮಾಡಬೇಕು ಎಂದು ಅವರು ಕರೆ ನೀಡಿದರು.

ಇದನ್ನೂ ಓದಿ: Union Budget 2024: ಕೇಂದ್ರ ಬಜೆಟ್‌ನಲ್ಲಿ ರೈಲ್ವೇ ವಲಯದ 9 ಪ್ರಮುಖ ನಿರೀಕ್ಷೆಗಳಿವು

ಗುರು ಪೂರ್ಣಿಮಾ ಮಹೋತ್ಸವದಲ್ಲಿ ಬೆಳಿಗ್ಗೆ ಶ್ರೀ ವ್ಯಾಸ ಪೂಜೆ ಮತ್ತು ಪರಮಪೂಜ್ಯ ಭಕ್ತರಾಜ ಮಹಾರಾಜರ ಪ್ರತಿಮೆಯ ಪೂಜೆ ನೆರವೇರಿಸಲಾಯಿತು.

ಮಹೋತ್ಸವದಲ್ಲಿ ರಾಷ್ಟ್ರ ಧರ್ಮ ಸಂಘಟನೆಯ ಸಂಸ್ಥಾಪಕ ಸಂತೋಷ ಕೆಂಚಾಂಬ, ಅಖಿಲ ಭಾರತ ಅಸಂಘಟಿತ ಪುರೋಹಿತ ಕಾರ್ಮಿಕ ಪರಿಷತ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎನ್. ಮಹೇಶ್, ಆನೇಕಲ್‌ನ ಶ್ರೀ ಚೌಡೇಶ್ವರಿ ದೇವಸ್ಥಾನದ ಅಧ್ಯಕ್ಷ ಸೋಮೇಶ್ ರೆಡ್ಡಿ ಹಾಗೂ ರಾಜರಾಜೇಶ್ವರಿ ನಗರದ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ಟ್ರಸ್ಟಿ ಶಶಾಂಕ ಆಚಾರ್ ಪಾಲ್ಗೊಂಡಿದ್ದರು.

ಇದನ್ನೂ ಓದಿ: Gold Rate Today: ಆಭರಣ ಪ್ರಿಯರಿಗೆ ಗುಡ್‌ನ್ಯೂಸ್‌; ಚಿನ್ನದ ಬೆಲೆಯಲ್ಲಿ ಇಂದು ಇಷ್ಟು ಇಳಿಕೆ

ಬೆಂಗಳೂರಿನ ಬಸವನಗುಡಿಯ ಭವಾನಿ ಕಲ್ಯಾಣ ಮಂಟಪ, ಯಲಹಂಕದ ಆರ್.ವಿ. ಕಲ್ಯಾಣ ಮಂಟಪ ಹಾಗೂ ಚಂದಾಪುರದ ಯಾರೆಂಡಳ್ಳಿಯ ಸಾಯಿಬಾಬಾ ಯೋಗ ಕೇಂದ್ರದಲ್ಲಿ ಸೇರಿದಂತೆ ದೇಶದಾದ್ಯಂತ 71 ಕ್ಕೂ ಅಧಿಕ ಕಡೆಗಳಲ್ಲಿ ಗುರುಪೂರ್ಣಿಮಾ ಮಹೋತ್ಸವ ಆಚರಿಸಲಾಯಿತು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Valmiki Corporation Scam: ಬಿ. ನಾಗೇಂದ್ರ ಹೆಸರೇಳುವಂತೆ ಒತ್ತಡ; ಇಡಿ ಅಧಿಕಾರಿಗಳ ವಿರುದ್ಧ ಎಫ್‌ಐಆರ್‌

Valmiki Corporation Scam: ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಈ ಹಿಂದಿನ ನಿರ್ದೇಶಕ ಕಲ್ಲೇಶ್. ಬಿ ನೀಡಿದ ದೂರಿನ ಮೇರೆಗೆ ಇಡಿ ಅಧಿಕಾರಿಗಳಾದ ಮಿತ್ತಲ್ ಹಾಗೂ ಮುರುಳಿ ಕಣ್ಣನ್ ಮೇಲೆ ಪ್ರಕರಣ ದಾಖಲಾಗಿದೆ.

VISTARANEWS.COM


on

Valmiki Corporation Scam
ಇಡಿ ಅಧಿಕಾರಿಗಳ ವಿರುದ್ಧ ದೂರು ನೀಡಿರುವ ಅಧಿಕಾರಿ ಕಲ್ಲೇಶ್‌.
Koo

ಬೆಂಗಳೂರು: ವಾಲ್ಮೀಕಿ ನಿಗಮದ ಹಗರಣದಲ್ಲಿ (Valmiki Corporation Scam) ಮಾಜಿ ಸಚಿವ ಬಿ.ನಾಗೇಂದ್ರ ಹೆಸರೇಳುವಂತೆ ಒತ್ತಡ, ಮಾನಸಿಕವಾಗಿ ಹಿಂಸೆ ನೀಡಿ ಕಿರುಕುಳ ನೀಡಲಾಗಿದೆ ಎಂಬ ಆರೋಪದಲ್ಲಿ ಇಡಿ ಅಧಿಕಾರಿಗಳ ವಿರುದ್ಧ ವಿಲ್ಸನ್‌ ಗಾರ್ಡನ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ.

ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಈ ಹಿಂದಿನ ನಿರ್ದೇಶಕ ಕಲ್ಲೇಶ್. ಬಿ ನೀಡಿದ ದೂರಿನ ಮೇರೆಗೆ ಇಡಿ ಅಧಿಕಾರಿಗಳಾದ ಮಿತ್ತಲ್ ಹಾಗೂ ಮುರುಳಿ ಕಣ್ಣನ್ ಮೇಲೆ ಪ್ರಕರಣ ದಾಖಲಾಗಿದೆ. ವಾಲ್ಮೀಕಿ ನಿಗಮದ ಹಗರಣದಲ್ಲಿ ಹಣ ಅಕ್ರಮ ವರ್ಗಾವಣೆ ಆರೋಪದಲ್ಲಿ ಬಂಧನವಾಗಿರುವ ಮಾಜಿ ಸಚಿವ ನಾಗೇಂದ್ರ ಸದ್ಯ ನ್ಯಾಯಾಂಗ ಬಂಧನದಲ್ಲಿದ್ದಾರೆ. ಆದರೆ, ವಿಚಾರಣೆ ವೇಳೆ ಮಾಜಿ ಸಚಿವ ನಾಗೇಂದ್ರ ಹೆಸರೇಳುವಂತೆ ಇಡಿ ಅಧಿಕಾರಿಗಳು ಒತ್ತಡ ಹೇರಿ, ಮಾನಸಿಕವಾಗಿ ಹಿಂಸೆ ನೀಡುತ್ತಿದ್ದಾರೆ ಎಂದು ನಿಗಮದ ಈ ಹಿಂದಿನ ಎಂಡಿ ಕಲ್ಲೇಶ್ ಅವರು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಕಲ್ಲೇಶ್ ಅವರು ಸದ್ಯ ಮಾಜ ಕಲ್ಯಾಣ ಇಲಾಖೆಯ ಅಪಾರ ನಿರ್ದೇಶಕರಾಗಿದ್ದು, ವಾಲ್ಮೀಕಿ ನಿಗಮ ಪ್ರಕರಣದಲ್ಲಿ ಇಡಿ ಅಧಿಕಾರಿಗಳು ಹಲವರ ವಿಚಾರಣೆ ನಡೆಸುತ್ತಿದ್ದಾರೆ. ಇದೀಗ ಕಲ್ಲೇಶ್‌ ಅವರು ದೂರು ನೀಡಿದ ಹಿನ್ನೆಲೆಯಲ್ಲಿ ನ್ಯಾಯಾಲಯದ ಅನುಮತಿ ಪಡೆದು ವಿಲ್ಸನ್ ಗಾರ್ಡನ್ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಬಿ.ಎನ್.ಎಸ್.ಕಾಯ್ದೆ ಸೆಕ್ಷನ್ 351(2), 352ರಡಿ ಪ್ರಕರಣ ದಾಖಲಾಗಿದೆ. ಸೆಕ್ಷನ್ 351(2) ಜೀವ ಬೆದರಿಕೆ ಹಾಕುವುದು, 352 ಉದ್ದೇಶ ಪೂರ್ವಕವಾಗಿ ನಿಂದಿಸುವುದಕ್ಕೆ ಸಂಬಂಧಿಸಿದೆ. ದೂರುದಾರ ಕಲ್ಲೇಶ್‌ನನ್ನು ಪೊಲೀಸರು ವಿಚಾರಣೆಗೆ ಕರೆಸಲಿದ್ದು, ಈ ವೇಳೆ ಹೇಳಿಕೆ ದಾಖಲು ಮಾಡಿಕೊಳ್ಳಲಿದ್ದಾರೆ. ದೂರಿಗೆ ಸಂಬಂಧಪಟ್ಟಂತೆ ಯಾವುದಾದರೂ ಸಾಕ್ಷ್ಯಾಗಳು ಇದ್ದರೆ ಪಡೆದುಕೊಳ್ಳಲಿದ್ದು, ನಂತರ ಇಡಿ ಅಧಿಕಾರಿಗಳನ್ನು‌ ವಿಚಾರಣೆಗೆ ಕರೆಸಲಿದ್ದಾರೆ.

ಎಫ್.ಐ.ಆರ್.ನಲ್ಲಿ ಏನಿದೆ?

ಹಣ ವರ್ಗಾವಣೆ ಪ್ರಕರಣದಲ್ಲಿ ವಿಚಾರಣೆ ವೇಳೆ 17 ಪ್ರಶ್ನೆಗಳನ್ನು ಕೇಳಿರುವ ಇಡಿ ಅಧಿಕಾರಿಗಳು ಹೇಳಿಕೆ ದಾಖಲಿಸಿಕೊಂಡು, ಒತ್ತಾಯ ಪೂರ್ವಕ ಸಹಿ ಹಾಕುವಂತೆ ಒತ್ತಡ ಹೇರುತ್ತಿದ್ದಾರೆ ಎಂದು ಕಲ್ಲೇಶ್‌ ಉಲ್ಲೇಖಿಸಿದ್ದಾರೆ. ಅಕ್ರಮ ವರ್ಗಾವಣೆಯಲ್ಲಿ ನಿನ್ನನ್ನು ಬಂಧಿಸುತ್ತೇವೆ, ಎರಡು ವರ್ಷ ಬೇಲ್‌ ಸಿಗಲ್ಲಾ ಎಂದು ಧಮ್ಕಿ ಹಾಕಿದ್ದಾರೆ. ನೀನೊಬ್ಬ ಅಪರಾಧಿ, ನಿನ್ನನ್ನು ಹೀಗಲೇ ಅರೆಸ್ಟ್ ಮಾಡುತ್ತೇವೆ, ಇಡಿ ಬಗ್ಗೆ ನಿನಗೆ ಗೊತ್ತಿಲ್ಲಾ ಎಂದು ಮಿತ್ತಲ್‌ ಬೈದಿದ್ದಾರೆ.

ಇದನ್ನೂ ಓದಿ | TA Sharavana: 108 ಆಂಬ್ಯುಲೆನ್ಸ್‌ಗೆ 7 ವರ್ಷ ಕಳೆದರೂ ಹೊಸ ಟೆಂಡರ್‌ ಇಲ್ಲ ಯಾಕೆ? ಟಿ. ಎ. ಶರವಣ ಪ್ರಶ್ನೆ

ಎಂಜಿ ರಸ್ತೆ ಶಾಖೆಗೆ ಹಣ ವರ್ಗಾವಣೆ ಮಾಡಲು ನಾಗೇಂದ್ರ ಹಾಗೂ ಹೈ ಅಥಾರಿಟಿ ಎಫ್.ಡಿ ಇಲಾಖೆಯಿಂದ ಸೂಚನೆ ಇತ್ತು ಎಂದು ಒಪ್ಪಿಕೊಳ್ಳುವಂತೆ ಒತ್ತಡ ಹೇರಲಾಗಿದೆ. ಈ ಕೂಡಲೇ ಬರೆದು ಕೊಟ್ಟು ಸಹಿ ಮಾಡಿಕೊಡುವಂತೆ ಒತ್ತಡ ಹೇರಿದ್ದಾರೆ. ಹಣ ವರ್ಗಾವಣೆಗೆ ಒತ್ತಡ ಇತ್ತು ಎಂದು ಬರೆದುಕೊಡಲು ತಿಳಿಸಿದ್ದಾರೆ. ಪದೇಪದೆ ಇದೇ ಪ್ರಶ್ನೆ ಕೇಳಿ 7 ವರ್ಷ ಜೈಲು, ಶಿಕ್ಷೆ ಕೊಡಿಸುವವರೆಗೂ ಬಿಡುವುದಿಲ್ಲ ಎಂದಿದ್ದಾರೆ. ಯಾವುದೇ ತಪ್ಪು ಮಾಡದಿದ್ದರೂ ಕಾನೂನು ಬಾಹಿರವಾಗಿ ವಿಚಾರಣೆ ಮಾಡಿ ಬೈದು ಬೆದರಿಕೆ ಹಾಕಿದ್ದಾರೆ ಎಂದು ಇಡಿ ಅಧಿಕಾರಿಗಳಾದ ಮಿತ್ತಲ್ ಮತ್ತು ಮುರುಳಿ ಕಣ್ಣನ್ ಅವರ ವಿರುದ್ದ ದೂರು

Continue Reading

ಕರ್ನಾಟಕ

Assembly Session 2024: ಕೆಂಪಾಂಬುದಿ ಕೆರೆ ಒತ್ತುವರಿ ಶೀಘ್ರ ತೆರವು; ಡಿ.ಕೆ.ಶಿವಕುಮಾರ್

Assembly Session 2024: ಹೈಕೋರ್ಟ್ ನಿರ್ದೇಶನದಂತೆ ಕೆರೆಗಳ ಒತ್ತುವರಿ ತೆರವಿಗೆ 16 ವಾರಗಳ ಕ್ರಿಯಾಯೋಜನೆ ತಯಾರಿಸಲಾಗಿದೆ. ಕೆಂಪಾಂಬುದಿ ಕೆರೆಯ ಸರ್ವೆ ಕಾರ್ಯ ಪ್ರಗತಿಯಲ್ಲಿದ್ದು, ಶೀಘ್ರದಲ್ಲೇ ನ್ಯಾಯಲಯದ ಆದೇಶದಂತೆ ಒತ್ತುವರಿ ತೆರವು ಮಾಡಲಾಗುವುದು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ವಿಧಾನಸಭೆಯಲ್ಲಿ ತಿಳಿಸಿದ್ದಾರೆ.

VISTARANEWS.COM


on

Kempambudi lake encroachment cleared soon says DCM DK Shivakumar
Koo

ಬೆಂಗಳೂರು: ಹೈಕೋರ್ಟ್ ನಿರ್ದೇಶನದಂತೆ ಕೆರೆಗಳ ಒತ್ತುವರಿ ತೆರವಿಗೆ 16 ವಾರಗಳ ಕ್ರಿಯಾಯೋಜನೆ ತಯಾರಿಸಲಾಗಿದೆ. ಕೆಂಪಾಂಬುದಿ ಕೆರೆಯ ಸರ್ವೆ ಕಾರ್ಯ ಪ್ರಗತಿಯಲ್ಲಿದ್ದು, ಶೀಘ್ರದಲ್ಲೇ ನ್ಯಾಯಾಲಯದ ಆದೇಶದಂತೆ ಒತ್ತುವರಿ ತೆರವು ಮಾಡಲಾಗುವುದು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ವಿಧಾನಸಭೆಯಲ್ಲಿ (Assembly Session 2024) ತಿಳಿಸಿದ್ದಾರೆ.

ಶಾಸಕ ರವಿಸುಬ್ರಮಣ್ಯ ಅವರ ಗಮನ ಸೆಳೆವ ಸೂಚನೆಗೆ ಉತ್ತರಿಸಿದ ಡಿಸಿಎಂ ಅವರು, ಕೆಂಪಾಂಬುದಿ ಕೆರೆಗೆ ರಾಜಕಾಲುವೆ ಮೂಲಕ ಹರಿದು ಬರುವ ತ್ಯಾಜ್ಯ ನೀರನ್ನು ತಡೆಗಟ್ಟಲು ತಿರುವುಗಾಲುವೆ ನಿರ್ಮಿಸಲಾಗಿದೆ. ಆದರೆ ಹೆಚ್ಚು ಮಳೆ ಬಂದಾಗ ಮ್ಯಾನ್ ಹೋಲ್‌ಗಳಿಂದ ಉಕ್ಕಿ ಹರಿಯುವ ನೀರು ರಾಜಕಾಲುವೆ ಮೂಲಕ ಕೆರೆ ಸೇರುತ್ತಿದೆ. ಇದನ್ನು ಬಿಡಬ್ಲ್ಯೂಎಸ್‌ಎಸ್‌ಬಿ ಗಮನಕ್ಕೆ ತಂದು ತ್ಯಾಜ್ಯ ನೀರನ್ನು ಸಾಗಿಸುವ ಕೊಳವೆಗಳ ಸಾಮರ್ಥ್ಯ ಹೆಚ್ಚಿಸುವ ಕಾಮಗಾರಿ ಕೈಗೊಳ್ಳಲಾಗಿದೆ ಎಂದರು.

ಇದನ್ನೂ ಓದಿ: 7th Pay Commission: 7ನೇ ವೇತನ ಆಯೋಗದ ವರದಿ ಜಾರಿಗೆ ಅಧಿಕೃತ ಆದೇಶ; ಪರಿಷ್ಕೃತ ವೇತನ ಶ್ರೇಣಿ ಪಟ್ಟಿ ಇಲ್ಲಿದೆ

ಕೆರೆಯ ಕೆಳಭಾಗದಲ್ಲಿ 10 ಲಕ್ಷ ಲೀ. ಸಾಮರ್ಥ್ಯದ ತ್ಯಾಜ್ಯ ನೀರು ಸಂಸ್ಕರಣಾ ಘಟಕ ನಿರ್ಮಾಣ ಮಾಡುತ್ತಿದ್ದು, 2025 ರ ವೇಳೆಗೆ ಕಾಮಗಾರಿ ಮುಗಿಯಲಿದೆ. ಸಂಸ್ಕರಿಸಿದ ನೀರನ್ನು ಕೆರೆಗೆ ಹರಿಸಿ ಪುನರುಜ್ಜೀವನಗೊಳಿಸುವ ಉದ್ದೇಶವಿದೆ ಎಂದು ಅವರು ಹೇಳಿದ್ದಾರೆ.

ರಸ್ತೆ ವಿಸ್ತರಣೆಗೆ ಶೀಘ್ರ ಭೂಸ್ವಾಧೀನ

ಗೊಟ್ಟಿಗೆರೆ ಗ್ರಾಮದ ಸರ್ವೆ ನಂ 98/3 ಮತ್ತು 98/7 ರಲ್ಲಿ ಭಾಗಶಃ ಹಾದು ಹೋಗಲಿದ್ದು ಶೀಘ್ರದಲ್ಲೇ ಭೂಸ್ವಾಧೀನ ಪ್ರಕ್ರಿಯೆಯನ್ನು ಅಂತಿಮಗೊಳಿಸಿ ಕಾಮಗಾರಿ ಕೈಗೊಳ್ಳಲಾಗುವುದು ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಹೇಳಿದ್ದಾರೆ.

ಇದನ್ನೂ ಓದಿ: Kannada New Movie: ಗಣೇಶ್ ಅಭಿನಯದ ʼಕೃಷ್ಣಂ ಪ್ರಣಯ ಸಖಿʼ ಚಿತ್ರದ ʼದ್ವಾಪರ ದಾಟುತʼ ಹಾಡು ರಿಲೀಸ್‌!

ಬನ್ನೇರುಘಟ್ಟ ಮತ್ತು ಕನಕಪುರ ಮುಖ್ಯ ರಸ್ತೆಯ ಮಧ್ಯೆ ಗೊಟ್ಟಿಗೆರೆ ಬಳಿ 200 ಮೀ ಉದ್ದದ ರಸ್ತೆಯು ಕೇವಲ 20 ಅಡಿಯಿದ್ದು ಸಾಕಷ್ಟು ಸಂಚಾರ ದಟ್ಟಣೆ ಉಂಟಾಗುತ್ತಿದೆ ಎಂಬ ಕೃಷ್ಣಪ್ಪ ಅವರ ಗಮನ ಸೆಳೆವ ಸೂಚನೆಗೆ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, “ಬೆಂಗಳೂರು ದಕ್ಷಿಣ ತಾಲೂಕಿನ ಉತ್ತರಹಳ್ಳಿಯ ಗೊಟ್ಟಿಗೆರೆ ಗ್ರಾಮದ ಸರ್ವೆ ನಂ 98/3 ಅಲ್ಲಿನ 0.09 ಗುಂಟೆ ಮತ್ತು 98/7 ರಲ್ಲಿನ 0.07 ಗುಂಟೆ ಜಮೀನನ್ನು ರಸ್ತೆ ವಿಸ್ತರಣೆಗೆ ಸ್ವಾಧೀನ ಮಾಡಿಕೊಳ್ಳಲಾಗುವುದು. 98/7 ರಲ್ಲಿನ 0- 24 ಗುಂಟೆ ಜಮೀನು ಅಂಜನಾಪುರ ಬಡಾವಣೆ ನಿರ್ಮಾಣಕ್ಕೆ ಭೂಸ್ವಾಧೀನಗೊಂಡಿದೆ” ಎಂದು ತಿಳಿಸಿದ್ದಾರೆ.

Continue Reading

ಬೆಂಗಳೂರು

TA Sharavana: 108 ಆಂಬ್ಯುಲೆನ್ಸ್‌ಗೆ 7 ವರ್ಷ ಕಳೆದರೂ ಹೊಸ ಟೆಂಡರ್‌ ಇಲ್ಲ ಯಾಕೆ? ಟಿ. ಎ. ಶರವಣ ಪ್ರಶ್ನೆ

TA Sharavana: ರಾಜ್ಯದಲ್ಲಿ ಡೆಂಗ್ಯೂ ರುದ್ರನರ್ತನ ಹಿನ್ನೆಲೆಯಲ್ಲಿ ಆರೋಗ್ಯ ತುರ್ತು ಪರಿಸ್ಥಿತಿ ಘೋಷಿಸುವಂತೆ ಒತ್ತಾಯ ಕೇಳಿ ಬರುತ್ತಿದೆ. ಆದರೆ, 108 ಆಂಬ್ಯುಲೆನ್ಸ್ ಸೇವೆ ಒದಗಿಸುವ ಟೆಂಡರ್ ರದ್ದಾಗಿ ಏಳು ವರ್ಷ ಕಳೆದರೂ ಈವರೆಗೂ ಹೊಸಬರಿಗೆ ಟೆಂಡರ್ ನೀಡಲೂ ಆರೋಗ್ಯ ಇಲಾಖೆಗೆ ಸಾಧ್ಯವಾಗಿಲ್ಲ. ಇದು ತುರ್ತು ಆರೋಗ್ಯ ಸೇವೆಗಳ ಬಗೆಗಿನ ವಿಳಂಬ ಧೋರಣೆಯ ದ್ಯೋತಕ ಎಂಬ ಆರೋಪ ಕೇಳಿ ಬಂದಿದೆ ಎಂದು ವಿಧಾನ ಪರಿಷತ್ ಸದಸ್ಯ ಟಿ.ಎ.ಶರವಣ, ಸದನದ ಶೂನ್ಯ ವೇಳೆಯಲ್ಲಿ ಪ್ರಶ್ನಿಸಿದ್ದಾರೆ.

VISTARANEWS.COM


on

TA Sharavana questioned about the continuous variation in the service of 108 Ambulance even after 7 years there is no new tender
Koo

ಬೆಂಗಳೂರು: ರಾಜ್ಯದಲ್ಲಿ 108 ಆಂಬ್ಯುಲೆನ್ಸ್ ಸೇವೆ ಒದಗಿಸುವ ಟೆಂಡರ್ ರದ್ದಾಗಿ ಏಳು ವರ್ಷ ಕಳೆದರೂ ಈವರೆಗೂ ಹೊಸಬರಿಗೆ ಟೆಂಡರ್ ನೀಡಲು ಆರೋಗ್ಯ ಇಲಾಖೆಗೆ ಸಾಧ್ಯವಾಗಿಲ್ಲ. ಇದು ತುರ್ತು ಆರೋಗ್ಯ ಸೇವೆಗಳ ಬಗೆಗಿನ ವಿಳಂಬ ಧೋರಣೆಯ ದ್ಯೋತಕ ಎಂಬ ಆರೋಪ ಕೇಳಿ ಬಂದಿದೆ ಎಂದು ವಿಧಾನ ಪರಿಷತ್‌ ಸದಸ್ಯ ಟಿ. ಎ. ಶರವಣ (TA Sharavana) ಪ್ರಶ್ನಿಸಿದರು.

ಈ ಕುರಿತು ಸದನದ ಶೂನ್ಯ ವೇಳೆಯಲ್ಲಿ ಪ್ರಶ್ನಿಸಿದ ವಿಧಾನ ಪರಿಷತ್ ಸದಸ್ಯ ಟಿ.ಎ.ಶರವಣ ಅವರು, ರಾಜ್ಯದಲ್ಲಿ ಡೆಂಗ್ಯೂ ರುದ್ರನರ್ತನ ಹಿನ್ನೆಲೆಯಲ್ಲಿ ಆರೋಗ್ಯ ತುರ್ತು ಪರಿಸ್ಥಿತಿ ಘೋಷಿಸುವಂತೆ ಒತ್ತಾಯ ಕೇಳಿ ಬರುತ್ತಿದೆ. ಆದರೆ, 108 ಆಂಬ್ಯುಲೆನ್ಸ್ ಸೇವೆ ಒದಗಿಸುವ ಟೆಂಡರ್ ರದ್ದಾಗಿ ಏಳು ವರ್ಷ ಕಳೆದರೂ ಈವರೆಗೂ ಹೊಸಬರಿಗೆ ಟೆಂಡರ್ ನೀಡಲೂ ಆರೋಗ್ಯ ಇಲಾಖೆಗೆ ಸಾಧ್ಯವಾಗಿಲ್ಲ. ಇದು ತುರ್ತು ಆರೋಗ್ಯ ಸೇವೆಗಳ ಬಗೆಗಿನ ವಿಳಂಬ ಧೋರಣೆಯ ದ್ಯೋತಕ ಎಂಬ ಆರೋಪ ಕೇಳಿ ಬಂದಿದೆ ಎಂದು ಪ್ರಶ್ನಿಸಿದರು.

ಇದನ್ನೂ ಓದಿ: Karnataka Rain : ನಿರಂತರ ಮಳೆಗೆ ಮೈಸೂರಿನ ಒಲಂಪಿಯಾ ಚಿತ್ರಮಂದಿರದ ಗೋಡೆ ಕುಸಿತ; ನಾಲ್ವರು ಗಂಭೀರ

ನೂತನ ಸರ್ಕಾರ ಅಸ್ತಿತ್ವಕ್ಕೆ ಬಂದ ಬಳಿಕ ಆಂಬ್ಯುಲೆನ್ಸ್ ಸೇವೆಯಲ್ಲಿ ಬದಲಾವಣೆ ತರುವ ನಿಟ್ಟಿನಲ್ಲಿ 2023ರ ಜು.22ರಂದು ತಾಂತ್ರಿಕ ಸಲಹಾ ಸಮಿತಿ ನೇಮಿಸಲಾಗಿತ್ತು. ಈ ತಾಂತ್ರಿಕ ಸಲಹಾ ಸಮಿತಿ ವರದಿ ನೀಡಿ ತಿಂಗಳುಗಳೇ ಕಳೆದರೂ ಈವರೆಗೂ ಟೆಂಡರ್ ಕರೆಯಲು ಉನ್ನತ ಮಟ್ಟದ ಸಮಿತಿ ಒಪ್ಪಿಗೆ ನೀಡಿಲ್ಲ. ಹೀಗಾಗಿ ಆಂಬ್ಯುಲೆನ್ಸ್ ಸೇವೆಗೆ ಹಿಡಿದಿರುವ ಗ್ರಹಣ ಮುಂದುವರಿದಿದೆ. ರಾಜ್ಯದಲ್ಲಿ ತುರ್ತು ಅನಾರೋಗ್ಯ ಸಂದರ್ಭಗಳಲ್ಲಿ ಆರೋಗ್ಯ ಕವಚ ಆಂಬ್ಯುಲೆನ್ಸ್ ಸೇವೆ ಒದಗಿಸಲು 2007ರಲ್ಲಿ ಟೆಂಡರ್ ಪಡೆದಿದ್ದ ಜಿವಿಕೆಯ ಸಂಸ್ಥೆಯ ಗುತ್ತಿಗೆಯನ್ನು ಆಸಮರ್ಪಕ ಸೇವೆ ಹಾಗೂ ನಿಯಮ ಉಲ್ಲಂಘನೆ ಕಾರಣ ನೀಡಿ 2017ರಲ್ಲಿ ಟೆಂಡರ್ ರದ್ದುಪಡಿಸಿತ್ತು. ಜೆವಿಕೆ-ಇಎಂಆ‌ರ್ಇ ಸಂಸ್ಥೆಯು ವಿಳಂಬ ಸೇವೆ, ಜಿಪಿಎಸ್ ಆಳವಡಿಕೆ ಮಾಡದಿರುವುದು ಸಿಬ್ಬಂದಿಯ ನಿರ್ವಹಣೆ ವೈಫಲ್ಯ ಸೇರಿದಂತೆ ಟೆಂಡರ್ ಷರತ್ತುಗಳನ್ನು ಉಲ್ಲಂಘಿಸಿದೆ ಎಂಬ ಕಾರಣಕ್ಕೆ ಟೆಂಡ‌ರ್ ರದ್ದುಪಡಿಸಲಾಗಿತ್ತು ಬಳಿಕ 3 ಬಾರಿ ಟೆಂಡರ್ ಕರೆದಿದ್ದರೂ ಯಾರೊಬ್ಬರೂ ಭಾಗವಹಿಸಿರಲಿಲ್ಲ. ಹೀಗಾಗಿ 2019ರಲ್ಲಿ ಜಿವಿಕೆ ಹಾಗೂ ತುರ್ತು ಗ್ರೀನ್ ಹೆಲ್ತ್ ಜತೆ ಒಡಂಬಡಿಕೆ ಆಧಾರದ ಮೇಲೆ ಆಂಬ್ಯುಲೆನ್ಸ್ ಸೇವೆ ನೀಡಲಾಗುತ್ತಿದೆ ಆದರೆ, 7 ವರ್ಷದಿಂದ ಅಧಿಕೃತ ಟೆಂಡರ್ ಪಡೆದಿರುವ ಆಂಬ್ಯುಲೆನ್ಸ್ ಸೇವಾದಾರ ಸಂಸ್ಥೆ ಇಲ್ಲದಂತಾಗಿದೆ. ಅದ್ದರಿಂದ, ಆಂಬ್ಯುಲೆನ್ಸ್ ಸೇವೆಯಲ್ಲಿ ಸತತವಾಗಿ ವ್ಯತ್ಯಯವಾಗುತ್ತಿದೆ ಎಂದು ಅವರು ವಿವರಿಸಿದರು.

108 ಆಂಬ್ಯುಲೆನ್ಸ್ ಸೇವೆ ಕುರಿತು 2014-19 ರವರೆಗಿನ ಪ್ರಕರಣಗಳ ಬಗ್ಗೆ ಸಿಎಜಿ ವರದಿ ಸಲ್ಲಿಸಿದ್ದು ಶೇ.60ರಷ್ಟು ಎಮರ್ಜನ್ಸಿ ಪ್ರಕರಣಗಳಲ್ಲಿ 108 ಆಂಬ್ಯುಲೆನ್ಸ್ ಸೇವೆ ನಿಗದಿತ ಸಮಯಕ್ಕೆ ದೊರೆತಿಲ್ಲ. ಮತ್ತು 51 ಲಕ್ಷ ಎಮರ್ಜೆನ್ಸಿ ಪ್ರಕರಣಗಳಲ್ಲಿ 41.9 ಲಕ್ಷ ಮಾತ್ರ ಆಂಬ್ಯುಲೆನ್ಸ್ ನಿಯೋಜಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ಟೆಂಡರ್ ರದ್ದುಪಡಿಸಿ ಬೇರೆ ಕಂಪನಿಗೆ ಟೆಂಡ‌ರ್ ನೀಡಲು ನಿರ್ಧರಿಸಲಾಗಿತ್ತು. ಆದರೆ ಒಡಂಬಡಿಕೆ ಆಧಾರದ ಮೇಲೆ 746 ಆಂಬ್ಯುಲೆನ್ಸ್ ನಿರ್ವಹಿಸಲು ಅವಕಾಶ ನೀಡಲಾಗಿತ್ತು.

ಇದನ್ನೂ ಓದಿ: Job Alert: ತೆಹ್ರಿ ಹೈಡ್ರೋ ಡೆವಲಪ್‌ಮೆಂಟ್‌ ಕಾರ್ಪೋರೇಷನ್‌ನಲ್ಲಿದೆ ಉದ್ಯೋಗಾವಕಾಶ; ಅಪ್ಲೈ ಮಾಡುವ ವಿಧಾನ ಇಲ್ಲಿದೆ

ಆದರೆ ಒಡಂಬಡಿಕೆ ಮಾಡಿಕೊಂಡಿರುವ ಸಂಸ್ಥೆಗೆ ಸರ್ಕಾರ ಕಾಲಕಾಲಕ್ಕೆ ವೇತನ ನೀಡುತ್ತಿದ್ದರೂ ಅವರು ಸಿಬ್ಬಂದಿಗೆ ನೀಡುತ್ತಿಲ್ಲ, ಗುತ್ತಿಗೆ ಜತೆಗೆ ಸರ್ಕಾರಿ ಆಸ್ಪತ್ರೆ ಬದಲಿಗೆ ಖಾಸಗಿ ಆಸ್ಪತ್ರೆಗೆ ರೋಗಿಯನ್ನು ಕರೆದುಕೊಂಡು ಹೋಗುವುದು, ರೋಗಿಯ ಬಳಿ ಹಣ ಪಡೆಯುವುದು ಸೇರಿದಂತೆ ಹಲವು ಸಮಸ್ಯೆಗಳಿಗೆ ಈವರೆಗೆ ಪರಿಹಾರ ಕಂಡುಕೊಂಡಿಲ್ಲ. ಆದ್ದರಿಂದ ಈ ನಿಟ್ಟಿನಲ್ಲಿ ತುರ್ತಾಗಿ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಸರ್ಕಾರಕ್ಕೆ ಎಂಎಲ್‌ಸಿ ಟಿ.ಎ.ಶರವಣ ಆಗ್ರಹಿಸಿದರು.

Continue Reading

ಕರ್ನಾಟಕ

7th Pay Commission: 7ನೇ ವೇತನ ಆಯೋಗದ ವರದಿ ಜಾರಿಗೆ ಅಧಿಕೃತ ಆದೇಶ; ಪರಿಷ್ಕೃತ ವೇತನ ಶ್ರೇಣಿ ಪಟ್ಟಿ ಇಲ್ಲಿದೆ

7th Pay Commission: ನೌಕರರ ಬೇಡಿಕೆಯಂತೆ ರಾಜ್ಯದಲ್ಲಿ ಏಳನೇ ವೇತನ ಆಯೋಗದ ಶಿಫಾರಸುಗಳ ಜಾರಿಗೆ ರಾಜ್ಯ ಸರ್ಕಾರವು ಇತ್ತೀಚೆಗೆ ತೀರ್ಮಾನ ತೆಗೆದುಕೊಂಡಿತ್ತು. ಆಗಸ್ಟ್‌ 1ರಿಂದಲೇ 7ನೇ ವೇತನ ಆಯೋಗದ ಶಿಫಾರಸುಗಳು ಜಾರಿಗೆ ಬರಲಿವೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದರು.

VISTARANEWS.COM


on

7th Pay Commission
Koo

ಬೆಂಗಳೂರು: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ವೇತನ, ಭತ್ಯೆ ಪರಿಷ್ಕರಿಸಲು ರಚನೆ ಮಾಡಿದ್ದ 7ನೇ ವೇತನ ಆಯೋಗದ (7th Pay Commission) ಶಿಫಾರಸುಗಳನ್ನು ಆ.1ರಿಂದ ಜಾರಿ ಮಾಡುವುದಾಗಿ ಸಿಎಂ ಸಿದ್ದರಾಮಯ್ಯ ಘೋಷಿಸಿದ್ದರು. ಇದಕ್ಕೆ ಸಂಬಂಧಪಟ್ಟಂತೆ ಇದೀಗ ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದ್ದು, ಯಾರಿಗೆ ಎಷ್ಟು ವೇತನ ಹೆಚ್ಚಾಗಲಿದೆ ಎಂಬ ಕುರಿತ ಪರಿಷ್ಕೃತ ಮುಖ್ಯ ವೇತನ ಶ್ರೇಣಿ ಮತ್ತು ಪರಿಷ್ಕೃತ 25 ಸ್ಥಾಯಿ ವೇತನ ಶ್ರೇಣಿಗಳನ್ನು ಪ್ರಕಟ ಮಾಡಲಾಗಿದೆ.

ಈ ಬಗ್ಗೆ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಎಲ್‌.ಕೆ.ಅತೀಕ್‌ ಆದೇಶ ಹೊರಡಿಸಿದ್ದಾರೆ. 2022ರ ನ.19ರಂದು ರಚಿಸಲಾಗಿದ್ದ 7ನೇ ರಾಜ್ಯ ವೇತನ ಆಯೋಗವು ರಾಜ್ಯ ಸರ್ಕಾರಿ ನೌಕರರ ವೇತನ ಮತ್ತು ಭತ್ಯೆಗಳು ಹಾಗೂ ಪಿಂಚಣಿ ಪರಿಷ್ಕರಣೆ ಕುರಿತಂತೆ ತನ್ನ ವರದಿಯ ಸಂಪುಟ-1 ನ್ನು ಸಲ್ಲಿಸಿದೆ. ವರದಿಯಲ್ಲಿನ ಶಿಫಾರಸುಗಳನ್ನು ಸರ್ಕಾರವು ಪರಿಗಣಿಸಿದ್ದು, ಅದರಂತೆ, 7ನೇ ರಾಜ್ಯ ವೇತನ ಆಯೋಗವು ಶಿಫಾರಸು ಮಾಡಿರುವ ಮುಖ್ಯ ವೇತನ ಶ್ರೇಣಿ ಮತ್ತು ಪರಿಷ್ಕೃತ 25 ಸ್ಥಾಯಿ ವೇತನ ಶ್ರೇಣಿಗಳನ್ನು ಜುಲೈ 1ರಿಂದ ರಿಂದ ಜಾರಿಗೆ ಬರುವಂತೆ ಅನುಷ್ಠಾನಗೊಳಿಸಲಾಗುತ್ತದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಪರಿಷ್ಕೃತ ಮುಖ್ಯ ವೇತನ ಶ್ರೇಣಿ ಮತ್ತು ಪರಿಷ್ಕೃತ 25 ಸ್ಥಾಯಿ ವೇತನ ಶ್ರೇಣಿಗಳು

ಪರಿಷ್ಕೃತ ವೇತನ ಶ್ರೇಣಿಗಳಲ್ಲಿ ಈ ಕೆಳಕಂಡಂತೆ ವೇತನ ನಿಗದಿ

  • ದಿನಾಂಕ: 01.07.2022 ರಲ್ಲಿದ್ದಂತೆ ಮೂಲ ವೇತನ.
  • ದಿನಾಂಕ: 01.07.2022 ರಲ್ಲಿದ್ದಂತಹ ಬೆಲೆ ಸೂಚ್ಯಂಕ ಹಂತ 361.704 ಕ್ಕೆ ಸಂವಾದಿಯಾಗಿ ಲಭ್ಯವಿದ್ದ 312 ತುಟ್ಟಿ ಭತ್ಯೆ.
  • ದಿನಾಂಕ: 01.07.2022 ರಲ್ಲಿ ಲಭ್ಯವಿದ್ದ ಮೂಲ ವೇತನದ ಮೇಲೆ 27.50% ರಷ್ಟು ಫಿಟ್‌ಮೆಂಟ್ ಸೌಲಭ್ಯ.
  • ಮೇಲಿನ (ಅ), (ಅ). (ಇ) ಯನ್ನು ಒಟ್ಟುಗೂಡಿಸಿ ಲೆಕ್ಕ ಹಾಕಿದಾಗ ಬರುವ ಮೊತ್ತದ ನಂತರದ ಹಂತದಲ್ಲಿ ವೇತನವನ್ನು ಪರಿಷ್ಕೃತ ವೇತನ ಶ್ರೇಣಿಯಲ್ಲಿ ನಿಗದಿಪಡಿಸುವುದು.

ಆಗಸ್ಟ್ 1ರಿಂದ ಪರಿಷ್ಕೃತ ವೇತನ ಶ್ರೇಣಿಗಳ ಅನುಷ್ಠಾನ

1.ಪಿಂಚಣಿ ಮತ್ತು ಪಿಂಚಣಿ ಸೌಲಭ್ಯಗಳ ಪರಿಷ್ಕರಣೆ ಕುರಿತಂತೆ 7ನೇ ರಾಜ್ಯ ವೇತನ ಆಯೋಗದ ಶಿಫಾರಸುಗಳ ಪ್ರಕಾರ ಕನಿಷ್ಠ ಮತ್ತು ಗರಿಷ್ಠ ಪಿಂಚಣಿಯ ಪ್ರಸ್ತುತ ಮೊತ್ತವನ್ನು ಕ್ರಮವಾಗಿ ಮಾಸಿಕ 8,500 ರೂ. ಮತ್ತು 75,300 ರಿಂದ 13,500 ಮತ್ತು 1,20,600ಗಳಿಗೆ ಮತ್ತು ಸಂವಾದಿ ಕುಟುಂಬ ಪಿಂಚಣಿಯ ಕನಿಷ್ಠ ಮತ್ತು ಗರಿಷ್ಠ ಮಿತಿಯನ್ನು ಅನುಕ್ರಮವಾಗಿ ಮಾಸಿಕ 8,500 ಮತ್ತು 45,180 ರಿಂದ 13,500 ಮತ್ತು 80,400 ಪರಿಷ್ಕೃಸುವುದು, ಪಿಂಚಣಿ ಮತ್ತು ಕುಟುಂಬ ಪಿಂಚಣಿಗಳು ದಿನಾಂಕ: 01.07.2022 ರಿಂದ ಜಾರಿಗೆ ಬರುತ್ತವೆ. ಆದರೆ, ಪಿಂಚಣಿ ಪರಿಷ್ಕರಣೆಯ ಆರ್ಥಿಕ ಲಾಭವು ದಿನಾಂಕ: 01.08.2024 ರಿಂದ ಸಿಗಲಿದೆ. ಮರಣ ಮತ್ತು ನಿವೃತ್ತಿ ಉಪದಾನದ ಪ್ರಸ್ತುತ ಗರಿಷ್ಠ ಮಿತಿ ರೂ.20 ಲಕ್ಷಗಳಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ.

2.ದಿನಾಂಕ: 01.07.2022ಕ್ಕೆ ಪೂರ್ವದಲ್ಲಿ ನಿವೃತ್ತರಾದ ಅಥವಾ ಸೇವೆಯಲ್ಲಿದ್ದಾಗ ಮೃತರಾದ ಸರ್ಕಾರಿ ನೌಕರರ ಪಿಂಚಣಿ ಮತ್ತು ಕುಟುಂಬ ಪಿಂಚಣಿಯನ್ನು ಈ ಕೆಳಗಿನಂತೆ ನಿಗದಿಪಡಿಸತಕ್ಕದ್ದು:-

ಅ) ದಿನಾಂಕ: 01.07 2022 ರಂದು ಇದ್ದ ಮೂಲ ನಿವೃತ್ತಿ ವೇತನ/ಕುಟುಂಬ ನಿವೃತ್ತಿ ವೇತನ:
ಅ) ದಿನಾಂಕ: 01.07.2022 ರಂದು ಲಭ್ಯವಿದ್ದ 31% ರಷ್ಟು ತುಟ್ಟಿ ಭತ್ಯೆ,
ಇ) ದಿನಾಂಕ: 01.07.2022 ರಂದು ಇದ್ದ ನಿವೃತ್ತಿ ವೇತನ/ಕುಟುಂಬ ವೇತನದ ಮೇಲೆ 27.50% ರಷ್ಟು ಫಿಟ್‌ಮೆಂಟ್ ಸೌಲಭ್ಯ.

3.ನಿವೃತ್ತಿ ವೇತನ ಮತ್ತು ಕುಟುಂಬ ನಿವೃತ್ತಿ ವೇತನದ ಈ ಮೇಲಿನ (ಅ) + (ಅ) + (ಇ) ರ ಒಟ್ಟಾರೆ ಮೊತ್ತವು ಮಾಸಿಕ 13,500 ಗಳ ಕನಿಷ್ಠ ಪಿಂಚಣಿಗೆ ಕಡಿಮೆ ಇಲ್ಲದಂತೆ ಮತ್ತು ನಿವೃತ್ತಿ ವೇತನವು ಗರಿಷ್ಠ ಮಾಸಿಕ 1,20,600 ರೂ. ಮಿತಿಗೆ ಹಾಗೂ ಕುಟುಂಬ ನಿವೃತ್ತಿ ವೇತನದ ಗರಿಷ್ಠ ಮೊತ್ತವು ಮಾಸಿಕ 80,400 ರೂ. ಮಿತಿಗೆ ಒಳಪಟ್ಟಿರುತ್ತದೆ. ಈ ಪರಿಷ್ಕೃತ ಪಿಂಚಣಿಯ ಆರ್ಥಿಕ ಲಾಭವು ದಿನಾಂಕ: 01.08.20224 ರಿಂದ ಪ್ರಾಪ್ತವಾಗತಕ್ಕದ್ದು.

4.ಪರಿಷ್ಕೃತ ವೇತನ ಶ್ರೇಣಿಗಳಲ್ಲಿ ವೇತನ ಸಂಬಂಧಿತ ಭತ್ಯೆಗಳಾದ ಮನೆ ಬಾಡಿಗೆ ಭತ್ಯೆ. ನಗರ ಪರಿಹಾರ ಭತ್ಯೆ, ವೈದ್ಯಕೀಯ ಭತ್ಯೆಗಳ ಪರಿಷ್ಕರಣೆಯ ಶಿಫಾರಸ್ಸು ಮತ್ತು ಪರಿಷ್ಕೃತ ವೇತನ ಹಾಗೂ ಪರಿಷ್ಕೃತ ಪಿಂಚಣಿಯಲ್ಲಿ ತುಟ್ಟಿ ಭತ್ಯೆ ಲೆಕ್ಕಾಚಾರ ಮಾಡಲು ಶಿಫಾರಸ್ಸು ಮಾಡಲಾದ ಪರಿಷ್ಕೃತ ಸೂತ್ರಕ್ಕೆ ಸಂಬಂಧಿಸಿದ ವೇತನ ಆಯೋಗದ ಶಿಫಾರಸ್ಸುಗಳನ್ನು ಅಂಗೀಕರಿಸಲಾಗಿದೆ. ಪ್ರಸ್ತುತ ಚಾಲ್ತಿಯಲ್ಲಿರುವ ಪ್ರಭಾರ ಭತ್ಯೆ ಮಂಜೂರಾತಿಯ ಪ್ರಸ್ತುತ ದರಗಳು ಪರಿಷ್ಕೃತ ವೇತನ ಶ್ರೇಣಿಗಳಲ್ಲಿ ಯಾವುದೇ ಬದಲಾವಣೆ ಇಲ್ಲದೇ ಮುಂದುವರೆಯುತ್ತದೆ.

5.ನೌಕರರ ಸಾಮೂಹಿಕ ವಿಮಾ ಯೋಜನೆಗೆ ನೌಕರರ ವಂತಿಗೆ ಹೆಚ್ಚಳದ ಪರಿಷ್ಕರಣೆಯ ಶಿಫಾರಸ್ಸುಗಳನ್ನು ಅಂಗೀಕರಿಸಲಾಗಿದೆ.

6.ಅನ್ವಯಿಸುವ ಬದಲಾವಣೆಯೊಂದಿಗೆ ಈ ಮೇಲಿನ ಎಲ್ಲಾ ಸೌಲಭ್ಯಗಳನ್ನು ಅನುದಾನಿತ ಶಿಕ್ಷಣ ಸಂಸ್ಥೆಗಳು, ಸ್ಥಳೀಯ ಸಂಸ್ಥೆಗಳ ನೌಕರರು ಮತ್ತು ವಿಶ್ವವಿದ್ಯಾಲಯಗಳ ಬೋಧಕೇತರ ಸಿಬ್ಬಂದಿಗಳಿಗೂ ಸಹ ವಿಸ್ತರಿಸಲು ಸರ್ಕಾರವು ಹರ್ಷಿಸುತ್ತದೆ.

7.ಮುಂದುವರೆದು, ಈ ಮೇಲಿನಂತೆ ವೇತನ ಶ್ರೇಣಿಗಳ ಪರಿಷ್ಕರಣೆಯ ಕಾರಣದಿಂದಾಗಿ ಉಂಟಾಗುವ ವೇತನ ಮತ್ತು ಭತ್ಯೆಗಳ ಹೆಚ್ಚಳವನ್ನು ದಿನಾಂಕ: 01.08.2024ರಿಂದ ನಗದಾಗಿ ಪಾವತಿ ಮಾಡತಕ್ಕದ್ದು, ದಿನಾಂಕ: 01.07.2022 ರಿಂದ 31.07.2024ರ ಅವಧಿಯಲ್ಲಿ ಸೇವೆಯಿಂದ ನಿವೃತ್ತರಾದ ಅಥವಾ ಸೇವೆಯಲ್ಲಿರುವಾಗಲೇ ಮರಣ ಹೊಂದಿದ ಅಥವಾ ಸೇವೆಯಲ್ಲಿರುವುದು ನಮಾಪ್ತಿಗೊಂಡ ಸರ್ಕಾರಿ ನೌಕರರ ಪ್ರಕರಣಗಳಲ್ಲಿ ಪರಿಷ್ಕೃತ ವೇತನ ಶ್ರೇಣಿಗಳಲ್ಲಿ ನಿಗದಿಪಡಿಸಲಾದ ಕಾಲ್ಪನಿಕ ವೇತನವನ್ನು ನಿವೃತ್ತಿ ವೇತನ ಮತ್ತು ಕುಟುಂಬ ನಿವೃತ್ತಿ ವೇತನವನ್ನು ನಿವೃತ್ತಿ ವೇತನವನ್ನು ಲೆಕ್ಕ ಹಾಕುವ ಉದ್ದೇಶಗಳಿಗಾಗಿ ಪರಿಗಣಿಸತಕ್ಕದ್ದು. ಆದರೆ, ಸದರಿ ಕಾಲ್ಪನಿಕ ಪುನರ್ ನಿಗದಿಯ ಆರ್ಥಿಕ ಲಾಭವು ನಿವೃತ್ತಿ ಹೊಂದಿದ ಸರ್ಕಾರಿ ನೌಕರನಿಗೆ ಅಥವಾ ಮರಣ ಹೊಂದಿದ ಸರ್ಕಾರಿ ನೌಕರನ ಫಲಾನುಭವಿಗೆ ಸಂದರ್ಭಾನುಸಾರ ದಿನಾಂಕ: 01.08.2024 ರಿಂದ ಪ್ರಾಪ್ತವಾಗತಕ್ಕದ್ದು.

ಪರಿಷ್ಕೃತ ವೇತನ ಶ್ರೇಣಿಗಳ ಹಂಚಿಕೆ ಮತ್ತು ಅದರಲ್ಲಿ ವೇತನ ಹಾಗೂ ನಿವೃತ್ತಿ ವೇತನವನ್ನು ಕ್ರಮಬದ್ಧಗೊಳಿಸುವ ಕುರಿತು, ಸರ್ಕಾರದಿಂದ ವಿವರವಾದ ನಿಯಮ ಮತ್ತು ಆದೇಶಗಳನ್ನು ಪ್ರತ್ಯೇಕವಾಗಿ ಹೊರಡಿಸಲಾಗುವುದು ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ | 7th Pay Commission: ವೇತನ ಹೆಚ್ಚಿಸಿದ್ದಕ್ಕೆ ನೌಕರರಿಂದ ಅಭಿನಂದನೆ; ಸರ್ಕಾರದ ನಿಲುವುಗಳಿಗೆ ತಕ್ಕಂತೆ ಕೆಲಸ ಮಾಡಿ ಎಂದ ಸಿಎಂ

Continue Reading
Advertisement
Valmiki Corporation Scam
ಕರ್ನಾಟಕ4 mins ago

Valmiki Corporation Scam: ಬಿ. ನಾಗೇಂದ್ರ ಹೆಸರೇಳುವಂತೆ ಒತ್ತಡ; ಇಡಿ ಅಧಿಕಾರಿಗಳ ವಿರುದ್ಧ ಎಫ್‌ಐಆರ್‌

Tata Curvv
ಆಟೋಮೊಬೈಲ್4 mins ago

Tata Curvv : ಎಸ್​ಯುವಿ ವಿಭಾಗದಲ್ಲಿ ವಿಭಿನ್ನ ವಿನ್ಯಾಸದ ಕಾರನ್ನು ಪರಿಚಯಿಸಿದ ಮಾಡಿದ ಟಾಟಾ

Kempambudi lake encroachment cleared soon says DCM DK Shivakumar
ಕರ್ನಾಟಕ12 mins ago

Assembly Session 2024: ಕೆಂಪಾಂಬುದಿ ಕೆರೆ ಒತ್ತುವರಿ ಶೀಘ್ರ ತೆರವು; ಡಿ.ಕೆ.ಶಿವಕುಮಾರ್

Viral Video
ವೈರಲ್ ನ್ಯೂಸ್30 mins ago

Viral Video: ಸ್ಕೂಟರ್‌ಗೆ ಅಪ್ಪಳಿಸಿದ ಕಾರು; 10 ಅಡಿ ಮೇಲಕ್ಕೆ ಹಾರಿ ಬಿದ್ದ ತಾಯಿ, ಮಗ

TA Sharavana questioned about the continuous variation in the service of 108 Ambulance even after 7 years there is no new tender
ಬೆಂಗಳೂರು34 mins ago

TA Sharavana: 108 ಆಂಬ್ಯುಲೆನ್ಸ್‌ಗೆ 7 ವರ್ಷ ಕಳೆದರೂ ಹೊಸ ಟೆಂಡರ್‌ ಇಲ್ಲ ಯಾಕೆ? ಟಿ. ಎ. ಶರವಣ ಪ್ರಶ್ನೆ

INS Brahmaputra
ದೇಶ52 mins ago

INS Brahmaputra: ನೌಕಾಪಡೆಯ ಐಎನ್‌ಎಸ್‌ ಯುದ್ಧನೌಕೆಯಲ್ಲಿ ಭೀಕರ ಅಗ್ನಿ ದುರಂತ; ನಾವಿಕ ನಾಪತ್ತೆ

Chamari Athapaththu
ಕ್ರೀಡೆ57 mins ago

Chamari Athapaththu : ಏಷ್ಯಾ ಕಪ್​ನಲ್ಲಿ ಶತಕ ಬಾರಿಸಿ ವಿಶ್ವ ದಾಖಲೆ ಬರೆದ ಲಂಕಾದ ಮಹಿಳಾ ಕ್ರಿಕೆಟರ್​​

Monsoon fashion
ಫ್ಯಾಷನ್1 hour ago

Monsoon fashion: ಶರ್ಟ್ ಸ್ಟೈಲ್‌ ಜಾಕೆಟ್ಸ್; ಇವು ಯುವಕರ ಮಳೆಗಾಲದ ಫ್ಯಾಷನ್‌ ಟ್ರೆಂಡ್‌

Raghu Dixit
ಕ್ರೀಡೆ1 hour ago

Raghu Dixit : ಪ್ಯಾರಿಸ್​ ಒಲಿಂಪಿಕ್ಸ್​ಗೆ ಕನ್ನಡ ಹಾಡುಗಳ ಮೆರುಗು ; ರಘು ದೀಕ್ಷಿತ್ ತಂಡದಿಂದ ವಿಶೇಷ ಕಾರ್ಯಕ್ರಮ

Union Budget 2024
ದೇಶ1 hour ago

Union Budget 2024: ನಾಳೆ ಕೇಂದ್ರ ಬಜೆಟ್;‌ ಎಷ್ಟು ಗಂಟೆಗೆ ಮಂಡನೆ? ಲೈವ್‌ ವೀಕ್ಷಣೆ ಎಲ್ಲಿ? ಇಲ್ಲಿದೆ ಮಾಹಿತಿ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Rain
ಮಳೆ2 days ago

Karnataka Rain : ಭಾರಿ ಮಳೆಗೆ ಮನೆ ಗೋಡೆ ಕುಸಿತ; ಕೊಟ್ಟಿಗೆಯಲ್ಲಿದ್ದ ಜಾನುವಾರುಗಳು ಸಾವು

karnataka Rain
ಮಳೆ2 days ago

Karnataka Rain : ಹಳ್ಳ ದಾಟಲು ಹೋಗಿ ನೀರುಪಾಲಾದ ಜಾನುವಾರು; ಬಿರುಗಾಳಿಗೆ ಕಳಚಿದ ವಿಂಡ್‌ ಫ್ಯಾನ್‌

karnataka Rain
ಮಳೆ3 days ago

Karnataka Rain : ಬೀದಿಗೆ ತಂದ ರಣಮಳೆ; ಮನೆ ಕುಸಿದು ಬಿದ್ದು 9 ತಿಂಗಳ ಗರ್ಭಿಣಿ ನರಳಾಟ

Karnataka Rain
ಮಳೆ3 days ago

Karnataka Rain : ರಾಜ್ಯದಲ್ಲಿ ಮಳೆಯ ಆರ್ಭಟ; ರಾತ್ರಿ ಕಳೆದು ಬೆಳಗಾಗುವುದರೊಳಗೆ ಕಂದಕ ನಿರ್ಮಾಣ

Karnataka Rain
ಮಳೆ4 days ago

Karnataka Rain : ಭಾರಿ ಮಳೆ ಎಫೆಕ್ಟ್‌; ಉಕ್ಕಿ ಹರಿಯುತ್ತಿದ್ದ ನದಿಯಲ್ಲಿ ಕೊಚ್ಚಿ ಹೋದ ರಾಸು

Uttara Kannada Landslide
ಮಳೆ4 days ago

Uttara Kannada Landslide: ಶಿರೂರು ಗುಡ್ಡ ಕುಸಿತ; ಅಖಾಡಕ್ಕಿಳಿದ ಜಿಯೊಲಾಜಿಕಲ್ ಸರ್ವೆ ಆಫ್ ಇಂಡಿಯಾ ಟೀಂ

Karnataka Rain
ಮಳೆ6 days ago

Karnataka Rain : ಕಾರವಾರದಲ್ಲಿ ಮಳೆ ಅವಾಂತರ; ಮನೆ ಮೇಲೆ ಗುಡ್ಡ ಕುಸಿದು ವೃದ್ಧ ಸಾವು

karnataka Rain
ಮಳೆ6 days ago

Karnataka Rain : ಭಾರಿ ಮಳೆಗೆ ನಿಯಂತ್ರಣ ತಪ್ಪಿ ಕೆರೆಗೆ ಉರುಳಿ ಬಿದ್ದ ಕಾರು; ನಾಲ್ವರು ಪ್ರಾಣಾಪಾಯದಿಂದ ಪಾರು

karnataka Weather Forecast
ಮಳೆ1 week ago

Karnataka Weather : ವ್ಯಾಪಕ ಮಳೆ ಎಚ್ಚರಿಕೆ; ನಾಳೆಯೂ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

karnataka Rain
ಮಳೆ1 week ago

Karnataka Rain : ಶಾಲಾ-ಕಾಲೇಜಿಗೆ ಈ ದಿನ ರಜಾ; ಅಬ್ಬರಿಸುತ್ತಿರುವ ಮಳೆಗೆ ಮನೆಯಲ್ಲೇ ಎಲ್ಲರೂ ಸಜಾ!

ಟ್ರೆಂಡಿಂಗ್‌