MUDA Scam: ಮುಡಾ ಜಮೀನಿನ ಸಂಪೂರ್ಣ ದಾಖಲೆಗಳನ್ನು ತೆರೆದಿಟ್ಟ ಸಿಎಂ ಸಿದ್ದರಾಮಯ್ಯ; ಇಲ್ಲಿದೆ ವಿವರ - Vistara News

ಪ್ರಮುಖ ಸುದ್ದಿ

MUDA Scam: ಮುಡಾ ಜಮೀನಿನ ಸಂಪೂರ್ಣ ದಾಖಲೆಗಳನ್ನು ತೆರೆದಿಟ್ಟ ಸಿಎಂ ಸಿದ್ದರಾಮಯ್ಯ; ಇಲ್ಲಿದೆ ವಿವರ

MUDA Scam: ತಗಾದೆಯಲ್ಲಿರುವ ಸರ್ವೆ ನಂಬರ್ 464ರ 3‌ ಎಕರೆ 16 ಗುಂಟೆ ಜಮೀನಿನ 1935ನೇ ಇಸವಿಯ ಬಳಿಕದ ಸಂಪೂರ್ಣ ದಾಖಲಾತಿಗಳನ್ನು (Documents) ಸಿಎಂ ಸಿದ್ದರಾಮಯ್ಯ ಮುಂದಿಟ್ಟಿದ್ದಾರೆ. ಅವ್ಯವಹಾರವೇ ನಡೆದಿಲ್ಲದ ಕಡೆಯಲ್ಲಿ ನಿರಾಧಾರ ಆರೋಪ ಮಾಡುವ ಮೂಲಕ ವಿಪಕ್ಷಗಳು ನನ್ನ ತೇಜೋವಧೆ ಮಾಡಲು ಯತ್ನಿಸುತ್ತಿವೆ ಎಂದಿದ್ದಾರೆ.

VISTARANEWS.COM


on

CM Siddaramaiah muda scam
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಮುಡಾ ಜಮೀನು ಅವ್ಯವಹಾರ (MUDA Scam) ನಡೆಸಲಾಗಿದೆ ಎಂಬ ಬಿಜೆಪಿ- ಜೆಡಿಎಸ್‌ (BJP JDS) ಆರೋಪಗಳಿಗೆ ಪತ್ರಿಕಾಗೋಷ್ಠಿ (Pressmeet) ಮೂಲಕ ಸಿಎಂ ಸಿದ್ದರಾಮಯ್ಯ (CM Siddaramaiah) ಇಂದು ಪ್ರತ್ಯುತ್ತರ ನೀಡಿದ್ದಾರೆ. ತಗಾದೆಯಲ್ಲಿರುವ ಸರ್ವೆ ನಂಬರ್ 464ರ 3‌ ಎಕರೆ 16 ಗುಂಟೆ ಜಮೀನಿನ 1935ನೇ ಇಸವಿಯ ಬಳಿಕದ ಸಂಪೂರ್ಣ ದಾಖಲಾತಿಗಳನ್ನು (Documents) ಮುಂದಿಟ್ಟಿದ್ದಾರೆ. ಅವ್ಯವಹಾರವೇ ನಡೆದಿಲ್ಲದ ಕಡೆಯಲ್ಲಿ ನಿರಾಧಾರ ಆರೋಪ ಮಾಡುವ ಮೂಲಕ ವಿಪಕ್ಷಗಳು ನನ್ನ ತೇಜೋವಧೆ ಮಾಡಲು ಯತ್ನಿಸುತ್ತಿವೆ ಎಂದಿದ್ದಾರೆ.

ಸಿಎಂ ಮುಂದಿಟ್ಟ ಸಮಗ್ರ ವಿವರಗಳು ಹೀಗಿವೆ:

1) ಶ್ರೀ ನಿಂಗ ಬಿನ್ ಜವರ ಇವರ ವಾರಸುದಾರ ಪುತ್ರರಲ್ಲೊಬ್ಬರಿಂದ ಶ್ರೀ ಬಿ.ಎಂ ಮಲ್ಲಿಕಾರ್ಜುನ್ ರವರು ಭೂಮಿ ಖರೀದಿ ಮಾಡಿದ್ದು, ಈ ಕ್ರಯಕ್ಕೆ ಪಿ.ಟಿ.ಸಿ.ಎಲ್. ಕಾಯ್ದೆ ಅನ್ವಯಿಸುವುದಿಲ್ಲವೆ?

ಪ್ರತಿಕ್ರಿಯೆ:

2-8-1935 ರಲ್ಲಿ ಜವರನ ಮಗ ನಿಂಗ ಎನ್ನುವವರು ಮೈಸೂರು ತಾಲ್ಲೂಕು ಕಛೇರಿಗೆ ಜಮೀನು ನೀಡುವಂತೆ ಅರ್ಜಿ ಸಲ್ಲಿಸಿದ್ದಾರೆ. ಆಗಿನ ಕೆಳ ಹಂತದ ಅಧಿಕಾರಿಗಳು 15-8-1935 ರಂದು ನಿಂಗ ಅವರು ಕೇಳಿರುವ ಜಮೀನುಗಳನ್ನು ಹರಾಜಿನ ಮೂಲಕ ವಿಲೇಪಡಿಸಬೇಕೆಂದು ವರದಿ ಸಲ್ಲಿಸಿದ್ದಾರೆ. ಅದರ ಪ್ರಕಾರ ಹರಾಜು ನಡೆಸಲು ಕ್ರಮವಹಿಸಿದ್ದಾರೆ. 26-9-1935 ರಂದು ಹರಾಜು ನೋಟೀಸು ಹೊರಡಿಸಿದ್ದಾರೆ. 3-10-1935 ರಂದು ಹರಾಜು ನಡೆಸಲಾಗುವುದೆಂದು ನೋಟೀಸಿನಲ್ಲಿ ತಿಳಿಸಿದ್ದಾರೆ. ಅದರ ಪ್ರಕಾರ ಹರಾಜು ನಡೆಸಲಾಗಿದೆ. ಹರಾಜು ನಡೆಸಿದ ಮೇಲೆ ಈ ರೀತಿ ದಾಖಲು ಮಾಡಿದ್ದಾರೆ. “ಕೆಸರೆ ಗ್ರಾಮದ ಸ. ನಂ 464 ರ 3.16 [ ಜಮೀನು] 3 ರೂಪಾಯಿ 8 ಆಣೆ ಉಳ್ಳ ಜಮೀನು ತಾಲ್ಕು —— ರಿಂದ 27-9-35 ನೇ —– ಎಡಿ 12 ನೇ ಮೈಸೂರು ಹುಕುಂ ಮೇರೆ ಬೀಳು —— ಹರಾಜು ಮಾಡಿಸಲಾಯ್ತು. 3 ರೂಪಾಯಿ ಹರಾಜು. 1 ರೂಪಾಯಿ ನಿಂಗ ಬಿನ್ ಜವರ, ಇದರ ಮೇಲೆ ಯಾರೂ ಸವಾಲು ಮಾಡಲಿಲ್ಲವಾಗಿ ಹರಾಜು ಅಖೈರು ಮಾಡಲಾಯ್ತು” ಎಂದು ದಾಖಲಿಸಲಾಗಿದೆ. 13-10-1935 ರಂದು ‘ Sale is confirmed” ಎಂದು ನಮೂದಿಸಿದ್ದಾರೆ. ಜಮೀನುಗಳನ್ನು ಹರಾಜಿನ ಮೂಲಕ ಪಡೆದಿರುವುದರಿಂದ ಸ್ವಯಾರ್ಜಿತ ಜಮೀನಾಗುತ್ತದೆಯೆ ಹೊರತು ಈ ಜಮೀನುಗಳ ಮೇಲೆ ಸರ್ಕಾರದ ಯಾವುದೇ ಹಿತಾಸಕ್ತಿ ಇರುವುದಿಲ್ಲ. ಹಾಗಾಗಿ ಈ ಜಮೀನುಗಳು ಪಿಟಿಸಿಎಲ್ ಕಾಯ್ದೆ ವ್ಯಾಪ್ತಿಗೆ ಬರುವುದಿಲ್ಲ. ಈ ಕುರಿತು ಕಾಯ್ದೆಯು ಸ್ಪಷ್ಟವಾಗಿ ಹೇಳುತ್ತದೆ. ಅಸಂಖ್ಯಾತ ತೀರ್ಪುಗಳೂ ಇವೆ.

2) ಖರೀದಿ ಮಾಡಲು ಅವರು ಸರ್ಕಾರದಿಂದ ಅನುಮತಿ ಪಡೆದಿದ್ದರೆ?

ಪ್ರತಿಕ್ರಿಯೆ:

ಪಿಟಿಸಿಎಲ್ ಜಮೀನುಗಳು ಅಲ್ಲದ ಕಾರಣ ಸರ್ಕಾರದ ಅನುಮತಿ ಅಗತ್ಯವೂ ಇಲ್ಲ ಎಂಬುದು ಕಾನೂನಿನ ಜ್ಞಾನವಿರುವ ಪ್ರತಿಯೊಬ್ಬರಿಗೂ ತಿಳಿದಿರುತ್ತದೆ. ಆದರೆ ಬಿಜೆಪಿ, ಜೆಡಿಎಸ್ ನವರು ಮಾತ್ರ ಇದನ್ನು ರಾಜಕಾರಣಕ್ಕೆ ಬಳಸುತ್ತಿದ್ದಾರೆ.

3) ಈ ಜಮೀನುಗಳನ್ನು ಖರೀದಿ ಮಾಡುವಾಗ ವಾರಸುದಾರರನ್ನು ಈ ಭೂ ಕ್ರಯದಿಂದ ಏಕೆ ಹೊರಗಿಡಲಾಗಿತ್ತು? ಈ ಕ್ರಯವನ್ನು ಕಾನೂನಿನ ಪ್ರಕಾರ ಮಾಡಲಾಗಿದೆಯೇ? ಎಂಬ ಪ್ರಶ್ನೆಯನ್ನು ಬಿಜೆಪಿಯವರು ಎತ್ತಿದ್ದಾರೆ.

ಪ್ರತಿಕ್ರಿಯೆ:

— 10-4-1993 ರಲ್ಲಿ ಒಂದು ವಂಶವೃಕ್ಷ ಮಾಡಿಸಿದ್ದಾರೆ. ಅದರ ಪ್ರಕಾರ ನಿಂಗ ಬಿನ್ ಜವರ ಇವರಿಗೆ ಮೂರು ಜನ ಮಕ್ಕಳು. ಮೊದಲನೆ ಮಲ್ಲಯ್ಯ, ಎರಡನೆ ಮೈಲಾರಯ್ಯ ಮತ್ತು ಮೂರನೆ ಜೆ. ದೇವರಾಜು. ವಂಶವೃಕ್ಷದ ಪ್ರಕಾರ ಮಲ್ಲಯ್ಯ ಎನ್ನುವವರಿಗೆ ವಾರಸುದಾರರನ್ನು ತೋರಿಸಿಲ್ಲ. ಎರಡನೆ ಮೈಲಾರಯ್ಯ ಇವರಿಗೆ ಮಂಜುನಾಥ್‌ಸ್ವಾಮಿ ಎಂ ಎನ್ನುವವರಿದ್ದಾರೆ. ಆಗ ಅವರಿಗೆ 29 ವರ್ಷ ಎಂದು ನಮೂದಿಸಲಾಗಿದೆ. 3 ನೆಯವರು ದೇವರಾಜು ಎನ್ನುವವರು. [ಈ ದೇವರಾಜು ಎನ್ನುವವರೆ ಮಲ್ಲಿಕಾರ್ಜುನಸ್ವಾಮಿಯವರಿಗೆ ಜಮೀನು ಮಾರಾಟ ಮಾಡಿರುವುದು]. ಈ ವಂಶವೃಕ್ಷದಲ್ಲಿ ಮಲ್ಲಯ್ಯ, ದೇವರಾಜು, ಮೈಲಾರಯ್ಯನವರ ಪತ್ನಿ ಪುಟ್ಟಗೌರಮ್ಮ, ಎಂ ಮಂಜುನಾಥಸ್ವಾಮಿ ಇವರುಗಳು ಸಹಿ ಮಾಡಿದ್ದಾರೆ.

— ಜೆ ದೇವರಾಜು ಎನ್ನುವವರ ಹೆಸರಿಗೆ ಖಾತೆ ಮಾಡಿಕೊಡಲು ಈ ಮೇಲಿನ ಎಲ್ಲರೂ ಸಹಿ ಮಾಡಿ ಹೇಳಿಕೆ ಕೊಟ್ಟಿದ್ದಾರೆ. ಹೆಳಿಕೆಯಲ್ಲಿ ಹೀಗೆ ಬರೆಯಲಾಗಿದೆ. “ ಮೈಸೂರು ತಾಲ್ಲೂಕು ಕಸಬಾ ಹೋಬಳಿ ರಾಜಸ್ವ ನಿರೀಕ್ಷಕರ ರೂಬು ರೂಬು. ಡಿಟೊ ಮೈಸೂರು ಸಿಟಿ ಗಾಂಧಿನಗರ 8 ನೇ ಕ್ರಾಸ್ , ಮನೆ ನಂ 4038 ರ ನಿವಾಸಿಗಳಾದ ಲೇಟ್ ನಿಂಗಯ್ಯ ಬಿನ್ ಜವರ ರವರ ಮೊದಲನೆ ಮಗ ಮಲ್ಲಯ್ಯ ಮತ್ತು ಲೇಟ್ ಮೈಲಾರಯ್ಯನವರ ಹೆಂಡತಿ ಪುಟ್ಟಗೌರಮ್ಮ ಹಾಗೂ ಮಗ ಎಂ. ಮಂಜುನಾಥಸ್ವಾಮಿ ಆದ ನಾವುಗಳು ಹೆಳಿ ಬರೆಸಿದ ಹೇಳಿಕೆ.

— ಅದಾಗಿ ಮೈಸೂರು ತಾಲ್ಲೂಕು ಕಸಬಾ ಹೋಬಳಿ ಕೆಸರೆ ಗ್ರಾಮದ ಸರ್ವೆ ನಂ. 464 ರ 3-16 ಈ ಜಮೀನುಗಳಿಗೆ ಖಾತೆ ಮಾಡಿಕೊಡಲು ಲೇಟ್ ನಿಂಗ ಬಿನ್ ಜವರ ರವರ ಮೂರನೆ ಮಗ ಜೆ.ದೇವರಾಜು ನಮೂನೆ 19 ರ ಮೂಲಕ ಅರ್ಜಿ ಸಲ್ಲಿಸಿರುವುದು ಸರಿಯಷ್ಟೆ . ಸದರಿ ಜಮೀನು ನಿಂಗ ಬಿನ್ ಜವರರವರಿಗೆ ಸೇರಿದ್ದು ಅವರು ಫವತಿಯಾಗಿ ನಮ್ಮಗಳಿಗೆ ಸದರಿ ಜಮೀನಿನಲ್ಲಿ ಭಾಗ ಬರಬೇಕಾಗಿರುವುದಿಲ್ಲ. ಈಗಾಗಲೆ ನಾವು 462 ರಲ್ಲಿ 4 ಎಕರೆ ಜಮೀನನ್ನು ಪುಟ್ಟಮ್ಮ ಎನ್ನುವವರಿಗೆ ಮಾರಿರುತ್ತೇವೆ. ಆದ್ದರಿಂದ ಅರ್ಜಿದಾರರಾದ ಜೆ. ದೇವರಾಜುರವರಿಗೆ ಸದರಿ ಜಮೀನುಗಳನ್ನು ಖಾತೆ ಮಾಡುವುದರಲ್ಲಿ ನಮ್ಮಗಳ ತಕರಾರು ಏನೂ ಇರುವುದಿಲ್ಲವೆಂದು ಹೇಳಿ ಬರೆಯಿಸಿದ ಹೇಳಿಕೆ. ಓದಿಸಿ ಕೇಳಿ ಸರಿ ಎಂದು ಒಪ್ಪಿ ರುಜು ಮಾಡಿರುತ್ತೇವೆ. ಮಲ್ಲಯ್ಯ, ಪುಟ್ಟಗೌರಮ್ಮ ಇಬ್ಬರೂ ಕನ್ನಡದಲ್ಲಿ ಸಹಿ ಮಾಡಿರುತ್ತಾರೆ. ಎಂ.ಮಂಜುನಾಥಸ್ವಾಮಿ ಇಂಗ್ಲಿಷಿನಲ್ಲಿ ಸಹಿ ಮಾಡಿರುತ್ತಾರೆ. ಇದರ ಆಧಾರದ ಮೇಲೆ ಜೆ.ದೇವರಾಜು ಅವರ ಹೆಸರಿಗೆ ಈ ಜಮೀನುಗಳು ವರ್ಗಾವಣೆಯಾಗಿವೆ.

— ಹಾಗಾಗಿ ಕ್ರಯದಾರರ ವಾಸರಸುದಾರರ ಒಪ್ಪಿಗೆ ಇಲ್ಲದೆ ಖರೀದಿ ನಡೆದಿದೆ ಎಂಬ ಬಿ.ಜೆ.ಪಿ. ಯವರ ಆರೋಪವು ಸುಳ್ಳು. ಈ ಎಲ್ಲ ವ್ಯವಹಾರಗಳು 2010 ಕ್ಕಿಂತ ಮುಂಚೆ ನಡೆದಿವೆ. ಇವು ನನಗೆ ಸಂಬಧಪಟ್ಟಿದ್ದಲ್ಲ. ಆದರೂ ಸಹ ಬಿಜೆಪಿಯವರು ಈ ಸಣ್ಣ ವಿಚಾರವನ್ನು ರಾಜಕಾರಣಕ್ಕೆ ಬಳಸುತ್ತಿರುವ ಕಾರಣ ಈ ವಿಚಾರಗಳನ್ನು ಪ್ರಸ್ತಾಪಿಸಬೇಕಾಗಿದೆ.

4) ಭೂಸ್ವಾಧೀನ ಪ್ರಕ್ರಿಯೆ ಪೂರ್ಣಗೊಂಡ ಮುಡಾದಿಂದ ಅಭಿವೃದ್ಧಿ ಹೊಂದಿದ ಜಾಗಗಳು ಎಷ್ಟು ಇವೆ? ಅಂತಹ ಡಿ-ನೋಟಿಫಿಕೇಶನ್ ಪ್ರಸ್ತಾವನೆಗಳಿಗೆ ಸರ್ಕಾರದ ಅನುಮತಿ ಪಡೆಯಲಾಗಿತ್ತೆ?

ಪ್ರತಿಕ್ರಿಯೆ

ಅದಕ್ಕೂ ಮೊದಲು ಪ್ಯಾರಾ ನಂ.6 ರಲ್ಲಿ ಬಿ.ಜೆಪಿ ಯವರು ಗೌರವಾನ್ವಿತ ರಾಜ್ಯಪಾಲರಿಗೆ ನೀಡಿರುವ ಮನವಿ/ ದೂರಿನಲ್ಲಿ ಸದರಿ ಜಮೀನುಗಳನ್ನು ಡಿ-ನೋಟಿಫಿಕೇಶನ್ ಮಾಡಲು ಮುಡಾದಿಂದ ಪ್ರಸ್ತಾವನೆ ಬಂದಿರಲಿಲ್ಲ, ಅರ್ಜಿದಾರರು ಅರ್ಜಿಯೂ ಕೊಟ್ಟಿರಲಿಲ್ಲ, ಆದರೂ ಡಿ.ನೋಟಿಫಿಕೇಶನ್ ನಡೆದಿದೆ ಎಂದು ಸುಳ್ಳು ಮಾಹಿತಿಯನ್ನು ನೀಡಿದ್ದಾರೆ.

ದಾಖಲೆಗಳನ್ನು ಪರಿಶೀಲಿಸಿದಾಗ ಕಂಡು ಬಂದ ಸತ್ಯಾಂಶಗಳು:

ಬಿಜೆಪಿಯವರು ಸಂಪೂರ್ಣವಾಗಿ ತಪ್ಪು ಮಾಹಿತಿಯನ್ನು ಗೌರವಾನ್ವಿತ ರಾಜ್ಯಪಾಲರಿಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ.

— ಸದರಿ ಜಮೀನುಗಳನ್ನು ಭೂಸ್ವಾಧೀನ ಮಾಡಲು 18-09-1992 ರಲ್ಲಿ ಪ್ರಾಥಮಿಕ ಅಧಿಸೂಚನೆ ಹೊರಡಿಸಿದ್ದಾರೆ. ಆದರೆ, ಅದು ಬಹಳ ವರ್ಷಗಳಾದರೂ ಇತ್ಯರ್ಥವಾಗಿರುವುದು ಕಂಡುಬರುವುದಿಲ್ಲ. ಆಗ, ಜಿ.ದೇವರಾಜು, ರೋಡ್ ನಂ.3406, 4ನೇ ಮುಖ್ಯ ರಸ್ತೆ, ಲಷ್ಕರ್ ಮೊಹಲ್ಲಾ ಉರ್ದು ನಗರ, ಮೈಸೂರು ರಸ್ತೆ ಇವರು 13-08-1996 ರಂದು ತಮ್ಮ ಜಮೀನುಗಳನ್ನು ಭೂಸ್ವಾಧೀನದಿಂದ ಕೈಬಿಡುವಂತೆ ಅರ್ಜಿ ಬರೆದಿದ್ದಾರೆ.

— ಈ ಜಮೀನುಗಳ ಅಂತಿಮ ಅಧಿಸೂಚನೆಯಾಗಿದ್ದು 20-08-1997 ರಂದು. ಅದಕ್ಕೂ ಮೊದಲೇ ಈ ಅರ್ಜಿ ಬರೆದಿದ್ದಾರೆ. ಅರ್ಜಿಯ ಮೇಲೆ ಅಂದಿನ ನಗರಾಭಿವೃದ್ಧಿ ಸಚಿವರಾಗಿದ್ದ ಶ್ರೀ ಬಿ.ಎನ್. ಬಚ್ಚೇಗೌಡ ಇವರು ಮನವಿ ಪರಿಶೀಲಿಸಿ ಸ್ಥಳೀಯ ಅಧಿಕಾರಿಗಳಿಂದ ವರದಿ ತರಿಸಿಕೊಂಡು ಅಭಿಪ್ರಾಯದೊಂದಿಗೆ ಮಂಡಿಸಿ ಎಂದು ಕಾರ್ಯದರ್ಶಿಯವರಿಗೆ ಟಿಪ್ಪಣಿ ಬರೆದಿದ್ದಾರೆ. ಅದನ್ನು ಆಧರಿಸಿ, ಒಂದು ತಿಂಗಳಾದ ಮೇಲೆ ಪತ್ರ ಮುಡಾ ಆಯುಕ್ತರಿಗೆ ಹೋಗಿದೆ.

— ಮುಡಾದಲ್ಲಿ 24-07-1997 ರಂದು ಈ ಜಾಗ ಭೂಸ್ವಾಧೀನದಿಂದ ಕೈಬಿಡಲು ನಿರ್ಣಯ ಪಾಸ್ ಮಾಡಿದ್ದಾರೆ. 30-08-1997ರಂದು ಸದರಿ ಜಾಗಗಳನ್ನು ಭೂಸ್ವಾಧೀನದಿಂದ ಕೈಬಿಡಲು ಮುಡಾ ಆಯುಕ್ತರು ಸರ್ಕಾರದ ಕಾರ್ಯದರ್ಶಿಗಳಿಗೆ ಶಿಫಾರಸ್ಸು ಮಾಡಿದ್ದಾರೆ.

— ಸದರಿ ಶಿಫಾರಸ್ಸನ್ನು ಆಧರಿಸಿ, ಭೂ ಸ್ವಾಧೀನ ಮಾಡಿದ ಜಮೀನುಗಳನ್ನು ಡಿ-ನೋಟಿಫೈ ಮಾಡಲು ಆಗ ರೆವಿನ್ಯೂ ಇಲಾಖೆಯ ಪ್ರಧಾನ ಕಾರ್ಯದರ್ಶಿ ಶ್ರೀ. ವಿ ಬಾಲಸುಬ್ರಮಣ್ಯನ್ ಅವರ ಅಧ್ಯಕ್ಷತೆಯಲ್ಲಿ ಒಂದು ಸಮಿತಿ ಇರುವುದು ದಾಖಲೆಗಳಿಂದ ತಿಳಿದು ಬರುತ್ತದೆ. ವಿ.ಗೋವಿಂದರಾಜು ಸೆಕ್ರೆಟರಿ-2, ನಗರಾಭಿವೃದ್ಧಿ ಇಲಾಖೆ ಮತ್ತು ಕೆ. ಎಂ. ತಿಮ್ಮಯ್ಯ, ಕಾನೂನು ಇಲಾಖೆಯ ಅಡಿಶನಲ್ ಸೆಕ್ರೆಟರಿ ಒಳಗೊಂಡ ತ್ರಿಸದಸ್ಯ ಸಮಿತಿಯು ಪರಿಶೀಲಿಸಿ ಡಿ ನೋಟಿಫೈ ಮಾಡಿದೆ.

— ಈ 3 ಜನರ ಸಮಿತಿಯು ಬೆಂಗಳೂರಿನಲ್ಲಿ ಬಿಡಿಎಯ ಯಡಿಯೂರು- ನಾಗಸಂದ್ರ, ಮೈಸೂರಿನ ಮುಡಾದ ಕೆಸರೆ ಸೇರಿದಂತೆ ಸುಮಾರು 19 ಕಡೆ ಡಿನೋಟಿಫೈ ಮಾಡಲು ಅನುಮೋದನೆ ಮಾಡಿರುವಂತೆ ಕಾಣುತ್ತಿದೆ. ಈ ಸಮಿತಿಯು “ The Committee noted that the Mysore UDA in its meeting held on 24-7-97 has resolved to recommend to government to drop the acquisition proceedings in respect of land mentioned above since this land is situated at one end of the scheme. Further it noted that in this land, the Karnataka urban water supply and drainage Board has not prepared any major plan for their scheme. No plans have been prepared for Melapura water supply scheme also.

— The final notification was issued during April — and August 1997 for acquisition of the land by MUDA for its scheme. No award has been passed yet. In view of the fact that if the land is denotified the scheme will not get affected and no award has been passed and also the KUWS and dB has not prepared any major plan in the land, the committee accepted the resolution of the MUDA and recommended for denotification”. ಎಂದು ದಾಖಲಿಸಿದ್ದಾರೆ. ಈ ಪ್ಯಾರಾದಲ್ಲಿ ಅರ್ಥವಾಗುವ ಅಂಶಗಳೆAದರೆ ಈ ಭೂಮಿ ಬಡಾವಣೆಯ ಕೊನೆಯಲ್ಲಿದೆ ಎಂಬುದು ಕಂಡು ಬರುತ್ತದೆ. ಇಲ್ಲಿ ಯಾವ ಅಭಿವೃದ್ಧಿಯೂ ಆಗಿಲ್ಲ. ನಗರ ಕುಡಿಯುವ ನೀರು ಮತ್ತು ಒಳಚರಂಡಿ ಮಂಡಳಿಯವರು ಈ ಜಮೀನನಲ್ಲಿ ಯಾವುದೇ ಪ್ಲಾನ್ ಸಿದ್ಧಪಡಿಸಿಲ್ಲ. ಈ ಜಮೀನುಗಳನ್ನು ಡಿ ನೋಟಿಫೈ ಮಾಡುವುದರಿಂದ ಯಾವುದೇ ಸಮಸ್ಯೆಗಳಾಗುವುದಿಲ್ಲ. ಈ ಕುರಿತು ಮುಡಾದಲ್ಲೂ ನಿರ್ಣಯವಾಗಿದೆ ಎಂದು ಹೇಳಿ ಡಿನೋಟಿಫೈ ಮಾಡಲು ತೀರ್ಮಾನಿಸಿದ್ದಾರೆ. ಇದರ ಅಧಾರದ ಮೇಲೆ ಈ ಭೂಮಿಯನ್ನು ಡಿನೋಟಿಫೈ ಮಾಡಿರುವುದು ಕಂಡುಬರುತ್ತದೆ.

— ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ 1984 ರಿಂದ ಒಟ್ಟು 13 ಬಡಾವಣೆಗಳಲ್ಲಿ 235- 30 ಎಕರೆ ಭೂಮಿಯನ್ನು ಭೂ ಸ್ವಾಧೀನದಿಂದ ಕೈ ಬಿಡಲಾಗಿದೆ.

— ಇಲ್ಲಿ ಕಾಮನ್ ಸೆನ್ಸಿನ ಪ್ರಶ್ನೆಯೊಂದಿದೆ. ದೇವರಾಜು ಎನ್ನುವವರು 13-8-1996 ರಲ್ಲಿ ಅರ್ಜಿ ಕೊಡುತ್ತಾರೆ. ನಗರಾಭಿವೃದ್ಧಿ ಇಲಾಖೆಯವರು 3-9-1996 ರಂದು ಮೂಡಾ ಆಯುಕ್ತರಿಗೆ ಪತ್ರ ಬರೆದು ವರದಿ ಕೇಳುತ್ತಾರೆ. ಅದಾಗಿ 30-8-1997 ಕ್ಕೆ ಮೂಡಾದವರು ಸರ್ಕಾರಕ್ಕೆ ವರದಿ ನೀಡಿದ್ದಾರೆ. ಕೇವಲ ವರದಿ ನೀಡುವುದಕ್ಕೆ ಒಂದು ವರ್ಷ ತೆಗೆದುಕೊಂಡಿದ್ದಾರೆ. ಅದಾದ ಮೇಲೆ ವಿ.ಬಾಲಸುಬ್ರಮಣ್ಯನ್ ಎಂಬ ಟಫ್ ಅಧಿಕಾರಿಯವರ ಅಧ್ಯಕ್ಷತೆಯಲ್ಲಿ ಈ ಜಮೀನುಗಳೂ ಸೇರಿದಂತೆ ರಾಜ್ಯದ ಸುಮಾರು 19 ಕಡೆ ಭೂ ಸ್ವಾಧೀನದಿಂದ ಕೈ ಬಿಡಲು ತೀರ್ಮಾನಿಸಿದ್ದಾರೆ. ಅಂತಿಮವಾಗಿ 18-5-1998 ರಂದು ಭೂ ಸ್ವಾಧೀನದಿಂದ ಕೈ ಬಿಟ್ಟಿದ್ದಾರೆ. ಈಗ ನಿಮ್ಮನ್ನು ಕೇಳಬಯಸುತ್ತೇನೆ. ಮುಖ್ಯಮಂತ್ರಿಯೊ, ಉಪಮುಖ್ಯಮಂತ್ರಿಯೊ ಅಥವಾ ಮಂತ್ರಿಯೊ, ಎಮ್.ಎಲ್.ಎ ಯೊ ಇದ್ದರೆ ಈ ಪ್ರಕ್ರಿಯೆ ಮುಗಿಸಲು ಎರಡು ವರ್ಷ ತೆಗೆದುಕೊಳ್ಳುತ್ತಿದ್ದರೆ?

5) ಭೂಮಿಯನ್ನು ಸಂಪೂರ್ಣವಾಗಿ ಸರ್ಕಾರ ಸ್ವಾಧೀನಪಡಿಸಿಕೊಂಡಾಗ ಡಿ-ನೋಟಿಫಿಕೇಶನ್ ಮಾಡಬಹುದೇ?

6) ಅಂತಹ ಅಭಿವೃದ್ಧಿ ಹೊಂದಿದ ಅಥವಾ ಭಾಗಶಃ ಅಭಿವೃದ್ಧಿ ಪಡಿಸಿದ ಭೂಮಿಯನ್ನು ಮಾರಾಟ ಮಾಡಬಹುದೇ? ಅದನ್ನು ಡಿ-ನೋಟಿಫೈ ಮಾಡಿದಾಗ ಭೂಮಿಯನ್ನು ಯಾರು ಹೊಂದಿದ್ದರು?

ಪ್ರತಿಕ್ರಿಯೆ:

  1. ಯಾವುದೇ ಜಾಗವನ್ನು ಭೂಸ್ವಾಧೀನ ಮಾಡಿ ಭೂಮಿಯ ಪರಿಹಾರ ಪಾವತಿಸಿ ಆ ಭೂಮಿಯ ಸಂಪೂರ್ಣ ಸ್ವಾಧೀನವನ್ನು ತೆಗೆದುಕೊಳ್ಳದ ಹೊರತು ಭೂಸ್ವಾಧೀನ ಪ್ರಕ್ರಿಯೆಯು ಪೂರ್ಣವಾಗುವುದಿಲ್ಲ ಎಂಬುದೆ ಕುರಿತು ಅನೇಕ ತೀರ್ಪುಗಳು ಇವೆ ಮತ್ತು ಸರ್ಕಾರದ ಕ್ರಮವೂ ಆಗಿದೆ. ಇಷ್ಟಕ್ಕೂ ಈ ಜಮೀನುಗಳನ್ನು 18-05-1998 ರಲ್ಲಿ ಕೈಬಿಡಲಾಗಿದೆ.
  2. ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ 1984 ರಿಂದ ಒಟ್ಟು 13 ಬಡಾವಣೆಗಳಲ್ಲಿ 235- 30 ಎಕರೆ ಭೂಮಿಯನ್ನು ಭೂ ಸ್ವಾಧೀನದಿಂದ ಕೈ ಬಿಡಲಾಗಿದೆ.
  3. ಹಾಗಾಗಿ ಭುಸ್ವಾಧೀನದಿಂದ ಭೂಮಿಗಳನ್ನು ಕೈಬಿಟ್ಟಾಗ ಈ ಜಮೀನುಗಳನ್ನು ಮುಡಾ ಪೊಸೆಷನ್ ತೆಗೆದುಕೊಳ್ಳದಿರುವುದು ಕಂಡುಬರುತ್ತದೆ.
  4. ಹಾಗಾಗಿ ಬಿಜೆಪಿಯವರು ಎತ್ತಿರುವ ಈ ಪ್ರಶ್ನೆ ಕೂಡ ಅಸಂಗತ ಪ್ರಶ್ನೆಯಾಗಿದೆ.

7) ಸರ್ಕಾರದ ಅನುಮತಿಯಿಲ್ಲದೆ 50:50 ಯೋಜನೆಯನ್ನು ಹೇಗೆ ಜಾರಿಗೆ ಬಂತು?

ಪ್ರತಿಕ್ರಿಯೆ:

— ನಮ್ಮ ಕುಟುಂಬಕ್ಕೆ ಈ ಜಮೀನುಗಳು ಬರುವ ವೇಳೆಗಾಗಲೆ ದಿನಾಂಕ: 15-7-2005 ರಲ್ಲಿ ಭೂಪರಿವರ್ತನೆಯಾಗಿವೆ. ಕೃಷಿ ಉದ್ದೇಶದಿಂದ ವಸತಿ ಉದ್ದೇಶಕ್ಕೆ ಭೂ ಪರಿವರ್ತನೆಯಾಗಿವೆ.

— ಇದಾದ ಮೇಲೆ ದಿನಾಂಕ: 23-6-2014 ರಲ್ಲಿ ಮತ್ತು 25-10-2021 ರಲ್ಲಿ ಭೂ ಪರಿಹಾರಕ್ಕೆ ಬದಲಾಗಿ ಪರ್ಯಾಯ ಜಾಗವನ್ನು ಕೊಡಬೇಕೆಂದು ಅರ್ಜಿ ಹಾಕಲಾಗಿದೆ.

— ನನ್ನ ಪತ್ನಿ ತನ್ನ ನಿವೇಶನ/ ಜಾಗ ಕೊಡಿ ಎಂದು ನನ್ನ ಜಾಗವನ್ನು ಮುಡಾ ಬಳಸಿಕೊಂಡಿದೆ. ಅದಕ್ಕೆ ಪರ್ಯಾಯ ಜಾಗ ಕೊಡಿ ಎಂದು ಕೇಳಿದ್ದಾರೆ. ಮುಡಾದವರು ಕೊಟ್ಟಿದ್ದಾರೆ.

— ಭೂ ಸ್ವಾಧೀನ ಪಡಿಸದೆ ಭೂಮಿಯನ್ನು ಉಪಯೋಗಿಸಿಕೊಂಡ ಪ್ರಕರಣಗಳಲ್ಲಿ ಹಾಗೆ ಉಪಯೋಗಿಸಲಾದ ಭೂಮಿಗೆ ಪರ್ಯಾಯವಾಗಿ ಶೇ. 50:50 ರ ಅನುಪಾತದಲ್ಲಿ ಜಾಗವನ್ನು ಕೊಡಬೇಕೆಂದು 14-9-2020 ರಲ್ಲಿ ನಿರ್ಣಯ ಮಾಡಿದ್ದಾರೆ. ಈ ನಿರ್ಣಯವನ್ನು ಸರ್ಕಾರ ರದ್ದು ಮಾಡಿದೆ.

— ಅಷ್ಟಕ್ಕೆ ಸುಮ್ಮನಿರದೆ 7-12-2020 ರಂದು ಮತ್ತೆ ಚರ್ಚೆ ಮಾಡಿ ಇನ್ನೊಂದು ನಿರ್ಣಯ ಮಾಡಿದ್ದಾರೆ. ಆ ಸಭೆಯಲ್ಲಿ ಜಿ. ಟಿ. ದೇವೇಗೌಡ ಅವರು “ ಶೇ. 50:50ರ ಅನುಪಾತದಲ್ಲಿ ಒಪ್ಪಿಕೊಳ್ಳುವ ರೈತರಿಗೆ ಅದೇ ರೀತಿ ಸೂಕ್ತ ನಿರ್ಣಯಗಳನ್ನು ಕೈಗೊಳ್ಳಲು ಶೇ.50;50 ರ ಅನುಪಾತಕ್ಕೆ ಒಪ್ಪಿಕೊಳ್ಳದ ಹಾಗೂ ಸಹಮತಿ ಸೂಚಿಸದ ಪ್ರಕರಣಗಳಲ್ಲಿ ಪ್ರತ್ಯೇಕ ಸಭೆ ಕರೆಯಲು ಸೂಚಿಸಿದರು”. ಎಂದು ದಾಖಲಾಗಿದೆ.

— ಮರಿತಿಬ್ಬೇಗೌಡ ಅವರು, “ಶೇ.50:50 ಅನುಪಾತದಲ್ಲಿ ರೈತರನ್ನು ಬಲವಂತಪಡಿಸಲು ಬರುವುದಿಲ್ಲವೆಂದು ಈ ಕಾರಣ ರೈತರ ಕೋರಿಕೆಯನ್ನು ಪರಿಗಣಿಸಬೇಕು, ಭೂ ಸ್ವಾಧೀನಪಡಿಸದೇ ಉಪಯೋಗಿಸಿಕೊಂಡಿರುವ ಸ್ವತ್ತುಗಳಿಗೆ ಅಷ್ಟೇ ವಿಸ್ತೀರ್ಣದ ಸ್ವತ್ತುಗಳನ್ನು ನೀಡುವುದು ಸೂಕ್ತವೆಂದು” ಹೇಳಿದ್ದಾರೆ. ಸಭೆಯಲ್ಲಿ ಎಸ್.ಎ.ರಾಮದಾಸ್, ಎಲ್.ನಾಗೇಂದ್ರ, ಸಂದೇಶ್ ನಾಗರಾಜ್ ಮುಂತಾದವರು ಮಾತನಾಡಿದ್ದಾರೆ.

— ಅಂತಿಮವಾಗಿ ಈ ರೀತಿ ನಿರ್ಣಯಿಸಿದ್ದಾರೆ, “ಅಂತಿಮ ಚರ್ಚೆ ನಡೆದು, ಇನ್ನು ಮುಂದೆ ಪ್ರಾಧಿಕಾರ ಭೂ ಸ್ವಧೀನಪಡಿಸದೇ ಉಪಯೋಗಿಸಿಕೊಂಡಿರುವಂತಹ ಪ್ರಕರಣಗಳಲ್ಲಿ ಭೂ ಪರಿಹಾರ ರೂಪದಲ್ಲಿ ಪರಿಹಾರವಾಗಿ ಅಭಿವೃದ್ಧಿ ಪಡಿಸಿದ ಒಟ್ಟು ವಿಸ್ತೀರ್ಣದ ಪೈಕಿ ಶೇ.50 ವಿಸ್ತೀರ್ಣದ ಅಭಿವೃದ್ಧಿ ಪಡಿಸಿದ ಜಾಗವನ್ನು ಒಪ್ಪುವ ಪ್ರಕರಣಗಳಲ್ಲಿ ನೀಡಬಹುದೆಂದು” ನಿರ್ಣಯಿಸಲಾಗಿದೆ.

— ಇದೆಲ್ಲ ಆದ ಮೇಲೆ ನನ್ನ ಪತ್ನಿ ದಿನಾಂಕ; 23-10-2021 ರಲ್ಲಿ ಮತ್ತೆ ಅರ್ಜಿ ಸಲ್ಲಿಸಿದ್ದಾರೆ. ಅದರಲ್ಲಿ, “ನನ್ನ ಜಮೀನನ್ನು ಪ್ರಾಧಿಕಾರವು ಉಪಯೋಗಿಸಿಕೊಂಡಿರುವ ಬಾಬ್ತು ಇದುವರೆವಿಗೂ ಯಾವುದೇ ಪರಿಹಾರವನ್ನು ನೀಡಿರುವುದಿಲ್ಲ. ಆದ್ದರಿಂದ ನನಗೆ ಮೇಲಿನ ಜಮೀನಿಗೆ ಪರಿಹಾರವಾಗಿ ಪ್ರಸ್ತುತ ಶೇ. 50:50ರ ಅನುಪಾತದಲ್ಲಿ ಕೊಡಿ ಎಂದು ಕೇಳಿದ್ದಾರೆ. ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದವರು ಇದನ್ನೆಲ್ಲ ಪರಿಶೀಲಿಸಿ ನನ್ನ ಪತ್ನಿಯಿಂದ ಪರಿತ್ಯಾಜನ ಪತ್ರ ಬರೆಸಿಕೊಂಡು 3-16 ಗುಂಟೆ ಜಮೀನುಗಳ ಹಕ್ಕುಗಳನ್ನು ಪ್ರಾಧಿಕಾರದ ಹೆಸರಿಗೆ ವರ್ಗಾಯಿಸಿಕೊಂಡು ದಿನಾಂಕ 30-12-2021 ರಂದು ಕೆಸರೆ ಗ್ರಾಮದ ಸ.ನಂ. 464 ರ 3-16 ಎಕರೆ ಜಮೀನಿಗೆ ಬದಲಿ ಜಾಗ ನೀಡುವ ಬಗ್ಗೆ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ ಆಯುಕ್ತರು ಅಧಿಕೃತ ಜ್ಞಾಪನ ಆದೇಶ ಹೊರಡಿಸಿ 38,284 ಚದರ ಅಡಿ ಅಳತೆಗೆ ನಿವೇಶನಗಳನ್ನು ಪರಿಹಾರ ರೂಪದಲ್ಲಿ ಮಂಜೂರು ಮಾಡಿರುತ್ತಾರೆ.

— ಇದರಲ್ಲಿ ಕಾನೂನು ವಿದ್ಯಾರ್ಥಿಯಾದ ನನಗೆ ಹಾಗೂ 40 ವರ್ಷಗಳಿಂದ ಸುಧೀರ್ಘ ರಾಜಕಾರಣದಲ್ಲಿ ಇರುವ ನನಗೆ ಒಂದು ನಯಾಪೈಸೆಯಷ್ಟು ತಪ್ಪುಗಳೂ ಕಂಡುಬರುತ್ತಿಲ್ಲ. ಇದಕ್ಕೆ ಸಂಬಂಧಪಟ್ಟ ದಾಖಲೆಗಳನ್ನು ಕೂಡ ಮಾಧ್ಯಮದ ಮೂಲಕ ಈ ನಾಡಿನ ಜನರ ಮುಂದೆ ಇಡುತ್ತಿದ್ದೇನೆ.

— ಈ ವಿಚಾರಗಳನ್ನೆಲ್ಲಾ ಪರಿಶೀಲಿಸಲು ಜಸ್ಟೀಸ್ ಪಿ.ಎನ್. ದೇಸಾಯಿ ಯವರ ಅಧ್ಯಕ್ಷತೆಯಲ್ಲಿ ವಿಚಾರಣಾ ಆಯೋಗವನ್ನು ರಚಿಸಲಾಗಿದೆ. ವಿಚಾರಣಾ ಆಯೋಗವು ಈ ಕುರಿತು ತನಿಖೆ ಪ್ರಾರಂಭಿಸಿದೆ.

— ಬಿಜೆಪಿ, ಜೆಡಿಎಸ್ ನವರು ಮುಡಾದ ವಿಚಾರದಲ್ಲೂ, ವಾಲ್ಮೀಕಿ ಹಗರಣದಲ್ಲೂ ನನ್ನ ವ್ಯಕ್ತಿತ್ವಕ್ಕೆ ಮಸಿ ಬಳಿಯಲು ಪ್ರಯತ್ನಿಸುತ್ತಿದ್ದಾರೆ.

ಇದನ್ನೂ ಓದಿ: MUDA Scam: ಬಿಜೆಪಿಯವರದು ಮನೆಮುರುಕ ರಾಜಕೀಯ; ಮುಡಾ ಜಮೀನಿನಲ್ಲಿ ಯಾವುದೇ ಅವ್ಯವಹಾರ ಆಗಿಲ್ಲ: ಸಿಎಂ ಸಿದ್ದರಾಮಯ್ಯ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Kargil Vijay Diwas 2024: ಕಾರ್ಗಿಲ್ ಯುದ್ಧದಲ್ಲಿ ನಿರ್ಣಾಯಕವಾಗಿದ್ದ ಟೈಗರ್ ಹಿಲ್; 19 ವರ್ಷದ ಯೋಧನ ರೋಚಕ ಸಾಹಸ!

ಕಾರ್ಗಿಲ್ ಯುದ್ಧದಲ್ಲಿ (kargil Vijay diwas 2024) ನಿರ್ಣಾಯಕ ಪ್ರದೇಶಗಳಲ್ಲಿ ಒಂದಾದ ಟೈಗರ್ ಹಿಲ್ ಅನ್ನು ಸಾಕಷ್ಟು ಹೋರಾಟದ ಬಳಿಕ ಭಾರತೀಯ ಸೇನೆ ಮರಳಿ ವಶಕ್ಕೆ ಪಡೆದುಕೊಂಡಿತು. ಈ ಹೋರಾಟದಲ್ಲಿ ಹಲವಾರು ಸೈನಿಕರು ಸಾವನ್ನಪ್ಪಿದ್ದರು. ಕಾರ್ಗಿಲ್ ಯುದ್ಧದಲ್ಲಿ ಟೈಗರ್ ಹಿಲ್ ಪ್ರಮುಖ ಭಾಗವಾಗಲು ಹಲವು ಕಾರಣಗಳಿವೆ. ಈ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ.

VISTARANEWS.COM


on

By

Kargil Vijay Diwas 2024
Koo

ಕಾರ್ಗಿಲ್ ಯುದ್ಧದಲ್ಲಿ (kargil war) ಹಲವು ನಿರ್ಣಾಯಕ ಪ್ರದೇಶಗಳಲ್ಲಿ, ನೆಲೆಗಳಲ್ಲಿ ಭಾರತೀಯ ಸೇನೆ (Indian army) ಪಾಕಿಸ್ತಾನದ (pakistan army) ವಿರುದ್ಧ ಗೆಲುವು ಸಾಧಿಸಿತ್ತು. ಅಂತಹ ಒಂದು ಮಹತ್ವದ ಪ್ರದೇಶ ಟೈಗರ್ ಹಿಲ್ (tiger hill war) . ಇದು ಭಾರತದ ವಿಜಯದಲ್ಲಿ ನಿರ್ಣಾಯಕ ಪಾತ್ರ ವಹಿಸಿತ್ತು. ಪಾಕಿಸ್ತಾನದ ವಿರುದ್ಧದ ಕಾರ್ಗಿಲ್ ಯುದ್ಧದಲ್ಲಿ ಭಾರತದ ವಿಜಯದ ನೆನಪಿಗಾಗಿ ಪ್ರತಿ ವರ್ಷ ಜುಲೈ 26ರಂದು ಕಾರ್ಗಿಲ್ ವಿಜಯ್ ದಿವಸ್ (Kargil Vijay Diwas 2024) ಆಚರಿಸಲಾಗುತ್ತದೆ.

ಟೈಗರ್ ಹಿಲ್ ಯಾಕೆ ನಿರ್ಣಾಯಕ?

ಟೈಗರ್ ಹಿಲ್ ಅಥವಾ ಪಾಯಿಂಟ್ 5062 ಕಾರ್ಗಿಲ್ ಯುದ್ಧದ ಇತಿಹಾಸದಲ್ಲಿ ಅತ್ಯಂತ ನಿರ್ಣಾಯಕ ಸ್ಥಳವಾಗಿದೆ. ಟೈಗರ್ ಹಿಲ್ ಲಡಾಖ್‌ನ ದ್ರಾಸ್-ಕಾರ್ಗಿಲ್ ಪ್ರದೇಶದಲ್ಲಿನ ಒಂದು ಪರ್ವತವಾಗಿದೆ. ಇದು ಈ ಪ್ರದೇಶದ ಅತಿ ಎತ್ತರದ ಶಿಖರಗಳಲ್ಲಿ ಒಂದಾಗಿದೆ. 1999ರ ಭಾರತ- ಪಾಕಿಸ್ತಾನದ ನಡುವೆ ನಡೆದ ಕಾರ್ಗಿಲ್ ಯುದ್ಧದ ಅತ್ಯಂತ ವಿಶಿಷ್ಟವಾದ ಯುದ್ಧ ವಲಯವಾಗಿತ್ತು.

Kargil Vijay Diwas 2024
Kargil Vijay Diwas 2024


ಟೈಗರ್ ಹಿಲ್‌ನ ಮಹತ್ವವೇನು?

ಟೈಗರ್ ಹಿಲ್ ಇಡೀ ಪ್ರದೇಶದಲ್ಲಿ ಅತಿ ಎತ್ತರದ ಬೆಟ್ಟವಾಗಿದೆ. ಇದು ರಾಷ್ಟ್ರೀಯ ಹೆದ್ದಾರಿ 1ಡಿ ಆಗಿದ್ದು, ಶ್ರೀನಗರದಿಂದ ಕಾರ್ಗಿಲ್ ಅನ್ನು ಸಂಪರ್ಕಿಸುತ್ತದೆ. ಕಾರ್ಗಿಲ್ ವಲಯದ ಪ್ರಮುಖ ಸರಬರಾಜು ಮಾರ್ಗವಾಗಿ ಗುರುತಿಸಿಕೊಂಡಿದೆ. ಟೈಗರ್ ಹಿಲ್‌ನ ತುದಿಯಲ್ಲಿರುವ ಯಾವುದೇ ಶತ್ರು ಭಾರತೀಯ ಸೇನೆಯ ಚಲನವಲನ ಮತ್ತು ಶಸ್ತ್ರಾಸ್ತ್ರ ಪೂರೈಕೆಯ ಮೇಲೆ ನೇರ ದೃಷ್ಟಿಯನ್ನು ಇಡಲು ಸಾಧ್ಯವಾಗುತ್ತದೆ.

ಯೋಗೇಂದ್ರ ಯಾದವ್

ಟೈಗರ್ ಹಿಲ್ ವಶಕ್ಕಾಗಿ ನಡೆದ ಹೋರಾಟ ಹೇಗಿತ್ತು?

ಪಾಕಿಸ್ತಾನಿ ಸೇನೆಯು ಜಮ್ಮು ಮತ್ತು ಕಾಶ್ಮೀರದ ಭಾರತದ ಪ್ರದೇಶದೊಳಗೆ ಅಕ್ರಮವಾಗಿ ನುಸುಳಿತ್ತು. ಆಯಕಟ್ಟಿನ ಪ್ರದೇಶವಾದ ಟೈಗರ್ ಹಿಲ್ ಅನ್ನು ವಶಪಡಿಸಿಕೊಂಡಿತ್ತು. ಎತ್ತರದ ಸ್ಥಳದಲ್ಲಿ ಪಾಕ್‌ ಸೈನಿಕರು ಬಂಕರ್‌ ಸ್ಥಾಪಿಸಿಕೊಂಡು ಬೀಡು ಬಿಟ್ಟಿದ್ದರು. ಅಲ್ಲಿಂದ ಅವರನ್ನು ಓಡಿಸುವುದು ಭಾರತೀಯ ಸೇನೆಗೆ ಭಾರಿ ಸವಾಲಾಗಿತ್ತು. ಭಾರತೀಯ ಸೇನೆಯ ಸಿಖ್ ರೆಜಿಮೆಂಟ್‌ಗೆ ಈ ಪ್ರದೇಶವನ್ನು ಮರಳಿ ವಶ ಪಡಿಸಿಕೊಳ್ಳುವ ಟಾಸ್ಕ್‌ ನೀಡಲಾಯಿತು. ದೊಡ್ಡ ಹೋರಾಟ ನಡೆಸಿದ ಬಳಿಕವೂ ಮೊದಲ ಹಂತದಲ್ಲಿ ಸಿಖ್‌ ರೆಜಿಮೆಂಟ್‌ ವಿಫಲವಾಯಿತು. ಆದರೆ ಪಟ್ಟು ಬಿಡದ ಭಾರತೀಯ ಸೇನೆ ಭೂಪ್ರದೇಶವನ್ನು ಮರಳಿ ಪಡೆಯಲು ಸತತ ಪ್ರಯತ್ನಗಳನ್ನು ನಡೆಸಿತು.

ಕಾರ್ಗಿಲ್- ದ್ರಾಸ್ ಪ್ರಾಂತ್ಯದಲ್ಲಿ ಟೈಗರ್ ಹಿಲ್ ಪ್ರಮುಖವಾಗಿತ್ತು. ಇದನ್ನು ಏರಿ ಕುಳಿತಿದ್ದ ಪಾಕಿಗಳನ್ನು ಹಿಮ್ಮೆಟ್ಟಿಸದೆ ವಿಜಯ ಪೂರ್ಣವಾಗಲು ಸಾಧ್ಯವಿರಲಿಲ್ಲ. ಇದು ಭಾರತದ ಕಡೆಯಿಂದ ಏರಲು ತುಂಬಾ ಕಠಿಣವಾದ ಮೈ ಹೊಂದಿದೆ. ಎತ್ತರದಲ್ಲಿ ಪಾಕ್ ಸೈನಿಕರು ಕುಳಿತಿದ್ದು, ಕೆಳಗಿನಿಂದ ಬರುತ್ತಿದ್ದ ಭಾರತೀಯ ಸೈನಿಕರನ್ನು ಸುಲಭವಾಗಿ ಸಾಯಿಸುತ್ತಿದ್ದರು. ಇಲ್ಲಿಂದ ಅವರಿಗೆ ಭಾರತದ ಹೆದ್ದಾರಿ ಎನ್‌ಎಚ್1ಎ ಕಾಣಿಸುತ್ತಿತ್ತು. ಅಲ್ಲಿಂದಲೇ ಹೆದ್ದಾರಿಯ ಮೇಲೆ ಬಾಂಬ್ ಸುರಿಮಳೆಯನ್ನೂ ಸುರಿಸಿ, ಭಾರತೀಯ ಸೇನೆಯ ವಾಹನಗಳು ಓಡಾಡಲಾಗದಂತೆ ಮಾಡಿಬಿಟ್ಟಿದ್ದರು. ಇದನ್ನು ವಶಪಡಿಸಿಕೊಳ್ಳುವುದು ಮುಖ್ಯವಾಗಿತ್ತು. ಜುಲೈ 1ರ ಹೊತ್ತಿಗೆ ಟೈಗರ್ ಹಿಲ್‌ನ ಅಕ್ಕಪಕ್ಕದ ಬೆಟ್ಟಗಳನ್ನು 8 ಸಿಖ್ ರೆಜಿಮೆಂಟ್ ವಶಪಡಿಸಿಕೊಂಡಿತ್ತು. ಟೈಗರ್ ಹಿಲ್ ಅನ್ನು ಕೆಳಗಿನಿಂದ ಏರಲು 18 ಗ್ರೆನೆಡಿಯರ‍್ಸ್ ಪಡೆ ಸಜ್ಜಾಯಿತು. ಡಿ ಕಂಪನಿ ಮತ್ತು ಘಾತಕ್ ಪ್ಲಟೂನ್‌ಗಳ ಕ್ಯಾಪ್ಟನ್ ಸಚಿನ್ ನಿಂಬಾಳ್ಕರ್ ಮತ್ತು ಲೆ.ಬಲವಾನ್ ಸಿಂಗ್ ಅವರು ವೈರಿಗಳಿಗೆ ಆಶ್ಚರ್ಯವಾಗುವಂತೆ, ಕಡಿದಾದ ಶಿಖರದ ಕಡೆಯಿಂದ ಏರಿ, ಗುಂಡಿನ ದಾಳಿ ಆರಂಭಿಸಿದರು.

ಇನ್ನೊಂದು ಕಡೆಯಿಂದ 8 ಸಿಖ್ ರೆಜಿಮೆಂಟ್ ಗುಂಡಿನ ದಾಳಿ ನಡೆಸಿತು. ಬೆಟ್ಟದ ಕಡಿದಾದ ಮೈಯಿಂದ ಹವಿಲ್ದಾರ್ ಮದನ್‌ಲಾಲ್ ಎಂಬ ಧೀರಯೋಧ ತನ್ನ ಪರ್ವತಾರೋಹಿ ಕೌಶಲ್ಯವನ್ನೆಲ್ಲ ಬಳಸಿ ಕಣ್ಣುಕುಕ್ಕುವ ಕಗ್ಗತ್ತಲಿನಲ್ಲಿ ರಾತ್ರಿಯಿಡೀ ಬೆಟ್ಟವೇರಿದ. ಮುಂಜಾನೆ ಶತ್ರುಗಳ ಮೇಲೆ ಇದಕ್ಕಿದ್ದಂತೆ ಎರಗಿದ. ದಿಕ್ಕು ತೋಚದಂತಾದ ವೈರಿಗಳು ಭಯಭೀತರಾಗಿ ಕಾಲಿಗೆ ಬುದ್ಧಿ ಹೇಳಿದರು; ಇಲ್ಲವೇ ಭಾರತೀಯ ಸೈನಿಕರ ಕೈಯಲ್ಲಿ ಹತರಾದರು. ಈ ಯುದ್ಧದಲ್ಲಿ ಗಾಯಗೊಂಡ ಮದನ್‌ಲಾಲ್ ಹುತಾತ್ಮನಾದ. ಯೋಧ ಯೋಗೇಂದ್ರ ಯಾದವ್ ಏಕಾಂಗಿಯಾಗಿ ಹೋರಾಡುತ್ತಾ ಹತ್ತಾರು ಪಾಕ್‌ ಯೋಧರನ್ನು ಕೊಂದರು. 18 ಗ್ರೆನೆಡಿಯರ್ಸ್‌ ನಿರಂತರವಾಗಿ ಶೆಲ್ ದಾಳಿಗಳನ್ನು ನಡೆಸುತ್ತ ವೈರಿಗಳ ದಿಕ್ಕೆಡಿಸಿದರು. ಟೈಗರ್ ಹಿಲ್ ವಿಜಯ ನಿರ್ಣಾಯಕವಾಗಿತ್ತು. ಈ ಎತ್ತರದ ಬೆಟ್ಟವನ್ನು ಗೆದ್ದ ಬಳಿಕ ಉಳಿದ ಬೆಟ್ಟಗಳನ್ನು ಗೆಲ್ಲಲು ಸುಲಭವಾಯಿತು.

Kargil Vijay Diwas 2024
Kargil Vijay Diwas 2024


ಅಂತಿಮವಾಗಿ 1999ರ ಜುಲೈ 3ರಂದು ಸಂಜೆ 5.15ಕ್ಕೆ ಟೈಗರ್ ಹಿಲ್ ಅನ್ನು ಪುನಃ ವಶಪಡಿಸಿಕೊಳ್ಳುವ ಅಂತಿಮ ಪ್ರಯತ್ನ ಪ್ರಾರಂಭವಾಯಿತು. ಈ ಯುದ್ಧ ಹಲವಾರು ದಿನಗಳವರೆಗೆ ನಡೆಯಿತು. ಸಿಖ್ ರೆಜಿಮೆಂಟ್, ನಾಗಾ ರೆಜಿಮೆಂಟ್ ಗ್ರೆನೇಡಿಯರ್ಸ್ ಮತ್ತು ಘಾತಕ್ ಪ್ಲಟೂನ್‌ನೊಂದಿಗೆ ಒಟ್ಟುಗೂಡಿ ಇಡೀ ಬೆಟ್ಟವನ್ನು ಸುತ್ತುವರಿಯಲಾಯಿತು. ಬೆಟ್ಟದ 1000 ಅಡಿ ಎತ್ತರವನ್ನು ಏರಿ ಬೆಟ್ಟದ ತುದಿಯಲ್ಲಿದ್ದ ಶತ್ರುಗಳ ಮೇಲೆ ಭಾರೀ ಫಿರಂಗಿ ದಾಳಿ ನಡೆಸಲಾಯಿತು. ಹಲವಾರು ದಿನಗಳ ಹೋರಾಟದ ಬಳಿಕ ಭಾರತೀಯ ಸೇನೆಯು ಟೈಗರ್ ಹಿಲ್ ಅನ್ನು ಯಶಸ್ವಿಯಾಗಿ ವಶಪಡಿಸಿಕೊಂಡಿತು.

ಇದನ್ನೂ ಓದಿ : Kargil Vijay Diwas 2024: ಗುಂಡುಗಳು ದೇಹ ತೂರಿದ್ದರೂ ಹಿಂದೆ ಸರಿಯದೆ ಶತ್ರುಗಳನ್ನು ಹಿಮ್ಮೆಟ್ಟಿಸಿದರು!

ಕಾರ್ಗಿಲ್ ಯುದ್ಧದ ಸಮಯದಲ್ಲಿ ಟೈಗರ್ ಹಿಲ್ ಅನ್ನು ಪುನಃ ವಶಪಡಿಸಿಕೊಳ್ಳಲು ಪ್ರಮುಖ ಕಾರಣರಾದ ಗ್ರೇನೇಡಿಯರ್ ಯೋಗೇಂದ್ರ ಸಿಂಗ್ ಯಾದವ್ ಅವರಿಗೆ ಪರಮವೀರ ಚಕ್ರವನ್ನು ನೀಡಿ ಗೌರವಿಸಲಾಯಿತು. 19ನೇ ವಯಸ್ಸಿನಲ್ಲಿ ಈ ಗೌರವವನ್ನು ಪಡೆದ ಅತ್ಯಂತ ಕಿರಿಯ ವ್ಯಕ್ತಿಯಾಗಿದ್ದಾರೆ ಯೋಗೇಂದ್ರ ಸಿಂಗ್. ಮಹತ್ವದ ಸಂಗತಿ ಎಂದರೆ ಯೋಗೇಂದ್ರ ಯಾದವ್‌ಗೆ ಈ ಹೋರಾಟದಲ್ಲಿ 18 ಗುಂಡುಗಳು ಬಿದ್ದಿದ್ದವು! ಅವರು ಬದುಕುಳಿದಿದ್ದೇ ಪವಾಡ!

Continue Reading

ಕರ್ನಾಟಕ

PU Lecturer Recruitment: ಪ್ರೌಢಶಾಲಾ ಶಿಕ್ಷಕರು ಪಿಯು ಕಾಲೇಜಿಗೆ ಬಡ್ತಿ ಪಡೆಯಲು ಅರ್ಹತಾ ಅಂಕ ಶೇ.50ಕ್ಕೆ ಇಳಿಕೆ

PU Lecturer Recruitment: ಸದ್ಯ ಪಿಯು ಕಾಲೇಜು ಉಪನ್ಯಾಸಕರ ನೇಮಕಾತಿ ವೇಳೆ ಶೇ.75 ನೇರ ನೇಮಕಾತಿ ಹಾಗೂ ಶೇ.25 ಹುದ್ದೆಗಳಿಗೆ ಪ್ರೌಢಶಾಲೆ ಶಿಕ್ಷಕರಿಗೆ ಬಡ್ತಿ ನೀಡಿ ಭರ್ತಿ ಮಾಡಲಾಗುತ್ತಿದೆ. ಹೀಗಾಗಿ ಪ್ರೌಢಶಾಲಾ ಶಿಕ್ಷಕರು ಪಿಯು ಉಪನ್ಯಾಸಕರಾಗಲು ಅರ್ಹತಾ ಅಂಕಗಳನ್ನು ಶೇ.55 ನಿಂದ 50ಕ್ಕೆ ಇಳಿಕೆ ಮಾಡಲಾಗಿದೆ.

VISTARANEWS.COM


on

Koo

ಬೆಂಗಳೂರು: ಪ್ರೌಢಶಾಲಾ ಶಿಕ್ಷಕರು ಪದವಿಪೂರ್ವ ಕಾಲೇಜು ಉಪನ್ಯಾಸಕರಾಗಿ ಬಡ್ತಿ (PU Lecturer Recruitment) ಪಡೆಯಲು ಅರ್ಹತಾ ಅಂಕಗಳನ್ನು ಶೇ.55 ನಿಂದ 50ಕ್ಕೆ ಇಳಿಸಲು, ʼಕರ್ನಾಟಕ ಸಾಮಾನ್ಯ ಸೇವೆಗಳು (ಪದವಿ ಪೂರ್ವ ಶಿಕ್ಷಣ) (ನೇಮಕಾತಿ) (ತಿದ್ದುಪಡಿ) ನಿಯಮಗಳು, 2024ʼಕ್ಕೆ ರಾಜ್ಯ ಸಚಿವ ಸಂಪುಟ ಅನುಮೋದನೆ ನೀಡಿದೆ.

ಪದವಿ ಪೂರ್ವ ಕಾಲೇಜು ಉಪನ್ಯಾಸಕರ ನೇಮಕಾತಿಗೆ ‌ಸಂಬಂಧಿಸಿದಂತೆ ನಿಯಮಗಳನ್ನು ಬದಲಾವಣೆ ಮಾಡಲು ರಾಜ್ಯ ಸರ್ಕಾರ ಮುಂದಾಗಿದ್ದು, ಇದಕ್ಕೆ ಸಚಿವ ಸಂಪುಟ ಒಪ್ಪಿಗೆ ನೀಡಿದೆ. ಉಪನ್ಯಾಸಕರಾಗಲು ಇಚ್ಛಿಸುವ ಶಿಕ್ಷಕರು ಅರ್ಹತಾ ಪರೀಕ್ಷೆ ಬರೆಯಬೇಕಿದ್ದು, ಇನ್ನು ಮುಂದೆ ಶೇ.50 ಅಂಕ ಪಡೆದರೆ ಪಿಯು ಕಾಲೇಜು ಉಪನ್ಯಾಸಕಗಲು ಅರ್ಹರಾಗುತ್ತಾರೆ.

ಸದ್ಯ ಪಿಯು ಕಾಲೇಜು ಉಪನ್ಯಾಸಕರ ನೇಮಕಾತಿ ವೇಳೆ ಶೇ.75 ನೇರ ನೇಮಕಾತಿ ಹಾಗೂ ಶೇ.25 ಹುದ್ದೆಗಳಿಗೆ ಪ್ರೌಢಶಾಲೆ ಶಿಕ್ಷಕರಿಗೆ ಬಡ್ತಿ ನೀಡಿ ಭರ್ತಿ ಮಾಡಲಾಗುತ್ತಿದೆ. ಹೀಗಾಗಿ ಪ್ರೌಢಶಾಲಾ ಶಿಕ್ಷಕರು ಪಿಯು ಉಪನ್ಯಾಸಕರಾಗಲು ಅರ್ಹತಾ ಪರೀಕ್ಷೆಯಲ್ಲಿ ಸಾಮಾನ್ಯ ಅಭ್ಯರ್ಥಿಗಳು ಶೇ.55 ಅಂಕ, ಪರಿಶಿಷ್ಟ ಜಾತಿ, ಪಂಗಡದವರು ಶೇ.50 ಅಂಕ ಪಡೆಯಬೇಕಿದೆ. ಇದೀಗ ಅರ್ಹತಾ ಅಂಕಗಳನ್ನು ಶೇ.55 ನಿಂದ 50ಕ್ಕೆ ಇಳಿಸಲು ಸಚಿವ ಸಂಪುಟ ಒಪ್ಪಿಗೆ ನೀಡಿದೆ.

ರಾಮನಗರ ಇನ್ಮುಂದೆ ಬೆಂಗಳೂರು ದಕ್ಷಿಣ ಜಿಲ್ಲೆ; ಹೆಸರು ಬದಲಾವಣೆಗೆ ಸಚಿವ ಸಂಪುಟ ಒಪ್ಪಿಗೆ

ಬೆಂಗಳೂರು: ತೀವ್ರ ವಿರೋಧದ ನಡುವೆ ರಾಮನಗರ ಜಿಲ್ಲೆಯ ಹೆಸರನ್ನು ಬೆಂಗಳೂರು ದಕ್ಷಿಣ ಜಿಲ್ಲೆ (Ramanagara as Bengaluru South District) ಎಂದು ಬದಲಾವಣೆ ಮಾಡಲು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಶುಕ್ರವಾರ ನಡೆದ ಸಚಿವ ಸಂಪುಟ (cabinet meeting) ಒಪ್ಪಿಗೆ ನೀಡಿದೆ. ರಾಮನಗರ ಜಿಲ್ಲೆಯ ಹೆಸರು (Bengaluru South District) ಮಾತ್ರ ಬದಲಾವಣೆಯಾಗಲಿದೆ, ಜಿಲ್ಲಾ ಕೇಂದ್ರ (ರಾಮನಗರ) ಸೇರಿ ಉಳಿದ ಎಲ್ಲವೂ ಹಾಗೆ ಉಳಿಯಲಿದೆ ಎಂದು ರಾಜ್ಯ ಸರ್ಕಾರ ತಿಳಿಸಿದೆ.

ಸಚಿವ ಸಂಪುಟ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಕಾನೂನು ಸಚಿವ ಎಚ್.ಕೆ. ಪಾಟೀಲ್ ಮಾತನಾಡಿ, ರಾಮನಗರ ಜಿಲ್ಲೆಯ ಹೆಸರನ್ನು ಬೆಂಗಳೂರು ದಕ್ಷಿಣ ಎಂದು ಬದಲಾವಣೆ ಮಾಡಲು ಸಚಿವ ಸಂಪುಟ ಒಪ್ಪಿಗೆ ನೀಡಿದೆ. ಬ್ರ್ಯಾಂಡ್ ಬೆಂಗಳೂರು ನಿರ್ಮಾಣದ ದೃಷ್ಟಿಯಿಂದ ಈ ತೀರ್ಮಾನವನ್ನು ಸರ್ಕಾರ ಕೈಗೊಂಡಿದೆ. ಜಿಲ್ಲಾ ಕೇಂದ್ರ ಸೇರಿದಂತೆ ಉಳಿದ ಎಲ್ಲವೂ ಹಾಗೇ ಉಳಿಯಲಿದೆ. ಚುನಾವಣಾ ದೃಷ್ಟಿಯಿಂದ ಹೀಗೆ ಮಾಡಿಲ್ಲ. ಜನರ ಹಿತಾಸಕ್ತಿ ಕಾಪಾಡಲು ಜೊತೆಗೆ ಬ್ರ್ಯಾಂಡ್ ಬೆಂಗಳೂರು ದೃಷ್ಟಿಯಿಂದ ಹೀಗೆ ಮಾಡಲಾಗಿದೆ ಎಂದು ತಿಳಿಸಿದರು.

ರಾಮನಗರದವರೂ ಬ್ರ್ಯಾಂಡ್ ಬೆಂಗಳೂರಿಗೆ ಬರಬೇಕು ಎನ್ನುತ್ತಾರೆ. ಜನರ ಅಭಿಪ್ರಾಯ, ಶಾಸಕರ ಅಭಿಪ್ರಾಯ , ಕೆಲ ನಾಯಕರ ಅಭಿಪ್ರಾಯ ತೆಗೆದುಕೊಂಡು ತೀರ್ಮಾನ ಮಾಡಿದ್ದೇವೆ. ನೋಟಿಫೈ ಮಾಡಬೇಕು, ಆಮೇಲೆ ಹೆಸರು ಬದಲಾವಣೆ ಪ್ರಕ್ರಿಯೆ ಶುರುವಾಗುತ್ತೆ. ಇದಕ್ಕೆ ಒಂದು ಸಮಿತಿಯನ್ನು ಮಾಡಲಾಗುತ್ತದೆ ಎಂದು ರಾಮನಗರ ಹೆಸರು ಬದಲಾವಣೆಗೆ ಸಚಿವ ಎಚ್.ಕೆ ಪಾಟೀಲ್ ಸಮರ್ಥನೆ ಮಾಡಿಕೊಂಡರು.

ಇದನ್ನೂ ಓದಿ | Shalini Rajneesh: ರಾಜ್ಯ ಮುಖ್ಯ ಕಾರ್ಯದರ್ಶಿಯಾಗಿ ಶಾಲಿನಿ ರಜನೀಶ್‌ ನೇಮಕ; ಪತಿ ಜಾಗಕ್ಕೆ ಪತ್ನಿಯ ಆಯ್ಕೆ

ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು

  • 2017-18ನೇ ಸಾಲಿನ ಗೆಜೆಟೆಡ್ ಪ್ರೊಬೇಷನರಿ ನೇಮಕಾತಿ (ಕೆಎಎಸ್‌) ಪರೀಕ್ಷೆಗೆ ಅರ್ಜಿ ಸಲ್ಲಿಸಿದ್ದ ಎಲ್ಲಾ ಅಭ್ಯರ್ಥಿಗಳಿಗೆ ಒಂದು ಬಾರಿ ವಿಶೇಷ ಅವಕಾಶ. 2023-24ನೇ ಸಾಲಿನ ಗೆಜೆಟೆಡ್ ಪ್ರೊಬೇಷನರ್ಸ್ ಪರೀಕ್ಷೆಗೆ ವಯೋಮಿತಿ ಸಡಿಲಿಸಿ ಅರ್ಜಿ ಹಾಕಲು ವಿಶೇಷ ಅವಕಾಶಕ್ಕೆ ಕ್ಯಾಬಿನೆಟ್ ಅನುಮೋದನೆ.
  • KIADBಯ ಧಾರವಾಡ ಗಾಮನಗಟ್ಟಿ ಕೈಗಾರಿಕಾ ಪ್ರದೇಶದಲ್ಲಿ 2.64 ಎಕರೆ ಸಿಎ ನಿವೇಶನವನ್ನು ಲೋಕ ಶಿಕ್ಷಣ ಟ್ರಸ್ಟ್ ಗೆ ಹಂಚಿಕೆ ಮಾಡಲು ಕ್ಯಾಬಿನೆಟ್ ತೀರ್ಮಾನ. ಈ ಹಂಚಿಕೆ ಜೊತೆಗೆ ಶೇ.75 ರಿಯಾಯಿತಿ ನೀಡಲು ತೀರ್ಮಾನ.
  • ಅನಿಮೇಶನ್ ವಿಶ್ಯುವಲ್ ಎಫೆಕ್ಟ್ ಗೇಮಿಂಗ್ ಮತ್ತು ಕಾಮಿಕ್ಸ್‌ (AVGC) 2.0.- “ಉತ್ಕೃಷ್ಟತಾ ಕೇಂದ್ರವನ್ನು ” 16 ಕೋಟಿಗಳ ಅಂದಾಜು ಮೊತ್ತದಲ್ಲಿ (CAPEX-ರೂ. 7.00 ಕೋಟಿಗಳು ಮತ್ತು” OPEX-ರೂ. 9.00 ಕೋಟಿಗಳು) ಸ್ಥಾಪನೆಗೆ ಅನುಮೋದನೆ.
  • ಪದವಿ ಪೂರ್ವ ಕಾಲೇಜು ಉಪನ್ಯಾಸಕರುಗಳ ನೇಮಕಾತಿಗೆ ‌ ಸಂಬಂಧಿಸಿದಂತೆ “ಕರ್ನಾಟಕ ಸಾಮಾನ್ಯ ಸೇವೆಗಳು (ಪದವಿ ಪೂರ್ವ ಶಿಕ್ಷಣ) (ನೇಮಕಾತಿ) (ತಿದ್ದುಪಡಿ) ನಿಯಮಗಳು, 2024”ಕ್ಕೆ ಅನುಮೋದನೆ.
  • ಪ್ರೌಢಶಾಲಾ ಶಿಕ್ಷಕರಿಂದ ಪದವಿಪೂರ್ವ ಕಾಲೇಜಿಗೆ ಬಡ್ತಿ ಪಡೆಯಲು 55% ನಿಂದ 50% ಅಂಕಕ್ಕೆ ಇಳಿಸಿ ಪರಿಷ್ಕರಣೆ.
  • ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮವನ್ನು ಕಂಪನಿ ಕಾಯ್ದೆ ಅಡಿ ಸ್ಥಾಪನೆಗೆ ಅನುಮೋದನೆ
  • ಕೆ ಆರ್ ಎಸ್ ಬೃಂದಾವನ ಉದ್ಯಾನವನವನ್ನು ಮೇಲ್ದರ್ಜೆಗೆ ಏರಿಸಲು ಕ್ಯಾಬಿನೆಟ್ ಅನುಮೋದನೆ. 2633 ಕೋಟಿ ರೂ. ದಲ್ಲಿ ಪಿಪಿಪಿ ಮಾಡೆಲ್‌ನಲ್ಲಿ ಮೇಲ್ದರ್ಜೆಗೆ ಏರಿಸಲು ಅನುಮೋದನೆ. ಟೆಂಡರ್ ಮೂಲಕ ಅನುಷ್ಠಾನ
Continue Reading

ಪ್ರಮುಖ ಸುದ್ದಿ

PARIS OLYMPICS 2024 : ಪ್ಯಾರಿಸ್ ಒಲಿಂಪಿಕ್ಸ್​​ ಗ್ರಾಮದಲ್ಲೇ ಮದುವೆ ನಿಶ್ಚಿತಾರ್ಥ ಮಾಡಿಕೊಂಡ ಅಥ್ಲೀಟ್​ಗಳು

PARIS OLYMPICS 2024 : ಈ ಸುದ್ದಿ ಮತ್ತು ಪೋಸ್ಟ್ ಅನ್ನು ಒಲಿಂಪಿಕ್ಸ್​​ ಅಧಿಕೃತ ಎಕ್ಸ್ ಹ್ಯಾಂಡಲ್ ಹಂಚಿಕೊಂಡಿದೆ “ಪ್ಯಾರಿಸ್​ 2024 ಒಲಿಂಪಿಕ್ ಗ್ರಾಮದಲ್ಲಿ ನಡೆದ ಮೊದಲ ಮದುವೆ ಪ್ರಸ್ತಾಪ. ಪಾಬ್ಲೊ ಸಿಮೊನೆಟ್ ಮತ್ತು ಪಿಲಾರ್ ಕ್ಯಾಂಪೊಯ್ ಅರ್ಜೆಂಟೀನಾದ ತಮ್ಮ ಹ್ಯಾಂಡ್​​ಬಾಲ್​ ಮತ್ತು ಹಾಕಿ ತಂಡದ ಸದಸ್ಯರಿಂದ ಅಭಿನಂದನೆಗಳನ್ನು ಪಡೆದುಕೊಂಡರು.

VISTARANEWS.COM


on

PARIS OLYMPICS 2024
Koo

ಪ್ಯಾರಿಸ್ : ಪ್ರೇಮಿಗಳ ನಗರ ಪ್ಯಾರಿಸ್​​ನಲ್ಲಿ 2024ರ (PARIS OLYMPICS 2024) ಒಲಿಂಪಿಕ್ ಕ್ರೀಡಾಕೂಟ ಉದ್ಘಾಟನೆಯಾಗುವ ಮೊದಲೇ ಅಥ್ಲೀಟ್​ಗಳಿಬ್ಬರು ಮದುವೆ ಪ್ರಸ್ತಾಪವನ್ನು ಹಂಚಿಕೊಂಡಿದ್ದಾರೆ. ಅರ್ಜೆಂಟೀನಾ ಪುರುಷರ ಹ್ಯಾಂಡ್​​ಬಾಳ್​ ತಂಡದ ಸ್ಟಾರ್ ಆಟಗಾರ ಪಾಬ್ಲೊ ಸಿಮೊನೆಟ್ ಮತ್ತು ಅರ್ಜೆಂಟೀನಾ ಮಹಿಳಾ ಹಾಕಿ ತಂಡದ ಆಟಗಾರ್ತಿ ಮಾರಿಯಾ ಕ್ಯಾಂಪೊಯ್ ಪ್ರಪೋಸ್ ಮಾಡಿದರು. ಗ್ರೂಪ್ ಫೋಟೋ ಸೆಷನ್ ಸಮಯದಲ್ಲಿ, ಸಿಮೊನೆಟ್ ಬಗ್ಗಿ ನಿಂತು ಮಾರಿಯಾ ಕ್ಯಾಂಪೊಯ್ ಗೆ ಉಂಗುರ ತೊಡಿಸಿ ಪ್ರಪೋಸ್​ ಮಾಡಿದ್ದಾರೆ. ಆಕೆಯ ಕಣ್ಣುಗಳು ಖುಷಿಯಿಂದ ಅರಳುತ್ತಿದ್ದಂತೆ ತಂಡದ ಸದಸ್ಯರು ಹರ್ಷೋದ್ಘಾರ ಮಾಡಿದರು. ಉಳಿದವರು ಈ ಕ್ಷಣವನ್ನು ಸಂಭ್ರಮದಿಂದ ಆಚರಿಸಿದರು.

ಈ ಸುದ್ದಿ ಮತ್ತು ಪೋಸ್ಟ್ ಅನ್ನು ಒಲಿಂಪಿಕ್ಸ್​​ ಅಧಿಕೃತ ಎಕ್ಸ್ ಹ್ಯಾಂಡಲ್ ಹಂಚಿಕೊಂಡಿದೆ “ಪ್ಯಾರಿಸ್​ 2024 ಒಲಿಂಪಿಕ್ ಗ್ರಾಮದಲ್ಲಿ ನಡೆದ ಮೊದಲ ಮದುವೆ ಪ್ರಸ್ತಾಪ. ಪಾಬ್ಲೊ ಸಿಮೊನೆಟ್ ಮತ್ತು ಪಿಲಾರ್ ಕ್ಯಾಂಪೊಯ್ ಅರ್ಜೆಂಟೀನಾದ ತಮ್ಮ ಹ್ಯಾಂಡ್​​ಬಾಲ್​ ಮತ್ತು ಹಾಕಿ ತಂಡದ ಸದಸ್ಯರಿಂದ ಅಭಿನಂದನೆಗಳನ್ನು ಪಡೆದುಕೊಂಡರು.

ಅಧಿಕೃತ ವೆಬ್​ಸೈಟ್​ ವರದಿಯ ಪ್ರಕಾರ, ಪಾಬ್ಲೊ ಸಿಮೊನೆಟ್ ಅವರ ಮದುವೆ ಪ್ರಸಾಪದ ಸಮಯವು ಇದಕ್ಕಿಂತ ಉತ್ತಮವಾಗಿರಲು ಸಾಧ್ಯವಿಲ್ಲ. ಸ್ಯಾಂಟಿಯಾಗೊ 2023 ಪ್ಯಾನ್ ಅಮೆರಿಕನ್ ಕ್ರೀಡಾಕೂಟದಲ್ಲಿ ಪ್ಯಾರಿಸ್ 2024 ರಲ್ಲಿ ತಮ್ಮ ತಂಡಗಳು ತಮ್ಮ ಸ್ಥಾನಗಳನ್ನು ಭದ್ರಪಡಿಸಿದ ಕೆಲವೇ ನಿಮಿಷಗಳಲ್ಲಿ, ಸಿಮೊನೆಟ್ ತನ್ನ ಪ್ರಣಯದ ಕತೆಯನ್ನು ಬಹಿರಂಗಪಡಿಸಿದ್ದಾರೆ.

ಇದನ್ನೂ ಓದಿ: Paris Olympics 2024 : ಒಲಿಂಪಿಕ್ಸ್​ಗೆ ಕೆಲವೇ ಗಂಟೆಗಳ ಮೊದಲು ಫ್ರಾನ್ಸ್​ನ ರೈಲ್ವೆ ವ್ಯವಸ್ಥೆ ಮೇಲೆ ವಿಧ್ವಂಸಕ ದಾಳಿ

2015ರಿಂದ, ಸಿಮೊನೆಟ್ ಮತ್ತು ಕ್ಯಾಂಪೊಯ್ ತಮ್ಮ ಅಥ್ಲೆಟಿಕ್ ವೃತ್ತಿಜೀವನದ ನಡುವೆಯೂ ಪ್ರೇಮಕಥೆ ಮುಂದುವರಿಸಿದ್ದಾರೆ. ರಿಯೋ 2016ರಲ್ಲಿ ಒಟ್ಟಿಗೆ ಒಲಿಂಪಿಕ್ ಪಯಣ ಆರಂಭಿಸಿದ್ದರು. ಈಗ, ಎಂಟು ವರ್ಷಗಳ ನಂತರ, ಪ್ಯಾರಿಸ್ ಎಂದರೆ ಪ್ರೀತಿಯ ನಗರದಲ್ಲಿ ಅವರ ಪ್ರೇಮ ಬಹಿರಂಗವಾಗಿದೆ.

Continue Reading

ವಾಣಿಜ್ಯ

Stock Market: ಷೇರು ಮಾರುಕಟ್ಟೆಗೆ ಶುಭ ಶುಕ್ರವಾರ; ಹೂಡಿಕೆದಾರರಿಗೆ 7 ಲಕ್ಷ ಕೋಟಿ ರೂ. ಭರ್ಜರಿ ಲಾಭ!

Stock Market: ಬಿಎಸ್‌ಇ ಸೆನ್ಸೆಕ್ಸ್‌ 1,292.92 ಪಾಯಿಂಟ್‌ಗಳ ಏರಿಕೆಯೊಂದಿಗೆ 81,332.72 ಪಾಯಿಂಟ್‌ ತಲುಪಿದರೆ, ಎನ್‌ಎಸ್‌ಇ ನಿಫ್ಟಿಯು 428.75 ಪಾಯಿಂಟ್‌ಗಳ ಏರಿಕೆಯೊಂದಿಗೆ 24,834.85 ಪಾಯಿಂಟ್ಸ್‌ ತಲುಪಿದೆ. ಇದರಿಂದಾಗಿ, ಕಳೆದ ನಾಲ್ಕು ದಿನಗಳಿಂದ ನಷ್ಟ ಅನುಭವಿಸಿದ್ದ ಹೂಡಿಕೆದಾರರು ಶುಕ್ರವಾರ ಲಾಭ ಗಳಿಸಿದರು.

VISTARANEWS.COM


on

Stock Market
Koo

ಮುಂಬೈ: ಕೇಂದ್ರ ಬಜೆಟ್‌ (Union Budget 2024) ಮಂಡಿಸಿದ ದಿನವಾದ ಜುಲೈ 23 ಸೇರಿ ನಂತರದ ದಿನಗಳಲ್ಲಿ ಸತತವಾಗಿ ಇಳಿಕೆ ಕಂಡಿದ್ದ ಷೇರು ಮಾರುಕಟ್ಟೆಯು (Stock Market) ಶುಕ್ರವಾರ (ಜುಲೈ 26) ಭಾರಿ ಸುಧಾರಣೆ ಕಂಡಿದೆ. ಷೇರುಪೇಟೆಯಲ್ಲಿ ಶುಕ್ರವಾರ ಬಿಎಸ್‌ಇ ಸೆನ್ಸೆಕ್ಸ್‌ 1,292.92 ಪಾಯಿಂಟ್‌ಗಳ ಏರಿಕೆ ಕಂಡರೆ, ಎನ್‌ಎಸ್‌ಇ ನಿಫ್ಟಿಯು 428.75 ಅಂಕಗಳಷ್ಟು ಏರಿಕೆಯಾಗಿದೆ. ಇದರಿಂದಾಗಿ ಹೂಡಿಕೆದಾರರಿಗೆ ಒಂದೇ ದಿನ 7 ಲಕ್ಷ ಕೋಟಿ ರೂ. ಲಾಭವಾಗಿದೆ.

ಬಿಎಸ್‌ಇ ಸೆನ್ಸೆಕ್ಸ್‌ 1,292.92 ಪಾಯಿಂಟ್‌ಗಳ ಏರಿಕೆಯೊಂದಿಗೆ 81,332.72 ಪಾಯಿಂಟ್‌ ತಲುಪಿದರೆ, ಎನ್‌ಎಸ್‌ಇ ನಿಫ್ಟಿಯು 428.75 ಪಾಯಿಂಟ್‌ಗಳ ಏರಿಕೆಯೊಂದಿಗೆ 24,834.85 ಪಾಯಿಂಟ್ಸ್‌ ತಲುಪಿದೆ. ಇದರಿಂದಾಗಿ, ಕಳೆದ ನಾಲ್ಕು ದಿನಗಳಿಂದ ನಷ್ಟ ಅನುಭವಿಸಿದ್ದ ಹೂಡಿಕೆದಾರರು ಶುಕ್ರವಾರ ಲಾಭ ಗಳಿಸಿದರು.

Share Market
Share Market

ಲಾಭ ಗಳಿಸಿದ ಕಂಪನಿಗಳು

ಭಾರ್ತಿ ಏರ್‌ಟೆಲ್‌ ಕಂಪನಿಯು ಅತಿ ಹೆಚ್ಚು ಲಾಭ ಗಳಿಸಿದ ಕಂಪನಿ ಎನಿಸಿದೆ. ಭಾರ್ತಿ ಏರ್‌ಟೆಲ್‌ ಲಾಭದ ಪ್ರಮಾಣವು ಶೇ.4.51ರಷ್ಟು ಏರಿಕೆಯಾಗಿದೆ. ಇದರ ಜತೆಗೆ ಅದಾನಿ ಪೋರ್ಟ್ಸ್‌, ಸನ್‌ ಫಾರ್ಮಾ, ಟಾಟಾ ಸ್ಟೀಲ್‌, ಎಚ್‌ಸಿಎಲ್‌ ಟೆಕ್ನಾಲಜೀಸ್‌, ಇನ್ಫೋಸಿಸ್‌, ಜೆಎಸ್‌ಡಬ್ಲ್ಯೂ ಸ್ಟೀಲ್‌ ಹಾಗೂ ಮಹೀಂದ್ರಾ & ಮಹೀಂದ್ರಾ ಕಂಪನಿಗಳು ಲಾಭ ಗಳಿಸಿದವು.

ನಷ್ಟ ಅನುಭವಿಸಿದ ಕಂಪನಿಗಳು

ನೆಸ್ಲೆ ಕಂಪನಿಯು ಅತಿ ಹೆಚ್ಚು ನಷ್ಟ ಅನುಭವಿಸಿದ ಕಂಪನಿಯಾಗಿದೆ. ಇದರ ಷೇರುಗಳ ಮೌಲ್ಯವು ಶೇ.0.07ರಷ್ಟು ಕುಸಿದಿದೆ. ಒಎನ್‌ಜಿಸಿ, ಟಾಟಾ ಕನ್ಸುಮರ್‌ ಪ್ರಾಡಕ್ಟ್ಸ್‌ ಲಿಮಿಟೆಡ್‌ ಸೇರಿ ಹಲವು ಕಂಪನಿಗಳು ನಷ್ಟ ಅನುಭವಿಸಿದವು. ಇನ್ನು ಬಜೆಟ್‌ ಹಿಂದಿನ ದಿನ, ಬಜೆಟ್‌ ಹಾಗೂ ಬಜೆಟ್‌ ನಂತರದ ಕೆಲ ದಿನಗಳಲ್ಲಿ ಷೇರು ಮಾರುಕಟ್ಟೆಯಲ್ಲಿ ಭಾರಿ ಪ್ರಮಾಣದ ಏರಿಳಿತ ಸಾಮಾನ್ಯವಾಗಿದೆ. ಇದೇ ಕಾರಣಕ್ಕಾಗಿ ನಾಲ್ಕು ದಿನಗಳಿಂದ ಇಳಿಕೆಯಾಗಿದ್ದ ಷೇರು ಪೇಟೆಯು ಶುಕ್ರವಾರ ಏರಿಕೆ ಕಂಡಿದೆ ಎಂದು ಹೂಡಿಕೆ ತಜ್ಞರು ತಿಳಿಸಿದ್ದಾರೆ.

ಇದನ್ನೂ ಓದಿ: Union Budget 2024: ಬಜೆಟ್‌ನಲ್ಲಿ ಕಸ್ಟಮ್ಸ್‌ ಸುಂಕ ಇಳಿಕೆ; ಚಿನ್ನದ ಮೇಲಿನ ಹೂಡಿಕೆಗೆ ಇದು ಸಕಾಲವೇ? ತಜ್ಞರು ಹೇಳೋದಿಷ್ಟು

Continue Reading
Advertisement
Kargil Vijay Diwas 2024
ದೇಶ5 mins ago

Kargil Vijay Diwas 2024: ಕಾರ್ಗಿಲ್ ಯುದ್ಧದಲ್ಲಿ ನಿರ್ಣಾಯಕವಾಗಿದ್ದ ಟೈಗರ್ ಹಿಲ್; 19 ವರ್ಷದ ಯೋಧನ ರೋಚಕ ಸಾಹಸ!

Apple iPhones
ಗ್ಯಾಜೆಟ್ಸ್6 mins ago

Apple iPhones: ಆ್ಯಪಲ್‌ ಬ್ರ್ಯಾಂಡ್‌ ಪ್ರಿಯರಿಗೆ ಗುಡ್‌ನ್ಯೂಸ್;‌ ಐಫೋನ್‌ಗಳ ಬೆಲೆಯಲ್ಲಿ ಗಣನೀಯ ಇಳಿಕೆ

ಕರ್ನಾಟಕ8 mins ago

PU Lecturer Recruitment: ಪ್ರೌಢಶಾಲಾ ಶಿಕ್ಷಕರು ಪಿಯು ಕಾಲೇಜಿಗೆ ಬಡ್ತಿ ಪಡೆಯಲು ಅರ್ಹತಾ ಅಂಕ ಶೇ.50ಕ್ಕೆ ಇಳಿಕೆ

karnataka rain
ಮಳೆ16 mins ago

Karnataka Rain : ಉಕ್ಕಿ ಹರಿಯುವ ನೇತ್ರಾವತಿ ನದಿಯಲ್ಲಿ ತೇಲಿ ಬಂದ ಜೀವಂತ ಹಸು

PARIS OLYMPICS 2024
ಪ್ರಮುಖ ಸುದ್ದಿ26 mins ago

PARIS OLYMPICS 2024 : ಪ್ಯಾರಿಸ್ ಒಲಿಂಪಿಕ್ಸ್​​ ಗ್ರಾಮದಲ್ಲೇ ಮದುವೆ ನಿಶ್ಚಿತಾರ್ಥ ಮಾಡಿಕೊಂಡ ಅಥ್ಲೀಟ್​ಗಳು

Stock Market
ವಾಣಿಜ್ಯ27 mins ago

Stock Market: ಷೇರು ಮಾರುಕಟ್ಟೆಗೆ ಶುಭ ಶುಕ್ರವಾರ; ಹೂಡಿಕೆದಾರರಿಗೆ 7 ಲಕ್ಷ ಕೋಟಿ ರೂ. ಭರ್ಜರಿ ಲಾಭ!

Shubman Gill
ಕ್ರೀಡೆ42 mins ago

Shubman Gill: ಬಾಂಗ್ಲಾ ವಿರುದ್ಧದ ಟೆಸ್ಟ್​ ಸರಣಿಗೆ ಶುಭಮನ್​ ಗಿಲ್​ ಉಪನಾಯಕ!

Kannada New Movie Parapancha Gama Gama Powder song out
ಸ್ಯಾಂಡಲ್ ವುಡ್57 mins ago

Kannada New Movie: “ಪೌಡರ್” ತಂಡದಿಂದ ಹೊರ ಬಿತ್ತು ಹೊಸ ಹಾಡು; “ಪರಪಂಚವೇ ಘಮ ಘಮ”!

No cases of Nipah virus have been detected in the state says Minister Dinesh Gundurao
ಕರ್ನಾಟಕ60 mins ago

Dengue Fever: ರಾಜ್ಯದಲ್ಲಿ ನಿಫಾ ವೈರಸ್ ಪ್ರಕರಣ ಪತ್ತೆಯಾಗಿಲ್ಲ: ದಿನೇಶ್ ಗುಂಡೂರಾವ್

Kampli Gangavathi link bridge inundation fear
ಬಳ್ಳಾರಿ1 hour ago

Ballari News: ಕಂಪ್ಲಿ-ಗಂಗಾವತಿ ಸಂಪರ್ಕ ಸೇತುವೆ ಮುಳುಗಡೆ ಭೀತಿ; ಸಂಚಾರಕ್ಕೆ ನಿರ್ಬಂಧ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka rain
ಮಳೆ16 mins ago

Karnataka Rain : ಉಕ್ಕಿ ಹರಿಯುವ ನೇತ್ರಾವತಿ ನದಿಯಲ್ಲಿ ತೇಲಿ ಬಂದ ಜೀವಂತ ಹಸು

Karnataka Rain
ಮಳೆ1 hour ago

Karnataka Rain: ವಿದ್ಯುತ್‌ ದುರಸ್ತಿಗಾಗಿ ಪ್ರಾಣದ ಹಂಗು ತೊರೆದು ಉಕ್ಕಿ ಹರಿಯುವ ನೀರಿಗೆ ಧುಮುಕಿದ ಲೈನ್‌ ಮ್ಯಾನ್‌!

Karnataka rain
ಮಳೆ2 hours ago

Karnataka Rain : ಹಾಸನದಲ್ಲಿ ಹೇಮಾವತಿ, ಚಿಕ್ಕಮಗಳೂರಲ್ಲಿ ಭದ್ರೆಯ ಅಬ್ಬರಕ್ಕೆ ಜನರು ತತ್ತರ

karnataka Rain
ಮಳೆ1 day ago

Karnataka Rain : ಮನೆಯೊಳಗೆ ನುಗ್ಗಿದ ಮಳೆ ನೀರು; ಕಾಲು ಜಾರಿ ಬಿದ್ದು ವೃದ್ಧೆ ಸಾವು

Actor Darshan
ಸ್ಯಾಂಡಲ್ ವುಡ್1 day ago

Actor Darshan: ನಟ ದರ್ಶನ್ ಇರುವ ಜೈಲು ಕೋಣೆ ಹೇಗಿದೆ?

Actor Darshan
ಸಿನಿಮಾ1 day ago

Actor Darshan : ಹೆಂಡ್ತಿ ಮಕ್ಕಳೊಟ್ಟಿಗೆ ಚೆನ್ನಾಗಿರು.. ಸಹಕೈದಿ ಜತೆಗೆ 12 ನಿಮಿಷ ಕಳೆದ ನಟ ದರ್ಶನ್‌

Actor Darshan
ಸಿನಿಮಾ1 day ago

Actor Darshan: ಆಧ್ಯಾತ್ಮದತ್ತ ವಾಲಿದ ದರ್ಶನ್‌; ಜೈಲಲ್ಲಿ ಹೇಗಿದೆ ಗೊತ್ತಾ ನಟನ ಬದುಕು

karnataka Weather Forecast
ಮಳೆ2 days ago

Karnataka Weather : ರಭಸವಾಗಿ ಸುರಿಯುವ ಮಳೆ; 50 ಕಿ.ಮೀ ವೇಗದಲ್ಲಿ ಬೀಸುತ್ತೆ ಗಾಳಿ

karnataka weather Forecast
ಮಳೆ3 days ago

Karnataka Weather : ರಾಜ್ಯದಲ್ಲಿ ಮುಂದುವರಿದ ಮಳೆ ಅವಾಂತರ; ನಾಳೆಯೂ ಇರಲಿದೆ ಅಬ್ಬರ

Udupi News
ಉಡುಪಿ3 days ago

Udupi News : ಹಳೆ ಲಾರಿ ಚಾಸ್ಸಿಯಲ್ಲೇ ಕಿರು ಸೇತುವೆ ನಿರ್ಮಾಣ! ಬೈಂದೂರು ಶಾಸಕರ ಪರಿಕಲ್ಪನೆಗೆ ಜನರು ಫಿದಾ

ಟ್ರೆಂಡಿಂಗ್‌