Union Budget 2024: ರೈಲ್ವೆ ಬಜೆಟ್‌ನಲ್ಲಿ ಕರ್ನಾಟಕಕ್ಕೆ ₹7,559 ಕೋಟಿ ಅನುದಾನ; ಕಳೆದ ವರ್ಷಕ್ಕಿಂತ ಕಡಿಮೆ - Vistara News

ದೇಶ

Union Budget 2024: ರೈಲ್ವೆ ಬಜೆಟ್‌ನಲ್ಲಿ ಕರ್ನಾಟಕಕ್ಕೆ ₹7,559 ಕೋಟಿ ಅನುದಾನ; ಕಳೆದ ವರ್ಷಕ್ಕಿಂತ ಕಡಿಮೆ

Union Budget 2024: ಕರ್ನಾಟಕಕ್ಕೆ 2024-25ರ ಅವಧಿಯಲ್ಲಿ ಬರೋಬ್ಬರಿ 7,559 ಕೋಟಿ ರೂ. ರೈಲ್ವೇ ಅಭಿವೃದ್ಧಿಗಾಗಿ ಅನುದಾನ ನೀಡಲಾಗಿದೆ. ಸೌತ್ ವೆಸ್ಟರ್ನ್ ರೈಲ್ವೇ (SWR) ಪ್ರಕಾರ, 31 ಯೋಜನೆಗಳು 3,840 ಕಿಲೋಮೀಟರ್‌ಗಳಲ್ಲಿ ಹರಡಿಕೊಂಡಿವೆ ಮತ್ತು 47,016 ಕೋಟಿ ಮೌಲ್ಯದ ಮೌಲ್ಯದ ಯೋಜನೆ ಪ್ರಸ್ತುತ ಕರ್ನಾಟಕದಲ್ಲಿ ನಡೆಯುತ್ತಿದೆ. 2023-24ರ ಕೇಂದ್ರ ಬಜೆಟ್‌ನಲ್ಲಿ ರಾಜ್ಯದ ಯೋಜನೆಗಳಿಗೆ 7,561 ಕೋಟಿ ರೂ. ನೀಡಲಾಗಿತ್ತು ಎಂದು ಹೇಳಿದ್ದಾರೆ.

VISTARANEWS.COM


on

Union Budget 2024
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಈ ಬಾರಿ ಕೇಂದ್ರ ಬಜೆಟ್‌(Union Budget 2024)ನಲ್ಲಿ ಕರ್ನಾಟಕಕ್ಕೆ ಚೊಂಬು ಕೊಟ್ಟಿದ್ದಾರೆ. ರಾಜ್ಯವನ್ನು ಸಂಪೂರ್ಣವಾಗಿ ಕೇಂದ್ರ ಸರ್ಕಾರ(Union Government) ನಿರ್ಲಕ್ಷಿಸಿದೆ ಎಂಬ ಕಾಂಗ್ರೆಸ್‌ ನಾಯಕರ ಆರೋಪದ ಬೆನ್ನಲ್ಲೇ ಪ್ರಸಕ್ತ ಸಾಲಿನ ಕೇಂದ್ರ ಬಜೆಟ್‌ನಲ್ಲಿ ರೈಲ್ವೆ ಸಚಿವಾಲಯ(Railway Ministry)ಕ್ಕೆ ದೊರೆತ 2.62 ಲಕ್ಷ ಕೋಟಿ ರೂ.ಗಳಲ್ಲಿ ಕರ್ನಾಟಕಕ್ಕೆ 7,559 ಕೋಟಿ ರೂ. ಒದಗಿಸಲಾಗಿದೆ ಎಂದು ರೈಲ್ವೇ ಸಚಿವ ಅಶ್ವಿನಿ ವೈಷ್ಣವ್‌(Ashwini Vaishnav) ಹೇಳಿದ್ದಾರೆ.

ಮಾಧ್ಯಮಗೋಷ್ಠಿ ನಡೆಸಿ ಮಾತನಾಡಿದ ಅವರು, ಕರ್ನಾಟಕಕ್ಕೆ 2024-25ರ ಅವಧಿಯಲ್ಲಿ ಬರೋಬ್ಬರಿ 7,559 ಕೋಟಿ ರೂ. ರೈಲ್ವೇ ಅಭಿವೃದ್ಧಿಗಾಗಿ ಅನುದಾನ ನೀಡಲಾಗಿದೆ. ಸೌತ್ ವೆಸ್ಟರ್ನ್ ರೈಲ್ವೇ (SWR) ಪ್ರಕಾರ, 31 ಯೋಜನೆಗಳು 3,840 ಕಿಲೋಮೀಟರ್‌ಗಳಲ್ಲಿ ಹರಡಿಕೊಂಡಿವೆ ಮತ್ತು 47,016 ಕೋಟಿ ಮೌಲ್ಯದ ಮೌಲ್ಯದ ಯೋಜನೆ ಪ್ರಸ್ತುತ ಕರ್ನಾಟಕದಲ್ಲಿ ನಡೆಯುತ್ತಿದೆ. 2023-24ರ ಕೇಂದ್ರ ಬಜೆಟ್‌ನಲ್ಲಿ ರಾಜ್ಯದ ಯೋಜನೆಗಳಿಗೆ 7,561 ಕೋಟಿ ರೂ. ನೀಡಲಾಗಿತ್ತು ಎಂದು ಹೇಳಿದ್ದಾರೆ.

“ಪ್ರಸಕ್ತ ಬಜೆಟ್‌ನಲ್ಲಿ ಕರ್ನಾಟಕದ ರೈಲ್ವೆ ಯೋಜನೆಗಳಿಗೆ 7,559 ಕೋಟಿ ರೂ. ಮೀಸಲಿಡಲಾಗಿದೆ. ಈ ಅನುದಾನವು ಯುಪಿಎ ಅವಧಿಯಲ್ಲಿ ನೀಡಿದ್ದಕ್ಕಿಂತ 9 ಪಟ್ಟು ಹೆಚ್ಚು ಇದೆ. ಮೂಲ ಸೌಕರ್ಯಕ್ಕೆ ಆದ್ಯತೆ ನೀಡಲಾಗುವುದು. 59 ನಿಲ್ದಾಣಗಳನ್ನು ಅಮೃತ ಭಾರತ ಯೋಜನೆಯಡಿ ಅಭಿವೃದ್ಧಿ ಪಡಿಸಲಾಗುತ್ತಿದೆ. 638 ಅಂಡರ್‌ ಪಾಸ್‌ಗಳನ್ನು ನಿರ್ಮಿಸಲಾಗಿದೆ. ಕಳೆದ ಹತ್ತು ವರ್ಷಗಳ ಅವಧಿಯಲ್ಲಿ 2,500 ಬೋಗಿಗಳನ್ನು ಹೆಚ್ಚುವರಿಯಾಗಿ ಜೋಡಿಸಲಾಗಿದೆ,
ಲೋಕೋ ಪೈಲಟ್‌ಗಳ ಖಾಲಿ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಲೋಕೋ ಪೈಲಟ್‌ಗಳ ಮೇಲಿನ ಒತ್ತಡ ತಗ್ಗಿಸಲು ವಾರದ ಒಟ್ಟು ಕರ್ತವ್ಯದ ಅವಧಿಯನ್ನು 54 ಗಂಟೆಗಳಿಂದ 52ಕ್ಕೆ ಇಳಿಸಲಾಗಿದೆ. ಹಾಗೂ ರನ್ನಿಂಗ್‌ ರೂಂಗಳನ್ನು ಸಹ ಹೆಚ್ಚಿಸಲಾಗಿದೆ. ಇದರಿಂದ ಪೈಲಟ್‌ಗಳಿಗೆ ಹೆಚ್ಚು ಅನುಕೂಲವಾಗಿದೆ,” ಎಂದು ಸಚಿವರು ಹೇಳಿದರು.

ಪ್ರಸ್ತುತ, ನೈರುತ್ಯ ರೈಲ್ವೇ ವಿಭಾಗದಲ್ಲಿ 88% ನೆಟ್ವರ್ಕ್ ವಿದ್ಯುದ್ದೀಕರಿಸಲ್ಪಟ್ಟಿದೆ. ವಲಯವು ಮಾರ್ಚ್ 2025 ರ ವೇಳೆಗೆ 100% ವಿದ್ಯುದ್ದೀಕರಣವನ್ನು ಹೊಂದಿದೆ. 2014 ರಿಂದ 2024 ರವರೆಗೆ, ಕರ್ನಾಟಕದಲ್ಲಿ 638 ರಸ್ತೆ ಮೇಲ್ಸೇತುವೆಗಳು / ಕೆಳಸೇತುವೆಗಳನ್ನು ನಿರ್ಮಿಸಲಾಗಿದೆ, ಪ್ರತಿ ವರ್ಷ 163 ಕಿಮೀ ಹೊಸ ಮಾರ್ಗಗಳನ್ನು ಸೇರಿಸಲಾಯಿತು ಮತ್ತು ವಾರ್ಷಿಕವಾಗಿ 317 ಕಿಮೀ ಮಾರ್ಗಗಳನ್ನು ವಿದ್ಯುದ್ದೀಕರಿಸಲಾಗಿದೆ. ಒಟ್ಟಾರೆ ರೈಲ್ವೆಗೆ 2.62 ಲಕ್ಷ ಕೋಟಿ ರೂ. ಈ ಪೈಕಿ 1,08,795 ಕೋಟಿ ರೂ.ಗಳನ್ನು ಟ್ರ್ಯಾಕ್ ರಿಪ್ಲೇಸ್ಮೆಂಟ್, ಸಿಗ್ನಲಿಂಗ್ ಮತ್ತು ಟೆಲಿಕಾಂನಲ್ಲಿ ಸುಧಾರಣೆ ಸೇರಿದಂತೆ ಸುರಕ್ಷತೆಗೆ ಸಂಬಂಧಿಸಿದ ಯೋಜನೆಗಳಿಗೆ ಖರ್ಚು ಮಾಡಲಾಗುವುದು ಎಂದಿದ್ದಾರೆ.

ಇದನ್ನೂ ಓದಿ: Union Budget 2024: ಕೇಂದ್ರ ಬಜೆಟ್‌ನಲ್ಲಿ ರೈಲ್ವೇ ವಲಯದ 9 ಪ್ರಮುಖ ನಿರೀಕ್ಷೆಗಳಿವು

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

NEET UG 2024: ನೀಟ್‌ ಪ್ರಶ್ನೆಪತ್ರಿಕೆಯನ್ನು ಎಗರಿಸಿದ್ದು ಯಾವ ಕೇಂದ್ರದಿಂದ? ಸಿಬಿಐ ಸ್ಫೋಟಕ ಮಾಹಿತಿ ಬಯಲು

NEET UG 2024: ಹಜಾರಿಬಾಗ್‌ನಲ್ಲಿರುವ ಎನ್‌ಟಿಎ ಸಿಟಿ ಕೋಆರ್ಡಿನೇಟರ್‌ ಕಮ್‌ ಪ್ರಿನ್ಸಿಪಾಲ್‌ ಆಫ್‌ ಓಯಸಿಸ್‌ ಸ್ಕೂಲ್‌ ಮತ್ತು ಸೆಂಟರ್‌ ಸೂಪರಿಂಟೆಂಡೆಂಟ್‌ ಕಮ್‌ ವೈಸ್‌ ಪ್ರಿನ್ಸಿಪಾಲ್‌ ಆಫ್‌ ಓಯಸಿಸ್‌ ಸ್ಕೂಲ್‌ನಿಂದ ಅಧಿಕಾರಿಗಳ ಕಣ್ಣುತಪ್ಪಿಸಿ ಅಥವಾ ಅವರ ಮೌನಸಮ್ಮತಿಯ ಮಧ್ಯೆಯೇ ನೀಟ್‌ ಪ್ರಶ್ನೆಪತ್ರಿಕೆಯನ್ನು ಎಗರಿಸಲಾಗಿದೆ ಎಂಬುದಾಗಿ ಸಿಬಿಐ ಅಧಿಕಾರಿಗಳು ತಿಳಿಸಿದ್ದಾರೆ.

VISTARANEWS.COM


on

NEET UG 2024
Koo

ನವದೆಹಲಿ: ವೈದ್ಯಕೀಯ ಹಾಗೂ ದಂತ ವೈದ್ಯಕೀಯ ಕೋರ್ಸ್‌ಗಳ ಪ್ರವೇಶಾತಿಗಾಗಿ ನಡೆದ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET UG 2024) ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣವು ದೇಶಾದ್ಯಂತ ಸುದ್ದಿಯಾಗಿರುವ ಜತೆಗೆ, ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದೆ. ಕರ್ನಾಟಕ ಸೇರಿ ಕೆಲ ರಾಜ್ಯಗಳಲ್ಲಿ ನೀಟ್‌ ವಿರುದ್ಧ ನಿರ್ಣಯವನ್ನೇ ಮಂಡಿಸಲಾಗಿದೆ. ಇದರ ಬೆನ್ನಲ್ಲೇ, ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ತನಿಖೆ ಚುರುಕುಗೊಳಿಸಿರುವ ಸಿಬಿಐ ಅಧಿಕೃಿಗಳು, ಸ್ಫೋಟಕ ಮಾಹಿತಿ ಬಯಲಿಗೆಳೆದಿದ್ದಾರೆ. ಜಾರ್ಖಂಡ್‌ನ ಜಹಾರಿಬಾಗ್‌ನಲ್ಲಿರುವ (Hazaribagh) ಕಚೇರಿಯಿಂದಲೇ ಪ್ರಶ್ನೆಪತ್ರಿಕೆಯನ್ನು (NEET Paper Leak Case) ಕಳ್ಳತನ ಮಾಡಲಾಗಿದೆ ಎಂಬುದಾಗಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ‌

ಹೌದು, ಹಜಾರಿಬಾಗ್‌ನಲ್ಲಿರುವ ಎನ್‌ಟಿಎ ಸಿಟಿ ಕೋಆರ್ಡಿನೇಟರ್‌ ಕಮ್‌ ಪ್ರಿನ್ಸಿಪಾಲ್‌ ಆಫ್‌ ಓಯಸಿಸ್‌ ಸ್ಕೂಲ್‌ ಮತ್ತು ಸೆಂಟರ್‌ ಸೂಪರಿಂಟೆಂಡೆಂಟ್‌ ಕಮ್‌ ವೈಸ್‌ ಪ್ರಿನ್ಸಿಪಾಲ್‌ ಆಫ್‌ ಓಯಸಿಸ್‌ ಸ್ಕೂಲ್‌ನಿಂದ ಅಧಿಕಾರಿಗಳ ಕಣ್ಣುತಪ್ಪಿಸಿ ಅಥವಾ ಅವರ ಮೌನಸಮ್ಮತಿಯ ಮಧ್ಯೆಯೇ ನೀಟ್‌ ಪ್ರಶ್ನೆಪತ್ರಿಕೆಯನ್ನು ಎಗರಿಸಲಾಗಿದೆ. ನೀಟ್‌ ಪರೀಕ್ಷೆ ನಡೆದ ಮೇ 5ರಂದು ಪಂಕಜ್‌ ಕುಮಾರ್‌ ಅಲಿಯಾಸ್‌ ಆದಿತ್ಯ ಅಲಿಯಾಸ್‌ ಸಾಹಿಲ್‌ ಎಂಬಾತನು ಪ್ರಶ್ನೆಪತ್ರಿಕೆಯನ್ನು ತೆಗೆದುಕೊಂಡು ಹೋಗಿ, ಹಣ ಕೊಟ್ಟವರಿಗೆ ಅದನ್ನು ಹಂಚಿಕೆ ಮಾಡಿದ್ದಾನೆ ಎಂದು ಸಿಬಿಐ ಅಧಿಕಾರಿಗಳು ತಿಳಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಹಲವು ಆರೋಪಿಗಳನ್ನು ಬಂಧಿಸಲಾಗಿದ್ದು, ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

ದೇಶಾದ್ಯಂತ 571 ನಗರಗಳಲ್ಲಿ ಹಾಗೂ ಹೊರಗಿನ 14 ನಗರಗಳು ಸೇರಿದಂತೆ 4750 ವಿವಿಧ ಕೇಂದ್ರಗಳಲ್ಲಿ 05 ಮೇ 2024 ರಂದು ನೀಟ್‌ ಯುಜಿ ಪರೀಕ್ಷೆಯನ್ನು ನಡೆಸಲಾಗಿತ್ತು. ಪರೀಕ್ಷೆಯನ್ನು 13 ಭಾಷೆಗಳಲ್ಲಿ (ಅಸ್ಸಾಮಿ, ಬಂಗಾಳಿ, ಇಂಗ್ಲಿಷ್, ಗುಜರಾತಿ, ಹಿಂದಿ, ಕನ್ನಡ, ಮಲಯಾಳಂ, ಮರಾಠಿ, ಒಡಿಯಾ, ಪಂಜಾಬಿ, ತಮಿಳು, ತೆಲುಗು, ಮತ್ತು ಉರ್ದು) ನಡೆಸಲಾಗಿತ್ತು. ನೀಟ್‌ ಪರೀಕ್ಷೆಗೆ 24,06,079 ಅಭ್ಯರ್ಥಿಗಳ ನೋಂದಾಯಿಸಿಕೊಂಡಿದ್ದರು. ಅದರಲ್ಲಿ 23,33,297 ಪರೀಕ್ಷೆ ಹಾಜರಾಗಿದ್ದು, 72782 ಗೈರು ಹಾಜರಾಗಿದ್ದರು. ಇದರಲ್ಲಿ ಬಾಲಕರು 10,29,154 ಹಾಗೂ ಬಾಲಕಿಯರು 13,76,831, ತೃತೀಯ ಲಿಂಗಿಗಳು 18 ಮಂದಿ ಪರೀಕ್ಷೆಯನ್ನು ಬರೆದಿದ್ದರು.

ನೀಟ್‌ ಪರೀಕ್ಷೆಯಲ್ಲಿ ರ‍್ಯಾಂಕ್‌ ಪಡೆದ 67 ವಿದ್ಯಾರ್ಥಿಗಳಲ್ಲಿ 44 ವಿದ್ಯಾರ್ಥಿಗಳು ಗ್ರೇಸ್‌ ಮಾರ್ಕ್ಸ್‌ ಆಧಾರದ ಮೇಲೆ ಟಾಪರ್‌ಗಳಾಗಿದ್ದರು. ಇನ್ನು, ಹರಿಯಾಣದಲ್ಲಿ ಒಂದೇ ಕೇಂದ್ರದಲ್ಲಿ ಪರೀಕ್ಷೆ ಬರೆದ ಆರು ವಿದ್ಯಾರ್ಥಿಗಳು ಜಂಟಿಯಾಗಿ ಟಾಪ್‌ ಸ್ಥಾನ ಪಡೆದಿದ್ದಾರೆ. ಇದರಿಂದಾಗಿ ಪರೀಕ್ಷೆಯಲ್ಲಿ ಅಕ್ರಮ ನಡೆದಿದೆ, ಪ್ರಶ್ನೆಪತ್ರಿಕೆ ಸೋರಿಕೆ ಮಾಡಲಾಗಿದೆ ಎಂಬುದಾಗಿ ಕೆಲವು ಪೋಷಕರು ಆರೋಪ ಮಾಡಿದ್ದಾರೆ. ಗ್ರೇಸ್‌ ಮಾರ್ಕ್ಸ್‌ ಪಡೆದ 1,500 ವಿದ್ಯಾರ್ಥಿಗಳಿಗೆ ಮರು ಪರೀಕ್ಷೆಯನ್ನೂ ನಡೆಸಲಾಗಿದೆ. ಪ್ರಶ್ನೆ ಪತ್ರಿಕೆ ಸೋರಿಕೆ ಮಾಡಿದ ಮಾಸ್ಟರ್‌ ಮೈಂಡ್‌ ಅಮಿತ್‌ ಆನಂದ್‌ ಸೇರಿ ಹಲವರನ್ನು ಬಂಧಿಸಲಾಗಿದ್ದು, ಕ್ಷಿಪ್ರವಾಗಿ ತನಿಖೆ ನಡೆಯುತ್ತಿದೆ.

ಇದನ್ನೂ ಓದಿ: NEET UG 2024: ನೀಟ್‌ ಪರಿಷ್ಕೃತ ಫಲಿತಾಂಶ ಪ್ರಕಟ ಆಗಿಲ್ಲ, ಹಳೇ ಲಿಂಕ್‌ ಹಂಚಿಕೆ ಎಂದ ಕೇಂದ್ರ; ಮತ್ತೊಂದು ಪ್ರಮಾದ?

Continue Reading

ದೇಶ

HD Deve Gowda: ವ್ಹೀಲ್‌ಚೇರ್‌ನಲ್ಲೇ ತೆರಳಿ ಮೋದಿಯನ್ನು ಭೇಟಿಯಾದ ದೇವೇಗೌಡ; ಇಲ್ಲಿವೆ ಫೋಟೊಗಳು

HD Deve Gowda: ದೆಹಲಿಯಲ್ಲಿ ವ್ಹೀಲ್‌ ಚೇರ್‌ನಲ್ಲಿಯೇ ತೆರಳಿದ ದೇವೇಗೌಡ ಅವರು ನರೇಂದ್ರ ಮೋದಿ ಅವರನ್ನು ಭೇಟಿಯಾಗಿದ್ದಾರೆ. ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಅವರೊಂದಿಗೆ ದೇವೇಗೌಡರು ತೆರಳಿ ಮೋದಿ ಜತೆ ಮಾತುಕತೆ ನಡೆಸಿದ್ದಾರೆ. ದೇವೇಗೌಡ ಅವರನ್ನು ಭೇಟಿಯಾಗಿರುವ ಫೋಟೊಗಳನ್ನು ಪ್ರಧಾನಿ ನರೇಂದ್ರ ಮೋದಿ ಅವರೇ ಎಕ್ಸ್‌ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

VISTARANEWS.COM


on

HD Deve Gowda
Koo

ನವದೆಹಲಿ: ಕರ್ನಾಟಕದಲ್ಲಿ ಬಿಜೆಪಿ ಹಾಗೂ ಜೆಡಿಎಸ್‌ ಮೈತ್ರಿ ಮಾಡಿಕೊಳ್ಳುವ ಮೊದಲೇ ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ (HD Deve Gowda) ಅವರ ಮೇಲೆ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಗೌರವ ಹೊಂದಿದ್ದರು. ಹಲವು ಸಂದರ್ಭಗಳಲ್ಲಿ ಮೋದಿ ಅವರು ಗೌರವವನ್ನು ತೋರಿಸಿದ್ದರು. ಇನ್ನು, ಮೈತ್ರಿ ಮಾಡಿಕೊಂಡ ಬಳಿಕವಂತೂ ದೇವೇಗೌಡರು ಮೋದಿ ಅವರ ಬಗ್ಗೆ ಮೆಚ್ಚುಗೆಯ ಮಾತುಗಳನ್ನು ಆಡುತ್ತಾರೆ. ಇನ್ನು, ಇದರ ಮಧ್ಯೆಯೇ, ದೆಹಲಿಯಲ್ಲಿ ದೇವೇಗೌಡ ಹಾಗೂ ನರೇಂದ್ರ ಮೋದಿ ಅವರು ಭೇಟಿಯಾಗಿದ್ದಾರೆ.

ವ್ಹೀಲ್‌ ಚೇರ್‌ನಲ್ಲಿಯೇ ತೆರಳಿದ ದೇವೇಗೌಡ ಅವರು ನರೇಂದ್ರ ಮೋದಿ ಅವರನ್ನು ಭೇಟಿಯಾಗಿದ್ದಾರೆ. ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಅವರೊಂದಿಗೆ ದೇವೇಗೌಡರು ತೆರಳಿ ಮೋದಿ ಜತೆ ಮಾತುಕತೆ ನಡೆಸಿದ್ದಾರೆ. ದೇವೇಗೌಡ ಅವರನ್ನು ಭೇಟಿಯಾಗಿರುವ ಫೋಟೊಗಳನ್ನು ಪ್ರಧಾನಿ ನರೇಂದ್ರ ಮೋದಿ ಅವರೇ ಎಕ್ಸ್‌ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಆದಾಗ್ಯೂ, ಭೇಟಿ ವೇಳೆ ಕರ್ನಾಟಕ ಸೇರಿ ಹಲವು ವಿಷಯಗಳ ಕುರಿತು ಇಬ್ಬರೂ ಮಾತನಾಡಿದ್ದಾರೆ ಎಂದು ತಿಳಿದುಬಂದಿದೆ.

ದೇವೇಗೌಡ ಅವರನ್ನು ಭೇಟಿಯಾಗಿರುವ ಕುರಿತು ಮೋದಿ ಅವರು ಪೋಸ್ಟ್‌ ಕೂಡ ಹಂಚಿಕೊಂಡಿದ್ದಾರೆ. “7 ಲೋಕ ಕಲ್ಯಾಣ ಮಾರ್ಗದಲ್ಲಿರುವ ನಿವಾಸದಲ್ಲಿ ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ ಅವರನ್ನು ಭೇಟಿಯಾದೆ. ಅವರನ್ನು ಭೇಟಿಯಾಗುವುದೇ ಗೌರವದ ಸಂಗತಿಯಾಗಿದೆ. ಅವರು ಪ್ರಮುಖ ವಿಷಯಗಳ ಕುರಿತು ಹೊಂದಿರುವ ಜ್ಞಾನ, ದೃಷ್ಟಿಕೋನವು ಮೆಚ್ಚುವಂಥದ್ದು. ಅವರು ನೀಡಿದ ಸಲಹೆಗಳು ನನಗೆ ಹಲವು ಸಂದರ್ಭಗಳಲ್ಲಿ ಉಪಯುಕ್ತವಾಗಿವೆ” ಎಂಬುದಾಗಿ ಮೋದಿ ಪೋಸ್ಟ್‌ ಮಾಡಿದ್ದಾರೆ.

ಮೋದಿ ಅವರು ಮೂರನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸುವ ಮೊದಲು ಎಚ್‌.ಡಿ.ದೇವೇಗೌಡ ಅವರು ಪತ್ರ ಬರೆದಿದ್ದರು. ʼʼನರೇಂದ್ರ ಮೋದಿ ಅವರು ಸತತ ಮೂರನೇ ಬಾರಿಗೆ ಪ್ರಧಾನಿಯಾಗಿ ಪ್ರಮಾನ ವಚನ ಸ್ವೀಕರಿಸುತ್ತಿದ್ದಾರೆ. ಈ ಐತಿಹಾಸಿಕ ಸಂದರ್ಭದಲ್ಲಿ ಅವರಿಗೆ ನಾನು ಅಭಿನಂದನೆ ಸಲ್ಲಿಸುತ್ತಿದ್ದೇನೆ. ಅನಾರೋಗ್ಯದ ಕಾರಣದಿಂದ ನನಗೆ ಈ ಕಾರ್ಯಕ್ರಮದಲ್ಲಿ ಭಾವಹಿಸಲು ಸಾಧ್ಯವಾಗುತ್ತಿಲ್ಲ. ಆದರೆ ಖಂಡಿತವಾಗಿಯೂ ನಾನು ಟಿವಿಯಲ್ಲಿ ಲೈವ್‌ನಲ್ಲೇ ಕಾರ್ಯಕ್ರಮವನ್ನು ವೀಕ್ಷಿಸುತ್ತೇನೆ. ಕಾಂಗ್ರೆಸ್ ಏನೇ ಹೇಳಲಿ, ಭಾರತೀಯ ಪ್ರಜಾಪ್ರಭುತ್ವವು ದೃಢವಾಗಿದೆʼʼ ಎಂದು ದೇವೇಗೌಡ ಅವರು ಬರೆದುಕೊಂಡಿದ್ದರು.

ಇದನ್ನೂ ಓದಿ: HD Kumaraswamy: ನನ್ನ ಮತ್ತು ದೇವೇಗೌಡರ ಸರ್ಕಾರ ಕೆಡವಿದ್ದು ಯಾರು ಅಂತ ಹೇಳಿ; ಡಿಕೆಶಿ ವಿರುದ್ಧ ಎಚ್‌ಡಿಕೆ ಕಿಡಿ

Continue Reading

ಪ್ರಮುಖ ಸುದ್ದಿ

Atal Setu: ಅಟಲ್‌ ಸೇತು ಮೇಲೆ ಕಾರಿನಲ್ಲಿ ಬಂದು, ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಟೆಕ್ಕಿ; ಏನಾಗಿತ್ತು?

Atal Setu: ಟೆಕ್ಕಿಯಾಗಿರುವ ವ್ಯಕ್ತಿಯು ಇದಕ್ಕೂ ಮೊದಲು ಕೂಡ ಆತ್ಮಹತ್ಯೆಗೆ ಯತ್ನಿಸಿದ್ದರು ಎಂದು ತಿಳಿದುಬಂದಿದೆ. ಕುವೈತ್‌ನಲ್ಲಿ ಕೆಲಸ ಮಾಡುತ್ತಿದ್ದ ಅವರು 2023ರಲ್ಲಿ ಕೂಡ ಫ್ಲೋರ್‌ ಕ್ಲೀನರ್‌ ಲಿಕ್ವಿಡ್‌ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು ಎಂದು ತಿಳಿದುಬಂದಿದೆ. ಇನ್ನು ಅಟಲ್‌ ಸೇತುವೆ ಮೇಲಿನಿಂದ ಬಿದ್ದು ಆತ್ಮಹತ್ಯೆ ಮಾಡಿಕೊಂಡ ಎರಡನೇ ಪ್ರಕರಣ ಇದಾಗಿದೆ.

VISTARANEWS.COM


on

Atal Setu
Koo

ಮುಂಬೈ: ಮಹಾರಾಷ್ಟ್ರದ ಮುಂಬೈನಲ್ಲಿರುವ, ದೇಶದ ಅತಿ ಉದ್ದದ ಸಮುದ್ರ ಸೇತುವೆ ಎನಿಸಿರುವ, ಅಟಲ್‌ ಸೇತು (Atal Setu) ಎಂದು ಕರೆಯಲಾಗುವ ‘ಮುಂಬೈ ಟ್ರಾನ್ಸ್ ಹಾರ್ಬರ್ ಲಿಂಕ್’ (Mumbai Trans Harbour Link-MTHL) ಈಗ ವೇಗದ ಸಂಚಾರಕ್ಕಿಂತ ಹೆಚ್ಚಾಗಿ ಆತ್ಮಹತ್ಯೆ ಪ್ರಕರಣಗಳಿಗೆ ಜಾಸ್ತಿ ಸುದ್ದಿಯಾಗುತ್ತಿದೆ. ಇದಕ್ಕೆ ನಿದರ್ಶನ ಎಂಬಂತೆ, ಅಟಲ್‌ ಸೇತು ಮೇಲೆ ಕಾರಿನಲ್ಲಿ ಬಂದ ಟೆಕ್ಕಿಯೊಬ್ಬರು, ಸೇತುವೆ ಮೇಲಿನಿಂದ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ವಿಡಿಯೊ ಈಗ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

ಬುಧವಾರ ಮಧ್ಯಾಹ್ನ 12.30ರ ಸುಮಾರಿಗೆ ದೊಂಬಿವಿಲಿ ನಿವಾಸಿಯಾಗಿರುವ, ವೃತ್ತಿಯಲ್ಲಿ ಎಂಜಿನಿಯರ್‌ ಆಗಿರುವ 38 ವರ್ಷದ ವ್ಯಕ್ತಿಯು ಸೇತುವೆ ಮೇಲೆ ಕಾರಿನಲ್ಲಿ ನಿಧಾನವಾಗಿ ಬರುತ್ತಾರೆ. ಕಾರಿನಿಂದ ಇಳಿದವರೇ ಸೇತುವೆ ಮೇಲಿನಿಂದ ಅವರು ಕೆಳಗೆ ಹಾರುತ್ತಾರೆ. ಈ ವಿಡಿಯೊ ಸಿಸಿಟಿವಿ ಕ್ಯಾಮೆರಾಗಳಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದೆ. ನ್ಹಾವಾ ಶೇವಾ ಎಂಡ್‌ ಬಳಿಯಲ್ಲಿ ವ್ಯಕ್ತಿಯು ನದಿಗೆ ಹಾರಿದ್ದಾರೆ.

ಹಣಕಾಸು ಬಿಕ್ಕಟ್ಟಿನಿಂದ ಇಂತಹ ತೀರ್ಮಾನ?

ವ್ಯಕ್ತಿಯು ಹಣಕಾಸು ಸಮಸ್ಯೆಯಿಂದ ಮಾನಸಿಕ ಖಿನ್ನತೆಗೊಳಗಾಗಿದ್ದರು. ಅವರು ಸಾಲ ಮಾಡಿದ್ದರು. ಅದರನ್ನು ತೀರಿಸಲಾಗದೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ನವಿ ಮುಂಬೈ ಪೊಲೀಸರು ಸ್ಥಳಕ್ಕೆ ಆಗಮಿಸಿದ್ದು, ವ್ಯಕ್ತಿಯ ಶವದ ಪತ್ತೆಗೆ ಕಾರ್ಯಾಚರಣೆ ಆರಂಭಿಸಿದ್ದಾರೆ. ಹಾಗೆಯೇ, ಶವ ಸಿಕ್ಕರೆ ಮಾಹಿತಿ ನೀಡುವಂತೆ ಕರಾವಳಿ ಪೊಲೀಸರು, ಮೀನುಗಾರರಿಗೆ ಸೂಚನೆ ನೀಡಿದ್ದಾರೆ.

ಟೆಕ್ಕಿಯಾಗಿರುವ ವ್ಯಕ್ತಿಯು ಇದಕ್ಕೂ ಮೊದಲು ಕೂಡ ಆತ್ಮಹತ್ಯೆಗೆ ಯತ್ನಿಸಿದ್ದರು ಎಂದು ತಿಳಿದುಬಂದಿದೆ. ಕುವೈತ್‌ನಲ್ಲಿ ಕೆಲಸ ಮಾಡುತ್ತಿದ್ದ ಅವರು 2023ರಲ್ಲಿ ಕೂಡ ಫ್ಲೋರ್‌ ಕ್ಲೀನರ್‌ ಲಿಕ್ವಿಡ್‌ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು ಎಂದು ತಿಳಿದುಬಂದಿದೆ. ಇನ್ನು ಅಟಲ್‌ ಸೇತುವೆ ಮೇಲಿನಿಂದ ಬಿದ್ದು ಆತ್ಮಹತ್ಯೆ ಮಾಡಿಕೊಂಡ ಎರಡನೇ ಪ್ರಕರಣ ಇದಾಗಿದೆ. ಕಳೆದ ಮಾರ್ಚ್‌ನಲ್ಲಿ ವೈದ್ಯೆಯೊಬ್ಬರು ಅಟಲ್‌ ಸೇತು ಮೇಲಿನಿಂದ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದರು.

ಇದನ್ನೂ ಓದಿ: Self Harming: ಸಾಮೂಹಿಕ ಅತ್ಯಾಚಾರ; ಕ್ರಮ ಕೈಗೊಳ್ಳದ ಪೊಲೀಸರು; ಮನ ನೊಂದು ಬಾಲಕಿ ಆತ್ಮಹತ್ಯೆ

Continue Reading

ದೇಶ

BJP: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರ ಬದಲಾವಣೆಗೂ ಮೊದಲು ಕಾರ್ಯಕಾರಿ ಅಧ್ಯಕ್ಷರ ನೇಮಕ; ಶೀಘ್ರದಲ್ಲೇ ಆದೇಶ?

BJP: ಜೆ.ಪಿ. ನಡ್ಡಾ ಅವರಿಗೆ ಕೇಂದ್ರದಲ್ಲಿ ಸಚಿವ ಸ್ಥಾನ ನೀಡಲಾಗಿದೆ. ಆರೋಗ್ಯ ಖಾತೆಗೆ ರಾಸಾಯನಿಕ ಹಾಗೂ ರಸಗೊಬ್ಬರ ಖಾತೆಗಳನ್ನೂ ನೀಡಲಾಗಿದೆ. ಈಗಾಗಲೇ ಎರಡು ಬಾರಿ ಅವಧಿ ವಿಸ್ತರಣೆಯಾದ ಕಾರಣ ಈ ಬಾರಿ ಜೆ.ಪಿ.ನಡ್ಡಾ ಅವರ ಬದಲಿಗೆ ಬೇರೆಯವರನ್ನು ರಾಷ್ಟ್ರೀಯ ಅಧ್ಯಕ್ಷರನ್ನಾಗಿ ನೇಮಿಸಲಾಗುತ್ತದೆ ಎಂಬುದಾಗಿ ಹೇಳಲಾಗುತ್ತಿದೆ. ಆದರೆ, ಇದಕ್ಕೂ ಮೊದಲೇ ಕಾರ್ಯಕಾರಿ ಅಧ್ಯಕ್ಷರನ್ನು ನೇಮಿಸಲಾಗುತ್ತದೆ ಎಂದು ತಿಳಿದುಬಂದಿದೆ.

VISTARANEWS.COM


on

BJP
Koo

ನವದೆಹಲಿ: ಲೋಕಸಭೆ ಚುನಾವಣೆ (Lok Sabha Election 2024) ಮುಕ್ತಾಯಗೊಂಡಿದ್ದು, ಕೇಂದ್ರದಲ್ಲಿ ಎನ್‌ಡಿಎ ಸರ್ಕಾರವೇ ಅಧಿಕಾರಕ್ಕೆ ಬಂದಿದೆ. ಇನ್ನು, ಬಿಜೆಪಿ (BJP) ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ (JP Nadda) ಅವರ ಅಧಿಕಾರದ ಅವಧಿಯು ಕಳೆದ ಜೂನ್‌ನಲ್ಲಿಯೇ ಮುಗಿದಿದೆ. ಅವರನ್ನು ಡಿಸೆಂಬರ್‌ವರೆಗೆ ಮುಂದುವರಿಸಲಾಗುತ್ತದೆ ಎಂಬ ಮಾತುಗಳು ಕೇಳಿಬಂದಿವೆ. ಇದರ ಮಧ್ಯೆಯೇ, ಆಗಸ್ಟ್‌ ಅಂತ್ಯದ ವೇಳೆಗೆ ಬಿಜೆಪಿ ನೂತನ ಕಾರ್ಯಕಾರಿ ಅಧ್ಯಕ್ಷರನ್ನು ನೇಮಿಸಲಾಗುತ್ತದೆ ಎಂದು ವರದಿಗಳು ತಿಳಿಸಿವೆ.

ಸಂಸತ್‌ ಭವನದಲ್ಲಿ ಬುಧವಾರ (ಜುಲೈ 24) ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್‌ ಶಾ, ಜೆ.ಪಿ.ನಡ್ಡಾ ಹಾಗೂ ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್.ಸಂತೋಷ್‌ ಅವರು ಮಹತ್ವದ ಸಭೆ ನಡೆಸಿದ್ದು, ರಾಷ್ಟ್ರೀಯ ಅಧ್ಯಕ್ಷರ ಬದಲಾವಣೆಗೂ ಮೊದಲು, ಕಾರ್ಯಕಾರಿ ಅಧ್ಯಕ್ಷರನ್ನು ನೇಮಿಸುವ ಕುರಿತು ತೀರ್ಮಾನ ತೆಗೆದುಕೊಳ್ಳಲಾಗಿದೆ ಎಂದು ತಿಳಿದುಬಂದಿದೆ. ಸುಮಾರು ಎರಡು ಗಂಟೆ ಸಭೆ ನಡೆದಿದ್ದು, ಯಾರನ್ನು ಆಯ್ಕೆ ಮಾಡಲಿದ್ದಾರೆ ಎಂಬ ಕುರಿತು ಮಾಹಿತಿ ಲಭ್ಯವಾಗಿಲ್ಲ.

JP Nadda
JP Nadda

ಅಮಿತ್‌ ಶಾ ಅವರು ರಾಷ್ಟ್ರೀಯ ಅಧ್ಯಕ್ಷರಾಗಿದ್ದಾಗ ಜೆ.ಪಿ.ನಡ್ಡಾ ಅವರು ಕಾರ್ಯಕಾರಿ ಅಧ್ಯಕ್ಷರಾಗಿ ನೇಮಕಗೊಂಡಿದ್ದರು. ಅಮಿತ್‌ ಶಾ ಅವರ ಅಧಿಕಾರದ ಅವಧಿ ಮುಗಿದ ಬಳಿಕ ನಡ್ಡಾ ಅವರನ್ನು ಅಧ್ಯಕ್ಷರನ್ನಾಗಿ ನೇಮಿಸಲಾಯಿತು. ಈಗಲೂ ಅಷ್ಟೇ, ನಡ್ಡಾ ಅಧಿಕಾರದ ಅವಧಿ ಮುಗಿಯುವ ಮೊದಲು ಕಾರ್ಯಕಾರಿ ಅಧ್ಯಕ್ಷರನ್ನು ನೇಮಿಸಿ, ಅವರಿಗೆ ರಾಷ್ಟ್ರೀಯ ಅಧ್ಯಕ್ಷರ ಹುದ್ದೆಯ ಜವಾಬ್ದಾರಿ, ಆಡಳಿತ ಸೇರಿ ಹಲವು ಮಾರ್ಗದರ್ಶನ ನೀಡಲಾಗುತ್ತದೆ. ಬಳಿಕ ಅವರನ್ನೇ ಅಧ್ಯಕ್ಷರನ್ನಾಗಿ ನೇಮಿಸಲಾಗುತ್ತದೆ ಎಂದು ತಿಳಿದುಬಂದಿದೆ.

2019ರಲ್ಲಿ ಪಕ್ಷದ ಅಧ್ಯಕ್ಷ ಅಮಿತ್ ಶಾ ಕೇಂದ್ರ ಸಚಿವರಾದಾಗ ಜೆಪಿ ನಡ್ಡಾ ಬಿಜೆಪಿ ಕಾರ್ಯಕಾರಿ ಅಧ್ಯಕ್ಷರಾಗಿ ಜವಾಬ್ದಾರಿ ಪ್ರಾರಂಭಿಸಿದರು. ನಡ್ಡಾ 2020ರಲ್ಲಿ ಪೂರ್ಣ ಸಮಯದ ಪಕ್ಷದ ಅಧ್ಯಕ್ಷ ಸ್ಥಾನವನ್ನು ವಹಿಸಿಕೊಂಡಿದ್ದರು. 2023ರ ಜನವರಿಯಲ್ಲಿ ಜೆ.ಪಿ.ನಡ್ಡಾ ಅವರ ಮೊದಲ ಅವಧಿಯು ಮುಕ್ತಾಯಗೊಂಡಿತ್ತು. ಲೋಕಸಭೆ ಚುನಾವಣೆಯ ಹಿನ್ನೆಲೆಯಲ್ಲಿ ಅವರ ಅವಧಿಯನ್ನು ವಿಸ್ತರಣೆ ಮಾಡಲಾಗಿತ್ತು. 2024ರ ಫೆಬ್ರವರಿಯಲ್ಲೂ ಜೂನ್‌ವರೆಗೆ ಜೆ.ಪಿ.ನಡ್ಡಾ ಅವರ ಅಧಿಕಾರದ ಅವಧಿಯನ್ನು ವಿಸ್ತರಿಸಲಾಗಿತ್ತು.

ಇದನ್ನೂ ಓದಿ: CM Siddaramaiah: ಬಿಜೆಪಿ ತನ್ನ ಅವಧಿಯ ಹಗರಣಗಳನ್ನು ಮುಚ್ಚಿ ಹಾಕಿದೆ: ಸಿಎಂ ಸಿದ್ದರಾಮಯ್ಯ

Continue Reading
Advertisement
NEET UG 2024
ದೇಶ1 hour ago

NEET UG 2024: ನೀಟ್‌ ಪ್ರಶ್ನೆಪತ್ರಿಕೆಯನ್ನು ಎಗರಿಸಿದ್ದು ಯಾವ ಕೇಂದ್ರದಿಂದ? ಸಿಬಿಐ ಸ್ಫೋಟಕ ಮಾಹಿತಿ ಬಯಲು

V Sumangala
ಕರ್ನಾಟಕ2 hours ago

V Sumangala: ಶಿಕ್ಷಣ ಇಲಾಖೆಯಲ್ಲಿ 1.62 ಕೋಟಿ ರೂ. ಅಕ್ರಮ; DSERT ನಿರ್ದೇಶಕಿ ಸುಮಂಗಲಾ ಅಮಾನತು!

Sri lanka Team
ಕ್ರೀಡೆ2 hours ago

Sri lanka Team: ಟಿ20 ಸರಣಿ ಆರಂಭಕ್ಕೂ ಮುನ್ನವೇ ಲಂಕಾಗೆ ಗಾಯದ ಬರೆ; ಇಬ್ಬರು ವೇಗಿಗಳು ಔಟ್​

HD Deve Gowda
ದೇಶ3 hours ago

HD Deve Gowda: ವ್ಹೀಲ್‌ಚೇರ್‌ನಲ್ಲೇ ತೆರಳಿ ಮೋದಿಯನ್ನು ಭೇಟಿಯಾದ ದೇವೇಗೌಡ; ಇಲ್ಲಿವೆ ಫೋಟೊಗಳು

Team India
ಕ್ರೀಡೆ4 hours ago

Team India: ಲಂಕಾ ಸರಣಿಗೂ ಮುನ್ನವೇ ಟೀಮ್​ ಇಂಡಿಯಾ ಜೆರ್ಸಿಯಲ್ಲಿ ಮಹತ್ವದ ಬದಲಾವಣೆ

Atal Setu
ಪ್ರಮುಖ ಸುದ್ದಿ4 hours ago

Atal Setu: ಅಟಲ್‌ ಸೇತು ಮೇಲೆ ಕಾರಿನಲ್ಲಿ ಬಂದು, ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಟೆಕ್ಕಿ; ಏನಾಗಿತ್ತು?

Health Minister Dinesh Gundurao instructs to send a team of deputy directors to dengue hot spots
ಕರ್ನಾಟಕ4 hours ago

Dengue Fever: ಬೆಂಗಳೂರಿನಲ್ಲೇ ಶೇ.50ರಷ್ಟು ಡೆಂಗ್ಯೂ ಪ್ರಕರಣಗಳು; ಹಾಟ್‌ಸ್ಪಾಟ್‌ಗಳಿಗೆ ಅಧಿಕಾರಿಗಳ ತಂಡ

Media Connect Founder and ceo Dr Divya Rangenahalli honored at Chess Festival in bengaluru
ಬೆಂಗಳೂರು4 hours ago

Media Connect: ಚೆಸ್‌ ಹಬ್ಬದಲ್ಲಿ ಮೀಡಿಯಾ ಕನೆಕ್ಟ್‌ ಸಂಸ್ಥಾಪಕಿ ಡಾ. ದಿವ್ಯಾ ರಂಗೇನಹಳ್ಳಿಗೆ ಸನ್ಮಾನ

1200 farmers suicides in last 15 months in Karnataka says Minister Pralhad Joshi Minister Pralhad Joshi alleges
ಕರ್ನಾಟಕ4 hours ago

Pralhad Joshi: ಕರ್ನಾಟಕದಲ್ಲಿ ಕಳೆದ 15 ತಿಂಗಳಲ್ಲಿ 1200 ರೈತರ ಆತ್ಮಹತ್ಯೆ!

BJP Protest
ಕರ್ನಾಟಕ4 hours ago

BJP Protest: ದಾಖಲೆ ನೀಡದೆ ಹೇಡಿಯಂತೆ ಪಲಾಯನ; ಸಿಎಂ ರಾಜೀನಾಮೆ ಪಡೆಯಲು ರಾಜ್ಯಪಾಲರಿಗೆ ಆರ್‌.ಅಶೋಕ್‌ ಮನವಿ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Rain
ಮಳೆ8 hours ago

Karnataka Rain : ಮನೆಯೊಳಗೆ ನುಗ್ಗಿದ ಮಳೆ ನೀರು; ಕಾಲು ಜಾರಿ ಬಿದ್ದು ವೃದ್ಧೆ ಸಾವು

Actor Darshan
ಸ್ಯಾಂಡಲ್ ವುಡ್12 hours ago

Actor Darshan: ನಟ ದರ್ಶನ್ ಇರುವ ಜೈಲು ಕೋಣೆ ಹೇಗಿದೆ?

Actor Darshan
ಸಿನಿಮಾ12 hours ago

Actor Darshan : ಹೆಂಡ್ತಿ ಮಕ್ಕಳೊಟ್ಟಿಗೆ ಚೆನ್ನಾಗಿರು.. ಸಹಕೈದಿ ಜತೆಗೆ 12 ನಿಮಿಷ ಕಳೆದ ನಟ ದರ್ಶನ್‌

Actor Darshan
ಸಿನಿಮಾ13 hours ago

Actor Darshan: ಆಧ್ಯಾತ್ಮದತ್ತ ವಾಲಿದ ದರ್ಶನ್‌; ಜೈಲಲ್ಲಿ ಹೇಗಿದೆ ಗೊತ್ತಾ ನಟನ ಬದುಕು

karnataka Weather Forecast
ಮಳೆ2 days ago

Karnataka Weather : ರಭಸವಾಗಿ ಸುರಿಯುವ ಮಳೆ; 50 ಕಿ.ಮೀ ವೇಗದಲ್ಲಿ ಬೀಸುತ್ತೆ ಗಾಳಿ

karnataka weather Forecast
ಮಳೆ2 days ago

Karnataka Weather : ರಾಜ್ಯದಲ್ಲಿ ಮುಂದುವರಿದ ಮಳೆ ಅವಾಂತರ; ನಾಳೆಯೂ ಇರಲಿದೆ ಅಬ್ಬರ

Udupi News
ಉಡುಪಿ2 days ago

Udupi News : ಹಳೆ ಲಾರಿ ಚಾಸ್ಸಿಯಲ್ಲೇ ಕಿರು ಸೇತುವೆ ನಿರ್ಮಾಣ! ಬೈಂದೂರು ಶಾಸಕರ ಪರಿಕಲ್ಪನೆಗೆ ಜನರು ಫಿದಾ

murder case
ರಾಮನಗರ3 days ago

Murder Case : ರಾಮನಗರದಲ್ಲೊಂದು ಪೈಶಾಚಿಕ ಕೃತ್ಯ; ಅತ್ಯಾಚಾರವೆಸಗಿ 4 ವರ್ಷದ ಬಾಲಕಿಯನ್ನು ಕೊಂದ ದುಷ್ಟ

karnataka Rain
ಮಳೆ5 days ago

Karnataka Rain : ಭಾರಿ ಮಳೆಗೆ ಮನೆ ಗೋಡೆ ಕುಸಿತ; ಕೊಟ್ಟಿಗೆಯಲ್ಲಿದ್ದ ಜಾನುವಾರುಗಳು ಸಾವು

karnataka Rain
ಮಳೆ6 days ago

Karnataka Rain : ಹಳ್ಳ ದಾಟಲು ಹೋಗಿ ನೀರುಪಾಲಾದ ಜಾನುವಾರು; ಬಿರುಗಾಳಿಗೆ ಕಳಚಿದ ವಿಂಡ್‌ ಫ್ಯಾನ್‌

ಟ್ರೆಂಡಿಂಗ್‌