Kargil Vijay Diwas 2024: ಗುಂಡುಗಳು ದೇಹ ತೂರಿದ್ದರೂ ಹಿಂದೆ ಸರಿಯದೆ ಶತ್ರುಗಳನ್ನು ಹಿಮ್ಮೆಟ್ಟಿಸಿದರು! - Vistara News

ದೇಶ

Kargil Vijay Diwas 2024: ಗುಂಡುಗಳು ದೇಹ ತೂರಿದ್ದರೂ ಹಿಂದೆ ಸರಿಯದೆ ಶತ್ರುಗಳನ್ನು ಹಿಮ್ಮೆಟ್ಟಿಸಿದರು!

ಸುಮಾರು ಎರಡು ತಿಂಗಳ ಕಾಲ ನಡೆದ ಕಾರ್ಗಿಲ್ ಯುದ್ಧದಲ್ಲಿ ಭಾರತೀಯ ಸೇನೆಯು ಅನೇಕ ವೀರ ಯೋಧರನ್ನು ಕಳೆದುಕೊಂಡಿತ್ತು. ಅವರಲ್ಲಿ ಕೆಲವರ ಹೋರಾಟದ ಕಥೆಗಳು ನಮಗೆ ಸ್ಫೂರ್ತಿ ನೀಡುವಂತಿದೆ ಮಾತ್ರವಲ್ಲ ಕಣ್ಣಂಚು ಒದ್ದೆಯಾಗುವಂತೆ ಮಾಡುತ್ತದೆ. ಅವರಲ್ಲಿ ಈ ಯೋಧರೂ ಸೇರಿದ್ದಾರೆ. ಇವರನ್ನೆಲ್ಲ ಗೌರವಿಸುವ ಸಲುವಾಗಿ ಪ್ರತಿ ವರ್ಷ ಕಾರ್ಗಿಲ್ ವಿಜಯ್ ದಿವಸ್ (Kargil Vijay Diwas 2024) ಅನ್ನು ಆಚರಿಸಲಾಗುತ್ತದೆ. ಕೆಲವು ವೀರ ಯೋಧರ ಕತೆ ಇಲ್ಲಿದೆ.

VISTARANEWS.COM


on

Kargil Vijay Diwas 2024
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಭಾರತೀಯ ಸೈನಿಕರ (Indian army) ಶೌರ್ಯವನ್ನು ಗೌರವಿಸುವ ದಿನವಾದ ಕಾರ್ಗಿಲ್ ವಿಜಯ್ ದಿವಸ್ (Kargil Vijay Diwas 2024) ಅನ್ನು ಪಾಕಿಸ್ತಾನದೊಂದಿಗಿನ (india- pakistan war) 1999ರ ಸಂಘರ್ಷದಲ್ಲಿ ಭಾರತದ ವಿಜಯದ ಸ್ಮರಣಾರ್ಥವಾಗಿ ಜುಲೈ 26ರಂದು ಆಚರಿಸಲಾಗುತ್ತದೆ. ಈ ಯುದ್ಧದಲ್ಲಿ ಭಾರತೀಯ ಸೇನೆಯ 527 ಸೈನಿಕರು ದೇಶಕ್ಕಾಗಿ ತಮ್ಮ ಪ್ರಾಣವನ್ನೇ ಮುಡಿಪಾಗಿಟ್ಟರು.

ಸುಮಾರು ಮೂರು ತಿಂಗಳ ಕಾಲ ನಡೆದ ಯುದ್ಧದಲ್ಲಿ 1999ರ ಜುಲೈ 26ರಂದು ಭಾರತೀಯ ಸೇನೆಯು ಭಾರತದ ಗಡಿ ಭಾಗದಲ್ಲಿ ಪಾಕಿಸ್ತಾನ ಸೇನೆಯು ಆಕ್ರಮಿಸಿಕೊಂಡಿದ್ದ ನೆಲೆಗಳಿಂದ ಹಿಮ್ಮೆಟ್ಟುವಂತೆ ಮಾಡುವಲ್ಲಿ ಯಶಸ್ವಿಯಾಗಿತ್ತು. ಇದು ಭಾರತದ ವಿಜಯವನ್ನು ಸೂಚಿಸುತ್ತದೆ. ಅಂದಿನಿಂದ ಪ್ರತಿ ವರ್ಷ ಕಾರ್ಗಿಲ್ ಯುದ್ಧ ದಿವಸ್ ಅನ್ನು ಆಚರಿಸಲಾಗುತ್ತದೆ. ಯುದ್ಧದ ಸಮಯದಲ್ಲಿ ಸೈನಿಕರು ಮಾಡಿದ ಅತ್ಯುನ್ನತ ತ್ಯಾಗವನ್ನು ಈ ದಿನ ಸ್ಮರಿಸಲಾಗುತ್ತದೆ.

ಭಾರತೀಯ ಸೇನೆಯು ಈ ಯುದ್ಧದಲ್ಲಿ ಅನೇಕ ವೀರ ಯೋಧರನ್ನು ಕಳೆದುಕೊಂಡಿತ್ತು. ಅವರಲ್ಲಿ ಕೆಲವರ ಹೋರಾಟದ ಕಥೆಗಳು ನಮಗೆ ಸ್ಫೂರ್ತಿ ನೀಡುವಂತಿದೆ ಮಾತ್ರವಲ್ಲ ಕಣ್ಣಂಚು ಒದ್ದೆಯಾಗುವಂತೆ ಮಾಡುತ್ತದೆ. ಅವರಲ್ಲಿ ಈ ಯೋಧರೂ ಸೇರಿದ್ದಾರೆ.

Kargil Vijay Diwas 2024
Kargil Vijay Diwas 2024


ಮೇಜರ್ ರಾಜೇಶ್ ಸಿಂಗ್ ಅಧಿಕಾರಿ

1970ರ ಡಿಸೆಂಬರ್ ನಲ್ಲಿ ಉತ್ತರಾಖಂಡದ ನೈನಿತಾಲ್ ನಲ್ಲಿ ಕೆ ಎಸ್ ಅಧಿಕಾರಿ ಮತ್ತು ಮಾಲ್ತಿ ಅಧಿಕಾರಿ ದಂಪತಿಯ ಮಗನಾಗಿ ಜನಿಸಿದ ರಾಜೇಶ್ ಸಿಂಗ್ ಭಾರತದ ಮಿಲಿಟರಿ ಅಕಾಡೆಮಿಯಾದ ಇಂಡಿಯನ್ ಮಿಲಿಟರಿ ಅಕಾಡೆಮಿಯಲ್ಲಿ ವ್ಯಾಸಂಗ ಮಾಡಿದರು. 1993ರ ಡಿಸೆಂಬರ್ 11ರಂದು ಇಂಡಿಯನ್ ಮಿಲಿಟರಿ ಅಕಾಡೆಮಿಯಿಂದ ಭಾರತೀಯ ಸೇನೆಗೆ ಅವರನ್ನು ನಿಯೋಜಿಸಲಾಯಿತು. ಭಾರತೀಯ ಸೇನೆಯ ಪದಾತಿ ದಳದಲ್ಲಿ ಇದ್ದ ಅವರನ್ನು ಕಾರ್ಗಿಲ್ ಯುದ್ಧದ ಸಮಯದಲ್ಲಿ 18 ಗ್ರೆನೇಡಿಯರ್ಸ್‌ನಲ್ಲಿ ನಿಯೋಜಿಸಲಾಗಿತ್ತು.


1999ರ ಮೇ 30ರಂದು ಟೊಲೊಲಿಂಗ್ ಅನ್ನು ವಶಪಡಿಸಿಕೊಳ್ಳಲು ತೆರಳಿದರು. ಶತ್ರುಗಳು ಬಲವಾದ ನೆಲೆ ಹೊಂದಿದ್ದ ಫಾರ್ವರ್ಡ್ ಸ್ಪರ್ ಅನ್ನು ವಶಪಡಿಸಿಕೊಳ್ಳುವ ಮೂಲಕ ಆರಂಭಿಕ ನೆಲೆಯನ್ನು ಭದ್ರಪಡಿಸುವ ಕಾರ್ಯವನ್ನು ವಹಿಸಿಕೊಂಡ ಅವರ ಸೈನ್ಯವು ಸುಮಾರು 15,000 ಅಡಿ ಎತ್ತರದಲ್ಲಿದ್ದ ಶತ್ರುಗಳನ್ನು ತಮ್ಮ ಸ್ಥಾನದಿಂದ ಹಿಮ್ಮೆಟ್ಟುವಂತೆ ಮಾಡುವಲ್ಲಿ ಯಶಸ್ವಿಯಾಯಿತು. ಹಿಮದಿಂದ ಆವೃತವಾದ ಕಠಿಣ ಪರ್ವತ ಭೂಪ್ರದೇಶದಲ್ಲಿ ನಡೆದ ಯುದ್ಧದಲ್ಲಿ ಇಬ್ಬರು ಶತ್ರು ಸಿಬ್ಬಂದಿಯನ್ನು ಕೊಂದರು.

ಹೋರಾಟದ ಸಮಯದಲ್ಲಿ ತೀವ್ರವಾಗಿ ಗಾಯಗೊಂಡರೂ ಅವರು ತಮ್ಮ ಉಪ ಘಟಕಗಳಿಗೆ ನಿರ್ದೇಶನ ನೀಡುವುದನ್ನು ಮುಂದುವರೆಸಿದರು. ಟೊಲೊಲಿಂಗ್‌ನಲ್ಲಿ ಎರಡನೇ ನೆಲೆಯನ್ನು ವಶಪಡಿಸಿಕೊಂಡ ಅನಂತರ ಪಾಯಿಂಟ್ 4590 ಅನ್ನು ವಶಪಡಿಸಿಕೊಂಡರು. ಆದರೆ ರಾಜೇಶ್ ಸಿಂಗ್ ಶತ್ರುಗಳ ದಾಳಿಯಿಂದ ಮೃತಪಟ್ಟರು. ಅವರಿಗೆ ಮರಣೋತ್ತರವಾಗಿ ಮಹಾವೀರ ಚಕ್ರವನ್ನು ನೀಡಲಾಯಿತು.

Kargil Vijay Diwas 2024
Kargil Vijay Diwas 2024


ರೈಫಲ್‌ಮ್ಯಾನ್ ಸಂಜಯ್ ಕುಮಾರ್

1976ರ ಮಾರ್ಚ್ ನಲ್ಲಿ ಹಿಮಾಚಲ ಪ್ರದೇಶದ ಬಿಲಾಸ್ಪುರ್ ಜಿಲ್ಲೆಯ ಕಲೋಲ್ ಬಕೈನ್ ನಲ್ಲಿ ದುರ್ಗಾ ರಾಮ್ ಮತ್ತು ಭಾಗ್ ದೇವಿ ದಂಪತಿಯ ಮಗನಾಗಿ ಜನಿಸಿದ ಸಂಜಯ್ ಕುಮಾರ್ ಅವರನ್ನು 1999ರ ಜುಲೈ 4ರಂದು ಮುಷ್ಕೊಹ್ ಕಣಿವೆಯಲ್ಲಿ ಪಾಯಿಂಟ್ 4875ರ ಫ್ಲಾಟ್ ಟಾಪ್ ಪ್ರದೇಶವನ್ನು ವಶಪಡಿಸಿಕೊಳ್ಳಲು ನಿಯೋಜಿಸಲಾಯಿತು.

ಈ ದಾಳಿಯಲ್ಲಿ ಪ್ರಮುಖ ಪಾತ್ರವಹಿಸಿದ್ದ ಅವರು ಶತ್ರುಗಳ ದಾಳಿಗೆ ತೀವ್ರ ಪ್ರತಿರೋಧವನ್ನು ತೋರಿದರು. ಪರಿಸ್ಥಿತಿಯ ಗಂಭೀರತೆಯನ್ನು ಅರಿತುಕೊಂಡು ನಿಷ್ಕಪಟ ಧೈರ್ಯವನ್ನು ತೋರಿಸಿದ ಸಂಜಯ್ ಕುಮಾರ್ ತಮ್ಮ ಸುರಕ್ಷತೆಯನ್ನು ಸಂಪೂರ್ಣವಾಗಿ ಮರೆತು ಹೋರಾಡಿದರು. ಶತ್ರು ಪಡೆಯ ಮೂವರನ್ನು ಕೊಂದು ಹಾಕಿದರು.


ಗಂಭೀರವಾಗಿ ಗಾಯಗೊಂಡರೂ ಅವರು ಯುದ್ಧ ಭೂಮಿಯಿಂದ ಹಿಂದೆ ಸರಿಯಲಿಲ್ಲ. ಯುದ್ಧವನ್ನು ಮುನ್ನಡೆಸಿ ಶತ್ರುಗಳು ಆಶ್ಚರ್ಯಚಕಿತರಾಗುವಂತೆ ಮಾಡಿದರು. ತಮ್ಮ ಒಡನಾಡಿಗಳಿಗೆ ಯುದ್ಧದಲ್ಲಿ ಮುನ್ನಡೆಯಲು ಪ್ರೇರೇಪಿಸಿದರು. ಯುದ್ಧ ಮುಗಿದ ಬಳಿಕ ಅವರಿಗೆ ಭಾರತದ ಅತ್ಯುನ್ನತ ಮಿಲಿಟರಿ ಗೌರವವಾದ ಪರಮವೀರ ಚಕ್ರವನ್ನು ನೀಡಲಾಯಿತು.

Kargil Vijay Diwas 2024
Kargil Vijay Diwas 2024


ಮೇಜರ್ ವಿವೇಕ್ ಗುಪ್ತಾ

ಉತ್ತರಾಖಂಡ್‌ನ ಡೆಹರಾಡೂನ್‌ನಲ್ಲಿ 1970ರ ಜನವರಿ 2ರಂದು ಲೆಫ್ಟಿನೆಂಟ್ ಕರ್ನಲ್ ಬಿಆರ್ ಎಸ್ ಗುಪ್ತಾ ಅವರ ಮಗನಾಗಿ ಜನಿಸಿದ ವಿವೇಕ್ ಗುಪ್ತಾ ಪದವಿಯ ಅನಂತರ ನ್ಯಾಷನಲ್ ಡಿಫೆನ್ಸ್ ಅಕಾಡೆಮಿ ಮತ್ತು ಇಂಡಿಯನ್ ಮಿಲಿಟರಿ ಅಕಾಡೆಮಿಗೆ ಸೇರಿದರು. 1992ರ ಜೂನ್ 13ರಂದು, ಕೆಚ್ಚೆದೆಯ ಯೋಧರಿಗೆ ಹೆಸರುವಾಸಿಯಾದ ಪದಾತಿದಳದ ರೆಜಿಮೆಂಟ್ ರಜಪೂತಾನ ರೈಫಲ್ಸ್ ರೆಜಿಮೆಂಟ್‌ಗೆ ಅವರನ್ನು ನಿಯೋಜಿಸಲಾಯಿತು.

1997ರಲ್ಲಿ ಮೇಜರ್ ವಿವೇಕ್ ಅವರು ಸೇನಾ ಅಧಿಕಾರಿ ಕ್ಯಾಪ್ಟನ್ ರಾಜಶ್ರೀ ಬಿಷ್ಟ್ ಅವರನ್ನು ವಿವಾಹವಾದರು. 1999ರಲ್ಲಿ ಅವರು ಕಾರ್ಗಿಲ್ ಯುದ್ಧದಲ್ಲಿ ಅವರು ಪ್ರಮುಖ ಚಾರ್ಲಿ ಕಂಪನಿಯ ಕಮಾಂಡ್ ಆಗಿದ್ದರು. 2 ರಜಪೂತಾನ ರೈಫಲ್ಸ್ ಡ್ರಾಸ್ ಸೆಕ್ಟರ್‌ನಲ್ಲಿ ಟೋಲೋಲಿಂಗ್ ಟಾಪ್ ಮೇಲೆ ಬೆಟಾಲಿಯನ್ ದಾಳಿಯನ್ನು ಇವರ ನೇತೃತ್ವದಲ್ಲಿ ಪ್ರಾರಂಭಿಸಿತು.

ಮೇಜರ್ ವಿವೇಕ್ ಗುಪ್ತಾ ಅವರ ನಾಯಕತ್ವದಲ್ಲಿ ಶತ್ರು ಪಡೆಯ ಭಾರೀ ಫಿರಂಗಿ ಮತ್ತು ಸ್ವಯಂಚಾಲಿತ ಗುಂಡಿನ ದಾಳಿಯ ನಡುವೆಯೂ ಶತ್ರುಗಳನ್ನು ಹಿಮ್ಮೆಟ್ಟಿಸುವಲ್ಲಿ ಯಶಸ್ಸು ಸಾಧಿಸಲಾಯಿತು. ಚಾರ್ಲಿ ಕಂಪನಿಯ ಪ್ರಮುಖ ವಿಭಾಗದ ಮೂವರು ಸಿಬ್ಬಂದಿಗೆ ಬಲವಾದ ಗುಂಡೇಟು ಬಿದ್ದ ಪರಿಣಾಮ ದಾಳಿಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಯಿತು. ಬಯಲು ಪ್ರದೇಶದಲ್ಲಿ ಹೀಗೆಯೇ ಮುಂದುವರಿದರೆ ಹೆಚ್ಚು ನಷ್ಟವಾಗುತ್ತದೆ ಎಂದು ತಿಳಿದ ತಕ್ಷಣವೇ ವಿವೇಕ್ ಗುಪ್ತಾ ರಾಕೆಟ್ ಲಾಂಚರ್ ಅನ್ನು ಶತ್ರುಸ್ಥಾನದತ್ತ ಹಾರಿಸಿದರು. ಆಘಾತಕ್ಕೊಳಗಾದ ಶತ್ರುಗಳು ಚೇತರಿಸಿಕೊಳ್ಳುವ ಮೊದಲು ಅವರು ಶತ್ರು ನೆಲೆಯ ಮೇಲೆ ಪ್ರಭುತ್ವ ಸ್ಥಾಪಿಸಿದರು. ಈ ವೇಳೆ ಎರಡು ಗುಂಡು ದೇಹವನ್ನು ತೂರಿ ಗಾಯಗೊಂಡರೂ ಮೂವರು ಶತ್ರು ಸೈನಿಕರನ್ನು ಕೊಲ್ಲುವಲ್ಲಿ ಯಶಸ್ವಿಯಾದರು.


ಇದನ್ನೂ ಓದಿ: Kargil Vijay Diwas 2024: ಕಾರ್ಗಿಲ್ ಯುದ್ಧದಲ್ಲಿ ತತ್ತರಿಸಿದ ಪಾಕಿಗಳು; ಈ ನಾಲ್ವರು ಯೋಧರ ಸಾಹಸ ರೋಚಕ!

ಇವರಿಂದ ಸ್ಫೂರ್ತಿ ಪಡೆದ ಕಂಪೆನಿಯ ಉಳಿದವರು ಶತ್ರುಗಳ ನೆಲೆಯ ಮೇಲೆ ದಾಳಿ ನಿರಂತರ ನಡೆಸಿ ವಶಪಡಿಸಿಕೊಂಡರು. ಯುದ್ಧದ ಸಮಯದಲ್ಲಿ ಶೌರ್ಯದಿಂದ ಹೋರಾಡಿದ್ದ ಕ್ಯಾ. ವಿವೇಕ್ ಗುಪ್ತಾ ಬಲಿಯಾದರು. ಅವರ ಸ್ಫೂರ್ತಿದಾಯಕ ನಾಯಕತ್ವ ಮತ್ತು ಶೌರ್ಯವು ಅಂತಿಮವಾಗಿ ಟೋಲೋಲಿಂಗ್ ಟಾಪ್ ಅನ್ನು ವಶಪಡಿಸಿಕೊಳ್ಳಲು ಭಾರತೀಯ ಸೇನೆಗೆ ಸಾಧ್ಯವಾಯಿತು. ಅವರಿಗೆ ಮರಣೋತ್ತರವಾಗಿ ಭಾರತದ ಎರಡನೇ ಅತ್ಯುನ್ನತ ಮಿಲಿಟರಿ ಗೌರವವಾದ ಮಹಾವೀರ ಚಕ್ರವನ್ನು ನೀಡಲಾಯಿತು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Kargil Vijay Diwas 2024: “ಪಾಕಿಸ್ತಾನ ತಪ್ಪುಗಳಿಂದ ಪಾಠ ಕಲಿತಿಲ್ಲ”; ಪ್ರಧಾನಿ ಮೋದಿ ಟಾಂಗ್‌

Kargil Vijay Diwas 2024: ಭಯೋತ್ಪಾದನೆ ಮೂಲಕ ಭಾರತವನ್ನು ಗೆಲ್ಲುವ ಪಾಕಿಸ್ತಾನದ ಉದ್ದೇಶ ಎಂದಿಗೂ ಯಶಸ್ವಿ ಆಗುವುದಿಲ್ಲ ಎಂದು ಖಡಕ್‌ ವಾರ್ನಿಂಗ್‌ ಕೊಟ್ಟಿದ್ದಾರೆ. ಇನ್ನು ಇದೇ ವೇಳ ಅಗ್ನಿಪಥ್‌ ಯೋಜನೆ ಬಗ್ಗೆ ಪ್ರತಿಕ್ರಿಯಿಸಿದ್ದು, ಸೇನೆಯ ಈ ಸುಧಾರಣೆಯಲ್ಲೂ ಕೆಲವರು ತಮ್ಮ ವೈಯಕ್ತಿಕ ಲಾಭಕ್ಕಾಗಿ ಸುಳ್ಳಿನ ರಾಜಕಾರಣ ಮಾಡುತ್ತಿದ್ದಾರೆ ಎಂದು ಅವರು ವಿರೋಧ ಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸಿದರು.

VISTARANEWS.COM


on

Kargil Vijay Diwas 2024
Koo

ಲಡಾಖ್‌: ಕಾರ್ಗಿಲ್‌ ವಿಜಯ ದಿವಸ(Kargil Vijay Diwas 2024)ಕ್ಕೆ ಇಂದಿಗೆ 25ವರ್ಷ ಸಂದಿದೆ. ಈ ಹಿನ್ನೆಲೆ ಪ್ರಧಾನಿ ನರೇಂದ್ರ ಮೋದಿ ಡ್ರಾಸ್‌ನಲ್ಲಿರುವ ಕಾರ್ಗಿಲ್‌ ಯುದ್ಧ ಸ್ಮಾರಕ(Kargil War Memorial)ಕ್ಕೆ ಭೇಟಿ ಕೊಟ್ಟು ಹುತಾತ್ಮ ಯೋಧರಿಗೆ ಗೌರವ ನಮನ ಸಲ್ಲಿಸಿದ್ದಾರೆ. ಇದೇ ವೇಳೆ ಮಾತನಾಡಿದ ಅವರು, ಕಳೆದ ಯುದ್ಧಗಳಲ್ಲಿ ಸೋಲುಂಡಿದ್ದರೂ ಬುದ್ದಿ ಬಾರದ ಪಾಕಿಸ್ತಾನ ಭಯೋತ್ಪಾದನೆಗೆ ಉತ್ತೇಜನ ನೀಡುತ್ತಿದೆ. ಇದುವರೆಗೆ ಪಾಕಿಸ್ತಾನ ತನ್ನ ತಪ್ಪಿನ ಪಾಠ ಕಲಿತಿಲ್ಲ ಎಂದು ಗುಡುಗಿದ್ದಾರೆ.

ಭಯೋತ್ಪಾದನೆ ಮೂಲಕ ಭಾರತವನ್ನು ಗೆಲ್ಲುವ ಪಾಕಿಸ್ತಾನದ ಉದ್ದೇಶ ಎಂದಿಗೂ ಯಶಸ್ವಿ ಆಗುವುದಿಲ್ಲ ಎಂದು ಖಡಕ್‌ ವಾರ್ನಿಂಗ್‌ ಕೊಟ್ಟಿದ್ದಾರೆ. ಇನ್ನು ಇದೇ ವೇಳ ಅಗ್ನಿಪಥ್‌ ಯೋಜನೆ ಬಗ್ಗೆ ಪ್ರತಿಕ್ರಿಯಿಸಿದ್ದು, ಸೇನೆಯ ಈ ಸುಧಾರಣೆಯಲ್ಲೂ ಕೆಲವರು ತಮ್ಮ ವೈಯಕ್ತಿಕ ಲಾಭಕ್ಕಾಗಿ ಸುಳ್ಳಿನ ರಾಜಕಾರಣ ಮಾಡುತ್ತಿದ್ದಾರೆ ಎಂದು ಅವರು ವಿರೋಧ ಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸಿದರು.

ಅಗ್ನಿಪಥ್‌ ಯೋಜನೆ ಬಗ್ಗೆ ಆರೋಪಕ್ಕೆ ಪ್ರಧಾನಿ ತಿರುಗೇಟು

ಸೈನ್ಯವನ್ನು ನಿರಂತರವಾಗಿ ಯುದ್ಧಕ್ಕೆ ಸಜ್ಜುಗೊಳಿಸುವುದು ಅಗ್ನಿಪಥ್‌ನ ಗುರಿಯಾಗಿದೆ. ದುರದೃಷ್ಟವಶಾತ್, ಕೆಲವರು ರಾಷ್ಟ್ರೀಯ ಭದ್ರತೆಗೆ ಸಂಬಂಧಿಸಿದ ಇಂತಹ ಸೂಕ್ಷ್ಮ ವಿಷಯವನ್ನು ರಾಜಕೀಯದ ವಿಷಯವನ್ನಾಗಿ ಮಾಡಿದ್ದಾರೆ. ಸೇನೆಯ ಈ ಸುಧಾರಣೆಯಲ್ಲೂ ಕೆಲವರು ತಮ್ಮ ವೈಯಕ್ತಿಕ ಲಾಭಕ್ಕಾಗಿ ಸುಳ್ಳಿನ ರಾಜಕಾರಣ ಮಾಡುತ್ತಿದ್ದಾರೆ. ಸೇನೆಯಲ್ಲಿ ಸಾವಿರಾರು ಕೋಟಿ ಹಗರಣಗಳನ್ನು ಮಾಡಿ ನಮ್ಮ ಸೇನೆಯನ್ನು ದುರ್ಬಲಗೊಳಿಸಿದ್ದು ಇದೇ ಜನರು ಎಂದು ಕಿಡಿ ಕಾರಿದರು.

ಇದನ್ನೂ ಓದಿ: Kargil Vijay Diwas 2024: ದೇಶಕ್ಕಾಗಿ ಪ್ರಾಣ ತ್ಯಾಗ ಮಾಡಲು ಕ್ಷಣವೂ ಯೋಚಿಸದ ಈ ವೀರ ಯೋಧರಿಗೊಂದು ಸಲಾಮ್

Continue Reading

ಬಾಲಿವುಡ್

Salman Khan: ಸಲ್ಮಾನ್ ಖಾನ್‌ ಹೆದರುವ ರೀತಿಯಲ್ಲಿ ಗುಂಡಿನ ದಾಳಿ ಆಗಬೇಕು ಎಂದು ಶೂಟರ್‌ಗಳಿಗೆ ಸ್ಫೂರ್ತಿ ತುಂಬಿದ್ದ ಬಿಷ್ಣೋಯಿ!

Salman Khan : ಎಪ್ರಿಲ್‌ 14ರಂದು ಮುಂಬೈಯ ಬಾಂದ್ರಾದಲ್ಲಿರುವ ಸಲ್ಮಾನ್ ಖಾನ್ ಅವರ ಮನೆಯ ಹೊರಗೆ ಗುಂಡಿನ ದಾಳಿ ನಡೆದಿತ್ತು. ಬೈಕ್‌ನಲ್ಲಿ ಬಂದು ದಾಳಿ ನಡೆಸಿದ್ದ ಶೂಟರ್‌ಗಳಾದ ಸಾಗರ್‌ ಪಾಲ್‌ ಮತ್ತು ವಿಕ್ಕಿ ಗುಪ್ತಾ ಎಂಬ ಇಬ್ಬರು ದುಷ್ಕರ್ಮಿಗಳನ್ನು ಬಳಿಕ ಅರೆಸ್ಟ್‌ ಮಾಡಲಾಗಿತ್ತು. ಮುಂಬೈ ಪೊಲೀಸರು ಜೈಲಿನಲ್ಲಿರುವ ಗ್ಯಾಂಗ್​ಸ್ಟರ್ ಲಾರೆನ್ಸ್ ಬಿಷ್ಣೋಯ್ ಮತ್ತು ಅವನ ಕಿರಿಯ ಸಹೋದರ ಅನ್ಮೋಲ್ ಬಿಷ್ಣೋಯ್ ಅವರನ್ನು ಈ ಪ್ರಕರಣದ ಪ್ರಮುಖ ಆರೋಪಿಗಳು ಎಂದು ಘೋಷಿಸಿದ್ದರು.

VISTARANEWS.COM


on

Salman Khan House Gangster's 9-Minute Speech To Shooters Before Attack
Koo

ಬೆಂಗಳೂರು: ಎಪ್ರಿಲ್‌ 14ರಂದು ಮುಂಬೈಯ ಬಾಂದ್ರಾದಲ್ಲಿರುವ ಸಲ್ಮಾನ್ ಖಾನ್ (Salman Khan) ಅವರ ಮನೆಯ ಹೊರಗೆ ಗುಂಡಿನ ದಾಳಿ ನಡೆದಿತ್ತು. ಗ್ಯಾಂಗ್​ಸ್ಟರ್ ಲಾರೆನ್ಸ್ ಬಿಷ್ಣೋಯ್ ಮತ್ತು ಅವನ ಕಿರಿಯ ಸಹೋದರ ಅನ್ಮೋಲ್ ಬಿಷ್ಣೋಯ್ ಅವರನ್ನು ಈ ಪ್ರಕರಣದ ಪ್ರಮುಖ ಆರೋಪಿಗಳು ಎಂದು ಘೋಷಿಸಿರುವುದು ಗೊತ್ತೇ ಇದೆ. ಜೈಲಿನಲ್ಲಿರುವ ಅನ್ಮೋಲ್ ಬಿಷ್ಣೋಯ್ ಏಪ್ರಿಲ್‌ನಲ್ಲಿ ಬಾಲಿವುಡ್ ನಟ ಸಲ್ಮಾನ್ ಖಾನ್ ಅವರ ಮುಂಬೈ ಮನೆಯ ಮೇಲೆ ಗುಂಡು ಹಾರಿಸಿದ ಶೂಟರ್‌ಗಳಿಗೆ ಒಂಬತ್ತು ನಿಮಿಷಗಳ ಕಾಲಕ ಸ್ಫೂರ್ತಿದಾಯಕ ಭಾಷಣವನ್ನು ನೀಡಿದ್ದ ಎಂದು ತಿಳಿದು ಬಂದಿದೆ. ಮುಂಬೈ ಪೊಲೀಸರ ಅಪರಾಧ ವಿಭಾಗದ ಚಾರ್ಜ್‌ಶೀಟ್ ಪ್ರಕಾರ, ಅನ್ಮೋಲ್ ಬಿಷ್ಣೋಯ್ ಇಬ್ಬರು ಶೂಟರ್‌ಗಳಾದ ವಿಕ್ಕಿ ಗುಪ್ತಾ ಮತ್ತು ಸಾಗರ್ ಪಾಲ್‌ಗೆ ನಟನ ನಿವಾಸದ ಮೇಲೆ ದಾಳಿ ಮಾಡಿದಾಗ ಇದೊಂದು “ಹಿಸ್ಟರಿ” ಎಂದು ಹೇಳಿದ್ದ.

ಗುಪ್ತಾ ಮತ್ತು ಪಾಲ್ ಎಂಬ ಇಬ್ಬರು ಬೈಕ್‌ನಲ್ಲಿ ಬಂದ ವ್ಯಕ್ತಿಗಳು. ಏಪ್ರಿಲ್ 14ರ ಬೆಳಗ್ಗೆ ಬಾಂದ್ರಾದ ಗ್ಯಾಲಕ್ಸಿ ಅಪಾರ್ಟ್‌ಮೆಂಟ್‌ನಲ್ಲಿರುವ ಸಲ್ಮಾನ್‌ ಖಾನ್ ಅವರ ಮನೆಯ ಹೊರಗೆ ಗುಂಡು ಹಾರಿಸಿದ್ದರು. ಆಡಿಯೊ ನೋಟ್‌ ಮೂಲಕ ಅನ್ಮೋಲ್ ಬಿಷ್ಣೋಯ್ ಇಬ್ಬರೂ ಶೂಟರ್‌ಗಳಿಗೆ ತಮ್ಮ ಜೀವನದ “ಉತ್ತಮ ಕೆಲಸ” ಮಾಡಲಿದ್ದೇವೆ ಎಂದು ಹೇಳಿದರು.

ಮುಂಬೈನ ವಿಶೇಷ ನ್ಯಾಯಾಲಯಕ್ಕೆ ಸಲ್ಲಿಸಿದ 1,735 ಪುಟಗಳ ಚಾರ್ಜ್‌ಶೀಟ್‌ನ ಪ್ರಕಾರ ಅನ್ಮೋಲ್ ಬಿಷ್ಣೋಯ್ ಇಬ್ಬರೂ ಶೂಟರ್‌ಗಳಿಗೆ ಹೇಳಿದ್ದು ಹೀಗೆ. “ಈ ಕೆಲಸವನ್ನು ಚೆನ್ನಾಗಿ ಮಾಡಿ. ಕೆಲಸ ಮುಗಿದ ನಂತರ, ನೀವು ಇತಿಹಾಸ ಪುಟದಲ್ಲಿ ಇರುತ್ತೀರಿʼʼ ಎಂದು ಶೂಟರ್‌ಗಳಿಗೆ ಹೇಳಿದರು. ಮಾತ್ರವಲ್ಲ ಅನ್ಮೋಲ್ ಬಿಷ್ಣೋಯ್, ಗುಪ್ತಾ ಮತ್ತು ಪಾಲ್ ಅವರಿಗೆ ಇದೊಂದು ಧಾರ್ಮಿಕ ಕೆಲಸ ಎಂದು ಪ್ರೋತ್ಸಾಹಿಸಿದ್ದಾರೆ. ಜತೆಗೆ ಈ ಕೆಲಸ ಮಾಡುವಾಗ ಸ್ವಲ್ಪವೂ ಭಯಪಡಬೇಡಿ, ಈ ಕೆಲಸ ಮಾಡುವುದರಿಂದ ಸಮಾಜದಲ್ಲಿ ಬದಲಾವಣೆ ತರಬೇಕು. ಎಂದೂ ಹೇಳಿದ್ದಾನೆ. ನಾವು ಯಾವುದೇ ಕೆಲಸ ಮಾಡಲು ಹೋದಾಗ, ನಾವು ಬಂದೂಕಿನ ಮ್ಯಾಗಜಿನ್ ಅನ್ನು ಖಾಲಿ ಮಾಡುವ ಶೈಲಿಯನ್ನು ಹೊಂದಿರಬೇಕು. ನೀವು ಸಲ್ಮಾನ್ ಖಾನ್ ಅವರ ಮನೆಯಿಂದ ಹೊರಗೆ ಬಂದಾಗ ನೀವು ಮ್ಯಾಗಜಿನ್ ಅನ್ನು ಖಾಲಿ ಮಾಡಿ. ಗುಂಡು ಹಾರಿಸುವುದು ಸಲ್ಮಾನ್ ಖಾನ್‌ಗೆ ಹೆದರಿಕೆ ತರಬೇಕು. ಸಲ್ಮಾನ್ ಖಾನ್‌ಗೆ ಹೆದರುವ ರೀತಿಯಲ್ಲಿ ಗುಂಡಿನ ದಾಳಿ ಆಗಬೇಕುʼʼಎಂದು ಅನ್ಮೋಲ್ ಸಂದೇಶ ನೀಡಿದ್ದ.

ಇದನ್ನೂ ಓದಿ: Actor Yash: ಯಶ್‌ ನಟನೆಯ ʻಟಾಕ್ಸಿಕ್‌ʼ ಸಿನಿಮಾ ವಿರುದ್ಧ ದೂರು ದಾಖಲು

ಬಿಷ್ಣೋಯ್, ವಿಕ್ಕಿ ಗುಪ್ತಾ ಮತ್ತು ಸಾಗರ್ ಪಾಲ್ ಅವರಿಗೆ ಹೆಲ್ಮೆಟ್ ಧರಿಸದೇ ಇರಬೇಕು ಮತ್ತು ನಿರ್ಭೀತರಾಗಿ ಕಾಣಿಸಿಕೊಳ್ಳಲು ಸಿಗರೇಟ್ ಸೇದಲು ಬಾರದೂ ಎಂದು ಹೇಳಿದ್ದನಂತೆ. ಗುಂಡಿನ ದಾಳಿಗೂ ಮುನ್ನ ಅನ್ಮೋಲ್ ಬಿಷ್ಣೋಯ್ ಗುಪ್ತಾ ಮತ್ತು ಪಾಲ್ ಅವರೊಂದಿಗೆ ನಿರಂತರ ಸಂಪರ್ಕದಲ್ಲಿದ್ದರು ಎಂದು ಪೊಲೀಸರು ಹೇಳಿಕೆ ನೀಡಿದ್ದಾರೆ,

ಶೂಟರ್‌ಗಳು ಮತ್ತು ಇತರ ಮೂವರು, ಸೋನುಕುಮಾರ್ ಬಿಷ್ಣೋಯ್, ಮೊಹಮ್ಮದ್ ರಫೀಕ್ ಚೌಧರಿ ಮತ್ತು ಹರ್ಪಾಲ್ ಸಿಂಗ್ ಅವರನ್ನು ಬಂಧಿಸಲಾಗಿದೆ. ಪ್ರಸ್ತುತ ನ್ಯಾಯಾಂಗ ಬಂಧನದಲ್ಲಿದ್ದಾರೆ. ಲಾರೆನ್ಸ್ ಬಿಷ್ಣೋಯ್, ಅನ್ಮೋಲ್ ಮತ್ತು ರಾವತರನ್ ಬಿಷ್ಣೋಯ್ ಆರೋಪಪಟ್ಟಿಯಲ್ಲಿ ಬೇಕಾಗಿರುವ ಆರೋಪಿಗಳಾಗಿದ್ದಾರೆ.

ಏನಿದು ಪ್ರಕರಣ?

ಎಪ್ರಿಲ್‌ 14ರಂದು ಮುಂಬೈಯ ಬಾಂದ್ರಾದಲ್ಲಿರುವ ಸಲ್ಮಾನ್ ಖಾನ್ ಅವರ ಮನೆಯ ಹೊರಗೆ ಗುಂಡಿನ ದಾಳಿ ನಡೆದಿತ್ತು. ಬೈಕ್‌ನಲ್ಲಿ ಬಂದು ದಾಳಿ ನಡೆಸಿದ್ದ ಶೂಟರ್‌ಗಳಾದ ಸಾಗರ್‌ ಪಾಲ್‌ ಮತ್ತು ವಿಕ್ಕಿ ಗುಪ್ತಾ ಎಂಬ ಇಬ್ಬರು ದುಷ್ಕರ್ಮಿಗಳನ್ನು ಬಳಿಕ ಅರೆಸ್ಟ್‌ ಮಾಡಲಾಗಿತ್ತು. ಮುಂಬೈ ಪೊಲೀಸರು ಜೈಲಿನಲ್ಲಿರುವ ಗ್ಯಾಂಗ್​ಸ್ಟರ್ ಲಾರೆನ್ಸ್ ಬಿಷ್ಣೋಯ್ ಮತ್ತು ಅವನ ಕಿರಿಯ ಸಹೋದರ ಅನ್ಮೋಲ್ ಬಿಷ್ಣೋಯ್ ಅವರನ್ನು ಈ ಪ್ರಕರಣದ ಪ್ರಮುಖ ಆರೋಪಿಗಳು ಎಂದು ಘೋಷಿಸಿದ್ದರು.

ಈ ಮಧ್ಯೆ ಗುಂಡಿನ ದಾಳಿ ನಡೆಸಿದ್ದ ಶೂಟರ್‌ಗಳಿಗೆ ಶಸ್ತ್ರಾಸ್ತ್ರಗಳನ್ನು ಪೂರೈಕೆ ಮಾಡಿದ್ದ ಆರೋಪ ಎದುರಿಸುತ್ತಿದ್ದ ಅನೂಜ್‌ ಥಾಪನ್‌ ಕೆಲವು ದಿನಗಳ ಹಿಂದೆ ಪೊಲೀಸ್‌ ಕಸ್ಟಡಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದ. ಜೀವನ್ಮರಣದ ನಡುವೆ ಹೋರಾಡುತ್ತಿದ್ದ ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಆತ ಕೊನೆಯುಸಿರೆಳೆದಿದ್ದ. ಅನುಜ್ ಥಾಪನ್ ಸಾವಿನ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದ ಆತನ ಕುಟುಂಬ ಇದರ ತನಿಖೆಯನ್ನು ಸಿಬಿಐಗೆ ವಹಿಸುವಂತೆ ಕೋರಿ ಬಾಂಬೆ ಹೈಕೋರ್ಟ್ ಮೆಟ್ಟಿಲೇರಿತ್ತು. ಲಾಕಪ್‌ನಲ್ಲಿ ಥಾಪನ್ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೊಲೀಸರು ಹೇಳಿದ್ದರೆ ಆತನ ತಾಯಿ ಇದು ಕೊಲೆ ಎಂದು ಆರೋಪಿಸಿದ್ದರು.

ಕಾರಣವೇನು?

ಹಲವು ವರ್ಷಗಳ ಹಿಂದಿನ ಕೃಷ್ಣಮೃಗ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಲ್ಮಾನ್‌ ಅವರನ್ನು ಕೊಲ್ಲುವುದಾಗಿ 2018 ರಲ್ಲಿ ಬೆದರಿಕೆ ಹಾಕಿದ ನಂತರ ಬಿಷ್ಣೋಯ್ ಅವರ ಸಹಾಯಕರಲ್ಲಿ ಒಬ್ಬನನ್ನು ಬಂಧಿಸಲಾಯಿತು. ಜೋಧಪುರ್​ನ ಬಿಷ್ಣೋಯ್​ಗಳು ಕೃಷ್ಣಮೃಗವನ್ನು ತಮ್ಮ ಧಾರ್ಮಿಕ ಗುರು ಭಗವಾನ್ ಜಂಬೇಶ್ವರ ಅವರ ಪುನರ್ಜನ್ಮ ಎಂದು ಪರಿಗಣಿಸುತ್ತಾರೆ. ಹೀಗಾಗಿ ಕೃಷ್ಣಮೃಗ ಕೊಲ್ಲುವುದನ್ನು ಬಿಷ್ಣೋಯ್​ಗಳು ಎಂದಿಗೂ ಸಹಿಸುವುದಿಲ್ಲ. ಈ ಕಾರಣಕ್ಕೆ ಸಲ್ಮಾನ್ ಖಾನ್ ಹತ್ಯೆ ಮಾಡಲು ಲಾರೆನ್ಸ್ ಬಿಷ್ಣೋಯ್ ನಿರ್ಧರಿಸಿದ್ದ. ಎಬಿಪಿ ನ್ಯೂಸ್‌ಗೆ ನೀಡಿದ ಇತ್ತೀಚಿನ ಸಂದರ್ಶನದಲ್ಲಿ, ʻʻಸಲ್ಮಾನ್ ಖಾನ್ ಅವರನ್ನು ಕೊಲ್ಲುವುದು ನನ್ನ ಜೀವನದ ಗುರಿ. ಸಲ್ಮಾನ್‌ ಅವರು ಬಿಷ್ಣೋಯ್ ಸಮುದಾಯಕ್ಕೆ ಕ್ಷಮೆಯಾಚಿಸಿದ ನಂತರವೇ ಈ ವಿಷಯ ಕೊನೆಗೊಳ್ಳುತ್ತದೆʼʼ ಎಂದು ಹೇಳಿದ್ದ.

Continue Reading

ದೇಶ

PM Narendra Modi Live: ಕಾರ್ಗಿಲ್‌ ಯುದ್ಧ ಸ್ಮಾರಕಕ್ಕೆ ಪ್ರಧಾನಿ ಮೋದಿ ಭೇಟಿ, ವೀರ ಯೋಧರಿಗೆ ಗೌರವ ನಮನ-ಲೈವ್‌ ಇಲ್ಲಿ ವೀಕ್ಷಿಸಿ

PM Narendra Modi Live:ಇಂದು ಪ್ರಧಾನಿ ನರೇಂದ್ರ ಮೋದಿ ಅವರು ಲಡಾಕ್ ನಲ್ಲಿರುವ ಡ್ರಾಸ್ ಕಾರ್ಗಿಲ್ ಯುದ್ಧ ಸ್ಮಾರಕಕ್ಕೆ ಭೇಟಿ ನೀಡಿ ಕಾರ್ಗಿಲ್ ಯುದ್ಧದಲ್ಲಿ ಸರ್ವೋಚ್ಚ ತ್ಯಾಗ ಮಾಡಿದ ವೀರರಿಗೆ ಗೌರವ ಸಲ್ಲಿಸಲಿದ್ದಾರೆ.

VISTARANEWS.COM


on

PM Narendra Modi Live
Koo

ಹೊಸದಿಲ್ಲಿ: ಇಂದು ಪ್ರತಿಯೊಬ್ಬ ಭಾರತೀಯನೂ ಹೆಮ್ಮೆ ಪಡುವ ಕಾರ್ಗಿಲ್‌ ವಿಜಯ್‌ ದಿವಸ್‌(Kargil Vijay Diwas 2024). ಇಂದಿಗೆ ಕೆಣಕಿದ ಪಾಕಿಸ್ತಾನಕ್ಕೆ ಭಾರತೀಯ ಸೇನೆ ತ್ಯಾಗ ಬಲಿದಾನವನ್ನು ಲೆಕ್ಕಿಸದೇ ದಿಟ್ಟ ಉತ್ತರ ಕೊಟ್ಟು 25ವರ್ಷಗಳು ಸಂದಿವೆ. ಪಾಕಿಸ್ತಾನದೊಂದಿಗಿನ (india- pakistan war) 1999ರ ಸಂಘರ್ಷದಲ್ಲಿ ಭಾರತದ ವಿಜಯದ ಸ್ಮರಣಾರ್ಥವಾಗಿ ಜುಲೈ 26ರಂದು ಆಚರಿಸಲಾಗುತ್ತದೆ. ಈ ಹಿನ್ನೆಲೆ ಇಂದು ಪ್ರಧಾನಿ ನರೇಂದ್ರ ಮೋದಿ(PM Narendra Modi Live) ಅವರು ಲಡಾಕ್ ನಲ್ಲಿರುವ ಡ್ರಾಸ್ ಕಾರ್ಗಿಲ್ ಯುದ್ಧ ಸ್ಮಾರಕಕ್ಕೆ ಭೇಟಿ ನೀಡಿ ಕಾರ್ಗಿಲ್ ಯುದ್ಧದಲ್ಲಿ ಸರ್ವೋಚ್ಚ ತ್ಯಾಗ ಮಾಡಿದ ವೀರರಿಗೆ ಗೌರವ ಸಲ್ಲಿಸಿದ್ದಾರೆ. ಪ್ರಧಾನಿ ಮೋದಿ ಭೇಟಿಯ ಲೈವ್‌ ಇಲ್ಲಿ ವೀಕ್ಷಿಸಿ.

ಇನ್ನು ಇದೇ ಸಂದರ್ಭದಲ್ಲಿ ಅವರು ವರ್ಚುವಲ್ ಮೂಲಕ ಶಿಂಕುನ್ ಲಾ ಸುರಂಗ ಯೋಜನೆಯ ಮೊದಲ ಸ್ಫೋಟಕ ನಡೆಸಿಕೊಡಲಿದ್ದಾರೆ. ಇದಕ್ಕೂ ಮುನ್ನ ಲಡಾಖ್‌ನ ನಿವೃತ್ತ ಲೆಫ್ಟಿನೆಂಟ್ ಗವರ್ನರ್ ಬ್ರಿಗ್ ಬಿ.ಡಿ. ಮಿಶ್ರಾ ಅವರು ಸೆಕ್ರೆಟರಿಯೇಟ್‌ನಲ್ಲಿ ಸಭೆ ನಡೆಸಿದ್ದಾರೆ. ಡ್ರಾಸ್‌ನಲ್ಲಿರುವ ಕಾರ್ಗಿಲ್ ಯುದ್ಧ ಸ್ಮಾರಕಕ್ಕೆ ಪ್ರಧಾನಿ ಭೇಟಿಯ ವ್ಯವಸ್ಥೆಗಳನ್ನು ಪರಿಶೀಲಿಸಿದ್ದಾರೆ. ಬಿ. ಡಿ. ಮಿಶ್ರಾ ಅವರು ಲೆಫ್ಟಿನೆಂಟ್ ಗವರ್ನರ್ ಸೆಕ್ರೆಟರಿಯೇಟ್‌ನಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಕಾರ್ಗಿಲ್ ಯುದ್ಧ ಸ್ಮಾರಕ ಡ್ರಾಸ್‌ಗೆ ಭೇಟಿ ನೀಡುವ ಕುರಿತು ಚರ್ಚಿಸಿದ್ದಾರೆ. ಈ ಕುರಿತು ಲೆಫ್ಟಿನೆಂಟ್ ಗವರ್ನರ್ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ. ಎಲ್ಲ ಅಗತ್ಯ ವ್ಯವಸ್ಥೆಗಳನ್ನು ಸಮಯಕ್ಕೆ ಸರಿಯಾಗಿ ಪೂರ್ಣಗೊಳಿಸುವಂತೆ ಎಲ್‌ಜಿ ಮಿಶ್ರಾ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

2022ರಲ್ಲಿ ಪ್ರಧಾನಿ ಮೋದಿ ಅವರು ಕಾರ್ಗಿಲ್‌ನಲ್ಲಿ ಸೈನಿಕರೊಂದಿಗೆ ದೀಪಾವಳಿಯನ್ನು ಆಚರಿಸಿದ್ದರು. ಕಾರ್ಗಿಲ್ ಯುದ್ಧ ಸ್ಮಾರಕಕ್ಕೆ ಪುಷ್ಪಗುಚ್ಛವನ್ನು ಸಮರ್ಪಿಸಿದ್ದರು. ಬಳಿಕ 1999ರಲ್ಲಿ ಇಲ್ಲಿ ಪ್ರಾಣ ಕಳೆದುಕೊಂಡ ಸೇನಾ ಸಿಬ್ಬಂದಿಗೆ ಗೌರವ ಸಲ್ಲಿಸಿದ್ದರು. ಭಾರತದಲ್ಲಿ ವಾರ್ಷಿಕವಾಗಿ ಜುಲೈ 26ರಂದು ಕಾರ್ಗಿಲ್ ವಿಜಯ್ ದಿವಸ್ ಅನ್ನು ಆಚರಿಸಲಾಗುತ್ತದೆ. 1999ರಲ್ಲಿ ಆಪರೇಷನ್ ವಿಜಯ್ ವಿಜಯವನ್ನು ಇದು ನೆನಪಿಸುತ್ತದೆ. ಭಾರತ ಮತ್ತು ಪಾಕಿಸ್ತಾನದ ನಡುವಿನ ಕಾರ್ಗಿಲ್ ಯುದ್ಧದ ಮುಕ್ತಾಯವನ್ನು ಇದು ಸೂಚಿಸುತ್ತದೆ. ಈ ಯುದ್ಧ 1999ರ ಮೇ ತಿಂಗಳಲ್ಲಿ ಪ್ರಾರಂಭವಾಗಿತ್ತು. ಜಮ್ಮು ಮತ್ತು ಕಾಶ್ಮೀರದ ಕಾರ್ಗಿಲ್ ಸೆಕ್ಟರ್‌ನಲ್ಲಿ ಪಾಕಿಸ್ತಾನಿ ಸೈನಿಕರು ಮತ್ತು ಭಯೋತ್ಪಾದಕರು ಒಳನುಸುಳಿದ್ದು, ಅವರನ್ನು ಹಿಮ್ಮೆಟ್ಟಿಸುವಲ್ಲಿ ಭಾರತೀಯ ಸೈನಿಕರು ಯಶಸ್ವಿಯಾಗಿದ್ದರು.

ಇದನ್ನೂ ಓದಿ: Kargil Vijay Diwas 2024: ಗುಂಡುಗಳು ದೇಹ ತೂರಿದ್ದರೂ ಹಿಂದೆ ಸರಿಯದೆ ಶತ್ರುಗಳನ್ನು ಹಿಮ್ಮೆಟ್ಟಿಸಿದರು!

Continue Reading

ದೇಶ

Union Budget 2024: ಕೇಂದ್ರ ಬಜೆಟ್‌ನಲ್ಲಿ ಮಾಲ್ಡೀವ್ಸ್‌ಗೆ ಅನುದಾನದಲ್ಲಿ ಭಾರೀ ಕಡಿತ! ನೆರೆಯ ರಾಷ್ಟ್ರಗಳಿಗೆ ಎಷ್ಟೆಷ್ಟು ನೆರವು ಘೋಷಣೆ?

Union Budget 2024: 2,068 ಕೋಟಿ ರೂ.ಗಳ ಹಂಚಿಕೆಯೊಂದಿಗೆ ಭೂತಾನ್ ಭಾರತದಿಂದ ಅತಿಹೆಚ್ಚು ಅಭಿವೃದ್ಧಿ ನೆರವು ಪಡೆಯುತ್ತಿರುವ ರಾಷ್ಟ್ರವಾಗಿ ಹೊರಹೊಮ್ಮಿದೆ. ಈ ಹೆಚ್ಚಳವು ದ್ವಿಪಕ್ಷೀಯ ಸಂಬಂಧಗಳ ಬಲವರ್ಧನೆಯನ್ನು ಒತ್ತಿಹೇಳುತ್ತದೆ. ಇದಕ್ಕೆ ತದ್ವಿರುದ್ಧವಾಗಿ, ಮಾಲ್ಡೀವ್ಸ್ ಹಿಂದಿನ 770 ಕೋಟಿ ರೂಪಾಯಿಗಳಿಗೆ ಹೋಲಿಸಿದರೆ ಕೇವಲ 400 ಕೋಟಿ ರೂಪಾಯಿಗಳನ್ನು ಪಡೆಯುವುದರ ಮೂಲಕ ತೀವ್ರ ಇಳಿಕೆಗೆ ಸಾಕ್ಷಿಯಾಯಿತು. ಮಧ್ಯಂತರ ಬಜೆಟ್ ಈಗಾಗಲೇ 22% ಕಡಿತವನ್ನು ಪ್ರಸ್ತಾಪಿಸಿದೆ, ಆದರೆ ಅಂತಿಮ ಬಜೆಟ್ ಸಹಾಯವನ್ನು 48% ರಷ್ಟು ಕಡಿತಗೊಳಿಸಿತು

VISTARANEWS.COM


on

union budget 2024
Koo

ನವದೆಹಲಿ: ಈ ಬಾರಿಯ ಕೇಂದ್ರ ಬಜೆಟ್‌(Union Budget 2024)ನಲ್ಲಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್(Nirmala Seetharaman) ಅವರು ಭಾರತದ ವಿದೇಶಿ ನೆರವು ಹಂಚಿಕೆಗಳಲ್ಲಿ ಗಣನೀಯ ಬದಲಾವಣೆಗಳನ್ನು ಘೋಷಿಸಿದ್ದಾರೆ. ಇದರದಲ್ಲಿ ನೆರೆಯ ರಾಷ್ಟ್ರಗಳಾದ ಮಾಲ್ಡೀವ್ಸ್‌ ಮತ್ತು ಭೂತಾನ್‌ಗೆ ಅನುದಾನ ಹಂಚಿಕೆಯಲ್ಲಿ ಈ ಬಾರಿ ಗಣನೀಯ ಬದಲಾವಣೆ ತರಲಾಗಿದೆ. ಮಾಲ್ಡೀವ್ಸ್‌ ಅನುದಾನದಲ್ಲಿ ಈ ಬಾರಿ ಭಾರೀ ಕಡಿತ ಮಾಡಲಾಗಿದೆ. ಹಾಗೆಯೇ ಭೂತಾನ್‌ ಅನುದಾನದಲ್ಲಿ ಏರಿಕೆ ಮಾಡಲಾಗಿದೆ.

2,068 ಕೋಟಿ ರೂ.ಗಳ ಹಂಚಿಕೆಯೊಂದಿಗೆ ಭೂತಾನ್ ಭಾರತದಿಂದ ಅತಿಹೆಚ್ಚು ಅಭಿವೃದ್ಧಿ ನೆರವು ಪಡೆಯುತ್ತಿರುವ ರಾಷ್ಟ್ರವಾಗಿ ಹೊರಹೊಮ್ಮಿದೆ. ಈ ಹೆಚ್ಚಳವು ದ್ವಿಪಕ್ಷೀಯ ಸಂಬಂಧಗಳ ಬಲವರ್ಧನೆಯನ್ನು ಒತ್ತಿಹೇಳುತ್ತದೆ. ಇದಕ್ಕೆ ತದ್ವಿರುದ್ಧವಾಗಿ, ಮಾಲ್ಡೀವ್ಸ್ ಹಿಂದಿನ 770 ಕೋಟಿ ರೂಪಾಯಿಗಳಿಗೆ ಹೋಲಿಸಿದರೆ ಕೇವಲ 400 ಕೋಟಿ ರೂಪಾಯಿಗಳನ್ನು ಪಡೆಯುವುದರ ಮೂಲಕ ತೀವ್ರ ಇಳಿಕೆಗೆ ಸಾಕ್ಷಿಯಾಯಿತು. ಮಧ್ಯಂತರ ಬಜೆಟ್ ಈಗಾಗಲೇ 22% ಕಡಿತವನ್ನು ಪ್ರಸ್ತಾಪಿಸಿದೆ, ಆದರೆ ಅಂತಿಮ ಬಜೆಟ್ ಸಹಾಯವನ್ನು 48% ರಷ್ಟು ಕಡಿತಗೊಳಿಸಿತು.

ಚೀನಾ ಪರ ನಿಲುವಿಗೆ ಹೆಸರುವಾಸಿಯಾದ ಮೊಹಮದ್ ಮುಯಿಝು ಅವರು ಮಾಲ್ಡೀವ್ಸ್‌ ಅಧ್ಯಕ್ಷರಾಗಿ ಚುನಾಯಿತರಾದ ನಂತರ ಉಭಯ ರಾಷ್ಟ್ರಗಳ ನಡುವಿನ ಸಂಬಂಧ ಹದಗೆಟ್ಟಿದೆ. ಭಾರತದ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಬಗ್ಗೆ ಅವರ ಆಡಳಿತದ ವಿಮರ್ಶಾತ್ಮಕ ಹೇಳಿಕೆಗಳು ಸಾರ್ವಜನಿಕ ಆಕ್ರೋಶಕ್ಕೆ ಕಾರಣವಾಯಿತು ಮತ್ತು ಪ್ರವಾಸೋದ್ಯಮದ ಮೇಲೆ ಪರಿಣಾಮ ಬೀರುವ “ಮಾಲ್ಡೀವ್ಸ್ ಬಹಿಷ್ಕಾರ” ಅಭಿಯಾನವನ್ನು ಹುಟ್ಟುಹಾಕಿತು.

ಈ ಬಾರಿ ನೇಪಾಳವು 700 ಕೋಟಿ ರೂಪಾಯಿ ಅತ್ಯಧಿಕ ನೆರವನ್ನು ಪಡೆದುಕೊಂಡಿದೆ. ಇದು ನೇಪಾಳ ಮತ್ತು ಭಾರತದ ಬದ್ಧತೆಯನ್ನು ಬಲಪಡಿಸುತ್ತದೆ. ಶ್ರೀಲಂಕಾವು ಕಳೆದ ವರ್ಷದ 60 ಕೋಟಿ ರೂಪಾಯಿಗಳ ನೆರವು ಪಡೆದಿತ್ತು. ಈ ಬಾರಿ 245 ಕೋಟಿ ರೂಪಾಯಿಗಳನ್ನು ಪಡೆಯುತ್ತಿದ್ದು, ನೆರವಿನಲ್ಲಿ ಗಣನೀಯ ಏರಿಕೆ ಕಂಡಿದೆ.

ಬಜೆಟ್‌ನಲ್ಲಿ ದಕ್ಷಿಣ ಏಷ್ಯಾದ ಆಚೆಗಿನ ದೇಶಗಳಿಗೂ ಮೀಸಲಿಡಲಾಗಿದೆ. ಇರಾನ್‌ನ ಚಬಹಾರ್ ಬಂದರು 100 ಕೋಟಿ ರೂಪಾಯಿಗಳನ್ನು ಪಡೆದುಕೊಂಡಿದ್ದು, ಅದರ ಕಾರ್ಯತಂತ್ರದ ಮಹತ್ವವನ್ನು ಎತ್ತಿ ತೋರಿಸುತ್ತದೆ. ಅಫ್ಘಾನಿಸ್ತಾನದ ನೆರವನ್ನು 220 ಕೋಟಿಯಿಂದ 200 ಕೋಟಿಗೆ ಸ್ವಲ್ಪ ಕಡಿಮೆ ಮಾಡಲಾಗಿದೆ. ಬಾಂಗ್ಲಾದೇಶಕ್ಕೆ 120 ಕೋಟಿ ರೂ., ಮ್ಯಾನ್ಮಾರ್‌ನ ನೆರವನ್ನು 320 ಕೋಟಿ ರೂ.ಗಳಿಂದ 250 ಕೋಟಿ ರೂ.ಗೆ ಇಳಿಸಲಾಯಿತು. ಆಫ್ರಿಕನ್ ರಾಷ್ಟ್ರಗಳು ಒಟ್ಟಾರೆಯಾಗಿ 200 ಕೋಟಿ ರೂಪಾಯಿಗಳನ್ನು ಪಡೆದಿವೆ ಮತ್ತು ಮಾರಿಷಸ್‌ಗೆ 370 ಕೋಟಿ ರೂಪಾಯಿಗಳನ್ನು ಮೀಸಲಿಡಲಾಗಿದೆ.

ಒಟ್ಟಾರೆ ವಿದೇಶಾಂಗ ವ್ಯವಹಾರಗಳ ಬಜೆಟ್‌ ಎಷ್ಟು?

ವಿದೇಶಾಂಗ ವ್ಯವಹಾರಗಳ ಸಚಿವಾಲಯದ ಒಟ್ಟು ಬಜೆಟ್ ಅನ್ನು 29,121 ಕೋಟಿ ರೂಗಳಿಂದ 22,154 ಕೋಟಿಗೆ ಇಳಿಸಲಾಗಿದ್ದು, ಇದು ಫೆಬ್ರವರಿಯಲ್ಲಿ ಮಧ್ಯಂತರ ಬಜೆಟ್ ಹಂಚಿಕೆಯೊಂದಿಗೆ ಹೊಂದಿಕೆಯಾಗುತ್ತದೆ. ಕೇಂದ್ರ ಬಜೆಟ್ 2024-25 ಭಾರತದ ಕ್ರಿಯಾತ್ಮಕ ವಿದೇಶಾಂಗ ನೀತಿಯನ್ನು ಪ್ರತಿಬಿಂಬಿಸುತ್ತದೆ. ಭೂತಾನ್ ಮತ್ತು ಇತರ ನೆರೆಹೊರೆಗಳಿಗೆ ಹೆಚ್ಚಿದ ಬೆಂಬಲವು ಭಾರತದ ವಿಕಸನಗೊಳ್ಳುತ್ತಿರುವ ರಾಜತಾಂತ್ರಿಕ ಆದ್ಯತೆಗಳನ್ನು ಒತ್ತಿಹೇಳುತ್ತದೆ.

ಇದನ್ನೂ ಓದಿ: Mudra loan: ಕೇಂದ್ರ ಬಜೆಟ್‌ನಲ್ಲಿ ಮುದ್ರಾ ಸಾಲ ಮಿತಿ ಹೆಚ್ಚಳ; ಷರತ್ತುಗಳೇನು? ಯಾರಿಗೆ ಪ್ರಯೋಜನ?

Continue Reading
Advertisement
Most Beautiful woman Science reveals Anya Taylor-Joy
ಬಾಲಿವುಡ್4 mins ago

Most Beautiful woman: ವಿಶ್ವದ ಅತ್ಯಂತ ಸುಂದರ ಮಹಿಳೆಯರ ಪಟ್ಟಿ ಬಿಡುಗಡೆ; ಟಾಪ್ 10ನಲ್ಲಿ ಏಕೈಕ ಬಾಲಿವುಡ್ ನಟಿ!

Kargil Vijay Diwas 2024
ದೇಶ11 mins ago

Kargil Vijay Diwas 2024: “ಪಾಕಿಸ್ತಾನ ತಪ್ಪುಗಳಿಂದ ಪಾಠ ಕಲಿತಿಲ್ಲ”; ಪ್ರಧಾನಿ ಮೋದಿ ಟಾಂಗ್‌

Murder in PG Case
ಪ್ರಮುಖ ಸುದ್ದಿ12 mins ago

Murder in PG: ಗೆಳತಿಗಾಗಿ ಕೊಲೆಯಾಗಿ ಹೋದ ಕೃತಿ ಕುಮಾರಿ; ಪ್ರೇಯಸಿಯನ್ನು ಬಂಧನದಲ್ಲಿಟ್ಟು ಕ್ರೌರ್ಯ ಮೆರೆದ ಪಾತಕಿ

Paris Olympics 2024 Boxing Draw
ಕ್ರೀಡೆ27 mins ago

Paris Olympics Boxing Draw: ಒಲಿಂಪಿಕ್ಸ್​ ಬಾಕ್ಸಿಂಗ್​ ಡ್ರಾ ಪ್ರಕಟ; ಮೊದಲ ಸುತ್ತಿನಲ್ಲೇ ಭಾರತೀಯ ಬಾಕ್ಸರ್​ಗಳಿಗೆ ಕಠಿಣ ಸ್ಪರ್ಧಿಗಳ ಸವಾಲು

Salman Khan House Gangster's 9-Minute Speech To Shooters Before Attack
ಬಾಲಿವುಡ್30 mins ago

Salman Khan: ಸಲ್ಮಾನ್ ಖಾನ್‌ ಹೆದರುವ ರೀತಿಯಲ್ಲಿ ಗುಂಡಿನ ದಾಳಿ ಆಗಬೇಕು ಎಂದು ಶೂಟರ್‌ಗಳಿಗೆ ಸ್ಫೂರ್ತಿ ತುಂಬಿದ್ದ ಬಿಷ್ಣೋಯಿ!

assault case
ಬೆಂಗಳೂರು41 mins ago

Assault Case : ರಾಜಧಾನಿಯಲ್ಲಿ ನಿಲ್ಲದ ಪುಂಡರ ಪುಂಡಾಟ; ಕಾರು ಚಾಲಕನ ಚೇಸ್‌ ಮಾಡಿ ಹಲ್ಲೆ

9/11 attack
ವಿದೇಶ52 mins ago

9/11 Attack: ನ್ಯೂಯಾರ್ಕ್‌ ಅವಳಿ ಗೋಪುರಗಳ ಮೇಲೆ ಉಗ್ರ ದಾಳಿಯ ಹೊಸ ವಿಡಿಯೋ ವೈರಲ್‌

Ranbir Kapoor casanova opens up about being labelled a cheater
ಬಾಲಿವುಡ್1 hour ago

Ranbir Kapoor: ʻಸ್ತ್ರೀಲೋಲʼ, ʻಚೀಟರ್ʼ ಎನ್ನುವ ಹಣೆಪಟ್ಟಿಯೊಂದಿಗೆ ಬದುಕುತ್ತಿದ್ದೇನೆ ಎಂದ ರಣಬೀರ್ ಕಪೂರ್!

CM Siddaramaiah
ಪ್ರಮುಖ ಸುದ್ದಿ1 hour ago

CM Siddaramaiah: ಇಂದು ಸಿಎಂ ಸಿದ್ದರಾಮಯ್ಯ ಸಂಪುಟ ಸಭೆ, ಇಲ್ಲಿದೆ ಅಜೆಂಡಾ

ಕ್ರೀಡೆ1 hour ago

PKL 2024: ಪ್ರೊ ಕಬಡ್ಡಿ ಲೀಗ್ ಆಟಗಾರರ ಹರಾಜು ಪ್ರಕ್ರಿಯೆಗೆ ದಿನಾಂಕ ನಿಗದಿ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Rain
ಮಳೆ19 hours ago

Karnataka Rain : ಮನೆಯೊಳಗೆ ನುಗ್ಗಿದ ಮಳೆ ನೀರು; ಕಾಲು ಜಾರಿ ಬಿದ್ದು ವೃದ್ಧೆ ಸಾವು

Actor Darshan
ಸ್ಯಾಂಡಲ್ ವುಡ್22 hours ago

Actor Darshan: ನಟ ದರ್ಶನ್ ಇರುವ ಜೈಲು ಕೋಣೆ ಹೇಗಿದೆ?

Actor Darshan
ಸಿನಿಮಾ23 hours ago

Actor Darshan : ಹೆಂಡ್ತಿ ಮಕ್ಕಳೊಟ್ಟಿಗೆ ಚೆನ್ನಾಗಿರು.. ಸಹಕೈದಿ ಜತೆಗೆ 12 ನಿಮಿಷ ಕಳೆದ ನಟ ದರ್ಶನ್‌

Actor Darshan
ಸಿನಿಮಾ24 hours ago

Actor Darshan: ಆಧ್ಯಾತ್ಮದತ್ತ ವಾಲಿದ ದರ್ಶನ್‌; ಜೈಲಲ್ಲಿ ಹೇಗಿದೆ ಗೊತ್ತಾ ನಟನ ಬದುಕು

karnataka Weather Forecast
ಮಳೆ2 days ago

Karnataka Weather : ರಭಸವಾಗಿ ಸುರಿಯುವ ಮಳೆ; 50 ಕಿ.ಮೀ ವೇಗದಲ್ಲಿ ಬೀಸುತ್ತೆ ಗಾಳಿ

karnataka weather Forecast
ಮಳೆ3 days ago

Karnataka Weather : ರಾಜ್ಯದಲ್ಲಿ ಮುಂದುವರಿದ ಮಳೆ ಅವಾಂತರ; ನಾಳೆಯೂ ಇರಲಿದೆ ಅಬ್ಬರ

Udupi News
ಉಡುಪಿ3 days ago

Udupi News : ಹಳೆ ಲಾರಿ ಚಾಸ್ಸಿಯಲ್ಲೇ ಕಿರು ಸೇತುವೆ ನಿರ್ಮಾಣ! ಬೈಂದೂರು ಶಾಸಕರ ಪರಿಕಲ್ಪನೆಗೆ ಜನರು ಫಿದಾ

murder case
ರಾಮನಗರ3 days ago

Murder Case : ರಾಮನಗರದಲ್ಲೊಂದು ಪೈಶಾಚಿಕ ಕೃತ್ಯ; ಅತ್ಯಾಚಾರವೆಸಗಿ 4 ವರ್ಷದ ಬಾಲಕಿಯನ್ನು ಕೊಂದ ದುಷ್ಟ

karnataka Rain
ಮಳೆ6 days ago

Karnataka Rain : ಭಾರಿ ಮಳೆಗೆ ಮನೆ ಗೋಡೆ ಕುಸಿತ; ಕೊಟ್ಟಿಗೆಯಲ್ಲಿದ್ದ ಜಾನುವಾರುಗಳು ಸಾವು

karnataka Rain
ಮಳೆ6 days ago

Karnataka Rain : ಹಳ್ಳ ದಾಟಲು ಹೋಗಿ ನೀರುಪಾಲಾದ ಜಾನುವಾರು; ಬಿರುಗಾಳಿಗೆ ಕಳಚಿದ ವಿಂಡ್‌ ಫ್ಯಾನ್‌

ಟ್ರೆಂಡಿಂಗ್‌