Paris Olympics 2024: 2ನೇ ಸುತ್ತಿನಲ್ಲಿ ಜೊಕೊ-ನಡಾಲ್ ಮುಖಾಮುಖಿ ಸಾಧ್ಯತೆ - Vistara News

ಕ್ರೀಡೆ

Paris Olympics 2024: 2ನೇ ಸುತ್ತಿನಲ್ಲಿ ಜೊಕೊ-ನಡಾಲ್ ಮುಖಾಮುಖಿ ಸಾಧ್ಯತೆ

Paris Olympics 2024:ಜೊಕೊವಿಚ್‌ ಅವರು ಮೊದಲ ಸುತ್ತಿನಲ್ಲಿ ಆಸ್ಟ್ರೇಲಿಯಾದ ಮ್ಯಾಥ್ಯೂ ಎಬ್ಡೆನ್‌ ಎದುರು ಕಣಕ್ಕಿಳಿದರೆ, ನಡಾಲ್‌ ಹಂಗೇರಿಯ ಮಾರ್ಟನ್‌ ಫುಕ್ಸೊವಿಕ್ಸ್‌ ಸವಾಲು ಎದುರಿಸಲಿದ್ದಾರೆ. ಈ ಪಂದ್ಯ ಜುಲೈ 27ರಂದು ನಡೆಯಲಿದೆ.

VISTARANEWS.COM


on

ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಪ್ಯಾರಿಸ್‌: ಪ್ಯಾರಿಸ್​ ಒಲಿಂಪಿಕ್ಸ್​(Paris 2024 Olympics) ಟೆನಿಸ್‌ ಸ್ಪರ್ಧೆಯ ಡ್ರಾ ಪ್ರಕಟಗೊಂಡಿದೆ. ವಿಶ್ವದ ಶ್ರೇಷ್ಠ ಟೆನಿಸ್​ ಆಟಗಾರರಾದ ಸರ್ಬಿಯಾದ ನೊವಾಕ್‌ ಜೊಕೊವಿಚ್(Novak Djokovic) ಹಾಗೂ ಸ್ಪೇನ್​ನ ರಫೇಲ್‌ ನಡಾಲ್‌(rafael nadal) ಅವರು ಎರಡನೇ ಸುತ್ತಿನಲ್ಲಿ ಮುಖಾಮುಖಿಯಾಗುವ ಸಾಧ್ಯತೆ ಇದೆ. ಹೀಗಾಗಿ ಅಭಿಮಾನಿಗಳಲ್ಲಿ ಟೂರ್ನಿ ಆರಂಭಕ್ಕೂ ಮುನ್ನವೇ ಭಾರೀ ಕುತೂಹಲ ಕೆರಳಿಸುವಂತೆ ಮಾಡಿದೆ.

ಜೊಕೊವಿಚ್‌ ಅವರು ಮೊದಲ ಸುತ್ತಿನಲ್ಲಿ ಆಸ್ಟ್ರೇಲಿಯಾದ ಮ್ಯಾಥ್ಯೂ ಎಬ್ಡೆನ್‌ ಎದುರು ಕಣಕ್ಕಿಳಿದರೆ, ನಡಾಲ್‌ ಹಂಗೇರಿಯ ಮಾರ್ಟನ್‌ ಫುಕ್ಸೊವಿಕ್ಸ್‌ ಸವಾಲು ಎದುರಿಸಲಿದ್ದಾರೆ. ಈ ಪಂದ್ಯ ಜುಲೈ 27ರಂದು ನಡೆಯಲಿದೆ. ಸ್ನಾಯು ಸೆಳೆತದಿಂದ ಬರೋಬ್ಬರಿ ಒಂದು ವರ್ಷದಿಂದ ಬಳಲುತ್ತಿರುವ ನಡಾಲ್​ಗೆ ದೇಹ ಯಾವ ರೀತಿ​ ಸ್ಪಂದಿಸಲಿದೆ ಎನ್ನುವುದು ಕೂಡ ಮುಖ್ಯವಾಗಿದೆ. ಗಾಯದಿಂದ ಇನ್ನೂ ಸಂಪೂರ್ಣವಾಗಿ ಚೇತರಿಕೆ ಕಾಣದಿದ್ದರೂ ಕೂಡ ತಮ್ಮ ದೇಶಕ್ಕಾಗಿ ಒಲಿಂಪಿಕ್ಸ್​ ಆಡುವುದಾಗಿ ಹೇಳಿದ್ದರು.

ಕಳೆದ ವಾರ ಮುಕ್ತಾಯ ಕಂಡಿದ್ದ ವಿಂಬಲ್ಡನ್‌ ಟೂರ್ನಿಯಲ್ಲಿ ಜೋಕೊವಿಕ್​ ಮಣಿಸಿ ಚಾಂಪಿಯನ್‌ ಪಟ್ಟ ಅಲಂಕರಿಸಿದ್ದ ಸ್ಪೇನ್‌ನ ಕಾರ್ಲೋಸ್‌ ಅಲ್ಕರಾಜ್‌(carlos alcaraz) ಅವರು ಹ್ಯಾಡಿ ಹಬೀಬ್‌ ಎದುರು ಮೊದಲ ಸುತ್ತಿನಲ್ಲಿ ಆಡಲಿದ್ದಾರೆ. ಡಬಲ್ಸ್​ನಲ್ಲಿ ಕಾರ್ಲೋಸ್ ಅಲ್ಕರಾಜ್ ಅವರು ದಿಗ್ಗಜ ನಡಾಲ್‌ ಜತೆಗೂಡಿ ಆಡಲಿದ್ದಾರೆ.

2008ರಲ್ಲಿ ಬೀಜಿಂಗ್‌ನಲ್ಲಿ ನಡೆದಿದ್ದ ಒಲಿಂಪಿಕ್‌ ಕ್ರೀಡಾಕೂಟದಲ್ಲಿ ನಡಾಲ್‌ ಪುರುಷರ ಸಿಂಗಲ್ಸ್‌ ವಿಭಾಗದಲ್ಲಿ ಚಿನ್ನದ ಪದಕಕ್ಕೆ ಕೊರಳೊಡ್ಡಿ‌ದ್ದರು. 2016ರ ರಿಯೊ ಡಿ ಜನೈರೊ ಒಲಿಂಪಿಕ್‌ನಲ್ಲಿ ಮಾರ್ಕ್‌ ಲೊಪೇಜ್‌ ಅವರೊಂದಿಗೆ ಡಬಲ್ಸ್‌ನಲ್ಲೂ ‘ಬಂಗಾರ’ ಗೆದ್ದಿದ್ದರು. ಈ ಬಾರಿಯೂ ಪದಕ ಗೆಲ್ಲುವ ನಿರೀಕ್ಷೆಯಲ್ಲಿದ್ದಾರೆ.

ಇದನ್ನೂ ಓದಿ Paris Olympics: ಈ ಬಾರಿ ಪದಕದ ನಿರೀಕ್ಷೆ ಮೂಡಿಸಿದ ಭಾರತೀಯ ಅಥ್ಲೀಟ್‌ಗಳು ಇವರು…

ಕೊಕೊ ಗಾಫ್ ಅಮೆರಿಕದ ಧ್ವಜಧಾರಿ

ಯುವ ಮಹಿಳಾ ಟೆನಿಸ್ ಆಟಗಾರ್ತಿ ಕೊಕೊ ಗಾಫ್(Coco Gauff) ಅವರು ಪ್ಯಾರಿಸ್​ ಒಲಿಂಪಿಕ್ಸ್‌ನ(Paris Olympics) ಉದ್ಘಾಟನಾ ಸಮಾರಂಭದಲ್ಲಿ(Paris Olympics Opening Ceremony) ಅಮರಿಕದ ಮಹಿಳಾ ಧ್ವಜಧಾರಿಯಾಗಲಿದ್ದಾರೆ(US Flag Bearer). ಶುಕ್ರವಾರ(ಜುಲೈ 26) ನಡೆಯುವ ಉದ್ಘಾಟನ ಸಮಾರಂಭದಲ್ಲಿ ಯುಎಸ್ ಧ್ವಜವನ್ನು ಹೊತ್ತೊಯ್ಯಲಿದ್ದಾರೆ. ಈ ಗೌರವವನ್ನು ಪಡೆದ ಅತ್ಯಂತ ಕಿರಿಯ ಅಮೆರಿಕನ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಜತೆಗೆ ಉದ್ಘಾಟನಾ ಅಥವಾ ಸಮಾರೋಪ ಸಮಾರಂಭದಲ್ಲಿ ಅಮೆರಿಕದ ಧ್ವಜಧಾರಿಯಾಗಿ ಸೇವೆ ಸಲ್ಲಿಸಿದ ಮೊದಲ ಟೆನಿಸ್ ಆಟಗಾರ್ತಿ ಎಂದೆನಿಸಿಕೊಳ್ಳಲಿದ್ದಾರೆ. 

ಪ್ಯಾರಿಸ್‌ ಆತಿಥ್ಯದಲ್ಲಿ ನಡೆಯುತ್ತಿರುವ 3ನೇ ಒಲಿಂಪಿಕ್ಸ್‌ ಕೀಡಾಕೂಟ ಇದಾಗಿದೆ. ಮೊದಲ ಒಲಿಂಪಿಕ್ಸ್‌ ನಡೆದದ್ದು 1900ರಲ್ಲಿ. ಇದಾದ ಬಳಿಕ 1924ರಲ್ಲಿ ಆತಿಥ್ಯ ವಹಿಸಿತ್ತು. ಇದೀಗ ಬರೋಬ್ಬರಿ 100 ವರ್ಷಗಳ ಬಳಿಕ ಇಲ್ಲಿ ಪ್ಯಾರಿಸ್​ನಲ್ಲಿ ಒಲಿಂಪಿಕ್ಸ್​ ನಡೆಯುತ್ತಿದೆ. ಈ ಬಾರಿಯ ಒಲಿಂಪಿಕ್ಸ್​ ಕ್ರೀಡಾಕೂಟದ ಉದ್ಘಾಟನಾ ಸಮಾರಂಭ ಒಲಿಂಪಿಕ್ಸ್​ ಇತಿಹಾಸದಲ್ಲೇ ವಿಶೇಷ ಮಹತ್ವ ಪಡೆದಿದೆ. ಇದೇ ಮೊದಲ ಬಾರಿಗೆ ಕ್ರೀಡಾಂಗಣದ ಹೊರಗಡೆ ನಡೆಯುವ ಉದ್ಘಾಟನಾ ಸಮಾರಂಭ ಇದಾಗಿದೆ. 10,500ಕ್ಕೂ ಹೆಚ್ಚು ಅಥ್ಲೀಟ್‌ಗಳು ಪ್ಯಾರಿಸ್‌ನಿಂದ ಸುಮಾರು 6 ಕಿಲೋಮೀಟರ್‌ ವರೆಗೆ ಬೋಟ್‌ಗಳಲ್ಲೇ ಪರೇಡ್‌ ನಡೆಸಿ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೀಡೆ

Sri lanka Team: ಟಿ20 ಸರಣಿ ಆರಂಭಕ್ಕೂ ಮುನ್ನವೇ ಲಂಕಾಗೆ ಗಾಯದ ಬರೆ; ಇಬ್ಬರು ವೇಗಿಗಳು ಔಟ್​

Sri lanka Team: ನುವಾನ್ ತುಷಾರ ಕಳೆದ ತಿಂಗಳು ಮುಕ್ತಾಯ ಕಂಡಿದ್ದ ಟಿ20 ವಿಶ್ವಕಪ್‌ನಲ್ಲಿ ಶ್ರೀಲಂಕಾ ತಂಡದ ಪರ ಅತಿ ಹೆಚ್ಚು ವಿಕೆಟ್ ಕಿತ್ತ ಬೌಲರ್‌ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದರು.

VISTARANEWS.COM


on

Sri lanka Team
Koo

ಕೊಲಂಬೊ: ಭಾರತ ವಿರುದ್ಧದ ತವರಿನ ಟಿ20 ಸರಣಿ ಆರಂಭಕ್ಕೂ ಮುನ್ನವೇ ಆತಿಥೇಯ ಶ್ರೀಲಂಕಾ ತಂಡಕ್ಕೆ(Sri lanka Team) ಗಾಯದ ಬರೆ ಬಿದ್ದಿದೆ. ಒಂದೇ ದಿನದ ಅಂತರದಲ್ಲಿ ಇಬ್ಬರು ಆಟಗಾರರು ಗಾಯಗೊಂಡು ಸರಣಿಯಿಂದ ಹೊರಬಿದ್ದಿದ್ದಾರೆ. ವೇಗಿಗಳಾದ ದುಷ್ಮಂತ ಚಮೀರಾ(dushmantha chameera) ಮತ್ತು ನುವಾನ್ ತುಷಾರ(Nuwan Thushara) ಗಾಯಗೊಂಡ ಆಟಗಾರರು.

ಉಭಯ ಆಟಗಾರರು ಕೂಡ ಅಭ್ಯಾಸ ನಡೆಸುವ ವೇಳೆ ಗಾಯಕ್ಕೆ ತುತ್ತಾದರು. ಫೀಲ್ಡಿಂಗ್​ ಅಭ್ಯಾಸ ವೇಳೆ ನುವಾನ್ ತುಷಾರ ಬೆರಳು ಮುರಿತವಾಗಿದೆ. ತಂಡದ ಪ್ರಮುಖ ವೇಗಿಗಳು ಟೂರ್ನಿಯಿಂದ ಹೊರಬಿದ್ದಿರುವುದು ಲಂಕಾಗೆ ಭಾರೀ ಹಿನ್ನಡೆ ಉಂಟುಮಾಡಿದೆ. ನುವಾನ್ ತುಷಾರ ಕಳೆದ ತಿಂಗಳು ಮುಕ್ತಾಯ ಕಂಡಿದ್ದ ಟಿ20 ವಿಶ್ವಕಪ್‌ನಲ್ಲಿ ಶ್ರೀಲಂಕಾ ತಂಡದ ಪರ ಅತಿ ಹೆಚ್ಚು ವಿಕೆಟ್ ಕಿತ್ತ ಬೌಲರ್‌ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದರು. ನುವಾನ್ ತುಷಾರ ಅಲಭ್ಯತೆಯಲ್ಲಿ ಬದಲಿ ಆಟಗಾರನಾಗಿ ವೇಗಿ ದಿಲ್ಶನ್ ಮಧುಶಂಕ ಅವರನ್ನು ತಂಡಕ್ಕೆ ಆಯ್ಕೆ ಮಾಡಲಾಗಿದೆ. ದುಷ್ಮಂತ ಚಮೀರಾ ಬದಲಿಯಾಗಿ ಅಸಿತ ಫರ್ನಾಂಡೋ ಅವರನ್ನು ಹೆಸರಿಸಲಾಗಿದೆ.

ಇದನ್ನೂ ಓದಿ Team India: ಲಂಕಾ ಸರಣಿಗೂ ಮುನ್ನವೇ ಟೀಮ್​ ಇಂಡಿಯಾ ಜೆರ್ಸಿಯಲ್ಲಿ ಮಹತ್ವದ ಬದಲಾವಣೆ

2021ರ ಬಳಿಕ ಭಾರತ ಮೊದಲ ಬಾರಿಗೆ ಶ್ರೀಲಂಕಾದಲ್ಲಿ ದ್ವಿಪಕ್ಷೀಯ ಸರಣಿ ಆಡಲಿದೆ. ಲಂಕಾ ತಂಡಕ್ಕೆ ಮಾಜಿ ಆಟಗಾರ ಸನತ್​ ಜಯಸೂರ್ಯ ಮಾರ್ಗದರ್ಶನ ನೀಡಲಿದ್ದಾರೆ. ಇತ್ತೀಚೆಗೆ ಮುಕ್ತಾಯಗೊಂಡ ಲಂಕಾ ಪ್ರೀಮಿಯರ್ ಲೀಗ್​ನಲ್ಲಿ ಚರಿತ್ ಅಸಲಂಕಾ ನಾಯಕತ್ವದಲ್ಲಿ ಜಾಫ್ನಾ ಕಿಂಗ್ಸ್ ತಂಡ ಚಾಂಪಿಯನ್​ ಪಟ್ಟ ಅಲಂಕರಿಸಿತ್ತು. ಹೀಗಾಗಿ ಲಂಕಾ ಕ್ರಿಕೆಟ್​ ಮಂಡಳಿ ಇವರಿಗೆ ನಾಯಕತ್ವ ಪಟ್ಟ ಕಟ್ಟಿದೆ. ಭಾರತ ಕೂಡ ನೂತನ ನಾಯಕ ಸೂರ್ಯಕುಮಾರ್​ ಯಾದವ್ ಸಾರಥ್ಯದಲ್ಲಿ ಆಡಲಿದೆ.

ಶ್ರೀಲಂಕಾ ಪರಿಕೃತ ತಂಡ


ಚರಿತ್ ಅಸಲಂಕಾ (ನಾಯಕ), ಪಾತುಮ್ ನಿಸ್ಸಾಂಕ, ಕುಸಲ್ ಜನಿತ್ ಪೆರೇರಾ, ಅವಿಷ್ಕ ಫೆರ್ನಾಂಡೋ, ಕುಸಲ್ ಮೆಂಡಿಸ್, ದಿನೇಶ್ ಚಾಂಡಿಮಲ್, ಕಮಿಂದು ಮೆಂಡಿಸ್, ದಸುನ್ ಶನಕ, ವನಿಂದು ಹಸರಂಗ, ದುನಿತ್ ವೆಲ್ಲಲಾಗೆ, ಮಹೇಶ್ ತೀಕ್ಷಣ, ಚಾಮಿಂದು ವಿಕ್ರಮಸಿಂಗ, ಮಥೀಶ ಪತಿರಾನ, ದಿಲ್ಶನ್ ಮಧುಶಂಕ, ಅಸಿತ ಫೆರ್ನಾಂಡೋ, ಬಿನೂರ ಫೆರ್ನಾಂಡೋ.

ಭಾರತ ತಂಡ

ಸೂರ್ಯಕುಮಾರ್ ಯಾದವ್ (ನಾಯಕ), ಶುಭಮನ್ ಗಿಲ್ (ಉಪ ನಾಯಕ), ಯಶಸ್ವಿ ಜೈಸ್ವಾಲ್, ರಿಂಕು ಸಿಂಗ್, ರಿಯಾನ್ ಪರಾಗ್, ರಿಷಭ್ ಪಂತ್ (ವಿ.ಕೀ ), ಸಂಜು ಸ್ಯಾಮ್ಸನ್ (ವಿ.ಕೀ), ಹಾರ್ದಿಕ್ ಪಾಂಡ್ಯ, ಶಿವಂ ದುಬೆ, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ರವಿ ಬಿಷ್ಣೋಯಿ , ಅರ್ಶದೀಪ್​ ಸಿಂಗ್, ಖಲೀಲ್ ಅಹ್ಮದ್, ಮೊಹಮ್ಮದ್​ ಸಿರಾಜ್.

ಟೀಮ್​ ಇಂಡಿಯಾ ಜೆರ್ಸಿಯಲ್ಲಿ ಮಹತ್ವದ ಬದಲಾವಣೆ

ಶ್ರೀಲಂಕಾ(Sri Lanka series) ವಿರುದ್ಧದ ಟಿ20 ಸರಣಿಗೆ ಭಾರತ ತಂಡ(Team India) ಫೋಟೋಶೂಟ್​ ಮಾಡಿದೆ. ಜೆರ್ಸಿಯಲ್ಲಿ ಮಹತ್ವದ ಬದಲಾವಣೆಯೊಂದನ್ನು ಮಾಡಲಾಗಿದೆ. ಜೆರ್ಸಿಯಲ್ಲಿ(Team India unveil new T20I jersey) 2 ಸ್ಟಾರ್​ಗಳನ್ನು ಅಳವಡಿಸಲಾಗಿದೆ. ಈ ಹಿಂದೆ ಟಿ20 ವಿಶ್ವಕಪ್​ ವೇಳೆ ಒಂದು ಸ್ಟಾರ್ ಮಾತ್ರ ಇತ್ತು. ಇದೀಗ ಭಾರತ ತಂಡದ ಎರಡು ಟಿ20 ವಿಶ್ವಕಪ್​ ಗೆಲುವಿನ ಸಂಕೇತವಾಗಿ ಈ ಎರಡು ಸ್ಟಾರ್‌ಗಳನ್ನು ಹಾಕಲಾಗಿದೆ.

Continue Reading

ಕ್ರೀಡೆ

Team India: ಲಂಕಾ ಸರಣಿಗೂ ಮುನ್ನವೇ ಟೀಮ್​ ಇಂಡಿಯಾ ಜೆರ್ಸಿಯಲ್ಲಿ ಮಹತ್ವದ ಬದಲಾವಣೆ

Team India: ನೂತನ ನಾಯಕ ಸೂರ್ಯಕುಮಾರ್​ ಯಾದವ್​, ಉಪನಾಯಕ ಶುಭಮನ್​ ಗಿಲ್​, ಹಾರ್ದಿಕ್ ಪಾಂಡ್ಯ, ಅಕ್ಷರ್​ ಪಟೇಲ್​ ಸೇರಿ ತಂಡದ ಎಲ್ಲ ಆಟಗಾರರು ನೂತನ ಜೆರ್ಸಿಯಲ್ಲಿ ಕಂಗೊಳ್ಳಿಸಿದರು

VISTARANEWS.COM


on

Team India
Koo

ಕೊಲಂಬೊ: ಶ್ರೀಲಂಕಾ(Sri Lanka series) ವಿರುದ್ಧದ ಟಿ20 ಸರಣಿಗೆ ಭಾರತ ತಂಡ(Team India) ಫೋಟೋಶೂಟ್​ ಮಾಡಿದೆ. ಜೆರ್ಸಿಯಲ್ಲಿ ಮಹತ್ವದ ಬದಲಾವಣೆಯೊಂದನ್ನು ಮಾಡಲಾಗಿದೆ. ಜೆರ್ಸಿಯಲ್ಲಿ(Team India unveil new T20I jersey) 2 ಸ್ಟಾರ್​ಗಳನ್ನು ಅಳವಡಿಸಲಾಗಿದೆ. ಈ ಹಿಂದೆ ಟಿ20 ವಿಶ್ವಕಪ್​ ವೇಳೆ ಒಂದು ಸ್ಟಾರ್ ಮಾತ್ರ ಇತ್ತು. ಇದೀಗ ಭಾರತ ತಂಡದ ಎರಡು ಟಿ20 ವಿಶ್ವಕಪ್​ ಗೆಲುವಿನ ಸಂಕೇತವಾಗಿ ಈ ಎರಡು ಸ್ಟಾರ್‌ಗಳನ್ನು ಹಾಕಲಾಗಿದೆ. ಭಾರತ ಮತ್ತು ಶ್ರೀಲಂಕಾ ನಡುವಿನ ಟಿ20 ಸರಣಿ ಜುಲೈ 27 ರಿಂದ ಆರಂಭವಾಗಲಿದೆ.

ನೂತನ ನಾಯಕ ಸೂರ್ಯಕುಮಾರ್​ ಯಾದವ್​, ಉಪನಾಯಕ ಶುಭಮನ್​ ಗಿಲ್​, ಹಾರ್ದಿಕ್ ಪಾಂಡ್ಯ, ಅಕ್ಷರ್​ ಪಟೇಲ್​ ಸೇರಿ ತಂಡದ ಎಲ್ಲ ಆಟಗಾರರು ನೂತನ ಜೆರ್ಸಿಯಲ್ಲಿ ಕಂಗೊಳ್ಳಿಸಿದರು. ಆಟಗಾರರ ಫೋಟೋಶೂಟ್​ನ ವಿಡಿಯೊವನ್ನು ಬಿಸಿಸಿಐ ತನ್ನ ಅಧಿಕೃತ ಟ್ವಿಟರ್​ ಖಾತೆಯಲ್ಲಿ ಹಂಚಿಕೊಂಡಿದೆ. ಲೈಟ್ಸ್​, ಕ್ಯಾಮೆರಾ, ಹೆಡ್‌ಶಾಟ್ ಎಂದು ಬರೆದುಕೊಂಡಿದೆ.​

ನೂತನ ಕೋಚ್​ ಗೌತಮ್ ಗಂಭೀರ್(Gautam Gambhir) ಅವರ ಉಸ್ತುವಾರಿಯಲ್ಲಿ ಭಾರತ ತಂಡ(Team India) ಆಡುತ್ತಿರುವ ಮೊದಲ ಸರಣಿ ಇದಾಗಿದೆ. ಹೀಗಾಗಿ ನಿರೀಕ್ಷೆ ಹೆಚ್ಚಾಗಿಯೇ ಇದೆ. 2021ರ ಬಳಿಕ ಭಾರತ ಮೊದಲ ಬಾರಿಗೆ ಶ್ರೀಲಂಕಾದಲ್ಲಿ ದ್ವಿಪಕ್ಷೀಯ ಸರಣಿ ಆಡಲಿದೆ. ಉಭಯ ತಂಡಗಳು ಹೊಸ ಕೋಚ್​ ಮಾರ್ಗದರ್ಶನದಲ್ಲಿ ಕಣಕ್ಕಿಳಿಯುತ್ತಿರುವುದು ವಿಶೇಷ. ಲಂಕಾ ತಂಡಕ್ಕೆ ಮಾಜಿ ಆಟಗಾರ ಸನತ್​ ಜಯಸೂರ್ಯ ಮಾರ್ಗದರ್ಶನ ನೀಡಲಿದ್ದಾರೆ.

ಪ್ರವಾಸದ ಮೊದಲ 3 ಟಿ20 ಪಂದ್ಯಗಳು ಜುಲೈ 27, 28 ಮತ್ತು 30ರಂದು ಪಲ್ಲೆಕಿಲೆಯಲ್ಲಿ ನಡೆಯಲಿವೆ. ಮೊದಲು ಪ್ರಕಟಗೊಂಡಿದ್ದ ವೇಳಾಪಟ್ಟಿಯಲ್ಲಿ 26ರಿಂದ ಟಿ20 ಪಂದ್ಯ ಆರಂಭವಾಗಬೇಕಿತ್ತು. ಏಕದಿನ ಸರಣಿ ಕೂಡ ಒಂದು ದಿನ ತಡವಾಗಿ ಶುರುವಾಗಬೇಕಿತ್ತು. ಏಕದಿನ ಆಗಸ್ಟ್​ 1ರದ ಬದಲಾಗಿ ಆಗಸ್ಟ್​ 2ರಿಂದ ಆರಂಭಗೊಳ್ಳಲಿದೆ. ಉಳಿದ ಪಂದ್ಯಗಳ ದಿನಾಂಕ ಬದಲಾಗಲಿಲ್ಲ. ಈ ಹಿಂದಿನಂತೆ ಆಗಸ್ಟ್​ 4 ಮತ್ತು 7ರಂದೇ ನಡೆಯಲಿದೆ.

ಇದನ್ನೂ ಓದಿ IND vs SL: ಭಾರತ ವಿರುದ್ಧದ ಟಿ20 ಸರಣಿಗೆ ತಂಡ ಪ್ರಕಟಿಸಿದ ಶ್ರೀಲಂಕಾ

ಟಿ20 ತಂಡ: ಸೂರ್ಯಕುಮಾರ್ ಯಾದವ್ (ನಾಯಕ), ಶುಭಮನ್ ಗಿಲ್ (ಉಪ ನಾಯಕ), ಯಶಸ್ವಿ ಜೈಸ್ವಾಲ್, ರಿಂಕು ಸಿಂಗ್, ರಿಯಾನ್ ಪರಾಗ್, ರಿಷಭ್ ಪಂತ್ (ವಿ.ಕೀ ), ಸಂಜು ಸ್ಯಾಮ್ಸನ್ (ವಿ.ಕೀ), ಹಾರ್ದಿಕ್ ಪಾಂಡ್ಯ, ಶಿವಂ ದುಬೆ, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ರವಿ ಬಿಷ್ಣೋಯಿ , ಅರ್ಶದೀಪ್​ ಸಿಂಗ್, ಖಲೀಲ್ ಅಹ್ಮದ್, ಮೊಹಮ್ಮದ್​ ಸಿರಾಜ್.

ಏಕದಿನ ತಂಡ: ರೋಹಿತ್ ಶರ್ಮ (ನಾಯಕ), ಶುಭಮನ್ ಗಿಲ್ (ಉಪ ನಾಯಕ), ವಿರಾಟ್ ಕೊಹ್ಲಿ, ಕೆ.ಎಲ್. ರಾಹುಲ್ (ವಿ.ಕೀ), ರಿಷಬ್ ಪಂತ್ (ವಿ.ಕೀ), ಶ್ರೇಯಸ್ ಅಯ್ಯರ್, ಶಿವಂ ದುಬೆ, ಕುಲದೀಪ್ ಯಾದವ್, ಮೊಹಮ್ಮದ್ ಸಿರಾಜ್, ವಾಷಿಂಗ್ಟನ್ ಸುಂದರ್, ಅರ್ಷದೀಪ್ ಸಿಂಗ್, ರಿಯಾನ್ ಪರಾಗ್, ಅಕ್ಷರ್ ಪಟೇಲ್, ಖಲೀಲ್ ಅಹ್ಮದ್, ಹರ್ಷಿತ್ ರಾಣಾ.

Continue Reading

ಕ್ರೀಡೆ

Maharaja Trophy: ಮೈಸೂರು ವಾರಿಯರ್ಸ್ ತಂಡ ಸೇರಿದ ದ್ರಾವಿಡ್ ಪುತ್ರ ಸಮಿತ್

Maharaja Trophy: ಆಲ್ ರೌಂಡರ್ ಚೇತನ್ ಎಲ್‌ಆರ್ ಹರಾಜಿನಲ್ಲಿ ಭಾರೀ ಮೊತ್ತ ಪಡೆದರು. ಬೆಂಗಳೂರು ಬ್ಲಾಸ್ಟರ್ಸ್‌ ತಂಡವು ಅವರನ್ನು 8.60 ಲಕ್ಷ ರೂ.ಗೆ ಖರೀದಿ ಮಾಡಿತು

VISTARANEWS.COM


on

Maharaja Trophy
Koo

ಬೆಂಗಳೂರು: ಕರ್ನಾಟಕ ರಾಜ್ಯ ಕ್ರಿಕೆಟ್‌ ಸಂಸ್ಥೆ(ಕೆಎಸ್‌ಸಿಎ) ಆಯೋಜಿಸುವ 3ನೇ ಆವೃತ್ತಿಯ ಮಹಾರಾಜ ಟ್ರೋಫಿ(Maharaja Trophy) ಟಿ20 ಟೂರ್ನಿಯ ಆಟಗಾರರ ಹರಾಜು ಪ್ರಕ್ರಿಯೆ ಗುರುವಾರ ನಡೆಯಿತು. ಅಚ್ಚರಿ ಎಂದರೆ, ಭಾರತ ತಂಡದ ಮಾಜಿ ಕೋಚ್ ರಾಹುಲ್ ದ್ರಾವಿಡ್(Rahul Dravid) ಅವರ ಪುತ್ರ18 ವರ್ಷದ ಸಮಿತ್ ದ್ರಾವಿಡ್(Samit Dravid) ಹರಾಜಿನಲ್ಲಿ 50 ಸಾವಿರ ಮೊತ್ತಕ್ಕೆ ಮೈಸೂರು ವಾರಿಯರ್ಸ್(Mysuru Warriors) ತಂಡದ ಪಾಲಾಗಿದ್ದಾರೆ. ಇದೇ ಮೊದಲ ಬಾರಿಗೆ ಟೂರ್ನಿಯ ಹರಾಜಿನಲ್ಲಿ ಅವರು ಕಾಣಿಸಿಕೊಂಡಿದ್ದರು. ಚೊಚ್ಚಲ ಪ್ರಯತ್ನದಲ್ಲೇ ಯಶಸ್ಸು ಕೂಡ ಕಂಡಿದ್ದಾರೆ. ಪಂದ್ಯಾವಳಿ ಆಗಸ್ಟ್​ 15- ಸೆಪ್ಟೆಂಬರ್​ 1 ರವರೆಗೆ ನಡೆಯಲಿದೆ.

ಆಲ್ ರೌಂಡರ್ ಚೇತನ್ ಎಲ್‌ಆರ್ ಹರಾಜಿನಲ್ಲಿ ಭಾರೀ ಮೊತ್ತ ಪಡೆದರು. ಬೆಂಗಳೂರು ಬ್ಲಾಸ್ಟರ್ಸ್‌ ತಂಡವು ಅವರನ್ನು 8.60 ಲಕ್ಷ ರೂ.ಗೆ ಖರೀದಿ ಮಾಡಿತು. ಇದಾದ ಬಳಿಕ ಅತಿ ಹೆಚ್ಚು ಹಣ ಪಡೆದ ಆಟಗಾರನೆಂದರೆ ಅನುಭವಿ ಲೆಗ್ ಸ್ಪಿನ್ನರ್ ಶ್ರೇಯಸ್ ಗೋಪಾಲ್. ಅವರನ್ನು ಮಂಗಳೂರು ಡ್ರ್ಯಾಗನ್ಸ್ ತಂಡವು 7.60 ಲಕ್ಷ ರೂ. ನೀಡಿ ಖರೀದಿ ಮಾಡಿತು.

ಇದನ್ನೂ ಓದಿ Paris Olympics 2024: ಕ್ವಾರ್ಟರ್​ ಫೈನಲ್​ಗೆ ಲಗ್ಗೆಯಿಟ್ಟ ಭಾರತ ಪುರುಷರ ಆರ್ಚರಿ ತಂಡ; 4ನೇ ಸ್ಥಾನ ಪಡೆದ ಧೀರಜ್​ ಬೊಮ್ಮದೇವರ

ಬೆಂಗಳೂರು ಬ್ಲಾಸ್ಟರ್, ಗುಲ್ಬರ್ಗಾ ಮಿಸ್ಟಿಕ್ಸ್‌, ಹುಬ್ಬಳ್ಳಿ ಟೈಗರ್ಸ್‌, ಮಂಗಳೂರು ಡ್ರ್ಯಾಗನ್ಸ್‌, ಮೈಸೂರು ವಾರಿಯರ್, ಶಿವಮೊಗ್ಗ ಲಯನ್ಸ್‌ ಮಹಾರಾಜ ಟ್ರೋಫಿಯಲ್ಲಿ ಕಣಕ್ಕಿಳಿಯುವ ತಂಡಗಳಾಗಿವೆ.

ಅತಿ ಹೆಚ್ಚು ಹಣ ಪಡೆದ ಆಟಗಾರರ ಪಟ್ಟಿ


ಚೇತನ್ ಎಲ್ ಆರ್ (ಬೆಂಗಳೂರು ಬ್ಲಾಸ್ಟರ್ಸ್) – 8.60 ಲಕ್ಷ ರೂ

ಶ್ರೇಯಸ್ ಗೋಪಾಲ್ (ಮಂಗಳೂರು ಡ್ರಾಗನ್ಸ್) – 7.60 ಲಕ್ಷ ರೂ

ಕೆ ಗೌತಮ್ (ಮೈಸೂರು ವಾರಿಯರ್ಸ್) – 7.40 ಲಕ್ಷ ರೂ

ಲವ್ನಿತ್ ಸಿಸೋಡಿಯಾ (ಗುಲ್ಬರ್ಗಾ ಮಿಸ್ಟಿಕ್ಸ್) – 7.20 ಲಕ್ಷ ರೂ

ಪ್ರವೀಣ್ ದುಬೆ (ಗುಲ್ಬರ್ಗಾ ಮಿಸ್ಟಿಕ್ಸ್) – 6.80 ಲಕ್ಷ ರೂ

ಮೊಹಮ್ಮದ್ ತಾಹಾ (ಹುಬ್ಬಳ್ಳಿ ಟೈಗರ್ಸ್) – 6.60 ಲಕ್ಷ ರೂ

ವಿದ್ಯಾಧರ್ ಪಾಟೀಲ್ (ಮೈಸೂರು ವಾರಿಯರ್ಸ್) – 6.40 ಲಕ್ಷ ರೂ

ಅನೀಶ್ವರ್ ಗೌತಮ್ (ಹುಬ್ಬಳ್ಳಿ ಟೈಗರ್ಸ್) – 6.20 ಲಕ್ಷ ರೂ

ಹಾರ್ದಿಕ್ ರಾಜ್ (ಹುಬ್ಬಳ್ಳಿ ಟೈಗರ್ಸ್) – 5.80 ಲಕ್ಷ ರೂ

ಜಗದೀಶ ಸುಚಿತ್ (ಮೈಸೂರು ವಾರಿಯರ್ಸ್) – 4.80 ಲಕ್ಷ ರೂ

ಕ್ರಾಂತಿ ಕುಮಾರ್ ಎಂ (ಬೆಂಗಳೂರು ಬ್ಲಾಸ್ಟರ್ಸ್) – 4.40 ಲಕ್ಷ ರೂ

ಕೆ.ಸಿ.ಕಾರಿಯಪ್ಪ (ಹುಬ್ಬಳ್ಳಿ ಟೈಗರ್ಸ್)- 4.20 ಲಕ್ಷ ರೂ

ವೆಂಕಟೇಶ್ ಎಂ (ಮೈಸೂರು ವಾರಿಯರ್ಸ್) – 3.40 ಲಕ್ಷ ರೂ

ಅನಿರುದ್ಧ ಜೋಶಿ (ಬೆಂಗಳೂರು ಬ್ಲಾಸ್ಟರ್ಸ್) – 3 ಲಕ್ಷ ರೂ

ಎಂಜಿ ನವೀನ್ (ಬೆಂಗಳೂರು ಬ್ಲಾಸ್ಟರ್ಸ್) – 2.30 ಲಕ್ಷ ರೂ

ಧೀರಜ್ ಗೌಡ (ಮಂಗಳೂರು ಡ್ರಾಗನ್ಸ್) – 1 ಲಕ್ಷ ರೂ

ಪ್ರದೀಪ್ ಟಿ (ಶಿವಮೊಗ್ಗ ಲಯನ್ಸ್) – 1 ಲಕ್ಷ ರೂ

ಪ್ರತೀಕ್ ಜೈನ್ (ಬೆಂಗಳೂರು ಬ್ಲಾಸ್ಟರ್ಸ್) – 1 ಲಕ್ಷ ರೂ

ದರ್ಶನ್ ಎಂಬಿ (ಮಂಗಳೂರು ಡ್ರಾಗನ್ಸ್) – 1 ಲಕ್ಷ ರೂ

ಶರತ್ ಬಿಆರ್ (ಗುಲ್ಬರ್ಗಾ ಮಿಸ್ಟಿಕ್ಸ್) – 1 ಲಕ್ಷ ರೂ

ಪ್ರಸಿದ್ಧ್​ ಕೃಷ್ಣ (ಮೈಸೂರು ವಾರಿಯರ್ಸ್) – 1 ಲಕ್ಷ ರೂ

Continue Reading

ಕ್ರೀಡೆ

Paris Olympics 2024: ಕ್ವಾರ್ಟರ್​ ಫೈನಲ್​ಗೆ ಲಗ್ಗೆಯಿಟ್ಟ ಭಾರತ ಪುರುಷರ ಆರ್ಚರಿ ತಂಡ; 4ನೇ ಸ್ಥಾನ ಪಡೆದ ಧೀರಜ್​ ಬೊಮ್ಮದೇವರ

Paris Olympics 2024:ಪುರುಷರ ಆರ್ಚರಿ ಶ್ರೇಯಾಂಕ ಸುತ್ತಿನಲ್ಲಿ ಭಾರತವು 2013 ಅಂಕಗಳೊಂದಿಗೆ 3ನೇ ಸ್ಥಾನ ಗಳಿಸುವ ಮೂಲಕ ಕ್ವಾರ್ಟರ್​ ಫೈನಲ್​ಗೆ ಲಗ್ಗೆಯಿಟ್ಟಿದೆ

VISTARANEWS.COM


on

Paris Olympics 2024
Koo

ಪ್ಯಾರಿಸ್​: ಶಾಂಘೈನಲ್ಲಿ ಐತಿಹಾಸಿಕ ವಿಶ್ವಕಪ್​ ಜಯಿಸಿದ ತರುಣ್​ ದೀಪ್​ ರೈ(Tarundeep Rai), ಪ್ರವೀಣ್​ ಜಾಧವ್​(Pravin Jadhav) ಹಾಗೂ ಯುವ ಬಿಗ್ಲಾರ ಧೀರಜ್​ ಬೊಮ್ಮದೇವರ(Dhiraj Bommadevara) ಅವರನ್ನೊಳಗೊಂಡ ಭಾರತದ ಪುರುಷರ ಆರ್ಚರಿ ತಂಡ ಪ್ಯಾರಿಸ್​ ಒಲಿಂಪಿಕ್ಸ್(Paris Olympics 2024)​ನಲ್ಲಿಯೂ ಪದಕ ಗೆಲ್ಲುವ ಬರವಸೆ ಮೂಡಿಸಿದೆ. ಗುರುವಾರ ನಡೆದ ಪುರುಷರ ಆರ್ಚರಿ ಶ್ರೇಯಾಂಕ ಸುತ್ತಿನಲ್ಲಿ 2013 ಅಂಕಗಳೊಂದಿಗೆ 3ನೇ ಸ್ಥಾನ ಗಳಿಸುವ ಮೂಲಕ ಕ್ವಾರ್ಟರ್​ ಫೈನಲ್​ಗೆ ಲಗ್ಗೆಯಿಟ್ಟಿದೆ. ಇದಕ್ಕೂ ಮುನ್ನ ನಡೆದ ಮಹಿಳಾ ವಿಭಾಗದದಲ್ಲಿ ಭಾರತ 4ನೇ ಸ್ಥಾನ ಗಳಿಸಿ ಕ್ವಾರ್ಟರ್​ ಫೈನಲ್​ ಪ್ರವೇಶಿಸಿತ್ತು. ಮಿಶ್ರ ತಂಡದಲ್ಲಿ ಭಾರತ 5ನೇ ಸ್ಥಾನ ಪಡೆಯಿತು. ಮಿಶ್ರ ವಿಭಾಗದಲ್ಲಿ ಧೀರಜ್​ ಬೊಮ್ಮದೇವರ ಮತ್ತು ಅಂಕಿತಾ ಭಗತ್ ಜತೆಯಾಗಿ ಆಡಲಿದ್ದಾರೆ.

ಅತ್ಯಂತ ಜಿದ್ದಾಜಿದ್ದಿನಿಂದ ನಡೆದ ವೈಯಕ್ತಿಕ ವಿಭಾಗದ ಸ್ಪರ್ಧೆಯಲ್ಲಿ ಹಲವು ಏರಿಳಿತ ಕಂಡ ಭಾರತೀಯ ಬಿಲ್ಗಾರರು ಕೊನೆಗೂ ಉತ್ತಮ ಸ್ಥಾನದೊಂದಿಗೆ ಮಿಂಚಿದರು. ಧೀರಜ್​ ಬೊಮ್ಮದೇವರ 681 ಅಂಕದೊಂದಿಗೆ 4ನೇ ಸ್ಥಾನ ಪಡೆದರೆ, ತರುಣ್​ ದೀಪ್​ ರೈ(674 ಅಂಕ) 14ನೇ ಮತ್ತು ಪ್ರವೀಣ್​ ಜಾಧವ್ 39ನೇ (658 ಅಂಕ) ಸ್ಥಾನ ಪಡೆದರು.

ವೈಯಕ್ತಿಕ ಶ್ರೇಯಾಂಕ ವಿಭಾಗದ ಮೊದಲ ಸೆಟ್​ನಲ್ಲಿ ಧೀರಜ್​ ಬೊಮ್ಮದೇವರ 57( (10, 10, 10, 10, 10, 9, 8) ಅಂಕದೊಂದಿಗೆ 11ನೇ ಸ್ಥಾನ ಗಳಿಸಿದರೆ, ಅನುಭವಿ ಪ್ರವೀಣ್​ ಜಾಧವ್ 55(X, 10, 10, 9, 9, 8) ಹಾಗೂ ತರುಣ್​ ದೀಪ್​ ರೈ 55(10, 10, 10, 9, 9, 8) ಅಂಕದೊಂದಿಗೆ ಕ್ರಮವಾಗಿ 30 ಮತ್ತು 33ನೇ ಸ್ಥಾನ ಪಡೆದರು. 2ನೇ ಸುತ್ತಿನಲ್ಲಿ ತರುಣ್​ ದೀಪ್​ ರೈ ಉತ್ತಮ ಗುರಿ ಇಡುವ ಮೂಲಕ 16ನೇ ಸ್ಥಾನಕ್ಕೇರಿದರು. ಆದರೆ ಮೊದಲ ಸುತ್ತಿನಲ್ಲಿ ಮುಂದಿದ್ದ ಧೀರಜ್​ ಬೊಮ್ಮದೇವರ ಆ ಬಳಿಕ ಕುಸಿತ ಕಾಣಲಾರಂಭಿಸಿದರು. ವೈಯಕ್ತಿಕ ವಿಭಾಗದಲ್ಲಿ 5 ಸುತ್ತು ಪೂರ್ಣಗೊಂಡ ವೇಳೆ ಭಾರತ ತಂಡ 832 ಅಂಕದೊಂದಿಗೆ 5ನೇ ಸ್ಥಾನದಲ್ಲಿ ಕಾಣಿಸಿಕೊಂಡಿತ್ತು.

6ನೇ ಸೆಟ್​​ನಲ್ಲಿ ತರುಣ್​ ದೀಪ್​ ರೈ 56 ಅಂಕದೊಂದಿಗೆ 14ನೇ ಸ್ಥಾನಕ್ಕೇರಿದರು. ಅತ್ತ ಧೀರಜ್ ಮತ್ತು ಪ್ರವೀಣ್ ಕೂಡ ತಮ್ಮ ಸ್ಥಾನಗಳಲ್ಲಿ ಏರಿಕೆ ಕಂಡರು. ಆದರೆ, ತಂಡ ವಿಭಾಗದಲ್ಲಿ 1000 ಅಂಕದೊಂದಿಗೆ ಒಂದು ಸ್ಥಾನ ಕುಸಿತ ಕಂಡು 6ಕ್ಕೆ ಇಳಿಯಿತು. ಕೊರಿಯಾ ಅಗ್ರಸ್ಥಾನ, ಫ್ರಾನ್ಸ್ ಮತ್ತು ಇಟಲಿ ಕ್ರಮವಾಗಿ ಎರಡು ಮತ್ತು ಮೂರನೇ ಸ್ಥಾನ ಪಡೆಯಿತು. ಚೀನಾ 5ನೇ ಸ್ಥಾನ ಸಂಪಾದಿಸಿತು.

ಇದನ್ನೂ ಓದಿ Paris Olympics 2024: ಕ್ವಾರ್ಟರ್​ ಫೈನಲ್​ಗೆ ಲಗ್ಗೆಯಿಟ್ಟ ಭಾರತ ಪುರುಷರ ಆರ್ಚರಿ ತಂಡ; 4ನೇ ಸ್ಥಾನ ಪಡೆದ ಧೀರಜ್​ ಬೊಮ್ಮದೇವರ

ಮೊದಲ ಸೆಟ್​ನಲ್ಲಿ 11ನೇ ಸ್ಥಾನಗಳಿಸಿ ಆ ಬಳಿಕದ ಸುತ್ತಿನಲ್ಲಿ ಕುಸಿತ ಕಂಡಿದ್ದ ಯುವ ಬಿಗ್ಲಾರ ಧೀರಜ್​ ಬೊಮ್ಮದೇವರ ಫಿನಿಕ್ಸ್​ನಂತೆ ಎದ್ದು ಬಂದು 7ನೇ ಸುತ್ತಿನಲ್ಲಿ 58 (X, X, 10, 10, 9, 9) ಅಂಕದೊಂದಿಗೆ 10ನೇ ಸ್ಥಾನಕ್ಕೆ ಜಿಗಿದರು. ಹಿಂದಿನ ಸೆಟ್​ನಲ್ಲಿ 24ನೇ ಸ್ಥಾನಿಯಾಗಿದ್ದರು. ತರುಣ್​ ದೀಪ್​ ರೈ ಈ ಸುತ್ತಿನಲ್ಲಿ ಒಂದು ಸ್ಥಾನ ಕುಸಿದ ಕಂಡರೂ ಕೂಡ ತಕ್ಷಣ ಎಚ್ಚೆತ್ತುಕೊಂಡು 8ನೇ ಸುತ್ತಿನಲ್ಲಿ 15ನೇ ಸ್ಥಾನದಿಂದ 12ನೇ ಸ್ಥಾನಕ್ಕೆ ಏರಿಕೆ ಕಂಡರು. ಉಭಯ ಬಿಲ್ಗಾರರ ಈ ಶ್ರೇಷ್ಠ ಸಾಧನೆಯಿಂದ ಭಾರತ, ತಂಡ ವಿಭಾಗದಲ್ಲಿ ಮೂರನೇ ಸ್ಥಾನಕ್ಕೇರಿತು. 9ನೇ ಸೆಟ್​ನಲ್ಲಿ 5 ಬಿಲ್ಲುಗಳನ್ನು 10 ಅಂಕಕ್ಕೆ ಗುರಿ ಇಟ್ಟ ಧೀರಜ್ 8ನೇ ಸ್ಥಾನ ಪೆಡೆದುಕೊಂಡರು. ಇದೇ ವೇಳೆ ಭಾರತ ತಂಡ 1511 ಅಂಕದೊಂದಿಗೆ 2ನೇ ಸ್ಥಾನಕ್ಕೆ ಜಿಗಿಯಿತು. ಆದರೆ ಅಂತಿಮ ಸುತ್ತಿನಲ್ಲಿ ಒಂದು ಸ್ಥಾನ ಕುಸಿತ ಕಂಡು 3ನೇ ಸ್ಥಾನ ಪಡೆದು ಕ್ವಾರ್ಟರ್​ ಫೈನಲ್​ ಪ್ರವೇಶಿಸಿತು. ದಕ್ಷಿಣ ಕೊರಿಯಾ 2049 ಅಂಕದೊಂದಿಗೆ ಅಗ್ರಸ್ಥಾನ ಪಡೆದರೆ, ಆತಿಥೇಯ ಫ್ರಾನ್ಸ್​ 2025 ಅಂಕ ಗಳಿಸಿ ದ್ವಿತೀಯ ಸ್ಥಾನಕ್ಕೆ ತೃಪ್ತಿಪಟ್ಟಿತು. ಚೀನಾ 1998 ಅಂಕದೊಂದಿಗೆ ನಾಲ್ಕನೇ ಸ್ಥಾನ ಪಡೆಯಿತು. ಭಾರತ ಪುರುಷರ ತಂಡ ಕ್ವಾರ್ಟರ್ ಫೈನಲ್ ಸುತ್ತಿನಲ್ಲಿ ಟರ್ಕಿಯೆ ಅಥವಾ ಕೊಲಂಬಿಯಾ ವಿರುದ್ಧ ಸೆಣಸಲಿದೆ.

Continue Reading
Advertisement
NEET UG 2024
ದೇಶ2 hours ago

NEET UG 2024: ನೀಟ್‌ ಪ್ರಶ್ನೆಪತ್ರಿಕೆಯನ್ನು ಎಗರಿಸಿದ್ದು ಯಾವ ಕೇಂದ್ರದಿಂದ? ಸಿಬಿಐ ಸ್ಫೋಟಕ ಮಾಹಿತಿ ಬಯಲು

V Sumangala
ಕರ್ನಾಟಕ2 hours ago

V Sumangala: ಶಿಕ್ಷಣ ಇಲಾಖೆಯಲ್ಲಿ 1.62 ಕೋಟಿ ರೂ. ಅಕ್ರಮ; DSERT ನಿರ್ದೇಶಕಿ ಸುಮಂಗಲಾ ಅಮಾನತು!

Sri lanka Team
ಕ್ರೀಡೆ2 hours ago

Sri lanka Team: ಟಿ20 ಸರಣಿ ಆರಂಭಕ್ಕೂ ಮುನ್ನವೇ ಲಂಕಾಗೆ ಗಾಯದ ಬರೆ; ಇಬ್ಬರು ವೇಗಿಗಳು ಔಟ್​

HD Deve Gowda
ದೇಶ3 hours ago

HD Deve Gowda: ವ್ಹೀಲ್‌ಚೇರ್‌ನಲ್ಲೇ ತೆರಳಿ ಮೋದಿಯನ್ನು ಭೇಟಿಯಾದ ದೇವೇಗೌಡ; ಇಲ್ಲಿವೆ ಫೋಟೊಗಳು

Team India
ಕ್ರೀಡೆ4 hours ago

Team India: ಲಂಕಾ ಸರಣಿಗೂ ಮುನ್ನವೇ ಟೀಮ್​ ಇಂಡಿಯಾ ಜೆರ್ಸಿಯಲ್ಲಿ ಮಹತ್ವದ ಬದಲಾವಣೆ

Atal Setu
ಪ್ರಮುಖ ಸುದ್ದಿ4 hours ago

Atal Setu: ಅಟಲ್‌ ಸೇತು ಮೇಲೆ ಕಾರಿನಲ್ಲಿ ಬಂದು, ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಟೆಕ್ಕಿ; ಏನಾಗಿತ್ತು?

Health Minister Dinesh Gundurao instructs to send a team of deputy directors to dengue hot spots
ಕರ್ನಾಟಕ4 hours ago

Dengue Fever: ಬೆಂಗಳೂರಿನಲ್ಲೇ ಶೇ.50ರಷ್ಟು ಡೆಂಗ್ಯೂ ಪ್ರಕರಣಗಳು; ಹಾಟ್‌ಸ್ಪಾಟ್‌ಗಳಿಗೆ ಅಧಿಕಾರಿಗಳ ತಂಡ

Media Connect Founder and ceo Dr Divya Rangenahalli honored at Chess Festival in bengaluru
ಬೆಂಗಳೂರು4 hours ago

Media Connect: ಚೆಸ್‌ ಹಬ್ಬದಲ್ಲಿ ಮೀಡಿಯಾ ಕನೆಕ್ಟ್‌ ಸಂಸ್ಥಾಪಕಿ ಡಾ. ದಿವ್ಯಾ ರಂಗೇನಹಳ್ಳಿಗೆ ಸನ್ಮಾನ

1200 farmers suicides in last 15 months in Karnataka says Minister Pralhad Joshi Minister Pralhad Joshi alleges
ಕರ್ನಾಟಕ4 hours ago

Pralhad Joshi: ಕರ್ನಾಟಕದಲ್ಲಿ ಕಳೆದ 15 ತಿಂಗಳಲ್ಲಿ 1200 ರೈತರ ಆತ್ಮಹತ್ಯೆ!

BJP Protest
ಕರ್ನಾಟಕ5 hours ago

BJP Protest: ದಾಖಲೆ ನೀಡದೆ ಹೇಡಿಯಂತೆ ಪಲಾಯನ; ಸಿಎಂ ರಾಜೀನಾಮೆ ಪಡೆಯಲು ರಾಜ್ಯಪಾಲರಿಗೆ ಆರ್‌.ಅಶೋಕ್‌ ಮನವಿ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Rain
ಮಳೆ8 hours ago

Karnataka Rain : ಮನೆಯೊಳಗೆ ನುಗ್ಗಿದ ಮಳೆ ನೀರು; ಕಾಲು ಜಾರಿ ಬಿದ್ದು ವೃದ್ಧೆ ಸಾವು

Actor Darshan
ಸ್ಯಾಂಡಲ್ ವುಡ್12 hours ago

Actor Darshan: ನಟ ದರ್ಶನ್ ಇರುವ ಜೈಲು ಕೋಣೆ ಹೇಗಿದೆ?

Actor Darshan
ಸಿನಿಮಾ12 hours ago

Actor Darshan : ಹೆಂಡ್ತಿ ಮಕ್ಕಳೊಟ್ಟಿಗೆ ಚೆನ್ನಾಗಿರು.. ಸಹಕೈದಿ ಜತೆಗೆ 12 ನಿಮಿಷ ಕಳೆದ ನಟ ದರ್ಶನ್‌

Actor Darshan
ಸಿನಿಮಾ14 hours ago

Actor Darshan: ಆಧ್ಯಾತ್ಮದತ್ತ ವಾಲಿದ ದರ್ಶನ್‌; ಜೈಲಲ್ಲಿ ಹೇಗಿದೆ ಗೊತ್ತಾ ನಟನ ಬದುಕು

karnataka Weather Forecast
ಮಳೆ2 days ago

Karnataka Weather : ರಭಸವಾಗಿ ಸುರಿಯುವ ಮಳೆ; 50 ಕಿ.ಮೀ ವೇಗದಲ್ಲಿ ಬೀಸುತ್ತೆ ಗಾಳಿ

karnataka weather Forecast
ಮಳೆ2 days ago

Karnataka Weather : ರಾಜ್ಯದಲ್ಲಿ ಮುಂದುವರಿದ ಮಳೆ ಅವಾಂತರ; ನಾಳೆಯೂ ಇರಲಿದೆ ಅಬ್ಬರ

Udupi News
ಉಡುಪಿ2 days ago

Udupi News : ಹಳೆ ಲಾರಿ ಚಾಸ್ಸಿಯಲ್ಲೇ ಕಿರು ಸೇತುವೆ ನಿರ್ಮಾಣ! ಬೈಂದೂರು ಶಾಸಕರ ಪರಿಕಲ್ಪನೆಗೆ ಜನರು ಫಿದಾ

murder case
ರಾಮನಗರ3 days ago

Murder Case : ರಾಮನಗರದಲ್ಲೊಂದು ಪೈಶಾಚಿಕ ಕೃತ್ಯ; ಅತ್ಯಾಚಾರವೆಸಗಿ 4 ವರ್ಷದ ಬಾಲಕಿಯನ್ನು ಕೊಂದ ದುಷ್ಟ

karnataka Rain
ಮಳೆ5 days ago

Karnataka Rain : ಭಾರಿ ಮಳೆಗೆ ಮನೆ ಗೋಡೆ ಕುಸಿತ; ಕೊಟ್ಟಿಗೆಯಲ್ಲಿದ್ದ ಜಾನುವಾರುಗಳು ಸಾವು

karnataka Rain
ಮಳೆ6 days ago

Karnataka Rain : ಹಳ್ಳ ದಾಟಲು ಹೋಗಿ ನೀರುಪಾಲಾದ ಜಾನುವಾರು; ಬಿರುಗಾಳಿಗೆ ಕಳಚಿದ ವಿಂಡ್‌ ಫ್ಯಾನ್‌

ಟ್ರೆಂಡಿಂಗ್‌