Viral Video: ಸ್ಕೂಟರ್‌ಗೆ ಅಪ್ಪಳಿಸಿದ ಕಾರು; 10 ಅಡಿ ಮೇಲಕ್ಕೆ ಹಾರಿ ಬಿದ್ದ ತಾಯಿ, ಮಗ - Vistara News

ವೈರಲ್ ನ್ಯೂಸ್

Viral Video: ಸ್ಕೂಟರ್‌ಗೆ ಅಪ್ಪಳಿಸಿದ ಕಾರು; 10 ಅಡಿ ಮೇಲಕ್ಕೆ ಹಾರಿ ಬಿದ್ದ ತಾಯಿ, ಮಗ

ಉತ್ತರ ಪ್ರದೇಶದ ಗಾಜಿಯಾಬಾದ್‌ನ ದೆಹಲಿ-ಮೀರತ್ ಎಕ್ಸ್‌ಪ್ರೆಸ್‌ವೇಯ ಮೆಹ್ರಾಲಿ ಅಂಡರ್‌ಪಾಸ್ ಬಳಿ ಶನಿವಾರ ರಾತ್ರಿ ಭೀಕರ ಅಪಘಾತ ಸಂಭವಿಸಿದ್ದು, ತಾಯಿ ಮಗ ಸಾವನ್ನಪ್ಪಿದ್ದಾರೆ. ಇದರ ವಿಡಿಯೋ (Viral Video) ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಎಕ್ಸ್ ಪ್ರೆಸ್ ವೇಯಲ್ಲಿ ನಡೆದ ಭಯಾನಕ ಅಪಘಾತದ ದೃಶ್ಯಗಳು ಇದರಲ್ಲಿ ಸೆರೆಯಾಗಿದೆ.

VISTARANEWS.COM


on

Viral Video
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಕಾರು ಮತ್ತು ಸ್ಕೂಟರ್ ಡಿಕ್ಕಿಯಾದ (car and Scooter accident) ಪರಿಣಾಮ ತಾಯಿ ಮಗ ಸಾವನ್ನಪ್ಪಿರುವ ದುರಂತ ಘಟನೆ ಉತ್ತರ ಪ್ರದೇಶದ ಗಾಜಿಯಾಬಾದ್‌ನ ದೆಹಲಿ-ಮೀರತ್ ಎಕ್ಸ್‌ಪ್ರೆಸ್‌ವೇಯಲ್ಲಿ (Delhi-Meerut Expressway) ನಡೆದಿದೆ. ಇದರ ಭೀಕರ ವಿಡಿಯೋ (Viral Video) ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಕಾರು ಚಾಲಕನನ್ನು ಪೊಲೀಸರು ಬಂಧಿಸಿದ್ದಾರೆ.

ಹರಿದ್ವಾರದ ಗಂಗಾ ನದಿಯಲ್ಲಿ ಸ್ನಾನ ಮುಗಿಸಿ ದೆಹಲಿಗೆ ಸ್ಕೂಟರ್ ನಲ್ಲಿ ತಾಯಿ ಮಗ ಹಿಂದಿರುಗುತ್ತಿದ್ದರು. ಮೃತರ ಶವಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ದೆಹಲಿ-ಮೀರತ್ ಎಕ್ಸ್‌ಪ್ರೆಸ್‌ವೇಯಲ್ಲಿ ನಡೆದಿರುವ ಭೀಕರ ಅಪಘಾತವನ್ನು ತೋರಿಸುವ ಸಿಸಿಟಿವಿ ದೃಶ್ಯಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ.

ಎಕ್ಸ್‌ನಲ್ಲಿ ಪೋಸ್ಟ್ ಮಾಡಲಾದ ಇದರ ವಿಡಿಯೋದಲ್ಲಿ ವಿರುದ್ಧ ದಿಕ್ಕಿನಿಂದ ಬಂದ ಕಾರು ಸ್ಕೂಟರ್‌ಗೆ ಡಿಕ್ಕಿಯಾದ ನಿಖರವಾದ ಕ್ಷಣವನ್ನು ತೋರಿಸಿದೆ. ಡಿಕ್ಕಿಯ ಪರಿಣಾಮ ಎಷ್ಟು ತೀವ್ರವಾಗಿತ್ತೆಂದರೆ ಸ್ಕೂಟರ್‌ ನಲ್ಲಿ ಕುಳಿತಿದ್ದ ಮಹಿಳೆ ಗಾಳಿಯಲ್ಲಿ 10 ಅಡಿ ಎತ್ತರಕ್ಕೆ ಹಾರಿ, ರಸ್ತೆಯ ಮೇಲೆ ಬಿದ್ದಿದ್ದಾರೆ.


ಶನಿವಾರ ರಾತ್ರಿ ಗಾಜಿಯಾಬಾದ್‌ನ ಮೆಹ್ರಾಲಿ ಅಂಡರ್‌ಪಾಸ್ ಬಳಿ ಈ ಅಪಘಾತ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದು, ಗಾಯಗೊಂಡ ಸ್ಕೂಟರ್ ಸವಾರರನ್ನು ತಕ್ಷಣವೇ ಹತ್ತಿರದ ಮಣಿಪಾಲ್ ಆಸ್ಪತ್ರೆಗೆ ಸಾಗಿಸಲಾಯಿತು. ಅಲ್ಲಿ ಅವರು ಸಾವನ್ನಪ್ಪಿದ್ದಾರೆ ಎಂದು ಘೋಷಿಸಲಾಯಿತು.

ಇದನ್ನೂ ಓದಿ: Viral News: ಮಕ್ಕಳ ಹಸಿವು ನೀಗಿಸಲು ಸೈನಿಕರೆದುರು ಬೆತ್ತಲಾಗುತ್ತಿರುವ ಮಹಿಳೆಯರು!

ಮೃತರನ್ನು 20 ವರ್ಷದ ಯಶ್ ಗೌತಮ್ ಮತ್ತು ಆತನ 40 ವರ್ಷದ ತಾಯಿ ಮಂಜು ದೇವಿ ಎಂದು ಗುರುತಿಸಲಾಗಿದೆ. ಇಬ್ಬರೂ ದೆಹಲಿಯ ಪಶ್ಚಿಮ ವಿನೋದ್ ನಗರದ ನಿವಾಸಿಗಳಾಗಿದ್ದರು.

ಘಟನೆಯ ವೇಳೆ ಯಶ್ ಹೆಲ್ಮೆಟ್ ಧರಿಸಿದ್ದು, ಅವರ ತಾಯಿ ಹೆಲ್ಮೆಟ್ ಧರಿಸಿರಲಿಲ್ಲ. ಇದಲ್ಲದೆ ಎಕ್ಸ್‌ಪ್ರೆಸ್‌ವೇಯಲ್ಲಿ ದ್ವಿಚಕ್ರ ವಾಹನಗಳನ್ನು ಓಡಿಸುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

‘ಐಎಎಸ್‌’ ಗಂಡನ ಬಿಟ್ಟು, ಗ್ಯಾಂಗ್‌ಸ್ಟರ್‌ ಜತೆ ಓಡಿಹೋಗಿದ್ದ ಮಹಿಳೆ ಬಾಳು ಅಂತ್ಯ; ಪತಿ ಮನೆಗೆ ವಾಪಸಾಗಿ ಆತ್ಮಹತ್ಯೆ!

ಐಎಎಸ್‌ ಅಧಿಕಾರಿಯ ಪತ್ನಿ ವಿರುದ್ಧ ಅಪಹರಣದ ಕೇಸ್‌ ದಾಖಲಾಗಿದೆ. ಬಂಧನದಿಂದ ತಪ್ಪಿಸಿಕೊಳ್ಳಲು ಆಕೆ ಪತಿಯ ಮನೆಗೆ ವಾಪಸ್‌ ಬಂದಿದ್ದಳು ಎನ್ನಲಾಗಿದೆ. ಮಹಿಳೆಯ ಬಾಯ್‌ಫ್ರೆಂಡ್‌ ಗ್ಯಾಂಗ್‌ಸ್ಟರ್‌ ಆಗಿದ್ದು, ಆತನನ್ನು ಮಹಾರಾಜ ಸಿಂಗ್‌ ಎಂಬುದಾಗಿ ಗುರುತಿಸಲಾಗಿದೆ. ಈತನ ವಿರುದ್ಧವೂ ಅಪಹರಣ ಪ್ರಕರಣ ದಾಖಲಾಗಿದೆ ಎಂದು ತಿಳಿದುಬಂದಿದೆ.

VISTARANEWS.COM


on

News
Koo

ಗಾಂಧಿನಗರ: ಜೀವನದಲ್ಲಿ ಕೆಲವರನ್ನು ನೋಡಿದಾಗ ಅನಿಸುತ್ತದೆ. ದೇವರು ಅವರಿಗೆ ಎಲ್ಲವನ್ನೂ ಕೊಟ್ಟಿರುತ್ತಾನೆ. ಸ್ನೇಹಿತರು, ಸಂಬಂಧಿಕರನ್ನು ಕರುಣಿಸಿರುತ್ತಾನೆ. ಇದಕ್ಕೆ ನಿದರ್ಶನ ಎಂಬಂತೆ, ಗುಜರಾತ್‌ನಲ್ಲಿ (Gujarat) ಐಎಎಸ್‌ ಅಧಿಕಾರಿಯಾಗಿದ್ದ (IAS Officer) ಪತಿಯನ್ನು ತೊರೆದು, ಗ್ಯಾಂಗ್‌ಸ್ಟರ್‌ ಜತೆ ಪರಾರಿಯಾಗಿದ್ದ ಮಹಿಳೆಯೊಬ್ಬರ ಬಾಳು ಈಗ ದುರಂತ ಅಂತ್ಯ ಕಂಡಿದೆ. ಗ್ಯಾಂಗ್‌ಸ್ಟರ್‌ನನ್ನು ಬಿಟ್ಟು ಗಂಡನ ಮನೆಗೆ ವಾಪಸ್‌ ಬಂದ 45 ವರ್ಷದ ಮಹಿಳೆಯು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಗುಜರಾತ್‌ ರಾಜಧಾನಿ ಗಾಂಧಿನಗರದ ಸೆಕ್ಟರ್‌ 19ರಲ್ಲಿ ಇಂತಹದ್ದೊಂದು ಘಟನೆ ನಡೆದಿದೆ. ಸೂರ್ಯ ಜಯ್‌ ಎಂಬ ಮಹಿಳೆಯು 9 ತಿಂಗಳ ಹಿಂದೆ ಗ್ಯಾಂಗ್‌ಸ್ಟರ್‌ ಒಬ್ಬನ ಜತೆ ಪರಾರಿಯಾಗಿದ್ದರು. ಇವರ ಪತಿ ರಂಜೀತ್‌ ಕುಮಾರ್‌ ಅವರು ಗುಜರಾತ್‌ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗದ ಕಾರ್ಯದರ್ಶಿಯಾಗಿದ್ದಾರೆ. ಐಎಎಸ್‌ ಅಧಿಕಾರಿಯಾಗಿದ್ದ ಪತಿಯನ್ನು ತೊರೆದು, ಅವರು ಗ್ಯಾಂಗ್‌ಸ್ಟರ್‌ ಜತೆ ಓಡಿಹೋಗಿದ್ದರು. ಆದರೆ, ಅವರು ಶನಿವಾರ (ಜುಲೈ 20) ಗಂಡನ ಮನೆಗೆ ವಾಪಸ್‌ ಬಂದವರೇ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಇದಾದ ಬಳಿಕ ಅವರನ್ನು ಆಸ್ಪತ್ರೆಗೆ ಸಾಗಿಸಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೆ ಭಾನುವಾರ (ಜುಲೈ 21) ಮೃತಪಟ್ಟಿದ್ದಾರೆ.

Self Harming

ವಾಪಸ್‌ ಬರುವ ಹಿಂದಿದೆ ದೊಡ್ಡ ಕತೆ

ಒಳ್ಳೆಯ ಗಂಡನ ಬಿಟ್ಟು, ಗ್ಯಾಂಗ್‌ಸ್ಟರ್‌ ಜತೆ ಓಡಿ ಹೋದೆ ಎಂಬ ಪಾಪಪ್ರಜ್ಞೆ ಕಾಡಿ ಸೂರ್ಯ ಜಯ್‌ ವಾಪಸ್‌ ಮನೆಗೆ ಬಂದಿದ್ದಲ್ಲ ಎಂಬ ಭೀಕರ ಮಾಹಿತಿ ಲಭ್ಯವಾಗಿದೆ. ಮಹಿಳೆ ವಿರುದ್ಧ 14 ವರ್ಷದ ಬಾಲಕನನ್ನು ಅಪಹರಣ ಮಾಡಿದ ಕೇಸ್‌ ದಾಖಲಾಗಿದೆ. ಇದರಿಂದಾಗಿ ಆಕೆಗೆ ಬಂಧನದ ಭೀತಿ ಎದುರಾಗಿದೆ. ಪತಿ ಐಎಎಸ್‌ ಆಫೀಸರ್‌ ಆಗಿರುವ ಕಾರಣ, ಆತನ ಮನೆಯಲ್ಲಿದ್ದರೆ ಪೊಲೀಸರು ಬಂಧಿಸುವುದಿಲ್ಲ ಎಂದು ಭಾವಿಸಿ ಮನೆಗೆ ನುಗ್ಗಲು ಯತ್ನಿಸಿದ್ದಾಳೆ. ಆದರೆ, ಅಧಿಕಾರಿ ಮನೆಯಲ್ಲಿದ್ದ ಸಿಬ್ಬಂದಿಯು ಒಳಗೆ ಹೋಗಲು ಬಿಟ್ಟಿಲ್ಲ. ಇದರಿಂದ ವಿಚಲಿತಳಾದ ಆಕೆಯು, ಅಲ್ಲಿಯೇ ವಿಷ ಸೇವಿಸಿದ್ದಾಳೆ. ಬಳಿಕ ಆಂಬುಲೆನ್ಸ್‌ಗೆ ಕರೆ ಮಾಡಿದ್ದಾಳೆ. ಕೊನೆಗೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾಳೆ.

ಅಧಿಕಾರಿಯ ವಕೀಲರು ಹೇಳುವುದೇನು?

ಪ್ರಕರಣಕ್ಕೆ ಸಂಬಂಧಿಸಿದಂತೆ ಐಎಎಸ್‌ ಅಧಿಕಾರಿ ರಂಜೀತ್‌ ಕುಮಾರ್‌ ಅವರ ಪರ ವಕೀಲ ಹಿತೇಶ್‌ ಗುಪ್ತಾ ಅವರು ಮಾಹಿತಿ ನೀಡಿದ್ದಾರೆ. “2023ರಲ್ಲಿಯೇ ರಂಜೀತ್‌ ಕುಮಾರ್‌ ಹಾಗೂ ಸೂರ್ಯ ಜಯ್‌ ಪ್ರತ್ಯೇಕವಾಗಿದ್ದಾರೆ. ಇಬ್ಬರೂ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಕಳೆದ ಶನಿವಾರ (ಜುಲೈ 20) ರಂಜೀತ್‌ ಕುಮಾರ್‌ ಅವರು ವಿಚ್ಛೇದನದ ಅರ್ಜಿ ಕುರಿತಂತೆ ಮನೆಯಿಂದ ಹೊರಗೆ ಹೋದಾಗ ಮಹಿಳೆಯು ಮನೆಗೆ ಬಂದಿದ್ದಾರೆ. ಇದಾದ ಬಳಿಕ ದುರಂತ ನಡೆದಿದೆ” ಎಂದು ವಿವರಿಸಿದ್ದಾರೆ. ಅಂದಹಾಗೆ ಮಹಿಳೆಯ ಬಾಯ್‌ಫ್ರೆಂಡ್‌ ಗ್ಯಾಂಗ್‌ಸ್ಟರ್‌ ಆಗಿದ್ದು, ಆತನನ್ನು ಮಹಾರಾಜ ಸಿಂಗ್‌ ಎಂಬುದಾಗಿ ಗುರುತಿಸಲಾಗಿದೆ. ಈತನ ವಿರುದ್ಧವೂ ಅಪಹರಣ ಪ್ರಕರಣ ದಾಖಲಾಗಿದೆ ಎನ್ನಲಾಗಿದೆ.

ಇದನ್ನೂ ಓದಿ: Road Accident: ಜನ್ಮದಿನದಂದೇ ಯುವತಿಯ ಜೀವ ತೆಗೆದ ಜವರಾಯ; ಕಾರು ಚಾಲಕ ಪರಾರಿ

Continue Reading

ವೈರಲ್ ನ್ಯೂಸ್

Viral Video: ಹುಟ್ಟುವಾಗಲೇ 32 ಹಲ್ಲುಗಳೊಂದಿಗೆ ಜನಿಸಿದ ಮಗು! ಹೀಗೇಕಾಯಿತು?

ಮಹಿಳೆಯೊಬ್ಬರು ತನ್ನ ನವಜಾತ ಮಗಳು ಹಲ್ಲುಗಳನ್ನು ಹೊಂದಿರುವ ವಿಡಿಯೋವನ್ನು (Viral Video) ಸಾಮಾಜಿಕ ಜಾಲತಾಣದಲ್ಲಿ ಹಾಕಿದ್ದು, ಇದು ಭಾರಿ ವೈರಲ್ ಆಗಿದೆ. ಸಾಕಷ್ಟು ಮಂದಿಯ ಗಮನ ಸೆಳೆದಿದೆ. ಈ ಕುರಿತು ಬರೆದಿರುವ ಮಹಿಳೆ, ತನ್ನ ಮಗಳು ಅಪರೂಪದ ಕಾಯಿಲೆಯನ್ನು ಜನಿಸುವಾಗಲೇ ಹೊಂದಿದ್ದಳು. ಅವಳು 32 ಹಲ್ಲುಗಳೊಂದಿಗೆ ಜನಿಸಿದ್ದಾಳೆ ಎಂದು ಅಚ್ಚರಿಯ ಫೋಟೊ ಪೋಸ್ಟ್‌ ಮಾಡಿದ್ದಾಳೆ.

VISTARANEWS.COM


on

By

Viral Video
Koo

ಸಾಮಾನ್ಯವಾಗಿ ಮಗು ಹುಟ್ಟಿದ 7- 8 ತಿಂಗಳ ಬಳಿಕ ಹಲ್ಲು ಬರುತ್ತದೆ. ಆದರೆ ಇಲ್ಲೊಂದು ಮಗು ಹುಟ್ಟುತ್ತಲೇ ಬಾಯಿ ತುಂಬಾ ಹಲ್ಲನ್ನು (Baby Born With Teeth) ಹೊಂದಿದ್ದು, ಈ ಕುರಿತು ಅಚ್ಚರಿಯನ್ನು ವ್ಯಕ್ತಪಡಿಸಿ ತಾಯಿ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ (Viral Video) ಹಂಚಿಕೊಂಡಿದ್ದಾಳೆ. ಇದರ ವಿಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಇನ್‌ಸ್ಟಾ ಗ್ರಾಮ್‌ನಲ್ಲಿ 29.7 ಮಿಲಿಯನ್ ವೀಕ್ಷಣೆಗಳನ್ನು ಗಳಿಸಿದೆ.

ಸಾಮಾನ್ಯವಾಗಿ ಮಕ್ಕಳು ಹಲ್ಲಿಲ್ಲದೆ ಹುಟ್ಟುತ್ತವೆ. ಮಗು ಬೆಳೆದಾಗ, ಅವರ ಹಾಲು ಹಲ್ಲುಗಳು ಬೆಳೆಯಲು ಪ್ರಾರಂಭಿಸುತ್ತವೆ. ಕ್ರಮೇಣ ಹಾಲು ಹಲ್ಲು ಕಳೆದುಕೊಂಡು ʼಬುದ್ಧಿವಂತಿಕೆಯ ಹಲ್ಲುʼಗಳನ್ನು ಒಳಗೊಂಡಂತೆ ಸರಾಸರಿ 32 ಶಾಶ್ವತ ಹಲ್ಲುಗಳು ಬರುತ್ತವೆ. 21ನೇ ವಯಸ್ಸಿನವರೆಗೂ ಹಲ್ಲಿನ ಬೆಳವಣಿಗೆಯಾಗುತ್ತದೆ.

ಹಲ್ಲುಗಳ ಬೆಳವಣಿಗೆಯಲ್ಲಿ ಪ್ರಮುಖ ಪಾತ್ರ ವಹಿಸುವ ವಿವಿಧ ಅಂಶಗಳಿವೆ. ಇವುಗಳು ಸರಿಯಾದ ಪೋಷಣೆಯನ್ನು ಒಳಗೊಂಡಿವೆ. ಆದರೆ ಇಲ್ಲೊಂದು ಹುಟ್ಟಿದ ಮಗುವಿಗೆ 32 ಹಲ್ಲುಗಳಿದ್ದ ಅಚ್ಚರಿಯ ಘಟನೆ ಅಂತರ್ಜಾಲದಲ್ಲಿ ವೈರಲ್ ಆಗಿದೆ. ಮಹಿಳೆಯೊಬ್ಬರು ತನ್ನ ಮಗಳು 32 ಹಲ್ಲುಗಳನ್ನು ಹೊಂದಿರುವ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿದ್ದು, ಇದು ಸಾಕಷ್ಟು ಮಂದಿಯ ಗಮನ ಸೆಳೆದಿದೆ.

ಈ ಕುರಿತು ಬರೆದಿರುವ ಮಹಿಳೆ, ತನ್ನ ಮಗಳು ಅಪರೂಪದ ಕಾಯಿಲೆಯಿಂದ ಜನಿಸಿದಳು. ಅವಳು 32 ಹಲ್ಲುಗಳೊಂದಿಗೆ ಜನಿಸಿದ್ದಾಳೆ ಎಂದು ಹೇಳಿಕೊಂಡಿದ್ದಾರೆ. ಈ ಕುರಿತು ಜಾಗೃತಿ ಮೂಡಿಸಲು ಸಾರ್ವಜನಿಕರೊಂದಿಗೆ ಇದನ್ನು ಹಂಚಿಕೊಳ್ಳುತ್ತಿರುವುದಾಗಿ ಮಹಿಳೆ ತಿಳಿಸಿದ್ದಾಳೆ. ವಿಡಿಯೋದಲ್ಲಿ ಮಹಿಳೆ ಸಂಪೂರ್ಣ ಹಲ್ಲುಗಳೊಂದಿಗೆ ಜನಿಸಿದ ತಮ್ಮ ಮಗಳನ್ನು ತೋರಿಸಿದ್ದಾರೆ. ಮಗಳು ಹುಟ್ಟುವಾಗಲೇ ಸಂಪೂರ್ಣ ಹಲ್ಲುಗಳನ್ನು ಹೊಂದಿದ್ದಳು ಎಂಬುದನ್ನು ಅವರು ಹೇಳಿದ್ದಾರೆ.


ಈ ಸ್ಥಿತಿಯನ್ನು ಸಾಮಾನ್ಯವಾಗಿ ಹಲ್ಲುಗಳನ್ನು ಹಾಲು ಹಲ್ಲು ಎಂದು ಕರೆಯಲಾಗುತ್ತದೆ. ಇದು ಮಗುವಿಗೆ ಹೆಚ್ಚು ಹಾನಿಕಾರಕವಲ್ಲದಿದ್ದರೂ ಇದು ತಾಯಿಗೆ ತೊಂದರೆ ಉಂಟುಮಾಡಬಹುದು. ಯಾಕೆಂದರೆ ಅವಳು ತನ್ನ ಮಗುವಿಗೆ ಆಹಾರವನ್ನು ನೀಡಲು ಕಷ್ಟವಾಗಬಹುದು. ಇದಲ್ಲದೆ ಹಲ್ಲುಗಳು ಮುರಿದರೆ ಮಗು ನುಂಗುವ ಅಪಾಯವಿದೆ.

ಇದನ್ನೂ ಓದಿ: Viral Video: ವೃದ್ಧನ ಮೊಬೈಲ್‌ ಕಸಿದು ಓಡಿದ ಯುವಕನಿಗೆ ಯಾವ ಗತಿಯಾಯಿತು ನೋಡಿ!

ಈ ವಿಡಿಯೋ ಕ್ಲಿಪ್ ಅನ್ನು ಅಪ್‌ಲೋಡ್ ಮಾಡಿದ ಅನಂತರ ಅನೇಕರು ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದ್ದಾರೆ. ಕೆಲವರು ಮಗುವನ್ನು ನೋಡಿ ಹೆದರಿದ್ದರು.

ಬಳಕೆದಾರರಲ್ಲಿ ಒಬ್ಬರು ಹೀಗೆ ಬರೆದಿದ್ದಾರೆ, ಮಗು ಚೆನ್ನಾಗಿದೆ ಎಂದು ನಾನು ಭಾವಿಸುತ್ತೇನೆ. ಮಗು ಬೆಳೆಯುವಾಗ ನೀವು ಯಾವುದೇ ಸಮಸ್ಯೆಗಳನ್ನು ಎದುರಿಸಿದ್ದೀರಾ ಎಂದು ಪ್ರಶ್ನಿಸಿದ್ದಾರೆ. ಮತ್ತೊಬ್ಬ ಬಳಕೆದಾರರು, ಕ್ಷಮಿಸಿ, ಆದರೆ ಮಗುವು ಭಯಾನಕವಾಗಿ ಕಾಣುತ್ತಿದೆ ಎಂದಿದ್ದಾರೆ.

Continue Reading

ವೈರಲ್ ನ್ಯೂಸ್

Viral News: ಮಕ್ಕಳ ಹಸಿವು ನೀಗಿಸಲು ಸೈನಿಕರೆದುರು ಬೆತ್ತಲಾಗುತ್ತಿರುವ ಮಹಿಳೆಯರು!

Viral News: ಯುದ್ಧ ಪೀಡಿತ ಸುಡಾನ್‌ನಲ್ಲಿ ಮಹಿಳೆಯರು ತಮ್ಮ ಕುಟುಂಬದವರಿಗಾಗಿ ಆಹಾರವನ್ನು ಪಡೆಯಲು ಸೈನಿಕರೊಂದಿಗೆ ಲೈಂಗಿಕ ಕ್ರಿಯೆ ನಡೆಸುವಂತೆ ಒತ್ತಾಯಿಸಲಾಗುತ್ತಿದೆ ಎಂಬ ಸುದ್ದಿ ಈಗ ಸಂಚಲನ ಮೂಡಿಸಿದೆ. ಸುಡಾನ್ ನಗರದ ಒಮ್ದುರ್ಮನ್‌ನಿಂದ ಪಲಾಯನ ಮಾಡಿದ ಅನೇಕ ಮಹಿಳೆಯರು ತಮ್ಮ ಕುಟುಂಬದವರ ಊಟಕ್ಕಾಗಿ ಆಹಾರವನ್ನು ಪಡೆಯಲು ಮತ್ತು ಹಣವನ್ನು ಸಂಗ್ರಹಿಸಲು ಸೈನಿಕರೊಂದಿಗೆ ಲೈಂಗಿಕ ಕ್ರಿಯೆ ನಡೆಸುವುದು ಬಿಟ್ಟರೆ ಬೇರೆ ದಾರಿಯಿಲ್ಲ ಎಂದು ದುಃಖ ತೋಡಿಕೊಂಡಿದ್ದಾರೆ.

VISTARANEWS.COM


on

Viral News
Koo

ಸುಡಾನ್: ಸೈನಿಕರನ್ನು ಜನರು ತಮ್ಮ ರಕ್ಷಕರೆಂದು (Viral News) ಭಾವಿಸುತ್ತಾರೆ. ಯಾಕೆಂದರೆ ಅವರು ಹಗಲಿರುಳೆನ್ನದೇ ದೇಶದ ಗಡಿಯಲ್ಲಿ ಕಾವಲು ಕಾಯುತ್ತಾ ಶತ್ರು ದೇಶದವರಿಂದ ಜನರ ಪ್ರಾಣವನ್ನು ಕಾಪಾಡುತ್ತಾರೆ. ಹಾಗಾಗಿ ಜನರು ಅವರಿಗೆ ಗೌರವವನ್ನು ನೀಡುತ್ತಾರೆ. ಆದರೆ ಅಂತಹ ಗೌರವದ ಸ್ಥಾನದಲ್ಲಿರುವ ಸೈನಿಕರು ತಮ್ಮ ಲೈಂಗಿಕ ದಾಹವನ್ನು ತೀರಿಸಿಕೊಳ್ಳಲು ದೇಶದ ಮಹಿಳೆಯರನ್ನು ಬಳಸಿಕೊಂಡರೆ? ಈ ಸುದ್ದಿ ಎಲ್ಲೆಡೆ ವೈರಲ್‌ ಆಗಿದೆ.

ಯುದ್ಧ ಪೀಡಿತ ಸುಡಾನ್‍ನಲ್ಲಿ ಜನ ಆಹಾರ ಇಲ್ಲದೆ ಬಳಲುತ್ತಿದ್ದಾರೆ. ಮಹಿಳೆಯರು ತಮ್ಮ ಕುಟುಂಬದವರಿಗಾಗಿ ಆಹಾರವನ್ನು ಪಡೆಯಲು ಸೈನಿಕರೊಂದಿಗೆ ಲೈಂಗಿಕ ಕ್ರಿಯೆ ನಡೆಸುವಂತೆ ಒತ್ತಾಯಿಸಲಾಗುತ್ತಿದೆ ಎಂಬ ಆಘಾತಕರ ಸುದ್ದಿ ಬೆಳಕಿಗೆ ಬಂದಿದೆ. ಸುಡಾನ್ ನಗರದ ಒಮ್ದುರ್ಮನ್‍ನಿಂದ ಪಲಾಯನ ಮಾಡಿದ ಅನೇಕ ಮಹಿಳೆಯರು ತಮ್ಮ ಕುಟುಂಬದವರ ಊಟಕ್ಕಾಗಿ ಆಹಾರವನ್ನು ಪಡೆಯಲು ಮತ್ತು ಹಣವನ್ನು ಸಂಗ್ರಹಿಸಲು ಸೈನಿಕರೊಂದಿಗೆ ಲೈಂಗಿಕ ಕ್ರಿಯೆಗೆ ಒಳಗಾಗುವುದೊಂದೇ ಮಾರ್ಗವಾಗಿದೆ ಎಂದು ಹೇಳಿದ್ದಾರೆ.

ಈ ಬಗ್ಗೆ ಮಾತನಾಡಿದ ಮಹಿಳೆಯೊಬ್ಬರು, ತನ್ನ ಹೆತ್ತವರು ತುಂಬಾ ವಯಸ್ಸಾದವರು ಮತ್ತು ಅನಾರೋಗ್ಯದಿಂದ ಬಳಲುತ್ತಿದ್ದ ಕಾರಣ ತನಗೆ ಹೊರಗೆ ಹೋಗಿ ದುಡಿಯಲು ಆಗುತ್ತಿಲ್ಲ. ಹಾಗಾಗಿ ತಾನು ಸೈನಿಕರ ಬಳಿಗೆ ಹೋದಾಗ ಅವರ ಬಳಿ ಆಹಾರವನ್ನು ಪಡೆಯಲು ಅವರ ಜೊತೆ ಲೈಂಗಿಕ ಕ್ರಿಯೆ ನಡೆಸುವುದೊಂದೇ ಮಾರ್ಗವಾಗಿತ್ತು. ಅವರು ಕಾರ್ಖಾನೆಗಳ ಪ್ರದೇಶದಲ್ಲಿ ಎಲ್ಲೆಡೆ ಇದ್ದರು. ಹಾಗಾಗಿ ಕಳೆದ ವರ್ಷ ಮೇ ತಿಂಗಳಲ್ಲಿ ಮಾಂಸ ನೀಡುವ ಕಾರ್ಖಾನೆಯಲ್ಲಿ ಸೈನಿಕರೊಂದಿಗೆ ಲೈಂಗಿಕ ಕ್ರಿಯೆ ನಡೆಸಲು ಒತ್ತಾಯಿಸಿದರು ಎಂಬುದಾಗಿ ತಿಳಿಸಿದ್ದಾಳೆ.

ದೇಶದಲ್ಲಿ ಅಂತರ್ಯುದ್ಧ ಪ್ರಾರಂಭವಾದ ಕೂಡಲೇ ಈ ದೌರ್ಜನ್ಯ ಪ್ರಾರಂಭವಾದವು ಎಂದು ವರದಿಯಾಗಿದೆ. ಕಳೆದ ವರ್ಷ ಏಪ್ರಿಲ್ 15ರಂದು ಸಂಘರ್ಷ ಪ್ರಾರಂಭವಾದ ಕೆಲವೇ ದಿನಗಳಲ್ಲಿ ಸಶಸ್ತ್ರ ಪುರುಷರಿಂದ ಅತ್ಯಾಚಾರದ ವರದಿಗಳು ಹೊರಬಂದವು. ಸುಡಾನ್‍ನಲ್ಲಿನ ಯುದ್ಧದಲ್ಲಿ ಹತ್ತಾರು ಜನರು ಸಾವನಪ್ಪಿದ್ದರು. ಕೆಲವು ಅಂದಾಜಿನ ಪ್ರಕಾರ ಸಾವಿನ ಸಂಖ್ಯೆ 150,000ದಷ್ಟಿದೆ ಎನ್ನಲಾಗಿತ್ತು. ಈ ಯುದ್ಧದಿಂದ ಇಲ್ಲಿನ ಜನರು ಸ್ಥಳಾಂತರಗೊಳ್ಳಬೇಕಾಯಿತು. ಇದು ದೇಶವನ್ನು ಕ್ಷಾಮದ ಅಂಚಿಗೆ ತಂದಿತ್ತು.

ಇದೀಗ ತಮ್ಮ ನಿಯಂತ್ರಣದಲ್ಲಿರುವ ಪ್ರದೇಶಗಳಲ್ಲಿ ಆರ್‌ಎಸ್‌ಎಫ್ ಹೋರಾಟಗಾರರು ವ್ಯವಸ್ಥಿತ ರೀತಿಯಲ್ಲಿ ಲೈಂಗಿಕ ದೌರ್ಜನ್ಯ ಎಸಗುತ್ತಿರುವ ಭಯಾನಕ ಕಥೆಗಳನ್ನು ಹಂಚಿಕೊಳ್ಳಲು ಹಲವಾರು ಮಹಿಳೆಯರು ಮುಂದೆ ಬಂದಿದ್ದಾರೆ. ಸೈನಿಕರೊಂದಿಗೆ ಲೈಂಗಿಕ ಕ್ರಿಯೆ ನಡೆಸಿದ ನಂತರ ಅವರಿಗೆ ಆಹಾರ, ಅಡುಗೆ ಉಪಕರಣಗಳು ಮತ್ತು ಸುಗಂಧ ದ್ರವ್ಯಗಳನ್ನು ನೀಡಲಾಗಿದೆ ಎಂದು ಮಹಿಳೆಯೊಬ್ಬರು ಹೇಳಿದ್ದಾರೆ. ಅಲ್ಲದೇ ಸೈನಿಕರು ಮಹಿಳೆಯರನ್ನು ಪಾಳುಬಿದ್ದ ಮನೆಗಳಿಗೆ ಕರೆತಂದು ಅಲ್ಲಿ ಅವರನ್ನು ಸರತಿ ಸಾಲಿನಲ್ಲಿ ನಿಲ್ಲುವಂತೆ ತಿಳಿಸುತ್ತಾರೆ. ಬಳಿಕ ತಮಗೆ ಇಷ್ಟ ಆದವರನ್ನು ಆಯ್ಕೆ ಮಾಡುತ್ತಾರೆ. ಲೈಂಗಿಕ ಕ್ರಿಯೆ ನಡೆಸಿ ಕಳುಹಿಸುತ್ತಾರೆ.

ಇದನ್ನೂ ಓದಿ: ವೃದ್ಧನ ಮೊಬೈಲ್‌ ಕಸಿದು ಓಡಿದ ಯುವಕನಿಗೆ ಯಾವ ಗತಿಯಾಯಿತು ನೋಡಿ!

ಇನ್ನೊಬ್ಬ ಮಹಿಳೆ ತಾನು ಸೈನಿಕನೊಂದಿಗೆ ಲೈಂಗಿಕ ಕ್ರಿಯೆ ನಡೆಸಲು ನಿರಾಕರಿಸಿದ ನಂತರ ಅವರು ತನಗೆ ಚಿತ್ರಹಿಂಸೆ ನೀಡಿದರು ಮತ್ತು ತನ್ನ ಕಾಲುಗಳನ್ನು ಸುಟ್ಟು ಹಾಕಿದರು ಎಂದು ಹೇಳಿದ್ದಾಳೆ.

Continue Reading

ವೈರಲ್ ನ್ಯೂಸ್

Viral Video: ಜಿಂಕೆಯನ್ನು ತಿನ್ನಲು ಸುರುಳಿ ಸುತ್ತಿದ ಹೆಬ್ಬಾವಿಗೆ ಕೊನೆಗೆ ಆಗಿದ್ದೇನು? ಭಯಾನಕ ವಿಡಿಯೊ

Viral Video: ಒಂದು ಪ್ರಾಣಿಯನ್ನು ತಿಂದು ಇನ್ನೊಂದು
ಪ್ರಾಣಿ ಬದುಕುವುದು ಪ್ರಕೃತಿಯ ನಿಯಮ. ಆದರೆ ಕೆಲವೊಮ್ಮೆ ಬಲಿಷ್ಠ ಪ್ರಾಣಿಗಳು, ಅಮಾಯಕ ಜೀವಿಗಳನ್ನು ಹಿಡಿದಾಗ ಕರುಳು ಚುರ್ರಕ್ಕೆಂದು ತಪ್ಪಿಸುವುದಕ್ಕೆ ಕೆಲವರು ಹೋಗುತ್ತಾರೆ. ಇಲ್ಲಿ ಕೂಡ ಹಾಗೇ ಆಗಿದೆ. ಬೃಹತ್ ಹೆಬ್ಬಾವೊಂದು ಮತ್ತು ಜಿಂಕೆಯನ್ನು ಇನ್ನೇನು ತಿಂದು ಹೊಟ್ಟೆ ತುಂಬಿಸಿಕೊಳ್ಳುಬೇಕು ಎಂದುಕೊಳ್ಳುತ್ತಿರುವಾಗ ಅಲ್ಲಿಗೆ ಬಂದ ವ್ಯಕ್ತಿಯೊಬ್ಬ ಹೆಬ್ಬಾವನ್ನು ಮರದ ಕೊಂಬೆಯಿಂದ ಹೊಡೆದಿದ್ದಾನೆ. ಆಗ ಹೆದರಿದ ಹೆಬ್ಬಾವು ಜಿಂಕೆಯನ್ನು ಬಿಟ್ಟು ಓಡಿ ಹೋಗಿದೆ!

VISTARANEWS.COM


on

Viral Video
Koo


ಬೆಂಗಳೂರು: ಹೆಚ್ಚಿನ ಜನ ಸ್ವಾರ್ಥಿಯಾಗಿರುತ್ತಾರೆ. ಯಾಕೆಂದರೆ ಯಾವುದೇ ಜೀವಿಗಳು ಸಂಕಷ್ಟದಲ್ಲಿದ್ದರೂ ಕೂಡ ಅವುಗಳನ್ನು ರಕ್ಷಿಸುವ ಬದಲು ತನ್ನ ಜೀವ ಉಳಿದರೆ ಸಾಕು ಎಂದು ಓಡುತ್ತಾರೆ. ಆದರೆ ಇಲ್ಲೊಬ್ಬ ವ್ಯಕ್ತಿ ತನ್ನ ಜೀವವನ್ನು ಲೆಕ್ಕಿಸದೆ ಜಿಂಕೆಯೊಂದರ ಪ್ರಾಣ ರಕ್ಷಣೆಗೆ ಮುಂದಾಗಿದ್ದಾನೆ. ಇದಕ್ಕೆ ಸಂಬಂಧಪಟ್ಟ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ವೈರಲ್ (Viral Video) ಆಗಿದ್ದು, ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಕೆಲವರು ವ್ಯಕ್ತಿಯ ಕಾರ್ಯವನ್ನು ಮೆಚ್ಚಿಕೊಂಡರೆ ಕೆಲವರು ಪ್ರಕೃತಿ ನಿಯಮವನ್ನು ಉಲ್ಲಂಘಿಸಿರುದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಈ ಆಘಾತಕಾರಿ ವಿಡಿಯೊದಲ್ಲಿ ಬೃಹತ್ ಹೆಬ್ಬಾವೊಂದು ಮತ್ತು ಜಿಂಕೆಯನ್ನು ಹಿಡಿದಿರುವ ದೃಶ್ಯ ಕಂಡುಬಂದಿದೆ. ಹೆಬ್ಬಾವು ರಸ್ತೆ ಬದಿಯಲ್ಲಿ ಜಿಂಕೆಯೊಂದರ ಮೈಯನ್ನು ಬಿಗಿಯಾಗಿ ಸುತ್ತಿಕೊಂಡಿರುವುದನ್ನು ತೋರಿಸುತ್ತದೆ. ಅಲ್ಲಿಗೆ ಬಂದ ವ್ಯಕ್ತಿಯೊಬ್ಬ ಹೆಬ್ಬಾವನ್ನು ಮರದ ಕೊಂಬೆಯಿಂದ ಹೊಡೆಯುತ್ತಿರುವುದನ್ನು ತೋರಿಸುತ್ತದೆ. ಆಗ ಹೆದರಿದ ಹೆಬ್ಬಾವು ಜಿಂಕೆಯನ್ನು ಬಿಟ್ಟು ಓಡಿ ಹೋಗಿದೆ. ಗಾಬರಿಗೊಂಡಿದ್ದ ಜಿಂಕೆ ಜೀವ ಉಳಿಸಿಕೊಂಡು ಓಡಿ ಹೋಗಿದೆ. ಕಾರಿನ ಒಳಗಿನಿಂದ ಚಿತ್ರೀಕರಿಸಲಾದ ಈ ದೃಶ್ಯ ನೈಜ ಘಟನೆಯಾಗಿದ್ದು, ಇದನ್ನು 50 ದಶಲಕ್ಷಕ್ಕೂ ಹೆಚ್ಚು ಜನರು ವೀಕ್ಷಿಸಿದ್ದಾರೆ. “ನೀವು ಚಾಲನೆ ಮಾಡುತ್ತಿದ್ದಾಗ ಇದನ್ನು ನೋಡಿದರೆ, ನೀವು ಮಧ್ಯಪ್ರವೇಶಿಸುತ್ತೀರಾ ಅಥವಾ ಈ ಮುಂದುವರಿಸಲು ಬಿಡುತ್ತೀರಾ? “ ಎಂದು ಈ ವಿಡಿಯೊಗೆ ಶೀರ್ಷಿಕೆ ನೀಡಲಾಗಿದೆ.

ಈ ಘಟನೆ ನೈಸರ್ಗಿಕವಾಗಿದೆ. ಯಾಕೆಂದರೆ ಒಂದು ಪ್ರಾಣಿ ತನ್ನ ಆಹಾರಕ್ಕಾಗಿ ಮತ್ತೊಂದು ಪ್ರಾಣಿಯನ್ನು ಹಿಡಿದು ತಿನ್ನುವುದು ಅನಿರ್ವಾಯ. ಇದು ದೇವರ ಸೃಷ್ಟಿ. ಆದರೆ ಇಂತಹ ಘಟನೆಯಲ್ಲಿ ಮಧ್ಯಪ್ರವೇಶಿಸುವುದು ಸೂಕ್ತವೇ ಎಂಬ ಬಗ್ಗೆ ಈ ವಿಡಿಯೊ ಚರ್ಚೆಯನ್ನು ಹುಟ್ಟುಹಾಕಿದೆ.

ಇದನ್ನೂ ಓದಿ: ವೃದ್ಧನ ಮೊಬೈಲ್‌ ಕಸಿದು ಓಡಿದ ಯುವಕನಿಗೆ ಯಾವ ಗತಿಯಾಯಿತು ನೋಡಿ!

ಜಿಂಕೆಯ ಜೀವ ಉಳಿಸಿದ್ದಕ್ಕೆ ಕೆಲವರು ಮೆಚ್ಚುಗೆ ವ್ಯಕ್ತಪಡಿಸಿದರೆ, ಹೆಬ್ಬಾವಿನ ಆಹಾರವನ್ನು ಕಸಿದುಕೊಂಡಿದ್ದಕ್ಕೆ ಕೆಲವರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಪ್ರಕೃತಿಯ ನಿಯಮಗಳ ಮಧ್ಯೆ ಹಸ್ತಕ್ಷೇಪ ಮಾಡಬೇಡಿ. ಇದು ಸೂಕ್ಷ್ಮ ಸಮತೋಲನವಾಗಿದೆ. ಅದನ್ನು ಭಂಗಗೊಳಿಸುವುದು ಒಳ್ಳೆಯದಲ್ಲ ಎಂದು ಒಬ್ಬರು ಕಾಮೆಂಟ್ ಮಾಡಿದರೆ, ಮತ್ತೊಬ್ಬರು ಆ ವ್ಯಕ್ತಿ ಅಲ್ಲಿಗೆ ಬಂದಿರುವುದೇ ಈ ಜಿಂಕೆಯ ಜೀವ ಉಳಿಸಲು ಎಂದು ಸಮರ್ಥನೆ ನೀಡಿದ್ದಾರೆ.

Continue Reading
Advertisement
News
ದೇಶ1 hour ago

‘ಐಎಎಸ್‌’ ಗಂಡನ ಬಿಟ್ಟು, ಗ್ಯಾಂಗ್‌ಸ್ಟರ್‌ ಜತೆ ಓಡಿಹೋಗಿದ್ದ ಮಹಿಳೆ ಬಾಳು ಅಂತ್ಯ; ಪತಿ ಮನೆಗೆ ವಾಪಸಾಗಿ ಆತ್ಮಹತ್ಯೆ!

Mumbai Indians
ಕ್ರಿಕೆಟ್1 hour ago

Mumbai Indians : ಮುಂದಿನ ಐಪಿಎಲ್​ಗೆ ಮುಂಬೈ ತೊರೆಯಲಿದ್ದಾರೆ ರೋಹಿತ್ ಶರ್ಮಾ, ಸೂರ್ಯಕುಮಾರ್ ಯಾದವ್​

Abhinav Bindra
ಕ್ರೀಡೆ2 hours ago

Abhinav Bindra : ಭಾರತದ ಶೂಟರ್ ಅಭಿನವ್ ಬಿಂದ್ರಾಗೆ ‘ಒಲಿಂಪಿಕ್​ ಆರ್ಡರ್’ ಗೌರವ​

BJP strongly condemns MLA Shivaram Hebbar statement about MP Vishweshwar Hegde Kageri says hariprakash konemane
ಕರ್ನಾಟಕ2 hours ago

Uttara Kannada News: ಸಂಸದ ಕಾಗೇರಿ ಬಗ್ಗೆ ಶಾಸಕ ಹೆಬ್ಬಾರ್‌ ಕೀಳುಮಟ್ಟದ ಹೇಳಿಕೆಗೆ ಬಿಜೆಪಿ ತೀವ್ರ ಖಂಡನೆ

Chaluvadi Narayanaswamy
ಕರ್ನಾಟಕ3 hours ago

Chaluvadi Narayanaswamy : ಛಲವಾದಿ ನಾರಾಯಣಸ್ವಾಮಿ ವಿಧಾನ ಪರಿಷತ್​​ನ ಪ್ರತಿಪಕ್ಷದ ನಾಯಕ

NEET
ಕರ್ನಾಟಕ3 hours ago

NEET: ನೀಟ್‌ ಪರೀಕ್ಷೆಗೆ ವಿರೋಧ, ಬೆಂಗಳೂರು ವಿಭಜನೆಗೆ ಅಸ್ತು; ರಾಜ್ಯ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ

DK Shivakumar
ಕರ್ನಾಟಕ4 hours ago

DK Shivakumar: ರೈತನಿಗೆ ಪ್ರವೇಶ ನಿರ್ಬಂಧ ಖಂಡನೀಯ; ಮಾಲ್ ಸೇರಿ ಇತರೆಡೆ ಶೀಘ್ರ ವಸ್ತ್ರ ಸಂಹಿತೆ ಜಾರಿ ಎಂದ ಡಿಕೆಶಿ

Veerabaswanthreddy Mudnal
ಶ್ರದ್ಧಾಂಜಲಿ4 hours ago

Veerabaswanthreddy Mudnal: ಮಾಜಿ ಶಾಸಕ ಡಾ.ವೀರಬಸವಂತರೆಡ್ಡಿ ಮುದ್ನಾಳ ಅನಾರೋಗ್ಯದಿಂದ ನಿಧನ

Rahat Fateh Ali Khan
ವಿದೇಶ4 hours ago

Rahat Fateh Ali Khan: ದುಬೈನಲ್ಲಿ ಪಾಕಿಸ್ತಾನದ ಗಾಯಕನ ಬಂಧನ; ಎಸಗಿದ ಕೃತ್ಯವೇನು?

Valmiki Corporation Scam
ಕರ್ನಾಟಕ4 hours ago

Valmiki Corporation Scam: ಬಿ. ನಾಗೇಂದ್ರ ಹೆಸರೇಳುವಂತೆ ಒತ್ತಡ; ಇಡಿ ಅಧಿಕಾರಿಗಳ ವಿರುದ್ಧ ಎಫ್‌ಐಆರ್‌

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Rain
ಮಳೆ2 days ago

Karnataka Rain : ಭಾರಿ ಮಳೆಗೆ ಮನೆ ಗೋಡೆ ಕುಸಿತ; ಕೊಟ್ಟಿಗೆಯಲ್ಲಿದ್ದ ಜಾನುವಾರುಗಳು ಸಾವು

karnataka Rain
ಮಳೆ3 days ago

Karnataka Rain : ಹಳ್ಳ ದಾಟಲು ಹೋಗಿ ನೀರುಪಾಲಾದ ಜಾನುವಾರು; ಬಿರುಗಾಳಿಗೆ ಕಳಚಿದ ವಿಂಡ್‌ ಫ್ಯಾನ್‌

karnataka Rain
ಮಳೆ3 days ago

Karnataka Rain : ಬೀದಿಗೆ ತಂದ ರಣಮಳೆ; ಮನೆ ಕುಸಿದು ಬಿದ್ದು 9 ತಿಂಗಳ ಗರ್ಭಿಣಿ ನರಳಾಟ

Karnataka Rain
ಮಳೆ4 days ago

Karnataka Rain : ರಾಜ್ಯದಲ್ಲಿ ಮಳೆಯ ಆರ್ಭಟ; ರಾತ್ರಿ ಕಳೆದು ಬೆಳಗಾಗುವುದರೊಳಗೆ ಕಂದಕ ನಿರ್ಮಾಣ

Karnataka Rain
ಮಳೆ4 days ago

Karnataka Rain : ಭಾರಿ ಮಳೆ ಎಫೆಕ್ಟ್‌; ಉಕ್ಕಿ ಹರಿಯುತ್ತಿದ್ದ ನದಿಯಲ್ಲಿ ಕೊಚ್ಚಿ ಹೋದ ರಾಸು

Uttara Kannada Landslide
ಮಳೆ4 days ago

Uttara Kannada Landslide: ಶಿರೂರು ಗುಡ್ಡ ಕುಸಿತ; ಅಖಾಡಕ್ಕಿಳಿದ ಜಿಯೊಲಾಜಿಕಲ್ ಸರ್ವೆ ಆಫ್ ಇಂಡಿಯಾ ಟೀಂ

Karnataka Rain
ಮಳೆ7 days ago

Karnataka Rain : ಕಾರವಾರದಲ್ಲಿ ಮಳೆ ಅವಾಂತರ; ಮನೆ ಮೇಲೆ ಗುಡ್ಡ ಕುಸಿದು ವೃದ್ಧ ಸಾವು

karnataka Rain
ಮಳೆ7 days ago

Karnataka Rain : ಭಾರಿ ಮಳೆಗೆ ನಿಯಂತ್ರಣ ತಪ್ಪಿ ಕೆರೆಗೆ ಉರುಳಿ ಬಿದ್ದ ಕಾರು; ನಾಲ್ವರು ಪ್ರಾಣಾಪಾಯದಿಂದ ಪಾರು

karnataka Weather Forecast
ಮಳೆ1 week ago

Karnataka Weather : ವ್ಯಾಪಕ ಮಳೆ ಎಚ್ಚರಿಕೆ; ನಾಳೆಯೂ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

karnataka Rain
ಮಳೆ1 week ago

Karnataka Rain : ಶಾಲಾ-ಕಾಲೇಜಿಗೆ ಈ ದಿನ ರಜಾ; ಅಬ್ಬರಿಸುತ್ತಿರುವ ಮಳೆಗೆ ಮನೆಯಲ್ಲೇ ಎಲ್ಲರೂ ಸಜಾ!

ಟ್ರೆಂಡಿಂಗ್‌