Jio Air Fiber: ಗ್ರಾಹಕರಿಗೆ ಭರ್ಜರಿ ರಿಯಾಯಿತಿ ಘೋಷಿಸಿದ ಜಿಯೊ! ಎಲ್ಲಿಯವರೆಗೆ ಈ ಆಫರ್‌? - Vistara News

ವಾಣಿಜ್ಯ

Jio Air Fiber: ಗ್ರಾಹಕರಿಗೆ ಭರ್ಜರಿ ರಿಯಾಯಿತಿ ಘೋಷಿಸಿದ ಜಿಯೊ! ಎಲ್ಲಿಯವರೆಗೆ ಈ ಆಫರ್‌?

Jio Air Fiber: ಜಿಯೋದಿಂದ ಏರ್ ಫೈಬರ್ ಹೊಸ ಗ್ರಾಹಕರಿಗೆ “ಫ್ರೀಡಂ ಆಫರ್” ಶೇಕಡಾ 30ರಷ್ಟು ರಿಯಾಯಿತಿ ಘೋಷಣೆ ಮಾಡಲಾಗಿದೆ. ಅಂದ ಹಾಗೆ ಜಿಯೋಫೈಬರ್ ಅಥವಾ ಏರ್ ಫೈಬರ್ ಎಂಬುದು ದೇಶದಲ್ಲಿಯೇ ಅತಿ ವೇಗವಾಗಿ ಬೆಳೆಯುತ್ತಿರುವ ಮತ್ತು ಅತಿ ದೊಡ್ಡದಾದ ಗೃಹ ಬ್ರಾಡ್ ಬ್ಯಾಂಡ್ ಹಾಗೂ ಮನರಂಜನಾ ಸೇವೆಯನ್ನು ಒದಗಿಸುತ್ತಿರುವ ಸಂಸ್ಥೆಯಾಗಿದೆ. ಏನು ಈ ಕೊಡುಗೆ ಎಂಬ ವಿವರ ಇಲ್ಲಿದೆ.

VISTARANEWS.COM


on

Jio announced 30 Percent discount on Freedom Offer for Air Fiber new customers
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮುಂಬೈ: ಜಿಯೋದಿಂದ ಏರ್ ಫೈಬರ್ ಹೊಸ ಗ್ರಾಹಕರಿಗೆ “ಫ್ರೀಡಂ ಆಫರ್” ಶೇಕಡಾ 30ರಷ್ಟು ರಿಯಾಯಿತಿ ಘೋಷಣೆ ಮಾಡಲಾಗಿದೆ. ಅಂದ ಹಾಗೆ ಜಿಯೋ ಫೈಬರ್ ಅಥವಾ ಏರ್ ಫೈಬರ್ ಎಂಬುದು ದೇಶದಲ್ಲಿಯೇ ಅತಿ ವೇಗವಾಗಿ ಬೆಳೆಯುತ್ತಿರುವ ಮತ್ತು ಅತಿ ದೊಡ್ಡದಾದ ಗೃಹ ಬ್ರಾಡ್ ಬ್ಯಾಂಡ್ ಹಾಗೂ ಮನರಂಜನಾ ಸೇವೆಯನ್ನು ಒದಗಿಸುತ್ತಿರುವ (Jio Air Fiber) ಸಂಸ್ಥೆಯಾಗಿದೆ.

1.2 ಕೋಟಿ ಮನೆಗಳೊಂದಿಗೆ ಜಿಯೋಫೈಬರ್ ಅಥವಾ ಏರ್ ಫೈಬರ್ ಎಂಬುದು ಅತ್ಯಂತ ವೇಗವಾಗಿ ಬೆಳವಣಿಗೆ ಕಾಣುತ್ತಿದೆ. ಭಾರತೀಯರ ಮನೆಗಳನ್ನು ಇನ್ನಷ್ಟು ವೇಗವಾಗಿ ಡಿಜಿಟೈಸ್ ಮಾಡುವ ಉದ್ದೇಶದಿಂದ ಮತ್ತು ಭಾರತವನ್ನು ಡಿಜಿಟಲ್ ಸಮುದಾಯವಾಗಿ ಮಾರ್ಪಡಿಸುವ ಉದ್ದೇಶದಿಂದ ಜಿಯೋದಿಂದ ಈ ಭರವಸೆಯ ಕೊಡುಗೆಯನ್ನು ಘೋಷಣೆ ಮಾಡಲಾಗಿದೆ. ಇದರಿಂದಾಗಿ ಇನ್ನಷ್ಟು ಮನೆಗಳಲ್ಲಿ ಈ ಸಂಪರ್ಕ ಪಡೆಯುವುದಕ್ಕೆ ಉತ್ತೇಜನ ದೊರೆಯುತ್ತದೆ. ಈಗಾಗಲೇ ಕೈಗೆಟುಕುವ ಬೆಲೆಯಲ್ಲಿ ಇರುವ ಜಿಯೋಏರ್ ಫೈಬರ್ ಪ್ಲಾನ್‌ಗಳ ಜತೆಗೆ ಶೇಕಡಾ 30ರಷ್ಟು ರಿಯಾಯಿತಿ ನೀಡಲಾಗುತ್ತಿದೆ ಎಂದು ಕಂಪನಿಯ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ: Paris Olympics India schedule: ಒಲಿಂಪಿಕ್ಸ್​ನಲ್ಲಿ ನಾಳೆ ಭಾರತ ಯಾವೆಲ್ಲ ವಿಭಾಗದಲ್ಲಿ ಸ್ಪರ್ಧಿಸಲಿದೆ?; ಇಲ್ಲಿದೆ ಸಂಪೂರ್ಣ ವೇಳಾಪಟ್ಟಿ

ಈ ಫ್ರೀಡಂ ಆಫರ್ ಜತೆಗೆ ಹೊಸ ಜಿಯೋಏರ್ ಫೈಬರ್ ಬಳಕೆದಾರರು ಶೇ 30ರಷ್ಟು ರಿಯಾಯಿತಿಯನ್ನು ಹೊಸ ಸಂಪರ್ಕವನ್ನು 1000 ರೂಪಾಯಿಯ ಇನ್‌ಸ್ಟಲೇಷನ್ ಶುಲ್ಕದ ಮನ್ನಾದ ಮೂಲಕ ಪಡೆಯುತ್ತಾರೆ. ಇದು ಸೀಮಿತ ಅವಧಿಯ ಕೊಡುಗೆ ಆಗಿದ್ದು, ಜುಲೈ 26ರಿಂದ ಆಗಸ್ಟ್ 15ನೇ ತಾರೀಕಿನ ಮಧ್ಯೆ ಇರುತ್ತದೆ.

ಜಿಯೋಏರ್ ಫೈಬರ್ ಸಂಪರ್ಕ ಪಡೆಯುವುದು ಹೇಗೆ?

ಇನ್ನು ಜಿಯೋಏರ್ ಫೈಬರ್ ಸಂಪರ್ಕ ಪಡೆಯುವುದು ಹೇಗೆ ಎಂಬ ಪ್ರಶ್ನೆ ಇದೆಯಾ? ಅದು ಬಹಳ ಸರಳ. Jio.com ವೆಬ್‌ಸೈಟ್‌ಗೆ ಭೇಟಿ ನೀಡಿ ಮತ್ತು ನಿಮಗಿರುವ ಆಸಕ್ತಿಯನ್ನು ತಿಳಿಸಿ ಅಥವಾ 60008-60008 ಈ ಸಂಖ್ಯೆಗೆ ಮಿಸ್ಡ್ ಕಾಲ್ ನೀಡಿ. ಜಿಯೋದಿಂದ ಸ್ಥಿರ ನಿಸ್ತಂತು (ವೈರ್ಲೆಸ್) ಕೊಡುಗೆ ಏರ್ ಫೈಬರ್ ಅನ್ನು ಕಳೆದ ವರ್ಷ ಗಣೇಶ ಚತುರ್ಥಿಗೆ ಪರಿಚಯಿಸಲಾಯಿತು.

ಜಿಯೋದಿಂದ 5ಜಿ ಸ್ಟ್ಯಾಂಡ್ ಅಲೋನ್ ಸಂಪರ್ಕ ಸೇವೆಗಳನ್ನು ನಿಯೋಜಿಸಲಾಗಿದೆ. 5ಜಿ ಸ್ಥಿರ ನಿಸ್ತಂತು ಸಂಪರ್ಕವನ್ನು ಒದಗಿಸುವುದಕ್ಕೆ ಮೀಸಲಿಟ್ಟ ನೆಟ್‌ವರ್ಕ್ ಬಳಕೆ ಮಾಡುತ್ತಿದೆ. ನೆಟ್‌ವರ್ಕ್ ಇಕ್ಕಟ್ಟಾಗುವುದನ್ನು ನಿರ್ವಹಿಸುವುದಕ್ಕೆ ಇದರಿಂದ ಸಹಾಯ ಆಗುತ್ತದೆ. ಆದರೂ ಏರ್‌ಫೈಬರ್‌ನ ಸರಾಸರಿ ಬಳಕೆದಾರರು ಒಂದು ತಿಂಗಳಿಗೆ 400 ಜಿಬಿ ಡೇಟಾ ಬಳಸುತ್ತಾರೆ.

ಏನಿದು ಜಿಯೋ ಏರ್ ಫೈಬರ್?

ಯಾವುದೇ ತಂತಿ ಇಲ್ಲದೆ ಫೈಬರ್ ರೀತಿ ವೇಗವನ್ನು ಗಾಳಿಯ ಮೂಲಕವೇ ಒದಗಿಸುತ್ತದೆ ಏರ್ ಫೈಬರ್. ಬಳಕೆದಾರರು ಪ್ಲಗ್ ಹಾಕಿ, ಆನ್ ಮಾಡಿದರೆ ಆಯಿತು. ಇಷ್ಟು ಮಾಡಿದಲ್ಲಿ ತಮ್ಮ ಮನೆಯಲ್ಲಿ ವೈಯಕ್ತಿಕವಾಗಿ ಹಾಟ್‌ಸ್ಪಾಟ್ ಅನ್ನು ತಮ್ಮ ಮನೆಯಲ್ಲಿ ಇರಿಸಿಕೊಂಡಂತಾಗುತ್ತದೆ.

ಇದನ್ನೂ ಓದಿ: Rain in Karnataka: ಬೆಳಗಾವಿಯಲ್ಲಿ ನಗರದೊಳಗೆ ಬಂದ ನದಿಗಳು, ಮನೆ ಖಾಲಿ ಮಾಡಿದ ಜನ

ಜಿಯೋಫೈಬರ್ ಸ್ಥಿರ ನಿಸ್ತಂತು ಸಂಪರ್ಕ ಪರಿಹಾರವಾಗಿದ್ದು, ಇದರಿಂದ ಯಾವುದೇ ಅಡೆತಡೆಯಿಲ್ಲದೆ 1 ಜಿಬಿಪಿಎಸ್ ತನಕದ ಹೈ- ಸ್ಪೀಡ್ ಸಂಪರ್ಕ ಮನೆ ಮತ್ತು ಕಚೇರಿಗಳಿಗೆ ದೊರೆಯುತ್ತದೆ. ಏಕಕಾಲಕ್ಕೆ ಹಲವು ಸಾಧನಗಳನ್ನು ಬಳಸಬಹುದು. ಸ್ಮಾರ್ಟ್‌ ಫೋನ್, ಪರ್ಸನಲ್ ಕಂಪ್ಯೂಟರ್‌ಗಳು, ಟ್ಯಾಬ್ಲೆಟ್, ಸ್ಮಾರ್ಟ್ ಟಿವಿಗಳು, ಮತ್ತು ಇದರ ಜತೆಗೆ ಸೆಟ್ ಟಾಪ್ ಬಾಕ್ಸ್‌ಗಳನ್ನು ಸಹ ಏಕಕಾಲಕ್ಕೆ ಸಂಪರ್ಕ ಕೊಡಬಹುದು, ಅದು ಕೂಡ ಇಂಟರ್‌ನೆಟ್ ವೇಗದಲ್ಲಿ ಯಾವುದೇ ರೀತಿಯಲ್ಲಿ ಕಡಿಮೆ ಇಲ್ಲದಂತೆ ಸಾಧ್ಯವಾಗುತ್ತದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

GPF Cap: ಸರ್ಕಾರಿ ನೌಕರರಿಗೆ ಬ್ಯಾಡ್‌ ನ್ಯೂಸ್;‌ ಜಿಪಿಎಫ್‌ಗೆ 5 ಲಕ್ಷ ರೂ. ಮಿತಿ ಹೇರಿದ ಕರ್ನಾಟಕ ಸರ್ಕಾರ!

GPF Cap: ಸಾಮಾನ್ಯ ಭವಿಷ್ಯ ನಿಧಿ ಚಂದಾದಾರರು ಒಂದು ವರ್ಷಕ್ಕೆ ಪಾವತಿಸಬಹುದಾದ ವಂತಿಗೆಯನ್ನು 5 ಲಕ್ಷ ರೂ.ಗೆ ಮಿತಿಗೊಳಿಸಲಾಗಿದೆ. ಈ ಅಂಶವನ್ನು ರಾಜ್ಯ ಸರ್ಕಾರದಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲ ಅಖಿಲ ಭಾರತ ಸೇವಾ ಅಧಿಕಾರಿಗಳು ಹಾಗೂ ರಾಜ್ಯ ಸರ್ಕಾರಿ ಅಧಿಕಾರಿ ಮತ್ತು ನೌಕರರು ಇನ್ನು ಮುಂದೆ ಕಟ್ಟುನಿಟ್ಟಾಗಿ ಪಾಲಿಸುವಂತೆ ರಾಜ್ಯ ಸರ್ಕಾರವು ಆದೇಶದಲ್ಲಿ ತಿಳಿಸಿದೆ.

VISTARANEWS.COM


on

GPF Cap
Koo

ಬೆಂಗಳೂರು: ಏಳನೇ ವೇತನ ಆಯೋಗದ (7th Pay Commission) ಜಾರಿಗೆ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರವು (Karnataka Government) ತೀರ್ಮಾನ ಮಾಡಿದ ಬಳಿಕ ಶೇ.27.5ರಷ್ಟು ಸಂಬಳ ಹೆಚ್ಚಳದ ಸಂಭ್ರಮದಲ್ಲಿದ್ದ ಸರ್ಕಾರಿ ನೌಕರರಿಗೆ ರಾಜ್ಯ ಸರ್ಕಾರವು ಕಹಿ ಸುದ್ದಿ ನೀಡಿದೆ. ಸರ್ಕಾರಿ ನೌಕರರು (Government Employees) ವಾರ್ಷಿಕವಾಗಿ ಸಾಮಾನ್ಯ ಭವಿಷ್ಯ ನಿಧಿಗೆ (GPF) ಜಮೆ ಮಾಡುವ ಮೊತ್ತವನ್ನು 5 ಲಕ್ಷ ರೂಪಾಯಿಗೆ ಮಿತಿಗೊಳಿಸಿ (GPF Cap) ರಾಜ್ಯ ಸರ್ಕಾರವು ಆದೇಶ ಹೊರಡಿಸಿದೆ.

ಜಿಪಿಎಫ್‌ ಮೊತ್ತದ ಮಿತಿ ನಿಗದಿಗೊಳಿಸಿ ರಾಜ್ಯ ಸರ್ಕಾರವು ಆದೇಶ ಹೊರಡಿಸಿದೆ. “ಉಲ್ಲೇಖ(1)ರ ಕೇಂದ್ರ ಸರ್ಕಾರದ ಅಧಿಸೂಚನೆ ಮತ್ತು ಅಧಿಕೃತ ಜ್ಞಾಪನಗಳಲ್ಲಿ ಅಖಿಲ ಭಾರತ ಸೇವಾ ಅಧಿಕಾರಿಗಳಿಗೆ ಮತ್ತು ಉಲ್ಲೇಖ(2)ರ ರಾಜ್ಯ ಸರ್ಕಾರದ ಆದೇಶದಲ್ಲಿ ಸಾಮಾನ್ಯ ಭವಿಷ್ಯ ನಿಧಿ ಚಂದಾದಾರರು ಒಂದು ವರ್ಷಕ್ಕೆ ಪಾವತಿಸಬಹುದಾದ ವಂತಿಗೆಯನ್ನು 5 ಲಕ್ಷ ರೂ.ಗೆ ಮಿತಿಗೊಳಿಸಲಾಗಿದೆ. ಈ ಅಂಶವನ್ನು ರಾಜ್ಯ ಸರ್ಕಾರದಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲ ಅಖಿಲ ಭಾರತ ಸೇವಾ ಅಧಿಕಾರಿಗಳು ಹಾಗೂ ರಾಜ್ಯ ಸರ್ಕಾರಿ ಅಧಿಕಾರಿ ಮತ್ತು ನೌಕರರು ಇನ್ನು ಮುಂದೆ ಕಟ್ಟುನಿಟ್ಟಾಗಿ ಪಾಲಿಸುವಂತೆ ಈ ಮೂಲಕ ಸೂಚಿಸಿದೆ” ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ.

ನೌಕರರಿಗೆ ಹೇಗೆ ಅನನುಕೂಲ?

ರಾಜ್ಯ ಸರ್ಕಾರದ ನಿರ್ಧಾರದಿಂದ ಸರ್ಕಾರಿ ನೌಕರರು ತೆರಿಗೆ ಉಳಿಸಲು ಕಷ್ಟವಾಗುತ್ತದೆ. ಹೆಚ್ಚು ಸಂಬಳ ಪಡೆಯುವ ನೌಕರರು ಜಿಪಿಎಫ್‌ಗೆ ವಾರ್ಷಿಕವಾಗಿ ಅತಿ ಹೆಚ್ಚಿನ ಹಣವನ್ನು ಜಮೆ ಮಾಡುವ ಮೂಲಕ ತೆರಿಗೆ ಉಳಿಸುತ್ತಿದ್ದರು. ಉಳಿತಾಯದ ದೃಷ್ಟಿಯಿಂದಲೂ ನೌಕರರಿಗೆ ಅನುಕೂಲವಾಗುತ್ತಿತ್ತು. ಆದರೆ, ಈಗ ವಾರ್ಷಿಕ ಮಿತಿಯನ್ನು 5 ಲಕ್ಷ ರೂ.ಗೆ ನಿಗದಿಪಡಿಸಿದ ಕಾರಣ ಲಕ್ಷಾಂತರ ನೌಕರರು ತೆರಿಗೆ ಉಳಿಸಲು, ಹೆಚ್ಚಿನ ಹಣವನ್ನು ಉಳಿತಾಯ ಮಾಡಲು ಕಷ್ಟವಾಗುತ್ತದೆ ಎಂದು ತಿಳಿದುಬಂದಿದೆ.

ರಾಜ್ಯ ಸರ್ಕಾರದ ನಿರ್ಧಾರದಿಂದ ರಾಜ್ಯ ಸರ್ಕಾರಿ ನೌಕರರಿಗೆ ಮಾತ್ರವಲ್ಲ, ಕರ್ನಾಟಕದಲ್ಲಿ ಕಾರ್ಯನಿರ್ವಹಿಸುತ್ತಿರುವ ಐಎಎಸ್‌ ಅಧಿಕಾರಿಗಳಿಗೂ ಹೊಸ ನಿಯಮವು ಅನ್ವಯಿಸಲಿದೆ. ಕೆಲ ತಿಂಗಳ ಹಿಂದೆ ಪಂಜಾಬ್‌ನಲ್ಲೂ ಅಲ್ಲಿನ ರಾಜ್ಯ ಸರ್ಕಾರವು ನೌಕರರ ಜಿಪಿಎಫ್‌ ವಾರ್ಷಿಕ ಮಿತಿಯನ್ನು 5 ಲಕ್ಷ ರೂ.ಗೆ ನಿಗದಿಪಡಿಸಿತ್ತು. ಆದಾಗ್ಯೂ, ಕರ್ನಾಟಕ ಸರ್ಕಾರದ ಆದೇಶದ ಕುರಿತು ಇದುವರೆಗೆ ರಾಜ್ಯ ಸರ್ಕಾರಿ ನೌಕರರ ಸಂಘವು ಪ್ರತಿಕ್ರಿಯೆ ನೀಡಿಲ್ಲ.

ಇದನ್ನೂ ಓದಿ: 7th Pay Commission: ಸರ್ಕಾರಿ ನೌಕರರ ವೇತನ, ಪಿಂಚಣಿ 58% ಹೆಚ್ಚಳ; ಸಂಪೂರ್ಣ ಲೆಕ್ಕ ಕೊಟ್ಟ ಸಿದ್ದರಾಮಯ್ಯ

Continue Reading

ವಾಣಿಜ್ಯ

Stock Market: ಷೇರು ಮಾರುಕಟ್ಟೆಗೆ ಶುಭ ಶುಕ್ರವಾರ; ಹೂಡಿಕೆದಾರರಿಗೆ 7 ಲಕ್ಷ ಕೋಟಿ ರೂ. ಭರ್ಜರಿ ಲಾಭ!

Stock Market: ಬಿಎಸ್‌ಇ ಸೆನ್ಸೆಕ್ಸ್‌ 1,292.92 ಪಾಯಿಂಟ್‌ಗಳ ಏರಿಕೆಯೊಂದಿಗೆ 81,332.72 ಪಾಯಿಂಟ್‌ ತಲುಪಿದರೆ, ಎನ್‌ಎಸ್‌ಇ ನಿಫ್ಟಿಯು 428.75 ಪಾಯಿಂಟ್‌ಗಳ ಏರಿಕೆಯೊಂದಿಗೆ 24,834.85 ಪಾಯಿಂಟ್ಸ್‌ ತಲುಪಿದೆ. ಇದರಿಂದಾಗಿ, ಕಳೆದ ನಾಲ್ಕು ದಿನಗಳಿಂದ ನಷ್ಟ ಅನುಭವಿಸಿದ್ದ ಹೂಡಿಕೆದಾರರು ಶುಕ್ರವಾರ ಲಾಭ ಗಳಿಸಿದರು.

VISTARANEWS.COM


on

Stock Market
Koo

ಮುಂಬೈ: ಕೇಂದ್ರ ಬಜೆಟ್‌ (Union Budget 2024) ಮಂಡಿಸಿದ ದಿನವಾದ ಜುಲೈ 23 ಸೇರಿ ನಂತರದ ದಿನಗಳಲ್ಲಿ ಸತತವಾಗಿ ಇಳಿಕೆ ಕಂಡಿದ್ದ ಷೇರು ಮಾರುಕಟ್ಟೆಯು (Stock Market) ಶುಕ್ರವಾರ (ಜುಲೈ 26) ಭಾರಿ ಸುಧಾರಣೆ ಕಂಡಿದೆ. ಷೇರುಪೇಟೆಯಲ್ಲಿ ಶುಕ್ರವಾರ ಬಿಎಸ್‌ಇ ಸೆನ್ಸೆಕ್ಸ್‌ 1,292.92 ಪಾಯಿಂಟ್‌ಗಳ ಏರಿಕೆ ಕಂಡರೆ, ಎನ್‌ಎಸ್‌ಇ ನಿಫ್ಟಿಯು 428.75 ಅಂಕಗಳಷ್ಟು ಏರಿಕೆಯಾಗಿದೆ. ಇದರಿಂದಾಗಿ ಹೂಡಿಕೆದಾರರಿಗೆ ಒಂದೇ ದಿನ 7 ಲಕ್ಷ ಕೋಟಿ ರೂ. ಲಾಭವಾಗಿದೆ.

ಬಿಎಸ್‌ಇ ಸೆನ್ಸೆಕ್ಸ್‌ 1,292.92 ಪಾಯಿಂಟ್‌ಗಳ ಏರಿಕೆಯೊಂದಿಗೆ 81,332.72 ಪಾಯಿಂಟ್‌ ತಲುಪಿದರೆ, ಎನ್‌ಎಸ್‌ಇ ನಿಫ್ಟಿಯು 428.75 ಪಾಯಿಂಟ್‌ಗಳ ಏರಿಕೆಯೊಂದಿಗೆ 24,834.85 ಪಾಯಿಂಟ್ಸ್‌ ತಲುಪಿದೆ. ಇದರಿಂದಾಗಿ, ಕಳೆದ ನಾಲ್ಕು ದಿನಗಳಿಂದ ನಷ್ಟ ಅನುಭವಿಸಿದ್ದ ಹೂಡಿಕೆದಾರರು ಶುಕ್ರವಾರ ಲಾಭ ಗಳಿಸಿದರು.

Share Market
Share Market

ಲಾಭ ಗಳಿಸಿದ ಕಂಪನಿಗಳು

ಭಾರ್ತಿ ಏರ್‌ಟೆಲ್‌ ಕಂಪನಿಯು ಅತಿ ಹೆಚ್ಚು ಲಾಭ ಗಳಿಸಿದ ಕಂಪನಿ ಎನಿಸಿದೆ. ಭಾರ್ತಿ ಏರ್‌ಟೆಲ್‌ ಲಾಭದ ಪ್ರಮಾಣವು ಶೇ.4.51ರಷ್ಟು ಏರಿಕೆಯಾಗಿದೆ. ಇದರ ಜತೆಗೆ ಅದಾನಿ ಪೋರ್ಟ್ಸ್‌, ಸನ್‌ ಫಾರ್ಮಾ, ಟಾಟಾ ಸ್ಟೀಲ್‌, ಎಚ್‌ಸಿಎಲ್‌ ಟೆಕ್ನಾಲಜೀಸ್‌, ಇನ್ಫೋಸಿಸ್‌, ಜೆಎಸ್‌ಡಬ್ಲ್ಯೂ ಸ್ಟೀಲ್‌ ಹಾಗೂ ಮಹೀಂದ್ರಾ & ಮಹೀಂದ್ರಾ ಕಂಪನಿಗಳು ಲಾಭ ಗಳಿಸಿದವು.

ನಷ್ಟ ಅನುಭವಿಸಿದ ಕಂಪನಿಗಳು

ನೆಸ್ಲೆ ಕಂಪನಿಯು ಅತಿ ಹೆಚ್ಚು ನಷ್ಟ ಅನುಭವಿಸಿದ ಕಂಪನಿಯಾಗಿದೆ. ಇದರ ಷೇರುಗಳ ಮೌಲ್ಯವು ಶೇ.0.07ರಷ್ಟು ಕುಸಿದಿದೆ. ಒಎನ್‌ಜಿಸಿ, ಟಾಟಾ ಕನ್ಸುಮರ್‌ ಪ್ರಾಡಕ್ಟ್ಸ್‌ ಲಿಮಿಟೆಡ್‌ ಸೇರಿ ಹಲವು ಕಂಪನಿಗಳು ನಷ್ಟ ಅನುಭವಿಸಿದವು. ಇನ್ನು ಬಜೆಟ್‌ ಹಿಂದಿನ ದಿನ, ಬಜೆಟ್‌ ಹಾಗೂ ಬಜೆಟ್‌ ನಂತರದ ಕೆಲ ದಿನಗಳಲ್ಲಿ ಷೇರು ಮಾರುಕಟ್ಟೆಯಲ್ಲಿ ಭಾರಿ ಪ್ರಮಾಣದ ಏರಿಳಿತ ಸಾಮಾನ್ಯವಾಗಿದೆ. ಇದೇ ಕಾರಣಕ್ಕಾಗಿ ನಾಲ್ಕು ದಿನಗಳಿಂದ ಇಳಿಕೆಯಾಗಿದ್ದ ಷೇರು ಪೇಟೆಯು ಶುಕ್ರವಾರ ಏರಿಕೆ ಕಂಡಿದೆ ಎಂದು ಹೂಡಿಕೆ ತಜ್ಞರು ತಿಳಿಸಿದ್ದಾರೆ.

ಇದನ್ನೂ ಓದಿ: Union Budget 2024: ಬಜೆಟ್‌ನಲ್ಲಿ ಕಸ್ಟಮ್ಸ್‌ ಸುಂಕ ಇಳಿಕೆ; ಚಿನ್ನದ ಮೇಲಿನ ಹೂಡಿಕೆಗೆ ಇದು ಸಕಾಲವೇ? ತಜ್ಞರು ಹೇಳೋದಿಷ್ಟು

Continue Reading

ಕರ್ನಾಟಕ

Samsung AC: ಹೊಸ ಶ್ರೇಣಿಯ ಎಸಿಗಳನ್ನು ಬಿಡುಗಡೆ ಮಾಡಿದ ಸ್ಯಾಮ್‌ಸಂಗ್; ಇದರ ವಿಶೇಷತೆ ಏನೇನು?

Samsung AC: ಭಾರತದ ಅತಿದೊಡ್ಡ ಗ್ರಾಹಕ ಎಲೆಕ್ಟ್ರಾನಿಕ್ಸ್ ಬ್ರ್ಯಾಂಡ್ ಆಗಿರುವ ಸ್ಯಾಮ್‌ಸಂಗ್, ಚಿಲ್ಡ್ ವಾಟರ್ ಇಂಡೋರ್ ವಿಭಾಗದಲ್ಲಿ ತನ್ನ ಹೊಸ ಉತ್ಪನ್ನವಾದ ವಿಂಡ್‌ಫ್ರೀ ಏರ್ ಕಂಡಿಷನರ್ ಅನ್ನು ಬಿಡುಗಡೆ ಮಾಡಿದೆ. ಈ ಹೊಸ ಏಸಿ ಶ್ರೇಣಿಯು ಚಿಲ್ಡ್ ವಾಟರ್ ಬೇಸ್ಡ್ ಕ್ಯಾಸೆಟ್ ಯುನಿಟ್‌ಗಳಲ್ಲಿ ವಿಂಡ್-ಫ್ರೀ ಮತ್ತು 360° ಬ್ಲೇಡ್‌ಲೆಸ್ ತಂತ್ರಜ್ಞಾನವನ್ನು ಹೊಂದಿದ್ದು, ಈ ಶ್ರೇಣಿಯು ಬಳಕೆದಾರರು ಯಾವುದೇ ಕಿರಿಕಿರಿ ಇಲ್ಲದೆ ಉತ್ತಮ ಕೂಲಿಂಗ್ ಅನುಭವ ಪಡೆಯುವಂತೆ ವಿನ್ಯಾಸಗೊಳಿಸಲಾಗಿದೆ.

VISTARANEWS.COM


on

Samsung has launched a new range of ACs in chilled water based cassette units
Koo

ಬೆಂಗಳೂರು: ಭಾರತದ ಅತಿದೊಡ್ಡ ಗ್ರಾಹಕ ಎಲೆಕ್ಟ್ರಾನಿಕ್ಸ್ ಬ್ರ್ಯಾಂಡ್ ಆಗಿರುವ ಸ್ಯಾಮ್‌ಸಂಗ್, ಚಿಲ್ಡ್ ವಾಟರ್ ಇಂಡೋರ್ ವಿಭಾಗದಲ್ಲಿ ತನ್ನ ಹೊಸ ಉತ್ಪನ್ನವಾದ ವಿಂಡ್‌ಫ್ರೀ ಏರ್ ಕಂಡಿಷನರ್ ಅನ್ನು ಬಿಡುಗಡೆ (Samsung AC) ಮಾಡಿದೆ. ಈ ಹೊಸ ಏಸಿ ಶ್ರೇಣಿಯು ಚಿಲ್ಡ್ ವಾಟರ್ ಬೇಸ್ಡ್ ಕ್ಯಾಸೆಟ್ ಯುನಿಟ್‌ಗಳಲ್ಲಿ ವಿಂಡ್-ಫ್ರೀ ಮತ್ತು 360° ಬ್ಲೇಡ್‌ಲೆಸ್ ತಂತ್ರಜ್ಞಾನವನ್ನು ಹೊಂದಿದ್ದು, ಈ ಶ್ರೇಣಿಯು ಬಳಕೆದಾರರು ಯಾವುದೇ ಕಿರಿಕಿರಿ ಇಲ್ಲದೆ ಉತ್ತಮ ಕೂಲಿಂಗ್ ಅನುಭವ ಪಡೆಯುವಂತೆ ವಿನ್ಯಾಸಗೊಳಿಸಲಾಗಿದೆ.

ಚಿಲ್ಡ್ ವಾಟರ್ ಬೇಸ್ಡ್ ಕ್ಯಾಸೆಟ್ ಯುನಿಟ್‌ಗಳು ಬಳಕೆದಾರರಿಗೆ ಬೇಕಾದ ತಾಪಮಾನವನ್ನು ಸೆಟ್ ಮಾಡಲು ಅನುವು ಮಾಡಿಕೊಡುತ್ತದೆ. ಜತೆಗೆ ವಿಂಡ್‌ಫ್ರೀ™ ಕೂಲಿಂಗ್ ತಂತ್ರಜ್ಞಾನವು 0.15 ಎಂ/ಸೆಕೆಂಡ್ ನಷ್ಟು ಗಾಳಿಯ ವೇಗದಲ್ಲಿ 15,000 ಮೈಕ್ರೋ-ಏರ್ ರಂಧ್ರಗಳಲ್ಲಿ ನಿಧಾನವಾಗಿ ತಂಪಾದ ಗಾಳಿಯನ್ನು ಬಿಡುಗಡೆ ಮಾಡುವಂತೆ ನೋಡಿಕೊಳ್ಳುತ್ತದೆ.

ಇದರ ಜತೆಗೆ ಸುಧಾರಿತ ಏರ್ ಫ್ಲೋ ವ್ಯವಸ್ಥೆಯು ಕೋಣೆಗಳನ್ನು ಶಾಂತವಾಗಿ, ವೇಗವಾಗಿ ತಂಪಾಗಿಸುತ್ತದೆ. ಕಡಿಮೆ ಮಟ್ಟದ ಅಂದರೆ ಕೇವಲ 24 dB(A) ಸೌಂಡ್ ಅನ್ನು ಮಾತ್ರ ಈ ಉತ್ಪನ್ನವು ಹೊರಹಾಕುತ್ತದೆ. ಈ ಸದ್ದನ್ನು ಒಂಥರಾ ಪಿಸುಮಾತುಗಳಿಗೆ ಹೋಲಿಸಬಹುದಾಗಿದೆ. ಹಾಗಾಗಿ ಈ ಉತ್ಪನ್ನವು ಮಲಗುವ ಕೋಣೆಗಳು, ಅಧ್ಯಯನ ಕೊಠಡಿಗಳು ಮತ್ತು ಮಗುವಿನ ಕೋಣೆಗಳಿಗೆ ಬಳಸಲು ಸೂಕ್ತವಾಗಿದೆ.

ಇದನ್ನೂ ಓದಿ: Samsung Galaxy: ಎಐ ಆಧರಿತ ಗ್ಯಾಲಕ್ಸಿ ಝಡ್ ಫೋಲ್ಡ್ 6, ಝಡ್ ಫ್ಲಿಪ್6 ಹೇಗಿದೆ? ದರ ಎಷ್ಟು?

ಹೊಸ ಫ್ಯಾನ್ ಕಾಯಿಲ್ ಯೂನಿಟ್ ವಿಂಡ್‌ಫ್ರೀ ಎಸಿಗಳು ನೀರಿನ ಪೈಪ್‌ಗಳು ಮತ್ತು ಸಂಬಂಧಿತ ವಾಲ್ವ್‌ಗಳನ್ನು ಬಳಸಿಕೊಂಡು ಸೆಂಟ್ರಲ್ ಚಿಲ್ಡ್ ವಾಟರ್ ಸಿಸ್ಟಮ್‌ಗೆ ಕನೆಕ್ಟ್ ಆಗಿವೆ. ಈ ಹೈಡ್ರಾನಿಕ್ ಫ್ಯಾನ್ ಕಾಯಿಲ್ ಯುನಿಟ್‌ಗಳು ಬಿಸಿಮಾಡಲು ಅಥವಾ ದೊಡ್ಡ ಜಾಗಗಳನ್ನು ತಂಪಾಗಿಸಲು ಬಿಸಿ ಅಥವಾ ತಣ್ಣನೆಯ ನೀರನ್ನು ಕಾಯಿಲ್‌ಗಳ ಮೂಲಕ ಪ್ರಸರಣ ಮಾಡುತ್ತವೆ. ಈ ಯುನಿಟ್‌ಗಳನ್ನು ಸ್ಯಾಮ್‌ಸಂಗ್ ಏರ್-ಕೂಲ್ಡ್ ಚಿಲ್ಲರ್‌ಗಳು ಅಥವಾ ಯಾವುದೇ ಥರ್ಡ್ ಪಾರ್ಟಿ ಏರ್-ಕೂಲ್ಡ್ ಮತ್ತು ವಾಟರ್-ಕೂಲ್ಡ್ ಚಿಲ್ಲರ್‌ಗಳೊಂದಿಗೂ ಬಳಸಬಹುದು.

ಈ ಕುರಿತು ಸ್ಯಾಮ್‌ಸಂಗ್ ಇಂಡಿಯಾದ ಎಸ್ಎಸಿ ಬಿಸಿನೆಸ್‌ನ ಹಿರಿಯ ನಿರ್ದೇಶಕ ವಿಪಿನ್ ಅಗರವಾಲ್ ಮಾತನಾಡಿ, “ನಮ್ಮ ಅತ್ಯಾಧುನಿಕ ಉತ್ಪನ್ನಗಳನ್ನು ನೀಡುವ ಮೂಲಕ ಬಳಕೆದಾರರಿಗೆ ಅನುಕೂಲತೆ ಮತ್ತು ಬಾಳಿಕೆ ಬರುವ ಉತ್ಪನ್ನ ಒದಗಿಸುವುದು ಸ್ಯಾಮ್‌ಸಂಗ್‌ನ ಉದ್ದೇಶವಾಗಿದೆ. ಚಿಲ್ಡ್ ವಾಟರ್ ಫ್ಯಾನ್ ಕಾಯಿಲ್ ಯುನಿಟ್‌ಗಳು ಶಾಂತವಾಗಿ ಕಾರ್ಯನಿರ್ವಹಿಸುತ್ತಲೇ ವೇಗವಾಗಿ ಉನ್ನತ ಮಟ್ಟದ ಕೂಲಿಂಗ್ ಸೌಲಭ್ಯವನ್ನು ಒದಗಿಸುತ್ತವೆ. ಕೂಲಿಂಗ್ ಯೂನಿಟ್‌ಗಳು ವಿಶಾಲವಾದ ಸ್ಥಳಗಳಿಗೆ ಹೆಚ್ಚು ಸೂಕ್ತವಾಗಿವೆ. ಏರ್ ಫ್ಲೋ ವ್ಯವಸ್ಥೆ ಅಂದರೆ ಗಾಳಿಯ ಹರಿವಿನ ವ್ಯವಸ್ಥೆಯನ್ನು ಹೆಚ್ಚು ಸುಧಾರಿತಗೊಳಿಸುವ, ಹಿತವಾಗಿಸುವ ಮತ್ತು ಎಲ್ಲರಿಗೂ ಲಭ್ಯವಾಗುವಂತೆ ಮಾಡುವ ಪ್ರಯತ್ನದಲ್ಲಿ ನಾವಿದ್ದೇವೆ” ಎಂದು ತಿಳಿಸಿದ್ದಾರೆ.

ಸ್ಯಾಮ್‌ಸಂಗ್ ಚಿಲ್ಡ್ ವಾಟರ್ ಫ್ಯಾನ್ ಕಾಯಿಲ್ ಯುನಿಟ್‌ಗಳು 3 ವೇರಿಯಂಟ್‌ಗಳಲ್ಲಿ ಲಭ್ಯ

1ವೇ ಕ್ಯಾಸೆಟ್ (2.6KW~ 4.2KW)

ಅಟೋ ಸ್ವಿಂಗ್ ಫೀಚರ್ ಹೊಂದಿರುವ ಈ ಯುನಿಟ್ ಅನ್ನು ವಿಶಾಲವಾದ ಪ್ರದೇಶಗಳನ್ನು ತ್ವರಿತವಾಗಿ ಮತ್ತು ಪರಿಣಾಮಕಾರಿಯಾಗಿ ತಂಪಾಗಿಸಲು ವಿನ್ಯಾಸಗೊಳಿಸಲಾಗಿದೆ. ಅದರ ದೊಡ್ಡ ಬ್ಲೇಡ್ ಹೆಚ್ಚು ದೊಡ್ಡದಾದ ಮತ್ತು ವಿಶಾಲವಾದ ಪ್ರದೇಶದಲ್ಲಿ ಗಾಳಿಯನ್ನು ಹರಡುತ್ತದೆ. ಅಟೋ ಸ್ವಿಂಗ್ ಫೀಚರ್ ಪ್ರತೀ ದಿಕ್ಕಿಗೂ ಗಾಳಿಯನ್ನು ವಿತರಿಸುತ್ತದೆ. 1ವೇ ಕ್ಯಾಸೆಟ್‌ಗಳು ಅತ್ಯಂತ ತೆಳ್ಳಗಿನ ವಿನ್ಯಾಸವನ್ನು ಹೊಂದಿದ್ದು, ಆಕರ್ಷಕ ಸೌಂದರ್ಯವನ್ನು ಹೊಂದಿದೆ. ಇದು ಕೇವಲ 135 ಮಿಮೀ ಎತ್ತರವನ್ನು ಹೊಂದಿದೆ ಮತ್ತು ಕೇವಲ 155 ಮಿ.ಮೀನಷ್ಟು ಸಣ್ಣದಾದ ಸೀಲಿಂಗ್ ಜಾಗದಲ್ಲಿಯೂ ಹೊಂದಿಕೊಳ್ಳುತ್ತದೆ. ಆದ್ದರಿಂದ, ಸೀಮಿತ ಸ್ಥಳಾವಕಾಶ ಇರುವ, ಆದರೆ ವಿಶಾಲವಾದ ಸ್ಥಳವನ್ನು ತಂಪಾಗಿಸುವ ಮತ್ತು ಬಿಸಿಮಾಡುವ ಅಗತ್ಯ ಇರುವವರಿಗೆ, ಇದು ಸೂಕ್ತವಾದ ಮತ್ತು ಪರಿಣಾಮಕಾರಿ ಉತ್ಪನ್ನವಾಗಿದೆ. ಇದರ ಜತೆಗೆ, ಅದರ ಸೊಗಸಾದ ಮತ್ತು ಕಾಂಪ್ಯಾಕ್ಟ್ ವಿನ್ಯಾಸವು ಎಲ್ಲಾ ರೀತಿಯ ಮತ್ತು ಶೈಲಿಗಳ ಇಂಟೀರಿಯರ್ ಜತೆಗೆ ಸೂಕ್ತ ರೀತಿಯಲ್ಲಿ ಹೊಂದಿಕೊಳ್ಳುತ್ತದೆ.

4ವೇ ಕ್ಯಾಸೆಟ್ (6.0KW~10.0KW)

ದೊಡ್ಡ ಬ್ಲೇಡ್ ವಿನ್ಯಾಸ ಹೊಂದಿರುವ ಈ ಯುನಿಟ್ ಉತ್ತಮ ಕೂಲಿಂಗ್ ಕಾರ್ಯಕ್ಷಮತೆ ಒದಗಿಸುತ್ತದೆ. ಇದು ನೀವು ಸೂಚಿಸಿದ ಸ್ಥಳಗಳಿಗೆ ಮಾತ್ರ ಗಾಳಿಯನ್ನು ಪ್ರಸಾರ ಮಾಡುತ್ತದೆ. ಅನಗತ್ಯವಾಗಿ ಗಾಳಿಯನ್ನು ಎಲ್ಲಾ ಕಡೆಗೆ ಹರಡುವ ಕೆಲಸ ಮಾಡುವುದಿಲ್ಲ.

360° ಚಿಲ್ಡ್ ಕ್ಯಾಸೆಟ್ (6.0KW~10.0KW)

ವೃತ್ತಾಕಾರದ ಸಂರಚನೆ ಹೊಂದಿದೆ. ಆಧುನಿಕ ಶೈಲಿಯ ಆರ್ಕಿಟೆಕ್ಚರಲ್ ಇಂಟೀರಿಯರ್‌ಗಳಿಗೆ ಸೂಕ್ತವಾಗಿ ಹೊಂದಿಕೊಳ್ಳುತ್ತದೆ. ಕೋಲ್ಡ್ ಡ್ರಾಫ್ಟ್‌ಗಳಿಲ್ಲದೆ ಎಲ್ಲಾ ದಿಕ್ಕುಗಳಿಗೂ ಏಕರೂಪವಾಗಿ ಗಾಳಿಯನ್ನು ಪ್ರಸಾರ ಮಾಡುತ್ತದೆ. ಗಾಳಿಯ ಹರಿವನ್ನು ನಿರ್ಬಂಧಿಸಲು ಯಾವುದೇ ಬ್ಲೇಡ್‌ಗಳಿಲ್ಲದಿರುವುದರಿಂದ ಇದು 25 ಪ್ರತಿಶತದಷ್ಟು ಹೆಚ್ಚಿನ ಗಾಳಿಯನ್ನು ಬಿಡುಗಡೆ ಮಾಡುತ್ತದೆ ಮತ್ತು ಅದನ್ನು ಮತ್ತಷ್ಟು ವೇಗವಾಗಿ ಪ್ರಸರಣ ಮಾಡುತ್ತದೆ.

ಇದನ್ನೂ ಓದಿ: Media Connect: ಚೆಸ್‌ ಹಬ್ಬದಲ್ಲಿ ಮೀಡಿಯಾ ಕನೆಕ್ಟ್‌ ಸಂಸ್ಥಾಪಕಿ ಡಾ. ದಿವ್ಯಾ ರಂಗೇನಹಳ್ಳಿಗೆ ಸನ್ಮಾನ

ಇದರ ದರ ಎಷ್ಟು?

ಸ್ಯಾಮ್‌ಸಂಗ್ ಚಿಲ್ಡ್ ವಾಟರ್ ಫ್ಯಾನ್ ಕಾಯಿಲ್ ಯೂನಿಟ್‌ಗಳ 3 ವೇರಿಯಂಟ್‌ಗಳು ಭಾರತದಾದ್ಯಂತ ಇರುವ ಸ್ಯಾಮ್‌ಸಂಗ್‌ನ ನೋಂದಾಯಿತ ಆಫ್‌ಲೈನ್ ಪಾಲುದಾರರ ಮಳಿಗೆಗಳಲ್ಲಿ ಖರೀದಿಗೆ ಲಭ್ಯವಿದೆ. ಕಡಿಮೆ ಸಾಮರ್ಥ್ಯ ಹೊಂದಿರುವ ಯುನಿಟ್ ಬೆಲೆ ರೂ. 35000ರಿಂದ ಪ್ರಾರಂಭವಾಗುತ್ತದೆ ಎಂದು ಕಂಪನಿ ತಿಳಿಸಿದೆ.

Continue Reading

ದೇಶ

Union Budget 2024: ಕೇಂದ್ರ ಬಜೆಟ್‌ನಲ್ಲಿ ಮಾಲ್ಡೀವ್ಸ್‌ಗೆ ಅನುದಾನದಲ್ಲಿ ಭಾರೀ ಕಡಿತ! ನೆರೆಯ ರಾಷ್ಟ್ರಗಳಿಗೆ ಎಷ್ಟೆಷ್ಟು ನೆರವು ಘೋಷಣೆ?

Union Budget 2024: 2,068 ಕೋಟಿ ರೂ.ಗಳ ಹಂಚಿಕೆಯೊಂದಿಗೆ ಭೂತಾನ್ ಭಾರತದಿಂದ ಅತಿಹೆಚ್ಚು ಅಭಿವೃದ್ಧಿ ನೆರವು ಪಡೆಯುತ್ತಿರುವ ರಾಷ್ಟ್ರವಾಗಿ ಹೊರಹೊಮ್ಮಿದೆ. ಈ ಹೆಚ್ಚಳವು ದ್ವಿಪಕ್ಷೀಯ ಸಂಬಂಧಗಳ ಬಲವರ್ಧನೆಯನ್ನು ಒತ್ತಿಹೇಳುತ್ತದೆ. ಇದಕ್ಕೆ ತದ್ವಿರುದ್ಧವಾಗಿ, ಮಾಲ್ಡೀವ್ಸ್ ಹಿಂದಿನ 770 ಕೋಟಿ ರೂಪಾಯಿಗಳಿಗೆ ಹೋಲಿಸಿದರೆ ಕೇವಲ 400 ಕೋಟಿ ರೂಪಾಯಿಗಳನ್ನು ಪಡೆಯುವುದರ ಮೂಲಕ ತೀವ್ರ ಇಳಿಕೆಗೆ ಸಾಕ್ಷಿಯಾಯಿತು. ಮಧ್ಯಂತರ ಬಜೆಟ್ ಈಗಾಗಲೇ 22% ಕಡಿತವನ್ನು ಪ್ರಸ್ತಾಪಿಸಿದೆ, ಆದರೆ ಅಂತಿಮ ಬಜೆಟ್ ಸಹಾಯವನ್ನು 48% ರಷ್ಟು ಕಡಿತಗೊಳಿಸಿತು

VISTARANEWS.COM


on

union budget 2024
Koo

ನವದೆಹಲಿ: ಈ ಬಾರಿಯ ಕೇಂದ್ರ ಬಜೆಟ್‌(Union Budget 2024)ನಲ್ಲಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್(Nirmala Seetharaman) ಅವರು ಭಾರತದ ವಿದೇಶಿ ನೆರವು ಹಂಚಿಕೆಗಳಲ್ಲಿ ಗಣನೀಯ ಬದಲಾವಣೆಗಳನ್ನು ಘೋಷಿಸಿದ್ದಾರೆ. ಇದರದಲ್ಲಿ ನೆರೆಯ ರಾಷ್ಟ್ರಗಳಾದ ಮಾಲ್ಡೀವ್ಸ್‌ ಮತ್ತು ಭೂತಾನ್‌ಗೆ ಅನುದಾನ ಹಂಚಿಕೆಯಲ್ಲಿ ಈ ಬಾರಿ ಗಣನೀಯ ಬದಲಾವಣೆ ತರಲಾಗಿದೆ. ಮಾಲ್ಡೀವ್ಸ್‌ ಅನುದಾನದಲ್ಲಿ ಈ ಬಾರಿ ಭಾರೀ ಕಡಿತ ಮಾಡಲಾಗಿದೆ. ಹಾಗೆಯೇ ಭೂತಾನ್‌ ಅನುದಾನದಲ್ಲಿ ಏರಿಕೆ ಮಾಡಲಾಗಿದೆ.

2,068 ಕೋಟಿ ರೂ.ಗಳ ಹಂಚಿಕೆಯೊಂದಿಗೆ ಭೂತಾನ್ ಭಾರತದಿಂದ ಅತಿಹೆಚ್ಚು ಅಭಿವೃದ್ಧಿ ನೆರವು ಪಡೆಯುತ್ತಿರುವ ರಾಷ್ಟ್ರವಾಗಿ ಹೊರಹೊಮ್ಮಿದೆ. ಈ ಹೆಚ್ಚಳವು ದ್ವಿಪಕ್ಷೀಯ ಸಂಬಂಧಗಳ ಬಲವರ್ಧನೆಯನ್ನು ಒತ್ತಿಹೇಳುತ್ತದೆ. ಇದಕ್ಕೆ ತದ್ವಿರುದ್ಧವಾಗಿ, ಮಾಲ್ಡೀವ್ಸ್ ಹಿಂದಿನ 770 ಕೋಟಿ ರೂಪಾಯಿಗಳಿಗೆ ಹೋಲಿಸಿದರೆ ಕೇವಲ 400 ಕೋಟಿ ರೂಪಾಯಿಗಳನ್ನು ಪಡೆಯುವುದರ ಮೂಲಕ ತೀವ್ರ ಇಳಿಕೆಗೆ ಸಾಕ್ಷಿಯಾಯಿತು. ಮಧ್ಯಂತರ ಬಜೆಟ್ ಈಗಾಗಲೇ 22% ಕಡಿತವನ್ನು ಪ್ರಸ್ತಾಪಿಸಿದೆ, ಆದರೆ ಅಂತಿಮ ಬಜೆಟ್ ಸಹಾಯವನ್ನು 48% ರಷ್ಟು ಕಡಿತಗೊಳಿಸಿತು.

ಚೀನಾ ಪರ ನಿಲುವಿಗೆ ಹೆಸರುವಾಸಿಯಾದ ಮೊಹಮದ್ ಮುಯಿಝು ಅವರು ಮಾಲ್ಡೀವ್ಸ್‌ ಅಧ್ಯಕ್ಷರಾಗಿ ಚುನಾಯಿತರಾದ ನಂತರ ಉಭಯ ರಾಷ್ಟ್ರಗಳ ನಡುವಿನ ಸಂಬಂಧ ಹದಗೆಟ್ಟಿದೆ. ಭಾರತದ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಬಗ್ಗೆ ಅವರ ಆಡಳಿತದ ವಿಮರ್ಶಾತ್ಮಕ ಹೇಳಿಕೆಗಳು ಸಾರ್ವಜನಿಕ ಆಕ್ರೋಶಕ್ಕೆ ಕಾರಣವಾಯಿತು ಮತ್ತು ಪ್ರವಾಸೋದ್ಯಮದ ಮೇಲೆ ಪರಿಣಾಮ ಬೀರುವ “ಮಾಲ್ಡೀವ್ಸ್ ಬಹಿಷ್ಕಾರ” ಅಭಿಯಾನವನ್ನು ಹುಟ್ಟುಹಾಕಿತು.

ಈ ಬಾರಿ ನೇಪಾಳವು 700 ಕೋಟಿ ರೂಪಾಯಿ ಅತ್ಯಧಿಕ ನೆರವನ್ನು ಪಡೆದುಕೊಂಡಿದೆ. ಇದು ನೇಪಾಳ ಮತ್ತು ಭಾರತದ ಬದ್ಧತೆಯನ್ನು ಬಲಪಡಿಸುತ್ತದೆ. ಶ್ರೀಲಂಕಾವು ಕಳೆದ ವರ್ಷದ 60 ಕೋಟಿ ರೂಪಾಯಿಗಳ ನೆರವು ಪಡೆದಿತ್ತು. ಈ ಬಾರಿ 245 ಕೋಟಿ ರೂಪಾಯಿಗಳನ್ನು ಪಡೆಯುತ್ತಿದ್ದು, ನೆರವಿನಲ್ಲಿ ಗಣನೀಯ ಏರಿಕೆ ಕಂಡಿದೆ.

ಬಜೆಟ್‌ನಲ್ಲಿ ದಕ್ಷಿಣ ಏಷ್ಯಾದ ಆಚೆಗಿನ ದೇಶಗಳಿಗೂ ಮೀಸಲಿಡಲಾಗಿದೆ. ಇರಾನ್‌ನ ಚಬಹಾರ್ ಬಂದರು 100 ಕೋಟಿ ರೂಪಾಯಿಗಳನ್ನು ಪಡೆದುಕೊಂಡಿದ್ದು, ಅದರ ಕಾರ್ಯತಂತ್ರದ ಮಹತ್ವವನ್ನು ಎತ್ತಿ ತೋರಿಸುತ್ತದೆ. ಅಫ್ಘಾನಿಸ್ತಾನದ ನೆರವನ್ನು 220 ಕೋಟಿಯಿಂದ 200 ಕೋಟಿಗೆ ಸ್ವಲ್ಪ ಕಡಿಮೆ ಮಾಡಲಾಗಿದೆ. ಬಾಂಗ್ಲಾದೇಶಕ್ಕೆ 120 ಕೋಟಿ ರೂ., ಮ್ಯಾನ್ಮಾರ್‌ನ ನೆರವನ್ನು 320 ಕೋಟಿ ರೂ.ಗಳಿಂದ 250 ಕೋಟಿ ರೂ.ಗೆ ಇಳಿಸಲಾಯಿತು. ಆಫ್ರಿಕನ್ ರಾಷ್ಟ್ರಗಳು ಒಟ್ಟಾರೆಯಾಗಿ 200 ಕೋಟಿ ರೂಪಾಯಿಗಳನ್ನು ಪಡೆದಿವೆ ಮತ್ತು ಮಾರಿಷಸ್‌ಗೆ 370 ಕೋಟಿ ರೂಪಾಯಿಗಳನ್ನು ಮೀಸಲಿಡಲಾಗಿದೆ.

ಒಟ್ಟಾರೆ ವಿದೇಶಾಂಗ ವ್ಯವಹಾರಗಳ ಬಜೆಟ್‌ ಎಷ್ಟು?

ವಿದೇಶಾಂಗ ವ್ಯವಹಾರಗಳ ಸಚಿವಾಲಯದ ಒಟ್ಟು ಬಜೆಟ್ ಅನ್ನು 29,121 ಕೋಟಿ ರೂಗಳಿಂದ 22,154 ಕೋಟಿಗೆ ಇಳಿಸಲಾಗಿದ್ದು, ಇದು ಫೆಬ್ರವರಿಯಲ್ಲಿ ಮಧ್ಯಂತರ ಬಜೆಟ್ ಹಂಚಿಕೆಯೊಂದಿಗೆ ಹೊಂದಿಕೆಯಾಗುತ್ತದೆ. ಕೇಂದ್ರ ಬಜೆಟ್ 2024-25 ಭಾರತದ ಕ್ರಿಯಾತ್ಮಕ ವಿದೇಶಾಂಗ ನೀತಿಯನ್ನು ಪ್ರತಿಬಿಂಬಿಸುತ್ತದೆ. ಭೂತಾನ್ ಮತ್ತು ಇತರ ನೆರೆಹೊರೆಗಳಿಗೆ ಹೆಚ್ಚಿದ ಬೆಂಬಲವು ಭಾರತದ ವಿಕಸನಗೊಳ್ಳುತ್ತಿರುವ ರಾಜತಾಂತ್ರಿಕ ಆದ್ಯತೆಗಳನ್ನು ಒತ್ತಿಹೇಳುತ್ತದೆ.

ಇದನ್ನೂ ಓದಿ: Mudra loan: ಕೇಂದ್ರ ಬಜೆಟ್‌ನಲ್ಲಿ ಮುದ್ರಾ ಸಾಲ ಮಿತಿ ಹೆಚ್ಚಳ; ಷರತ್ತುಗಳೇನು? ಯಾರಿಗೆ ಪ್ರಯೋಜನ?

Continue Reading
Advertisement
NEET UG 2024
ದೇಶ3 mins ago

NEET UG 2024: ಕೊನೆಗೂ ನೀಟ್‌ ಫೈನಲ್ ಫಲಿತಾಂಶ ಪ್ರಕಟ; ಟಾಪರ್‌ಗಳ ಸಂಖ್ಯೆ 17ಕ್ಕೆ ಇಳಿಕೆ, ಇಲ್ಲಿದೆ ಪಟ್ಟಿ

Viral News
Latest9 mins ago

Viral News: ಊಟದ ಪಾರ್ಸೆಲ್‌‌ನಲ್ಲಿ ಉಪ್ಪಿನಕಾಯಿ ಹಾಕಲು ಮರೆತ ಹೋಟೆಲ್‌‌; 35,000 ರೂ. ದಂಡ ಹಾಕಿದ ಕೋರ್ಟ್‌!

B.S.Yediyurappa
ಕರ್ನಾಟಕ15 mins ago

B.S.Yediyurappa: ಯಡಿಯೂರಪ್ಪಗೆ ಮತ್ತೆ ಬಿಗ್‌ ರಿಲೀಫ್‌; ಪೋಕ್ಸೊ ಕೇಸ್‌ನಲ್ಲಿ ಬಂಧಿಸದಂತೆ ಹೈಕೋರ್ಟ್‌ ಸೂಚನೆ

On the occasion of Friendship Day Wonderla announced a buy one ticket get another ticket free offer
ಬೆಂಗಳೂರು20 mins ago

Wonderla Offer: ವಂಡರ್‌ಲಾದಿಂದ ವಿಶೇಷ ಆಫರ್‌; 1 ಟಿಕೆಟ್‌ ಖರೀದಿಸಿದರೆ ಮತ್ತೊಂದು ಟಿಕೆಟ್‌ ಫ್ರೀ!

Kargil Vijay Diwas Silver Jubilee Programme at ITI Central School Bengaluru
ಬೆಂಗಳೂರು22 mins ago

Kargil Vijay Diwas: ಬೆಂಗಳೂರಿನ ಐಟಿಐ ಸೆಂಟ್ರಲ್ ಶಾಲೆಯಲ್ಲಿ ಕಾರ್ಗಿಲ್ ವಿಜಯ್ ದಿನಾಚರಣೆ

FDCI & ICW 2024
ಫ್ಯಾಷನ್23 mins ago

FDCI & ICW 2024: ಇಂಡಿಯಾ ಕೌಚರ್‌ ವೀಕ್‌ನ 2ನೇ ದಿನ ಹೆಜ್ಜೆ ಹಾಕಿದ ಜಾಕ್ವೆಲೀನ್‌ ಫರ್ನಾಂಡಿಸ್‌

karnataka Weather Forecast
ಮಳೆ27 mins ago

Karnataka Weather : ಧಾರಾಕಾರ ಮಳೆ ಹಿನ್ನೆಲೆ ನಾಳೆಯೂ ಶಾಲಾ-ಕಾಲೇಜುಗಳಿಗೆ ರಜೆ

Kargil Vijay Diwas 2024
ದೇಶ28 mins ago

Kargil Vijay Diwas 2024: ಹುತಾತ್ಮರಾಗುವ ಮುನ್ನ ಕಾರ್ಗಿಲ್‌ ಹೀರೊ ಕ್ಯಾ. ವಿಕ್ರಮ್‌ ಬಾತ್ರಾ ಆಡಿದ್ದ ಈ ಮಾತುಗಳು ಸ್ಫೂರ್ತಿದಾಯಕ!

Venkatesh Iyer
ಪ್ರಮುಖ ಸುದ್ದಿ30 mins ago

Venkatesh Iyer : ಟೀಮ್ ಇಂಡಿಯಾದಿಂದ ನಿರ್ಲಕ್ಷ್ಯ, ಹೊಸ ತಂಡ ಸೇರಿದ ವೆಂಕಟೇಶ್ ಅಯ್ಯರ್​

Narendra Modi
ದೇಶ42 mins ago

Narendra Modi: ಮೋದಿ ಎಚ್ಚರಿಕೆಗೆ ಪಾಕಿಸ್ತಾನ ಥಂಡಾ; ಗಡಿಯಲ್ಲಿ ಹೆಚ್ಚುವರಿ ಸೈನಿಕರ ನಿಯೋಜನೆ!

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Ankola landslide
ಉತ್ತರ ಕನ್ನಡ1 hour ago

Ankola landslide: ಅಂಕೋಲಾ-ಶಿರೂರು ಗುಡ್ಡ ಕುಸಿತ; ನಾಳೆಯಿಂದ ಪ್ಲೋಟಿಂಗ್ ಪ್ಲಾಟ್‌ಫಾರಂ ಕಾರ್ಯಾಚರಣೆ

karnataka rain
ಮಳೆ2 hours ago

Karnataka Rain : ಉಕ್ಕಿ ಹರಿಯುವ ನೇತ್ರಾವತಿ ನದಿಯಲ್ಲಿ ತೇಲಿ ಬಂದ ಜೀವಂತ ಹಸು

Karnataka Rain
ಮಳೆ3 hours ago

Karnataka Rain: ವಿದ್ಯುತ್‌ ದುರಸ್ತಿಗಾಗಿ ಪ್ರಾಣದ ಹಂಗು ತೊರೆದು ಉಕ್ಕಿ ಹರಿಯುವ ನೀರಿಗೆ ಧುಮುಕಿದ ಲೈನ್‌ ಮ್ಯಾನ್‌!

Karnataka rain
ಮಳೆ4 hours ago

Karnataka Rain : ಹಾಸನದಲ್ಲಿ ಹೇಮಾವತಿ, ಚಿಕ್ಕಮಗಳೂರಲ್ಲಿ ಭದ್ರೆಯ ಅಬ್ಬರಕ್ಕೆ ಜನರು ತತ್ತರ

karnataka Rain
ಮಳೆ1 day ago

Karnataka Rain : ಮನೆಯೊಳಗೆ ನುಗ್ಗಿದ ಮಳೆ ನೀರು; ಕಾಲು ಜಾರಿ ಬಿದ್ದು ವೃದ್ಧೆ ಸಾವು

Actor Darshan
ಸ್ಯಾಂಡಲ್ ವುಡ್1 day ago

Actor Darshan: ನಟ ದರ್ಶನ್ ಇರುವ ಜೈಲು ಕೋಣೆ ಹೇಗಿದೆ?

Actor Darshan
ಸಿನಿಮಾ1 day ago

Actor Darshan : ಹೆಂಡ್ತಿ ಮಕ್ಕಳೊಟ್ಟಿಗೆ ಚೆನ್ನಾಗಿರು.. ಸಹಕೈದಿ ಜತೆಗೆ 12 ನಿಮಿಷ ಕಳೆದ ನಟ ದರ್ಶನ್‌

Actor Darshan
ಸಿನಿಮಾ1 day ago

Actor Darshan: ಆಧ್ಯಾತ್ಮದತ್ತ ವಾಲಿದ ದರ್ಶನ್‌; ಜೈಲಲ್ಲಿ ಹೇಗಿದೆ ಗೊತ್ತಾ ನಟನ ಬದುಕು

karnataka Weather Forecast
ಮಳೆ3 days ago

Karnataka Weather : ರಭಸವಾಗಿ ಸುರಿಯುವ ಮಳೆ; 50 ಕಿ.ಮೀ ವೇಗದಲ್ಲಿ ಬೀಸುತ್ತೆ ಗಾಳಿ

karnataka weather Forecast
ಮಳೆ3 days ago

Karnataka Weather : ರಾಜ್ಯದಲ್ಲಿ ಮುಂದುವರಿದ ಮಳೆ ಅವಾಂತರ; ನಾಳೆಯೂ ಇರಲಿದೆ ಅಬ್ಬರ

ಟ್ರೆಂಡಿಂಗ್‌