Davanagere News: ಹೊನ್ನಾಳಿಯಲ್ಲಿ ನೆರೆಹಾವಳಿ ರಕ್ಷಣೆ ಬಗ್ಗೆ ಎಸ್‌ಡಿಆರ್‌ಎಫ್ ತಂಡದಿಂದ ಅಣಕು ಪ್ರದರ್ಶನ - Vistara News

ದಾವಣಗೆರೆ

Davanagere News: ಹೊನ್ನಾಳಿಯಲ್ಲಿ ನೆರೆಹಾವಳಿ ರಕ್ಷಣೆ ಬಗ್ಗೆ ಎಸ್‌ಡಿಆರ್‌ಎಫ್ ತಂಡದಿಂದ ಅಣಕು ಪ್ರದರ್ಶನ

Davanagere News: ನೆರೆಹಾವಳಿ ಹಾಗೂ ಪ್ರಕೃತಿ ವಿಕೋಪಗಳು ಸಂಭವಿಸಿದಾಗ ಪ್ರವಾಹದಲ್ಲಿ ಸಿಲುಕಿದ ಅಸಹಾಯಕರನ್ನು ಹೇಗೆ ರಕ್ಷಣೆ ಮಾಡಿ ಅವರ ಜೀವವನ್ನು ರಕ್ಷಿಸಬೇಕೆಂಬುದರ ಕುರಿತು ಸಾರ್ವಜನಿಕರ ಸಮ್ಮುಖ ಎಸ್.ಡಿ.ಆರ್.ಎಫ್. ತಂಡದವರು, 2 ಗಂಟೆಗಳ ಕಾಲ ದಾವಣಗೆರೆ ಜಿಲ್ಲಾಧಿಕಾರಿ ಗಂಗಾಧರ ಸ್ವಾಮಿ, ಜಿ.ಪಂ. ಸಿಇಒ ಸುರೇಶ್‌ ಬಿ. ಇಟ್ನಾಳ್ ಸಮ್ಮುಖದಲ್ಲಿ ಹೊನ್ನಾಳಿ ಪಟ್ಟಣದ ಶ್ರೀ ರಾಘವೇಂದ್ರ ಸ್ವಾಮಿ ಮಠದ ಬಳಿಯ ತುಂಗಭದ್ರ ನದಿಯಲ್ಲಿ ಮಂಗಳವಾರ ಅಣಕು ಪ್ರದರ್ಶನ ಮಾಡಿದರು.

VISTARANEWS.COM


on

Mock demonstration by SDRF team on flood protection in Honnali
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಹೊನ್ನಾಳಿ: ನೆರೆಹಾವಳಿ ಹಾಗೂ ಪ್ರಕೃತಿ ವಿಕೋಪಗಳು ಸಂಭವಿಸಿದಾಗ ಪ್ರವಾಹದಲ್ಲಿ ಸಿಲುಕಿದ ಅಸಹಾಯಕರನ್ನು ಹೇಗೆ ರಕ್ಷಣೆ ಮಾಡಿ ಅವರ ಜೀವವನ್ನು ರಕ್ಷಿಸಬೇಕೆಂಬುದರ ಕುರಿತು ಸಾರ್ವಜನಿಕರ ಸಮ್ಮುಖ ಎಸ್.ಡಿ.ಆರ್.ಎಫ್. ತಂಡದವರು, 2 ಗಂಟೆಗಳ ಕಾಲ ದಾವಣಗೆರೆ ಜಿಲ್ಲಾಧಿಕಾರಿ ಗಂಗಾಧರ ಸ್ವಾಮಿ, ಜಿ.ಪಂ. ಸಿಇಒ ಸುರೇಶ್‌ ಬಿ. ಇಟ್ನಾಳ್ ಸಮ್ಮುಖದಲ್ಲಿ ಪಟ್ಟಣದ ಶ್ರೀ ರಾಘವೇಂದ್ರ ಸ್ವಾಮಿ ಮಠದ ಬಳಿಯ ತುಂಗಭದ್ರ ನದಿಯಲ್ಲಿ ಮಂಗಳವಾರ (Davanagere News) ಅಣಕು ಪ್ರದರ್ಶನ ಮಾಡಿದರು.

ವಿಪತ್ತಿನ ಸಂದರ್ಭದಲ್ಲಿ ನದಿ ನೀರು ಉಕ್ಕಿ ಪ್ರವಾಹದಲ್ಲಿ ಸಿಲುಕಿದಾಗ ಅವರನ್ನು ಹೇಗೆ ರಕ್ಷಣೆ ಮಾಡಬೇಕೆಂದು ದಾವಣಗೆರೆ ಎಸ್.ಡಿ.ಆರ್.ಎಫ್. ತಂಡ ರಕ್ಷಣಾ ಪರಿಕರಣಗಳ ಪೂರ್ವ ತಯಾರಿ ಮಾಡಿಕೊಂಡು ನದಿಯಲ್ಲಿ ಬೋಟ್ ಹಾಗೂ ಈಜುವ ಮೂಲಕ ಪ್ರದರ್ಶನ ಮಾಡಿ ತೋರಿಸಿದರು.

ಇದನ್ನೂ ಓದಿ: Assembly Session 2024: ಅಂಗನವಾಡಿ ಕಾರ್ಯಕರ್ತೆಯರಿಗೆ ಗುಡ್‌ ನ್ಯೂಸ್‌; ಶೀಘ್ರವೇ ಗೌರವಧನ ಹೆಚ್ಚಳ!

ಪ್ರಕೃತಿ ವಿಕೋಪವನ್ನು ತಡೆಯಲು ಅಸಾಧ್ಯವಾದರೂ ಅವುಗಳ ಬಗ್ಗೆ ಅರಿವು ಇದ್ದರೆ ಜೀವ ಹಾಗೂ ಆಸ್ತಿಯ ಹಾನಿಯನ್ನು ತಡೆಯಬಹುದು, ಇದಕ್ಕೆ ವಿವಿಧ ಇಲಾಖೆಗಳು ಇದ್ದರೂ ಸಾರ್ವಜನಿಕರು ಕೈಜೋಡಿಸದಿದ್ದರೆ ವಿಪತ್ತು ತಪ್ಪಿಸಲು ಅಸಾಧ್ಯ ಎಂದು ಜಿಲ್ಲಾಧಿಕಾರಿ ಗಂಗಾಧರ ಸ್ವಾಮಿ ತಿಳಿಸಿದರು.

ಇದನ್ನೂ ಓದಿ: Assembly Session 2024: ಕಾಲುವೆಗಳ ಕೊನೇ ಭಾಗದ ರೈತರಿಗೆ ನೀರು ಖಾತರಿ; ನೀರಾವರಿ ತಿದ್ದುಪಡಿ ವಿಧೇಯಕಕ್ಕೆ ಅನುಮೋದನೆ

ಈ ಸಂದರ್ಭದಲ್ಲಿ ಎಸ್‌ಡಿಆರ್‌ಎಫ್‌ನ ಡೆಪ್ಯೂಟಿ ಕಮಾಂಡೆಂಟ್‌ ಹೇಮಕುಮಾರ್, ಹೊನ್ನಾಳಿ ಉಪವಿಭಾಗಾಧಿಕಾರಿ ವಿ. ಅಭಿಷೇಕ್. ಹೊನ್ನಾಳಿ ತಹಸೀಲ್ದಾರ್ ಪುಟ್ಟರಾಜ ಗೌಡ,. ತಾ.ಪಂ. ಇಒ ರಾಘವೇಂದ್ರ, ನ್ಯಾಮತಿ ತಹಸೀಲ್ದಾರ್ ಗೋವಿಂದಪ್ಪ, ಜಗಳೂರು ತಹಸೀಲ್ದಾರ್ ಫಿರೋಜ್ ಷಾ, ಪುರಸಭೆ ಮುಖ್ಯ ಅಧಿಕಾರಿ ಲೀಲಾವತಿ, ಎಎಸ್‌ಐ ತಿಪ್ಪೇಸ್ವಾಮಿ, ಗ್ರೇಡ್ 2 ತಹಸೀಲ್ದಾರ್ ಸುರೇಶ್, ಅಗ್ನಿಶಾಮಕ ದಳದ ಅಧಿಕಾರಿಗಳು ಉಪಸ್ಥಿತರಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೈಂ

Crime News: ಲೇಡಿಸ್‌ ಪಿಜಿಗೆ ನುಗ್ಗಿ ಯುವತಿಯ ಕತ್ತು ಕೊಯ್ದು ಕೊಲೆ; ಪಾರಿವಾಳದ ಜೀವ ಉಳಿಸಲು ಹೋಗಿ ಬಾಲಕ ಸಾವು

Crime News: ಬೆಂಗಳೂರಿನ ಕೋರಮಂಗಲದಲ್ಲಿರುವ ಲೇಡಿಸ್‌ ಪಿಜಿಗೆ ನುಗ್ಗಿದ ದುಷ್ಕರ್ಮಿ ಯುವತಿಯ ಕತ್ತು ಕೊಯ್ದು ಕೊಲೆ ಮಾಡಿ ಪರಾರಿಯಾಗಿದ್ದಾನೆ. ಮಂಗಳವಾರ ರಾತ್ರಿ ಈ ಘಟನೆ ನಡೆದಿದೆ. ಮೃತ ಯುವತಿಯನ್ನು ಕೃತಿ ಕುಮಾರಿ‌ (24) ಎಂದು ಗುರುತಿಸಲಾಗಿದೆ. ಇತ್ತ ಚಿತ್ರದುರ್ಗದಲ್ಲಿ ಪಾರಿವಾಳದ ಜೀವ ಉಳಿಸಲು ಹೋಗಿ ಬಾಲಕನೋರ್ವ ಪ್ರಾಣ ಕಳೆದುಕೊಂಡಿರುವ ಹೃದಯ ವಿದ್ರಾವಕ ಘಟನೆ ನಡೆದಿದೆ.

VISTARANEWS.COM


on

Crime News
Koo

ಬೆಂಗಳೂರು: ಮಂಗಳವಾರ ರಾತ್ರಿ ಬೆಂಗಳೂರಿನಲ್ಲಿ ರಕ್ತದ ಕೋಡಿಯೇ ಹರಿದಿದ್ದು ನಗರವೇ ಬೆಚ್ಚಿ ಬಿದ್ದಿದೆ. ಲೇಡಿಸ್‌ ಪಿಜಿಯೊಂದಕ್ಕೆ ನುಗ್ಗಿದ ದುಷ್ಕರ್ಮಿ ಯುವತಿಯ ಕತ್ತು ಕೊಯ್ದು ಕೊಲೆ ಮಾಡಿ ಪರಾರಿಯಾಗಿದ್ದಾನೆ. ಕೋರಮಂಗಲದಲ್ಲಿರುವ ಲೇಡಿಸ್‌ ಪಿಜಿಯಲ್ಲಿ ಈ ಬರ್ಬರ ಘಟನೆ ನಡೆದಿದ್ದು, ಮೃತ ಯುವತಿಯನ್ನು ಕೃತಿ ಕುಮಾರಿ‌ (24) ಎಂದು ಗುರುತಿಸಲಾಗಿದೆ (Crime News).

ರಾತ್ರಿ 11.10ರಿಂದ 11.30ರ ಸುಮಾರಿಗೆ ಈ ಹತ್ಯೆ ನಡೆದಿದೆ. ಬಿಹಾರ ಮೂಲದ ಕೃತಿ ಕುಮಾರಿ ಬೆಂಗಳೂರಿನ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದು, ಕೋರಮಂಗಲದ ವಿಆರ್ ಲೇಔಟ್​​​ನ ಪಿಜಿಯಲ್ಲಿ ವಾಸವಾಗಿದ್ದರು.

ಘಟನೆ ಹಿನ್ನೆಲೆ

ರಾತ್ರಿ ಸುಮಾರು 11.10ಕ್ಕೆ ಯುವಕನೋರ್ವ ಚಾಕು ಇಟ್ಟುಕೊಂಡು ಯುವತಿ ಇದ್ದ ಲೇಡಿಸ್ ಪಿಜಿಯೊಳಗೆ ನುಗ್ಗಿದ್ದು 3ನೇ ಮಹಡಿಯಲ್ಲಿರುವ ಕೃತಿ ಕುಮಾರಿ ಅವರ ಕೊಠಡಿ ಬಳಿ ಹಲ್ಲೆ ಮಾಡಿದ್ದಾನೆ. ಬಳಿಕ ಕತ್ತು ಕೊಯ್ದಿದ್ದಾನೆ. ತೀವ್ರ ಗಾಯಗೊಂಡ ಕೃತಿ ಕುಮಾರಿ ಸ್ಥಳದಲ್ಲೆ ಮೃತಪಟ್ಟಿದ್ದಾರೆ. ಬಳಿಕ ಯುವಕ ಪರಾರಿಯಾಗಿದ್ದಾನೆ. ಪರಿಚಯಸ್ಥ ಯುವಕನಿಂದಲೇ ಕೃತ್ಯ ನಡೆದಿರುವ ಶಂಕೆ ವ್ಯಕ್ತವಾಗಿದೆ.

ಪಿಜಿ ಮಾಲೀಕರ ನಿರ್ಲಕ್ಷ್ಯದ ಆರೋಪ

ಸೂಕ್ತ ಭದ್ರತಾ ವ್ಯವಸ್ಥೆ ಕಲ್ಪಿಸದೆ ಪಿಜಿ ಮಾಲೀಕರು ನಿರ್ಲಕ್ಷ್ಯ ವಹಿಸಿದ್ದೇ ಘಟನೆಗೆ ಕಾರಣ ಎನ್ನುವ ಆರೋಪ ಕೇಳಿ ಬಂದಿದೆ. ಘಟನಾ ಸ್ಥಳಕ್ಕೆ ಕೋರಮಂಗಲ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸ್ಥಳಕ್ಕೆ ಆಗ್ನೇಯ ವಿಭಾಗ ಡಿಸಿಪಿ ಸಾರಾ ಫಾತಿಮಾ ಧಾವಿಸಿ ಮಾಹಿತಿ ಕಲೆ ಹಾಕಿದ್ದಾರೆ. ಕೋರಮಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸಿಸಿಟಿವಿ ದೃಶ್ಯ ಆಧರಿಸಿ ಆರೋಪಿ ಯುವಕನ ಪತ್ತೆ ಹಚ್ಚಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

ಸದ್ಯ ಪೊಲೀಸರು ಮೃತ ಕೃತಿ ಕುಮಾರಿ ಅವರ ಮೊಬೈಲ್ ಪರಿಶೀಲಿಸುತ್ತಿದ್ದಾರೆ. ಕಾಲ್ ಡಿಟೈಲ್ಸ್ ಹಾಗೂ ಸಿಡಿಆರ್ ಪಡೆದು ಶೋಧಿಸುತ್ತಿದ್ದಾರೆ. ಕೊನೆಯದಾಗಿ ಯಾರಿಗೆ ಕರೆ ಮಾಡಿದ್ದಾರೆ, ಯಾವ ಯಾವ ನಂಬರ್‌ನಿಂದ ಕಾಲ್ ಬಂದಿದೆ ಎಂದು ಪರಿಶೀಲಿಸುತ್ತಿದ್ದಾರೆ.

ಪಾರಿವಾಳದ ಜೀವ ಉಳಿಸಲು ಹೋಗಿ ಬಾಲಕ ಸಾವು

ಚಿತ್ರದುರ್ಗ: ಪಾರಿವಾಳದ ಜೀವ ಉಳಿಸಲು ಹೋಗಿ ಬಾಲಕನೋರ್ವ ಪ್ರಾಣ ಕಳೆದುಕೊಂಡಿರುವ ಹೃದಯ ವಿದ್ರಾವಕ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ. ಚಿತ್ರದುರ್ಗ ಜಿಲ್ಲೆ ಮೊಳಕಾಲ್ಮೂರು ತಾಲೂಕಿನ ಹನುಮಾಪುರ ಗ್ರಾಮದ ಓಬಳಸ್ವಾಮಿ ಎಂಬವರ ಪುತ್ರ ರಾಮಚಂದ್ರ (12) ಮೃತ ಬಾಲಕ.

ಗ್ರಾಮದ ವಿದ್ಯುತ್ ಕಂಬದಲ್ಲಿ ಸಿಲುಕಿದ್ದ ಪಾರಿವಾಳ ಕಂಡು ಜೀವ ಉಳಿಸಲು ಕಂಬ ಏರಿದ್ದ ಬಾಲಕ ವಿದ್ಯುತ್ ಪ್ರವಹಿಸಿ ಮೃತಪಟ್ಟಿದ್ದಾನೆ. ಪಾರಿವಾಳದ ಜೀವ ಉಳಿಸಿ ಕಂಬದ ಮೇಲೆಯೇ ಜೀವ ಕಳೆದುಕೊಂಡ ಬಾಲಕನನ್ನು ನೋಡಿ ಪೋಷಕರು ನೋವು ತೋಡಿಕೊಂಡಿದ್ದಾರೆ. ಸ್ಥಳಕ್ಕೆ ರಾಂಪುರ ಸಬ್ ಇನ್ಸ್‌ಪೆಕ್ಟರ್‌ ಮಹೇಶ್ ಹೊಸಪೇಟೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ರಾಂಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: Victoria Hospital: 11ನೇ ಮಹಡಿಯಿಂದ ಬಿದ್ದು ಕಾರ್ಮಿಕನಿಗೆ ಗಂಭೀರ ಗಾಯ

ಬಸ್-ಕಾರು ಡಿಕ್ಕಿಯಾಗಿ ಶಿಕಾರಿಪುರ ಶಾಲೆಯ ಫಾದರ್ ಸಾವು

ದಾವಣಗೆರೆ: ಕೆಎಸ್‌ಆರ್‌ಟಿಸಿ ಬಸ್ ಹಾಗೂ ಕಾರು ನಡುವೆ ಭೀಕರ ಅಪಘಾತ ಸಂಭವಿಸಿ ಶಿಕಾರಿಪುರದ ಶಾಲೆಯ ಫಾದರ್ ಮೃತಪಟ್ಟು, ಚಾಲಕನಿಗೆ ಗಂಭೀರಗಾಯಗಳಾಗಿರುವ ಘಟನೆ ಜಿಲ್ಲೆಯ ನ್ಯಾಮತಿ ತಾಲೂಕಿನ ಚಿನ್ನಿಕಟ್ಟೆ ಬಳಿ ನಡೆದಿದೆ. ಶಿವಮೊಗ್ಗ ಜಿಲ್ಲೆಯ ಶಿಕಾರಿಪುರದ ಪುಷ್ಪ ಶಾಲೆಯ ಫಾದರ್ ಅಂತೋನಿ (60) ಮೃತರು. ಚಾಲಕ ಸ್ಟೀಫನ್ ಗಾಯಾಳು. ಸವಳಂಗ ಕಡೆಯಿಂದ ಶಿಕಾರಿಪುರಕ್ಕೆ ಹುಂಡೈ ಕಾರಿನಲ್ಲಿ ಫಾದರ್ ಪ್ರಯಾಣಿಸುತ್ತಿದ್ದರು. ಎದುರಿಗೆ ಬಂದ ಕೆಎಸ್ಆರ್ಟಿಸಿ ಬಸ್‌ ಡಿಕ್ಕಿಯಾಗಿದ್ದರಿಂದ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಡಿಕ್ಕಿ ರಭಸಕ್ಕೆ ಕಾರು ನುಜ್ಜುಗುಜ್ಜಾಗಿದ್ದು, ಗಂಭೀರವಾಗಿ ಗಾಯಗೊಂಡವರನ್ನು ಶಿವಮೊಗ್ಗದ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ.

Continue Reading

ಮಳೆ

Karnataka Weather : ರಭಸವಾಗಿ ಸುರಿಯುವ ಮಳೆ; 50 ಕಿ.ಮೀ ವೇಗದಲ್ಲಿ ಬೀಸುತ್ತೆ ಗಾಳಿ

Karnataka weather Forecast : ಭಾರಿ ಮಳೆಯೊಂದಿಗೆ (Rain News) ಬಿರುಗಾಳಿಯು ಗಂಟೆಗೆ 50 ಕಿ.ಮೀ ವ್ಯಾಪ್ತಿಯಲ್ಲಿ ಬೀಸಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ.

VISTARANEWS.COM


on

By

karnataka Weather Forecast
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ರಾಜ್ಯದಲ್ಲಿ ನೈರುತ್ಯ ಮುಂಗಾರು (karnataka Weather Forecast) ಸಾಮಾನ್ಯವಾಗಿದ್ದು, ಕರಾವಳಿ ಹಾಗೂ ಒಳನಾಡಿನ ಬಹುತೇಕ ಕಡೆಗಳಲ್ಲಿ ಮಳೆಯಾಗುವ (Rain News) ನಿರೀಕ್ಷೆ ಇದೆ. ಕರಾವಳಿಯ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಜತೆಗೆ ನಿರಂತರ ಗಾಳಿಯ ವೇಗವು 30-40 ಕಿಮೀ ತಲುಪುವ ಸಾಧ್ಯತೆಯಿದೆ.

ಮಲೆನಾಡಿನ ಶಿವಮೊಗ್ಗ, ಚಿಕ್ಕಮಗಳೂರು ಮತ್ತು ಕೊಡಗು ಸುತ್ತಮುತ್ತ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ. ಹಾಸನದಲ್ಲಿ ಸಾಧಾರಣ ಮಳೆಯಾಗಲಿದೆ. ಆದರೆ ಗಾಳಿಯ ವೇಗವು 40-50 ಕಿ.ಮೀ ತಲುಪಲಿದೆ.

ಇನ್ನೂ ದಕ್ಷಿಣ ಒಳನಾಡಿನ ಹಲವೆಡೆ ಗಾಳಿಯ ವೇಗವು 50 ಕಿ.ಮೀ ತಲುಪುವ ಸಾಧ್ಯತೆ ಇದ್ದು, ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮಂಡ್ಯ, ಮೈಸೂರು, ಚಾಮರಾಜನಗರ, ರಾಮನಗರ, ತುಮಕೂರು, ಚಿಕ್ಕಬಳ್ಳಾಪುರ ಸೇರಿದಂತೆ ಕೋಲಾರದಲ್ಲಿ ಮಳೆಯಾಗಲಿದೆ.

ಉತ್ತರ ಒಳನಾಡಿನ ಯಾದಗಿರಿ, ರಾಯಚೂರು ಮತ್ತು ಕಲಬುರಗಿ , ಬೆಳಗಾವಿ, ರಾಯಚೂರು, ಬೀದರ್, ಬಾಗಲಕೋಟೆ, ಧಾರವಾಡ ಮತ್ತು ಹಾವೇರಿ, ವಿಜಯಪುರ, ಗದಗ, ಕೊಪ್ಪಳದಲ್ಲಿ ಹಗುರದಿಂದ ಕೂಡಿದ ಮಳೆಯಾಗಲಿದೆ.

ಬೆಂಗಳೂರು ನಗರ ಮತ್ತು ಸುತ್ತಮುತ್ತ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ. ಹಗುರದಿಂದ ಕೂಡಿದ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 27 ಮತ್ತು 21 ಡಿಗ್ರಿ ಸೆಲಿಯಸ್ಸ್‌ ಇರಲಿದೆ.

ಮೀನುಗಾರರಿಗೆ ಎಚ್ಚರಿಕೆ

ತೀವ್ರ ಬಿರುಗಾಳಿಯಿಂದ ಕೂಡಿದ ಹವಾಮಾನವು ಗಂಟೆಗೆ 55 ಕಿ.ಮೀ ವೇಗದಲ್ಲಿ ಬೀಸುವ ಸಾಧ್ಯತೆ ಇದೆ. ಹೀಗಾಗಿ ಸಮುದ್ರಕ್ಕಿಳಿಯುವ ಮುನ್ನ ಮೀನುಗಾರರು ಎಚ್ಚರಿಕೆಯಿಂದ ಇರುವಂತೆ ಸೂಚಿಸಲಾಗಿದೆ.

ಇದನ್ನೂ ಓದಿ: Assault Case : ಹೋಮ್‌ ವರ್ಕ್‌ ಮಾಡದ್ದಕ್ಕೆ ಬಾಲಕಿಗೆ ಬಾಸುಂಡೆ ಬರುವಂತೆ ಬಾರಿಸಿದ ಮುಖ್ಯ ಶಿಕ್ಷಕಿ

ಹಳೆ ಲಾರಿ ಚಾಸ್ಸಿಯಲ್ಲೇ ಕಿರು ಸೇತುವೆ ನಿರ್ಮಾಣ

ಉಡುಪಿ: ಉಡುಪಿಯ (Udupi News ) ಬೈಂದೂರು ಕ್ಷೇತ್ರದ ಯಡಮೊಗೆಯಲ್ಲಿ ಹೊಸ ಪ್ರಯೋಗ ಮಾಡಲಾಗಿದೆ. ಮಳೆಗಾಲದಲ್ಲಿ (Karnataka Rain) ಕಿರು ಸೇತುವೆ ಇಲ್ಲದೆ ಕಂಗಾಲಾಗಿದ್ದ ಗ್ರಾಮಸ್ಥರು ನಿಟ್ಟುಸಿರು ಬಿಟ್ಟಿದ್ದಾರೆ. ಬೈಂದೂರು ಶಾಸಕ ಗುರುರಾಜ್‌ ಗಂಟಿಹೊಳೆ ತಮ್ಮ ಕ್ಷೇತ್ರದ ಜನರಿಗೆ ನೆರವು ನೀಡುವ ಉದ್ದೇಶಕ್ಕೆ ಕ್ರೌಡ್‌ ಫಂಡಿಂಗ್ ಮೂಲಕ ಅತ್ಯಂತ ಕಡಿಮೆ ವೆಚ್ಚದಲ್ಲಿ ಸೇತುವೆ ನಿರ್ಮಿಸಿದ್ದಾರೆ. ಅದು ಕೂಡ ಹಳೆ ಲಾರಿಯ ಚಾಸ್ಸಿ ಬಳಸಿ ಕಿರು ಸೇತುವೆಯನ್ನು ನಿರ್ಮಿಸಲಾಗಿದೆ.

ಕಳೆದ ಬಾರಿ ಸಮರ್ಪಕ ಕಿರು ಸೇತುವೆ ಇಲ್ಲದೆ ಶಾಲಾ ಬಾಲಕಿ ನೀರು ಪಾಲಾಗಿದ್ದಳು. ಈ ಹಿನ್ನೆಲೆಯಲ್ಲಿ ಮಳೆಗಾಲದಲ್ಲಿ ಆಗುವ ಸಾವು- ನೋವು ತಪ್ಪಿಸಲು ಸಮೃದ್ಧ ಬೈಂದೂರು ಮತ್ತು ಅರುಣಾಚಲ ಟ್ರಸ್ಟ್ ಸಹಭಾಗಿತ್ವದಲ್ಲಿ ಸೇತುವೆ ನಿರ್ಮಿಸಲಾಗಿದೆ.

ಮಳೆಗಾಲದಲ್ಲಿ ಸುಮಾರು 30 ಮನೆಗಳಿಗೆ ಸಂಪರ್ಕವೇ ಇಲ್ಲದೇ ಕಂಗಲಾಗಿದ್ದರು. ಮೂರು ಲಾರಿಗಳ ಹಳೆಯ ಚಾಸ್ಸಿ ಬಳಸಿ ಕಿರು ಸೇತುವೆಯನ್ನು ನಿರ್ಮಾಣ ಮಾಡಲಾಗಿದೆ. ರಾಜ್ಯದಲ್ಲಿಯೇ ಮೊದಲ ಬಾರಿಗೆ ಕಡಿಮೆ ಖರ್ಚಿನಲ್ಲಿ ಲಾರಿಯ ಚಾಸ್ಸಿ, ಬೋರ್ ವೇಲ್ ಪೈಪ್, ಜಿಎ ಪೈಟ್, ಕಬ್ಬಿಣ ತಗಡು ಬಳಸಿ ಸೇತುವೆ ನಿರ್ಮಿಸಲಾಗಿದೆ. ಅಂದಾಜು 2 ಲಕ್ಷ ರೂಪಾಯಿ ವೆಚ್ಚದಲ್ಲಿ ಈ ಕಿರು ಸೇತುವೆ ನಿರ್ಮಿಸಲಾಗಿದೆ.

udupi news
udupi news

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕರ್ನಾಟಕ

Road Accident: ಬಸ್-ಕಾರು ಡಿಕ್ಕಿಯಾಗಿ ಶಿಕಾರಿಪುರ ಶಾಲೆಯ ಫಾದರ್ ಸಾವು, ಚಾಲಕನ ಸ್ಥಿತಿ ಗಂಭೀರ

Road Accident: ದಾವಣಗೆರೆ ಜಿಲ್ಲೆಯ ನ್ಯಾಮತಿ ತಾಲೂಕಿನ ಚಿನ್ನಿಕಟ್ಟೆ ಬಳಿ ಭೀಕರ ಅಪಘಾತ ನಡೆದಿದೆ. ಕಾರಿನಲ್ಲಿದ್ದ ಶಿಕಾರಿಪುರದ ಪುಷ್ಪ ಶಾಲೆಯ ಫಾದರ್ ಮೃತಪಟ್ಟಿದ್ದಾರೆ.

VISTARANEWS.COM


on

Koo

ದಾವಣಗೆರೆ: ಕೆಎಸ್‌ಆರ್‌ಟಿಸಿ ಬಸ್ ಹಾಗೂ ಕಾರು ನಡುವೆ ಭೀಕರ ಅಪಘಾತ ಸಂಭವಿಸಿ ಶಿಕಾರಿಪುರದ ಶಾಲೆಯ ಫಾದರ್ ಮೃತಪಟ್ಟು, ಚಾಲಕನಿಗೆ ಗಂಭೀರಗಾಯಗಳಾಗಿರುವ ಘಟನೆ (Road Accident) ಜಿಲ್ಲೆಯ ನ್ಯಾಮತಿ ತಾಲೂಕಿನ ಚಿನ್ನಿಕಟ್ಟೆ ಬಳಿ ನಡೆದಿದೆ.

ಶಿವಮೊಗ್ಗ ಜಿಲ್ಲೆಯ ಶಿಕಾರಿಪುರದ ಪುಷ್ಪ ಶಾಲೆಯ ಫಾದರ್ ಅಂತೋನಿ (60) ಮೃತರು. ಚಾಲಕ ಸ್ಟೀಫನ್ ಗಾಯಾಳು. ಸವಳಂಗ ಕಡೆಯಿಂದ ಶಿಕಾರಿಪುರಕ್ಕೆ ಹುಂಡೈ ಕಾರಿನಲ್ಲಿ ಫಾದರ್ ಪ್ರಯಾಣಿಸುತ್ತಿದ್ದರು. ಎದುರಿಗೆ ಬಂದ ಕೆಎಸ್ಆರ್ಟಿಸಿ ಬಸ್‌ ಡಿಕ್ಕಿಯಾಗಿದ್ದರಿಂದ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಡಿಕ್ಕಿ ರಭಸಕ್ಕೆ ಕಾರು ನುಜ್ಜುಗುಜ್ಜಾಗಿದ್ದು, ಗಂಭೀರವಾಗಿ ಗಾಯಗೊಂಡವರನ್ನು ಶಿವಮೊಗ್ಗದ ಸರ್ಕಾರಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

ಇದನ್ನೂ ಓದಿ | Victoria Hospital: 11ನೇ ಮಹಡಿಯಿಂದ ಬಿದ್ದು ಕಾರ್ಮಿಕನಿಗೆ ಗಂಭೀರ ಗಾಯ

ಮಳೆಯ ಅಬ್ಬರಕ್ಕೆ ಕುಸಿದ ಸರ್ಕಾರಿ ಶಾಲೆ ಗೋಡೆ

ಶಿವಮೊಗ್ಗ: ಮಲೆನಾಡಿನಲ್ಲಿ ಮಳೆಯ ಅಬ್ಬರ ಮುಂದುವರಿದಿದೆ. ಈ ನಡುವೆ ಭಾರಿ ಮಳೆಗೆ ಸರ್ಕಾರಿ ಶಾಲೆಯ ಗೋಡೆ ಕುಸಿದಿದ್ದು, ಮಕ್ಕಳು ಕೊಠಡಿಯಲ್ಲಿ ಇಲ್ಲದ ಕಾರಣ ಭಾರಿ ಅನಾಹುತ ತಪ್ಪಿದೆ. ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ಆನವಟ್ಟಿ ಉರ್ದು ಸರ್ಕಾರಿ ಶಾಲೆಯ ಗೋಡೆ ಕುಸಿತಿದೆ.

ವಿದ್ಯಾರ್ಥಿಗಳು ಹೊರಗೆ ತೆರಳಿದ್ದ ಸಮಯದಲ್ಲಿ ಗೋಡೆ ಕುಸಿದಿದೆ. ಇದರಿಂದ ಭಾರಿ ಅನಾಹುತ ತಪ್ಪಿದೆ. ಅನೇಕ ದಿನಗಳಿಂದ ಅಧಿಕಾರಿಗಳಿಗೆ ಕೊಠಡಿ ದುರಸ್ತಿಗೊಳಿಸುವಂತೆ ಮನವಿ ಮಾಡಿದರೂ ಅಧಿಕಾರಿಗಳು ಸ್ಪಂದಿಸಿಲ್ಲ. ಹೀಗಾಗಿ ಅವಘಡ ನಡೆದಿದೆ ಎಂಬ ಆರೋಪ ಕೇಳಿಬಂದಿದೆ.

ಹೋಮ್‌ ವರ್ಕ್‌ ಮಾಡದ್ದಕ್ಕೆ ಬಾಲಕಿಗೆ ಬಾಸುಂಡೆ ಬರುವಂತೆ ಬಾರಿಸಿದ ಮುಖ್ಯ ಶಿಕ್ಷಕಿ

ವಿಜಯನಗರ : ಹೋಮ್‌ ವರ್ಕ್ (Home Work) ಮಾಡದಿದ್ದಕ್ಕೆ ವಿದ್ಯಾರ್ಥಿನಿಗೆ ಕಾಲು ಊತ ಬರುವಂತೆ ಮುಖ್ಯ ಶಿಕ್ಷಕಿ (Assault Case) ಬಾರಿಸಿದ್ದಾರೆ. ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಬಣವಿಕಲ್ಲು ಗ್ರಾಮದಲ್ಲಿರುವ ಕಸ್ತೂರಿ ಬಾ ಗಾಂಧಿ ಬಾಲಕಿಯರ ವಸತಿ ಶಾಲೆಯಲ್ಲಿ ಘಟನೆ ನಡೆದಿದೆ.

ವಿಜ್ಞಾನ ವಿಷಯದ ಹೋಂ ವರ್ಕ್ ಮಾಡದಿದ್ದಕ್ಕೆ ಮುಖ್ಯ ಶಿಕ್ಷಕಿ ವಾಣಿ ಎಂಬುವವರು ವಿದ್ಯಾರ್ಥಿನಿಗೆ ಮನಬಂದಂತೆ ಹೊಡೆದಿದ್ದಾರೆ. ಮಾನಸ ಎಂಬಾಕೆಗೆ ಈ ಮೊದಲು ಅಪಘಾತ ಆಗಿದ್ದರಿಂದ ಕಾಲಿಗೆ ರಾಡ್ ಅಳವಡಿಸಲಾಗಿತ್ತು. ಮತ್ತೆ ಅದೇ ಕಾಲಿಗೆ ಶಿಕ್ಷಕಿ ವಾಣಿ ಸ್ಕೇಲ್‌ನಿಂದ ಜೋರಾಗಿ ಹೊಡೆದಿದ್ದಾರೆ. ಜೋರಾಗಿ ಹೊಡೆತದಿಂದಾಗಿ ಕಾಲು ಊದಿಕೊಂಡು ಬಾಲಕಿಗೆ ನಡೆದಾಡುವುದಕ್ಕೂ ಸಾಧ್ಯವಾಗಿಲ್ಲ.

ಇದನ್ನೂ ಓದಿ: Murder case : ಭೂ ವಿವಾದಕ್ಕಾಗಿ ಪರಸ್ಪರ ಹೊಡೆದಾಡಿಕೊಂಡ ಅಣ್ಣ-ತಮ್ಮ ಮೃತ್ಯು

ಇನ್ನೂ ಮನಸೋ ಇಚ್ಛೆ ಥಳಿಸಿದ ಶಿಕ್ಷಕಿ ವಾಣಿಯೇ ಬಾಲಕಿಯನ್ನು ಚಿತ್ರದುರ್ಗದ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಎಲುಬು ಮತ್ತು ಮೂಳೆ ತಜ್ಞರಿಂದ ತಪಾಸಣೆ ಮಾಡಿಸಿ ಚಿಕಿತ್ಸೆ ಕೊಡಿಸಿದ್ದಾರೆ. ಬಾಲಕಿಯ ಕಾಲಿಗೆ ಬ್ಯಾಂಡೇಜ್ ಹಾಕಿ ಸೂಕ್ತ ಚಿಕಿತ್ಸೆ ನೀಡಿ ವೈದ್ಯರು ಕಳಿಸಿದ್ದಾರೆ. ಇತ್ತ ಬಾಲಕಿಯನ್ನು ನೋಡಲೆಂದು ಪಾಲಕರು ಭಾನುವಾರ ಶಾಲೆಗೆ ಬಂದಿದ್ದಾರೆ. ಆಗಲೇ ಮಗಳ ಕಾಲಿನ ಸ್ಥಿತಿ ನೋಡಿ ಪ್ರಕರಣ ಬೆಳಕಿಗೆ ಬಂದಿದೆ. ಬಾಲಕಿ ಪೋಷಕರು ಬಳಿಕ ಮುಖ್ಯ ಶಿಕ್ಷಕಿ ವಾಣಿಗೆ ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡಿದ್ದಾರೆ.

Continue Reading

ಮಳೆ

Karnataka Weather : ರಾಜ್ಯದಲ್ಲಿ ಮುಂದುವರಿದ ಮಳೆ ಅವಾಂತರ; ನಾಳೆಯೂ ಇರಲಿದೆ ಅಬ್ಬರ

Karnataka Weather Forecast : ಮಳೆಯ ಅವಾಂತರಕ್ಕೆ (Rain News) ಜನರು ತತ್ತರಿಸಿ ಹೋಗಿದ್ದಾರೆ. ರಾಜ್ಯದ ಹಲವೆಡೆ ಮಳೆಗೆ ಮರ ಬಿದ್ದು, ಗುಡ್ಡ ಕುಸಿದು, ಅಪಘಾತಗಳು ಸಂಭವಿಸಿದೆ. ಬುಧವಾರಕ್ಕೂ ಮಳೆಯಾಗುವ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ.

VISTARANEWS.COM


on

By

karnataka weather Forecast
Koo

ಹಾವೇರಿ/ಬೆಂಗಳೂರು: ರಾಜ್ಯದಲ್ಲಿ ಮಳೆ ಅವಾಂತರ (Karnataka Weather Forecast) ಮುಂದುವರಿದಿದ್ದು, ನಾಳೆಯೂ ವರುಣನ ಅಬ್ಬರವು ಮುಂದುವರಿಯಲಿದೆ. ಸತತ ಮಳೆಗೆ (Rain News) ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಸಮ್ಮಸಗಿ ಬಳಿ ಗುಡ್ಡ ಕುಸಿದಿದೆ. ಹೆದ್ದಾರಿ ಮೇಲೆ ಗುಡ್ಡ ಕುಸಿದ ಪರಿಣಾಮ ಜೆಸಿಬಿ ಮೂಲಕ ಮಣ್ಣು ತೆರವುಗೊಳಿಸಬೇಕಾಯಿತು.

ಎಕ್ಕುಂಬಿ-ಮೊಳಕಾಲ್ಮುರು ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಹಿನ್ನೆಲೆ ಮಂದಗತಿಯಲ್ಲಿ ಸಾಗುತ್ತಿದ್ದ ಕಾರಣಕ್ಕೆ ಕೆಲವು ಹೊತ್ತು ವಾಹನ ಸಂಚಾರ ಅಸ್ತವ್ಯಸ್ತವಾಗಿತ್ತು. ಹಾವೇರಿ – ಶಿರಸಿ ಸಂಪರ್ಕ ಕಲ್ಪಿಸುವ ಹೆದ್ದಾರಿ ಇದಾಗಿದ್ದು, ಮಣ್ಣು ತೆರವುಗೊಳಿಸಿದ ಬಳಿಕ‌ ವಾಹನ ಸಂಚಾರ ಆರಂಭವಾಗಿತ್ತು.

ಮಳೆಯಿಂದಾಗಿ 526 ಮನೆಗಳಿಗೆ ಹಾನಿ

ಹಾವೇರಿ ಜಿಲ್ಲೆಯಲ್ಲಿ ವರುಣನ ಆರ್ಭಟಕ್ಕೆ 526 ಮನೆಗಳಿಗೆ ಹಾನಿಯಾಗಿದೆ. ಮಳೆಯಿಂದಾಗಿ ಈವರೆಗೂ ಐವರು ಮೃತಪಟ್ಟಿದ್ದರು, ನಾಲ್ವರು ಗಾಯಗೊಂಡಿದ್ದಾರೆ. ಎರಡು ಜಾನುವಾರುಗಳು ಸಾವನ್ನಪ್ಪಿವೆ. ಜತೆಗೆ ವರದಾ, ತುಂಗಭದ್ರಾ, ಕುಮದ್ವತಿ, ನದಿ ಅಬ್ವರಕ್ಕೆ 12 ಸೇತುವೆಗಳು ಮುಳುಗಡೆ ಆಗಿ ಹಲವು ಗ್ರಾಮಗಳ ಸಂಪರ್ಕ ಕಡಿತಗೊಂಡಿದೆ. 49 ರೈತರ 31.27 ಹೆಕ್ಟೇರ್ ತೋಟಗಾರಿಕೆ ಬೆಳೆಹಾನಿಯಾಗಿದೆ. ಮೆಣಸಿನಕಾಯಿ 17.25 ಹೆಕ್ಟೇರ್ ಬೆಳೆ, ಬೆಳ್ಳುಳ್ಳಿ ಹಾಗಲಕಾಯಿ,ಕ್ಯಾಬಿಜ್ ಸೇರಿದಂತೆ ತರಕಾರಿ ಬೆಳೆಗಳು ನೀರುಪಾಲಾಗಿದೆ.

ಚಿಕ್ಕಮಗಳೂರಿನಲ್ಲಿ ಗ್ರಾಮಸ್ಥರಿಗೆ ಕಣ್ಣೀರು ತರಿಸಿದ ವರುಣ

ಚಿಕ್ಕಮಗಳೂರಿನಲ್ಲಿ ಭಾರೀ ಗಾಳಿ-ಮಳೆಗೆ ಮನೆ ಮೇಲೆ ಮರ ಬಿದ್ದಿದೆ. ಪರಿಣಾಮ ಮನೆಯೊಳಗೆ ಇದ್ದ ವೃದ್ಧೆ ಗಂಭೀರ ಗಾಯಗೊಂಡರು. ಮಳೆಯ ನಡುವೆ ರಸ್ತೆಯೇ ಇಲ್ಲದೆ ಮನೆಯಿಂದ ಜೋಳಿಗೆಯಲ್ಲಿ ಹಳ್ಳದಾಟಿಸಿ ಕಳಸ ಆಸ್ಪತ್ರೆಗೆ ದಾಖಲು ಮಾಡಿದರು. ಕಳಸ ತಾಲೂಕಿನ ಕಳಗೋಡೆ ಗ್ರಾಮದ ಕಾರ್ಲೆಯಲ್ಲಿ ಘಟನೆ ನಡೆದಿದೆ.

ಹೆದ್ದಾರಿಯಲ್ಲಿ ಮಣ್ಣು ಕುಸಿತ

ಹಾಸನ ಜಿಲ್ಲೆಯ ಮಲೆನಾಡು ಭಾಗದಲ್ಲಿ ಮಳೆಯ ಅಬ್ಬರ ಮುಂದುವರಿದಿದೆ. ಭಾರಿ ಮಳೆಗೆ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಮಣ್ಣು ಕುಸಿದಿದೆ. ಮಣ್ಣು ಕುಸಿದಿದ್ದರಿಂದ ರಸ್ತೆ ಹದಗೆಟ್ಟಿತ್ತು. ಶಿರಾಡಿಘಾಟ್ ರಸ್ತೆಯ ತಿರುವಿನಲ್ಲಿ ಬರುವಾಗ ಕಂಟೇನರ್‌ ಉರುಳಿಬಿದ್ದಿದೆ. ಸಕಲೇಶಪುರ ತಾಲೂಕಿನ ಕೆಸಗಾನಹಳ್ಳಿ ಬಳಿ ಘಟನೆ ನಡೆದಿದೆ. ಭಾರಿ ಮಳೆಗೆ ಶಿರಾಡಿಘಾಟ್ ರಸ್ತೆಯಲ್ಲಿ ಮಣ್ಣು ಕುಸಿಯುತ್ತಲೆ ಇದೆ. ಕಂಟೇನರ್ ಚಾಲಕನಿಗೆ ಸಣ್ಣಪುಟ್ಟ ಗಾಯವಾಗಿದ್ದು, ಪ್ರಪಾತಕ್ಕೆ ಕಂಟೇನರ್ ಬೀಳುವುದು ಕೂದಲೆಳೆ ಅಂತರದಲ್ಲಿ ಮಿಸ್‌ ಆಗಿದೆ. ಬೆಂಗಳೂರಿನಿಂದ ಮಂಗಳೂರಿಗೆ ತೆರಳುತ್ತಿದ್ದ ಕಂಟೇನರ್ ಮುಂಭಾಗ ಸಂಪೂರ್ಣ ಜಖಂಗೊಂಡಿದೆ.

ಮಳೆಯ ಅಬ್ಬರಕ್ಕೆ ಕುಸಿದ ಸರ್ಕಾರಿ ಶಾಲೆ ಗೋಡೆ

ಶಿವಮೊಗ್ಗದಲ್ಲಿ ಮಳೆಗೆ ಸರ್ಕಾರಿ ಶಾಲೆಯ ಗೋಡೆಯು ಕುಸಿದಿದೆ. ಮಂಗಳವಾರ ಮಧ್ಯಾಹ್ನ ಅನವಟ್ಟಿಯ ಉರ್ದು ಸರ್ಕಾರಿ ಶಾಲೆಯ ಗೋಡೆ ಕುಸಿದಿದೆ. ವಿದ್ಯಾರ್ಥಿಗಳು ಊಟಕ್ಕೆ ತೆರಳಿದ್ದ ಸಮಯದಲ್ಲಿ ಗೋಡೆ ಕುಸಿದಿದೆ. ಅದೃಷ್ಟವಶಾತ್ ಭಾರೀ ದೊಡ್ಡ ಅನಾಹುತ ತಪ್ಪಿದೆ.

karnataka weather Forecast
karnataka weather Forecast

ಇದನ್ನೂ ಓದಿ: Udupi News : ಹಳೆ ಲಾರಿ ಚಾಸ್ಸಿಯಲ್ಲೇ ಕಿರು ಸೇತುವೆ ನಿರ್ಮಾಣ! ಬೈಂದೂರು ಶಾಸಕರ ಪರಿಕಲ್ಪನೆಗೆ ಜನರು ಫಿದಾ

ಕರಾವಳಿಯಲ್ಲಿ ಮಳೆಯಾಟ ಮುಂದುವರಿಕೆ

ಕರಾವಳಿಯ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಜತೆಗೆ ನಿರಂತರ ಗಾಳಿಯ ವೇಗವು 30-40 ಕಿಮೀ ತಲುಪುವ ಸಾಧ್ಯತೆಯಿದೆ. ಮಲೆನಾಡಿನ ಶಿವಮೊಗ್ಗ, ಚಿಕ್ಕಮಗಳೂರು ಮತ್ತು ಕೊಡಗು ಸುತ್ತಮುತ್ತ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ. ಗಾಳಿಯ ವೇಗವು 40-50 ಕಿ.ಮೀ ತಲುಪಲಿದೆ. ದಕ್ಷಿಣ ಒಳನಾಡಿನ ಹಲವೆಡೆ ಗಾಳಿಯ ವೇಗವು 50 ಕಿ.ಮೀ ತಲುಪುವ ಸಾಧ್ಯತೆ ಇದ್ದು, ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ. ಉತ್ತರ ಒಳನಾಡಿನಲ್ಲೂ ಹಗುರದಿಂದ ಕೂಡಿದ ಮಳೆಯಾಗಲಿದೆ. ಬೆಂಗಳೂರು ನಗರ ಮತ್ತು ಸುತ್ತಮುತ್ತ ಮುಂದಿನ 24 ಗಂಟೆಯಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ. ಹಗುರದಿಂದ ಕೂಡಿದ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 27 ಮತ್ತು 21 ಡಿಗ್ರಿ ಸೆಲಿಯಸ್ಸ್‌ ಇರಲಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Nitish Kumar
ದೇಶ25 mins ago

Nitish Kumar: ನೀನೂ ಹೆಣ್ಣು; ವಿಧಾನಸಭೆಯಲ್ಲೇ ಆರ್‌ಜೆಡಿ ಶಾಸಕಿಗೆ ನಿತೀಶ್‌ ಕುಮಾರ್‌ ಗದರಿದ್ದೇಕೆ?

Paris Olympics
ಕ್ರೀಡೆ39 mins ago

Paris Olympics: ಕೊಕೊ ಗಾಫ್ ಅಮೆರಿಕದ ಧ್ವಜಧಾರಿ; ಈ ಗೌರವ ಪಡೆದ ಅತಿ ಕಿರಿಯ ಕ್ರೀಡಾಪಟು

Anekal
ಕ್ರೈಂ2 hours ago

ಆನೇಕಲ್‌ನಲ್ಲಿ ಪುರಸಭೆ ಸದಸ್ಯನ ಬರ್ಬರ ಹತ್ಯೆ; ಮಾರಕಾಸ್ತ್ರಗಳಿಂದ ಮನಬಂದಂತೆ ಕೊಚ್ಚಿ ಕೊಲೆ

Hardik Pandya
ಕ್ರೀಡೆ2 hours ago

Hardik Pandya: ವಿಚ್ಛೇದನ ನೀಡಿ ಒಂದು ವಾರ ಕಳೆಯುವ ಮುನ್ನವೇ ಮಾಜಿ ಪತ್ನಿಯ ಪೋಸ್ಟ್​ಗೆ ಲೈಕ್ಸ್​, ಕಮೆಂಟ್​ ಮಾಡಿದ ಹಾರ್ದಿಕ್​ ಪಾಂಡ್ಯ

King Chopper
ದೇಶ2 hours ago

Sea King Chopper: ಸಾವಿನ ದವಡೆಯಲ್ಲಿದ್ದ ಚೀನಾ ನಾವಿಕನನ್ನು ರಕ್ಷಿಸಿದ ಭಾರತೀಯ ನೌಕಾಪಡೆ; ಮಾನವೀಯತೆಗೆ ಮೆಚ್ಚುಗೆ

ahoratri dharani until the guilts are punished says Opposition party Leader R Ashok
ಕರ್ನಾಟಕ2 hours ago

R Ashok: ಹಗರಣಕೋರರಿಗೆ ಶಿಕ್ಷೆಯಾಗುವವರೆಗೂ ಅಹೋರಾತ್ರಿ ಧರಣಿ; ಆರ್. ಅಶೋಕ್‌ ಘೋಷಣೆ

Traffic Restrictions
ಬೆಂಗಳೂರು2 hours ago

Traffic Restrictions: ವೈಟ್ ಟಾಪಿಂಗ್ ಕಾಮಗಾರಿ; ನಾಳೆಯಿಂದ ರಾಜಾಜಿನಗರದ ಈ ಮಾರ್ಗದಲ್ಲಿ ಸಂಚಾರ ನಿಷೇಧ

Mohammed Shami
ಕ್ರೀಡೆ2 hours ago

Mohammed Shami: 19ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆಗೆ ಯತ್ನಿಸಿದ್ದ ಮೊಹಮ್ಮದ್ ಶಮಿ; ತಡೆದು ನಿಲ್ಲಿಸಿದ್ದು ಯಾರು?

KP Poorchandra Tejaswi samagra kruthi Jagattu 14 samputagalu Lokarpane On July 29 in Bengaluru
ಬೆಂಗಳೂರು2 hours ago

Book Release: ಜು.29ರಂದು ಬೆಂಗಳೂರಿನಲ್ಲಿ 14 ಸಂಪುಟಗಳ ಪೂರ್ಣಚಂದ್ರ ತೇಜಸ್ವಿ ಕೃತಿ ಲೋಕಾರ್ಪಣೆ

Asteria Aerospace has introduced a SkyDeck platform that helps in various fields including agriculture
ದೇಶ3 hours ago

SkyDeck: ಕೃಷಿ ಮತ್ತಿತರ ಕ್ಷೇತ್ರಗಳಿಗೆ ನೆರವಾಗುವ ʼಸ್ಕೈಡೆಕ್ʼ ಪ್ಲಾಟ್‌ಫಾರ್ಮ್! ಏನಿದು?

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Weather Forecast
ಮಳೆ17 hours ago

Karnataka Weather : ರಭಸವಾಗಿ ಸುರಿಯುವ ಮಳೆ; 50 ಕಿ.ಮೀ ವೇಗದಲ್ಲಿ ಬೀಸುತ್ತೆ ಗಾಳಿ

karnataka weather Forecast
ಮಳೆ1 day ago

Karnataka Weather : ರಾಜ್ಯದಲ್ಲಿ ಮುಂದುವರಿದ ಮಳೆ ಅವಾಂತರ; ನಾಳೆಯೂ ಇರಲಿದೆ ಅಬ್ಬರ

Udupi News
ಉಡುಪಿ1 day ago

Udupi News : ಹಳೆ ಲಾರಿ ಚಾಸ್ಸಿಯಲ್ಲೇ ಕಿರು ಸೇತುವೆ ನಿರ್ಮಾಣ! ಬೈಂದೂರು ಶಾಸಕರ ಪರಿಕಲ್ಪನೆಗೆ ಜನರು ಫಿದಾ

murder case
ರಾಮನಗರ1 day ago

Murder Case : ರಾಮನಗರದಲ್ಲೊಂದು ಪೈಶಾಚಿಕ ಕೃತ್ಯ; ಅತ್ಯಾಚಾರವೆಸಗಿ 4 ವರ್ಷದ ಬಾಲಕಿಯನ್ನು ಕೊಂದ ದುಷ್ಟ

karnataka Rain
ಮಳೆ4 days ago

Karnataka Rain : ಭಾರಿ ಮಳೆಗೆ ಮನೆ ಗೋಡೆ ಕುಸಿತ; ಕೊಟ್ಟಿಗೆಯಲ್ಲಿದ್ದ ಜಾನುವಾರುಗಳು ಸಾವು

karnataka Rain
ಮಳೆ4 days ago

Karnataka Rain : ಹಳ್ಳ ದಾಟಲು ಹೋಗಿ ನೀರುಪಾಲಾದ ಜಾನುವಾರು; ಬಿರುಗಾಳಿಗೆ ಕಳಚಿದ ವಿಂಡ್‌ ಫ್ಯಾನ್‌

karnataka Rain
ಮಳೆ5 days ago

Karnataka Rain : ಬೀದಿಗೆ ತಂದ ರಣಮಳೆ; ಮನೆ ಕುಸಿದು ಬಿದ್ದು 9 ತಿಂಗಳ ಗರ್ಭಿಣಿ ನರಳಾಟ

Karnataka Rain
ಮಳೆ5 days ago

Karnataka Rain : ರಾಜ್ಯದಲ್ಲಿ ಮಳೆಯ ಆರ್ಭಟ; ರಾತ್ರಿ ಕಳೆದು ಬೆಳಗಾಗುವುದರೊಳಗೆ ಕಂದಕ ನಿರ್ಮಾಣ

Karnataka Rain
ಮಳೆ6 days ago

Karnataka Rain : ಭಾರಿ ಮಳೆ ಎಫೆಕ್ಟ್‌; ಉಕ್ಕಿ ಹರಿಯುತ್ತಿದ್ದ ನದಿಯಲ್ಲಿ ಕೊಚ್ಚಿ ಹೋದ ರಾಸು

Uttara Kannada Landslide
ಮಳೆ6 days ago

Uttara Kannada Landslide: ಶಿರೂರು ಗುಡ್ಡ ಕುಸಿತ; ಅಖಾಡಕ್ಕಿಳಿದ ಜಿಯೊಲಾಜಿಕಲ್ ಸರ್ವೆ ಆಫ್ ಇಂಡಿಯಾ ಟೀಂ

ಟ್ರೆಂಡಿಂಗ್‌