NITI Aayog Meet | ಪ್ರಧಾನಿ ಮೋದಿ ಅಧ್ಯಕ್ಷತೆಯಲ್ಲಿ ಸಭೆ; ನಿತೀಶ್​ ಕುಮಾರ್​, ಬೊಮ್ಮಾಯಿ ಗೈರು - Vistara News

ದೇಶ

NITI Aayog Meet | ಪ್ರಧಾನಿ ಮೋದಿ ಅಧ್ಯಕ್ಷತೆಯಲ್ಲಿ ಸಭೆ; ನಿತೀಶ್​ ಕುಮಾರ್​, ಬೊಮ್ಮಾಯಿ ಗೈರು

2019ರಿಂದ ಇಲ್ಲಿಯವರೆಗೆ ಕೊವಿಡ್​ 19 ಕಾರಣದಿಂದ ನೀತಿ ಆಯೋಗದ ಸಭೆಗಳೆಲ್ಲ ವರ್ಚ್ಯುವಲ್​ ಆಗಿಯೇ ನಡೆದಿದ್ದವು. ಮೂರು ವರ್ಷಗಳ ಬಳಿಕ ಇದೇ ಮೊದಲ ಬಾರಿಗೆ ಭೌತಿಕವಾಗಿ ನಡೆಯುತ್ತಿದೆ.

VISTARANEWS.COM


on

Niti Ayoga
ನೀತಿ ಆಯೋಗ ಸಭೆಯ ಸಂದರ್ಭ
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವ ದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದಲ್ಲಿ ಇಂದು ದೆಹಲಿಯ ರಾಷ್ಟ್ರಪತಿ ಭವನದ ಸಾಂಸ್ಕೃತಿಕ ಕೇಂದ್ರದಲ್ಲಿ ನೀತಿ ಆಯೋಗದ ಆಡಳಿತ ಮಂಡಳಿಯ ಏಳನೇ ಸಭೆ (NITI Aayog Meet) ನಡೆಯುತ್ತಿದೆ. ಬಿಹಾರ ಮುಖ್ಯಮಂತ್ರಿ ನಿತೀಶ್​ ಕುಮಾರ್ ಮತ್ತು ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ್​ ರಾವ್​ ಮತ್ತು ಕರ್ನಾಟಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಭೆಗೆ ಗೈರಾಗಿದ್ದಾರೆ. ಕೊವಿಡ್​ 19 ಕಾರಣದಿಂದ 2019ರಿಂದ ಇಲ್ಲಿಯವರೆಗೆ ನೀತಿ ಆಯೋಗದ ಸಭೆಗಳು ವರ್ಚ್ಯುವಲ್​ ಆಗಿಯೇ ನಡೆಯುತ್ತಿದ್ದವು. ಮೂರು ವರ್ಷಗಳ ಬಳಿಕ ಇದೇ ಮೊದಲ ಬಾರಿಗೆ ಭೌತಿಕವಾಗಿ ಸಭೆ ನಡೆಯುತ್ತಿದ್ದು, ಸಂಜೆ 4ಗಂಟೆಗೆ ಮುಕ್ತಾಯಗೊಳ್ಳಲಿದೆ.

ಕೇಂದ್ರ ಸರ್ಕಾರ ತೆಲಂಗಾಣದ ಬಗ್ಗೆ ತಾರತಮ್ಯ ನೀತಿ ಅನುಸರಿಸುತ್ತಿದೆ. ಹಾಗಾಗಿ ಸಭೆಗೆ ಹಾಜರಾಗುವುದಿಲ್ಲ ಎಂದು ಕೆ.ಚಂದ್ರಶೇಖರ್​ ರಾವ್​ ಹೇಳಿದ್ದಾರೆ. ಹಾಗೇ, ನಿತೀಶ್​ ಕುಮಾರ್​ ಈಗಷ್ಟೇ ಕೊರೊನಾದಿಂದ ಚೇತರಿಸಿಕೊಂಡಿರುವ ಕಾರಣ ಸಭೆಗೆ ಹಾಜರಾಗಲಿಲ್ಲ. ಇನ್ನು ಕರ್ನಾಟಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೆ ಆಗಸ್ಟ್​ 6ರಂದು ಕೊವಿಡ್​ 19 ದೃಢಪಟ್ಟಿದೆ. ಇನ್ನುಳಿದಂತೆ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ, ಪಂಜಾಬ್​ ಸಿಎಂ ಭಗವಂತ್ ಮಾನ್​,  ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್​ ಸಿಂಗ್​ ಚೌಹಾಣ್​, ಛತ್ತೀಸ್​ಗಢ್​ ಸಿಎಂ ಭೂಪೇಶ್​ ಬಾಘೇಲ್​ , ಆಂಧ್ರಪ್ರದೇಶ ಸಿಎಂ ಜಗನ್​ ಮೋಹನ್​ ರೆಡ್ಡಿ ಸೇರಿ, ಬಹುತೇಕ ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳೂ ಪಾಲ್ಗೊಂಡಿದ್ದಾರೆ. ವಿವಿಧ ಕೇಂದ್ರ ಸಚಿವರೂ ಇದ್ದಾರೆ.

ಎಣ್ಣೆಕಾಳುಗಳು, ಕಾಳು-ದ್ವಿದಳಧಾನ್ಯಗಳ ಬೆಳೆಗಳಲ್ಲಿ ಸ್ವಾವಲಂಬನೆ ಸಾಧಿಸುವುದು, ಕೃಷಿ ಕ್ಷೇತ್ರ ಅಭಿವೃದ್ಧಿ, ಬೆಳೆ ವೈವಿಧ್ಯೀಕರಣ ಸಾಧಿಸುವುದು ಪ್ರಸಕ್ತ ಬಾರಿಯ ಸಭೆಯ ಅಜೆಂಡಾ ಆಗಿದೆ. ನೀತಿ ಆಯೋಗದ ಆಡಳಿತ ಮಂಡಳಿ ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳು, ಕೇಂದ್ರಾಡಳಿತ ಪ್ರದೇಶಗಳ ಲೆಫ್ಟಿನೆಂಟ್​ ಗವರ್ನರ್​ಗಳು ಮತ್ತು ಹಲವು ಸಚಿವರನ್ನು ಒಳಗೊಂಡಿದೆ. ರಾಜ್ಯಗಳು ಹಾಗೂ ಕೇಂದ್ರದ ನಡುವಿನ ಸಹಯೋಗಕ್ಕೆ ಈ ಬಾರಿಯ ಸಭೆ ಹೊಸ ನಾಂದಿ ಹಾಡಲಿದೆ ಎಂದು ಪ್ರಧಾನಮಂತ್ರಿ ಕಚೇರಿ ಹೇಳಿಕೆ ಬಿಡುಗಡೆ ಮಾಡಿತ್ತು.

ಇದನ್ನೂ ಓದಿ: ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ನಾಳೆ ನೀತಿ ಆಯೋಗದ 7ನೇ ಸಭೆ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Success Story: ರಾಧಾಮಣಿ ಅಮ್ಮಂಗೆ ವಯಸ್ಸು ಕೇವಲ ನಂಬರ್‌ ಅಷ್ಟೇ; 73 ವರ್ಷದ ಇವರ ಬಳಿ ಇದೆ ಬರೋಬ್ಬರಿ 11 ವಾಹನಗಳ ಲೈಸನ್ಸ್‌

Success Story: ಸಾಧನೆಗೆ ವಯಸ್ಸು ಅಡ್ಡಿಯಾಗುವುದಿಲ್ಲ ಎನ್ನುವ ಮಾತಿದೆ. ಕೇರಳದ ಕೊಚ್ಚಿಯ ರಾಧಾಮಣಿ ಅಮ್ಮ ಎನ್ನುವ 73 ವರ್ಷದ ಅಪರೂಪದ ಸಾಧಕಿಯ ವಿಚಾರದಲ್ಲಿ ಈ ಮಾತು ನೂರಕ್ಕೆ ನೂರು ನಿಜ. 73 ವರ್ಷದ ಇವರ ಬಳಿ 11 ವಾಹನಗಳ ಲೈಸನ್ಸ್‌ ಇದೆ. ಈ ಸಾಧನೆ ಮಾಡಿದ ದೇಶದ ಏಕೈಕ ಮಹಿಳೆ ಎನ್ನುವ ಹೆಗ್ಗಳಿಕೆಗೂ ಇವರು ಪಾತ್ರರಾಗಿದ್ದಾರೆ. ಡ್ರೈವಿಂಗ್‌ ಸ್ಕೂಲ್‌ ನಡೆಸುತ್ತಿರುವ ಇವರ ಯಶೋಗಾಥೆಯ ಪರಿಚಯ ಇಲ್ಲಿದೆ.

VISTARANEWS.COM


on

Success Story
Koo

ತಿರುವನಂತಪುರಂ: ಸಾಧನೆಗೆ ವಯಸ್ಸು ಅಡ್ಡಿಯಾಗುವುದಿಲ್ಲ ಎನ್ನುವ ಮಾತು ಬಹುಶಃ ಇವರನ್ನು ನೋಡಿಯೇ ಹುಟ್ಟಿಕೊಂಡಿರಬೇಕು. ವಯಸ್ಸು ಕೇವಲ ಸಂಖ್ಯೆಯಷ್ಟೇ. ಅದಕ್ಕೂ ಮನಸ್ಸಿಗೂ ಯಾವುದೇ ಸಂಬಂಧವಿಲ್ಲ ಎನ್ನುವುದಕ್ಕೂ ಇವರು ದೃಷ್ಟಾಂತವಾಗಿ ನಿಲ್ಲುತ್ತಾರೆ. ಹೌದು ನಾವೀಗ ಹೇಳ ಹೊರಟಿರುವುದು ಅಪರೂಪದ ಸಾಧಕಿಯೊಬ್ಬರ ಬಗ್ಗೆ. ಕೇರಳದ ಕೊಚ್ಚಿಯ ರಾಧಾಮಣಿ ಅಮ್ಮ (Radhamani Amma) ಎನ್ನುವ 73 ವರ್ಷದ ಅಪರೂಪದ ಸಾಧಕಿಯ ಬಗ್ಗೆ. ಇವರು 11 ವಾಹನಗಳ ಲೈಸನ್ಸ್‌ ಹೊಂದಿರುವ ದೇಶದ ಏಕೈಕ ಮಹಿಳೆ ಎನಿಸಿಕೊಂಡಿದ್ದಾರೆ. ಕ್ರೇನ್, ಜೆಸಿಬಿ, ರೋಡ್ ರೋಲರ್ ಸೇರಿದಂತೆ ಹಲವು ವಾಹನಗಳನ್ನು ಓಡಿಸುವ ಇವರು ಯುವ ಜನತೆಗೆ ಸ್ಫೂರ್ತಿ ಎನಿಸಿಕೊಂಡಿದ್ದಾರೆ (Success Story).

ರಾಧಾಮಣಿ ಅಮ್ಮ ಅವರ ಊರು ಕೊಚ್ಚಿಯ ಥೊಪ್ಪಂಪ್ಪಾಡಿ. 1981ರಲ್ಲಿ ಮೊದಲ ಬಾರಿ ಡ್ರೈವಿಂಗ್‌ ಕಲಿತ ಅವರು ಬಳಿಕ ಹಿಂದುರುಗಿ ನೋಡಲೇ ಇಲ್ಲ. ಸಾಧಾರಣವಾಗಿ ಮಹಿಳೆಯರು ಲಘು ವಾಹನ ಓಡಿಸುತ್ತಾರೆ. ಆದರೆ ಇವರು ಘನ ವಾಹನ ಚಾಲನೆಗೂ ಸೈ ಎನಿಸಿಕೊಂಡಿದ್ದಾರೆ. ಚಾಲನಾ ಕ್ಷೇತ್ರದಲ್ಲಿ ಅದ್ವಿತೀಯ ಸಾಧನೆ ಮಾಡಿದ ಅವರ ಯಶೋಗಾಥೆಯ ವಿವರ ಇಲ್ಲಿದೆ.

ರಾಧಾಮಣಿ ಅಮ್ಮ ಅವರ ಬಳಿ ಲಾರಿ, ಬಸ್‌, ಜೆಸಿಬಿ, ಟ್ರೇಲರ್‌, ಕ್ರೇನ್‌, ಟ್ರ್ಯಾಕ್ಟರ್‌, ಫೋರ್ಕ್‌ ಲಿಫ್ಟ್‌, ರೋಡ್‌ ರೋಲರ್‌, ದ್ವಿಚಕ್ರ ವಾಹನ, ಅಗೆಯುವ ಯಂತ್ರಗಳು ಸೇರಿದಂತೆ ವಿವಿಧ ವಾಹನ ಚಾಲನಾ ಪರವಾನಗಿ ಇದೆ. ಹಲವು ಮಹಿಳೆಯರಿಗೆ ಶಿಕ್ಷಕಿಯಾಗಿ, ಮಾರ್ಗದರ್ಶಿಯಾಗಿ, ತಾಯಿಯಾಗಿ ತಮ್ಮ ಅನುಭವವನ್ನು ಧಾರೆ ಎರೆಯುವ ಮೂಲಕ ಸ್ಫೂರ್ತಿಯಾಗಿದ್ದಾರೆ.

ಯಶೋಗಾಥೆ

ರಾಧಾಮಣಿ ಅವರ ಸಾಧನೆಗೆ ಮುನ್ನುಡಿ ಆರಂಭವಾದದ್ದು 80ರ ದಶಕದಲ್ಲಿ. ತಮ್ಮ ಪತಿ ಲಾಲನ್‌ ಸಹಾಯದಿಂದ ಡ್ರೈವಿಂಗ್‌ ಕಲಿತ ಅವರು 1981ರಲ್ಲಿ ಸ್ಟೇರಿಂಗ್‌ ಹಿಡಿದರು. 1970ರಲ್ಲಿ ಲಾಲನ್‌ ಕೊಚ್ಚಿಯಲ್ಲಿ A-Z ಎನ್ನುವ ಡ್ರೈವಿಂಗ್‌ ತರಬೇತಿ ಶಾಲೆ ಆರಂಭಿಸಿದ್ದರು. ಅವರ ಮರಣಾನಂತರ 2004ರಿಂದ ಈ ತರಬೇತಿ ಕೇಂದ್ರವನ್ನು ರಾಧಾಮಣಿ ಅಮ್ಮ ಮತ್ತು ಅವರ ಮಕ್ಕಳು ನಡೆಸಿಕೊಂಡು ಬರುತ್ತಿದ್ದಾರೆ. ವಿಶೇಷ ಎಂದರೆ ಕೇರಳದಲ್ಲಿ ಭಾರೀ ವಾಹನಗಳಿಗೆ ಚಾಲನಾ ಪರವಾನಗಿ ಪಡೆಯಲು ಯಾವುದೇ ತರಬೇತಿ ಸಂಸ್ಥೆಗಳು ಇಲ್ಲದ ಸಮಯದಲ್ಲಿ, ಕಾನೂನು ಹೋರಾಟದ ಮೂಲಕ ಈ ಸಂಸ್ಥೆಯನ್ನು ಸ್ಥಾಪಿಸಲಾಗಿತ್ತು.

ʼʼಆರಂಭದಲ್ಲಿ ನಾನು ನಾಲ್ಕು ಚಕ್ರದ ವಾಹನ ಚಾಲನಾ ತರಬೇತಿ ಪಡೆದುಕೊಂಡೆ. ಡ್ರೈವಿಂಗ್‌ ಸ್ಕೂಲ್‌ ಆರಂಭಿಸಿದ ಬಳಿಕ ಘನ ವಾಹನ ಚಾಲನಾ ತರಬೇತಿ ನೀಡಲು ನಾನು ಮತ್ತು ಪತಿ ನಿರ್ಧರಿಸಿದ್ದೆವು. ಅದರಂತೆ ಘನ ವಾಹನ ಚಾಲನೆಯನ್ನೂ ಕಲಿತುಕೊಂಡೆ. ಕೇರಳದಲ್ಲಿ ಹೆವಿ ಡ್ರೈವಿಂಗ್ ಶಾಲೆಯನ್ನು ತೆರೆದ ಮೊದಲ ವ್ಯಕ್ತಿ ನಾನುʼʼ ಎಂದು ಮಾಧ್ಯಮಕ್ಕೆ ನೀಡಿದ ಸಂದರ್ಶನವೊಂದರಲ್ಲಿ ರಾಧಾಮಣಿ ಹೆಮ್ಮೆಯಿಂದ ಹೇಳಿಕೊಂಡಿದ್ದಾರೆ.

ಹಿಂದೆ ಹೀಗಿರಲಿಲ್ಲ

ʼʼಈಗೆಲ್ಲ ಮಹಿಳೆಯರು ವಾಹನ ಓಡಿಸುವುದು ಸಾಮಾನ್ಯ ಎಂಬಂತಾಗಿದೆ. ಆದರೆ ನಾಲ್ಕು ದಶಕಗಳ ಹಿಂದೆ, ನಾನು ಡ್ರೈವಿಂಗ್‌ ಕಲಿಯುವಾಗ ಪರಿಸ್ಥಿತಿ ಹೀಗಿರಲಿಲ್ಲ. ನಾನು ಕಾರು ಓಡಿಸುವಾಗ ನೆರೆಹೊರೆಯವೆಲ್ಲ ಅಚ್ಚರಿಯಿಂದ ನನ್ನನ್ನೇ ನೋಡುತ್ತಿದ್ದರು. ಕೆಲವರು ತಮಾಷೆ ಮಾಡುತ್ತಿದ್ದರು. ಆದರೆ ಇದ್ಯಾವುದರ ಬಗ್ಗೆಯೂ ನಾನು ತಲೆ ಕೆಡಿಸಿಕೊಂಡಿರಲಿಲ್ಲ. ಅದೆಷ್ಟೋ ಮಹಿಳೆಯರಿಗೆ ನನ್ನ ಸಾಧನೆ ಸ್ಫೂರ್ತಿಯಾಗಿದೆ ಎನ್ನುವುದನ್ನು ತಿಳಿದಾಗ ಸಂತಸವಾಗುತ್ತದೆʼʼ ಎನ್ನುತ್ತಾರೆ ರಾಧಾಮಣಿ.

ಇದನ್ನೂ ಓದಿ: Success Story: ಕಸದಲ್ಲಿಯೂ ಕಂಪು ಹರಡುವವರು!; ಬಾಡಿದ ಹೂ ಇಲ್ಲಿ ಮತ್ತೆ ದೇವರ ಪೂಜೆಗೆ ಸಿದ್ಧ

ಜೆಸಿಬಿ ಚಾಲನೆ ಅತ್ಯಂತ ಸವಾಲು

ಇಷ್ಟು ವಾಹನಗಳ ಪೈಕಿ ಜೆಸಿಬಿ ಚಾಲನೆಯೇ ಅತ್ಯಂತ ಕಷ್ಟವಾದುದು ಎನ್ನುವುದು ಅವರ ಅಭಿಪ್ರಾಯ. ʼʼಈಗ ಡ್ರೈವಿಂಗ್‌ ಕ್ಷೇತ್ರದಲ್ಲಿ ಮಹಿಳೆಯರಿಗೆ ಅನೇಕ ಅವಕಾಶಗಳಿವೆ. ಅನೇಕರು ಈಗ ವಾಹನ ಕಲಿಕೆಗೆ ಮುಂದೆ ಬರುತ್ತಿದ್ದಾರೆ. ಜತೆಗೆ ಟ್ಯಾಂಕರ್‌ನಂತಹ ಘನ ವಾಹನಗಳನ್ನು ಮಹಿಳೆಯರೂ ಓಡಿಸುತ್ತಿದ್ದಾರೆ ಎನ್ನುವುದು ಕೇಳುವಾಗ ಖುಷಿಯಾಗುತ್ತಿದೆʼʼ ಎಂದು ರಾಧಾಮಣಿ ಅಮ್ಮ ಹೇಳುತ್ತಾರೆ. ಒಟ್ಟಿನಲ್ಲಿ ಅವರ ಈ ಸಾಹಸಗಾಥೆ ಎಲ್ಲರಿಗೂ ಸ್ಫೂರ್ತಿ. ನನ್ನಿಂದ ಸಾಧ್ಯವಿಲ್ಲ ಎಂದು ಕೈ ಚೆಲ್ಲಿ ಕುಳಿತವರಿಗೆ ಮಾದರಿ.

Continue Reading

ದೇಶ

Swati Maliwal: ಸ್ವಾತಿ ಮಲಿವಾಲ್‌ ಮೇಲೆ ಹಲ್ಲೆಆರೋಪಿ ಕೇಜ್ರಿವಾಲ್‌ ಜೊತೆ ಏರ್‌ಪೋರ್ಟ್‌ನಲ್ಲಿ ಪ್ರತ್ಯಕ್ಷ

Swati Maliwal:ಆಮ್ ಆದ್ಮಿ ಪಕ್ಷದ(AAP) ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಆರೋಪ ಎದುರಿಸುತ್ತಿರುವ ವಿಭವ್‌ ಕುಮಾರ್‌ ಇದೀಗ ದಿಲ್ಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಜೊತೆ ಕಾಣಿಸಿಕೊಂಡಿದ್ದಾನೆ. ಲಕ್ನೋ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದ ಕೇಜ್ರಿವಾಲ್‌ ಜೊತೆ ವಿಭವ್‌ ಕುಮಾರ್‌ ಕೂಡ ಕಾಣಿಸಿಕೊಂಡಿರುವ ವಿಚಾರ ಎಲ್ಲೆಡೆ ಸುದ್ದಿಯಾಗಿದ್ದು, ಬಿಜೆಪಿ ನಾಯಕರು ಸೇರಿದಂತೆ ಅನೇಕ ಕಿಡಿ ಕಾರಿದ್ದಾರೆ.

VISTARANEWS.COM


on

Swati maliwal
Koo

ಲಕ್ನೋ: ಆಮ್ ಆದ್ಮಿ ಪಕ್ಷದ(AAP) ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್(Swati Maliwal) ಮೇಲೆ ಹಲ್ಲೆ ಆರೋಪ ಎದುರಿಸುತ್ತಿರುವ ವಿಭವ್‌ ಕುಮಾರ್‌(Bibhav Kumar) ಇದೀಗ ದಿಲ್ಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌(Arvind Kejriwal) ಜೊತೆ ಕಾಣಿಸಿಕೊಂಡಿದ್ದಾನೆ. ಲಕ್ನೋ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದ ಕೇಜ್ರಿವಾಲ್‌ ಜೊತೆ ವಿಭವ್‌ ಕುಮಾರ್‌ ಕೂಡ ಕಾಣಿಸಿಕೊಂಡಿರುವ ವಿಚಾರ ಎಲ್ಲೆಡೆ ಸುದ್ದಿಯಾಗಿದ್ದು, ಬಿಜೆಪಿ ನಾಯಕರು ಸೇರಿದಂತೆ ಅನೇಕ ಕಿಡಿ ಕಾರಿದ್ದಾರೆ.

ಬುಧವಾರ ಪ್ರತಿಪಕ್ಷಗಳ ಇಂಡಿಯಾ ಒಕ್ಕೂಟ ಸಭೆಯಲ್ಲಿ ಭಾಗಿಯಾಗಲೆಂದು ಲಕ್ನೋಗೆ ಆಗಮಿಸಿದ್ದ ಕೇಜ್ರಿವಾಲ್‌ ವಿಮಾನ ನಿಲ್ದಾಣಕ್ಕೆ ಬಂದಿಳಿದಿದ್ದರು. ಆಗ ಅವರ ಜೊತೆಗೆ ವಿಭವ್‌ ಕುಮಾರ್‌ ಕಾಣಿಸಿಕೊಂಡು ಅಚ್ಚರಿ ಮೂಡಿಸಿದ್ದಾನೆ. ಸ್ವಾಮಿ ಮೇಲೆ ಹಲ್ಲೆ ನಡೆದು ಎರಡು ಮೂರು ದಿನಗಳು ಕಳೆದಿದೆ ಅಷ್ಟೇ. ಅಷ್ಟರೊಳಗೆ ಕೇಜ್ರಿವಾಲ್‌ ಜೊತೆಗೆ ಕಾಣಿಸಿಕೊಂಡಿರುವುದು ಎಲ್ಲರ ಆಕ್ರೋಶಕ್ಕೆ ಕಾಣವಾಗಿದೆ.

ಬಿಜೆಪಿ ಕಿಡಿ:

ಕೇಜ್ರಿವಾಲ್‌ ಜೊತೆ ವಿಭವ್‌ ಕುಮಾರ್‌ ಕಾಣಿಸಿಕೊಂಡಿರುವುದಕ್ಕೆ ಬಿಜೆಪಿ ನಾಯಕರು ಕಿಡಿ ಕಾರಿದ್ದಾರೆ. ಬಿಜೆಪಿ ನಾಯಕ ತಾಜಿಂದರ್‌ ಬಗ್ಗಾ ಎಕ್ಸ್‌ನಲ್ಲಿ ಪೋಸ್ಟ್‌ವೊಂದನ್ನು ಮಾಡಿದ್ದು, ಸ್ವಾತಿ ಮಲಿವಾಲ್‌ ಜೊತೆಗೆ ಅನುಚಿತವಾಗಿ ವರ್ತಿಸಿರುವ ವೈಭವ್‌ ಕುಮಾರ್‌ನನ್ನು ಶಿಕ್ಷೆಯಾಗಿಲ್ಲ. ವೈಭವ್‌ಗೆ ಶಿಕ್ಷಿ ವಿಧಿಸಲಾಗುತ್ತದೆ ಎಂದು ಆಪ್‌ ನಾಯಕ ಸಂಜಯ್‌ ಸಿಂಗ್‌ ಹೇಳಿದ್ದಾರೆ. ಆದರೆ ಮಾತ್ರ ಸಿಎಂ ಜೊತೆಗೇ ಇಡೀ ದೇಶ ಸುತ್ತುತ್ತಿದ್ದಾನೆ ಎಂದು ಟ್ವೀಟ್‌ ಮಾಡಿದ್ದಾರೆ.

ಇನ್ನು ಸ್ವಾತಿ ಮಲಿವಾಲ್ ಹಲ್ಲೆ ಪ್ರಕರಣದ ಕುರಿತು ವರದಿಗಾರರು ಅರವಿಂದ್ ಕೇಜ್ರಿವಾಲ್‌ಗೆ ಪ್ರಶ್ನೆಗಳನ್ನು ಕೇಳಿದಾಗ, ಕೇಜ್ರಿವಾಲ್ ಯಾವುದೇ ಉತ್ತರವನ್ನು ನೀಡದೇ, ಮೈಕ್‌ ಅನ್ನು ಅಖಿಲೇಶ್‌ ಯಾದವ್‌ರತ್ತ ತಿರುಗಿಸಿದ ಘಟನೆಯೂ ನಡೆದಿದೆ. ಮೈಕ್‌ ಪಡೆದ ಅಖಿಲೇಶ್‌ ಅದಕ್ಕಿಂತಲೂ ಮುಖ್ಯವಾದ ವಿಚಾರ ಬೇರೆ ಇದೆ ಎಂದು ಹೇಳುವ ಮೂಲಕ ವಿಷಯಾಂತರ ಮಾಡಿದ್ದಾರೆ. ಈ ವಿಡಿಯೋವನ್ನು ಕೂಡ ತಾಜಿಂದ್‌ ಬಗ್ಗಾ ಹಂಚಿಕೊಂಡಿದ್ದಾರೆ.

ಇದನ್ನೂ ಓದಿ:Kannada New Movie: ಬರಗೂರು ರಾಮಚಂದ್ರಪ್ಪ ನಿರ್ದೇಶನದ ‘ಸ್ವಪ್ನ ಮಂಟಪ’ ಚಿತ್ರೀಕರಣ ಮುಕ್ತಾಯ

ಆಮ್ ಆದ್ಮಿ ಪಕ್ಷದ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಅವರು ತಮ್ಮ ಮೇಲೆ ಸಿಎಂ ನಿವಾಸದಲ್ಲಿ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿದ್ದಾರೆ. ಕೇಜ್ರಿವಾಲ್ ಅವರ ಆಪ್ತ ಸಹಾಯಕ ವಿಭವ್ ಕುಮಾರ್ ವಿರುದ್ಧ ಅವರು ಈ ಆರೋಪ ಮಾಡಿದ್ದರು. ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಸ್ವಾತಿ ಮಲಿವಾಲ್ ಅವರ ಘಟನೆಯ ಬಗ್ಗೆ ತಿಳಿದುಕೊಂಡಿದ್ದಾರೆ ಮತ್ತು ಅವರು ಈ ವಿಷಯದಲ್ಲಿ ಕಠಿಣ ಕ್ರಮ ತೆಗೆದುಕೊಳ್ಳುತ್ತಾರೆ ಎಂದು ಪಕ್ಷದ ನಾಯಕ ಸಂಜಯ್ ಸಿಂಗ್ ನಂತರ ಹೇಳಿದ್ದರು.ಸಿಎಂ ಕೇಜ್ರಿವಾಲ್ ಅವರನ್ನು ಭೇಟಿ ಮಾಡಲು ಸ್ವಾತಿ ಮಲಿವಾಲ್ ಬಂದಿದ್ದರು ಡ್ರಾಯಿಂಗ್ ರೂಮಿನಲ್ಲಿ ಕಾಯುತ್ತಿದ್ದಳು. ಆಗ ವಿಭವ್ ಕುಮಾರ್ ಅಲ್ಲಿಗೆ ಆಗಮಿಸಿ ಸ್ವಾತಿ ಮಲಿವಾಲ್ ಜೊತೆ ಅನುಚಿತವಾಗಿ ವರ್ತಿಸಿದ್ದಾನೆ ಎನ್ನಲಾಗಿದೆ.

Continue Reading

ದೇಶ

Hepatitis-A: ಅಲರ್ಟ್‌..ಅಲರ್ಟ್‌! ಜನರ ನಿದ್ದೆಗೆಡಿಸ್ತಿದೆ ಮತ್ತೊಂದು ಡೆಡ್ಲಿ ವೈರಸ್‌

Hepatitis-A:ಕೇರಳ ಆರೋಗ್ಯ ಸಚಿವೆ ವೀಣಾ ಜಾರ್ಜ್‌ ಬುಧವಾರ ಮಾಹಿತಿ ನೀಡಿದ್ದು, ರಾಜ್ಯದಲ್ಲಿ ಹೆಪಟಿಟಿಸ್‌-ಎ ವ್ಯಾಪಕವಾಗಿ ಹರಡುತ್ತಿದೆ. ಅದರಲ್ಲೂ ವಿಶೇಷವಾಗಿ ಮಣಪ್ಪುರಂ, ಎರ್ನಾಕುಲಂ, ಕೋಯಿಕ್ಕೋಡ್‌ ಮತ್ತು ತ್ರಿಶೂರ್‌ ಜಿಲ್ಲೆಗಳಲ್ಲಿ ಹೆಪಟಿಟಿಸ್‌-ಎ ಕೇಸ್‌ ದಿನೇ ದಿನೇ ಹೆಚ್ಚಾಗುತ್ತಿದೆ ಎಂದು ಹೇಳಿದ್ದಾರೆ. ಅಲ್ಲದೇ ಈ ವೈರಾಣು ವೇಗವಾಗಿ ಹರಡುವುದನ್ನು ತಪ್ಪಿಸಲು ತಲಮಟ್ಟದಲ್ಲೇ ಸೂಕ್ತ ಕ್ರಮ ಕೈಗೊಳ್ಳುವಂತೆ ಸಚಿವೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

VISTARANEWS.COM


on

Hepatitis-A
Koo

ಕೇರಳ: ಕೊರೋನಾ ವೈರಸ್‌ನಿಂದ ವರ್ಷಾನುಗಟ್ಟಲೇ ಬಳಲಿ ಇನ್ನೇನು ಚೇತರಿಸಿಕೊಳ್ಳುತ್ತಿರುವಾಗಲೇ ಕೇರಳ(Kerala)ದಲ್ಲಿ ಮತ್ತೊಂದು ವೈರಸ್‌(Virus) ಜನರ ನಿದ್ದೆಗೆಡಿಸಿದೆ. ಹೆಪಟಿಟಿಸ್‌-ಎ(Hepatitis-A) ಖಾಯಿಲೆ ಪ್ರಮಾಣ ದಿನೇ ದಿನೇ ಹೆಚ್ಚಾಗುತ್ತಿದ್ದು, ನಾಲ್ಕು ಜಿಲ್ಲೆಗಳಲ್ಲಿ ಹೈ ಅಲರ್ಟ್‌ ಘೋಷಿಸಲಾಗಿದೆ. ಇನ್ನು ಕೇರಳ ಗಡಿ ರಾಜ್ಯವಾಗಿರುವುದರಿಂದ ಕರ್ನಾಟಕದಲ್ಲೂ ಇದರ ಭೀತಿ ಹೆಚ್ಚಾಗಿದೆ.

ಇನ್ನು ಈ ಬಗ್ಗೆ ಕೇರಳ ಆರೋಗ್ಯ ಸಚಿವೆ ವೀಣಾ ಜಾರ್ಜ್‌ ಬುಧವಾರ ಮಾಹಿತಿ ನೀಡಿದ್ದು, ರಾಜ್ಯದಲ್ಲಿ ಹೆಪಟಿಟಿಸ್‌-ಎ ವ್ಯಾಪಕವಾಗಿ ಹರಡುತ್ತಿದೆ. ಅದರಲ್ಲೂ ವಿಶೇಷವಾಗಿ ಮಣಪ್ಪುರಂ, ಎರ್ನಾಕುಲಂ, ಕೋಯಿಕ್ಕೋಡ್‌ ಮತ್ತು ತ್ರಿಶೂರ್‌ ಜಿಲ್ಲೆಗಳಲ್ಲಿ ಹೆಪಟಿಟಿಸ್‌-ಎ ಕೇಸ್‌ ದಿನೇ ದಿನೇ ಹೆಚ್ಚಾಗುತ್ತಿದೆ ಎಂದು ಹೇಳಿದ್ದಾರೆ. ಅಲ್ಲದೇ ಈ ವೈರಾಣು ವೇಗವಾಗಿ ಹರಡುವುದನ್ನು ತಪ್ಪಿಸಲು ತಲಮಟ್ಟದಲ್ಲೇ ಸೂಕ್ತ ಕ್ರಮ ಕೈಗೊಳ್ಳುವಂತೆ ಸಚಿವೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಆರೋಗ್ಯ ಇಲಾಖೆ ಅಧಿಕಾರಿಗಳು ಕೂಡ ಎಲ್ಲಾ ಜಿಲ್ಲ ಮತ್ತು ತಾಲೂಕು ಮಟ್ಟದಲ್ಲಿ ಈ ಸಂಬಂಧ ಸಭೆ ನಡೆಸಿದ್ದು, ಮುಂಜಾಗೃತಾ ಕ್ರಮಗಳ ಬಗ್ಗೆ ಚರ್ಚೆ ನಡೆಸಿದ್ದಾರೆ. ಮಣಪ್ಪುರಣನ ಚಲಿಯಾರ್‌ ಮತ್ತು ಪೋತುಕಲ್ಲು ಪ್ರದೇಶದಲ್ಲಿ ಹೆಪಟಿಟಿಸ್‌-ಎ ಗೆ ಜನ ಬಲಿಯಾಗಿರುವ ಬಗ್ಗೆಯೂ ವರದಿಯಾಗಿದೆ. ಹೀಗಾಗಿ ಈ ಪ್ರದೇಶಗಳಲ್ಲಿ ರೋಗಾಣುಗಳನ್ನು ತಡೆಯಲು ಮತ್ತು ಜನರಲ್ಲಿ ಅರಿವು ಮೂಡಿಸಲು ಶೀಘ್ರದಲ್ಲಿಯೇ ಸೂಕ್ತ ಕ್ರಮ ಜರುಗಿಸುವ ಬಗ್ಗೆ ಚರ್ಚೆ ನಡೆಸಲಾಗಿದೆ.

ಪೋತುಕಲ್ಲು ಪ್ರದೇಶದಲ್ಲಿ ಈ ಖಾಯಿಲೆ ನಿಯಂತ್ರಣಕ್ಕೆ ಬಂದಿತ್ತು. ಆದರೆ ಹೊಸ ಕೇಸ್‌ಗಳು ಮತ್ತೆ ಪತ್ತೆಯಾಗುತ್ತಿರುವುದು ಜನರಲ್ಲಿ ಆತಂಕ ಸೃಷ್ಟಿಸಿದೆ. ಈ ನಿಟ್ಟಿನಲ್ಲಿ ಜಿಲ್ಲೆ ಆರೋಗ್ಯ ಇಲಾಖೆ ಮತ್ತು ಜನಪ್ರತಿನಿಧಿಗಳು ಚಲಿಯಾರ್‌ ಮತ್ತು ಪೋಲುಕಲ್ಲು ಪ್ರದೇಶದಲ್ಲಿ ತುರ್ತು ಸಭೆ ನಡೆಸಿದ್ದಾರೆ. ಈ ಪ್ರದೇಶಗಳಲ್ಲಿ ಕುಡಿಯುವ ನೀರಿನ ಮೂಲಗಳಾದ ಕೆರೆ, ಬಾವಿಗಳನ್ನು ಸ್ವಚ್ಛಗೊಳಿಸುವಂತೆ ಆದೇಶ ಹೊರಡಿಸಲಾಗಿದೆ. ಅಲ್ಲದೇ ಕೇವಲ ಬಿಸಿ ನೀರನ್ನಷ್ಟೇ ಗ್ರಾಹಕರಿಗೆ ನೀಡುವಂತೆ ಎಲ್ಲಾ ಹೊಟೇಲ್‌, ರೆಸ್ಟೋರೆಂಟ್‌ಗಳಿಗೆ ಖಡಕ್‌ ಸೂಚನೆ ಹೊರಡಿಸಲಾಗಿದೆ.

ಇದನ್ನೂ ಓದಿ:Amit Shah: ಭಾರತದ ಜತೆ ಪಿಒಕೆ ವಿಲೀನ ಮಾಡುವುದೇ ನಮ್ಮ ಗುರಿ, ಬದ್ಧತೆ; ಅಮಿತ್‌ ಶಾ ಘೋಷಣೆ

ಹೆಪಟಿಟಿಸ್‌-ಎ ಅಂದರೆ ಏನು?

ಹೆಪಟೈಟಿಸ್ ಎ ವೈರಸ್ ಯಕೃತ್ತಿನ ಮೇಲೆ ಪರಿಣಾಮ ಬೀರುತ್ತದೆ ಮತ್ತು ಕಲುಷಿತ ಆಹಾರ ಮತ್ತು ನೀರಿನ ಮೂಲಕ ಅಥವಾ ಸಾಂಕ್ರಾಮಿಕ ವ್ಯಕ್ತಿಯೊಂದಿಗೆ ನೇರ ಸಂಪರ್ಕದ ಮೂಲಕ ಹರಡುತ್ತದೆ. ಈ ರೋಗವು ಮುಖ್ಯವಾಗಿ ರೋಗನಿರೋಧಕ ಶಕ್ತಿ ಇರದ ವ್ಯಕ್ತಿಗಳಲ್ಲಿ ಮತ್ತು ಎಚ್ಐವಿ ಮತ್ತು ಯಕೃತ್ತಿನ ಕಾಯಿಲೆಯಂತಹ ಅಸ್ವಸ್ಥತೆಗಳನ್ನು ಹೊಂದಿರುವವರಿಗೆ ಬಹಳ ಬೇಗ ತಗುಲುತ್ತದೆ. ಆಯಾಸ, ಜ್ವರ, ಹೊಟ್ಟೆ ನೋವು, ವಾಕರಿಕೆ, ವಾಂತಿ, ಅತಿಸಾರ, ಹಸಿವಿನ ಕೊರತೆ, ತುರಿಕೆ ಮತ್ತು ಕಾಮಾಲೆ ಸೇರಿವೆ. ಕಣ್ಣುಗಳು, ಮೂತ್ರ, ಚರ್ಮ ಮತ್ತು ಉಗುರುಗಳ ಬಿಳಿಯ ಹಳದಿ ಬಣ್ಣಕ್ಕೆ ತಿರುಗುವುದು ಇವೆಲ್ಲಾ ಈ ಖಾಯಿಲೆಯ ಲಕ್ಷಣಗಳು. ಕೇವಲ ಬಿಸಿ ನೀರು ಕುಡಿಯುವುದು, ಆಹಾರ ಸೇವೆನೆಗೂ ಮುನ್ನ ಕೈಗಳನ್ನು ಚೆನ್ನಾಗಿ ತೊಳೆಯುವುದರಿಂದ ಈ ಖಾಯಿಲೆಯನ್ನು ತಡೆಯಬಹುದಾಗಿದೆ.

Continue Reading

ದೇಶ

Anita Goyal: ಜೆಟ್‌ ಏರ್‌ವೇಸ್‌ ಸಂಸ್ಥಾಪಕ ನರೇಶ್‌ ಗೋಯಲ್‌ ಪತ್ನಿ ಅನಿತಾ ಗೋಯಲ್‌ ನಿಧನ

Anita Goyal: ಜೆಟ್‌ ಏರ್‌ವೇಸ್‌ ಸಂಸ್ಥಾಪಕ ನರೇಶ್‌ ಗೋಯಲ್‌ ಅವರ ಪತ್ನಿ ಅನಿತಾ ಗೋಯಲ್‌ ಇಂದು ಮುಂಜಾನೆ ಮೃತಪಟ್ಟಿದ್ದಾರೆ. ಹಲವು ಸಮಯಗಳಿಂದ ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಅವರು ಮುಂಬೈಯ ಆಸ್ಪತ್ರಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜೈಲು ಸೇರಿರುವ ನರೇಶ್‌ ಗೋಯಲ್‌ ಅವರಿಗೆ ಇತ್ತೀಚೆಗೆ ಷರತ್ತುಬದ್ಧ ಜಾಮೀನು ನೀಡಲಾಗಿತ್ತು. ಅನಿತಾ ಅವರ ಅಂತ್ಯಕ್ರಿಯೆ ಇಂದು ಮುಂಬೈಯಲ್ಲಿ ನಡೆಯಲಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.

VISTARANEWS.COM


on

Anita Goyal
Koo

ಮುಂಬೈ: ಜೆಟ್‌ ಏರ್‌ವೇಸ್‌ ಸಂಸ್ಥಾಪಕ ನರೇಶ್‌ ಗೋಯಲ್‌ (Naresh Goyal) ಅವರ ಪತ್ನಿ ಅನಿತಾ ಗೋಯಲ್‌ (Anita Goyal) ಇಂದು (ಮೇ 16) ಮುಂಜಾನೆ ಮೃತಪಟ್ಟಿದ್ದಾರೆ. ಹಲವು ಸಮಯಗಳಿಂದ ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಅವರು ಮುಂಬೈಯ ಆಸ್ಪತ್ರಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಮುಂಜಾನೆ 3 ಗಂಟೆಯ ಸುಮಾರಿಗೆ ನಿಧನ ಹೊಂದಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜೈಲು ಸೇರಿರುವ ನರೇಶ್‌ ಗೋಯಲ್‌ ಅವರಿಗೆ ಇತ್ತೀಚೆಗೆ ಷರತ್ತುಬದ್ಧ ಜಾಮೀನು ನೀಡಲಾಗಿತ್ತು. ಅನಿತಾ ಅವರ ಅಂತ್ಯಕ್ರಿಯೆ ಇಂದು ಮುಂಬೈಯಲ್ಲಿ ನಡೆಯಲಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.

ನರೇಶ್‌ಗೂ ಕ್ಯಾನ್ಸರ್‌

ಇತ್ತ ನರೇಶ್‌ ಗೋಯಲ್‌ ಅವರಿಗೂ ಕ್ಯಾನ್ಸರ್‌ ಬಾಧಿಸಿದೆ. ಮೇ 3ರಂದು ನರೇಶ್ ಗೋಯಲ್ ಅವರ ವಕೀಲರು ಬಾಂಬೆ ಹೈಕೋರ್ಟ್‌ಗೆ ಜಾಮೀನಿಗಾಗಿ ಮನವಿ ಮಾಡಿದ್ದರು. ಜಾಮೀನು ಅರ್ಜಿಯ ಮೇಲಿನ ಆದೇಶವನ್ನು ಕಾಯ್ದಿರಿಸಿದ ನ್ಯಾಯಾಲಯವು ಮೊದಲು ಗೋಯಲ್ ಅವರನ್ನು ಮೇ 6ರವರೆಗೆ ದಾಖಲಿಸಿರುವ ಖಾಸಗಿ ಆಸ್ಪತ್ರೆಯಿಂದ ಬಿಡುಗಡೆ ಮಾಡದಂತೆ ನಿರ್ದೇಶಿಸಿತ್ತು.

“ನನ್ನ ಹೆಂಡತಿ ಕ್ಯಾನ್ಸರ್‌ನಿಂದ ಬಳಲುತ್ತಿದ್ದಾಳೆ. ನನ್ನ ಮಗಳ ಆರೋಗ್ಯ ಕೂಡ ಹದಗೆಟ್ಟಿದೆ. ಜೈಲಿನಲ್ಲಿರುವ ನನ್ನ ಆರೋಗ್ಯ ಸ್ಥಿತಿಯೂ ಬಿಗಡಾಯಿಸಿದೆ. ನನ್ನನ್ನು ಜೆಜೆ ಆಸ್ಪತ್ರೆಗೆ ಕರೆದುಕೊಂಡು ಹೋಗುತ್ತಾರೆ. ಅಲ್ಲಿ ಸಾಲಿನಲ್ಲಿ ನಿಲ್ಲಲು ಕೂಡ ನನಗೆ ಆಗುವುದಿಲ್ಲ. ನನ್ನ ಕಾಲು ಮಡಚಲು ಸಹ ಆಗುತ್ತಿಲ್ಲ. ಹಾಗಾಗಿ, ನಾನು ಎಲ್ಲ ಭರವಸೆಯನ್ನು ಕಳೆದುಕೊಂಡಿದ್ದೇನೆ. ದಯಮಾಡಿ ನಾನು ಜೈಲಿನಲ್ಲೇ ಸಾಯಲು ಬಿಡಿ” ಎಂದು ನ್ಯಾಯಾಧೀಶರ ಎದುರು ನರೇಶ್‌ ಗೋಯಲ್‌ ಬಿಕ್ಕಳಿಸಿದ್ದರು ಎನ್ನಲಾಗಿದೆ. ನರೇಶ್‌ ಅವರ ಆರೋಗ್ಯ ಸ್ಥಿತಿಯನ್ನು ಗಮನಿಸಿ ಬಾಂಬೆ ಹೈಕೋರ್ಟ್‌ ಮೇ 6ರಂದು ಎರಡು ತಿಂಗಳ ಜಾಮೀನು ಮಂಜೂರು ಮಾಡಿತ್ತು.

ಏನಿದು ಪ್ರಕರಣ?

ನರೇಶ್‌ ಗೋಯಲ್‌ ಅವರು ಕೆನರಾ ಬ್ಯಾಂಕ್‌ನಿಂದ ಸಾಲ ಪಡೆದು, ಕೋಟ್ಯಂತರ ರೂ. ವಂಚಿಸಿದ ಪ್ರಕರಣ ಎದುರಿಸುತ್ತಿದ್ದು, ಇವರ ವಿರುದ್ಧ ಇ.ಡಿ ಅಧಿಕಾರಿಗಳು ಹಣದ ಅಕ್ರಮ ವರ್ಗಾವಣೆ ತಡೆ ಕಾಯ್ದೆ (PMLA) ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಕಳೆದ ಸೆಪ್ಟೆಂಬರ್‌ನಲ್ಲಿ ನರೇಶ್‌ ಗೋಯಲ್‌ ಅವರನ್ನು ಬಂಧಿಸಲಾಗಿತ್ತು.

1992ರಿಂದ ಪ್ರಾರಂಭವಾದ ಜೆಟ್​ ಏರ್​ವೇಸ್‌, ಒಂದು ಕಾಲದಲ್ಲಿ ಭಾರತದ ಅತಿದೊಡ್ಡ ಖಾಸಗಿ ಏರ್​ಲೈನ್​ ಆಗಿತ್ತು. ಲಾಭದಲ್ಲೇ ನಡೆಯುತ್ತಿತ್ತು. ಆದರೆ 2019ರಲ್ಲಿ ಕಂಪನಿ ದಿವಾಳಿ ಘೋಷಣೆ ಮಾಡಿದ್ದಲ್ಲದೆ, ವಿಮಾನಗಳ ಹಾರಾಟವನ್ನು ರದ್ದುಗೊಳಿಸಿತು. 2021ರ ಜೂನ್​​ನಲ್ಲಿ ಜೆಟ್ ಏರ್​ ವೇ ಸ್‌ಅನ್ನು ಜಲನ್-ಕಾಲ್ರಾಕ್ ಒಕ್ಕೂಟ ಸ್ವಾಧೀನ ಪಡಿಸಿಕೊಂಡಿತು. ಅಲ್ಲದೆ, ಮತ್ತೆ ಜೆಟ್‌ ಏರ್‌ವೇಸ್‌ ವಿಮಾನಗಳು ಹಾರಾಟ ನಡೆಸಲಿವೆ ಎಂದು ಹೇಳಲಾಗಿತ್ತು. ಪ್ರಕರಣದಲ್ಲಿ ಈಗಾಗಲೇ ಜೆಟ್‌ ಏರ್‌ವೇಸ್‌, ನರೇಶ್ ಗೋಯಲ್‌‌ ಹಾಗೂ ಅವರ ಸಂಬಂಧಿಕರಿಗೆ ಸೇರಿದ 538 ಕೋಟಿ ರೂಪಾಯಿ ಮೌಲ್ಯದ ಆಸ್ತಿಯನ್ನು ಜಾರಿ ನಿರ್ದೇಶನಾಲಯವು ಜಪ್ತಿ ಮಾಡಿದೆ.

ಇದನ್ನೂ ಓದಿ: Jet Airways: ಕೆನರಾ ಬ್ಯಾಂಕ್​ಗೆ 538 ಕೋಟಿ ರೂ. ವಂಚನೆ; ಜೆಟ್​ ಏರ್​ ವೇ ಸಂಸ್ಥಾಪಕನ ವಿರುದ್ಧ ಸಿಬಿಐ ತನಿಖೆ ಪ್ರಾರಂಭ

Continue Reading
Advertisement
sunil chhetri
ಕ್ರೀಡೆ4 mins ago

Sunil Chhetri: ಮೈ ಬ್ರದರ್, ನಿಮ್ಮ ಬಗ್ಗೆ ಹೆಮ್ಮೆಯಿದೆ ಎಂದು ಚೆಟ್ರಿಗೆ ಶುಭ ಹಾರೈಸಿದ ಗೆಳೆಯ ವಿರಾಟ್​ ಕೊಹ್ಲಿ

Success Story
ದೇಶ9 mins ago

Success Story: ರಾಧಾಮಣಿ ಅಮ್ಮಂಗೆ ವಯಸ್ಸು ಕೇವಲ ನಂಬರ್‌ ಅಷ್ಟೇ; 73 ವರ್ಷದ ಇವರ ಬಳಿ ಇದೆ ಬರೋಬ್ಬರಿ 11 ವಾಹನಗಳ ಲೈಸನ್ಸ್‌

Kiccha Sudeep Max Cinema shooting completed
ಸ್ಯಾಂಡಲ್ ವುಡ್13 mins ago

Kiccha Sudeep: ʻಮ್ಯಾಕ್ಸ್‌ʼ ಸಿನಿಮಾ ಶೂಟಿಂಗ್‌ ಮುಗಿಸಿದ ಕಿಚ್ಚ ಸುದೀಪ್‌: ರಿಲೀಸ್‌ ಯಾವಾಗ?

gold rate today priyamani
ಚಿನ್ನದ ದರ28 mins ago

Gold Rate Today: ಬಂಗಾರದ ಬೆಲೆಯಲ್ಲಿ ಭಾರೀ ಏರಿಕೆ, ಮತ್ತೆ ಚಿನ್ನದ ಮಾರುಕಟ್ಟೆಯಲ್ಲಿ ತುರುಸು; ದರಗಳು ಹೀಗಿವೆ

Swati maliwal
ದೇಶ32 mins ago

Swati Maliwal: ಸ್ವಾತಿ ಮಲಿವಾಲ್‌ ಮೇಲೆ ಹಲ್ಲೆಆರೋಪಿ ಕೇಜ್ರಿವಾಲ್‌ ಜೊತೆ ಏರ್‌ಪೋರ್ಟ್‌ನಲ್ಲಿ ಪ್ರತ್ಯಕ್ಷ

Murder case in Bengaluru
ಬೆಂಗಳೂರು34 mins ago

Murder case : ಮನೆ ಓನರ್ ಕೊಲೆ ಕೇಸ್; ಇದು ಕಳ್ಳಿ ಕೊಲೆಗಾರ್ತಿಯಾದ ಕಥೆ

Cannes 2024 Urvashi Rautela pink gown remind Deepika Padukone
ಬಾಲಿವುಡ್46 mins ago

Cannes 2024: ಕಾನ್ ರೆಡ್‌ ಕಾರ್ಪೆಟ್‌ ಮೇಲೆ ಮಿಂಚಿದ ಊರ್ವಶಿ ರೌಟೇಲಾ: ದೀಪಿಕಾ ಸ್ಟೈಲ್ ಕಾಪಿ ಮಾಡಿದ್ರಾ?

Sanju Samson
ಕ್ರೀಡೆ56 mins ago

Sanju Samson: ಸತತ 4 ಸೋಲು; ಬೇಸರ ಹೊರಹಾಕಿದ ನಾಯಕ ಸಂಜು ಸ್ಯಾಮ್ಸನ್

Suspicious Case
ಬೆಂಗಳೂರು2 hours ago

Suspicious Case : ಬಾತ್‌ ರೂಂನಲ್ಲಿತ್ತು ಕಾಲೇಜು ಹುಡುಗಿ ಡೆಡ್‌ ಬಾಡಿ; ಕುತ್ತಿಗೆ ಕೊಯ್ದು ಸಾಯಿಸಿದವರು ಯಾರು?

Star Suvarna HuAnthiya UhuuAnthiya new celebrity game show
ಕಿರುತೆರೆ2 hours ago

Star Suvarna: ಕಿರುತೆರೆಗೆ ಬರ್ತಿದೆ ಹೊಸ ಸೆಲೆಬ್ರಿಟಿ ಗೇಮ್ ಶೋ ‘Huu ಅಂತೀಯಾ…Uhuu ಅಂತೀಯಾ’: ಪ್ರಸಾರ ಯಾವಾಗ?

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Prajwal Revanna Case
ಕರ್ನಾಟಕ1 day ago

Prajwal Revanna Case: ಪ್ರಜ್ವಲ್‌ ರೇವಣ್ಣ ಇಂದೇ ಜರ್ಮನಿಯಿಂದ ಭಾರತಕ್ಕೆ? ಎಸ್‌ಐಟಿ ಅಲರ್ಟ್‌

Dina Bhavishya
ಭವಿಷ್ಯ1 day ago

Dina Bhavishya : ಭೂ ವ್ಯವಹಾರಕ್ಕೆ ಇದು ಸೂಕ್ತ ಸಮಯ; ವ್ಯಾಪಾರದಲ್ಲಿ ಡಬಲ್‌ ಲಾಭ

HD Revanna Released first reaction after release will be acquitted of all charges
ರಾಜಕೀಯ2 days ago

HD Revanna Released: ರಿಲೀಸ್‌ ಬಳಿಕ ರೇವಣ್ಣ ಫಸ್ಟ್‌ ರಿಯಾಕ್ಷನ್;‌ ನ್ಯಾಯಾಂಗದ ಮೇಲೆ ನಂಬಿಕೆ ಇದೆ; ಆರೋಪ ಮುಕ್ತನಾಗುವೆ

CM Siddaramaiah says Our government is stable for 5 years BJP will disintegrate
Lok Sabha Election 20242 days ago

CM Siddaramaiah: ನಮ್ಮ ಸರ್ಕಾರ 5 ವರ್ಷ ಸುಭದ್ರ; ಚುನಾವಣೆ ಬಳಿಕ ಬಿಜೆಪಿ ಛಿದ್ರ ಎಂದ ಸಿಎಂ ಸಿದ್ದರಾಮಯ್ಯ!

I dont want to go to other states for Lok Sabha Election 2024 campaign for Congress says CM Siddaramaiah
Lok Sabha Election 20242 days ago

CM Siddaramaiah: ಕಾಂಗ್ರೆಸ್‌ ಪರ ಬೇರೆ ರಾಜ್ಯಗಳಿಗೆ ಪ್ರಚಾರಕ್ಕೆ ಹೋಗಲು ನನಗೆ ಇಷ್ಟವಿಲ್ಲ: ಸಿಎಂ ಸಿದ್ದರಾಮಯ್ಯ!

HD Revanna Bail I am not happy that Revanna has been released says HD Kumaraswamy
ರಾಜಕೀಯ2 days ago

HD Revanna Bail: ರೇವಣ್ಣ ಬಿಡುಗಡೆಯಾಗಿದ್ದಕ್ಕೆ ನಾನಂತೂ ಖುಷಿ ಪಡಲ್ಲ ಎಂದ ಎಚ್‌ಡಿಕೆ!

karnataka Rain Effected
ಬೆಂಗಳೂರು2 days ago

Karnataka Rain: ಮಿಡ್‌ನೈಟ್‌ ಮಳೆ ಅವಾಂತರ; ಮರಗಳು, ವಿದ್ಯುತ್‌ ಕಂಬಗಳು ಧರೆಗೆ, ಕುಸಿದು ಬಿದ್ದ ಮನೆ

Dina Bhavishya
ಭವಿಷ್ಯ2 days ago

Dina Bhavishya : ಉದ್ಯೋಗದ ಸ್ಥಳದಲ್ಲಿ ನಿಮ್ಮ ವಿರುದ್ಧ ಪಿತೂರಿ ಮಾಡ್ಬಹುದು ಎಚ್ಚರ!

HD Revanna Bail Revanna will not leave the country condition imposed by the court
ಕ್ರೈಂ3 days ago

HD Revanna Bail: ರೇವಣ್ಣ ದೇಶ ಬಿಡಂಗಿಲ್ಲ, ಕೆ.ಆರ್‌. ನಗರಕ್ಕೆ ಎಂಟ್ರಿ ಕೊಡಂಗಿಲ್ಲ! ಕೋರ್ಟ್‌ ವಿಧಿಸಿದ ಷರತ್ತು ಏನು?

HD Revanna Bail
ಕ್ರೈಂ3 days ago

HD Revanna Bail: ಎಚ್‌.ಡಿ ರೇವಣ್ಣಗೆ ಕೊನೆಗೂ ಜಾಮೀನು; ಎಸ್‌ಐಟಿಗೆ ಮುಖಭಂಗ!

ಟ್ರೆಂಡಿಂಗ್‌