Viral News: ಸಾಯುವ ಮುನ್ನ ವಿದ್ಯಾರ್ಥಿಗಳ ಜೀವ ಕಾಪಾಡಿದ ಶಾಲಾ ಬಸ್ ಚಾಲಕ! - Vistara News

Latest

Viral News: ಸಾಯುವ ಮುನ್ನ ವಿದ್ಯಾರ್ಥಿಗಳ ಜೀವ ಕಾಪಾಡಿದ ಶಾಲಾ ಬಸ್ ಚಾಲಕ!

Viral News: ತಮಿಳುನಾಡಿನಲ್ಲಿ ಮಲಯಪ್ಪನ್ ಎಂಬುವರು ಖಾಸಗಿ ಶಾಲಾ ಬಸ್ ಚಾಲನೆ ಮಾಡುತ್ತಿದ್ದಾಗ ಇದ್ದಕ್ಕಿದ್ದಂತೆ ಎದೆನೋವು ಕಾಣಿಸಿಕೊಂಡಿತು. ಅವರ ಸಾಯುವ ಸ್ಥಿತಿಯಲ್ಲಿದ್ದರೂ ಕೂಡ ಮಕ್ಕಳಿಗೆ ಯಾವುದೇ ಹಾನಿಯಾಗಬಾರದೆಂದು ವಾಹನವನ್ನು ರಸ್ತೆಯ ಬದಿಗೆ ತಂದು ನಿಲ್ಲಿಸಿ ಪ್ರಾಣ ಬಿಟ್ಟಿದ್ದಾರೆ. ಶಾಲಾ ಬಸ್ ಚಾಲಕನ ಈ ನಿಸ್ವಾರ್ಥ ಕಾರ್ಯವು ಅನೇಕ ವಿದ್ಯಾರ್ಥಿಗಳ ಜೀವವನ್ನು ಉಳಿಸಿದೆ.

VISTARANEWS.COM


on

Viral News
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಚೆನ್ನೈ: ನಾವು ಪ್ರತಿದಿನ ನೋಡುವ ಹಾಗೆ ಕೆಲವೊಂದು ಶಾಲಾ ಬಸ್‍ಗಳು ಬಹಳ ವೇಗವಾಗಿ ಚಲಿಸುತ್ತಿರುತ್ತವೆ. ಆ ಬಸ್ಸಿನ ಚಾಲಕರಿಗೆ ತಮ್ಮ ವಾಹನದಲ್ಲಿ ಚಿಕ್ಕ ಮಕ್ಕಳು ಇರುತ್ತಾರೆ ಎಂಬ ಪ್ರಜ್ಞೆ ಕೂಡ ಇರುವುದಿಲ್ಲ. ಅಷ್ಟು ಬೇಜವಾಬ್ದಾರಿಯಿಂದ ವರ್ತಿಸುತ್ತಾರೆ. ಆದರೆ ತಮಿಳುನಾಡಿನ ತಿರುಪ್ಪೂರಿನಲ್ಲಿ ಶಾಲಾ ಬಸ್ ಚಾಲಕನೊಬ್ಬ ಶಾಲಾ ವಿದ್ಯಾರ್ಥಿಗಳನ್ನು ರಕ್ಷಿಸಿ ತನ್ನ ಪ್ರಾಣವನ್ನೇ ತ್ಯಾಗ ಮಾಡಿದ ಹೃದಯ ವಿದ್ರಾವಕ ಘಟನೆ ನಡೆದಿದೆ. ಅದಕ್ಕೆ ಸಂಬಂಧಪಟ್ಟ ಸುದ್ದಿ ಸೋಶಿಯಲ್ ಮೀಡಿಯಾದಲ್ಲಿ ವೈರಲ್ (Viral news) ಆಗಿದೆ.

ಪ್ರತ್ಯಕ್ಷದರ್ಶಿಗಳ ಪ್ರಕಾರ, ತಿರುಪುರ್ ಜಿಲ್ಲೆಯ ಗಂಗೇಯಂ ನಿವಾಸಿ ಮಲಯಪ್ಪನ್ ಖಾಸಗಿ ಶಾಲಾ ಬಸ್ ಚಾಲನೆ ಮಾಡುತ್ತಿದ್ದಾಗ ಇದ್ದಕ್ಕಿದ್ದಂತೆ ಎದೆನೋವು ಕಾಣಿಸಿಕೊಂಡಿತು. ಅವರ ಸಾಯುವ ಸ್ಥಿತಿಯಲ್ಲಿದ್ದರೂ ಕೂಡ ಮಕ್ಕಳಿಗೆ ಯಾವುದೇ ಹಾನಿಯಾಗಬಾರದೆಂದು ಅವರು ವಾಹನವನ್ನು ರಸ್ತೆಯ ಬದಿಗೆ ತಂದು ನಿಲ್ಲಿಸಿ ತಮ್ಮ ಪ್ರಾಣಬಿಟ್ಟಿದ್ದಾರೆ. ಶಾಲಾ ಬಸ್ ಚಾಲಕನ ಈ ನಿಸ್ವಾರ್ಥ ಕಾರ್ಯವು ಅನೇಕ ವಿದ್ಯಾರ್ಥಿಗಳ ಜೀವವನ್ನು ಉಳಿಸಿತು.

ಮಲಯಪ್ಪನ್ ಅವರನ್ನು ಆಸ್ಪತ್ರೆ ಕರೆದುಕೊಂಡು ಹೋದರೂ ಅವರು ಚಿಕಿತ್ಸೆಗೆ ಸ್ಪಂದಿಸದೆ ನಿಧನರಾದರು ಎಂಬುದಾಗಿ ತಿಳಿದುಬಂದಿದೆ. ಅವರ ನಿಸ್ವಾರ್ಥ ಕಾರ್ಯವನ್ನು ವೀರೋಚಿತ ಎಂದು ಶ್ಲಾಘಿಸಲಾಗಿದ್ದು, ಶಾಲಾ ಮಕ್ಕಳ ಸುರಕ್ಷತೆಗಾಗಿ ಅವರ ಸಮರ್ಪಣೆಯನ್ನು ಅನೇಕರು ಹೊಗಳಿದ್ದಾರೆ.

ಇದನ್ನೂ ಓದಿ: ʼಸಾಫ್ಟ್ ಟಚ್ʼ ಸ್ಪಾಗೆ ಹೋಗಿದ್ದ ಕ್ರಿಮಿನಲ್‌ನನ್ನು ಪ್ರೇಯಸಿ ಎದುರೇ ತುಂಡು ತುಂಡಾಗಿ ಕತ್ತರಿಸಿದರು!

ಮೃತ ವ್ಯಕ್ತಿ ವೆಲ್ಲಕೋಯಿಲ್‌ನ ಎಎನ್‍ವಿ ಮೆಟ್ರಿಕ್ ಶಾಲೆಯಲ್ಲಿ ಶಾಲಾ ಬಸ್ ಚಾಲಕನಾಗಿ ಕೆಲಸ ಮಾಡುತ್ತಿದ್ದರು . ಗುರುವಾರ ಸಂಜೆ ಶಾಲಾ ಮಕ್ಕಳನ್ನು ಮನೆಗೆ ಕರೆದೊಯ್ಯುತ್ತಿದ್ದಾಗ ವೆಲ್ಲಕೋಯಿಲ್-ಕರೂರ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಇದ್ದಕ್ಕಿದ್ದಂತೆ ಎದೆನೋವು ಕಾಣಿಸಿಕೊಂಡಿದೆ. ಅವರು ತಕ್ಷಣ ವಾಹನವನ್ನು ರಸ್ತೆಯ ಬದಿಯಲ್ಲಿ ನಿಲ್ಲಿಸಿ ಮಕ್ಕಳ ಜೀವವನ್ನು ಉಳಿಸಿದರು, ಮತ್ತು ತಮ್ಮ ಪ್ರಾಣಬಿಟ್ಟರು ಎಂದು ಪೊಲೀಸರು ತಿಳಿಸಿದ್ದಾರೆ.
ಈ ಬಸ್ ಚಾಲಕನ ಸಾವಿಗೆ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಸಂತಾಪ ವ್ಯಕ್ತಪಡಿಸಿದ್ದು, ‘ಸಾವಿನ ಅಂಚಿನಲ್ಲಿದ್ದರೂ ಅವರು ಮಕ್ಕಳ ಜೀವವನ್ನು ಉಳಿಸಿದ್ದಾರೆ ಎಂದು ಹೊಗಳಿದ್ದಾರೆ. ಈ ಘಟನೆಯು ಅವರ ಕುಟುಂಬಕ್ಕೆ ಆಘಾತವನ್ನುಂಟು ಮಾಡಿದೆ, ಅನೇಕರು ಮಲಯಪ್ಪನ್ ಅವರ ಧೈರ್ಯಕ್ಕೆ ಗೌರವ ಸಲ್ಲಿಸಿದ್ದಾರೆ. ಈ ಘಟನೆಯ ಬಗ್ಗೆ ತನಿಖೆ ನಡೆಯುತ್ತಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Kargil Vijay Diwas 2024: ಕಾರ್ಗಿಲ್ ಯುದ್ಧದಲ್ಲಿ ನಿರ್ಣಾಯಕವಾಗಿದ್ದ ಟೈಗರ್ ಹಿಲ್; 19 ವರ್ಷದ ಯೋಧನ ರೋಚಕ ಸಾಹಸ!

ಕಾರ್ಗಿಲ್ ಯುದ್ಧದಲ್ಲಿ (kargil Vijay diwas 2024) ನಿರ್ಣಾಯಕ ಪ್ರದೇಶಗಳಲ್ಲಿ ಒಂದಾದ ಟೈಗರ್ ಹಿಲ್ ಅನ್ನು ಸಾಕಷ್ಟು ಹೋರಾಟದ ಬಳಿಕ ಭಾರತೀಯ ಸೇನೆ ಮರಳಿ ವಶಕ್ಕೆ ಪಡೆದುಕೊಂಡಿತು. ಈ ಹೋರಾಟದಲ್ಲಿ ಹಲವಾರು ಸೈನಿಕರು ಸಾವನ್ನಪ್ಪಿದ್ದರು. ಕಾರ್ಗಿಲ್ ಯುದ್ಧದಲ್ಲಿ ಟೈಗರ್ ಹಿಲ್ ಪ್ರಮುಖ ಭಾಗವಾಗಲು ಹಲವು ಕಾರಣಗಳಿವೆ. ಈ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ.

VISTARANEWS.COM


on

By

Kargil Vijay Diwas 2024
Koo

ಕಾರ್ಗಿಲ್ ಯುದ್ಧದಲ್ಲಿ (kargil war) ಹಲವು ನಿರ್ಣಾಯಕ ಪ್ರದೇಶಗಳಲ್ಲಿ, ನೆಲೆಗಳಲ್ಲಿ ಭಾರತೀಯ ಸೇನೆ (Indian army) ಪಾಕಿಸ್ತಾನದ (pakistan army) ವಿರುದ್ಧ ಗೆಲುವು ಸಾಧಿಸಿತ್ತು. ಅಂತಹ ಒಂದು ಮಹತ್ವದ ಪ್ರದೇಶ ಟೈಗರ್ ಹಿಲ್ (tiger hill war) . ಇದು ಭಾರತದ ವಿಜಯದಲ್ಲಿ ನಿರ್ಣಾಯಕ ಪಾತ್ರ ವಹಿಸಿತ್ತು. ಪಾಕಿಸ್ತಾನದ ವಿರುದ್ಧದ ಕಾರ್ಗಿಲ್ ಯುದ್ಧದಲ್ಲಿ ಭಾರತದ ವಿಜಯದ ನೆನಪಿಗಾಗಿ ಪ್ರತಿ ವರ್ಷ ಜುಲೈ 26ರಂದು ಕಾರ್ಗಿಲ್ ವಿಜಯ್ ದಿವಸ್ (Kargil Vijay Diwas 2024) ಆಚರಿಸಲಾಗುತ್ತದೆ.

ಟೈಗರ್ ಹಿಲ್ ಯಾಕೆ ನಿರ್ಣಾಯಕ?

ಟೈಗರ್ ಹಿಲ್ ಅಥವಾ ಪಾಯಿಂಟ್ 5062 ಕಾರ್ಗಿಲ್ ಯುದ್ಧದ ಇತಿಹಾಸದಲ್ಲಿ ಅತ್ಯಂತ ನಿರ್ಣಾಯಕ ಸ್ಥಳವಾಗಿದೆ. ಟೈಗರ್ ಹಿಲ್ ಲಡಾಖ್‌ನ ದ್ರಾಸ್-ಕಾರ್ಗಿಲ್ ಪ್ರದೇಶದಲ್ಲಿನ ಒಂದು ಪರ್ವತವಾಗಿದೆ. ಇದು ಈ ಪ್ರದೇಶದ ಅತಿ ಎತ್ತರದ ಶಿಖರಗಳಲ್ಲಿ ಒಂದಾಗಿದೆ. 1999ರ ಭಾರತ- ಪಾಕಿಸ್ತಾನದ ನಡುವೆ ನಡೆದ ಕಾರ್ಗಿಲ್ ಯುದ್ಧದ ಅತ್ಯಂತ ವಿಶಿಷ್ಟವಾದ ಯುದ್ಧ ವಲಯವಾಗಿತ್ತು.

Kargil Vijay Diwas 2024
Kargil Vijay Diwas 2024


ಟೈಗರ್ ಹಿಲ್‌ನ ಮಹತ್ವವೇನು?

ಟೈಗರ್ ಹಿಲ್ ಇಡೀ ಪ್ರದೇಶದಲ್ಲಿ ಅತಿ ಎತ್ತರದ ಬೆಟ್ಟವಾಗಿದೆ. ಇದು ರಾಷ್ಟ್ರೀಯ ಹೆದ್ದಾರಿ 1ಡಿ ಆಗಿದ್ದು, ಶ್ರೀನಗರದಿಂದ ಕಾರ್ಗಿಲ್ ಅನ್ನು ಸಂಪರ್ಕಿಸುತ್ತದೆ. ಕಾರ್ಗಿಲ್ ವಲಯದ ಪ್ರಮುಖ ಸರಬರಾಜು ಮಾರ್ಗವಾಗಿ ಗುರುತಿಸಿಕೊಂಡಿದೆ. ಟೈಗರ್ ಹಿಲ್‌ನ ತುದಿಯಲ್ಲಿರುವ ಯಾವುದೇ ಶತ್ರು ಭಾರತೀಯ ಸೇನೆಯ ಚಲನವಲನ ಮತ್ತು ಶಸ್ತ್ರಾಸ್ತ್ರ ಪೂರೈಕೆಯ ಮೇಲೆ ನೇರ ದೃಷ್ಟಿಯನ್ನು ಇಡಲು ಸಾಧ್ಯವಾಗುತ್ತದೆ.

ಯೋಗೇಂದ್ರ ಯಾದವ್

ಟೈಗರ್ ಹಿಲ್ ವಶಕ್ಕಾಗಿ ನಡೆದ ಹೋರಾಟ ಹೇಗಿತ್ತು?

ಪಾಕಿಸ್ತಾನಿ ಸೇನೆಯು ಜಮ್ಮು ಮತ್ತು ಕಾಶ್ಮೀರದ ಭಾರತದ ಪ್ರದೇಶದೊಳಗೆ ಅಕ್ರಮವಾಗಿ ನುಸುಳಿತ್ತು. ಆಯಕಟ್ಟಿನ ಪ್ರದೇಶವಾದ ಟೈಗರ್ ಹಿಲ್ ಅನ್ನು ವಶಪಡಿಸಿಕೊಂಡಿತ್ತು. ಎತ್ತರದ ಸ್ಥಳದಲ್ಲಿ ಪಾಕ್‌ ಸೈನಿಕರು ಬಂಕರ್‌ ಸ್ಥಾಪಿಸಿಕೊಂಡು ಬೀಡು ಬಿಟ್ಟಿದ್ದರು. ಅಲ್ಲಿಂದ ಅವರನ್ನು ಓಡಿಸುವುದು ಭಾರತೀಯ ಸೇನೆಗೆ ಭಾರಿ ಸವಾಲಾಗಿತ್ತು. ಭಾರತೀಯ ಸೇನೆಯ ಸಿಖ್ ರೆಜಿಮೆಂಟ್‌ಗೆ ಈ ಪ್ರದೇಶವನ್ನು ಮರಳಿ ವಶ ಪಡಿಸಿಕೊಳ್ಳುವ ಟಾಸ್ಕ್‌ ನೀಡಲಾಯಿತು. ದೊಡ್ಡ ಹೋರಾಟ ನಡೆಸಿದ ಬಳಿಕವೂ ಮೊದಲ ಹಂತದಲ್ಲಿ ಸಿಖ್‌ ರೆಜಿಮೆಂಟ್‌ ವಿಫಲವಾಯಿತು. ಆದರೆ ಪಟ್ಟು ಬಿಡದ ಭಾರತೀಯ ಸೇನೆ ಭೂಪ್ರದೇಶವನ್ನು ಮರಳಿ ಪಡೆಯಲು ಸತತ ಪ್ರಯತ್ನಗಳನ್ನು ನಡೆಸಿತು.

ಕಾರ್ಗಿಲ್- ದ್ರಾಸ್ ಪ್ರಾಂತ್ಯದಲ್ಲಿ ಟೈಗರ್ ಹಿಲ್ ಪ್ರಮುಖವಾಗಿತ್ತು. ಇದನ್ನು ಏರಿ ಕುಳಿತಿದ್ದ ಪಾಕಿಗಳನ್ನು ಹಿಮ್ಮೆಟ್ಟಿಸದೆ ವಿಜಯ ಪೂರ್ಣವಾಗಲು ಸಾಧ್ಯವಿರಲಿಲ್ಲ. ಇದು ಭಾರತದ ಕಡೆಯಿಂದ ಏರಲು ತುಂಬಾ ಕಠಿಣವಾದ ಮೈ ಹೊಂದಿದೆ. ಎತ್ತರದಲ್ಲಿ ಪಾಕ್ ಸೈನಿಕರು ಕುಳಿತಿದ್ದು, ಕೆಳಗಿನಿಂದ ಬರುತ್ತಿದ್ದ ಭಾರತೀಯ ಸೈನಿಕರನ್ನು ಸುಲಭವಾಗಿ ಸಾಯಿಸುತ್ತಿದ್ದರು. ಇಲ್ಲಿಂದ ಅವರಿಗೆ ಭಾರತದ ಹೆದ್ದಾರಿ ಎನ್‌ಎಚ್1ಎ ಕಾಣಿಸುತ್ತಿತ್ತು. ಅಲ್ಲಿಂದಲೇ ಹೆದ್ದಾರಿಯ ಮೇಲೆ ಬಾಂಬ್ ಸುರಿಮಳೆಯನ್ನೂ ಸುರಿಸಿ, ಭಾರತೀಯ ಸೇನೆಯ ವಾಹನಗಳು ಓಡಾಡಲಾಗದಂತೆ ಮಾಡಿಬಿಟ್ಟಿದ್ದರು. ಇದನ್ನು ವಶಪಡಿಸಿಕೊಳ್ಳುವುದು ಮುಖ್ಯವಾಗಿತ್ತು. ಜುಲೈ 1ರ ಹೊತ್ತಿಗೆ ಟೈಗರ್ ಹಿಲ್‌ನ ಅಕ್ಕಪಕ್ಕದ ಬೆಟ್ಟಗಳನ್ನು 8 ಸಿಖ್ ರೆಜಿಮೆಂಟ್ ವಶಪಡಿಸಿಕೊಂಡಿತ್ತು. ಟೈಗರ್ ಹಿಲ್ ಅನ್ನು ಕೆಳಗಿನಿಂದ ಏರಲು 18 ಗ್ರೆನೆಡಿಯರ‍್ಸ್ ಪಡೆ ಸಜ್ಜಾಯಿತು. ಡಿ ಕಂಪನಿ ಮತ್ತು ಘಾತಕ್ ಪ್ಲಟೂನ್‌ಗಳ ಕ್ಯಾಪ್ಟನ್ ಸಚಿನ್ ನಿಂಬಾಳ್ಕರ್ ಮತ್ತು ಲೆ.ಬಲವಾನ್ ಸಿಂಗ್ ಅವರು ವೈರಿಗಳಿಗೆ ಆಶ್ಚರ್ಯವಾಗುವಂತೆ, ಕಡಿದಾದ ಶಿಖರದ ಕಡೆಯಿಂದ ಏರಿ, ಗುಂಡಿನ ದಾಳಿ ಆರಂಭಿಸಿದರು.

ಇನ್ನೊಂದು ಕಡೆಯಿಂದ 8 ಸಿಖ್ ರೆಜಿಮೆಂಟ್ ಗುಂಡಿನ ದಾಳಿ ನಡೆಸಿತು. ಬೆಟ್ಟದ ಕಡಿದಾದ ಮೈಯಿಂದ ಹವಿಲ್ದಾರ್ ಮದನ್‌ಲಾಲ್ ಎಂಬ ಧೀರಯೋಧ ತನ್ನ ಪರ್ವತಾರೋಹಿ ಕೌಶಲ್ಯವನ್ನೆಲ್ಲ ಬಳಸಿ ಕಣ್ಣುಕುಕ್ಕುವ ಕಗ್ಗತ್ತಲಿನಲ್ಲಿ ರಾತ್ರಿಯಿಡೀ ಬೆಟ್ಟವೇರಿದ. ಮುಂಜಾನೆ ಶತ್ರುಗಳ ಮೇಲೆ ಇದಕ್ಕಿದ್ದಂತೆ ಎರಗಿದ. ದಿಕ್ಕು ತೋಚದಂತಾದ ವೈರಿಗಳು ಭಯಭೀತರಾಗಿ ಕಾಲಿಗೆ ಬುದ್ಧಿ ಹೇಳಿದರು; ಇಲ್ಲವೇ ಭಾರತೀಯ ಸೈನಿಕರ ಕೈಯಲ್ಲಿ ಹತರಾದರು. ಈ ಯುದ್ಧದಲ್ಲಿ ಗಾಯಗೊಂಡ ಮದನ್‌ಲಾಲ್ ಹುತಾತ್ಮನಾದ. ಯೋಧ ಯೋಗೇಂದ್ರ ಯಾದವ್ ಏಕಾಂಗಿಯಾಗಿ ಹೋರಾಡುತ್ತಾ ಹತ್ತಾರು ಪಾಕ್‌ ಯೋಧರನ್ನು ಕೊಂದರು. 18 ಗ್ರೆನೆಡಿಯರ್ಸ್‌ ನಿರಂತರವಾಗಿ ಶೆಲ್ ದಾಳಿಗಳನ್ನು ನಡೆಸುತ್ತ ವೈರಿಗಳ ದಿಕ್ಕೆಡಿಸಿದರು. ಟೈಗರ್ ಹಿಲ್ ವಿಜಯ ನಿರ್ಣಾಯಕವಾಗಿತ್ತು. ಈ ಎತ್ತರದ ಬೆಟ್ಟವನ್ನು ಗೆದ್ದ ಬಳಿಕ ಉಳಿದ ಬೆಟ್ಟಗಳನ್ನು ಗೆಲ್ಲಲು ಸುಲಭವಾಯಿತು.

Kargil Vijay Diwas 2024
Kargil Vijay Diwas 2024


ಅಂತಿಮವಾಗಿ 1999ರ ಜುಲೈ 3ರಂದು ಸಂಜೆ 5.15ಕ್ಕೆ ಟೈಗರ್ ಹಿಲ್ ಅನ್ನು ಪುನಃ ವಶಪಡಿಸಿಕೊಳ್ಳುವ ಅಂತಿಮ ಪ್ರಯತ್ನ ಪ್ರಾರಂಭವಾಯಿತು. ಈ ಯುದ್ಧ ಹಲವಾರು ದಿನಗಳವರೆಗೆ ನಡೆಯಿತು. ಸಿಖ್ ರೆಜಿಮೆಂಟ್, ನಾಗಾ ರೆಜಿಮೆಂಟ್ ಗ್ರೆನೇಡಿಯರ್ಸ್ ಮತ್ತು ಘಾತಕ್ ಪ್ಲಟೂನ್‌ನೊಂದಿಗೆ ಒಟ್ಟುಗೂಡಿ ಇಡೀ ಬೆಟ್ಟವನ್ನು ಸುತ್ತುವರಿಯಲಾಯಿತು. ಬೆಟ್ಟದ 1000 ಅಡಿ ಎತ್ತರವನ್ನು ಏರಿ ಬೆಟ್ಟದ ತುದಿಯಲ್ಲಿದ್ದ ಶತ್ರುಗಳ ಮೇಲೆ ಭಾರೀ ಫಿರಂಗಿ ದಾಳಿ ನಡೆಸಲಾಯಿತು. ಹಲವಾರು ದಿನಗಳ ಹೋರಾಟದ ಬಳಿಕ ಭಾರತೀಯ ಸೇನೆಯು ಟೈಗರ್ ಹಿಲ್ ಅನ್ನು ಯಶಸ್ವಿಯಾಗಿ ವಶಪಡಿಸಿಕೊಂಡಿತು.

ಇದನ್ನೂ ಓದಿ : Kargil Vijay Diwas 2024: ಗುಂಡುಗಳು ದೇಹ ತೂರಿದ್ದರೂ ಹಿಂದೆ ಸರಿಯದೆ ಶತ್ರುಗಳನ್ನು ಹಿಮ್ಮೆಟ್ಟಿಸಿದರು!

ಕಾರ್ಗಿಲ್ ಯುದ್ಧದ ಸಮಯದಲ್ಲಿ ಟೈಗರ್ ಹಿಲ್ ಅನ್ನು ಪುನಃ ವಶಪಡಿಸಿಕೊಳ್ಳಲು ಪ್ರಮುಖ ಕಾರಣರಾದ ಗ್ರೇನೇಡಿಯರ್ ಯೋಗೇಂದ್ರ ಸಿಂಗ್ ಯಾದವ್ ಅವರಿಗೆ ಪರಮವೀರ ಚಕ್ರವನ್ನು ನೀಡಿ ಗೌರವಿಸಲಾಯಿತು. 19ನೇ ವಯಸ್ಸಿನಲ್ಲಿ ಈ ಗೌರವವನ್ನು ಪಡೆದ ಅತ್ಯಂತ ಕಿರಿಯ ವ್ಯಕ್ತಿಯಾಗಿದ್ದಾರೆ ಯೋಗೇಂದ್ರ ಸಿಂಗ್. ಮಹತ್ವದ ಸಂಗತಿ ಎಂದರೆ ಯೋಗೇಂದ್ರ ಯಾದವ್‌ಗೆ ಈ ಹೋರಾಟದಲ್ಲಿ 18 ಗುಂಡುಗಳು ಬಿದ್ದಿದ್ದವು! ಅವರು ಬದುಕುಳಿದಿದ್ದೇ ಪವಾಡ!

Continue Reading

ಗ್ಯಾಜೆಟ್ಸ್

Apple iPhones: ಆ್ಯಪಲ್‌ ಬ್ರ್ಯಾಂಡ್‌ ಪ್ರಿಯರಿಗೆ ಗುಡ್‌ನ್ಯೂಸ್;‌ ಐಫೋನ್‌ಗಳ ಬೆಲೆಯಲ್ಲಿ ಗಣನೀಯ ಇಳಿಕೆ

ಜುಲೈ 23 ರಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಕೇಂದ್ರ ಬಜೆಟ್ 2024 ರಲ್ಲಿ ಮೊಬೈಲ್ ಫೋನ್‌ಗಳ ಮೂಲ ಕಸ್ಟಮ್ಸ್ ಸುಂಕವನ್ನು ಶೇ.20 ರಿಂದ 15ರಷ್ಟು ಇಳಿಕೆ ಮಾಡಿರುವುದಾಗಿ ಘೋಷಣೆ ಮಾಡಿದ ಬಳಿಕ ಆ್ಯಪಲ್‌ (Apple iPhones) ಈ ಬಾರಿ ಪ್ರೊ ಮಾಡೆಲ್‌ಗಳ ಬೆಲೆಗಳನ್ನು ಕಡಿಮೆ ಮಾಡಿದೆ.

VISTARANEWS.COM


on

By

Apple iPhones
Koo

ನವದೆಹಲಿ: ಆ್ಯಪಲ್‌ ತನ್ನ ಎಲ್ಲ ಮಾದರಿಗಳ ಐಫೋನ್‌ಗಳ (Apple iPhones) ಬೆಲೆಗಳನ್ನು ಶೇ. 3- 4ರಷ್ಟು ಕಡಿತಗೊಳಿಸಿದೆ. ಇದರಿಂದ ಗ್ರಾಹಕರು ಪ್ರೊ ಅಥವಾ ಪ್ರೊ ಮ್ಯಾಕ್ಸ್ ಮಾದರಿ ಮೇಲೆ 5,100 ರಿಂದ 6,000 ರೂ. ವರೆಗೆ (Apple cut prices) ಉಳಿಸಬಹುದಾಗಿದೆ. ಐಫೋನ್ 13, 14 ಮತ್ತು 15 ಸೇರಿದಂತೆ ಇನ್ನು ಕೆಲವು ಮಾದರಿಯ ಐಫೋನ್‌ಗಳು ಮೇಲೆ 300 ರೂ. ಮತ್ತು ಐಫೋನ್ ಎಸ್‌ಇ 2,300 ರೂ. ಕಡಿತ ಮಾಡಲಾಗಿದೆ ಎಂದು ಕಂಪೆನಿ ತಿಳಿಸಿದೆ.

ಇದೇ ಮೊದಲ ಬಾರಿಗೆ ಆ್ಯಪಲ್‌ ತನ್ನ ಪ್ರೊ ಮಾದರಿಗಳಿಗೆ (Pro models) ಬೆಲೆಗಳನ್ನು ಕಡಿಮೆ ಮಾಡಿದೆ. ಹೊಸ ಪ್ರೊ ಮಾದರಿಗಳನ್ನು ಮಾರುಕಟ್ಟೆಯಲ್ಲಿ ಬಿಡುಗಡೆ ಮಾಡಿದ ಅನಂತರ ಕಂಪೆನಿಯು ಹಳೆಯ ಪ್ರೊ ಮಾದರಿಗಳನ್ನು ನಿಲ್ಲಿಸುತ್ತದೆ. ಹಳೆಯ ಪ್ರೊ ಮಾಡೆಲ್‌ಗಳ ದಾಸ್ತಾನುಗಳನ್ನು ಮಾತ್ರ ವಿತರಕರು ಮತ್ತು ಮರುಮಾರಾಟಗಾರರ ಮೂಲಕ ರಿಯಾಯಿತಿ ದರದಲ್ಲಿ ತೆರವು ಮಾಡಲಾಗುತ್ತದೆ. ಹೀಗಾಗಿ ಪ್ರೊ ಮಾದರಿಗಳ ಗರಿಷ್ಠ ಚಿಲ್ಲರೆ ಮಾರಾಟದ ಬೆಲೆಯನ್ನು (MRP) ಇಲ್ಲಿ ಕಡಿಮೆ ಮಾಡಲಾಗಿಲ್ಲ.

ಜುಲೈ 23 ರಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಕೇಂದ್ರ ಬಜೆಟ್ 2024 ರಲ್ಲಿ ಮೊಬೈಲ್ ಫೋನ್‌ಗಳ ಮೂಲ ಕಸ್ಟಮ್ಸ್ ಸುಂಕವನ್ನು ಶೇ.20 ರಿಂದ 15ರಷ್ಟು ಇಳಿಕೆ ಮಾಡಿರುವುದಾಗಿ ಘೋಷಣೆ ಮಾಡಿದ ಬಳಿಕ ಆ್ಯಪಲ್‌ ಈ ಬಾರಿ ಪ್ರೊ ಮಾಡೆಲ್‌ಗಳ ಬೆಲೆಗಳನ್ನು ಕಡಿಮೆ ಮಾಡಿದೆ. ಮೊಬೈಲ್ ಫೋನ್‌ಗಳ ಹೊರತಾಗಿ ಮೊಬೈಲ್ ಫೋನ್ ಚಾರ್ಜರ್‌ಗಳಿಗೆ ಪ್ರಿಂಟೆಡ್ ಸರ್ಕ್ಯೂಟ್ ಬೋರ್ಡ್ ಜೋಡಣೆ ಕಸ್ಟಮ್ಸ್ ಸುಂಕವನ್ನು ಕಡಿತಗೊಳಿಸಲಾಗಿದೆ.

Apple iPhones
Apple iPhones


ಪ್ರಸ್ತುತ, ಭಾರತದಲ್ಲಿ ಮಾರಾಟವಾಗುವ ಆಮದು ಮಾಡಿದ ಸ್ಮಾರ್ಟ್‌ಫೋನ್‌ಗಳು ಶೇ. 18ರಷ್ಟು ಜಿಎಸ್‌ಟಿ ಮತ್ತು ಶೇ. 22ರಷ್ಟು ಕಸ್ಟಮ್ಸ್ ಸುಂಕವನ್ನು ಪಾವತಿಸಬೇಕಾಗುತ್ತದೆ. ಇದರಲ್ಲಿ ಹೆಚ್ಚುವರಿ ಶುಲ್ಕ, ಮೂಲ ಕಸ್ಟಮ್ಸ್ ಸುಂಕ ಕಳೆದು ಶೇ. 10ರಷ್ಟುಉಳಿಯುತ್ತದೆ. ಬಜೆಟ್ ಕಡಿತದ ಅನಂತರ ಒಟ್ಟು ಕಸ್ಟಮ್ಸ್ ಸುಂಕವು ಶೇ. 16.5ರಷ್ಟಾಗಿರುತ್ತದೆ. ಇದರಲ್ಲಿ ಶೇ. 15% ಮೂಲ ಮತ್ತು ಶೇ. 1.5 ಹೆಚ್ಚುವರಿ ಶುಲ್ಕ ಸೇರಿದೆ. ಭಾರತದಲ್ಲಿ ತಯಾರಿಸಿದ ಫೋನ್‌ಗಳಿಗೆ ಕೇವಲ ಶೇ. 18ರಷ್ಟು ಜಿಎಸ್ ಟಿ ವಿಧಿಸಲಾಗುತ್ತದೆ.

ಇದನ್ನೂ ಓದಿ: Samsung Galaxy: ಎಐ ಆಧರಿತ ಗ್ಯಾಲಕ್ಸಿ ಝಡ್ ಫೋಲ್ಡ್ 6, ಝಡ್ ಫ್ಲಿಪ್6 ಹೇಗಿದೆ? ದರ ಎಷ್ಟು?

ಪ್ರಸ್ತುತ ಭಾರತದಲ್ಲಿ ಮಾರಾಟವಾಗುವ ಶೇ.99ರಷ್ಟು ಆ್ಯಪಲ್‌ನ ಮೊಬೈಲ್ ಫೋನ್‌ಗಳನ್ನು ಸ್ಥಳೀಯವಾಗಿ ತಯಾರಿಸಲಾಗುತ್ತದೆ. ಆದರೆ ಆಯ್ದ ಉನ್ನತ ಮಟ್ಟದ ಮಾದರಿಗಳನ್ನು ಮಾತ್ರ ಆಮದು ಮಾಡಿಕೊಳ್ಳಲಾಗುತ್ತದೆ.

Continue Reading

ಕರ್ನಾಟಕ

Dengue Fever: ರಾಜ್ಯದಲ್ಲಿ ನಿಫಾ ವೈರಸ್ ಪ್ರಕರಣ ಪತ್ತೆಯಾಗಿಲ್ಲ: ದಿನೇಶ್ ಗುಂಡೂರಾವ್

Dengue Fever: ಕೇರಳದಲ್ಲಿ ನಿಫಾ ವೈರಸ್ ಕಂಡುಬಂದಿರುವ ಹಿನ್ನೆಲೆಯಲ್ಲಿ ಕೇರಳ ಗಡಿ ಭಾಗದಲ್ಲಿ ಎಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ. ರಾಜ್ಯದಲ್ಲಿ ನಿಫಾ ವೈರಸ್‌ನ ಯಾವುದೇ ಪ್ರಕರಣಗಳು ಪತ್ತೆಯಾಗಿಲ್ಲ ಎಂದು ತಿಳಿಸಿರುವ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ರಾಜ್ಯದಿಂದ ಕೇರಳಕ್ಕೆ ಪ್ರವಾಸ ಕೈಗೊಳ್ಳುವವರು ಎಚ್ಚರಿಕೆ ವಹಿಸಿ ಎಂದು ಮಾರ್ಗಸೂಚಿ ಹೊರಡಿಸಿದ್ದೇವೆ. ತೀರಾ ಅಗತ್ಯವಾಗಿದ್ದರೆ ಮಾತ್ರ ಕೇರಳ ಪ್ರವಾಸ ಕೈಗೊಳ್ಳಿ. ಅನಗತ್ಯವಾಗಿ ಕೇರಳಕ್ಕೆ ತೆರಳುವುದು ಬೇಡ ಎಂದು ಅವರು ರಾಜ್ಯದ ಜನರಲ್ಲಿ ಮನವಿ ಮಾಡಿದ್ದಾರೆ.

VISTARANEWS.COM


on

No cases of Nipah virus have been detected in the state says Minister Dinesh Gundurao
Koo

ಬೆಂಗಳೂರು: ಡೆಂಗ್ಯೂಗೆ (Dengue Fever) ತುತ್ತಾದ ಪ್ರತಿಯೊಬ್ಬರ ಮೇಲೆ 14 ದಿನಗಳವರೆಗೆ ನಿಗಾ ವಹಿಸುವಂತೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಬೆಂಗಳೂರಿನ ಯಲಹಂಕದಲ್ಲಿ ಇಂದು ಡೆಂಗ್ಯೂ ಹಾಟ್‌ಸ್ಪಾಟ್‌ಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಸಚಿವರು, ಡೆಂಗ್ಯೂ ನಿಯಂತ್ರಣ ವಿಚಾರದಲ್ಲಿ ಬೆಂಗಳೂರಿನಲ್ಲಿ ಹೆಚ್ಚಿನ ಗಮನ ಹರಿಸಲಾಗುತ್ತಿದೆ ಎಂದರು.

ಯಲಹಂಕದ ಶಿಂಗೇನಹಳ್ಳಿಯಲ್ಲಿ ಇಂದು ಈಡಿಸ್ ಸೊಳ್ಳೆಯ ಲಾರ್ವಾ ನಾಶಪಡಿಸುವ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಸಚಿವರು, ಸ್ಥಳೀಯ ಶಾಲೆಗಳಿಗೆ ತೆರಳಿ ಡೆಂಗ್ಯೂ ಕುರಿತು ಜಾಗೃತಿ ಮೂಡಿಸಿದರು. ಬಳಿಕ ಸುದ್ದಿಗಾರರಿಗೆ ಪ್ರತಿಕ್ರಿಯೆ ನೀಡಿದ ಸಚಿವರು, ಡೆಂಗ್ಯೂ ನಿಯಂತ್ರಣ ವಿಚಾರದಲ್ಲಿ ಆರೋಗ್ಯ ಇಲಾಖೆ ಸತತ ಪ್ರಯತ್ನಗಳನ್ನ ಮುಂದುವರಿಸಿದೆ. ಮುಂದಿನ ತಿಂಗಳಿನಿಂದ ಡೆಂಗ್ಯೂ ಪ್ರಕರಣಗಳಲ್ಲಿ ಇಳಿಮುಖ ಕಾಣುವ ನಿರೀಕ್ಷೆ ಹೊಂದಿದ್ದೇವೆ ಎಂದರು.

ಇದನ್ನೂ ಓದಿ: Jio Air Fiber: ಗ್ರಾಹಕರಿಗೆ ಭರ್ಜರಿ ರಿಯಾಯಿತಿ ಘೋಷಿಸಿದ ಜಿಯೊ! ಎಲ್ಲಿಯವರೆಗೆ ಈ ಆಫರ್‌?

ಕೆಲವು ಜಿಲ್ಲೆಗಳಲ್ಲಿ ಡೆಂಗ್ಯೂ ಪ್ರಕರಣಗಳು ಇಳಿಮುಖವಾಗಿವೆ. ರಾಜ್ಯದ ಒಟ್ಟು ಡೆಂಗ್ಯೂ ಪ್ರಕರಣಗಳಲ್ಲಿ ಬೆಂಗಳೂರಿನಲ್ಲಿಯೇ ಶೇ. 50 ರಷ್ಟು ಡೆಂಗ್ಯೂ ಪ್ರಕರಣಗಳಿವೆ. ಹೀಗಾಗಿ ಬೆಂಗಳೂರಿನಲ್ಲಿ ಬಿಬಿಎಂಪಿ ಹಾಗೂ ಆರೋಗ್ಯ ಇಲಾಖೆ ಅಧಿಕಾರಿಗಳು ಹೆಚ್ವಿನ ಗಮನ ಹರಿಸಿ ಡೆಂಗ್ಯೂ ಹತೋಟಿಗೆ ತರುವಂತೆ ಸೂಚಿಸಿದ್ದೇನೆ ಎಂದರು.

10 ಜಿಲ್ಲೆಗಳ ಡೆಂಗ್ಯೂ ಹಾಟ್‌ಸ್ಪಾಟ್‌ಗಳಿಗೆ ಉಪನಿರ್ದೇಶಕರ ಮಟ್ಟದ ಅಧಿಕಾರಿಗಳನ್ನು ಕಳುಹಿಸಿಕೊಡಲಾಗುತ್ತಿದೆ. ಸೋಮವಾರ ಹಾಗೂ ಮಂಗಳವಾರ ಅಧಿಕಾರಿಗಳು ಹಾಟ್‌ಸ್ಪಾಟ್‌ಗಳಿಗೆ ಭೇಟಿ ನೀಡಿ ಡೆಂಗ್ಯೂ ನಿಯಂತ್ರಣ ಕ್ರಮಗಳ ಅನುಷ್ಠಾನ ಆಗಿರುವ ಬಗ್ಗೆ ವಿಶೇಷ ಗಮನ ಹರಿಸಲಿದ್ದಾರೆ.

ಎರಡಕ್ಕಿಂತ ಹೆಚ್ಚು ಡೆಂಗ್ಯೂ ಪಾಸಿಟಿವ್ ಪ್ರಕರಣಗಳು ಗೋಚರಿಸಿದರೆ ಡೆಂಗ್ಯೂ ಹಾಟ್‌ಸ್ಪಾಟ್ ಎಂದು ಗುರುತಿಸಲಾಗುತ್ತಿದೆ. ಹೆಚ್ಚಿನ ಪ್ರಕರಣಗಳು ಕಂಡುಬಂದರೆ ಅಲ್ಲಿ ಫೀವರ್ ಕ್ಲಿನಿಕ್‌ಗಳನ್ನು ತೆರೆದು, ಜ್ವರ ಕಾಣಿಸಿಕೊಳ್ಳುವ ಎಲ್ಲರನ್ನು ಡೆಂಗ್ಯೂ ಟೆಸ್ಟಿಂಗ್‌ಗೆ ಒಳಪಡಿಸಲಾಗುತ್ತದೆ ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದರು.

ರಾಜ್ಯದಲ್ಲಿ ನಿಫಾ ವೈರಸ್ ಪ್ರಕರಣಗಳು ಪತ್ತೆಯಾಗಿಲ್ಲ

ಕೇರಳದಲ್ಲಿ ನಿಫಾ ವೈರಸ್ ಕಂಡುಬಂದಿರುವ ಹಿನ್ನೆಲೆಯಲ್ಲಿ ಕೇರಳ ಗಡಿ ಭಾಗದಲ್ಲಿ ಎಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ ಎಂದು ಇದೇ ವೇಳೆ ಸಚಿವ ದಿನೇಶ್ ಗುಂಡೂರಾವ್ ಹೇಳಿದರು. ರಾಜ್ಯದಲ್ಲಿ ನಿಪಾ ವೈರಸ್‌ನ ಯಾವುದೇ ಪ್ರಕರಣಗಳು ಪತ್ತೆಯಾಗಿಲ್ಲ. ರಾಜ್ಯದಿಂದ ಕೇರಳಕ್ಕೆ ಪ್ರವಾಸ ಕೈಗೊಳ್ಳುವವರು ಎಚ್ಚರಿಕೆ ವಹಿಸಿ ಎಂದು ಮಾರ್ಗಸೂಚಿ ಹೊರಡಿಸಿದ್ದೇವೆ. ತೀರಾ ಅಗತ್ಯವಾಗಿದ್ದರೆ ಮಾತ್ರ ಕೇರಳ ಪ್ರವಾಸ ಕೈಗೊಳ್ಳಿ. ಅನಗತ್ಯವಾಗಿ ಕೇರಳಕ್ಕೆ ತೆರಳುವುದು ಬೇಡ ಎಂದು ರಾಜ್ಯದ ಜನರಲ್ಲಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮನವಿ ಮಾಡಿದರು.

ಇದನ್ನೂ ಓದಿ: Kannada New Movie: ʼಜೀನಿಯಸ್ ಮುತ್ತʼನಿಗೆ ಸಾಥ್ ನೀಡಿದ ʼಚಿನ್ನಾರಿ ಮುತ್ತʼ; ಆಗಸ್ಟ್‌ನಲ್ಲಿ ಸಿನಿಮಾ ರಿಲೀಸ್‌

ರಾಜ್ಯದಲ್ಲಿ ಇತ್ತೀಚೆಗೆ ಝೀಕಾ ವೈರಸ್ ಪತ್ತೆಯಾಗಿತ್ತು. ಝೀಕಾ ವೈರಸ್ ಅಷ್ಟೊಂದು ಅಪಾಯಕಾರಿಯಲ್ಲ. ಆದರೆ ನಿಪಾ ಬಗ್ಗೆ ಎಚ್ಚರಿಕೆ ವಹಿಸುವ ಅಗತ್ಯವಿದೆ. ಈ ನಿಟ್ಟಿನಲ್ಲಿ ಆರೋಗ್ಯ ಇಲಾಖೆ ಕೂಡ ಮುಂಜಾಗೃತೆ ಕ್ರಮಗಳನ್ನು ಅನುಸರಿಸಲಿದೆ ಎಂದರು.

Continue Reading

Latest

Viral Video: ಸಿಂಧೂರ ಹಚ್ಚುವಾಗ ಕುಸಿದುಬಿದ್ದ ವಧು; ಎದ್ದೂಬಿದ್ದು ಓಡಿದ ವರ!

Viral Video ಮದುವೆ ಮಂಟಪದಲ್ಲಿ ವಧು ಕುಳಿತಿದ್ದಾಗ ವರ ವಧುವಿನ ಹಣೆಗೆ ಸಿಂಧೂರ ಹಚ್ಚಲು ಹೋಗಿದ್ದಾನೆ. ಆ ವೇಳೆಗೆ ವಧು ಕಿರುಚುತ್ತಾ ನೆಲದ ಮೇಲೆ ಬಿದ್ದಿದ್ದಾಳೆ. ಇದನ್ನು ನೋಡಿದ ವರ ತಲೆಯ ಮೇಲಿದ್ದ ಪೇಟವನ್ನು ಎಸೆದು ಓಡಲು ಪ್ರಾರಂಭಿಸಿದ್ದಾನೆ. ಆಗ ಅಲ್ಲಿದ್ದ ಮಹಿಳೆಯರಿಬ್ಬರು ಆತನನ್ನು ತಡೆಯಲು ಪ್ರಯತ್ನಿಸುತ್ತಾ ಜೊತೆಗೆ ವಧುವನ್ನು ಮೇಲೆತ್ತಲು ಪ್ರಯತ್ನಿಸುತ್ತಿದ್ದಾರೆ. ಆದರೂ ವರ ಅಲ್ಲಿಂದ ಹೋಗಿದ್ದಾನೆ. ಈ ಘಟನೆ ವಿಡಿಯೊದಲ್ಲಿ ಸೆರೆಯಾಗಿದೆ. ಈ ಘಟನೆಯಿಂದ ಗಂಭೀರವಾಗಿ ನಡೆಯಬೇಕಿದ್ದ ವಿವಾಹ ಸಮಾರಂಭ ಹಾಸ್ಯಾಸ್ಪದವಾಗಿದೆ.

VISTARANEWS.COM


on

Viral Video
Koo


ಮದುವೆ ಎನ್ನುವುದು ಎಲ್ಲರ ಜೀವನದಲ್ಲೂ ಬಹಳ ವಿಶೇಷವಾದುದು. ಹಾಗಾಗಿ ಮದುವೆಯ ಸಮಾರಂಭವನ್ನು ಬಹಳ ವಿಶೇಷವಾಗಿ ಮಾಡಲು ಹಲವು ದಿನಗಳಿಂದ ಯೋಜನೆ ಮಾಡುತ್ತಾರೆ. ಈ ದಿನ ವಧುವರರು ತುಂಬಾ ಖುಷಿಯಲ್ಲಿರುತ್ತಾರೆ. ಆದರೆ ಇಲ್ಲೊಂದು ಮದುವೆಯಲ್ಲಿ ವರ ಸಿಂಧೂರ ಹಚ್ಚಲು ಬಂದಾಗ ವಧು ಕುಸಿದು ಬಿದ್ದ ಘಟನೆ ನಡೆದಿದ್ದು, ಇದಕ್ಕೆ ಸಂಬಂಧಪಟ್ಟ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ವೈರಲ್ (Viral Video) ಆಗಿದೆ.

ವಿಡಿಯೊದಲ್ಲಿ ಮದುವೆ ಮಂಟಪದಲ್ಲಿ ವಧು ಕುಳಿತಿದ್ದಾಗ ವರ ವಧುವಿನ ಹಣೆಗೆ ಸಿಂಧೂರ ಹಚ್ಚಲು ಹೋಗಿದ್ದಾನೆ. ಆ ವೇಳೆಗೆ ವಧು ಕಿರುಚುತ್ತಾ ನೆಲದ ಮೇಲೆ ಬಿದ್ದಿದ್ದಾಳೆ. ಇದನ್ನು ನೋಡಿದ ವರ ತಲೆಯ ಮೇಲಿದ್ದ ಪೇಟವನ್ನು ಎಸೆದು ಓಡಲು ಪ್ರಾರಂಭಿಸಿದ್ದಾನೆ. ಆಗ ಅಲ್ಲಿದ್ದ ಮಹಿಳೆಯರಿಬ್ಬರು ಆತನನ್ನು ತಡೆಯಲು ಪ್ರಯತ್ನಿಸುತ್ತಾ ಜೊತೆಗೆ ವಧುವನ್ನು ಮೇಲೆತ್ತಲು ಪ್ರಯತ್ನಿಸುತ್ತಿದ್ದಾರೆ. ಆದರೂ ವರ ಅಲ್ಲಿಂದ ಹೋಗಿದ್ದಾನೆ. ಈ ಘಟನೆ ವಿಡಿಯೊದಲ್ಲಿ ಸೆರೆಯಾಗಿದೆ. ಈ ಘಟನೆಯಿಂದ ಗಂಭೀರವಾಗಿ ನಡೆಯಬೇಕಿದ್ದ ವಿವಾಹ ಸಮಾರಂಭ ಹಾಸ್ಯಾಸ್ಪದವಾಗಿದೆ. ಮತ್ತು ಈ ಘಟನೆ ನೋಡಿದವರಿಗೆ ದಿಗ್ಭ್ರಮೆಯಾಗುವುದಂತು ಖಂಡಿತ.

ಈ ವೈರಲ್ ವಿಡಿಯೊ ನೋಡಿ ಅನೇಕರು ತಮಾಷೆಯಿಂದ ನಕ್ಕಿದ್ದಾರೆ. ಈ ಮದುವೆ ದಿನ ನಡೆದ ಘಟನೆಯನ್ನು ನೋಡಿದವರಿಗೆ ಇದು ನಿಜವಾಗಿಯೂ ಸ್ಮರಣೀಯವಾಗಿರುತ್ತದೆ. ಯಾಕೆಂದರೆ ವಧು ಕುಸಿದು ಬಿದ್ದಿದ್ದನ್ನು ಕಂಡು ವರನ ಪ್ರತಿಕ್ರಿಯೆ ಬಹಳ ತಮಾಷೆಯಾಗಿದೆ. ಅದನ್ನು ನೋಡಿದ ಎಲ್ಲರಿಗೂ ಪದೇ ಪದೇ ಈ ಘಟನೆ ನೆನಪಾಗುವುದು ಖಂಡಿತ. ಇದು ತಮಾಷೆಗಾಗಿಯೇ ಮಾಡಿದ ವಿಡಿಯೊದಂತಿದೆ.

ನಾವು ಆಗಾಗ್ಗೆ ಅಂತರ್ಜಾಲದಲ್ಲಿ ಹಲವಾರು ಮದುವೆಗೆ ಸಂಬಂಧಪಟ್ಟ ವಿಡಿಯೊಗಳನ್ನು ನೋಡುತ್ತಿರುತ್ತೇವೆ, ಇದು ಕೆಲವೊಮ್ಮೆ ಮನರಂಜನೆಯನ್ನು ನೀಡುತ್ತದೆ. ಇತ್ತೀಚೆಗೆ, ಇದೇ ರೀತಿಯ ವಿವಾಹದ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು. ಈ ವಿಡಿಯೊದಲ್ಲಿ, ವಧು ಮತ್ತು ವರ ಕುರ್ಚಿಯ ಮೇಲೆ ಒಟ್ಟಿಗೆ ಕುಳಿತಿದ್ದರು. ವಧು ಇದ್ದಕ್ಕಿದ್ದಂತೆ ತಲೆ ತಗ್ಗಿಸಿ ಅಳಲು ಪ್ರಾರಂಭಿಸುತ್ತಾಳೆ.

ಇದನ್ನೂ ಓದಿ: ವಿಮಾನದಲ್ಲಿ ಸಾರಾ ಅಲಿ ಖಾನ್‌ ಮೇಲೆ ಜ್ಯೂಸ್‌ ಚೆಲ್ಲಿದ ಗಗನಸಖಿ! ಮುಂದೇನಾಯ್ತು? ವಿಡಿಯೊ ನೋಡಿ

ವಧು ಸಂತೋಷವಾಗಿರದ ಕಾರಣ ಆಕೆಗೆ ಏನೋ ತೊಂದರೆಯಾಗಿದೆ ಎಂಬುದನ್ನು ಇದರಿಂದ ತಿಳಿಯಬಹುದು. ಅವಳು ಸ್ವಲ್ಪ ಹೊತ್ತು ಮೌನವಾಗಿ ಕುಳಿತು ನಂತರ ಕಣ್ಣೀರು ಹಾಕಿದಳು. ವಧುವಿನ ಹಠಾತ್ ನಡವಳಿಕೆ ಎಲ್ಲರನ್ನೂ ಆಶ್ಚರ್ಯಚಕಿತಗೊಳಿಸಿತು. ಪತಿ ನೋಡಲು ಸುಂದರವಾಗಿಲ್ಲ ಎಂದು ಆಕೆ ಕಣ್ಣೀರು ಹಾಕುತ್ತಿದ್ದಾಳೆ ಎಂದು ಹಲವಾರು ನೆಟ್ಟಿಗರು ಕಾಮೆಂಟ್ ಮಾಡಿದ್ದರು.

Continue Reading
Advertisement
Kargil Vijay Diwas 2024
ದೇಶ5 mins ago

Kargil Vijay Diwas 2024: ಕಾರ್ಗಿಲ್ ಯುದ್ಧದಲ್ಲಿ ನಿರ್ಣಾಯಕವಾಗಿದ್ದ ಟೈಗರ್ ಹಿಲ್; 19 ವರ್ಷದ ಯೋಧನ ರೋಚಕ ಸಾಹಸ!

Apple iPhones
ಗ್ಯಾಜೆಟ್ಸ್7 mins ago

Apple iPhones: ಆ್ಯಪಲ್‌ ಬ್ರ್ಯಾಂಡ್‌ ಪ್ರಿಯರಿಗೆ ಗುಡ್‌ನ್ಯೂಸ್;‌ ಐಫೋನ್‌ಗಳ ಬೆಲೆಯಲ್ಲಿ ಗಣನೀಯ ಇಳಿಕೆ

ಕರ್ನಾಟಕ8 mins ago

PU Lecturer Recruitment: ಪ್ರೌಢಶಾಲಾ ಶಿಕ್ಷಕರು ಪಿಯು ಕಾಲೇಜಿಗೆ ಬಡ್ತಿ ಪಡೆಯಲು ಅರ್ಹತಾ ಅಂಕ ಶೇ.50ಕ್ಕೆ ಇಳಿಕೆ

karnataka rain
ಮಳೆ16 mins ago

Karnataka Rain : ಉಕ್ಕಿ ಹರಿಯುವ ನೇತ್ರಾವತಿ ನದಿಯಲ್ಲಿ ತೇಲಿ ಬಂದ ಜೀವಂತ ಹಸು

PARIS OLYMPICS 2024
ಪ್ರಮುಖ ಸುದ್ದಿ26 mins ago

PARIS OLYMPICS 2024 : ಪ್ಯಾರಿಸ್ ಒಲಿಂಪಿಕ್ಸ್​​ ಗ್ರಾಮದಲ್ಲೇ ಮದುವೆ ನಿಶ್ಚಿತಾರ್ಥ ಮಾಡಿಕೊಂಡ ಅಥ್ಲೀಟ್​ಗಳು

Stock Market
ವಾಣಿಜ್ಯ27 mins ago

Stock Market: ಷೇರು ಮಾರುಕಟ್ಟೆಗೆ ಶುಭ ಶುಕ್ರವಾರ; ಹೂಡಿಕೆದಾರರಿಗೆ 7 ಲಕ್ಷ ಕೋಟಿ ರೂ. ಭರ್ಜರಿ ಲಾಭ!

Shubman Gill
ಕ್ರೀಡೆ42 mins ago

Shubman Gill: ಬಾಂಗ್ಲಾ ವಿರುದ್ಧದ ಟೆಸ್ಟ್​ ಸರಣಿಗೆ ಶುಭಮನ್​ ಗಿಲ್​ ಉಪನಾಯಕ!

Kannada New Movie Parapancha Gama Gama Powder song out
ಸ್ಯಾಂಡಲ್ ವುಡ್57 mins ago

Kannada New Movie: “ಪೌಡರ್” ತಂಡದಿಂದ ಹೊರ ಬಿತ್ತು ಹೊಸ ಹಾಡು; “ಪರಪಂಚವೇ ಘಮ ಘಮ”!

No cases of Nipah virus have been detected in the state says Minister Dinesh Gundurao
ಕರ್ನಾಟಕ60 mins ago

Dengue Fever: ರಾಜ್ಯದಲ್ಲಿ ನಿಫಾ ವೈರಸ್ ಪ್ರಕರಣ ಪತ್ತೆಯಾಗಿಲ್ಲ: ದಿನೇಶ್ ಗುಂಡೂರಾವ್

Kampli Gangavathi link bridge inundation fear
ಬಳ್ಳಾರಿ1 hour ago

Ballari News: ಕಂಪ್ಲಿ-ಗಂಗಾವತಿ ಸಂಪರ್ಕ ಸೇತುವೆ ಮುಳುಗಡೆ ಭೀತಿ; ಸಂಚಾರಕ್ಕೆ ನಿರ್ಬಂಧ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka rain
ಮಳೆ16 mins ago

Karnataka Rain : ಉಕ್ಕಿ ಹರಿಯುವ ನೇತ್ರಾವತಿ ನದಿಯಲ್ಲಿ ತೇಲಿ ಬಂದ ಜೀವಂತ ಹಸು

Karnataka Rain
ಮಳೆ1 hour ago

Karnataka Rain: ವಿದ್ಯುತ್‌ ದುರಸ್ತಿಗಾಗಿ ಪ್ರಾಣದ ಹಂಗು ತೊರೆದು ಉಕ್ಕಿ ಹರಿಯುವ ನೀರಿಗೆ ಧುಮುಕಿದ ಲೈನ್‌ ಮ್ಯಾನ್‌!

Karnataka rain
ಮಳೆ2 hours ago

Karnataka Rain : ಹಾಸನದಲ್ಲಿ ಹೇಮಾವತಿ, ಚಿಕ್ಕಮಗಳೂರಲ್ಲಿ ಭದ್ರೆಯ ಅಬ್ಬರಕ್ಕೆ ಜನರು ತತ್ತರ

karnataka Rain
ಮಳೆ1 day ago

Karnataka Rain : ಮನೆಯೊಳಗೆ ನುಗ್ಗಿದ ಮಳೆ ನೀರು; ಕಾಲು ಜಾರಿ ಬಿದ್ದು ವೃದ್ಧೆ ಸಾವು

Actor Darshan
ಸ್ಯಾಂಡಲ್ ವುಡ್1 day ago

Actor Darshan: ನಟ ದರ್ಶನ್ ಇರುವ ಜೈಲು ಕೋಣೆ ಹೇಗಿದೆ?

Actor Darshan
ಸಿನಿಮಾ1 day ago

Actor Darshan : ಹೆಂಡ್ತಿ ಮಕ್ಕಳೊಟ್ಟಿಗೆ ಚೆನ್ನಾಗಿರು.. ಸಹಕೈದಿ ಜತೆಗೆ 12 ನಿಮಿಷ ಕಳೆದ ನಟ ದರ್ಶನ್‌

Actor Darshan
ಸಿನಿಮಾ1 day ago

Actor Darshan: ಆಧ್ಯಾತ್ಮದತ್ತ ವಾಲಿದ ದರ್ಶನ್‌; ಜೈಲಲ್ಲಿ ಹೇಗಿದೆ ಗೊತ್ತಾ ನಟನ ಬದುಕು

karnataka Weather Forecast
ಮಳೆ2 days ago

Karnataka Weather : ರಭಸವಾಗಿ ಸುರಿಯುವ ಮಳೆ; 50 ಕಿ.ಮೀ ವೇಗದಲ್ಲಿ ಬೀಸುತ್ತೆ ಗಾಳಿ

karnataka weather Forecast
ಮಳೆ3 days ago

Karnataka Weather : ರಾಜ್ಯದಲ್ಲಿ ಮುಂದುವರಿದ ಮಳೆ ಅವಾಂತರ; ನಾಳೆಯೂ ಇರಲಿದೆ ಅಬ್ಬರ

Udupi News
ಉಡುಪಿ3 days ago

Udupi News : ಹಳೆ ಲಾರಿ ಚಾಸ್ಸಿಯಲ್ಲೇ ಕಿರು ಸೇತುವೆ ನಿರ್ಮಾಣ! ಬೈಂದೂರು ಶಾಸಕರ ಪರಿಕಲ್ಪನೆಗೆ ಜನರು ಫಿದಾ

ಟ್ರೆಂಡಿಂಗ್‌