Rashmika Mandanna: ನ್ಯಾಶನಲ್‌ ಕ್ರಶ್‌ ರಶ್ಮಿಕಾ ಮಂದಣ್ಣಗೆ ಡಿಸೆಂಬರ್‌ ಲಕ್ಕಿ ತಿಂಗಳಾಗುತ್ತಾ? - Vistara News

ಟಾಲಿವುಡ್

Rashmika Mandanna: ನ್ಯಾಶನಲ್‌ ಕ್ರಶ್‌ ರಶ್ಮಿಕಾ ಮಂದಣ್ಣಗೆ ಡಿಸೆಂಬರ್‌ ಲಕ್ಕಿ ತಿಂಗಳಾಗುತ್ತಾ?

Rashmika Mandanna: ಪುಷ್ಪ 2’ ಸಿನಿಮಾ ಡಿಸೆಂಬರ್ 6ರಂದು ರಿಲೀಸ್ ಮಾಡೋದಾಗಿ ತಂಡದವರು ಘೋಷಣೆ ಮಾಡಿದ್ದಾರೆ. ಅದೇ ರೀತಿ ರಶ್ಮಿಕಾ ನಟನೆಯ ‘ಛವಾ’ ಕೂಡ ಡಿಸೆಂಬರ್ 6ಕ್ಕೆ ಬಿಡುಗಡೆ ಕಾಣಲಿದೆ ಎಂದು ಹೇಳಲಾಗುತ್ತಿದೆ. ‘ಪುಷ್ಪ 2’ ಘೋಷಣೆ ಆದ ಬಳಿಕ ಈ ಚಿತ್ರದ ರಿಲೀಸ್ ದಿನಾಂಕ ಮುಂದಕ್ಕೆ ಹೋಗಬಹುದು ಎಂದು ಅನೇಕರು ಭಾವಿಸಿದ್ದರು.

VISTARANEWS.COM


on

Rashmika Mandanna Chhaava pushpa 2 release at a time
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ನ್ಯಾಶನಲ್‌ ಕ್ರಶ್‌ ರಶ್ಮಿಕಾ ಮಂದಣ್ಣ (Rashmika Mandanna) ಬಾಲಿವುಡ್‌ನಲ್ಲಿ ಮಿಂಚುತ್ತಿದ್ದಾರೆ. ಹಿಂದಿಯಲ್ಲಿ ಈಗಾಗಲೇ ಗುಡ್ ಬೈ, ಮಿಶನ್ ಮಜ್ನು, ಛಾವಾ ಚಿತ್ರಗಳನ್ನು ಮಾಡಿರುವ ರಶ್ಮಿಕಾ, ಸಲ್ಮಾನ್ ಖಾನ್ ಜತೆ ಕೂಡ ತೆರೆ ಹಂಚಿಕೊಳ್ಳುತ್ತಿದ್ದಾರೆ. ಸಲ್ಮಾನ್ ಅಭಿನಯದ `ಸಿಕಂದರ್’ ಚಿತ್ರಕ್ಕೆ ನಾಯಕಿಯಾಗಿ ಆಯ್ಕೆಯಾಗಿದ್ದಾರೆ.  ವಿಕ್ಕಿ ಕೌಶಲ್ (Vicky Kaushal) ತಮ್ಮ ಮುಂದಿನ ಚಿತ್ರ `ಛಾವಾ’ದಲ್ಲಿ ಛತ್ರಪತಿ ಸಂಭಾಜಿ ಮಹಾರಾಜ್ ಪಾತ್ರವನ್ನು ನಿರ್ವಹಿಸುತ್ತಿದ್ದಾರೆ. ಅದೇ ರೀತಿ ಛಾವಾ ಸಿನಿಮಾಗೆ ರಶ್ನಿಕಾ ನಾಯಕಿ. ಪುಷ್ಪ ಸಿನಿಮಾಗೂ ರಶ್ಮಿಕಾ ನಾಯಕಿ.  ಈಗ ಒಂದೇ ದಿನ ರಶ್ಮಿಕಾ ಅವರ ಈ ಎರಡು ಸಿನಿಮಾಗಳು ರಿಲೀಸ್ ಆಗೋ ಸಾಧ್ಯತೆ ಇದೆ ಎಂದು ವರದಿಯಾಗಿದೆ.

‘ಪುಷ್ಪ 2’ ಸಿನಿಮಾ ಡಿಸೆಂಬರ್ 6ರಂದು ರಿಲೀಸ್ ಮಾಡೋದಾಗಿ ತಂಡದವರು ಘೋಷಣೆ ಮಾಡಿದ್ದಾರೆ. ಅದೇ ರೀತಿ ರಶ್ಮಿಕಾ ನಟನೆಯ ‘ಛವಾ’ ಕೂಡ ಡಿಸೆಂಬರ್ 6ಕ್ಕೆ ಬಿಡುಗಡೆ ಕಾಣಲಿದೆ ಎಂದು ಹೇಳಲಾಗುತ್ತಿದೆ. ‘ಪುಷ್ಪ 2’ ಘೋಷಣೆ ಆದ ಬಳಿಕ ಈ ಚಿತ್ರದ ರಿಲೀಸ್ ದಿನಾಂಕ ಮುಂದಕ್ಕೆ ಹೋಗಬಹುದು ಎಂದು ಅನೇಕರು ಭಾವಿಸಿದ್ದರು. ಆದರೆ ಆ ರೀತಿ ಆಗಿಲ್ಲ. ಈ ಚಿತ್ರ ಕೂಡ ಅಂದುಕೊಂಡಂತೆ ಡಿಸೆಂಬರ್ 6ರಂದು ರಿಲೀಸ್ ಆಗಲಿದೆ ಎಂದು ಹೇಳಲಾಗುತ್ತಿದೆ.

ವರದಿಯ ಪ್ರಕಾರ, ಮರಾಠಾ ರಾಜ ಛತ್ರಪತಿ ಶಿವಾಜಿ ಮಹಾರಾಜರ ಹಿರಿಯ ಮಗ ಛತ್ರಪತಿ ಸಂಭಾಜಿ ಮಹಾರಾಜನ ಪಾತ್ರವನ್ನು ವಿಕ್ಕಿ ನಿಭಾಯಿಸಲಿದ್ದಾರೆ. “ಚಿತ್ರವು ಪ್ರಾಥಮಿಕವಾಗಿ ಸಂಭಾಜಿ ಮಹಾರಾಜರ ಶೌರ್ಯ ಅವರ ತ್ಯಾಗ ಮತ್ತು ಯುದ್ಧಗಳನ್ನು ಗೆಲ್ಲುವ ತಂತ್ರಗಳ ಬಗ್ಗೆ ಇದ್ದರೂ, ಗಂಡ ಮತ್ತು ಹೆಂಡತಿಯ ನಡುವಿನ ಭಾವನಾತ್ಮಕ ಪ್ರೇಮಕಥೆಯನ್ನು ಸಹ ಒಳಗೊಂಡಿದೆ. ಮರಾಠ ಸಾಮ್ರಾಜ್ಯದಿಂದ ಸಂಭಾಜಿ ದೂರ ಇದ್ದಾಗ ಅವರ ಹೆಂಡತಿ ಎಲ್ಲವನ್ನೂ ನಿರ್ವಹಿಸುತ್ತಿದ್ದರು ಎನ್ನುವುದು ವಿಶೇಷ. ಈ ವಿಚಾರ ಕೂಡ ಸಿನಿಮಾದಲ್ಲಿ ಹೈಲೈಟ್ ಆಗಲಿದೆ.

ಇದನ್ನೂ ಓದಿ: Actor Suriya: ಕಾಲಿವುಡ್‌ ನಟ ಸೂರ್ಯ ಸಿನಿಮಾಗಾಗಿ ಈ ಕನ್ನಡ   ಸ್ಟಾರ್ ಹೀರೋಗೆ ಬಂದಿತ್ತು ಆಫರ್‌!

ವಿಕ್ಕಿ ಕೌಶಲ್ ಕೂಡ ಈ ಸಿನಿಮಾಗಾಗಿ 25 ಕೆಜಿ ಹೆಚ್ಚಿಸಿಕೊಳ್ಳಲು ಮುಂದಾಗಿದ್ದಾರೆ. ವಿಕ್ಕಿ ಕೌಶಲ್ ಅವರು ದೇಹದ ತೂಕ ಹೆಚ್ಚಿಸಿಕೊಳ್ಳಲು ಬೇರೆ ಡಯಟ್ ಫಾಲೋ ಮಾಡಲಿದ್ದಾರೆ. ರಶ್ಮಿಕಾ ಮಂದಣ್ಣ ಅವರಿಗೂ ಸಿನಿಮಾದಲ್ಲಿ ಪ್ರಮುಖ ಪಾತ್ರವಿದೆ. ಅವರು ಛತ್ರಪತಿ ಸಾಂಬಾಜಿ ಮಹರಾಜ್ ಪತ್ನಿ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ.

ರಶ್ಮಿಕಾ ಈಗಾಗಲೇ ಈ ಸಿನಿಮಾಗಾಗಿ ತಯಾರಿ ನಡೆಸುತ್ತಿದ್ದಾರೆ. ಧ್ವನಿ ತರಬೇತಿಯನ್ನು ಪಡೆಯುತ್ತಿದ್ದಾರೆ. ಕತ್ತಿ ಕಾಳಗ, ಕುದುರೆ ಸವಾರಿ ಮತ್ತು ಬಿಲ್ಲುಗಾರಿಕೆಯಲ್ಲಿ ಪ್ರವೀಣನಾಗಲು ನಾಲ್ಕು ತಿಂಗಳ ಕಾಲ ತರಬೇತಿಯನ್ನು ವಿಕ್ಕಿ ಅವರು ಪಡೆದುಕೊಳ್ಳುತ್ತಿದ್ದಾರೆ ಎಂದು ವರದಿಯಾಗಿದೆ. ಈ ಪ್ರಾಜೆಕ್ಟ್‌ ಅನ್ನು ದೊಡ್ಡದಾಗಿ ಮಾಡಲು ತಾಂತ್ರಿಕವಾಗಿಯೂ ಪಳಗಿದವರನ್ನು ಆಯ್ಕೆ ಮಾಡಿಕೊಳ್ಳಲಾಗಿದೆ ಎಂದು ವರದಿಯಾಗಿದೆ.

ಸ್ತ್ರೀ’, ‘ಭೇಡಿಯಾ’ ಮೊದಲಾದ ಸಿನಿಮಾಗಳಿಗೆ ಬಂಡವಾಳ ಹೂಡಿದ ಮ್ಯಾಡಾಕ್ ಫಿಲ್ಮ್ಸ್ ನಿರ್ಮಾಣ ಸಂಸ್ಥೆಯ ಅಡಿಯಲ್ಲಿ ಈ ಸಿನಿಮಾ ಮೂಡಿಬರುತ್ತಿದೆ. ʻಛಾವಾʼ ಸಿನಿಮಾ ಈ ಪ್ರೊಡಕ್ಷನ್ ಹೌಸ್‌ನ ಮೊದಲ ಐತಿಹಾಸಿಕ ಯೋಜನೆಯಾಗಿದೆ. ಈ ಯೋಜನೆ ವಿಕ್ಕಿ ಮತ್ತು ರಶ್ಮಿಕಾ ಅವರ ಮೊದಲ ಸಹಯೋಗವಾಗಿದೆ. ಈ ಹಿಂದೆ ಒಳಉಡುಪುಗಳ ಜಾಹೀರಾತಿಗಾಗಿ ಒಟ್ಟಿಗೆ ಕೆಲಸ ಮಾಡಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

Latest

Naga Chaitanya: ನಾಗಚೈತನ್ಯ ಜೊತೆ ಪ್ರೇಮಿ, ಪತ್ನಿ ಮತ್ತು ತಾಯಿಯಾಗಿ ನಟಿಸಿದ್ದಾರೆ ಈ ನಟಿ!

Naga Chaitanya: ನಟಿ ಲಾವಣ್ಯ ತ್ರಿಪಾಠಿ ಅವರು ನಾಗ ಚೈತನ್ಯ ಜೊತೆ ಕೃಷ್ಣ ಮಾರಿಮುತ್ತು ನಿರ್ದೇಶನದ ‘ಯುದ್ಧಂ ಶರಣಂ’ ಚಿತ್ರದಲ್ಲಿ ಪ್ರೇಮಿಯ ಪಾತ್ರದಲ್ಲಿ ನಟಿಸಿದ್ದರು. ‘ಬಂಗಾರರಾಜು’ ಚಿತ್ರದಲ್ಲಿ ನಾಗಚೈತನ್ಯ ತಾಯಿಯಾಗಿ ನಟಿಸಿದ್ದರು. ಇನ್ನು‘ಮನಂ’ ಚಿತ್ರದಲ್ಲಿ ಲಾವಣ್ಯ ನಾಗ ಚೈತನ್ಯ ಅವರ ಸ್ನೇಹಿತೆಯಾಗಿ (ಅತಿಥಿ ಪಾತ್ರ) ನಟಿಸಿದ್ದಾರೆ. ಈ ರೀತಿಯಾಗಿ, 33 ವರ್ಷದ ನಟಿ ಈ ಚಿತ್ರಗಳಲ್ಲಿ ಚೈತನ್ಯ ಅವರ ಪತ್ನಿ, ತಾಯಿ ಮತ್ತು ಸ್ನೇಹಿತೆಯ ಪಾತ್ರವನ್ನು ನಿರ್ವಹಿಸಿದ್ದರು. ಈ ಕುರಿತ ವರದಿ ಇಲ್ಲಿದೆ.

VISTARANEWS.COM


on

Naga Chaitanya
Koo

‘ಯೇ ಮಾಯಾ ಚೆಸಾವೆ’ ಮತ್ತು ‘ಮನಮ್’ನಂತಹ ಹಿಟ್ ಚಿತ್ರಗಳೊಂದಿಗೆ ತಮ್ಮ ಅಭಿನಯದ ಮೂಲಕ ಛಾಪು ಮೂಡಿಸಿದ ತೆಲುಗು ನಟರಲ್ಲಿ ನಾಗ ಚೈತನ್ಯ ಒಬ್ಬರು. ಚೈತನ್ಯ ಅವರು ಲಾವಣ್ಯ ತ್ರಿಪಾಠಿ ಸೇರಿದಂತೆ ಹಲವಾರು ಪ್ರಮುಖ ನಟಿಯರೊಂದಿಗೆ ನಟಿಸಿದ್ದಾರೆ. ಕೃಷ್ಣ ಮಾರಿಮುತ್ತು ನಿರ್ದೇಶನದ ‘ಯುದ್ಧಂ ಶರಣಂ’ ಚಿತ್ರದಲ್ಲಿ ಲಾವಣ್ಯ ತ್ರಿಪಾಠಿ ಅವರು ನಾಗ ಚೈತನ್ಯ(Naga Chaitanya) ಅವರ ಪ್ರೇಮಿಯ ಪಾತ್ರದಲ್ಲಿ ನಟಿಸಿದ್ದರು.

‘ಬಂಗಾರರಾಜು’ ಚಿತ್ರದಲ್ಲಿ ಇವರು ನಾಗಚೈತನ್ಯ ಅವರ ತಾಯಿಯಾಗಿ ನಟಿಸಿದ್ದರು. ಈ ಚಿತ್ರವು ‘ಸೊಗ್ಗಡೆ ಚಿನ್ನಿ ನಯನ’ ಚಿತ್ರದ ಮುಂದುವರಿದ ಭಾಗವಾಗಿದೆ. ವಿಕ್ರಮ್ ಕೆ ಕುಮಾರ್ ನಿರ್ದೇಶನದ ‘ಮನಂ’ ಚಿತ್ರದಲ್ಲಿ ಲಾವಣ್ಯ ನಾಗ ಚೈತನ್ಯ ಅವರ ಸ್ನೇಹಿತೆಯಾಗಿ (ಅತಿಥಿ ಪಾತ್ರ) ನಟಿಸಿದ್ದಾರೆ. ಈ ರೀತಿಯಾಗಿ, 33 ವರ್ಷದ ನಟಿ ಈ ಚಿತ್ರಗಳಲ್ಲಿ ಚೈತನ್ಯ ಅವರ ಪತ್ನಿ, ತಾಯಿ ಮತ್ತು ಸ್ನೇಹಿತೆಯ ಪಾತ್ರವನ್ನು ನಿರ್ವಹಿಸಿದ್ದರು. ಅಲ್ಲದೇ ಯುದ್ಧಂ ಶರಣಂ, ಸೊಗ್ಗಡೆ ಚಿನ್ನಿ ನಯನ ಮತ್ತು ಮನಂ ಚಿತ್ರಗಳು ಗಲ್ಲಾಪೆಟ್ಟಿಗೆಯಲ್ಲಿ ಬಹಳ ಸದ್ದು ಮಾಡಿದ್ದವು.

ನಾಗ ಚೈತನ್ಯ ಪ್ರಸ್ತುತ ಚಂದೂ ಮೊಂಡೆಟಿ ನಿರ್ದೇಶನದ ‘ತಾಂಡೇಲ್’ ಚಿತ್ರವನ್ನು ಎದುರು ನೋಡುತ್ತಿದ್ದಾರೆ. ಚಿತ್ರದ ತಂಡವು ನವೆಂಬರ್ 22ರಂದು ಚಿತ್ರದ ಫಸ್ಟ್ ಲುಕ್ ಅನ್ನು ಟ್ವೀಟ್ ಮೂಲಕ ಬಿಡುಗಡೆ ಮಾಡಿದೆ. ಫಸ್ಟ್ ಲುಕ್‌ನಲ್ಲಿ ಅವರು ಮೀನುಗಾರನ ಪಾತ್ರವನ್ನು ನಿರ್ವಹಿಸುತ್ತಿದ್ದು, ನಾಗಚೈತನ್ಯ ಅವರು ದೋಣಿಯಲ್ಲಿ ಕುಳಿತಿರುವುದನ್ನು ತೋರಿಸಲಾಗಿದೆ. ಚೈತನ್ಯ ಈ ಪೋಸ್ಟ್ ಗೆ “#NC23 #Thandel ನಾನು ನಿಜವಾಗಿಯೂ ಎದುರು ನೋಡುತ್ತಿರುವ ಪಾತ್ರ .. ಮತ್ತು ಪ್ರತಿಯೊಬ್ಬರೂ at@GeethaArts @chandoomondeti@Sai_Pallavi92@ThisIsDSPand ನಾನು ನಿಜವಾಗಿಯೂ ಇಷ್ಟಪಡುವ ತಂಡ. ಚಿತ್ರೀಕರಣ ಸದ್ಯದಲ್ಲೇ ಆರಂಭವಾಗಲಿದೆ” ಎಂದು ಶೀರ್ಷಿಕೆ ನೀಡಿದ್ದಾರೆ,
ನಿರ್ಮಾಪಕರು ಚಿತ್ರದ ಕಥೆಯನ್ನು ರಹಸ್ಯವಾಗಿಟ್ಟಿದ್ದಾರೆ.

ಚಿತ್ರ ತಂಡವು ಈ ವರ್ಷದ ಆರಂಭದಲ್ಲಿ ಕೆ ಮ್ಯಾಚಿಲೆಸಂ ಎಂಬ ಮೀನುಗಾರಿಕಾ ಕುಗ್ರಾಮಕ್ಕೆ ಪ್ರಯಾಣ ಬೆಳೆಸಿತ್ತು. ಶ್ರೀಕಾಕುಳಂ ಬಳಿ ಇರುವ ಈ ಗ್ರಾಮವು ಮೀನುಗಾರ ಸಮುದಾಯಕ್ಕೆ ಸೇರಿದ ನೆಲೆಯಾಗಿದೆ. ಚಿತ್ರದ ನಿರ್ದೇಶಕ ಚಂದೂ ಮೊಂಡೆಟಿ ಮತ್ತು ನಾಗ ಚೈತನ್ಯ ಇಬ್ಬರೂ ಮಾಧ್ಯಮಗಳೊಂದಿಗೆ ಮಾತನಾಡುತ್ತಾ, ಈ ಚಿತ್ರವು ಗ್ರಾಮದಲ್ಲಿ ನಡೆದ ನೈಜ ಘಟನೆಯನ್ನು ಆಧರಿಸಿದೆ ಎಂದು ಹೇಳಿದ್ದಾರೆ. ಚಿತ್ರಕ್ಕಾಗಿ ಉತ್ತಮ ತಯಾರಿ ನಡೆಸಲು ಅವರು ಮೀನುಗಾರರೊಂದಿಗೆ ಮಾತುಕತೆ ನಡೆಸಿದ್ದಾರೆ. ಅದಕ್ಕಾಗಿ ಅವರೊಂದಿಗೆ ಹೆಚ್ಚು ಸಮಯ ಕಳೆದಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ:ಆಟವಾಡುತ್ತ ಕೂದಲಿನ ಕ್ಲಿಪ್ ನುಂಗಿದ 10 ತಿಂಗಳ ಮಗು!

ವರದಿಗಳ ಪ್ರಕಾರ, ನಾಗ ಚೈತನ್ಯ ಅವರು ಈ ಪಾತ್ರಕ್ಕಾಗಿ ತಮ್ಮ ಕೂದಲನ್ನು ಬೆಳೆಸಲಿಲ್ಲವಂತೆ. ಆದರೆ ಅವರು ಮೀನುಗಾರರೊಂದಿಗೆ ಅವರ ಬಾಡಿ ಲ್ಯಾಂಗ್ವೇಜ್ ಮತ್ತು ಭಾಷೆಯನ್ನು ಕಲಿಯಲು ಸಮಯ ಕಳೆದಿದ್ದಾರೆ ಎಂಬುದಾಗಿ ತಿಳಿದುಬಂದಿದೆ. ಹಾಗೇ ಅವರು ಈ ಚಿತ್ರದಲ್ಲಿ ಶ್ರೀಕಾಕುಳಂ ಗ್ರಾಮದ ಜನರ ಭಾಷೆಯಲ್ಲೇ ಮಾತನಾಡಲಿದ್ದಾರೆ. ಈ ರೀತಿಯ ಚಿತ್ರ ಅವರ ವೃತ್ತಿಜೀವನದಲ್ಲಿ ಮೊದಲನೆಯದು ಎನ್ನಲಾಗಿದೆ.

Continue Reading

ಟಾಲಿವುಡ್

Actor Naresh: ನನ್ನ ಬೇಬಿಯನ್ನು ದಯವಿಟ್ಟು ಹುಡುಕಿಕೊಡಿ ಎಂದು ಗಳಗಳನೇ ಅತ್ತ ನಟ ನರೇಶ್‌!

Actor Naresh: ಇದೀಗ ನಟ ಎಕ್ಸ್‌ ಖಾತೆಯಲ್ಲಿ ಭಾವನಾತ್ಮಕ ವಿಡಿಯೋವೊಂದನ್ನು ಹಂಚಿಕೊಂಡಿದ್ದಾರೆ. ತನ್ನ ʻಬೇಬಿ ಎಲ್ಲೋ ಕಾಣೆಯಾಗಿದೆ. ದಯವಿಟ್ಟು ಹುಡುಕಿಕೊಡಿʼ ಎಂದು ಕಣ್ಣೀರಾಗಿದ್ದಾರೆ.

VISTARANEWS.COM


on

Actor Naresh Shares Emotional Video About His Baby And Taged Director Nag Ashwin
Koo

ಬೆಂಗಳೂರು: ನಟ ನರೇಶ್ (Actor Naresh) ಅವರು ಸಿನಿಮಾಗಳಲ್ಲದೆ ವೈಯಕ್ತಿಕ ಜೀವನ ವಿಚಾರವಾಗಿಯೂ ಸಾಕಷ್ಟು ಸುದ್ದಿಯಲ್ಲಿ ಇರುತ್ತಾರೆ. ಪವಿತ್ರಾ ಲೋಕೇಶ್‌ ವಿಚಾರವಾಗಿಯೂ ಕರ್ನಾಟಕ ರಾಜ್ಯದಲ್ಲಿ ಸಾಕಷ್ಟು ಚರ್ಚೆಗೆ ಗುರಿಯಾಗಿದ್ದರು. ಇದೀಗ ನಟ ಎಕ್ಸ್‌ ಖಾತೆಯಲ್ಲಿ ಭಾವನಾತ್ಮಕ ವಿಡಿಯೋವೊಂದನ್ನು ಹಂಚಿಕೊಂಡಿದ್ದಾರೆ. ತನ್ನ ʻಬೇಬಿ ಎಲ್ಲೋ ಕಾಣೆಯಾಗಿದೆ. ದಯವಿಟ್ಟು ಹುಡುಕಿಕೊಡಿʼ ಎಂದು ಕಣ್ಣೀರಾಗಿದ್ದಾರೆ.

ವಿಡಿಯೊದಲ್ಲಿ ಏನಿದೆ?

“ನನ್ನ ಬೇಬಿ ಎಲ್ಲೋ ಕಾಣೆಯಾಗಿದೆ. ಆ ಬೇಬಿಯನ್ನು ಒಂದೇ ಒಂದು ದಿನ ನೋಡದಿದ್ದರೂ ನಾನು ಏನನ್ನೋ ಕಳೆದುಕೊಂಡ ಭಾವ ನನ್ನನ್ನು ಕಾಡುತ್ತದೆ. ದಯಮಾಡಿ ನನ್ನ ಬೇಬಿಯನ್ನು ಹುಡುಕಿಕೊಡಿ. ಕಲ್ಕಿ 2898 AD ಸಿನಿಮಾ ಬೇರೆ ಬಿಡುಗಡೆ ಆಗಿದೆ. ನಮಗೆ ಬುಜ್ಜಿ ಗೊತ್ತು ಈ ಬೇಬಿ ಗೊತ್ತಿಲ್ಲ ಎನ್ನುತ್ತಿದ್ದಾರೆ. ನಿಮ್ಮ ಬುಜ್ಜಿಯಂತೆಯೇ ನನ್ನ ಬೇಬಿ ಕೂಡ ,ನಾಗ್ ಅಶ್ವಿನ್‌ ಅವರೇ ಹೇಗಾದರೂ ಮಾಡಿ ನಮ್ಮ ಮಗುವನ್ನು ಹುಡುಕಿಕೊಡಿ. ಯಾರಾದರೂ ನನ್ನ ಬೇಬಿ ನಿಮ್ಮ ಕಣ್ಣಿಗೆ ಬಿದ್ದರೆ ಹುಡುಕಿಕೊಡಿ ಸಾಕು” ಎಂದು ನರೇಶ್‌ ತಮ್ಮ ಎಕ್ಸ್‌ನಲ್ಲಿ ವಿಡಿಯೋ ಶೇರ್‌ ಮಾಡಿದ್ದು, ಸದ್ಯ ಎಲ್ಲೆಡೆ ಅದು ವೈರಲ್‌ ಆಗಿದೆ.

ಅಸಲಿಗೆ ಈ ವಿಡಿಯೊ ಮಾಡಿದ್ದು ಸಿನಿಮಾ ಪ್ರಚಾರ ವಿಚಾರವಾಗಿ. ವೀರಾಂಜನೆಯಲು ವಿಹಾರಯಾತ್ರ ಎಂಬ ಹೊಸ ಸಿನಿಮಾದಲ್ಲಿ ನಟ ನರೇಶ್‌ ನಟಿಸುತ್ತಿದ್ದಾರೆ. ಇವರ ಜತೆಗೆ ಹಾಸ್ಯ ನಟ ಬ್ರಹ್ಮಾನಂದಂ ಸಹ ಜತೆಯಾಗಿದ್ದಾರೆ. ಈ ಸಿನಿಮಾದ ಬಗ್ಗೆ ಇದೀಗ ವಿಭಿನ್ನ ರೀತಿಯಲ್ಲಿ ಪ್ರಚಾರ ಮಾಡಿದ್ದಾರೆ ನರೇಶ್.

ಇದನ್ನೂ ಓದಿ: Pavithra Naresh: ಒಟಿಟಿಯಲ್ಲಿ ನಾಪತ್ತೆಯಾದ ‘ಮದುವೆ’; ಗನ್ ಲೈಸೆನ್ಸ್ ಕೇಳಿದ ನರೇಶ್‌!

ನರೇಶ್‌ ಈ ರೀತಿ ವಿಭಿನ್ನವಾಗಿ ಪ್ರಚಾರ ಮಾಡುತ್ತಿರುವುದು ಹೊಸತೇನಲ್ಲ. ಮಲ್ಲಿ ಪೆಳ್ಳಿ ಸಿನಿಮಾದ ವೇಳೆ ಪವಿತ್ರಾ ಲೋಕೇಶ್‌ ಅವರ ಜತೆಗೆ ಮದುವೆ ಆದ ಸಿನಿಮಾದಲ್ಲಿನ ವಿಡಿಯೋವೊಂದನ್ನು ಶೇರ್‌ ಮಾಡಿ ಎಲ್ಲರಿಗೂ ಶಾಕ್‌ ನೀಡಿದ್ದರು.

ತೆಲುಗು ಹಾಗೂ ಕನ್ನಡ ಎರಡು ಭಾಷೆಯಲ್ಲಿ ಮೂಡಿಬಂದಿದ್ದ ಮತ್ತೆ ಮದುವೆಗೆ ಚಿತ್ರಮಂದಿರಗಳಲ್ಲಿ ಮೆಚ್ಚುಗೆ ವ್ಯಕ್ತವಾಗಿತ್ತು. ತೆಲುಗಿನಲ್ಲಿ ʻಮಳ್ಳಿಪೆಳ್ಳಿʼ ಎಂಬ ಟೈಟಲ್‌ನಡಿ ಮೇ 26ರಂದು ಬಿಡುಗಡೆಯಾಗಿತ್ತು. ತಮ್ಮ ಜೀವನದ ಕಥೆಯನ್ನೇ ಪತಿ ನರೇಶ್ ಮತ್ತು ನಟಿ ಪವಿತ್ರಾ ಲೋಕೇಶ್ ಸಿನಿಮಾ ಮಾಡಿದ್ದಾರೆ. 

Continue Reading

ಟಾಲಿವುಡ್

Kalki 2898 AD: ಅಮಿತಾಭ್‌, ಪ್ರಭಾಸ್‌ಗೆ ಲೀಗಲ್ ನೋಟಿಸ್ ಕಳುಹಿಸಿದ ಕಾಂಗ್ರೆಸ್ ಮಾಜಿ ನಾಯಕ!

Kalki 2898 AD: ಚಿತ್ರದಲ್ಲಿ ದೇವರನ್ನು ತಪ್ಪಾಗಿ ಚಿತ್ರಿಸಲಾಗಿದೆ ಮತ್ತು ಹಿಂದೂ ಪುರಾಣಗಳಿಗಿಂತ ವಿಭಿನ್ನವಾಗಿ ಚಿತ್ರಿಸಲಾಗಿದೆ ಎಂದು ಆರೋಪಿಸಿದ್ದಾರೆ. ‘ಕಲ್ಕಿ 2898 ಎಡಿ’ ಚಿತ್ರ ತೆಲುಗು, ತಮಿಳು, ಮಲಯಾಳಂ, ಕನ್ನಡ, ಹಿಂದಿ ಹಾಗೂ ಇಂಗ್ಲಿಷ್ ಭಾಷೆಗಳಲ್ಲಿ ರಿಲೀಸ್ ಆಗಿದೆ. ವೈಜಯಂತಿ ಮೂವಿಸ್ ಮೂಲಕ ಅಶ್ವಿನಿ ದತ್ ಸಿನಿಮಾ ನಿರ್ಮಾಣ ಮಾಡಿದ್ದಾರೆ.

VISTARANEWS.COM


on

Kalki 2898 AD makers served legal notice Kalki Dham Peethadheeshwar Acharya Pramod Krishnam
Koo

ಬೆಂಗಳೂರು: ಮಾಜಿ ಕಾಂಗ್ರೆಸ್ ನಾಯಕ ಮತ್ತು ಕಲ್ಕಿಧಾಮ ಪೀಠಾಧೀಶ್ವರ ಆಚಾರ್ಯ ಪ್ರಮೋದ್ ಕೃಷ್ಣಂ ಅವರು ಹಿಂದೂ ಧಾರ್ಮಿಕ (Kalki 2898 AD) ಭಾವನೆಗಳಿಗೆ ಧಕ್ಕೆ ತಂದಿದ್ದಾರೆ ಎಂದು ಆರೋಪಿಸಿ ಬ್ಲಾಕ್ ಬಸ್ಟರ್ ಚಿತ್ರ ಕಲ್ಕಿ 2898 ಚಿತ್ರದ ನಿರ್ಮಾಪಕರು ಮತ್ತು ನಟರಿಗೆ ಲೀಗಲ್ ನೋಟಿಸ್ ಕಳುಹಿಸಿದ್ದಾರೆ. ಚಿತ್ರದಲ್ಲಿ ದೇವರನ್ನು ತಪ್ಪಾಗಿ ಚಿತ್ರಿಸಲಾಗಿದೆ ಮತ್ತು ಹಿಂದೂ ಪುರಾಣಗಳಿಗಿಂತ ವಿಭಿನ್ನವಾಗಿ ಚಿತ್ರಿಸಲಾಗಿದೆ ಎಂದು ಆರೋಪಿಸಿದ್ದಾರೆ.

ʻʻ”ನಿಮ್ಮ ಚಲನಚಿತ್ರವು ಭಗವಾನ್ ಕಲ್ಕಿಯ ಪರಿಕಲ್ಪನೆಯನ್ನು ಬದಲಾಯಿಸಿರುವಂತೆ ಇದೆ, ಹಿಂದೂ ಪುರಾಣ ಗ್ರಂಥಗಳಲ್ಲಿ ಬರೆದ ಮತ್ತು ವಿವರಿಸಿದ ಕಾರಣಗಳಿಗಾಗಿ, ಭಗವಾನ್ ಕಲ್ಕಿಯ ಕಥೆಯ ಚಿತ್ರಣ ಮತ್ತು ಚಿತ್ರಣವು ಸಂಪೂರ್ಣವಾಗಿ ತಪ್ಪಾಗಿದೆ. ಹಾಗಾಗಿ ಈ ಪವಿತ್ರ ಗ್ರಂಥಗಳಿಗೆ ಅಗೌರವವಾಗಿದೆ. ಕಲ್ಕಿಯ ಕಥೆಯನ್ನು ಸಂಪೂರ್ಣವಾಗಿ ತಪ್ಪಾಗಿ ನಿರೂಪಿಸಲಾಗಿದೆ. ಇದು ಪವಿತ್ರ ಗ್ರಂಥಗಳಿಗೆ ಅಪಮಾನ ಮಾಡಿದಂತಾಗುತ್ತದೆ.” ಎಂದು ನೋಟಿಸ್ ನೀಡಿದ್ದಾರೆ.

ಆಚಾರ್ಯ ಪ್ರಮೋದ್ ಕೃಷ್ಣಂ ಈ ಬಗ್ಗೆ ಮಾತನಾಡಿ “ಕಲ್ಕಿ ಅವತಾರವು ವಿಷ್ಣುವಿನ ಕೊನೆಯ ಅವತಾರವಾಗಿದೆ. ನಮ್ಮ ಹಲವಾರು ‘ಪುರಾಣ’ಗಳು ಆತನಿಗೆ ಸಮರ್ಪಿತವಾಗಿವೆ. ಪ್ರಧಾನಿ ಮೋದಿ ಅವರು ಫೆಬ್ರವರಿ 19 ರಂದು ಯುಪಿಯ ಸಂಭಾಲ್‌ನಲ್ಲಿ ಶ್ರೀ ಕಲ್ಕಿ ಧಾಮ್ ದೇವಾಲಯದ ಉದ್ಘಾಟನೆ ಮಾಡಿದರು. ಅಲ್ಲಿ ಭಗವಾನ್ ಕಲ್ಕಿ ಜನಿಸಲಿದ್ದಾರೆ. ಇಡೀ ಜಗತ್ತು ಅವನಿಗಾಗಿ ಕಾಯುತ್ತಿದೆ. ಆದರೆ ಈ ಚಿತ್ರವು ಜನರಿಗೆ ತಪ್ಪು ಸಂದೇಶವನ್ನು ನೀಡುತ್ತಿದೆʼʼಎಂದು ಎಂದು ಮಾಜಿ ಕಾಂಗ್ರೆಸ್ ನಾಯಕ ಹೇಳಿಕೆ ನೀಡಿದರು. ಆಚಾರ್ಯ ಪ್ರಮೋದ್ ಕೃಷ್ಣಂ ಪರವಾಗಿ ಸುಪ್ರೀಂ ಕೋರ್ಟ್ ವಕೀಲ ಉಜ್ಜವಲ್ ಆನಂದ್ ಶರ್ಮಾ ಅವರು ನೋಟಿಸ್ ನೀಡಿದ್ದಾರೆ.

ಇದನ್ನೂ ಓದಿ: Kalki 2898 AD: ನೀವಿಲ್ಲದೆ ನಾನು ಶೂನ್ಯ ಎಂದು ಅಭಿಮಾನಿಗಳಿಗೆ ಧನ್ಯವಾದ ಹೇಳಿದ ನಟ ಪ್ರಭಾಸ್‌!

ನಾಗ್ ಅಶ್ವಿನ್ ಅವರು ‘ಕಲ್ಕಿ 2898 ಎಡಿ’ ಚಿತ್ರವನ್ನು ನಿರ್ದೇಶನ ಮಾಡಿದ್ದಾರೆ. 2ಡಿ ಜೊತೆಗೆ 3ಡಿಯಲ್ಲೂ ಸಿನಿಮಾ ವೀಕ್ಷಣೆಗೆ ಲಭ್ಯವಿದೆ. ಈ ಚಿತ್ರದ ಬಜೆಟ್ 600 ಕೋಟಿ ರೂಪಾಯಿ ಎನ್ನಲಾಗಿದೆ. ಈ ಕಾರಣದಿಂದಲೇ ಸಿನಿಮಾ ದೊಡ್ಡ ಮೊತ್ತದ ಗಳಿಕೆ ಮಾಡೋ ಅವಶ್ಯಕತೆ ಇತ್ತು. ಸದ್ಯ ಆಗಿರೋ ಗಳಿಕೆಯಿಂದ ನಿರ್ಮಾಪಕರಿಗೆ ಇನ್ನೂ ದೊಡ್ಡ ಲಾಭವೇನು ಆಗಿಲ್ಲ. ‘ಕಲ್ಕಿ 2898 ಎಡಿ’ ಚಿತ್ರ ತೆಲುಗು, ತಮಿಳು, ಮಲಯಾಳಂ, ಕನ್ನಡ, ಹಿಂದಿ ಹಾಗೂ ಇಂಗ್ಲಿಷ್ ಭಾಷೆಗಳಲ್ಲಿ ರಿಲೀಸ್ ಆಗಿದೆ. ವೈಜಯಂತಿ ಮೂವಿಸ್ ಮೂಲಕ ಅಶ್ವಿನಿ ದತ್ ಸಿನಿಮಾ ನಿರ್ಮಾಣ ಮಾಡಿದ್ದಾರೆ.

ಸಲಾರ್’ ನಂತರ ಬಿಡುಗಡೆಯಾದ ಕಲ್ಕಿ ಸಿನಿಮಾ ಮೂಲಕ, ಪ್ರಭಾಸ್ ಚಿತ್ರೋದ್ಯಮದಲ್ಲಿ ಮತ್ತೊಂದು ಹೊಸ ಮೈಲಿಗಲ್ಲು ತಲುಪಿದ್ದಾರೆ. ಗಲ್ಲಾಪೆಟ್ಟಿಗೆಯಲ್ಲಿ ದೊಡ್ಡ ಮಟ್ಟದ ಓಪನಿಂಗ್ ಪ್ರಭಾಸ್‌ ಸಿನಿಮಾಗಳಿಗೆ ಸಿಗುತ್ತಿವೆ. ಇದೀಗ ‘ಕಲ್ಕಿ 2898 AD’ ಸಿನಿಮಾ ಸಹ ಇದಕ್ಕೆ ಹೊರತಾಗಿಲ್ಲ, ಇದು ಭಾರತೀಯ ಚಿತ್ರರಂಗದಲ್ಲಿ ಅವರ ಮೂರನೇ ಅತಿದೊಡ್ಡ ಕಲೆಕ್ಷನ್‌ ಮಾಡಿದ ಸಿನಿಮಾವಾಗಿದೆ.

Continue Reading

ಸಿನಿಮಾ

Tollywood Films: ಹಾಲಿವುಡ್‌ಗೆ ಸೆಡ್ಡು ಹೊಡೆದ ಟಾಲಿವುಡ್‌ನ 4 ಪೌರಾಣಿಕ ಕಥೆಯ ಸಿನೆಮಾಗಳಿವು

ಭಾರತೀಯರು ಹೆಚ್ಚಾಗಿ ಪೌರಾಣಿಕ ಪರಿಕಲ್ಪನೆಗಳನ್ನು ಹೊಂದಿರುವ ಸಿನಿಮಾಗಳನ್ನು ಇಷ್ಟಪಡುತ್ತಾರೆ. ಯಾಕೆಂದರೆ ಅದು ಅವರಿಗೆ ತಮ್ಮ ಹಿರಿಯರ, ತಾವು ಬೆಳೆದು ಬಂದ ದಾರಿಯ ನೆನಪು ಮಾಡಿಕೊಡುತ್ತದೆ. ಪ್ರೇಕ್ಷಕರಿಗೆ ಹೆಚ್ಚು ಇಷ್ಟವಾದ ಕೆಲವು ಟಾಲಿವುಡ್ ಪೌರಾಣಿಕ ಕಥಾ ಹಂದರವನ್ನು ಒಳಗೊಂಡ ಚಿತ್ರಗಳ (Tollywood Films) ಕುರಿತು ಮಾಹಿತಿ ಇಲ್ಲಿದೆ. ನಿಮಗೆ ಅವಕಾಶ ಸಿಕ್ಕಾಗ ನೋಡುವುದನ್ನು ಮಿಸ್ ಮಾಡಿಕೊಳ್ಳಬೇಡಿ.

VISTARANEWS.COM


on

By

Tollywood Films
Koo

ತೆಲುಗು ಚಿತ್ರರಂಗದಲ್ಲಿ (Tollywood Films) ಪೌರಾಣಿಕ ಕಥೆಗಳು (mythological concepts) ತನ್ನದೇ ಆದ ಪ್ರೇಕ್ಷಕ ಬಳಗವನ್ನು ಹೊಂದಿವೆ. ಕೆಲವರಿಗೆ ಥ್ರಿಲರ್, ಇನ್ನು ಕೆಲವರಿಗೆ ಆಕ್ಷ್ಯನ್ ಮತ್ತೆ ಕೆಲವರಿಗೆ ರೋಮ್ಯಾಂಟಿಕ್, ಹಾಸ್ಯ ಚಿತ್ರಗಳು ಇಷ್ಟವಾಗುತ್ತವೆ. ಇವೆಲ್ಲದರ ಸಮ್ಮಿಶ್ರಣದೊಂದಿಗೆ ಮೂಡಿ ಬರುವ ಪೌರಾಣಿಕ ಕಥೆಗಳನ್ನು ಬಹುತೇಕ ಪ್ರೇಕ್ಷಕ ವರ್ಗ ಇಷ್ಟ ಪಡುತ್ತದೆ ಎಂಬುದನ್ನು ಇತ್ತೀಚೆಗೆ ತೆರೆ ಕಂಡಿರುವ ಹಲವು ಚಿತ್ರಗಳು ಸಾಬೀತುಪಡಿಸಿದೆ.

ಭಾರತೀಯರು ಹೆಚ್ಚಾಗಿ ಪೌರಾಣಿಕ ಪರಿಕಲ್ಪನೆಗಳನ್ನು ಹೊಂದಿರುವ ಸಿನಿಮಾಗಳನ್ನು ಇಷ್ಟಪಡುತ್ತಾರೆ. ಯಾಕೆಂದರೆ ಅದು ಅವರಿಗೆ ತಮ್ಮ ಹಿರಿಯರ, ತಾವು ಬೆಳೆದು ಬಂದ ದಾರಿಯ ನೆನಪು ಮಾಡಿಕೊಡುತ್ತದೆ. ಪ್ರೇಕ್ಷಕರಿಗೆ ಹೆಚ್ಚು ಇಷ್ಟವಾದ ಕೆಲವು ಟಾಲಿವುಡ್ ಪೌರಾಣಿಕ ಕಥಾ ಹಂದರವನ್ನು ಒಳಗೊಂಡ ಚಿತ್ರಗಳ ಕುರಿತು ಮಾಹಿತಿ ಇಲ್ಲಿದೆ. ನಿಮಗೆ ಅವಕಾಶ ಸಿಕ್ಕಾಗ ನೋಡುವುದನ್ನು ಮಿಸ್ ಮಾಡಿಕೊಳ್ಳಬೇಡಿ.


ಕಲ್ಕಿ 2898ಎಡಿ

ಸಾಕಷ್ಟು ನಿರೀಕ್ಷೆಗಳನ್ನು ಹೊಂದಿದ್ದ ಪ್ರಭಾಸ್ ಅಭಿನಯದ ಚಿತ್ರ ಕಳೆದ ತಿಂಗಳು ಬಿಡುಗಡೆಯಾಗಿತ್ತು. ಗಲ್ಲಾಪೆಟ್ಟಿಗೆಯ ಕಲೆಕ್ಷನ್‌ಗಳನ್ನು ಗಮನಿಸಿದರೆ ಚಿತ್ರವು ಬಿಡುಗಡೆಯಾದ ಕೆಲವೇ ದಿನಗಳಲ್ಲಿ ಬ್ಲಾಕ್‌ಬಸ್ಟರ್ ಹಿಟ್ ಆಯಿತು. ನಾಗ್ ಅಶ್ವಿನ್ ನಿರ್ದೇಶನದ ಈ ಚಿತ್ರದಲ್ಲಿ ಅಮಿತಾಬ್ ಬಚ್ಚನ್, ದೀಪಿಕಾ ಪಡುಕೋಣೆ, ಕಮಲ್ ಹಾಸನ್ ಮತ್ತು ದಿಶಾ ಪಟಾನಿ ಗಮನಾರ್ಹ ಪಾತ್ರಗಳ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ.


ಹನುಮಾನ್

ಈ ವರ್ಷದ ಆರಂಭದಲ್ಲಿ ಬಿಡುಗಡೆಯಾದ ಹನುಮಾನ್ ಈ ವರ್ಷದ ಅತಿದೊಡ್ಡ ಭಾರತೀಯ ಚಲನಚಿತ್ರಗಳಲ್ಲಿ ಒಂದಾಗಿದೆ. ಚಿತ್ರದಲ್ಲಿ ತೇಜ ಸಜ್ಜ, ಅಮೃತಾ ಅಯ್ಯರ್, ವರಲಕ್ಷ್ಮಿ ಶರತ್‌ಕುಮಾರ್, ಸಮುದ್ರಕಣಿ, ವಿನಯ್ ರೈ ಮತ್ತು ವೆನ್ನೆಲ ಕಿಶೋರ್ ನಟಿಸಿದ್ದಾರೆ. ಪ್ರಶಾಂತ್ ವರ್ಮಾ ಅವರ ನಿರ್ದೇಶನದಲ್ಲಿ ನಿರ್ಮಾಣವಾಗಿರುವ ಈ ಚಿತ್ರ ಭಗವಾನ್ ಹನುಮಾನ್ ಕಥೆಯಿಂದ ಪ್ರೇರಿತವಾಗಿದೆ.


ಅಖಂಡ 2

2021ರ ಸೂಪರ್‌ಹಿಟ್ ಅಖಂಡದ ಮುಂದುವರಿದ ಭಾಗ ಅಖಂಡ 2ನಲ್ಲಿ ನಂದಮೂರಿ ಬಾಲಕೃಷ್ಣ ನಾಯಕನಾಗಿ ನಟಿಸಿದ್ದಾರೆ. ಇನ್ನೂ ಬಿಡುಗಡೆಯಾಗಬೇಕಿರುವ ಈ ಚಿತ್ರವನ್ನು ಅನಿಲ್ ರವಿಪುಡಿ ಅವರು ನಿರ್ದೇಶಿಸುತ್ತಿದ್ದು, ಹರೀಶ್ ಪೆದ್ದಿ ನಿರ್ಮಾಪಕರಾಗಿದ್ದಾರೆ. ಇದು ಎಸ್ ಜೆ ಸೂರ್ಯ, ಜಗಪತಿ ಬಾಬು, ಕಾವ್ಯ ಥಾಪರ್, ಪ್ರಜ್ಞಾ ಜೈಸ್ವಾಲ್ ಮತ್ತು ಇತರರ ಹಲವು ಪ್ರಮುಖ ನಟನಟಿಯರನ್ನು ಒಳಗೊಂಡಿದೆ. ವರದಿಗಳ ಪ್ರಕಾರ ಈ ಚಿತ್ರವು ವರ್ಷಾಂತ್ಯಕ್ಕೆ ಥಿಯೇಟರ್‌ಗಳಿಗೆ ಬರಬಹುದು ಎನ್ನಲಾಗಿದೆ.


ವಿಶ್ವಂಭರ

ಫ್ಯಾಂಟಸಿ ಎಂದು ಡಬ್ ಮಾಡಲಾಗಿರುವ ವಿಶ್ವಂಭರ ಚಿತ್ರ ಕೂಡ ಶೀಘ್ರದಲ್ಲಿ ಬಿಡುಗಡೆಯಾಗಲಿದೆ. ಮೆಗಾಸ್ಟಾರ್ ಚಿರಂಜೀವಿ ಅವರು ದೊರಬಾಬು ಪಾತ್ರದಲ್ಲಿ ಕಾಣಿಕೊಂಡಿದ್ದಾರೆ. ಈ ಚಿತ್ರವನ್ನು ಮಲ್ಲಿಡಿ ವಸಿಷ್ಟ ಅವರು ನಿರ್ದೇಶಿಸುತ್ತಿದ್ದು, ಇವರೇ ಇ6ದರ ಬರಹಗಾರರಾಗಿಯೂ ಗುರುತಿಸಿಕೊಂಡಿದ್ದಾರೆ. ತಾರಾಗಣದಲ್ಲಿ ತ್ರಿಶಾ ಕೃಷ್ಣನ್, ಮೀನಾಕ್ಷಿ ಚೌಧರಿ, ಸುರಭಿ ಪುರಾಣಿಕ್, ಹರ್ಷ ವರ್ಧನ್ ಸೇರಿದಂತೆ ಹಲವರು ಇದ್ದಾರೆ.

ಇದನ್ನೂ ಓದಿ: Bhama Kurup: ಡಿವೋರ್ಸ್‌ ಆದ ಬೆನ್ನಲ್ಲೇ ಹೆಣ್ಣು ಮಕ್ಕಳಿಗೆ ಮದುವೆ ಬೇಕಾ? ಎಂದು ಪೋಸ್ಟ್‌ ಮಾಡಿದ ʻಶೈಲೂʼ ನಟಿ!

ಯುವಿ ಕ್ರಿಯೇಷನ್ಸ್ ಬ್ಯಾನರ್ ಅಡಿಯಲ್ಲಿ ವಿ. ವಂಶಿ ಕೃಷ್ಣಾ ರೆಡ್ಡಿ, ಪ್ರಮೋದ್ ಉಪ್ಪಲಪತಿ ಮತ್ತು ವಿಕ್ರಮ್ ರೆಡ್ಡಿ ನಿರ್ಮಿಸಿದ್ದಾರೆ. ಮುಂದಿನ ವರ್ಷ ಜನವರಿಯಲ್ಲಿ ಚಿತ್ರ ಬಿಡುಗಡೆಯಾಗುವ ನಿರೀಕ್ಷೆಯಿದೆ.

Continue Reading
Advertisement
BJP Protest
ಕರ್ನಾಟಕ2 hours ago

BJP Protest: ಸದನದಲ್ಲಿ ಬಿಜೆಪಿ, ಜೆಡಿಎಸ್ ಅಹೋರಾತ್ರಿ ಧರಣಿ: ಅಲ್ಲೇ ಭಜನೆ, ಊಟ, ನಿದ್ದೆ; ಫೋಟೊ, ವಿಡಿಯೊ ಇಲ್ಲಿವೆ

Nitish Kumar
ದೇಶ2 hours ago

Nitish Kumar: ನೀನೂ ಹೆಣ್ಣು; ವಿಧಾನಸಭೆಯಲ್ಲೇ ಆರ್‌ಜೆಡಿ ಶಾಸಕಿಗೆ ನಿತೀಶ್‌ ಕುಮಾರ್‌ ಗದರಿದ್ದೇಕೆ?

Paris Olympics
ಕ್ರೀಡೆ3 hours ago

Paris Olympics: ಕೊಕೊ ಗಾಫ್ ಅಮೆರಿಕದ ಧ್ವಜಧಾರಿ; ಈ ಗೌರವ ಪಡೆದ ಅತಿ ಕಿರಿಯ ಕ್ರೀಡಾಪಟು

Anekal
ಕ್ರೈಂ4 hours ago

ಆನೇಕಲ್‌ನಲ್ಲಿ ಪುರಸಭೆ ಸದಸ್ಯನ ಬರ್ಬರ ಹತ್ಯೆ; ಮಾರಕಾಸ್ತ್ರಗಳಿಂದ ಮನಬಂದಂತೆ ಕೊಚ್ಚಿ ಕೊಲೆ

Hardik Pandya
ಕ್ರೀಡೆ4 hours ago

Hardik Pandya: ವಿಚ್ಛೇದನ ನೀಡಿ ಒಂದು ವಾರ ಕಳೆಯುವ ಮುನ್ನವೇ ಮಾಜಿ ಪತ್ನಿಯ ಪೋಸ್ಟ್​ಗೆ ಲೈಕ್ಸ್​, ಕಮೆಂಟ್​ ಮಾಡಿದ ಹಾರ್ದಿಕ್​ ಪಾಂಡ್ಯ

King Chopper
ದೇಶ4 hours ago

Sea King Chopper: ಸಾವಿನ ದವಡೆಯಲ್ಲಿದ್ದ ಚೀನಾ ನಾವಿಕನನ್ನು ರಕ್ಷಿಸಿದ ಭಾರತೀಯ ನೌಕಾಪಡೆ; ಮಾನವೀಯತೆಗೆ ಮೆಚ್ಚುಗೆ

ahoratri dharani until the guilts are punished says Opposition party Leader R Ashok
ಕರ್ನಾಟಕ4 hours ago

R Ashok: ಹಗರಣಕೋರರಿಗೆ ಶಿಕ್ಷೆಯಾಗುವವರೆಗೂ ಅಹೋರಾತ್ರಿ ಧರಣಿ; ಆರ್. ಅಶೋಕ್‌ ಘೋಷಣೆ

Traffic Restrictions
ಬೆಂಗಳೂರು5 hours ago

Traffic Restrictions: ವೈಟ್ ಟಾಪಿಂಗ್ ಕಾಮಗಾರಿ; ನಾಳೆಯಿಂದ ರಾಜಾಜಿನಗರದ ಈ ಮಾರ್ಗದಲ್ಲಿ ಸಂಚಾರ ನಿಷೇಧ

Mohammed Shami
ಕ್ರೀಡೆ5 hours ago

Mohammed Shami: 19ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆಗೆ ಯತ್ನಿಸಿದ್ದ ಮೊಹಮ್ಮದ್ ಶಮಿ; ತಡೆದು ನಿಲ್ಲಿಸಿದ್ದು ಯಾರು?

KP Poorchandra Tejaswi samagra kruthi Jagattu 14 samputagalu Lokarpane On July 29 in Bengaluru
ಬೆಂಗಳೂರು5 hours ago

Book Release: ಜು.29ರಂದು ಬೆಂಗಳೂರಿನಲ್ಲಿ 14 ಸಂಪುಟಗಳ ಪೂರ್ಣಚಂದ್ರ ತೇಜಸ್ವಿ ಕೃತಿ ಲೋಕಾರ್ಪಣೆ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Weather Forecast
ಮಳೆ19 hours ago

Karnataka Weather : ರಭಸವಾಗಿ ಸುರಿಯುವ ಮಳೆ; 50 ಕಿ.ಮೀ ವೇಗದಲ್ಲಿ ಬೀಸುತ್ತೆ ಗಾಳಿ

karnataka weather Forecast
ಮಳೆ1 day ago

Karnataka Weather : ರಾಜ್ಯದಲ್ಲಿ ಮುಂದುವರಿದ ಮಳೆ ಅವಾಂತರ; ನಾಳೆಯೂ ಇರಲಿದೆ ಅಬ್ಬರ

Udupi News
ಉಡುಪಿ1 day ago

Udupi News : ಹಳೆ ಲಾರಿ ಚಾಸ್ಸಿಯಲ್ಲೇ ಕಿರು ಸೇತುವೆ ನಿರ್ಮಾಣ! ಬೈಂದೂರು ಶಾಸಕರ ಪರಿಕಲ್ಪನೆಗೆ ಜನರು ಫಿದಾ

murder case
ರಾಮನಗರ2 days ago

Murder Case : ರಾಮನಗರದಲ್ಲೊಂದು ಪೈಶಾಚಿಕ ಕೃತ್ಯ; ಅತ್ಯಾಚಾರವೆಸಗಿ 4 ವರ್ಷದ ಬಾಲಕಿಯನ್ನು ಕೊಂದ ದುಷ್ಟ

karnataka Rain
ಮಳೆ5 days ago

Karnataka Rain : ಭಾರಿ ಮಳೆಗೆ ಮನೆ ಗೋಡೆ ಕುಸಿತ; ಕೊಟ್ಟಿಗೆಯಲ್ಲಿದ್ದ ಜಾನುವಾರುಗಳು ಸಾವು

karnataka Rain
ಮಳೆ5 days ago

Karnataka Rain : ಹಳ್ಳ ದಾಟಲು ಹೋಗಿ ನೀರುಪಾಲಾದ ಜಾನುವಾರು; ಬಿರುಗಾಳಿಗೆ ಕಳಚಿದ ವಿಂಡ್‌ ಫ್ಯಾನ್‌

karnataka Rain
ಮಳೆ6 days ago

Karnataka Rain : ಬೀದಿಗೆ ತಂದ ರಣಮಳೆ; ಮನೆ ಕುಸಿದು ಬಿದ್ದು 9 ತಿಂಗಳ ಗರ್ಭಿಣಿ ನರಳಾಟ

Karnataka Rain
ಮಳೆ6 days ago

Karnataka Rain : ರಾಜ್ಯದಲ್ಲಿ ಮಳೆಯ ಆರ್ಭಟ; ರಾತ್ರಿ ಕಳೆದು ಬೆಳಗಾಗುವುದರೊಳಗೆ ಕಂದಕ ನಿರ್ಮಾಣ

Karnataka Rain
ಮಳೆ6 days ago

Karnataka Rain : ಭಾರಿ ಮಳೆ ಎಫೆಕ್ಟ್‌; ಉಕ್ಕಿ ಹರಿಯುತ್ತಿದ್ದ ನದಿಯಲ್ಲಿ ಕೊಚ್ಚಿ ಹೋದ ರಾಸು

Uttara Kannada Landslide
ಮಳೆ6 days ago

Uttara Kannada Landslide: ಶಿರೂರು ಗುಡ್ಡ ಕುಸಿತ; ಅಖಾಡಕ್ಕಿಳಿದ ಜಿಯೊಲಾಜಿಕಲ್ ಸರ್ವೆ ಆಫ್ ಇಂಡಿಯಾ ಟೀಂ

ಟ್ರೆಂಡಿಂಗ್‌