Kargil Vijay Diwas 2024: "ಪಾಕಿಸ್ತಾನ ತಪ್ಪುಗಳಿಂದ ಪಾಠ ಕಲಿತಿಲ್ಲ"; ಪ್ರಧಾನಿ ಮೋದಿ ಟಾಂಗ್‌ - Vistara News

ದೇಶ

Kargil Vijay Diwas 2024: “ಪಾಕಿಸ್ತಾನ ತಪ್ಪುಗಳಿಂದ ಪಾಠ ಕಲಿತಿಲ್ಲ”; ಪ್ರಧಾನಿ ಮೋದಿ ಟಾಂಗ್‌

Kargil Vijay Diwas 2024: ಭಯೋತ್ಪಾದನೆ ಮೂಲಕ ಭಾರತವನ್ನು ಗೆಲ್ಲುವ ಪಾಕಿಸ್ತಾನದ ಉದ್ದೇಶ ಎಂದಿಗೂ ಯಶಸ್ವಿ ಆಗುವುದಿಲ್ಲ ಎಂದು ಖಡಕ್‌ ವಾರ್ನಿಂಗ್‌ ಕೊಟ್ಟಿದ್ದಾರೆ. ಇನ್ನು ಇದೇ ವೇಳ ಅಗ್ನಿಪಥ್‌ ಯೋಜನೆ ಬಗ್ಗೆ ಪ್ರತಿಕ್ರಿಯಿಸಿದ್ದು, ಸೇನೆಯ ಈ ಸುಧಾರಣೆಯಲ್ಲೂ ಕೆಲವರು ತಮ್ಮ ವೈಯಕ್ತಿಕ ಲಾಭಕ್ಕಾಗಿ ಸುಳ್ಳಿನ ರಾಜಕಾರಣ ಮಾಡುತ್ತಿದ್ದಾರೆ ಎಂದು ಅವರು ವಿರೋಧ ಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸಿದರು.

VISTARANEWS.COM


on

Kargil Vijay Diwas 2024
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಲಡಾಖ್‌: ಕಾರ್ಗಿಲ್‌ ವಿಜಯ ದಿವಸ(Kargil Vijay Diwas 2024)ಕ್ಕೆ ಇಂದಿಗೆ 25ವರ್ಷ ಸಂದಿದೆ. ಈ ಹಿನ್ನೆಲೆ ಪ್ರಧಾನಿ ನರೇಂದ್ರ ಮೋದಿ ಡ್ರಾಸ್‌ನಲ್ಲಿರುವ ಕಾರ್ಗಿಲ್‌ ಯುದ್ಧ ಸ್ಮಾರಕ(Kargil War Memorial)ಕ್ಕೆ ಭೇಟಿ ಕೊಟ್ಟು ಹುತಾತ್ಮ ಯೋಧರಿಗೆ ಗೌರವ ನಮನ ಸಲ್ಲಿಸಿದ್ದಾರೆ. ಇದೇ ವೇಳೆ ಮಾತನಾಡಿದ ಅವರು, ಕಳೆದ ಯುದ್ಧಗಳಲ್ಲಿ ಸೋಲುಂಡಿದ್ದರೂ ಬುದ್ದಿ ಬಾರದ ಪಾಕಿಸ್ತಾನ ಭಯೋತ್ಪಾದನೆಗೆ ಉತ್ತೇಜನ ನೀಡುತ್ತಿದೆ. ಇದುವರೆಗೆ ಪಾಕಿಸ್ತಾನ ತನ್ನ ತಪ್ಪಿನ ಪಾಠ ಕಲಿತಿಲ್ಲ ಎಂದು ಗುಡುಗಿದ್ದಾರೆ.

ಭಯೋತ್ಪಾದನೆ ಮೂಲಕ ಭಾರತವನ್ನು ಗೆಲ್ಲುವ ಪಾಕಿಸ್ತಾನದ ಉದ್ದೇಶ ಎಂದಿಗೂ ಯಶಸ್ವಿ ಆಗುವುದಿಲ್ಲ ಎಂದು ಖಡಕ್‌ ವಾರ್ನಿಂಗ್‌ ಕೊಟ್ಟಿದ್ದಾರೆ. ಇನ್ನು ಇದೇ ವೇಳ ಅಗ್ನಿಪಥ್‌ ಯೋಜನೆ ಬಗ್ಗೆ ಪ್ರತಿಕ್ರಿಯಿಸಿದ್ದು, ಸೇನೆಯ ಈ ಸುಧಾರಣೆಯಲ್ಲೂ ಕೆಲವರು ತಮ್ಮ ವೈಯಕ್ತಿಕ ಲಾಭಕ್ಕಾಗಿ ಸುಳ್ಳಿನ ರಾಜಕಾರಣ ಮಾಡುತ್ತಿದ್ದಾರೆ ಎಂದು ಅವರು ವಿರೋಧ ಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸಿದರು.

ಅಗ್ನಿಪಥ್‌ ಯೋಜನೆ ಬಗ್ಗೆ ಆರೋಪಕ್ಕೆ ಪ್ರಧಾನಿ ತಿರುಗೇಟು

ಸೈನ್ಯವನ್ನು ನಿರಂತರವಾಗಿ ಯುದ್ಧಕ್ಕೆ ಸಜ್ಜುಗೊಳಿಸುವುದು ಅಗ್ನಿಪಥ್‌ನ ಗುರಿಯಾಗಿದೆ. ದುರದೃಷ್ಟವಶಾತ್, ಕೆಲವರು ರಾಷ್ಟ್ರೀಯ ಭದ್ರತೆಗೆ ಸಂಬಂಧಿಸಿದ ಇಂತಹ ಸೂಕ್ಷ್ಮ ವಿಷಯವನ್ನು ರಾಜಕೀಯದ ವಿಷಯವನ್ನಾಗಿ ಮಾಡಿದ್ದಾರೆ. ಸೇನೆಯ ಈ ಸುಧಾರಣೆಯಲ್ಲೂ ಕೆಲವರು ತಮ್ಮ ವೈಯಕ್ತಿಕ ಲಾಭಕ್ಕಾಗಿ ಸುಳ್ಳಿನ ರಾಜಕಾರಣ ಮಾಡುತ್ತಿದ್ದಾರೆ. ಸೇನೆಯಲ್ಲಿ ಸಾವಿರಾರು ಕೋಟಿ ಹಗರಣಗಳನ್ನು ಮಾಡಿ ನಮ್ಮ ಸೇನೆಯನ್ನು ದುರ್ಬಲಗೊಳಿಸಿದ್ದು ಇದೇ ಜನರು ಎಂದು ಕಿಡಿ ಕಾರಿದರು.

ಇದನ್ನೂ ಓದಿ: Kargil Vijay Diwas 2024: ದೇಶಕ್ಕಾಗಿ ಪ್ರಾಣ ತ್ಯಾಗ ಮಾಡಲು ಕ್ಷಣವೂ ಯೋಚಿಸದ ಈ ವೀರ ಯೋಧರಿಗೊಂದು ಸಲಾಮ್

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Kargil Vijay Diwas 2024: ಕಾರ್ಗಿಲ್‌ ಯುದ್ಧಭೂಮಿಗೆ ಅಂದೇ ಕಾಲಿಟ್ಟಿದ್ರು ಮೋದಿ- ಹಳೆಯ ಫೊಟೋ ವೈರಲ್‌

Kargil Vijay Diwas 2024: 1999 ರ ಯುದ್ಧದ ಸಮಯದಲ್ಲಿ, ಆಗ ಬಿಜೆಪಿಯ ಪ್ರಧಾನ ಕಾರ್ಯದರ್ಶಿಯಾಗಿದ್ದ ಮೋದಿ ಅವರು ಸೈನಿಕರಿಗೆ ಅಗತ್ಯ ವಸ್ತುಗಳನ್ನು ಸಾಗಿಸುತ್ತಿದ್ದರು. ಒಮ್ಮೆ, ಅವರು ಅಗತ್ಯ ಸಾಮಗ್ರಿಗಳೊಂದಿಗೆ Mi-17 ಹೆಲಿಕಾಪ್ಟರ್ ಅನ್ನು ಹತ್ತಿ ಯುದ್ಧಭೂಮಿಯನ್ನು ತಲುಪಿದ್ದರು.

VISTARANEWS.COM


on

Kargil Vijay Diwas 2024
Koo

ಲಡಾಖ್‌: ಕಾರ್ಗಿಲ್‌ ವಿಜಯ ದಿವಸ(Kargil Vijay Diwas 2024)ಕ್ಕೆ ಇಂದಿಗೆ 25ವರ್ಷ ಸಂದಿದೆ. ಈ ಹಿನ್ನೆಲೆ ಪ್ರಧಾನಿ ನರೇಂದ್ರ ಮೋದಿ(PM Narendra Modi) ಡ್ರಾಸ್‌ನಲ್ಲಿರುವ ಕಾರ್ಗಿಲ್‌ ಯುದ್ಧ ಸ್ಮಾರಕ(Kargil War Memorial)ಕ್ಕೆ ಭೇಟಿ ಕೊಟ್ಟು ಹುತಾತ್ಮ ಯೋಧರಿಗೆ ಗೌರವ ನಮನ ಸಲ್ಲಿಸಿದ್ದಾರೆ. ಇದರ ಬೆನ್ನಲ್ಲೇ ಪ್ರಧಾನಿ ಮೋದಿಯ ಹಳೆಯ ಫೊಟೋಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

ಮೋದಿ ಆರ್ಕೈವ್‌ ಎಂಬ ಎಕ್ಸ್‌ ಖಾತೆ ʼಎ ಪಿಲಿಗ್ರಿಮೇಜ್‌ ಲೈಫ್‌ಟೈಂʼ ಎಂಬ ಶೀರ್ಷಿಕೆಯಲ್ಲಿ ಕಾರ್ಗಿಲ್‌ ಯುದ್ಧದ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಭೇಟಿಯ ಫೋಟೋ, ವಿಡಿಯೋ ಮತ್ತು ಆಡಿಯೋ ರೆಕಾರ್ಡಿಂಗ್‌ಗಳನ್ನು ಹಂಚಿಕೊಳ್ಳಲಾಗಿದೆ. 1999 ರ ಯುದ್ಧದ ಸಮಯದಲ್ಲಿ, ಆಗ ಬಿಜೆಪಿಯ ಪ್ರಧಾನ ಕಾರ್ಯದರ್ಶಿಯಾಗಿದ್ದ ಮೋದಿ ಅವರು ಸೈನಿಕರಿಗೆ ಅಗತ್ಯ ವಸ್ತುಗಳನ್ನು ಸಾಗಿಸುತ್ತಿದ್ದರು. ಒಮ್ಮೆ, ಅವರು ಅಗತ್ಯ ಸಾಮಗ್ರಿಗಳೊಂದಿಗೆ Mi-17 ಹೆಲಿಕಾಪ್ಟರ್ ಅನ್ನು ಹತ್ತಿ ಯುದ್ಧಭೂಮಿಯನ್ನು ತಲುಪಿದ್ದರು.

ಸೈನಿಕರನ್ನುದ್ದೇಶಿಸಿ ಮಾತನಾಡುವಾಗ ಸೈನಿಕರು ಅಂದಿನ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರಿಗೆ ಬಲಿಷ್ಠ ನಾಯಕತ್ವದ ಮನ್ನಣೆ ನೀಡಿದ್ದಾರೆ ಎಂದು ತಿಳಿದು ಬಂದಿದೆ. ಅವರಿಗೆ, ಇದು ಎಷ್ಟು ಪ್ರಬಲವಾದ ರಾಜಕೀಯ ಇಚ್ಛಾಶಕ್ತಿ ಮತ್ತು ನಾಯಕತ್ವವು ಸೈನಿಕರನ್ನು ಧೈರ್ಯಶಾಲಿಗಳಾಗಿರಲು ಮತ್ತು ದೊಡ್ಡ ತ್ಯಾಗಗಳನ್ನು ಮಾಡಲು ಪ್ರೇರೇಪಿಸುತ್ತದೆ ಎಂಬುದನ್ನು ತೋರಿಸಿದೆ. ನಂತರ ಅವರು ಯುದ್ಧದಲ್ಲಿ ಗಾಯಗೊಂಡ ಸೈನಿಕರನ್ನು ಭೇಟಿಯಾದರು, ಅದು ಸೈನಿಕರ ಆತ್ಮವಿಶ್ವಾಸ ಕುಗ್ಗದಂತೆ ಕಾಪಾಡಿತು. ಅದರ ಪರಿಣಾಮವಾಗಿ ಟೈಗರ್ ಹಿಲ್ ವಿಜಯೋತ್ಸವವನ್ನು ಆಚರಿಸಿತು.

ಇದಲ್ಲದೆ, ಪಾಕಿಸ್ತಾನದ ಬಗ್ಗೆ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿಯವರ ಮೌನವನ್ನು ಮೋದಿ ಹೇಗೆ ವಿಶೇಷವಾಗಿ ಪ್ರಶ್ನಿಸಿದ್ದಾರೆ ಮತ್ತು ರಾಷ್ಟ್ರೀಯ ಭದ್ರತೆಗೆ ಸಂಬಂಧಿಸಿದ ವಿಷಯಗಳನ್ನು ರಾಜಕೀಯಗೊಳಿಸಲು ಪ್ರತಿಪಕ್ಷಗಳು ಹೇಗೆ ಹಿಂಜರಿಯುವುದಿಲ್ಲ ಎಂಬುದನ್ನೂ ಎಕ್ಸ್‌ನ ಪೋಸ್ಟ್‌ನಲ್ಲಿ ವಿವರಿಸಲಾಗಿದೆ.

1999 ರಲ್ಲಿ ಸಾಧನಾ ಮ್ಯಾಗಜೀನ್‌ಗೆ ಪ್ರಧಾನಿ ಮೋದಿ ನೀಡಿದ ಸಂದರ್ಶನದಲ್ಲಿ, ಅಂತಹ ನಿರ್ಣಾಯಕ ಸಮಯದಲ್ಲಿ ರಾಜಕೀಯ ಹಿತಾಸಕ್ತಿಗಳನ್ನು ಅನುಸರಿಸುವುದು ಎಷ್ಟು ದುರದೃಷ್ಟಕರ ಎಂದು ಅವರು ಸೂಚಿಸಿದರು. 1971 ರ ಯುದ್ಧದ ಸಮಯದಲ್ಲಿ ಅಟಲ್ ಜಿ ಅವರು ವಿರೋಧ ಪಕ್ಷದಲ್ಲಿದ್ದರೂ, ಇಂದಿರಾ ಗಾಂಧಿಯನ್ನು ಹೇಗೆ ಸಂಪೂರ್ಣವಾಗಿ ಬೆಂಬಲಿಸಿದರು, ನಿಜವಾದ ರಾಷ್ಟ್ರೀಯ ಏಕತೆಯನ್ನು ತೋರಿಸಿದರು ಎಂಬುದನ್ನು ಅವರು ಎಲ್ಲರಿಗೂ ನೆನಪಿಸಿದರು.

ಇದನ್ನೂ ಓದಿ: Kargil Vijay Diwas 2024: “ಪಾಕಿಸ್ತಾನ ತಪ್ಪುಗಳಿಂದ ಪಾಠ ಕಲಿತಿಲ್ಲ”; ಪ್ರಧಾನಿ ಮೋದಿ ಟಾಂಗ್‌

Continue Reading

ದೇಶ

News Rules: ಗೂಗಲ್‌ ಮ್ಯಾಪ್‌ ಶುಲ್ಕದಿಂದ LPG ದರದವರೆಗೆ; ಆ.1ರಿಂದ ಏನೇನು ಬದಲಾವಣೆ?

News Rules:ಎಲ್ಪಿಜಿ ಗ್ಯಾಸ್ ಸಿಲಿಂಡರ್ ದರಗಳನ್ನು ಪ್ರತಿ ತಿಂಗಳ ಮೊದಲ ದಿನದಂದು ನಿಗದಿಪಡಿಸಲಾಗುತ್ತದೆ. ಸರ್ಕಾರ ಕಳೆದ ತಿಂಗಳು 19 ಕೆಜಿ ವಾಣಿಜ್ಯ ಸಿಲಿಂಡರ್ ಬೆಲೆಯನ್ನು ಕಡಿಮೆ ಮಾಡಿದೆ. ಈ ಬಾರಿಯೂ ಸಿಲಿಂಡರ್ ಬೆಲೆಯನ್ನು ಸರ್ಕಾರ ಕಡಿಮೆ ಮಾಡುತ್ತದೆ ಎಂದು ಊಹಿಸಲಾಗಿದೆ.

VISTARANEWS.COM


on

News Rules
Koo

ಹೊಸದಿಲ್ಲಿ: ಆ.1ರಿಂದ ಕೆಲವು ಹೊಸ ನಿಯಮಗಳು(News Rules) ಜಾರಿಗೆ ಬರಲಿವೆ. ಹೊಸ ತಿಂಗಳು ಬಂದಾಗಲೆಲ್ಲಾ ಕೆಲವು ಹೊಸ ನಿಯಮಗಳು ಜಾರಿಗೆ ಬರುತ್ತವೆ. ಪ್ರತಿ ತಿಂಗಳು ಯಾವುದಾದರೂ ಹಣಕಾಸು ನಿಯಮಗಳು ಬದಲಾಗುತ್ತಿರುತ್ತವೆ. ಅವು ನೇರವಾಗಿ ಜನಸಾಮಾನ್ಯರ ಮೇಲೆ ಪರಿಣಾಮ ಬೀರುತ್ತವೆ. ಮುಂದಿನ ತಿಂಗಳು, ದೇಶದ ಅತಿದೊಡ್ಡ ಖಾಸಗಿ ವಲಯದ ಸಾಲದಾತ ಎಚ್‌ಡಿಎಫ್‌ಸಿ ಬ್ಯಾಂಕ್ ತನ್ನ ಕ್ರೆಡಿಟ್ ಕಾರ್ಡ್ ನಿಯಮಗಳನ್ನು ಮಾರ್ಪಡಿಸುತ್ತದೆ ಮತ್ತು ಗೂಗಲ್ ಭಾರತದಲ್ಲಿ ಗೂಗಲ್ ನಕ್ಷೆ(Google Map)ಗಳ ಶುಲ್ಕವನ್ನು ಸಹ ಬದಲಾಯಿಸುತ್ತದೆ. ಈ ಹೊಸ ನಿಯಮಗಳು 1 ಆಗಸ್ಟ್ 2024 ರಂದು ಜಾರಿಗೆ ಬರುತ್ತವೆ. ಮುಂದಿನ ತಿಂಗಳು ಬದಲಾಗುವ ವಿಷಯಗಳನ್ನು ಕೆಳಗೆ ನೀಡಲಾಗಿದೆ.

ಎಲ್‌ಪಿಜಿ ದರ

ಎಲ್ಪಿಜಿ ಗ್ಯಾಸ್ ಸಿಲಿಂಡರ್ ದರಗಳನ್ನು ಪ್ರತಿ ತಿಂಗಳ ಮೊದಲ ದಿನದಂದು ನಿಗದಿಪಡಿಸಲಾಗುತ್ತದೆ. ಸರ್ಕಾರ ಕಳೆದ ತಿಂಗಳು 19 ಕೆಜಿ ವಾಣಿಜ್ಯ ಸಿಲಿಂಡರ್ ಬೆಲೆಯನ್ನು ಕಡಿಮೆ ಮಾಡಿದೆ. ಈ ಬಾರಿಯೂ ಸಿಲಿಂಡರ್ ಬೆಲೆಯನ್ನು ಸರ್ಕಾರ ಕಡಿಮೆ ಮಾಡುತ್ತದೆ ಎಂದು ಊಹಿಸಲಾಗಿದೆ. ಸಿಲಿಂಡರ್‌ ದರದಲ್ಲಿ ಗಣನೀಯ ಬದಲಾವಣೆಯಾಗುವ ಸಾಧ್ಯತೆ ಇದೆ.

ಗೂಗಲ್‌ ಮ್ಯಾಪ್‌ ಶುಲ್ಕ ಏರಿಕೆ

Google Maps ಭಾರತದಲ್ಲಿನ ತನ್ನ ನಿಯಮಗಳಿಗೆ ಗಮನಾರ್ಹ ಬದಲಾವಣೆಗಳನ್ನು ಮಾಡಿದೆ, ಇದು ಆಗಸ್ಟ್ 1, 2024 ರಿಂದ ದೇಶಾದ್ಯಂತ ಅನ್ವಯಿಸುತ್ತದೆ. ಕಂಪನಿಯು ಭಾರತದಲ್ಲಿ ತನ್ನ ಸೇವೆಗಳ ಶುಲ್ಕವನ್ನು 70% ವರೆಗೆ ಕಡಿಮೆ ಮಾಡಿದೆ. ಹೆಚ್ಚುವರಿಯಾಗಿ, ಗೂಗಲ್ ನಕ್ಷೆಗಳು ಈಗ ತನ್ನ ಸೇವೆಗಳಿಗೆ ಡಾಲರ್‌ಗಳಿಗಿಂತ ಭಾರತೀಯ ರೂಪಾಯಿಗಳಲ್ಲಿ ಶುಲ್ಕ ವಿಧಿಸುತ್ತವೆ. ಆದಾಗ್ಯೂ, ಈ ಬದಲಾವಣೆಯು ಸಾಮಾನ್ಯ ಬಳಕೆದಾರರ ಮೇಲೆ ಯಾವುದೇ ಹೆಚ್ಚುವರಿ ಶುಲ್ಕವನ್ನು ವಿಧಿಸದ ಕಾರಣ ಅವರ ಮೇಲೆ ಪರಿಣಾಮ ಬೀರುವುದಿಲ್ಲ.

HDFC ಬ್ಯಾಂಕ್‌ ಕ್ರೆಡಿಟ್‌ ಕಾರ್ಡ್‌ ನಿಯಮ

ಬಾಡಿಗೆ ಪಾವತಿಸಲು CRED, Cheq, MobiKwik, ಫ್ರೀಚಾರ್ಜ್ ಮತ್ತು ಇತರ ರೀತಿಯ ಸೇವೆಗಳನ್ನು ಬಳಸುವ ಗ್ರಾಹಕರಿಗೆ ವಹಿವಾಟಿನ ಮೊತ್ತದ 1% ಶುಲ್ಕ ವಿಧಿಸಲಾಗುತ್ತದೆ, ಇದನ್ನು ಪ್ರತಿ ವಹಿವಾಟಿಗೆ 3,000 ರೂ.ಗಳಿಗೆ ನಿರ್ಬಂಧಿಸಲಾಗುತ್ತದೆ.

ಯುಟಿಲಿಟಿ ಶುಲ್ಕ

ಯುಟಿಲಿಟಿ ಮತ್ತು ಬಾಡಿಗೆ ವಹಿವಾಟುಗಳ ಮೇಲೆ ಆಗಸ್ಟ್ 1, 2024 ರಿಂದ ಜಾರಿಗೆ ಬರುವಂತೆ ಈ ಕೆಳಗಿನ ಶುಲ್ಕಗಳನ್ನು ವಿಧಿಸಲು ನಿರ್ಧರಿಸಲಾಗಿದೆ: ಇದು ₹ 50,000 ಕ್ಕಿಂತ ಹೆಚ್ಚಿನ ಯುಟಿಲಿಟಿ ಪಾವತಿಗಳ ಮೇಲೆ 1% ಅನ್ನು ವಿಧಿಸುತ್ತದೆ, ಗರಿಷ್ಠ ₹ 3,000 ಕ್ಕೆ ಒಳಪಟ್ಟಿರುತ್ತದೆ. ವಿಮೆ ಮತ್ತು ನೇರ ಶಾಲಾ/ಕಾಲೇಜು ಪಾವತಿಗಳು ಈ ವ್ಯಾಪ್ತಿಯಿಂದ ಹೊರಗಿದೆ. ಬ್ಯಾಂಕ್ ವಿಳಂಬ ಪಾವತಿ ಶುಲ್ಕಗಳು ಮತ್ತು ಸುಲಭ-EMI ಶುಲ್ಕಗಳನ್ನು ಕೂಡ ಹೆಚ್ಚಿಸುತ್ತದೆ.

ಇದನ್ನೂ ಓದಿ: Income Tax Return: ಹಳೆಯ ತೆರಿಗೆ ಪದ್ದತಿ ಕೊನೆಯಾಗುತ್ತಾ? CBDT ಅಧ್ಯಕ್ಷ ಹೇಳೋದೇನು?

Continue Reading

ಕರ್ನಾಟಕ

BJP Protest: ಸಂಸತ್ ಬಳಿ ರಾಜ್ಯ ಬಿಜೆಪಿ ಸಂಸದರ ಪ್ರತಿಭಟನೆ; ವಾಲ್ಮೀಕಿ ನಿಗಮ ಅಕ್ರಮ, ಮುಡಾ ಹಗರಣ ಸಿಬಿಐ ತನಿಖೆಗೆ ನೀಡಲು ಆಗ್ರಹ

BJP Protest: ನವ ದೆಹಲಿಯ ನೂತನ ಸಂಸತ್ ಭವನದ ಮಕರ ದ್ವಾರದ ಬಳಿ ನಡೆದ ಪ್ರತಿಭಟನೆಯಲ್ಲಿ ರಾಜ್ಯದ ಬಿಜೆಪಿ ಸಂಸದರಾದ ಬಸವರಾಜ್ ಬೊಮ್ಮಾಯಿ, ಜಗದೀಶ್ ಶೆಟ್ಟರ್, ವಿಶ್ವೇಶ್ವರ ಹೆಗಡೆ ಕಾಗೇರಿ, ಯಧುವೀರ್ ಒಡೆಯರ್, ಡಾ. ಮಂಜುನಾಥ್ ಮತ್ತಿತರರು ಭಾಗವಹಿಸಿದ್ದರು.

VISTARANEWS.COM


on

BJP Protest
Koo

ನವ ದೆಹಲಿ: ವಾಲ್ಮೀಕಿ ನಿಗಮ ಅಕ್ರಮ ಮತ್ತು ಮುಡಾ ಹಗರಣವನ್ನು ಸಿಬಿಐ ತನಿಖೆಗೆ ವಹಿಸಬೇಕು ಹಾಗೂ ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಸಂಸತ್ ಆವರಣದಲ್ಲಿ ರಾಜ್ಯದ ಬಿಜೆಪಿ ಸಂಸದರು ಶುಕ್ರವಾರ ಪ್ರತಿಭಟನೆ (BJP Protest) ನಡೆಸಿದರು.

ನೂತನ ಸಂಸತ್ ಭವನದ ಮಕರ ದ್ವಾರದ ಬಳಿ ನಡೆದ ಪ್ರತಿಭಟನೆಯಲ್ಲಿ ಬಿಜೆಪಿ ಸಂಸದರಾದ ಬಸವರಾಜ್ ಬೊಮ್ಮಾಯಿ, ಜಗದೀಶ್ ಶೆಟ್ಟರ್, ಗೋವಿಂದ ಕಾರಜೋಳ, ಪಿ.ಸಿ. ಮೋಹನ್, ಬಿ.ವೈ ರಾಘವೇಂದ್ರ, ವಿಶ್ವೇಶ್ವರ ಹೆಗಡೆ ಕಾಗೇರಿ, ಯಧುವೀರ್ ಒಡೆಯರ್, ಡಾ. ಮಂಜುನಾಥ್, ಕ್ಯಾ. ಬ್ರಿಜೇಶ್ ಚೌಟಾ, ರಮೇಶ್ ಜಿಗಜಿಣಗಿ, ಪಿಸಿ ಗದ್ದಿಗೌಡರ್, ಜೆಡಿಎಸ್‌ ಸಂಸದ ಮಲ್ಲೇಶ್ ಬಾಬು, ರಾಜ್ಯಸಭಾ ಸದಸ್ಯರಾದ ಜಗ್ಗೇಶ್, ಈರಣ್ಣ ಕಡಾಡಿ, ನಾರಾಯಣ ಸಾ ಭಾಂಡಗೆ, ಲೆಹರ್ ಸಿಂಗ್ ಸೇರಿ ಹಲವರು ಭಾಗಿಯಾಗಿದ್ದರು.

ರಾಜ್ಯಸಭೆಯಲ್ಲಿ ಪ್ರತಿಧ್ವನಿಸಿದ ವಾಲ್ಮೀಕಿ ಹಗರಣ

ರಾಜ್ಯಸಭೆಯಲ್ಲೂ ವಾಲ್ಮೀಕಿ ಹಗರಣ ಪ್ರತಿಧ್ವನಿಸಿದೆ. ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಅವರು ಈ ಬಗ್ಗೆ ಪ್ರಸ್ತಾಪ ಮಾಡಿದ್ದು, ಕಾಂಗ್ರೆಸ್ ಸದಸ್ಯರಿಂದ ತೀವ್ರ ಆಕ್ಷೇಪ ವ್ಯಕ್ತವಾಗಿದೆ. ಇದೇ ವಿಚಾರವಾಗಿ ಮಾತನಾಡಲು ನಮಗೂ ಅವಕಾಶ ಕೊಡಿ ಎಂದು ಕಾಂಗ್ರೆಸ್ ಸದಸ್ಯರು ಪಟ್ಟುಹಿಡಿದಿದ್ದಾರೆ.

ಪರಿಶಿಷ್ಟ ಪಂಗಡಗಳ ಕಲ್ಯಾಣಕ್ಕಾಗಿ ಮೀಸಲಿಟ್ಟ ಹಣ ದುರುಪಯೋಗ ಆಗಿದೆ ಎಂದು ಕಡಾಡಿ ಕಿಡಿಕಾರಿದರು. ಕರ್ನಾಟಕದ ಅಭಿವೃದ್ಧಿ ಇಟ್ಟ ಹಣವನ್ನು ಹಾಡ ಹಗಲೇ ಲೂಟಿ ಮಾಡಿದ್ದಾರೆ. 187 ಕೋಟಿ ತೆಲಂಗಾಣ ಚುನಾವಣೆಗೆ ಬಳಕೆ ಮಾಡಲಾಗಿದೆ. ಇದನ್ನು ರಾಜಕೀಯ ಮಾಡಲು ಕಾಂಗ್ರೆಸ್ ಹೊರಟಿದೆ. ಹಾಗಾಗಿ ಈ ಸದನ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಬೇಕು ಎಂದು ಕಡಾಡಿ ಆಗ್ರಹಿಸಿದರು. ಈ ವೇಳೆ ಆಸನದದಿಂದ ಎದ್ದು ಕಾಂಗ್ರೆಸ್ ಸದಸ್ಯರು ತೀವ್ರ ಆಕ್ಷೇಪ ವ್ಯಕ್ತಪಡಿಸಿದರು.

ನಿತ್ಯ ಒಂದು ಅವ್ಯವಹಾರ ಹೊರ ಬರುತ್ತಿದೆ: ಈರಣ್ಣ ಕಡಾಡಿ

ನವದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ, ಕಾಂಗ್ರೆಸ್ ಅಧಿಕಾರಕ್ಕೆ ಬಂದಮೇಲೆ ನಿತ್ಯ ಒಂದು ಅವ್ಯವಹಾರ ಹೊರ ಬರುತ್ತಿದೆ. ಗ್ಯಾರಂಟಿ ಯೋಜನೆಗಳಿಗೆ ಬೇರೆ ಬೇರೆ ಇಲಾಖೆ ಹಣ ಬಳಕೆಯಾಗಿದೆ. ವಾಲ್ಮೀಕಿ ನಿಗಮ ಮಂಡಳಿ ಹಣವನ್ನು ದುರ್ಬಳಕೆ ಮಾಡಿಕೊಂಡಿದೆ. ಶೋಷಿತ ಜನಾಂಗದ ಹಣವನ್ನು ಚುನಾವಣೆ ಬಳಕೆಗೆ ಬಳಸಿದೆ. ಮುಡಾದಲ್ಲಿ ಸಿಎಂ ಕುಟುಂಬಸ್ಥರಿಂದ ಅಕ್ರಮವಾಗಿದೆ. ಶೋಷಿತರ ರಕ್ಷಣೆ ಹೆಸರಿನಲ್ಲಿ ಅಧಿಕಾರಕ್ಕೆ ಬಂದು ಅವರ ಹಣ ಕೊಳ್ಳೆ‌ ಹೊಡೆಯುತ್ತಿದ್ದಾರೆ ಎಂದು ಕಿಡಿಕಾರಿದರು.

ಇದನ್ನೂ ಓದಿ | MUDA Scam: ಮುಡಾ ಜಮೀನಿನ ಸಂಪೂರ್ಣ ದಾಖಲೆಗಳನ್ನು ತೆರೆದಿಟ್ಟ ಸಿಎಂ ಸಿದ್ದರಾಮಯ್ಯ; ಇಲ್ಲಿದೆ ವಿವರ

ಹಣ ದುರುಪಯೋಗ ಬಗ್ಗೆ ಚರ್ಚಿಸಲು ಕಾಂಗ್ರೆಸ್ ಸಿದ್ಧವಿಲ್ಲ. ಕಾಂಗ್ರೆಸ್ ಆಕ್ಷೇಪ ವ್ಯಕ್ತಪಡಿಸಿ ಚರ್ಚೆ ಆಗದಂತೆ ನೋಡಿಕೊಂಡಿದೆ. ಬಿಜೆಪಿ ನಿರಂತರ ಹೋರಾಟ ಮಾಡುತ್ತಿದೆ. ರಾಜ್ಯಸಭೆ ಮತ್ತು ಲೋಕಸಭೆಯಲ್ಲಿ ಸಿಬಿಐ ತನಿಖೆಗೆ ಆಗ್ರಹಿಸಿದ್ದೇವೆ. ಎಐಸಿಸಿಗೂ ಕರ್ನಾಟಕದಿಂದ ಹಣ ಹೋಗಿದೆ ಎಂದು ಜನರು ಮಾತನಾಡುತ್ತಿದ್ದಾರೆ, ಇದರಿಂದ ಹೊರ ಬರಲು ಸಿಎಂ ರಾಜೀನಾಮೆ ‌ನೀಡಬೇಕು ಎಂದು ಆಗ್ರಹಿಸಿದರು.

Continue Reading

Latest

Ram Mandir Watch: 34 ಲಕ್ಷ ರೂ.ಗೆ ಮಾರಾಟವಾಯಿತು ʼರಾಮ ಜನ್ಮಭೂಮಿʼ ಸ್ಪೆಷಲ್‌ ವಾಚ್!

Ram Mandir Watch: ಸ್ವಿಸ್ ವಾಚ್ ತಯಾರಕ ಕಂಪನಿಯೊಂದು ರಾಮ ಜನ್ಮಭೂಮಿ ಲಿಮಿಟೆಡ್ ಎಡಿಷನ್ ವಾಚ್ ಅನ್ನು ಬಿಡುಗಡೆ ಮಾಡಿದೆ. ಈ ವಾಚ್ ಎರಡು ಆವೃತ್ತಿಗಳಲ್ಲಿ ಬರುತ್ತದೆ. ಇದೀಗ ಈ ವಾಚ್ 34 ಲಕ್ಷ ರೂ.ಗೆ ಮಾರಾಟವಾಗಿದ್ದು, ಇದು ಈಗ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಈ ವಾಚ್‌ನಲ್ಲಿ ಮುಳ್ಳು 9 ಗಂಟೆಗೆ ಬಂದಾಗ ರಾಮ ಮಂದಿರವನ್ನು ತೋರಿಸಿದರೆ, 6 ಗಂಟೆಗೆ “ಜೈ ಶ್ರೀ ರಾಮ್” ಎಂದು ಹೇಳುತ್ತದೆ. ಕೇಸರಿ ಬಣ್ಣದ ಬೆಲ್ಟ್ ಹೊಂದಿರುವ ಈ ವಾಚ್‌ನಲ್ಲಿ ಭಗವಾನ್ ರಾಮ ಮತ್ತು ಭಗವಾನ್ ಹನುಮಂತನ ಚಿತ್ರ ಸಹ ಕಾಣಿಸುತ್ತದೆ. ಈ ಕುರಿತ ವಿವರ ಇಲ್ಲಿದೆ.

VISTARANEWS.COM


on

Ram Mandir Watch
Koo


ನವದೆಹಲಿ: ಅಯೋಧ್ಯೆಯಲ್ಲಿ ಈ ವರ್ಷದ ಆರಂಭದಲ್ಲಿ ಹಿಂದೂಗಳ ಆರಾಧ್ಯ ದೇವರಾದ ಶ್ರೀರಾಮ ಮಂದಿರದ ಉದ್ಘಾಟನೆಯನ್ನು ಬಹಳ ವಿಜೃಂಭಣೆಯಿಂದ ನಡೆಸಲಾಗಿತ್ತು. ಲಕ್ಷಾಂತರ ಹಿಂದೂಗಳು ದೂರದೂರಿನಿಂದ ಶ್ರೀರಾಮನ ದರ್ಶನಕ್ಕೆ ಬಂದಿದ್ದರು. ಶ್ರೀರಾಮ ಮಂದಿರದ ಪ್ರತಿಷ್ಠಾಪನೆಯ ಬಳಿಕ ಇದೀಗ ರಾಮ ಮಂದಿರ ಪ್ರತಿಷ್ಠಾಪನಾ ಸಮಾರಂಭವನ್ನು ನೆನಪಿಸುವಂತಹ ವಾಚ್ (Ram Mandir Watch) ಒಂದನ್ನು ಬಿಡುಗಡೆ ಮಾಡಲಾಗಿದೆ.

ಸ್ವಿಸ್ ವಾಚ್ ತಯಾರಕ ಕಂಪನಿಯೊಂದು ಭಾರತೀಯ ರಿಟೇಲ್‌ ಉದ್ದಿಮೆಯ ಸಹಯೋಗದೊಂದಿಗೆ ರಾಮ ಜನ್ಮಭೂಮಿ ಲಿಮಿಟೆಡ್ ಎಡಿಷನ್ ವಾಚ್ ಅನ್ನು ಬಿಡುಗಡೆ ಮಾಡಿದೆ. ಈ ವಾಚ್ ಎರಡು ಆವೃತ್ತಿಗಳಲ್ಲಿ ಬರುತ್ತದೆ. ಇದೀಗ ಈ ವಾಚ್ 34 ಲಕ್ಷ ರೂ.ಗೆ ಮಾರಾಟವಾಗಿದ್ದು, ಇದು ಈಗ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಸಿಗ್ನೇಚರ್ ಎಪಿಕ್ ಎಸ್ಕ್‌ಸ್ಕೆಲೆಟನ್ ಸೀರಿಸ್ ಅನ್ನು ಆಧರಿಸಿ ಎಥೋಸ್ ಮತ್ತು ಜಾಕೋಬ್ ಅಂಡ್ ಕೋ ಸಹಯೋಗದೊಂದಿಗೆ ಈ ಐಷಾರಾಮಿ ವಾಚ್ ಅನ್ನು ಬಿಡುಗಡೆ ಮಾಡಲಾಗಿದೆ. “ಈ ವಾಚ್ ಅನ್ನು ಭಾರತದ ಆಳವಾದ ಸಾಂಸ್ಕೃತಿಕ ಪರಂಪರೆಗೆ ಗೌರವ ಸಲ್ಲಿಸಲು ವಿನ್ಯಾಸಗೊಳಿಸಲಾಗಿದೆ ಮತ್ತು ಇದು ಇದುವರೆಗೆ ಮಾಡಿದ ಅತ್ಯಂತ ವಿಶಿಷ್ಟವಾದ ಸಹಯೋಗದ ವಾಚ್‍ಗಳಲ್ಲಿ ಒಂದಾಗಿದೆ” ಎಂದು ಕಂಪನಿ ಹೇಳಿಕೊಂಡಿದೆ.

ಈ ವಾಚ್‍ನಲ್ಲಿ ಮುಳ್ಳು 9 ಗಂಟೆಗೆ ಬಂದಾಗ ರಾಮ ಮಂದಿರವನ್ನು ತೋರಿಸಿದರೆ, 6 ಗಂಟೆಗೆ “ಜೈ ಶ್ರೀ ರಾಮ್” ಎಂದು ಹೇಳುತ್ತದೆ! ಕೇಸರಿ ಬಣ್ಣದ ಬೆಲ್ಟ್ ಹೊಂದಿರುವ ಈ ವಾಚ್‍ನಲ್ಲಿ ಭಗವಾನ್ ರಾಮ ಮತ್ತು ಭಗವಾನ್ ಹನುಮಂತನ ಚಿತ್ರ ಸಹ ಕಾಣಿಸುತ್ತದೆ. ಈ ವಾಚ್‍ಗಾಗಿ ಆಯ್ಕೆ ಮಾಡಿದ ಬಣ್ಣವು ಆಧ್ಯಾತ್ಮಿಕತೆ, ಶುದ್ಧತೆ ಮತ್ತು ಭಕ್ತಿಯ ಸಾರವನ್ನು ಪ್ರತಿನಿಧಿಸುತ್ತದೆ. ಇದು ಹಿಂದೂ ಧರ್ಮದ ಮೌಲ್ಯಗಳನ್ನು ಬಿಂಬಿಸುತ್ತದೆ. ಈ ವಾಚ್‍ನ ಪ್ರತಿಯೊಂದು ವಿವರವನ್ನು ಸಾಂಸ್ಕೃತಿಕ ಮತ್ತು ಆಧ್ಯಾತ್ಮಿಕ ಮಹತ್ವದೊಂದಿಗೆ ವಿನ್ಯಾಸಗೊಳಿಸಲಾಗಿದೆ. ಕಂಪನಿಯ ಪ್ರಕಾರ, ಕೇವಲ 49 ಸೀಮಿತ ಆವೃತ್ತಿಯ ವಾಚ್‍ಗಳನ್ನು ತಯಾರಿಸಲಾಗಿದ್ದು, ಅದರಲ್ಲಿ 35 ವಾಚುಗಳು ಈಗಾಗಲೇ ಮಾರಾಟಕ್ಕೆ ಸಿದ್ಧವಾಗಿವೆ ಎನ್ನಲಾಗಿದೆ.

ಹಲವು ವರ್ಷಗಳ ನ್ಯಾಯಾಂಗ ಹೋರಾಟ ಮತ್ತು ಹಲವಾರು ವಿವಾದಗಳು, ಸಂಘರ್ಷದ ನಂತರ ಸುಪ್ರೀಂ ಕೋರ್ಟ್ 2019ರಲ್ಲಿ ದೇವಾಲಯವನ್ನು ನಿರ್ಮಿಸಲು ಹಿಂದೂಗಳಿಗೆ ವಿವಾದಿತ ಭೂಮಿಯನ್ನು ಹಸ್ತಾಂತರಿಸಿತ್ತು. ಪ್ರಧಾನಿ ನರೇಂದ್ರ ಮೋದಿ ಅವರು ಆಗಸ್ಟ್ 2020ರಲ್ಲಿ ರಾಮಮಂದಿರಕ್ಕೆ (ಭೂಮಿ ಪೂಜೆ) ಅಡಿಪಾಯ ಹಾಕಿದ್ದರು. ನಾಲ್ಕು ವರ್ಷಗಳ ನಂತರ ಭವ್ಯ ದೇವಾಲಯವನ್ನು ನಿರ್ಮಿಸಿ ಗರ್ಭಗುಡಿಯಲ್ಲಿ ರಾಮ್ ಲಲ್ಲಾರನ್ನು ಸ್ಥಾಪಿಸಿ ಭರ್ಜರಿಯಾಗಿ ಪ್ರತಿಷ್ಠಾಪನಾ ಸಮಾರಂಭ ನಡೆಸಿದ್ದರು.

ಇದನ್ನೂ ಓದಿ: ‘ಮಿಸ್ಟರ್ ಬೀನ್’ ಖ್ಯಾತಿಯ ರೋವನ್ ಅಟ್ಕಿನ್ಸನ್ ಹಾಸಿಗೆ ಹಿಡಿದಿದ್ದಾರೆಯೇ? ಭಾರೀ ವೈರಲಾಗ್ತಿದೆ ಈ ಫೋಟೊ

ಈ ದೇವಾಲಯವು ಹಿಂದೂಗಳ ನಂಬಿಕೆಯ ಕೇಂದ್ರ ಬಿಂದುವಾಗಿದೆ. ಇಡೀ ಸಂಕೀರ್ಣವನ್ನು ಸಾಂಪ್ರದಾಯಿಕ ನಾಗರ ಶೈಲಿಯಲ್ಲಿ ನಿರ್ಮಿಸಲಾಗಿದೆ. ಅಯೋಧ್ಯೆಯ ರಾಮ ಮಂದಿರಕ್ಕೆ ನಿತ್ಯ ಲಕ್ಷಾಂತರ ಭಕ್ತರು ಭೇಟಿ ನೀಡುತ್ತಾರೆ.

Continue Reading
Advertisement
shalini rajneesh
ಕರ್ನಾಟಕ6 mins ago

Shalini Rajneesh: ರಾಜ್ಯ ಮುಖ್ಯ ಕಾರ್ಯದರ್ಶಿಯಾಗಿ ಶಾಲಿನಿ ರಜನೀಶ್‌ ನೇಮಕ; ಪತಿ ಜಾಗಕ್ಕೆ ಪತ್ನಿಯ ಆಯ್ಕೆ

Rohit Sharma
ಕ್ರೀಡೆ7 mins ago

Rohit Sharma: ವಿಮಾನ ನಿಲ್ದಾಣದಿಂದ ಲ್ಯಾಂಬೋರ್ಗಿನಿ ಕಾರು ಚಲಾಯಿಸಿಕೊಂಡು ಹೋದ ರೋಹಿತ್​; ವಿಡಿಯೊ ವೈರಲ್​

Karnataka rain
ಮಳೆ10 mins ago

Karnataka Rain : ಹಾಸನದಲ್ಲಿ ಹೇಮಾವತಿ, ಚಿಕ್ಕಮಗಳೂರಲ್ಲಿ ಭದ್ರೆಯ ಅಬ್ಬರಕ್ಕೆ ಜನರು ತತ್ತರ

Hamsalekha NadaBrahma' has no meaning, Shankar Shanubhag sparks against Hansalekha
ಸ್ಯಾಂಡಲ್ ವುಡ್15 mins ago

Hamsalekha: ʻನಾದಬ್ರಹ್ಮʼ ಎಂಬ ಪದಕ್ಕೆ ಅರ್ಥವೇ ಇಲ್ಲ,ಹಸಿ ಸುಳ್ಳು ಹೇಳುವ ವ್ಯಕ್ತಿ ಎಂದು ಹಂಸಲೇಖ ವಿರುದ್ಧ ಶಂಕರ್ ಶಾನುಭಾಗ್ ಕಿಡಿ!

Kargil Vijay Diwas 2024
ದೇಶ21 mins ago

Kargil Vijay Diwas 2024: ಕಾರ್ಗಿಲ್‌ ಯುದ್ಧಭೂಮಿಗೆ ಅಂದೇ ಕಾಲಿಟ್ಟಿದ್ರು ಮೋದಿ- ಹಳೆಯ ಫೊಟೋ ವೈರಲ್‌

ಕರ್ನಾಟಕ32 mins ago

MUDA site scandal: ಕೈಗಾರಿಕೆಗಾಗಿ ಕುಮಾರಸ್ವಾಮಿ ಪಡೆದ ಸೈಟ್‌ ಏನಾಯ್ತು? ಮುಡಾ ನಿವೇಶನ ಪಡೆದ ವಿಪಕ್ಷದವರ ಪಟ್ಟಿ ಕೊಟ್ಟ ಸಿಎಂ

Jio announced 30 Percent discount on Freedom Offer for Air Fiber new customers
ವಾಣಿಜ್ಯ37 mins ago

Jio Air Fiber: ಗ್ರಾಹಕರಿಗೆ ಭರ್ಜರಿ ರಿಯಾಯಿತಿ ಘೋಷಿಸಿದ ಜಿಯೊ! ಎಲ್ಲಿಯವರೆಗೆ ಈ ಆಫರ್‌?

Viral Video
Latest43 mins ago

Viral Video: ಸಿಂಧೂರ ಹಚ್ಚುವಾಗ ಕುಸಿದುಬಿದ್ದ ವಧು; ಎದ್ದೂಬಿದ್ದು ಓಡಿದ ವರ!

Ragging Case
Latest53 mins ago

Ragging Case: ಜೂನಿಯರ್ ವಿದ್ಯಾರ್ಥಿಗಳನ್ನು ಕ್ರೂರವಾಗಿ ಥಳಿಸಿದ ಸೀನಿಯರ್‌ಗಳು! ತಲ್ಲಣ ಮೂಡಿಸುವ ವಿಡಿಯೊ

Namratha Gowda new look photos got viral
ಸ್ಯಾಂಡಲ್ ವುಡ್1 hour ago

Namratha Gowda: ಕಪ್ಪು ಬಣ್ಣದ ಲಾಂಗ್ ಗೌನ್‌ನಲ್ಲಿ ಹಾಟ್‌ ಆಗಿ ಕಂಡ ನಮ್ರತಾ ಗೌಡ!

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka rain
ಮಳೆ10 mins ago

Karnataka Rain : ಹಾಸನದಲ್ಲಿ ಹೇಮಾವತಿ, ಚಿಕ್ಕಮಗಳೂರಲ್ಲಿ ಭದ್ರೆಯ ಅಬ್ಬರಕ್ಕೆ ಜನರು ತತ್ತರ

karnataka Rain
ಮಳೆ22 hours ago

Karnataka Rain : ಮನೆಯೊಳಗೆ ನುಗ್ಗಿದ ಮಳೆ ನೀರು; ಕಾಲು ಜಾರಿ ಬಿದ್ದು ವೃದ್ಧೆ ಸಾವು

Actor Darshan
ಸ್ಯಾಂಡಲ್ ವುಡ್1 day ago

Actor Darshan: ನಟ ದರ್ಶನ್ ಇರುವ ಜೈಲು ಕೋಣೆ ಹೇಗಿದೆ?

Actor Darshan
ಸಿನಿಮಾ1 day ago

Actor Darshan : ಹೆಂಡ್ತಿ ಮಕ್ಕಳೊಟ್ಟಿಗೆ ಚೆನ್ನಾಗಿರು.. ಸಹಕೈದಿ ಜತೆಗೆ 12 ನಿಮಿಷ ಕಳೆದ ನಟ ದರ್ಶನ್‌

Actor Darshan
ಸಿನಿಮಾ1 day ago

Actor Darshan: ಆಧ್ಯಾತ್ಮದತ್ತ ವಾಲಿದ ದರ್ಶನ್‌; ಜೈಲಲ್ಲಿ ಹೇಗಿದೆ ಗೊತ್ತಾ ನಟನ ಬದುಕು

karnataka Weather Forecast
ಮಳೆ2 days ago

Karnataka Weather : ರಭಸವಾಗಿ ಸುರಿಯುವ ಮಳೆ; 50 ಕಿ.ಮೀ ವೇಗದಲ್ಲಿ ಬೀಸುತ್ತೆ ಗಾಳಿ

karnataka weather Forecast
ಮಳೆ3 days ago

Karnataka Weather : ರಾಜ್ಯದಲ್ಲಿ ಮುಂದುವರಿದ ಮಳೆ ಅವಾಂತರ; ನಾಳೆಯೂ ಇರಲಿದೆ ಅಬ್ಬರ

Udupi News
ಉಡುಪಿ3 days ago

Udupi News : ಹಳೆ ಲಾರಿ ಚಾಸ್ಸಿಯಲ್ಲೇ ಕಿರು ಸೇತುವೆ ನಿರ್ಮಾಣ! ಬೈಂದೂರು ಶಾಸಕರ ಪರಿಕಲ್ಪನೆಗೆ ಜನರು ಫಿದಾ

murder case
ರಾಮನಗರ3 days ago

Murder Case : ರಾಮನಗರದಲ್ಲೊಂದು ಪೈಶಾಚಿಕ ಕೃತ್ಯ; ಅತ್ಯಾಚಾರವೆಸಗಿ 4 ವರ್ಷದ ಬಾಲಕಿಯನ್ನು ಕೊಂದ ದುಷ್ಟ

karnataka Rain
ಮಳೆ6 days ago

Karnataka Rain : ಭಾರಿ ಮಳೆಗೆ ಮನೆ ಗೋಡೆ ಕುಸಿತ; ಕೊಟ್ಟಿಗೆಯಲ್ಲಿದ್ದ ಜಾನುವಾರುಗಳು ಸಾವು

ಟ್ರೆಂಡಿಂಗ್‌