Media Connect: ಚೆಸ್‌ ಹಬ್ಬದಲ್ಲಿ ಮೀಡಿಯಾ ಕನೆಕ್ಟ್‌ ಸಂಸ್ಥಾಪಕಿ ಡಾ. ದಿವ್ಯಾ ರಂಗೇನಹಳ್ಳಿಗೆ ಸನ್ಮಾನ - Vistara News

ಬೆಂಗಳೂರು

Media Connect: ಚೆಸ್‌ ಹಬ್ಬದಲ್ಲಿ ಮೀಡಿಯಾ ಕನೆಕ್ಟ್‌ ಸಂಸ್ಥಾಪಕಿ ಡಾ. ದಿವ್ಯಾ ರಂಗೇನಹಳ್ಳಿಗೆ ಸನ್ಮಾನ

Media Connect: ಕರ್ನಾಟಕ ವಿಧಾನಮಂಡಲ ಮತ್ತು ಅಖಿಲ ಭಾರತ ಚೆಸ್‌ ಫೆಡರೇಷನ್‌ ಸಹಯೋಗದಲ್ಲಿ ಶನಿವಾರ ಆಯೋಜಿಸಿದ್ದ ʼವಿಧಾನಸೌಧ ಓಪನ್‌ ರ‍್ಯಾಪಿಡ್‌ ಚೆಸ್‌ ಟೂರ್ನ್‌ಮೆಂಟ್‌ – 2024ʼ ಕಾರ್ಯಕ್ರಮದಲ್ಲಿ ಮೀಡಿಯಾ ಕನೆಕ್ಟ್‌ ಸಂಸ್ಥಾಪಕಿ ಹಾಗೂ ಸಿಇಒ ಡಾ. ದಿವ್ಯಾ ರಂಗೇನಹಳ್ಳಿ ಅವರನ್ನು ಗೌರವಿಸಿ, ಸನ್ಮಾನಿಸಲಾಯಿತು.

VISTARANEWS.COM


on

Media Connect Founder and ceo Dr Divya Rangenahalli honored at Chess Festival in bengaluru
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ

ಬೆಂಗಳೂರು: ಕರ್ನಾಟಕ ವಿಧಾನಮಂಡಲ ಮತ್ತು ಅಖಿಲ ಭಾರತ ಚೆಸ್‌ ಫೆಡರೇಷನ್‌ ಸಹಯೋಗದಲ್ಲಿ ಶನಿವಾರ ಆಯೋಜಿಸಿದ್ದ ʼವಿಧಾನಸೌಧ ಓಪನ್‌ ರ‍್ಯಾಪಿಡ್‌ ಚೆಸ್‌ ಟೂರ್ನ್‌ಮೆಂಟ್‌ – 2024ʼ ಕಾರ್ಯಕ್ರಮದಲ್ಲಿ ಮೀಡಿಯಾ ಕನೆಕ್ಟ್‌ (Media Connect) ಸಂಸ್ಥಾಪಕಿ ಹಾಗೂ ಸಿಇಒ ಡಾ. ದಿವ್ಯಾ ರಂಗೇನಹಳ್ಳಿ ಅವರನ್ನು ಗೌರವಿಸಿ, ಸನ್ಮಾನಿಸಲಾಯಿತು.

ಇದನ್ನೂ ಓದಿ: Fortis Hospital: ಯಕೃತ್‌ ಕ್ಯಾನ್ಸರ್‌ನಿಂದ ಬಳಲುತ್ತಿದ್ದ ತಾಯಿಗೆ ಮಗನಿಂದ ಲಿವರ್‌ ದಾನ!

ಅಂತಾರಾಷ್ಟ್ರೀಯ ಚೆಸ್‌ ದಿನಾಚರಣೆ ಹಾಗೂ ಫಿಡೆ ಶತಮಾನೋತ್ಸವದ ಅಂಗವಾಗಿ ನಗರದ ವಿಧಾನಸೌಧ ಬ್ಯಾಂಕ್ವೆಟ್‌ ಹಾಲ್‌ನಲ್ಲಿ ಸಚಿವರು, ವಿಧಾನಸಭಾ ಸದಸ್ಯರು, ವಿಧಾನಪರಿಷತ್ತಿನ ಸದಸ್ಯರು ಹಾಗೂ ಅಧಿಕಾರಿ/ಸಿಬ್ಬಂದಿಗಳಿಗಾಗಿ ವಿಧಾನಸೌಧ ಚೆಸ್‌ ಹಬ್ಬವನ್ನು ಏರ್ಪಡಿಸಲಾಗಿತ್ತು.

ಇದನ್ನೂ ಓದಿ: Samsung Galaxy: ಎಐ ಆಧರಿತ ಗ್ಯಾಲಕ್ಸಿ ಝಡ್ ಫೋಲ್ಡ್ 6, ಝಡ್ ಫ್ಲಿಪ್6 ಹೇಗಿದೆ? ದರ ಎಷ್ಟು?

ಕಾರ್ಯಕ್ರಮವನ್ನು ಕರ್ನಾಟಕ ವಿಧಾನಸಭೆ ಸಭಾಧ್ಯಕ್ಷ ಯು.ಟಿ. ಖಾದರ್‌ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಚೆಸ್‌ ಅಸೋಸಿಯೇಷನ್‌ನ ಪ್ರಧಾನ ಕಾರ್ಯದರ್ಶಿ ಅರವಿಂದ್‌ ಶಾಸ್ತ್ರಿ, ಜೇವರ್ಗಿ ಶಾಸಕ ಅಜಯ್‌ ಸಿಂಗ್‌ ಹಾಗೂ ಇತರ ಗಣ್ಯರು ಉಪಸ್ಥಿತರಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
Continue Reading
Click to comment

Leave a Reply

Your email address will not be published. Required fields are marked *

Latest

ಪರಮಾಣು ಶಸ್ತ್ರಾಸ್ತ್ರಗಳು ಶಾಂತಿಯ ಉದ್ದೇಶಕ್ಕೆ ಬಳಕೆಯಾಗಲಿ: ವಿಶ್ವಸಂಸ್ಥೆ ಕಳಕಳಿ

VISTARANEWS.COM


on

ನ್ಯೂಯಾರ್ಕ್:‌ ಜಗತ್ತು ಚೆರ್ನೋಬಿಲ್ ದುರಂತದ 40 ನೇ ವಾರ್ಷಿಕೋತ್ಸವ ಆಚರಿಸುತ್ತಿದೆ. ಈ ವೇಳೆ ವಿಶ್ವಸಂಸ್ಥೆಯ ಸಾಮಾನ್ಯ ಸಭೆ ಪರಮಾಣು ಶಸ್ತ್ರಾಸ್ತ್ರಗಳ ಶಾಂತಿಯುತ ಬಳಕೆಗೆ ಕರೆ ನೀಡಿದೆ.


ಚೆರ್ನೋಬಿಲ್‌ ದುರಂತದ ಸ್ಮರಣಾರ್ಥ ಶುಕ್ರವಾರ ಇಲ್ಲಿ ನಡೆದ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯ ಅಧ್ಯಕ್ಷೆ ಅನ್ನಾಲೆನಾ ಬೇರ್ಬಾಕ್ ಅವರು, ಚೆರ್ನೋಬಿಲ್‌ನ ಪ್ರಮಾಣವು, ಪರಮಾಣು ತಂತ್ರಜ್ಞಾನವನ್ನು ಶಾಂತಿಯುತವಾಗಿ ಬಳಸಿದಾಗಲೂ ಇತರ ತಂತ್ರಜ್ಞಾನಗಳಿಗಿಂತ ಮೂಲಭೂತವಾಗಿ ಭಿನ್ನವಾಗಿದೆ ಎಂದು ಒತ್ತಿ ಹೇಳಿದರು.


ಏಪ್ರಿಲ್ 26, 1986 ರಂದು ಚೆರ್ನೋಬಿಲ್ ಪರಮಾಣು ವಿದ್ಯುತ್ ಸ್ಥಾವರ ಇತಿಹಾಸದಲ್ಲಿಯೇ ಅತ್ಯಂತ ಭೀಕರವಾದ ಪರಮಾಣು ಅಪಘಾತಗಳಲ್ಲಿ ಒಂದನ್ನು ಕಂಡಿತು. ಆ ದಿನ, ಸರಣಿ ಸ್ಫೋಟಕಗಳು ನಂ. 4 ರಿಯಾಕ್ಟರ್ ಅನ್ನು ಹಾಳು ಮಾಡಿ, ಉಕ್ರೇನ್, ಬೆಲಾರಸ್ ಮತ್ತು ಯುರೋಪಿನ ಇತರ ಭಾಗಗಳಲ್ಲಿ ವಿಕಿರಣಶೀಲ ಮಾಲಿನ್ಯವನ್ನು ಹರಡಿತು.


8 ಮಿಲಿಯನ್‌ಗಿಂತಲೂ ಹೆಚ್ಚು ಜನರು ವಿಕಿರಣಕ್ಕೆ ಒಡ್ಡಿಕೊಂಡರು, ಸಾವಿರಾರು ಜನರು ಸತ್ತರು ಮತ್ತು ಮಕ್ಕಳು ಲ್ಯುಕೇಮಿಯಾ ಮತ್ತು ಇತರ ಕಾಯಿಲೆಗಳನ್ನು ಬೆಳೆಸಿಕೊಂಡರು ಎಂದು ಬೇರ್‌ಬಾಕ್ ಹೇಳಿದರು, ಅನೇಕರಿಗೆ ಅವರ ಉಳಿದ ಜೀವನವನ್ನು ರೂಪಿಸುವ ದೀರ್ಘಾವಧಿಯ ಆರೈಕೆಯ ಅಗತ್ಯವಿತ್ತು.


ಯುಎನ್ ಕಾರ್ಯದರ್ಶಿ, ಜನರಲ್ ಆಂಟೋನಿಯೊ ಗುಟೆರೆಸ್ ಇದನ್ನು ಇತಿಹಾಸದಲ್ಲಿ ಅತ್ಯಂತ ಮಹತ್ವದ ಪರಮಾಣು ಅಪಘಾತ ಎಂದು ಬಣ್ಣಿಸಿದರು. ಚೆರ್ನೋಬಿಲ್ ರಾಷ್ಟ್ರೀಯ ದುರಂತ ಮಾತ್ರವಲ್ಲ, ಪರಮಾಣು ಅಪಘಾತಗಳ ಪರಿಣಾಮಗಳನ್ನು ಅಂತರರಾಷ್ಟ್ರೀಯ ಸಮುದಾಯವ ಹಂಚಿಕೊಳ್ಳುತ್ತದೆ ಎಂಬ ಪಾಠವಾಗಿದೆ ಎಂದು ಅವರು ಹೇಳಿದರು.


ವಿಶ್ವಸಂಸ್ಥೆಯ ರಷ್ಯಾದ ಉಪ ಖಾಯಂ ಪ್ರತಿನಿಧಿ ಡಿಮಿಟ್ರಿ ಚುಮಾಕೋವ್, ಸರಿಯಾದ ವಿವೇಕವಿಲ್ಲದೆ ಯಾವುದೇ ತಂತ್ರಜ್ಞಾನಗಳು, ಉತ್ತಮ ಉದ್ದೇಶವನ್ನು ಹೊಂದಿರುವವುಗಳು ಸಹ ಬೆದರಿಕೆಯ ಮೂಲವಾಗಬಹುದು ಎಂದು ಹೇಳಿದರು.

Continue Reading

Latest

ಒಳಮೀಸಲಾತಿ ಜಾರಿ: ಕೊಟ್ಟ ಮಾತು ಈಡೇರಿಸಿದ ದಲಿತರಾಮಯ್ಯ; ಸಚಿವ ಆರ್.ಬಿ. ತಿಮ್ಮಾಪುರ

VISTARANEWS.COM


on

ಬೆಂಗಳೂರು: ಒಳ ಮೀಸಲಾತಿ ಜಾರಿಗೊಳಿಸುವ ಮೂಲಕ ಐತಿಹಾಸಿಕ ತೀರ್ಮಾನ ಕೈಗೊಂಡ ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ, ಅಬಕಾರಿ ಮತ್ತು ಬಾಗಲಕೋಟೆ ಜಿಲ್ಲಾ ಉಸ್ತುವಾರಿ ಸಚಿವ ಆರ್ ಬಿ ತಿಮ್ಮಾಪೂರ ನೇತೃತ್ವದ ನಿಯೋಗ ಕೃತಜ್ಞತೆ ಅರ್ಪಿಸಿತು.

ಶನಿವಾರ ಸಿಎಂ ನಿವಾಸ ಕಾವೇರಿಯಲ್ಲಿ ಸಿಎಂ ಸಿದ್ದರಾಮಯ್ಯರನ್ನು ಭೇಟಿ ಮಾಡಿದ ಸಚಿವ ತಿಮ್ಮಾಪೂರರವರು ಹಾಗೂ ನೂರಾರು ದಲಿತ ಎಡ ಸಮುದಾಯದ ನಾಯಕರು, ಮೂವತ್ತು ವರ್ಷಗಳ ಬೇಡಿಕೆ ಈಡೇರಿಸಿದ್ದಕ್ಕೆ ಸಿಹಿ ತಿನ್ನಿಸಿ ಧನ್ಯವಾದ ತಿಳಿಸಿದರು.

ನಮ್ಮ ಒಳ ಮೀಸಲಾತಿ ಹೋರಾಟ 30-40 ವರ್ಷಗಳದ್ದು. ಹಲವು ಸರ್ಕಾರಗಳು, ಮುಖ್ಯಮಂತ್ರಿಗಳಿಂದ ಸಾಧ್ಯವಾಗದ ಕೆಲಸವನ್ನ ಸನ್ಮಾನ್ಯ ಸಿದ್ದರಾಮಯ್ಯರವರು ಮಾಡಿ ತೋರಿಸಿದ್ದಾರೆ‌. ಸಿದ್ದರಾಮಯ್ಯ ಸಾಹೇಬರು ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು, ಸರ್ವ ಜನಾಂಗ ಒಪ್ಪುವಂತೆ ಮಾಡಿ, ಎಲ್ಲಾ ಕ್ಯಾಬಿನೆಟ್ ಸಚಿವರ ಸರ್ವಾನುಮತದಿಂದ ನಿರ್ಣಯ ಕೈಗೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.

ಈ ಮೂಲಕ ನಮ್ಮ ಸಮುದಾಯಕ್ಕೆ ಅನುಕೂಲ ಮಾಡಿಕೊಟ್ಟಿದ್ದಾರೆ. ನಮ್ಮ ಇಡೀ ಸಮುದಾಯ ಸಿದ್ದರಾಮಯ್ಯರನ್ನ ನೆನಪಿಟ್ಟುಕೊಳ್ಳಲಿದೆ. ಇಡೀ ಸಮುದಾಯ ಅವರಿಗೆ ಕೃತಜ್ಞರಾಗಿಲಿದೆ ಎಂದು ಸಚಿವ ತಿಮ್ಮಾಪೂರ ಅವರು ಹೇಳಿದರು.

Continue Reading

Latest

ಕೇಜ್ರಿವಾಲ್‌ ನೀಲಿಕಣ್ಣಿನ ಹುಡಗನಿಗೆ ಕೇಂದ್ರ ಮಂತ್ರಿ ಸ್ಥಾನ ಸುಲಭ ಸಾಧ್ಯವೇ?

VISTARANEWS.COM


on

ಬೆಂಗಳೂರು: ರಾಘವ್‌ ಚಡ್ಡಾ. ರಾಜ್ಯಸಭೆಯಲ್ಲಿ ಆಫ್ ಪಕ್ಷದ ಉಪನಾಯಕರಾಗಿರುವ ಇವರು, ಶುಕ್ರವಾರವಷ್ಟೇ ಬಿಜೆಪಿಗೆ ಸೇರ್ಪಡೆಯಾದರು. ಆಪ್‌ ಪಕ್ಷ ಕಟ್ಟುವ ನಿಟ್ಟಿನಲ್ಲಿ ಇವರದು ಪ್ರಮುಖ ಪಾತ್ರವಿದೆ. ರಾಜ್ಯಸಭೆಯಲ್ಲಿ ಆಪ್‌ ಪಕ್ಷದ ಉಪನಾಯಕರಾಗಿದ್ದ ರಾಘವ್‌, ಈಚೆಗೆ ಪಕ್ಷದ ಚಟುವಟಿಕೆಗಳಿಂದ ಅಂತರ ಕಾಯ್ದುಕೊಂಡಿದ್ದರು. ನಿರೀಕ್ಷೆಯಂತೆ ಶುಕ್ರವಾರ ಬಿಜೆಪಿ ಪಕ್ಷವನ್ನು ಆಪ್‌ ಪಕ್ಷದ ಇತರೆ 7 ಮಂದಿ ರಾಜ್ಯ ಸಭೆ ಸದಸ್ಯರೊಂದಿಗೆ ಬಿಜೆಪಿಗೆ ಪಾದಾರ್ಪಣೆ ಮಾಡಿದ್ದಾರೆ.


ಹಾಗೆ‌ ನೋಡಿದರೆ, ಆಮ್ ಆದ್ಮಿ ಪಕ್ಷದಲ್ಲಿ ಆರಂಭದ ದಿನಗಳಿಂದಲೂ ಪಕ್ಷ ಕಟ್ಟಲು ಮುಖ್ಯ ಪಾತ್ರ ವಹಿಸಿದ್ದ ರಾಘವ್ ಚಡ್ಡಾ, ಲಂಡನ್​​ನಲ್ಲಿ ಸಿಎ ಪದವಿ ಪಡೆದವರು. 23ನೇ ವಯಸ್ಸಿನಲ್ಲಿಯೇ ಅರವಿಂದ್ ಕೇಜ್ರಿವಾಲ್ ಅವರ ಪಕ್ಷ ಸೇರಿಕೊಂಡು ರಾಜಕೀಯಕ್ಕೆ ಎಂಟ್ರಿಯಾದರು. ಅಂದಿನಿಂದ 15 ವರ್ಷ ಆಪ್​​ನಲ್ಲಿಯೇ ಹಲವು ಜವಾಬ್ದಾರಿಗಳನ್ನು ನಿರ್ವಹಿಸಿದ ರಾಘವ್ ಚಡ್ಡಾ ದೆಹಲಿ ಬಳಿಕ ಪಂಜಾಬ್​​ನಲ್ಲಿ ಆಮ್ ಆದ್ಮಿ ಪಕ್ಷ ನೆಲೆಯೂರಲು ಮುಖ್ಯಪಾತ್ರ ವಹಿಸಿದ್ದರು.


ಕೇಜ್ರಿವಾಲ್‌ರ ನೀಲಿಕಣ್ಣಿನ ಹುಡುಗ


ಅರವಿಂದ್ ಕೇಜ್ರಿವಾಲ್ ಅವರ ಅತ್ಯಾಪ್ತ ಬಣದಲ್ಲಿ ಗುರುತಿಸಿಕೊಂಡಿದ್ದ ರಾಘವ್ ಚಡ್ಡಾ ಮುಂದಿನ ದಿನಗಳಲ್ಲಿ ಮುಖ್ಯಮಂತ್ರಿಯಾಗುತ್ತಾರೆ ಎಂಬ ನಿರೀಕ್ಷೆ ಹಲವರಿಗಿತ್ತು. ಆದರೆ, ರಾಘವ್ ಚಡ್ಡಾ ಅವರನ್ನು ಪಕ್ಷದಲ್ಲಿ ಮೂಲೆಗುಂಪು ಮಾಡಲಾಯಿತು. ರಾಜ್ಯಸಭಾ ಉಪನಾಯಕನ ಸ್ಥಾನದಿಂದಲೂ ಅವರನ್ನು ವಜಾಗೊಳಿಸಲಾಯಿತು. ಅರವಿಂದ್ ಕೇಜ್ರಿವಾಲ್ ಜೈಲಿಗೆ ಹೋದ ನಂತರ ಪಕ್ಷದೊಳಗೆ ನಾನಾ ಬದಲಾವಣೆಗಳಾದವು. ಇದರಿಂದ ಬೇಸರಗೊಂಡಿದ್ದ ರಾಘವ್ ಚಡ್ಡಾ ಪಕ್ಷದೊಳಗೇ ಇದ್ದರೂ ಪಕ್ಷದಿಂದ ಕೊಂಚ ಅಂತರ ಕಾಯ್ದುಕೊಂಡಿದ್ದರು.


ಕೇಜ್ರಿವಾಲ್ ಅವರೊಂದಿಗಿನ ಆಪ್ತ ಸಂಬಂಧದ ಕಾರಣಕ್ಕೆ ರಾಘವ್ ಚಡ್ಡಾ ಅವರನ್ನು ಕೇಜ್ರಿವಾಲ್​ರ “ನೀಲಿ ಕಣ್ಣಿನ ಹುಡುಗ” ಎಂದು ಕರೆಯಲಾಗುತ್ತಿತ್ತು. 2022ರಲ್ಲಿ ರಾಘವ್ ಪಂಜಾಬ್‌ನಿಂದ ರಾಜ್ಯಸಭೆ ಸಂಸದರಾದರು. 33ನೇ ವಯಸ್ಸಿನಲ್ಲಿ ಅವರು ರಾಜ್ಯಸಭೆಯ ಕಿರಿಯ ಸದಸ್ಯರಾಗಿ ಸಂಸತ್ ಪ್ರವೇಶಿಸಿದರು. 2023ರಲ್ಲಿ ಅವರನ್ನು ಸಂಜಯ್ ಸಿಂಗ್ ಬದಲಿಗೆ ರಾಜ್ಯಸಭೆಯಲ್ಲಿ ಎಎಪಿಯ ನಾಯಕರನ್ನಾಗಿ ನೇಮಿಸಲಾಯಿತು.


ಅರವಿಂದ್ ಕೇಜ್ರಿವಾಲ್ ಜಾಮೀನಿನ ಮೇಲೆ ಬಿಡುಗಡೆಯಾಗಿ ಬಂದ ನಂತರವೂ ಆಮ್ ಆದ್ಮಿ ಪಕ್ಷದಲ್ಲಿ ರಾಘವ್ ಚಡ್ಡಾ ಅವರನ್ನು ನಿರ್ಲಕ್ಷ್ಯ ಮಾಡಲಾಯಿತು. ರಾಜ್ಯಸಭಾ ಉಪನಾಯಕನ ಹುದ್ದೆಯಿಂದ ಅವರನ್ನು ವಜಾಗೊಳಿಸಿದ ನಂತರ ಪಕ್ಷದೊಳಗಿನ ಆಂತರಿಕ ಸಮರ ಎಲ್ಲರ ಎದುರು ಬಯಲಾಗಿತ್ತು. ಅದಕ್ಕೂ ಮೊದಲಿನಿಂದಲೂ ರಾಘವ್ ಚಡ್ಡಾ ಪಕ್ಷದ ಪ್ರಮುಖ ಕಾರ್ಯಕ್ರಮಗಳು ಮತ್ತು ಪ್ರಚಾರದಿಂದ ಗೈರುಹಾಜರಾಗಿದ್ದರು. ಪಂಜಾಬ್‌ನ ಉಸ್ತುವಾರಿ ಸ್ಥಾನದಿಂದಲೂ ಅವರನ್ನು ತೆಗೆದುಹಾಕಲಾಯಿತು. ಮದ್ಯ ನೀತಿ ಪ್ರಕರಣದಲ್ಲಿ ಅರವಿಂದ್ ಕೇಜ್ರಿವಾಲ್ ಬಂಧನದಂತಹ ನಿರ್ಣಾಯಕ ಸಮಯದಲ್ಲಿ ರಾಘವ್ ಪಕ್ಷವನ್ನು ಬೆಂಬಲಿಸಲಿಲ್ಲ ಎಂದು ಎಎಪಿ ನಾಯಕರು ಆರೋಪಿಸಿದರು. ಪಂಜಾಬ್ ಸರ್ಕಾರದ ವ್ಯವಹಾರಗಳಲ್ಲಿ ಅವರು ಅತಿಕ್ರಮಣ ಮಾಡಿದ್ದಾರೆ ಎಂಬ ಆರೋಪವೂ ಇತ್ತು.


ಇದೆಲ್ಲದರ ಪರಿಣಾಮ ಎಂಬಂತೆ ಇದೀಗ ಅವರು ಅಧಿಕೃತವಾಗಿ ಬಿಜೆಪಿ ಸೇರ್ಪಡೆಯಾಗಿದ್ದಾರೆ. ಬಿಜೆಪಿ ಸೇರುವ ಮುನ್ನ ಅವರು ಆಫ್‌ ಪಕ್ಷವನ್ನು ಕಟ್ಟಿ ಬೆಳೆಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದೇನೆ. ಆದರೆ ಇದೀಗ ಅಲ್ಲಿ ಸಿದ್ದಾಂತಗಳೊಂದಿಗೆ ರಾಜಿ ಮಾಡಿಕೊಳ್ಳುವ ಗುಣ ಬೆಳೆದಿದೆ ಎಂದಿದ್ದಾರೆ. ಹಾಗಿದ್ದರೆ ಈಗ ತಾವು ಕಾಲಿಟ್ಟಿರುವ ಬಿಜೆಪಿಯಲ್ಲಿ ಸಿದ್ದಾಂತಗಳ ರಾಜಿ ಆಗುವುದಿಲ್ಲವೇ ? ಎಂಬ ಪ್ರಶ್ನೆ ಸಹಜವಾಗಿಯೇ ಮೂಡುತ್ತದೆ.
ಹಾಗೆ ನೋಡಿದರೆ ಆಪ್‌ ಪಕ್ಷದಿಂದ ಪ್ರಶಾಂತ್‌ ಭೂಷನ್‌, ಯೋಗೇಂದ್ರಯಾದವ್‌ , ಆಶಿತೋಷ್‌ ಮೊದಲಾದವರು ಹೊರ ಬಂದರು. ಆದರೆ ಅವರು ಯಾವುದೇ ಪಕ್ಷ ಸೇರಲಿಲ್ಲ, ತಮ್ಮ ಪಾಡಿಗೆ ತಾವು ತಮ್ಮ ಕೆಲಸ ಕಾರ್ಯಗಳಲ್ಲಿ ತೊಡಗಿಸಿಕೊಂಡರು. ಆದರೆ ಆಫ್‌ ಪಕ್ಷದಿಂದ ಹೊರ ಬಂದ ರಾಘವ್‌ ಚಡ್ಡಾ ಸೇರಿದಂತೆ ಒಂದು ವರ್ಗದ ನಾಯಕರು ಮಾತ್ರ ಬಿಜೆಪಿಗೆ ಸೇರ್ಪಡೆಯಾಗಿರುವುದು ಗಮನಾರ್ಹವಾಗಿದೆ.


ರಾಘವ್‌ ಚಡ್ಡಾ ಸೇರ್ಪಡೆ: ಬಿಜೆಪಿಗೆ ಲಾಭವೇ ?


ಆಪ್‌ ಪಕ್ಷ ಅಧಿಕಾರದಲ್ಲಿರುವ ಪಂಜಾಬ್‌ ನಲ್ಲಿ ಇದರ ಪ್ರಭಾವ ಬೀರದೇ ಇರದು. ಇದೀಗ ರಾಘವ್‌ ಚಡ್ಡಾ ಅವರೊಂದಿಗೆ ಬಿಜೆಪಿ ಸೇರಿರುವ ರಾಜ್ಯ ಸಭೆಯ ಸಂಸದರ ಪೈಕಿ ಸಂದೀಪ್‌ ಪಾಠಕ್‌ ಅವರು ಪ್ರಮುಖರು. ಚುನಾವಣಾ ತಂತ್ರ-ರಣತಂತ್ರ ರೂಪಿಸುವಲ್ಲಿ ಇವರ ಪಾತ್ರ ಮಹತ್ತರವಾದದ್ದು. ಪಂಜಾಬ್‌ ಸಿಎಂ ಕಚೇರಿ ನಿರ್ವಹಣೆಯಲ್ಲಿಯೂ ಇವರ ಪಾತ್ರ ಹಿರಿದು. ಅದನ್ನು ಹೊರತುಪಡಿಸಿದರೆ ಪರಿಣಿತಿ ಚಡ್ಡಾ ಅವರ ಪತಿ ರಾಘವ್‌ ಚಡ್ಡಾ ಕೂಡ ಬಿಜೆಪಿಗೆ ವರವಾಗಬಲ್ಲರು. ಆದರೆ ಇವರೊಂದಿಗೆ ಬಿಜೆಪಿ ಸೇರ್ಪಡೆಯಾಗಿರುವ ಇತರರು ಆಟಕ್ಕುಂಟು ಲೆಕ್ಕಕ್ಕಿಲ್ಲ ಎನ್ನಲಾಗುತ್ತಿದೆ.


ರಾಘವ್‌ ಚಡ್ಡಾ ಏಳು ಮಂದಿ ಸಂಸದರನ್ನು ತಮ್ಮೊಂದಿಗೆ ಕೇಸರಿ ಪಕ್ಷಕ್ಕೆ ಕರೆತಂದ ಹಿನ್ನೆಲೆಯಲ್ಲಿ ಅವರನ್ನು ಕೇಂದ್ರ ಮಂತ್ರಿ ಮಂಡಲದಲ್ಲಿ ಸ್ಥಾನವಕಾಶ ದೊರೆಯಬಹುದು. ಏಕೆಂದರೆ ಪ್ರಸ್ತುತ ರಾಘವ್‌ ಅವರ ರಾಜ್ಯಸಭೆ ಕಾಲಾವಧಿ ಇನ್ನೇರಡು ವರ್ಷವರೆಗೆ ಬಾಕಿ ಇದೆ. ಮತ್ತೆ ಅವರನ್ನು ರಾಜ್ಯಸಭೆಯಲ್ಲಿ ಸ್ಥಾನವಕಾಶ ಕಲ್ಪಿಸಬಹುದು ಆದರೆ ಸದ್ಯಕ್ಕೆ ಆ ಸಾಧ್ಯತೆ ಕಡಿಮೆ ಎಂದೇ ಬಿಜೆಪಿ ಮೂಲಗಳ ಅಭಿಪ್ರಾಯ.


ರಾಜ್ಯಸಭೆಯಲ್ಲಿ ಬಿಜೆಪಿಯ ಬಲ ಇದೀಗ 142ಕ್ಕೇರಿದಂತಾಗಿದೆ. ಮೂರನೇ ಎರಡರಷ್ಟು ಬಹುಮತಕ್ಕಾಗಿ ಬಿಜೆಪಿಗೆ ರಾಜ್ಯಸಭೆಯಲ್ಲಿ ಇನ್ನೂ 20 ಸದಸ್ಯರ ಬಲ ಅವಶ್ಯ. ಇದರಲ್ಲಿ ಬಿಜೆಪಿ ಸಫಲವಾದರೆ ಲೋಕಸಭೆ ಮತ್ತು ರಾಜ್ಯಸಭೆ ಈ ಎರಡೂ ಸದನಗಳಲ್ಲಿ ಅಂದರೆ ಸಂಸತ್ತಿನ ಉಭಯ ಸದನಗಳಲ್ಲಿ ಯಾವುದೇ ವಿಧೇಯಕ ಪಾಸು ಮಾಡಿಕೊಳ್ಳುವುದು ಬಿಜೆಪಿ ಸುಲಭಸಾಧ್ಯವಾಗಲಿದೆ. ಸಂತ್ತಿನ ಮೇಲ್ಮನೆಯಲ್ಲಿ ಪ್ರಸ್ತುತ ವಿಪಕ್ಷಗಳ ಸ್ಥಾನ 113ರಷ್ಟಿದೆ. ಆದರೆ ರಾಜ್ಯಸಭೆಯಲ್ಲಿ ಕೊರತೆ ಇರುವ ಇನ್ನೂ 20 ಸದಸ್ಯರನ್ನು ಸೆಳೆಯುವುದು ಕೇಸರಿ ಪಕ್ಷಕ್ಕೆ ಅಷ್ಟು ಸುಲಭಸಾಧ್ಯವಲ್ಲ ಎಂದೂ ಹೇಳಲಾಗುತ್ತಿದೆ.


ಒಟ್ಟಾರೆ, ರಾಘವ್‌ ಚಡ್ಡಾ ಅವರ ಬಿಜೆಪಿ ಸೇರ್ಪಡೆ ಆಪ್‌ ಪಕ್ಷದ ಮುಖ್ಯಸ್ಥ ಅರವಿಂದ್‌ ಕೇಜ್ರಿವಾಲ್‌ ಮತ್ತು ಪಠಾಲಂಗೆ ದೊಡ್ಡ ಆಘಾತವೇ ಸರಿ ಎನ್ನುವುದರಲ್ಲಿ ಎರಡು ಮಾತಿಲ್ಲ.

Continue Reading

Latest

ಸಚಿವ ಜಮೀರ್‌ರಿಂದ ಸಾಕಷ್ಟು ಅನುಭವಿಸಿದ್ದೇನೆ, ಅವರನ್ನು ಮತ್ತೆ ಜೆಡಿಎಸ್‌ಗೆ ಸೇರಿಸಿಕೊಳ್ಳಲ್ಲ; ಕುಮಾರಸ್ವಾಮಿ ಸ್ಪಷ್ಟೋಕ್ತಿ

VISTARANEWS.COM


on

HD Revanna

ಹಾಸನ: ದಾವಣಗೆರೆ ದಂಗಲ್‌ ನಿಂದಾಗಿ ಕಾಂಗ್ರೆಸ್‌ ಪಕ್ಷದಿಂದ ಕಠಿಣ ಕ್ರಮದ ಭೀತಿಯಲ್ಲಿರುವ ಸಚಿವ ಜಮೀರ್‌ ಅಹಮದ್‌ ಖಾನ್‌ರನ್ನು ಮತ್ತೆ ಪಕ್ಷಕ್ಕೆ ಸೇರಿಸಿಕೊಳ್ಳುವ ಅವಶ್ಯಕತೆ ಇಲ್ಲ ಎಂದು ಜೆಡಿಎಸ್‌ ವರಿಷ್ಠ ಹಾಗೂ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.


ಜಮೀರ್‌ ಅವರಿಂದ ಈಗಾಗಲೇ ಸಾಕಷ್ಟು ಅನುಭವಿಸಿದ್ದೇನೆ. ರಾಜಕೀಯದಲ್ಲಿ ಶಕ್ತಿ ಬರುತ್ತೆ ಎಂದು ಹೇಳಿ ಅವರನ್ನು ಮತ್ತೆ ಪಕ್ಷ ಬರಮಾಡಿಕೊಳ್ಳುವ ಪ್ರೇಮಯವೇ ಇಲ್ಲ, ಬೆಂದ ಮನೆಯಲ್ಲಿ ಗಳ ಹಿರಿಯುವ ಕೆಲಸಕ್ಕೆ ಕೈ ಹಾಕಲ್ಲ ಎಂದು ಅವರು ಸ್ಪಷ್ಟಪಡಿಸಿದರು.


ಹೊಳೆನರಸೀಪುರ ತಾಲೂಕಿನ ಉದ್ದನ ಹೊಸಹಳ್ಳಿ ಗ್ರಾಮದಲ್ಲಿ ಶ್ರೀವೀರಾಂಜನೇಯಸ್ವಾಮಿ ದೇವಾಲಯದ ಜೀರ್ಣೋದ್ಧಾರ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಕುಮಾರಸ್ವಾಮಿ, ಕಾಂಗ್ರೆಸ್‌ ಪಕ್ಷದ ವಿರುದ್ಧ ತೀವ್ರವಾಗಿ ಹರಿಹಾಯ್ದರು. ಕೇವಲ ₹2೦೦೦ ಗ್ಯಾರಂಟಿ ಹಣದಿಂದ ಅಭಿವೃದ್ಧಿ ಸಾಧ್ಯವಿಲ್ಲ. ಮಹಿಳೆಯರು ಈ ಸಣ್ಣ ಮೊತ್ತಕ್ಕೆ ಮರುಳಾಗಬಾರದು, ಇದರಿಂದ ಅವರ ಉದ್ಧಾರ ಅಸಾಧ್ಯ ಎಂದರು. ಇಂತಹ ಗ್ಯಾರೆಂಟಿಗಳಿಂದ ರಾಜ್ಯ ಸರ್ಕಾರಗಳಿಗೆ ಸಂಬಳ ಕೊಡಲಾಗದಂತ ದುಸ್ಥಿತಿ ಎದುರಾಗಿದೆ ಎಂದು ಅವರು ಕಳವಳ ವ್ಯಕ್ತಪಡಿಸಿದರು.


ರಾಜ್ಯದಲ್ಲಿ ಸರ್ಕಾರಿ ನೌಕರರಿಗೆ ಮಾರ್ಚ್ ತಿಂಗಳ ವೇತನವನ್ನು ಇನ್ನು ಕೊಟ್ಟಿಲ್ಲ ಎನ್ನುವ ಮಾಹಿತಿ ಇದೆ. ಹಾಗೆಯೇ ಕಾಂಗ್ರೆಸ್ ಆಡಳಿತ ಇರುವ ಹಿಮಾಚಲ ಪ್ರದೇಶದಲ್ಲಿಯೂ ಸರ್ಕಾರಿ ನೌಕರರ ಸಂಬಳವನ್ನು ನೀಡಲು ಪರದಾಡುತ್ತಿದೆ. ಆ ಸರ್ಕಾರವು ನೌಕರರ ಸಂಬಳವನ್ನು ಕಡಿತ ಮಾಡಿಕೊಂಡಿದೆ ಎಂದು ಮಾಧ್ಯಮಗಳಲ್ಲಿ ವರದಿಯಾಗಿದೆ. ಹೀಗಾಗಿ ರಾಜ್ಯಗಳ ಅಭಿವೃದ್ಧಿ ಸಂಪೂರ್ಣವಾಗಿ ಹಳಿತಪ್ಪಿದೆ ಇದೆಕ್ಕೆಲ್ಲಾ ಕಾಂಗ್ರೆಸ್ ಪಕ್ಷವೇ ಹೊಣೆ ಎಂದರು.


ಸರಿ ಸುಮಾರು 7.2600 ಲಕ್ಷ ಕೋಟಿಗೂ ಸಾಲವನ್ನು ರಾಜ್ಯ ಸರ್ಕಾರ ಮಾಡಿದೆ. ರಾಜ್ಯದ ಪ್ರತಿಯೊಬ್ಬರ ತಲೆಯ ಮೇಲೆಯೂ ಕನಿಷ್ಠವೆಂದರೂ ಒಂದು ಲಕ್ಷ ರೂಪಾಯಿಗೂ ಅಧಿಕ ಸಾಲವಿದೆ. ಇಷ್ಟು ಸಾಲ ಮಾಡಿದರೆ ರಾಜ್ಯ ಅಭಿವೃದ್ಧಿ ಹೊಂದಲು ಸಾಧ್ಯವೇ ಎಂದು ಸಚಿವ ಕುಮಾರಸ್ವಾಮಿ ಪ್ರಶ್ನಿಸಿದರು.


ಒಂದು ಕೈಯಲ್ಲಿ ಜನರಿಗೆ 2 ಸಾವಿರ ಕೊಡುತ್ತಾರೆ. ಇನ್ನೊಂದು ಕೈಯಲ್ಲಿ ತೆರಿಗೆ ಮೇಲೆ ತೆರಿಗೆ ವಿಧಿಸುತ್ತಾರೆ. ಬೆಲೆ ಏರಿಕೆಗಳ ಬಗ್ಗೆ ಹೇಳುವ ಹಾಗೆಯೇ ಇಲ್ಲ. ಇತ್ತೀಚೆಗೆ ವಿದ್ಯುತ್ ದರವನ್ನು ಹೆಚ್ಚಿಸಿದರು. ಹಾಗೆಯೇ ಮದ್ಯದ ದರವನ್ನು ಏರಿಸಿದರು. ಎಷ್ಟು ಸಾಧ್ಯವೊ ಅಷ್ಟು ಕಡೆ ಜನರನ್ನು ಕಿತ್ತು ತಿನ್ನುವ ಕೆಲಸವನ್ನು ಕಾಂಗ್ರೆಸ್ ಸರ್ಕಾರ ಮಾಡುತ್ತಿದೆ ಎಂದು ಸಚಿವರು ಕಿಡಿಕಾರಿದರು.


ನನಗೆ ದೊರೆತ ಸಣ್ಣ ಅವಧಿಯಲ್ಲಿ ಇಷ್ಟೆಲ್ಲ ಕೆಲಸಗಳನ್ನು ಮಾಡಿದ್ದೇನೆ. ಸಾವಿರಾರು ಶಿಕ್ಷಕರನ್ನು ನೇರವಾಗಿ ಮತ್ತು ಪಾರದರ್ಶಕವಾಗಿ ನೇಮಕ ಮಾಡಿದ್ದೆ. ಆದರೆ ಈಗಿನ ಸರ್ಕಾರಕ್ಕೆ ಒಂದೇ ಒಂದು ನೇಮಕಾತಿ ಮಾಡುವ ಶಕ್ತಿಯು ಇಲ್ಲವಾಗಿದೆ ಎಂದು ಕೇಂದ್ರ ಸಚಿವರು ದೂರಿದರು.

Continue Reading
Advertisement
Latest7 minutes ago

ಆರ್‌ಸಿಬಿ ಪ್ಲೇಯಿಂಗ್ 11 ಅಪ್‌ಡೇಟ್: ಡೆಲ್ಲಿ ವಿರುದ್ಧದ ಪಂದ್ಯಕ್ಕೆ ಇಬ್ಬರು ಸ್ಟಾರ್ ಆಟಗಾರರು ಡೌಟ್?

Latest53 minutes ago

ಬಿಗಿ ಭದ್ರತೆಯ ನಡುವೆಯೂ ಟ್ರಂಪ್ ಪಾರ್ಟಿಗೆ ಅತಿಥಿಯಂತೆ ಬಂದಿದ್ದ ದಾಳಿಕೋರ! ಸೀಕ್ರೆಟ್ ಸರ್ವಿಸ್ ಕಣ್ಣು ತಪ್ಪಿಸಿದ್ದು ಹೇಗೆ?

ಕರ್ನಾಟಕ2 hours ago

ಹುಬ್ಬಳ್ಳಿಯಲ್ಲಿ ವಾರದಲ್ಲಿ ಮೂರನೇ ಬಾರಿ ವಿಮಾನ ಲ್ಯಾಂಡಿಂಗ್ ಸಮಸ್ಯೆ; ಕೂದಲೆಳೆ ಅಂತರದಲ್ಲಿ ಪಾರಾದ ಪ್ರಯಾಣಿಕರು

Latest2 hours ago

ದೆಹಲಿ ಏರ್‌ಪೋರ್ಟ್‌ನಲ್ಲಿ ಅಪಘಾತ: ಟೇಕಾಫ್ ಆಗುವಾಗ ಸ್ವಿಸ್ ಏರ್ ವಿಮಾನದ ಎಂಜಿನ್‌ನಲ್ಲಿ ಬೆಂಕಿ; ಆರು ಮಂದಿಗೆ ಗಾಯ!

Latest20 hours ago

ಮಹಿಳಾ ಮೀಸಲಾತಿ ವಿರೋಧಿಸಿದ ಕಾಂಗ್ರೆಸ್‌ ವಿರುದ್ಧ ಸಚಿವೆ ಶೋಭಾ ಕರಂದ್ಲಾಜೆ ಆಕ್ರೋಶ

Latest20 hours ago

ಟೆಹರಾನ್‌ನಲ್ಲಿ ವಿಮಾನ ಹಾರಾಟ ಪುನರಾರಂಭ: ಪಾಕ್‌ಗೆ ಆಗಮಿಸಿದ ಇರಾನ್‌ ನಿಯೋಗ: ಯುದ್ಧದ ಅಂತ್ಯದ ಮುನ್ಸೂಚನೆಯೇ ?

Latest21 hours ago

ಪರಮಾಣು ಶಸ್ತ್ರಾಸ್ತ್ರಗಳು ಶಾಂತಿಯ ಉದ್ದೇಶಕ್ಕೆ ಬಳಕೆಯಾಗಲಿ: ವಿಶ್ವಸಂಸ್ಥೆ ಕಳಕಳಿ

Latest22 hours ago

ರಾಜಕುಮಾರ್‌ ಸಮಾಧಿಗೆ ಭೂಮಿ: ವಿವಾದ ಹುಟ್ಟು ಹಾಕಿದ ನಟ ಚೇತನ್‌ ವಿರುದ್ಧ ಅಭಿಮಾನಿಗಳ ಆಕ್ರೋಶ; ದೂರು ದಾಖಲು

Latest22 hours ago

ಯೋಗೇಶ್‌ ಗೌಡ ಕೊಲೆ ಪ್ರಕರಣ: ಅನರ್ಹತೆ ಭೀತಿ; ಶಿಕ್ಷೆ ರದ್ದುಕೋರಿ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ ಶಾಸಕ ವಿನಯ್‌ ಕುಲಕರ್ಣಿ

Latest23 hours ago

ಕಲಬುರಗಿ ಜಿಲ್ಲೆಯ ಮಕ್ಕಳನ್ನು ಅವಮಾನಿಸಬೇಡಿ, ಅವರೂ ಬುದ್ದಿವಂತರು; ಬಿಜೆಪಿ ಮುಖಂಡರಿಗೆ ಸಚಿವ ಪ್ರಿಯಾಂಕ್‌ ಖರ್ಗೆ ತಿರುಗೇಟು

galipata neetu
ಕಿರುತೆರೆ2 years ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ3 years ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ3 years ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ3 years ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ3 years ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ2 years ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ2 years ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ2 years ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ2 years ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್2 years ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್2 years ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ2 years ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 years ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 years ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 years ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 years ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 years ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 years ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌