Assembly session: ಪರಿಷತ್‌ನಲ್ಲೂ ಸಿನಿ, ಸಾಂಸ್ಕೃತಿಕ ಕಾರ್ಯಕರ್ತರ ಮಸೂದೆ ಪಾಸ್; ಹೆಚ್ಚಲಿದೆ ಸಿನಿಮಾ ಟಿಕೆಟ್ ದರ, ಒಟಿಟಿ ಶುಲ್ಕ! - Vistara News

ಕರ್ನಾಟಕ

Assembly session: ಪರಿಷತ್‌ನಲ್ಲೂ ಸಿನಿ, ಸಾಂಸ್ಕೃತಿಕ ಕಾರ್ಯಕರ್ತರ ಮಸೂದೆ ಪಾಸ್; ಹೆಚ್ಚಲಿದೆ ಸಿನಿಮಾ ಟಿಕೆಟ್ ದರ, ಒಟಿಟಿ ಶುಲ್ಕ!

Assembly session: ಜುಲೈ 23ರಂದು ಮಸೂದೆಯು ವಿಧಾನಸಭೆಯಲ್ಲಿ ಸರ್ವಾನುಮತದಿಂದ ಅಂಗೀಕಾರಗೊಂಡಿತ್ತು. ಇದೀಗ ಮೇಲ್ಮನೆಯಲ್ಲೂ ಮಸೂದೆ ಅಂಗೀಕಾರಗೊಂಡಿದೆ. ಈ ಕಾಯ್ದೆ ಜಾರಿಯಾದರೆ ಸಿನಿಮಾ ಟಿಕೆಟ್‌ ಮತ್ತು ಒಟಿಟಿ ಸಬ್‌ಸ್ಕ್ರಿಪ್ಶನ್ ಶುಲ್ಕದ ಮೇಲೆ ಶೇಕಡ 1ರಿಂದ 2ರಷ್ಟು ಸೆಸ್ ರಾಜ್ಯ ಸರ್ಕಾರ ವಿಧಿಸಲಿದೆ.

VISTARANEWS.COM


on

Assembly session
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ವಿಪಕ್ಷ ಸದಸ್ಯರ ಗದ್ದಲದ ನಡುವೆ ಕರ್ನಾಟಕ ಸಿನಿ ಮತ್ತು ಸಾಂಸ್ಕೃತಿಕ ಕಾರ್ಯಕರ್ತರ (ಕ್ಷೇಮಾಭಿವೃದ್ಧಿ) ವಿಧೇಯಕʼ ವಿಧಾನ ಪರಿಷತ್‌ನಲ್ಲೂ (Assembly session) ಅಂಗೀಕಾರಗೊಂಡಿದೆ. ಜುಲೈ 23ರಂದು ಮಸೂದೆಯು ವಿಧಾನಸಭೆಯಲ್ಲಿ ಸರ್ವಾನುಮತದಿಂದ ಅಂಗೀಕಾರಗೊಂಡಿತ್ತು. ಇದೀಗ ಮೇಲ್ಮನೆಯಲ್ಲೂ ಮಸೂದೆ ಅಂಗೀಕಾರಗೊಂಡಿದೆ. ಇದರಿಂದ ಸಿನಿಮಾ ಟಿಕೆಟ್‌ ಮತ್ತು ಒಟಿಟಿ ಸಬ್‌ಸ್ಕ್ರಿಪ್ಶನ್ ಶುಲ್ಕದ ಮೇಲೆ ಶೇಕಡ 1ರಿಂದ 2ರಷ್ಟು ಸೆಸ್ ವಿಧಿಸಲು ರಾಜ್ಯ ಸರ್ಕಾರ ನಿರ್ಧರಿಸಿದ್ದು, ಸಿನಿಮಾ ಪ್ರಿಯರಿಗೂ ದರ ಏರಿಕೆ ಬಿಸಿ ತಟ್ಟಲಿದೆ.

ಕರ್ನಾಟಕ ಸಿನಿ, ಸಾಂಸ್ಕೃತಿಕ ಕಾರ್ಯಕರ್ತರ (ಕಲ್ಯಾಣ) ಮಸೂದೆ 2024ರಲ್ಲಿ ಸಿನಿಮಾ, ಸಾಂಸ್ಕೃತಿಕ ಕಲಾವಿದರ ಅನುಕೂಲಕ್ಕಾಗಿ ಸಿನಿಮಾ ಟಿಕೆಟ್‌ ಮತ್ತು ಒಟಿಟಿ ಸಬ್‌ಸ್ಕ್ರಿಪ್ಶನ್ ಶುಲ್ಕದ ಮೇಲೆ ಶೇಕಡ 1ರಿಂದ 2ರಷ್ಟು ಹೊಸ ಸೆಸ್ ವಿಧಿಸುವ ಪ್ರಸ್ತಾಪವನ್ನು ರಾಜ್ಯ ಸರ್ಕಾರ ಮುಂದಿಟ್ಟಿದೆ. ಇದರಿಂದ ಸಿನಿಮಾ, ಸಾಂಸ್ಕೃತಿಕ ಕಲಾವಿದರಿಗೆ ಇಎಸ್ಐ, ಪಿಎಫ್ ಸೇರಿದಂತೆ ಅನೇಕ ಅನುಕೂಲಗಳನ್ನು ಕಲ್ಪಿಸಲಾಗುವುದು ಎಂದು ತಿಳಿಸಿದೆ.

ರಾಜ್ಯದಲ್ಲಿನ ಸಿನಿಮಾ, ಸಾಂಸ್ಕೃತಿಕ ಕಾರ್ಯಕರ್ತರಿಗೆ ಅನುಕೂಲವಾಗುವ ರೀತಿಯಲ್ಲಿ ಕರ್ನಾಟಕ ಸಿನಿ, ಸಾಂಸ್ಕೃತಿಕ ಕಾರ್ಯಕರ್ತರ ಸಾಮಾಜಿಕ ಭದ್ರತೆ & ಕಲ್ಯಾಣ ನಿಧಿ ಎಂಬ ನಿಧಿ ಸ್ಥಾಪಿಸಲಾಗುವುದು ಎಂದು ಮಸೂದೆಯಲ್ಲಿ ತಿಳಿಸಲಾಗಿದೆ. ಇದರಿಂದ ಸಿನಿಮಾ ಟಿಕೆಟ್ ಹಾಗೂ ಒಟಿಟಿ ಚಂದಾದಾರಿಕೆ ಮೇಲೆ ಶೇಕಡ 2 ಪರ್ಸೆಂಟ್ ಮೀರದಂತೆ ಶೇಕಡ 1 ಪರ್ಸೆಂಟ್​ಗಿಂತ ಕಡಿಮೆಯಾಗದಂತೆ ಸೆಸ್‌ ವಿಧಿಸಲಿದೆ. ಈ ಸೆಸ್ ಅನ್ನು ಕರ್ನಾಟಕ ಸಿನಿ, ಸಾಂಸ್ಕೃತಿಕ ಕಾರ್ಯಕರ್ತರ ಸಾಮಾಜಿಕ ಭದ್ರತೆ & ಕಲ್ಯಾಣ ನಿಧಿಗೆ ವರ್ಗಾವಣೆ ಮಾಡಲಾಗುವುದು ಎಂದು ತಿಳಿಸಿದೆ.

ಪೆಟ್ರೋಲ್‌, ಡೀಸೆಲ್‌ ಏರಿಕೆ ಬೆನ್ನಲ್ಲೇ ಇದೀಗ ಮನರಂಜನೆ ಕ್ಷೇತ್ರದ ಮೇಲೆ ರಾಜ್ಯ ಸರ್ಕಾರ ಕಣ್ಣಿಟ್ಟು, ಸಿನಿಮಾ ಟಿಕೆಟ್ ಮತ್ತು ಒಟಿಟಿ ಸಬ್‌ಸ್ಕ್ರಿಪ್ಶನ್ ಮೇಲೆ ಸೆಸ್ ವಿಧಿಸಲು ಸರ್ಕಾರ ಮುಂದಾಗಿರುವುದಕ್ಕೆ ಭಾರಿ ವಿರೋಧ ವ್ಯಕ್ತವಾಗಿತ್ತು. ರಾಜ್ಯ ಸರ್ಕಾರದ ನಿರ್ಧಾರವನ್ನು ರಾಜ್ಯ ಬಿಜೆಪಿ ತೀವ್ರವಾಗಿ ಖಂಡಿಸಿತ್ತು. ಎಲ್ಲದರ ಮೇಲೂ ತೆರಿಗೆಯನ್ನು ಹೇರಿರುವ ಸಿದ್ದರಾಮಯ್ಯ ಸರ್ಕಾರ, ಇದೀಗ ಸಿನಿಮಾ ಪ್ರೇಕ್ಷಕರ ಮೇಲೂ ತೆರಿಗೆ ಪ್ರಹಾರ (Movie ticket price hike) ಮಾಡಲು ‘ಕೈ’ ಎತ್ತಿರುವುದು ನಾಚಿಕೆಗೇಡಿನ ಸಂಗತಿ ಎಂದು ಕಿಡಿಕಾರಿತ್ತು. ಇದೀಗ ವಿಪಕ್ಷ ನಾಯಕರ ವಿರೋಧದ ನಡುವೆಯೂ ವಿಧಾನ ಪರಿಷತ್‌ನಲ್ಲೂ ಸಿನಿ, ಸಾಂಸ್ಕೃತಿಕ ಕಾರ್ಯಕರ್ತರ (ಕಲ್ಯಾಣ) ಮಸೂದೆ ಮಸೂದೆ ಅಂಗೀಕಾರಗೊಂಡಿದೆ. ಇದರಿಂದ ಸಿನಿಮಾ ಟಿಕೆಟ್‌ ಹಾಗೂ ಒಟಿಟಿ ಶುಲ್ಕಕ್ಕೆ ಶೇ.2ರವರೆಗೆ ಸೆಸ್‌ ವಿಧಿಸುವುದರಿಂದ ಸಿನಿಮಾ ಪ್ರಿಯರಿಗೂ ದರ ಏರಿಗೆ ಬಿಸಿ ತಟ್ಟಲಿದೆ.

ವಿಧಾನಮಂಡಲ ಅನರ್ಹತಾ‌ ನಿವಾರಣಾ ಮಸೂದೆ ಸೇರಿ ಹಲವು ಬಿಲ್‌ಗಳು ಪಾಸ್

ವಿಧಾನ ಸಭೆಯಲ್ಲಿ ಅಂಗೀಕಾರಗೊಂಡಿದ್ದ ಕರ್ನಾಟಕ ವಿಧಾನಮಂಡಲ ಅನರ್ಹತಾ‌ ನಿವಾರಣಾ ಎರಡನೇ ತಿದ್ದುಪಡಿ ವಿಧೇಯಕ 2024, ವಿಧಾನ ಪರಿಷತ್‌ನಲ್ಲೂ ಗುರುವಾರ ಅಂಗೀಕಾರಗೊಂಡಿದೆ. ಅನರ್ಹತೆ ನಿವಾರಣಾ ತಿದ್ದುಪಡಿ ವಿಧೇಯಕವನ್ನು ಎಚ್.ಕೆ.ಪಾಟೀಲ್ ಮಂಡಿಸಿದರು.

ಈ ತಿದ್ದುಪಡಿ ಮೂಲಕ ಶಾಸಕರನ್ನು ಬೇರೆ ಬೇರೆ ಹುದ್ದೆಗಳಿಗೆ ನೇಮಕ ಮಾಡಲಾಗುತ್ತಿತ್ತು. ಆದರೆ ಕಾನೂನು ಮೂಲಕ ಇದಕ್ಕೆ ಅಡ್ಡಿ ಪಡಿಸಲಾಗುತ್ತಿತ್ತು. ಅವರಿಗೆ ಯಾವುದೇ ರೀತಿ ಕಾನೂನಿನ ಸಮಸ್ಯೆ ಆಗಬಾರದು, ಅವರ ಸ್ಥಾನ ಅನರ್ಹತೆ ಆಗಬಾರದು ಅಂತ ಈ ತಿದ್ದುಪಡಿ ತಂದಿದ್ದೇವೆ. ಇದು ಶಾಸಕರ ಸ್ಥಾನಮಾನಕ್ಕೆ ಅನುಕೂಲ ಆಗುತ್ತದೆ ಎಂದರು. ಬಳಿಕ ಬಿಲ್ ಅಂಗೀಕಾರಗೊಂಡಿತು.

ಲೋಕಸಭಾ ಕ್ಷೇತ್ರ ಪುನರ್ ವಿಂಗಡನೆ ನಿರ್ಣಯ

ಲೋಕಸಭಾ ಕ್ಷೇತ್ರ ಪುನರ್ ವಿಂಗಡನೆ ನಿರ್ಣಯವನ್ನು ವಿಧಾನಸೌಧದಲ್ಲಿ ಎಚ್.ಕೆ. ಪಾಟೀಲ್ ಮಂಡಿಸಿದರು. ಆದರೆ, ಚರ್ಚೆ ಮಾಡದೇ ನಿರ್ಣಯ ಪಾಸ್ ಮಾಡಬೇಡಿ, ವಿಶೇಷ ಅಧಿವೇಶನ ಕರೆಯಿರಿ ಎಂದು ವಿಪಕ್ಷ ನಾಯಕ ಒತ್ತಾಯಿಸಿದರು. ಆದರೂ ವಿಧಾನ ಸಭೆಯಲ್ಲಿ ಕ್ಷೇತ್ರ ಪುನರ್ ವಿಂಗಡನೆ ನಿರ್ಣಯ ಪಾಸ್ ಆಯಿತು.

ಇನ್ನು 2024ರ ಅನುಸೂಚಿತ ಜಾತಿ ಅನುಸೂಚಿತ ಪಂಗಡ ಹಾಗೂ ಇತರೆ ಹಿಂದುಳಿದ ವರ್ಗಗಳ ನೇಮಕಾತಿ ತಿದ್ದುಪಡಿ ವಿಧೇಯಕಕ್ಕೆ ವಿಧಾನ ಸಭೆ ಅಸ್ತು ಎಂದಿದೆ. ಗುತ್ತಿಗೆ ಆಧಾರದ ಮೇಲೆ ನೇಮಕಾತಿಗೂ ಅನುಮೋದನೆ ನೀಡಲಾಗಿದೆ. ಹಾಗೆಯೇ ರೇಣುಕಾ ಎಲ್ಲಮ್ಮ ಅಭಿವೃದ್ಧಿ ಪ್ರಾಧಿಕಾರ ತಿದ್ದುಪಡಿ ವಿಧೇಯಕ ಅಂಗೀಕಾರಗೊಂಡಿದೆ. ಕರ್ನಾಟಕ ಉದ್ಯಾನವನ ಸಂರಕ್ಷಣಾ ತಿದ್ದುಪಡಿ ವಿಧೇಯಕ ಮಂಡನೆಯಾಗಿದ್ದು, ನಂದಿಬೆಟ್ಟದಲ್ಲಿ ಎರಡು ಎಕರೆಯ ಜಮೀನನಲ್ಲಿ ಉದ್ಯಾನವನ ಅಭಿವೃದ್ಧಿ ಪಡಿಸುವ ವಿಧೇಯಕ ಅಂಗೀಕಾರವಾಯಿತು.

ಇದೇ ವೇಳೆ 2024ನೇ ಸಾಲಿನ ಕಂದಾಯ ತಿದ್ದುಪಡಿ ವಿಧೇಯಕ ಪಾಸ್ ಆಗಿದೆ. 2024ನೇ ಸಾಲಿನ ಕರ್ನಾಟಕ ವೈದ್ಯಕೀಯ ನೊಂದಾಣಿ ಹಾಗೂ ಇತರೆ ಕೆಲವು ತಿದ್ದುಪಡಿ ವಿಧೇಯಕ, ಕರ್ನಾಟಕ ಉದ್ಯಾನವನ ಸಂರಕ್ಷಣಾ ತಿದ್ದುಪಡಿ ವಿಧೇಯಕ ಮಂಡನೆ ಮಾಡಲಾಗಿದೆ.

ಇದನ್ನೂ ಓದಿ | Assembly session: ನೀಟ್ ಪರೀಕ್ಷೆ ರದ್ದು, ಒನ್ ನೇಷನ್-ಒನ್ ಎಲೆಕ್ಷನ್ ವಿರುದ್ಧ ನಿರ್ಣಯ; ಉಭಯ ಸದನಗಳಲ್ಲೂ ಅಂಗೀಕಾರ

ವಿಧಾನಮಂಡಲ ಅನರ್ಹತಾ‌ ನಿವಾರಣಾ ಎರಡನೇ ತಿದ್ದುಪಡಿ ವಿಧೇಯಕಕ್ಕೆ ಒಪ್ಪಿಗೆ

ವಿಧಾನಸಭೆಯಲ್ಲಿ ಕರ್ನಾಟಕ ವಿಧಾನಮಂಡಲ ಅನರ್ಹತಾ‌ ನಿವಾರಣಾ ಎರಡನೇ ತಿದ್ದುಪಡಿ ವಿಧೇಯಕ 2024 ಕೂಡ ಅಂಗೀಕಾರಗೊಂಡಿದೆ. ವಿಪಕ್ಷ ಶಾಸಕರ ವಿರೋಧದ ನಡುವೆಯೂ ಮಸೂದೆಗೆ ಅಂಗೀಕಾರ ಸಿಕ್ಕಿದೆ. ಸಿಎಂ ರಾಜಕೀಯ ಸಲಹೆಗಾರ, ಕಾನೂನು ಸಲಹೆಗಾರ ಹುದ್ದೆಗಳ ಅನರ್ಹತೆಗೆ ಕಡಿವಾಣ ಹಾಕುವ ವಿಧೇಯಕ ಇದಾಗಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

V Sumangala: ಶಿಕ್ಷಣ ಇಲಾಖೆಯಲ್ಲಿ 1.62 ಕೋಟಿ ರೂ. ಅಕ್ರಮ; DSERT ನಿರ್ದೇಶಕಿ ಸುಮಂಗಲಾ ಅಮಾನತು!

V Sumangala: ಇ-ವೇಸ್ಟ್‌ ವಿಲೇವಾರಿಗೆ ಸಂಬಂಧಿಸಿದಂತೆ ಅನರ್ಹ ಕಂಪನಿಗೆ ಟೆಂಡರ್‌ ನೀಡಲಾಗಿದೆ. ಕಂಪನಿಗೆ ಅನುಕೂಲ ಮಾಡಿಕೊಡುವ ದೃಷ್ಟಿಯಿಂದ ಅರ್ಹತೆ ಇಲ್ಲದ ಕಂಪನಿಗೆ ಟೆಂಡರ್‌ ನೀಡಿದ ಪರಿಣಾಮ ಸರ್ಕಾರಕ್ಕೆ 1.62 ಕೋಟಿ ರೂ. ನಷ್ಟವಾಗಿದೆ. ಇದೇ ಕಾರಣಕ್ಕಾಗಿ ಕರ್ತವ್ಯ ಲೋಪ, ಅಧಿಕಾರದ ದುರ್ಬಳಕೆ ಸೇರಿ ಹಲವು ಆರೋಪಗಳಲ್ಲಿ ಅಧಿಕಾರಿಯನ್ನು ಅಮಾನತು ಮಾಡಲಾಗಿದೆ ಎಂದು ತಿಳಿದುಬಂದಿದೆ.

VISTARANEWS.COM


on

V Sumangala
Koo

ಬೆಂಗಳೂರು: ರಾಜ್ಯದಲ್ಲಿ ಮುಡಾ ಹಗರಣ, ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣಗಳು ಭಾರಿ ಸುದ್ದಿಯಾಗುತ್ತಿರುವ ಬೆನ್ನಲ್ಲೇ ರಾಜ್ಯ ಶಿಕ್ಷಣ ಇಲಾಖೆಯಲ್ಲೂ ಅಕ್ರಮ ನಡೆದಿರುವುದು ಬಯಲಾಗಿದೆ. ರಾಜ್ಯ ಶಿಕ್ಷಣ ಇಲಾಖೆ ಅಧೀನದ ರಾಜ್ಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಇಲಾಖೆಯ (DSERT) ಇ-ತ್ಯಾಜ್ಯ ವಿಲೇವಾರಿ ಟೆಂಡರ್‌ನಲ್ಲಿ ಸುಮಾರು 1.62 ಕೋಟಿ ರೂ. ಅಕ್ರಮ ನಡೆದಿರುವುದು ಸಾಬೀತಾದ ಕಾರಣ ಡಿಎಸ್‌ಇಆರ್‌ಟಿ ನಿರ್ದೇಶಕಿ ವಿ. ಸುಮಂಗಲಾ (V Sumangala) ಅವರನ್ನು ರಾಜ್ಯ ಸರ್ಕಾರ (Karnataka Government) ಅಮಾನತುಗೊಳಿಸಿದೆ.

ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಅಧೀನ ಕಾರ್ಯದರ್ಶಿ ಮಲ್ಲಿಕಾರ್ಜುನ ರಾಮಚಂದ್ರಪ್ಪ ಅವರು ವಿ. ಸುಮಂಗಲಾ ಅವರನ್ನು ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ. ಇ-ವೇಸ್ಟ್‌ ವಿಲೇವಾರಿಗೆ ಸಂಬಂಧಿಸಿದಂತೆ ಅನರ್ಹ ಕಂಪನಿಗೆ ಟೆಂಡರ್‌ ನೀಡಲಾಗಿದೆ. ಕಂಪನಿಗೆ ಅನುಕೂಲ ಮಾಡಿಕೊಡುವ ದೃಷ್ಟಿಯಿಂದ ಅರ್ಹತೆ ಇಲ್ಲದ ಕಂಪನಿಗೆ ಟೆಂಡರ್‌ ನೀಡಿದ ಪರಿಣಾಮ ಸರ್ಕಾರಕ್ಕೆ 1.62 ಕೋಟಿ ರೂ. ನಷ್ಟವಾಗಿದೆ. ಇದೇ ಕಾರಣಕ್ಕಾಗಿ ಕರ್ತವ್ಯ ಲೋಪ, ಅಧಿಕಾರದ ದುರ್ಬಳಕೆ ಸೇರಿ ಹಲವು ಆರೋಪಗಳಲ್ಲಿ ಅಧಿಕಾರಿಯನ್ನು ಅಮಾನತು ಮಾಡಲಾಗಿದೆ ಎಂದು ತಿಳಿದುಬಂದಿದೆ.

ಏನಿದು ಪ್ರಕರಣ?

ಡಿಎಸ್‌ಇಆರ್‌ಟಿ ಸೇರಿ ಹಲವು ಕಚೇರಿಗಳಲ್ಲಿ ನಿರುಪಯುಕ್ತವಾಗಿರುವ, ಹಾಳಾದ, ವಿದ್ಯುನ್ಮಾನ ಉಪಕರಣಗಳ (ಇ-ವೇಸ್ಟ್‌ ಅಥವಾ ಇ-ತ್ಯಾಜ್ಯ) ವಿಲೇವಾರಿ ಮಾಡಲು ಟೆಂಡರ್‌ ಕರೆಯಲಾಗಿತ್ತು. ಟೆಂಡರ್‌ ಕರೆದು, ಕಾರ್ಯಾದೇಶ ನೀಡಲಾಗಿರುವ ಇ-ಪ್ರಗತಿ ರಿಸೈಕ್ಲಿಂಗ್‌ ಪ್ರೈವೇಟ್‌ ಲಿಮಿಟೆಡ್‌ ಕಂಪನಿಗೆ ಬಿಡ್‌ನಲ್ಲಿ ಅರ್ಹತೆ ಇರಲಿಲ್ಲ. ಟೆಂಡರ್‌ ನೀಡುವ ವೇಳೆ ಕಂಪನಿಯು ಹಲವು ವಾಸ್ತವಿಕ ಸಂಗತಿಗಳನ್ನು ಮುಚ್ಚಿಟ್ಟಿದೆ. ಇಷ್ಟಾದರೂ ಅದೇ ಕಂಪನಿಗೆ ಟೆಂಡರ್‌ ನೀಡಲಾಗಿದೆ ಎಂಬುದು ಸಾಬೀತಾಗಿದೆ ಎಂದು ಮೂಲಗಳು ತಿಳಿಸಿವೆ.

ಕಂಪನಿಗೆ ಬಿಡ್‌ನಲ್ಲಿ ಎಲ್‌ 1 ಎಂದು ಘೋಷಿಸಿ, ಟೆಂಡರ್‌ ನೀಡುವ ಬದಲು ಕಂಪನಿ ಒದಗಿಸುವ ದಾಖಲೆಗಳನ್ನು ಪರಿಶೀಲನೆ ನಡೆಸಬೇಕಿತ್ತು. ಲೋಪಗಳು ಇದ್ದರೆ ಟೆಂಡರ್‌ ನೀಡಬಾರದಿತ್ತು. ಆದರೆ, ಕಂಪನಿಗೆ ಲಾಭ ಮಾಡಿಕೊಡುವ ದೃಷ್ಟಿಯಿಂದಲೇ ಟೆಂಡರ್‌ ಮಂಜೂರು ಮಾಡಲಾಗಿದೆ ಎಂಬುದು ಬಹಿರಂಗವಾಗಿದೆ. ಇದರಿಂದಾಗಿ, ವಿ. ಸುಮಂಗಲಾ ಅವರನ್ನು ಅಮಾನತುಗೊಳಿಸುವ ಜತೆಗೆ ಅನುಮತಿ ಇಲ್ಲದೆ ಕೇಂದ್ರ ಸ್ಥಾನ ತೊರೆಯುವಂತಿಲ್ಲ ಎಂದು ಕೂಡ ಆದೇಶಿಸಲಾಗಿದೆ.

ಇದನ್ನೂ ಓದಿ: Karnataka Assembly Session: ವಾಲ್ಮೀಕಿ ಅಭಿವೃದ್ಧಿ ನಿಗಮ, ಮುಡಾ ಹಗರಣದ ಚರ್ಚೆಗೆ ಪ್ರತಿಪಕ್ಷಗಳ ಬಿಗಿ ಪಟ್ಟು

Continue Reading

ದೇಶ

HD Deve Gowda: ವ್ಹೀಲ್‌ಚೇರ್‌ನಲ್ಲೇ ತೆರಳಿ ಮೋದಿಯನ್ನು ಭೇಟಿಯಾದ ದೇವೇಗೌಡ; ಇಲ್ಲಿವೆ ಫೋಟೊಗಳು

HD Deve Gowda: ದೆಹಲಿಯಲ್ಲಿ ವ್ಹೀಲ್‌ ಚೇರ್‌ನಲ್ಲಿಯೇ ತೆರಳಿದ ದೇವೇಗೌಡ ಅವರು ನರೇಂದ್ರ ಮೋದಿ ಅವರನ್ನು ಭೇಟಿಯಾಗಿದ್ದಾರೆ. ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಅವರೊಂದಿಗೆ ದೇವೇಗೌಡರು ತೆರಳಿ ಮೋದಿ ಜತೆ ಮಾತುಕತೆ ನಡೆಸಿದ್ದಾರೆ. ದೇವೇಗೌಡ ಅವರನ್ನು ಭೇಟಿಯಾಗಿರುವ ಫೋಟೊಗಳನ್ನು ಪ್ರಧಾನಿ ನರೇಂದ್ರ ಮೋದಿ ಅವರೇ ಎಕ್ಸ್‌ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

VISTARANEWS.COM


on

HD Deve Gowda
Koo

ನವದೆಹಲಿ: ಕರ್ನಾಟಕದಲ್ಲಿ ಬಿಜೆಪಿ ಹಾಗೂ ಜೆಡಿಎಸ್‌ ಮೈತ್ರಿ ಮಾಡಿಕೊಳ್ಳುವ ಮೊದಲೇ ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ (HD Deve Gowda) ಅವರ ಮೇಲೆ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಗೌರವ ಹೊಂದಿದ್ದರು. ಹಲವು ಸಂದರ್ಭಗಳಲ್ಲಿ ಮೋದಿ ಅವರು ಗೌರವವನ್ನು ತೋರಿಸಿದ್ದರು. ಇನ್ನು, ಮೈತ್ರಿ ಮಾಡಿಕೊಂಡ ಬಳಿಕವಂತೂ ದೇವೇಗೌಡರು ಮೋದಿ ಅವರ ಬಗ್ಗೆ ಮೆಚ್ಚುಗೆಯ ಮಾತುಗಳನ್ನು ಆಡುತ್ತಾರೆ. ಇನ್ನು, ಇದರ ಮಧ್ಯೆಯೇ, ದೆಹಲಿಯಲ್ಲಿ ದೇವೇಗೌಡ ಹಾಗೂ ನರೇಂದ್ರ ಮೋದಿ ಅವರು ಭೇಟಿಯಾಗಿದ್ದಾರೆ.

ವ್ಹೀಲ್‌ ಚೇರ್‌ನಲ್ಲಿಯೇ ತೆರಳಿದ ದೇವೇಗೌಡ ಅವರು ನರೇಂದ್ರ ಮೋದಿ ಅವರನ್ನು ಭೇಟಿಯಾಗಿದ್ದಾರೆ. ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಅವರೊಂದಿಗೆ ದೇವೇಗೌಡರು ತೆರಳಿ ಮೋದಿ ಜತೆ ಮಾತುಕತೆ ನಡೆಸಿದ್ದಾರೆ. ದೇವೇಗೌಡ ಅವರನ್ನು ಭೇಟಿಯಾಗಿರುವ ಫೋಟೊಗಳನ್ನು ಪ್ರಧಾನಿ ನರೇಂದ್ರ ಮೋದಿ ಅವರೇ ಎಕ್ಸ್‌ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಆದಾಗ್ಯೂ, ಭೇಟಿ ವೇಳೆ ಕರ್ನಾಟಕ ಸೇರಿ ಹಲವು ವಿಷಯಗಳ ಕುರಿತು ಇಬ್ಬರೂ ಮಾತನಾಡಿದ್ದಾರೆ ಎಂದು ತಿಳಿದುಬಂದಿದೆ.

ದೇವೇಗೌಡ ಅವರನ್ನು ಭೇಟಿಯಾಗಿರುವ ಕುರಿತು ಮೋದಿ ಅವರು ಪೋಸ್ಟ್‌ ಕೂಡ ಹಂಚಿಕೊಂಡಿದ್ದಾರೆ. “7 ಲೋಕ ಕಲ್ಯಾಣ ಮಾರ್ಗದಲ್ಲಿರುವ ನಿವಾಸದಲ್ಲಿ ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ ಅವರನ್ನು ಭೇಟಿಯಾದೆ. ಅವರನ್ನು ಭೇಟಿಯಾಗುವುದೇ ಗೌರವದ ಸಂಗತಿಯಾಗಿದೆ. ಅವರು ಪ್ರಮುಖ ವಿಷಯಗಳ ಕುರಿತು ಹೊಂದಿರುವ ಜ್ಞಾನ, ದೃಷ್ಟಿಕೋನವು ಮೆಚ್ಚುವಂಥದ್ದು. ಅವರು ನೀಡಿದ ಸಲಹೆಗಳು ನನಗೆ ಹಲವು ಸಂದರ್ಭಗಳಲ್ಲಿ ಉಪಯುಕ್ತವಾಗಿವೆ” ಎಂಬುದಾಗಿ ಮೋದಿ ಪೋಸ್ಟ್‌ ಮಾಡಿದ್ದಾರೆ.

ಮೋದಿ ಅವರು ಮೂರನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸುವ ಮೊದಲು ಎಚ್‌.ಡಿ.ದೇವೇಗೌಡ ಅವರು ಪತ್ರ ಬರೆದಿದ್ದರು. ʼʼನರೇಂದ್ರ ಮೋದಿ ಅವರು ಸತತ ಮೂರನೇ ಬಾರಿಗೆ ಪ್ರಧಾನಿಯಾಗಿ ಪ್ರಮಾನ ವಚನ ಸ್ವೀಕರಿಸುತ್ತಿದ್ದಾರೆ. ಈ ಐತಿಹಾಸಿಕ ಸಂದರ್ಭದಲ್ಲಿ ಅವರಿಗೆ ನಾನು ಅಭಿನಂದನೆ ಸಲ್ಲಿಸುತ್ತಿದ್ದೇನೆ. ಅನಾರೋಗ್ಯದ ಕಾರಣದಿಂದ ನನಗೆ ಈ ಕಾರ್ಯಕ್ರಮದಲ್ಲಿ ಭಾವಹಿಸಲು ಸಾಧ್ಯವಾಗುತ್ತಿಲ್ಲ. ಆದರೆ ಖಂಡಿತವಾಗಿಯೂ ನಾನು ಟಿವಿಯಲ್ಲಿ ಲೈವ್‌ನಲ್ಲೇ ಕಾರ್ಯಕ್ರಮವನ್ನು ವೀಕ್ಷಿಸುತ್ತೇನೆ. ಕಾಂಗ್ರೆಸ್ ಏನೇ ಹೇಳಲಿ, ಭಾರತೀಯ ಪ್ರಜಾಪ್ರಭುತ್ವವು ದೃಢವಾಗಿದೆʼʼ ಎಂದು ದೇವೇಗೌಡ ಅವರು ಬರೆದುಕೊಂಡಿದ್ದರು.

ಇದನ್ನೂ ಓದಿ: HD Kumaraswamy: ನನ್ನ ಮತ್ತು ದೇವೇಗೌಡರ ಸರ್ಕಾರ ಕೆಡವಿದ್ದು ಯಾರು ಅಂತ ಹೇಳಿ; ಡಿಕೆಶಿ ವಿರುದ್ಧ ಎಚ್‌ಡಿಕೆ ಕಿಡಿ

Continue Reading

ಕರ್ನಾಟಕ

Dengue Fever: ಬೆಂಗಳೂರಿನಲ್ಲೇ ಶೇ.50ರಷ್ಟು ಡೆಂಗ್ಯೂ ಪ್ರಕರಣಗಳು; ಹಾಟ್‌ಸ್ಪಾಟ್‌ಗಳಿಗೆ ಅಧಿಕಾರಿಗಳ ತಂಡ

Dengue Fever: ಆರೋಗ್ಯ ಇಲಾಖೆಯಿಂದ ಜಿಲ್ಲಾಡಳಿತಕ್ಕೆ ಎಲ್ಲ ರೀತಿಯ ಸಹಕಾರ ಒದಗಿಸಲಾಗುತ್ತಿದೆ.‌ ಆದರೆ ಡೆಂಗ್ಯೂ ಪ್ರಕರಣಗಳ ಸಂಖ್ಯೆ ಕಡಿಮೆ ಆಗುತ್ತಿಲ್ಲ. ಇಷ್ಟರೊಳಗೆ ಡೆಂಗ್ಯೂ ಪಾಸಿಟಿವ್ ಪ್ರಕರಣಗಳಲ್ಲಿ ಇಳಿಮುಖ ಕಂಡುಬರಬೇಕಿತ್ತು. ಪ್ರಕರಣಗಳು ವರದಿಯಾಗುತ್ತಿರುವುದನ್ನು ನೋಡಿದರೆ ಇನ್ನೂ ಎರಡು ತಿಂಗಳು ನಾವು ಅಲರ್ಟ್ ಆಗಿರಬೇಕು. ಹೀಗಾಗಿ ಜಿಲ್ಲಾಡಳಿತ ಆರೋಗ್ಯ ಇಲಾಖೆ ಅಧಿಕಾರಿಗಳ ಜತೆ ಸಹಕಾರ ನೀಡಿ ಡೆಂಗ್ಯೂ ಹತೋಟಿಗೆ ತರುವತ್ತ ಹೆಚ್ಚಿನ ಗಮನ ಹರಿಸಬೇಕು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.

VISTARANEWS.COM


on

Health Minister Dinesh Gundurao instructs to send a team of deputy directors to dengue hot spots
Koo

ಬೆಂಗಳೂರು: ರಾಜ್ಯದಲ್ಲಿ ಹೆಚ್ಚು ಡೆಂಗ್ಯೂ ಪ್ರಕರಣಗಳು (Dengue Fever) ಕಂಡುಬಂದಿರುವ 10 ಜಿಲ್ಲೆಗಳಿಗೆ ಆರೋಗ್ಯ ಇಲಾಖೆ ಉಪನಿರ್ದೇಶಕರು ತೆರಳಿ ಭೇಟಿ ನೀಡಿ, ಮೇಲ್ವಿಚಾರಣೆ ನಡೆಸುವಂತೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸೂಚನೆ ನೀಡಿದ್ದಾರೆ.

ಬೆಂಗಳೂರಿನ ವಿಕಾಸಸೌಧದಲ್ಲಿ ಇಂದು ವಿಡಿಯೊ ಕಾನ್ಫರೆನ್ಸ್ ಮೂಲಕ ರಾಜ್ಯದ ಜಿಲ್ಲಾಧಿಕಾರಿಗಳು ಹಾಗೂ ಸಿಇಒ ಗಳ ಜತೆ ಸಭೆ ನಡೆಸಿದ ಸಚಿವರು, ಮಳೆ, ಪ್ರವಾಹದ ನಡುವೆ ಡೆಂಗ್ಯೂ ನಿಯಂತ್ರಣದ ಬಗ್ಗೆ ಗಮನ ಕಡಿಮೆಯಾಗಬಾರದು ಎಂದು ಸೂಚನೆ ನೀಡಿದರು.

ಆರೋಗ್ಯ ಇಲಾಖೆಯಿಂದ ಜಿಲ್ಲಾಡಳಿತಕ್ಕೆ ಎಲ್ಲ ರೀತಿಯ ಸಹಕಾರ ಒದಗಿಸಲಾಗುತ್ತಿದೆ.‌ ಆದರೆ ಡೆಂಗ್ಯೂ ಪ್ರಕರಣಗಳ ಸಂಖ್ಯೆ ಕಡಿಮೆ ಆಗುತ್ತಿಲ್ಲ. ಇಷ್ಟರೊಳಗೆ ಡೆಂಗ್ಯೂ ಪಾಸಿಟಿವ್ ಪ್ರಕರಣಗಳಲ್ಲಿ ಇಳಿಮುಖ ಕಂಡುಬರಬೇಕಿತ್ತು. ಪ್ರಕರಣಗಳು ವರದಿಯಾಗುತ್ತಿರುವುದನ್ನು ನೋಡಿದರೆ ಇನ್ನೂ ಎರಡು ತಿಂಗಳು ನಾವು ಅಲರ್ಟ್ ಆಗಿರಬೇಕು. ಹೀಗಾಗಿ ಜಿಲ್ಲಾಡಳಿತ ಆರೋಗ್ಯ ಇಲಾಖೆ ಅಧಿಕಾರಿಗಳ ಜತೆ ಸಹಕಾರ ನೀಡಿ ಡೆಂಗ್ಯೂ ಹತೋಟಿಗೆ ತರುವತ್ತ ಹೆಚ್ಚಿನ ಗಮನ ಹರಿಸಬೇಕು ಎಂದರು.

ಇದನ್ನೂ ಓದಿ: Fortis Hospital: ಯಕೃತ್‌ ಕ್ಯಾನ್ಸರ್‌ನಿಂದ ಬಳಲುತ್ತಿದ್ದ ತಾಯಿಗೆ ಮಗನಿಂದ ಲಿವರ್‌ ದಾನ!

ಪ್ರತಿ ಶುಕ್ರವಾರ ಈಡಿಸ್ ಸೊಳ್ಳೆಯ ಲಾರ್ವಾ ನಾಶಪಡಿಸುವ ಕಾರ್ಯಕ್ರಮ ಅಭಿಯಾನದ ರೀತಿಯಲ್ಲಿ ನಡೆಯಬೇಕು. ಜನರಲ್ಲಿ ಡೆಂಗ್ಯೂ ಬಗ್ಗೆ ಸಾಕಷ್ಟು ಜಾಗೃತಿ ಮೂಡಿಸಲಾಗಿದೆ. ಆದರೆ ಡೆಂಗ್ಯೂ ಹತೋಟಿಗೆ ತರುವ ಕ್ರಮಗಳು ಸ್ಥಳದಲ್ಲಿ ಅನುಷ್ಠಾನಗೊಳ್ಳುವುದು ಅತಿ ಮುಖ್ಯವಾಗಿದೆ ಎಂದು ಸಭೆಯಲ್ಲಿ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.

ವಿಶೇಷವಾಗಿ ಆರೋಗ್ಯ ಇಲಾಖೆಯ ಉಪ ನಿರ್ದೇಶಕರ ಮಟ್ಟದ ಅಧಿಕಾರಿಗಳು ಡೆಂಗ್ಯೂ ಹೆಚ್ಚಿರುವ ಹಾಟ್‌ಸ್ಪಾಟ್‌ಗಳಿಗೆ ಭೇಟಿ ನೀಟಿ ಮೇಲ್ವಿಚಾರಣೆ ನಡೆಸುವಂತೆ ಸಚಿವರು ಸೂಚನೆ ನೀಡಿದರು. ಕೇವಲ ಭೇಟಿ ಕೊಡುವುದಲ್ಲ. ಎರಡು ಮೂರು ದಿನಗಳವರೆಗೆ ಸ್ಥಳದಲ್ಲೇ ಇದ್ದು ಮಾನಿಟರ್ ಮಾಡಬೇಕು. ಸ್ಥಳದಲ್ಲಿ ಡೆಂಗ್ಯೂ ನಿಯಂತ್ರಣ ಕ್ರಮಗಳು ಅನುಷ್ಠಾನ ಆಗುತ್ತಿದೆಯೋ ಇಲ್ಲವೋ ಎಂಬುದನ್ನು ಪರಿಶೀಲಸಿ, ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಸಚಿವರು ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.‌

ಬೆಂಗಳೂರಿನಲ್ಲಿ 37 ಡೆಂಗ್ಯೂ ಹಾಟ್‌ಸ್ಪಾಟ್‌

ಅಲ್ಲದೇ ಬೆಂಗಳೂರಿನಲ್ಲಿ 37 ಡೆಂಗ್ಯೂ ಹಾಟ್‌ಸ್ಪಾಟ್‌ಗಳನ್ನು ಗುರುತಿಸಲಾಗಿದ್ದು, ಬಿಬಿಎಂಪಿ ಅಧಿಕಾರಿಗಳ ಸಹಯೋಗದೊಂದಿಗೆ ಹೆಚ್ಚಿನ ನಿಗಾ ವಹಿಸುವಂತೆ ಸಚಿವ ದಿನೇಶ್ ಗುಂಡೂರಾವ್, ಇದೇ ವೇಳೆ ಅಧಿಕಾರಿಗಳಿಗೆ ತಿಳಿಸಿದರು.

ಇದನ್ನೂ ಓದಿ: Samsung Galaxy: ಎಐ ಆಧರಿತ ಗ್ಯಾಲಕ್ಸಿ ಝಡ್ ಫೋಲ್ಡ್ 6, ಝಡ್ ಫ್ಲಿಪ್6 ಹೇಗಿದೆ? ದರ ಎಷ್ಟು?

ಡೆಂಗ್ಯೂ ಪ್ರಕರಣಗಳಲ್ಲಿ ಶೇ.50ರಷ್ಟು ಪ್ರಕರಣಗಳು ಬೆಂಗಳೂರಿನಲ್ಲಿಯೇ ಕಂಡುಬರುತ್ತಿವೆ. ರಾಜ್ಯದ ಬೇರೆ ಜಿಲ್ಲೆಗಳಲ್ಲಿ ಸತತ ಮಳೆ ಸುರಿಯುತ್ತಿರುವುದರಿಂದ ಡೆಂಗ್ಯೂ ಕಡಿಮೆಯಾಗಬಹುದು. ಆದರೆ ಬೆಂಗಳೂರಿನಲ್ಲಿ ಇದು ಹೆಚ್ಚಾಗಬಹುದು. ಹೀಗಾಗಿ ಬೆಂಗಳೂರಿನಲ್ಲಿ ಡೆಂಗ್ಯೂ ಹತೋಟಿಗೆ ಒತ್ತು ನೀಡಬೇಕಿದೆ. ಈ ನಿಟ್ಟಿನಲ್ಲಿ ಬಿಬಿಎಂಪಿ ಅಧಿಕಾರಿಗಳ ಸಭೆ ಕರೆಯುವಂತೆ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು. ಡೆಂಗ್ಯೂ ಡೆತ್ ಆಡಿಟ್ ಮಾಡುವಂತೆ ಜಿಲ್ಲಾಧಿಕಾರಿಗಳಿಗೆ ಖಡಕ್ ಆಗಿ ಸೂಚನೆ ನೀಡಿರುವ ಆರೋಗ್ಯ ಸಚಿವರು, ಯಾವುದನ್ನು ಮುಚ್ಚಿಡುವುದು ಬೇಡ. ಡೆಂಗ್ಯೂ ಡೆತ್‌ಗಳಾಗಿದ್ದರೆ ಅದನ್ನು ಡೆಂಗ್ಯೂ ಡೆತ್ ಎಂದೇ ವರದಿ ಸಲ್ಲಿಸುವಂತೆ ಸಚಿವ ದಿನೇಶ್ ಗುಂಡೂರಾವ್‌ ಸೂಚಿಸಿದರು.

Continue Reading

ಬೆಂಗಳೂರು

Media Connect: ಚೆಸ್‌ ಹಬ್ಬದಲ್ಲಿ ಮೀಡಿಯಾ ಕನೆಕ್ಟ್‌ ಸಂಸ್ಥಾಪಕಿ ಡಾ. ದಿವ್ಯಾ ರಂಗೇನಹಳ್ಳಿಗೆ ಸನ್ಮಾನ

Media Connect: ಕರ್ನಾಟಕ ವಿಧಾನಮಂಡಲ ಮತ್ತು ಅಖಿಲ ಭಾರತ ಚೆಸ್‌ ಫೆಡರೇಷನ್‌ ಸಹಯೋಗದಲ್ಲಿ ಶನಿವಾರ ಆಯೋಜಿಸಿದ್ದ ʼವಿಧಾನಸೌಧ ಓಪನ್‌ ರ‍್ಯಾಪಿಡ್‌ ಚೆಸ್‌ ಟೂರ್ನ್‌ಮೆಂಟ್‌ – 2024ʼ ಕಾರ್ಯಕ್ರಮದಲ್ಲಿ ಮೀಡಿಯಾ ಕನೆಕ್ಟ್‌ ಸಂಸ್ಥಾಪಕಿ ಹಾಗೂ ಸಿಇಒ ಡಾ. ದಿವ್ಯಾ ರಂಗೇನಹಳ್ಳಿ ಅವರನ್ನು ಗೌರವಿಸಿ, ಸನ್ಮಾನಿಸಲಾಯಿತು.

VISTARANEWS.COM


on

Media Connect Founder and ceo Dr Divya Rangenahalli honored at Chess Festival in bengaluru
Koo

ಬೆಂಗಳೂರು: ಕರ್ನಾಟಕ ವಿಧಾನಮಂಡಲ ಮತ್ತು ಅಖಿಲ ಭಾರತ ಚೆಸ್‌ ಫೆಡರೇಷನ್‌ ಸಹಯೋಗದಲ್ಲಿ ಶನಿವಾರ ಆಯೋಜಿಸಿದ್ದ ʼವಿಧಾನಸೌಧ ಓಪನ್‌ ರ‍್ಯಾಪಿಡ್‌ ಚೆಸ್‌ ಟೂರ್ನ್‌ಮೆಂಟ್‌ – 2024ʼ ಕಾರ್ಯಕ್ರಮದಲ್ಲಿ ಮೀಡಿಯಾ ಕನೆಕ್ಟ್‌ (Media Connect) ಸಂಸ್ಥಾಪಕಿ ಹಾಗೂ ಸಿಇಒ ಡಾ. ದಿವ್ಯಾ ರಂಗೇನಹಳ್ಳಿ ಅವರನ್ನು ಗೌರವಿಸಿ, ಸನ್ಮಾನಿಸಲಾಯಿತು.

ಇದನ್ನೂ ಓದಿ: Fortis Hospital: ಯಕೃತ್‌ ಕ್ಯಾನ್ಸರ್‌ನಿಂದ ಬಳಲುತ್ತಿದ್ದ ತಾಯಿಗೆ ಮಗನಿಂದ ಲಿವರ್‌ ದಾನ!

ಅಂತಾರಾಷ್ಟ್ರೀಯ ಚೆಸ್‌ ದಿನಾಚರಣೆ ಹಾಗೂ ಫಿಡೆ ಶತಮಾನೋತ್ಸವದ ಅಂಗವಾಗಿ ನಗರದ ವಿಧಾನಸೌಧ ಬ್ಯಾಂಕ್ವೆಟ್‌ ಹಾಲ್‌ನಲ್ಲಿ ಸಚಿವರು, ವಿಧಾನಸಭಾ ಸದಸ್ಯರು, ವಿಧಾನಪರಿಷತ್ತಿನ ಸದಸ್ಯರು ಹಾಗೂ ಅಧಿಕಾರಿ/ಸಿಬ್ಬಂದಿಗಳಿಗಾಗಿ ವಿಧಾನಸೌಧ ಚೆಸ್‌ ಹಬ್ಬವನ್ನು ಏರ್ಪಡಿಸಲಾಗಿತ್ತು.

ಇದನ್ನೂ ಓದಿ: Samsung Galaxy: ಎಐ ಆಧರಿತ ಗ್ಯಾಲಕ್ಸಿ ಝಡ್ ಫೋಲ್ಡ್ 6, ಝಡ್ ಫ್ಲಿಪ್6 ಹೇಗಿದೆ? ದರ ಎಷ್ಟು?

ಕಾರ್ಯಕ್ರಮವನ್ನು ಕರ್ನಾಟಕ ವಿಧಾನಸಭೆ ಸಭಾಧ್ಯಕ್ಷ ಯು.ಟಿ. ಖಾದರ್‌ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಚೆಸ್‌ ಅಸೋಸಿಯೇಷನ್‌ನ ಪ್ರಧಾನ ಕಾರ್ಯದರ್ಶಿ ಅರವಿಂದ್‌ ಶಾಸ್ತ್ರಿ, ಜೇವರ್ಗಿ ಶಾಸಕ ಅಜಯ್‌ ಸಿಂಗ್‌ ಹಾಗೂ ಇತರ ಗಣ್ಯರು ಉಪಸ್ಥಿತರಿದ್ದರು.

Continue Reading
Advertisement
NEET UG 2024
ದೇಶ4 hours ago

NEET UG 2024: ನೀಟ್‌ ಪ್ರಶ್ನೆಪತ್ರಿಕೆಯನ್ನು ಎಗರಿಸಿದ್ದು ಯಾವ ಕೇಂದ್ರದಿಂದ? ಸಿಬಿಐ ಸ್ಫೋಟಕ ಮಾಹಿತಿ ಬಯಲು

V Sumangala
ಕರ್ನಾಟಕ5 hours ago

V Sumangala: ಶಿಕ್ಷಣ ಇಲಾಖೆಯಲ್ಲಿ 1.62 ಕೋಟಿ ರೂ. ಅಕ್ರಮ; DSERT ನಿರ್ದೇಶಕಿ ಸುಮಂಗಲಾ ಅಮಾನತು!

Sri lanka Team
ಕ್ರೀಡೆ5 hours ago

Sri lanka Team: ಟಿ20 ಸರಣಿ ಆರಂಭಕ್ಕೂ ಮುನ್ನವೇ ಲಂಕಾಗೆ ಗಾಯದ ಬರೆ; ಇಬ್ಬರು ವೇಗಿಗಳು ಔಟ್​

HD Deve Gowda
ದೇಶ6 hours ago

HD Deve Gowda: ವ್ಹೀಲ್‌ಚೇರ್‌ನಲ್ಲೇ ತೆರಳಿ ಮೋದಿಯನ್ನು ಭೇಟಿಯಾದ ದೇವೇಗೌಡ; ಇಲ್ಲಿವೆ ಫೋಟೊಗಳು

Team India
ಕ್ರೀಡೆ6 hours ago

Team India: ಲಂಕಾ ಸರಣಿಗೂ ಮುನ್ನವೇ ಟೀಮ್​ ಇಂಡಿಯಾ ಜೆರ್ಸಿಯಲ್ಲಿ ಮಹತ್ವದ ಬದಲಾವಣೆ

Atal Setu
ಪ್ರಮುಖ ಸುದ್ದಿ6 hours ago

Atal Setu: ಅಟಲ್‌ ಸೇತು ಮೇಲೆ ಕಾರಿನಲ್ಲಿ ಬಂದು, ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಟೆಕ್ಕಿ; ಏನಾಗಿತ್ತು?

Health Minister Dinesh Gundurao instructs to send a team of deputy directors to dengue hot spots
ಕರ್ನಾಟಕ7 hours ago

Dengue Fever: ಬೆಂಗಳೂರಿನಲ್ಲೇ ಶೇ.50ರಷ್ಟು ಡೆಂಗ್ಯೂ ಪ್ರಕರಣಗಳು; ಹಾಟ್‌ಸ್ಪಾಟ್‌ಗಳಿಗೆ ಅಧಿಕಾರಿಗಳ ತಂಡ

Media Connect Founder and ceo Dr Divya Rangenahalli honored at Chess Festival in bengaluru
ಬೆಂಗಳೂರು7 hours ago

Media Connect: ಚೆಸ್‌ ಹಬ್ಬದಲ್ಲಿ ಮೀಡಿಯಾ ಕನೆಕ್ಟ್‌ ಸಂಸ್ಥಾಪಕಿ ಡಾ. ದಿವ್ಯಾ ರಂಗೇನಹಳ್ಳಿಗೆ ಸನ್ಮಾನ

1200 farmers suicides in last 15 months in Karnataka says Minister Pralhad Joshi Minister Pralhad Joshi alleges
ಕರ್ನಾಟಕ7 hours ago

Pralhad Joshi: ಕರ್ನಾಟಕದಲ್ಲಿ ಕಳೆದ 15 ತಿಂಗಳಲ್ಲಿ 1200 ರೈತರ ಆತ್ಮಹತ್ಯೆ!

BJP Protest
ಕರ್ನಾಟಕ7 hours ago

BJP Protest: ದಾಖಲೆ ನೀಡದೆ ಹೇಡಿಯಂತೆ ಪಲಾಯನ; ಸಿಎಂ ರಾಜೀನಾಮೆ ಪಡೆಯಲು ರಾಜ್ಯಪಾಲರಿಗೆ ಆರ್‌.ಅಶೋಕ್‌ ಮನವಿ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Rain
ಮಳೆ11 hours ago

Karnataka Rain : ಮನೆಯೊಳಗೆ ನುಗ್ಗಿದ ಮಳೆ ನೀರು; ಕಾಲು ಜಾರಿ ಬಿದ್ದು ವೃದ್ಧೆ ಸಾವು

Actor Darshan
ಸ್ಯಾಂಡಲ್ ವುಡ್14 hours ago

Actor Darshan: ನಟ ದರ್ಶನ್ ಇರುವ ಜೈಲು ಕೋಣೆ ಹೇಗಿದೆ?

Actor Darshan
ಸಿನಿಮಾ15 hours ago

Actor Darshan : ಹೆಂಡ್ತಿ ಮಕ್ಕಳೊಟ್ಟಿಗೆ ಚೆನ್ನಾಗಿರು.. ಸಹಕೈದಿ ಜತೆಗೆ 12 ನಿಮಿಷ ಕಳೆದ ನಟ ದರ್ಶನ್‌

Actor Darshan
ಸಿನಿಮಾ16 hours ago

Actor Darshan: ಆಧ್ಯಾತ್ಮದತ್ತ ವಾಲಿದ ದರ್ಶನ್‌; ಜೈಲಲ್ಲಿ ಹೇಗಿದೆ ಗೊತ್ತಾ ನಟನ ಬದುಕು

karnataka Weather Forecast
ಮಳೆ2 days ago

Karnataka Weather : ರಭಸವಾಗಿ ಸುರಿಯುವ ಮಳೆ; 50 ಕಿ.ಮೀ ವೇಗದಲ್ಲಿ ಬೀಸುತ್ತೆ ಗಾಳಿ

karnataka weather Forecast
ಮಳೆ2 days ago

Karnataka Weather : ರಾಜ್ಯದಲ್ಲಿ ಮುಂದುವರಿದ ಮಳೆ ಅವಾಂತರ; ನಾಳೆಯೂ ಇರಲಿದೆ ಅಬ್ಬರ

Udupi News
ಉಡುಪಿ2 days ago

Udupi News : ಹಳೆ ಲಾರಿ ಚಾಸ್ಸಿಯಲ್ಲೇ ಕಿರು ಸೇತುವೆ ನಿರ್ಮಾಣ! ಬೈಂದೂರು ಶಾಸಕರ ಪರಿಕಲ್ಪನೆಗೆ ಜನರು ಫಿದಾ

murder case
ರಾಮನಗರ3 days ago

Murder Case : ರಾಮನಗರದಲ್ಲೊಂದು ಪೈಶಾಚಿಕ ಕೃತ್ಯ; ಅತ್ಯಾಚಾರವೆಸಗಿ 4 ವರ್ಷದ ಬಾಲಕಿಯನ್ನು ಕೊಂದ ದುಷ್ಟ

karnataka Rain
ಮಳೆ6 days ago

Karnataka Rain : ಭಾರಿ ಮಳೆಗೆ ಮನೆ ಗೋಡೆ ಕುಸಿತ; ಕೊಟ್ಟಿಗೆಯಲ್ಲಿದ್ದ ಜಾನುವಾರುಗಳು ಸಾವು

karnataka Rain
ಮಳೆ6 days ago

Karnataka Rain : ಹಳ್ಳ ದಾಟಲು ಹೋಗಿ ನೀರುಪಾಲಾದ ಜಾನುವಾರು; ಬಿರುಗಾಳಿಗೆ ಕಳಚಿದ ವಿಂಡ್‌ ಫ್ಯಾನ್‌

ಟ್ರೆಂಡಿಂಗ್‌