Kannada New Movie: ʼಜೀನಿಯಸ್ ಮುತ್ತʼನಿಗೆ ಸಾಥ್ ನೀಡಿದ ʼಚಿನ್ನಾರಿ ಮುತ್ತʼ; ಆಗಸ್ಟ್‌ನಲ್ಲಿ ಸಿನಿಮಾ ರಿಲೀಸ್‌ - Vistara News

ಕರ್ನಾಟಕ

Kannada New Movie: ʼಜೀನಿಯಸ್ ಮುತ್ತʼನಿಗೆ ಸಾಥ್ ನೀಡಿದ ʼಚಿನ್ನಾರಿ ಮುತ್ತʼ; ಆಗಸ್ಟ್‌ನಲ್ಲಿ ಸಿನಿಮಾ ರಿಲೀಸ್‌

Kannada New Movie: ನಾಗಿಣಿ ಭರಣ ನಿರ್ದೇಶನದ ಮೊದಲ ಚಿತ್ರ “ಜೀನಿಯಸ್ ಮುತ್ತ” ತೆರೆಗೆ ಬರಲು ಸಿದ್ಧವಾಗಿದೆ. ಆಗಸ್ಟ್‌ನಲ್ಲಿ ಚಿತ್ರ ತೆರೆಗೆ ಬರಲಿದ್ದು, ಜಿ.ಎಸ್ ಲತಾ ಜೈಪ್ರಕಾಶ್ ನಿರ್ಮಾಣದ ಈ ಚಿತ್ರದಲ್ಲಿ “ಜೀನಿಯಸ್ ಮುತ್ತ” ನಾಗಿ ಮಾಸ್ಟರ್ ಶ್ರೇಯಸ್ಸ್ ಜೈಪ್ರಕಾಶ್ ನಟಿಸಿದ್ದಾರೆ. ವಿಶೇಷ ಪಾತ್ರದಲ್ಲಿ “ಚಿನ್ನಾರಿಮುತ್ತ”ನಾಗಿ ಮೆಚ್ಚುಗೆ ಪಡೆದಿರುವ ವಿಜಯ ರಾಘವೇಂದ್ರ ಅಭಿನಯಿಸಿದ್ದಾರೆ.

VISTARANEWS.COM


on

Genius Mutta Kannada movie release in August
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಖ್ಯಾತ ನಿರ್ದೇಶಕ ಟಿ.ಎಸ್. ನಾಗಾಭರಣ ಅವರ ಪತ್ನಿ ನಾಗಿಣಿ ಭರಣ ನಿರ್ದೇಶನದ ಮೊದಲ ಚಿತ್ರ “ಜೀನಿಯಸ್ ಮುತ್ತ” ತೆರೆಗೆ ಬರಲು ಸಿದ್ಧವಾಗಿದೆ. ಆಗಸ್ಟ್‌ನಲ್ಲಿ ಚಿತ್ರ (Kannada New Movie) ತೆರೆಗೆ ಬರಲಿದೆ. ಜಿ.ಎಸ್ ಲತಾ ಜೈಪ್ರಕಾಶ್ ನಿರ್ಮಾಣದ ಈ ಚಿತ್ರದಲ್ಲಿ “ಜೀನಿಯಸ್ ಮುತ್ತ” ನಾಗಿ ಮಾಸ್ಟರ್ ಶ್ರೇಯಸ್ಸ್ ಜೈಪ್ರಕಾಶ್ ನಟಿಸಿದ್ದಾರೆ. ವಿಶೇಷ ಪಾತ್ರದಲ್ಲಿ “ಚಿನ್ನಾರಿಮುತ್ತ” ನಾಗಿ ಮೆಚ್ಚುಗೆ ಪಡೆದಿರುವ ವಿಜಯ ರಾಘವೇಂದ್ರ ಅಭಿನಯಿಸಿದ್ದಾರೆ.

ಈ ಚಿತ್ರದ ಕುರಿತು ಹೆಚ್ಚಿನ ಮಾಹಿತಿ ನೀಡಲು ಚಿತ್ರತಂಡ ಏರ್ಪಡಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ನಿರ್ದೇಶಕಿ ನಾಗಿಣಿ ಭರಣ, ನನಗೆ ಹಲವು ವರ್ಷಗಳಿಂದ ನಿರ್ದೇಶನ ಮಾಡುವಂತೆ ಎಲ್ಲರೂ ಹೇಳುತ್ತಿದ್ದರು, ಆಗಿರಲಿಲ್ಲ. ಆದರೆ ಲತಾ ಅವರು ತಮ್ಮ ಮಗನನ್ನು ಚಿತ್ರರಂಗಕ್ಕೆ ಪ್ರವೇಶಿಸಬೇಕೆಂದು ಕೊಂಡಿದ್ದೇನೆ. ಆ ಚಿತ್ರವನ್ನು ನೀವೇ ನಿರ್ದೇಶಿಸಬೇಕೆಂದರು. ಅವರ ಒತ್ತಾಯಕ್ಕೆ ಮಣಿದು ನನ್ನ ಸ್ನೇಹಿತರ ತಂಡದೊಂದಿಗೆ ಸೇರಿ ಈ ಚಿತ್ರದ ಕಥೆ ಸಿದ್ಧ ಮಾಡಿದೆ.

ವಿಭಿನ್ನ ಕಥಾಹಂದರ ಹೊಂದಿರುವ ಈ ಚಿತ್ರದ ಚಿತ್ರೀಕರಣ ಹೆಚ್ಚಾಗಿ ಬಿಳಿಗಿರಿರಂಗನ ಬೆಟ್ಟದಲ್ಲಿ ನಡೆದಿದೆ. ಮಾಸ್ಟರ್ ಶ್ರೇಯಸ್ಸ್, ವಿಜಯ ರಾಘವೇಂದ್ರ, ಟಿ.ಎಸ್. ನಾಗಾಭರಣ, ಗಿರಿಜಾ ಲೋಕೇಶ್, ಸುಂದರರಾಜ್, ಪನ್ನಗಾಭರಣ ಮುಂತಾದವರು ಚಿತ್ರದಲ್ಲಿ ನಟಿಸಿದ್ದಾರೆ. ಈಗಾಗಲೇ ಒಂದು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಹಾಗೂ ವಿದೇಶಗಳಲ್ಲಿ ನಮ್ಮ ಚಿತ್ರದ ಪ್ರದರ್ಶನವಾಗಿದೆ. ನೋಡಿದವರು ಮೆಚ್ಚುಗೆ ಮಾತುಗಳಾಡಿದ್ದಾರೆ. ಆಗಸ್ಟ್‌ನಲ್ಲಿ ಚಿತ್ರವನ್ನು ತೆರೆಗೆ ತರುವ ಪ್ರಯತ್ನ ನಡೆಯುತ್ತಿದೆ ಎಂದು ನಿರ್ದೇಶಕಿ ನಾಗಿಣಿ ಭರಣ ತಿಳಿಸಿದರು.

ಇದನ್ನೂ ಓದಿ: Rain in Karnataka: ಬೆಳಗಾವಿಯಲ್ಲಿ ನಗರದೊಳಗೆ ಬಂದ ನದಿಗಳು, ಮನೆ ಖಾಲಿ ಮಾಡಿದ ಜನ

ನಾಗಿಣಿ ಅವರು ಈಗ ಸ್ವತಂತ್ರ ನಿರ್ದೇಶನ ಮಾಡಿದರಷ್ಟೇ. ಆದರೆ ನನ್ನ ಎಲ್ಲಾ ಸಿನಿಮಾ, ಧಾರಾವಾಹಿಗಳ ನಿರ್ದೇಶನಕ್ಕೆ ಹಿಂದಿನಿಂದ ಸಹಕಾರ ನೀಡುತ್ತಿದ್ದರು. ಈಗ ಮೊದಲ ಚಿತ್ರ ನಿರ್ದೇಶನ ಮಾಡಿದ್ದಾರೆ. ನಾನು ಈ ಚಿತ್ರದಲ್ಲಿ ಪುಟ್ಟ ಪಾತ್ರ ಮಾಡಿದ್ದೇನೆ ಎಂದರು ಟಿ.ಎಸ್ ನಾಗಾಭರಣ.

ನಾನು ಭರಣ ಸರ್ ಅವರ ಬಳಿ ನಟನೆ ಕಲಿತಿದ್ದೇನೆ. ಆನಂತರ ಅಮ್ಮನಿಗೆ ನಾನು ನಟಿಸಬೇಕೆಂದು ಆಸೆಯಾಯಿತು. ಈ ಚಿತ್ರದಲ್ಲಿ “ಜೀನಿಯಸ್ ಮುತ್ತ” ನಾಗಿ ಅಭಿನಯಿಸಿದ್ದೇನೆ. ಅವಕಾಶ ನೀಡಿದ ಅಮ್ಮನಿಗೆ ಹಾಗೂ ಸಹಕಾರ ನೀಡಿದ ಚಿತ್ರತಂಡಕ್ಕೆ ಧನ್ಯವಾದ ತಿಳಿಸುತ್ತೇನೆ ಎಂದರು ಮಾಸ್ಟರ್ ಶ್ರೇಯಸ್ಸ್.

ನಾನು ಯಾವಾಗಲೂ ನಾಗಾಭರಣ್ ಸರ್ ಅವರಿಗೆ ಆಬಾರಿ. ಏಕೆಂದರೆ ನನ್ನನ್ನು ಎಲ್ಲರು ವಿಜಯ ರಾಘವೇಂದ್ರ ಅನ್ನುವುದಕ್ಕಿಂತ ಚಿನ್ನಾರಿಮುತ್ತ ಎನ್ನುವುದೇ ಹೆಚ್ಚು. ಅಂತಹ ಸೂಪರ್ ಹಿಟ್ ಚಿತ್ರದಲ್ಲಿ ನಟಿಸಲು ನನಗೆ ಅವಕಾಶ ನೀಡಿದವರು ನಾಗಾಭರಣ್ ಸರ್. ಈಗ ನಾಗಿಣಿ ಭರಣ ಅವರ ಮೊದಲ ನಿರ್ದೇಶನದಲ್ಲೂ ನಾನು ನಟಿಸಿರುವುದು ಖುಷಿಯಾಗಿದೆ ಎಂದು ವಿಜಯ ರಾಘವೇಂದ್ರ ತಿಳಿಸಿದರು.

ನಾಗಿಣಿ ಭರಣ ಅವರು ನನಗೆ ಹತ್ತು ವರ್ಷಗಳ ಪರಿಚಯ. ನನ್ನ ಮಗನಿಗಾಗಿ ಒಂದೊಳ್ಳೆ ಕಥೆ ಮಾಡಿ ನೀವೇ ನಿರ್ದೇಶನ ಮಾಡಬೇಕೆಂದು ನಾಗಿಣಿ ಭರಣ ಅವರ ಬಳಿ ಹೇಳಿದೆ. ಅವರು ಒಳ್ಳೆಯ ಕಥೆ ಸಿದ್ದ ಮಾಡಿಕೊಂಡು ನನಗೆ ಕಥೆ ಹೇಳಿದರು. ನಂತರ “ಜೀನಿಯಸ್ ಮುತ್ತ” ಚಿತ್ರ ಆರಂಭವಾಯಿತು. ಈಗ ಬಿಡುಗಡೆ ಹಂತ ತಲುಲಿದೆ. ನಮ್ಮ ಚಿತ್ರಕ್ಕೆ ನಿಮ್ಮ ಪ್ರೋತ್ಸಾಹವಿರಲಿ ಎಂದರು ನಿರ್ಮಾಪಕಿ ಲತಾ ಜೈಪ್ರಕಾಶ್.

ಇದನ್ನೂ ಓದಿ: Samsung Galaxy: ಎಐ ಆಧರಿತ ಗ್ಯಾಲಕ್ಸಿ ಝಡ್ ಫೋಲ್ಡ್ 6, ಝಡ್ ಫ್ಲಿಪ್6 ಹೇಗಿದೆ? ದರ ಎಷ್ಟು?

ಚಿತ್ರದಲ್ಲಿ ನಟಿಸಿರುವ ಗಿರಿಜಾ ಲೋಕೇಶ್, ಪನ್ನಗಾಭರಣ ತಮ್ಮ ಪಾತ್ರದ ಬಗ್ಗೆ ಮಾತನಾಡಿದರು. ಸಂಗೀತದ ಬಗ್ಗೆ ಬಾಪು ಪದ್ಮನಾಭ ಮಾಹಿತಿ ನೀಡಿದರು. ಚಿತ್ರತಂಡದ ಅನೇಕ ಸದಸ್ಯರು ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Martin Movie: ವಿಎಫ್‌ಎಕ್ಸ್‌ಗೆ 50 ಲಕ್ಷ ಕಮಿಷನ್‌ ಆರೋಪ; ʻಮಾರ್ಟಿನ್‌ʼ ನಿರ್ದೇಶಕ ಎ.ಪಿ. ಅರ್ಜುನ್‌ಗೆ ಸಂಕಷ್ಟ!

Martin Movie: ಧ್ರುವ ಸರ್ಜಾ ಅಭಿನಯದ ʻಮಾರ್ಟಿನ್‌ʼ ಸಿನಿಮಾ ಶೂಟಿಂಗ್‌ ಆರಂಭವಾಗಿ ಮೂರು ವರ್ಷವಾದರೂ ಮುಗಿಯುವುದು ನಾನಾ ಕಾರಣಕ್ಕೆ ತಡವಾಗುತ್ತಲೇ ಬಂದಿದೆ. ಇದೀಗ ಚಿತ್ರದ ವಿಎಫ್‌ಎಕ್ಸ್‌ಗಾಗಿ ನಿರ್ದೇಶಕ ಎ.ಪಿ. ಅರ್ಜುನ್‌ 50 ಲಕ್ಷ ರೂ. ಕಮಿಷನ್‌ ಪಡೆದಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿದೆ.

VISTARANEWS.COM


on

Martin Movie
Koo

ಬೆಂಗಳೂರು: ಧ್ರುವ ಸರ್ಜಾ (Dhruva Sarja) ಅಭಿನಯದ ʻಮಾರ್ಟಿನ್‌ʼ ಸಿನಿಮಾ ಬಿಡುಗಡೆಗೆ ಸಜ್ಜಾಗಿರುವ ನಡುವೆ ಚಿತ್ರ ನಿರ್ದೇಶಕ ಎ.ಪಿ. ಅರ್ಜುನ್‌ಗೆ ಸಂಕಷ್ಟ ಎದುರಾಗಿದೆ. ಚಿತ್ರದ ವಿಎಫ್‌ಎಕ್ಸ್‌ಗಾಗಿ ಡಿಜಿಟಲ್ ಟೆರೇನ್ ಪ್ರೊಡಕ್ಷನ್ ಪ್ರೈ. ಲಿಮಿಟೆಡ್ ಕಂಪನಿಗೆ ನಿರ್ಮಾಪಕ ನೀಡಿದ್ದ 2.5 ಕೋಟಿ ರೂ.ಗಳಲ್ಲಿ ನಿರ್ದೇಶಕ ಎ.ಪಿ. ಅರ್ಜುನ್‌ 50 ಲಕ್ಷ ರೂ. ಕಮಿಷನ್‌ ಪಡೆದಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಹೀಗಾಗಿ ನಿರ್ದೇಶಕನ ಬಂಧನ ಸಾಧ್ಯತೆ ಇದೆ ಎಂಬ ಮಾತುಗಳು ಚಂದನವನದ ಅಂಗಳದಲ್ಲಿ ಕೇಳಿಬರುತ್ತಿವೆ.

ಅಕ್ಟೋಬರ್ 11ರಂದು 5 ಭಾಷೆಗಳಲ್ಲಿ ತೆರೆಗೆ ಬರಲಿರುವ ಈ ಚಿತ್ರಕ್ಕೆ ಧ್ರುವ ಸರ್ಜಾ ಅವರ ಸೋದರ ಮಾವ ಅರ್ಜುನ್‌ ಸರ್ಜಾ ಕತೆ ಕೊಟ್ಟು, ʻಮಾರ್ಟಿನ್‌ʼಗೆ ಬೆಂಬಲವಾಗಿ ನಿಂತಿದ್ದಾರೆ. ನಿರ್ಮಾಪಕ ಉದಯ್‌ ಮೆಹ್ತಾ ಸಾಕಷ್ಟು ಹಣ ಸುರಿದಿದ್ದಾರೆ. ಮೂರು ವರ್ಷವಾದರೂ ಸಿನಿಮಾ ನಾನಾ ಕಾರಣಕ್ಕೆ ತಡವಾಗುತ್ತಲೇ ಬಂತು. ಆ ಕಾರಣಗಳಲ್ಲಿ ಚಿತ್ರದ ವಿಎಫ್‌ಎಕ್ಸ್‌ ಕೆಲಸ ಕೂಡ ಒಂದು. ನಿರ್ಮಾಪಕ ಉದಯ್ ಮೆಹ್ತಾ ನಿರ್ದೇಶಕರ ಸೂಚನೆ ಮೇರೆಗೆ ಈ ಚಿತ್ರದ ವಿಎಫ್ಎಕ್ಸ್​ನ ಜವಾಬ್ಧಾರಿಗಳನ್ನೆಲ್ಲ ಡಿಜಿಟಲ್ ಟೆರೇನ್ ಪ್ರೊಡಕ್ಷನ್ ಪ್ರೈ. ಲಿಮಿಟೆಡ್ ಸಂಸ್ಥೆಗೆ ವಹಿಸಿದ್ದರು. ಆದರೆ ಅಲ್ಲಿ ಆಗಿದ್ದೇ ಬೇರೆ.

ಡಿಜಿಟಲ್ ಟೆರೇನ್ ಪ್ರೊಡಕ್ಷನ್ ಪ್ರೈ. ಲಿಮಿಟೆಡ್ ನ ಸತ್ಯ ರೆಡ್ಡಿ ಮತ್ತು ಸುನಿಲ್ ಕೇಳಿದಾಗೆಲ್ಲ ನಿರ್ಮಾಪಕ ಉದಯ್ ಮೆಹ್ತಾ ದುಡ್ಡು ಕೊಡುತ್ತಲೇ ಬಂದಿದ್ದರು. ಎರಡೂವರೆ ಕೋಟಿ ಹಣವನ್ನು ಈ ಸತ್ಯ ರೆಡ್ಡಿ ಮತ್ತು ಸುನಿಲ್ ಎಂಬುವರ ಮೇಲೆ ಸುರಿದರೂ ಕೆಲಸ ಮಾತ್ರ ಆಗಲಿಲ್ಲ. ಇತ್ತೀಚೆಗೆ ಹಣದ ವ್ಯವಹಾರದ ದಾಖಲೆ ಸಮೇತ ಬೆಂಗಳೂರಿನ ಬಸವೇಶ್ವರ ನಗರ ಠಾಣೆ ಮೆಟ್ಟಿಲೇರಿದ್ದ ನಿರ್ಮಾಪಕ ಉದಯ್ ಮೆಹ್ತಾ, ವಂಚಕರಾದ ಸತ್ಯ ರೆಡ್ಡಿ ಮತ್ತು ಸುನಿಲ್ ವಿರುದ್ದ ದೂರು ಸಲ್ಲಿಸಿದ್ದರು. ಆದರೆ, ಇದೀಗ ವಿಚಾರಣೆ ವೇಳೆ ನಿರ್ದೇಶಕ ಅರ್ಜುನ್‌ಗೆ ಕಮಿಷನ್ ನೀಡಿರುವುದಾಗಿ ಆರೋಪಿ ಸುನಿಲ್ ರೆಡ್ಡಿ ಹೇಳಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ | Samantha Ruth Prabhu: ಆ.1ಕ್ಕೆ ‘ಸಿಟಾಡೆಲ್’ ಬಿಗ್‌ ಅಪ್‌ಡೇಟ್‌ : ಸಮಂತಾ ಫ್ಯಾನ್ಸ್‌ಗೆ ಸಿಗಲಿದೆ ಗುಡ್‌ ನ್ಯೂಸ್‌!

ಉದಯ್ ಮೆಹ್ತಾ ನೀಡಿದ್ದ ದೂರು ಆಧರಿಸಿ ಕಾರ್ಯಾಚರಣೆ ನಡೆಸಿದ್ದ ಪೊಲೀಸರು ಸದ್ಯಕ್ಕೆ ಆಂಧ್ರಪ್ರದೇಶದ ವಿಶಾಖಪಟ್ಟಣದಲ್ಲಿ ತಲೆಮರೆಸಿಕೊಂಡಿದ್ದ ಸತ್ಯ ರೆಡ್ಡಿಯನ್ನು ಬಂಧಿಸಿದ್ದರು. ಆದರೆ, ವಿಎಫ್‌ಎಕ್ಸ್ ಕೆಲಸವನ್ನು ತಮಗೆ ನೀಡಲು ನೀಡಲು ಅರ್ಜುನ್ ನಮ್ಮಿಬ್ಬರಿಂದ 50 ಲಕ್ಷ ರೂ. ಕಮಿಷನ್ ಪಡೆದಿದ್ದಾರೆ ಎಂದು ಸುನಿಲ್ ಆರೋಪಿಸಿದ್ದಾರೆ. ಇನ್ನು ಅಕ್ಟೋಬರ್ 11ಕ್ಕೆ ವಿಶ್ವದಾದ್ಯಂತ ‘ಮಾರ್ಟಿನ್’ ಬಿಡುಗಡೆಗೆ ತಯಾರಿ ನಡೆದಿದ್ದು, ನಟ ಧ್ರುವ ಸರ್ಜಾ ಡಬ್ಬಿಂಗ್ ಮಾಡುವಾಗಲೂ ನಿರ್ದೇಶಕ ಅರ್ಜುನ್ ಗೈರಾಗಿದ್ದರು. ಈ ಹಿಂದೆಯೂ ಮಾರ್ಟಿನ್ ಚಿತ್ರತಂಡದಲ್ಲಿ ಮನಸ್ತಾಪಗಳಿವೆ ಎಂಬ ಮಾತುಗಳು ಕೇಳಿಬಂದಿದ್ದವು. ಇದೀಗ ನಿರ್ಮಾಪಕ ಉದಯ್ ಮೆಹ್ತಾ ಹಾಗೂ ನಿರ್ದೇಶಕ ಎ.ಪಿ. ಅರ್ಜುನ್ ನಡುವೆ ಭಿನ್ನಾಭಿಪ್ರಾಯ ಭುಗಿಲೆದ್ದಿದೆ ಎನ್ನಲಾಗಿದೆ.

ದರ್ಶನ್ ನಾಯಕನಾಗಿ ನಟಿಸಿದ ಐರಾವತ ಚಿತ್ರದ ಮೇಕಿಂಗ್ ಸೇರಿ ಅರ್ಜುನ್ ವಿರುದ್ಧ ಈ ಹಿಂದೆ ಇದೇ ರೀತಿಯ ಆರೋಪಗಳು ಕೇಳಿಬಂದಿತ್ತು. ಅರ್ಜುನ್ ಮತ್ತು ನಿರ್ಮಾಪಕ ಸಂದೇಶ್ ನಾಗರಾಜ್ ಮತ್ತು ದರ್ಶನ್ ನಡುವೆ ಭಿನ್ನಾಭಿಪ್ರಾಯದ ವದಂತಿಗಳು ಕೇಳಿಬಂದಿದ್ದವು.

ಇದನ್ನೂ ಓದಿ | Kannada New Movie: “ಪೌಡರ್” ತಂಡದಿಂದ ಹೊರ ಬಿತ್ತು ಹೊಸ ಹಾಡು; “ಪರಪಂಚವೇ ಘಮ ಘಮ”!

ಉದಯ್ ಮೆಹ್ತಾ, 2.5 ಕೋಟಿ ಲಾಸ್ ಆಗಿದ್ದಷ್ಟೇ ಅಲ್ಲದೇ ಸಿನಿಮಾ 6 ತಿಂಗಳಿಗೂ ಹೆಚ್ಚು ಕಾಲ ತಡವಾಗಿದೆ ಎಂದಿದ್ದರು. ಇಷ್ಟಾದರೂ ಇದೀಗ ಸಿನಿಮಾ ಅಕ್ಟೋಬರ್ 11ಕ್ಕೆ ಮಿಂಚಲು ರೆಡಿಯಾಗಿದೆ. ಮಾರ್ಟಿನ್ ಚಿತ್ರಕ್ಕೆ ಮಣಿ ಶರ್ಮಾ ಅವರ ಸಂಗೀತ ಮತ್ತು ಸತ್ಯ ಹೆಗಡೆ ಅವರ ಛಾಯಾಗ್ರಹಣವಿದೆ. ಮಾರ್ಟಿನ್‌ ಸಿನಿಮಾದಲ್ಲಿ ಕನ್ನಡದ ಕಲಾವಿದರ ಜತೆಗೆ ಹಿಂದಿ, ತೆಲುಗು, ತಮಿಳು ಚಿತ್ರರಂಗದ ಕಲಾವಿದರು ನಟಿಸಿದ್ದಾರೆ. ಅಚ್ಯುತ್‌ ಕುಮಾರ್‌, ನಿಕಿತನ್‌ ಧೀರ್‌, ನವಾಬ್‌ ಶಾ ಸೇರಿದಂತೆ ಹಲವರು ಪ್ರಮುಖ ಪಾತ್ರಗಳಲ್ಲಿದ್ದಾರೆ. ‘ಧೀರನ್‌ ಅಧಿಕಾರಂ ಒಂಡ್ರು’ತಮಿಳು ಚಿತ್ರದ ಮೂಲಕ ಗಮನ ಸೆಳೆದಿದ್ದ ನಟ ರೋಹಿತ್‌ ಪಾಠಕ್‌ ಸಹ ‘ಮಾರ್ಟಿನ್‌’ನಲ್ಲಿ ಬಹು ಮುಖ್ಯ ಪಾತ್ರವೊಂದರಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.

Continue Reading

ಕರ್ನಾಟಕ

Bengaluru Power Cut: ಜು.27, 28, 30ರಂದು ಬೆಂಗಳೂರಿನ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

Bengaluru Power Cut: ನಗರದ 220/66/11 ಕೆವಿ ಹೆಬ್ಬಾಳ ಕೇಂದ್ರದಲ್ಲಿ 220ಕೆವಿ ಸಹಕಾರ ನಗರ-ಮಾನ್ಯತಾ ಜಿಐಎಸ್-ಹೆಬ್ಬಾಳ ಮಾರ್ಗದ ಬಿ ಹಂತದ ಕೇಬಲ್ ಸರಿಪಡಿಸುವ ಕಾರ್ಯ ಕೈಗೊಳ್ಳುವ ಹಿನ್ನೆಲೆಯಲ್ಲಿ ಬೆಂಗಳೂರು (Bengaluru Power Cut) ನಗರದ ಹಲವೆಡೆ ಜು.27ರಂದು ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 3 ಗಂಟೆಯವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ಈ ಕುರಿತ ವಿವರ ಇಲ್ಲಿದೆ.

VISTARANEWS.COM


on

Bengaluru Power Cut July 27th 28th 30th power outage in many parts of bengaluru
Koo

ಬೆಂಗಳೂರು: ನಗರದ 220/66/11 ಕೆವಿ ಹೆಬ್ಬಾಳ ಕೇಂದ್ರದಲ್ಲಿ 220ಕೆವಿ ಸಹಕಾರ ನಗರ-ಮಾನ್ಯತಾ ಜಿಐಎಸ್-ಹೆಬ್ಬಾಳ ಮಾರ್ಗದ ಬಿ ಹಂತದ ಕೇಬಲ್ ಸರಿಪಡಿಸುವ ಕಾರ್ಯ ಕೈಗೊಳ್ಳುವ ಹಿನ್ನೆಲೆಯಲ್ಲಿ ಬೆಂಗಳೂರು (Bengaluru Power Cut) ನಗರದ ಹಲವೆಡೆ ಜು.27ರಂದು ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 3 ಗಂಟೆಯವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ಬೆಂಗಳೂರು ಉತ್ತರ ವೃತ್ತದ ಅಧೀಕ್ಷಕ ಎಂಜಿನಿಯರ್‌ ತಿಳಿಸಿದ್ದಾರೆ.

ವಿದ್ಯುತ್ ವ್ಯತ್ಯಯವಾಗುವ ಸ್ಥಳಗಳು

ನಗರದ ಗಂಗಾನಗರ, ಲಕ್ಷ್ಮಯ್ಯ ಬ್ಲಾಕ್, ವೀವರ್ ಕಾಲೋನಿ, ಸಿ.ಬಿ.ಐ ಕ್ವಾರ್ಟರ್ಸ್, ಆರ್.ಬಿ.ಐ ಕಾಲೋನಿ, ಸಿ.ಪಿ.ಯು ಬ್ಲಾಕ್, ಡಿ.ಜಿ.ಕ್ಯೂ ಕ್ವಾರ್ಟರ್ಸ್, ಮುನಿರಾಮಯ್ಯ ಬ್ಲಾಕ್, ಯು.ಎ.ಎಸ್ ಕ್ಯಾಂಪಸ್. ದಿನ್ನೂರ್ ಮುಖ್ಯ ರಸ್ತೆ, ಆರ್. ಟಿ ನಗರ, ಪಂಜಾಬ್ ನ್ಯಾಷನಲ್ ಬ್ಯಾಂಕ್, ಮುನನಪ್ಪಾ ಕಾಲೋನಿ, ಎಚ್.ಎಂ.ಟಿ ಬ್ಲಾಕ್, ಚಾಮುಂಡಿನಗರ, ಮಾಜಿ ಸೈನಿಕರ ಕಾಲೋನಿ, ಆರ್‌ಟಿ ನಗರ ಪೊಲೀಸ್ ಠಾಣಾ ಪ್ರದೇಶ, ಅಶ್ವಥ್‌ ನಗರ, ಡಾಲರ್ಸ್ ಕಾಲೋನಿ, ಎಂಎಲ್‌ಎ ಲೇಔಟ್, ರತನ್ ಅಪಾರ್ಟ್‌ಮೆಂಟ್, ಗಾಯತ್ರಿ ಅಪಾರ್ಟ್‌ಮೆಂಟ್, ಫುಡ್‌ವರ್ಲ್ಡ್ ಆರ್‌ಟಿ ನಗರ, ನೃಪತುಂಗ ಬಡಾವಣೆ, ಕೃಷ್ಣಪ್ಪ ಬ್ಲಾಕ್, ಸಿಬಿಐ ಮುಖ್ಯರಸ್ತೆ, ಎಂಎಲ್‌ಎ ಲೇಔಟ್‌ನ ಭಾಗಗಳು, ಶಾಂತಿಸಾಗರ ಮುಖ್ಯ ರಸ್ತೆ, ಆರ್‌ಟಿ ನಗರ, ವೇಣುಗೋಪಾಲ ಲೇಔಟ್, ಜಡ್ಜಸ್ ಕಾಲೋನಿ, 80′ ರಸ್ತೆ, ವಿಶ್ವೇಶ್ವರ ಬ್ಲಾಕ್, ಕರಿಯಣ್ಣ ಲೇಔಟ್, ಯೋಗೇಶ್ವರ ನಗರ, ರಿಂಗ್ ರೋಡ್, ಕುವೆಂಪು ಲೇಔಟ್, ನೇತಾಜಿ ನಗರ, ವಿನಾಯಕ ಲೇಔಟ್ 1ನೇ ಹಂತ, ಮುನಿಸ್ವಾಮಿ ಗೌಡ ಅಪಾರ್ಟ್‌ಮೆಂಟ್, ಸ್ಟಾರ್ಲಿಂಗ್ ಗಾರ್ಡನ್ ಲೇಔಟ್, ಐ.ವಿ.ಆರ್.ಐ, ಗಂಗಾನಗರ ಮಾರುಕಟ್ಟೆ, ಆಲ್ಪೈನ್ ಅಪಾರ್ಟ್‌ಮೆಂಟ್, ಜೈನ್ ಅಪಾರ್ಟ್‌ಮೆಂಟ್, ಸಿ 4 ಉಪವಿಭಾಗ ಕಚೇರಿ ಗಿಡ್ಡಪ್ಪ ಬ್ಲಾಕ್, ಚೋಳನಾಯಕನಹಳ್ಳಿ, ಎಜಿಎಸ್ ಕಾಲೋನಿ, ಎಸ್‌ಬಿಎಂ ಕಾಲೋನಿ, ವೇಣುಗೋಪಾಲರೆಡ್ಡಿ ಲೇಔಟ್, ವಿನಾಯಕ ಲೇಔಟ್, ಆನಂದಗಿರಿ ಎಕ್ಸ್‌ಟೆನ್ಸೆನ್, ಎಸ್‌ಎಸ್‌ಎ ರಸ್ತೆ, ಪೊಲೀಸ್ ಕ್ವಾರ್ಟರ್ಸ್, ಹೆಬ್ಬಾಳ, ಎಸ್‌ಎಸ್ ಬ್ಲಾಕ್, ಕೆಂಪಣ್ಣ ಲೇಔಟ್, ಗುಡ್ಡದಹಳ್ಳಿ ರಸ್ತೆ, ಸುಬ್ರಮಣಿ ಕಾಲೋನಿ, ಕುಂಟಿಗ್ರಾಮ. ಕೆಇಬಿ ಲೇಔಟ್, ಸಂಜಯನಗರ, ಎಇಸಿಎಸ್ ಲೇಔಟ್, , ಹೊಯ್ಸಳ ಅಪಾರ್ಟ್‌ಮೆಂಟ್, ಗೆದ್ದಲಹಳ್ಳಿ, ಅಶ್ವಥ್ ನಾಗರಸನ್ ಜಯನಗರ, ಭೂಪಸಂದ್ರ, ಸೆಂಟ್ರಲ್ ಎಕ್ಸೈಸ್ ಲೇಔಟ್, 60′ ರಸ್ತೆ, ಕಲ್ಪನಾ ಚಾವ್ಲಾ ರಸ್ತೆ, ಮೊಹಮ್ಮದ್ ಲೇಔಟ್, ವಿಎಸ್‌ಎನ್‌ಎಲ್ ವೈಟ್ ಹೌಸ್, ದಿನ್ನೂರ್ ರಸ್ತೆಯ ಭಾಗಗಳು, ಆರ್‌ಟಿ ಬ್ಲಾಕ್ ನಗರ. ಹಳ್ಳಿ, ಚೋಳನಗರ, ಎಂ.ಎಸ್.ಎಚ್ ಲೇಔಟ್, ಶ್ರೀಮತಿ ಲೇಔಟ್, ಅಮರಜ್ಯೋತಿ ಲೇಔಟ್, ಗುಂಡಪರೆಡ್ಡಿ ಲೇಔಟ್, ಚಿದಾನಂದರೆಡ್ಡಿ ಲೇಔಟ್ ಜಿ.ಓ ಸಾಯಿ ಸ್ಲಮ್, ಕೆಂಪಣ್ಣ ಲೇಔಟ್, ನೇತಾಜಿ ನಗರ, ಚಿನ್ನಮ್ಮ ಲೇಔಟ್, ಸೀತಪ್ಪ ಲೇಔಟ್, ಸಿಐಎಲ್ ಲೇಔಟ್, ಸನ್ರೈಸ್ ಕಾಲೋನಿ, ಮೈತ್ರಿ ಬಜಾರ್, ತಿಮ್ಮಕ್ಕ ಲೇಔಟ್, ಅಕ್ಕಯ್ಯಮ್ಮ ಲೇಔಟ್,, ಗುಡ್ಡದಹಳ್ಳಿ ವೃತ್ತ ಮತ್ತು ಸುತ್ತಮುತ್ತಲಿನ ಪ್ರದೇಶಗಳು.

ಇದನ್ನೂ ಓದಿ: Dengue Fever: ರಾಜ್ಯದಲ್ಲಿ ನಿಫಾ ವೈರಸ್ ಪ್ರಕರಣ ಪತ್ತೆಯಾಗಿಲ್ಲ: ದಿನೇಶ್ ಗುಂಡೂರಾವ್

66ಕೆ.ವಿ ಇ.ಪಿ.ಐ.ಪಿ-ಕಾಡಗೋಡಿ ಲೈನ್‌ನ ತುರ್ತು ನಿರ್ವಹಣಾ ಕಾರ್ಯ, ವಿದ್ಯುತ್‌ ವ್ಯತ್ಯಯ

ಬೆಂಗಳೂರು ನಗರದ 66ಕೆ.ವಿ ಇ.ಪಿ.ಐ.ಪಿ-ಕಾಡುಗೋಡಿ ಲೈನ್‌ನ ತುರ್ತು ನಿರ್ವಹಣಾ ಕಾರ್ಯ ಕೈಗೊಳ್ಳುವ ಹಿನ್ನೆಲೆಯಲ್ಲಿ ಬೆಂಗಳೂರು ನಗರದ ಹಲವೆಡೆ ಜು.28ರಂದು ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 4 ಗಂಟೆಯವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ಬೆಂಗಳೂರು ಪೂರ್ವ ವೃತ್ತದ ಅಧೀಕ್ಷಕ ಎಂಜಿನಿಯರ್‌ ತಿಳಿಸಿದ್ದಾರೆ.

ವಿದ್ಯುತ್ ವ್ಯತ್ಯಯವಾಗುವ ಸ್ಥಳಗಳು

ನಗರದ ಬೇಲತ್ತೂರು, ಅಯ್ಯಪ್ಪ ದೇವಾಲಯ, ಕುಂಬೇನಾ ಅಗ್ರಹಾರ, ಪಾಟಲಮ್ಮ ಲೇಔಟ್, ವಿಎಸ್ಆರ್ ಲೇಔಟ್, ಕಾಡುಗೋಡಿ, ಚನ್ನಸದ್ರ, ಎಫ್ಸಿಐ ಗೌಡನ್, ಸಫಲ್, ವಿಎಸ್ಆರ್ ಲೇಔಟ್, ಕಾಡುಗೋಡಿ, ಶಂಕರಪುರ, ಸಿದ್ಧಾರ್ಥ ಲೇಔಟ್, ಸಾಯಿ ಆಶ್ರಮ, ಬೆಳತ್ತೂರು, ಎಚ್‌ಡಿಎಫ್‌ಸಿ ಬ್ಯಾಂಕ್, ಕುಂಬೇನಾ ಅಗ್ರಹಾರ, ಅಲಾಂಬಿಕ್ ಆಪ್ಟ್, ಮಾರ್ವೆಲ್ ಆಪ್ಟ್, ಹಗದುರ್, ಬಿಯರ್ ಸ್ಟ್ರೀಟ್, ವೈಟ್‌ಫೀಲ್ಡ್ ಮುಖ್ಯ ರಸ್ತೆ, ಬ್ರೂಕ್ ಬಾಂಡ್, ಹಗದುರ್, ಹಗದುರ್ ಕೇನ್, ವಿನಾಯಕನಗರ, ವಿಜಯನಗರ, ಗಾಂಧಿಪುರ, ಇಮ್ಮಡಿಹಳ್ಳಿ ಮುಖ್ಯ ರಸ್ತೆ, ಹಗದುರ್, ನಾಗೊಂಡನಹಳ್ಳಿ, ನಾಗರಾಜ್ ಲೇಔಟ್, ದೋಬರಪಾಳ್ಯ, ಇಮ್ಮಡಿಹಳ್ಳಿ ಮತ್ತು ಸುತ್ತಮುತ್ತಲಿನ ಪ್ರದೇಶಗಳು.

66/11 ಕೆ.ವಿ. ಮಹಾಲಕ್ಷ್ಮಿಲೇಔಟ್ ಎಂ.ಯು.ಎಸ್.ಎಸ್. 66 ಕೆ.ವಿ. ಲೈನ್ ಬಸ್‌ನ ನಿರ್ವಾಹಣಾ ಕಾರ್ಯ, ವಿದ್ಯುತ್‌ ವ್ಯತ್ಯಯ

ಬೆಂಗಳೂರು ನಗರದ 66/11 ಕೆ.ವಿ. ಮಹಾಲಕ್ಷ್ಮಿ ಲೇಔಟ್ ಎಂ.ಯು.ಎಸ್.ಎಸ್. 66 ಕೆ.ವಿ. ಲೈನ್ ಬಸ್‌ನ ನಿರ್ವಾಹಣಾ ಕಾರ್ಯ ಕೈಗೊಳ್ಳುವ ಹಿನ್ನೆಲೆಯಲ್ಲಿ ಬೆಂಗಳೂರು ನಗರದ ಹಲವೆಡೆ ಜು.30ರಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ಬೆಂಗಳೂರು ಉತ್ತರ ವೃತ್ತದ ಅಧೀಕ್ಷಕ ಎಂಜಿನಿಯರ್‌ ತಿಳಿಸಿದ್ದಾರೆ.

ವಿದ್ಯುತ್ ವ್ಯತ್ಯಯವಾಗುವ ಸ್ಥಳಗಳು

ನಗರದ ಮಂಜುನಾಥ್ ನಗರ, ತಿಮ್ಮಯ್ಯ ರಸ್ತೆ, ಭೋವಿ ಕಾಲೋನಿ, ಮಹಾಗಣಪತಿ ನಗರ, ಪುಷ್ಪಾಂಜಲಿ ಅರ್ಪಾಟ್‌ಮೆಂಟ್, ಶಿವನಹಳ್ಳಿ ಪಾರ್ಕ್ ಆದರ್ಶನಗರ, ಆದರ್ಶ ಲೇಔಟ್, ಯುನಿಕ್ಸ್ ಕಾಲೋನಿ, ಇಂದಿರಾ ನಗರ, ಮಂಜುನಾಥ್ ನಗರ, 3ನೇ ಹಂತ, 1ನೇ ಬ್ಲಾಕ್, ಬಿ-ನಗರ ಲಕ್ಷ್ಮಿನಗರ, ಎಚ್.ವಿ.ಕೆ. ಲೇಔಟ್, ಕಿರ್ಲೋಸ್ಕರ್ ಕಾಲೋನಿ, ಕರ್ನಾಟಕ ಕಾಲೋನಿ, ಕಮಲನಗರ, ವಿ.ಜೆ.ಎಸ್.ಎಸ್.ಲೇಔಟ್, ವಾರ್ಡ್ ಆಫೀಸ್ ಸುತ್ತಮುತ್ತಲಿನ ಪ್ರದೇಶ, ಗೃಹಲಕ್ಷ್ಮಿ ಲೇಔಟ್ 1ನೇ ಹಂತ, ನಾಗಪುರ, ಮಹಾಲಕ್ಷ್ಮಿಪುರಂ, ಮೋದಿ ಹಾಸ್ಪಿಟಲ್ ರಸ್ತೆ, ಪಂಜಾಬ್ ನ್ಯಾಷನಲ್ ಬ್ಯಾಂಕ ರಸ್ತೆ, ಹಂಸಲೇಖ ಮನೇ ಸುತ್ತ ಮುತ್ತ, ಶಂಕರ್ ಮಠ, ಪೈಪ್ ಲೈನ್ ರಸ್ತೆ, ಜೆ.ಸಿ.ನಗರ, ಕುರುಬರಹಳ್ಳಿ, ರಾಜಾಜಿನಗರ 2ನೇ ಬ್ಲಾಕ್, ಇ.ಎಸ್.ಐ.ಆಸ್ಪತ್ರೆ, ಕಮಲನಗರ ಮುಖ್ಯರಸ್ತೆ, ಗೆಳೆಯರ ಬಳಗ, ಭೋವಿ ಪಾಳ್ಯ, ಜಿ.ಡಿ.ನಾಯ್ಡು ಹಾಲ್, ವೆಸ್ಟ್ ಆಫ್ ಕೋರ್ಡ್‌ ರೋಡ್‌, ಮಹಾಲಕ್ಷ್ಮಿ ಲೇಔಟ್, ಇಸ್ಕಾನ್ ಎದುರುಗಡೆ, ಎಸ್.ಐ.ಟಿ ರಸ್ತೆ, ಬಿ.ಎನ್.ಇ.ಎಸ್.ಕಾಲೇಜ್, ಬೆಲ್ ಅಪಾರ್ಟ್‌ಮೆಂಟ್, ಸ್ಯಾಂಡಲ್ ಸೋಫ್ ಫ್ಯಾಕ್ಟರ್, ಯಶವಂತಪುರ ಕೈಗಾರಿಕಾ ಪ್ರದೇಶ, ಟೊಯೋಟಾ ಶೋರೂಮ್, ಎಸ್ಟೀಮ್ ಕ್ಲಾಸಿಕ್‌ ಅರ್ಪಾಟ್‌ಮೆಂಟ್ ಸುತ್ತ ಮುತ್ತಲಿನ ಪ್ರದೇಶಗಳು.

ಇದನ್ನೂ ಓದಿ: Samsung AC: ಹೊಸ ಶ್ರೇಣಿಯ ಎಸಿಗಳನ್ನು ಬಿಡುಗಡೆ ಮಾಡಿದ ಸ್ಯಾಮ್‌ಸಂಗ್; ಇದರ ವಿಶೇಷತೆ ಏನೇನು?

ವಿದ್ಯುತ್ ಸಂಬಂಧಿತ ದೂರುಗಳಿಗಾಗಿ ಬೆ.ವಿ.ಕಂ ಸಹಾಯವಾಣಿ ಸಂಖ್ಯೆ ‘1912’ ಸಂಪರ್ಕಿಸಬಹುದಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

Continue Reading

ಉತ್ತರ ಕನ್ನಡ

Ankola landslide: ಅಂಕೋಲಾ-ಶಿರೂರು ಗುಡ್ಡ ಕುಸಿತ; ನಾಳೆಯಿಂದ ಪ್ಲೋಟಿಂಗ್ ಪ್ಲಾಟ್‌ಫಾರಂ ಕಾರ್ಯಾಚರಣೆ

Ankola landslide : ಅಂಕೋಲಾ-ಶಿರೂರು ಗುಡ್ಡ ಕುಸಿತದಲ್ಲಿ ಕಣ್ಮರೆಯಾಗಿರುವ ಮೂವರಿಗಾಗಿ ಶೋಧ ಕಾರ್ಯ ನಡೆಯುತ್ತಿದ್ದರೆ, ಇತ್ತ ಶನಿವಾರದಿಂದ ಪ್ಲೋಟಿಂಗ್ ಪ್ಲಾಟ್‌ಫಾರಂ ಕಾರ್ಯಾಚರಣೆಗೆ ಜಿಲ್ಲಾಡಳಿತ ಸಿದ್ಧತೆ ನಡೆಸಿದೆ. ಈ ನಡುವೆ ವಾಹನ ಸಂಚಾರಕ್ಕೆ ಅನುವು ಮಾಡಿಕೊಡಬೇಕೆಂಬ ಒತ್ತಾಯವು ಕೇಳಿ‌ ಬರುತ್ತಿದೆ.

VISTARANEWS.COM


on

By

Ankola landslide
Koo

ಕಾರವಾರ: ಕಳೆದ ಹತ್ತು ದಿನಗಳಿಂದ ನಡೆಯುತ್ತಿರುವ ಅಂಕೋಲಾ- ಶಿರೂರು ಗುಡ್ಡ ಕುಸಿತದ (Ankola landslide) ಮಣ್ಣು ತೆರವು ಕಾರ್ಯಾಚರಣೆಯು ಶುಕ್ರವಾರ ಹನ್ನೊಂದನೆಯ ದಿನಕ್ಕೆ ಕಾಲಿಟ್ಟಿದೆ. ಈ ದುರಂತದಲ್ಲಿ ಒಟ್ಟು 10 ಮಂದಿ ನಾಪತ್ತೆಯಾಗಿದ್ದು, ಇದುವರೆಗೆ 7 ಮಂದಿಯ ಶವ ಪತ್ತೆಯಾಗಿದೆ. ಉಳಿದ ಮೂವರಿಗಾಗಿ ಹುಡುಕಾಟ ಮುಂದುವರಿದಿದೆ.

ಅಂಕೋಲಾ- ಶಿರೂರು ಗುಡ್ಡಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರ್ಯಾಚರಣೆ ಕುರಿತು ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ.ಕೆ ಮಾಹಿತಿ ನೀಡಿದರು. ಗುಡ್ಡ ಕುಸಿದ ಸ್ಥಳದಲ್ಲಿ ಜಿಯಾಲಾಜಿಕಲ್ ಸರ್ವೆ ಆಫ್ ಇಂಡಿಯಾ ಅಧ್ಯಯನ ನಡೆಸಿತ್ತು. ಗುಡ್ಡಕುಸಿದ ಪ್ರದೇಶದಲ್ಲಿ ಕೆಲವೊಂದು ಅಗತ್ಯಕ್ರಮ ಕೈಗೊಳ್ಳಲು ವರದಿಯಲ್ಲಿ ಸೂಚಿಸಿತ್ತು. ಅದರಂತೆ ಹೆದ್ದಾರಿ ಪ್ರಾಧಿಕಾರಕ್ಕೆ ಕ್ರಮಕ್ಕೆ ಸೂಚನೆ ನೀಡಲಾಗಿತ್ತು.

ಮತ್ತೆ ಅವಘಡಗಳಾಗದಂತೆ ಕೆಲವೊಂದು ಮುನ್ನೆಚ್ಚರಿಕಾ ಕ್ರಮಗಳ ಪಾಲನೆಗೆ ಸೂಚಿಸಲಾಗಿತ್ತು. ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡ ಬಳಿಕ ಹಾಗೂ ಹೆದ್ದಾರಿ ಪ್ರಾಧಿಕಾರದಿಂದ ವಾಹನಗಳ ಸಂಚಾರಕ್ಕೆ ಸುರಕ್ಷಿತವಾಗಿದೆ ಎಂದು ವರದಿ ಬಂದ ಮೇಲೆ ಸಂಚಾರಕ್ಕೆ ಅವಕಾಶ ನೀಡುತ್ತೇವೆ ಎಂದರು.

ಡ್ರೋನ್‌ ಸ್ಕ್ಯಾನಿಂಗ್‌ ಮುಕ್ತಾಯ

ನದಿಯಲ್ಲಿ ಅತ್ಯಾಧುನಿಕ ಡ್ರೋನ್ ಸ್ಕ್ಯಾನಿಂಗ್ ವಿಚಾರವಾಗಿಯೂ ಪ್ರತಿಕ್ರಿಯಿಸಿದ ಅವರು, ನಿನ್ನೆ ಗುರುವಾರ ರಾತ್ರಿ ಮಳೆಯಿಂದಾಗಿ ಸ್ಕ್ಯಾನಿಂಗ್ ಕಾರ್ಯಕ್ಕೆ ಅಡ್ಡಿಯಾಗಿತ್ತು. ಶುಕ್ರವಾರ ಮಧ್ಯಾಹ್ನದ ವೇಳೆಗೆ ಸ್ಕ್ಯಾನಿಂಗ್ ಕಾರ್ಯ ಪೂರ್ಣಗೊಂಡಿದ್ದು, ನದಿಯಲ್ಲಿ ಹುಡುಕಬೇಕಾದ ಜಾಗಗಳನ್ನು ಡೈವಿಂಗ್ ಮಾಡಿಯೇ ಗುರುತಿಸುವ ಕೆಲಸವಾಗಿದೆ.

ನೌಕಾನೆಲೆಯ ತಂಡ 2-3 ಗಂಟೆಗೊಮ್ಮೆ ನದಿಯ ಹರಿವಿನ ವೇಗವನ್ನು ಪರಿಶೀಲಿಸುತ್ತಿದ್ದಾರೆ. ಮಧ್ಯಾಹ್ನದವರೆಗೂ 6 ನಾಟ್ಸ್‌ಗಿಂತ ಅಧಿಕ ವೇಗದಲ್ಲಿ ನದಿ ಹರಿಯುತ್ತಿದೆ. ಹೀಗಾಗಿ ಶಾಸಕರು ಸೂಚಿಸಿದಂತೆ ಪ್ಲೋಟಿಂಗ್ ಪ್ಲಾಟ್‌ಫಾರಂ ತಂದು ಪ್ರಯತ್ನಿಸಲಾಗುವುದು. ಶನಿವಾರ ಪ್ಲೋಟಿಂಗ್ ಪ್ಲಾಟ್‌ಫಾರಂ ಬರುವ ಸಾಧ್ಯತೆಯಿದೆ ಎಂದು ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ.ಕೆ ತಿಳಿಸಿದರು.

ಇದನ್ನೂ ಓದಿ: Karnataka Rain : ಉಕ್ಕಿ ಹರಿಯುವ ನೇತ್ರಾವತಿ ನದಿಯಲ್ಲಿ ತೇಲಿ ಬಂದ ಜೀವಂತ ಹಸು

ಅರ್ಜುನಗಾಗಿ ಇಡೀ ಕೇರಳ ಪ್ರಾರ್ಥತಿಸುತ್ತಿದೆ- ಶಾಸಕ ಕೆ.ಎಂ.ಆಶ್ರಫ್

ಒಂದು ವಾರ ಕಳೆದರು ಅಲ್ಲಿದ್ದ ಹೋಟೆಲ್ ಆಗಲಿ ಅಥವಾ ಲಾರಿ ಡ್ರೈವರ್ ಅರ್ಜುನ್‌ನ ಸುಳಿವು ಸಿಕ್ಕಿರಲಿಲ್ಲ, ನಿನ್ನೆ (ಗುರುವಾರ) ದೆಹಲಿ ತಂಡ ನಡೆಸಿದ ಡ್ರೋನ್ ಕಾರ್ಯಚರಣೆಯಲ್ಲಿ ನದಿಯಲ್ಲಿ ಲಾರಿ ಹಾಗೂ ಕ್ಯಾಬಿನ್ ಇರುವ ಬಗ್ಗೆ ಸುಳಿವು ಸಿಕ್ಕಿತ್ತು. ಆದರೆ ನದಿಯ ಹರಿವು ಹೆಚ್ಚಾಗಿದ್ದ ಕಾರಣ ಶೋಧ ಕಾರ್ಯವನ್ನು ಮುಂದುವರೆಸಲು ಆಗಲಿಲ್ಲ. ಹೀಗಾಗಿ ಶುಕ್ರವಾರ ಎರಡು ಬೃಹತ್ ಹಿಟಾಚಿಗಳ ಮೂಲಕ ದಡದಲ್ಲಿನ ಮಣ್ಣು ತೆರವು ಕೆಲಸ ಮುಂದುವರಿಸಲಾಯಿತು. ಜತೆಗೆ ಇನ್ನುಳಿದ ಮೂವರಿಗಾಗಿ ಹೋಟೆಲ್ ಇದ್ದ ಜಾಗದಲ್ಲೇ ಪುನಃ ಹುಡುಕಾಟ ನಡೆದಿದೆ. ಸ್ಥಳೀಯ ಶಾಸಕ ಸತೀಶ್ ಸೈಲ್ ತಡರಾತ್ರಿಯವರೆಗೂ ಸ್ಥಳದಲ್ಲೇ ಹಾಜರಿದ್ದರು.

ಇನ್ನು ಮಂಜೇಶ್ವರದ ಶಾಸಕ ಕೆ.ಎಂ. ಆಶ್ರಫ್ ಘಟನಾ ಸ್ಥಳಕ್ಕೆ ಭೇಟಿ ನೀಡಿದರು. ಬಳಿಕ ಮಾಧ್ಯಮದೊಂದಿಗೆ ಮಾತಾನಾಡಿದ ಅವರು, ಚಾಲಕ ಅರ್ಜುನಗಾಗಿ ಇಡೀ ಕೇರಳ ಜನತೆ ಪ್ರಾರ್ಥನೆ ಮಾಡುತ್ತಿದೆ. ಪ್ರತಿಕ್ಷಣವೂ ಅರ್ಜುನ ಜೀವಂತವಾಗಿ ಸಿಕ್ಕೇ ಸಿಗುತ್ತಾನೆ ಎನ್ನುವ ಭರವಸೆಯಲ್ಲಿದ್ದಾರೆ. ದೇಶವು ಇದಕ್ಕೂ ದೊಡ್ಡ ಸಮಸ್ಯೆಗಳನ್ನು ಎದುರಿಸಿದೆ, ನಾವು ಹಿಂಜರಿಯದೆ ಆದಷ್ಟು ಬೇಗ ಅರ್ಜುನ ಬಳಿಗೆ ತಲುಪಿ ಅವನನ್ನು ಮೇಲೇತ್ತುವ ಕೆಲಸ ಆಗಬೇಕು. ಇವತ್ತಿನ ಕಾರ್ಯಾಚರಣೆಯಲ್ಲಿ ಲಾರಿ ಸಿಗುವ ಭರವಸೆ ಇದೆ, ಇಲ್ಲವಾದರೆ ನಮ್ಮ ಹನ್ನೊಂದು ದಿನದ ಶ್ರಮ ವ್ಯರ್ಥವಾಗುತ್ತದೆ. ಹಾಗಾಗಿ ಶುಕ್ರವಾರ ಫಲಿತಾಂಶ ಬಂದೆ ಬರುತ್ತದೆ ಎನ್ನುವ ನಿರೀಕ್ಷೆಯಲ್ಲಿದ್ದೇವೆ ಎಂದು ತಿಳಿಸಿದರು.

ಇದರ ಮಧ್ಯೆ ಕೇರಳ ಲೋಕಪಯೋಗಿ ಹಾಗೂ ಪ್ರವಾಸೋದ್ಯಮ ಸಚಿವ ರಿಯಾಜ್ ಅಹ್ಮದ್ ಘಟನಾ ಸ್ಥಳಕ್ಕೆ ಭೇಟಿ ನೀಡಿದರು. ದೆಹಲಿ ತಜ್ಞರ ತಂಡದಿಂದ ಲಾರಿ ಇರುಬಹುದಾಗಿದೆ ಎನ್ನುವ ಜಾಗದ ಬಗ್ಗೆ ಮಾಹಿತಿ ಪಡೆದುಕೊಂಡರು. ಜಿಲ್ಲಾಡಳಿತ ಜತೆಗೆ ಸಭೆ ನಡೆಸಿ ಕಾರ್ಯಾಚರಣೆ ಬಗ್ಗೆ ಮಾಹಿತಿ ಪಡೆದುಕೊಂಡರು. ಸಚಿವರ ಜತೆಗೆ ಕೇರಳದ ಶಾಸಕರಾದ ಸಚ್ಚಿನ್ ದೇವ್, ಅಶ್ರಫ್ ಉಪಸ್ಥಿತರಿದ್ದು, ಶಾಸಕ ಸತೀಶ್ ಸೈಲ್ ಸಮ್ಮುಖದಲ್ಲೆ ಸಭೆ ನಡೆಯಿತು. ಇದೇ ವೇಳೆ ಜಿಲ್ಲಾಡಳಿತ ಮೃತ ಗ್ಯಾಸ್ ಟ್ಯಾಂಕರ್ ಚಾಲಕ ಶರವಣ್ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರದ ಚೆಕ್‌ ಅನ್ನು ಕೇರಳ ಸಚಿವರ ಕೈಯಲ್ಲೇ ವಿತ್ತರಿಸಿದರು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕರ್ನಾಟಕ

GPF Cap: ಸರ್ಕಾರಿ ನೌಕರರಿಗೆ ಬ್ಯಾಡ್‌ ನ್ಯೂಸ್;‌ ಜಿಪಿಎಫ್‌ಗೆ 5 ಲಕ್ಷ ರೂ. ಮಿತಿ ಹೇರಿದ ಕರ್ನಾಟಕ ಸರ್ಕಾರ!

GPF Cap: ಸಾಮಾನ್ಯ ಭವಿಷ್ಯ ನಿಧಿ ಚಂದಾದಾರರು ಒಂದು ವರ್ಷಕ್ಕೆ ಪಾವತಿಸಬಹುದಾದ ವಂತಿಗೆಯನ್ನು 5 ಲಕ್ಷ ರೂ.ಗೆ ಮಿತಿಗೊಳಿಸಲಾಗಿದೆ. ಈ ಅಂಶವನ್ನು ರಾಜ್ಯ ಸರ್ಕಾರದಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲ ಅಖಿಲ ಭಾರತ ಸೇವಾ ಅಧಿಕಾರಿಗಳು ಹಾಗೂ ರಾಜ್ಯ ಸರ್ಕಾರಿ ಅಧಿಕಾರಿ ಮತ್ತು ನೌಕರರು ಇನ್ನು ಮುಂದೆ ಕಟ್ಟುನಿಟ್ಟಾಗಿ ಪಾಲಿಸುವಂತೆ ರಾಜ್ಯ ಸರ್ಕಾರವು ಆದೇಶದಲ್ಲಿ ತಿಳಿಸಿದೆ.

VISTARANEWS.COM


on

GPF Cap
Koo

ಬೆಂಗಳೂರು: ಏಳನೇ ವೇತನ ಆಯೋಗದ (7th Pay Commission) ಜಾರಿಗೆ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರವು (Karnataka Government) ತೀರ್ಮಾನ ಮಾಡಿದ ಬಳಿಕ ಶೇ.27.5ರಷ್ಟು ಸಂಬಳ ಹೆಚ್ಚಳದ ಸಂಭ್ರಮದಲ್ಲಿದ್ದ ಸರ್ಕಾರಿ ನೌಕರರಿಗೆ ರಾಜ್ಯ ಸರ್ಕಾರವು ಕಹಿ ಸುದ್ದಿ ನೀಡಿದೆ. ಸರ್ಕಾರಿ ನೌಕರರು (Government Employees) ವಾರ್ಷಿಕವಾಗಿ ಸಾಮಾನ್ಯ ಭವಿಷ್ಯ ನಿಧಿಗೆ (GPF) ಜಮೆ ಮಾಡುವ ಮೊತ್ತವನ್ನು 5 ಲಕ್ಷ ರೂಪಾಯಿಗೆ ಮಿತಿಗೊಳಿಸಿ (GPF Cap) ರಾಜ್ಯ ಸರ್ಕಾರವು ಆದೇಶ ಹೊರಡಿಸಿದೆ.

ಜಿಪಿಎಫ್‌ ಮೊತ್ತದ ಮಿತಿ ನಿಗದಿಗೊಳಿಸಿ ರಾಜ್ಯ ಸರ್ಕಾರವು ಆದೇಶ ಹೊರಡಿಸಿದೆ. “ಉಲ್ಲೇಖ(1)ರ ಕೇಂದ್ರ ಸರ್ಕಾರದ ಅಧಿಸೂಚನೆ ಮತ್ತು ಅಧಿಕೃತ ಜ್ಞಾಪನಗಳಲ್ಲಿ ಅಖಿಲ ಭಾರತ ಸೇವಾ ಅಧಿಕಾರಿಗಳಿಗೆ ಮತ್ತು ಉಲ್ಲೇಖ(2)ರ ರಾಜ್ಯ ಸರ್ಕಾರದ ಆದೇಶದಲ್ಲಿ ಸಾಮಾನ್ಯ ಭವಿಷ್ಯ ನಿಧಿ ಚಂದಾದಾರರು ಒಂದು ವರ್ಷಕ್ಕೆ ಪಾವತಿಸಬಹುದಾದ ವಂತಿಗೆಯನ್ನು 5 ಲಕ್ಷ ರೂ.ಗೆ ಮಿತಿಗೊಳಿಸಲಾಗಿದೆ. ಈ ಅಂಶವನ್ನು ರಾಜ್ಯ ಸರ್ಕಾರದಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲ ಅಖಿಲ ಭಾರತ ಸೇವಾ ಅಧಿಕಾರಿಗಳು ಹಾಗೂ ರಾಜ್ಯ ಸರ್ಕಾರಿ ಅಧಿಕಾರಿ ಮತ್ತು ನೌಕರರು ಇನ್ನು ಮುಂದೆ ಕಟ್ಟುನಿಟ್ಟಾಗಿ ಪಾಲಿಸುವಂತೆ ಈ ಮೂಲಕ ಸೂಚಿಸಿದೆ” ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ.

ನೌಕರರಿಗೆ ಹೇಗೆ ಅನನುಕೂಲ?

ರಾಜ್ಯ ಸರ್ಕಾರದ ನಿರ್ಧಾರದಿಂದ ಸರ್ಕಾರಿ ನೌಕರರು ತೆರಿಗೆ ಉಳಿಸಲು ಕಷ್ಟವಾಗುತ್ತದೆ. ಹೆಚ್ಚು ಸಂಬಳ ಪಡೆಯುವ ನೌಕರರು ಜಿಪಿಎಫ್‌ಗೆ ವಾರ್ಷಿಕವಾಗಿ ಅತಿ ಹೆಚ್ಚಿನ ಹಣವನ್ನು ಜಮೆ ಮಾಡುವ ಮೂಲಕ ತೆರಿಗೆ ಉಳಿಸುತ್ತಿದ್ದರು. ಉಳಿತಾಯದ ದೃಷ್ಟಿಯಿಂದಲೂ ನೌಕರರಿಗೆ ಅನುಕೂಲವಾಗುತ್ತಿತ್ತು. ಆದರೆ, ಈಗ ವಾರ್ಷಿಕ ಮಿತಿಯನ್ನು 5 ಲಕ್ಷ ರೂ.ಗೆ ನಿಗದಿಪಡಿಸಿದ ಕಾರಣ ಲಕ್ಷಾಂತರ ನೌಕರರು ತೆರಿಗೆ ಉಳಿಸಲು, ಹೆಚ್ಚಿನ ಹಣವನ್ನು ಉಳಿತಾಯ ಮಾಡಲು ಕಷ್ಟವಾಗುತ್ತದೆ ಎಂದು ತಿಳಿದುಬಂದಿದೆ.

ರಾಜ್ಯ ಸರ್ಕಾರದ ನಿರ್ಧಾರದಿಂದ ರಾಜ್ಯ ಸರ್ಕಾರಿ ನೌಕರರಿಗೆ ಮಾತ್ರವಲ್ಲ, ಕರ್ನಾಟಕದಲ್ಲಿ ಕಾರ್ಯನಿರ್ವಹಿಸುತ್ತಿರುವ ಐಎಎಸ್‌ ಅಧಿಕಾರಿಗಳಿಗೂ ಹೊಸ ನಿಯಮವು ಅನ್ವಯಿಸಲಿದೆ. ಕೆಲ ತಿಂಗಳ ಹಿಂದೆ ಪಂಜಾಬ್‌ನಲ್ಲೂ ಅಲ್ಲಿನ ರಾಜ್ಯ ಸರ್ಕಾರವು ನೌಕರರ ಜಿಪಿಎಫ್‌ ವಾರ್ಷಿಕ ಮಿತಿಯನ್ನು 5 ಲಕ್ಷ ರೂ.ಗೆ ನಿಗದಿಪಡಿಸಿತ್ತು. ಆದಾಗ್ಯೂ, ಕರ್ನಾಟಕ ಸರ್ಕಾರದ ಆದೇಶದ ಕುರಿತು ಇದುವರೆಗೆ ರಾಜ್ಯ ಸರ್ಕಾರಿ ನೌಕರರ ಸಂಘವು ಪ್ರತಿಕ್ರಿಯೆ ನೀಡಿಲ್ಲ.

ಇದನ್ನೂ ಓದಿ: 7th Pay Commission: ಸರ್ಕಾರಿ ನೌಕರರ ವೇತನ, ಪಿಂಚಣಿ 58% ಹೆಚ್ಚಳ; ಸಂಪೂರ್ಣ ಲೆಕ್ಕ ಕೊಟ್ಟ ಸಿದ್ದರಾಮಯ್ಯ

Continue Reading
Advertisement
india tour of sri lanka 2024
ಪ್ರಮುಖ ಸುದ್ದಿ6 mins ago

India Tour of Sri Lanka 2024 : ಶ್ರೀಲಂಕಾ ತಂಡಕ್ಕೆ 3ನೇ ಹೊಡೆತ; ಭಾರತ ವಿರುದ್ಧದ ಟಿ20 ಸರಣಿಗೆ ಬಿನುರಾ ಫರ್ನಾಂಡೊ ಅಲಭ್ಯ

Martin Movie
ಕರ್ನಾಟಕ9 mins ago

Martin Movie: ವಿಎಫ್‌ಎಕ್ಸ್‌ಗೆ 50 ಲಕ್ಷ ಕಮಿಷನ್‌ ಆರೋಪ; ʻಮಾರ್ಟಿನ್‌ʼ ನಿರ್ದೇಶಕ ಎ.ಪಿ. ಅರ್ಜುನ್‌ಗೆ ಸಂಕಷ್ಟ!

Bengaluru Power Cut July 27th 28th 30th power outage in many parts of bengaluru
ಕರ್ನಾಟಕ9 mins ago

Bengaluru Power Cut: ಜು.27, 28, 30ರಂದು ಬೆಂಗಳೂರಿನ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

Ankola landslide
ಉತ್ತರ ಕನ್ನಡ13 mins ago

Ankola landslide: ಅಂಕೋಲಾ-ಶಿರೂರು ಗುಡ್ಡ ಕುಸಿತ; ನಾಳೆಯಿಂದ ಪ್ಲೋಟಿಂಗ್ ಪ್ಲಾಟ್‌ಫಾರಂ ಕಾರ್ಯಾಚರಣೆ

Jennifer Lopez
ಫ್ಯಾಷನ್19 mins ago

Jennifer Lopez: ಮನೀಶ್‌ ಮಲ್ಹೋತ್ರಾ ಗೌನ್‌ ನಲ್ಲಿ ಬರ್ತ್‌ ಡೇ ಪಾರ್ಟಿ ಸೆಲೆಬ್ರೇಟ್‌ ಮಾಡಿದ ಹಾಲಿವುಡ್‌ ಪಾಪ್‌ ಸ್ಟಾರ್‌ ಜೆನ್ನಿಫರ್‌ ಲೋಪೆಜ್‌!

GPF Cap
ಕರ್ನಾಟಕ28 mins ago

GPF Cap: ಸರ್ಕಾರಿ ನೌಕರರಿಗೆ ಬ್ಯಾಡ್‌ ನ್ಯೂಸ್;‌ ಜಿಪಿಎಫ್‌ಗೆ 5 ಲಕ್ಷ ರೂ. ಮಿತಿ ಹೇರಿದ ಕರ್ನಾಟಕ ಸರ್ಕಾರ!

Koppala News Snake Puttu showed humanity by treating and caring for an injured vulture
ಕರ್ನಾಟಕ38 mins ago

Koppala News: ಗಾಯಗೊಂಡ ರಣಹದ್ದಿಗೆ ಆರೈಕೆ ಮೂಲಕ ಮಾನವೀಯತೆ ತೋರಿದ ಸ್ನೇಕ್ ಪುಟ್ಟು

Kargil Vijay Diwas 2024
ದೇಶ1 hour ago

Kargil Vijay Diwas 2024: ಕಾರ್ಗಿಲ್ ಯುದ್ಧದಲ್ಲಿ ನಿರ್ಣಾಯಕವಾಗಿದ್ದ ಟೈಗರ್ ಹಿಲ್; 19 ವರ್ಷದ ಯೋಧನ ರೋಚಕ ಸಾಹಸ!

Apple iPhones
ಗ್ಯಾಜೆಟ್ಸ್1 hour ago

Apple iPhones: ಆ್ಯಪಲ್‌ ಬ್ರ್ಯಾಂಡ್‌ ಪ್ರಿಯರಿಗೆ ಗುಡ್‌ನ್ಯೂಸ್;‌ ಐಫೋನ್‌ಗಳ ಬೆಲೆಯಲ್ಲಿ ಗಣನೀಯ ಇಳಿಕೆ

ಕರ್ನಾಟಕ1 hour ago

PU Lecturer Recruitment: ಪ್ರೌಢಶಾಲಾ ಶಿಕ್ಷಕರು ಪಿಯು ಕಾಲೇಜಿಗೆ ಬಡ್ತಿ ಪಡೆಯಲು ಅರ್ಹತಾ ಅಂಕ ಶೇ.50ಕ್ಕೆ ಇಳಿಕೆ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Ankola landslide
ಉತ್ತರ ಕನ್ನಡ13 mins ago

Ankola landslide: ಅಂಕೋಲಾ-ಶಿರೂರು ಗುಡ್ಡ ಕುಸಿತ; ನಾಳೆಯಿಂದ ಪ್ಲೋಟಿಂಗ್ ಪ್ಲಾಟ್‌ಫಾರಂ ಕಾರ್ಯಾಚರಣೆ

karnataka rain
ಮಳೆ1 hour ago

Karnataka Rain : ಉಕ್ಕಿ ಹರಿಯುವ ನೇತ್ರಾವತಿ ನದಿಯಲ್ಲಿ ತೇಲಿ ಬಂದ ಜೀವಂತ ಹಸು

Karnataka Rain
ಮಳೆ2 hours ago

Karnataka Rain: ವಿದ್ಯುತ್‌ ದುರಸ್ತಿಗಾಗಿ ಪ್ರಾಣದ ಹಂಗು ತೊರೆದು ಉಕ್ಕಿ ಹರಿಯುವ ನೀರಿಗೆ ಧುಮುಕಿದ ಲೈನ್‌ ಮ್ಯಾನ್‌!

Karnataka rain
ಮಳೆ3 hours ago

Karnataka Rain : ಹಾಸನದಲ್ಲಿ ಹೇಮಾವತಿ, ಚಿಕ್ಕಮಗಳೂರಲ್ಲಿ ಭದ್ರೆಯ ಅಬ್ಬರಕ್ಕೆ ಜನರು ತತ್ತರ

karnataka Rain
ಮಳೆ1 day ago

Karnataka Rain : ಮನೆಯೊಳಗೆ ನುಗ್ಗಿದ ಮಳೆ ನೀರು; ಕಾಲು ಜಾರಿ ಬಿದ್ದು ವೃದ್ಧೆ ಸಾವು

Actor Darshan
ಸ್ಯಾಂಡಲ್ ವುಡ್1 day ago

Actor Darshan: ನಟ ದರ್ಶನ್ ಇರುವ ಜೈಲು ಕೋಣೆ ಹೇಗಿದೆ?

Actor Darshan
ಸಿನಿಮಾ1 day ago

Actor Darshan : ಹೆಂಡ್ತಿ ಮಕ್ಕಳೊಟ್ಟಿಗೆ ಚೆನ್ನಾಗಿರು.. ಸಹಕೈದಿ ಜತೆಗೆ 12 ನಿಮಿಷ ಕಳೆದ ನಟ ದರ್ಶನ್‌

Actor Darshan
ಸಿನಿಮಾ1 day ago

Actor Darshan: ಆಧ್ಯಾತ್ಮದತ್ತ ವಾಲಿದ ದರ್ಶನ್‌; ಜೈಲಲ್ಲಿ ಹೇಗಿದೆ ಗೊತ್ತಾ ನಟನ ಬದುಕು

karnataka Weather Forecast
ಮಳೆ3 days ago

Karnataka Weather : ರಭಸವಾಗಿ ಸುರಿಯುವ ಮಳೆ; 50 ಕಿ.ಮೀ ವೇಗದಲ್ಲಿ ಬೀಸುತ್ತೆ ಗಾಳಿ

karnataka weather Forecast
ಮಳೆ3 days ago

Karnataka Weather : ರಾಜ್ಯದಲ್ಲಿ ಮುಂದುವರಿದ ಮಳೆ ಅವಾಂತರ; ನಾಳೆಯೂ ಇರಲಿದೆ ಅಬ್ಬರ

ಟ್ರೆಂಡಿಂಗ್‌