Yadgiri News: ಜಿಲ್ಲಾ ಮಟ್ಟದಲ್ಲಿ ಪ್ರಗತಿಗೆ ಪ್ರಧಾನಿಯ 15 ಅಂಶಗಳ ಕಾರ್ಯಕ್ರಮ - Vistara News

ಯಾದಗಿರಿ

Yadgiri News: ಜಿಲ್ಲಾ ಮಟ್ಟದಲ್ಲಿ ಪ್ರಗತಿಗೆ ಪ್ರಧಾನಿಯ 15 ಅಂಶಗಳ ಕಾರ್ಯಕ್ರಮ

Yadgiri News: ಯಾದಗಿರಿ ಜಿಲ್ಲೆಯ ವ್ಯಾಪ್ತಿಯಲ್ಲಿ ಒಟ್ಟು 49 ಘೋಷಿತ ಕೊಳಚೆ ಪ್ರದೇಶಗಳಿದ್ದು, ಅಲ್ಲಿ ಸುಮಾರು 50,226 ಜನಸಂಖ್ಯೆ ವಾಸಿಸುತ್ತಿದ್ದು, ಇದರಲ್ಲಿ ಅಲ್ಪಸಂಖ್ಯಾತರ 1081 ಕುಟುಂಬಗಳಿದ್ದು, ಸುಮಾರು 6445 ಅಲ್ಪಸಂಖ್ಯಾತ ಜನರು ವಾಸಿಸುತ್ತಿದ್ದಾರೆ. ಇವರಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸಿ ಅಭಿವೃದ್ಧಿಪಡಿಸಲು ಸರ್ಕಾರಕ್ಕೆ ಪ್ರಸ್ತಾವನೆ ಕಳಿಸಲು ಸಂಬಂಧಿಸಿದ ಇಲಾಖೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ. ಸುಶೀಲ ಬಿ. ಸೂಚಿಸಿದ್ದಾರೆ.

VISTARANEWS.COM


on

Prime Minister 15 Point Programme District Level Meeting at Yadgiri
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಯಾದಗಿರಿ: ಪ್ರಧಾನಮಂತ್ರಿ ಅವರ 15 ಅಂಶಗಳ ಕಾರ್ಯಕ್ರಮವನ್ನು ಸಮರ್ಪಕವಾಗಿ ಅರ್ಹರಿಗೆ ತಲುಪಿಸುವಂತೆ ಜಿಲ್ಲಾಧಿಕಾರಿ ಡಾ. ಸುಶೀಲ ಬಿ. ಸಂಬಂಧಿಸಿದ ಅಧಿಕಾರಿಗಳಿಗೆ (Yadgiri News) ಸೂಚಿಸಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಪ್ರಧಾನಮಂತ್ರಿ ಅವರ 15 ಅಂಶಗಳ ಕಾರ್ಯಕ್ರಮ ಜಿಲ್ಲಾ ಮಟ್ಟದ 2024-25ನೇ ಸಾಲಿನ ಮೊದಲನೇ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಯಾದಗಿರಿ ಜಿಲ್ಲೆಯ ವ್ಯಾಪ್ತಿಯಲ್ಲಿ ಒಟ್ಟು 49 ಘೋಷಿತ ಕೊಳಚೆ ಪ್ರದೇಶಗಳಿದ್ದು, ಅಲ್ಲಿ ಸುಮಾರು 50, 226 ಜನಸಂಖ್ಯೆ ವಾಸಿಸುತ್ತಿದ್ದು, ಇದರಲ್ಲಿ ಅಲ್ಪಸಂಖ್ಯಾತರ 1081 ಕುಟುಂಬಗಳಿದ್ದು, ಸುಮಾರು 6445 ಅಲ್ಪಸಂಖ್ಯಾತ ಜನರು ವಾಸಿಸುತ್ತಿದ್ದಾರೆ. ಇವರಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸಿ ಅಭಿವೃದ್ಧಿಪಡಿಸಲು ಸರ್ಕಾರಕ್ಕೆ ಪ್ರಸ್ತಾವನೆ ಕಳಿಸಲು ಸಂಬಂಧಿಸಿದ ಇಲಾಖೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚಿಸಿದರು.

ಇದನ್ನೂ ಓದಿ: Pralhad joshi: ನವೀಕರಿಸಬಹುದಾದ ಇಂಧನ ಉತ್ಪಾದನೆ; ವಿಶ್ವದಲ್ಲೇ 4ನೇ ಸ್ಥಾನದಲ್ಲಿ ಭಾರತ

ಅಲ್ಪಸಂಖ್ಯಾತರ ಅಭಿವೃದ್ಧಿ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಸಾರ್ವಜನಿಕ ಶಿಕ್ಷಣ, ಅಲ್ಪಸಂಖ್ಯಾತರ ಕಲ್ಯಾಣ, ಜಿಲ್ಲಾ ಪಂಚಾಯಿತಿ, ಕೈಗಾರಿಕೆ, ಕೌಶಲ್ಯಾಭಿವೃದ್ಧಿ ಮತ್ತಿತರ ಇಲಾಖೆಗಳು ತಮ್ಮ ಇಲಾಖೆ ವ್ಯಾಪ್ತಿಯ ಕಾರ್ಯಕ್ರಮಗಳನ್ನು ಅಲ್ಪಸಂಖ್ಯಾತರಿಗೆ ತಲುಪಿಸಿ, ಪ್ರಗತಿ ಸಾಧಿಸಬೇಕು. ಯಾವುದೇ ಕಾರಣಕ್ಕೂ ವಿಳಂಬ ಅನುಸರಿಸಬಾರದು ಎಂದು ಸೂಚಿಸಿದರು.

ಇದನ್ನೂ ಓದಿ: Samsung Galaxy: ಎಐ ಆಧರಿತ ಗ್ಯಾಲಕ್ಸಿ ಝಡ್ ಫೋಲ್ಡ್ 6, ಝಡ್ ಫ್ಲಿಪ್6 ಹೇಗಿದೆ? ದರ ಎಷ್ಟು?

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯಿತಿ ಸಿಪಿಒ ಗುರುನಾಥ ಗೌಡಪ್ಪನ್ನೋರ್, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಅಧಿಕಾರಿ ಕೆ. ಪ್ರವೀಣಕುಮಾರ್‌, ಲೀಡ್ ಬ್ಯಾಂಕ್ ಮ್ಯಾನೇಜರ್ ಭೀಮರಾವ್ ಪಂಚಾಳ, ಕೌಶಲ್ಯಾಭಿವೃದ್ದಿ ಇಲಾಖೆ ಸಹಾಯಕ ನಿರ್ದೇಶಕ ಬಸಪ್ಪ ಎಸ್ ತಳವಾಡಿ, ನಗರಸಭೆಯ ಕಾರ್ಯಪಾಲಕ ಅಭಿಯಂತರ ರಜನಿಕಾಂತ್ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮಳೆ

Karnataka Weather : ಭಾರಿ ಮಳೆ ಎಚ್ಚರಿಕೆ; ನಾಳೆ ಹಾಸನ, ಕೊಡಗಿನ ಈ ಶಾಲೆಗಳಿಗೆ ರಜೆ ಘೋಷಣೆ

Karnataka Weather Forecast : ರಾಜ್ಯಾದ್ಯಂತ ಮಳೆ ಅಬ್ಬರ (Rain News) ಮುಂದುವರಿದಿದೆ. ಮುಂಜಾಗ್ರತಾ ಕ್ರಮವಾಗಿ ಹಾಸನದ ಕೆಲ ಶಾಲೆಗಳಿಗೆ ಶುಕ್ರವಾರ ರಜೆ ಘೋಷಣೆ ಮಾಡಲಾಗಿದೆ. ಮುಂದಿನ 24ಗಂಟೆಯಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ.

VISTARANEWS.COM


on

By

karnataka weather Forecast
Koo

ಹಾಸನ: ಹಾಸನ ಜಿಲ್ಲೆಯಾದ್ಯಂತ ಮಳೆ (Heavy rain) ಮುಂದುವರಿದಿದ್ದು, ಆರು ತಾಲೂಕಿನ ಶಾಲೆಗಳಿಗೆ ನಾಳೆ ರಜೆ ಘೋಷಣೆ (Karnataka Weather Forecast) ಮಾಡಲಾಗಿದೆ. ಜು.26ರಂದು ಸಕಲೇಶಪುರ, ಆಲೂರು, ಬೇಲೂರು, ಹಾಸನ, ಹೊಳೆನರಸೀಪುರ ಹಾಗೂ ಅರಕಲಗೂಡು ತಾಲೂಕುಗಳಿಗೆ ರಜೆ ಘೋಷಿಸಿ ಡಿಡಿಪಿಐ ಹೆಚ್.ಕೆ.ಪಾಂಡು ಆದೇಶ ಹೊರಡಿಸಿದ್ದಾರೆ. ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ಮಾತ್ರ ರಜೆ ಘೋಷಣೆ ಮಾಡಲಾಗಿದೆ.

ಇನ್ನೂ ಕೊಡಗು ಜಿಲ್ಲೆಯಲ್ಲೂ ಮಳೆ ಅಬ್ಬರದಿಂದಾಗಿ ಮುನ್ನೆಚ್ಚರಿಕಾ ಕ್ರಮವಾಗಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಪದವಿ ಹಾಗೂ ಸ್ನಾತಕೋತ್ತರ ಕಾಲೇಜುಗಳನ್ನು ಹೊರತು ಪಡಿಸಿ ಅಂಗನವಾಡಿ ಸೇರಿದಂತೆ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿ ಕೊಡಗು ಜಿಲ್ಲಾಧಿಕಾರಿ ವೆಂಕಟರಾಜಾ ಆದೇಶ ಹೊರಡಿಸಿದ್ದಾರೆ.

ಭಾರಿ ಮಳೆಗೆ ಉಕ್ಕಿ ಹರಿದ ಐಗೂರು ಹೊಳೆ

ಭಾರಿ ಮಳೆಗೆ ಹಾಸನದ ಐಗೂರು ಹೊಳೆ ಉಕ್ಕಿ ಹರಿದಿದೆ. ಪರಿಣಾಮ ಯಡಿಕೇರಿ-ಕುಂಬ್ರಳ್ಳಿ ,ಹೆತ್ತೂರು ನಡುವಿನ ಸೇತುವೆ ಮಳುಗಡೆಯಾಗಿದೆ. ಸಕಲೇಶಪುರ ತಾಲೂಕಿನ ಯಡಿಕೇರಿ-ಕುಂಬ್ರಳ್ಳಿ ನಡುವಿನ ಸೇತುವೆ ಮುಳುಗಡೆಯಿಂದಾಗಿ ಯಡಿಕೇರಿ-ಕುಂಬ್ರಳ್ಳಿ-ಹೆತ್ತೂರು ಹಾಗೂ ಸಕಲೇಶಪುರಕ್ಕೆ ರಸ್ತೆ ಸಂಪರ್ಕ ಕಡಿತಗೊಂಡಿದೆ.

ರಸ್ತೆ ಸಂಪರ್ಕವಿಲ್ಲದೆ ಗ್ರಾಮಸ್ಥರು ಪರದಾಟ ಅನುಭವಿಸಿದರು. ಜನ-ಜಾನುವಾರು, ವಾಹನ ಓಡಾಡಲಾಗದೆ ತೀವ್ರ ಸಮಸ್ಯೆಗೆ ಸಿಲುಕಬೇಕಾಯಿತು. ಸೇತುವೆ ದುರಸ್ತಿ ಮಾಡುವಂತೆ ಸ್ಥಳೀಯರು ಒತ್ತಾಯಿಸಿದ್ದಾರೆ. ಸೇತುವೆ ಮೇಲೆ ಅಪಾಯಕಾರಿ ರೀತಿಯಲ್ಲಿ ನೀರು ಹರಿಯುತ್ತಿದ್ದು, ಮುಂಜಾಗ್ರತಾ ಕ್ರಮವಾಗಿ ಸೇತುವೆ ಮೇಲೆ ಸಂಚಾರ ನಿಷೇಧ ಹಾಕಲಾಗಿದೆ. ಸೇತುವೆಯ ಎರಡೂ ಬದಿಗೂ ಬ್ಯಾರಿಕೇಡ್ ಹಾಕಿ ಸಂಚಾರಕ್ಕೆ ತಡೆಹಿಡಿಯಲಾಗಿದೆ.

ಸಕಲೇಶಪುರ ಹಾಗೂ ಚಿಕ್ಕಮಗಳೂರು ಜಿಲ್ಲೆಯಲ್ಲಿ ಎಡಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಹೇಮಾವತಿ ಜಲಾಶಯಕ್ಕೆ ಒಳಹರಿವು ಏರಿಕೆಯಾಗುತ್ತಿದೆ. ಒಳಹರಿವು ಹೆಚ್ಚಾದ ಹಿನ್ನೆಲೆ‌ಯಲ್ಲಿ ಆರು ಕ್ರಸ್ಟ್ ಗೇಟ್‌ಗಳ ಮೂಲಕ 65 ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗುತ್ತಿದೆ. ಹೀಗಾಗಿ ಹೇಮಾವತಿ ನದಿಯ ತಗ್ಗು ಪ್ರದೇಶದ ಮತ್ತು ನದಿಯ ಎರಡು ದಂಡೆಯಲ್ಲಿರುವ ಜನರು ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಸೂಚನೆ ನೀಡಲಾಗಿದೆ. ಅಲ್ಲದೇ ಆಸ್ತಿ ಪಾಸ್ತಿ ಹಾಗೂ ಜಾನುವಾರುಗಳ ರಕ್ಷಣೆಗೆ ಮುಂಜಾಗ್ರತಾ ಕ್ರಮ ಕೈಗೊಳ್ಳವಂತೆ ಹೇಮಾವತಿ ಅಣೆಕಟ್ಟು ವಿಭಾಗದ ಕಾರ್ಯಪಾಲಕ ಇಂಜಿನಿಯರ್‌ರಿಂದ ಎಚ್ಚರಿಕೆ ನೀಡಲಾಗಿದೆ.

ಇದನ್ನೂ ಓದಿ: Karnataka Rain : ಮನೆಯೊಳಗೆ ನುಗ್ಗಿದ ಮಳೆ ನೀರು; ಕಾಲು ಜಾರಿ ಬಿದ್ದು ವೃದ್ಧೆ ಸಾವು

ಭಾರಿ ಮಳೆ ಮುನ್ಸೂಚನೆ

ಕರಾವಳಿಯ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಸೇರಿ ಮಲೆನಾಡಿನ ಶಿವಮೊಗ್ಗ, ಚಿಕ್ಕಮಗಳೂರು ಮತ್ತು ಕೊಡಗು ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಭಾರಿ ಮಳೆಯಾಗಲಿದೆ. ಜತೆಗೆ ಬೆಳಗಾವಿ ಜಿಲ್ಲೆಯ ಘಟ್ಟ ಪ್ರದೇಶದಲ್ಲಿ ಭರ್ಜರಿ ಮಳೆಯೊಂದಿಗೆ ನಿರಂತರ ಗಾಳಿಯ ವೇಗವು 40-50 ಕಿಮೀ ತಲುಪುವ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನ ಹಾಸನ ಜಿಲ್ಲೆಯ ಘಟ್ಟ ಪ್ರದೇಶದಲ್ಲೂ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ. ಗಾಳಿ ವೇಗವು ವಿಪರೀತವಾಗಿರಲಿದೆ.

ಉತ್ತರ ಒಳನಾಡಿನ ಬೀದರ್, ಕಲಬುರಗಿ, ಯಾದಗಿರಿ ಮತ್ತು ವಿಜಯಪುರ ಜಿಲ್ಲೆಗಳ ಕೆಲವೆಡೆ ಗಾಳಿ ಜತೆಗೆ ಭಾರೀ ಮಳೆಯಾಗುವ ನಿರೀಕ್ಷೆ ಇದೆ. ಉಳಿದೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನ ಉಳಿದ ಜಿಲ್ಲೆಗಳ ಹಲವು ಸ್ಥಳಗಳಲ್ಲಿ ಗಾಳಿಯ ವೇಗ 40-50 ಕಿ.ಮೀ ತಲುಪುವ ಸಾಧ್ಯತೆ ಇದ್ದು, ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Rain : ಮನೆಯೊಳಗೆ ನುಗ್ಗಿದ ಮಳೆ ನೀರು; ಕಾಲು ಜಾರಿ ಬಿದ್ದು ವೃದ್ಧೆ ಸಾವು

karnataka Rain : ರಾಜ್ಯದಲ್ಲಿ ಮಳೆ ಅವಾಂತರಗಳು (Rain Effect) ಮುಂದುವರಿದಿದೆ. ಬೆಳಗಾವಿಯಲ್ಲಿ ಮನೆಯೊಂದಕ್ಕೆ ಮಳೆ ನೀರು ನುಗ್ಗಿದ್ದು, ಕಾಲು ಜಾರಿ ಬಿದ್ದು ವೃದ್ಧೆಯೊಬ್ಬರು ಮೃತಪಟ್ಟಿದ್ದಾರೆ. ಮಲೆನಾಡಿನಲ್ಲೂ ಮರಗಳು ಧರೆಗುರುಳಿದ್ದು, ಹಾನಿಯಾಗಿವೆ.

VISTARANEWS.COM


on

By

karnataka Rain
Koo

ಬೆಳಗಾವಿ/ಚಿಕ್ಕಮಗಳೂರು: ಮಳೆ (Karnataka Rain) ನೀರು ಮನೆಗೆ ನುಗ್ಗಿದ್ದರಿಂದ ಕಾಲು ಜಾರಿ ಬಿದ್ದು ವೃದ್ಧೆಯೊಬ್ಬರು ಮೃತಪಟ್ಟಿದ್ದಾರೆ. ಮಹಬೂಬಿ ಅದಂಸಾಹೇಬ್ ಮಕಾಂದಾರ್ (79) ಮೃತ ದುರ್ದೈವಿ. ವೃದ್ಧೆಯ ಶವ ಸಾಗಿಸಲು ಕುಟುಂಬಸ್ಥರು ಪರದಾಡಿದ ಘಟನೆ ಬೆಳಗಾವಿಯ ಅಮನ್ ನಗರದಲ್ಲಿ ನಡೆದಿದೆ. ನಿರಂತರ ಮಳೆಯಿಂದ ಕಾಲೋನಿಗೆ ಡ್ರೈನೇಜ್ ನೀರು ನುಗ್ಗಿ ಅವಾಂತರವೇ ಸೃಷ್ಟಿಯಾಗಿತ್ತು. ಮೊಳಕಾಲುದ್ದ ನೀರಲ್ಲಿ ಶವ ಹಿಡಿದು ಕಾಲೋನಿ ಜನರು ಪರದಾಡಿದ್ದಲ್ಲದೇ ಮಳೆಯಲ್ಲೇ ಅಂತ್ಯ ಸಂಸ್ಕಾರ ನೆರವೇರಿಸಿದ್ದರು.

ಉಡುಪಿಯಲ್ಲಿ ಮರ ಬಿದ್ದು ಮನೆಗಳು ಧ್ವಂಸ

ಉಡುಪಿಯ ಕುಂದಾಪುರ ತಾಲೂಕಿನ ಬಳ್ಕೂರಿನಲ್ಲಿ ಭಾರಿ ಗಾಳಿ ಮಳೆಗೆ ಮರ ಬಿದ್ದು ಎರಡು ಮನೆಗಳು ಸಂಪೂರ್ಣ ಹಾನಿಯಾಗಿದೆ. ಬಳ್ಕೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಒಂದನೇ ವಾರ್ಡ್‌ನಲ್ಲಿ ಘಟನೆ ನಡೆದಿದೆ. ಸೀತಾ ಪೂಜಾರಿ ಮತ್ತು ಲಚ್ಚ ಪೂಜಾರಿ ಅವರ ಮನೆಗಳು ಧ್ವಂಸಗೊಂಡಿವೆ. ಒಂದು ಮನೆಯ ಮೇಲೆ ತೆಂಗಿನ ಮರ, ಇನ್ನೊಂದು ಮನೆಯ ಮೇಲೆ ಎರಡು ಅಡಿಕೆ ಮರಗಳು ಉರುಳಿ ಬಿದ್ದಿವಿ. ಮನೆಯ ಪಕ್ಕದಲ್ಲಿದ್ದ ಹಲಸಿನ ಮರ ಮತ್ತು ವಿದ್ಯುತ್ ಕಂಬಕ್ಕೂ ಹಾನಿಯಾಗಿದೆ. ಸ್ಥಳಕ್ಕೆ ಗ್ರಾಮ ಪಂಚಾಯತ್ ಅಧ್ಯಕ್ಷರು ಮತ್ತು ಗ್ರಾಮ ಕರಣಿಕರ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಕೊಡಗಿನಲ್ಲಿ ನೋಡ ನೋಡುತ್ತಿದ್ದಂತೆ ಕುಸಿದ ಗುಡ್ಡ

ಗುಡ್ಡದ ಮಣ್ಣು ಕುಸಿದಿದ್ದು, ಕೆಎಸ್‌ಆರ್‌ಟಿಸಿ ಬಸ್‌ನಲ್ಲಿದ್ದವರು ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾರೆ. ಕೊಡಗಿನ ಸೋಮವಾರಪೇಟೆ ತಾಲ್ಲೂಕಿನ ಶಾಂತಳ್ಳಿ ಸಮೀಪ ಜೇಡಿಗುಂಡಿ ಬಳಿ ಘಟನೆ ನಡೆದಿದೆ. ಚಲಿಸುತ್ತಿದ್ದ ಬಸ್ ಮುಂದೆಯೇ ಗುಡ್ಡದ ಮಣ್ಣು ಕುಸಿದಿದೆ. ಕೂಡಲೇ ಚಾಲಕ ಬಸ್ ನಿಲ್ಲಿಸಿದ್ದಾರೆ. ಗುಡ್ಡದ ಮಣ್ಣು ಕುಸಿದು ಸೋಮವಾರಪೇಟೆ ಶಾಂತಳ್ಳಿ ರಸ್ತೆ ಸಂಚಾರ ಬಂದ್ ಆಗಿತ್ತು. ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ‌ ವಾಹನಗಳು ಸಾಲು ಗಟ್ಟಿ ನಿಲ್ಲಬೇಕಾಯಿತು.

ಇತ್ತ ಸೋಮವಾರಪೇಟೆ ವ್ಯಾಪ್ತಿಯಲ್ಲಿ ಭಾರಿ ಗಾಳಿ ಮಳೆಗೆ ವಾಸದ ಮನೆ ಮೇಲೆ ಬೃಹತ್ ಗಾತ್ರದ ಮರ ಉರುಳಿ ಬಿದ್ದಿದೆ. ಮನೆಮಂದಿ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸೋಮವಾರಪೇಟೆಯ ಹಾನಗಲ್ಲು ವ್ಯಾಪ್ತಿಯ ಕಲ್ಕಂದೂರುನಲ್ಲಿ ಘಟನೆ ನಡೆದಿದೆ. ಗ್ರಾಮದ ಪ್ರವೀಣ್ ಎಂಬುವರಿಗೆ ಸೇರಿದ ವಾಸದ ಮನೆ ಹಾನಿಯಾಗಿದೆ.

ಚಿಕ್ಕಮಗಳೂರಿನಲ್ಲಿ ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ವಿದ್ಯುತ್ ತಂತಿ

ಚಿಕ್ಕಮಗಳೂರಿನಲ್ಲಿ ಧಾರಾಕಾರ ಮಳೆ ಸುರಿಯುತ್ತಿದ್ದು, ಅವಾಂತರವೇ ಸೃಷ್ಟಿಸಿದೆ. ಗಾಳಿ ಮಳೆ ಅಬ್ಬರಕ್ಕೆ ಚಲಿಸುತ್ತಿದ್ದ ಕಾರಿನ ಮೇಲೆ ವಿದ್ಯುತ್ ತಂತಿ ಬಿದ್ದಿದೆ. ವಿದ್ಯುತ್ ಇಲ್ಲದ ಪರಿಣಾಮ ಭಾರಿ ಅನಾಹುತ ತಪ್ಪಿದೆ. ಚಿಕ್ಕಮಗಳೂರು ತಾಲೂಕಿನ ಮುಳ್ಳಯ್ಯನಗಿರಿ ರಸ್ತೆಯಲ್ಲಿ ಘಟನೆ ನಡೆದಿದೆ. ಗಿರಿ ರಸ್ತೆಯ ಐದಾರು ಕಡೆ ಮರಗಳು ಬಿದ್ದು ವಿದ್ಯುತ್ ಕಂಬಗಳು ಧರೆಗುರುಳಿದೆ. ಚಿಕ್ಕಮಗಳೂರು ತಾಲೂಕಿನ ಹಲವೆಡೆ ವಿದ್ಯುತ್ ಸಂಪರ್ಕ ಕಡಿತಗೊಂಡಿತ್ತು.

ಚಿಕ್ಕಮಗಳೂರು ಬಸ್ ನಿಲ್ದಾಣದಲ್ಲಿ ಭತ್ತದ ನಾಟಿ!

ಕೆಸರುಗದ್ದೆಯಾಂತದ ಚಿಕ್ಕಮಗಳೂರು ಬಸ್ ನಿಲ್ದಾಣದಲ್ಲಿ ಜೋಡೆತ್ತುಗಳ ಸಮೇತ ಉಳುವೆ ಮಾಡಲಾಯಿತು. ಉಳುಮೆ ಮಾಡಿ ಬಸ್ ನಿಲ್ದಾಣದಲ್ಲಿ ಭತ್ತದ ನಾಟಿ ಮಾಡಿ ವಿಭಿನ್ನವಾಗಿ ಪ್ರತಿಭಟಿಸಿದರು. ಚಿಕ್ಕಮಗಳೂರು ನಗರದ ಗ್ರಾಮಾಂತರ ಬಸ್ ನಿಲ್ದಾಣದ ದುಸ್ಥಿತಿಗೆ ಹಲವು ಸಂಘಟನೆಗಳು ಕಿಡಿಕಾರಿದರು. ಮಳೆಯಿಂದಾಗಿ ನಡೆದಾಡಲು ಆಗದ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಅಸಮಾಧಾನ ಹೊರಹಾಕಿದರು. ಇನ್ನೂ ಭಾರೀ ಗಾಳಿಗೆ ಬೃಹತ್ ಮರವೊಂದು ಬುಡಸಮೇತ ರಸ್ತೆಗುರುಳಿದ ಘಟನೆ ಚಿಕ್ಕಮಗಳೂರು ತಾಲೂಕಿನ ವಸ್ತಾರೆ ಬಳಿ ನಡೆದಿದೆ. ವಸ್ತಾರೆ ಟು ಆಲ್ದೂರು ರೋಡ್ ಬ್ಲಾಕ್ ಆಗಿತ್ತು. ಬಾಳೆಹೊನ್ನೂರು, ಶೃಂಗೇರಿ, ಕೊಪ್ಪ, ಕಳಸ, ಎನ್.ಆರ್.ಪುರದ ಮಾರ್ಗದಲ್ಲಿ ಒಂದು ಗಂಟೆಗೂ ಹೆಚ್ಚು ಹೊತ್ತು ಟ್ರಾಫಿಕ್ ಜಾಮ್ ಉಂಟಾಗಿತ್ತು.

ಹೆಬ್ಬಾಳ ಸೇತುವೆ ಮತ್ತೆ ಮುಳುಗಡೆ

ಚಿಕ್ಕಮಗಳೂರಿನ ಕಳಸ-ಹೊರನಾಡು ಸಂಪರ್ಕ ಕಲ್ಪಿಸುವ ಹೆಬ್ಬಾಳ ಸೇತುವೆ ಮತ್ತೆ ಮುಳುಗಡೆಯಾಗಿದೆ. ಕುದುರೆಮುಖ ಘಟ್ಟ ಪ್ರದೇಶದಲ್ಲಿ ಕಳೆದ ರಾತ್ರಿಯಿಂದ ಸುರಿದ ಧಾರಾಕಾರ ಮಳೆಗೆ ಕಳಸ-ಹೊರನಾಡು ಸಂಪರ್ಕದ ಹೆಬ್ಬಾಳೆ ಸೇತುವೆ ಮುಳುಗಡೆಯಾಗಿದೆ. ಕಳೆದ 15 ದಿನಗಳಲ್ಲಿ 10ಕ್ಕೂ ಹೆಚ್ಚು ಬಾರಿ ಸೇತುವೆ ಮುಳುಗಡೆಯಾಗಿದೆ. ಹತ್ತಾರು ಹಳ್ಳಿಯ ಸಂಪರ್ಕ ಕಡಿತದೊಂದಿಗೆ ಹೊರನಾಡು ಅನ್ನಪೂರ್ಣೇಶ್ವರಿ ದೇಗುಲದ ಮಾರ್ಗವು ಬಂದ್ ಆಗಿದೆ.

ಇತ್ತ ಕುಡಿದ ಮತ್ತಿನಲ್ಲಿ ಹೆಬ್ಬಾಳ ಸೇತುವೆ ಮೇಲೆ ಜೀಪ್ ಚಾಲಕ ಹುಚ್ಚಾಟ ಮೆರೆದಿದ್ದಾನೆ. ಸೇತುವೆ ಮೇಲೆ ನೀರು ಉಕ್ಕಿ ಹರಿಯುತ್ತಿದ್ದು, ಜೀಪ್‌ ಚಲಾಯಿಸಿದ್ದಾನೆ. ಅಡ್ಡಲಾಗಿ ಬ್ಯಾರಿಕೇಡ್‌ ಇದ್ದರೂ ಚಾಲಕ ಹುಚ್ಚಾಟ ತೋರಿದ್ದಾನೆ. ನದಿ ನೀರಿನ ಸೆಳೆತಕ್ಕೆ ಸ್ವಲ್ಪದರಲ್ಲೇ ಜೀಪು ಚಾಲಕ ಪಾರಾಗಿದ್ದಾನೆ.

ಇದನ್ನೂ ಓದಿ: Actor Darshan: ನಟ ದರ್ಶನ್‌ಗೆ ಜೈಲೂಟ ಫಿಕ್ಸ್‌; ಕೋರ್ಟ್‌ ಮನೆಯೂಟದ ಅರ್ಜಿ ವಜಾಗೊಳಿಸಿದ್ದೇಕೆ?

ತೆಂಗಿನ ಮರ ಬಿದ್ದು ಗೋ ಶಾಲೆ ಧ್ವಂಸ

ಇನ್ನೂ ಇತ್ತ ಚಂದ್ರದ್ರೋಣ ಪರ್ವತದ ಸಾಲಿನಲ್ಲಿ ಭಾರಿ ಮಳೆಯಾಗುತ್ತಿದ್ದು, ತಾಯಿ ಹೊಳೆ ಅಬ್ಬರಕ್ಕೆ ಸ್ಥಳೀಯರು ಬೆಚ್ಚಿಬಿದ್ದಿದ್ದಾರೆ. ಕುಮಾರ ಗಿರಿ ಸೇತುವೆ ಹೊಳೆಯ ನೀರಿಗೆ ಮುಳುಗಡೆಯಾಗಿದೆ. ಹತ್ತಾರು ಹಳ್ಳಿಗಳ ಸಂಪರ್ಕ ಕಡಿತಗೊಂಡಿದೆ. ಗಾಳಿ ಮಳೆಗೆ ಗೋಶಾಲೆಯ ಮೇಲೆ ತೆಂಗಿನ ಮರ ಮುರಿದು ಬಿದ್ದಿದೆ. ತಂಗಿನ ಮರ ಬಿದ್ದ ರಭಸಕ್ಕೆ ಗೋ ಶಾಲೆ ಧ್ವಂಸಗೊಂಡಿದೆ. ಚಿಕ್ಕಮಗಳೂರಿನ ಕೊಪ್ಪ ತಾಲೂಕಿನ ಹೇರೂರು ಗ್ರಾಂ.ಪಂ ವ್ಯಾಪ್ತಿಯ ಕೆಮ್ಮಣ್ಣು ಗ್ರಾಮದಲ್ಲಿ ಘಟನೆ ನಡೆದಿದೆ. ಹಸುಗಳು ಮೇಯಲು ಹೋಗಿದ್ದರಿಂದ ದೊಡ್ಡ ಅನಾಹುತ ತಪ್ಪಿದೆ. ಸುಮಾರು 50ಕ್ಕೂ ಹೆಚ್ಚು ಹಸುಗಳಿದ್ದು, ಗೋ ಶಾಲೆಯ ಚಾವಣಿ ಸಂಪೂರ್ಣ ಜಖಂಗೊಂಡಿದೆ.

ಕಳಸ-ಕುದುರೆ ಮುಖ-ಕಾರ್ಕಳ ಮಾರ್ಗದ ರಾಜ್ಯ ಹೆದ್ದಾರಿಯಲ್ಲಿ ಭೂ ಕುಸಿದಿದೆ. ಬೃಹತ್ ಸೇತುವೆ ಪಕ್ಕದಲ್ಲೇ ಕುಸಿದಿದ್ದು, ಭಾರೀ ವಾಹನಗಳು ಓಡಾಡಿದರೆ ರಸ್ತೆ ಸಂಪೂರ್ಣ ಕುಸಿಯುವ ಸಾಧ್ಯತೆ ಇದೆ. ರಸ್ತೆ ಮತ್ತಷ್ಟು ಕುಸಿದರೆ ಬೃಹತ್ ಸೇತುವೆಗೂ ಹಾನಿಯಾಗಲಿದೆ. ಎರಡು ದಿನದ ಹಿಂದೆ ಸ್ವಲ್ಪ ಕುಸಿದಿದ್ದ ಭೂಮಿ ಇಂದು ಮತ್ತಷ್ಟು ಕುಸಿಯಲಿದೆ. ಸದ್ಯ ಪೊಲೀಸರು ರಸ್ತೆಗೆ ರೆಡ್ ಟೇಪ್ ಕಟ್ಟಿ, ಮರಳು ಚೀಲ ಅಡ್ಡ ಇಟ್ಟಿದ್ದಾರೆ.

ಹಾಸನದಲ್ಲಿ ನೂರಾರು ಎಕರೆ ಜಮೀನು ಜಲಾವೃತ

ಹಾಸನದ ಸಕಲೇಶಪುರ ತಾಲೂಕಿನಲ್ಲಿ ಮಳೆಯಾರ್ಭಟಕ್ಕೆ ಹೇಮಾವತಿ ನದಿ ಉಕ್ಕಿ ಹರಿಯುತ್ತಿದೆ. ಹೇಮಾವತಿ ನದಿ ನೀರು ಉಕ್ಕಿ ಹರಿದ ಪರಿಣಾಮ ನೂರಾರು ಎಕ್ಕರೆ ಜಮೀನು ಜಲಾವೃತಗೊಂಡಿದೆ. ಸಕಲೇಶಪುರ ತೇಜಸ್ವಿ ಚಿತ್ರಮಂದಿರ ಸಮೀಪದ ಭತ್ತದ ಗದ್ದೆಗಳು,ತೋಟ ಜಲಾವೃತಗೊಂಡಿದೆ. ನಾಟಿ ಮಾಡಿದ್ದ ಭತ್ತದ ಗದ್ದೆ ,ಭತ್ತದ ಸಸಿ ನೀರುಪಾಲಾಗಿದೆ.

ಕ್ಷಣ-ಕ್ಷಣಕ್ಕೂ ಹೆಚ್ಚುತ್ತಿರುವ ಕೃಷ್ಣಾ ನದಿ ಹರಿವು

ಬಾಗಲಕೋಟೆ ಜಿಲ್ಲೆಯ ಕೃಷ್ಣಾ ನದಿಗೆ 2 ಲಕ್ಷ ಕ್ಯೂಸೆಕ್ ನೀರು ಹರಿದು ಬರುತ್ತಿದೆ. ಮಹಾರಾಷ್ಟ್ರ ಮಳೆಯಿಂದ ಕೃಷ್ಣಾ ನದಿ ಪಾತ್ರದಲ್ಲಿ ಪ್ರವಾಹ ಭೀತಿ ಎದುರಾಗಿದೆ. ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನಲ್ಲಿ ಪ್ರವಾಹ ಆತಂಕ ಹೆಚ್ಚಿದೆ. ಮುತ್ತೂರ,ಮೈಗೂರ,ಕಂಕಣವಾಡಿ ಗ್ರಾಮಗಳಲ್ಲಿ ಜಲಾವೃತ ಭೀತಿ ಇದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Weather : ರಭಸವಾಗಿ ಸುರಿಯುವ ಮಳೆ; 50 ಕಿ.ಮೀ ವೇಗದಲ್ಲಿ ಬೀಸುತ್ತೆ ಗಾಳಿ

Karnataka weather Forecast : ಭಾರಿ ಮಳೆಯೊಂದಿಗೆ (Rain News) ಬಿರುಗಾಳಿಯು ಗಂಟೆಗೆ 50 ಕಿ.ಮೀ ವ್ಯಾಪ್ತಿಯಲ್ಲಿ ಬೀಸಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ.

VISTARANEWS.COM


on

By

karnataka Weather Forecast
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ರಾಜ್ಯದಲ್ಲಿ ನೈರುತ್ಯ ಮುಂಗಾರು (karnataka Weather Forecast) ಸಾಮಾನ್ಯವಾಗಿದ್ದು, ಕರಾವಳಿ ಹಾಗೂ ಒಳನಾಡಿನ ಬಹುತೇಕ ಕಡೆಗಳಲ್ಲಿ ಮಳೆಯಾಗುವ (Rain News) ನಿರೀಕ್ಷೆ ಇದೆ. ಕರಾವಳಿಯ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಜತೆಗೆ ನಿರಂತರ ಗಾಳಿಯ ವೇಗವು 30-40 ಕಿಮೀ ತಲುಪುವ ಸಾಧ್ಯತೆಯಿದೆ.

ಮಲೆನಾಡಿನ ಶಿವಮೊಗ್ಗ, ಚಿಕ್ಕಮಗಳೂರು ಮತ್ತು ಕೊಡಗು ಸುತ್ತಮುತ್ತ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ. ಹಾಸನದಲ್ಲಿ ಸಾಧಾರಣ ಮಳೆಯಾಗಲಿದೆ. ಆದರೆ ಗಾಳಿಯ ವೇಗವು 40-50 ಕಿ.ಮೀ ತಲುಪಲಿದೆ.

ಇನ್ನೂ ದಕ್ಷಿಣ ಒಳನಾಡಿನ ಹಲವೆಡೆ ಗಾಳಿಯ ವೇಗವು 50 ಕಿ.ಮೀ ತಲುಪುವ ಸಾಧ್ಯತೆ ಇದ್ದು, ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮಂಡ್ಯ, ಮೈಸೂರು, ಚಾಮರಾಜನಗರ, ರಾಮನಗರ, ತುಮಕೂರು, ಚಿಕ್ಕಬಳ್ಳಾಪುರ ಸೇರಿದಂತೆ ಕೋಲಾರದಲ್ಲಿ ಮಳೆಯಾಗಲಿದೆ.

ಉತ್ತರ ಒಳನಾಡಿನ ಯಾದಗಿರಿ, ರಾಯಚೂರು ಮತ್ತು ಕಲಬುರಗಿ , ಬೆಳಗಾವಿ, ರಾಯಚೂರು, ಬೀದರ್, ಬಾಗಲಕೋಟೆ, ಧಾರವಾಡ ಮತ್ತು ಹಾವೇರಿ, ವಿಜಯಪುರ, ಗದಗ, ಕೊಪ್ಪಳದಲ್ಲಿ ಹಗುರದಿಂದ ಕೂಡಿದ ಮಳೆಯಾಗಲಿದೆ.

ಬೆಂಗಳೂರು ನಗರ ಮತ್ತು ಸುತ್ತಮುತ್ತ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ. ಹಗುರದಿಂದ ಕೂಡಿದ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 27 ಮತ್ತು 21 ಡಿಗ್ರಿ ಸೆಲಿಯಸ್ಸ್‌ ಇರಲಿದೆ.

ಮೀನುಗಾರರಿಗೆ ಎಚ್ಚರಿಕೆ

ತೀವ್ರ ಬಿರುಗಾಳಿಯಿಂದ ಕೂಡಿದ ಹವಾಮಾನವು ಗಂಟೆಗೆ 55 ಕಿ.ಮೀ ವೇಗದಲ್ಲಿ ಬೀಸುವ ಸಾಧ್ಯತೆ ಇದೆ. ಹೀಗಾಗಿ ಸಮುದ್ರಕ್ಕಿಳಿಯುವ ಮುನ್ನ ಮೀನುಗಾರರು ಎಚ್ಚರಿಕೆಯಿಂದ ಇರುವಂತೆ ಸೂಚಿಸಲಾಗಿದೆ.

ಇದನ್ನೂ ಓದಿ: Assault Case : ಹೋಮ್‌ ವರ್ಕ್‌ ಮಾಡದ್ದಕ್ಕೆ ಬಾಲಕಿಗೆ ಬಾಸುಂಡೆ ಬರುವಂತೆ ಬಾರಿಸಿದ ಮುಖ್ಯ ಶಿಕ್ಷಕಿ

ಹಳೆ ಲಾರಿ ಚಾಸ್ಸಿಯಲ್ಲೇ ಕಿರು ಸೇತುವೆ ನಿರ್ಮಾಣ

ಉಡುಪಿ: ಉಡುಪಿಯ (Udupi News ) ಬೈಂದೂರು ಕ್ಷೇತ್ರದ ಯಡಮೊಗೆಯಲ್ಲಿ ಹೊಸ ಪ್ರಯೋಗ ಮಾಡಲಾಗಿದೆ. ಮಳೆಗಾಲದಲ್ಲಿ (Karnataka Rain) ಕಿರು ಸೇತುವೆ ಇಲ್ಲದೆ ಕಂಗಾಲಾಗಿದ್ದ ಗ್ರಾಮಸ್ಥರು ನಿಟ್ಟುಸಿರು ಬಿಟ್ಟಿದ್ದಾರೆ. ಬೈಂದೂರು ಶಾಸಕ ಗುರುರಾಜ್‌ ಗಂಟಿಹೊಳೆ ತಮ್ಮ ಕ್ಷೇತ್ರದ ಜನರಿಗೆ ನೆರವು ನೀಡುವ ಉದ್ದೇಶಕ್ಕೆ ಕ್ರೌಡ್‌ ಫಂಡಿಂಗ್ ಮೂಲಕ ಅತ್ಯಂತ ಕಡಿಮೆ ವೆಚ್ಚದಲ್ಲಿ ಸೇತುವೆ ನಿರ್ಮಿಸಿದ್ದಾರೆ. ಅದು ಕೂಡ ಹಳೆ ಲಾರಿಯ ಚಾಸ್ಸಿ ಬಳಸಿ ಕಿರು ಸೇತುವೆಯನ್ನು ನಿರ್ಮಿಸಲಾಗಿದೆ.

ಕಳೆದ ಬಾರಿ ಸಮರ್ಪಕ ಕಿರು ಸೇತುವೆ ಇಲ್ಲದೆ ಶಾಲಾ ಬಾಲಕಿ ನೀರು ಪಾಲಾಗಿದ್ದಳು. ಈ ಹಿನ್ನೆಲೆಯಲ್ಲಿ ಮಳೆಗಾಲದಲ್ಲಿ ಆಗುವ ಸಾವು- ನೋವು ತಪ್ಪಿಸಲು ಸಮೃದ್ಧ ಬೈಂದೂರು ಮತ್ತು ಅರುಣಾಚಲ ಟ್ರಸ್ಟ್ ಸಹಭಾಗಿತ್ವದಲ್ಲಿ ಸೇತುವೆ ನಿರ್ಮಿಸಲಾಗಿದೆ.

ಮಳೆಗಾಲದಲ್ಲಿ ಸುಮಾರು 30 ಮನೆಗಳಿಗೆ ಸಂಪರ್ಕವೇ ಇಲ್ಲದೇ ಕಂಗಲಾಗಿದ್ದರು. ಮೂರು ಲಾರಿಗಳ ಹಳೆಯ ಚಾಸ್ಸಿ ಬಳಸಿ ಕಿರು ಸೇತುವೆಯನ್ನು ನಿರ್ಮಾಣ ಮಾಡಲಾಗಿದೆ. ರಾಜ್ಯದಲ್ಲಿಯೇ ಮೊದಲ ಬಾರಿಗೆ ಕಡಿಮೆ ಖರ್ಚಿನಲ್ಲಿ ಲಾರಿಯ ಚಾಸ್ಸಿ, ಬೋರ್ ವೇಲ್ ಪೈಪ್, ಜಿಎ ಪೈಟ್, ಕಬ್ಬಿಣ ತಗಡು ಬಳಸಿ ಸೇತುವೆ ನಿರ್ಮಿಸಲಾಗಿದೆ. ಅಂದಾಜು 2 ಲಕ್ಷ ರೂಪಾಯಿ ವೆಚ್ಚದಲ್ಲಿ ಈ ಕಿರು ಸೇತುವೆ ನಿರ್ಮಿಸಲಾಗಿದೆ.

udupi news
udupi news

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Weather : ರಾಜ್ಯದಲ್ಲಿ ಮುಂದುವರಿದ ಮಳೆ ಅವಾಂತರ; ನಾಳೆಯೂ ಇರಲಿದೆ ಅಬ್ಬರ

Karnataka Weather Forecast : ಮಳೆಯ ಅವಾಂತರಕ್ಕೆ (Rain News) ಜನರು ತತ್ತರಿಸಿ ಹೋಗಿದ್ದಾರೆ. ರಾಜ್ಯದ ಹಲವೆಡೆ ಮಳೆಗೆ ಮರ ಬಿದ್ದು, ಗುಡ್ಡ ಕುಸಿದು, ಅಪಘಾತಗಳು ಸಂಭವಿಸಿದೆ. ಬುಧವಾರಕ್ಕೂ ಮಳೆಯಾಗುವ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ.

VISTARANEWS.COM


on

By

karnataka weather Forecast
Koo

ಹಾವೇರಿ/ಬೆಂಗಳೂರು: ರಾಜ್ಯದಲ್ಲಿ ಮಳೆ ಅವಾಂತರ (Karnataka Weather Forecast) ಮುಂದುವರಿದಿದ್ದು, ನಾಳೆಯೂ ವರುಣನ ಅಬ್ಬರವು ಮುಂದುವರಿಯಲಿದೆ. ಸತತ ಮಳೆಗೆ (Rain News) ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಸಮ್ಮಸಗಿ ಬಳಿ ಗುಡ್ಡ ಕುಸಿದಿದೆ. ಹೆದ್ದಾರಿ ಮೇಲೆ ಗುಡ್ಡ ಕುಸಿದ ಪರಿಣಾಮ ಜೆಸಿಬಿ ಮೂಲಕ ಮಣ್ಣು ತೆರವುಗೊಳಿಸಬೇಕಾಯಿತು.

ಎಕ್ಕುಂಬಿ-ಮೊಳಕಾಲ್ಮುರು ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಹಿನ್ನೆಲೆ ಮಂದಗತಿಯಲ್ಲಿ ಸಾಗುತ್ತಿದ್ದ ಕಾರಣಕ್ಕೆ ಕೆಲವು ಹೊತ್ತು ವಾಹನ ಸಂಚಾರ ಅಸ್ತವ್ಯಸ್ತವಾಗಿತ್ತು. ಹಾವೇರಿ – ಶಿರಸಿ ಸಂಪರ್ಕ ಕಲ್ಪಿಸುವ ಹೆದ್ದಾರಿ ಇದಾಗಿದ್ದು, ಮಣ್ಣು ತೆರವುಗೊಳಿಸಿದ ಬಳಿಕ‌ ವಾಹನ ಸಂಚಾರ ಆರಂಭವಾಗಿತ್ತು.

ಮಳೆಯಿಂದಾಗಿ 526 ಮನೆಗಳಿಗೆ ಹಾನಿ

ಹಾವೇರಿ ಜಿಲ್ಲೆಯಲ್ಲಿ ವರುಣನ ಆರ್ಭಟಕ್ಕೆ 526 ಮನೆಗಳಿಗೆ ಹಾನಿಯಾಗಿದೆ. ಮಳೆಯಿಂದಾಗಿ ಈವರೆಗೂ ಐವರು ಮೃತಪಟ್ಟಿದ್ದರು, ನಾಲ್ವರು ಗಾಯಗೊಂಡಿದ್ದಾರೆ. ಎರಡು ಜಾನುವಾರುಗಳು ಸಾವನ್ನಪ್ಪಿವೆ. ಜತೆಗೆ ವರದಾ, ತುಂಗಭದ್ರಾ, ಕುಮದ್ವತಿ, ನದಿ ಅಬ್ವರಕ್ಕೆ 12 ಸೇತುವೆಗಳು ಮುಳುಗಡೆ ಆಗಿ ಹಲವು ಗ್ರಾಮಗಳ ಸಂಪರ್ಕ ಕಡಿತಗೊಂಡಿದೆ. 49 ರೈತರ 31.27 ಹೆಕ್ಟೇರ್ ತೋಟಗಾರಿಕೆ ಬೆಳೆಹಾನಿಯಾಗಿದೆ. ಮೆಣಸಿನಕಾಯಿ 17.25 ಹೆಕ್ಟೇರ್ ಬೆಳೆ, ಬೆಳ್ಳುಳ್ಳಿ ಹಾಗಲಕಾಯಿ,ಕ್ಯಾಬಿಜ್ ಸೇರಿದಂತೆ ತರಕಾರಿ ಬೆಳೆಗಳು ನೀರುಪಾಲಾಗಿದೆ.

ಚಿಕ್ಕಮಗಳೂರಿನಲ್ಲಿ ಗ್ರಾಮಸ್ಥರಿಗೆ ಕಣ್ಣೀರು ತರಿಸಿದ ವರುಣ

ಚಿಕ್ಕಮಗಳೂರಿನಲ್ಲಿ ಭಾರೀ ಗಾಳಿ-ಮಳೆಗೆ ಮನೆ ಮೇಲೆ ಮರ ಬಿದ್ದಿದೆ. ಪರಿಣಾಮ ಮನೆಯೊಳಗೆ ಇದ್ದ ವೃದ್ಧೆ ಗಂಭೀರ ಗಾಯಗೊಂಡರು. ಮಳೆಯ ನಡುವೆ ರಸ್ತೆಯೇ ಇಲ್ಲದೆ ಮನೆಯಿಂದ ಜೋಳಿಗೆಯಲ್ಲಿ ಹಳ್ಳದಾಟಿಸಿ ಕಳಸ ಆಸ್ಪತ್ರೆಗೆ ದಾಖಲು ಮಾಡಿದರು. ಕಳಸ ತಾಲೂಕಿನ ಕಳಗೋಡೆ ಗ್ರಾಮದ ಕಾರ್ಲೆಯಲ್ಲಿ ಘಟನೆ ನಡೆದಿದೆ.

ಹೆದ್ದಾರಿಯಲ್ಲಿ ಮಣ್ಣು ಕುಸಿತ

ಹಾಸನ ಜಿಲ್ಲೆಯ ಮಲೆನಾಡು ಭಾಗದಲ್ಲಿ ಮಳೆಯ ಅಬ್ಬರ ಮುಂದುವರಿದಿದೆ. ಭಾರಿ ಮಳೆಗೆ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಮಣ್ಣು ಕುಸಿದಿದೆ. ಮಣ್ಣು ಕುಸಿದಿದ್ದರಿಂದ ರಸ್ತೆ ಹದಗೆಟ್ಟಿತ್ತು. ಶಿರಾಡಿಘಾಟ್ ರಸ್ತೆಯ ತಿರುವಿನಲ್ಲಿ ಬರುವಾಗ ಕಂಟೇನರ್‌ ಉರುಳಿಬಿದ್ದಿದೆ. ಸಕಲೇಶಪುರ ತಾಲೂಕಿನ ಕೆಸಗಾನಹಳ್ಳಿ ಬಳಿ ಘಟನೆ ನಡೆದಿದೆ. ಭಾರಿ ಮಳೆಗೆ ಶಿರಾಡಿಘಾಟ್ ರಸ್ತೆಯಲ್ಲಿ ಮಣ್ಣು ಕುಸಿಯುತ್ತಲೆ ಇದೆ. ಕಂಟೇನರ್ ಚಾಲಕನಿಗೆ ಸಣ್ಣಪುಟ್ಟ ಗಾಯವಾಗಿದ್ದು, ಪ್ರಪಾತಕ್ಕೆ ಕಂಟೇನರ್ ಬೀಳುವುದು ಕೂದಲೆಳೆ ಅಂತರದಲ್ಲಿ ಮಿಸ್‌ ಆಗಿದೆ. ಬೆಂಗಳೂರಿನಿಂದ ಮಂಗಳೂರಿಗೆ ತೆರಳುತ್ತಿದ್ದ ಕಂಟೇನರ್ ಮುಂಭಾಗ ಸಂಪೂರ್ಣ ಜಖಂಗೊಂಡಿದೆ.

ಮಳೆಯ ಅಬ್ಬರಕ್ಕೆ ಕುಸಿದ ಸರ್ಕಾರಿ ಶಾಲೆ ಗೋಡೆ

ಶಿವಮೊಗ್ಗದಲ್ಲಿ ಮಳೆಗೆ ಸರ್ಕಾರಿ ಶಾಲೆಯ ಗೋಡೆಯು ಕುಸಿದಿದೆ. ಮಂಗಳವಾರ ಮಧ್ಯಾಹ್ನ ಅನವಟ್ಟಿಯ ಉರ್ದು ಸರ್ಕಾರಿ ಶಾಲೆಯ ಗೋಡೆ ಕುಸಿದಿದೆ. ವಿದ್ಯಾರ್ಥಿಗಳು ಊಟಕ್ಕೆ ತೆರಳಿದ್ದ ಸಮಯದಲ್ಲಿ ಗೋಡೆ ಕುಸಿದಿದೆ. ಅದೃಷ್ಟವಶಾತ್ ಭಾರೀ ದೊಡ್ಡ ಅನಾಹುತ ತಪ್ಪಿದೆ.

karnataka weather Forecast
karnataka weather Forecast

ಇದನ್ನೂ ಓದಿ: Udupi News : ಹಳೆ ಲಾರಿ ಚಾಸ್ಸಿಯಲ್ಲೇ ಕಿರು ಸೇತುವೆ ನಿರ್ಮಾಣ! ಬೈಂದೂರು ಶಾಸಕರ ಪರಿಕಲ್ಪನೆಗೆ ಜನರು ಫಿದಾ

ಕರಾವಳಿಯಲ್ಲಿ ಮಳೆಯಾಟ ಮುಂದುವರಿಕೆ

ಕರಾವಳಿಯ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಜತೆಗೆ ನಿರಂತರ ಗಾಳಿಯ ವೇಗವು 30-40 ಕಿಮೀ ತಲುಪುವ ಸಾಧ್ಯತೆಯಿದೆ. ಮಲೆನಾಡಿನ ಶಿವಮೊಗ್ಗ, ಚಿಕ್ಕಮಗಳೂರು ಮತ್ತು ಕೊಡಗು ಸುತ್ತಮುತ್ತ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ. ಗಾಳಿಯ ವೇಗವು 40-50 ಕಿ.ಮೀ ತಲುಪಲಿದೆ. ದಕ್ಷಿಣ ಒಳನಾಡಿನ ಹಲವೆಡೆ ಗಾಳಿಯ ವೇಗವು 50 ಕಿ.ಮೀ ತಲುಪುವ ಸಾಧ್ಯತೆ ಇದ್ದು, ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ. ಉತ್ತರ ಒಳನಾಡಿನಲ್ಲೂ ಹಗುರದಿಂದ ಕೂಡಿದ ಮಳೆಯಾಗಲಿದೆ. ಬೆಂಗಳೂರು ನಗರ ಮತ್ತು ಸುತ್ತಮುತ್ತ ಮುಂದಿನ 24 ಗಂಟೆಯಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ. ಹಗುರದಿಂದ ಕೂಡಿದ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 27 ಮತ್ತು 21 ಡಿಗ್ರಿ ಸೆಲಿಯಸ್ಸ್‌ ಇರಲಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
NEET UG 2024
ದೇಶ2 hours ago

NEET UG 2024: ನೀಟ್‌ ಪ್ರಶ್ನೆಪತ್ರಿಕೆಯನ್ನು ಎಗರಿಸಿದ್ದು ಯಾವ ಕೇಂದ್ರದಿಂದ? ಸಿಬಿಐ ಸ್ಫೋಟಕ ಮಾಹಿತಿ ಬಯಲು

V Sumangala
ಕರ್ನಾಟಕ2 hours ago

V Sumangala: ಶಿಕ್ಷಣ ಇಲಾಖೆಯಲ್ಲಿ 1.62 ಕೋಟಿ ರೂ. ಅಕ್ರಮ; DSERT ನಿರ್ದೇಶಕಿ ಸುಮಂಗಲಾ ಅಮಾನತು!

Sri lanka Team
ಕ್ರೀಡೆ2 hours ago

Sri lanka Team: ಟಿ20 ಸರಣಿ ಆರಂಭಕ್ಕೂ ಮುನ್ನವೇ ಲಂಕಾಗೆ ಗಾಯದ ಬರೆ; ಇಬ್ಬರು ವೇಗಿಗಳು ಔಟ್​

HD Deve Gowda
ದೇಶ3 hours ago

HD Deve Gowda: ವ್ಹೀಲ್‌ಚೇರ್‌ನಲ್ಲೇ ತೆರಳಿ ಮೋದಿಯನ್ನು ಭೇಟಿಯಾದ ದೇವೇಗೌಡ; ಇಲ್ಲಿವೆ ಫೋಟೊಗಳು

Team India
ಕ್ರೀಡೆ4 hours ago

Team India: ಲಂಕಾ ಸರಣಿಗೂ ಮುನ್ನವೇ ಟೀಮ್​ ಇಂಡಿಯಾ ಜೆರ್ಸಿಯಲ್ಲಿ ಮಹತ್ವದ ಬದಲಾವಣೆ

Atal Setu
ಪ್ರಮುಖ ಸುದ್ದಿ4 hours ago

Atal Setu: ಅಟಲ್‌ ಸೇತು ಮೇಲೆ ಕಾರಿನಲ್ಲಿ ಬಂದು, ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಟೆಕ್ಕಿ; ಏನಾಗಿತ್ತು?

Health Minister Dinesh Gundurao instructs to send a team of deputy directors to dengue hot spots
ಕರ್ನಾಟಕ4 hours ago

Dengue Fever: ಬೆಂಗಳೂರಿನಲ್ಲೇ ಶೇ.50ರಷ್ಟು ಡೆಂಗ್ಯೂ ಪ್ರಕರಣಗಳು; ಹಾಟ್‌ಸ್ಪಾಟ್‌ಗಳಿಗೆ ಅಧಿಕಾರಿಗಳ ತಂಡ

Media Connect Founder and ceo Dr Divya Rangenahalli honored at Chess Festival in bengaluru
ಬೆಂಗಳೂರು4 hours ago

Media Connect: ಚೆಸ್‌ ಹಬ್ಬದಲ್ಲಿ ಮೀಡಿಯಾ ಕನೆಕ್ಟ್‌ ಸಂಸ್ಥಾಪಕಿ ಡಾ. ದಿವ್ಯಾ ರಂಗೇನಹಳ್ಳಿಗೆ ಸನ್ಮಾನ

1200 farmers suicides in last 15 months in Karnataka says Minister Pralhad Joshi Minister Pralhad Joshi alleges
ಕರ್ನಾಟಕ4 hours ago

Pralhad Joshi: ಕರ್ನಾಟಕದಲ್ಲಿ ಕಳೆದ 15 ತಿಂಗಳಲ್ಲಿ 1200 ರೈತರ ಆತ್ಮಹತ್ಯೆ!

BJP Protest
ಕರ್ನಾಟಕ5 hours ago

BJP Protest: ದಾಖಲೆ ನೀಡದೆ ಹೇಡಿಯಂತೆ ಪಲಾಯನ; ಸಿಎಂ ರಾಜೀನಾಮೆ ಪಡೆಯಲು ರಾಜ್ಯಪಾಲರಿಗೆ ಆರ್‌.ಅಶೋಕ್‌ ಮನವಿ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Rain
ಮಳೆ8 hours ago

Karnataka Rain : ಮನೆಯೊಳಗೆ ನುಗ್ಗಿದ ಮಳೆ ನೀರು; ಕಾಲು ಜಾರಿ ಬಿದ್ದು ವೃದ್ಧೆ ಸಾವು

Actor Darshan
ಸ್ಯಾಂಡಲ್ ವುಡ್12 hours ago

Actor Darshan: ನಟ ದರ್ಶನ್ ಇರುವ ಜೈಲು ಕೋಣೆ ಹೇಗಿದೆ?

Actor Darshan
ಸಿನಿಮಾ12 hours ago

Actor Darshan : ಹೆಂಡ್ತಿ ಮಕ್ಕಳೊಟ್ಟಿಗೆ ಚೆನ್ನಾಗಿರು.. ಸಹಕೈದಿ ಜತೆಗೆ 12 ನಿಮಿಷ ಕಳೆದ ನಟ ದರ್ಶನ್‌

Actor Darshan
ಸಿನಿಮಾ14 hours ago

Actor Darshan: ಆಧ್ಯಾತ್ಮದತ್ತ ವಾಲಿದ ದರ್ಶನ್‌; ಜೈಲಲ್ಲಿ ಹೇಗಿದೆ ಗೊತ್ತಾ ನಟನ ಬದುಕು

karnataka Weather Forecast
ಮಳೆ2 days ago

Karnataka Weather : ರಭಸವಾಗಿ ಸುರಿಯುವ ಮಳೆ; 50 ಕಿ.ಮೀ ವೇಗದಲ್ಲಿ ಬೀಸುತ್ತೆ ಗಾಳಿ

karnataka weather Forecast
ಮಳೆ2 days ago

Karnataka Weather : ರಾಜ್ಯದಲ್ಲಿ ಮುಂದುವರಿದ ಮಳೆ ಅವಾಂತರ; ನಾಳೆಯೂ ಇರಲಿದೆ ಅಬ್ಬರ

Udupi News
ಉಡುಪಿ2 days ago

Udupi News : ಹಳೆ ಲಾರಿ ಚಾಸ್ಸಿಯಲ್ಲೇ ಕಿರು ಸೇತುವೆ ನಿರ್ಮಾಣ! ಬೈಂದೂರು ಶಾಸಕರ ಪರಿಕಲ್ಪನೆಗೆ ಜನರು ಫಿದಾ

murder case
ರಾಮನಗರ3 days ago

Murder Case : ರಾಮನಗರದಲ್ಲೊಂದು ಪೈಶಾಚಿಕ ಕೃತ್ಯ; ಅತ್ಯಾಚಾರವೆಸಗಿ 4 ವರ್ಷದ ಬಾಲಕಿಯನ್ನು ಕೊಂದ ದುಷ್ಟ

karnataka Rain
ಮಳೆ5 days ago

Karnataka Rain : ಭಾರಿ ಮಳೆಗೆ ಮನೆ ಗೋಡೆ ಕುಸಿತ; ಕೊಟ್ಟಿಗೆಯಲ್ಲಿದ್ದ ಜಾನುವಾರುಗಳು ಸಾವು

karnataka Rain
ಮಳೆ6 days ago

Karnataka Rain : ಹಳ್ಳ ದಾಟಲು ಹೋಗಿ ನೀರುಪಾಲಾದ ಜಾನುವಾರು; ಬಿರುಗಾಳಿಗೆ ಕಳಚಿದ ವಿಂಡ್‌ ಫ್ಯಾನ್‌

ಟ್ರೆಂಡಿಂಗ್‌