Union Budget 2024: ಹಳೇ ತೆರಿಗೆ Vs ಹೊಸ ತೆರಿಗೆ; ಯಾರಿಗೆ ಯಾವುದು ಅನುಕೂಲ? ಇಲ್ಲಿದೆ ಕಂಪ್ಲೀಟ್ ಮಾಹಿತಿ - Vistara News

ಬಜೆಟ್ 2024

Union Budget 2024: ಹಳೇ ತೆರಿಗೆ Vs ಹೊಸ ತೆರಿಗೆ; ಯಾರಿಗೆ ಯಾವುದು ಅನುಕೂಲ? ಇಲ್ಲಿದೆ ಕಂಪ್ಲೀಟ್ ಮಾಹಿತಿ

Union Budget 2024: ಹೊಸ ತೆರಿಗೆ ಪದ್ಧತಿ ಅಳವಡಿಸಿಕೊಂಡವರ ಸ್ಟಾಂಡರ್ಡ್‌ ಡಿಡಕ್ಷನ್‌ ಮೊತ್ತದ ಏರಿಕೆ, ಸ್ಲ್ಯಾಬ್‌ಗಳ ಸ್ಟ್ರಕ್ಚರ್‌ ಬದಲಿಸಿದ ಕಾರಣ ಬಹುತೇಕ ಜನ ಹೊಸ ತೆರಿಗೆ ಪದ್ಧತಿಯೇ ಹೆಚ್ಚು ಅನುಕೂಲ ಎಂಬುದಾಗಿ ಭಾವಿಸಿದ್ದಾರೆ. ಆದರೆ, ಹೆಚ್ಚು ಸಂಬಳ ಇರುವವರಿಗೆ ಹಳೆಯ ತೆರಿಗೆ ಪದ್ಧತಿಯೇ ಹೆಚ್ಚು ಲಾಭದಾಯಕವಾಗಿದೆ. ಯಾರಿಗೆ ಯಾವ ತೆರಿಗೆ ಪದ್ಧತಿ ಹೆಚ್ಚು ಅನುಕೂಲ ಎಂಬುದರ ಮಾಹಿತಿ ಹೀಗಿದೆ…

VISTARANEWS.COM


on

Union Budget 2024
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವದೆಹಲಿ: ಉದ್ಯೋಗಿಗಳಿಗೆ, ತೆರಿಗೆ ಪಾವತಿದಾರರಿಗೆ ಅನುಕೂಲವಾಗುವ ದಿಸೆಯಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ (Nirmala Sitharaman) ಅವರು ಬಜೆಟ್‌ನಲ್ಲಿ (Union Budget 2024) ಹಲವು ಕ್ರಮಗಳನ್ನು ಘೋಷಣೆ ಮಾಡಿದ್ದಾರೆ.‌ ಅದರಲ್ಲೂ, ಸ್ಟಾಂಡರ್ಡ್‌ ಡಿಡಕ್ಷನ್‌ ಮೊತ್ತದ ಏರಿಕೆ, ಹೊಸ ತೆರಿಗೆ ಪದ್ಧತಿಯ ಸ್ಲ್ಯಾಬ್‌ಗಳ ಬದಲಾವಣೆ ಮಾಡಿದ ಕಾರಣ ಹೊಸ ತೆರಿಗೆ ಪದ್ಧತಿಯನ್ನು ಅಳವಡಿಸಿಕೊಳ್ಳುವುದು ಒಳಿತು ಎಂದು ಹೇಳಲಾಗುತ್ತಿದೆ. ಹಾಗಂತ, ಹಳೆಯ ತೆರಿಗೆ ಪದ್ಧತಿಯನ್ನು ಅಳವಡಿಸಿಕೊಳ್ಳುವವರಿಗೆ ನಷ್ಟ ಎಂದಲ್ಲ. ಹೆಚ್ಚಿನ ಸಂಬಳ ಪಡೆಯುವವರಿಗೆ ಹಳೆಯ ತೆರಿಗೆ ಪದ್ಧತಿಯು ತೆರಿಗೆ ಉಳಿಸುತ್ತದೆ. ಹಾಗಾದರೆ, ಎಷ್ಟು ಸಂಬಳ ಇರುವವರು ಯಾವ ತೆರಿಗೆ ಪದ್ಧತಿಯನ್ನು ಆಯ್ಕೆ ಮಾಡಿಕೊಳ್ಳುವುದು ಉತ್ತಮ? ಇಲ್ಲಿದೆ ಮಾಹಿತಿ.

ಹೊಸ ತೆರಿಗೆ ಪದ್ಧತಿ ಯಾರಿಗೆ ಅನುಕೂಲ?

ಸ್ಟಾಂಡರ್ಡ್‌ ಡಿಡಕ್ಷನ್‌ ಎಂಬುದು ತೆರಿಗೆ ವಿನಾಯಿತಿ ಆಗಿದ್ದು, ಇದಕ್ಕಾಗಿ ನೌಕರರು ಹೂಡಿಕೆ ಮಾಡಬೇಕಿಲ್ಲ. ತೆರಿಗೆ ಪಾವತಿಸಲು ಅರ್ಹವಿರುವವರು ಸ್ಟಾಂಡರ್ಡ್‌ ಡಿಡಕ್ಷನ್‌ ಮೊತ್ತದ ಅಡಿಯಲ್ಲಿ ವಿನಾಯಿತಿ ಪಡೆಯಲಿದ್ದಾರೆ. ಈ ಸ್ಟಾಂಡರ್ಡ್‌ ಡಿಡಕ್ಷನ್‌ ಮೊತ್ತವನ್ನು ಕೇಂದ್ರ ಸರ್ಕಾರವೀಗ ಸ್ಟಾಂಡರ್ಡ್‌ ಡಿಡಕ್ಷನ್‌ ಮೊತ್ತವನ್ನು 50 ಸಾವಿರ ರೂ.ನಿಂದ 75 ಸಾವಿರ ರೂ.ಗೆ ಏರಿಕೆ ಮಾಡಿರುವುದರಿಂದ, ಹೊಸ ತೆರಿಗೆಯ ಸ್ಲ್ಯಾಬ್‌ಗಳ ಸ್ಟ್ರಕ್ಚರ್‌ ಬದಲಾವಣೆ ಮಾಡಿರುವುದರಿಂದ 6-7 ಲಕ್ಷ ರೂ. ಆದಾಯ ಗಳಿಸುವವರು ಶೇ.10ರಷ್ಟು ಬದಲು ಶೇ.5ರಷ್ಟು ತೆರಿಗೆ ಪಾವತಿಸುತ್ತಾರೆ. ಇನ್ನು, 9-10 ಲಕ್ಷ ರೂ. ಆದಾಯ ಗಳಿಸುವವರು ಶೇ.15ರ ಬದಲು ಶೇ.10ರಷ್ಟು ತೆರಿಗೆ ಪಾವತಿಸಲಿದ್ದಾರೆ.

Viral Video
ITR Filing

ವರ್ಷಕ್ಕೆ ಸುಮಾರು 7.75 ಲಕ್ಷ ರೂ.ವರೆಗೆ ಸಂಬಳ ಪಡೆಯುವವರು ಇನ್ನು ಮುಂದೆ ಯಾವುದೇ ತೆರಿಗೆ ಪಾವತಿ ಮಾಡಬೇಕಿಲ್ಲ. ಅವರು ಶೂನ್ಯ ತೆರಿಗೆ ವ್ಯಾಪ್ತಿಯಲ್ಲೇ ಬರಲಿದ್ದಾರೆ. ಹಾಗಾಗಿ, ಮಧ್ಯಮ ವರ್ಗದವರಿಗೆ ಹೊಸ ತೆರಿಗೆ ಪದ್ಧತಿಯು ಹೆಚ್ಚು ಅನುಕೂಲಕರವಾಗಿದೆ.

ಹಳೆಯ ತೆರಿಗೆ ಪದ್ಧತಿಯಿಂದ ಯಾರಿಗೆ ಲಾಭ?

8 ಲಕ್ಷ ರೂಪಾಯಿಗಿಂತ ಹೆಚ್ಚು ವಾರ್ಷಿಕ ಸಂಬಳ ಪಡೆಯುವವರಿಗೆ ಹಳೆಯ ತೆರಿಗೆ ಪದ್ಧತಿಯು ಹೆಚ್ಚು ಲಾಭದಾಯಕವಾಗಲಿದೆ. ಸುಮಾರು 11 ಲಕ್ಷ ರೂ. ವಾರ್ಷಿಕ ಆದಾಯ ಪಡೆಯುವವರು, ಹಳೆಯ ತೆರಿಗೆ ಪದ್ಧತಿ ಅನ್ವಯ ಸ್ಟಾಂಡರ್ಡ್‌ ಡಿಡಕ್ಷನ್‌, 2 ಲಕ್ಷ ರೂ.ವರೆಗಿನ ಗೃಹ ಸಾಲ, ಮನೆ ಬಾಡಿಗೆ (HRA) ಮೊತ್ತವನ್ನು ಡಿಡಕ್ಷನ್‌ ಮಾಡಿಕೊಂಡರೆ, ಹಳೆಯ ತೆರಿಗೆ ಪದ್ಧತಿಯು ಹೆಚ್ಚು ಅನುಕೂಲವಾಗಲಿದೆ.

ITR Filing
ITR Filing

ಇನ್ನು, ಗಂಡ-ಹೆಂಡತಿ ಇಬ್ಬರೂ 11 ಲಕ್ಷ ರೂ. ಆದಾಯ ಹೊಂದಿದ್ದರಂತೂ, ಹೆಚ್ಚಿನ ಲಾಭ ಪಡೆಯಲಿದ್ದಾರೆ ಎಂದು ತಜ್ಞರು ತಿಳಿಸಿದ್ದಾರೆ. ಅಷ್ಟೇ ಅಲ್ಲ, 11 ಲಕ್ಷ ರೂ.ನಿಂದ 60 ಲಕ್ಷ ರೂ.ವರೆಗೆ ಸಂಬಳ ಪಡೆಯುವವರು ಕೂಡ ಹಳೆಯ ತೆರಿಗೆ ಪದ್ಧತಿ ಅನ್ವಯ ಹೆಚ್ಚು ಹಣವನ್ನು ಉಳಿಸಬಹುದಾಗಿದೆ ಎಂಬುದಾಗಿ ಹಣಕಾಸು ತಜ್ಞರು ತಿಳಿಸಿದ್ದಾರೆ.

ಹಳೇ ತೆರಿಗೆ ಪದ್ಧತಿ ರದ್ದಾಗುತ್ತದೆಯೇ?

ಹೊಸ ತೆರಿಗೆ ಪದ್ಧತಿ ಅಳವಡಿಸಿಕೊಳ್ಳುವವರಿಗೆ ಹೆಚ್ಚಿನ ಉತ್ತೇಜನ ನೀಡುತ್ತಿರುವ ಕಾರಣ ಹಳೆಯ ತೆರಿಗೆ ಪದ್ಧತಿಯನ್ನು ಒಂದು ವರ್ಷದಲ್ಲಿ ರದ್ದುಗೊಳಿಸಲಾಗುತ್ತದೆ ಎಂಬ ಮಾತುಗಳು ಕೇಳಿಬಂದಿದ್ದವು. ಆದರೆ, ಇದನ್ನು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಅಲ್ಲಗಳೆದಿದ್ದಾರೆ.

“ಹಳೆಯ ತೆರಿಗೆ ಪದ್ಧತಿಯನ್ನು ರದ್ದುಗೊಳಿಸುವ ಕುರಿತು ಇದುವರೆಗೆ ಯಾವುದೇ ತೀರ್ಮಾನ ತೆಗೆದುಕೊಂಡಿಲ್ಲ. ಏಕಾಏಕಿ ಹಳೆಯ ತೆರಿಗೆ ಪದ್ಧತಿಯನ್ನು ತೆಗೆದುಹಾಕಲು ಕೂಡ ಆಗುವುದಿಲ್ಲ. ಹಳೆಯ ತೆರಿಗೆ ಪದ್ಧತಿಯನ್ನು ಇನ್ನಷ್ಟು ಸುಲಭಗೊಳಿಸುವ ದಿಸೆಯಲ್ಲಿ ಹೊಸ ತೆರಿಗೆ ಪದ್ಧತಿಯನ್ನು ಪರಿಚಯಿಸಲಾಗಿದೆ. ಆದರೆ, ಹಳೆಯ ತೆರಿಗೆ ಪದ್ಧತಿಯನ್ನು ತೆಗೆದುಹಾಕುವ ನಿರ್ಧಾರ ತೆಗೆದುಕೊಂಡಿಲ್ಲ” ಎಂದು ಬಜೆಟ್‌ ಮಂಡನೆ ಬಳಿಕ ನಡೆಸಿದ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಇದನ್ನೂ ಓದಿ: NPS Vatsalya Scheme: ಏನಿದು ಕೇಂದ್ರ ಬಜೆಟ್‌ನಲ್ಲಿ ಘೋಷಿಸಿರುವ ಎನ್‌ಪಿಎಸ್ ವಾತ್ಸಲ್ಯ ಯೋಜನೆ? ನಮ್ಮ ಮಕ್ಕಳಿಗೆ ಇದರಿಂದೇನು ಪ್ರಯೋಜನ?

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮನಿ-ಗೈಡ್

NPS Vatsalya Scheme: ಏನಿದು ಕೇಂದ್ರ ಬಜೆಟ್‌ನಲ್ಲಿ ಘೋಷಿಸಿರುವ ಎನ್‌ಪಿಎಸ್ ವಾತ್ಸಲ್ಯ ಯೋಜನೆ? ನಮ್ಮ ಮಕ್ಕಳಿಗೆ ಇದರಿಂದೇನು ಪ್ರಯೋಜನ?

ಇನ್ನು ಮುಂದೆ ಪೋಷಕರು ತಮ್ಮ ಅಪ್ರಾಪ್ತ ವಯಸ್ಸಿನ ಮಗುವಿನ ಹೆಸರಿನಲ್ಲಿ ರಾಷ್ಟ್ರೀಯ ಪಿಂಚಣಿ ಯೋಜನೆಯ (NPS Vatsalya Scheme) ಖಾತೆಯನ್ನು ತೆರೆಯಬಹುದು ಎಂದು ಕೇಂದ್ರ ಬಜೆಟ್‌ನಲ್ಲಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಘೋಷಿಸಿದ್ದಾರೆ. ಎನ್‌ಪಿಎಸ್ ವಾತ್ಸಲ್ಯ ಯೋಜನೆ ಎಂದರೆ ಏನು, ಇದಕ್ಕೆ ಯಾರು ಅರ್ಹರು, ಯಾರು ಅರ್ಜಿ ಸಲ್ಲಿಸಬಹುದು ಮತ್ತು ಮೆಚ್ಯೂರಿಟಿಯನ್ನು ಪಡೆದ ಅನಂತರ ಖಾತೆ ಏನಾಗುತ್ತದೆ ಎನ್ನುವ ಸಂಪೂರ್ಣ ಮಾಹಿತಿ ಇಲ್ಲಿದೆ.

VISTARANEWS.COM


on

By

NPS Vatsalya Yojana
Koo

ಮಕ್ಕಳಿಗಾಗಿ ರಾಷ್ಟ್ರೀಯ ಪಿಂಚಣಿ ವಾತ್ಸಲ್ಯ ಯೋಜನೆಯನ್ನು (NPS Vatsalya scheme) ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ (finance minister Nirmala Sitharaman) ಅವರು 2024ರ ಕೇಂದ್ರ ಬಜೆಟ್‌ನಲ್ಲಿ (Union Budget 2024) ಘೋಷಿಸಿದ್ದಾರೆ. ರಾಷ್ಟ್ರೀಯ ಪಿಂಚಣಿ ಯೋಜನೆಯು (National Pension Scheme) ನಿವೃತ್ತಿ ಯೋಜನೆಯಾಗಿದ್ದು, ಇದರಲ್ಲಿ 18ನೇ ವಯಸ್ಸಿನಿಂದಲೇ ಹೂಡಿಕೆಯನ್ನು ಪ್ರಾರಂಭಿಸಿ 70ನೇ ವಯಸ್ಸಿನವರೆಗೆ ಹೂಡಿಕೆಯನ್ನು ಮಾಡಬಹುದು.

ಇದೀಗ ಕೇಂದ್ರ ಬಜೆಟ್‌ನಲ್ಲಿ ಪ್ರಸ್ತಾಪಿಸಿರುವ ರಾಷ್ಟ್ರೀಯ ಪಿಂಚಣಿ ಯೋಜನೆ ವಾತ್ಸಲ್ಯವನ್ನು ಘೋಷಿಸಲಾಗಿದೆ. ಎನ್‌ಪಿಎಸ್-ವಾತ್ಸಲ್ಯ ಯೋಜನೆಯನ್ನು ಅಪ್ರಾಪ್ತ ವಯಸ್ಕ ಮಕ್ಕಳಿಗೆ ಪೋಷಕರು ಮಾಡಬಹುದಾದ ಉಳಿತಾಯ ಯೋಜನೆಯಾಗಿದೆ. ಈ ಕುರಿತು ಮಾಧ್ಯಮವೊಂದಕ್ಕೆ ಪ್ರತಿಕ್ರಿಯಿಸಿರುವ ಮ್ಯಾಕ್ಸ್ ಲೈಫ್ ಪಿಂಚಣಿ ನಿಧಿ ನಿರ್ವಹಣೆಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಣಭೀರ್ ಸಿಂಗ್ ಧರಿವಾಲ್, ನಿವೃತ್ತಿ ಉಳಿತಾಯ ಮತ್ತು ದೀರ್ಘಾವಧಿಯ ಆರ್ಥಿಕ ಭದ್ರತೆಯನ್ನು ಉತ್ತೇಜಿಸುವಲ್ಲಿ ಕೇಂದ್ರ ಬಜೆಟ್‌ನ ರಾಷ್ಟ್ರೀಯ ಪಿಂಚಣಿ ಯೋಜನೆ (ಎನ್‌ಪಿಎಸ್) ವಾತ್ಸಲ್ಯವು ಶ್ಲಾಘನೀಯ ಹೆಜ್ಜೆಯಾಗಿದೆ ಎಂದು ಹೇಳಿದ್ದಾರೆ.

ಪೋಷಕರು ತಮ್ಮ ಅಪ್ರಾಪ್ತ ವಯಸ್ಸಿನ ಮಗುವಿನ ಎನ್‌ಪಿಎಸ್ ಖಾತೆಯನ್ನು ಪ್ರಾರಂಭಿಸಲು ಅವಕಾಶ ನೀಡುವ ಮೂಲಕ ಚಿಕ್ಕ ವಯಸ್ಸಿನಿಂದಲೇ ಜವಾಬ್ದಾರಿಯುತ ಹಣಕಾಸು ನಿರ್ವಹಣೆಗೆ ಅಡಿಪಾಯವನ್ನು ಹೊಂದಿಸಿದಂತಾಗುತ್ತದೆ. ಪ್ರೌಢಾವಸ್ಥೆಯಲ್ಲಿ ಈ ಖಾತೆಗಳು ನಿಯಮಿತ ಎನ್ ಪಿ ಎಸ್ ಯೋಜನೆಗಳಾಗಿ ಪರಿವರ್ತನೆಯಾಗುತ್ತದೆ. ಇದರಿಂದ ಮಕ್ಕಳ ಪ್ರೌಢಾವಸ್ಥೆಯಲ್ಲಿ ಉಳಿತಾಯ ಅಭ್ಯಾಸಗಳ ಸುಗಮವಾಗಿ ಮುಂದುವರಿಯುತ್ತದೆ.

ಎನ್‌ಪಿಎಸ್ ವಾತ್ಸಲ್ಯ ಯೋಜನೆಗೆ ಯಾರು ಅರ್ಹರು, ಯಾರು ಅರ್ಜಿ ಸಲ್ಲಿಸಬಹುದು ಮತ್ತು ಮೆಚ್ಯೂರಿಟಿಯನ್ನು ಪಡೆದ ಅನಂತರ ಖಾತೆಗೆ ಏನಾಗುತ್ತದೆ ಎನ್ನುವ ಸಂಪೂರ್ಣ ಮಾಹಿತಿ ಇಲ್ಲಿದೆ.

NPS Vatsalya Yojana
NPS Vatsalya Yojana


ಎನ್ ಪಿ ಎಸ್ ಎಂದರೇನು?

ಎನ್‌ಪಿಎಸ್ ನಿವೃತ್ತಿ ಯೋಜನೆಯಾಗಿದ್ದು, ಆರ್ಥಿಕ ವರ್ಷದಲ್ಲಿ ಒಮ್ಮೆಯಾದರೂ ನಿರ್ದಿಷ್ಟ ಮೊತ್ತದ ಹಣವನ್ನು ಹೂಡಿಕೆ ಮಾಡಬಹುದು.

ಎನ್ ಪಿ ಎಸ್ ಅನ್ನು ಮಾರುಕಟ್ಟೆಗೆ ಲಿಂಕ್ ಮಾಡಲಾಗಿದ್ದು, ಇದರಲ್ಲಿ ನಿಧಿ ಯೋಜನೆ ಮತ್ತು ಈಕ್ವಿಟಿ ಮಾನ್ಯತೆಯ ಶೇಕಡಾವಾರು ಪ್ರಮಾಣವನ್ನು ಆಯ್ಕೆ ಮಾಡಬಹುದು.

ನಿಧಿಯಲ್ಲಿ ಹೂಡಿಕೆಯಾಗಿರುವ ಮೊತ್ತದ ಕಾರ್ಯಕ್ಷಮತೆಯ ಆಧಾರದ ಮೇಲೆ ಎನ್ ಪಿ ಎಸ್ ಖಾತೆದಾರರು ನಿವೃತ್ತಿಯ ಸಮಯದಲ್ಲಿ ಒಂದು ದೊಡ್ಡ ಮೊತ್ತವನ್ನು ಪಡೆಯುತ್ತಾರೆ ಮತ್ತು ಮಾಸಿಕ ಪಿಂಚಣಿಗಾಗಿ ವರ್ಷಾಶನವನ್ನು ಖರೀದಿಸುವ ಆಯ್ಕೆ ಇದರಲ್ಲಿದೆ.

60 ವರ್ಷಗಳ ನಿವೃತ್ತಿ ವಯಸ್ಸಿನಲ್ಲಿ ನಿವೃತ್ತಿ ಮೊತ್ತದ ಗರಿಷ್ಠ ಶೇ. 60ರಷ್ಟನ್ನು ಹಿಂತೆಗೆದುಕೊಳ್ಳುವ ಇನ್ನೊಂದು ಆಯ್ಕೆ ಇದರಲ್ಲಿದೆ. ಇದರಲ್ಲಿ ಉಳಿದ ಶೇ. 40ರಷ್ಟನ್ನು ವರ್ಷಾಶನವಾಗಿ ಖರೀದಿ ಮಾಡಬಹುದು. ಈ ರೀತಿಯ ನಿವೃತ್ತಿ ಮೊತ್ತವು ತೆರಿಗೆ ಮುಕ್ತವಾಗಿರುತ್ತದೆ.

ಎನ್‌ಪಿಎಸ್ ವಾತ್ಸಲ್ಯ ಯೋಜನೆ ಎನ್‌ಪಿಎಸ್‌ಗಿಂತ ಏಕೆ ಭಿನ್ನ?

ಎನ್ ಪಿ ಎಸ್‌ನಲ್ಲಿ 18 ವರ್ಷ ವಯಸ್ಸಿನಲ್ಲೇ ಖಾತೆಯನ್ನು ತೆರೆಯಬಹುದು. ಎನ್ ಪಿ ಎಸ್ ವಾತ್ಸಲ್ಯದಲ್ಲಿ ಪೋಷಕರು ತಮ್ಮ ಅಪ್ರಾಪ್ತ ವಯಸ್ಸಿನ ಮಕ್ಕಳ ಖಾತೆಯನ್ನು ತೆರೆಯಬಹುದು. ಇದರಲ್ಲಿ ಅಪ್ರಾಪ್ತರ ಕನಿಷ್ಠ ವಯಸ್ಸನ್ನು ಹಣಕಾಸು ಸಚಿವರು ತಿಳಿಸಿಲ್ಲ.

NPS Vatsalya Yojana
NPS Vatsalya Yojana


ಮುಕ್ತಾಯದ ಅನಂತರ ಖಾತೆ ಏನಾಗುತ್ತದೆ?

ಅಪ್ರಾಪ್ತ ವಯಸ್ಸಿನವರು ಪ್ರಾಪ್ತ ವಯಸ್ಸಿಗೆ ಬಂದಾಗ ಅವರ ಖಾತೆ ಎನ್‌ಪಿಎಸ್ ವಾತ್ಸಲ್ಯ ಯೋಜನೆಯಿಂದ ಸಾಮಾನ್ಯ ಎನ್‌ಪಿಎಸ್ ಖಾತೆಯಾಗಿ ಪರಿವರ್ತಿಸಬಹುದು ಎಂದಿದ್ದಾರೆ ಹಣಕಾಸು ಸಚಿವರು.

ಇದನ್ನೂ ಓದಿ: Ayushamn Card: 5 ಲಕ್ಷದವರೆಗೆ ಉಚಿತ ಚಿಕಿತ್ಸೆ; ಆಯುಷ್ಮಾನ್ ಕಾರ್ಡ್ ಪಡೆಯುವುದು ಹೇಗೆ?

ಎನ್ ಪಿ ಎಸ್ ಪ್ರಯೋಜನವೇನು?

ಎನ್‌ಪಿಎಸ್ ಯೋಜನೆಯಡಿ ಖಾತೆದಾರರು ನಿರ್ದಿಷ್ಟ ಮೊತ್ತದ ಬಡ್ಡಿಯನ್ನು ಪಡೆಯುತ್ತಾರೆ. ಪೂರ್ಣ ಎನ್ ಪಿ ಎಸ್ ಖಾತೆಯಾಗಿ ಪರಿವರ್ತನೆಯಾದ ಬಳಿಕ ಖಾತೆದಾರನು 60ರ ನಿವೃತ್ತಿ ವಯಸ್ಸನ್ನು ತಲುಪಿದ ಮೇಲೆ ಖಾತೆಯಲ್ಲಿರುವ ಸಂಗ್ರಹ ಮೊತ್ತದೊಂದಿಗೆ ಬಡ್ಡಿ ಸೇರಿ ಗಣನೀಯ ಮೊತ್ತವನ್ನು ಪಡೆಯಬಹುದು.

Continue Reading

ದೇಶ

Union Budget 2024: “ಮಿತ್ರಪಕ್ಷಗಳ ಓಲೈಕೆಗಾಗಿ ಬಜೆಟ್‌”- ಕೇಂದ್ರದ ವಿರುದ್ಧ ಪ್ರತಿಪಕ್ಷಗಳು ಕಿಡಿ, ಭಾರೀ ಪ್ರತಿಭಟನೆ

Union Budget 2024:ಪ್ರತಿಭಟನೆಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ(Mallikarjun Kharge), ಸೋನಿಯಾ ಗಾಂಧಿ(Sonia Gandhi) ಮತ್ತು ರಾಹುಲ್‌ ಗಾಂಧಿ(Rahul Gandhi), ಕಾಂಗ್ರೆಸ್‌, ಟಿಎಂಸಿ, ಸಮಾಜವಾದಿ ಪಕ್ಷ, ಡಿಎಂಕೆ ಮತ್ತು ಎಡಪಕ್ಷಗಳ ನಾಯಕರು ಸಂಸತ್‌ನ ಮಕರ ದ್ವಾರದಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಅಲ್ಲದೇ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿದ್ದಾರೆ.

VISTARANEWS.COM


on

Union budget 2024
Koo

ಹೊಸದಿಲ್ಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ (Nirmala Sitharaman) ಅವರು ಮಂಗಳವಾರ ಏಳನೇ ಬಾರಿಗೆ ಬಜೆಟ್‌ (Union Budget 2024) ಮಂಡಿಸಿದರು. ಆದರೆ ಈ ಬಜೆಟ್​ ಆಂಧ್ರಪ್ರದೇಶ ಹಾಗೂ ಬಿಹಾರ ಹೊರತುಪಡಿಸಿ ಬೇರೆ ರಾಜ್ಯಗಳಿಗೆ ಬಜೆಟ್‌ನಿಂದ ಯಾವುದೇ ಅನುಕೂಲ ಆಗಿಲ್ಲ ಎಂದು ಆರೋಪಿಸಿರುವ ವಿರೋಧ ಪಕ್ಷದ ಇಂಡಿಯಾ(INDIA) ಒಕ್ಕೂಟ ಇಂದು ಸಂಸತ್ತಿನ ಎದುರು ಪ್ರತಿಭಟನೆ(INDIA Bloc Protest) ನಡೆಸಿವೆ.

ಪ್ರತಿಭಟನೆಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ(Mallikarjun Kharge), ಸೋನಿಯಾ ಗಾಂಧಿ(Sonia Gandhi) ಮತ್ತು ರಾಹುಲ್‌ ಗಾಂಧಿ(Rahul Gandhi), ಕಾಂಗ್ರೆಸ್‌, ಟಿಎಂಸಿ, ಸಮಾಜವಾದಿ ಪಕ್ಷ, ಡಿಎಂಕೆ ಮತ್ತು ಎಡಪಕ್ಷಗಳ ನಾಯಕರು ಸಂಸತ್‌ನ ಮಕರ ದ್ವಾರದಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಅಲ್ಲದೇ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿದ್ದಾರೆ.

ಬಜೆಟ್​ ಮುಕ್ತಾಯದ ಬಳಿಕ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ನಿವಾಸದಲ್ಲಿ ಭಾರತ ಬ್ಲಾಕ್ ಪಕ್ಷಗಳ ಉನ್ನತ ನಾಯಕರು ಸಭೆ ನಡೆಸಿ ನಾಳೆ ಪ್ರತಿಭಟನೆ ನಡೆಸಲು ನಿರ್ಧರಿಸಿದ್ದಾರೆ. ಖರ್ಗೆ ಅವರ ನಿವಾಸದಲ್ಲಿ ನಡೆದ ಸಭೆಯಲ್ಲಿ ಕಾಂಗ್ರೆಸ್ ಸಂಸದರಾದ ರಾಹುಲ್ ಗಾಂಧಿ ಮತ್ತು ಕೆಸಿ ವೇಣುಗೋಪಾಲ್, ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷದ (ಎಸ್‌ಪಿ) ಮುಖ್ಯಸ್ಥ ಶರದ್ ಪವಾರ್, ಶಿವಸೇನೆ (ಯುಬಿಟಿ) ಸಂಸದರಾದ ಸಂಜಯ್ ರಾವುತ್ ಮತ್ತು ಅರವಿಂದ್ ಸಾವಂತ್, ಡಿಎಂಕೆ ಸಂಸದರಾದ ಟಿಆರ್ ಬಾಲು ಮತ್ತು ತಿರುಚಿ ಶಿವ, ಜಾರ್ಖಂಡ್ ಮುಕ್ತಿ ಮುಂತಾದ ನಾಯಕರು ಭಾಗವಹಿಸಿದ್ದರು. ಮೋರ್ಚಾ ಸಂಸದ ಮಹುವಾ ಮಜಿ, ತೃಣಮೂಲ ಕಾಂಗ್ರೆಸ್ ಸಂಸದ ಕಲ್ಯಾಣ್ ಬ್ಯಾನರ್ಜಿ, ಆಮ್ ಆದ್ಮಿ ಪಕ್ಷದ ಸಂಸದರಾದ ಸಂಜಯ್ ಸಿಂಗ್ ಮತ್ತು ರಾಘವ್ ಚಡ್ಡಾ ಮತ್ತಿತರರು ಭಾಗಿಯಾಗಿದ್ದರು.

ಸಭೆಯ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಕೆ.ಸಿ.ವೇಣುಗೋಪಾಲ್, ಈ ಬಾರಿಯ ಕೇಂದ್ರ ಬಜೆಟ್‌ನಿಂದ ಈಗಾಗಲೇ ಬಜೆಟ್ ಪರಿಕಲ್ಪನೆಯನ್ನು ನಾಶಪಡಿಸಿದೆ. ಅವರು ಬಹುತೇಕ ರಾಜ್ಯಗಳನ್ನು ಸಂಪೂರ್ಣವಾಗಿ ತಾರತಮ್ಯ ಮಾಡಿದ್ದಾರೆ, ಆದ್ದರಿಂದ ನಾವು ಪ್ರತಿಭಟನೆಗೆ ಮುಂದಾಗಿದ್ದೇವೆ ಎಂದು ತಿಳಿಸಿದರು.

ಇದನ್ನೂ ಓದಿ: Union Budget 2024: ಬಜೆಟ್‌ನಲ್ಲಿ ಬಿಹಾರ, ಆಂಧ್ರಪ್ರದೇಶಕ್ಕೆ ಬಂಪರ್‌ ಕೊಡುಗೆ: ಇಲ್ಲಿದೆ ನಗೆಯುಕ್ಕಿಸುವ ಮೀಮ್ಸ್‌

Continue Reading

ದೇಶ

Budget Analysis 2024: ಅನ್ನದಾತ, ಗರೀಬ, ಮಹಿಳಾ ಮತ್ತು ಯುವಜನತೆಯ ಅಭಿವೃದ್ಧಿಯನ್ನು ಕೇಂದ್ರೀಕರಿಸಿದ ಬಜೆಟ್

Budget Analysis 2024: ಕೇಂದ್ರದಲ್ಲಿ ಸತತ ಮೂರನೇ ಬಾರಿಗೆ ಅಧಿಕಾರಕ್ಕೆ ಬಂದ ಎನ್‌ಡಿಎ ಸರ್ಕಾರ ತನ್ನ ಮೊದಲ ಬಜೆಟ್‌ ಅನ್ನು ಮಂಗಳವಾರ ಮಂಡಿಸಿದೆ. ಏಳನೇ ಬಾರಿಗೆ ಬಜೆಟ್‌ ಮಂಡಿಸಿ ದಾಖಲೆ ಬರೆದ ವಿತ್ತ ಸಚಿವೆ ನಿರ್ನಲಾ ಸೀತಾರಾಮನ್‌ ವಿವಿ ಕೊಡುಗೆ ಪ್ರಕಟಿಸಿದ್ದಾರೆ. ಹಾಗಾದರೆ ಬಜೆಟ್‌ನಲ್ಲಿ ಏನಿದೆ? ಯಾರಿಗೆ ಸಿಹಿ? ಯಾರಿಗೆ ಕಹಿ? ಇಲ್ಲಿದೆ ಸಮಗ್ರ ಚಿತ್ರಣ.

VISTARANEWS.COM


on

Budget Analysis 2024
Koo

ನಾರಾಯಣ ಯಾಜಿ
ಒಂದು ಕಾಲವಿತ್ತು, ಕೇಂದ್ರ ಸರ್ಕಾರದ ಬಜೆಟ್ ಮಂಡಿಸುತ್ತಿದ್ದಂತೆ ಅದರ ಕುರಿತು ಜನರು ತಮ್ಮ ಅಭಿಪ್ರಾಯವನ್ನು ಇಂದಿನಷ್ಟು ಬಹಿರಂಗವಾಗಿ ಹೇಳುತ್ತಿರಲಿಲ್ಲ. ಅವರೆಲ್ಲರೂ ಓರ್ವ ವ್ಯಕ್ತಿ ಈ ಬಜೆಟ್ ಕುರಿತು ಏನು ಹೇಳುತ್ತಾರೆ ಎಂದು ಕಾಯುತ್ತಿದ್ದರು. ಆ ವ್ಯಕ್ತಿ ಬೇರೆ ಯಾರೂ ಅಲ್ಲ., ಪ್ರಸಿದ್ಧ ವಕೀಲರಾದ ನಾನಿ ಪಾಲ್ಕೀವಾಲಾ. ಅವರು ಮುಂಬೈಯ ವಾಂಖೆಡೆ ಕ್ರೀಡಾಂಗಣದಲ್ಲಿ ಬಜೆಟ್ ಕುರಿತು ಭಾಷಣ ಮಾಡುತ್ತಿದ್ದಂತೆ ಅದಕ್ಕೆ ಸರಿಯಾಗಿ ಇಡೀ ದೇಶ ಪ್ರತಿಸ್ಪಂದಿಸುತ್ತಿತ್ತು. ಒಂದೆರಡು ತಿಂಗಳಾದಮೇಲೆ ಅದನ್ನು ಮರೆತೂ ಬಿಡುತ್ತಿದ್ದರು. ಜನಸಾಮಾನ್ಯರ ಬದುಕಿನಲ್ಲಿ ಬಜೆಟ್ ಕುರಿತಾದ ಚರ್ಚೆ ಇಂದಿನಷ್ಟು ಆಗುತ್ತಿರಲಿಲ್ಲ. ಆಗಿನ ಒಂದು ಜೋಕ್ “ಆರ್ಥಿಕ ಸಚಿವರು ನಾನಿ ಪಾಲ್ಕೀವಾಲಾರು ಬಜೆಟ್ ಮೇಲೆ ಭಾಷಣ ಮಾಡಿದಾಗಲೇ ತಾವು ಮಂಡಿಸಿದ ಬಜೆಟ್ ಹೇಗಿದೆ ಎನ್ನುವುದನ್ನು ತಿಳಿದುಕೊಳ್ಳುತ್ತಿದ್ದರು”. ಮಂಗಳವಾರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ (Nirmala Sitharaman) ಸತತ ಏಳನೆಯ ಸಲ ಬಜೆಟನ್ನು ಮಂಡಿಸುತ್ತಿರುವಂತೆ ಅನೇಕ ಕಡೆಯಿಂದ ಅನೇಕ ಅಭಿಪ್ರಾಯಗಳು ಪುಂಖಾನುಪುಂಖವಾಗಿ ಹಾರಾಡಿತು (Union Budget 2024). ಷೇರು ಮಾರುಕಟ್ಟೆ ಒಮ್ಮೆಲೆ ಎಲ್ಲವನ್ನೂ ಕಳೆದುಕೊಂಡಂತೆ 80,766.41ರಿಂದ ಕೆಳಕ್ಕೆ 1542.09 ಅಂಕಗಳಷ್ಟು ಜಾರಿ ದಿನದ ಕೊನೆಯಲ್ಲಿ 79,224,32 ಬಂದು ಸುಧಾರಿಸಿಕೊಂಡಿತು (Budget Analysis 2024).

ನಿರ್ಮಲಾ ಸೀತಾರಾಮನ್ ಅವರ ಬಜೆಟಿನಲ್ಲಿ ಕಂಡು ಬಂದ ಅಂಶವೆಂದರೆ ಮೊದಲಿಗೆ ಈ ಬಜೆಟಿನಲ್ಲಿ ಯಾವ ಆಕರ್ಷಣೆಯೂ ಇಲ್ಲ. ಇತಿಹಾಸದಲ್ಲಿಯೇ ಬೃಹತ್ತಾದ ರೂ. 47.66 ಲಕ್ಷ ಕೋಟಿ ರೂ.ಯ ಈ ಬಜೆಟ್ ಮೇಲುನೋಟಕ್ಕೆ ನಿರಾಸೆಯಾದಂತೆ ಕಾಣುತ್ತಿದೆ. ಇದಕ್ಕೆ ಕಾರಣ ಮೊದಲನೆಯದು ಬಿಹಾರ ಮತ್ತು ಆಂಧ್ರಪ್ರದೇಶವನ್ನು ಬಿಟ್ಟರೆ ಉಳಿದ ರಾಜ್ಯಗಳಿಗೆ ಯಾವ ಯೋಜನೆಯ ಲಾಭವೂ ಇಲ್ಲದಿರುವುದು. ಎರಡನೆಯದು ಇತ್ತೀಚಿಗೆ ಭಾರತದ ಮಧ್ಯಮ ವರ್ಗ ತಮ್ಮ ಉಳಿತಾಯವನ್ನು ಸಾಂಪ್ರದಾಯಿಕವಾದ ಬ್ಯಾಂಕಿಂಗ್ ವಲಯದಿಂದ ಷೇರು ಮಾರುಕಟ್ಟೆ ಮತ್ತು ಪರಸ್ಪರ ನಿಧಿ (Mutual Fund)ಯತ್ತ ವಾಲಿದ್ದು, ಅವರಿಗೆ ಆಘಾತವಾದಂತೆ ಕಂಡು ಬಂದಿರುವುದು, ನಿರ್ಮಲಕ್ಕ ಇಲ್ಲಿ ಕ್ಯಾಪಿಟಲ್ ಗೇಯ್ನ್‌ ಅನ್ನು ಹೆಚ್ಚಿಸಿರುವುದು. ಒಂದು ವರ್ಷಕ್ಕೂ ಕಿರು ಅವಧಿಯಲ್ಲಿ ಮಾರಿದ ಬಂಡವಾಳ ಏರಿಕೆಯ ಲಾಭಕ್ಕೆ ಮೊದಲಿದ್ದ ಶೇ. 15ರಿಂದ ಇದೀಗ ಶೇ. 20ಕ್ಕೆ ಏರಿಸಲಾಗಿದೆ. ದೀರ್ಘಾವಧಿಯ ಅಂದರೆ ಒಂದು ವರ್ಷಕ್ಕೂ ಮೀರಿದ ಬಂಡವಾಳ ಹೆಚ್ಚಳಕ್ಕೆ ಶೇ. 10ರಿಂದ 12.5ಕ್ಕೆ ಏರಿಸಲಾಗಿದೆ.

ಪೆಟ್ರೋಲಿಯಮ್ ಉತ್ಪನ್ನಗಳು ಜಿಎಸ್‌ಟಿ ವ್ಯಾಪ್ತಿಗೆ ಇಲ್ಲ

ಪೆಟ್ರೋಲಿಯಮ್ ವಸ್ತುಗಳನ್ನು GST ವ್ಯಾಪ್ತಿಗೆ ತರುವ ಯಾವ ಸೂಚನೆಯನ್ನೂ ಈ ಬಜೆಟ್‌ ಕೊಟ್ಟಿಲ್ಲ. ಆದರೆ ಕಳೆದ ಏಳು ವರ್ಷಗಳಿಂದ ಮೋದಿ ಸರ್ಕಾರ ಮಂಡಿಸುತ್ತಿರುವ ಬಜೆಟ್‌ ಗಮನಿಸಿದಾಗ ಒಂದು ವಿಷಯ ಸ್ಪಷ್ಟವಾಗುವುದೇನೆಂದರೆ, ಪ್ರತೀ ಬಜೆಟ್ ಸಹ ಹಿಂದಿನ ಆರ್ಥಿಕ ನೀತಿಯ ಮುಂದುವರಿದ ಭಾಗವಾಗಿದೆ. ಕಳೆದ ಫೆಬ್ರವರಿಯಲ್ಲಿ ಮಂಡಿಸಿದ ಮಧ್ಯಮಕಾಲೀನ (Interim) ಬಜೆಟಿನ ಮುಂದುವರಿದ ಭಾಗವಾಗಿ ಈ ಬಜೆಟ್ ಹೊರಬಂದಿದೆ. ಕಳೆದ ಚುನಾವಣೆಯಲ್ಲಿ ಮೋದಿಯವರ ಕೆಲವೊಂದು ಆರ್ಥಿಕ ನೀತಿಗಳು ಅಪಪ್ರಚಾರಕ್ಕೆ ಗುರಿಯಾಗಿ ಅದರ ಪರಿಣಾಮ ಚುನಾವಣೆಯಲ್ಲಿ ಕಾಣಬಂದಿತ್ತು. ಅದನ್ನು ನಿವಾರಿಸಲೋ ಎಂಬಂತೆ ಈ ಸಾರಿ ತಮ್ಮ ಆಯವ್ಯವನ್ನು ಮುಖ್ಯವಾಗಿ ಅನ್ನದಾತ, ಗರೀಬ್-ಬಡವರ್ಗ, ಮಹಿಳಾವರ್ಗ ಮತ್ತು ಯುವಜನತೆಯನ್ನು ಕೇಂದ್ರೀಕರಿಸಿ ಹಣೆಯಲಾಗಿದೆ (Budget Analysis 2024).

ಮಧ್ಯಮ ವರ್ಗದ ಕಲ್ಯಾಣ

ಈ ಬಜೆಟಿನ ಮುಖ್ಯ ಥೀಮ್ ಉದ್ಯೋಗ ಸೃಷ್ಟಿ, ಕೌಶಲ್ಯಾಭಿವೃದ್ಧಿ, MSME ಮತ್ತು ಮದ್ಯಮ ವರ್ಗದ ಜನರ ಕಲ್ಯಾಣ. ಇದಕ್ಕೆ 9 ವಿಧದ ಮಾರ್ಗಸೂಚಿಯನ್ನು ಹಮ್ಮಿಕೊಂಡು ಇದು ವಿಕಸಿತ ಭಾರತದ ಬಜೆಟ್ ಎಂದು ಘೋಷಿಸಲಾಗಿದೆ. ಮುಖ್ಯವಾದ ಅಂಶಗಳನ್ನು ಗಮನಿಸಬೇಕಾದುದು ಎಂದರೆ ಇಂತಹ ಅನೇಕ ಆಕರ್ಷಕ ಘೋಷಣೆಗಳನ್ನು ಸಾಕಷ್ಟು ನೋಡಿದ್ದೇವೆ. ಉದ್ಯೋಗ ಸೃಷ್ಟಿಯಲ್ಲಿ ಮೊದಲನೆಯದಾದ 15,000 ರೂ. ಮಿತಿಗೆ ಒಳಪಟ್ಟು ಜಾರಿಗೆ ತಂದ ಇನ್ನಿತರ ಯೋಜನೆಗಳನ್ನು ಸರಿಯಾಗಿ ಅಳವಡಿಸದಿದ್ದರೆ ಇವು ಘೋಷಣೆಯಾಗಿಯೇ ಉಳಿಯುವ ಅಪಾಯವಿದೆ. ಆದರೆ ಮುಖ್ಯವಾಗಿ ಮೆಚ್ಚಿಕೊಳ್ಳಲೇ ಬೇಕಾದ ವಿಷಯ ದೇಶದ ಪ್ರಮುಖ 500 ಕಂಪನಿಗಳಲ್ಲಿ ಯುವಜನತೆಗೆ ಇಂಟರ್ನಶಿಪ್ ತರಬೇತಿಯನ್ನು ಕೊಡಿಸುವುದು. ಈ ಕುರಿತು ಸರಿಯಾಗಿ ಜಾರಿಗೆ ತರುವತ್ತ ಒಂದು ಪರಿಣಾಮಕಾರಿಯಾದ ಆಡಳಿತ ಯಂತ್ರವನ್ನು ಕಟ್ಟಬೇಕಾದ ಅವಶ್ಯಕತೆಯಿದೆ. ಇಲ್ಲದಿದ್ದರೆ ಮೋದಿ ಈ ಮೊದಲು ಸರ್ಕಾರ ಜಾರಿಗೆ ತಂದ ಆಯುಷ್ಮಾನ್ ಭಾರತ, ಅಟಲ್ ಪೆನ್ಷನ್ ಯೋಜನೆಗಳೊಂದಿಗೆ ಒಂದಾಗಬಹುದಾದ ಅಪಾಯವೂ ಉಂಟು.

ದುಡಿಯವ ಮಹಿಳೆಯರಿಗೆ ಅನುಕೂಲ

ದುಡಿಯವ ಮಹಿಳೆಯರಿಗೆಂದೇ ತೆರೆಯಲಿರುವ ಹಾಸ್ಟೇಲ್ ಮತ್ತು ಸ್ವಸಹಾಯ ಗುಂಪುಗಳ ಉತ್ಪಾದನೆಗಳಿಗೆ ಸರಿಯಾದ ಮಾರುಕಟ್ಟೆ ಸಿಗುವ ಯೋಜನೆಗಳೂ ಸಹ ಮೆಚ್ಚತಕ್ಕದ್ದೇ. ಈ ದೇಶದಲ್ಲಿ ಸುಧಾರಣೆಗಳನ್ನು ರಾಜಕೀಯ ದೃಷ್ಟಿಯಿಂದ ನೋಡುವ ಕಾರಣ ಇದನ್ನು ಜಾರಿಗೊಳಿಸಿವ ರಾಜ್ಯ ಸರ್ಕಾರಗಳ ಪಾತ್ರವನ್ನು ಕಡೆಗಣಿಸುವಂತಿಲ್ಲ. ಕಲ್ಯಾಣ ಯೋಜನೆಗಳನ್ನು ಈಡೇರಿಸುವತ್ತ ಪಕ್ಷಬೇಧ ಮರೆತು ಎಲ್ಲರೂ ಒಂದಾಗುತ್ತಾರೆ ಎಂದು ಆಶಿಸೋಣ (Budget Analysis 2024).

ವಿರೋಧ ಪಕ್ಷಗಳ ಟೀಕೆ

ಈಗಾಗಲೇ ಮೊದಲ ಸಲ ಉದ್ಯೋಗ ಸಿಕ್ಕಿದವರಿಗೆ 5,000 ರೂ. ತಮ್ಮ ಪ್ರಣಾಳಿಕೆಯಿಂದ ಕದ್ದದ್ದು ಎಂದು ವಿರೋಧ ಪಕ್ಷಗಳು ಹೇಳತೊಡಗಿವೆ. ಒಳ್ಳೆಯ ವಿಚಾರಗಳು ಎಲ್ಲಿಂದಲೂ ಬರಲಿ ತೊಂದರೆ ಏನಂತೆ? ಮುಖ್ಯವಾಗಿ ಈ ಸಲ ಬಜೆಟಿನಲ್ಲಿ ಕೃಷಿಗೆ ಒತ್ತು ನೀಡಿರುವುದು. ಅದರಲ್ಲಿಯೂ ನೈಸರ್ಗಿಕ ಕೃಷಿ ಮತ್ತು ಶಿಗಡಿ ಕೃಷಿಯ ಮತ್ತು ಅದರ ರಪ್ತಿನ ಕುರಿತು ನಬಾರ್ಡಿನ ಸಹಯೋಗದಲ್ಲಿ ಅನುಷ್ಠಾನಗೊಳಿಸುವ ಕ್ರಿಯೆ ಸ್ವಾಗತಾರ್ಹ. ನಬಾರ್ಡ್ ಇಂತಹ ಹಲವಾರು ಯೋಜನೆಗಳನ್ನು ಸದಾ ಜಾರಿಗೊಳಿಸುತ್ತಲೇ ಇದೆ. ಬ್ಯಾಂಕು ಮತ್ತು ಇತರ ಸಂಸ್ಥೆಗಳು ಇದರ ಪ್ರಯೋಜನಕ್ಕೆ ಮುಂದೆ ಬರಬೇಕು. ಕೃಷಿವಲಯಕ್ಕೆ Digital Public Infrastructure ಒಂದು ಕ್ರಾಂತಿಯನ್ನು ತರಬಹುದು. ದಿಜಿಟಲ್ ವೇದಿಕೆಯಲ್ಲಿ ರೈತರಿಗೆ ಕೃಷಿಯ ವಿವಿಧ ಸುಧಾರಣೆ ಮತ್ತು ಕೃಸಿಯೋತ್ಪನ್ನಗಳ ಮಾರುಕಟ್ಟೆಯ ವಿಷಯದಲ್ಲಿ ತಕ್ಷಣಕ್ಕೆ ಮಾಹಿತಿಯನ್ನು ಇದು ಒದಗಿಸುತ್ತದೆ.

ಮುದ್ರಾ ಸಾಲದ ಮೊತ್ತ ಏರಿಕೆ

ಸರಕಾರದ ಮುದ್ರಾ ಸಾಲ ಆರ್ಥಿಕವಾಗಿ ಹಿಂದುಳಿದವರಿಗೆ ಒಂದು ವರದಾನ. ರಸ್ತೆಬದಿಯ ತಳ್ಳುಗಾಡಿಯವರಿಂದ ಹಿಡಿದು ಮದ್ಯಮ ಹಂತದ ಕೈಗಾರಿಕಗಳ ವರೆಗೆ ಸುಲಭದಲ್ಲಿ ಸಾಲ ಸಿಗುವ ವ್ಯವಸ್ಥೆ ಇದಾಗಿದೆ. ಬ್ಯಾಂಕು ವಿಧಿಸುವ ಬಡ್ಡಿಗೆ ಸಹಾಯಧನವೂ ಇದೆ. ಇದೀಗ ಮೊದಲಿದ್ದ 10 ಲಕ್ಷ ರೂಪಾಯಿಯ ಮಿತಿಯನ್ನು 20 ಇಪ್ಪತ್ತು ಲಕ್ಷ ರೂಪಾಯಿಗೆ ಏರಿಸಿದ್ದು ಸ್ವಾಗತಾರ್ಹ (Budget Analysis 2024).

ಸಣ್ಣ ಮತ್ತು ಮಧ್ಯಮ ಹಂತದ ಕೈಗಾರಿಕೆಗಳು ತಮ್ಮ ಉತ್ಪಾದನೆಯನ್ನು ಪೂರೈಸಿದರೂ ಅದರ ಮೊತ್ತ ಖರೀದಿದಾರರಿಂದ ಸರಿಯಾಗಿ ಸಿಗದೇ ಇರುವ ಕುರಿತು ಕಷ್ಟ ಪಡುತ್ತಿದ್ದರು. ಇದರಿಂದ ಅವರ ಬ್ಯಾಲೆನ್ಸ್ ಶೀಟನಲ್ಲಿ ಬರತಕ್ಕ ಬಾಕಿ ಎಂದು ತೋರಿಸಬೇಕಾಗಿತ್ತು. ಇದಕ್ಕ ಉತ್ತರವಾಗಿ ಬಂದಿರುವುದು TReDs (Trade Receivable Discounting System). ಕೇವಲ MSMEಗಳು ಮಾತ್ರ ಈ ವೇದಿಕೆಯಲ್ಲಿ ಭಾಗವಹಿಸಬಹುದಾಗಿದೆ. ದುಡಿಯುವ ಬಂಡವಾಳವನ್ನು ಸ್ಪರ್ಧಾತ್ಮಕ ದರದಲ್ಲಿ ವಿವಿಧ ಹಣಕಾಸು ಸಂಸ್ಥೆಗಳಿಂದ ಪಡೆಯಬಹುದಾದ ಅವಕಾಶ ಇಲ್ಲಿದೆ. ಇಲ್ಲಿ ಉದ್ದಿಮೆದಾರ ಮಾರಾಟ ಮಾಡಿದ ಇನ್ವಾಯಿಸಿನ ಮೇಲೆ ಡಿಸ್ಕೌಂಟ್ ಮಾಡಿ ತನಗೆ ಬರಬೇಕಾದ ಹಣವನ್ನು ಪಡೆದುಕೊಂಡು ಅದನ್ನು ಉದ್ದಿಮೆ ನಡೆಸಲು ಬಳಸಬಹುದಾಗಿದೆ. ಇಷ್ಟು ದಿವಸ ಇದರಲ್ಲಿ ನೋಂದಾಯಿಸಿಕೊಳ್ಳುವ ಖರೀದಿದಾರರ ವ್ಯವಹಾರ 500 ಕೋಟಿ ರೂ. ಇದ್ದಿದ್ದನ್ನು ಇದೀಗ 250 ಕೋಟಿ ರೂ.ಗೆ ಇಳಿಸಲಾಗಿದೆ.

ಇದನ್ನೂ ಓದಿ: Narendra Modi:‌ ದೇಶದ ಸರ್ವಾಂಗೀಣ ಏಳಿಗೆಗೆ ಈ ಬಜೆಟ್‌ ಅಕ್ಷಯಪಾತ್ರೆ; ನರೇಂದ್ರ ಮೋದಿ ಬಣ್ಣನೆ

ಆರ್ಥಿಕಾಭಿವೃದ್ಧಿಯಲ್ಲಿ ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳು ಉದ್ಯೋಗಸೃಷ್ಟಿ ಮತ್ತು ಆದ್ಯತಾವಲಯದ ಅಗತ್ಯಗಳನ್ನು ಪೂರೈಸುವತ್ತ ದೊಡ್ಡ ಹೆಜ್ಜೆಯನ್ನು ಈ ನೀತಿಯ ಅನುಷ್ಠಾನ ಇರಿಸುತ್ತವೆ. ಆತ್ಮನಿರ್ಭರ ಭಾರತಕ್ಕೆ ಸಣ್ಣ ಉದ್ದಿಮೆಗಳು ಅತ್ಯಗತ್ಯ. ಈ ನಿಟ್ಟಿನಲ್ಲಿ ಮಹತ್ವದ ಹೊಸ ಘೋಷಣೆಯನ್ನು ನಿರ್ಮಲಾ ಸೀತಾರಾಮನ್ ಹೇಳಿರುವ ಅಂಶವೆಂದರೆ ನೂರು ಕೋಟಿ ರೂಪಾಯಿವರೆಗಿನ ಉದ್ದಿಮೆ ಸ್ಥಾಪಿಸಲು ಕ್ರೆಡಿಟ್ ಗ್ಯಾರೆಂಟಿ ಸ್ಕೀಮ್ ಒಂದನ್ನು ಸ್ಥಾಪಿಸಲು ಮುಂದೆ ಬಂದಿರುವುದು. ಇದು ತನಕ ಯಾವುದೇ ಉದ್ದಿಮೆದಾರ ಹೊಸ ಉದ್ದಿಮೆಯನ್ನು ಸ್ಥಾಪಿಸಲು ಆತನಲ್ಲಿ ಬ್ಯಾಂಕಿಗೆ ಕೊಡಬೇಕಾದ ಅಡಮಾನ ಅಥವಾ ಜಾಮೀನು ಇಲ್ಲದಿದ್ದರೆ ಈ ಸಂಸ್ಥೆಯಿಂದ 5 ಕೋಟಿ ರೂ.ಯ ತನಕ ಸಾಲ ಪಡೆಯಲು CGTMSE ಎನ್ನುವ ಸಂಸ್ಥೆ ಆ ಭದ್ರತೆಯನ್ನು ತಾನು ಒದಗಿಸುತ್ತದೆ. ಇದಕ್ಕೆ ಪ್ರತೀ ವರ್ಷವೂ ಸಾಲಗಾರ ನಿರ್ಧಿಷ್ಟ ಮೊತ್ತದ ಫೀಯನ್ನು ಕಟ್ಟಬೇಕಾಗುತ್ತದೆ. ಅದನ್ನು ನೂರು ಕೋಟಿ ರೂ.ಗೆ ಏರಿಸಿರುವುದು ಆತ್ಮನಿರ್ಭರ ಭಾರತಕ್ಕೆ ಅವಶ್ಯವಿರುವ Start Upಗಳಿಗೆ ಯಾವ ತೊಂದರೆಯೂ ಆಗುವುದಿಲ್ಲ. Ideaಗಳಿದ್ದರೆ ಯಾರೂ ಉದ್ದಿಮೆಯನ್ನು ಸ್ಥಾಪಿಸಿ ಯಶಸ್ಸನ್ನು ಗಳಿಸಲು ಸಾಧ್ಯವೆನ್ನುವ ಅನೇಕ ಸವಲತ್ತುಗಳನ್ನು CGTMSE ಮತ್ತು TReDS ಪ್ಲಾಟಫಾರ್ಮ್‌ಗಳು ಒದಗಿಸುತ್ತವೆ. ಇವು ಯಶಸ್ವಿಯಾದರೆ ಮೋದಿ 3.0 ಭಾರತದ ಆತ್ಮನಿರ್ಭರ ಮತ್ತು ಸ್ವಾವಲಂಭಿ ಅರ್ಥವ್ಯವಸ್ಥೆಗೆ ದೊಡ್ಡ ಕೊಡುಗೆಯಾಗಲಿದೆ (Budget Analysis 2024).

ಏಂಜೆಲ್ ಟ್ಯಾಕ್ಸ್‌ ರದ್ದು

ಅದೇ ರೀತಿ ಏಂಜೆಲ್ ಕರ (Angel Tax) ವ್ಯವಸ್ಥೆ ಎನ್ನುವುದು 2012ರಿಂದ ಜಾರಿಯಲ್ಲಿತ್ತು. ಯಾವುದೇ ಒಂದು (Unlisted in the stock market) ಉದ್ದಿಮೆ ಅಥವಾ Startupಗಳು ಯಾರನ್ನಾದರೂ ಹೂಡಿಕೆದಾರರನ್ನು ಹೂಡಿಕೆಗೆಂದು ತನ್ನಲ್ಲಿರುವ ಷೇರುಗಳನ್ನು ಮಾರಿ ಹಣ ಹೊಂದಿಸಿದರೆ ಅದರ ನಿವ್ವಳ ಮೊತ್ತಕ್ಕಿಂತ ಹೆಚ್ಚಿಗೆ ಹಣ ಹೂಡಿಕೆಯಾದರೆ ಅದರ ಮೇಲೆ ಶೇ. 30.9ರಷ್ಟು ಆದಾಯ ಕರವನ್ನು ತುಂಬಬೇಕಾಗಿತ್ತು. ಇದೀಗ ಅದನ್ನು ಸಂಪೂರ್ಣವಾಗಿ ತೆಗೆದುಹಾಕಿರುವುದರಿಂದ ಉಳ್ಳವರಿಂದ ಹಣ ಹೊಂದಿಸಲು ಇವುಗಳಿಗೆ ತೊಂದರೆಯಾಗಲಾರದು. ದೊಡ್ಡ ಪ್ರಮಾಣದ ಹೂಡಿಕೆಯನ್ನು ದೇಶದೊಳಗಿನಿಂದ ಮತ್ತು ವಿದೇಶದಿಂದ ವೆಂಚರ್ ಕ್ಯಾಪಿಟಲ್ಸ್ ಗಳನ್ನು ನಿರೀಕ್ಷಿಸಬಹುದಾಗಿದೆ. ಈ ಬಜೆಟಿನ ವಿಶೇಷವೆಂದರೆ ಕೃಷಿ ಮತ್ತು ಆದ್ಯತಾವಲಯ ಹೀಗೆ ಯಾವ ವಿಧಾನದಲ್ಲಿ ನೀಡಬಹುದಾದ ಕೊಡುಗೆಗಳು ಅಂತಿಮವಾಗಿ ಸಣ್ಣ ಉದ್ದಿಮೆಗಳಿಗೆ ಸಹಾಯವಾಗುವಂತಿರಬೇಕೆನ್ನುವುದು. ಸಂಶೋಧನೆ ಮತ್ತು ತಾಂತ್ರಿಕತೆಯ ಮೇಲೆತ್ತುವಿಕೆಯಲ್ಲೂ ಇದಕ್ಕೇ ಒತ್ತು ಕೊಡಲಾಗಿದೆ. ನಗರಾಭಿವೃದ್ಧಿ ಮತ್ತು ಆವಾಸ ಯೋಜನೆಯನ್ನೂ ಧನಾತ್ಮಕ ವಿಧಾನದಲ್ಲಿಯೇ ನೋಡಬೇಕಾಗಿದೆ.

ಇದನ್ನೂ ಓದಿ: Union Budget 2024: ಯುವಜನ, ಉದ್ಯೋಗ, ಉದ್ದಿಮೆಯೇ ಫೋಕಸ್‌; ಇಲ್ಲಿದೆ ಕೇಂದ್ರ ಬಜೆಟ್‌ನ ಸಮಗ್ರ ಚಿತ್ರಣ

ಬಿಹಾರದ ಅಭಿವೃದ್ಧಿಯ ನೆವದಲ್ಲಿ ಇಡೀ ಉತ್ತರಭಾರತದಲ್ಲಿ ಅಮೃತಸರದಿಂದ ಹಿಡಿದು ಆಸಾಮಿನವರೆಗೆ ಔದ್ಯಮಿಕ ಕಾರಿಡಾರು ರೂಪಿಸಲು ಯೋಜನೆಯನ್ನು ಘೋಷಿಸಲಾಗಿದೆ. ಟೆಂಪಲ್ ಟೂರಿಸಮ್ ಯೋಜನೆಯೂ ಸಹ ಇದರ ಭಾಗವಾಗಿ ಮೂಡಿ ಬಂದಿದೆ. ಆಂಧ್ರಪ್ರದೇಶಕ್ಕೆ ಹದಿನೇಳು ಸಾವಿರ ಕೋಟಿ ರೂ.ಯನ್ನು ಕೊಟ್ಟು ಚಂದ್ರಬಾಬು ನಾಯ್ಡು ಖುಷಿಯಿಂದ ಇರುವಂತೆ ಮತ್ತು ಎಲ್ಲ ಹೊಸ ಉದ್ದಿಮೆಗಳು ತಮ್ಮ ರಾಜ್ಯಕ್ಕೆ ಬರುವಂತೆ ಮಾಡುವ ಅವರ ಪ್ರಯತ್ನಕ್ಕೆ ಇನಷ್ಟು ಇಂಬು ಸಿಗಲಿದೆ. ಪೂರ್ವಾಂಚಲದ ಅಭಿವೃದ್ಧಿಗೆ ಅನುದಾನ ಮೀಸಲಿಟ್ಟಿರುವುದು ಅನಿವಾರ್ಯ ಮತ್ತು ಅಗತ್ಯವೂ ಹೌದು. ಈ ಭಾಗದಲ್ಲಿ ಪ್ರವಾಸೋದ್ದಿಮೆ ಹೆಚ್ಚಾದಂತೆ ಅವು ಸ್ವಾವಲಂಬಿಯಾಗಲು ಸಾಧ್ಯ.

ಶಿಕ್ಷಣ ಕ್ಷೇತ್ರಕ್ಕೂ ಒತ್ತು

ಉನ್ನತ ವಿದ್ಯಾಭ್ಯಾಸಕ್ಕಾಗಿ 10 ಲಕ್ಷ ರೂ.ವರೆಗಿನ ಸಾಲದ ಸೌಲಭ್ಯ ಮತ್ತು ಅವುಗಳ ಪ್ರತೀ ವರ್ಷದ ಬಡ್ಡಿಯ ಮೇಲೆ 3 ಲಕ್ಷ ರೂ.ವರೆಗೆ ಸಹಾಯಧನ ಉತ್ತಮ ಸಂಸ್ಥೆಗಳಲ್ಲಿ ವಿದ್ಯಾಭ್ಯಾಸ ಮಾಡುವ ಕನಸನ್ನು ಹೊತ್ತ ಅನೇಕರಿಗೆ ವರವಾಗಲಿದೆ.

ಆರ್ಥಿಕ ಶಿಸ್ತು

ಈ ವಿಚಾರದಲ್ಲಿ ಈ ಬಜೆಟ್ ಸಾಕಷ್ಟು ಶ್ರಮಪಟ್ಟಿದೆ. ದೇಶದ ಆಂತರಿಕ ಸಾಲ ಮೇರೆ ಮೀರುತ್ತಿದೆ ಎನ್ನುವವರಿಗೆ ಉತ್ತರವಾಗಿ ವಿತ್ತೀಯ ಕೊರತೆಯನ್ನು ಶೇ 4.9ಕ್ಕೆ ಇಳಿಸಲಾಗಿದೆ. ರೆವಿನ್ಯೂ ವೆಚ್ಚವನ್ನು ಬಿಟ್ಟರೆ ಕ್ಯಾಪಿಟಲ್ ವೆಚ್ಚ ಎರಡನೆಯದು. ಒಟ್ಟು 11,11,111 ಕೋಟಿ ರೂಪಾಯಿಯನ್ನು ಕ್ಯಾಪಿಟಲ್ ವೆಚ್ಚಕ್ಕೆ ಮೀಸಲಿಟ್ಟಿದ್ದಾರೆ. ಇದು ದೇಶದ ಅಭಿವೃದ್ಧಿಗೆ ಅಗತ್ಯವಾದ ಮೂಲಭೂತ ಸೌಲಭ್ಯ, ರಸ್ತೆ, ಬಂದರು ಮೊದಲಾದ ರಂಗದಲ್ಲಿ ವಿನಿಯೋಗಿಸಲ್ಪಡುತ್ತದೆ (Budget Analysis 2024).

ಆದಾಯ ಕರದ ವಿಚಾರದಲ್ಲಿಯೂ ಹಾಗೇ ಹೊಸ ಕರದ ಪ್ರಕಾರ ತೆರಿಗೆ ತುಂಬುವವರಿಗೆ Standard Deduction ಮೊತ್ತ ಈಗಿರುವ 5,0000 ರೂ.ಯಿಂದ ರೂ. 7,5000 ರೂ.ಗೆ ಏರಿಸಲಾಗಿದೆ. ಸರ್ಕಾರ ಹಳೆಯ ವಿಧಾನದಲ್ಲಿ ಉಳಿತಾಯಕ್ಕೆ ಪ್ರೋತ್ಸಾಹ ನೀಡುತ್ತಿತ್ತು. ಅದಕ್ಕಿಂತ ತೆರಿಗೆಯನ್ನು ಕಟ್ಟಿಸಿ ಉಳಿದದ್ದನ್ನು ಕರದಾತನ ಇಚ್ಛೆಗೆ ಬಿಡುವ ಆಲೋಚನೆಯನ್ನು ಹೊಂದಿದೆ. ಕಳೆದ ವರ್ಷ ಭಾರತದಲ್ಲಿ ಒಟ್ಟು ಮಾರಟವಾದ ವಾಹನಗಳ ಸಂಖ್ಯೆ 2.38 ಕೋಟಿ. ಈ ದೇಶದಲ್ಲಿ ಆದಾಯ ಕರವನ್ನು ತುಂಬುವವರ ಸಂಖ್ಯೆ 2.34 ಕೋಟಿ. 145 ಕೋಟಿ ಜನಸಂಖ್ಯೆಯಿರುವ ದೇಶದಲ್ಲಿ ಆದಾಯಕರದ ವ್ಯಾಪ್ತಿಯಲ್ಲಿ ಬರುವರ ಸಂಖ್ಯೆಯನ್ನು ಇನ್ನೂ ಕಡಿಮೆ ಮಾಡಲು ಈ ಸರ್ಕಾರ ಸಿದ್ಧವಿಲ್ಲ. ಅದೇ ರೀತಿ, ಹೂಡಿಕೆಯ ಮೇಲಿನ ಬಂಡವಾಳದ ಗಳಿಕೆಯ ವಿಚಾರದಲ್ಲಿಯೂ ಅಷ್ಟೇ. ದೀರ್ಘಾವದಿಯ ಗಳಿಕೆಯನ್ನು ಶೇ 12.5ಕ್ಕೆ ಏಸಿಸಿದರೂ ಇದುತನಕ ಇದ್ದ ಮಿತಿಯನ್ನು 1,00,000 ರೂ.ಯಿಂದ 1,25,000 ರೂ.ಗೆ ಏರಿಸಲಾಗಿದೆ.

ಅನಿಶ್ಚಿತಿತ ಆರ್ಥಿಕ ವ್ಯವಸ್ಥೆಗೆ ಉತ್ತರ

ಈ ಸರ್ಕಾರ ಪ್ರಸ್ತುತ ಪಡಿಸಿರುವ ಬಜೆಟ್ ಅನೇಕ ಧನಾತ್ಮಕ ಅಂಶಗಳನ್ನು ಒಳಗೊಂಡಿದೆ. ಜಾಗತಿಕವಾಗಿ ಕಾಡುತ್ತಿರುವ ಅನಿಶ್ಚಿತಿತ ಆರ್ಥಿಕ ವ್ಯವಸ್ಥೆಯನ್ನು ಪರಿಣಾಮಕಾರಿಯಾಗಿ ಎದುರಿಸುವತ್ತ ಗಮನ ಹರಿಸಲಾಗಿದೆ. ಚೀನಾದ ಮಾದರಿಯಲ್ಲಿ ಗೃಹ ಮತ್ತು MSME ವಿಭಾಗವನ್ನು ಸಶಕ್ತಗೊಳಿಸುವ ಉದ್ದೇಶವನ್ನು ಕಾಣಬಹುದಾಗಿದೆ. ಆದರೆ ರಾಜ್ಯಗಳಿಗೆ ಅವರ ಪಾಲಿನ GST ವಿಚಾರದಲ್ಲಿ ಯವುದೇ ಒಂದು ನಿರ್ಣಯವನ್ನು ಜಾರಿಗೊಳಿಸುವಲ್ಲಿ ಆಸಕ್ತಿಯನ್ನು ಹೊಂದಿದಂತೆ ಕಾಣಿಸುವುದಿಲ್ಲ. ಮಹತ್ವದ ವಿಚಾರವೆಂದರೆ ರಾಜ್ಯಗಳಿಗೆ ನೀಡುವ ಪ್ರಮಾಣದಲ್ಲಿ ಕಳೆದ ವರ್ಷ ರೂ. 20.98 ಕೋಟಿ ರೂ. ಇದ್ದಿದ್ದು ಈ ವರ್ಷ 23.48 ಕೋಟಿ ರೂ.ಗೆ ಏರಿದೆ. ಆದರೂ ಕೆಲ ರಾಜ್ಯಗಳು ಕಾಲು ಕೆರೆಯುತ್ತಿದೆ. ಸುಪ್ರೀಂ ಕೋರ್ಟ್‌ ಈಗಾಗಲೇ ಮಧ್ಯ ಪ್ರವೇಶಿಸುವ ಸೂಚನೆಯನ್ನು ಕೊಟ್ಟಿದೆ. ಆ ನಿರ್ಣಯದ ಮೇಲೆ ಮತ್ತೊಮ್ಮೆ ಆರ್ಥಿಕ ನೀತಿಯನ್ನು ಪುನಃ ಆಲೋಚಿಸುವ ಕಾಲಬರಬಹುದೋ ಏನೋ (Budget Analysis 2024).

ಇದನ್ನೂ ಓದಿ: Pralhad Joshi: ನವಭಾರತ ನಿರ್ಮಾಣಕ್ಕೆ ಅತ್ಯುತ್ತಮ ಬಜೆಟ್: ಸಚಿವ ಪ್ರಲ್ಹಾದ್‌ ಜೋಶಿ ಶ್ಲಾಘನೆ

Continue Reading

ದೇಶ

Union Budget 2024: ಯುವಜನ, ಉದ್ಯೋಗ, ಉದ್ದಿಮೆಯೇ ಫೋಕಸ್‌; ಇಲ್ಲಿದೆ ಕೇಂದ್ರ ಬಜೆಟ್‌ನ ಸಮಗ್ರ ಚಿತ್ರಣ

Union Budget 2024: ಎನ್‌ಡಿಎ ಸರ್ಕಾರದ ಮೂರನೇ ಅವಧಿಯ ಮೊದಲ ಬಜೆಟ್‌ಅನ್ನು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಮಂಡಿಸಿದ್ದಾರೆ. ಕೃಷಿ, ತೆರಿಗೆ, ಉದ್ಯೋಗ ಸೃಷ್ಟಿ, ಹೂಡಿಕೆ ಸೇರಿ ಹಲವು ವಿಷಯಗಳ ಮೇಲೆ ಕೇಂದ್ರ ಸರ್ಕಾರ ಗಮನಿಸಿದೆ. ಕೇಂದ್ರ ಸರ್ಕಾರದ ಬಜೆಟ್‌ನ ಪ್ರಮುಖ ಅಂಶಗಳು ಇಲ್ಲಿವೆ.

VISTARANEWS.COM


on

Union Budget 2024
Koo

ನವದೆಹಲಿ: ಕಳೆದ ಲೋಕಸಭೆ ಚುನಾವಣೆಯಲ್ಲಿ (Lok Sabha Election 2024) ಸ್ಪಷ್ಟ ಬಹುಮತ ಪಡೆದ ಎನ್‌ಡಿಎ ಮೈತ್ರಿಕೂಟವು ಕೇಂದ್ರದಲ್ಲಿ ಅಧಿಕಾರಕ್ಕೆ ಬಂದ ಬಳಿಕ ಇದೇ ಮೊದಲ ಬಜೆಟ್‌ಅನ್ನು ಜನರ ಮುಂದಿಟ್ಟಿದೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ (Nirmala Sitharaman) ಅವರು ಏಳನೇ ಬಾರಿಗೆ ಬಜೆಟ್‌ (Union Budget 2024) ಮಂಡಿಸಿದ್ದು, ಯುವ ಜನರಿಗೆ ಉದ್ಯೋಗ, ಯುವತಿಯರ ಕೌಶಲ ಅಭಿವೃದ್ಧಿ, ಮಧ್ಯಮ ವರ್ಗದವರಿಗೆ ತೆರಿಗೆ ವಿನಾಯಿತಿ, ಅತಿ ಸಣ್ಣ, ಸಣ್ಣ ಹಾಗೂ ಮಧ್ಯಮ ಶ್ರೇಣಿಯ ಉದ್ಯಮಿಗಳಿಗೆ ನೆರವು ಸೇರಿದಂತೆ ಬಹುತೇಕ ಕ್ಷೇತ್ರಗಳಿಗೆ ಆದ್ಯತೆ ನೀಡಲಾಗಿದೆ. ಕೆಲವು ಕ್ಷೇತ್ರಗಳ ಕಡೆಗಣನೆ ಆರೋಪದ ಹೊರತಾಗಿಯೂ ನಿರ್ಮಲಾ ಅವರು ಸಮತೋಲಿತ ಬಜೆಟ್‌ ಮಂಡಿಸಿದ್ದಾರೆ.

ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಅಸ್ತಿತ್ವಕ್ಕೆ ಬಂದಾಗಿನಿಂದಲೂ ಉದ್ಯೋಗ ಸೃಷ್ಟಿಯ ಕೂಗು ಹೆಚ್ಚಾಗಿ ಕೇಳುತ್ತಿತ್ತು. ಮೋದಿ ಆಡಳಿತದ ಕಳೆದ 10 ವರ್ಷಗಳಲ್ಲಿ ಉದ್ಯೋಗ ಸೃಷ್ಟಿಯಾಗಿಲ್ಲ, ನೀಡಿದ ಭರವಸೆಯನ್ನು ಮೋದಿ ಈಡೇರಿಸಿಲ್ಲ ಎಂದು ಪ್ರತಿಪಕ್ಷಗಳು ಆರೋಪಿಸುತ್ತಲೇ ಇವೆ. ಹಾಗಾಗಿ, ಉದ್ಯೋಗ ಸೃಷ್ಟಿಗೆ ಕೇಂದ್ರ ಸರ್ಕಾರವು ಈ ಬಾರಿಯ ಬಜೆಟ್‌ನಲ್ಲಿ ಹೆಚ್ಚಿನ ಆದ್ಯತೆ ನೀಡಿದೆ. ಆ ಮೂಲಕ, ಪ್ರತಿಪಕ್ಷಗಳ ಆರೋಪ, ಜನರ ಭಾವನೆಯನ್ನು ಬದಲಾಯಿಸಲು ಯತ್ನಿಸಿದೆ. ‌

Inspiring placement Story
Vistara editorial

ದೇಶದ 500 ಅಗ್ರ ಕಂಪನಿಗಳಲ್ಲಿ ಮುಂದಿನ 5 ವರ್ಷದಲ್ಲಿ 1 ಕೋಟಿ ಯುವಕರಿಗೆ ಇಂಟರ್ನ್‌ಶಿಪ್‌, ಅವರಿಗೆ ಪ್ರತಿ ತಿಂಗಳು 5 ಸಾವಿರ ರೂ. ಅಲೋವೆನ್ಸ್‌ (ಭತ್ಯೆ), ಉನ್ನತ ಶಿಕ್ಷಣ ಪಡೆಯುವವರಿಗೆ ಸಾಲ ಸೌಲಭ್ಯ ಸೇರಿ ಮುಂದಿನ 5 ವರ್ಷದಲ್ಲಿ 4.1 ಕೋಟಿ ಜನರಿಗೆ ಉದ್ಯೋಗ ನೀಡುವ ದಿಸೆಯಲ್ಲಿ 2 ಲಕ್ಷ ಕೋಟಿ ರೂ. ಪ್ಯಾಕೇಜ್‌ಅನ್ನು ಕೇಂದ್ರ ಸರ್ಕಾರ ಘೋಷಿಸಿದೆ. ಯುವಕ-ಯುವತಿಯರಿಗೆ ಉದ್ಯೋಗ ಕೊಡಿಸುವ ದಿಸೆಯಲ್ಲಿ ಇದು ಮಹತ್ವದ ಹೆಜ್ಜೆ ಎನಿಸಿದೆ.

ಉದ್ಯಮಗಳಿಗೆ ಹೆಚ್ಚಿನ ಪ್ರಾಮುಖ್ಯತೆ

ಯುವಕರು ಸೇರಿ ಕೋಟ್ಯಂತರ ಮಂದಿಗೆ ಉದ್ಯೋಗ ನೀಡುವಲ್ಲಿ ಉದ್ಯಮಗಳ ಪಾತ್ರ ಪ್ರಮುಖವಾಗಿದ್ದು, ಉದ್ಯಮಗಳಿಗೆ ಬಜೆಟ್‌ನಲ್ಲಿ ಹೆಚ್ಚಿನ ಪ್ರಾಮುಖ್ಯತೆ ನೀಡಲಾಗಿದೆ. ವಿದೇಶಿ ಕಂಪನಿಗಳಿಗೆ ಭಾರತದಲ್ಲಿ ಕಾರ್ಪೊರೇಟ್‌ ಟ್ಯಾಕ್ಸ್‌ಅನ್ನು ಶೇ.40ರಿಂದ ಶೇ.35ಕ್ಕೆ ಇಳಿಸಿರುವುದು, ಎಂಎಸ್‌ಎಂಇಗಳಿಗೆ ಹಣಕಾಸು ನೆರವು, ಮುದ್ರಾ ಯೋಜನೆಯ ಸಾಲದ ಮೊತ್ತವನ್ನು 10 ಲಕ್ಷ ರೂ.ನಿಂದ 20 ಲಕ್ಷ ರೂ.ಗೆ ಏರಿಕೆ ಮಾಡಿರುವುದು ಪ್ರಮುಖ ಸಂಗತಿಗಳಾಗಿವೆ.

ಕೃಷಿ ಋಷಿಗಳ ಏಳಿಗೆಗೆ 1.52 ಲಕ್ಷ ಕೋಟಿ ರೂ.

ಕೃಷಿ ಮತ್ತು ಸಂಬಂಧಿತ ವಲಯಗಳಿಗೆ 1.52 ಲಕ್ಷ ಕೋಟಿ ರೂಪಾಯಿಯನ್ನು ನಿರ್ಮಲಾ ಸೀತಾರಾಮನ್ ಘೋಷಿಸಿದ್ದಾರೆ. ಮುಂದಿನ ವರ್ಷಗಳಲ್ಲಿ ದೇಶಾದ್ಯಂತ 10,000 ಜೈವಿಕ ಸಂಶೋಧನಾ ಕೇಂದ್ರಗಳನ್ನು ಸ್ಥಾಪಿಸಲಾಗುವುದು ಎಂದು ಬಜೆಟ್​ನಲ್ಲಿ ಭರವಸೆ ನೀಡಿದ್ದಾರೆ. ಮುಂದಿನ ಎರಡು ವರ್ಷಗಳಲ್ಲಿ, 1 ಕೋಟಿ ರೈತರನ್ನು ಬ್ರ್ಯಾಂಡಿಂಗ್ ಮತ್ತು ಪ್ರಮಾಣೀಕರಣ ನೀಡುವ ಮೂಲಕ ನೈಸರ್ಗಿಕ ಕೃಷಿಗೆ ಪ್ರೇರಣೆ ನೀಡಲಾಗುವುದು ಎಂದು ಅವರು ಬಜೆಟ್​ನಲ್ಲಿ ಹೇಳಿದ್ದಾರೆ.‌

Rain Deficit In India
Vistara editorial

ತರಕಾರಿ ಬೆಳೆಗಳನ್ನು ಜೀವನಾಧಾರವಾಗಿ ಮಾಡಿಕೊಂಡಿರುವ ರೈತರಿಗೆ ಅನುಕೂಲಕ ಮಾಡಿಕೊಡುವ ನಿಟ್ಟಿನಲ್ಲಿ
ತರಕಾರಿ ಉತ್ಪಾದನೆ ಮತ್ತು ಪೂರೈಕೆ ಸರಪಳಿ ನಿರ್ಮಿಸುವ ಯೋಜನೆ ಪ್ರಕಟಿಸಿದ್ದಾರೆ. ಅದೇ ರೀತಿ ಮಾರುಕಟ್ಟೆಗೆಳ ಕೇಂದ್ರಗಳ ಹತ್ತಿರ ದೊಡ್ಡ ಕ್ಲಸ್ಟರ್​ಗಳನ್ನು ನಿರ್ಮಿಸುವ ಭರವಸೆಯನ್ನು ಕೊಟ್ಟಿದ್ದಾರೆ. ಮೀನು ಸಾಕಣೆದಾರರ ಅಭಿವೃದ್ಧಿಗಾಗಿ ಸಿಗಡಿ ಸಂತಾನೋತ್ಪತ್ತಿ ಕೇಂದ್ರಗಳಿಗೆ ಆರ್ಥಿಕ ನೆರವು ನೀಡಲಾಗುವುದ ಎಂದು ಹಣಕಾಸು ಸಚಿವರು ಭರವಸೆ ಕೊಟ್ಟಿದ್ದಾರೆ. ಅದೇ ರೀತಿ ನಬಾರ್ಡ್ ಮೂಲಕ ಸಿಗಡಿಗಳ ರಫ್ತಿಗೆ ಅನುಕೂಲ ಕಲ್ಪಿಸಲಾಗುವುದು ಎಂದು ಹೇಳಿದ್ದಾರೆ.

ಧಾರ್ಮಿಕ ಕೇಂದ್ರಗಳಿಗೂ ಆದ್ಯತೆ

ಕೇಂದ್ರ ಬಜೆಟ್‌ನಲ್ಲಿ ಧಾರ್ಮಿಕ ಕ್ಷೇತ್ರಗಳ ಅಭಿವೃದ್ಧಿಗೆ ಅನುದಾನ ಮೀಸಲಿಡಲಾಗಿದೆ. ಕಾಶಿ ವಿಶ್ವನಾಥ ಕಾರಿಡಾರ್‌ ಮಾದರಿಯಲ್ಲಿ ಬಿಹಾರದ ಗಯಾದಲ್ಲಿರುವ ವಿಷ್ಣುಪಾದ ದೇವಾಲಯ (Vishnupad Temple) ಮತ್ತು ಮಹಾಬೋಧಿ (Mahabodhi Temple) ದೇಗುಲಗಳನ್ನು ಅಭಿವೃದ್ಧಿಪಡಿಸಲಾಗುತ್ತದೆ ಎಂದು ನಿರ್ಮಲಾ ಸೀತಾರಾಮನ್‌ ಅವರು ಘೋಷಣೆ ಮಾಡಿದ್ದಾರೆ. ವಿಷ್ಣುಪಾದ ದೇಗುಲ ಅತ್ಯಂತ ಪ್ರಾಚೀನ ದೇಗುಲ ಫಾಲ್ಗು ನದಿ ದಡದಲ್ಲಿರುವ ಭಗವಾನ್‌ ವಿಷ್ಣುವಿನ ದೇಗುವಲವಾಗಿದೆ. ಬೋಧ್‌ ಗಯಾದಲ್ಲಿರುವ ಮಹಾಬೋಧಿ ದೇಗುಲವಿಶ್ವ ಪಾರಂಪರಿಕಾ ಸ್ಥಳವೆಂದು ಯುನೆಸ್ಕೋ ಗುರುತಿಸಿದೆ.

Vistara editorial

ಆಂಧ್ರ, ಬಿಹಾರಕ್ಕೆ ಬಂಪರ್‌, ಕರ್ನಾಟಕಕ್ಕೆ ಶೂನ್ಯ ಕೊಡುಗೆ

ಹೈದರಾಬಾದ್‌-ಬೆಂಗಳೂರು ಮಧ್ಯೆ ಇಂಡಸ್ಟ್ರಿಯಲ್‌ ಕಾರಿಡಾರ್‌ ಸ್ಥಾಪನೆಯನ್ನು ಹೊರತುಪಡಿಸಿದರೆ, ಕರ್ನಾಟಕ ಹಾಗೂ ಬೆಂಗಳೂರಿನ ಕುರಿತು ಇಡೀ ಬಜೆಟ್‌ನಲ್ಲಿ ಎಲ್ಲಿಯೂ ಪ್ರಸ್ತಾಪ ಮಾಡದಿರುವುದು ಕನ್ನಡಿಗರ ಆಕ್ರೋಶಕ್ಕೆ ಕಾರಣವಾಗಿದೆ. ಎನ್‌ಡಿಎ ಮೈತ್ರಿಕೂಟದ ಪಕ್ಷಗಳು ಆಡಳಿತವಿರುವ ಆಂಧ್ರಪ್ರದೇಶ ಹಾಗೂ ಬಿಹಾರಕ್ಕೆ ಹೆಚ್ಚಿನ ಗಮನ ಹರಿಸಿರುವ ಕೇಂದ್ರ ಸರ್ಕಾರವು, ಕರ್ನಾಟಕದ ಕಡೆಯೇ ಗಮನವೇ ಹರಿಸಿಲ್ಲ. ಭದ್ರಾ ಮೇಲ್ದಂಡೆ ಯೋಜನೆ, ಕೃಷ್ಣಾ ಮೇಲ್ದಂಡೆ ಯೋಜನೆ, ಮಹದಾಯಿ, ಮೇಕೆದಾಟು, ರಸ್ತೆ ನಿರ್ಮಾಣ ಸೇರಿ ಯಾವುದೇ ಯೋಜನೆಗಳಿಗೆ ಕೇಂದ್ರ ಸರ್ಕಾರ ಗಮನ ಹರಿಸಿಲ್ಲ.

Legislative Council Election dates fixedVoting on June 13
Vistara editorial

ತೆರಿಗೆ ಭಾರ ಅಲ್ಪ ಇಳಿಕೆ

ತೆರಿಗೆ ಪಾವತಿಸುವ ಉದ್ಯೋಗಿಗಳಿಗೆ ಕೇಂದ್ರ ಸರ್ಕಾರವು ಸಿಹಿ ಸುದ್ದಿ ನೀಡಿದೆ. ಹೊಸ ತೆರಿಗೆ ಪದ್ಧತಿಯಲ್ಲಿ ಸ್ಟಾಂಡರ್ಡ್‌ ಡಿಡಕ್ಷನ್‌ ಮೊತ್ತವನ್ನು 50 ಸಾವಿರ ರೂ.ನಿಂದ 75 ಸಾವಿರ ರೂ.ಗೆ ಏರಿಕೆ ಮಾಡಲಾಗಿದೆ. ಇನ್ನು, ಹೊಸ ಸ್ಲ್ಯಾಬ್‌ಗಳ ಪರಿಚಯದಿಂದ ತೆರಿಗೆದಾರರು 17,500 ರೂ. ತೆರಿಗೆ ಉಳಿತಾಯ ಮಾಡಬಹುದಾಗಿದೆ ಎಂಬುದಾಗಿ ನಿರ್ಮಲಾ ಸೀತಾರಾಮನ್‌ ಅವರು ಘೋಷಿಸಿದ್ದಾರೆ. ಆದರೆ, ಹಳೆಯ ತೆರಿಗೆ ಪದ್ಧತಿಯಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ. ಅಲ್ಲದೆ, ಏಂಜೆಲ್ ತೆರಿಗೆಯನ್ನು ರದ್ದುಪಡಿಸುವುದು ಸ್ಟಾರ್ಟ್ಅಪ್ ಸಮುದಾಯಕ್ಕೆ ಸಕಾರಾತ್ಮಕ ಬೆಳವಣಿಗೆ. ಇದು ನಿಧಿಸಂಗ್ರಹಕ್ಕೆ ಹೆಚ್ಚು ಬೆಂಬಲ ಮತ್ತು ಕಡಿಮೆ ನಿರ್ಬಂಧಿತ ವಾತಾವರಣ ನಿವಾರಿಸುತ್ತದೆ. ಈ ಬದಲಾವಣೆಯೊಂದಿಗೆ, ಭಾರತದಲ್ಲಿ ನಾವೀನ್ಯತೆ ಮತ್ತು ಹೂಡಿಕೆಗೆ ಹೆಚ್ಚು ಅನುಕೂಲಕರ ವಾತಾವರಣ ಸೃಷ್ಟಿಸುವ ಗುರಿಯನ್ನು ಸರ್ಕಾರ ಹೊಂದಿದೆ.

ಚಿನ್ನ, ಬೆಳ್ಳಿ ಆಗಲಿದೆ ಅಗ್ಗ

ಚಿನ್ನ ಹಾಗೂ ಬೆಳ್ಳಿಯ ಮೇಲಿನ ಕಸ್ಟಮ್ಸ್‌ ಸುಂಕವನ್ನು ಶೇ.6ರಷ್ಟು ಇಳಿಕೆ ಮಾಡಲಾಗುವುದು ಎಂಬುದಾಗಿ ನಿರ್ಮಲಾ ಸೀತಾರಾಮನ್‌ ಅವರು ಘೋಷಣೆ ಮಾಡಿದ್ದಾರೆ. ಇದರಿಂದಾಗಿ ಚಿನ್ನದ ಬೆಲೆಯು ಇಳಿಕೆಯಾಗಲಿದೆ ಎಂದು ತಿಳಿದುಬಂದಿದೆ. ಪ್ಲಾಟಿನಮ್‌ ಮೇಲಿನ ಕಸ್ಟಮ್‌ ಸುಂಕವನ್ನು ಕೂಡ ಶೇ.6.4ರಷ್ಟು ಇಳಿಕೆ ಮಾಡಲಾಗಿದೆ. ಕಸ್ಟಮ್ಸ್‌ ಸುಂಕವನ್ನು ಇದಕ್ಕೂ ಮೊದಲು ಇಳಿಸಲಾಗಿದೆ. ಇನ್ನಷ್ಟು ಕಸ್ಟಮ್ಸ್‌ ಸುಂಕವನ್ನು ಇಳಿಸಲು ಪ್ರಸ್ತಾಪ ಇದೆ. ಅದರಂತೆ, ಔಷಧ, ಮೆಡಿಕಲ್‌ ಉಪಕರಣಗಳು, ಮೂರು ಕ್ಯಾನ್ಸರ್‌ ಔಷಧಿಗಳನ್ನು ಕಸ್ಟಮ್ಸ್‌ ಸುಂಕದಿಂದ ಮುಕ್ತಗೊಳಿಸಲಾಗಿದೆ. ಒಟ್ಟಾರೆಯಾಗಿ ಕೇಂದ್ರ ಸರ್ಕಾರವು ಶೇ.15ರಷ್ಟು ಕಸ್ಟಮ್ಸ್‌ ಸುಂಕವನ್ನು ಇಳಿಸಿದೆ. ಆಮದು ಮಾಡಿಕೊಳ್ಳುವ ಮೊಬೈಲ್‌, ಮೊಬೈಲ್ ಬಿಡಿ ಭಾಗಗಳ ಮೇಲಿನ ಸುಂಕವನ್ನೂ ಕೇಂದ್ರ ಸರ್ಕಾರ ಶೇ.15ರಷ್ಟು ಇಳಿಸಿದೆ ಎಂಬುದಾಗಿ ನಿರ್ಮಲಾ ಸೀತಾರಾಮನ್‌ ತಿಳಿಸಿದರು.

ರಕ್ಷಣಾ ವೆಚ್ಚ ಮತ್ತಷ್ಟು ಹೆಚ್ಚಳ

ದೇಶದ ರಕ್ಷಣಾ ಕ್ಷೇತ್ರವನ್ನು ಸುಭದ್ರಪಡಿಸುವ ದಿಸೆಯಲ್ಲಿ ಕೇಂದ್ರ ಸರ್ಕಾರವು ರಕ್ಷಣಾ ವೆಚ್ಚವನ್ನು ಕಳೆದ ವರ್ಷಕ್ಕಿಂತ ಏರಿಸಿದೆ. ಕಳೆದ ವರ್ಷ ಕೇಂದ್ರ ಸರ್ಕಾರವು ರಕ್ಷಣಾ ವೆಚ್ಚಕ್ಕೆ 5.94 ಲಕ್ಷ ಕೋಟಿ ರೂ. ಮೀಸಲಿಟ್ಟಿತ್ತು. ಆದರೆ, ಈ ಬಾರಿ ಮೊತ್ತವನ್ನು 6.21 ಲಕ್ಷ ಕೋಟಿ ರೂ.ಗೆ ಏರಿಕೆ ಮಾಡಿದೆ. ಸೈನಿಕರಿಗೆ ಅತ್ಯಾಧುನಿಕ ಶಸ್ತ್ರಾಸ್ತ್ರ, ದೇಶೀಯವಾಗಿ ರಕ್ಷಣಾ ಉಪಕರಣಗಳ ಉತ್ಪಾದನೆ, ರಕ್ಷಣಾ ರಫ್ತು ಸೇರಿ ಹಲವು ವಿಭಾಗಗಳಿಗೆ ಉತ್ತೇಜನ ನೀಡಲಾಗಿದೆ.

Vistara editorial
Vistara editorial

ರೈಲ್ವೆ ಕ್ಷೇತ್ರಕ್ಕಿಲ್ಲ ಹೆಚ್ಚಿನ ಪ್ರಾಮುಖ್ಯತೆ

ಒಂದು ಕಾಲದಲ್ಲಿ ರೈಲ್ವೆಗಾಗಿಯೇ ಪ್ರತ್ಯೇಕ ಬಜೆಟ್‌ ಮಂಡಿಸಲಾಗುತ್ತಿತ್ತು. ಕೇಂದ್ರ ಸರ್ಕಾರವು ರೈಲ್ವೆ ಬಜೆಟ್‌ಅನ್ನೂ ಸಾಮಾನ್ಯ ಬಜೆಟ್‌ನಲ್ಲೇ ಘೋಷಿಸುತ್ತಿದೆ. ಈ ಬಾರಿ ಸಾಮಾನ್ಯ ಬಜೆಟ್‌ನಲ್ಲೂ ರೈಲ್ವೆ ಕ್ಷೇತ್ರಕ್ಕೆ ಯಾವುದೇ ಮಹತ್ವದ ಘೋಷಣೆ ಮಾಡದಿರುವುದು ಟೀಕೆ ಹಾಗೂ ಅಚ್ಚರಿಗೆ ಕಾರಣವಾಗಿದೆ.

ಇದನ್ನೂ ಓದಿ: Union Budget 2024: ಇನ್ನೊಂದು ವರ್ಷದಲ್ಲಿ ಹಳೇ ತೆರಿಗೆ ಪದ್ಧತಿ ರದ್ದು? ಕೇಂದ್ರ ವಿತ್ತ ಸಚಿವೆ ಹೇಳಿದ್ದಿಷ್ಟು

Continue Reading
Advertisement
King Chopper
ದೇಶ13 mins ago

Sea King Chopper: ಸಾವಿನ ದವಡೆಯಲ್ಲಿದ್ದ ಚೀನಾ ನಾವಿಕನನ್ನು ರಕ್ಷಿಸಿದ ಭಾರತೀಯ ನೌಕಾಪಡೆ; ಮಾನವೀಯತೆಗೆ ಮೆಚ್ಚುಗೆ

ahoratri dharani until the guilts are punished says Opposition party Leader R Ashok
ಕರ್ನಾಟಕ15 mins ago

R Ashok: ಹಗರಣಕೋರರಿಗೆ ಶಿಕ್ಷೆಯಾಗುವವರೆಗೂ ಅಹೋರಾತ್ರಿ ಧರಣಿ; ಆರ್. ಅಶೋಕ್‌ ಘೋಷಣೆ

Traffic Restrictions
ಬೆಂಗಳೂರು27 mins ago

Traffic Restrictions: ವೈಟ್ ಟಾಪಿಂಗ್ ಕಾಮಗಾರಿ; ನಾಳೆಯಿಂದ ರಾಜಾಜಿನಗರದ ಈ ಮಾರ್ಗದಲ್ಲಿ ಸಂಚಾರ ನಿಷೇಧ

Mohammed Shami
ಕ್ರೀಡೆ29 mins ago

Mohammed Shami: 19ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆಗೆ ಯತ್ನಿಸಿದ್ದ ಮೊಹಮ್ಮದ್ ಶಮಿ; ತಡೆದು ನಿಲ್ಲಿಸಿದ್ದು ಯಾರು?

KP Poorchandra Tejaswi samagra kruthi Jagattu 14 samputagalu Lokarpane On July 29 in Bengaluru
ಬೆಂಗಳೂರು30 mins ago

Book Release: ಜು.29ರಂದು ಬೆಂಗಳೂರಿನಲ್ಲಿ 14 ಸಂಪುಟಗಳ ಪೂರ್ಣಚಂದ್ರ ತೇಜಸ್ವಿ ಕೃತಿ ಲೋಕಾರ್ಪಣೆ

Asteria Aerospace has introduced a SkyDeck platform that helps in various fields including agriculture
ದೇಶ34 mins ago

SkyDeck: ಕೃಷಿ ಮತ್ತಿತರ ಕ್ಷೇತ್ರಗಳಿಗೆ ನೆರವಾಗುವ ʼಸ್ಕೈಡೆಕ್ʼ ಪ್ಲಾಟ್‌ಫಾರ್ಮ್! ಏನಿದು?

Health Tips Kannada
ಆರೋಗ್ಯ57 mins ago

Health Tips Kannada: ನಿಂತ ಮಳೆ ನೀರಿನಿಂದ ಈ 7 ರೋಗಗಳು ಬರುತ್ತವೆ ಎನ್ನುವುದು ನಿಮಗೆ ಗೊತ್ತೆ?

Dog attack
ದೇಶ1 hour ago

Dog Attack: ವಕೀಲನ ಮೇಲೆ ಶ್ವಾನ ದಾಳಿ; ಖಾಸಗಿ ಅಂಗಕ್ಕೆ ಕಚ್ಚಿದ ಪಿಟ್‌ ಬುಲ್‌

Paris Olympics
ಕ್ರೀಡೆ1 hour ago

Paris Olympics: ಈ ಬಾರಿಯ ಒಲಿಂಪಿಕ್ಸ್​ನಲ್ಲಿ ಸ್ಪರ್ಧಿಸಲಿದ್ದಾರೆ ಭಾರತದ 24 ಸೈನಿಕರು

Supreme Court
ದೇಶ1 hour ago

Supreme Court: ರೈತರು, ಸರ್ಕಾರದ ಮಧ್ಯೆ ‘ತಟಸ್ಥ ಅಂಪೈರ್’‌ ಬೇಕು; ಸುಪ್ರೀಂ ಕೋರ್ಟ್‌ ಮಹತ್ವದ ಸಲಹೆ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Weather Forecast
ಮಳೆ15 hours ago

Karnataka Weather : ರಭಸವಾಗಿ ಸುರಿಯುವ ಮಳೆ; 50 ಕಿ.ಮೀ ವೇಗದಲ್ಲಿ ಬೀಸುತ್ತೆ ಗಾಳಿ

karnataka weather Forecast
ಮಳೆ1 day ago

Karnataka Weather : ರಾಜ್ಯದಲ್ಲಿ ಮುಂದುವರಿದ ಮಳೆ ಅವಾಂತರ; ನಾಳೆಯೂ ಇರಲಿದೆ ಅಬ್ಬರ

Udupi News
ಉಡುಪಿ1 day ago

Udupi News : ಹಳೆ ಲಾರಿ ಚಾಸ್ಸಿಯಲ್ಲೇ ಕಿರು ಸೇತುವೆ ನಿರ್ಮಾಣ! ಬೈಂದೂರು ಶಾಸಕರ ಪರಿಕಲ್ಪನೆಗೆ ಜನರು ಫಿದಾ

murder case
ರಾಮನಗರ1 day ago

Murder Case : ರಾಮನಗರದಲ್ಲೊಂದು ಪೈಶಾಚಿಕ ಕೃತ್ಯ; ಅತ್ಯಾಚಾರವೆಸಗಿ 4 ವರ್ಷದ ಬಾಲಕಿಯನ್ನು ಕೊಂದ ದುಷ್ಟ

karnataka Rain
ಮಳೆ4 days ago

Karnataka Rain : ಭಾರಿ ಮಳೆಗೆ ಮನೆ ಗೋಡೆ ಕುಸಿತ; ಕೊಟ್ಟಿಗೆಯಲ್ಲಿದ್ದ ಜಾನುವಾರುಗಳು ಸಾವು

karnataka Rain
ಮಳೆ4 days ago

Karnataka Rain : ಹಳ್ಳ ದಾಟಲು ಹೋಗಿ ನೀರುಪಾಲಾದ ಜಾನುವಾರು; ಬಿರುಗಾಳಿಗೆ ಕಳಚಿದ ವಿಂಡ್‌ ಫ್ಯಾನ್‌

karnataka Rain
ಮಳೆ5 days ago

Karnataka Rain : ಬೀದಿಗೆ ತಂದ ರಣಮಳೆ; ಮನೆ ಕುಸಿದು ಬಿದ್ದು 9 ತಿಂಗಳ ಗರ್ಭಿಣಿ ನರಳಾಟ

Karnataka Rain
ಮಳೆ5 days ago

Karnataka Rain : ರಾಜ್ಯದಲ್ಲಿ ಮಳೆಯ ಆರ್ಭಟ; ರಾತ್ರಿ ಕಳೆದು ಬೆಳಗಾಗುವುದರೊಳಗೆ ಕಂದಕ ನಿರ್ಮಾಣ

Karnataka Rain
ಮಳೆ6 days ago

Karnataka Rain : ಭಾರಿ ಮಳೆ ಎಫೆಕ್ಟ್‌; ಉಕ್ಕಿ ಹರಿಯುತ್ತಿದ್ದ ನದಿಯಲ್ಲಿ ಕೊಚ್ಚಿ ಹೋದ ರಾಸು

Uttara Kannada Landslide
ಮಳೆ6 days ago

Uttara Kannada Landslide: ಶಿರೂರು ಗುಡ್ಡ ಕುಸಿತ; ಅಖಾಡಕ್ಕಿಳಿದ ಜಿಯೊಲಾಜಿಕಲ್ ಸರ್ವೆ ಆಫ್ ಇಂಡಿಯಾ ಟೀಂ

ಟ್ರೆಂಡಿಂಗ್‌