Viral Video: ತಲೆಯಿಂದ ಡಿಚ್ಚಿ ಹೊಡೆದು ಬೋಟ್‌ಅನ್ನೇ ಪಲ್ಟಿ ಮಾಡಿದ ತಿಮಿಂಗಿಲ! ಮೈನವಿರೇಳಿಸುವ ವಿಡಿಯೊ! - Vistara News

Latest

Viral Video: ತಲೆಯಿಂದ ಡಿಚ್ಚಿ ಹೊಡೆದು ಬೋಟ್‌ಅನ್ನೇ ಪಲ್ಟಿ ಮಾಡಿದ ತಿಮಿಂಗಿಲ! ಮೈನವಿರೇಳಿಸುವ ವಿಡಿಯೊ!

Viral Video: ಇಂಗ್ಲೆಂಡ್‌ನ ಪೋರ್ಟ್ಸ್ ಮೌತ್ ಕರಾವಳಿಯಿಂದ ಅರ್ಧ ಮೈಲಿ ದೂರದಲ್ಲಿ ಲಂಗರು ಹಾಕಿದ್ದ ಬೋಟ್‌ನ ಮೇಲ್ಭಾಗದಿಂದ 30 ಅಡಿ ಉದ್ದದ ತಿಮಿಂಗಿಲ ಇದ್ದಕ್ಕಿದ್ದಂತೆ ಮೇಲಕ್ಕೆ ನೆಗೆದಿದೆ. ಅದರ ತಲೆ 23 ಅಡಿ ಉದ್ದದ ಬೋಟ್‌ಗೆ ಡಿಕ್ಕಿ ಹೊಡೆದಿದೆ. ಆಗ ಬೋಟ್‌ ಪಲ್ಟಿಯಾಗಿದೆ. ಈ ಸಮಯದಲ್ಲಿ ಬೋಟ್‌ನಲ್ಲಿದ್ದ ಇಬ್ಬರೂ ಅಪಾಯದಿಂದ ಪಾರಾಗಿದ್ದಾರೆ. ಈ ವಿಡಿಯೊ ಈಗ ವೈರಲ್‌ ಆಗಿದೆ. ಬೋಟ್‌ ಪಲ್ಟಿಯಾಗುವ ದೃಶ್ಯ ಭಯ ಹುಟ್ಟಿಸುತ್ತದೆ.

VISTARANEWS.COM


on

Viral Video
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ


ಇಂಗ್ಲೆಂಡ್‌ನ ಪೋರ್ಟ್ಸ್ ಮೌತ್ ಬಂದರಿನಲ್ಲಿ ಮಂಗಳವಾರ ಬೆಳಗ್ಗೆ ತಿಮಿಂಗಿಲವೊಂದು ಬೋಟೊಂದಕ್ಕೆ ಹಾರಿ ಅದನ್ನು ಪಲ್ಟಿ ಮಾಡಿದೆ. ಈ ಭಯಾನಕ ಘಟನೆಯನ್ನು ಹತ್ತಿರದಲ್ಲಿದ್ದ ಬೋಟ್‌ನವರು ವಿಡಿಯೊ ಮಾಡಿದ್ದಾರೆ. ಇದು ಸೋಶಿಯಲ್ ಮೀಡಿಯಾದಲ್ಲಿ ವೈರಲ್ (Viral Video) ಆಗಿದೆ.

ವಿಡಿಯೊದಲ್ಲಿ ಪೋರ್ಟ್ಸ್ ಮೌತ್ ಕರಾವಳಿಯಿಂದ ಅರ್ಧ ಮೈಲಿ ದೂರದಲ್ಲಿ ಲಂಗರು ಹಾಕಿದ್ದ ಬೋಟ್‌ನ ಮೇಲ್ಭಾಗದಿಂದ 30 ಅಡಿ ಉದ್ದದ ತಿಮಿಂಗಿಲ ನೆಗೆದಿದೆ. ಅದರ ತಲೆ 23 ಅಡಿ ಉದ್ದದ ಬೋಟ್‌ಗೆ ಡಿಕ್ಕಿ ಹೊಡೆದು ಅದನ್ನು ಪಲ್ಟಿಯಾಗಿಸಿದೆ. ಕಾಲಿನ್ ಯಾಗರ್ (16) ಮತ್ತು ಅವರ ಸಹೋದರ ವ್ಯಾಟ್ (19) ಎಂಬುವರು ಬಂದರಿನಲ್ಲಿ ಮೀನುಗಾರಿಕೆ ನಡೆಸುತ್ತಿದ್ದಾಗ ಈ ಆಘಾತಕಾರಿ ಘಟನೆ ನಡೆದಿದೆ. ತಕ್ಷಣ ಬೇರೆ ಬೋಟ್‌ನವರು ಅವರಿಗೆ ಸಹಾಯ ಮಾಡಲು ಧಾವಿಸಿದರು. ಒಬ್ಬ ವ್ಯಕ್ತಿ ಪಲ್ಟಿಯಾದ ಬೋಟ್‌ನಿಂದ ಜಿಗಿದರೆ, ಇನ್ನೊಬ್ಬನು ಜಿಗಿಯಲು ಸಾಧ್ಯವಾಗದೆ ಅಲ್ಲೇ ಈಜಿ ಪಾರಾಗಿದ್ದಾನೆ ಎಂಬುದಾಗಿ ತಿಳಿದುಬಂದಿದೆ. ಘಟನೆಯಲ್ಲಿ ಇಬ್ಬರಿಗೂ ಯಾವುದೇ ಹೆಚ್ಚಿನ ಗಾಯವಾಗಿಲ್ಲ. ತಿಮಿಂಗಿಲಕ್ಕೆ ಯಾವುದೇ ಹಾನಿಯಾಗಿಲ್ಲ ಎನ್ನಲಾಗಿದೆ. ಎಕ್ಸ್ ಬಳಕೆದಾರ ರಿಯಾನ್ ವಿಟ್ನಿ ಎಂಬುವರು ಈ ವಿಡಿಯೊವನ್ನು ಹಂಚಿಕೊಂಡಿದ್ದಾರೆ.‌

ಸಮುದ್ರ ಸಂಶೋಧಕರ ಪ್ರಕಾರ ಈ ಬೃಹತ್ ತಿಮಿಂಗಿಲವು ಉದ್ದೇಶಪೂರ್ವಕವಾಗಿ ಹೀಗೆ ದಾಳಿ ಮಾಡಿಲ್ಲ. ಬದಲಾಗಿ ಸಣ್ಣ ಮೀನುಗಳನ್ನು ಕಂಡಾಗ ಅವು ದೊಡ್ಡ ಬಾಯಿ ತೆರೆದು ಅವುಗಳನ್ನು ನುಂಗಲು ಮೇಲಕ್ಕೆ ಹಾರುತ್ತವೆ. ಹಾಗಾಗಿ ಈ ಬೋಟ್‌ ಅಂತಹ ಸ್ಥಳದಲ್ಲಿದ್ದರಿಂದ ಅವು ಬೋಟನ್ನು ನೋಡದೆ ಮೇಲಕ್ಕೆ ಹಾರಿದ್ದರಿಂದ ಈ ಘಟನೆ ಸಂಭವಿಸಿರಬಹುದು. “ನಾನು 30 ವರ್ಷಗಳಿಂದ ತಿಮಿಂಗಿಲಗಳನ್ನು ನೋಡುತ್ತಿದ್ದೇನೆ ಮತ್ತು ತಿಮಿಂಗಿಲಗಳ ಬಗ್ಗೆ ಸಂಶೋಧನೆ ನಡೆಸುತ್ತಿದ್ದೇನೆ. ಹಂಪ್ಬ್ಯಾಕ್ ತಿಮಿಂಗಿಲವು ಉದ್ದೇಶಪೂರ್ವಕವಾಗಿ ಹಡಗಿಗೆ ಅಥವಾ ದೋಣಿಗಳಿಗೆ ಡಿಕ್ಕಿ ಹೊಡೆಯುವುದನ್ನು ನಾನು ಎಂದೂ ನೋಡಿಲ್ಲ” ಎಂದು ಸಂಶೋಧಕರೊಬ್ಬರು ತಿಳಿಸಿದ್ದಾರೆ.

ಇದನ್ನೂ ಓದಿ: ಯುವಕನಿಗೆ ಜಾಡಿಸಿ ಒದ್ದ ಜಿಮ್‌ ಮಾಲೀಕನನ್ನು ಮತ್ತೊಬ್ಬ ಯುವಕ ಇರಿದು ಕೊಂದ; ವಿಡಿಯೊ ಇದೆ

ಇಲ್ಲಿ ವಿಶೇಷವಾಗಿ ಜೂನ್ ಮತ್ತು ಆಗಸ್ಟ್ ನಡುವೆ ತಿಮಿಂಗಿಲಗಳು ಸಾಮಾನ್ಯವಾಗಿ ಹೆಚ್ಚಾಗಿ ಕಂಡು ಬರುತ್ತವೆ. ಆದರೆ ತಿಮಿಂಗಿಲ ಹಡಗಿನ ಮೇಲೆ ದಾಳಿ ಮಾಡಿದ್ದು ಮಾತ್ರ ಇದೇ ಮೊದಲ ಘಟನೆ ಎನ್ನಲಾಗುತ್ತದೆ. ಈ ಘಟನೆಗೂ ಮೊದಲು ಇದೇ ಪ್ರದೇಶದಲ್ಲಿ ತಿಮಿಂಗಿಲವೊಂದು ಪತ್ತೆಯಾಗಿದ್ದನ್ನು ವೀಕ್ಷಕರು ಗಮನಿಸಿದ್ದಾರೆ ಎನ್ನಲಾಗಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ

Latest

ಚೀನಾದಲ್ಲಿ ಟ್ರಂಪ್‌, ಶಿ ಜಿನ್‌‌ಪಿಂಗ್‌ ಹೈವೋಲ್ಟೇಜ್‌ ಮೀಟಿಂಗ್‌‌

VISTARANEWS.COM


on

ಅಮೆರಿಕ-ಇರಾನ್‌ ಯುದ್ಧದ ನಡುವೆಯೇ ಅಮೆರಿಕ ಅಧ್ಯಕ್ಷ ಟ್ರಂಪ್ ಚೀನಾ ಪ್ರವಾಸ ಕೈಗೊಂಡಿದ್ದಾರೆ. ಎರಡು ದಿನಗಳ ಪ್ರವಾಸದಲ್ಲಿ ಅವರು ಚೀನಾ ಅಧ್ಯಕ್ಷ ಶಿ ಜಿನ್‌ ಪಿಂಗ್‌ ಜೊತೆ ಹಲವು ಮಹತ್ವದ ಮಾತುಕತೆಗಳನ್ನು ನಡೆಸಲಿದ್ದಾರೆ. ಅತಿದೊಡ್ಡ ನಿಯೋಗದೊಂದಿಗೆ ಟ್ರಂಪ್‌ ರಾಜಧಾನಿ ಬೀಜಿಂಗ್‌ಗೆ ಆಗಮಿಸಿದ್ದಾರೆ.
ಅಧ್ಯಕ್ಷ ಶಿ ಜಿನ್‌ ಪಿಂಗ್‌ ಆಯೋಜಿಸಿದ್ದ ಭೋಜನಕೂಟದಲ್ಲಿ ಪಾಲ್ಗೊಂಡ ಟ್ರಂಪ್‌, ಅಮೆರಿಕ ಮತ್ತು ಚೀನಾ ನಡುವಣ ಬಾಂಧವ್ಯವನ್ನು ಕೊಂಡಾಡಿದ್ದಾರೆ. ಚೀನಾ ಜೊತೆ ಸಕಾರಾತ್ಮಕ ಮಾತುಕತೆ ನಿರೀಕ್ಷೆ ಮಾಡುವುದಾಗಿ ಟ್ರಂಪ್ ಹೇಳಿದ್ದಾರೆ.
ತೈವಾನ್ ವಿಚಾರ ಸೂಕ್ಷ್ಮ ಎಂದ ಚೀನಾ
ಬೀಜಿಂಗ್‌ನಲ್ಲಿ ಗುರುವಾರ ನಡೆದ ಉನ್ನತ ಮಟ್ಟದ ಶೃಂಗಸಭೆಯಲ್ಲಿ ಉಭಯ ನಾಯಕರ ಮಾತುಕತೆಯ ವೇಳೆ ತೈವಾನ್‌ ವಿಷಯ ಮುಂಚೂಣಿಗೆ ಬಂದಿದೆ. ಚೀನಾದ ಸರ್ಕಾರಿ ಸುದ್ದಿ ಸಂಸ್ಥೆ ‘ಕ್ಸಿನ್ಹುವಾ’ ಪ್ರಕಾರ, ಚೀನಾ-ಅಮೆರಿಕ ಸಂಬಂಧಗಳಲ್ಲಿ ತೈವಾನ್ ಅತ್ಯಂತ ಪ್ರಮುಖ ಮತ್ತು ಸೂಕ್ಷ್ಮವಾದ ವಿಷಯವಾಗಿದೆ ಎಂಬುದನ್ನು ಜಿನ್‌ಪಿಂಗ್ ಸ್ಪಷ್ಟಪಡಿಸಿದ್ದಾರೆ.
ಇದಕ್ಕೂ ಮೊದಲು, ಟ್ರಂಪ್‌ಗೆ ಬೀಜಿಂಗ್ ವಿಮಾನ ನಿಲ್ದಾಣದಲ್ಲಿ ಅದ್ದೂರಿ ಸ್ವಾಗತ ಕೋರಲಾಯಿತು. 9 ವರ್ಷಗಳ ನಂತರ ಅಮೆರಿಕ ಅಧ್ಯಕ್ಷರು ಬೀಜಿಂಗ್‌ಗೆ ಭೇಟಿ ನೀಡಿರುವುದು ವಿಶೇಷ.

Continue Reading

Latest

ಪಶ್ಚಿಮ ಬಂಗಾಳದಲ್ಲಿ ಗೋ ಹತ್ಯೆ ನಿಷೇಧ ಕಾನೂನು ಜಾರಿ; ನಿಯಮ ಉಲ್ಲಂಘಿಸಿದ್ರೆ ಜೈಲು ಶಿಕ್ಷೆ, ದಂಡ

VISTARANEWS.COM


on

ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ದೀದಿ ಭದ್ರಕೋಟೆಯನ್ನು ಧೂಳೀಪಟಗೈದು ಅಧಿಕಾರಕ್ಕೇರಿದ ಸುವೇಂದು ಅಧಿಕಾರಿ ಮುಖ್ಯಮಂತ್ರಿ ಪಟ್ಟಕ್ಕೇರುತ್ತಿದ್ದಂತೆ ಮಹತ್ವದ ಆದೇಶ ಹೊರಡಿಸಿದ್ದಾರೆ. ಪಶ್ಚಿಮ ಬಂಗಾಳದಲ್ಲಿ ಆರೋಗ್ಯವಂತ ಜಾನುವಾರುಗಳ ಹತ್ಯೆ ಮಾಡಿದರೆ ಶಿಕ್ಷೆ ನೀಡಲಾಗುವುದು ಎಂದು ಆದೇಶ ಹೊರಡಿಸಿದ್ದಾರೆ.
ಸರ್ಕಾರಿ ಪಶುವೈದ್ಯರು ನೀಡುವ ಫಿಟ್‌ನೆಸ್‌‍ ಪ್ರಮಾಣಪತ್ರವಿಲ್ಲದೆ ಹಸು, ಹೋರಿ, ಎಮ್ಮೆ ಮತ್ತು ಕರು ಸೇರಿ ಯಾವುದೇ ಪ್ರಾಣಿಯನ್ನು ಹತ್ಯೆ ಮಾಡುವಂತಿಲ್ಲ ಎಂದು ಪಶ್ಚಿಮ ಬಂಗಾಳದ ಬಿಜೆಪಿ ಸರ್ಕಾರವು ಅಧಿಸೂಚನೆ ಹೊರಡಿಸಿದೆ.
ಹಸು 14 ವರ್ಷ ಮೇಲ್ಪಟ್ಟಿದ್ದು, ಕೆಲಸ ಮಾಡಲು ಅಥವಾ ಸಂತಾನೋತ್ಪತ್ತಿ ಮಾಡಲು ಯೋಗ್ಯವಿಲ್ಲದಿದ್ದರೆ ಅಥವಾ ಮಾರಣಾಂತಿಕ ಕಾಯಿಲೆಗಳಿಂದ ಬಳಲುತ್ತಿದ್ದು, ಶಾಶ್ವತವಾಗಿ ಗುಣಪಡಿಸಲು ಸಾಧ್ಯವಾಗದಿದ್ದರೆ ಮಾತ್ರ ಸ್ಥಳೀಯ ನಾಗರಿಕ ಅಧಿಕಾರಿಗಳು ಅಥವಾ ಪಶುವೈದ್ಯರು ಜಂಟಿಯಾಗಿ ಪ್ರಮಾಣ ಪತ್ರವನ್ನು ನೀಡಬಹುದಾಗಿದೆ.
ನಿಯಮಗಳನ್ನು ಜಾರಿಗೊಳಿಸಲು ಅಧಿಕಾರಿಗಳು ನಡೆಸುವ ಯಾವುದೇ ಪರಿಶೀಲನೆಯನ್ನು ವ್ಯಕ್ತಿಗಳು ತಡೆಯುವಂತಿಲ್ಲ ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ. ಯಾವುದೇ ರೀತಿಯ ಕಾನೂನು ಉಲ್ಲಂಘನೆಗಳಿಗೆ ಆರು ತಿಂಗಳವರೆಗೆ ಜೈಲು ಶಿಕ್ಷೆ ಅಥವಾ 1 ಸಾವಿರ ರೂಪಾಯಿವರೆಗೆ ದಂಡ ವಿಧಿಸಲಾಗುವುದು ಎಂದು ಎಚ್ಚರಿಕೆ ನೀಡಲಾಗಿದೆ.

Continue Reading

Latest

ಹಿಜಾಬ್‌ ಓಕೆ, ಕೇಸರಿ ಶಾಲುಗೆ ನೋ: ಪರ- ವಿರೋಧ ಚರ್ಚೆ ಶುರು

VISTARANEWS.COM


on

ರಾಜ್ಯದ ಶಾಲಾ-ಕಾಲೇಜುಗಳಲ್ಲಿ ಹಿಜಾಬ್‌ ಅವಕಾಶ ನೀಡಿ, ಕೇಸರಿ ಶಾಲುಗೆ ನೋ ಎಂದಿರುವುದು ತೀವ್ರ ಚರ್ಚೆಗೆ ಗ್ರಾಸವಾಗಿದೆ. ಸರ್ಕಾರ ತನ್ನ ನಿರ್ಧಾರವನ್ನು ಸಮರ್ಥಿಸಿಕೊಳ್ಳುತ್ತಿದ್ದರೆ, ಬಿಜೆಪಿ ಮತ್ತು ಹಿಂದೂ ಸಂಘಟನೆಗಳು ಸರ್ಕಾರದ ನಿರ್ಣಯಕ್ಕೆ ತೀವ್ರ ವಿರೋಧ ವ್ಯಕ್ತಪಡಿಸುತ್ತಿದ್ದಾರೆ.

ಹೊಸ ವಸ್ತ್ರಸಂಹಿತೆ ಆದೇಶದಲ್ಲಿ ವಿದ್ಯಾರ್ಥಿನಿಯರು ಸಮವಸ್ತ್ರದ ಜೊತೆಗೆ ‘ಹಿಜಾಬ್’ (ತಲೆವಸ್ತ್ರ) ಧರಿಸಲು ಮುಕ್ತ ಅವಕಾಶ ಕಲ್ಪಿಸಲಾಗಿದೆ. ಜೊತೆಗೆ ಜನಿವಾರ, ಶಿವದಾರ, ರುದ್ರಾಕ್ಷಿ, ಪೇಟ ಸೇರಿದಂತೆ ಸಮವಸ್ತ್ರಕ್ಕೆ ಹೊಂದಿಕೊಳ್ಳುವ ಹಾಗೂ ಧಾರ್ಮಿಕ ಪದ್ಧತಿಗೆ ಅನುಗುಣವಾದ ಸಾಂಪ್ರದಾಯಿಕ ಗುರುತುಗಳನ್ನು ಧರಿಸಲು ಅವಕಾಶ ಕಲ್ಪಿಸಿದೆ. ಆದರೆ ಕೇಸರಿ ಶಾಲು ಹಾಕಿಕೊಂಡು ಬರಲು ಅನುಮತಿ ನೀಡಿರುವುದಿಲ್ಲ. ಈ ನಿಯಮವು ರಾಜ್ಯದ ಎಲ್ಲ ಶಾಲಾ-ಕಾಲೇಜುಗಳಿಗೆ ಅನ್ವಯವಾಗಲಿದೆ.
ಕೇಸರಿ ಶಾಲು ಧರಿಸಲು ಅವಕಾಶವಿದೆಯೋ, ಇಲ್ಲವೋ ಎಂಬ ಗೊಂದಲದ ಕುರಿತು ವಿವರಣೆ ನೀಡಿರುವ ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ, ʼಕೇಸರಿ ಶಾಲು ಧಾರ್ಮಿಕ ವ್ಯಾಪ್ತಿಗೆ ಬರುವುದಿಲ್ಲ. ನಾನು ನಾರಾಯಣ ಗುರುಗಳ ವಿಚಾರ ವೇದಿಕೆಯಲ್ಲಿದ್ದೇನೆ. ನಾವು ಏನಾದರೂ ಕಾರ್ಯಕ್ರಮ ಮಾಡಿದರೆ, ಹಳದಿ ಶಾಲು ಧರಿಸುತ್ತೇವೆ. ರೈತ ಸಂಘದವರು ಹಸಿರು ಶಾಲು ಹಾಕುತ್ತಾರೆ. ಅದನ್ನೆಲ್ಲಾ ಇಲ್ಲಿ ಚರ್ಚೆ ಮಾಡಿದರೆ, ಮಕ್ಕಳ ಮೇಲೆ ಒತ್ತಡ ಬೀರುತ್ತದೆ. ಧಾರ್ಮಿಕವಾಗಿ ಮನೆಯಲ್ಲಿರುವ ಸಂಪ್ರದಾಯಗಳಿಗೆ ಅವಕಾಶ ಕಲ್ಪಿಸಲಾಗಿದೆ,ʼ ಎಂದು ಸ್ಪಷ್ಟಪಡಿಸಿದರು.

ಸರ್ಕಾರದ ನಿರ್ಧಾರವನ್ನು ಕಟುವಾಗಿ ಟೀಕಿಸಿರುವ ಬಿಜೆಪಿ ನಾಯಕರು, ಚುನಾವಣಾ ಪೂರ್ವದಲ್ಲಿ ಮುಸ್ಲಿಂ ಸಮುದಾಯಕ್ಕೆ ನೀಡಿದ್ದ ಭರವಸೆಗೆ ಪೂರಕವಾಗಿ ಈ ನಿರ್ಧಾರ ಕೈಗೊಂಡಿದ್ದಾರೆ. ದಾವಣಗೆರೆ ದಕ್ಷಿಣ ಉಪಚುನಾವಣೆಯಲ್ಲಿ ಮುಸ್ಲಿಮರು ಕಾಂಗ್ರೆಸ್‌ಗೆ ಸಾಕಷ್ಟು ಪ್ರಮಾಣದಲ್ಲಿ ಬೆಂಬಲಿಸದ ಕಾರಣ, ಅವರ ಮನವೊಲಿಸುವ ಉದ್ದೇಶದಿಂದ ಈ ಆದೇಶ ಹೊರಡಿಸಿದ್ದಾರೆ ಎಂದು ಸರ್ಕಾರದ ವಿರುದ್ಧ ಬಿಜೆಪಿ ನಾಯಕರು ಕಿಡಿಕಾರಿದ್ದಾರೆ.

ಸಿಎಂ ಪ್ರತಿಕ್ರಿಯೆ:
ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ ಜನಿವಾರ, ಹಿಜಾಬ್, ಉಡುದಾರ, ರುದ್ರಾಕ್ಷಿ ಹಾಕಿಕೊಳ್ಳಬಹುದು. ಪ್ರಸ್ತುತ ಸಾಂಪ್ರದಾಯಿಕವಾಗಿ ಅನುಸರಿಸುವ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು. ಹೊಸದಾಗಿ ಮಾಡುವಂತಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸ್ಪಷ್ಟಪಡಿಸಿದ್ದಾರೆ.

ಪ್ರಕರಣ ಏನು?
2021ರಲ್ಲಿ ಉಡುಪಿಯ ಸರ್ಕಾರಿ ಬಾಲಕಿಯರ ಪದವಿಪೂರ್ವ ಕಾಲೇಜಿನಲ್ಲಿ ಹಿಜಾಬ್‌ ಧರಿಸಿದ ಕಾರಣಕ್ಕೆ 6 ವಿದ್ಯಾರ್ಥಿನಿಯರಿಗೆ ತರಗತಿಗೆ ಪ್ರವೇಶ ನಿರಾಕರಿಸಲಾಗಿತ್ತು. ಇಲ್ಲಿಂದ ಹೊತ್ತಿದ ಹಿಜಾಬ್‌ ಕಿಡಿ ಸುಪ್ರೀಂ ಕೋರ್ಟ್‌ ಮೆಟ್ಟಿಲೇರುವ ಜೊತೆಗೆ, ಅಂತಾರಾಷ್ಟ್ರೀಯ ಮಟ್ಟದಲ್ಲೂ ಸದ್ದು ಮಾಡಿತ್ತು. 2022ರಲ್ಲಿ ಅಂದಿನ ರಾಜ್ಯ ಬಿಜೆಪಿ ಸರ್ಕಾರ ಶಾಲಾ-ಕಾಲೇಜುಗಳಲ್ಲಿ ಹಿಜಾಬ್‌ ನಿಷೇಧಿಸಿ ಆದೇಶ ಹೊರಡಿಸಿತ್ತು.

Continue Reading

Latest

ವಿ.ಡಿ. ಸತೀಶನ್‌ ಸಿಎಂ ಆಗಿ ಆಯ್ಕೆ ಹಿಂದಿನ ರಿಯಲ್ ಸ್ಟೋರಿ

VISTARANEWS.COM


on

ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ.ಸತೀಶನ್ ಆಯ್ಕೆಯಾಗಿದ್ದಾರೆ. ಸಾಕಷ್ಟು ಅಳೆದು ತೂಗಿ, ನಾನಾ ಲೆಕ್ಕಾಚಾರಗಳ ಬಳಿಕ ಕೊನೆಗೂ ಕೇರಳದ ನೂತನ ಸಿಎಂ ಆಗಿ ವಿ.ಡಿ.ಸತೀಶನ್ ಅವರ ಹೆಸರನ್ನು ಎಐಸಿಸಿ ಘೋಷಿಸಿದೆ. ಕೇರಳಂನ ಕಾಂಗ್ರೆಸ್ ನಾಯಕರಾದ ಕೆ.ಸಿ ವೇಣುಗೋಪಾಲ್, ವಿ.ಡಿ ಸತೀಶನ್ ಮತ್ತು ರಮೇಶ್ ಚೆನ್ನಿತ್ತಲ ಹೆಸರುಗಳು ಪ್ರಮುಖವಾಗಿ ಸಿಎಂ ರೇಸ್​​ನಲ್ಲಿದ್ದವು. ಆದರೆ ಈ ಪೈಕಿ ವಿ.ಡಿ.ಸತೀಶನ್ ಅವರನ್ನು ನೂತನ ಮುಖ್ಯಮಂತ್ರಿಯಾಗಿ ಆಯ್ಕೆ ಮಾಡಲಾಗಿದೆ.
ಮುಖ್ಯಮಂತ್ರಿ ಹುದ್ದೆಗೆ ಮುಂಚೂಣಿಯಲ್ಲಿದ್ದ ಹೆಸರು ಕೆ.ಸಿ. ವೇಣುಗೋಪಾಲ್‌. ಹೈಕಮಾಂಡ್‌ ಬೆಂಬಲ ಕೂಡಾ ಕೆ.ಸಿ. ವೇಣುಗೋಪಾಲ್ ಅವರಿಗಿತ್ತು. ಹೀಗಿದ್ದರೂ, ವಿ.ಡಿ. ಸತೀಶನ್ ಆಯ್ಕೆ ಆಗಿದ್ದು ಹೇಗೆ ಎಂಬುದಕ್ಕೆ ಉತ್ತರ ಇಲ್ಲಿದೆ.

  1. ವಿ.ಡಿ ಸತೀಶನ್‌ಗೆ ಪಕ್ಷದ 47 ಶಾಸಕರ ಬೆಂಬಲ:
    ಮೂಲಗಳ ಪ್ರಕಾರ ವಿ.ಡಿ ಸತೀಶನ್‌ ಅವರಿಗೆ 63 ಕಾಂಗ್ರೆಸ್ ಶಾಸಕರ ಪೈಕಿ 47 ಶಾಸಕರು ಬೆಂಬಲ ನೀಡಿದ್ದಾರೆ. ಇದೇ ಕಾರಣಕ್ಕೆ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಹೇಳಲಾಗಿದೆ.
  2. ಸತೀಶನ್‌ಗೆ ಯುಡಿಎಫ್ ಮೈತ್ರಿಕೂಟದ ನಾಯಕರ ಬೆಂಬಲ:
    ಕಾಂಗ್ರೆಸ್‌ ಶಾಸಕರ ಜೊತೆ ಮೈತ್ರಿಕೂಟದ ನಾಯಕರೂ ಬೆಂಬಲಿಸಿದ್ದು, ಸತೀಶನ್‌ ಪಾಲಿಗೆ ವರದಾನವಾಗಿತ್ತು. ಸತೀಶನ್ ಪರವಾಗಿ ಬಲವಾಗಿ ಇಂಡಿಯನ್ ಮುಸ್ಲಿಂ ಲೀಗ್ ಹಾಗೂ ಕೇರಳ ಕಾಂಗ್ರೆಸ್‌ ಪಕ್ಷಗಳು ಬಲವಾಗಿ ನಿಂತಿದ್ದವು.
  3. ಸಿಎಂ ಪದವಿಗೆ ಸತೀಶನ್ ಹಠ:
    ಕೊಟ್ಟರೆ ಮುಖ್ಯಮಂತ್ರಿ ಹುದ್ದೆ ಕೊಡಿ. ಇಲ್ಲದಿದ್ದರೆ ಯಾವ ಪದವಿಯೂ ಬೇಡ ಎಂದು ಸತೀಶನ್ ಪಟ್ಟು ಹಿಡಿದಿದ್ದರು. ಅನ್ಯ ಮುಖ್ಯಮಂತ್ರಿಯ ಕೆಳಗೆ ಕಾರ್ಯ ನಿರ್ವಹಿಸಲು ಸುತಾರಾಂ ಒಪ್ಪಿರಲಿಲ್ಲ. ಕೊನೆಗೂ ಸತೀಶನ್ ಹಠಕ್ಕೆ ಕಾಂಗ್ರೆಸ್ ಹೈಕಮಾಂಡ್ ಮಣಿದಿದೆ.
  4. ಮೆರಿಟ್ ಕೂಡಾ ಸತೀಶನ್ ಪರವಾಗಿತ್ತು:
    ಮೆರಿಟ್ ಕೂಡಾ ಸತೀಶನ್ ಪರವಾಗಿತ್ತು. ಪ್ರತಿಪಕ್ಷ ನಾಯಕನಾಗಿ ಅವರ ರಣತಂತ್ರದಿಂದಲೇ ಪಿಣರಾಯಿ ಸರ್ಕಾರ ಪರಾಭವಗೊಂಡಿತು ಎಂದು ಹೇಳಲಾಗಿದೆ. ಅಲ್ಲದೆ, ಯುಡಿಎಫ್‌ ಮೈತ್ರಿಕೂಟದ ನಾಯಕನಾಗಿ, ಪಕ್ಷವನ್ನು ಗೆಲುವಿನ ದಡ ತಲುಪಿಸಿದ ಕೀರ್ತಿ ಸತೀಶನ್‌ಗೆ ಸಲ್ಲುತ್ತದೆ. ಅದಲ್ಲದೇ ಇವರು ಕೇರಳ ಪ್ರದೇಶ ಕಾಂಗ್ರೆಸ್‌ನ ಅಧ್ಯಕ್ಷರು ಹೌದು.
  5. ವೇಣುಗೋಪಾಲ್ ಮನವೊಲಿಸುವಲ್ಲಿ ಹೈಕಮಾಂಡ್ ಯಶಸ್ವಿ:
    ಕೇರಳಂ ಕಾಂಗ್ರೆಸ್‌ನಲ್ಲಿ ಸತೀಶನ್ ಬಲ ಹೆಚ್ಚಾಗುತ್ತಿರುವಂತೆಯೇ, ಸಂಭಾವ್ಯ ಭಿನ್ನಮತ ತಪ್ಪಿಸಲು ಹೈಕಮಾಂಡ್ ರಣತಂತ್ರ ರೂಪಿಸುತ್ತು. ಹಾಗಾಗಿಯೇ, ವೇಣುಗೋಪಾಲ್‌ ಮನವೊಲಿಕೆಗೆ ಮುಂದಾಯಿತು. ಅದರಲ್ಲಿ ಯಶಸ್ಸು ಕೂಡಾ ಅದಕ್ಕೆ ಸಿಕ್ಕಿದೆ.
  6. ಕೇರಳಂ ಕಾಂಗ್ರೆಸ್‌ನಲ್ಲಿ ಸತೀಶನ್ ಪರ ಅಲೆ:
    ಕೇರಳಂ ಕಾಂಗ್ರೆಸ್‌ನಲ್ಲಿ ಸತೀಶನ್ ಪರ ಎದ್ದ ಅಲೆ, ಕಾಂಗ್ರೆಸ್‌ ಪಕ್ಷವನ್ನು ಸಂದಿಗ್ಧತೆಗೆ ದೂಡಿತ್ತು. ಪಕ್ಷದಲ್ಲಿ ಆಂತರಿಕ ಸಂಘರ್ಷ ತೀವ್ರಗೊಳ್ಳುವ ಸಾಧ್ಯತೆ ಬಲವಾಗಿತ್ತು. ಚುನಾವಣೆ ಗೆದ್ದು, ಸಿಎಂ ಆಯ್ಕೆಯಲ್ಲಿ ಸೋತರೆ ಪರಿಣಾಮ ವಿಪರೀತವಾಗಬಹುದು ಎಂದು ಯೋಚಿಸಿದ ಕಾಂಗ್ರೆಸ್, ಸತೀಶನ್ ಹೆಸರಿಗೆ ಮಣೆ ಹಾಕಿತು ಎನ್ನಲಾಗಿದೆ.
Continue Reading
Advertisement
Latest15 hours ago

ಚೀನಾದಲ್ಲಿ ಟ್ರಂಪ್‌, ಶಿ ಜಿನ್‌‌ಪಿಂಗ್‌ ಹೈವೋಲ್ಟೇಜ್‌ ಮೀಟಿಂಗ್‌‌

Latest15 hours ago

ಪಶ್ಚಿಮ ಬಂಗಾಳದಲ್ಲಿ ಗೋ ಹತ್ಯೆ ನಿಷೇಧ ಕಾನೂನು ಜಾರಿ; ನಿಯಮ ಉಲ್ಲಂಘಿಸಿದ್ರೆ ಜೈಲು ಶಿಕ್ಷೆ, ದಂಡ

ಪ್ರಮುಖ ಸುದ್ದಿ15 hours ago

ಕರ್ನಾಟಕ ಸೇರಿ 16 ರಾಜ್ಯ, 3 ಕೇಂದ್ರಾಡಳಿತ ಪ್ರದೇಶಗಳಲ್ಲಿ ಎಸ್‌ಐಆರ್‌

Latest16 hours ago

ಹಿಜಾಬ್‌ ಓಕೆ, ಕೇಸರಿ ಶಾಲುಗೆ ನೋ: ಪರ- ವಿರೋಧ ಚರ್ಚೆ ಶುರು

Latest18 hours ago

ವಿ.ಡಿ. ಸತೀಶನ್‌ ಸಿಎಂ ಆಗಿ ಆಯ್ಕೆ ಹಿಂದಿನ ರಿಯಲ್ ಸ್ಟೋರಿ

Latest20 hours ago

ಕೇರಳಂ ನೂತನ ಸಿಎಂ ಆಗಿ ವಿ.ಡಿ. ಸತೀಶನ್‌ ಆಯ್ಕೆ

Latest2 days ago

ಮನಸೆಳೆದ ಎಸ್‌ಜೆಬಿಐಟಿ ವಿದ್ಯಾರ್ಥಿಗಳ ʼವರ್ಚಸ್ವ ಫ್ಲ್ಯಾಶ್ ಮಾಬ್ʼ

ಅವಿಭಾಗೀಕೃತ2 days ago

ಬೆಂಗಳೂರಿಗೆ ʼಆರನೇ ಗ್ಯಾರಂಟಿʼ – ʼನನ್ನ ಖಾತೆ ನನ್ನ ಹಕ್ಕುʼ

ಪ್ರಮುಖ ಸುದ್ದಿ2 days ago

ಅಗ್ನಿ ಪರೀಕ್ಷೆ ಗೆದ್ದ ‘ವಿಜಯ್‌‌‌’, ಎಐಎಡಿಎಂಕೆಯಲ್ಲಿ ಭಿನ್ನಮತ ಸ್ಫೋಟ

ಸಿನಿಮಾ2 days ago

ನಟ, ನಿರ್ಮಾಪಕ ದಿಲೀಪ್‌ ರಾಜ್‌ ಇನ್ನಿಲ್ಲ

galipata neetu
ಕಿರುತೆರೆ2 years ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ3 years ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ3 years ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ3 years ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ3 years ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ2 years ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ2 years ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ2 years ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್2 years ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್2 years ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ2 years ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 years ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 years ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 years ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 years ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 years ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 years ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌