Tips For Teenager Parents: ಉತ್ತಮ ಪೋಷಕರಾಗಿ; ಹರೆಯದ ಮಕ್ಕಳನ್ನು ಅರ್ಥ ಮಾಡಿಕೊಳ್ಳಿ! - Vistara News

ಆರೋಗ್ಯ

Tips For Teenager Parents: ಉತ್ತಮ ಪೋಷಕರಾಗಿ; ಹರೆಯದ ಮಕ್ಕಳನ್ನು ಅರ್ಥ ಮಾಡಿಕೊಳ್ಳಿ!

ಹದಿಹರೆಯದವರು ಗೌರವಿಸಲು, ಕೇಳಲು, ಮೌಲ್ಯಯುತ ಮತ್ತು ಮೆಚ್ಚುಗೆ ಪಡೆಯಲು ಬಯಸುತ್ತಾರೆ. ಒಳ್ಳೆಯ ಪೋಷಕರಾಗಬೇಕು (Tips For Teenager Parents) ಎಂದು ಬಯಸುವವರು ಹರೆಯದ ಮಕ್ಕಳನ್ನು ಪೋಷಿಸಲು ಪಾಲನೆಯ ಶೈಲಿಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಬದಲಾವಣೆಗಳನ್ನು ಮಾಡಲು ಸಿದ್ಧರಾಗಿರಬೇಕು. ಹದಿಹರೆಯದವರಿಗೆ ಮಕ್ಕಳಿಗೆ ಒಳ್ಳೆಯ ಪೋಷಕರಾಗಲು ಸಹಾಯ ಮಾಡುವ ಕೆಲವು ಅಂಶಗಳು ಇಲ್ಲಿವೆ.

VISTARANEWS.COM


on

Tips For Teenager Parents
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಪುಟ್ಟ ಮಕ್ಕಳನ್ನು (small kids) ಪಾಲನೆ ಮಾಡುವುದು ಪೋಷಕರಿಗೆ (Tips For Teenager Parents) ಎಷ್ಟು ಕಷ್ಟವೋ ಹದಿಹರೆಯದ ಮಕ್ಕಳನ್ನು (Teenager) ಸಂಭಾಳಿಸುವುದೂ ಅಷ್ಟೇ ಕಠಿಣವಾಗಿರುತ್ತದೆ. ಸಮಯಕ್ಕೆ ಸರಿಯಾಗಿ ಸರಿಯಾದ ಮಾರ್ಗದರ್ಶನ ದೊರೆಯದೇ ಇದ್ದರೆ ಹರೆಯದ ಮಕ್ಕಳು ಹಾದಿ ತಪ್ಪುವ ಅಪಾಯ ಹೆಚ್ಚಾಗಿರುತ್ತದೆ. ಹೀಗಾಗಿ ಹರೆಯದ ವಯಸ್ಸಿನ ಮಕ್ಕಳನ್ನು ಹೇಗೆ ತಿದ್ದುವುದು, ಅವರಿಗೆ ಹೇಗೆ ಸರಿಯಾದ ಮಾರ್ಗದರ್ಶನ ಮಾಡುವುದು ಎಂಬುದನ್ನು ತಿಳಿದುಕೊಳ್ಳುವುದು ಬಹು ಮುಖ್ಯ.

ಹರೆಯದ ಮಕ್ಕಳಿಗೆ ಹೆಚ್ಚು ಶಿಸ್ತು ಬಂಧನ ಎಂದೆನಿಸಿದರೆ, ಹೆಚ್ಚು ಸ್ವಾತಂತ್ರ್ಯ ಅಪಾಯ ತೊಂದೊಡ್ಡುವ ಆತಂಕವಿರುತ್ತದೆ. ಹೀಗಾಗಿ ಹರೆಯದ ಮಕ್ಕಳೊಡನೆ ಪೋಷಕರು ಹೇಗಿರಬೇಕು ಎಂಬುದು ಅರಿತುಕೊಳ್ಳಬೇಕು.

ಹದಿಹರೆಯದವರನ್ನು ಬೆಳೆಸುವುದು ಸಾಕಷ್ಟು ಸವಾಲಿನ ಕಾರ್ಯವಾಗಿರುತ್ತದೆ. ಹೆಚ್ಚಿನ ಪೋಷಕರು ತಮ್ಮ ಹದಿಹರೆಯದ ಮಕ್ಕಳೊಂದಿಗೆ ಉತ್ತಮ ಮತ್ತು ಆರೋಗ್ಯಕರ ಬಾಂಧವ್ಯವನ್ನು ಹಂಚಿಕೊಳ್ಳುವುದು ಅವರು ಸಂತೋಷದಿಂದ ಸಹಬಾಳ್ವೆ ನಡೆಸಲು ಉತ್ತಮ ಮಾರ್ಗವಾಗಿದೆ ಎಂದು ಅರಿತುಕೊಳ್ಳುತ್ತಾರೆ. ಇಲ್ಲಿ ಇಬ್ಬರೂ ಪರಸ್ಪರ ಅಭಿಪ್ರಾಯಗಳನ್ನು ಹೇರದೇ ಇರಲು ಪ್ರಯತ್ನಿಸುತ್ತಾರೆ.

ಹರೆಯದವರಿಗೆ ಒಳ್ಳೆಯ ತಾಯಿಯಾಗಲು ಬಯಸಿದರೆ ಅವರು ನಿಮ್ಮನ್ನು ಮತ್ತೆ ಇಷ್ಟಪಡಬೇಕೆಂದು ಬಯಸಿದರೆ ನೀವು ಅವರ ಆಯ್ಕೆಗಳನ್ನು ಗೌರವಿಸಲು ಕಲಿಯಬೇಕು. ಅವರ ಬಗ್ಗೆ ಸಂಪೂರ್ಣ ನಿರ್ಧಾರವನ್ನು ನೀವು ತೆಗೆದುಕೊಳ್ಳಬಾರದು.

ಹದಿಹರೆಯದವರು ಗೌರವಿಸಲು, ಕೇಳಲು, ಮೌಲ್ಯಯುತ ಮತ್ತು ಮೆಚ್ಚುಗೆ ಪಡೆಯಲು ಬಯಸುತ್ತಾರೆ.ಒಳ್ಳೆಯ ಪೋಷಕರಾಗಬೇಕು ಎಂದು ಬಯಸುವವರು ಹರೆಯದ ಮಕ್ಕಳನ್ನು ಪೋಷಿಸಲು ಪಾಲನೆಯ ಶೈಲಿಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಬದಲಾವಣೆಗಳನ್ನು ಮಾಡಲು ಸಿದ್ಧರಾಗಿರಬೇಕು. ಹದಿಹರೆಯದವರಿಗೆ ಮಕ್ಕಳಿಗೆ ಒಳ್ಳೆಯ ಪೋಷಕರಾಗಲು ಸಹಾಯ ಮಾಡುವ ಕೆಲವು ಅಂಶಗಳು ಇಲ್ಲಿವೆ.

Tips For Teenager Parents
Tips For Teenager Parent


ಗೌಪ್ಯತೆಯನ್ನು ಕಾಪಾಡಿ

ಹದಿಹರೆಯದ ಮಕ್ಕಳು ತಮ್ಮ ಬಿಡುವಿನ ವೇಳೆಯಲ್ಲಿ ಏನು ಮಾಡಲು ಬಯಸುತ್ತಾರೆ ಎಂಬುದನ್ನು ಗೌಪ್ಯವಾಗಿ ಇಡಲು ಬಯಸುತ್ತಾರೆ. ಬಹಳಷ್ಟು ಪೋಷಕರು ಇದನ್ನು ವಿರೋಧಿಸುತ್ತಾರೆ. ಆದರೆ ಹದಿಹರೆಯದವರೊಂದಿಗೆ ಆರೋಗ್ಯಕರ ಬಾಂಧವ್ಯವನ್ನು ಹಂಚಿಕೊಳ್ಳಲು ಬಯಸಿದರೆ ಅವರ ಆಯ್ಕೆಗಳು ಮತ್ತು ಗಡಿಗಳನ್ನು ಗೌರವಿಸಬೇಕು ಮತ್ತು ಅವರಿಗೆ ಗೌಪ್ಯತೆಗೆ ಅವಕಾಶ ಕೊಡಬೇಕು. ಇದನ್ನು ಅವರು ಖಂಡಿತವಾಗಿ ಇಷ್ಟಪಡುತ್ತಾರೆ.

ಮನಸ್ಸನ್ನು ಅರ್ಥ ಮಾಡಿಕೊಳ್ಳಿ

ಹರೆಯದವರ ಪ್ರತಿಯೊಂದು ಕೆಲಸವನ್ನು ಪ್ರಶ್ನಿಸುವುದು, ಮೇಲ್ವಿಚಾರಣೆ ಮಾಡುವುದು ಅವರಿಗೆ ನಿಮ್ಮಿಂದ ಎಲ್ಲವನ್ನು ಮುಚ್ಚಿಡುವಂತೆ ಮಾಡಬಹುದು. ಹದಿಹರೆಯದ ಮಕ್ಕಳನ್ನು ಕೇಳಿ, ಅವರನ್ನು ಅರ್ಥ ಮಾಡಿಕೊಳ್ಳಲು ಪ್ರಯತ್ನಿಸಿ. ಅನಗತ್ಯವೆಂದು ನಿಮಗನಿಸುವ ವಿಚಾರಗಳನ್ನು ತಿಳಿಸಿ. ಆದರೆ ಅದನ್ನು ಅವರ ಮೇಲೆ ಹೇರಲು ಹೋಗಬೇಡಿ. ಹದಿಹರೆಯದವರಿಗೆ ಕೊಂಚ ಸ್ವಾತಂತ್ರ್ಯ ನೀಡಿ.

ಹರೆಯದವರನ್ನು ಗೌರವಿಸಿ

ಹದಿಹರೆಯದವರು ತಮ್ಮೊಂದಿಗೆ ಯಾವ ರೀತಿಯ ಸಂಬಂಧವನ್ನು ಹಂಚಿಕೊಳ್ಳಲು ಬಯಸುತ್ತಾರೆ ಎಂಬುದನ್ನು ಪೋಷಕರು ಗುರುತಿಸುವುದು ಮುಖ್ಯವಾಗಿದೆ. ಹದಿಹರೆಯದವರು ನಿಮ್ಮೊಂದಿಗೆ ಸ್ನೇಹಿತರಾಗಲು ಬಯಸಬಹುದು, ಆದರೆ ಅವರು ತಮ್ಮ ಶಾಲೆ ಮತ್ತು ಇತರ ಸ್ನೇಹಿತರ ಬಗ್ಗೆ ಎಲ್ಲವನ್ನೂ ಹೇಳಲು ಬಯಸುವುದಿಲ್ಲ. ಪೋಷಕರಾಗಿ ನೀವು ಅವರೊಂದಿಗೆ ಸರಿಯಾಗಿ ವರ್ತಿಸಬೇಕು. ಹದಿಹರೆಯದವರ ಆಯ್ಕೆಗಳನ್ನು ಗೌರವಿಸಿ. ಅವರೊಂದಿಗೆ ಆರಾಮವಾಗಿ ಚರ್ಚಿಸಿ. ಇದು ನಿಮ್ಮ ಮತ್ತು ಅವರ ಸಂಬಂಧವನ್ನು ಆರೋಗ್ಯಕರಗೊಳಿಸುತ್ತದೆ.

ಸಂಭಾಷಣೆಗಳನ್ನು ನಡೆಸಿ

ಪೋಷಕರೊಂದಿಗೆ ಹರೆಯದ ಮಕ್ಕಳ ಭಿನ್ನಾಭಿಪ್ರಾಯ ಬರುವುದು ಸಹಜ. ಕೆಲವು ವಿಷಯಗಳ ಬಗ್ಗೆ ಸಮಯ, ಸಂದರ್ಭ ನೋಡಿ ಅವರೊಂದಿಗೆ ಸಂಭಾಷಣೆಗಳನ್ನು ನಡೆಸಿ. ಹದಿಹರೆಯದ ಮಗುವನ್ನು ಬೆಳೆಸುವುದು ಎಂದರೆ ಅವರೊಂದಿಗೆ ಹೆಚ್ಚು ಮುಕ್ತ ಮತ್ತು ಪ್ರಾಮಾಣಿಕವಾಗಿರಬೇಕು. ಹರೆಯದ ಮಕ್ಕಳೊಂದಿಗೆ ಮಾತನಾಡುವಾಗ ಮುಕ್ತ ಮನಸ್ಸಿನವರಾಗಿರಬೇಕು.

Tips For Teenager Parent
Tips For Teenager Parent


ಹೊಸ ವಿಷಯಗಳನ್ನು ಕಲಿಯಿರಿ

ಪೋಷಕರು ಮಾತ್ರ ತಮ್ಮ ಹರೆಯದ ಮಕ್ಕಳೊಂದಿಗೆ ತಮ್ಮ ಕಲಿಕೆಯನ್ನು ಹಂಚಿಕೊಳ್ಳಬಹುದು ಎಂಬುದು ಎಲ್ಲ ಕಾಲಕ್ಕೂ ಪ್ರಸ್ತುತವಲ್ಲ. ಈಗ ಮಕ್ಕಳ ಆಲೋಚನೆಗಳು ನಮಗಿಂತ ವೇಗವಾಗಿದೆ ಎಂಬುದನ್ನು ತಿಳಿದುಕೊಳ್ಳಿ. ತಮ್ಮ ಮಗುವಿನಿಂದ ಹೊಸ ವಿಷಯಗಳನ್ನು ಕಲಿಯಲು ನೀವು ಆಸಕ್ತರಾಗಿರಬೇಕು. ಹದಿಹರೆಯದವರು ವಿಭಿನ್ನ ಅಭಿರುಚಿಯನ್ನು ಹೊಂದಿರಬಹುದು. ಹೀಗಾಗಿ ಅವರೊಂದಿಗೆ ಮುಕ್ತ ಸಂಭಾಷಣೆಗಳನ್ನು ನಡೆಸಿ. ಅಲ್ಲಿ ಪರಸ್ಪರ ಹೊಸ ಆಲೋಚನೆಗಳು ಹುಟ್ಟಿಕೊಳ್ಳಬಹುದು. ಇದು ನಿಮ್ಮ ಹದಿಹರೆಯದ ಮಕ್ಕಳೊಂದಿಗೆ ನಿಮ್ಮ ಬಾಂಧವ್ಯವನ್ನು ಬಲಪಡಿಸುವುದಲ್ಲದೆ ಇತರ ವಿಷಯಗಳ ಜೊತೆಗೆ ಅವರ ವ್ಯಕ್ತಿತ್ವ, ಜೀವನ, ನಡವಳಿಕೆಯ ಒಳನೋಟವನ್ನು ನಿಮಗೆ ಒದಗಿಸುತ್ತದೆ.

ಇದನ್ನೂ ಓದಿ: Allergies During Monsoon: ಮಳೆಗಾಲದಲ್ಲಿ ಅಲರ್ಜಿ ಸಮಸ್ಯೆಯಿಂದ ಪಾರಾಗುವುದು ಹೇಗೆ?

ಆಲಿಸಿ, ಬೋಧಿಸಬೇಡಿ

ಹದಿಹರೆಯದವರನ್ನು ಬೆಳೆಸಲು ಸಾಕಷ್ಟು ತಾಳ್ಮೆ ಬೇಕಾಗಬಹುದು. ಅವರು ತಮ್ಮ ಸಮಸ್ಯೆಗಳನ್ನು ಹಂಚಿಕೊಳ್ಳಲು ನಿಮ್ಮ ಬಳಿಗೆ ಬಂದಾಗ ಅವರು ನಿಮ್ಮಿಂದ ಬಯಸುವುದು ತಾಳ್ಮೆಯ ವಿಚಾರಣೆಯನ್ನು. ಹೀಗಾಗಿ ಹದಿಹರೆಯದವರನ್ನು ಬೆಳೆಸುವಾಗ ಪೋಷಕರು ತಿಳಿದಿರಬೇಕಾದ ಅತ್ಯಂತ ನಿರ್ಣಾಯಕ ಅಂಶವೆಂದರೆ ನಿಮ್ಮ ಮಗುವಿಗೆ ಏನು ತೊಂದರೆಯಾಗುತ್ತದೆ ಎಂಬುದನ್ನು ಅರ್ಥಮಾಡಿಕೊಳ್ಳಲು ಅವರ ಮಾತನ್ನು ಆಲಿಸಿ, ಆದರೆ ಅವರಿಗೆ ಯಾವುದೇ ಬೋಧನೆ ಮಾಡಬೇಡಿ. ಅವರೊಂದಿಗೆ ಮುಕ್ತ ಮನಸ್ಸಿನಿಂದ ಮಾತನಾಡಿ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಆರೋಗ್ಯ

Contact Lens: ಕಾಂಟ್ಯಾಕ್ಟ್‌ ಲೆನ್ಸ್‌ ಬಳಸುತ್ತೀರಾ? ಈ ವಿಷಯಗಳು ತಿಳಿದಿರಲಿ!

Contact Lens: ಕಿರುತೆರೆಯ ನಟಿ ಜಾಸ್ಮಿನ್‌ ಭಾಸಿನ್‌ ಕಾಂಟ್ಯಾಕ್ಟ್‌ ಲೆನ್ಸ್‌ನ ಉಸಾಬರಿಯಲ್ಲಿ ಕಣ್ಣಿಗೆ ಹಾನಿ ಮಾಡಿಕೊಂಡಿರುವುದು ಸುದ್ದಿಯಾದ ಮೇಲೆ, ಲೆನ್ಸ್‌ ಧರಿಸುವಾಗ ಯಾವುದು ಸರಿ, ಯಾವುದು ತಪ್ಪು ಎಂಬುದು ಬಹಳಷ್ಟು ಚರ್ಚೆಗೆ ಒಳಗಾಗಿದೆ. ಲೆನ್ಸ್‌ ಸುರಕ್ಷತೆಯ ಬಗೆಗಿನ ಇನ್ನಷ್ಟು ವಿವರಗಳು ಇಲ್ಲಿವೆ.

VISTARANEWS.COM


on

Contact Lens
Koo

ದೃಷ್ಟಿ ದೋಷಗಳನ್ನು ಹೊತ್ತು (Contact Lens) ಬದುಕುವುದಕ್ಕಿಂತ ಕನ್ನಡಕ ಹೊತ್ತು ಬದುಕುವುದು ಮೇಲು ಎನ್ನುವುದು ಅನುಭವಸ್ಥರ ಮಾತು. ಆದರೆ ಕನ್ನಡಕಕ್ಕಿಂತ ಕಾಂಟ್ಯಾಕ್ಟ್‌ ಲೆನ್ಸ್‌ಗಳನ್ನು ಹಾಕಿಕೊಂಡು ಬದುಕುವುದು ಇನ್ನೂ ಸುಲಭ ಎನ್ನುವುದು ಆಧುನಿಕರ ಮಾತು. ಆದರೆ ಲೆನ್ಸ್‌ ಧರಿಸುವುದೆಂದರೆ ಕನ್ನಡಕ ಹಾಕಿದಂತಲ್ಲ. ಅದಕ್ಕೆ ಪ್ರತ್ಯೇಕ ನಿಯಮಗಳನ್ನು ಪಾಲಿಸಬೇಕಾಗುತ್ತದೆ. ಅದರಲ್ಲೂ ಕಿರುತೆರೆಯ ನಟಿ ಜಾಸ್ಮಿನ್‌ ಭಾಸಿನ್‌ ಕಾಂಟ್ಯಾಕ್ಟ್‌ ಲೆನ್ಸ್‌ನ ಉಸಾಬರಿಯಲ್ಲಿ ಕಣ್ಣಿಗೆ ಹಾನಿ ಮಾಡಿಕೊಂಡಿರುವುದು ಸುದ್ದಿಯಾದ ಮೇಲೆ, ಲೆನ್ಸ್‌ ಧರಿಸುವಾಗ ಯಾವುದು ಸರಿ, ಯಾವುದು ತಪ್ಪು ಎಂಬುದು ಬಹಳಷ್ಟು ಚರ್ಚೆಗೆ ಒಳಗಾಗಿದೆ. ಲೆನ್ಸ್‌ ಸುರಕ್ಷತೆಯ ಬಗೆಗಿನ ಇನ್ನಷ್ಟು ವಿವರಗಳು ಇಲ್ಲಿವೆ.
ಲೆನ್ಸ್‌ಗಳನ್ನು ಧರಿಸುವಾಗ ಸ್ವಚ್ಛತೆ ಮತ್ತು ಸುರಕ್ಷತೆಗೆ ಅತಿ ಹೆಚ್ಚಿನ ಮಹತ್ವವನ್ನು ನೀಡಬೇಕು. ಅದನ್ನು ಧರಿಸುವಾಗ ಮತ್ತು ತೆಗೆಯುವಾಗ ಕೈಗಳು ಶುಚಿಯಾಗಿರಬೇಕು. ಲೆನ್ಸ್‌ ಹಾಕಿಕೊಂಡು ನಿದ್ದೆಯನ್ನಂತೂ ಮಾಡಲೇಬಾರದು. ಇದಕ್ಕೆ ಕಾರಣಗಳೂ ಇವೆ. ಕಣ್ಣುಗಳು ಮುಚ್ಚಿದ್ದಾಗ ಅಥವಾ ನಿದ್ದೆ ಮಾಡಿದ್ದಾಗ ಈ ಭಾಗಕ್ಕೆ ರಕ್ತಸಂಚಾರ ಕಡಿಮೆ ಇರುತ್ತದೆ. ಅಂದರೆ ಆಮ್ಲಜನಕದ ಪೂರೈಕೆಯೂ ಕಡಿಮೆ ಇರುತ್ತದೆ. ಹೀಗಿದ್ದಾಗ ಸೋಂಕುಗಳ ಸಂಭವ ಹೆಚ್ಚು. ಜೊತೆಗೆ, ಕಣ್ಣಿನ ಕಾರ್ನಿಯದಲ್ಲಿ ಉರಿಯೂತ ಕಾಣಿಸಿಕೊಂಡು, ಕಾರ್ನಿಯಲ್‌ ಎಡೆಮಾಗೆ ದಾರಿ ಮಾಡಿಕೊಡುತ್ತದೆ. ಇದನ್ನು ಸೂಕ್ತ ಚಿಕಿತ್ಸೆಯ ಮೂಲಕ ಸರಿಪಡಿಸಿಕೊಳ್ಳದಿದ್ದರೆ, ದೃಷ್ಟಿಗೆ ಸಂಚಕಾರ ಬರುವ ಸಾಧ್ಯತೆಯಿದೆ.

Contact Lens Awareness

ಏನು ಮಾಡಬೇಕು?

ಲೆನ್ಸ್‌ಗಳನ್ನು ಧರಿಸಿದಾಗ ಮಾಡಬೇಕಾದ್ದೇನು ಎಂಬುದನ್ನು ಮೊದಲು ಅರ್ಥ ಮಾಡಿಕೊಳ್ಳೋಣ. ನಿದ್ದೆ ಮಾಡುವಾಗ ಲೆನ್ಸ್‌ಗಳನ್ನು ತೆಗೆದಿರಿಸಿ. ಅದೇನು ರಾತ್ರಿಯ ದೀರ್ಘ ನಿದ್ದೆಯೇ ಆಗಬೇಕೆಂದಿಲ್ಲ. ನಡುಹಗಲಿನ ಅರ್ಧ ತಾಸಿನ ಚುಟುಕು ನಿದ್ದೆಯಾದರೂ, ಅದಷ್ಟು ಹೊತ್ತು ಕಣ್ಣುಗಳಿಗೆ ಲೆನ್ಸ್‌ನಿಂದ ಬಿಡುವು ನೀಡಿ. ಇದು ಆರೋಗ್ಯಕರ ಅಭ್ಯಾಸಗಳಲ್ಲಿ ಒಂದು.

ಸ್ವಚ್ಛತೆ

ಲೆನ್ಸ್‌ ಧರಿಸುವಾಗ ಮತ್ತು ತೆಗೆಯುವಾಗ ಕೈಗಳನ್ನು ಕಡ್ಡಾಯವಾಗಿ ಶುಚಿ ಮಾಡಿಕೊಳ್ಳಿ. ಅದಲ್ಲದೆ, ಲೆನ್ಸ್‌ ಶುಚಿ ಗೊಳಿಸಲು ಯಾವ ಮಾರ್ಗದರ್ಶನಗಳನ್ನು ನೀಡಲಾಗಿದೆಯೊ ಅದನ್ನು ತಪ್ಪದೆ ಪಾಲಿಸಿ. ಅದಕ್ಕೆ ರೋಗಾಣುಗಳು ಅಂಟದಂತೆ ಕಾಪಾಡಲು ಕೆಲವು ನಿಯಮಗಳನ್ನು ಲೆನ್ಸ್‌ ತಯಾರಕರು ನಮೂದಿಸಿರುತ್ತಾರೆ. ಕೆಲವೊಮ್ಮೆ ನೇತ್ರವೈದ್ಯರೂ ನಿರ್ದೇಶನಗಳನ್ನು ನೀಡಿರಬಹುದು. ಈ ತಜ್ಞರ ಮಾತುಗಳನ್ನು ತಪ್ಪಬೇಡಿ. ಜೊತೆಗೆ, ಲೆನ್ಸ್‌ ಒಣಗದಂತೆ ಅದಕ್ಕೆ ಡ್ರಾಪ್ಸ್‌ ಉಪಯೋಗಿಸಿ.

Contact Lens Awareness

ತಪಾಸಣೆ

ಕಾಲಕಾಲಕ್ಕೆ ನೇತ್ರ ತಪಾಸಣೆಯನ್ನು ಮಾಡಿಸಿಕೊಳ್ಳಿ. ಲೆನ್ಸ್‌ ಬದಲಿಸುವುದು ಅಗತ್ಯವೇ, ಈಗಿರುವುದು ಸಾಕೇ ಮುಂತಾದ ವಿಷಯಗಳನ್ನು ವೈದ್ಯರೇ ಪರಿಶೀಲಿಸುತ್ತಾರೆ. ಕಣ್ಣುಗಳು ಕೆಂಪಾದರೆ, ಉರಿಯುತ್ತಿದ್ದರೆ, ಲೆನ್ಸ್‌ ಧರಿಸಿದಾಗ ಕಿರಿಕಿರಿ ಆಗುತ್ತಿದ್ದರೆ, ಸೋಂಕಿನ ಯಾವುದೇ ಲಕ್ಷಣಗಳಿದ್ದರೆ ಮೊದಲು ವೈದ್ಯರನ್ನು ಭೇಟಿ ಮಾಡಿ.

ಧರಿಸಬೇಡಿ

ಲೆನ್ಸ್‌ಗಳ ಅವಧಿ ಮುಗಿದಿದ್ದರೆ, ಅವುಗಳನ್ನು ಧರಿಸಬೇಡಿ. ಅವುಗಳ ಎಕ್ಸ್‌ಪೈರಿ ದಿನಾಂಕವನ್ನು ಗಮನಿಸಿ. ಲೆನ್ಸ್‌ಗಳು ಕೊಂಚ ಮುಕ್ಕಾಗಿದ್ದರೂ ಅವುಗಳನ್ನು ಧರಿಸಕೂಡದು. ಇದರಿಂದ ಕಣ್ಣಿಗೆ ಹಾನಿಯಾಗುತ್ತದೆ. ನಮ್ಮ ನೇತ್ರಗಳು ಅತ್ಯಂತ ಸೂಕ್ಷ್ಮವಾದ ಅಂಗಗಳು ಎಂಬುದನ್ನು ಸದಾ ಗಮನದಲ್ಲಿ ಇರಿಸಿಕೊಳ್ಳಿ. ಅವುಗಳನ್ನು ಕಾಳಜಿ ಮಾಡಿದಷ್ಟೂ ಈ ಲೋಕ ನಮಗೆ ಸ್ಪಷ್ಟವಾಗಿ ಕಾಣುತ್ತದೆ.

Strengthens leg arm shoulder back and abdominal muscles Benefits of swimming for women

ಈಜಬೇಡಿ

ಕಣ್ಣಿಗೆ ಲೆನ್ಸ್‌ಗಳನ್ನು ಧರಿಸಿ, ಸ್ನಾನ ಮಾಡುವುದು, ಈಜುವುದು ಸಲ್ಲದು. ಕೆಲವೊಮ್ಮೆ ʻextended wearʼ ಎಂಬುದನ್ನು ಲೆನ್ಸ್‌ಗಳ ಕವರ್‌ ಮೇಲೆ ನಮೂದಿಸಲಾಗಿರುತ್ತದೆ. ಆದಾಗ್ಯೂ ಅವುಗಳನ್ನು ಧರಿಸಿ, ಮಲಗುವುದು, ಸ್ನಾನ ಮಾಡುವುದು, ಈಜುವುದೆಲ್ಲ ಸರಿಯಾದ ಕ್ರಮವಲ್ಲ. ನೀರಿನಲ್ಲಿರುವ ರೋಗಾಣುಗಳು ಲೆನ್ಸ್‌ಗೆ ಅಂಟಿಕೊಂಡು ಕಣ್ಣಿನ ಆರೋಗ್ಯವನ್ನು ಬುಡಮೇಲು ಮಾಡಬಹುದು.

ಇದನ್ನೂ ಓದಿ: Egg Yolk Benefits: ಮೊಟ್ಟೆಯ ಹಳದಿ ಲೋಳೆಯನ್ನು ಎಸೆಯುತ್ತೀರಾ? ಎಸೆಯುವ ಮೊದಲು ಒಮ್ಮೆ ಯೋಚಿಸಿ!

ಹಂಚಿಕೊಳ್ಳಬೇಡಿ

ಒಬ್ಬರ ಲೆನ್ಸ್‌ಗಳನ್ನು ಇನ್ನೊಬ್ಬರು ಧರಿಸಬಾರದು. ಬಳೆ, ಓಲೆ, ಬಟ್ಟೆಗಳಂತೆ ಒಬ್ಬರದ್ದು ಇನ್ನೊಬ್ಬರು ಯಾವುದೇ ಕಾರಣಕ್ಕೂ ಬಳಸುವಂತಿಲ್ಲ. ಇದರಿಂದ ಸೋಂಕುಗಳು ವರ್ಗಾವಣೆಯಾಗುತ್ತವೆ. ಸ್ವಚ್ಛತೆಯೂ ಮೂಲೆಗುಂಪಾಗುತ್ತದೆ. ಸ್ವಚ್ಛವಾದ ದೃಷ್ಟಿ ಬೇಕೆಂದರೆ ಲೆನ್ಸ್‌ಗಳ ಸ್ವಚ್ಛತೆಯೂ ಮುಖ್ಯವಾಗಬೇಕು.

Continue Reading

ಆರೋಗ್ಯ

Health Tips Kannada: ನಿಂತ ಮಳೆ ನೀರಿನಿಂದ ಈ 7 ರೋಗಗಳು ಬರುತ್ತವೆ ಎನ್ನುವುದು ನಿಮಗೆ ಗೊತ್ತೆ?

Health Tips Kannada: ಮಳೆ ಬಂದಾಗೊಮ್ಮೆ ರಸ್ತೆಯ ಆಚೀಚೆಯಲ್ಲಿ ನೀರು ಹರಿದು, ಮಳೆ ನಿಂತ ಒಂದೆರಡು ತಾಸಿನೊಳಗೆ ಎಲ್ಲವೂ ಸರಿ ಹೋದರೆ ಅವೆಲ್ಲ ಸಮಸ್ಯೆಯೇ ಅಲ್ಲ. ಆದರೆ ದೊಡ್ಡ ಮಳೆ ನಿಂತು ಒಂದೆರಡು ದಿನಗಳಾದರೂ ನೀರು ಹರಿದು ಖಾಲಿಯಾಗದಿದ್ದರೆ ಹಲವು ರೀತಿಯ ಆರೋಗ್ಯ ಸಮಸ್ಯೆಗಳನ್ನು ತರುತ್ತದೆ. ಏನು ಸಮಸ್ಯೆಗಳವು?

VISTARANEWS.COM


on

Health Tips Kannada
Koo

ಮಳೆಗಾಲದಲ್ಲಿ ಎಲ್ಲೆಂದರಲ್ಲಿ (Health Tips Kannada) ಮಳೆ ನೀರು ನಿಲ್ಲುವುದು ಹೊಸದೇನಲ್ಲ. ಅದರಲ್ಲೂ ನಗರಪ್ರದೇಶಗಳಲ್ಲಿ ಒಳಚರಂಡಿ ವ್ಯವಸ್ಥೆ ಕೆಟ್ಟಿದ್ದರೆ ಅಥವಾ ನೀರು ಹರಿಯುವ ದಾರಿ ಕಟ್ಟಿದ್ದರೆ ಊರೆಲ್ಲ ನೀರು ತುಂಬಿರುವ ದೃಶ್ಯಗಳೇ ಕಾಣುತ್ತವೆ. ಮಳೆ ಬಂದಾಗೊಮ್ಮೆ ರಸ್ತೆಯ ಆಚೀಚೆಯಲ್ಲಿ ನೀರು ಹರಿದು, ಮಳೆ ನಿಂತ ಒಂದೆರಡು ತಾಸಿನೊಳಗೆ ಎಲ್ಲವೂ ಸರಿ ಹೋದರೆ- ಅವೆಲ್ಲ ಸಮಸ್ಯೆಯೇ ಅಲ್ಲ. ಆದರೆ ದೊಡ್ಡ ಮಳೆ ನಿಂತು ಒಂದೆರಡು ದಿನಗಳಾದರೂ ನೀರು ಹರಿದು ಖಾಲಿಯಾಗದೆ ನಿಂತರೆ ಹಲವು ರೀತಿಯ ಆರೋಗ್ಯ ಸಮಸ್ಯೆಗಳನ್ನು ತರುತ್ತದೆ. ಎಂಥಾ ಆರೋಗ್ಯ ಸಮಸ್ಯೆಗಳನ್ನು ತರುತ್ತವೆ ಎನ್ನುವ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ.

ಲೆಪ್ಟೊಸ್ಪಿರೋಸಿಸ್

ಇದೊಂದು ಬ್ಯಾಕ್ಟೀರಿಯ ಸೋಂಕು. ಈ ಸೋಂಕನ್ನು ಹೊತ್ತ ಪ್ರಾಣಿಗಳ ಮೂತ್ರ ಸೇರಿದ ನೀರಿನ ಮೂಲಕ ಇವು ಮಾನವರಿಗೆ ಹರಡುತ್ತವೆ. ಅದರಲ್ಲೂ ಇಲಿ, ಹೆಗ್ಗಣಗಳಿಂದ ಹರಡುವುದು ಹೆಚ್ಚು. ಮಳೆನೀರು ಇಂಥ ಸೋಂಕುಗಳಿಗೆ ಮೂಲವಾಗಬಲ್ಲದು. ಕೈಕಾಲುಗಳ ಮೇಲಿನ ಗಾಯಗಳು ಮಳೆ ನೀರು ಅದ್ದಿದಾಗ ಈ ಬ್ಯಾಕ್ಟೀರಿಯಗಳು ದೇಹದೊಳಗೆ ಪ್ರವೇಶಿಸುತ್ತವೆ. ಈ ಸೋಂಕಿನ ಲಕ್ಷಣಗಳ ಬಗ್ಗೆ ಹೇಳುವುದಾದರೆ, ತೀವ್ರ ಜ್ವರ, ನಡುಕ, ಅತೀವ ತಲೆನೋವು, ಸ್ನಾಯುಗಳಲ್ಲಿ ನೋವು, ಕಣ್ಣು ಕೆಂಪಾಗುವುದು ಮತ್ತು ಕಾಮಾಲೆಯ ಲಕ್ಷಣಗಳು ಕಾಣಿಸಿಕೊಳ್ಳುತ್ತವೆ. ಈ ಸೋಂಕು ಮುಂದುವರಿದು ತೀವ್ರವಾದಲ್ಲಿ, ಕಿಡ್ನಿ, ಯಕೃತ್‌, ಪುಪ್ಪುಸಗಳಿಗೆ ಹಾನಿ ಮಾಡುತ್ತದೆ. ಹಾಗಾಗಿ ನಿಂತ ಮಳೆನೀರು ಸೋಕದಂತೆ ಎಚ್ಚರ ವಹಿಸಿ.

Malaria

ಮಲೇರಿಯಾ

ಅನಾಫಿಲಿಸ್‌ ಹೆಣ್ಣು ಸೊಳ್ಳೆಯು ಕಚ್ಚಿದಾಗ ದೇಹ ಸೇರುವ ಪ್ಮಾಸ್ಮೋಡಿಯಂ ಎಂಬ ಏಕಕೋಶ ಜೀವಿಯಿಂದ ಬರುವ ಕಾಯಿಲೆಯಿದು. ಸರಿಯಾದ ಸಮಯಕ್ಕೆ ಸೂಕ್ತ ಚಿಕಿತ್ಸೆ ದೊರೆಯದಿದ್ದರೆ ಇದು ಪ್ರಾಣಘಾತುಕವೂ ಆಗಬಲ್ಲದು. ಮುನ್ನೆಚ್ಚರಿಕೆಯಿಂದ ಇದನ್ನು ತಡೆಯುವುದು ಸಾಧ್ಯವಿದ್ದರೂ, ಜಾಗತಿಕ ಮಟ್ಟದಲ್ಲಿ ಪ್ರತಿವರ್ಷ ಲಕ್ಷಗಟ್ಟಲೆ ಜೀವಗಳು ಈ ರೋಗಕ್ಕೆ ಬಲಿಯಾಗುತ್ತಿವೆ. ವಿಪರೀತ ಜ್ವರ, ಮೈಕೈ ನೋವು, ಚಳಿಯಾಗಿ ನಡುಕ, ಜ್ವರ ಕಡಿಮೆಯಾದರೆ ಸಿಕ್ಕಾಪಟ್ಟೆ ಬೆವರುವುದು, ತಲೆನೋವು, ವಾಂತಿ, ಡಯರಿಯದಂಥ ಚಿಹ್ನೆಗಳು ಕಂಡುಬರುತ್ತವೆ. ಈ ಯಾವುದೇ ಲಕ್ಷಣಗಳು ಕಂಡರೂ ವೈದ್ಯರೊಂದಿಗೆ ಸಮಾಲೋಚನೆ ಅಗತ್ಯ.

ಡೆಂಗ್ಯೂ

ಏಡಿಸ್‌ ಹೆಣ್ಣು ಸೊಳ್ಳೆಯಿಂದ ಹರಡುವ ವೈರಸ್‌ ಸೋಂಕಿದು. ಸೊಳ್ಳೆ ಕಚ್ಚಿದ ನಾಲ್ಕಾರು ದಿನಗಳ ನಂತರ ರೋಗದ ಚಿಹ್ನೆಗಳು ಕಾಣಿಸಿಕೊಳ್ಳುತ್ತವೆ. ಸಾಮಾನ್ಯವಾಗಿ ಫ್ಲೂ ಮಾದರಿಯಲ್ಲಿ ಇರುವ ಈ ಕಾಯಿಲೆಯಲ್ಲಿ ಕೆಲವೊಮ್ಮೆ ರಕ್ತದಲ್ಲಿ ಪ್ಲೇಟ್‌ಲೆಟ್‌ಗಳು ಕುಸಿದು ಜೀವಕ್ಕೆ ಎರವಾಗುವ ಸಾಧ್ಯತೆಯಿದೆ. ಜ್ವರ, ತೀವ್ರವಾದ ತಲೆನೋವು, ಕಣ್ಣಿನ ಹಿಂಭಾಗದಲ್ಲಿ ನೋವು, ಕೀಲು ಮತ್ತು ಸ್ನಾಯುಗಳಲ್ಲಿ ನೋವು, ಮೈಮೇಲೆ ದದ್ದುಗಳು, ವಾಂತಿ- ಜ್ವರದೊಂದಿಗೆ ಈ ಪೈಕಿ ಯಾವುದೇ ಎರಡು ಲಕ್ಷಣಗಳನ್ನು ಕಂಡರೂ ವೈದ್ಯರನ್ನು ಸಂಪರ್ಕಿಸಬೇಕು.

Chikungunya

ಚಿಕೂನ್‌ಗುನ್ಯಾ

ಸೊಳ್ಳೆ ಕಚ್ಚುವುದರಿಂದ ಹರಡುವ ಚಿಕೂನ್‌ಗುನ್ಯಾ ವೈರಸ್‌ನಿಂದಲೇ ಬರುವ ರೋಗವಿದು. ಜ್ವರದೊಂದಿಗೆ ತೀವ್ರವಾದ ಕೀಲುನೋವು ಇದರ ಪ್ರಮುಖ ಲಕ್ಷಣಗಳು. ಸೋಂಕಿತ ಸೊಳ್ಳೆ ಕಚ್ಚಿದ 4-8 ದಿನಗಳ ಅಂತರದಲ್ಲಿ ರೋಗಚಿಹ್ನೆಗಳು ಕಂಡುಬರುತ್ತವೆ. ಈ ಸೊಳ್ಳೆಗಳು ರಾತ್ರಿಯಲ್ಲಿ ಮಾತ್ರವೇ ಅಲ್ಲ, ಹಗಲಿನಲ್ಲೂ ಕಚ್ಚುತ್ತವೆ. ಏಷ್ಯಾ ಮತ್ತು ಭಾರತೀಯ ಉಪಖಂಡದಲ್ಲಿ ಮುಖ್ಯವಾಗಿ ಈ ಕಾಯಿಲೆ ಸದ್ದು ಮಾಡುತ್ತಿದೆ.

ಟೈಫಾಯ್ಡ್

ಸಾಲ್ಮೊನೆಲ್ಲಾ ಟೈಫಿ ಎಂಬ ರೋಗಾಣುವಿನಿಂದ ಬರುವ ಇದು ಮಾರಣಾಂತಿಕ ರೋಗ. ಕಲುಷಿತವಾದ ಆಹಾರ ಮತ್ತು ನೀರಿನಿಂದಲೇ ಇದು ದೇಹ ಸೇರುತ್ತದೆ. ದೀರ್ಘ ಕಾಲದವರೆಗೆ ಜ್ವರ, ಸುಸ್ತು, ತಲೆನೋವು, ವಾಂತಿ, ಕಿಬ್ಬೊಟ್ಟೆಯಲ್ಲಿ ನೋವು, ಡಯರಿಯಾದಂಥ ಲಕ್ಷಣಗಳು ಕಾಣಿಸಿಕೊಳ್ಳಬಹುದು. ಇದಕ್ಕೆ ವೈದ್ಯರ ಶುಶ್ರೂಷೆಯ ಜೊತೆಗೆ ಸರಿಯಾದ ಆಹಾರವನ್ನೂ ತೆಗೆದುಕೊಳ್ಳಬೇಕು. ಆಹಾರದ ಸ್ವಚ್ಛತೆ ಕಡೆಗೆ ಗಮನ ನೀಡಲೇಬೇಕು. ಇದಕ್ಕೆ ಲಸಿಕೆ ಲಭ್ಯವಿದೆ.

ಕಾಲರಾ

ವಿಬ್ರಿಯೊ ಕಾಲೆರೆ ಎಂಬ ಬ್ಯಾಕ್ಟೀರಿಯಾದಿಂದ ಕಲುಷಿತ ನೀರು ಮತ್ತು ಆಹಾರದ ಮೂಲಕ ಇದು ಮಾನವರಿಗೆ ಹರಡುತ್ತದೆ. ತೀವ್ರವಾದ ಅತಿಸಾರ ಭೇದಿ ಇದರ ಪ್ರಮುಖ ಲಕ್ಷಣ. ಉಳಿದಂತೆ ಹೆಚ್ಚಿನ ಲಕ್ಷಣಗಳು ತೋರಿಸಿಕೊಳ್ಳುವುದಿಲ್ಲ ಈ ರೋಗ. ತ್ವರಿತವಾಗಿ ಚಿಕಿತ್ಸೆ ದೊರೆಯದಿದ್ದರೆ, ತೀವ್ರ ನಿರ್ಜಲೀಕರಣಕ್ಕೆ ಒಳಗಾಗಿ ಜೀವಕ್ಕೆ ಅಪಾಯ ಕಟ್ಟಿಟ್ಟಿದ್ದು. ಕಾಲರಾ, ಟೈಫಾಯ್ಡ್‌ನಂಥ ರೋಗಗಳಿಗೆ ನೀರನ್ನು ಕುದಿಸಿಯೇ ಕುಡಿಯುವುದು ಉತ್ತಮ ಉಪಾಯ.

ಇದನ್ನೂ ಓದಿ: Mouthwash Benefits: ಮೌತ್‌ವಾಷ್‌ ದಿನವೂ ಬಳಸಬಹುದೇ? ಏನು ಉಪಯೋಗ ಇದರಿಂದ?

ಹೆಪಟೈಟಿಸ್‌ ಎ, ಇ

ಕಲುಷಿತ ನೀರು ಮತ್ತು ಆಹಾರದಿಂದಲೇ ಬರುವ ವೈರಲ್‌ ಸೋಂಕಿದು. ಇವೆರಡೂ ವೈರಸ್‌ಗಳು ಪಿತ್ತಕೋಶಕ್ಕೆ ಹಾನಿ ಮಾಡುತ್ತವೆ. ಜ್ವರ, ಆಯಾಸ, ಹಸಿವಿಲ್ಲದಿರುವುದು, ಹೊಟ್ಟೆ ತೊಳೆಸುವುದು, ವಾಂತಿ, ಕಿಬ್ಬೊಟ್ಟೆಯಲ್ಲಿ ನೋವು ಮತ್ತು ಕಾಮಾಲೆಯ ಲಕ್ಷಣಗಳು ಇದರಲ್ಲಿ ಕಾಣಿಸಿಕೊಳ್ಳುತ್ತವೆ. ನೀರು, ಆಹಾರ ಶುದ್ಧವಾಗಿ ಇರುವಂತೆ ನೋಡಿಕೊಳ್ಳಬೇಕು. ಹೆಪಟೈಟಿಸ್‌ ಎ ಸೋಂಕಿಗೆ ಲಸಿಕೆ ಲಭ್ಯವಿದೆ.

Continue Reading

ಆರೋಗ್ಯ

Brain Eating Amoeba: ಮೆದುಳು ತಿನ್ನುವ ಅಮೀಬಾದಿಂದ ನಮಗೂ ಅಪಾಯ ಇದೆಯೆ?

Brain Eating Amoeba: ಮೆದುಳು ಮೆಲ್ಲುವ ಅಮೀಬಾ ಎಂದೇ ಕುಖ್ಯಾತವಾಗಿರುವ ಏಕಕೋಶ ಜೀವಿಯಿಂದ ಬರುವ ಸೋಂಕಿಗೆ ಈವರೆಗೆ ಹಲವರು ಬಲಿಯಾಗಿದ್ದಾರೆ. ನೀರಿನಲ್ಲಿ ಕಂಡುಬರುವ ಇವು ಮೂಗು ಪ್ರವೇಶಿಸಿದಾಗ ಬರುವಂಥ ಸೋಂಕಿದು. ಈ ಅಪಾಯಕಾರಿ ಅಮೀಬಾದಿಂದ ಪಾರಾಗುವುದು ಹೇಗೆ? ಈ ಬಗ್ಗೆ ಹೆಚ್ಚಿನ ವಿವರ ಇಲ್ಲಿದೆ.

VISTARANEWS.COM


on

Amoeba
Koo

ಭಾರತದಲ್ಲಿ ಈವರೆಗೆ (Brain Eating Amoeba) ಅಷ್ಟಾಗಿ ಸುದ್ದಿ ಮಾಡದ ʻಮೆದುಳು ಮೆಲ್ಲುವ ಅಮೀಬಾʼ ಇತ್ತೀಚಿನ ದಿನಗಳಲ್ಲಿ ಕೇರಳದಲ್ಲಿ ಸುದ್ದಿ ಮಾಡುತ್ತಿದೆ. ಕಳೆದ ನಾಲ್ಕು ತಿಂಗಳಲ್ಲಿ ಈ ಅಮೀಬಾಕ್ಕೆ ಹಲವರು ಬಲಿಯಾಗಿದ್ದಾರೆ. ನೀರಿನಲ್ಲಿರುವ ಇದು ಮೂಗಿನ ಮೂಲಕ ದೇಹ ಪ್ರವೇಶಿಸಿದರೆ 97ರಷ್ಟು ಪ್ರತಿಶತ ಉಳಿಯುವ ಸಾಧ್ಯತೆಯಿಲ್ಲ ಎನ್ನುವುದು ತೀವ್ರ ಕಳವಳದ ಸಂಗತಿ. ಇಂಥ ಅಪಾಯಕಾರಿ ಸೂಕ್ಷ್ಮಾಣುವಿನ ಬಗ್ಗೆ, ಅದು ಹರಡುವ ರೀತಿ ಮತ್ತು ಪ್ರತಿಬಂಧಕ ಕ್ರಮಗಳ ಬಗ್ಗೆ ಇಲ್ಲಿದೆ ವಿವರಗಳು. ಅಮೀಬಿಕ್‌ ಮೆನಿಂಜೈಟಿಸ್ ಎಂದೂ ಕರೆಯಲಾಗುವ ಈ ಸ್ಥಿತಿಗೆ ಮುಖ್ಯ ಕಾರಣ ನಗ್ಲೇರಿಯ ಫೌಲೇರಿ ಎಂಬ ಏಕಕೋಶ ಜೀವಿ. ಕಲುಷಿತ ನೀರಿನಲ್ಲಿ ವಾಸಿಸುವ ಈ ಸೂಕ್ಷ್ಮಾಣು ನದಿ, ಹೊಳೆ, ಕೊಳ, ಬಾವಿ, ಕೆರೆಯಂಥ ಯಾವುದೇ ರೀತಿಯ ನೀರಿನಲ್ಲಿ ಇರಬಹುದು. ಒದ್ದೆ ಮಣ್ಣು ಮತ್ತು ನೀರಿನ ಪೈಪುಗಳಲ್ಲಿದ್ದರೂ ಅಚ್ಚರಿಯಿಲ್ಲ. ಇದಕ್ಕೆ ಬದುಕುವುದಕ್ಕೆ ಯಾವುದೇ ನಿಶ್ಚಿತವಾದ ಆಶ್ರಯ ಬೇಕಿಲ್ಲ, ವಾತಾವರಣದಲ್ಲಿ ಹಲವೆಡೆ ಕಾಣಬಹುದು.

Brain Eating Amoeba

ಯಾವಾಗ ಇದು ಚುರುಕಾಗುತ್ತದೆ?

ವಾತಾವರಣ ಬೆಚ್ಚಗಿದ್ದಾಗ, ನೀರು ಸಹ ಬೆಚ್ಚಗಿದ್ದಾಗ ಈ ಅಮೀಬಾ ಚುರುಕಾಗುತ್ತವೆ. ಇವು ಸಾಮಾನ್ಯವಾಗಿ ನದೀತಳದ ಮಣ್ಣಿನಲ್ಲಿ ಹುದುಗಿರುತ್ತವೆ. ಡೈವಿಂಗ್‌, ಈಜು ಅಥವಾ ನೀರನ್ನು ಕದಡುವ ಯಾವುದಾದರೂ ಚಟುವಟಿಕೆಯಿಂದ ಇವು ಮೇಲ್ಮೈಗೆ ತಲುಪುತ್ತವೆ. ಅಲ್ಲಿಂದ ಮೂಗಿನ ಮೂಲಕ ದೇಹ ಪ್ರವೇಶಿಸಿ, ಮೆದುಳಿಗೆ ಲಗ್ಗೆ ಇಡುತ್ತವೆ. ಬಿಸಿ ನೀರಿನಲ್ಲೂ ಇವು ಇರಬಲ್ಲವು. ಆದರೆ ಅಂಥ ಕಲುಷಿತ ನೀರನ್ನು ನುಂಗಿದರೆ ಈ ಸಮಸ್ಯೆ ಆಗಲಿಕ್ಕಿಲ್ಲ, ಮೂಗಿಗೆ ಹೋದರೆ ಮಾತ್ರ ಉಳಿಗಾಲವಿಲ್ಲ. ವಯಸ್ಕರಿಗಿಂತಲೂ ಮಕ್ಕಳಿಗೆ ಈ ಸೋಂಕು ಬಲುಬೇಗ ತಾಗುತ್ತಿದೆ. ಹಾಗೆನ್ನುತ್ತಿದ್ದಂತೆ ನೀರು ಮುಟ್ಟುವುದಿಲ್ಲ ಎಂದು ಶಪಥ ಮಾಡುವ ಅಗತ್ಯವಿಲ್ಲ. ಕಾರಣ, ಒಂದು ದಶಲಕ್ಷ ಮಂದಿಯಲ್ಲಿ ಒಬ್ಬರಿಗೆ ಈ ಸೋಂಕು ಬರುತ್ತದೆನ್ನುವಷ್ಟು ಅಪರೂಪವಿದು.

ಲಕ್ಷಣಗಳೇನು?

ತೀವ್ರ ಜ್ವರ, ಅತೀವ ತಲೆನೋವು, ವಾಂತಿ ಅಥವಾ ಹೊಟ್ಟೆ ತೊಳೆಸುವುದು, ನಡುಕ, ಕುತ್ತಿಗೆ ಗಡುಸಾಗುವುದು, ಬೆಳಕು ನೋಡಲು ಕಷ್ಟ, ಗೊಂದಲ, ಕೋಮಾ… ಒಮ್ಮೆ ಈ ಅಮೀಬಾ ಮೂಗು ಪ್ರವೇಶಿಸಿದ ಮೇಲೆ, ಲಕ್ಷಣಗಳು ಕಾಣುವುದಕ್ಕೆ 2-15 ದಿನಗಳವರೆಗೆ ತೆಗೆದುಕೊಳ್ಳಬಹುದು. ಇದು ವ್ಯಕ್ತಿಯಿಂದ ವ್ಯಕ್ತಿಗೆ ಹರಡಿದ ದಾಖಲೆಯೂ ಇಲ್ಲ. ಇದು ಮೂಗಿನ ಮೂಲಕವೇ ಪ್ರವೇಶಿಸಬೇಕು. ಒಮ್ಮೆ ಲಕ್ಷಣಗಳು ಕಾಣಿಸಿದ ಮೇಲೆ 7-10 ದಿನಗಳ ಒಳಗೆ ಸೋಂಕಿತರು ಮರಣಿಸಿದ ಪ್ರಕರಣಗಳೇ ಹೆಚ್ಚು. ಇದರಿಂದ ಚೇತರಿಸಿಕೊಂಡವರು ಅತಿ ವಿರಳ.

ಇದನ್ನೂ ಓದಿ: Kidney Stones: ಈ ಅಭ್ಯಾಸ ನಿಮಗಿದ್ದರೆ ಕಿಡ್ನಿಯಲ್ಲಿ ಕಲ್ಲಾಗುವ ಅಪಾಯ ಹೆಚ್ಚು!

ತಡೆಗಟ್ಟಬಹುದೇ?

ಒಮ್ಮೆ ಸೋಂಕು ಬಂದ ಮೇಲೆ ಹೆಚ್ಚೇನೂ ಮಾಡಲಾಗದು. ಇದಕ್ಕೆ ಲಸಿಕೆಯೂ ಲಭ್ಯವಿಲ್ಲ. ಆದರೆ ಬಾರದಂತೆ ಕೆಲವು ಎಚ್ಚರಿಕೆಗಳನ್ನು ತೆಗೆದುಕೊಳ್ಳಬಹುದು-

  • ನೀರಿನಲ್ಲಿ ಈಜುವಾಗ ಎಚ್ಚರಿಕೆ ವಹಿಸಿ. ಈಜುಕೊಳಕ್ಕೆ ಹೋಗುವುದಾದರೆ, ಸರಿಯಾಗಿ ಕ್ಲೋರಿನ್‌ ಹಾಕಿ ನೀರನ್ನು ಸೋಂಕು ರಹಿತ ಮಾಡಿದ ಕೊಳಗಳನ್ನೇ ಉಪಯೋಗಿಸಿ. ನೀರು ಬೆಚ್ಚಗಿದ್ದಷ್ಟೂ ಈ ರೋಗಾಣು ಸಕ್ರಿಯವಾಗಿರುತ್ತದೆ.
  • ಕೆರೆ ನದಿಗಳಲ್ಲಿ ಈಜುವಾಗ ತಳಭಾಗದ ಮಣ್ಣು ಕದಡದಿರಿ. ರಾಡಿ ನೀರು ಮೇಲೆ ಬಂದಂತೆ ಇಂಥ ಅಪಾಯಗಳು ಹೆಚ್ಚುತ್ತವೆ.
  • ನೈಸರ್ಗಿಕ ನೀರಿನ ತಾಣಗಳಲ್ಲಿ ಮೇಲಿಂದ ಡೈವ್‌ ಮಾಡಬೇಡಿ. ಇದರಿಂದಲೂ ಸಮಸ್ಯೆಗಳು ಕಾಡಬಹುದು.
  • ನೇತಿಯಂಥ ಕ್ರಿಯೆಗಳನ್ನು ಮಾಡುವಾಗ ಮಾಮೂಲಿ ನಲ್ಲಿ ನೀರನ್ನು ಮೂಗಿಗೆ ಹಾಕದಿರಿ. ಇದಕ್ಕಾಗಿ ಶುದ್ಧೀಕರಿಸಿದ ಸ್ವಚ್ಛ ನೀರನ್ನೇ ಬಳಸಿ. ಕುದಿಸಿ ಆರಿಸಿದ ನೀರು ಬಳಸುವುದು ಕ್ಷೇಮ.
Continue Reading

ಆರೋಗ್ಯ

Allergies During Monsoon: ಮಳೆಗಾಲದಲ್ಲಿ ಅಲರ್ಜಿ ಸಮಸ್ಯೆಯಿಂದ ಪಾರಾಗುವುದು ಹೇಗೆ?

Allergies during Monsoon: ಮಳೆಗಾಲದಲ್ಲಿ ಎಲ್ಲೆಡೆ ಒದ್ದೆ, ತೇವ ಆವರಿಸಿಕೊಂಡಿರುವಾಗ ಬ್ಯಾಕ್ಟೀರಿಯಗಳು, ಫಂಗಸ್‌ಗಳ ಕಾಟ ಹೆಚ್ಚು. ಇದರಿಂದಲೇ ಅಸ್ತಮಾ, ಅಲರ್ಜಿ ಸಮಸ್ಯೆ ಬಿಗಡಾಯಿಸುತ್ತದೆ. ಅದರಲ್ಲೂ ಮೋಡ ಬಿಗಿದಿದ್ದರಂತೂ ಶ್ವಾಸನಾಳಗಳೂ ಬಿಗಿದು ಉಸಿರಾಟವೇ ಕಷ್ಟವಾಗುತ್ತದೆ. ಮಳೆಗಾಲದಲ್ಲಿ ಅಸ್ತಮಾ, ಅಲರ್ಜಿಗಳ ನಿಯಂತ್ರಣ ಹೇಗೆ? ಈ ಕುರಿತು ಇಲ್ಲಿದೆ ಮಾಹಿತಿ.

VISTARANEWS.COM


on

Allergies During Monsoon
Koo

ಮಳೆಗೆ ಬಿಡುವಿಲ್ಲದ (Allergies during Monsoon) ಕಾಲವಿದು. ರಾತ್ರಿಯೆಲ್ಲ ಮಳೆ ಸುರಿದಾಗ, ಬೆಳಗಿನ ಸ್ವಚ್ಛ ಹವೆಯನ್ನು ನೋಡಿದರೆ ಎದೆ ಹಗುರಾಗುವಷ್ಟು ತಾಜಾ ಗಾಳಿಯನ್ನು ಉಸಿರಾಡಬಹುದು ಎನ್ನುವ ಭಾವ ಬರುತ್ತದೆ. ಆದರೆ ಅಸ್ತಮಾ, ಅಲರ್ಜಿ ಇರುವವರಿಗೆ ಮಳೆಗಾಲವೂ ಕಷ್ಟವೇ. ಎಲ್ಲೆಡೆ ಒದ್ದೆ, ತೇವ ಆವರಿಸಿಕೊಂಡಿರುವಾಗ ಬ್ಯಾಕ್ಟೀರಿಯಗಳು, ಫಂಗಸ್‌ಗಳ ಕಾಟ ಹೆಚ್ಚು. ಇದರಿಂದಲೇ ಇನ್ನಷ್ಟು ಅಲರ್ಜಿ ಸಮಸ್ಯೆ ಬಿಗಡಾಯಿಸುತ್ತದೆ. ಅದರಲ್ಲೂ ಮೋಡ ಬಿಗಿದಿದ್ದರಂತೂ ಶ್ವಾಸನಾಳಗಳೂ ಬಿಗಿದು, ಆಷಾಢದ ಗಾಳಿಯಂತೆಯೇ ಶ್ವಾಸಕೋಶವೂ ಶಬ್ದ ಮಾಡಲಾರಂಭಿಸುತ್ತದೆ. ಇವಿಷ್ಟು ಸಾಲದೆಂಬಂತೆ ನಾನಾ ರೀತಿಯ ವೈರಸ್‌ ಸೋಂಕುಗಳು ಅಮರಿಕೊಂಡು, ಸೋಂಕು ಗುಣವಾದ ಮೇಲೂ ಅಲರ್ಜಿ ಸಮಸ್ಯೆ ಉಲ್ಭಣಿಸುವಂತೆ ಮಾಡುತ್ತವೆ. ಮಳೆಗಾಲದಲ್ಲಿ ಅಸ್ತಮಾ, ಅಲರ್ಜಿಗಳ ನಿಯಂತ್ರಣ ಹೇಗೆ?

Keep the bodys immune system active with proper diet and exercise Monsoon Allergies

ಏಕೆ ಹೆಚ್ಚುತ್ತದೆ?

ಈ ಮಳೆಗೆ, ಒಂದು ಹಿಡಿ ಮಣ್ಣು ಇದ್ದಲ್ಲೂ ಹುಲ್ಲು ಹಸಿರಾಗುತ್ತದೆ. ಈ ಹುಲ್ಲಿನಿಂದ ವಾತಾವರಣ ಸೇರುವ ಅಲರ್ಜಿಕಾರಕಗಳು ಹಲವು ರೀತಿಯವು. ಜೋರು ಗಾಳಿಯಲ್ಲಿ ಇದರ ಹೂವಿನ ಪರಾಗಗಳೆಲ್ಲ ಎಲ್ಲೆಡೆ ಪಸರಿಸುತ್ತವೆ. ಅಲರ್ಜಿಗೆ ಕಾರಣವಾಗುತ್ತವೆ. ತೇವ ಹೆಚ್ಚಿದ್ದಲ್ಲಿ ಫಂಗಸ್‌ ಪ್ರಮಾಣವೂ ಹೆಚ್ಚು. ಜೋರು ಮಳೆಯ ಪರಿಸರದಲ್ಲಿ ಗೋಡೆ, ಬಾಗಿಲುಗಳ ಮೇಲೂ ಫಂಗಸ್‌ ಬೆಳೆದಿರುತ್ತದೆ. ಇವುಗಳನ್ನು ಕಾಲಕಾಲಕ್ಕೆ ಸ್ವಚ್ಛಗೊಳಿಸದಿದ್ದರೆ ಅಸ್ತಮಾ ಸಮಸ್ಯೆ ಬಿಗಡಾಯಿಸಬಹುದು. ಯಾವುದೇ ರೀತಿಯ ಪರಾಗಗಳ ಅಲರ್ಜಿಯೂ ಈಗ ತೊಂದರೆ ಕೊಟ್ಟೀತು. ಜೋರು ಗಾಳಿ ಮತ್ತು ಮೋಡ ಮುಸುಕಿದ ವಾತಾವರಣಗಳೇ ಇದಕ್ಕೆ ಕಾರಣ.

ಲಕ್ಷಣಗಳು

ಅಲರ್ಜಿ ಹೆಚ್ಚುತ್ತಿದೆ ಎನ್ನುವುದಕ್ಕೆ ಈ ಲಕ್ಷಣಗಳು ಕಾಣಿಸಿಕೊಳ್ಳಬಹುದು- ಸೀನುಗಳ ಸರಮಾಲೆ, ಮೂಗು ಸೋರುವುದು, ಒಣ ಕೆಮ್ಮು, ಉಸಿರಾಡಲು ಕಷ್ಟವಾಗುವುದು, ಉಸಿರಾಡುವಾಗ ಸಿಳ್ಳೆ ಹಾಕಿದಂತೆ ಪುಪ್ಪುಸಗಳಿಂದ ಶಬ್ದ ಬರುವುದು, ಸುಸ್ತು-ಆಯಾಸ, ಕಣ್ಣು ಕೆಂಪಾಗುವುದು, ಕಣ್ಣಿನಲ್ಲಿ ತುರಿಕೆ, ಕಣ್ಣು ಊದಿಕೊಂಡು ನೀರು ಬರುವುದು, ತಲೆನೋವು, ಮೈ ಮೇಲೆ ಗುಳ್ಳೆಗಳು ಬಂದು ಕೆಂಪಾಗುವುದು… ಇತ್ಯಾದಿ.

Woman Suffer from Nose Allergy Snoring Solution

ಏನು ಮಾಡಬೇಕು?

ಅಸ್ತಮಾ, ಅಲರ್ಜಿ ತೊಂದರೆಯಿದೆ ಎಂದಾದರೆ ವೈದ್ಯರು ಹೇಳಿದ ಔಷಧಿಗಳನ್ನು ನಿಯಮಿತವಾಗಿ ತೆಗೆದುಕೊಳ್ಳಿ. ಅಲರ್ಜಿ ನಿಯಂತ್ರಣಕ್ಕೆ ಸರಿಯಾದ ಚಿಕಿತ್ಸಾ ವಿಧಾನವನ್ನು ಪಾಲಿಸುವುದು ಅತ್ಯಗತ್ಯ. ಪಫ್‌ಗಳನ್ನು ತೆಗೆದುಕೊಳ್ಳಬೇಕು ಎಂದಾದರೆ, ದಿನದ ಲೆಕ್ಕವನ್ನು ಪಕ್ಕಾ ಇರಿಸಿಕೊಳ್ಳಿ. ಸೋಂಕುಗಳಿಂದ ತಪ್ಪಿಸಿಕೊಳ್ಳುವುದು ಮುಖ್ಯ ಎಂದಾದಲ್ಲಿ ಫ್ಲೂ ಲಸಿಕೆ ಪಡೆಯಿರಿ. ಯಾವೆಲ್ಲ ಆಹಾರಗಳು ಅಲರ್ಜಿ ತರುತ್ತವೆ ನಿಮಗೆ ಎಂಬುದನ್ನು ತಿಳಿದುಕೊಳ್ಳುವುದು ಹೆಚ್ಚಿನ ನೆರವನ್ನು ನೀಡಬಹುದು. ಮನೆಯೊಳಗೆ ಹೆಚ್ಚಿನ ತೇವ ನಿಲ್ಲದಂತೆ ಜಾಗ್ರತೆ ಮಾಡಿ. ಸಾಕಷ್ಟು ಗಾಳಿ-ಬೆಳಕು ಆಡುವಂತಿರಲಿ. ಮಳೆ ಇಲ್ಲದ ಸಮಯದಲ್ಲಿ, ಬಿಸಿಲಿದ್ದಾಗ ಕಿಟಕಿಗಳನ್ನು ತೆರೆದಿಡುವುದು ಸಹಕಾರಿ. ಹಾಗಿಲ್ಲದಿದ್ದರೆ ಎಕ್ಸಾಸ್ಟ್‌ ಫ್ಯಾನ್‌ಗಳನ್ನು ಅಳವಡಿಸಿಕೊಳ್ಳಿ. ಮನೆಯೊಳಗೆ ದೂಳು, ಕಸ ಉಳಿಯದಿರಲಿ. ಮನೆಯಲ್ಲಿ ಸಾಕು ಪ್ರಾಣಿಗಳಿದ್ದರೆ, ಅವುಗಳ ಕೂದಲಿನಿಂದ ಅಲರ್ಜಿ ಉಂಟಾಗುವ ಸಾಧ್ಯತೆ ಹೆಚ್ಚು. ಹಾಸಿಗೆ-ಹೊದಿಕೆಯ ವಸ್ತ್ರಗಳನ್ನು ಕಪಾಟಿನಿಂದ ನೇರವಾಗಿ ತೆಗೆದು ಉಪಯೋಗಿಸಬೇಡಿ. ಅವುಗಳನ್ನು ಬಿಸಿಲಿಗೆ ಆರಲು ಬಿಡಿ ಅಥವಾ ಡ್ರೈಯರ್‌ಗೆ ಹಾಕಿ. ಅದಿಲ್ಲದಿದ್ದರೆ ಇಸ್ತ್ರಿ ಮಾಡಿ ಉಪಯೋಗಿಸಿ. ಇದರಿಂದ ಮೈಟ್‌ಗಳ ಉಪಟಳವನ್ನು ತಪ್ಪಿಸಬಹುದು.
ಮನೆಯಿಂದ ಹೊರಗೆ ಹೋಗುವಾಗ ಬೆಚ್ಚಗಿನ ವಸ್ತ್ರಗಳು ಅಗತ್ಯ. ಗಾಳಿ ಹೆಚ್ಚಿದ್ದರೆ ಮುಖಕ್ಕೆ ಮಾಸ್ಕ್‌ ಹಾಕಿ. ಕಟುವಾದ ಪರಿಮಳಗಳು ನಿಮಗೆ ಹೇಳಿಸಿದ್ದಲ್ಲ. ನಿಮ್ಮ ವೈಯಕ್ತಿಕ ಶುಚಿತ್ವದ ವಸ್ತುಗಳಾದ ಸೋಪು, ಶಾಂಪು, ಕ್ರೀಮ್‌ಗಳಿಗೆ ಕಟುವಾದ ಘಮವಿದ್ದರೆ, ಅದನ್ನು ಬದಲಾಯಿಸಿ. ಪರ್ಫ್ಯೂಮ್‌ಗಳು ಸಹ ತೊಂದರೆ ತಂದಾವು, ಜೋಕೆ. ಮಳೆ-ಚಳಿ ಏನೇ ಆದರೂ ದಿನವೂ ಸ್ನಾನ ಮಾಡಿ. ಹೊರಗಿನಿಂದ ಬಂದಾಕ್ಷಣ ಆ ಬಟ್ಟೆಗಳನ್ನು ಬದಲಿಸಿ, ಕೈ-ಕಾಲು ತೊಳೆದುಕೊಳ್ಳಿ. ಇದರಿಂದ ಸೋಂಕು ಮತ್ತು ಅಲರ್ಜಿಕಾರಕಗಳನ್ನು ನಿಯಂತ್ರಿಸಬಹುದು. ಉಗುರುಗಳನ್ನು ಕತ್ತರಿಸಿ, ಸ್ವಚ್ಛ ಮಾಡಿಕೊಳ್ಳಿ.

ಇದನ್ನೂ ಓದಿ: Fatty Liver Problem: ಫ್ಯಾಟಿ ಲಿವರ್‌ ಸಮಸ್ಯೆ ಎದುರಿಸುತ್ತಿದ್ದೀರಾ? ಈ ಮೂರು ಪೇಯಗಳಿಂದ ಎಂದೆಂದಿಗೂ ದೂರವಿರಿ

ಆಹಾರ

ಸಮತೋಲಿತ ಮತ್ತು ಸತ್ವಭರಿತ ಆಹಾರವನ್ನು ಸೇವಿಸುವುದು ಹೆಚ್ಚಿನ ತೊಂದರೆಯನ್ನು ಬುಡದಲ್ಲೇ ತಪ್ಪಿಸುತ್ತದೆ. ಒಮೇಗಾ 3 ಕೊಬ್ಬಿನಾಮ್ಲ ಹೆಚ್ಚಿರುವ ಆಹಾರವನ್ನು ಸೇವಿಸಿ. ಇದೀಗ ಬೆಣ್ಣೆ ಹಣ್ಣು ಅಥವಾ ಅವಕಾಡೊಗಳ ಕಾಲ. ಒಮೇಗಾ 3 ಕೊಬ್ಬಿನಾಮ್ಲ ಹೇರಳವಾಗಿರುವ ಅವುಗಳನ್ನು ಮನಸೋಇಚ್ಛೆ ತಿನ್ನಿ. ಜೊತೆಗೆ ವಿಟಮಿನ್‌ ಸಿ ಹೆಚ್ಚಿರುವ ಕಿತ್ತಳೆ, ಬೆರ್ರಿಗಳು, ಪಾಲಕ್‌ ಸೊಪ್ಪು, ಕ್ಯಾಪ್ಸಿಕಂನಂಥವು ನಿಮಗೆ ಬೇಕು. ಚೆನ್ನಾಗಿ ನೀರು ಕುಡಿಯಿರಿ, ಮಳೆಗಾಲದಲ್ಲಿ ಬಾಯಾರಿಕೆಯೇ ಆಗುವುದಿಲ್ಲ ಎಂಬ ನೆವ ಹೇಳಬೇಡಿ. ಹರ್ಬಲ್‌ ಚಹಾಗಳು, ಸೂಪ್‌ಗಳನ್ನು ಯಥೇಚ್ಛ ಕುಡಿಯಿರಿ.

Continue Reading
Advertisement
IPL 2025
ಕ್ರೀಡೆ26 mins ago

IPL 2025: ಐಪಿಎಲ್ ಮೆಗಾ ಹರಾಜಿಗೂ ಮುನ್ನ ಪ್ರಮುಖ ಬೇಡಿಕೆ ಮುಂದಿಟ್ಟ ಫ್ರಾಂಚೈಸಿಗಳು

karnataka weather Forecast
ಮಳೆ35 mins ago

Karnataka Weather : ಭಾರಿ ಮಳೆ ಎಚ್ಚರಿಕೆ; ನಾಳೆ ಹಾಸನ, ಕೊಡಗಿನ ಈ ಶಾಲೆಗಳಿಗೆ ರಜೆ ಘೋಷಣೆ

NEET UG 2024
ದೇಶ39 mins ago

NEET UG 2024: ನೀಟ್‌ ಪರಿಷ್ಕೃತ ಫಲಿತಾಂಶ ಪ್ರಕಟ ಆಗಿಲ್ಲ, ಹಳೇ ಲಿಂಕ್‌ ಹಂಚಿಕೆ ಎಂದ ಕೇಂದ್ರ; ಮತ್ತೊಂದು ಪ್ರಮಾದ?

Prime Minister 15 Point Programme District Level Meeting at Yadgiri
ಯಾದಗಿರಿ39 mins ago

Yadgiri News: ಜಿಲ್ಲಾ ಮಟ್ಟದಲ್ಲಿ ಪ್ರಗತಿಗೆ ಪ್ರಧಾನಿಯ 15 ಅಂಶಗಳ ಕಾರ್ಯಕ್ರಮ

Sara Ali Khan
Latest51 mins ago

Sara Ali Khan: ವಿಮಾನದಲ್ಲಿ ಸಾರಾ ಅಲಿ ಖಾನ್‌ ಮೇಲೆ ಜ್ಯೂಸ್‌ ಚೆಲ್ಲಿದ ಗಗನಸಖಿ! ಮುಂದೇನಾಯ್ತು? ವಿಡಿಯೊ ನೋಡಿ

Parliament Session
ದೇಶ55 mins ago

Parliament Session: ʼತಾಕತ್ತಿದ್ದರೆ ಬಾʼ- ಸಂಸತ್‌ನಲ್ಲಿ ಸಂಸದರ ಪಂಥಾಹ್ವಾನ; ಭಾರೀ ಕೋಲಾಹಲ

Samsung Galaxy Z Fold6 Z Flip6 Smartphones Good Customer Response
ವಾಣಿಜ್ಯ58 mins ago

Samsung Galaxy: ಎಐ ಆಧರಿತ ಗ್ಯಾಲಕ್ಸಿ ಝಡ್ ಫೋಲ್ಡ್ 6, ಝಡ್ ಫ್ಲಿಪ್6 ಹೇಗಿದೆ? ದರ ಎಷ್ಟು?

ಕ್ರೀಡೆ1 hour ago

Paris Olympics 2024: 2ನೇ ಸುತ್ತಿನಲ್ಲಿ ಜೊಕೊ-ನಡಾಲ್ ಮುಖಾಮುಖಿ ಸಾಧ್ಯತೆ

Assembly session
ಕರ್ನಾಟಕ1 hour ago

Assembly session: ಅಧಿವೇಶನ ಅನಿರ್ದಿಷ್ಟಾವಧಿಗೆ ಮುಂದೂಡಿಕೆ; ನಾಳೆ ಮುಗಿಯಬೇಕಿದ್ದ ಕಲಾಪ ಇಂದೇ ಮೊಟಕು!

Viral Video
Latest1 hour ago

Viral Video: ತಲೆಯಿಂದ ಡಿಚ್ಚಿ ಹೊಡೆದು ಬೋಟ್‌ಅನ್ನೇ ಪಲ್ಟಿ ಮಾಡಿದ ತಿಮಿಂಗಿಲ! ಮೈನವಿರೇಳಿಸುವ ವಿಡಿಯೊ!

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Rain
ಮಳೆ1 hour ago

Karnataka Rain : ಮನೆಯೊಳಗೆ ನುಗ್ಗಿದ ಮಳೆ ನೀರು; ಕಾಲು ಜಾರಿ ಬಿದ್ದು ವೃದ್ಧೆ ಸಾವು

Actor Darshan
ಸ್ಯಾಂಡಲ್ ವುಡ್5 hours ago

Actor Darshan: ನಟ ದರ್ಶನ್ ಇರುವ ಜೈಲು ಕೋಣೆ ಹೇಗಿದೆ?

Actor Darshan
ಸಿನಿಮಾ6 hours ago

Actor Darshan : ಹೆಂಡ್ತಿ ಮಕ್ಕಳೊಟ್ಟಿಗೆ ಚೆನ್ನಾಗಿರು.. ಸಹಕೈದಿ ಜತೆಗೆ 12 ನಿಮಿಷ ಕಳೆದ ನಟ ದರ್ಶನ್‌

Actor Darshan
ಸಿನಿಮಾ7 hours ago

Actor Darshan: ಆಧ್ಯಾತ್ಮದತ್ತ ವಾಲಿದ ದರ್ಶನ್‌; ಜೈಲಲ್ಲಿ ಹೇಗಿದೆ ಗೊತ್ತಾ ನಟನ ಬದುಕು

karnataka Weather Forecast
ಮಳೆ2 days ago

Karnataka Weather : ರಭಸವಾಗಿ ಸುರಿಯುವ ಮಳೆ; 50 ಕಿ.ಮೀ ವೇಗದಲ್ಲಿ ಬೀಸುತ್ತೆ ಗಾಳಿ

karnataka weather Forecast
ಮಳೆ2 days ago

Karnataka Weather : ರಾಜ್ಯದಲ್ಲಿ ಮುಂದುವರಿದ ಮಳೆ ಅವಾಂತರ; ನಾಳೆಯೂ ಇರಲಿದೆ ಅಬ್ಬರ

Udupi News
ಉಡುಪಿ2 days ago

Udupi News : ಹಳೆ ಲಾರಿ ಚಾಸ್ಸಿಯಲ್ಲೇ ಕಿರು ಸೇತುವೆ ನಿರ್ಮಾಣ! ಬೈಂದೂರು ಶಾಸಕರ ಪರಿಕಲ್ಪನೆಗೆ ಜನರು ಫಿದಾ

murder case
ರಾಮನಗರ2 days ago

Murder Case : ರಾಮನಗರದಲ್ಲೊಂದು ಪೈಶಾಚಿಕ ಕೃತ್ಯ; ಅತ್ಯಾಚಾರವೆಸಗಿ 4 ವರ್ಷದ ಬಾಲಕಿಯನ್ನು ಕೊಂದ ದುಷ್ಟ

karnataka Rain
ಮಳೆ5 days ago

Karnataka Rain : ಭಾರಿ ಮಳೆಗೆ ಮನೆ ಗೋಡೆ ಕುಸಿತ; ಕೊಟ್ಟಿಗೆಯಲ್ಲಿದ್ದ ಜಾನುವಾರುಗಳು ಸಾವು

karnataka Rain
ಮಳೆ5 days ago

Karnataka Rain : ಹಳ್ಳ ದಾಟಲು ಹೋಗಿ ನೀರುಪಾಲಾದ ಜಾನುವಾರು; ಬಿರುಗಾಳಿಗೆ ಕಳಚಿದ ವಿಂಡ್‌ ಫ್ಯಾನ್‌

ಟ್ರೆಂಡಿಂಗ್‌