Sai Pallavi: ಮದುವೆಯಾಗಿ ಮಕ್ಕಳಿರುವ ಸಹ ನಟನೊಂದಿಗೆ ಸಾಯಿ ಪಲ್ಲವಿ ಡೇಟಿಂಗ್‌? - Vistara News

ಸಿನಿಮಾ

Sai Pallavi: ಮದುವೆಯಾಗಿ ಮಕ್ಕಳಿರುವ ಸಹ ನಟನೊಂದಿಗೆ ಸಾಯಿ ಪಲ್ಲವಿ ಡೇಟಿಂಗ್‌?

Sai Pallavi: ಇತ್ತೀಚೆಗೆ, ಸಾಯಿ ಪಲ್ಲವಿ ಮದುವೆಯಾಗಿರುವ ಪ್ರಸಿದ್ಧ ನಟನೊಂದಿಗೆ ಡೇಟಿಂಗ್ ಮಾಡುತ್ತಿದ್ದಾರೆ ಎಂಬ ವದಂತಿಗಳು ಹುಟ್ಟಿಕೊಂಡಿವೆ. ಈ ಸುದ್ದಿ ವಿಶೇಷವಾಗಿ ಅವರ ಅಭಿಮಾನಿಗಳನ್ನು ಆಶ್ಚರ್ಯಗೊಳಿಸಿದೆ. ನಟಿಯ ಫಾಲೋವರ್ಸ್‌ಗಳು ಈ ವದಂತಿಗಳನ್ನು ತಳ್ಳಿಹಾಕುತ್ತಿದ್ದಾರೆ.

VISTARANEWS.COM


on

Sai Pallavi Dating a Married Actor Who Has Two Kids
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಸಾಯಿ ಪಲ್ಲವಿ (Sai Pallavi) ದಕ್ಷಿಣ ಭಾರತ ಚಿತ್ರರಂಗದ ಅತ್ಯಂತ ಪ್ರಸಿದ್ಧ ನಟಿಯರಲ್ಲಿ ಒಬ್ಬರು. 2015 ರ ಮಲಯಾಳಂ ಚಲನಚಿತ್ರ ‘ಪ್ರೇಮಂ’ನಲ್ಲಿನ ಅಭಿನಯದೊಂದಿಗೆ ವ್ಯಾಪಕ ಮೆಚ್ಚುಗೆಯನ್ನು ಗಳಿಸಿದರು. ಕಲಿ, ಮಾರಿ 2, ಗಾರ್ಗಿ ಮತ್ತು ಇತರ ಅನೇಕ ಚಲನಚಿತ್ರಗಳ ಮೂಲಕ ಹೆಸರು ಗಳಿಸಿದ್ದಾರೆ. ಸಿನಿಮಾ ಜತೆಗೆ ನಟಿ ಆಗಾಗ ವೈಯಕ್ತಿಕ ವಿಚಾರಗಳಿಗಾಗಿ ಸುದ್ದಿಯಲ್ಲಿ ಇರುತ್ತಾರೆ. ಸದ್ಯ ನಟಿ ಮದುವೆಯಾಗಿ ಮಕ್ಕಳಿರುವ ಸಹ ನಟನೊಂದಿಗೆ ಡೇಟಿಂಗ್ ಮಾಡುತ್ತಿದ್ದಾರೆ ಎನ್ನುವ ಸುದ್ದಿ ಸಾಕಷ್ಟು ವೈರಲ್‌ ಆಗಿದೆ.

ಇತ್ತೀಚೆಗೆ, ಸಾಯಿ ಪಲ್ಲವಿ ಮದುವೆಯಾಗಿರುವ ಪ್ರಸಿದ್ಧ ನಟನೊಂದಿಗೆ ಡೇಟಿಂಗ್ ಮಾಡುತ್ತಿದ್ದಾರೆ ಎಂಬ ವದಂತಿಗಳು ಹುಟ್ಟಿಕೊಂಡಿವೆ. ಈ ಸುದ್ದಿ ವಿಶೇಷವಾಗಿ ಅವರ ಅಭಿಮಾನಿಗಳನ್ನು ಆಶ್ಚರ್ಯಗೊಳಿಸಿದೆ. ನಟಿಯ ಫಾಲೋವರ್ಸ್‌ಗಳು ಈ ವದಂತಿಗಳನ್ನು ತಳ್ಳಿಹಾಕುತ್ತಿದ್ದಾರೆ. ಸದ್ಯ ಈ ಸುದ್ದಿ ನ್ಯಾಷನಲ್ ಲೆವೆಲ್‌ನಲ್ಲಿ ಸಂಚಲನ ಸೃಷ್ಟಿಸಿದೆ. ಆದರೆ ಈ ನಟ ಯಾರು ಎನ್ನೋದನ್ನು ಮಾತ್ರ ವರದಿಗಳಲ್ಲಿ ತಿಳಿಸಲಾಗಿಲ್ಲ. ಸದ್ಯಕ್ಕೆ ಈ ವದಂತಿಗಳಿಗೆ ಸಾಯಿ ಪಲ್ಲವಿ ಉತ್ತರ ನೀಡಿಲ್ಲ.

ಸದ್ಯ ಸಾಯಿ ಪಲ್ಲವಿ ಕೈಯಲ್ಲಿ ರಾಜ್‌ಕುಮಾರ್ ಪೆರಿಯಸಾಮಿ ನಿರ್ದೇಶನದ ತಮಿಳು ಚಿತ್ರ ಶಿವಕಾರ್ತಿಕೇಯನ್ ಜೊತೆ ನಟಿಸುತ್ತಿರುವ ಅಮರನ್, ನಾಗಚೈತನ್ಯ ಸಿನಿಮಾ ‘ತಾಂಡೇಲ್’ ಹಾಗೂ ಬಾಲಿವುಡ್‌ನ ‘ರಾಮಾಯಣ’ ಕೈಯಲ್ಲಿದೆ. ಟ್ರೆಡಿಷನಲ್ ಲುಕ್‌ನಲ್ಲಿ ನಟಿಸಿ ಜನರ ಮನಗೆದ್ದಿರುವ ಸಾಯಿ ಪಲ್ಲವಿ ದಕ್ಷಿಣ ಭಾರತದ ಸ್ಟಾರ್ ನಟಿಯರಲ್ಲಿ ಒಬ್ಬರು. ‘ಪ್ರೇಮಂ’, ಮಿಡಲ್ ಕ್ಲಾಸ್ ಅಬ್ಬಾಯ್, ಲವ್ ಸ್ಟೋರಿ, ಎನ್‌ಜಿಕೆ, ಗಾರ್ಗಿ, ಫಿದಾ, ಮಾರಿ 2 ಅಂತಹ ಹಿಟ್ ಸಿನಿಮಾಗಳಲ್ಲಿ ನಟಿಸಿದ್ದಾರೆ. ಸದ್ಯ ಒಂದಿಷ್ಟು ದಿನ ಸಿನಿಮಾದಿಂದ ದೂರ ಉಳಿದಿದ್ದರೂ, ಅವರ ಕೈಯಲ್ಲೀಗ ಮೆಗಾ ಪ್ರಾಜೆಕ್ಟ್‌ಗಳು ಇವೆ.

ಇದನ್ನೂ ಓದಿ” Sai Pallavi Mass Dance: ಆಮೀರ್​ ಖಾನ್​ ಪುತ್ರನ ಜತೆ ಪಬ್‌ನಲ್ಲಿ ಕುಣಿದು ಕುಪ್ಪಳಿಸಿದ ಸಾಯಿ ಪಲ್ಲವಿ!

ಶಿವ ಆರೂರ್ ಮತ್ತು ರಾಹುಲ್ ಸಿಂಗ್ ಅವರ ‘ಇಂಡಿಯಾಸ್ ಮೋಸ್ಟ್ ಫಿಯರ್‌ಲೆಸ್: ಟ್ರೂ ಸ್ಟೋರೀಸ್ ಆಫ್ ಮಾಡರ್ನ್ ಮಿಲಿಟರಿ’ ಪುಸ್ತಕವನ್ನು ಆಧರಿಸಿದ ಈ ಚಿತ್ರದಲ್ಲಿ ಶಿವಕಾರ್ತಿಕೇಯನ್, ಭುವನ್ ಅರೋರಾ, ಲಲ್ಲು, ಶ್ರೀಕುಮಾರ್ ಮತ್ತು ಶ್ಯಾಮ್ ಮೋಹನ್ ಸಹ ನಟಿಸಿದ್ದಾರೆ. ಇದು ಅಕ್ಟೋಬರ್ 31, 2024 ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ.

ರಾಮಾಯಣದೊಂದಿಗೆ ಬಾಲಿವುಡ್‌ಗೆ ಪದಾರ್ಪಣೆ ಮಾಡಿದ್ದಾರೆ ನಟಿ. ಈ ಚಿತ್ರದಲ್ಲಿ ಅವರು ಸೀತಾ ದೇವಿಯ ಪಾತ್ರದಲ್ಲಿ ರಣಬೀರ್ ಕಪೂರ್ ಭಗವಾನ್ ರಾಮನ ಪಾತ್ರವನ್ನು ನಿರ್ವಹಿಸಲಿದ್ದಾರೆ. ಈ ಜೋಡಿ ಈಗಾಗಲೇ ಮುಂಬೈನಲ್ಲಿ ಕೆಲವು ದೃಶ್ಯಗಳನ್ನು ಚಿತ್ರೀಕರಿಸಿದೆ ಮತ್ತು ಚಿತ್ರವು 2025 ರಲ್ಲಿ ಬಿಡುಗಡೆಯಾಗುವ ನಿರೀಕ್ಷೆಯಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಸ್ಯಾಂಡಲ್ ವುಡ್

Kannada New Movie: “ಪೌಡರ್” ತಂಡದಿಂದ ಹೊರ ಬಿತ್ತು ಹೊಸ ಹಾಡು; “ಪರಪಂಚವೇ ಘಮ ಘಮ”!

Kannada New Movie: ಖ್ಯಾತ ಜನಪದ ಗಾಯಕ, ಬ್ಲಾಕ್ ಬಸ್ಟರ್ ಗೀತೆಗಳಾದ “ಟಗರು ಬಂತು ಟಗರು”, “ಸೂರಿ ಅಣ್ಣಾ” ಖ್ಯಾತಿಯ ಆಂಟೋನಿ ದಾಸನ್ ಈ ಹಾಡಿಗೆ ದನಿಯಾಗಿರುವುದು ವಿಶೇಷ ಸಂಗತಿ. ಮಾಸ್ ಗೀತೆಗಳಿಗೆ ಹೆಸರುವಾಸಿಯಾದ ಆಂಟೋನಿ ಮೊದಲ ಬಾರಿಗೆ “ಪೌಡರ್” ಚಿತ್ರದ ಈ ಲಯ ಪ್ರಧಾನ ಗೀತೆಗೆ ದನಿಯಾಗಿರುವುದು ಸಿನಿ ಪ್ರೇಕ್ಷಕರ ಕುತೂಹಲವನ್ನು ಹೆಚ್ಚಿಸಿದೆ.

VISTARANEWS.COM


on

Kannada New Movie Parapancha Gama Gama Powder song out
Koo

ಬೆಂಗಳೂರು: ಬಹು ನಿರೀಕ್ಷಿತ ಹಾಸ್ಯ ಚಿತ್ರ “ಪೌಡರ್” (Kannada New Movie) ತನ್ನ ಎರಡನೇ ಗೀತೆಯಾದ “ಪರಪಂಚ ಘಮ ಘಮ” ಅನ್ನು ಬಿಡುಗಡೆ ಮಾಡುವ ಮೂಲಕ ಎಲ್ಲರ ಮನೆ ಮಾತಾಗಿದೆ. ಮೊದಲನೇ ಗೀತೆಯಾದ”ಮಿಷನ್ ಘಮ ಘಮ” ತನ್ನ ವಿಭಿನ್ನ ಟ್ಯೂನ್ ಮೂಲಕ ಎಲ್ಲರ ಗಮನ ಸೆಳೆದಿತ್ತು. ಇದೀಗ “ಪರಪಂಚ ಘಮ ಘಮ” ಅದೇ ರೀತಿಯ ಛಾಪನ್ನು ಮೂಡಿಸಲು ಸಜ್ಜಾಗಿದೆ.

ಖ್ಯಾತ ಜನಪದ ಗಾಯಕ, ಬ್ಲಾಕ್ ಬಸ್ಟರ್ ಗೀತೆಗಳಾದ “ಟಗರು ಬಂತು ಟಗರು”, “ಸೂರಿ ಅಣ್ಣಾ” ಖ್ಯಾತಿಯ ಆಂಟೋನಿ ದಾಸನ್ ಈ ಹಾಡಿಗೆ ದನಿಯಾಗಿರುವುದು ವಿಶೇಷ ಸಂಗತಿ. ಮಾಸ್ ಗೀತೆಗಳಿಗೆ ಹೆಸರುವಾಸಿಯಾದ ಆಂಟೋನಿ ಮೊದಲ ಬಾರಿಗೆ “ಪೌಡರ್” ಚಿತ್ರದ ಈ ಲಯ ಪ್ರಧಾನ ಗೀತೆಗೆ ದನಿಯಾಗಿರುವುದು ಸಿನಿ ಪ್ರೇಕ್ಷಕರ ಕುತೂಹಲವನ್ನು ಹೆಚ್ಚಿಸಿದೆ.

ಪೌಡರ್” ಒಂದು ಹಾಸ್ಯಭರಿತ ಚಿತ್ರವಾಗಿದೆ.ಇಬ್ಬರು ಯುವಕರು ಒಂದು ನಿಗೂಢವಾದ “ಪೌಡರ್” ಪ್ರಭಾವದಿಂದಾಗಿ ಧಿಡೀರನೇ ಸಿರಿವಂತರಾಗಲು ಮಾಡುವ ಪ್ರಯತ್ನಗಳು, ಅವರಿಗೆ ಎದುರಾಗುವ ಸಮಸ್ಯೆಗಳು ಇವೆಲ್ಲವನ್ನೂ ಎಳೆಯಾಗಿ ಬಿಚ್ಚಿಡುವ ಕಥೆಯೇ “ಪೌಡರ್”. ಆ ಯುವಕರು ಎಲ್ಲಾ ಸಮಸ್ಯೆಗಳನ್ನು ಮೀರಿ ನಿಲ್ಲುವರೇ? ಅವರ ಎಲ್ಲಾ ಕನಸುಗಳು ನನಸಾಹುವುದೇ? “ಪೌಡರ್” ಹಿಂದಿನ “ಪವರ್” ಅವರಿಗೆ ತಿಳಿಯುವುದೇ? ಇದುವೇ ಕಥೆಯ ಸಾರಾಂಶ.

ಇದನ್ನೂ ಓದಿ: Kannada New Movie: ʼಜೀನಿಯಸ್ ಮುತ್ತʼನಿಗೆ ಸಾಥ್ ನೀಡಿದ ʼಚಿನ್ನಾರಿ ಮುತ್ತʼ; ಆಗಸ್ಟ್‌ನಲ್ಲಿ ಸಿನಿಮಾ ರಿಲೀಸ್‌

ಜನಾರ್ದನ್ ಚಿಕ್ಕಣ್ಣ ನಿರ್ದೇಶನದ “ಪೌಡರ್” ಚಿತ್ರದಲ್ಲಿ ದಿಗಂತ್ ಮಂಚಾಲೆ, ಧನ್ಯ ರಾಮ್ ಕುಮಾರ್, ಅನಿರುದ್ಧ್ ಆಚಾರ್ಯ, ಶರ್ಮಿಳಾ ಮಾಂಡ್ರೆ, ರಂಗಾಯಣ ರಘು, ಗೋಪಾಲಕೃಷ್ಣ ದೇಶಪಾಂಡೆ ಮುಂತಾದವರು ನಟಿಸಿರುತ್ತಾರೆ. ಚಿತ್ರಕ್ಕೆ ವಾಸುಕಿ ವೈಭವ್ ಸಂಗೀತ ಸಂಯೋಜನೆ ಮಾಡಿದ್ದು, ಕಾರ್ತಿಕ್ ಗೌಡ, ಯೋಗಿ ಜಿ ರಾಜ್ ಮತ್ತು ವಿಜಯ್ ಸುಬ್ರಹ್ಮಣ್ಯಂ ಕೆ.ಆರ್.ಜಿ.ಸ್ಟೂಡಿಯೋಸ್‌ ಬ್ಯಾನರ್ ಅಡಿಯಲ್ಲಿ ಹಾಗೂ ಅರುನಭ್ ಕುಮಾರ್ ಟಿ.ವಿ.ಎಫ್.ಮೋಷನ್ ಪಿಕ್ಚರ್ಸ್ ಬ್ಯಾನರ್ ಅಡಿಯಲ್ಲಿ ನಿರ್ಮಿಸಿರುತ್ತಾರೆ. ಈ ಚಿತ್ರವು ಇದೇ ಆಗಸ್ಟ್ 15ರಂದು ಚಿತ್ರಮಂದಿರಗಳಲ್ಲಿ ತೆರೆಕಾಣುತ್ತಿದೆ.

Continue Reading

ಸಿನಿಮಾ

Samantha Ruth Prabhu: ಆ.1ಕ್ಕೆ ‘ಸಿಟಾಡೆಲ್’ ಬಿಗ್‌ ಅಪ್‌ಡೇಟ್‌ : ಸಮಂತಾ ಫ್ಯಾನ್ಸ್‌ಗೆ ಸಿಗಲಿದೆ ಗುಡ್‌ ನ್ಯೂಸ್‌!

Samantha Ruth Prabhu: ‘ಸಿಟಾಡೆಲ್: ಹನಿ ಬನ್ನಿ’ ಟ್ರೈಲರ್ ಆಗಸ್ಟ್ 1 ರಂದು ಬಿಡುಗಡೆಯಾಗಲಿದೆ ಎಂದು ಅಭಿಮಾನಿಗಳು ಊಹಿಸಿದ್ದಾರೆ. ಮೂಲಗಳ ಪ್ರಕಾರ, ಪ್ರೈಮ್ ವಿಡಿಯೋ ವರುಣ್ ಮತ್ತು ಸಮಂತಾ ‘ಸಿಟಾಡೆಲ್: ಹನಿ ಬನ್ನಿ’ ನ ಪ್ರೀಮಿಯರ್ ದಿನಾಂಕವನ್ನು ಘೋಷಿಸಲಿದ್ದಾರೆ.

VISTARANEWS.COM


on

Samantha Ruth Prabhu Citadel Honey Bunny Varun Dhawan
Koo

ಬೆಂಗಳೂರು: ಟಾಲಿವುಡ್ ನಟಿ ಸಮಂತಾ ರುತ್ ಪ್ರಭು (Samantha Ruth Prabhu) ‘ಸಿಟಾಡೆಲ್: ಹನಿ ಬನಿ’ ಎಂಬ ಹಿಂದಿ ವೆಬ್ ಸೀರಿಸ್​ ಮೂಲಕ ಚಿತ್ರರಂಗಕ್ಕೆ ಮರಳಲು ಸಜ್ಜಾಗಿದ್ದಾರೆ. ನಿರ್ದೇಶಕ ಜೋಡಿಯಾದ ರಾಜ್ ಮತ್ತು ಡಿಕೆ ಆ್ಯಕ್ಷನ್​ ಕಟ್​ ಹೇಳಿರುವ ಈ ಸರಣಿಯಲ್ಲಿ ಬಾಲಿವುಡ್ ನಟ ವರುಣ್ ಧವನ್ ನಟಿಸಿದ್ದು, ವೆಬ್ ಸರಣಿ ಕ್ಷೇತ್ರಕ್ಕೆ ಪದಾರ್ಪಣೆ ಮಾಡಲಿದ್ದಾರೆ. ಆಗಸ್ಟ್‌ 1ರಂದು ಸಿರೀಸ್‌ ಅಪ್‌ಡೇಟ್‌ವನ್ನು ಹಂಚಿಕೊಳ್ಳಲಿದೆ ಚಿತ್ರತಂಡ.

ನಿರ್ದೇಶಕ ರಾಜ್ ಮತ್ತು ಡಿಕೆ ತಮ್ಮ ಸಾಮಾಜಿಕ ಮಾಧ್ಯಮ ಹ್ಯಾಂಡಲ್‌ನಲ್ಲಿ ಇನ್‌ಸ್ಟಾಗ್ರಾಮ್ ಪೋಸ್ಟ್ ಅನ್ನು ಹಂಚಿಕೊಂಡಿದ್ದಾರೆ. ಶೀರ್ಷಿಕೆಯಲ್ಲಿ ಹೆಚ್ಚು ಏನನ್ನೂ ಬಹಿರಂಗಪಡಿಸಲಾಗಿಲ್ಲ ಆದರೆ ಇದು ಅಭಿಮಾನಿಗಳ ಕುತೂಹಲವನ್ನು ಕೆರಳಿಸಿದೆ. ‘ಸಿಟಾಡೆಲ್: ಹನಿ ಬನ್ನಿ’ ಟ್ರೈಲರ್ ಆಗಸ್ಟ್ 1 ರಂದು ಬಿಡುಗಡೆಯಾಗಲಿದೆ ಎಂದು ಅಭಿಮಾನಿಗಳು ಊಹಿಸಿದ್ದಾರೆ. ಮೂಲಗಳ ಪ್ರಕಾರ, ಪ್ರೈಮ್ ವಿಡಿಯೋ ವರುಣ್ ಮತ್ತು ಸಮಂತಾ ‘ಸಿಟಾಡೆಲ್: ಹನಿ ಬನ್ನಿ’ ನ ಪ್ರೀಮಿಯರ್ ದಿನಾಂಕವನ್ನು ಘೋಷಿಸಲಿದ್ದಾರೆ.

‘ಸಿಟಾಡೆಲ್: ಹನಿ ಬನಿ’

ಸಿಟಾಡೆಲ್ (Citadel) ಯೂನಿವರ್ಸ್‌ನ ಭಾರತೀಯ ಅಧ್ಯಾಯದಲ್ಲಿ ವರುಣ್ ಧವನ್ ಹಾಗೂ ಸಮಂತಾ (Samantha Ruth Prabhu) ನಾಯಕ, ನಾಯಕಿಯಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ʻಸಿಟಾಡೆಲ್’ ಇಂಗ್ಲಿಷ್ ವರ್ಷನ್ ಈಗಾಗಲೇ ಅಮೆಜಾನ್ ಪ್ರೈಂನಲ್ಲಿ ಸದ್ದು ಮಾಡುತ್ತಿದ್ದು, ಇದರಲ್ಲಿ ಪ್ರಿಯಾಂಕಾ ಚೋಪ್ರಾ ಜೋನಾಸ್ ಹಾಗೂ ರಿಚರ್ಡ್ ನಡುವೆ ಕಿಸ್ಸಿಂಗ್ ಹಾಗೂ ಹಾಟ್‌ ದೃಶ್ಯಗಳಿವೆ. ಈಗ ಇದೇ ಟೈಟಲ್‌ ಇಟ್ಟು ಭಾರತದಲ್ಲೂ ವೆಬ್ ಸೀರಿಸ್ ರೆಡಿಯಾಗುತ್ತಿದೆ. ಇದೀಗ ಪ್ರಿಯಾಂಕಾ-ರಿಚರ್ಡ್ ನಡುವಿನ ರೊಮ್ಯಾಂಟಿಕ್ ದೃಶ್ಯಗಳಂತೆ, ಸಮಂತಾ-ವರುಣ್ ಧವನ್ ನಡುವೆ ಇರುತ್ತದೆ ಎಂಬ ಸುದ್ದಿ ಸಖತ್‌ ವೈರಲ್‌ ಆಗುತ್ತಿದೆ.

ಬೋಲ್ಡ್‌ ದೃಶ್ಯಗಳಲ್ಲಿ ಕಾಣಿಸಿಕೊಳ್ಳುತ್ತಾರಾ ಸಮಂತಾ?

‘ಫ್ಯಾಮಿಲಿ ಮ್ಯಾನ್ 2’ ವೆಬ್‌ ಸೀರಿಸ್‌ನಲ್ಲಿ ಸಮಂತಾ ಬೋಲ್ಡ್ ದೃಶ್ಯಗಳಲ್ಲಿ ಕಾಣಿಸಿಕೊಂಡಿದ್ದರು. ಫ್ಯಾಮಿಲಿ ಮ್ಯಾನ್‌ ಸಿರೀಸ್‌ ಬರುವ ಸಮಯದಲ್ಲಿ ಸಮಂತಾ ಅವರು ನಾಗಚೈತನ್ಯ ಅವರಿಗೆ ವಿಚ್ಛೇದನ ನೀಡಿರಲಿಲ್ಲ. ಆದರೆ ಸಿರೀಸ್‌ನಲ್ಲಿ ಸಮಂತಾ ನಟಿಸಿರುವ ದೃಶ್ಯಗಳೇ ಇಬ್ಬರನ್ನು ಬೇರೆ ಮಾಡಿದ್ದು ಎನ್ನುವ ಸುದ್ದಿ ವೈರಲ್‌ ಆಗಿತ್ತು. ‘ಫ್ಯಾಮಿಲಿ ಮ್ಯಾನ್ 2’ ಸೀರಿಸ್ ನಿರ್ದೇಶಿಸಿದ್ದ ರಾಜ್ ಮತ್ತು ಡಿಕೆ ‘ಸಿಟಾಡೆಲ್‌’ ಭಾರತೀಯ ವರ್ಷನ್‌ಗೆ ಆ್ಯಕ್ಷನ್ ಕಟ್ ಹೇಳುತ್ತಿದ್ದಾರೆ. ಇದೇ ಸೀರಿಸ್‌ನಲ್ಲಿ ಸಮಂತಾ, ಪ್ರಿಯಾಂಕಾ ಚೋಪ್ರಾರಂತೆ ಹಾಟ್‌ ದೃಶ್ಯಗಳನ್ನು ಮಾಡುತ್ತಾರೆ ಎಂದು ಅವರ ಅಭಿಮಾನಿಗಳು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: Kannada New Movie: ʼಜೀನಿಯಸ್ ಮುತ್ತʼನಿಗೆ ಸಾಥ್ ನೀಡಿದ ʼಚಿನ್ನಾರಿ ಮುತ್ತʼ; ಆಗಸ್ಟ್‌ನಲ್ಲಿ ಸಿನಿಮಾ ರಿಲೀಸ್‌

ಇದು ರಿಮೇಕ್ ಅಲ್ಲ

ಸಮಂತಾ ಹಾಗೂ ವರುಣ್ ಧವನ್ ನಡುವೆ ಕಿಸ್ಸಿಂಗ್ ದೃಶ್ಯಗಳು ಇರುತ್ತವೆ ಎಂದು ಕೆಲ ಮಾಧ್ಯಮಗಳು ವರದಿ ಮಾಡಿವೆ. ಈಗಾಗಲೇ ಸಮಂತಾ ‘ಸಿಟಾಡೆಲ್’ ರಿಮೇಕ್ ಅಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಹೀಗಾಗಿ ಕಿಸ್ಸಿಂಗ್ ಹಾಗೂ ಬೆಡ್ ರೂಮ್ ದೃಶ್ಯಗಳು ಇರುತ್ತವೆಯೇ? ಎನ್ನುವ ಪ್ರಶ್ನೆ ಅವರ ಅಭಿಮಾನಿಗಳಲ್ಲಿ ಇದೆ.

ಸಮಂತಾ ಮತ್ತು ವರುಣ್ ಅವರಲ್ಲದೆ, ಕೇ ಕೇ ಮೆನನ್, ಸಿಮ್ರಾನ್, ಸೋಹಮ್ ಮಜುಂದಾರ್, ಶಿವಂಕಿತ್ ಪರಿಹಾರ್, ಕಶ್ವಿ ಮಜ್ಮುಂದರ್, ಸಾಕಿಬ್ ಸಲೀಮ್ ಮತ್ತು ಸಿಕಂದರ್ ಖೇರ್ ಸಹ ಈ ಸಿರೀಸ್‌ನಲ್ಲಿ ನಟಿಸಿದ್ದಾರೆ.

Continue Reading

ಸ್ಯಾಂಡಲ್ ವುಡ್

Kannada New Movie: ಮಕ್ಕಳ ಸಾಹಸ ಕಥೆಯಾಧಾರಿತ `ಭಗವತಿ’ ಚಿತ್ರಕ್ಕೆ ಚಾಲನೆ

Kannada New Movie : ಮಕ್ಕಳಿಗೆ ಆಗುತ್ತಿರುವ ಅನ್ಯಾಯದ ವಿರುದ್ದ ಸಿಡಿದುನಿಂತ ಮಕ್ಕಳು ಕಾನೂನಾತ್ಮಕವಾಗಿ ಹೋರಾಟ ನಡೆಸಿ ಗೆಲ್ಲುವಂಥ ಮಕ್ಕಳ ಸಾಹಸಮಯ ಕಾಥಾಹಂದರ ಈ ಚಿತ್ರದಲ್ಲಿದೆ. ಈಗಿನ ಜನರೇಶನ್ ಕುರಿತಾದ ಕಾನ್ಸೆಪ್ಟ್ ಹೊಂದಿರುವ ಈ ಚಿತ್ರದಲ್ಲಿ ಮಕ್ಕಳು ಹೇಗೆ ಹೋರಾಡಿ ಗೆಲ್ಲುತ್ತಾರೆ ಎಂಬುದನ್ನು ನಿರ್ದೇಶಕರು ರೋಚಕ ಕಥೆಯೊಂದಿಗೆ ಹೇಳಹೊರಟಿದ್ದಾರೆ.

VISTARANEWS.COM


on

Kannada New Movie children's adventure story-based film bhavati
Koo

ಬೆಂಗಳೂರು: `ಬಂಗಾರಿ’, ಶಿವನಪಾದ’ ಸೇರಿದಂತೆ ಹಲವಾರು (Kannada New Movie) ಚಿತ್ರಗಳನ್ನು ನಿರ್ದೇಶಿಸಿದ ಮಾಚಂದ್ರು ಅವರು ಕಥೆ ಚಿತ್ರಕಥೆ ಸಂಭಾಷಣೆ ಬರೆದು ಆಕ್ಷನ್ ಕಟ್ ಹೇಳುತ್ತಿರುವ ಮಕ್ಕಳ ಸಾಹಸದ ಕಥೆ ಇರುವ ಮತ್ತೊಂದು ಚಿತ್ರ ಭಗವತಿ. ಈ ಚಿತ್ರಕ್ಕೆ ಇತ್ತೀಚೆಗೆ ಬೆಂಗಳೂರಿನ ವಿಜಯ ನಗರದ ಮಾರುತಿ ಮಂದಿರದಲ್ಲಿ ಮುಹೂರ್ತ ಸಮಾರಂಭ ನಡೆಯಿತು. ವಿದ್ಯಾಧರೆ ಸಿನಿಮಾಸ್ ಮೂಲಕ ನಿರ್ಮಾಣವಾಗುತ್ತಿರುವ ಚಿತ್ರ ಇದಾಗಿದೆ.

ಈ ಹಿಂದೆ ಲೂಸ್ ಮಾದ ಯೋಗಿ, ರಾಗಿಣಿ ಅಭಿನಯದ ಬಂಗಾರಿ, ಬೆಟ್ಟದ ದಾರಿ, ನಡಗಲ್ಲು, ಶಿವನಪಾದ ಚಿತ್ರಗಳನ್ನು ನಿರ್ದೇಶಿಸಿದ್ದ ಮಾಚಂದ್ರು ಅವರು ಈ ಸಲ ಮಕ್ಕಳ ಸಾಹಸದ ಕಥಾನಕ‌ ಒಳಗೊಂಡ ಈ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ.

ಮಕ್ಕಳಿಗೆ ಆಗುತ್ತಿರುವ ಅನ್ಯಾಯದ ವಿರುದ್ದ ಸಿಡಿದು ನಿಂತ ಮಕ್ಕಳು ಕಾನೂನಾತ್ಮಕವಾಗಿ ಹೋರಾಟ ನಡೆಸಿ ಗೆಲ್ಲುವಂಥ ಮಕ್ಕಳ ಸಾಹಸಮಯ ಕಾಥಾಹಂದರ ಈ ಚಿತ್ರದಲ್ಲಿದೆ. ಈಗಿನ ಜನರೇಶನ್ ಕುರಿತಾದ ಕಾನ್ಸೆಪ್ಟ್ ಹೊಂದಿರುವ ಈ ಚಿತ್ರದಲ್ಲಿ ಮಕ್ಕಳು ಹೇಗೆ ಹೋರಾಡಿ ಗೆಲ್ಲುತ್ತಾರೆ ಎಂಬುದನ್ನು ನಿರ್ದೇಶಕರು ರೋಚಕ ಕಥೆಯೊಂದಿಗೆ ಹೇಳಹೊರಟಿದ್ದಾರೆ. ಈ ಚಿತ್ರದಲ್ಲಿ ಒಟ್ಟು ಎರಡು ಹಾಡುಗಳಿದ್ದು, ರಾಜೇಶ್ ಗೌಡ ಕ್ಯಾಮೆರಾ ವರ್ಕ್ ನಿಭಾಯಿಸುತ್ತಿದ್ದಾರೆ.

ಇದನ್ನೂ ಓದಿ: Kannada New Movie: ʼಜೀನಿಯಸ್ ಮುತ್ತʼನಿಗೆ ಸಾಥ್ ನೀಡಿದ ʼಚಿನ್ನಾರಿ ಮುತ್ತʼ; ಆಗಸ್ಟ್‌ನಲ್ಲಿ ಸಿನಿಮಾ ರಿಲೀಸ್‌

ಆಗಸ್ಟ್ 5ರಿಂದ ಆರಂಭಿಸಿ ಬೆಂಗಳೂರು, ಕನಕಪುರ ಹಾಗೂ ಮಡಿಕೇರಿಯ ಸುತ್ತಮುತ್ತ ಭಗವತಿ ಚಿತ್ರದ ಚಿತ್ರೀಕರಣ ನಡೆಯಲಿದೆ. ಇನ್ನು ಈ ಚಿತ್ರದಲ್ಲಿ ಬಾಲ ಕಲಾವಿದರಾದ ರಿಷಿಕಾ ರಾಮ್, ದೀಪಕ್ ಪಿ.ಕೆ, ಅದ್ವೈತ್ ಪ್ರೇರಣ್, ಅದೇಶ್ ಪ್ರೇರಣ್, ಅಭಿನವ್ ಸಮರ್ಥ, ವೇದಾಂತ್, ಮೇಘನಾ, ಮಾನ್ವಿ, ರೋಶಿನಿ, ತೇಜಸ್, ಸುಷ್ಮಾ, ಶ್ವೇತಾ, ವಿಷ್ಣು, ಜಿ.ಡಿ. ಹೇರಂಭ , ಭಾನು, ಮೋಹನ್ ಕುಮಾರ್ ಡಿ.ಕೆ. ಸತೀಶ್, ಶರತ್, ಹರ್ಷ. ಮುಂತಾದವರು ಅಭಿನಯಿಸುತ್ತಿದ್ದಾರೆ. ಉಳಿದ ಕಲಾವಿದರ ಹಾಗೂ ತಾಂತ್ರಿಕ ವರ್ಗದ ಆಯ್ಕೆ ಪ್ರಕ್ರಿಯೆ ನಡೆಯುತಿದೆ.

Continue Reading

ಸ್ಯಾಂಡಲ್ ವುಡ್

Hamsalekha: ʻನಾದಬ್ರಹ್ಮʼ ಎಂಬ ಪದಕ್ಕೆ ಅರ್ಥವೇ ಇಲ್ಲ,ಹಸಿ ಸುಳ್ಳು ಹೇಳುವ ವ್ಯಕ್ತಿ ಎಂದು ಹಂಸಲೇಖ ವಿರುದ್ಧ ಶಂಕರ್ ಶಾನುಭಾಗ್ ಕಿಡಿ!

Hamsalekha: ಇದೇ ವೇಳೆ ಖ್ಯಾತ ಸಂಗೀತ ನಿರ್ದೇಶಕ ನಾದಬ್ರಹ್ಮ ಹಂಸಲೇಖ ವಿರುದ್ಧವೂ ಗಂಭೀರ ಆರೋಪ ಮಾಡಿದ್ದಾರೆ. ʻನಿಜವಾದ ನಾದಬ್ರಹ್ಮ ವಿಠಲ ಒಬ್ಬನೇ. ನಮ್ಮಲ್ಲಿ ಕೆಲವರಿಗೆ ಏನೋನೋ ಬಿರುದು ಕೊಡುತ್ತಾರೆ. ಏನು ಕೊಡಬೇಕು ಎಂದೇ ಅರ್ಥ ಆಗಲ್ಲʼʼಎಂದು ನೇರವಾಗಿಯೇ ಹೇಳಿದ್ದಾರೆ.

VISTARANEWS.COM


on

Hamsalekha NadaBrahma' has no meaning, Shankar Shanubhag sparks against Hansalekha
Koo

ಬೆಂಗಳೂರು: ಖ್ಯಾತ ಹಿಂದೂಸ್ತಾನಿ ಗಾಯಕ ಶಂಕರ್ ಶಾನುಭಾಗ್ ದೇಶ-ವಿದೇಶಗಳಲ್ಲಿ ಸಂಗೀತ ಕಾರ್ಯಕ್ರಮಗಳನ್ನು ಕೊಟ್ಟು ಜನಪ್ರಿಯರಾಗಿದ್ದಾರೆ. ಆದರೆ, ಆರಂಭದ ದಿನಗಳಲ್ಲಿ ಸಿನಿಮಾದ ಸಂಗೀತ ನಿರ್ದೇಶಕರೊಂದಿಗೂ ಕೆಲಸ ಮಾಡಿದ್ದರು. ಆ ವೇಳೆ ತಮಗೆ ಮೋಸ ಆಗಿದೆ ಎಂದು ಎಂದು ಸಂದರ್ಶನವೊಂದರಲ್ಲಿ ಹೇಳಿಕೊಂಡಿದ್ದಾರೆ. ಇದೇ ವೇಳೆ ಖ್ಯಾತ ಸಂಗೀತ ನಿರ್ದೇಶಕ ನಾದಬ್ರಹ್ಮ ಹಂಸಲೇಖ (Hamsalekha) ವಿರುದ್ಧವೂ ಗಂಭೀರ ಆರೋಪ ಮಾಡಿದ್ದಾರೆ. ʻನಿಜವಾದ ನಾದಬ್ರಹ್ಮ ವಿಠಲ ಒಬ್ಬನೇ. ನಮ್ಮಲ್ಲಿ ಕೆಲವರಿಗೆ ಏನೋನೋ ಬಿರುದು ಕೊಡುತ್ತಾರೆ. ಏನು ಕೊಡಬೇಕು ಎಂದೇ ಅರ್ಥ ಆಗಲ್ಲʼʼಎಂದು ನೇರವಾಗಿಯೇ ಹೇಳಿದ್ದಾರೆ.

ಈ ಬಗ್ಗೆ ಗಾಯಕ ಶಂಕರ್ ಶಾನುಭಾಗ್ ಮಾತನಾಡಿ ʻʻಹಂಸಲೇಖ ಅವರಿಗೆ ಹೆಚ್ಚು ಕಡಿಮೆ ನಾನು 8-10 ಹಾಡುಗಳನ್ನು ಹಾಡಿದ್ದೆ. ಆದರೆ ಪೇಮೆಂಟ್‌ ಬಂದಿರಲಿಲ್ಲ. ತುಂಬ ಸಲ ಅವರ ಮುಂದೆ ಹೋಗಿ ನಿಂತೆ. ಅದು ಅಲ್ಲದೇ ಆಗ ತುಂಬ ತೊಂದರೆಯಲ್ಲಿದ್ದೆ. ಆಗ ತಂಗಿಯರ ಮದುವೆ ಬೇರೆ ಮಾಡಿಸಬೇಕಿತ್ತು.ಆಗ ಹಂಸಲೇಖರ ಬಳಿ ಪೇಮೆಂಟ್‌ ಕೇಳಿದಾಗ, ಕೊಟ್ರಾಯ್ತು ಕಣೋ! ಎನ್ನುತ್ತಿದ್ದರು. ಐದನೇ ಸಲ ಹೋದಾಗ, ಅವರ ಮೂಡ್‌ ಸರಿ ಇಲ್ಲ ಅನ್ಸತ್ತೆ.. ಎಷ್ಟು ಕೋಟಿ ಕೊಡಬೇಕೋ ನಿನಗೆ ಅಂದು ಬಿಡೋದಾ? ಆ ಮೇಲೆ ಕೈ ಮುಗಿದು ಅಲ್ಲಿಂದ ಬಂದು ಬಿಟ್ಟೆ ಎಂದರು.

ʻʻಮೊದಲನೇದಾಗಿ ನಾದಬ್ರಹ್ಮ ಎಂಬ ಪದಕ್ಕೆ ಅರ್ಥವೇ ಇಲ್ಲ. ನಿಜವಾದ ನಾದಬ್ರಹ್ಮ ವಿಠಲ ಒಬ್ಬನೇ. ನಮ್ಮಲ್ಲಿ ಕೆಲವರಿಗೆ ಏನೋನೋ ಬಿರುದು ಕೊಡುತ್ತಾರೆ. ಏನು ಕೊಡಬೇಕು ಎಂದೇ ಅರ್ಥ ಆಗಲ್ಲ. ಆದರೆ ಅದನ್ನ ಸ್ವೀಕರಿಸುತ್ತಾರಲ್ಲ…! ಇದು ನಮ್ಮ ಚಲನಚಿತ್ರದ ದುರಂತಗಳು. ಕನ್ನಡದಲ್ಲಿ ಅಸಂಖ್ಯಾತ ಪ್ರತಿಭೆಗಳಿವೆ. ಒಳ್ಳೆಯ ಹಾಡುಗಾರರಿದ್ದಾರೆ. ತುಂಬ ಜನ ಇದ್ದಾರೆ. ಇದೀಗ ಸಂಗೀತ ಕಲಿಯಬೇಕು ಎಂತಿಲ್ಲ. ಯಾರು ಬೇಕಾದರೂ ಹಾಡುತ್ತಾರೆ. ಈ ರಿಯಾಲಿಟಿ ಶೋ ದುರಂತ ಒಂದೆರಡಲ್ಲ. ಏಳೇಳು ಜನುಮದ ಲವ್‌ ಮ್ಯೂಸಿಕ್‌ ಡೈರಕ್ಟರ್‌ ವಿ ಮನೋಹರ್‌. ಈ ಹಾಡಿನ ಟ್ರ್ಯಾಕ್‌ ಹಾಡಿದ್ದು ನಾನು. ಅದನ್ನ ಒಂದು ರಿಯಾಲಿಟಿ ಶೋನಲ್ಲಿ ಒಬ್ಬರು ಹಾಡಿದ್ದರು. ʻಮಹಾಗುರುಗಳುʼ , ಹಾಡು ಮುಗಿದ ಮೇಲೆ ಕಮೆಂಟ್‌ ಮಾಡಿದ್ದು ಹೀಗೆ. ಫ್ರಿ ಬಿಟ್ಟು ಬಿಟ್ಟೆ ಹಾಡು ಅಂತ ಎಂದು ಹಸಿ ಸುಳ್ಳು ಹೇಳುತ್ತಾರೆ. ಆ ಸಮಯದಲ್ಲಿ ಅವರು ಇರಲೇ ಇಲ್ಲ. ಬೇರೆಯವರು ಮಾಡಿದ್ದನ್ನು ನಾನು ಮಾಡಿದೆ ಎಂದು ಹಸಿ ಸುಳ್ಳು ಹೇಳುತ್ತಾರೆ. ಆ ಹಾಡಿನ ಕ್ರೆಡಿಟ್‌ ವಿ ಮನೋಹರ್‌ಗೆ ಹೋಗಬೇಕುʼʼಎಂದರು.

ಇದನ್ನೂ ಓದಿ: Music Composer Hamsalekha : ಜೈನ ಫಿಲಾಸಫಿ ಬುಲ್‌‌ಶಿಟ್ ಎಂದು ಅವಮಾನಿಸಿದ ಹಂಸಲೇಖ ಈಗ ಕ್ಷಮಿಸಿ ಅಂತಿದ್ದಾರೆ!

ಇದನ್ನೂ ಓದಿ: Kannada New Movie: ʼಜೀನಿಯಸ್ ಮುತ್ತʼನಿಗೆ ಸಾಥ್ ನೀಡಿದ ʼಚಿನ್ನಾರಿ ಮುತ್ತʼ; ಆಗಸ್ಟ್‌ನಲ್ಲಿ ಸಿನಿಮಾ ರಿಲೀಸ್‌

ಸಂಗೀತ ನಿರ್ದೇಶಕ ಮನೋರಂಜನ್ ಪ್ರಭಾಕರ್ ಅವರ ಬಗ್ಗೆನೂ ಗಂಭೀರ ಆರೋಪ ಮಾಡಿದ್ದಾರೆ. ಅವಕಾಶಕ್ಕಾಗಿ ಅವರ ಕಾಲು ಹಿಡಿದು ಜಾಡಿಸಿ ಒದ್ದರು ನನಗೆ ಎಂದು ಇದೇ ಸಂದರ್ಶನದಲ್ಲಿ ಹೇಳಿದ್ದಾರೆ. ಹಾಗೇ ಮತ್ತೊಬ್ಬ ಸಂಗೀತ ನಿರ್ದೇಶಕ ಮೈಸೂರು ಮೋಹನ್ ಅವರ ಕೂಡ ಮೋಸ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ. ‘ನಂಜುಂಡ’ ಸಿನಿಮಾಗಾಗಿ ಇವರೊಂದಿಗೆ ಒಂದು ತಿಂಗಳು ಕೆಲಸ ಮಾಡಿದ್ದಾಗಿ ಹೇಳಿಕೊಂಡಿದ್ದಾರೆ. ಆರು ಸಾಂಗ್‌ಗಳಿಗೆ ಟ್ರ್ಯಾಕ್ ಮತ್ತು ಕೋರಸ್ ಹಾಡಿದ್ದರೂ ಇದೂವರೆಗೂ ಒಂದು ರೂಪಾಯಿ ಪೇಮೆಂಟ್ ಕೂಡ ಬಂದಿಲ್ಲ ಎಂದಿದ್ದಾರೆ. ವಿ ಮನೋಹರ್‌ ಮಾತ್ರ ಕಲಾವಿದರ ಮೇಲೆ ಹೊಟ್ಟೆ ಮೇಲೆ ಹೊಡಿಯುವ ಕೆಲಸ ಮಾಡಿಲ್ಲ ಎಂದು ಹೇಳಿದರು.

Continue Reading
Advertisement
Kargil Vijay Diwas 2024
ದೇಶ9 mins ago

Kargil Vijay Diwas 2024: ಕಾರ್ಗಿಲ್ ಯುದ್ಧದಲ್ಲಿ ನಿರ್ಣಾಯಕವಾಗಿದ್ದ ಟೈಗರ್ ಹಿಲ್; 19 ವರ್ಷದ ಯೋಧನ ರೋಚಕ ಸಾಹಸ!

Apple iPhones
ಗ್ಯಾಜೆಟ್ಸ್11 mins ago

Apple iPhones: ಆ್ಯಪಲ್‌ ಬ್ರ್ಯಾಂಡ್‌ ಪ್ರಿಯರಿಗೆ ಗುಡ್‌ನ್ಯೂಸ್;‌ ಐಫೋನ್‌ಗಳ ಬೆಲೆಯಲ್ಲಿ ಗಣನೀಯ ಇಳಿಕೆ

ಕರ್ನಾಟಕ12 mins ago

PU Lecturer Recruitment: ಪ್ರೌಢಶಾಲಾ ಶಿಕ್ಷಕರು ಪಿಯು ಕಾಲೇಜಿಗೆ ಬಡ್ತಿ ಪಡೆಯಲು ಅರ್ಹತಾ ಅಂಕ ಶೇ.50ಕ್ಕೆ ಇಳಿಕೆ

karnataka rain
ಮಳೆ20 mins ago

Karnataka Rain : ಉಕ್ಕಿ ಹರಿಯುವ ನೇತ್ರಾವತಿ ನದಿಯಲ್ಲಿ ತೇಲಿ ಬಂದ ಜೀವಂತ ಹಸು

PARIS OLYMPICS 2024
ಪ್ರಮುಖ ಸುದ್ದಿ30 mins ago

PARIS OLYMPICS 2024 : ಪ್ಯಾರಿಸ್ ಒಲಿಂಪಿಕ್ಸ್​​ ಗ್ರಾಮದಲ್ಲೇ ಮದುವೆ ನಿಶ್ಚಿತಾರ್ಥ ಮಾಡಿಕೊಂಡ ಅಥ್ಲೀಟ್​ಗಳು

Stock Market
ವಾಣಿಜ್ಯ31 mins ago

Stock Market: ಷೇರು ಮಾರುಕಟ್ಟೆಗೆ ಶುಭ ಶುಕ್ರವಾರ; ಹೂಡಿಕೆದಾರರಿಗೆ 7 ಲಕ್ಷ ಕೋಟಿ ರೂ. ಭರ್ಜರಿ ಲಾಭ!

Shubman Gill
ಕ್ರೀಡೆ46 mins ago

Shubman Gill: ಬಾಂಗ್ಲಾ ವಿರುದ್ಧದ ಟೆಸ್ಟ್​ ಸರಣಿಗೆ ಶುಭಮನ್​ ಗಿಲ್​ ಉಪನಾಯಕ!

Kannada New Movie Parapancha Gama Gama Powder song out
ಸ್ಯಾಂಡಲ್ ವುಡ್1 hour ago

Kannada New Movie: “ಪೌಡರ್” ತಂಡದಿಂದ ಹೊರ ಬಿತ್ತು ಹೊಸ ಹಾಡು; “ಪರಪಂಚವೇ ಘಮ ಘಮ”!

No cases of Nipah virus have been detected in the state says Minister Dinesh Gundurao
ಕರ್ನಾಟಕ1 hour ago

Dengue Fever: ರಾಜ್ಯದಲ್ಲಿ ನಿಫಾ ವೈರಸ್ ಪ್ರಕರಣ ಪತ್ತೆಯಾಗಿಲ್ಲ: ದಿನೇಶ್ ಗುಂಡೂರಾವ್

Kampli Gangavathi link bridge inundation fear
ಬಳ್ಳಾರಿ1 hour ago

Ballari News: ಕಂಪ್ಲಿ-ಗಂಗಾವತಿ ಸಂಪರ್ಕ ಸೇತುವೆ ಮುಳುಗಡೆ ಭೀತಿ; ಸಂಚಾರಕ್ಕೆ ನಿರ್ಬಂಧ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka rain
ಮಳೆ20 mins ago

Karnataka Rain : ಉಕ್ಕಿ ಹರಿಯುವ ನೇತ್ರಾವತಿ ನದಿಯಲ್ಲಿ ತೇಲಿ ಬಂದ ಜೀವಂತ ಹಸು

Karnataka Rain
ಮಳೆ1 hour ago

Karnataka Rain: ವಿದ್ಯುತ್‌ ದುರಸ್ತಿಗಾಗಿ ಪ್ರಾಣದ ಹಂಗು ತೊರೆದು ಉಕ್ಕಿ ಹರಿಯುವ ನೀರಿಗೆ ಧುಮುಕಿದ ಲೈನ್‌ ಮ್ಯಾನ್‌!

Karnataka rain
ಮಳೆ2 hours ago

Karnataka Rain : ಹಾಸನದಲ್ಲಿ ಹೇಮಾವತಿ, ಚಿಕ್ಕಮಗಳೂರಲ್ಲಿ ಭದ್ರೆಯ ಅಬ್ಬರಕ್ಕೆ ಜನರು ತತ್ತರ

karnataka Rain
ಮಳೆ1 day ago

Karnataka Rain : ಮನೆಯೊಳಗೆ ನುಗ್ಗಿದ ಮಳೆ ನೀರು; ಕಾಲು ಜಾರಿ ಬಿದ್ದು ವೃದ್ಧೆ ಸಾವು

Actor Darshan
ಸ್ಯಾಂಡಲ್ ವುಡ್1 day ago

Actor Darshan: ನಟ ದರ್ಶನ್ ಇರುವ ಜೈಲು ಕೋಣೆ ಹೇಗಿದೆ?

Actor Darshan
ಸಿನಿಮಾ1 day ago

Actor Darshan : ಹೆಂಡ್ತಿ ಮಕ್ಕಳೊಟ್ಟಿಗೆ ಚೆನ್ನಾಗಿರು.. ಸಹಕೈದಿ ಜತೆಗೆ 12 ನಿಮಿಷ ಕಳೆದ ನಟ ದರ್ಶನ್‌

Actor Darshan
ಸಿನಿಮಾ1 day ago

Actor Darshan: ಆಧ್ಯಾತ್ಮದತ್ತ ವಾಲಿದ ದರ್ಶನ್‌; ಜೈಲಲ್ಲಿ ಹೇಗಿದೆ ಗೊತ್ತಾ ನಟನ ಬದುಕು

karnataka Weather Forecast
ಮಳೆ2 days ago

Karnataka Weather : ರಭಸವಾಗಿ ಸುರಿಯುವ ಮಳೆ; 50 ಕಿ.ಮೀ ವೇಗದಲ್ಲಿ ಬೀಸುತ್ತೆ ಗಾಳಿ

karnataka weather Forecast
ಮಳೆ3 days ago

Karnataka Weather : ರಾಜ್ಯದಲ್ಲಿ ಮುಂದುವರಿದ ಮಳೆ ಅವಾಂತರ; ನಾಳೆಯೂ ಇರಲಿದೆ ಅಬ್ಬರ

Udupi News
ಉಡುಪಿ3 days ago

Udupi News : ಹಳೆ ಲಾರಿ ಚಾಸ್ಸಿಯಲ್ಲೇ ಕಿರು ಸೇತುವೆ ನಿರ್ಮಾಣ! ಬೈಂದೂರು ಶಾಸಕರ ಪರಿಕಲ್ಪನೆಗೆ ಜನರು ಫಿದಾ

ಟ್ರೆಂಡಿಂಗ್‌