Actor Yash: ಯಶ್‌ ನಟನೆಯ ʻಟಾಕ್ಸಿಕ್‌ʼ ಸಿನಿಮಾ ವಿರುದ್ಧ ದೂರು ದಾಖಲು - Vistara News

ಸ್ಯಾಂಡಲ್ ವುಡ್

Actor Yash: ಯಶ್‌ ನಟನೆಯ ʻಟಾಕ್ಸಿಕ್‌ʼ ಸಿನಿಮಾ ವಿರುದ್ಧ ದೂರು ದಾಖಲು

Actor Yash: . ಸಿನಿಮಾವು 70-80ರ ಕಾಲದಲ್ಲಿ ನಡೆಯಲಿದೆ ಎಂಬ ಸುದ್ದಿ ಕೂಡ ಹರಿದಾಡುತ್ತಿದೆ. ಇದೇ ಕಾರಣಕ್ಕೆ ಸಿನಿಮಾವನ್ನು ಸೆಟ್​ಗಳಲ್ಲಿ ಚಿತ್ರೀಕರಣ ಮಾಡಲಾಗುತ್ತಿದೆ. ಹಾಗಾಗಿ ಸಿನಿಮಾಕ್ಕಾಗಿ ಬೃಹತ್ ಸೆಟ್ ಅನ್ನು ನಿರ್ಮಿಸಲಾಗಿದೆ.

VISTARANEWS.COM


on

Actor Yash Case Against Toxic Movie Producers For Building A Set On Forest Land
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ರಾಕಿಂಗ್‌ ಸ್ಟಾರ್‌ ಯಶ್‌ (Actor Yash) ನಟನೆಯ ಟಾಕ್ಸಿಕ್‌ ಸಿನಿಮಾ ಆಗಾಗ ಸುದ್ದಿಯಾಗುತ್ತಲೇ ಇದೆ. ಇದೀಗ ಕಿ ‘ಟಾಕ್ಸಿಕ್’ ಸಿನಿಮಾ ತಂಡದ ವಿರುದ್ಧ ನ್ಯಾಯಾಲಯದಲ್ಲಿ ಪ್ರಕರಣ ದಾಖಲಾಗಿದೆ. ‘ಟಾಕ್ಸಿಕ್’ ಚಿತ್ರೀಕರಣಕ್ಕಾಗಿ ಬೃಹತ್ ಸೆಟ್ ನಿರ್ಮಿಸಲಾಗಿದೆ. ​ಅನಧಿಕೃತವಾಗಿ ಸಿನಿಮಾ ಸೆಟ್ ನಿರ್ಮಿಸಲಾಗಿದೆ ಎಂದು ನಿರ್ಮಾಪಕರ ವಿರುದ್ಧ ದೂರು ನೀಡಲಾಗಿದ್ದು, ಟಾಕ್ಸಿಕ್ ಚಿತ್ರಕ್ಕೆ ಸಂಕಷ್ಟ ಶುರುವಾಗಿದೆ.

ಪೀಣ್ಯ ಪ್ಲಾಂಟೇಶನ್ ಜಮೀನಿನ ಬಳಿ ಸುಮಾರು 20 ಎಕರೆ ಜಾಗದಲ್ಲಿ ‘ಟಾಕ್ಸಿಕ್’ ಸಿನಿಮಾಕ್ಕಾಗಿ ಬೃಹತ್ ಸೆಟ್ ಹಾಕಲಾಗಿದೆ. ಆದರೆ ಈ ಸೆಟ್ ಅರಣ್ಯ ಭೂಮಿಯಲ್ಲಿ ಅಕ್ರಮವಾಗಿ ಹಾಕಲಾಗಿದೆ ಎಂದು ಆರೋಪಿಸಿ ವಕೀಲ ಜಿ. ಬಾಲಾಜಿ ನಾಯ್ಡು ಅವರು ಹೈಕೋರ್ಟ್​ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಹಾಕಿದ್ದಾರೆ.

ಅಕ್ರಮವಾಗಿ ನಿರ್ಮಿಸಲಾಗಿರುವ ಈ ಸೆಟ್​ ಅನ್ನು ಕೂಡಲೇ ತೆರವುಗೊಳಿಸಬೇಕು ಎಂದು ಒತ್ತಾಯಿಸಿದ್ದಾರೆ. ಅರ್ಜಿ ವಿಚಾರಣೆಗೆ ಅರ್ಹವೆಂದು ಪರಿಗಣಿಸಿರುವ ಹೈಕೋರ್ಟ್ ‘ಟಾಕ್ಸಿಕ್’ ಸಿನಿಮಾದ ನಿರ್ಮಾಣ ಸಂಸ್ಥೆ ಕೆವಿಎನ್ ಪ್ರೊಡಕ್ಷನ್ಸ್ ಮತ್ತು ಎಚ್​ಎಂಟಿ ಸಂಸ್ಥೆಗೆ ನೊಟೀಸ್ ನೀಡಿದೆ. ಕೆಲವು ದಾಖಲೆಗಳ ಪ್ರಕಾರ, ಎಚ್​ಎಂಟಿ ಸಂಸ್ಥೆಯು ಈ ಜಮೀನನ್ನು ಕೆನರಾ ಬ್ಯಾಂಕ್​ಗೆ ನೀಡಿತ್ತು. ಬಳಿಕ ಕೆನರಾ ಬ್ಯಾಂಕ್, ಕೆವಿಎನ್​ಗೆ ನೀಡಿತ್ತು. ಇದೀಗ ಕೆವಿಎನ್​ ನವರು 20.07 ಎಕರೆ ಜಾಗವನ್ನು ಸಿನಿಮಾ ಸೆಟ್ ನಿರ್ಮಾಣಕ್ಕೆ ಬಳಸಿಕೊಂಡಿದ್ದಾರೆ. ಆದರೆ ಇದು ಅರಣ್ಯ ಪ್ರದೇಶ ಎಂದು ಅರ್ಜಿದಾರರು ವಾದಿಸಿದ್ದಾರೆ. ವಿಚಾರಣೆ ಬಳಿಕವೇ ಸತ್ಯಾಂಶ ಹೊರಬರಲಿದೆ.

20 ಎಕರೆ ಜಾಗದಲ್ಲಿ ಕೋಟಿ ವೆಚ್ಚ ಮಾಡಿ ಸೆಟ್ ನಿರ್ಮಾಣ ಮಾಡಲಾಗಿದ್ದು, ಒಂದೊಮ್ಮೆ ಸೆಟ್ ತೆರವು ಮಾಡಬೇಕು ಎಂದರೆ ಟಾಕ್ಸಿಕ್​ ಚಿತ್ರತಂಡಕ್ಕೆ ಭಾರಿ ನಷ್ಟವಾಗಲಿದೆ. ಸಿನಿಮಾವು 70-80ರ ಕಾಲದಲ್ಲಿ ನಡೆಯಲಿದೆ ಎಂಬ ಸುದ್ದಿ ಕೂಡ ಹರಿದಾಡುತ್ತಿದೆ. ಇದೇ ಕಾರಣಕ್ಕೆ ಸಿನಿಮಾವನ್ನು ಸೆಟ್​ಗಳಲ್ಲಿ ಚಿತ್ರೀಕರಣ ಮಾಡಲಾಗುತ್ತಿದೆ. ಹಾಗಾಗಿ ಸಿನಿಮಾಕ್ಕಾಗಿ ಬೃಹತ್ ಸೆಟ್ ಅನ್ನು ನಿರ್ಮಿಸಲಾಗಿದೆ.

ಇದನ್ನೂ ಓದಿ: Back Benchers Movie: ಬ್ಯಾಕ್ ಬೆಂಚರ್ಸ್‌ ಸಿನಿಮಾಗೆ ಭರ್ಜರಿ ಓಪನಿಂಗ್ ಸಿಕ್ಕ ಖುಷಿ!

 ʼಕೆಜಿಎಫ್‌ 2ʼ ಬಾಕ್ಸ್‌ ಆಫೀಸ್‌ನಲ್ಲಿ ಧೂಳೆಬ್ಬಿಸಿದ ಸುಮಾರು ಒಂದೂವರೆ ವರ್ಷದ ಬಳಿಕ ಯಶ್‌ ಅಭಿನಯದ ʼಟಾಕ್ಸಿಕ್‌ʼ (Toxic) ಸಿನಿಮಾ ಘೋಷಣೆಯಾಗಿದೆ. ಮಲೆಯಾಳಂ ಮೂಲದ ನಟಿ, ನಿರ್ದೇಶಕಿ ಗೀತು ಮೋಹನ್‌ದಾಸ್‌ ಈ ಚಿತ್ರಕ್ಕೆ ಆ್ಯಕ್ಷನ್‌ ಕಟ್‌ ಹೇಳುತ್ತಿದ್ದಾರೆ. ನಟ ಯಶ್ ಮತ್ತು ನಯನತಾರಾ ಮೊದಲ ಬಾರಿಗೆ ಜೊತೆಯಾಗುತ್ತಿದ್ದಾರೆ, ಇದರಲ್ಲಿ ಕಿಯಾರಾ ಆಡ್ವಾಣಿ, ಹುಮಾ ಖುರೇಷಿ ಮತ್ತು ಶ್ರುತಿ ಹಾಸನ್ ಕೂಡ ಇದ್ದಾರೆ. ಇದೀಗ ಸಿನಿಮಾ ಕುರಿತು ಹೊಸ ಸಂಗತಿವೊಂದು ವೈರಲ್‌ ಆಗುತ್ತಿದೆ.

ಮಲೆಯಾಳಂ ಮೂಲದ ನಟಿ, ನಿರ್ದೇಶಕಿ ಗೀತು ಮೋಹನ್‌ದಾಸ್‌ ಈ ಚಿತ್ರಕ್ಕೆ ಆ್ಯಕ್ಷನ್‌ ಕಟ್‌ ಹೇಳುತ್ತಿದ್ದಾರೆ. ಆರಂಭದಲ್ಲಿ ಸಾಯಿ ಪಲ್ಲವಿ, ಸಂಯುಕ್ತಾ ಮೆನನ್‌ ನಾಯಕಿಯರಾಗಿತ್ತಾರೆ ಎನ್ನಲಾಗಿತ್ತು. ಅದಾದ ಬಳಿಕ ಕರೀನಾ ಕಪೂರ್‌ ಹೆಸರು ಕೇಳಿ ಬಂದಿತ್ತು. ಇತ್ತೀಚೆಗೆ ಬಹುಭಾಷಾ ನಟಿ ಶ್ರುತಿ ಹಾಸನ್‌ ಟಾಕ್ಸಿಕ್‌ ಚಿತ್ರದಲ್ಲಿ ಮುಖ್ಯ ಪಾತ್ರ ನಿರ್ವಹಿಸಲಿದ್ದಾರೆ ಎನ್ನುವ ಸುದ್ದಿಯೂ ಹಬ್ಬಿತ್ತು. ಇದರ ಜತೆಗೆ ಮಲಯಾಳಂ ನಟ ಟೊವಿನೋ ಥಾಮಸ್ ಚಿತ್ರದ ಮುಖ್ಯ ಪಾತ್ರದಲ್ಲಿ ನಟಿಸುತ್ತಾರೆ ಎನ್ನಲಾಗಿದೆ. ಆದರೆ ಚಿತ್ರತಂಡ ಇದುವರೆಗೆ ಇದ್ಯಾವುದನ್ನೂ ಅಧಿಕೃತವಾಗಿ ಹೇಳಿಕೊಂಡಿಲ್ಲ. ಹೀಗಾಗಿ ಸಿನಿ ಪ್ರಿಯರಲ್ಲಿ ಕುತೂಹಲ ಮನೆ ಮಾಡಿದೆ. ಬರೋಬ್ಬರಿ 170 ಕೋಟಿ ರೂಪಾಯಿ ಬಜೆಟ್‌ನ ಈ ಯಶ್‌ (Yash) ಚಿತ್ರ ಡ್ರಗ್‌ ಮಾಫಿಯಾ ಬಗ್ಗೆ ಬೆಳಕು ಚೆಲ್ಲಲಿದೆ ಎಂದು ಮೂಲಗಳು ತಿಳಿಸಿವೆ. 2025ರಲ್ಲಿ ಸಿನಿಮಾ ಪ್ಯಾನ್‌ ಇಂಡಿಯಾ ಮಟ್ಟದಲ್ಲಿ ತೆರೆ ಕಾಣಲಿದೆ.

ಕಳೆದ ಡಿಸೆಂಬರ್‌ನಲ್ಲಿ ಭಾರತ, ಮಲೇಶಿಯಾ, ಜಪಾನ್, ನ್ಯೂಜಿಲ್ಯಾಂಡ್, ಆಫ್ರಿಕಾ, ಆಸ್ಟ್ರೇಲಿಯಾ, ರಷ್ಯಾ, ಇಂಗ್ಲೆಂಡ್‌, ಯೂರೋಪ್ ಸೇರಿದಂತೆ ಹಲವೆಡೆ ʼಟಾಕ್ಸಿಕ್‌ʼ ಟೈಟಲ್ ಅದ್ಧೂರಿಯಾಗಿ ರಿವೀಲ್ ಆಗಿತ್ತು. ಇದುವರೆಗೂ ಕನ್ನಡ ಯಾವ ಸಿನಿಮಾದ ಟೈಟಲ್ ಕೂಡ ವಿಶ್ವದಾದ್ಯಂತ ಈ ರೀತಿ ರಿಲೀಸ್ ಆಗಿರಲಿಲ್ಲ. ಈ ಮೂಲಕ ಹಾಲಿವುಡ್ ರೇಂಜ್‌ನಲ್ಲಿ ಸಿನಿಮಾ ರಿಲೀಸ್‌ ಆಗುತ್ತಿದೆ ಎನ್ನುವುದು ಖಚಿತವಾಗಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಸ್ಯಾಂಡಲ್ ವುಡ್

Actor Darshan: ರೇಣುಕಾ ಸ್ವಾಮಿ ಕುಟುಂಬ ಭೇಟಿಯಾಗಿ ಧನ ಸಹಾಯ ಮಾಡಿದ ವಿನೋದ್‌ ರಾಜ್‌ !

Actor Darshan: ದರ್ಶನ್‌ ಅವರನ್ನ ಕಂಡು ವಿನೋದ್ ರಾಜ್‌ ಭಾವುಕರಾಗಿದ್ದರು. ದರ್ಶನ್‌ ಅವರನ್ನ ಮೀಟ್ ಮಾಡಿದ್ಮೇಲೆ ಕಣ್ಣೀರು ಹಾಕುತ್ತಲೇ ಮಾಧ್ಯಮಗಳೊಂದಿಗೆ ಮಾತನಾಡಿದ್ದರು.  ಇಂದು (ಜುಲೈ 26) ಚಿತ್ರದುರ್ಗಕ್ಕೆ ಹೋಗಿ ಸಂತ್ರಸ್ತ ರೇಣುಕಾ ಸ್ವಾಮಿ ಕುಟುಂಬವನ್ನು ಭೇಟಿ ಮಾಡಿ ಸಾಂತ್ವಾನ ಹೇಳುವ ಜತೆಗೆ 1 ಲಕ್ಷ ರೂಪಾಯಿ ಹಣ ಸಹಾಯವನ್ನು ಸಹ ಮಾಡಿದ್ದಾರೆ.

VISTARANEWS.COM


on

Vinod Raj Visited Renuka Swamy Family Gave Them 1 Lakh Rs and shares Opinion
Koo

ಬೆಂಗಳೂರು: ಚಾಲೆಂಜಿಂಗ್ ಸ್ಟಾರ್‌ ದರ್ಶನ್ (Actor Darshan) ಜೈಲು ಸೇರಿದ್ದಾರೆ. ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಕೇಸ್‌ನಲ್ಲಿ ದರ್ಶನ್‌ ನ್ಯಾಯಾಂಗ ಬಂಧನದಲ್ಲಿದ್ದಾರೆ. ಈ ಹಿಂದೆ ದರ್ಶನ್ ಅವರನ್ನ ಭೇಟಿಯಾಗಲು ಪರಪ್ಪನ ಅಗ್ರಹಾರ ಜೈಲಿಗೆ ವಿನೋದ್‌ ರಾಜ್‌ ಆಗಮಿಸಿದ್ದರು. ದರ್ಶನ್‌ ಅವರನ್ನ ಕಂಡು ವಿನೋದ್ ರಾಜ್‌ ಭಾವುಕರಾಗಿದ್ದರು. ದರ್ಶನ್‌ ಅವರನ್ನ ಮೀಟ್ ಮಾಡಿದ್ಮೇಲೆ ಕಣ್ಣೀರು ಹಾಕುತ್ತಲೇ ಮಾಧ್ಯಮಗಳೊಂದಿಗೆ ಮಾತನಾಡಿದ್ದರು.  ಇಂದು (ಜುಲೈ 26) ಚಿತ್ರದುರ್ಗಕ್ಕೆ ಹೋಗಿ ಸಂತ್ರಸ್ತ ರೇಣುಕಾ ಸ್ವಾಮಿ ಕುಟುಂಬವನ್ನು ಭೇಟಿ ಮಾಡಿ ಸಾಂತ್ವಾನ ಹೇಳುವ ಜತೆಗೆ 1 ಲಕ್ಷ ರೂಪಾಯಿ ಹಣ ಸಹಾಯವನ್ನು ಸಹ ಮಾಡಿದ್ದಾರೆ.

ಬೆಳಗ್ಗೆಯೇ ಚಿತ್ರದುರ್ಗಕ್ಕೆ ತೆರಳಿದ ನಟ ವಿನೋದ್ ರಾಜ್ ಮಾತನಾಡಿ, ‘ಮನೆಗೆ ಆಧಾರ ಸ್ತಂಭವಾದ ಮಗನನ್ನು ಕಳೆದುಕೊಂಡಿದ್ದಾರೆ. ಕುಟುಂಬ ಪರಿತಪಿಸುತ್ತಿರುವ ಸ್ಥಿತಿ ಕಂಡು ಕರಳುಕಿತ್ತು ಬರುತ್ತಿದೆ. ಜೀವನದಲ್ಲಿ ಮನುಷ್ಯ ಹೇಗೆ ಬಾಳಬೇಕು, ಹೇಗೆ ನಡೆದುಕೊಳ್ಳಬೇಕು, ಯಾವ ದಿಕ್ಕಿನಲ್ಲಿ ಮಾನವೀಯತೆ, ಮನುಷತ್ವ ಸಾಗುತ್ತಿದೆ, ಮನುಷ್ಯತ್ವ ಇದೆಯಾ ಎನ್ನುವುದು ನಮ್ಮನ್ನೇ ಮುಟ್ಟಿಕೊಂಡು ನೋಡುವಂತಹ ಕಾಲ ಬಂದಿದೆ. ಜೀವನ ಇಡೀ ಸಂಪದಾನೆ, ಹೆಸರು ಮಾಡುವುದು ಅಲ್ಲವೇ ಅಲ್ಲ. ಜೀವನ ಇಡಿ ಜೀವಗಳ ಬಗ್ಗೆ ಕಾಳಜಿ ತೆಗೆದುಕೊಂಡು ಬದುಕಬೇಕು. ಪ್ರತಿಯೊಬ್ಬರ ಜೀವನದಲ್ಲೂ ಜೀವಗಳಿವೆ. ಜೀವರಾಶಿಗಳನ್ನ ಭಗವಂತ ತಂದೆ ತಾಯಿ ರೂಪದಲ್ಲಿ ಸೃಷ್ಟಿ ಮಾಡಿರುತ್ತಾನೆ. ಅವರೂ ಕೂಡ ಚೆನ್ನಾಗಿ ಇರಬೇಕು ಎಂದು ಬೆಳೆಸುತ್ತಾರೆ. ಎಲ್ಲೋ ಒಂದು ಅತಾಚುರ್ಯ, ಕೆಟ್ಟದ್ದು ನಡೆಯುತ್ತೆ. ಕೆಟ್ಟದ್ದು ಜಾಸ್ತಿ ಆದಾಗ ಇಂತಹ ಪರಿಸ್ಥಿತಿ ಬರುತ್ತದೆ. ಆದರೆ ಇದು ಹೆಚ್ಚಾಗಬಾರದು. ಸಮಾಜದಲ್ಲಿ ಉನ್ನತವಾದ ಸ್ಥಾನ ಎತ್ತರದ ಮಟ್ಟದಲ್ಲಿರುವವರು ವಿವೇಕ ಮರೆಯಬಾರದು, ಅಚಾತುರ್ಯ‌ ನಡೆಯುತ್ತವೆ, ಮುಂದಿನ ತಲೆಮಾರುಗಳು ಹೀಗೆ ಆಗದಂತೆ ಎಚ್ಚರವಹಿಸಬೇಕು, ಮಾಧ್ಯಮ ತಿದ್ದಿಬುದ್ದಿ ಹೇಳಿದಂತೆ ಅನುಸರಿಸಿಕೊಂಡು ಸಾಗಬೇಕು’ ಎಂದು ವಿನೋದ್ ರಾಜ್​ಕುಮಾರ್ ಹೇಳಿದರು.

‘ಕಲಾವಿದರನ್ನು ನೋಡಿ ಜನ ಅನುಕರಣೆ ಮಾಡುತ್ತಾರೆ. ಹೀಗೆ ಆಗಿರುವುದು ಆಘಾತಕಾರಿ ವಿಷಯ. ಹೆಸರು, ಕೀರ್ತಿಯಲ್ಲಿರುವ ನಾವು ಎಚ್ಚರವಾಗಿರಬೇಕು, ನಮ್ಮ ಉನ್ನತವಾದ ಸ್ಥಾನ ಎತ್ತರದ ಮಟ್ಟದಲ್ಲಿರುವವರು ವಿವೇಕ ಮರೆಯಬಾರದು, ಅಚಾತುರ್ಯ‌ ನಡೆಯುತ್ತವೆ, ಮುಂದಿನ ತಲೆಮಾರುಗಳು ಹೀಗೆ ಆಗದಂತೆ ಎಚ್ಚರವಹಿಸಬೇಕುʼʼಎಂದರು.

ಇದನ್ನೂ ಓದಿ: Actor Yash: ಯಶ್‌ ನಟನೆಯ ʻಟಾಕ್ಸಿಕ್‌ʼ ಸಿನಿಮಾ ವಿರುದ್ಧ ದೂರು ದಾಖಲು

ರೇಣುಕಾ ಸ್ವಾಮಿ ಕುಟುಂಬದವರನ್ನು ಸಂತೈಸಿದ ವಿನೋದ್ ರಾಜ್ ಕುಟುಂಬಕ್ಕೆ 1 ಲಕ್ಷ ರೂಪಾಯಿ ಚೆಕ್ ವಿತರಣೆ ಮಾಡಿದರು.

ಈ ಹಿಂದೆ ದರ್ಶನ್‌ ಅವರನ್ನು ಭೇಟಿಯಾದ ವಿನೋದ್‌ ರಾಜ್‌ ಮಾತನಾಡಿ ʻʻನಾವು 5 ಜನ ಹೋಗಿದ್ವಿ. ಹೆಚ್ಚೇನೂ ಮಾತಾಡೋಕೆ ಆಗಲಿಲ್ಲ. ಕಷ್ಟ – ಸುಖ ಮಾತನಾಡಿದ್ವಿ ಅಷ್ಟೇ. ವಿಜಯಲಕ್ಷ್ಮೀ ಅವರಿಗೂ ಏನೂ ಗೊತ್ತಾಗುತ್ತಿಲ್ಲ. ವಕೀಲರು ಮಾತನಾಡಿದರು ಅಷ್ಟೇ. ಜೈಲಿನ ನಿಯಮಗಳು ಕಟ್ಟುನಿಟ್ಟಾಗಿವೆ. ಇಷ್ಟು ಕಹಿಯಾಗಿ, ಅವರನ್ನ ನಾನು ಈ ಸ್ಥಿತಿಯಲ್ಲಿ ನೋಡಬೇಕಿತ್ತಾ ಅನಿಸ್ತಾಯಿದೆ. ನನ್ನ ಕಣ್ಣುಗಳನ್ನೇ ನಾನು ನಂಬೋಕೆ ಆಗಲಿಲ್ಲ. ಆದರೂ ನಂಬಬೇಕಾದ ಅನಿವಾರ್ಯತೆ ಆಗೋಯ್ತು. ಕಣ್ಣೀರು ಬಿಟ್ಟರೆ ಇನ್ನೇನೂ ಗೊತ್ತಿಲ್ಲ. ಸಂಸಾರ ಹಾಗೂ ಅಭಿಮಾನಿಗಳ ಜೊತೆಗೆ ಸೇರಿಕೊಳ್ಳಲಿ. ತಲೆಯೆತ್ತಿ ನಡೆಯುವಂತಹ ದರ್ಶನ್ ಆಗಲಿ. ಎಲ್ಲರಿಗೂ ದರ್ಶನ ಕೊಡಲಿ ಅಂತ ನಾನು ದೇವರಲ್ಲಿ ಪ್ರಾರ್ಥನೆ ಮಾಡುತ್ತೇನೆ’’ ಎಂದಿದ್ದರು.

Continue Reading

ಕರ್ನಾಟಕ

Actor Darshan: ಜೈಲಲ್ಲಿ ದರ್ಶನ್ ಭೇಟಿಯಾದ ಟಾಲಿವುಡ್ ಖ್ಯಾತ ನಟ ನಾಗಶೌರ್ಯ

Actor Darshan: ಸ್ಯಾಂಡಲ್‌ವುಡ್ ಸ್ಟಾರ್ಸ್ ಜತೆಗೆ ಟಾಲಿವುಡ್ ಸ್ಟಾರ್ಸ್ ಇಂದಲೂ ದರ್ಶನ್‌ ಭೇಟಿಗೆ ಯತ್ನ ನಡೆಯುತ್ತಿದೆ. ಇದೀಗ ತೆಲುಗಿನ ಖ್ಯಾತ ನಟ ನಾಗಶೌರ್ಯ ಅವರು ದರ್ಶನ್‌ರನ್ನು ಜೈಲಿನಲ್ಲಿ ಭೇಟಿಯಾಗಿದ್ದಾರೆ. ರೇಣುಕಾಸ್ವಾಮಿ ಕೊಲೆಯಾದಾಗ ದರ್ಶನ್‌ ಬೆಂಬಲಕ್ಕೆ ಈ ನಟ ನಿಂತಿದ್ದರು.

VISTARANEWS.COM


on

Actor Darshan
Koo

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧನವಾಗಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್‌ರನ್ನು ನೋಡಲು ಆಪ್ತರು ಸೇರಿ ಹಲವು ಸೆಲೆಬ್ರಿಟಿಗಳು ಪ್ರಯತ್ನಿಸುತ್ತಿದ್ದಾರೆ. ಆದರೆ, ಕೆಲವರಿಗೆ ಮಾತ್ರ ಭೇಟಿಯಾಗಲು ಅವಕಾಶ ಸಿಕ್ಕಿದೆ. ಈ ನಡುವೆ ತೆಲುಗಿನ ಖ್ಯಾತ ನಟ ನಾಗಶೌರ್ಯ (Naga Shaurya), ಸದ್ದಿಲ್ಲದೆ ನಟ ದರ್ಶನ್‌ರನ್ನು (Actor Darshan) ಭೇಟಿಯಾಗಿದ್ದಾರೆ.

ಸ್ಯಾಂಡಲ್‌ವುಡ್ ಸ್ಟಾರ್ಸ್ ಜತೆಗೆ ಟಾಲಿವುಡ್ ಸ್ಟಾರ್ಸ್ ಇಂದಲೂ ದರ್ಶನ್‌ ಭೇಟಿಗೆ ಯತ್ನ ನಡೆಯುತ್ತಿದೆ. ರೇಣುಕಾಸ್ವಾಮಿ ಕೊಲೆಯಾದಾಗ ದರ್ಶನ್‌ ಬೆಂಬಲಕ್ಕೆ ನಿಂತಿದ್ದ ತೆಲುಗಿನ ಖ್ಯಾತ ನಟ ನಾಗಶೌರ್ಯ, ದರ್ಶನ್ ಕುಟುಂಬದ ಜತೆ ಹೋಗಿ ಜೈಲಲ್ಲಿ ದಾಸನ ದರ್ಶನ ಪಡೆದಿದ್ದಾರೆ.

ತನ್ನನ್ನು ನೋಡಲು ಬಂದ ನಾಗಶೌರ್ಯರ ಯೋಗಕ್ಷೇಮವನ್ನು ದರ್ಶನ್ ವಿಚಾರಿಸಿದ್ದಾರೆ. ಹೇಗಿದ್ಯಾ ಹೀರೊ, ಹೇಗೆ ನಡೆಯುತ್ತಿದೆ ಪ್ರಾಜೆಕ್ಟ್, ಯಾವ ಫಿಲಂ ಶೂಟಿಂಗ್ ನಡೆಯುತ್ತಿದೆ. ರಿಲೀಸ್ ಯಾವಾಗ ಅಂತೆಲ್ಲಾ ದರ್ಶನ್ ಮಾತುಕತೆ ನಡೆಸಿದ್ದು, ಆತ್ಮೀಯವಾಗಿ ಮಾತನಾಡಿ ನಾಗಶೌರ್ಯರನ್ನು ಕಳುಹಿಸಿಕೊಟ್ಟಿದ್ದಾರೆ.

ಇದನ್ನೂ ಓದಿ | Shekhar Home:  ಪತ್ತೇದಾರಿ ಕಾದಂಬರಿ ಆಧಾರಿತ ಸಿರೀಸ್‌ನಲ್ಲಿ ಅಬ್ಬರಿಸಲಿದ್ದಾರೆ ಕೇ ಕೇ ಮೆನನ್; ಫಸ್ಟ್‌ ಲುಕ್‌ ಔಟ್!‌

ದರ್ಶನ್‌ ಅಣ್ಣ ಕನಸಿನಲ್ಲೂ ಯಾರಿಗೂ ತೊಂದರೆ ಕೊಡುವವರಲ್ಲ: ನಾಗ ಶೌರ್ಯ

ನಟ ದರ್ಶನ್ (Actor Darshan) ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ಬಂಧನಲ್ಲಿದ್ದಾರೆ. ಇಷ್ಟಾದರೂ ದರ್ಶನ್‌ಗೆ ಕೆಲವು ಅಭಿಮಾನಿಗಳು ಹಾಗೂ ನಟ ನಟಿಯರು ಬೆಂಬಲ ನೀಡಿದ್ದಾರೆ. ದಿನ ಕಳೆದಂತೆ ತನಿಖೆಯಿಂದ ಬೆಚ್ಚಿ ಬೀಳಿಸುವ ಸತ್ಯಗಳು ಹೊರಬೀಳುತ್ತಿವೆ. ಕಲೆವರು ಅಂದಿನಿಂದ ದರ್ಶನ್‌ಗೆ ಜೀವಾವಧಿ ಶಿಕ್ಷೆ ವಿಧಿಸಬೇಕು ಎಂದು ಆಗ್ರಹಿಸುತ್ತಿದ್ದಾರೆ. ಈ ಸಾರ್ವಜನಿಕ ಆಕ್ರೋಶದ ನಡುವೆ, ಟಾಲಿವುಡ್ ಹೀರೊ ನಾಗ ಶೌರ್ಯ ದರ್ಶನ್‌ಗೆ ಇತ್ತೀಚೆಗೆ ಬೆಂಬಲ ನೀಡಿದ್ದಾರೆ. ʻದರ್ಶನ್ ಅಣ್ಣ ಕನಸಿನಲ್ಲೂ ಯಾರಿಗೂ ತೊಂದರೆ ಕೊಡುವವರಲ್ಲ. ನಾನು ಈ ಸುದ್ದಿಯನ್ನು ಒಪ್ಪಿಕೊಳ್ಳಲಾರೆʼʼಎಂದು ಸಾಮಾಜಿಕ ಜಾಲತಾಣದಲ್ಲಿ ತಿಳಿಸಿದ್ದರು.

ನಾಗ ಶೌರ್ಯ ಬರೆದುಕೊಂಡಿದ್ದು ಹೀಗೆ ʻ“ಘಟನೆ ಕೇಳಿದಾಗ ಮೃತರ ಕುಟುಂಬಕ್ಕೆ ನನ್ನ ಹೃದಯ ಮರುಗುತ್ತದೆ. ಈ ಕಷ್ಟದ ಸಮಯದಲ್ಲಿ ಅವರಿಗೆ ಶಕ್ತಿಯನ್ನು ನೀಡಬೇಕೆಂದು ದೇವರಲ್ಲಿ ಪ್ರಾರ್ಥಿಸುತ್ತೇನೆ. ಈ ವಿಷಯದಲ್ಲಿ ಜನರು ಈಗಾಗಲೇ ತೀರ್ಮಾನಗಳಿಗೆ ಬರುತ್ತಿರುವುದನ್ನು ನೋಡುವುದು ಕಷ್ಟವಾಗುತ್ತದೆ. ದರ್ಶನ್ ಅಣ್ಣ ಕನಸಿನಲ್ಲೂ ಯಾರಿಗೂ ತೊಂದರೆ ಕೊಡುವವರಲ್ಲ. ದರ್ಶನ್‌ ಅವರ ಉದಾರತೆ, ಸಹೃದಯ ಸ್ವಭಾವ ಮತ್ತು ಇತರರಿಗೆ ಸಹಾಯ ಮಾಡುವ ಬದ್ಧತೆಯನ್ನು ಅವರನ್ನು ಚೆನ್ನಾಗಿ ಬಲ್ಲವರು ತಿಳಿದುಕೊಂಡಿದ್ದಾರೆ. ಅನೇಕರಿಗೆ ಶಕ್ತಿಯ ಆಧಾರಸ್ತಂಭವಾಗಿದ್ದಾರೆʼʼಎಂದು ಬರೆದುಕೊಂಡಿದ್ದರು.

ನಮ್ಮ ನ್ಯಾಯಾಂಗ ವ್ಯವಸ್ಥೆಯಲ್ಲಿ ನನಗೆ ನಂಬಿಕೆ ಇದೆ. ಸತ್ಯವು ಶೀಘ್ರದಲ್ಲೇ ಹೊರಬರುತ್ತದೆ. ಇನ್ನೊಂದು ಕುಟುಂಬವು ಸಹ ಬಹಳವಾಗಿ ನರಳುತ್ತಿದೆ ಎಂಬುದನ್ನು ನಾವು ನೆನಪಿನಲ್ಲಿ ಇಟ್ಟುಕೊಳ್ಳಬೇಕು. ಹಾನುಭೂತಿಗೆ ಹೆಸರುವಾಸಿಯಾದ ಅಣ್ಣ ಅವರು ನಿರಪರಾಧಿ ಎಂಬುದು ಸಾಬೀತಾಗುತ್ತದೆ. ನಿಜವಾದ ಅಪರಾಧಿ ಯಾರೆಂಬುದು ಗೊತ್ತಾಗುತ್ತದೆ’ ಎಂದಿದ್ದರು.

ಇದನ್ನೂ ಓದಿ | Most Beautiful woman: ವಿಶ್ವದ ಅತ್ಯಂತ ಸುಂದರ ಮಹಿಳೆಯರ ಪಟ್ಟಿ ಬಿಡುಗಡೆ; ಟಾಪ್ 10ನಲ್ಲಿ ಏಕೈಕ ಬಾಲಿವುಡ್ ನಟಿ!

ದರ್ಶನ್ ಅವರನ್ನು ಬೆಂಬಲಿಸುವ ನಾಗಶೌರ್ಯ ನಿರ್ಧಾರವು ಮೂರ್ಖತನ ಎಂದು ಅನೇಕರು ಕಮೆಂಟ್‌ ಮಾಡಿದ್ದರು. ಒಬ್ಬ ಕೊಲೆಗಾರನನ್ನು ಸಮರ್ಥಿಸಿಕೊಂಡಿದ್ದಾರೆ ಎಂದು ನೆಟ್ಟಿಗರು ನಾಗ ಶೌರ್ಯ ಬಗ್ಗೆ ಆಕ್ರೋಶ ಹೊರಹಾಕುತ್ತಿದ್ದರು. ನಟನ ಈ ಪೋಸ್ಟ್‌ಗಾಗಿ ಛೀಮಾರಿ ಹಾಕಿದ್ದರು.

Continue Reading

ಸ್ಯಾಂಡಲ್ ವುಡ್

Actor Darshan: ದರ್ಶನ್‌ಗಾಗಿ ಕೊಲ್ಲೂರು ಮೂಕಾಂಬಿಕೆ ಮೊರೆ ಹೋದ ವಿಜಯಲಕ್ಷ್ಮಿ!

Actor Darshan:: ನರಸಿಂಹ ಅಡಿಗ ನೇತೃತ್ವದಲ್ಲಿ ನವ ಚಂಡಿಕಾ ಹೋಮ, ಪಾರಾಯಣ ನಡೆದಿದೆ. ದರ್ಶನ್ ಬಂಧನ ಮುಕ್ತಿಗಾಗಿ ವಿಜಯಲಕ್ಷ್ಮೀ ಪ್ರಾರ್ಥನೆ ಮಾಡಿದ್ದಾರೆ. ಜುಲೈ 24ರಂದು ದರ್ಶನ್ ಪತ್ನಿ ವಿಜಯಲಕ್ಷ್ಮಿ ಹಾಗೂ ದರ್ಶನ್ ಸಹೋದರ ದಿನಕರ್ ತೂಗುದೀಪ್ ಅವರು ಡಿಸಿಎಂ ಡಿಕೆ ಶಿವಕುಮಾರ್​ ಭೇಟಿ ಮಾಡಿದ್ರು.

VISTARANEWS.COM


on

Actor Darshan wife Vijayalakshmi Darshan Visit Kollur Temple
Koo

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್‌ಗೆ (Actor Darshan) ಮನೆ ಊಟ ಕೋರಿ ದರ್ಶನ್ ಸಲ್ಲಿಸಿರುವ ಅರ್ಜಿಯನ್ನು ಆರ್ಥಿಕ ಅಪರಾಧಗಳ ವಿಶೇಷ ಕೋರ್ಟ್ ವಜಾ ಮಾಡಿ ಎಂಬ ಆದೇಶ ಈಗಾಗಲೇ ಬಂದಿದೆ. ಹೀಗಾಗಿ ದರ್ಶನ್‌ಗೆ ಸಂಕಷ್ಟಗಳು ಮಾತ್ರ ನಿವಾರಣೆ ಆಗುತ್ತಿಲ್ಲ. ಇದೀಗ ದರ್ಶನ್ ಬೇಗ ಬಿಡುಗಡೆ ಆಗಲಿ ಎಂದು ವಿಜಯಲಕ್ಷ್ಮೀ ಅವರು ದೇವರ ಮೋರೆ ಹೋಗಿದ್ದಾರೆ. ಉಡುಪಿ ಜಿಲ್ಲೆ ಬೈಂದೂರು ತಾಲೂಕಿನ ಕೊಲ್ಲೂರು ಮೂಕಾಂಬಿ ದೇವಾಲಯದಲ್ಲಿ ನವ ಚಂಡಿಕಾ ಹೋಮ ಮಾಡಿಸಿದ್ದಾರೆ.

ನರಸಿಂಹ ಅಡಿಗ ನೇತೃತ್ವದಲ್ಲಿ ನವ ಚಂಡಿಕಾ ಹೋಮ, ಪಾರಾಯಣ ನಡೆದಿದೆ. ದರ್ಶನ್ ಬಂಧನ ಮುಕ್ತಿಗಾಗಿ ವಿಜಯಲಕ್ಷ್ಮೀ ಪ್ರಾರ್ಥನೆ ಮಾಡಿದ್ದಾರೆ. ಜುಲೈ 24ರಂದು ದರ್ಶನ್ ಪತ್ನಿ ವಿಜಯಲಕ್ಷ್ಮಿ ಹಾಗೂ ದರ್ಶನ್ ಸಹೋದರ ದಿನಕರ್ ತೂಗುದೀಪ್ ಅವರು ಡಿಸಿಎಂ ಡಿಕೆ ಶಿವಕುಮಾರ್​ ಭೇಟಿ ಮಾಡಿದ್ರು. ಮಗನ ಸ್ಕೂಲ್ ಸೀಟ್ ವಿಚಾರಕ್ಕೆ ಚರ್ಚೆ ಮಾಡಿದ್ರು ಎನ್ನಲಾಗ್ತಿದೆ. ದರ್ಶನ್ ವಿಚಾರವಾಗಿ ಮಾತುಕತೆ ನಡೆದಿಲ್ಲ ಎನ್ನಲಾಗ್ತಿದೆ.

ದರ್ಶನ್ ಮನೆ ಊಟದ ಅರ್ಜಿ ವಜಾ ಆಗಲು ಕಾರಣ ಇದು

ಕರ್ನಾಟಕ ಪ್ರಿಸನ್ಸ್ ಕರೆಕ್ಷನ್ ಮ್ಯಾನ್ಯುಲ್ 2021ರ ಸೆಕ್ಷನ್ 728ರ ಪ್ರಕಾರ ಕೊಲೆ ಆರೋಪಿಗೆ ಮನೆ ಊಟಕ್ಕೆ ಅವಕಾಶ ಇಲ್ಲ. ಅಲ್ಲದೆ ಜೈಲು ಅಧಿಕಾರಿಗಳು ನೀಡಿರುವ ವರದಿಯಲ್ಲಿ ಮನೆಯೂಟದ ಅವಶ್ಯಕತೆ ಕಾಣಿಸುತ್ತಿಲ್ಲ. ಜತೆಗೆ ಮನೆ ಊಟದ ಅವಶ್ಯಕತೆ ಸಂಬಂಧ ಪೂರಕವಾದ ವೈದ್ಯಕೀಯ ಪ್ರಮಾಣಪತ್ರಗಳು ಇಲ್ಲ-ಈ ಮೂರು ಅಂಶಗಳನ್ನಿಟ್ಟು ದರ್ಶನ್‌ ಅರ್ಜಿ ವಜಾಗೊಂಡಿದೆ.

ದರ್ಶನ್ ಪರ ವಕೀಲ ವಕೀಲರ ವಾದ ಏನಾಗಿತ್ತು?

ಜುಲೈ 22ರಂದು ದರ್ಶನ್ ಪರ ವಕೀಲ ವಕೀಲ ರಾಘವೇಂದ್ರ ವಾದ ಮಂಡಿಸಿ, ದರ್ಶನ್‌ಗೆ ಜೈಲು ಊಟ ಜೀರ್ಣವಾಗುತ್ತಿಲ್ಲ, ಅತಿಸಾರವಾಗುತ್ತಿದೆ. ಹೀಗಾಗಿ ಖಾಸಗಿ ಊಟ, ಹಾಸಿಗೆ ಕೆಳಲಾಗುತ್ತಿದೆ. ವಿಚಾರಣಾಧೀನ ಕೈದಿಗೆ ಮನೆಯೂಟ ಪಡೆಯಲು ಅವಕಾಶವಿದೆ. ತನಿಖೆ ಪೂರ್ಣವಾಗದ ಸಂಧರ್ಬದಲ್ಲಿ ಮನೆ ಊಟ ನೀಡಲು ಅವಕಾಶವಿದೆ. ಕರ್ನಾಟಕ ಕಾರಾಗೃಹ ಕಾಯ್ದೆ ಪ್ರಕಾರ ಸಿವಿಲ್ ಕೈದಿ ಹಾಗೂ ವಿಚಾರಣಾಧೀನ ಕೈದಿಗೆ ಸ್ವಂತ ಹಣದಲ್ಲಿ ಅಗತ್ಯ ವಸ್ತುಗಳ ಖರೀದಿಗೆ ಅವಕಾಶವಿದೆ. ಅಧಿಕಾರಿಗಳೇ ರೇಷನ್ ನೀಡಬೇಕು. ಸೆಂಟ್ರಲ್ ಕಿಚನ್‌ನಲ್ಲಿ ಅಡುಗೆ ಮಾಡಿಕೊಳ್ಳಲು ಅವಕಾಶವಿದೆ ಎಂದು ಮನವಿ ಸಲ್ಲಿಸಿದ್ದರು.

ದರ್ಶನ್ ಒಬ್ಬ ಸೆಲೆಬ್ರಿಟಿ ಅಗಿರುವುದರಿಂದ ಪ್ರಚಾರ ಸಿಗುತ್ತದೆ. ಆಗಾಗಿಯೇ ಜೈಲು ಅಧಿಕಾರಿಗಳು ಮನೆ ಊಟಕ್ಕೆ ಅವಕಾಶ ನೀಡುತ್ತಿಲ್ಲ. ಆರೋಪ ಸಾಬೀತಾಗುವವರೆಗೂ ಮುಗ್ಧನೆಂದು ಪರಿಗಣಿಸಿ ಮನೆ ಊಟ, ಹಾಸಿಗೆ ಒದಗಿಸಬೇಕೆಂದು ಹೇಳಿದ್ದರು.

ಇದನ್ನೂ ಓದಿ: Actor Darshan: ನಟ ದರ್ಶನ್‌ಗೆ ಜೈಲೂಟ ಫಿಕ್ಸ್‌; ಕೋರ್ಟ್‌ ಮನೆಯೂಟದ ಅರ್ಜಿ ವಜಾಗೊಳಿಸಿದ್ದೇಕೆ?

ಪ್ರತಿದಿನ ಬಿರಿಯಾನಿ ತಿನ್ನಬೇಕು ಅಂದ್ರೆ ಆಗಲ್ಲ

ಇದಕ್ಕೆ ಎಸ್‌ಪಿಪಿ ಪ್ರಸನ್ನ ಕುಮಾರ್ ಪ್ರತಿವಾದ ಆರಂಭಿಸಿ, ಜೈಲು ಊಟ ಜೀರ್ಣವಾಗುತ್ತಿಲ್ಲ ಎಂದು ಹೇಳುತ್ತಿದ್ದಾರೆ. ಆದರೆ ಮೆಡಿಕಲ್ ರಿಪೋರ್ಟ್ ಕೋರ್ಟ್‌ಗೆ ಸಲ್ಲಿಸಿದ್ದೇವೆ. ನ್ಯಾಯಾಂಗ ಬಂಧನಕ್ಕೆ ಕಳುಹಿಸುವಾಗ ವೈದ್ಯಕೀಯ ಪರೀಕ್ಷೆ ಮಾಡಿಸಲಾಗಿದೆ. ಅವರಿಗೆ ಆರ್ಥೋಪೆಡಿಕ್ ಸಮಸ್ಯೆ ಇದೆ. ಅದಕ್ಕೆ ಮೊದಲು ಮೈಸೂರಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಅದನ್ನ ಮುಂದುವರಿಸಲು ಸೂಚನೆ ನೀಡಿದ್ದರು. ಈಗ ಡಯಟ್ ಪುಡ್ ಕೇಳಿದ್ದಾರೆ. ಅದಕ್ಕೆ ಸಂಬಂಧಿಸಿದಂತೆ ಜೈಲು ಮ್ಯಾನ್ಯುವಲ್ ಪ್ರಕಾರ ಏನೇನು ನೀಡಬೇಕೋ ಅದನ್ನು ನೀಡುತ್ತಿದ್ದೇವೆ. ಜೈಲು ಕೈಪಿಡಿಯಲ್ಲಿ ಮನೆ ಊಟ ಎಂಬ ಪದವೇ ಇಲ್ಲ. ಹುಷಾರಿಲ್ಲದ ವೇಳೆ ಎಕ್ಟ್ರಾ ಡಯಟ್ 30 ದಿನ ನೀಡಬಹುದು. ವಾರದಲ್ಲಿ ಒಂದು ದಿನ ಮೊಟ್ಟೆ ಹಾಗೂ ಬಾಳೆ ಹಣ್ಣು ನೀಡಬಹುದು. ಜ್ವರ ಇದ್ದಾಗ ಬಿಸಿ ನೀರು ನೀಡುತ್ತಾರೆ. ಪ್ರತಿದಿನ ಬಿರಿಯಾನಿ ತಿನ್ನಬೇಕು ಅಂದ್ರೆ ನಿಯಮದಲ್ಲಿ ಅವಕಾಶ ಇಲ್ಲ ಎಂದು ತಿಳಿಸಿದ್ದರು.

Continue Reading

ಸಿನಿಮಾ

Actor Darshan: ನಟ ದರ್ಶನ್‌ಗೆ ಜೈಲೂಟ ಫಿಕ್ಸ್‌; ಕೋರ್ಟ್‌ ಮನೆಯೂಟದ ಅರ್ಜಿ ವಜಾಗೊಳಿಸಿದ್ದೇಕೆ?

Actor Darshan: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್‌ಗೆ ಇಂದೂ ನಿರಾಸೆ ಎದುರಾಗಿದೆ. ಮನೆ ಊಟ ಕೋರಿ ದರ್ಶನ್ ಸಲ್ಲಿಸಿರುವ ಅರ್ಜಿಯನ್ನು ಆರ್ಥಿಕ ಅಪರಾಧಗಳ ವಿಶೇಷ ಕೋರ್ಟ್ ವಜಾ ಮಾಡಿ ಆದೇಶ ಹೊರಡಿಸಿದೆ. ಇದರಿಂದ ದರ್ಶನ್‌ಗೆ ಜೈಲೂಟವೇ ಫಿಕ್ಸ್‌ ಆಗಿದೆ.

VISTARANEWS.COM


on

Actor Darshan
Koo

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್‌ಗೆ (Actor Darshan) ಇಂದೂ ನಿರಾಸೆ ಎದುರಾಗಿದೆ. ಮನೆ ಊಟ ಕೋರಿ ದರ್ಶನ್ ಸಲ್ಲಿಸಿರುವ ಅರ್ಜಿಯನ್ನು ಆರ್ಥಿಕ ಅಪರಾಧಗಳ ವಿಶೇಷ ಕೋರ್ಟ್ ವಜಾ ಮಾಡಿ ಆದೇಶ ಹೊರಡಿಸಿದೆ. ಇದರಿಂದ ದರ್ಶನ್‌ಗೆ ಜೈಲೂಟವೇ ಫಿಕ್ಸ್‌ ಆಗಿದೆ.

ದರ್ಶನ್ ಪರ ವಕೀಲರು ಹಾಗೂ ಸರ್ಕಾರಿ ಪರ ಎಸ್‌ಪಿಪಿ ವಾದ-ಪ್ರತಿವಾದ ಆಲಿಸಿದ ನ್ಯಾಯಾಧೀಶ ವಿಶ್ವನಾಥ ಸಿ. ಗೌಡರ್ ತೀರ್ಪನ್ನು ಇಂದಿಗೆ ಕಾಯ್ದಿರಿಸಿದ್ದರು. ಅದರಂತೆ ತೀರ್ಪು ಪ್ರಕಟಗೊಂಡಿದೆ.

ದರ್ಶನ್ ಮನೆ ಊಟದ ಅರ್ಜಿ ವಜಾ ಆಗಲು ಕಾರಣ ಇದು

ಕರ್ನಾಟಕ ಪ್ರಿಸನ್ಸ್ ಕರೆಕ್ಷನ್ ಮ್ಯಾನ್ಯುಲ್ 2021ರ ಸೆಕ್ಷನ್ 728ರ ಪ್ರಕಾರ ಕೊಲೆ ಆರೋಪಿಗೆ ಮನೆ ಊಟಕ್ಕೆ ಅವಕಾಶ ಇಲ್ಲ. ಅಲ್ಲದೆ ಜೈಲು ಅಧಿಕಾರಿಗಳು ನೀಡಿರುವ ವರದಿಯಲ್ಲಿ ಮನೆಯೂಟದ ಅವಶ್ಯಕತೆ ಕಾಣಿಸುತ್ತಿಲ್ಲ. ಜತೆಗೆ ಮನೆ ಊಟದ ಅವಶ್ಯಕತೆ ಸಂಬಂಧ ಪೂರಕವಾದ ವೈದ್ಯಕೀಯ ಪ್ರಮಾಣಪತ್ರಗಳು ಇಲ್ಲ-ಈ ಮೂರು ಅಂಶಗಳನ್ನಿಟ್ಟು ದರ್ಶನ್‌ ಅರ್ಜಿ ವಜಾಗೊಂಡಿದೆ.

ದರ್ಶನ್ ಪರ ವಕೀಲ ವಕೀಲರ ವಾದ ಏನಾಗಿತ್ತು?

ಜುಲೈ 22ರಂದು ದರ್ಶನ್ ಪರ ವಕೀಲ ವಕೀಲ ರಾಘವೇಂದ್ರ ವಾದ ಮಂಡಿಸಿ, ದರ್ಶನ್‌ಗೆ ಜೈಲು ಊಟ ಜೀರ್ಣವಾಗುತ್ತಿಲ್ಲ, ಅತಿಸಾರವಾಗುತ್ತಿದೆ. ಹೀಗಾಗಿ ಖಾಸಗಿ ಊಟ, ಹಾಸಿಗೆ ಕೆಳಲಾಗುತ್ತಿದೆ. ವಿಚಾರಣಾಧೀನ ಕೈದಿಗೆ ಮನೆಯೂಟ ಪಡೆಯಲು ಅವಕಾಶವಿದೆ. ತನಿಖೆ ಪೂರ್ಣವಾಗದ ಸಂಧರ್ಬದಲ್ಲಿ ಮನೆ ಊಟ ನೀಡಲು ಅವಕಾಶವಿದೆ. ಕರ್ನಾಟಕ ಕಾರಾಗೃಹ ಕಾಯ್ದೆ ಪ್ರಕಾರ ಸಿವಿಲ್ ಕೈದಿ ಹಾಗೂ ವಿಚಾರಣಾಧೀನ ಕೈದಿಗೆ ಸ್ವಂತ ಹಣದಲ್ಲಿ ಅಗತ್ಯ ವಸ್ತುಗಳ ಖರೀದಿಗೆ ಅವಕಾಶವಿದೆ. ಅಧಿಕಾರಿಗಳೇ ರೇಷನ್ ನೀಡಬೇಕು. ಸೆಂಟ್ರಲ್ ಕಿಚನ್‌ನಲ್ಲಿ ಅಡುಗೆ ಮಾಡಿಕೊಳ್ಳಲು ಅವಕಾಶವಿದೆ ಎಂದು ಮನವಿ ಸಲ್ಲಿಸಿದ್ದರು.

ದರ್ಶನ್ ಒಬ್ಬ ಸೆಲೆಬ್ರಿಟಿ ಅಗಿರುವುದರಿಂದ ಪ್ರಚಾರ ಸಿಗುತ್ತದೆ. ಆಗಾಗಿಯೇ ಜೈಲು ಅಧಿಕಾರಿಗಳು ಮನೆ ಊಟಕ್ಕೆ ಅವಕಾಶ ನೀಡುತ್ತಿಲ್ಲ. ಆರೋಪ ಸಾಬೀತಾಗುವವರೆಗೂ ಮುಗ್ಧನೆಂದು ಪರಿಗಣಿಸಿ ಮನೆ ಊಟ, ಹಾಸಿಗೆ ಒದಗಿಸಬೇಕೆಂದು ಹೇಳಿದ್ದರು.

ಪ್ರತಿದಿನ ಬಿರಿಯಾನಿ ತಿನ್ನಬೇಕು ಅಂದ್ರೆ ಆಗಲ್ಲ

ಇದಕ್ಕೆ ಎಸ್‌ಪಿಪಿ ಪ್ರಸನ್ನ ಕುಮಾರ್ ಪ್ರತಿವಾದ ಆರಂಭಿಸಿ, ಜೈಲು ಊಟ ಜೀರ್ಣವಾಗುತ್ತಿಲ್ಲ ಎಂದು ಹೇಳುತ್ತಿದ್ದಾರೆ. ಆದರೆ ಮೆಡಿಕಲ್ ರಿಪೋರ್ಟ್ ಕೋರ್ಟ್‌ಗೆ ಸಲ್ಲಿಸಿದ್ದೇವೆ. ನ್ಯಾಯಾಂಗ ಬಂಧನಕ್ಕೆ ಕಳುಹಿಸುವಾಗ ವೈದ್ಯಕೀಯ ಪರೀಕ್ಷೆ ಮಾಡಿಸಲಾಗಿದೆ. ಅವರಿಗೆ ಆರ್ಥೋಪೆಡಿಕ್ ಸಮಸ್ಯೆ ಇದೆ. ಅದಕ್ಕೆ ಮೊದಲು ಮೈಸೂರಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಅದನ್ನ ಮುಂದುವರಿಸಲು ಸೂಚನೆ ನೀಡಿದ್ದರು. ಈಗ ಡಯಟ್ ಪುಡ್ ಕೇಳಿದ್ದಾರೆ. ಅದಕ್ಕೆ ಸಂಬಂಧಿಸಿದಂತೆ ಜೈಲು ಮ್ಯಾನ್ಯುವಲ್ ಪ್ರಕಾರ ಏನೇನು ನೀಡಬೇಕೋ ಅದನ್ನು ನೀಡುತ್ತಿದ್ದೇವೆ. ಜೈಲು ಕೈಪಿಡಿಯಲ್ಲಿ ಮನೆ ಊಟ ಎಂಬ ಪದವೇ ಇಲ್ಲ. ಹುಷಾರಿಲ್ಲದ ವೇಳೆ ಎಕ್ಟ್ರಾ ಡಯಟ್ 30 ದಿನ ನೀಡಬಹುದು. ವಾರದಲ್ಲಿ ಒಂದು ದಿನ ಮೊಟ್ಟೆ ಹಾಗೂ ಬಾಳೆ ಹಣ್ಣು ನೀಡಬಹುದು. ಜ್ವರ ಇದ್ದಾಗ ಬಿಸಿ ನೀರು ನೀಡುತ್ತಾರೆ. ಪ್ರತಿದಿನ ಬಿರಿಯಾನಿ ತಿನ್ನಬೇಕು ಅಂದ್ರೆ ನಿಯಮದಲ್ಲಿ ಅವಕಾಶ ಇಲ್ಲ ಎಂದು ತಿಳಿಸಿದ್ದರು.

ಇದನ್ನೂ ಓದಿ: Actor Darshan: ದರ್ಶನ್‌ ಆರೋಪಮುಕ್ತನಾಗಿ ಶೀಘ್ರ ಹೊರ ಬರಲಿ; ಹಿರಿಯ ನಟಿ ಗಿರಿಜಾ ಲೋಕೇಶ್ ಹಾರೈಕೆ

ಸದ್ಯ ದರ್ಶನ್ ಮೆಡಿಕಲ್ ರಿಪೋರ್ಟ್‌ನಲ್ಲಿ ಬೆಡ್ ರೆಸ್ಟ್ ಬೇಕು ಎಂದಿದೆ. ಜೈಲು ವೈದ್ಯಾಧಿಕಾರಿಗಳು ಅಗತ್ಯವಿದ್ದರೆ ವಿಶೇಷ ಆಹಾರವನ್ನು ನೀಡಬಹುದು. ಜೈಲು ನಿಯಮ 728 ರಲ್ಲಿ ಬಟ್ಟೆ, ಹಾಸಿಗೆ ನೀಡುವ ನಿಯಮವಿದೆ. ಇದು ಕೊಲೆ ಆರೋಪಿಯನ್ನು ಹೊರತು ಪಡಿಸಿ ಬೇರೆ ಕೈದಿಗಳಿಗೆ ಅನ್ವಯವಾಗುತ್ತದೆ. ದರ್ಶನ್ ನಾನು ನಿತ್ಯ ಜಿಮ್‌ನಲ್ಲಿ ಕಸರತ್ತು ಮಾಡುತ್ತಿದ್ದೆ. ಹೀಗಾಗಿ ಜೈಲಿನಲ್ಲಿ ನೀಡುವ ಊಟದ ಜೊತೆಗೆ ಎಕ್ಟ್ರಾ ಪ್ರೋಟಿನ್ ನೀಡಬೇಕೆಂದು ಮಾನವಿ ಮಾಡಿದ್ದಾರೆ. ಪ್ರತಿ ಭಾರಿ ನಾನು ಮನೆಯಲ್ಲಿ ವ್ಯಾಯಾಮ ಮಾಡ್ತಿದ್ದೆ. ಪ್ರೋಟಿನ್ ಆಹಾರ ತಿನ್ನುತ್ತಿದ್ದೆ. ಹೀಗಾಗಿ ಮನೆ ಊಟ ಬೇಕು ಎಂದಿದ್ದಾರೆ. ದರ್ಶನ್ ಬಂಧನವಾಗೋವರೆಗೂ ವ್ಯಾಯಾಮ ಮಾಡಿಕೊಂಡಿದ್ದರು, ಈಗ ಬಂಧಿಯಾಗಿದ್ದಾರೆ. ಜೈಲಿನಲ್ಲಿದ್ದಾಗಲೂ ಎಲ್ಲ ಸೌಲಭ್ಯಗಳು ಬೇಕೆಂದರೆ ಹೇಗೆ ಎಂದು ಪ್ರಶ್ನಿಸಿದ್ದರು.

Continue Reading
Advertisement
Sundar Pichai
ದೇಶ10 mins ago

Sundar Pichai: ಗೂಗಲ್‌ ಸಿಇಒ ಸುಂದರ್‌ ಪಿಚೈಗೆ ಗೌರವ ಡಾಕ್ಟರೇಟ್‌ ಪ್ರದಾನ-ಫೋಟೋ ವೈರಲ್‌

Sai Pallavi Dating a Married Actor Who Has Two Kids
ಸಿನಿಮಾ15 mins ago

Sai Pallavi: ಮದುವೆಯಾಗಿ ಮಕ್ಕಳಿರುವ ಸಹ ನಟನೊಂದಿಗೆ ಸಾಯಿ ಪಲ್ಲವಿ ಡೇಟಿಂಗ್‌?

Nissan SUV X-TRAIL
ಆಟೋಮೊಬೈಲ್26 mins ago

Nissan SUV X-TRAIL : ನಿಸ್ಸಾನ್ ನ ಹೊಚ್ಚ ಹೊಸ 4 ಜನರೇಷನ್ ಪ್ರೀಮಿಯಂ ಅರ್ಬನ್ ಎಸ್‌ಯುವಿ ಎಕ್ಸ್-ಟ್ರಯಲ್ ಬಿಡುಗಡೆ

CM Siddaramaiah muda scam
ಪ್ರಮುಖ ಸುದ್ದಿ28 mins ago

MUDA Scam: ಮುಡಾ ಜಮೀನಿನ ಸಂಪೂರ್ಣ ದಾಖಲೆಗಳನ್ನು ತೆರೆದಿಟ್ಟ ಸಿಎಂ ಸಿದ್ದರಾಮಯ್ಯ; ಇಲ್ಲಿದೆ ವಿವರ

Vinod Raj Visited Renuka Swamy Family Gave Them 1 Lakh Rs and shares Opinion
ಸ್ಯಾಂಡಲ್ ವುಡ್33 mins ago

Actor Darshan: ರೇಣುಕಾ ಸ್ವಾಮಿ ಕುಟುಂಬ ಭೇಟಿಯಾಗಿ ಧನ ಸಹಾಯ ಮಾಡಿದ ವಿನೋದ್‌ ರಾಜ್‌ !

Viral News
Latest34 mins ago

Viral News: ಸಾಯುವ ಮುನ್ನ ವಿದ್ಯಾರ್ಥಿಗಳ ಜೀವ ಕಾಪಾಡಿದ ಶಾಲಾ ಬಸ್ ಚಾಲಕ!

Cylinder blast in Hulimavu
ಬೆಂಗಳೂರು34 mins ago

Cylinder Blast: ಅಕ್ರಮ ರೀ ಫಿಲ್ಲಿಂಗ್‌ ಅಡ್ಡೆಯಾದ ಹುಳಿಮಾವು;ಸಿಲಿಂಡರ್ ಸ್ಫೋಟಕ್ಕೆ ಪಾತ್ರೆ ಅಂಗಡಿ ಛಿದ್ರ ಛಿದ್ರ

Actor Darshan
ಕರ್ನಾಟಕ37 mins ago

Actor Darshan: ಜೈಲಲ್ಲಿ ದರ್ಶನ್ ಭೇಟಿಯಾದ ಟಾಲಿವುಡ್ ಖ್ಯಾತ ನಟ ನಾಗಶೌರ್ಯ

Maharaja Trophy Squads
ಕ್ರೀಡೆ45 mins ago

Maharaja Trophy Squads: ಹರಾಜಿನ ಬಳಿಕ ಎಲ್ಲ ತಂಡಗಳ ಆಟಗಾರರ ಪಟ್ಟಿ ಹೀಗಿದೆ

cm siddaramaiah pressmeet
ಪ್ರಮುಖ ಸುದ್ದಿ58 mins ago

MUDA Scam: ಬಿಜೆಪಿಯವರದು ಮನೆಮುರುಕ ರಾಜಕೀಯ; ಮುಡಾ ಜಮೀನಿನಲ್ಲಿ ಯಾವುದೇ ಅವ್ಯವಹಾರ ಆಗಿಲ್ಲ: ಸಿಎಂ ಸಿದ್ದರಾಮಯ್ಯ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Rain
ಮಳೆ21 hours ago

Karnataka Rain : ಮನೆಯೊಳಗೆ ನುಗ್ಗಿದ ಮಳೆ ನೀರು; ಕಾಲು ಜಾರಿ ಬಿದ್ದು ವೃದ್ಧೆ ಸಾವು

Actor Darshan
ಸ್ಯಾಂಡಲ್ ವುಡ್1 day ago

Actor Darshan: ನಟ ದರ್ಶನ್ ಇರುವ ಜೈಲು ಕೋಣೆ ಹೇಗಿದೆ?

Actor Darshan
ಸಿನಿಮಾ1 day ago

Actor Darshan : ಹೆಂಡ್ತಿ ಮಕ್ಕಳೊಟ್ಟಿಗೆ ಚೆನ್ನಾಗಿರು.. ಸಹಕೈದಿ ಜತೆಗೆ 12 ನಿಮಿಷ ಕಳೆದ ನಟ ದರ್ಶನ್‌

Actor Darshan
ಸಿನಿಮಾ1 day ago

Actor Darshan: ಆಧ್ಯಾತ್ಮದತ್ತ ವಾಲಿದ ದರ್ಶನ್‌; ಜೈಲಲ್ಲಿ ಹೇಗಿದೆ ಗೊತ್ತಾ ನಟನ ಬದುಕು

karnataka Weather Forecast
ಮಳೆ2 days ago

Karnataka Weather : ರಭಸವಾಗಿ ಸುರಿಯುವ ಮಳೆ; 50 ಕಿ.ಮೀ ವೇಗದಲ್ಲಿ ಬೀಸುತ್ತೆ ಗಾಳಿ

karnataka weather Forecast
ಮಳೆ3 days ago

Karnataka Weather : ರಾಜ್ಯದಲ್ಲಿ ಮುಂದುವರಿದ ಮಳೆ ಅವಾಂತರ; ನಾಳೆಯೂ ಇರಲಿದೆ ಅಬ್ಬರ

Udupi News
ಉಡುಪಿ3 days ago

Udupi News : ಹಳೆ ಲಾರಿ ಚಾಸ್ಸಿಯಲ್ಲೇ ಕಿರು ಸೇತುವೆ ನಿರ್ಮಾಣ! ಬೈಂದೂರು ಶಾಸಕರ ಪರಿಕಲ್ಪನೆಗೆ ಜನರು ಫಿದಾ

murder case
ರಾಮನಗರ3 days ago

Murder Case : ರಾಮನಗರದಲ್ಲೊಂದು ಪೈಶಾಚಿಕ ಕೃತ್ಯ; ಅತ್ಯಾಚಾರವೆಸಗಿ 4 ವರ್ಷದ ಬಾಲಕಿಯನ್ನು ಕೊಂದ ದುಷ್ಟ

karnataka Rain
ಮಳೆ6 days ago

Karnataka Rain : ಭಾರಿ ಮಳೆಗೆ ಮನೆ ಗೋಡೆ ಕುಸಿತ; ಕೊಟ್ಟಿಗೆಯಲ್ಲಿದ್ದ ಜಾನುವಾರುಗಳು ಸಾವು

karnataka Rain
ಮಳೆ6 days ago

Karnataka Rain : ಹಳ್ಳ ದಾಟಲು ಹೋಗಿ ನೀರುಪಾಲಾದ ಜಾನುವಾರು; ಬಿರುಗಾಳಿಗೆ ಕಳಚಿದ ವಿಂಡ್‌ ಫ್ಯಾನ್‌

ಟ್ರೆಂಡಿಂಗ್‌