Viral Video: ಲಿಫ್ಟ್‌ನಲ್ಲಿ ಯುವಕನ ಕೈಯಲ್ಲಿದ್ದ ಲೀಥಿಯಂ ಬ್ಯಾಟರಿ ಬ್ಲಾಸ್ಟ್‌; ಅಬ್ಬಾ ಎಂಥಾ ಭೀಕರ ದೃಶ್ಯ! - Vistara News

ವೈರಲ್ ನ್ಯೂಸ್

Viral Video: ಲಿಫ್ಟ್‌ನಲ್ಲಿ ಯುವಕನ ಕೈಯಲ್ಲಿದ್ದ ಲೀಥಿಯಂ ಬ್ಯಾಟರಿ ಬ್ಲಾಸ್ಟ್‌; ಅಬ್ಬಾ ಎಂಥಾ ಭೀಕರ ದೃಶ್ಯ!

Viral Video: ವಸ್ಲಟ್‌ ಬಯೋಗ್ಲು ಈ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಶೇರ್‌ ಮಾಡಿದ್ದು, ಯುವಕನೋರ್ವ ಕೈಯಲ್ಲಿ ಲೀಥಿಯಂ ಬ್ಯಾಟರಿ ಹಿಡಿದು ಲಿಫ್ಟ್‌ ಒಳಗೆ ಹೋಗುತ್ತಾನೆ. ಲಿಫ್ಟ್‌ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡು ತಕ್ಷಣ ಸ್ಫೋಟವಾಗುತ್ತದೆ. ಇಡೀ ಲಿಫ್ಟ್‌ನಲ್ಲಿ ಹೊಗೆ ಮತ್ತು ಬೆಂಕಿ ಕಾಣಿಸಿಕೊಳ್ಳುತ್ತದೆ. ಲಿಫ್ಟ್‌ನ ಹೊರಗಿದ್ದವರು ಅಗ್ನಿ ಶಾಮಕ ಸಾಧನಗಳನ್ನು ಹಿಡಿದು ನಿಂತಿರುವುದನ್ನು ವಿಡಿಯೋದಲ್ಲಿ ಕಾಣಬಹುದಾಗಿದೆ. ಕ್ಷಣಾರ್ಧದಲ್ಲಿ ಯುವಕ ಸುಟ್ಟು ಕರಕಲಾಗಿರುವ ಘಟನೆ ವರದಿಯಾಗಿದೆ.

VISTARANEWS.COM


on

Viral video
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಹೊಸದಿಲ್ಲಿ: ಇತ್ತೀಚಿನ ಕೆಲವು ದಿನಗಳಲ್ಲಿ ಎಲೆಕ್ಟ್ರಿಕ್‌ ಸ್ಕೂಟರ್‌ ಬ್ಯಾಟರಿ(Electric Scooter battery) ಸ್ಫೋಟಗೊಂಡು ಅನಾಹುತಗಳು ಸಂಭವಿಸುತ್ತಿರುವ ಬಗ್ಗೆ ಆಗಾಗ ವರದಿ ಆಗುತ್ತಲೇ ಇರುತ್ತದೆ. ಇದೀಗ ಅಂತಹದ್ದೇ ಮತ್ತೊಂದು ಘಟನೆ ವರದಿಯಾಗಿದೆ. ಲಿಫ್ಟ್‌ನಲ್ಲಿ ಲೀಥಿಯಂ ಬ್ಯಾಟರಿ(lithium battery) ಸ್ಫೋಟಗೊಂಡು ಯುವಕನೋರ್ವ ದಾರುಣವಾಗಿ ಮೃತಪಟ್ಟಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್‌(Viral Video) ಆಗುತ್ತಿದೆ.

ವಸ್ಲಟ್‌ ಬಯೋಗ್ಲು ಈ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಶೇರ್‌ ಮಾಡಿದ್ದು, ಯುವಕನೋರ್ವ ಕೈಯಲ್ಲಿ ಲೀಥಿಯಂ ಬ್ಯಾಟರಿ ಹಿಡಿದು ಲಿಫ್ಟ್‌ ಒಳಗೆ ಹೋಗುತ್ತಾನೆ. ಲಿಫ್ಟ್‌ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡು ತಕ್ಷಣ ಸ್ಫೋಟವಾಗುತ್ತದೆ. ಇಡೀ ಲಿಫ್ಟ್‌ನಲ್ಲಿ ಹೊಗೆ ಮತ್ತು ಬೆಂಕಿ ಕಾಣಿಸಿಕೊಳ್ಳುತ್ತದೆ. ಲಿಫ್ಟ್‌ನ ಹೊರಗಿದ್ದವರು ಅಗ್ನಿ ಶಾಮಕ ಸಾಧನಗಳನ್ನು ಹಿಡಿದು ನಿಂತಿರುವುದನ್ನು ವಿಡಿಯೋದಲ್ಲಿ ಕಾಣಬಹುದಾಗಿದೆ. ಕ್ಷಣಾರ್ಧದಲ್ಲಿ ಯುವಕ ಸುಟ್ಟು ಕರಕಲಾಗಿರುವ ಘಟನೆ ವರದಿಯಾಗಿದೆ.

ಇನ್ನು ಈ ಘಟನೆ ಎಲ್ಲಿ ನಡೆದಿದೆ ಎಂಬ ಬಗ್ಗೆ ಮಾಹಿತಿ ಇಲ್ಲ. ಈ ವಿಡಿಯೋ ಭಾರೀ ವೈರಲ್‌ ಆಗುತ್ತಿದ್ದು, ನೆಟ್ಟಿಗರು ಆಘಾತ ವ್ಯಕ್ತಪಡಿಸಿದ್ದಾರೆ. ಅದರಲ್ಲೂ ಎಲೆಕ್ಟ್ರಿಕ್‌ ಸ್ಕೂಟರ್‌, ಕಾರು ಬಳಸುವವರಿಗೆ ಇದೊಂದು ದೊಡ್ಡ ಶಾಕ್‌ ಆಗಿದೆ. ಇಂತಹ ಅಪಾಯಕಾರಿ ಬ್ಯಾಟರಿಗಳ ಬಗ್ಗೆ ಜನ ಅತ್ಯಂತ ಎಚ್ಚರದಿಂದ ಇರಬೇಕು ಎಂದು ಅನೇಕರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಅದರಲ್ಲೂ ಇಕ್ಕಟ್ಟಾದ ಸ್ಥಳಗಳಲ್ಲಿ ಇಂತಹ ಬ್ಯಾಟರಿಗಳನ್ನು ಬಳಸುವಾಗ ಅತ್ಯಂತ ಎಚ್ಚರಿಕೆ ವಹಿಸಬೇಕು ಎಂದಿದ್ದಾರೆ.

ಇದನ್ನೂ ಓದಿ: Sharia Law: “ಅಮೆರಿಕನ್ನರ ಮೇಲೂ ಷರಿಯಾ ಕಾನೂನು ಹೇರಲಾಗುತ್ತದೆ…”; ಸಂಚಲನ ಮೂಡಿಸಿದ ವೈರಲ್‌ ವಿಡಿಯೋ

ಕೆಲವು ತಿಂಗಳ ಹಿಂದೆ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು (Electric scooter) ಮನೆಯೊಂದು ಬೆಂಕಿಗೆ (Fire Accident) ಆಹುತಿಯಾಗಿತ್ತು. ಧಾರವಾಡದ ಕಲಘಟಗಿ ತಾಲೂಕಿನ ಬಿ.ಗುಡಿಹಾಳ ಗ್ರಾಮದಲ್ಲಿ ಘಟನೆ ನಡೆದಿದ್ದು, ಎಲೆಕ್ಟ್ರಿಕ್‌ ಬೈಕ್‌ ಬ್ಯಾಟರಿಯನ್ನು ಚಾರ್ಜಿಂಗ್‌ಗೆ ಹಾಕಲಾಗಿತ್ತು. ಈ ವೇಳೆ ಬ್ಯಾಟರಿ ಸ್ಫೋಟಗೊಂಡು ಬೈಕ್‌ ಹೊತ್ತಿ ಉರಿದಿದೆ. ಈ ವೇಳೆ ಬೆಂಕಿ ಕಿಡಿ ಮನೆಗೆ ಆವರಿಸಿ ಕ್ಷಣಾರ್ಧದಲ್ಲಿ ಹೊತ್ತಿಕೊಂಡಿದೆ. ಬಸಯ್ಯ ಹಿರೇಮಠ್ ಎಂಬುವವರ ಮನೆಯಲ್ಲಿ ಈ ಅವಘಡ ಸಂಭವಿಸಿದೆ. ಬೆಂಕಿ ಕಾಣಿಸಿಕೊಳ್ಳುವಾಗಲೇ ಕುಟುಂಬಸ್ಥರು ಹೊರಗೆ ಓಡಿ ಹೋಗಿದ್ದಾರೆ. ಅದೃಷ್ಟವಶಾತ್ ಅಪಾಯದಿಂದ ಪಾರಾಗಿದ್ದರು. ರಾಜ್ಯದಲ್ಲಿ ಇಂತಹ ಘಟನೆಗಳು ಆಗಾಗ ಬೆಳಕಿಗೆ ಬರುತ್ತಲೇ ಇವೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ವಿದೇಶ

9/11 Attack: ನ್ಯೂಯಾರ್ಕ್‌ ಅವಳಿ ಗೋಪುರಗಳ ಮೇಲೆ ಉಗ್ರ ದಾಳಿಯ ಹೊಸ ವಿಡಿಯೋ ವೈರಲ್‌

9/11 Attack: ಕೀ ಸುಗಿಮೋಟೊ ಎಂಬವರು ಸಾಮಾಜಿಕ ಜಾಲತಾಣದಲ್ಲಿ ಈ ವಿಡಿಯೋ ಅಪ್‌ಲೋಡ್‌ ಮಾಡಿದ್ದು, ಬೇರೆ ಆಂಗಲ್‌ನಲ್ಲಿ ಈ ದಾಳಿಯ ದೃಶ್ಯವನ್ನು ರೆಕಾರ್ಡ್‌ ಮಾಡಲಾಗಿದೆ. ಈ ಆಯಾಮದಲ್ಲಿ ಇದುವರೆಗೆ ದಾಳಿಯ ವಿಡಿಯೋ ಕಂಡುಬಂದಿಲ್ಲ. ಈ ಗೋಪುರ ಕುಸಿತದ ದೃಶ್ಯವನ್ನು ದಕ್ಷಿಣ ಅಥವಾ ಪೂರ್ವದಿಂದ ಚಿತ್ರೀಕರಿಸಿಲ್ಲ. ಈ ಹಿಂದಿನ ಎಲ್ಲಾ ದೃಶ್ಯಗಳನ್ನು ದಕ್ಷಿಣ ಅಥವಾ ಪೂರ್ವದಿಂದಲೇ ಚಿತ್ರೀಕರಿಸಲಾಗಿತ್ತು.

VISTARANEWS.COM


on

9/11 attack
Koo

ವಾಷಿಂಗ್ಟನ್‌: ಅಮೆರಿಕದ ನ್ಯೂಯಾರ್ಕ್‌ನ ವರ್ಲ್ಡ್‌ ಟ್ರೇಡ್‌ ಸೆಂಟರ್(World trade center) ಅವಳಿ ಗೋಪುರ ಗುರಿಯಾಗಿಸಿ ಸೆ.11, 20011(9/11 Attack) ರಂದು ನಡೆದ ಉಗ್ರರ ದಾಳಿಯ ಹೊಸ ವಿಡಿಯೋವೊಂದು ಬರೋಬ್ಬರಿ 23 ವರ್ಷಗಳ ಬಳಿಕ ಸಾಮಾಜಿಕ ಜಾಲತಾಣದಲ್ಲಿ ವೈರಲ್‌(Viral Video) ಆಗುತ್ತಿದೆ.

ಕೀ ಸುಗಿಮೋಟೊ ಎಂಬವರು ಸಾಮಾಜಿಕ ಜಾಲತಾಣದಲ್ಲಿ ಈ ವಿಡಿಯೋ ಅಪ್‌ಲೋಡ್‌ ಮಾಡಿದ್ದು, ಬೇರೆ ಆಂಗಲ್‌ನಲ್ಲಿ ಈ ದಾಳಿಯ ದೃಶ್ಯವನ್ನು ರೆಕಾರ್ಡ್‌ ಮಾಡಲಾಗಿದೆ. ಈ ಆಯಾಮದಲ್ಲಿ ಇದುವರೆಗೆ ದಾಳಿಯ ವಿಡಿಯೋ ಕಂಡುಬಂದಿಲ್ಲ. ಈ ಗೋಪುರ ಕುಸಿತದ ದೃಶ್ಯವನ್ನು ದಕ್ಷಿಣ ಅಥವಾ ಪೂರ್ವದಿಂದ ಚಿತ್ರೀಕರಿಸಿಲ್ಲ. ಈ ಹಿಂದಿನ ಎಲ್ಲಾ ದೃಶ್ಯಗಳನ್ನು ದಕ್ಷಿಣ ಅಥವಾ ಪೂರ್ವದಿಂದಲೇ ಚಿತ್ರೀಕರಿಸಲಾಗಿತ್ತು.

ಬಿಡುಗಡೆಯು ಸಾಮಾಜಿಕ ಮಾಧ್ಯಮ ಬಳಕೆದಾರರಲ್ಲಿ ಚರ್ಚೆಗಳು ಮತ್ತು ಊಹಾಪೋಹಗಳನ್ನು ಹುಟ್ಟುಹಾಕಿದೆ ಇನ್ನು ಈ ವಿಡಿಯೋ ತುಣುಕನ್ನು ವ್ಯಾಪಕವಾಗಿ ಹಂಚಿಕೊಳ್ಳಲಾಗಿದೆ ಮತ್ತು ವಿವಿಧ ವೇದಿಕೆಗಳಲ್ಲಿ ಚರ್ಚಿಸಲಾಗಿದೆ, 9/11 ಘಟನೆಗಳ ಸುತ್ತಲಿನ ಆಸಕ್ತಿ ಮತ್ತು ಚರ್ಚೆಯನ್ನು ಎತ್ತಿ ತೋರಿಸುತ್ತದೆ.

ಘಟನೆ ಹಿನ್ನೆಲೆ ಏನು?

ಅಲ್‌ಖೈದಾ ಎಂಬ ಇಸ್ಲಾಮಿಕ್ ಉಗ್ರ ಸಂಘಟನೆ ವಿಮಾನದ ಮೂಲಕ ವಿಶ್ವದ ದೊಡ್ಡಣ್ಣ ಅಮೆರಿಕದ ಮೇಲೆ ದಾಳಿ ನಡೆಸಿ ಇಂದಿಗೆ 20 ವರ್ಷ ಸಂದಿದೆ. ಸೆಪ್ಟೆಂಬರ್ 11, 2001ರಂದು ನ್ಯೂಯಾರ್ಕ್‌ನ ವರ್ಲ್ಡ್‌ ಟ್ರೇಡ್‌ ಸೆಂಟರ್ ಅವಳಿ ಗೋಪುರಕ್ಕೆ ವಿಮಾನದ ಮೂಲಕ ದಾಳಿ ನಡೆಸಿ ಅಮೆರಿಕಗೆ ಅಲ್‌ಕೈದಾ ಉಗ್ರ ಸಂಘಟನೆ ಶಾಕ್‌ ಕೊಟ್ಟಿತ್ತು. ಈ ಭೀಕರ ಉಗ್ರ ದಾಳಿಯಲ್ಲಿ 2977 ಅಮಾಯಕರು ಮೃತರಾಗಿದ್ದರು. ಈ ಕರಾಳ ಘಟನೆ ನಡೆದು 20 ವರ್ಷವಾಗಿದೆ. ಅಮೆರಿಕ ಈ ದಿನವನ್ನು ಅಮೆರಿಕದ ಕರಾಳ ದಿನ ಎಂದು ಕರೆದಿತ್ತು.

ಅಲ್‌ಖೈದಾ ಎಂಬ ಇಸ್ಲಾಮಿಕ್ ಉಗ್ರ ಸಂಘಟನೆ ಅಧಿನಾಯಕ ಒಸಾಮಾ ಬಿನ್ ಲಾಡೆನ್ ನೇತೃತ್ವದಲ್ಲಿ ಅಮೆರಿಕದ ಮೇಲೆ ಉಗ್ರ ದಾಳಿ ನಡೆಸಿತ್ತು. ನ್ಯೂಯಾರ್ಕ್‌ನ ವರ್ಲ್ಡ್‌ ಟ್ರೇಡ್‌ ಸೆಂಟರ್ ಅವಳಿ ಗೋಪುರದ ಮೇಲೆ ವಿಮಾನ ದಾಳಿ ನಡೆದಿತ್ತು. ಸೆಪ್ಟೆಂಬರ್ 11, 2001 ಈ ಘಟನೆ ನಡೆದಿದ್ದು ಇಡೀ ಜಗತ್ತನ್ನೇ ಬೆಚ್ಚಿಬೀಳಿಸಿತ್ತು.

ಈ ಭೀಕರ ಭಯೋತ್ಪಾದಕ ದಾಳಿ ನಡೆದು ಎರಡು ದಶಕಗಳ ನಂತರ, ವಿಶ್ವ ವ್ಯಾಪಾರ ಕೇಂದ್ರದ ಮೇಲಿನ 9/11 ದಾಳಿಯಲ್ಲಿ ಸಾವನ್ನಪ್ಪಿದ ಇಬ್ಬರು ವ್ಯಕ್ತಿಗಳನ್ನು ಇದೀಗ ಗುರುತಿಸಲಾಗಿದೆ. ದಾಳಿಗಳಲ್ಲಿ ಮೃತಪಟ್ಟವರನ್ನು ಗುರುತಿಸಿ ಅವರ ಮೃತದೇಹಗಳನ್ನು ಸಂಬಂಧಿಕರಿಗೆ ಹಸ್ತಾಂತರಿಸುವ ನಿಟ್ಟಿನಲ್ಲಿ ಪ್ರಯತ್ನಗಳು ನಡೆಯುತ್ತಲೇ ಇವೆ. ಇದೀಗ ದಾಳಿ ನಡೆದು 22ನೇ ವರ್ಷ ತುಂಬುವ ಮೊದಲು ಓರ್ವ ಪುರುಷ ಮತ್ತು ಓರ್ವ ಮಹಿಳೆಯ ಅವಶೇಷಗಳನ್ನು ಗುರುತಿಸಲಾಗಿದೆ ಎಂದು ಅಧಿಕಾರಿಗಳು ದೃಢಪಡಿಸಿದ್ದಾರೆ. ಅವರ ಕುಟುಂಬಗಳ ಕೋರಿಕೆಯ ಮೇರೆಗೆ ಅಧಿಕಾರಿಗಳು ಅವರ ಹೆಸರುಗಳನ್ನು ಬಹಿರಂಗ ಪಡಿಸಿಲ್ಲ.

ಇದನ್ನೂ ಓದಿ: Kargil Vijay Diwas 2024: ದೇಶಕ್ಕಾಗಿ ಪ್ರಾಣ ತ್ಯಾಗ ಮಾಡಲು ಕ್ಷಣವೂ ಯೋಚಿಸದ ಈ ವೀರ ಯೋಧರಿಗೊಂದು ಸಲಾಮ್

Continue Reading

ಕ್ರೀಡೆ

Paris Olympics 2024: ನೀರಿನಾಳದಲ್ಲಿ ಅಭ್ಯಾಸ ನಡೆಸಿದ ನೀರಜ್ ಚೋಪ್ರಾ; ವಿಡಿಯೊ ವೈರಲ್​

Paris Olympics 2024: ನೀರಿನಾಳದಲ್ಲಿ ಸ್ಕೂಬಾ ಡೈವ್ ಉಡುಪು ತೊಟ್ಟು ಜಾವೆಲಿನ್​ ಎಸೆಯುವಂತೆ ಅಭ್ಯಾಸ ನಡೆಸುತ್ತಿರುವ ವಿಡಿಯೊವನ್ನು ಸ್ವತಃ ನೀರಜ್​ ತಮ್ಮ ಅಧಿಕೃತ ಟ್ವಿಟರ್​ ಎಕ್ಸ್​ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. “ಆಕಾಶದಲ್ಲೇ ಆಗಲಿ, ನೆಲದ ಮೇಲಾಗಲಿ, ಅಥವಾ ನೀರಿನಾಳದಲ್ಲೇ ಆಗಲಿ! ನಾನು ಯಾವಾಗಲೂ ಜಾವೆಲಿನ್ ಬಗ್ಗೆಯೇ ಯೋಚಿಸುತ್ತಿರುವೆ. ತರಬೇತಿ ಶುರುವಾಗಿದೆ ಎಂದು” ಎಂದು ಬರೆದುಕೊಂಡಿದ್ದಾರೆ.

VISTARANEWS.COM


on

Paris Olympics 2024
Koo

ಪ್ಯಾರಿಸ್​: ಮಹತ್ವದ ಕ್ರೀಡಾಕೂಟವಾದ ಪ್ಯಾರಿಸ್ ಒಲಿಂಪಿಕ್ಸ್(​Paris Olympics 2024) ಕ್ರೀಡಾಕೂಟಕ್ಕೆ ಇಂದು ಅದ್ಧೂರಿ ಉದ್ಘಾಟನಾ ಸಮಾರಂಭದ ಮೂಲಕ ಅಧಿಕೃತ ಚಾಲನೆ ಸಿಗಲಿದೆ. ಕಳೆದ ಟೋಕಿಯೋ ಒಲಿಂಪಿಕ್ಸ್​ನಲ್ಲಿ ಚಿನ್ನ ಗೆದ್ದ ಭಾರತದ ಜಾವೆಲಿನ್​ ಎಸೆತಗಾರ ನೀರಜ್​ ಚೋಪ್ರಾ(neeraj chopra) ಅವರು ಈ ಬಾರಿಯೂ ದೇಶಕ್ಕೆ ಚಿನ್ನ ಗೆಲ್ಲುವ ಪಣತೊಟ್ಟಿದ್ದಾರೆ. ಇದಕ್ಕಾಗಿ ಅವರು ಸಮುದ್ರದ ಆಳದಲ್ಲಿ ಕಠಿಣ ಅಭ್ಯಾಸ ನಡೆಸಿದ್ದಾರೆ. ಈ ವಿಡಿಯೊ ವೈರಲ್​ ಆಗಿದೆ.

ನೀರಿನಾಳದಲ್ಲಿ ಸ್ಕೂಬಾ ಡೈವ್ ಉಡುಪು ತೊಟ್ಟು ಜಾವೆಲಿನ್​ ಎಸೆಯುವಂತೆ ಅಭ್ಯಾಸ ನಡೆಸುತ್ತಿರುವ ವಿಡಿಯೊವನ್ನು ಸ್ವತಃ ನೀರಜ್​ ತಮ್ಮ ಅಧಿಕೃತ ಟ್ವಿಟರ್​ ಎಕ್ಸ್​ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. “ಆಕಾಶದಲ್ಲೇ ಆಗಲಿ, ನೆಲದ ಮೇಲಾಗಲಿ, ಅಥವಾ ನೀರಿನಾಳದಲ್ಲೇ ಆಗಲಿ! ನಾನು ಯಾವಾಗಲೂ ಜಾವೆಲಿನ್ ಬಗ್ಗೆಯೇ ಯೋಚಿಸುತ್ತಿರುವೆ. ತರಬೇತಿ ಶುರುವಾಗಿದೆ ಎಂದು” ಎಂದು ಬರೆದುಕೊಂಡಿದ್ದಾರೆ.

23 ವರ್ಷದ ನೀರಜ್ ಚೋಪ್ರಾ ಇದುವರೆಗಿನ ಶ್ರೇಷ್ಠ ನಿರ್ವಹಣೆ 89.94 ಮೀ. ದೂರ ಎಸೆದಿರುವುದು. ಈ ಎಸೆತವನ್ನು 2022ರ ಸ್ಟಾಕ್​ಹೋಮ್​ ಡೈಮಂಡ್​ ಲೀಗ್​ನಲ್ಲಿ ಎಸೆದಿದ್ದರು. ಈ ಬಾರಿಯ ಒಲಿಂಪಿಕ್ಸ್​ನಲ್ಲಿ 90 ಮೀ. ದೂರ ಎಸೆಯುವ ವಿಶ್ವಾಸವಿದೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ Paris Olympics: ಇಂದು ಪ್ಯಾರಿಸ್​ ಒಲಿಂಪಿಕ್ಸ್​ಗೆ ಅಧಿಕೃತ ಚಾಲನೆ: ಉದ್ಘಾಟನಾ ಸಮಾರಂಭ ಎಷ್ಟು ಗಂಟೆಗೆ ಆರಂಭ?

ಕಾಶಿನಾಥ್ ನಾಯ್ಕ್ ಅವರು ನೀರಜ್ ಪ್ಯಾರಿಸ್​ನಲ್ಲಿ ನಡೆಯುವ ಒಲಿಂಪಿಕ್ಸ್​ನಲ್ಲಿಯೂ(neeraj chopra paris olympics) ಚಿನ್ನದ ಪದಕ ಗೆಲ್ಲಲಿದ್ದಾರೆ ಎಂದು ಆತ್ಮವಿಶ್ವಾಸದಿಂದ ಈ ಮಾತನ್ನು ಹೇಳಿದ್ದಾರೆ. ಸಂದರ್ಶನವೊಂದರಲ್ಲಿ ಮಾತನಾಡಿದ ಕಾಶಿನಾಥ್, “ನಾನು 2015 ರಿಂದ ನೀರಜ್​ ಜತೆ ಕೆಲಸ ಮಾಡುತ್ತಿದ್ದೇನೆ. ಅವರ ಛಲವನ್ನು ಮೆಚ್ಚಲೇ ಬೇಕು.​ ಸಾಧಿಸುವ ಛಲವೇ ಅವರನ್ನು ಈ ಮಟ್ಟಕ್ಕೆ ತಂದು ನಿಲ್ಲಿಸಿದೆ. ಅತ್ಯಂತ ಶಿಸ್ತಿನ ಕ್ರೀಡಾಪಟು ಕೂಡ ಆಗಿದ್ದಾರೆ. 90 ಮೀ. ದೂರ ಜಾವೆಲಿನ್​ ಎಸೆಯುವದು ಪ್ರಮುಖ ಗುರಿ ಎಂದು ನೀರಜ್​ ಈಗಾಗಲೇ ಹೇಳಿದ್ದಾರೆ. ಹೇಳಿದಂತೆ ಅವರು ಈ ದೂರವನ್ನು ಕ್ರಮಿಸುವ ವಿಶ್ವಾಸ ನನ್ನಲ್ಲಿದೆ” ಎಂದು ಹೇಳಿದ್ದಾರೆ.

ಕಾಶಿನಾಥ್ ಮನೆ ಭೇಟಿ ನೀಡಿದ್ದ ನೀರಜ್​

ನೀರಜ್ ಪೋಲೆಂಡ್‌ನಲ್ಲಿ ನಡೆದಿದ್ದ ಜೂನಿಯರ್ ವಿಶ್ವ ಚಾಂಪಿಯನ್‌ಶಿಪ್ ಗೆದ್ದ ಬಳಿಕ 2018ರ ಕಾಮನ್‌ವೆಲ್ತ್ ಗೇಮ್ಸ್, 2018 ಇಂಡೋನೇಷ್ಯಾ ಏಷ್ಯನ್ ಗೇಮ್ಸ್, ಟೋಕಿಯೊ ಒಲಿಂಪಿಕ್ಸ್‌ನಲ್ಲಿ ಮತ್ತು ಡೈಮಂಡ್ ಲೀಗ್‌ನಲ್ಲಿ ಚಿನ್ನ ಗೆದ್ದಿದ್ದರು. ವಿಶ್ವ ಚಾಂಪಿಯನ್​ಶಿಪ್​ನಲ್ಲಿ ಚೊಚ್ಚಲ ಪ್ರಯತ್ನದಲ್ಲಿ ಬೆಳ್ಳಿ ಗೆದ್ದರೂ ಈ ಬಾರಿ ಚಿನ್ನ ಗೆದ್ದು ಎಲ್ಲ ವಿಶ್ವಮಟ್ಟದ ಟೂರ್ನಿಯಲ್ಲಿಯೂ ಚಿನ್ನ ಗೆದ್ದು ತಮ್ಮ ಆಸೆಯನ್ನು ಈಡೇರಿಸಿದರು. ಜತೆಗೆ ದೇಶದ ಕೀರ್ತಿ ಪತಾಕೆಯನ್ನು ಬಹು ಎತ್ತರಕ್ಕೆ ಹಾರಿಸಿದರು. ಅವರ ಈ ಸಾಧನೆ ಹೀಗೆಯೇ ಮುಂದುವರಿಯಲಿ ಎಂದು ಕಾಶಿನಾಥ್ ಹಾರೈಸಿದರು. ಟೊಕಿಯೊದಲ್ಲಿ ಚಿನ್ನದ ಪದಕ ಗೆದ್ದವು ಭಾರತಕ್ಕೆ ಮರಳಿದ ನೀರಜ್​ ಚೋಪ್ರಾ ಅವರು ತನ್ನ ಗುರು ಕಾಶಿನಾಥ್ ಅವರ ಮನೆಗೆ ಭೇಟಿ ನೀಡಿ ತಾವು ಗೆದ್ದ ಪದಕವನ್ನು ಅವರಿಗೆ ತೋರಿಸಿದ್ದರು. ಅಲ್ಲದೆ ಅವರ ಮನೆಯಲ್ಲಿ ಭೋಜನ ಮಾಡಿ ಮುಂದಿನ ಟೂರ್ನಿಗೆ ಆಶಿರ್ವಾದ ಪಡೆದು ಹಿಂದಿರುಗಿದ್ದರು.

Continue Reading

ವಿದೇಶ

Rihanna: ಮಿನಿ ಸ್ಕರ್ಟ್‌ ತೊಟ್ಟು, ಬ್ರಾ, ಅಂಡರ್‌ವೇರ್‌ ತೋರಿಸುತ್ತ ಓಡಾಡಿದ ಪಾಪ್‌ ಗಾಯಕಿ ರಿಹಾನಾ; Video ಇಲ್ಲಿದೆ

Rihanna: ಒಳ ಉಡುಪುಗಳನ್ನು ತೋರಿಸುತ್ತ, ರಸ್ತೆ ಮೇಲೆ ಓಡಾಡಿದ ವಿಡಿಯೊವನ್ನು ರಿಹಾನಾ ಅವರೇ ಹಂಚಿಕೊಂಡಿದ್ದಾರೆ. ಅವರ ವಿಡಿಯೊಗೆ ಸಾವಿರಾರು ಜನ ಪ್ರತಿಕ್ರಿಯಿಸಿದ್ದು, ಒಂದಷ್ಟು ಜನ ಹೊಗಳಿದ್ದರೆ, ಇನ್ನೊಂದಿಷ್ಟು ಜನ ಟೀಕಿಸಿದ್ದಾರೆ. ಇದಕ್ಕೂ ಮೊದಲು ಕೂಡ ರಿಹಾನಾ ಅವರ ಉಡುಪು, ಸಾರ್ವಜನಿಕ ವರ್ತನೆಗಳ ಬಗ್ಗೆ ಚರ್ಚೆಯಾಗಿತ್ತು.

VISTARANEWS.COM


on

Rihanna
Koo

ಬ್ರಿಡ್ಜ್‌ಟೌನ್‌: ಬಾರ್ಬಡಾಸ್‌ನ ಪಾಪ್‌ ಗಾಯಕಿ (Pop Singer), ಜಾಗತಿಕ ಖ್ಯಾತಿಯ ರಿಹಾನಾ (Rihanna) ಅವರಿಗೆ ಬಾರ್ಬಡಾಸ್‌ ಮಾತ್ರವಲ್ಲ ಜಗತ್ತಿನಾದ್ಯಂತ ಅಭಿಮಾನಿಗಳಿದ್ದಾರೆ. ಅವರ ಮ್ಯೂಸಿಕ್‌ ಶೋಗೆ ಜನ ಕಾಯುತ್ತಿರುತ್ತಾರೆ. ಇನ್ನು, ರಿಹಾನಾ ಅವರೂ ಅಷ್ಟೇ, ಗಾಯನದ ಜತೆಗೆ ವಿಚಿತ್ರ ನೃತ್ಯ, ಉಡುಪುಗಳಿಂದಲೂ ಖ್ಯಾತಿ ಗಳಿಸಿದ್ದಾರೆ. ಇದಕ್ಕೆ ನಿದರ್ಶನ ಎಂಬಂತೆ, ರಿಹಾನಾ ಅವರು ಸಾರ್ವಜನಿಕವಾಗಿಯೇ ಬ್ರಾ ಹಾಗೂ ಅಂಡರ್‌ವೇರ್‌ ತೋರಿಸುತ್ತ ಓಡಾಡಿದ್ದು, ಈಗ ವಿಡಿಯೊ (Viral Video) ಭಾರಿ ವೈರಲ್‌ ಆಗಿದೆ.

ಹೌದು, ಮಿನಿ ಸ್ಕರ್ಟ್‌ ಹಾಗೂ ದೊಗಳೆ ಅಂಗಿ ಧರಿಸಿದ ರಿಹಾನಾ, ರಸ್ತೆ ಮೇಲೆ ಓಡಾಡಿದ್ದಾರೆ. ಇದರ ಮಧ್ಯೆ ಅವರು ಧರಿಸಿದ್ದ ಬ್ರಾ ಹಾಗೂ ಪ್ಯಾಂಟೀಸ್‌ಅನ್ನು ತೋರಿಸಿದ್ದಾರೆ. ಈ ವಿಡಿಯೊವನ್ನು ಅವರು ಹಂಚಿಕೊಳ್ಳುವ ಜತೆಗೆ, “ಮುಂದಿನ ಬೇಸಿಗೆಯವರೆಗೆ ನಾನು ಸಿಕ್ಸ್‌ ಪ್ಯಾಕ್‌ ಮಾಡಲು ಆಗುವುದಿಲ್ಲ. ಅಲ್ಲಿಯವರೆಗೆ, ನನ್ನ ಶೂ ಹಾಗೂ ಪ್ಯಾಂಟೀಸ್‌ ಮ್ಯಾಚಿಂಗ್‌ ಇರುವ ರೀತಿ ನೋಡಿಕೊಳ್ಳುತ್ತೇನೆ” ಎಂಬುದಾಗಿ ಒಕ್ಕಣೆ ಬರೆದುಕೊಂಡಿದ್ದಾರೆ. ಇದಕ್ಕೆ ಸಾವಿರಾರು ಜನ ಪ್ರತಿಕ್ರಿಯಿಸಿದ್ದು, ಒಂದಷ್ಟು ಜನ ಹೊಗಳಿದ್ದರೆ, ಇನ್ನೊಂದಿಷ್ಟು ಜನ ಟೀಕಿಸಿದ್ದಾರೆ. ಇದಕ್ಕೂ ಮೊದಲು ಕೂಡ ರಿಹಾನಾ ಅವರ ಉಡುಪು, ಸಾರ್ವಜನಿಕ ವರ್ತನೆಗಳ ಬಗ್ಗೆ ಚರ್ಚೆಯಾಗಿತ್ತು.

ಕೆಲ ತಿಂಗಳ ಹಿಂದೆ ಮುಕೇಶ್‌ ಅಂಬಾನಿ ಪುತ್ರ ಅನಂತ್ ಅಂಬಾನಿ ಹಾಗೂ ರಾಧಿಕಾ ಮರ್ಚಂಟ್‌ ಅವರ ಪ್ರಿ ವೆಡ್ಡಿಂಗ್‌ ಸಮಾರಂಭದಲ್ಲಿ ಪಾಪ್‌ ಐಕಾನ್‌ ರಿಹಾನಾ ಸ್ಟೇಜ್‌ ಶೋ ನೀಡುವಾಗ ಇದ್ದಕ್ಕಿಂದ್ದಂತೆ, ಪರ್ಫಮಾನ್ಸ್ ಮಧ್ಯೆ ಆಕೆ ಧರಿಸಿದ್ದ ಫ್ಲೊರಸೆಂಟ್‌ ಗ್ರೀನ್ ಶೇಡ್‌ನ ತೆಳುವಾದ ಡಿಸೈನರ್‌ವೇರ್‌ ಕೈಗಳ ಕೆಳಗೆ ಹರಿದು ಹೋಗಿತ್ತು. ತಕ್ಷಣಕ್ಕೆ ಆಕೆಗೆ ಇದು ಗೊತ್ತಾಗದಿದ್ದರೂ, ಆಕೆಯ ಬಹುತೇಕ ಫೋಟೋಗಳಲ್ಲಿ ಇದು ದಾಖಲಾಗಿ ಉಳಿದು ಹೋಯಿತು. ಈ ಫೋಟೊಗಳು ವೈರಲ್‌ ಆಗಿದ್ದವು.

ಜಗತ್ತಿನ ಯಾವುದೇ ಮೂಲೆಯಲ್ಲಿ ರಿಹಾನಾ ಅವರ ಲೈವ್‌ ಮ್ಯೂಸಿಕ್‌ ಶೋ ನಡೆದರೆ, ಅಲ್ಲೆಲ್ಲ ಲಕ್ಷಾಂತರ ಜನ ಸೇರುತ್ತಾರೆ. ಸಾಮಾಜಿಕ ಜಾಲತಾಣಗಳ ಮೂಲಕ ಅವರ ಹಾಡಿಗೆ ಕಿವಿಯಾಗುತ್ತಾರೆ. ಹಾಗಾಗಿ, ಯಾವುದೇ ಶೋಗೆ ಇಡೀ ತಂಡವನ್ನು ಕರೆದುಕೊಂಡು ಹೋಗುವ ರಿಹಾನಾ ಅವರು ಸುಮಾರು 66-74 ಕೋಟಿ ರೂ. ಚಾರ್ಜ್‌ ಮಾಡುತ್ತಾರೆ. ಅನಂತ್‌ ಅಂಬಾನಿ ಹಾಗೂ ರಾಧಿಕಾ ಮರ್ಚಂಟ್‌ ಅವರ ವಿವಾಹಪೂರ್ವ ಕಾರ್ಯಕ್ರಮದಲ್ಲೂ ಲೈವ್‌ ಶೋಗಾಗಿ ರಿಹಾನಾ ಅವರು ಸುಮಾರು 74 ಕೋಟಿ ರೂ. ಸಂಭಾವನೆ ಪಡೆದಿದ್ದಾರೆ ಎಂದು ತಿಳಿದುಬಂದಿತ್ತು.

ಇದನ್ನೂ ಓದಿ: Wardrobe Malfunction 2024: ಪಾಪ್‌ ಐಕಾನ್‌ ರಿಹಾನಾ ಡ್ರೆಸ್‌ ಎಡವಟ್ಟು! ಹೀಗಾಗದಂತೆ ಎಚ್ಚರ ವಹಿಸುವುದು ಹೇಗೆ?

Continue Reading

Latest

Viral Video: ಜಾರಿ ಬಿದ್ದ ವಧುವನ್ನು ಎತ್ತದ ವರ; ಸಹೋದರನಿಂದ ಮದುವೆ ಮಂಟಪದಲ್ಲೇ ಬಿತ್ತು ಗೂಸಾ!

Viral Video: ಒಡಹುಟ್ಟಿದವರ ಪ್ರೀತಿಯನ್ನು ಅಳೆಯಲು ಸಾಧ್ಯವಿಲ್ಲ. ಅದರಲ್ಲೂ ಅಣ್ಣ-ತಂಗಿಯ ಬಂಧವಂತೂ ಯಾರಿಂದಲೂ ಬಿಡಿಸಲು ಸಾಧ್ಯವಿಲ್ಲ. ತಂಗಿಯನ್ನು ಮದುವೆ ಮಾಡಿಕೊಡುವ ಜವಾಬ್ದಾರಿಯನ್ನು ನಿಭಾಯಿಸುತ್ತಾ ಇರುವ ಅಣ್ಣನಿಗೆ ತಂಗಿಯ ಕೈ ಹಿಡಿಯಲಿರುವ ವರ ದುರಂಹಕಾರಿಯಂತೆ ವರ್ತಿಸಿದರೆ ಹೇಗಾಗಿರಬೇಡ ಹೇಳಿ? ಮದುವೆಯ ಮಂಟಪಕ್ಕೆ ವಧುವನ್ನು ಕರೆದುಕೊಂಡು ಹೋಗುವಾಗ ವರನು ಸ್ವಲ್ಪವೂ ಕನಿಕರವಿಲ್ಲದೇ ವಧುವಿನ ಜೊತೆ ಕೆಟ್ಟದಾಗಿ ವರ್ತಿಸಿದ್ದಕ್ಕೆ ಕೋಪಗೊಂಡ ವಧುವಿನ ಸಹೋದರ ಮದುವೆ ಮಂಟಪದಲ್ಲಿಯೇ ವರನ ಗ್ರಹಚಾರ ಬಿಡಿಸಿದ್ದಾನೆ.ಈ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದೆ.

VISTARANEWS.COM


on

Viral Video
Koo


ಶುಭ ಕಾರ್ಯಕ್ಕೆ ನೂರೆಂಟು ವಿಘ್ನಗಳು ಎಂಬಂತೆ ಒಂದು ಮದುವೆ ಮಾಡಿಸುವಾಗ ಒಂದಲ್ಲ ಒಂದು ಸಮಸ್ಯೆ ಬಂದು ಕಾಡುತ್ತಿರುತ್ತದೆ. ವರನ ಕಡೆಯವರಿಗೆ ಸರಿಯಾದ ಗೌರವ ಸಿಗಲಿಲ್ಲ, ಊಟ ಉಪಚಾರ ಸರಿಯಾಗಲಿಲ್ಲವೆಂದು ಕಿರಿಕಿರಿ ಮಾಡುವುದು ಅಥವಾ ಚಿನ್ನ ಕಡಿಮೆ, ಕಾರು ಕೊಟ್ಟಿಲ್ಲ ಹೀಗೆ ಒಂದಲ್ಲ ಒಂದು ಕಿರಿಕ್‌ ತೆಗೆದು ಜಗಳವಾಡುತ್ತಿರುತ್ತಾರೆ. ಹೀಗೆ ಹಲವಾರು ಸಮಸ್ಯೆಗಳು ಎದುರಾಗುತ್ತದೆ. ಇಂತಹ ಪರಿಸ್ಥಿತಿಯಲ್ಲೂ ಕೆಲವು ಮದುವೆ ನಡೆದರೆ, ಕೆಲವು ಮುರಿದು ಬೀಳುತ್ತದೆ. ಇದೀಗ ಮದುವೆಯ ದಿನ ಅಂತಹದೊಂದು ವಿಘ್ನ ಎದುರಾಗಿದ್ದು, ಇದಕ್ಕೆ ಸಂಬಂಧಪಟ್ಟ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ವೈರಲ್(Viral video) ಆಗಿದೆ.

ಮದುವೆಯ ಮಂಟಪಕ್ಕೆ ವಧುವನ್ನು ಕರೆದುಕೊಂಡು ಹೋಗುವಾಗ ವರನು ಸ್ವಲ್ಪವೂ ಕನಿಕರವಿಲ್ಲದೇ ವಧುವಿನ ಜೊತೆ ಕೆಟ್ಟದಾಗಿ ವರ್ತಿಸಿದ್ದಕ್ಕೆ ಕೋಪಗೊಂಡ ವಧುವಿನ ಸಹೋದರ ಮದುವೆ ಮಂಟಪದಲ್ಲಿಯೇ ವರನ ಗ್ರಹಚಾರ ಬಿಡಿಸಿದ್ದಾನೆ. ವರ, ವಧುವನ್ನು ಮದುವೆ ಮಂಟಪಕ್ಕೆ ಕರೆದುಕೊಂಡು ಬರುವಾಗ ಧರಧರನೆ ಎಳೆದುಕೊಂಡು ದುರಂಹಕಾರಿಯಂತೆ ವರ್ತಿಸಿದ್ದಾನೆ.. ಇದರಿಂದ ವಧು ಆಯ ತಪ್ಪಿ ಕೆಳಗೆ ಬಿದ್ದಿದ್ದಾಳೆ. ಇಷ್ಟಾದರೂ ಆಕೆಯನ್ನು ಮೇಲೆತ್ತದೆ ವರ ಆಕೆಯನ್ನು ಅದೇ ಸ್ಥಿತಿಯಲ್ಲೇ ಎಳೆದಾಡಿದ್ದಾನೆ. ನಂತರ ಮಂಟಪಕ್ಕೆ ಬಂದು ಸೋಫಾದ ಮೇಲೆ ತಾನೊಬ್ಬನೇ ಕುಳಿತಿದ್ದಾನೆ. ಇದನ್ನು ಕಂಡು ಕುಟುಂಬಸ್ಥರು ಸಹಿಸಿಕೊಂಡು ಸುಮ್ಮನಿದ್ದರೆ ವಧುವಿನ ಸಹೋದರ ಮಾತ್ರ ರೊಚ್ಚಿಗೆದ್ದು ನೇರವಾಗಿ ಮಂಟಪಕ್ಕೆ ಹೋಗಿ ವರನನ್ನು ಚೆನ್ನಾಗಿ ಥಳಿಸಿದ್ದಾನೆ. ವಧುವಿನ ಸಹೋದರ ವರನನ್ನು ಥಳಿಸಿದ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ವಿಡಿಯೊದಲ್ಲಿ ವಧು ಮತ್ತು ವರ ಒಟ್ಟಿಗೆ ವೇದಿಕೆಗೆ ಬರುವಾಗ ವಧು ಎಡವಿ ನೆಲದ ಮೇಲೆ ಬಿದ್ದಿದ್ದಾಳೆ. ಆಗ ವರ ವಧುವನ್ನು ಮೇಲೆತ್ತುವ ಬದಲು, ಅವಳನ್ನು ಎಳೆದಾಡಿ ಮಂಟಪಕ್ಕೆ ಬಂದಿದ್ದಾನೆ. ಆಗ ಎಲ್ಲರಿಗೂ ಆಘಾತವಾಗುತ್ತದೆ. ನಂತರ ವರನು ನಡೆದು ಬಂದು ಸೋಫಾದ ಮೇಲೆ ಕುಳಿತನು. ಸಹೋದರಿಗೆ ಅಗೌರವವನ್ನು ತೋರಿದ ವರನ ಮೇಲೆ ಕೋಪಗೊಂಡ ವಧುವಿನ ಸಹೋದರ ವೇದಿಕೆಗೆ ಬಂದು ವರನಿಗೆ ಹೊಡೆದನು. ಆಗ ವಧುವಿನ ಕಡೆಯವರು ಆಕೆಯನ್ನು ಮೇಲೆತ್ತಿದ್ದಾರೆ.

ಸಫಿ ಮೊಹಮ್ಮದ್ ಎಂಬ ಹೆಸರಿನ ಇನ್ಸ್ಟಾಗ್ರಾಮ್ ಪುಟದಲ್ಲಿ ಈ ವಿಡಿಯೊವನ್ನು ಹಂಚಿಕೊಳ್ಳಲಾಗಿದ್ದು, ಇದಕ್ಕೆ “ವಧುವಿನ ಸಹೋದರ ದೀರ್ಘಕಾಲ ಬಾಳಲಿ” ಎಂದು ಶೀರ್ಷಿಕೆ ನೀಡಿದೆ. ಈ ವಿಡಿಯೊಗೆ ಅನೇಕರು ಪ್ರತಿಕ್ರಿಯೆ ನೀಡಿದ್ದಾರೆ. ಕೆಲವರು ವರನ ವರ್ತನೆಯ ಬಗ್ಗೆ ಆಕ್ರೋಶ ವ್ಯಕ್ತಪಡಿಸಿ ಕಾಮೆಂಟ್ ಮಾಡಿ ಅವನನ್ನು ನಿಂದಿಸಿದರೆ, ಕೆಲವರು ಆ ವ್ಯಕ್ತಿಗೆ ಪಾಠ ಕಲಿಸಿದ್ದಕ್ಕಾಗಿ ವಧುವಿನ ಸಹೋದರನಿಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ:  ಪತಿ ಜೊತೆ ಸೇರಿ ಪ್ರೇಮಿಯನ್ನು ತುಂಡು ತುಂಡಾಗಿ ಕತ್ತರಿಸಿದ ಯುವತಿ! ಸ್ನೇಹಿತೆಯ ಮನೆಯೊಳಗೆ ಸಮಾಧಿ!

ಈ ವಿಡಿಯೊಗೆ ಪ್ರತಿಕ್ರಿಯಿಸಿದ ಬಳಕೆದಾರರೊಬ್ಬರು, ತನ್ನ ಮಗಳು ತನ್ನ ಜೀವನದಲ್ಲಿ ಅಂತಹ ವ್ಯಕ್ತಿಯನ್ನು ಮದುವೆಯಾಗುವುದಕ್ಕಿಂತ ಮನೆಯಲ್ಲಿ ವಯಸ್ಸಾಗುವವರೆಗೂ ಇರುವುದೇ ಲೇಸು ಎಂದು ಕಾಮೆಂಟ್ ಮಾಡಿದ್ದಾರೆ. ಕುಟುಂಬದವರು ಆಕೆಯ ರಕ್ಷಣೆಗೆ ಬಂದಿರುವುದನ್ನು ಕಂಡು ಮತ್ತೊಬ್ಬರು ಸಂತೋಷ ವ್ಯಕ್ತಪಡಿಸಿದ್ದಾರೆ. ಮತ್ತು ವರನ ವರ್ತನೆಯ ಬಗ್ಗೆ ಅಸಹ್ಯ ವ್ಯಕ್ತಪಡಿಸಿದ್ದಾರೆ. ವಧುವಿಗೆ ನ್ಯಾಯ ಒದಗಿಸಲಾಗಿದೆ ಎಂದು ಇನ್ನೊಬ್ಬರು ತಿಳಿಸಿದ್ದಾರೆ. ಆದರೆ ಈ ಮದುವೆ ಮುರಿದು ಬಿತ್ತೆ ಅಥವಾ ಮುಂದುವರಿಯಿತೆ ಎಂಬ ಬಗ್ಗೆ ಮಾಹಿತಿ ತಿಳಿದುಬಂದಿಲ್ಲ.

Continue Reading
Advertisement
Shekhar Home Kay Kay Menon Shares First Look
ಒಟಿಟಿ2 mins ago

Shekhar Home:  ಪತ್ತೇದಾರಿ ಕಾದಂಬರಿ ಆಧಾರಿತ ಸಿರೀಸ್‌ನಲ್ಲಿ ಅಬ್ಬರಿಸಲಿದ್ದಾರೆ ಕೇ ಕೇ ಮೆನನ್; ಫಸ್ಟ್‌ ಲುಕ್‌ ಔಟ್!‌

ಟಾಲಿವುಡ್21 mins ago

Amala Paul: ಸಮಸ್ಯೆ ಇರೋದು ಬಟ್ಟೆಯಲಲ್ಲ, ಕ್ಯಾಮೆರಾಮೆನ್‌ಗಳಲ್ಲಿ ಎಂದು ಟ್ರೋಲಿಗರ ಬಾಯಿ ಮುಚ್ಚಿಸಿದ ಅಮಲಾ ಪೌಲ್!

ದೇಶ32 mins ago

Madras High Court: ವೇಶ್ಯಾವಾಟಿಕೆ ಅಡ್ಡಕ್ಕೆ ರಕ್ಷಣೆ ಕೋರಿ ವಕೀಲನಿಂದ ಅರ್ಜಿ; ಹೈಕೋರ್ಟ್‌ ಫುಲ್‌ ಗರಂ

Paris Olympics India schedule
ಕ್ರೀಡೆ34 mins ago

Paris Olympics India schedule: ಒಲಿಂಪಿಕ್ಸ್​ನಲ್ಲಿ ನಾಳೆ ಭಾರತ ಯಾವೆಲ್ಲ ವಿಭಾಗದಲ್ಲಿ ಸ್ಪರ್ಧಿಸಲಿದೆ?; ಇಲ್ಲಿದೆ ಸಂಪೂರ್ಣ ವೇಳಾಪಟ್ಟಿ

Drugs Seized
ಬೆಂಗಳೂರು50 mins ago

Drugs Seized : ಓಲಾ, ಊಬರ್ ಡ್ರೈವಿಂಗ್ ಜತೆಗೆ ಡ್ರಗ್ಸ್‌ ಮಾರಾಟ; 6 ಕೋಟಿ ರೂ.ಮೌಲ್ಯದ ಡ್ರಗ್ಸ್‌ ಸೀಜ್‌

Most Beautiful woman Science reveals Anya Taylor-Joy
ಬಾಲಿವುಡ್1 hour ago

Most Beautiful woman: ವಿಶ್ವದ ಅತ್ಯಂತ ಸುಂದರ ಮಹಿಳೆಯರ ಪಟ್ಟಿ ಬಿಡುಗಡೆ; ಟಾಪ್ 10ನಲ್ಲಿ ಏಕೈಕ ಬಾಲಿವುಡ್ ನಟಿ!

Kargil Vijay Diwas 2024
ದೇಶ1 hour ago

Kargil Vijay Diwas 2024: “ಪಾಕಿಸ್ತಾನ ತಪ್ಪುಗಳಿಂದ ಪಾಠ ಕಲಿತಿಲ್ಲ”; ಪ್ರಧಾನಿ ಮೋದಿ ಟಾಂಗ್‌

Murder in PG Case
ಪ್ರಮುಖ ಸುದ್ದಿ1 hour ago

Murder in PG: ಗೆಳತಿಗಾಗಿ ಕೊಲೆಯಾಗಿ ಹೋದ ಕೃತಿ ಕುಮಾರಿ; ಪ್ರೇಯಸಿಯನ್ನು ಬಂಧನದಲ್ಲಿಟ್ಟು ಕ್ರೌರ್ಯ ಮೆರೆದ ಪಾತಕಿ

Paris Olympics 2024 Boxing Draw
ಕ್ರೀಡೆ1 hour ago

Paris Olympics Boxing Draw: ಒಲಿಂಪಿಕ್ಸ್​ ಬಾಕ್ಸಿಂಗ್​ ಡ್ರಾ ಪ್ರಕಟ; ಮೊದಲ ಸುತ್ತಿನಲ್ಲೇ ಭಾರತೀಯ ಬಾಕ್ಸರ್​ಗಳಿಗೆ ಕಠಿಣ ಸ್ಪರ್ಧಿಗಳ ಸವಾಲು

Salman Khan House Gangster's 9-Minute Speech To Shooters Before Attack
ಬಾಲಿವುಡ್1 hour ago

Salman Khan: ಸಲ್ಮಾನ್ ಖಾನ್‌ ಹೆದರುವ ರೀತಿಯಲ್ಲಿ ಗುಂಡಿನ ದಾಳಿ ಆಗಬೇಕು ಎಂದು ಶೂಟರ್‌ಗಳಿಗೆ ಸ್ಫೂರ್ತಿ ತುಂಬಿದ್ದ ಬಿಷ್ಣೋಯಿ!

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Rain
ಮಳೆ20 hours ago

Karnataka Rain : ಮನೆಯೊಳಗೆ ನುಗ್ಗಿದ ಮಳೆ ನೀರು; ಕಾಲು ಜಾರಿ ಬಿದ್ದು ವೃದ್ಧೆ ಸಾವು

Actor Darshan
ಸ್ಯಾಂಡಲ್ ವುಡ್23 hours ago

Actor Darshan: ನಟ ದರ್ಶನ್ ಇರುವ ಜೈಲು ಕೋಣೆ ಹೇಗಿದೆ?

Actor Darshan
ಸಿನಿಮಾ24 hours ago

Actor Darshan : ಹೆಂಡ್ತಿ ಮಕ್ಕಳೊಟ್ಟಿಗೆ ಚೆನ್ನಾಗಿರು.. ಸಹಕೈದಿ ಜತೆಗೆ 12 ನಿಮಿಷ ಕಳೆದ ನಟ ದರ್ಶನ್‌

Actor Darshan
ಸಿನಿಮಾ1 day ago

Actor Darshan: ಆಧ್ಯಾತ್ಮದತ್ತ ವಾಲಿದ ದರ್ಶನ್‌; ಜೈಲಲ್ಲಿ ಹೇಗಿದೆ ಗೊತ್ತಾ ನಟನ ಬದುಕು

karnataka Weather Forecast
ಮಳೆ2 days ago

Karnataka Weather : ರಭಸವಾಗಿ ಸುರಿಯುವ ಮಳೆ; 50 ಕಿ.ಮೀ ವೇಗದಲ್ಲಿ ಬೀಸುತ್ತೆ ಗಾಳಿ

karnataka weather Forecast
ಮಳೆ3 days ago

Karnataka Weather : ರಾಜ್ಯದಲ್ಲಿ ಮುಂದುವರಿದ ಮಳೆ ಅವಾಂತರ; ನಾಳೆಯೂ ಇರಲಿದೆ ಅಬ್ಬರ

Udupi News
ಉಡುಪಿ3 days ago

Udupi News : ಹಳೆ ಲಾರಿ ಚಾಸ್ಸಿಯಲ್ಲೇ ಕಿರು ಸೇತುವೆ ನಿರ್ಮಾಣ! ಬೈಂದೂರು ಶಾಸಕರ ಪರಿಕಲ್ಪನೆಗೆ ಜನರು ಫಿದಾ

murder case
ರಾಮನಗರ3 days ago

Murder Case : ರಾಮನಗರದಲ್ಲೊಂದು ಪೈಶಾಚಿಕ ಕೃತ್ಯ; ಅತ್ಯಾಚಾರವೆಸಗಿ 4 ವರ್ಷದ ಬಾಲಕಿಯನ್ನು ಕೊಂದ ದುಷ್ಟ

karnataka Rain
ಮಳೆ6 days ago

Karnataka Rain : ಭಾರಿ ಮಳೆಗೆ ಮನೆ ಗೋಡೆ ಕುಸಿತ; ಕೊಟ್ಟಿಗೆಯಲ್ಲಿದ್ದ ಜಾನುವಾರುಗಳು ಸಾವು

karnataka Rain
ಮಳೆ6 days ago

Karnataka Rain : ಹಳ್ಳ ದಾಟಲು ಹೋಗಿ ನೀರುಪಾಲಾದ ಜಾನುವಾರು; ಬಿರುಗಾಳಿಗೆ ಕಳಚಿದ ವಿಂಡ್‌ ಫ್ಯಾನ್‌

ಟ್ರೆಂಡಿಂಗ್‌