Dina Bhavishya : ಈ ರಾಶಿಯವರಿಗೆ ಸಂಗಾತಿಯ ಮಧುರ ಪ್ರೀತಿ ಸಿಗಲಿದೆ - Vistara News

ಭವಿಷ್ಯ

Dina Bhavishya : ಈ ರಾಶಿಯವರಿಗೆ ಸಂಗಾತಿಯ ಮಧುರ ಪ್ರೀತಿ ಸಿಗಲಿದೆ

Dina Bhavishya: ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ದಕ್ಷಿಣಾಯಣ, ಗ್ರೀಷ್ಮ ಋತು, ಆಷಾಢ ಮಾಸ, ಕೃಷ್ಣ ಪಕ್ಷದ ತದಿಗೆ ದಿನವಾದ ಇಂದು ದ್ವಾದಶ ರಾಶಿಗಳ ಭವಿಷ್ಯ ಹೇಗಿದೆ ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

VISTARANEWS.COM


on

Dina Bhavishya
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಚಂದ್ರನು ಮೀನ ರಾಶಿಯಲ್ಲೆ ನೆಲಸಲಿದ್ದಾನೆ. ಇದರಿಂದಾಗಿ ಮೇಷ, ವೃಷಭ, ಸಿಂಹ, ಕನ್ಯಾ, ಧನಸ್ಸು, ಕುಂಭ ರಾಶಿಯವರಿಗೆ ಚಂದ್ರನ ಬಲ ದೊರೆಯಲಿದೆ. ಇಂದಿನ ದಿನ ಭವಿಷ್ಯವನ್ನು (Dina Bhavishya) ನೋಡುವುದಾದರೆ, ವೃಷಭ ರಾಶಿಯವರು ಅಪರಿಚಿತರೊಂದಿಗೆ ಅನಿವಾರ್ಯ ಕಾರಣಗಳಿಂದ ವಾದಕ್ಕೆ ಇಳಿಯುವಂತೆ ಆಗಬಹುದು. ಮಾತು ಮಿತವಾಗಿರಲಿ. ಸಿಂಹ ರಾಶಿಯವರಿಗೆ ಒತ್ತಡದಿಂದ ಹೊರಬರಲು ಆಧ್ಯಾತ್ಮಿಕ ವ್ಯಕ್ತಿಗಳನ್ನು ಭೇಟಿ ಮಾಡುವ ಸಾಧ್ಯತೆ ಇದೆ. ಹಣಕಾಸು ವ್ಯಾಪಾರ ವ್ಯವಹಾರಗಳಲ್ಲಿ ಪ್ರಗತಿ ಇರಲಿದೆ. ಅಗತ್ಯ ವಸ್ತುಗಳ ಖರೀದಿ ಸಾಧ್ಯತೆ ಇದೆ. ಆತುರದ ಮಾತುಗಳು ಸುತ್ತಮುತ್ತಲಿನ ಜನರೊಂದಿಗೆ ವಾದಕ್ಕೆ ಇಳಿಯುವಂತೆ ಮಾಡಬಹುದು ಎಚ್ಚರಿಕೆ ಇರಲಿ. ವಿವಾಹ ಆಕಾಂಕ್ಷಿಗಳಿಗೆ ಶುಭ ಸುದ್ದಿ ಸಿಗುವ ಸಾಧ್ಯತೆ ಇದೆ. ಇದೂ ಸೇರಿದಂತೆ ದ್ವಾದಶ ರಾಶಿಗಳ ಇಂದಿನ ಭವಿಷ್ಯ ಹೇಗಿದೆ? ಪಂಚಾಂಗ ಏನು ಹೇಳುತ್ತದೆ ಎಂಬುದನ್ನು ತಿಳಿಯೋಣ.

ಇಂದಿನ ಪಂಚಾಂಗ (kannada panchanga) (24-07-2024)

ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ದಕ್ಷಿಣಾಯಣ, ಗ್ರೀಷ್ಮ ಋತು, ಆಷಾಢ ಮಾಸ, ಕೃಷ್ಣ ಪಕ್ಷ.
ತಿಥಿ: ತದಿಗೆ 07:29 ಚೌತಿ 28:39 ವಾರ: ಬುಧವಾರ
ನಕ್ಷತ್ರ: ಶತತಾರ 18:13 ಯೋಗ: ಸೌಭಾಗ್ಯ 11:09
ಕರಣ: ವಿಷ್ಟಿ (ಭದ್ರ) 07:29 ಅಮೃತಕಾಲ: ಬೆಳಗ್ಗೆ 11:39 ರಿಂದ 01:07ರವರೆಗೆ
ದಿನದ ವಿಶೇಷ: ಸಂಕಷ್ಟಹರ ಚತುರ್ಥಿ

ಸೂರ್ಯೋದಯ : 06:03   ಸೂರ್ಯಾಸ್ತ : 06:49

ರಾಹುಕಾಲ: ಮಧ್ಯಾಹ್ನ 12.00 ರಿಂದ 1.30
ಗುಳಿಕಕಾಲ: ಬೆಳಗ್ಗೆ 10.30 ರಿಂದ 12.00
ಯಮಗಂಡಕಾಲ: ಬೆಳಗ್ಗೆ 7.30 ರಿಂದ 9.00

ದ್ವಾದಶ ರಾಶಿ ಭವಿಷ್ಯ (Dina Bhavishya in Kannada)

Horoscope Today

ಮೇಷ: ಆರ್ಥಿಕ ವ್ಯವಹಾರಗಳ ಕುರಿತಾಗಿ ಹಿರಿಯರಿಂದ ಮಾರ್ಗದರ್ಶನ ಪಡೆಯುವಿರಿ. ಆರೋಗ್ಯದ ಕುರಿತು ಕಾಳಜಿ ವಹಿಸಿ, ಅದರಲ್ಲಿಯೂ ಕಣ್ಣಿನ ಬಗೆಗೆ ವಿಶೇಷ ಕಾಳಜಿ ವಹಿಸುವುದು ಸೂಕ್ತ. ಆರ್ಥಿಕವಾಗಿ ಪ್ರಗತಿ ಇರಲಿದೆ. ವ್ಯಾಪಾರ-ವ್ಯವಹಾರಗಳಲ್ಲಿ ಲಾಭ ಸಿಗಲಿದೆ. ಉದ್ಯೋಗಿಗಳಿಗೆ ಮಿಶ್ರ ಫಲ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 8

Horoscope Today

ವೃಷಭ:ಹಿರಿಯರ ಸಲಹೆ ಆರ್ಥಿಕವಾಗಿ ಲಾಭ ತರುವುದು. ಕುಟುಂಬ ಸದಸ್ಯರ ಬೆಂಬಲ ಕೆಲಸ ಕಾರ್ಯಗಳಲ್ಲಿ ಸಿಗಲಿದೆ. ಉದ್ಯೋಗದ ಸ್ಥಳದಲ್ಲಿ ನಿಮ್ಮ ಅಭಿಪ್ರಾಯಗಳಿಗೆ ಮನ್ನಣೆ ಸಿಕ್ಕು ಪ್ರಶಂಸೆ ಪಡೆಯುವಿರಿ. ಅಪರಿಚಿತರೊಂದಿಗೆ ಅನಿವಾರ್ಯ ಕಾರಣಗಳಿಂದ ವಾದಕ್ಕೆ ಇಳಿಯುವಂತೆ ಆಗಬಹುದು. ಮಾತು ಮಿತವಾಗಿರಲಿ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 8

Horoscope Today

ಮಿಥುನ: ಆಶಾವಾದಿಗಳಾಗಿರಿ, ಆತ್ಮವಿಶ್ವಾಸದಿಂದ ಮಾಡಿದ ಕಾರ್ಯ ಯಶಸ್ಸುನ್ನು ತಂದು ಕೊಡುವುದು. ಅನಿವಾರ್ಯ ಕಾರಣಗಳಿಂದ ಖರ್ಚು ಮಾಡುವ ಸಾಧ್ಯತೆ ಇದೆ. ಹಳೆಯ ಪರಿಚಿತರ ಸಂಪರ್ಕ ಪುನಃ ಸ್ಥಾಪಿತವಾಗುವುದು. ವೈವಾಹಿಕ ಜೀವನಕ್ಕೆ ಹಿರಿಯರಿಂದ ಮಾರ್ಗದರ್ಶನ ಸಿಗಲಿದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 6

Horoscope Today

ಕಟಕ: ಅವಿರತವಾಗಿ ಶ್ರಮಿಸಿದ ಜೀವಕೆ ವಿಶ್ರಾಂತಿಯು ಸಿಗಲಿದೆ. ಸಂಗಾತಿಯೊಂದಿಗೆ ಹೂಡಿಕೆ ಕುರಿತಾಗಿ ಚರ್ಚೆ ಮಾಡುವಿರಿ. ಉತ್ತಮ ವ್ಯಕ್ತಿಗಳ ಸಂಪರ್ಕ, ಮಾರ್ಗದರ್ಶನ ಸಿಗಲಿದೆ. ಆರ್ಥಿಕವಾಗಿ ಲಾಭ ಸಿಗಲಿದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಉದ್ಯೋಗದ ಸ್ಥಳದಲ್ಲಿ ಕಿರಿಕಿರಿ ಸಾಧ್ಯತೆ, ತಾಳ್ಮೆಯಿಂದ ಸಹಕರಿಸಿ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 9

Horoscope Today

ಸಿಂಹ: ಒತ್ತಡದಿಂದ ಹೊರಬರಲು ಆಧ್ಯಾತ್ಮಿಕ ವ್ಯಕ್ತಿಗಳನ್ನು ಭೇಟಿ ಮಾಡುವ ಸಾಧ್ಯತೆ ಇದೆ. ಹಣಕಾಸು ವ್ಯಾಪಾರ ವ್ಯವಹಾರಗಳಲ್ಲಿ ಪ್ರಗತಿ ಇರಲಿದೆ. ಅಗತ್ಯ ವಸ್ತುಗಳ ಖರೀದಿ ಸಾಧ್ಯತೆ ಇದೆ. ಆತುರದ ಮಾತುಗಳು ಸುತ್ತಮುತ್ತಲಿನ ಜನರೊಂದಿಗೆ ವಾದಕ್ಕೆ ಇಳಿಯುವಂತೆ ಮಾಡಬಹುದು ಎಚ್ಚರಿಕೆ ಇರಲಿ. ವಿವಾಹ ಆಕಾಂಕ್ಷಿಗಳಿಗೆ ಶುಭ ಸುದ್ದಿ ಸಿಗುವ ಸಾಧ್ಯತೆ ಇದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 8

Horoscope Today

ಕನ್ಯಾ: ಹೊಸ ಆರ್ಥಿಕ ಒಪ್ಪಂದಗಳು ಗರಿಗೆದರಲಿವೆ. ಆಪ್ತರಿಂದ ಆಮಂತ್ರಣ ಸಿಗಲಿದೆ. ಉದ್ಯೋಗಿಗಳಿಗೆ ಯಶಸ್ಸು ಸಿಗಲಿದೆ. ಆಸ್ತಿ ಖರೀದಿ ವ್ಯವಹಾರದ ಕುರಿತು ಚರ್ಚೆ ಮಾಡುವಿರಿ. ಸಂಗಾತಿಯ ಮಾತುಗಳಿಗೆ ಮನ್ನಣೆ ಸಿಗದೇ ಇರುವುದರಿಂದ ನಿಮ್ಮ ಮೇಲೆ ಕೋಪಿಸಿಕೊಳ್ಳುವ ಸಾಧ್ಯತೆ ಇದೆ. ನಗುವಿನ ಮೂಲಕ ಪರಿಸ್ಥಿತಿ ತಿಳಿಗೊಳಿಸಿ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 6

ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ

Horoscope Today

ತುಲಾ: ಗಾಳಿಯಲ್ಲಿ ಗೋಪುರ ಕಟ್ಟಿಕೊಂಡು ಸಮಯ ವ್ಯರ್ಥ ಮಾಡಬೇಡಿ. ಮಾಡುವ ಕೆಲಸದಲ್ಲಿ ಶ್ರದ್ಧೆ ಇರಲಿ. ಕುಟುಂಬ ಸದಸ್ಯರ ಮಾರ್ಗದರ್ಶನ ಪಡೆಯುವುದು ಒಳ್ಳೆಯದು. ಆರೋಗ್ಯದ ಕುರಿತು ಕಾಳಜಿ ವಹಿಸಿ. ಉದ್ಯೋಗಿಗಳಿಗೆ ಸ್ವಲ್ಪ ಕಿರಿಕಿರಿ ಉಂಟಾಗುವ ಸಾಧ್ಯತೆ ಇದೆ. ಸಂಗಾತಿಯ ಮಧುರ ಪ್ರೀತಿ ಸಿಗಲಿದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 8

Horoscope Today

ವೃಶ್ಚಿಕ: ಆತ್ಮವಿಶ್ವಾಸದಿಂದ ಕಾರ್ಯದಲ್ಲಿ ಯಶಸ್ಸು ಸಿಗುವುದು.ಹಣಕಾಸಿನ ವ್ಯವಹಾರ ನಿರೀಕ್ಷಿಸಿದಷ್ಟು ಸಾಧ್ಯವಿಲ್ಲ.ಅತಿಥಿಗಳ ಆಗಮನದಿಂದ ನಿಮ್ಮ ಯೋಚಿತ ಕಾರ್ಯ ವಿಳಂಬವಾಗುವ ಸಾಧ್ಯತೆ ಇದೆ. ಆತುರದಲ್ಲಿ ಯಾವುದೇ ತೀರ್ಮಾನ ತೆಗೆದುಕೊಳ್ಳಲಾಗುವುದು ಬೇಡ. ಆರೋಗ್ಯ ಉತ್ತಮವಾಗಿರಲಿದೆ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 1

Horoscope Today

ಧನಸ್ಸು: ಕುಟುಂಬ ಸದಸ್ಯರೊಂದಿಗೆ ಪ್ರಯಾಣ ಮಾಡುವ ಸಾಧ್ಯತೆ ಇದೆ. ಹೂಡಿಕೆ ವ್ಯವಹಾರದಲ್ಲಿ ತೊಡಗುವುದು ಬೇಡ, ಯಾವುದೇ ಹಣಕಾಸು ಒಪ್ಪಂದಗಳನ್ನು ಮಾಡಿಕೊಳ್ಳುವುದು ಬೇಡ. ಪ್ರೀತಿ ಪಾತ್ರರೊಂದಿಗೆ ಆತುರದ ಮಾತುಗಳಿಂದ ನೋವಾಗಲಿದೆ. ಹೀಗಾಗಿ ನಿಧಾನಿಸಿ, ಯೋಚಿಸಿ ಮಾತನಾಡಿ. ಕೌಟುಂಬಿಕವಾಗಿ ಮಿಶ್ರ ಫಲ. ಅದೃಷ್ಟ ಸಂಖ್ಯೆ: 7

Horoscope Today

ಮಕರ: ಬಹಳ ದಿನಗಳ ಕನಸು ನನಸಾಗುವ ಕಾಲ. ಆತುರದಲ್ಲಿ ಯಾವುದೇ ಸಂಕಲ್ಪ ಮಾಡುವುದು ಬೇಡ. ಸ್ನೇಹಿತರ ಕಷ್ಟಕಾಲಕ್ಕೆ ಸ್ಪಂದಿಸುವ ಸಾಧ್ಯತೆ ಇದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಉದ್ಯೋಗದಲ್ಲಿ ಯಶಸ್ಸು ಸಿಗಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 7

Horoscope Today

ಕುಂಭ: ಅತಿಯಾದ ಒತ್ತಡದಿಂದ ಹೊರಬರಲು ವ್ಯಸನಗಳ ಮೊರೆ ಹೋಗುವದು ಬೇಡ, ಆಧ್ಯಾತ್ಮಿಕ ವ್ಯಕ್ತಿಗಳ ಮಾರ್ಗದರ್ಶನ ಪಡೆಯಿರಿ.ತಾಳ್ಮೆಯಿಂದ ವರ್ತಿಸಿ. ಆತುರದಿಂದ ಮಾತನಾಡುವುದು ಬೇಡ. ಉದ್ಯೋಗಿಗಳಿಗೆ ಒತ್ತಡ ಇರಲಿದೆ. ಕುಟುಂಬದ ಬೆಂಬಲ ಸಿಗಲಿದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 5

Horoscope Today

ಮೀನ: ಕೋಪದಿಂದ ಅಪಾಯ ತಂದುಕೊಳ್ಳುವುದು ಬೇಡ. ಆರೋಗ್ಯದಲ್ಲಿ ಸ್ವಲ್ಪ ವ್ಯತ್ಯಾಸ ಆಗುವ ಸಾಧ್ಯತೆ ಇದೆ ಕಾಳಜಿ ವಹಿಸುವುದು ಸೂಕ್ತ. ವ್ಯಾಪಾರ ವ್ಯವಹಾರದಲ್ಲಿ ಸಾಧಾರಣವಾಗಿರಲಿದೆ. ದಿನದ ಮಟ್ಟಿಗೆ ಖರ್ಚು ಇರಲಿದೆ. ಸಂಗಾತಿಯ ವರ್ತನೆ ನಿಮಗೆ ಕೋಪ ತರಿಸಬಹುದು. ಉದ್ಯೋಗಿಗಳಿಗೆ ಶುಭ ಫಲ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 3

Horoscope Today

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು

M: 9481854580 | pnaveenshastri@gmail.com

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Dina Bhavishya: ಈ ರಾಶಿಯವರು ಅತ್ಯುತ್ಸಾಹದಲ್ಲಿ ಅತಿರೇಕದ ಮಾತುಗಳನ್ನು ಆಡುವುದು ಬೇಡ!

Dina Bhavishya: ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ದಕ್ಷಿಣಾಯಣ, ಗ್ರೀಷ್ಮ ಋತು, ಆಷಾಢ ಮಾಸ, ಕೃಷ್ಣ ಪಕ್ಷದ ಪಂಚಮಿ ದಿನವಾದ ಇಂದು ದ್ವಾದಶ ರಾಶಿಗಳ ಭವಿಷ್ಯ ಹೇಗಿದೆ ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

VISTARANEWS.COM


on

Dina Bhavishya
Koo

ಚಂದ್ರನು ಮೇಷ ರಾಶಿಯನ್ನು ಗುರುವಾರ ಬೆಳಗ್ಗೆ 10:52ಕ್ಕೆ ಪ್ರವೇಶಿಸುತ್ತಾನೆ. ಇದರಿಂದ ವೃಷಭ, ಮಿಥುನ, ಕನ್ಯಾ, ತುಲಾ, ಮಕರ, ಮೀನ ರಾಶಿಯವರಿಗೆ ಚಂದ್ರನ ಬಲ ದೊರೆಯಲಿದೆ. ಇಂದಿನ ದಿನ ಭವಿಷ್ಯವನ್ನು (Dina Bhavishya) ನೋಡುವುದಾದರೆ, ಕುಂಭ ರಾಶಿಯವರಿಗೆ ಅತಿಯಾದ ಉತ್ಸಾಹದ ಭರದಲ್ಲಿ ಆಡುವ ಅತಿರೇಕದ ಮಾತುಗಳು ಅಪಾಯ ತರಲಿದೆ. ಇನ್ನು ಧನಸ್ಸು ರಾಶಿಯವರಿಗೆ ಕುಟುಂಬದ ಸದಸ್ಯರ ವರ್ತನೆ ಮುಜುಗರ ಉಂಟು ಮಾಡುವ ಸಾಧ್ಯತೆ ಇದ್ದು, ಆರೋಗ್ಯದ ವ್ಯತ್ಯಾಸದಿಂದ ದಿನದ ಮಟ್ಟಿಗೆ ಖರ್ಚು ಹೆಚ್ಚಾಗುವ ಸಾಧ್ಯತೆ ಇದೆ. ಇದೂ ಸೇರಿದಂತೆ ದ್ವಾದಶ ರಾಶಿಗಳ ಇಂದಿನ ಭವಿಷ್ಯ ಹೇಗಿದೆ? ಪಂಚಾಂಗ ಏನು ಹೇಳುತ್ತದೆ ಎಂಬುದನ್ನು ತಿಳಿಯೋಣ.

ಇಂದಿನ ಪಂಚಾಂಗ (kannada panchanga) (25-07-2024)

ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ದಕ್ಷಿಣಾಯಣ, ಗ್ರೀಷ್ಮ ಋತು, ಆಷಾಢ ಮಾಸ, ಕೃಷ್ಣ ಪಕ್ಷ.
ತಿಥಿ: ಪಂಚಮಿ 25:57 ವಾರ: ಗುರುವಾರ
ನಕ್ಷತ್ರ: ಪೂರ್ವ ಭಾದ್ರಪದ 16:15 ಯೋಗ: ಶೋಭನ 07:47
ಕರಣ: ಕೌಲವ 15:16 ಅಮೃತಕಾಲ: ಬೆಳಗ್ಗೆ 08:55 ರಿಂದ 10:24ರವರೆಗೆ
ದಿನದ ವಿಶೇಷ: ಪಂಚಮಿ, ಟೀಕಾಚಾರ್ಯರ ಆರಾಧನೆ

ಸೂರ್ಯೋದಯ : 05:54   ಸೂರ್ಯಾಸ್ತ : 07:12

ರಾಹುಕಾಲ: ಮಧ್ಯಾಹ್ನ 1.30 ರಿಂದ 3.00
ಗುಳಿಕಕಾಲ: ಬೆಳಗ್ಗೆ 9.00 ರಿಂದ 10.30
ಯಮಗಂಡಕಾಲ: ಬೆಳಗ್ಗೆ 6.00 ರಿಂದ 7.00

ದ್ವಾದಶ ರಾಶಿ ಭವಿಷ್ಯ (Dina Bhavishya in Kannada)

Horoscope Today

ಮೇಷ: ಮಕ್ಕಳ ಆರೋಗ್ಯದ ಬಗೆಗೆ ಕಾಳಜಿ ವಹಿಸಿ. ದಿನದ ಮಟ್ಟಿಗೆ ಖರ್ಚು. ಪ್ರಯಾಣದ ಸಾಧ್ಯತೆ. ಬಹಳ ದಿನಗಳ ಕನಸು ನನಸಾಗುವ ಕಾಲ ಕೂಡಿ ಬರಲಿದೆ. ಉದ್ಯೋಗಿಗಳಿಗೆ ಶುಭ ಫಲ ಸಿಗಲಿದೆ.
ಅದೃಷ್ಟ ಸಂಖ್ಯೆ: 2

Horoscope Today

ವೃಷಭ: ಹಾಸ್ಯದ ಮನೋವೃತ್ತಿ ಇತರರನ್ನು ಆಕರ್ಷಿಸುತ್ತದೆ. ಸ್ನೇಹಿತರೊಂದಿಗೆ ಸಮಯ ಕಳೆಯುವ ಸಾಧ್ಯತೆ. ಆರೋಗ್ಯ ಪರಿಪೂರ್ಣವಾಗಿರಲಿದ್ದು, ಕೌಟುಂಬಿಕವಾಗಿ ಶುಭ ಫಲ ದೊರೆಯಲಿದೆ.
ಅದೃಷ್ಟ ಸಂಖ್ಯೆ: 1

Horoscope Today

ಮಿಥುನ: ಆರೋಗ್ಯದ ಕುರಿತಾಗಿ ಕಾಳಜಿ ವಹಿಸಿ. ಆರ್ಥಿಕ ಪ್ರಗತಿ ಸಾಧಾರಣ. ಸ್ನೇಹಿತರು, ಆಪ್ತ ಸಂಬಂಧಿಕರಿಂದ ಮಾರ್ಗದರ್ಶನ, ಉಡುಗೊರೆ ಸಿಗುವ ಸಾಧ್ಯತೆ. ನಿಮ್ಮ ಪ್ರೀತಿ ಪಾತ್ರರೊಂದಿಗೆ ಸೌಜನ್ಯದಿಂದ ವರ್ತಿಸಿ. ಯಾವುದೇ ಆತುರದ ಮಾತುಗಳನ್ನು ಆಡುವುದು ಬೇಡ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 8

Horoscope Today

ಕಟಕ: ನ್ಯಾಯಾಲಯದಲ್ಲಿರುವ ವ್ಯಾಜ್ಯ ಪ್ರಕರಣಗಳು ನಿಮಗೆ ವಿಜಯವನ್ನು ತಂದುಕೊಡಲಿದೆ. ಒತ್ತಡದ ಹೊರತಾಗಿಯೂ ಆರೋಗ್ಯ ಪರಿಪೂರ್ಣ. ಸಂಗಾತಿಯ ಮನಸ್ಸಿನ ಭಾವನೆಗಳನ್ನು ಅರ್ಥ ಮಾಡಿಕೊಳ್ಳವಿರಿ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 3

Horoscope Today

ಸಿಂಹ: ಮಾನಸಿಕ ಒತ್ತಡದಿಂದ ಹೊರಬರಲು ವ್ಯಸನಗಳ ಮೊರೆ ಹೋಗುವುದು ಬೇಡ, ಬದಲಾಗಿ ಕ್ಷೇತ್ರ ದರ್ಶನ, ಆಧ್ಯಾತ್ಮಿಕ ವ್ಯಕ್ತಿಗಳ ಮಾರ್ಗದರ್ಶನ ಪಡೆಯುವುದು ಸೂಕ್ತ. ಆರೋಗ್ಯ ಮಧ್ಯಮ. ವ್ಯಾಪಾರ ವ್ಯವಹಾರ ಹಾಗೂ ಹಣಕಾಸು ವ್ಯವಹಾರದಲ್ಲಿ ಪ್ರಗತಿ. ಉದ್ಯೋಗಿಗಳಿಗೆ ಬಿಡುವಿಲ್ಲದ ಕಾರ್ಯ ಚಟುವಟಿಕೆಯ ಮಧ್ಯೆಯೂ ಯಶಸ್ಸು ಸಿಗಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 1

Horoscope Today

ಕನ್ಯಾ: ಭೂ ಸಂಬಂಧಿ, ಹಣಕಾಸು ಹೂಡಿಕೆ ವ್ಯವಹಾರದಲ್ಲಿ ಲಾಭವಾಗಲಿದೆ. ಸಂಗಾತಿಯೊಂದಿಗೆ ಮುಖ್ಯ ವಿಷಯಗಳ ಕುರಿತು ಚರ್ಚೆ. ಉದ್ಯೋಗಿಗಳಿಗೆ ಶುಭ ಫಲ. ಆರೋಗ್ಯ ಪರಿಪೂರ್ಣ. ಪ್ರಯಾಣ ಮಾಡುವ ಸಾಧ್ಯತೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 8

ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ

Horoscope Today

ತುಲಾ: ಹಿರಿಯರ ಮಾರ್ಗದರ್ಶನ ಸಿಗಲಿದೆ, ಹೂಡಿಕೆ ವ್ಯವಹಾರದಲ್ಲಿ ತೊಡಗುವುದು ಬೇಡ. ಕುಟುಂಬದಲ್ಲಿ ಅನೇಕ ಬದಲಾವಣೆಗಳನ್ನು ಕಾಣುವ ಸಾಧ್ಯತೆ. ಕುಟುಂಬದ ಆಪ್ತರೊಂದಿಗೆ ಗೌಪ್ಯ ವಿಷಯಗಳನ್ನು ಹಂಚಿಕೊಳ್ಳುವ ಮುನ್ನ ಎಚ್ಚರಿಕೆ ಇರಲಿ. ನಿಮಗಲ್ಲದವರ ಕುರಿತು ಅನಗತ್ಯವಾಗಿ ಚರ್ಚೆ ಮಾಡಿ, ಕುಟುಂಬದ ಸ್ವಾಸ್ಥ್ಯ ಕೆಡಿಸಿಕೊಳ್ಳುವುದು ಬೇಡ. ಆರೋಗ್ಯ ಮಧ್ಯಮ.ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 2

Horoscope Today

ವೃಶ್ಚಿಕ: ನಕಾರಾತ್ಮಕ ಆಲೋಚನೆಗಳು ನಿಮ್ಮನ್ನು ಘಾಸಿ ಮಾಡುವ ಸಾಧ್ಯತೆ. ಆಲಸ್ಯತನದಿಂದ ಕಾರ್ಯ ಮುಂದುಡುವುದು ಬೇಡ. ಅಮೂಲ್ಯ ವಸ್ತುಗಳ ಕುರಿತಾಗಿ ಜಾಗ್ರತೆ ಇರಲಿ. ಸ್ನೇಹಿತರೊಂದಿಗೆ ಕಾಲ ಕಳೆಯುವ ಸಾಧ್ಯತೆ. ಆರೋಗ್ಯದ ಕುರಿತು ಕಾಳಜಿ ವಹಿಸುವುದು ಅಗತ್ಯ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 4

Horoscope Today

ಧನಸ್ಸು: ಸಾಮಾಜಿಕ ಕಾರ್ಯಗಳಲ್ಲಿ ಭಾಗವಹಿಸುವ ನಿರೀಕ್ಷೆ. ಅತಿಯಾದ ಒತ್ತಡ ಉಂಟುಮಾಡುವ ವಿಚಾರಗಳಿಂದ ದೂರ ಇರಿ. ಕುಟುಂಬದ ಆಪ್ತರಿಂದ ಶುಭ ಸುದ್ದಿ ಸಿಗುವ ಸಾಧ್ಯತೆ. ಕುಟುಂಬದ ಸದಸ್ಯರ ವರ್ತನೆ ಮುಜುಗರ ಉಂಟು ಮಾಡುವ ಸಾಧ್ಯತೆ. ಆರೋಗ್ಯದ ವ್ಯತ್ಯಾಸದಿಂದ ದಿನದ ಮಟ್ಟಿಗೆ ಖರ್ಚು ಮಾಡುವ ಸಾಧ್ಯತೆ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 1

Horoscope Today

ಮಕರ: ಹಾಸ್ಯ ಪ್ರವೃತ್ತಿಯಿಂದ ಬರುವ ಎಲ್ಲಾ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವಿರಿ. ಹಣಕಾಸು ವ್ಯವಹಾರದಲ್ಲಿ ಪ್ರಗತಿ. ಕುಟುಂಬದವರು ನಿಮ್ಮ ಬಗೆಗೆ ಹೆಚ್ಚು ಕಾಳಜಿ ವಹಹಿಸುವರು. ಆರೋಗ್ಯ‌ ಪರಿಪೂರ್ಣ.ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 1

Horoscope Today

ಕುಂಭ: ಶೀಘ್ರ ಕೋಪದಿಂದ ಅಪಾಯ ತಂದುಕೊಳ್ಳುವುದು ಬೇಡ. ಅತಿಯಾದ ಉತ್ಸಾಹದ ಭರದಲ್ಲಿ ಅತಿರೇಕದ ಮಾತುಗಳನ್ನು ಆಡುವುದು ಸರಿಯಲ್ಲ, ಅಪಾಯ ತಂದಿತು ಎಚ್ಚರಿಕೆ. ಉದ್ಯೋಗದ ಸ್ಥಳದಲ್ಲಿ ಕಿರಿಕಿರಿ ಉಂಟು ಮಾಡುವ ಸಾಧ್ಯತೆ. ಸಂಗಾತಿಯ ಆರೋಗ್ಯದಲ್ಲಿ ಸ್ವಲ್ಪ ವ್ಯತ್ಯಾಸ ಆಗುವ ಸಾಧ್ಯತೆ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 7

Horoscope Today

ಮೀನ: ಆಹಾರ ಕ್ರಮದ ವ್ಯತ್ಯಾಸದಿಂದ ಆರೋಗ್ಯ ಹದಗೆಡುವ ಸಾಧ್ಯತೆ. ಸಂಗಾತಿಯ ಮಾತುಗಳು ಹಿತವೇನಿಸಿದರೂ ಅವರ ಮಾತುಗಳಿಗೆ ಮನ್ನಣೆ ಸಿಗುವುದಿಲ್ಲ. ಆರೋಗ್ಯ ಹಾಗೂ ಹಣಕಾಸಿನ ವಿಷಯದಲ್ಲಿ ಸಾಮಾನ್ಯ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 5

Horoscope Today

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು

M: 9481854580 | pnaveenshastri@gmail.com

Continue Reading

ಧಾರ್ಮಿಕ

Vastu Tips: ನಿಮ್ಮ ಮಕ್ಕಳು ತುಂಬಾ ಹಠ ಮಾಡುತ್ತಾರಾ? ಇಲ್ಲಿದೆ ಸರಳ ಪರಿಹಾರ!

ಮಕ್ಕಳ ಕೆಲವೊಂದು ವಿಚಾರಗಳಲ್ಲಿ ನಾವು ಏನನ್ನೂ ಮಾಡಲು ಸಾಧ್ಯವಾಗುತ್ತಿಲ್ಲ, ನಿರ್ಧಾರ ತೆಗೆದುಕೊಳ್ಳಲು ಸಾಧ್ಯವಾಗುತ್ತಿಲ್ಲ ಎಂಬ ಭಾವನೆ ನಿಮ್ಮನ್ನು ಕಾಡಲು ಪ್ರಾರಂಭಿಸಿದರೆ ವಾಸ್ತು ಶಾಸ್ತ್ರ (Vastu Tips) ಹೇಳಿರುವ ಮೂರು ಸರಳ ಪರಿಹಾರಗಳನ್ನು ಇಲ್ಲಿ ತಿಳಿಸಲಾಗಿದೆ. ನೀವು ಟ್ರೈ ಮಾಡಿ ನೋಡಬಹುದು.

VISTARANEWS.COM


on

By

Vastu Tips
Koo

ಮನೆಯಲ್ಲಿ ಮಕ್ಕಳು ಹಠ (Stubborn Kid) ಮಾಡುವುದು, ಮೊಂಡುತನ ಪ್ರದರ್ಶಿಸುವುದು ಸಾಮಾನ್ಯ ಎಂದು ನಾವೆಂದುಕೊಳ್ಳುತ್ತೇವೆ. ಆದರೆ ಇದಕ್ಕೆ ಮನೆಯ ವಾಸ್ತು (Vastu Tips) ದೋಷವೂ ಕಾರಣವಾಗಿರುತ್ತದೆ. ಇದನ್ನು ತಿಳಿದುಕೊಂಡು ಸರಿಪಡಿಸಿಕೊಂಡರೆ ಮಕ್ಕಳ ಹಠವನ್ನು ನಿಯಂತ್ರಿಸಬಹುದು. ಅವರನ್ನು ಸಜ್ಜನ, ವಿನಯಶೀಲ ಮಗುವನ್ನಾಗಿ ಮಾಡಬಹುದು ಎನ್ನುತ್ತದೆ ವಾಸ್ತುಶಾಸ್ತ್ರ.

ಉತ್ತಮ ಸಲಹೆಗಳು ಮತ್ತು ಪರಿಹಾರಗಳನ್ನು ಹುಡುಕಲು ವಾಸ್ತು ಶಾಸ್ತ್ರ ಯಾವಾಗಲೂ ಜನರಿಗೆ ಸಹಾಯ ಮಾಡುತ್ತದೆ. ಇದರಲ್ಲಿ ಮಗುವಿಗೆ ಸಂಬಂಧಿಸಿ ಹಲವಾರು ಸಮಸ್ಯೆಗಳಿಗೆ ಪರಿಹಾರಗಳೂ ಇವೆ.

ಮಕ್ಕಳ ಬಗ್ಗೆ ಸಾಕಷ್ಟು ವಿಷಯಗಳು ಕೆಲವೊಮ್ಮೆ ನಮ್ಮ ಗಮನಕ್ಕೆ ಬರುವುದಿಲ್ಲ. ಬಂದರೂ ಅದು ಸಾಮಾನ್ಯ ಎಂದುಕೊಳ್ಳುತ್ತೇವೆ. ಮಕ್ಕಳ ಹಠ, ಗೊಂದಲ, ಖಿನ್ನತೆ ಆತಂಕಪಡುವ ವಿಷಯವಾಗಿದೆ.

ಮಕ್ಕಳ ಕೆಲವೊಂದು ವಿಚಾರಗಳಲ್ಲಿ ನಾವು ಏನನ್ನೂ ಮಾಡಲು ಸಾಧ್ಯವಾಗುತ್ತಿಲ್ಲ, ನಿರ್ಧಾರ ತೆಗೆದುಕೊಳ್ಳಲು ಸಾಧ್ಯವಾಗುತ್ತಿಲ್ಲ ಎಂಬ ಭಾವನೆ ನಿಮ್ಮನ್ನು ಕಾಡಲು ಪ್ರಾರಂಭಿಸಿದರೆ ವಾಸ್ತು ಶಾಸ್ತ್ರ ಹೇಳಿರುವ ಮೂರು ಪರಿಹಾರಗಳನ್ನು ಇಲ್ಲಿ ತಿಳಿಸಲಾಗಿದೆ. ನೀವು ಟ್ರೈ ಮಾಡಿ ನೋಡಬಹುದು.

ಹೆಚ್ಚು ಹಠ ಮಾಡುವ ಮಕ್ಕಳನ್ನು ನಿಯಂತ್ರಣದಲ್ಲಿ ಇಡಲು ವಾಸ್ತು ತಜ್ಞ ರಾಹುಲ್ ಅವರು ವಾಸ್ತು ನಿಯಮದಲ್ಲಿರುವ ಕೆಲವು ಸಲಹೆಗಳನ್ನು ಬಹಿರಂಗಪಡಿಸಿದ್ದಾರೆ.


1. ಬೆಳಗ್ಗೆ ಎದ್ದಾಕ್ಷಣ ಬೆಡ್ ಶೀಟ್ ಅನ್ನು ಮಡಚಿ ಸರಿಯಾಗಿ ಜೋಡಿಸಿ ಇಡಿ. ಚಪ್ಪಲಿಗಳು ಎಲ್ಲೆಲ್ಲಿ, ಅಂಕುಡೊಂಕಾಗಿದ್ದರೆ ಅದನ್ನು ಸರಿಪಡಿಸಿ.

2. ರುದ್ರಾಕ್ಷಿ, ಹರಳಿನ ಕಂಕಣವನ್ನು ಧರಿಸಿ. ಮೂರು ಬಾರಿ ಗಾಯತ್ರಿ ಮಂತ್ರವನ್ನು ಪಠಿಸಿ.

ಇದನ್ನೂ ಓದಿ: Vastu Tips: ಮನೆಯಲ್ಲಿ ಸಂಪತ್ತು ಸದಾ ತುಂಬಿರಬೇಕೆ? ಈ ನಿಯಮ ಪಾಲಿಸಿ

3. ಹಾಸಿಗೆಯ ಮೇಲೆ ಕುಳಿತು ಗಾಯತ್ರಿ ಮಂತ್ರವನ್ನು ಕನಿಷ್ಠ 11 ಬಾರಿ ಜಪಿಸಿ. ಮಗುವಿಗೂ ಪಠಿಸುವಂತೆ ಮಾಡಿ. ಇದನ್ನು ಕನಿಷ್ಠ 40 ದಿನಗಳವರೆಗೆ ಮಾಡಿ. ಇದರಿಂದ ಅದ್ಭುತ ಫಲಿತಾಂಶಗಳು ದೊರೆಯುವುದು.

ಗಾಯತ್ರಿ ಮಂತ್ರವು ಮಕ್ಕಳಲ್ಲಿ ನಿರ್ಧಾರ ತೆಗೆದುಕೊಳ್ಳುವ ಸಾಮರ್ಥ್ಯವನ್ನು ವೃದ್ಧಿಸುತ್ತದೆ. ಮೆದುಳು ಸ್ಪಷ್ಟವಾಗಿ ಯೋಚಿಸುವಂತೆ ಮಾಡುತ್ತದೆ.

Continue Reading

ಭವಿಷ್ಯ

Dina Bhavishya : ಈ ದಿನ ಉದ್ಯೋಗಿಗಳಿಗೆ ಭರವಸೆಯ ಹೊಸ ಅವಕಾಶಗಳು ಸಿಗಲಿದೆ

Dina Bhavishya: ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ದಕ್ಷಿಣಾಯಣ, ಗ್ರೀಷ್ಮ ಋತು, ಆಷಾಢ ಮಾಸ, ಕೃಷ್ಣ ಪಕ್ಷದ ಬಿದಿಗೆ ದಿನವಾದ ಇಂದು ದ್ವಾದಶ ರಾಶಿಗಳ ಭವಿಷ್ಯ ಹೇಗಿದೆ ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

VISTARANEWS.COM


on

By

Dina Bhavishya
Koo

ಚಂದ್ರನು ಕುಂಭ ರಾಶಿಯಿಂದ ಮಂಗಳವಾರ ಬೆಳಗ್ಗೆ 09:23ಕ್ಕೆ ಮೀನ ರಾಶಿಯನ್ನು ಪ್ರವೇಶಿಸುತ್ತಾನೆ. ಇದರಿಂದಾಗಿ ಮೇಷ, ವೃಷಭ, ಸಿಂಹ, ಕನ್ಯಾ, ಧನಸ್ಸು, ಕುಂಭ ರಾಶಿಯವರಿಗೆ ಚಂದ್ರನ ಬಲ ದೊರೆಯಲಿದೆ. ಇಂದಿನ ದಿನ ಭವಿಷ್ಯವನ್ನು (Dina Bhavishya) ನೋಡುವುದಾದರೆ, ಮೇಷ ರಾಶಿಯವರು ಉದ್ಯೋಗಿಗಳಿಗೆ ಭರವಸೆಯ ಹೊಸ ಅವಕಾಶಗಳು ಸಿಗಲಿದೆ. ವ್ಯಾಪಾರ ವ್ಯವಹಾರಗಳಿಗೆ ಹೆಚ್ಚಿನ ಲಾಭ ದೊರೆಯಲಿದೆ. ಮಕರ ರಾಶಿಯವರು ಉದ್ಯೋಗದಲ್ಲಿ ಹಿರಿಯ ಅಧಿಕಾರಿಗಳಿಂದ ಕಿರಿಕಿರಿ ಒತ್ತಡ ಉಂಟಾಗುವ ಸಾಧ್ಯತೆ ಇದೆ. ಆಲಸ್ಯದಿಂದ ದೂರವಿದ್ದು ಕಾರ್ಯ ಪೂರ್ಣ ಮಾಡಿ. ಕೆಲಸದ ಒತ್ತಡದಿಂದ ಮನೆಯ ಸದಸ್ಯರ ಮೇಲೆ ಹಾಕಿ, ವಾತಾವರಣ ಹದಗೆಡಲು ಕಾರಣವಾಗಬೇಡಿ. ಇದೂ ಸೇರಿದಂತೆ ದ್ವಾದಶ ರಾಶಿಗಳ ಇಂದಿನ ಭವಿಷ್ಯ ಹೇಗಿದೆ? ಪಂಚಾಂಗ ಏನು ಹೇಳುತ್ತದೆ ಎಂಬುದನ್ನು ತಿಳಿಯೋಣ.

ಇಂದಿನ ಪಂಚಾಂಗ (kannada panchanga) (23-07-2024)

ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ದಕ್ಷಿಣಾಯಣ, ಗ್ರೀಷ್ಮ ಋತು, ಆಷಾಢ ಮಾಸ, ಕೃಷ್ಣ ಪಕ್ಷ.
ತಿಥಿ: ಬಿದಿಗೆ 10:22 ವಾರ: ಮಂಗಳವಾರ
ನಕ್ಷತ್ರ: ಧನಿಷ್ಠಾ 20:17 ಯೋಗ: ಆಯುಷ್ಮಾನ್ 14:34
ಕರಣ: ಗರಜ 10:22 ಅಮೃತಕಾಲ: ಬೆಳಗ್ಗೆ 10:47 ರಿಂದ 12:15ರವರೆಗೆ
ದಿನದ ವಿಶೇಷ: ಹೊನ್ನಾಳಿ ಹಾಲಸ್ವಾಮಿ ರಥೋತ್ಸವ, ವೃಷಭ ತೀರ್ಥಂಕರ ಗರ್ಭಕಲ್ಯಾಣ

ಸೂರ್ಯೋದಯ : 06:03   ಸೂರ್ಯಾಸ್ತ : 06:49

ರಾಹುಕಾಲ: ಮಧ್ಯಾಹ್ನ 3.00 ರಿಂದ 4.30
ಗುಳಿಕಕಾಲ: ಮಧ್ಯಾಹ್ನ 12 ರಿಂದ 1.30
ಯಮಗಂಡಕಾಲ: ಬೆಳಗ್ಗೆ 9.00 ರಿಂದ 10.30

ದ್ವಾದಶ ರಾಶಿ ಭವಿಷ್ಯ (Dina Bhavishya in Kannada)

Horoscope Today

ಮೇಷ: ಉತ್ಸಾಹದ ವಾತಾವರಣ ಇರಲಿದೆ. ಆಪ್ತರೊಂದಿಗೆ ಪ್ರಯಾಣ ಬೆಳೆಸುವ ಸಾಧ್ಯತೆ ಇದೆ. ದಿನದ ಮಟ್ಟಿಗೆ ಖರ್ಚು ಹೆಚ್ಚಾಗಲಿದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಉದ್ಯೋಗಿಗಳಿಗೆ ಭರವಸೆಯ ಹೊಸ ಅವಕಾಶಗಳು ಸಿಗಲಿದೆ. ವ್ಯಾಪಾರ ವ್ಯವಹಾರಗಳಿಗೆ ಹೆಚ್ಚಿನ ಲಾಭ ದೊರೆಯಲಿದೆ. ಕೌಟುಂಬಿಕವಾಗಿ ಮಿಶ್ರ ಫಲ. ಅದೃಷ್ಟ ಸಂಖ್ಯೆ: 6

Horoscope Today

ವೃಷಭ: ಬಂಧು ಮಿತ್ರರಿಂದ ಸಹಕಾರ ಸಿಗಲಿದೆ. ಆರ್ಥಿಕ ಪ್ರಗತಿ ಸಾಧಾರಣವಾಗಿರಲಿದೆ. ನಿಮ್ಮ ವ್ಯಕ್ತಿತ್ವ ಇತರರನ್ನು ಆಕರ್ಷಿಸಿ ಕಾರ್ಯದಲ್ಲಿ ಯಶಸ್ಸು ಸಿಗುವಂತೆ ಮಾಡುತ್ತದೆ. ಧಾರ್ಮಿಕ ಕಾರ್ಯಗಳಲ್ಲಿ ಭಾಗಿಯಾಗುವಿರಿ. ಕುಟುಂಬದಲ್ಲಿ ನೆಮ್ಮದಿ. ಅದೃಷ್ಟ ಸಂಖ್ಯೆ: 5

Horoscope Today

ಮಿಥುನ: ಸಂತಸದ ಕ್ಷಣಗಳನ್ನು ಕಳೆಯುವಿರಿ. ಆರ್ಥಿಕ ಪ್ರಗತಿ ಇರಲಿದೆ. ಬಹಳ ದಿನಗಳ ಬಾಕಿ ಇರುವ ಕಾರ್ಯವು ಪುರ್ಣವಾಗುವುದು. ಮನೆಯಲ್ಲಿ ಪರಸ್ಪರ ಸಹಕಾರ ಸಿಗುವುದು, ಉತ್ಸಾಹದ ದಿನವಿದು. ಅದೃಷ್ಟ ಸಂಖ್ಯೆ: 3

Horoscope Today

ಕಟಕ: ಆಕರ್ಷಕ ವ್ಯಕ್ತಿತ್ವ ಹೊಂದಿರುವ ನೀವು ಇಂದು ಇತತರನ್ನು ಆಕರ್ಷಿಸುವಿರಿ. ಆರ್ಥಿಕ ಪ್ರಗತಿ ಸಾಧಾರಣವಿದ್ದರೂ ಸಮರ್ಥವಾಗಿ ನಿರ್ವಹಿಸುವಿರಿ. ಉದ್ಯೋಗದಲ್ಲಿ ಪ್ರಗತಿ ಇರಲಿದೆ. ಮಡದಿಯ ಪ್ರೀತಿಗೆ ಸೋಲುವಿರಿ. ಕುಟುಂಬದಲ್ಲಿ ನೆಮ್ಮದಿ. ಅದೃಷ್ಟ ಸಂಖ್ಯೆ: 7

Horoscope Today

ಸಿಂಹ: ಉದ್ಯೋಗ ಅಪೇಕ್ಷಿತರಿಗೆ ಇಂದು ಉದ್ಯೋಗದ ಭರವಸೆ ಸಿಗಲಿದೆ. ಆರ್ಥಿಕ ಪ್ರಗತಿ ಇರಲಿದೆ. ಪರಿಶ್ರಮಕ್ಕೆ ತಕ್ಕ ಪ್ರತಿಫಲ ಸಿಗುವುದು. ಮನೆಯವರ ಪ್ರೀತಿ ಸಹಕಾರ ಸಿಗಲಿದೆ. ಕುಟುಂಬದಲ್ಲಿ ನೆಮ್ಮದಿ ಇರಲಿದೆ. ಅದೃಷ್ಟ ಸಂಖ್ಯೆ: 5

Horoscope Today

ಕನ್ಯಾ: ಮನೆಯಲ್ಲಿ ಪರಸ್ಪರ ಕಲಹದಿಂದ ವಾತಾವರಣ ಹದಗೆಡಬಹುದು. ಕೆಲಸದಲ್ಲಿ ಹಿರಿಯರಿಂದ ಒತ್ತಡ ಹೇರಬಹುದು, ಎಚ್ಚರಿಕೆ ವಹಿಸಿ. ಆರ್ಥಿಕ ಪ್ರಗತಿ ಇರಲಿದೆ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 5

ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ

Horoscope Today

ತುಲಾ: ತರಾತುರಿಯಲ್ಲಿ ನಿರ್ಧಾರ ಕೈಗೊಂಡು ಯಾವುದೇ ಹೂಡಿಕೆ ಮಾಡಬೇಡಿ. ಬಂಧು ಮಿತ್ರರಿಂದ ಸಹಕಾರ ಸಿಗಲಿದೆ. ಆರೋಗ್ಯ ಉತ್ತಮವಾಗಿರಲಿದೆ. ಮನೆಯಲ್ಲಿ ಸಂತೋಷದ ದಿನ ಇರಲಿದೆ. ಅದೃಷ್ಟ ಸಂಖ್ಯೆ: 8

Horoscope Today

ವೃಶ್ಚಿಕ: ಮಿತ್ರರಿಂದ ಸಹಕಾರ ಸಿಗಲಿದೆ. ಆರ್ಥಿಕವಾಗಿ ಪ್ರಗತಿ ಹೊಂದಲು ಹಿರಿಯರು ಮಾರ್ಗದರ್ಶನ ಮಾಡಲಿದ್ದಾರೆ. ಧೈರ್ಯದಿಂದ ಕಾರ್ಯದಲ್ಲಿ ಮುನ್ನುಗ್ಗಿ ಯಶಸ್ಸು ಸಿಗುವುದು. ಕುಟುಂಬದಲ್ಲಿ ನೆಮ್ಮದಿ ಇರಲಿದೆ. ಅದೃಷ್ಟ ಸಂಖ್ಯೆ: 5

Horoscope Today

ಧನಸ್ಸು: ಕುಟುಂಬ ಸದಸ್ಯರ ಆರೋಗ್ಯ ಸಂಬಂಧಿ ವಿಷಯಗಳು ತಮಗೆ ಒತ್ತಡ ಉಂಟುಮಾಡಬಹುದು. ಉದಾಸೀನತೆ ಮಾಡುವುದು ಬೇಡ. ಆಶಾವಾದಿಗಳಾಗಿರಿ ಕುಲದೇವರನ್ನು ಸ್ಮರಿಸಿ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 5

Horoscope Today

ಮಕರ: ಉದ್ಯೋಗದಲ್ಲಿ ಹಿರಿಯ ಅಧಿಕಾರಿಗಳಿಂದ ಕಿರಿಕಿರಿ ಒತ್ತಡ ಉಂಟಾಗುವ ಸಾಧ್ಯತೆ ಇದೆ. ಆಲಸ್ಯದಿಂದ ದೂರವಿದ್ದು ಕಾರ್ಯ ಪೂರ್ಣ ಮಾಡಿ. ಕೆಲಸದ ಒತ್ತಡದಿಂದ ಮನೆಯ ಸದಸ್ಯರ ಮೇಲೆ ಹಾಕಿ, ವಾತಾವರಣ ಹದಗೆಡಲು ಕಾರಣವಾಗಬೇಡಿ. ಗುರುಗಳ ಆರಾಧನೆ ಮಾಡಿ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 5

Horoscope Today

ಕುಂಭ: ಭೂ ಸಂಬಂಧಿ ವ್ಯವಹಾರದಲ್ಲಿ ಪ್ರಗತಿ ಇರಲಿದೆ. ಬಹಳ ದಿನಗಳ ಕನಸು ನನಸಾಗುವ ಕಾಲ ಕೂಡಿ ಬರುವುದು. ಅನ್ಯರ ಕುಹುಕು ಮಾತುಗಳಿಗೆ ಧ್ವನಿಯಾಗಬೇಡಿ. ಕುಟುಂಬದಲ್ಲಿ ನೆಮ್ಮದಿ ಇರಲಿದೆ. ಅದೃಷ್ಟ ಸಂಖ್ಯೆ: 3

Horoscope Today

ಮೀನ: ನಿಮ್ಮ ಮಹತ್ವಾಕಾಂಕ್ಷೆಯ ಕೆಲಸ ಕಾರ್ಯಗಳು ಕುಂಠಿತವಾಗುವ ಸಾಧ್ಯತೆ ಇದೆ. ಗೌಪ್ಯ ವಿಷಯಗಳು ಬಹಿರಂಗವಾಗದಿರಲಿ. ಆರ್ಥಿಕ ನಷ್ಟದಿಂದ ತಪ್ಪಿಸಿಕೊಳ್ಳಿ. ಸಂಗಾತಿಯ ಮಾತುಗಳು ಹಿತವೆನಿಸುವುದು. ಕುಟುಂಬದಲ್ಲಿ ನೆಮ್ಮದಿ.
ಅದೃಷ್ಟ ಸಂಖ್ಯೆ: 9

Horoscope Today

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು

M: 9481854580 | pnaveenshastri@gmail.com

Continue Reading

ಭವಿಷ್ಯ

Dina Bhavishya : ಸಹದ್ಯೋಗಿಗಳು ನಿಮ್ಮ ವಿರುದ್ಧ ಪಿತೂರಿ ಮಾಡ್ತಾರೆ ಎಚ್ಚರ

Dina Bhavishya: ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ದಕ್ಷಿಣಾಯಣ, ಗ್ರೀಷ್ಮ ಋತು, ಆಷಾಢ ಮಾಸ, ಕೃಷ್ಣ ಪಕ್ಷದ ಪಾಡ್ಯ ದಿನವಾದ ಇಂದು ದ್ವಾದಶ ರಾಶಿಗಳ ಭವಿಷ್ಯ ಹೇಗಿದೆ ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

VISTARANEWS.COM


on

By

Dina bhavishya
Koo

ಚಂದ್ರನು ಸೋಮವಾರವೂ ಕುಂಭ ರಾಶಿಯಲ್ಲೆ ನೆಲಸಲಿದ್ದಾನೆ. ಇದರಿಂದಾಗಿ ಮೇಷ, ಕಟಕ, ಸಿಂಹ, ವೃಶ್ಚಿಕ, ಮಕರ, ಮೀನ ರಾಶಿಯವರಿಗೆ ಚಂದ್ರನ ಬಲ ದೊರೆಯಲಿದೆ. ಇಂದಿನ ದಿನ ಭವಿಷ್ಯವನ್ನು (Dina Bhavishya) ನೋಡುವುದಾದರೆ, ಕನ್ಯಾ ರಾಶಿಯವರು ನಿಮ್ಮ ತ್ಯಾಗದ ಮನೋಭಾವ ನಿಮಗೆ ಸಂತಸ ತರುವುದು. ಯಾರೊಂದಿಗೂ ದಿನದ ಮಟ್ಟಿಗೆ ಹಣಕಾಸಿನ ವ್ಯವಹಾರ ಮಾಡಬೇಡಿ, ವಿನಾಕಾರಣ ವಿವಾದವನ್ನು ಮೈಮೇಲೆ ಎಳೆದುಕೊಳ್ಳುವುದು ಬೇಡ. ಕುಟುಂಬದಲ್ಲಿ ಅನಾವಶ್ಯಕ ಮಾತುಗಳಿಂದ ಜಗಳವಾಗಬಹುದು, ಮೌನದಿಂದ ವರ್ತಿಸಿ. ಮಿಥುನ ರಾಶಿಯವರು ನಿಮ್ಮ ಅಭಿಪ್ರಾಯಗಳಿಗೆ ವಿರೋಧ ವ್ಯಕ್ತವಾಗುವ ಸಾಧ್ಯತೆ ಇದೆ, ಇದರಿಂದ ಆತುರದಲ್ಲಿ ಮಾತನಾಡಿ ಮಾನಸಿಕ ನೆಮ್ಮದಿ ಹಾಳು ಮಾಡಿಕೊಳ್ಳುವುದು ಬೇಡ. ಅನಿರೀಕ್ಷಿತ ಖರ್ಚು ಇರಲಿದೆ. ಆರೋಗ್ಯದ ಕಡೆಗೆ ಕಾಳಜಿ ವಹಿಸುವುದು ಉತ್ತಮ. ಇದೂ ಸೇರಿದಂತೆ ದ್ವಾದಶ ರಾಶಿಗಳ ಇಂದಿನ ಭವಿಷ್ಯ ಹೇಗಿದೆ? ಪಂಚಾಂಗ ಏನು ಹೇಳುತ್ತದೆ ಎಂಬುದನ್ನು ತಿಳಿಯೋಣ.

ಇಂದಿನ ಪಂಚಾಂಗ (kannada panchanga) (22-07-2024)

ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ದಕ್ಷಿಣಾಯಣ, ಗ್ರೀಷ್ಮ ಋತು, ಆಷಾಢ ಮಾಸ, ಕೃಷ್ಣ ಪಕ್ಷ.
ತಿಥಿ: ಪಾಡ್ಯ 13:11 ವಾರ: ಸೋಮವಾರ
ನಕ್ಷತ್ರ: ಶ್ರವಣ 22:20 ಯೋಗ: ಪ್ರೀತಿ 17:56
ಕರಣ: ಕೌಲವ 13:11 ಅಮೃತಕಾಲ: ಮಧ್ಯಾಹ್ನ 12:46ರಿಂದ 02:14
ದಿನದ ವಿಶೇಷ: ಬಾಲಗಂಗಾಧರ ತಿಲಕ್‌ ಪುಣ್ಯದಿನ

ಸೂರ್ಯೋದಯ : 06:03   ಸೂರ್ಯಾಸ್ತ : 06:49

ರಾಹುಕಾಲ: ಬೆಳಗ್ಗೆ 7.30 ರಿಂದ 9.00
ಗುಳಿಕಕಾಲ: ಮಧ್ಯಾಹ್ನ 1.30 ರಿಂದ 3.00
ಯಮಗಂಡಕಾಲ: ಬೆಳಗ್ಗೆ 10.30 ರಿಂದ 12.00

ದ್ವಾದಶ ರಾಶಿ ಭವಿಷ್ಯ (Dina Bhavishya in Kannada)

Horoscope Today

ಮೇಷ: ಸ್ನೇಹಿತರು ಅಥವಾ ಕುಟುಂಬದ ಸದಸ್ಯರೊಂದಿಗೆ ಪ್ರಯಾಣ ಬೆಳೆಸುವ ಸಾಧ್ಯತೆ ಇದೆ. ಆರೋಗ್ಯದಲ್ಲಿ ಸ್ವಲ್ಪ ಮಟ್ಟಿನ ವ್ಯತ್ಯಾಸದಿಂದ ಖರ್ಚು ಇರಲಿದೆ. ಹಿರಿಯರ ಮಾರ್ಗದರ್ಶನ ಸಿಗಲಿದೆ. ಅತಿಥಿಗಳ ಆಗಮನ ನಿಮ್ಮ ಯೋಚಿತ ಕಾರ್ಯ ವಿಳಂಬವಾಗುವ ಸಾಧ್ಯತೆ ಇದೆ. ವೈವಾಹಿಕ ಜೀವನದಲ್ಲಿ ವಿರಸ ಉಂಟಾಗುವ ಸಾಧ್ಯತೆ ಇದೆ, ಮಾತಿನಲ್ಲಿ ಹಿಡಿತವಿರಲಿ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 4

Horoscope Today

ವೃಷಭ: ನಿಮ್ಮ ಕೆಲಸ ಕಾರ್ಯಗಳಲ್ಲಿ ಯಶಸ್ಸು, ಪ್ರಶಂಸೆ ಸಿಗುವುದು. ದಿನದ ಮಟ್ಟಿಗೆ ಖರ್ಚು ಇರಲಿದೆ. ಸಂಬಂಧವಿರದ ವಿಷಯಗಳಿಗೆ ಕಿವಿಗೊಡವುದು ಬೇಡ. ಹೂಡಿಕೆ ವ್ಯವಹಾರದಲ್ಲಿ ತೊಡಗುವುದು ಬೇಡ. ಹಳೆಯ ವಿಚಾರಗಳನ್ನು ಕೆದಕಿ ಗಾಯ ಮಾಡಿಕೊಳ್ಳುವುದು ಬೇಡ. ಆರೋಗ್ಯ ಮಧ್ಯಮವಾಗಿರಲಿದೆ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 3

Horoscope Today

ಮಿಥುನ: ನಿಮ್ಮ ಅಭಿಪ್ರಾಯಗಳಿಗೆ ವಿರೋಧ ವ್ಯಕ್ತವಾಗುವ ಸಾಧ್ಯತೆ ಇದೆ, ಇದರಿಂದ ಆತುರದಲ್ಲಿ ಮಾತನಾಡಿ ಮಾನಸಿಕ ನೆಮ್ಮದಿ ಹಾಳು ಮಾಡಿಕೊಳ್ಳುವುದು ಬೇಡ. ಅನಿರೀಕ್ಷಿತ ಖರ್ಚು ಇರಲಿದೆ. ಆರೋಗ್ಯದ ಕಡೆಗೆ ಕಾಳಜಿ ವಹಿಸುವುದು ಉತ್ತಮ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 1

Horoscope Today

ಕಟಕ: ಕೆಲಸ ಕಾರ್ಯಗಳಲ್ಲಿ ಯಶಸ್ಸು ಸಿಗಲಿದೆ. ಗೃಹಬಳಕೆ ಸಾಧನಗಳ ಖರೀದಿ ಸಾಧ್ಯತೆಯಿಂದ ಖರ್ಚು ಇರಲಿದೆ. ವ್ಯಾಪಾರ- ವ್ಯವಹಾರದಲ್ಲಿ ಪ್ರಗತಿ ಇರಲಿದೆ. ಅತಿಥಿಗಳ ಆಗಮನ ಹರ್ಷ ತರಲಿದೆ. ಆರೋಗ್ಯ ಉತ್ತಮವಾಗಿರಲಿದೆ. ಉದ್ಯೋಗಿಗಳಿಗೆ ಕಿರಿಕಿರಿ ಸಾಧ್ಯತೆ ಇದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 5

Horoscope Today

ಸಿಂಹ: ನಿಮ್ಮ ಮಾತುಗಳಿಂದ ಇತರರನ್ನು ಆಕರ್ಷಸುವಿರಿ. ನಾಲಿಗೆಯ ರುಚಿಗೆ ಮಾರು ಹೋಗಿ ಆರೋಗ್ಯ ಹಾಳು ಮಾಡಿಕೊಳ್ಳುವುದು ಬೇಡ, ಮಿತಿಯಿರಲಿ. ವಿವಾಹ ಆಕಾಂಕ್ಷಿಗಳಿಗೆ ಶುಭ ಸುದ್ದಿ ಸಿಗುವ ಸಾಧ್ಯತೆ ಇದೆ. ಹಣಕಾಸು ವ್ಯವಹಾರದಲ್ಲಿ ಪ್ರಗತಿ ಇರಲಿದೆ. ಸಂಗಾತಿಯ ಮಾತುಗಳು ಮಧುರವೇನಿಸಲಿದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 3

Horoscope Today

ಕನ್ಯಾ: ನಿಮ್ಮ ತ್ಯಾಗದ ಮನೋಭಾವ ನಿಮಗೆ ಸಂತಸ ತರುವುದು. ಯಾರೊಂದಿಗೂ ದಿನದ ಮಟ್ಟಿಗೆ ಹಣಕಾಸಿನ ವ್ಯವಹಾರ ಮಾಡಬೇಡಿ, ವಿನಾಕಾರಣ ವಿವಾದವನ್ನು ಮೈಮೇಲೆ ಎಳೆದುಕೊಳ್ಳುವುದು ಬೇಡ. ಕುಟುಂಬದಲ್ಲಿ ಅನಾವಶ್ಯಕ ಮಾತುಗಳಿಂದ ಜಗಳವಾಗಬಹುದು, ಮೌನದಿಂದ ವರ್ತಿಸಿ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 1

ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ

Horoscope Today

ತುಲಾ: ಇತರರು ನಿಮ್ಮ ಕಾರ್ಯಗಳನ್ನು ಪ್ರಶಂಸೆ ಮಾಡುವರು. ಹಣಕಾಸಿನ ಹರಿವು ಹೆಚ್ಚಾಗಲಿದೆ. ವ್ಯಾಪಾರ ವ್ಯವಹಾರದಲ್ಲಿ ಪ್ರಗತಿ ಇರಲಿದೆ. ಸಹದ್ಯೋಗಿಗಳು ನಿಮ್ಮ ವಿರುದ್ಧ ಪಿತೂರಿ ಮಾಡುವ ಸಾಧ್ಯತೆ ಇದೆ, ಎಚ್ಚರಿಕೆ ಇರಲಿ. ವಿನಾಕಾರಣ ಜಗಳ ಮಾಡಿ ಮನಸ್ಸು ಕೆಡಿಸಿಕೊಳ್ಳುವುದು ಬೇಡ. ಕೌಟುಂಬಿಕವಾಗಿ ಮಿಶ್ರ ಫಲ. ಅದೃಷ್ಟ ಸಂಖ್ಯೆ: 4

Horoscope Today

ವೃಶ್ಚಿಕ :ಇತರರನ್ನು ಟೀಕಿಸಲು ನಿಮ್ಮ ಅಮೂಲ್ಯ ಸಮಯ ವ್ಯರ್ಥ ಮಾಡುವುದು ಬೇಡ. ಅನಾವಶ್ಯಕ ವಿಚಾರ ಮಾಡಿ ಆರೋಗ್ಯ ಹಾಳು ಮಾಡಿಕೊಳ್ಳುವುದು ಬೇಡ. ಹಣಕಾಸು ವ್ಯವಹಾರದಲ್ಲಿ ಪ್ರಗತಿ ಇರಲಿದೆ. ಉದ್ಯೋಗಿಗಳಿಗೆ ಶುಭ. ಕುಟುಂಬದಲ್ಲಿ ಹಳೆಯ ವಿಚಾರಗಳು ಕಲಹ ಸೃಷ್ಟಿಸಬಹುದು, ಮಾತು ಮಿತವಾಗಿರಲಿ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 5

Horoscope Today

ಧನಸ್ಸು: ಕುಟುಂಬದ ಸದಸ್ಯರೊಂದಿಗೆ ಮನರಂಜನಾ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಸಾಧ್ಯತೆ ಇದೆ. ಅಮೂಲ್ಯ ವಸ್ತುಗಳ ಮೇಲೆ ಗಮನವಿರಲಿ. ದಿನದ ಮಟ್ಟಿಗೆ ಹೂಡಿಕೆ ವ್ಯವಹಾರದಲ್ಲಿ ತೊಡುಗುವುದು ಬೇಡ. ಹಣಕಾಸು ಪ್ರಗತಿ ಸಾಧಾರಣವಾಗಿರಲಿದೆ. ವಿನಾಕಾರಣ ನಿಮ್ಮ ಸಿಟ್ಟು ಸಂಗಾತಿಯ ಮೇಲೆ ಹಾಕಿ, ಕುಟುಂಬದ ವಾತಾವರಣ ಕೆಡಿಸುವುದು ಬೇಡ. ಕೌಟುಂಬಿಕವಾಗಿ ಮಿಶ್ರ ಫಲ. ಅದೃಷ್ಟ ಸಂಖ್ಯೆ: 2

Horoscope Today

ಮಕರ: ನಿಮ್ಮ ಕೋಪದ ಸ್ವಭಾವದಿಂದ ಇತರರೊಂದಿಗೆ ವಾದಕ್ಕೆಳಿಯಬೇಡಿ. ಆತುರದಲ್ಲಿ ಅತಿರೇಕದ ಮಾತುಗಳು ಜಗಳ ತಂದಿತು. ಆರೋಗ್ಯದ ಕಡೆಗೆ ಗಮನವಿರಲಿ. ದಿನದ ಮಟ್ಟಿಗೆ ಖರ್ಚು ಇರಲಿದೆ. ಆತ್ಮೀರೊಂದಿಗೆ ಪ್ರಯಾಣಿಸುವ ಸಾಧ್ಯತೆ ಇದೆ. ಉದ್ಯೋಗಿಗಳಿಗೆ ಕಿರಿಕಿರಿ ಸಾಧ್ಯತೆ ಇದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 2

Horoscope Today

ಕುಂಭ: ಕೆಲಸಕ್ಕೆ ಹಾಕಿದ ಶ್ರಮ ವ್ಯರ್ಥವಾಗದಂತೆ ಎಚ್ಚರಿಕೆ ವಹಿಸಿ. ಆತುರದಲ್ಲಿ ಅತಿರೇಕದ ಮಾತುಗಳನ್ನಾಡುವುದು ಸರಿಯಲ್ಲ, ತಾಳ್ಮೆಯಿಂದ ಮಾತನಾಡಿ. ವಿವಾಹ ಅಪೇಕ್ಷಿತರಿಗೆ ಶುಭ ಸುದ್ದಿ ಸಿಗುವ ಸಾಧ್ಯತೆ ಇದೆ. ಹಿರಿಯರಿಂದ ಮಾರ್ಗದರ್ಶನ ಸಿಗಲಿದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 9

Horoscope Today

ಮೀನ: ರಹಸ್ಯ ಕಾರ್ಯಗಳು ಯಶಸ್ಸು ತಂದು ಕೊಡಲಿವೆ. ಕುಟುಂಬಕ್ಕೆ ಸಮಯವನ್ನು ನೀಡುವಿರಿ. ವಿನಾಕಾರಣ ಕೋಪಗೊಂಡು ಮನಸ್ಸಿನ ನೆಮ್ಮದಿ ಹಾಳು ಮಾಡಿಕೊಳ್ಳುವುದು ಬೇಡ. ಖರ್ಚು ಹೆಚ್ಚಾಗಲಿದೆ. ಸಂಗಾತಿ ನಿಮ್ಮ ಮನಸ್ಸಿನ ಭಾವನೆಗಳಿಗೆ ಸ್ಪಂದಿಸುವಳು. ಮಧುರ ಪ್ರೇಮ ಅಂಕುರವಾಗಲಿದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 7

Horoscope Today

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು

M: 9481854580 | pnaveenshastri@gmail.com

Continue Reading
Advertisement
Karnataka Weather
ಕರ್ನಾಟಕ2 mins ago

Karnataka Weather: ಇಂದು ಕರಾವಳಿ, ಬೆಳಗಾವಿ, ವಿಜಯಪುರ ಸೇರಿ ರಾಜ್ಯದ ವಿವಿಧೆಡೆ ಬಿರುಗಾಳಿ ಸಹಿತ ಭಾರಿ ಮಳೆ!

Tips For Teenager Parents
ಆರೋಗ್ಯ17 mins ago

Tips For Teenager Parents: ಉತ್ತಮ ಪೋಷಕರಾಗಿ; ಹರೆಯದ ಮಕ್ಕಳನ್ನು ಅರ್ಥ ಮಾಡಿಕೊಳ್ಳಿ!

Contact Lens
ಆರೋಗ್ಯ32 mins ago

Contact Lens: ಕಾಂಟ್ಯಾಕ್ಟ್‌ ಲೆನ್ಸ್‌ ಬಳಸುತ್ತೀರಾ? ಈ ವಿಷಯಗಳು ತಿಳಿದಿರಲಿ!

Dina Bhavishya
ಪ್ರಮುಖ ಸುದ್ದಿ2 hours ago

Dina Bhavishya: ಈ ರಾಶಿಯವರು ಅತ್ಯುತ್ಸಾಹದಲ್ಲಿ ಅತಿರೇಕದ ಮಾತುಗಳನ್ನು ಆಡುವುದು ಬೇಡ!

BJP Protest
ಕರ್ನಾಟಕ6 hours ago

BJP Protest: ಸದನದಲ್ಲಿ ಬಿಜೆಪಿ, ಜೆಡಿಎಸ್ ಅಹೋರಾತ್ರಿ ಧರಣಿ: ಅಲ್ಲೇ ಭಜನೆ, ಊಟ, ನಿದ್ದೆ; ಫೋಟೊ, ವಿಡಿಯೊ ಇಲ್ಲಿವೆ

Nitish Kumar
ದೇಶ7 hours ago

Nitish Kumar: ನೀನೂ ಹೆಣ್ಣು; ವಿಧಾನಸಭೆಯಲ್ಲೇ ಆರ್‌ಜೆಡಿ ಶಾಸಕಿಗೆ ನಿತೀಶ್‌ ಕುಮಾರ್‌ ಗದರಿದ್ದೇಕೆ?

Paris Olympics
ಕ್ರೀಡೆ7 hours ago

Paris Olympics: ಕೊಕೊ ಗಾಫ್ ಅಮೆರಿಕದ ಧ್ವಜಧಾರಿ; ಈ ಗೌರವ ಪಡೆದ ಅತಿ ಕಿರಿಯ ಕ್ರೀಡಾಪಟು

Anekal
ಕ್ರೈಂ8 hours ago

ಆನೇಕಲ್‌ನಲ್ಲಿ ಪುರಸಭೆ ಸದಸ್ಯನ ಬರ್ಬರ ಹತ್ಯೆ; ಮಾರಕಾಸ್ತ್ರಗಳಿಂದ ಮನಬಂದಂತೆ ಕೊಚ್ಚಿ ಕೊಲೆ

Hardik Pandya
ಕ್ರೀಡೆ9 hours ago

Hardik Pandya: ವಿಚ್ಛೇದನ ನೀಡಿ ಒಂದು ವಾರ ಕಳೆಯುವ ಮುನ್ನವೇ ಮಾಜಿ ಪತ್ನಿಯ ಪೋಸ್ಟ್​ಗೆ ಲೈಕ್ಸ್​, ಕಮೆಂಟ್​ ಮಾಡಿದ ಹಾರ್ದಿಕ್​ ಪಾಂಡ್ಯ

King Chopper
ದೇಶ9 hours ago

Sea King Chopper: ಸಾವಿನ ದವಡೆಯಲ್ಲಿದ್ದ ಚೀನಾ ನಾವಿಕನನ್ನು ರಕ್ಷಿಸಿದ ಭಾರತೀಯ ನೌಕಾಪಡೆ; ಮಾನವೀಯತೆಗೆ ಮೆಚ್ಚುಗೆ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Weather Forecast
ಮಳೆ1 day ago

Karnataka Weather : ರಭಸವಾಗಿ ಸುರಿಯುವ ಮಳೆ; 50 ಕಿ.ಮೀ ವೇಗದಲ್ಲಿ ಬೀಸುತ್ತೆ ಗಾಳಿ

karnataka weather Forecast
ಮಳೆ2 days ago

Karnataka Weather : ರಾಜ್ಯದಲ್ಲಿ ಮುಂದುವರಿದ ಮಳೆ ಅವಾಂತರ; ನಾಳೆಯೂ ಇರಲಿದೆ ಅಬ್ಬರ

Udupi News
ಉಡುಪಿ2 days ago

Udupi News : ಹಳೆ ಲಾರಿ ಚಾಸ್ಸಿಯಲ್ಲೇ ಕಿರು ಸೇತುವೆ ನಿರ್ಮಾಣ! ಬೈಂದೂರು ಶಾಸಕರ ಪರಿಕಲ್ಪನೆಗೆ ಜನರು ಫಿದಾ

murder case
ರಾಮನಗರ2 days ago

Murder Case : ರಾಮನಗರದಲ್ಲೊಂದು ಪೈಶಾಚಿಕ ಕೃತ್ಯ; ಅತ್ಯಾಚಾರವೆಸಗಿ 4 ವರ್ಷದ ಬಾಲಕಿಯನ್ನು ಕೊಂದ ದುಷ್ಟ

karnataka Rain
ಮಳೆ5 days ago

Karnataka Rain : ಭಾರಿ ಮಳೆಗೆ ಮನೆ ಗೋಡೆ ಕುಸಿತ; ಕೊಟ್ಟಿಗೆಯಲ್ಲಿದ್ದ ಜಾನುವಾರುಗಳು ಸಾವು

karnataka Rain
ಮಳೆ5 days ago

Karnataka Rain : ಹಳ್ಳ ದಾಟಲು ಹೋಗಿ ನೀರುಪಾಲಾದ ಜಾನುವಾರು; ಬಿರುಗಾಳಿಗೆ ಕಳಚಿದ ವಿಂಡ್‌ ಫ್ಯಾನ್‌

karnataka Rain
ಮಳೆ6 days ago

Karnataka Rain : ಬೀದಿಗೆ ತಂದ ರಣಮಳೆ; ಮನೆ ಕುಸಿದು ಬಿದ್ದು 9 ತಿಂಗಳ ಗರ್ಭಿಣಿ ನರಳಾಟ

Karnataka Rain
ಮಳೆ6 days ago

Karnataka Rain : ರಾಜ್ಯದಲ್ಲಿ ಮಳೆಯ ಆರ್ಭಟ; ರಾತ್ರಿ ಕಳೆದು ಬೆಳಗಾಗುವುದರೊಳಗೆ ಕಂದಕ ನಿರ್ಮಾಣ

Karnataka Rain
ಮಳೆ7 days ago

Karnataka Rain : ಭಾರಿ ಮಳೆ ಎಫೆಕ್ಟ್‌; ಉಕ್ಕಿ ಹರಿಯುತ್ತಿದ್ದ ನದಿಯಲ್ಲಿ ಕೊಚ್ಚಿ ಹೋದ ರಾಸು

Uttara Kannada Landslide
ಮಳೆ7 days ago

Uttara Kannada Landslide: ಶಿರೂರು ಗುಡ್ಡ ಕುಸಿತ; ಅಖಾಡಕ್ಕಿಳಿದ ಜಿಯೊಲಾಜಿಕಲ್ ಸರ್ವೆ ಆಫ್ ಇಂಡಿಯಾ ಟೀಂ

ಟ್ರೆಂಡಿಂಗ್‌