Amrit Mahotsav | ಕತಾರ್‌ನ ಇಂಡಿಯನ್ ಕಲ್ಚರಲ್ ಸೆಂಟರ್‌ನಲ್ಲಿ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮ - Vistara News

ವಿದೇಶ

Amrit Mahotsav | ಕತಾರ್‌ನ ಇಂಡಿಯನ್ ಕಲ್ಚರಲ್ ಸೆಂಟರ್‌ನಲ್ಲಿ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮ

ಭಾರತ ಸ್ವಾತಂತ್ರ್ಯದ 75ನೇ ವಾರ್ಷಿಕೋತ್ಸವದ ಸ್ಮರಣಾರ್ಥವಾಗಿ ಕತಾರ್‌ನಲ್ಲಿ ವೈವಿಧ್ಯಮಯ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು.

VISTARANEWS.COM


on

ಆಜಾದಿ ಕಾ ಅಮೃತ್ ಮಹೋತ್ಸವ
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ದೋಹಾ (ಕತಾರ್): ಇಂಡಿಯನ್ ಕಲ್ಚರಲ್ ಸೆಂಟರ್‌ನ ಮೆಗಾ ಕಲ್ಚರಲ್ ಕಾರ್ನಿವಲ್ ಇವೆಂಟ್‌ಗಳು ಭಾರತ ಸ್ವಾತಂತ್ರ್ಯದ 75ನೇ ವಾರ್ಷಿಕೋತ್ಸವದ ಸ್ಮರಣಾರ್ಥ “ಆಜಾದಿ ಕಾ ಅಮೃತ್ ಮಹೋತ್ಸವʼದ ಭಾಗವಾಗಿ ನಡೆಯುತ್ತಿವೆ.

ಆಚರಣೆಯ 5ನೇ ದಿನದಂದು ಭವ್ಯ ಸಾಂಸ್ಕೃತಿಕ ಕಾರ್ಯಕ್ರಮ ನಡೆದಿದೆ. ಕಾರ್ಯಕ್ರಮಕ್ಕೆ ಸಚಿನ್ ದಿನಕರ್ ಸಂಕ್ಪಾಲ್ ಉದ್ಘಾಟನೆ ನೆರವೇರಿಸಿದರು. ಸ್ವಾತಂತ್ರ್ಯ ಹೋರಾಟದ ಮಹತ್ವ, ಇತಿಹಾಸ ಮತ್ತು ನಾಯಕರ ತ್ಯಾಗದ ಕುರಿತು ವಿವರಿಸಿದರು. ಇಂಡಿಯನ್ ಕಲ್ಚರಲ್ ಸೆಂಟರ್ ಅಧ್ಯಕ್ಷ ಪಿ.ಎನ್. ಬಾಬುರಾಜನ್, INCAS ಕತಾರ್ ಅಧ್ಯಕ್ಷ ಹೈದರ್ ಚುಂಗತಾರ ಹಾಜರಿದ್ದರು.

ಆಜಾದಿ ಕಾ ಅಮೃತ್ ಮಹೋತ್ಸವ

ಈ ಸಂದರ್ಭದಲ್ಲಿ ಆಜಾದಿ ಕಾ ಅಮೃತ್ ಮಹೋತ್ಸವ ಆಚರಣೆಗಳ ಅಧ್ಯಕ್ಷರಾದ ಎ ಪಿ ಮಣಿಕಂಠನ್, ಕರ್ನಾಟಕ ಸಂಘ ಕತಾರ್ ಅಧ್ಯಕ್ಷರಾದ ಮಹೇಶ್ ಗೌಡ ಮತ್ತು ಇತರ ಸಂಘ ಸಂಸ್ಥೆಗಳ ಮುಖ್ಯಸ್ಥರು ಹಾಜರಿದ್ದರು.

ಆಜಾದಿ ಕಾ ಅಮೃತ್ ಮಹೋತ್ಸವ

ಸಮಾರಂಭದಲ್ಲಿ ಭಾರತದ ಅನನ್ಯ ಪರಂಪರೆಯನ್ನು ಪ್ರದರ್ಶಿಸಲು ವಾದ್ಯಗಳ ಫ್ಯೂಷನ್ ಸಂಗೀತ, ಶಾಸ್ತ್ರೀಯ ನೃತ್ಯ, ಸಮೂಹ ನೃತ್ಯ, ಟ್ಯಾಬ್ಲೋ ಮತ್ತು ಅನೇಕ ಪ್ರದರ್ಶನಗಳು ನಡೆದವು. ಮಕ್ಕಳ ನೃತ್ಯ ಪ್ರದರ್ಶನವು ಭಾರತದ ತ್ರಿವರ್ಣವನ್ನು ಹಾರಿಸುವ ಮೂಲಕ ವಿಶಿಷ್ಟವಾಗಿ ನಡೆಯಿತು.

ಇದನ್ನೂ ಓದಿ| Har Ghar Tiranga | ಪ್ರಧಾನಿ ಮೋದಿ ಕರೆಕೊಟ್ಟ ಹರ್​ ಘರ್​ ತಿರಂಗಾಕ್ಕೆ ಭರ್ಜರಿ ಟ್ವಿಸ್ಟ್​ ಕೊಟ್ಟ ಕಾಂಗ್ರೆಸ್​

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ದೇಶ

Maldives: ಭಾರತದ ಯುದ್ಧವಿಮಾನ ಹಾರಿಸುವ ತಾಕತ್ತು ನಮ್ಮ ಪೈಲಟ್‌ಗಳಿಗಿಲ್ಲ ಎಂದ ಮಾಲ್ಡೀವ್ಸ್, ಎಂಥಾ ದುಸ್ಥಿತಿ!

Maldives: ಇದುವರೆಗೆ ಮಾಲ್ಡೀವ್ಸ್‌ನಲ್ಲಿದ್ದ ಭಾರತದ ಯೋಧರು ವಿಮಾನಗಳನ್ನು ನಿರ್ವಹಿಸುತ್ತಿದ್ದರು. ಕೆಲ ದಿನಗಳ ಹಿಂದಷ್ಟೇ ಯೋಧರು ಭಾರತಕ್ಕೆ ವಾಪಸಾಗಿದ್ದಾರೆ. ಭಾರತವು ಅವುಗಳನ್ನು ದೇಣಿಗೆ ನೀಡಿದ ಕಾರಣ ಯುದ್ಧವಿಮಾನಗಳನ್ನು ಅಲ್ಲಿಯೇ ಬಿಟ್ಟಿದ್ದಾರೆ. ಆದರೆ, ಇವುಗಳನ್ನು ನಿಭಾಯಿಸುವ ಕೌಶಲವೂ ಮಾಲ್ಡೀವ್ಸ್‌ ವಾಯುಪಡೆ ಪೈಲಟ್‌ಗಳಿಗೆ ಇಲ್ಲ ಎಂಬುದು ಬಯಲಾಗಿದೆ.

VISTARANEWS.COM


on

Maldives
Koo

ಮಾಲೆ: ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಕೆಲ ತಿಂಗಳ ಹಿಂದೆ ಲಕ್ಷದ್ವೀಪಕ್ಕೆ ತೆರಳಿ, ಅಲ್ಲಿನ ಪ್ರವಾಸೋದ್ಯಮಕ್ಕೆ (Lakshadweep) ಉತ್ತೇಜನ ನೀಡಬೇಕು ಎಂದಿದ್ದಕ್ಕೇ ತಗಾದೆ ತೆಗೆದಿದ್ದ ಮಾಲ್ಡೀವ್ಸ್‌ ಪ್ರವಾಸೋದ್ಯಮಕ್ಕೆ (Maldives Tourism) ಭಾರಿ ಹೊಡೆತ ಬಿದ್ದಿದೆ. ಇಷ್ಟಾದರೂ, ಚೀನಾ ಯೋಜನೆ, ದುಡ್ಡಿನ ಮುಲಾಜಿನಿಂದಾಗಿ ಮಾಲ್ಡೀವ್ಸ್‌ನಲ್ಲಿರುವ ಭಾರತದ ಸೈನಿಕರನ್ನು ವಾಪಸ್‌ ಕಳುಹಿಸಲಾಗಿದೆ. ಇದರ ಬೆನ್ನಲ್ಲೇ, “ಭಾರತವು ಮಾಲ್ಡೀವ್ಸ್‌ಗೆ ನೀಡಿರುವ ಮೂರು ಯುದ್ಧವಿಮಾನಗಳನ್ನು ನಿರ್ವಹಿಸುವ ಪೈಲಟ್‌ಗಳೇ ನಮ್ಮಲ್ಲಿಲ್ಲ” ಎಂಬುದಾಗಿ ಮಾಲ್ಡೀವ್ಸ್‌ ತಿಳಿಸಿದೆ. ಇದು ಮಾಲ್ಡೀವ್ಸ್‌ (Maldives) ಸೇನೆಯ ಅದಕ್ಷತೆಗೆ ನಿದರ್ಶನ ಎಂದು ಹೇಳಲಾಗುತ್ತಿದೆ.

ಮಾಲೆಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಘಸ್ಸನ್‌ ಮೌಮೂನ್‌, “ಭಾರತ ನೀಡಿದ ಮೂರು ವಿಮಾನಗಳನ್ನು ಹಾರಿಸುವ ಕೌಶಲವು ನಮ್ಮ ಪೈಲಟ್‌ಗಳಿಗೆ ಇಲ್ಲ. ಅಂತಹ ಪರವಾನಗಿ ಹೊಂದಿರುವ ಪೈಲಟ್‌ಗಳು ಮಾಲ್ಡೀವ್ಸ್‌ ಸೇನೆಯಲ್ಲಿ ಇಲ್ಲ” ಎಂದು ಹೇಳಿದ್ದಾರೆ. ಇದುವರೆಗೆ ಮಾಲ್ಡೀವ್ಸ್‌ನಲ್ಲಿದ್ದ ಭಾರತದ ಯೋಧರು ವಿಮಾನಗಳನ್ನು ನಿರ್ವಹಿಸುತ್ತಿದ್ದರು. ಕೆಲ ದಿನಗಳ ಹಿಂದಷ್ಟೇ ಯೋಧರು ಭಾರತಕ್ಕೆ ವಾಪಸಾಗಿದ್ದಾರೆ. ಭಾರತವು ಅವುಗಳನ್ನು ದೇಣಿಗೆ ನೀಡಿದ ಕಾರಣ ಯುದ್ಧವಿಮಾನಗಳನ್ನು ಅಲ್ಲಿಯೇ ಬಿಟ್ಟಿದ್ದಾರೆ. ಆದರೆ, ಇವುಗಳನ್ನು ನಿಭಾಯಿಸುವ ಕೌಶಲವೂ ಮಾಲ್ಡೀವ್ಸ್‌ ವಾಯುಪಡೆ ಪೈಲಟ್‌ಗಳಿಗೆ ಇಲ್ಲ ಎಂಬುದು ಬಯಲಾಗಿದೆ.

ಭಾರತೀಯರ ಭೇಟಿ ಕುಸಿತ

ಮಾಲ್ಡೀವ್ಸ್‌ಗೆ ತೆರಳುವ ಪ್ರವಾಸಿಗರಲ್ಲಿ ಭಾರತೀಯರ ಸಂಖ್ಯೆಯೇ ಹೆಚ್ಚಿತ್ತು. ಆದರೆ, ಬಾಯ್ಕಾಟ್‌ ಅಭಿಯಾನದ ಬಳಿಕ ಪ್ರವಾಸಿಗರ ಸಂಖ್ಯೆ ಗಣನೀಯವಾಗಿ ಕುಸಿದಿದೆ. 2024ರ ಏಪ್ರಿಲ್‌ 10ರವರೆಗೆ ಮಾಲ್ಡೀವ್ಸ್‌ಗೆ 6.63 ಲಕ್ಷ ಪ್ರವಾಸಿಗರು ಭೇಟಿ ನೀಡಿದ್ದಾರೆ. ಚೀನಾದ 71 ಸಾವಿರ ಪ್ರವಾಸಿಗರು ಭೇಟಿ ನೀಡಿದ್ದು, ಮೊದಲ ಸ್ಥಾನದಲ್ಲಿದ್ದಾರೆ. ನಂತರದ ಸ್ಥಾನದಲ್ಲಿ ಬ್ರಿಟನ್‌, ರಷ್ಯಾ, ಇಟಲಿ, ಜರ್ಮನಿ ಹಾಗೂ ಭಾರತದ ಪ್ರವಾಸಿಗರಿದ್ದಾರೆ.

ಮಾಲ್ಡೀವ್ಸ್‌ ಪ್ರವಾಸೋದ್ಯಮ ಸಚಿವಾಲಯ ನೀಡಿದ ಮಾಹಿತಿ ಪ್ರಕಾರ, 2023ರಲ್ಲಿ ಭಾರತೀಯರೇ ಹೆಚ್ಚಿನ ಸಂಖ್ಯೆಯಲ್ಲಿ ಮಾಲ್ಡೀವ್ಸ್‌ಗೆ ತೆರಳಿದ್ದಾರೆ. 2023ರಲ್ಲಿ ಭಾರತದಿಂದ ಮಾಲ್ಡೀವ್ಸ್‌ಗೆ 2,09,198 ಜನ ಭೇಟಿ ನೀಡಿದರೆ, ರಷ್ಯಾದಿಂದ 2,09,146 ಪ್ರವಾಸಿಗರು ಭೇಟಿ ನೀಡಿದ್ದಾರೆ. ಇನ್ನು, ಚೀನಾದಿಂದ ಕಳೆದ ವರ್ಷ 1,87,118 ಮಂದಿ ಮಾಲ್ಡೀವ್ಸ್‌ಗೆ ಭೇಟಿ ನೀಡಿದ್ದಾರೆ. ಇದೇ ಕಾರಣಕ್ಕಾಗಿಯೇ ಮಾಲ್ಡೀವ್ಸ್‌ನ ಪ್ರವಾಸೋದ್ಯಮ ಸಂಘವು, ಭಾರತದ ವಿರುದ್ಧ ಸಚಿವರು ನೀಡಿದ ಉದ್ಧಟತನದ ಹೇಳಿಕೆಯನ್ನು ಖಂಡಿಸಿದೆ. ಅಲ್ಲದೆ, ಭಾರತದ ಮನವೊಲಿಸಲು ಯತ್ನಿಸುತ್ತಿದೆ.

ನರೇಂದ್ರ ಮೋದಿ ಅವರು ಲಕ್ಷದ್ವೀಪಕ್ಕೆ ಭೇಟಿ ನೀಡಿದ ಬಳಿಕ ಭಾರತ ಹಾಗೂ ಮೋದಿ ವಿರುದ್ಧ ಮಾಲ್ಡೀವ್ಸ್‌ ಸಚಿವರು ಅವಹೇಳನಕಾರಿ ಹೇಳಿಕೆ ನೀಡಿದ್ದಕ್ಕೆ ಮಾಲ್ಡೀವ್ಸ್‌ನಲ್ಲಿಯೇ ಟೀಕೆಗಳು ವ್ಯಕ್ತವಾಗಿದ್ದವು ಮಾಲ್ಡೀವ್ಸ್‌ ಸಂಸದರು ಭಾರತದ ಕ್ಷಮೆಯಾಚಿಸಿದ್ದರು. ಭಾರತದಲ್ಲಂತೂ ಮಾಲ್ಡೀವ್ಸ್‌ ವಿರುದ್ಧ ಅಭಿಯಾನವೇ ಶುರುವಾಗಿತ್ತು. ನೂರಾರು ಸೆಲೆಬ್ರಿಟಿಗಳು, ನಟರು ಅಭಿಯಾನಕ್ಕೆ ಬೆಂಬಲ ಸೂಚಿಸಿದ್ದರು. ಇದಾದ ಬಲಿಕ ಮಾಲ್ಡೀವ್ಸ್‌ ಟ್ರಿಪ್‌ ಕ್ಯಾನ್ಸಲ್‌ ಮಾಡಿಕೊಂಡಿದ್ದರು. ಈಗ ಅದರ ಪರಿಣಾಮವನ್ನು ಮಾಲ್ಡೀವ್ಸ್‌ ಎದುರಿಸುತ್ತಿದೆ.

ಇದನ್ನೂ ಓದಿ: Maldives anti-India stance : ಭಾರತ ವಿರೋಧಿ ಕ್ರಮಕ್ಕೆ ಪಶ್ಚಾತಾಪ ವ್ಯಕ್ತಪಡಿಸಿದ ಮಾಲ್ಡೀವ್ಸ್​​

Continue Reading

ಪ್ರಮುಖ ಸುದ್ದಿ

PM Narendra Modi: “ಪಾಕ್‌ ಬಳೆ ತೊಡದಿದ್ದರೆ ನಾವು ತೊಡಿಸುತ್ತೇವೆ….” ಪಿಎಂ ಮೋದಿ ಗುಡುಗು

ಫಾರೂಕ್ ಅಬ್ದುಲ್ಲಾ ಮತ್ತು ಮಣಿಶಂಕರ್ ಅಯ್ಯರ್ ಮಾಡಿದ ಟೀಕೆಗಳ ಬಗ್ಗೆ ತೀವ್ರ ವ್ಯಂಗ್ಯವಾಡಿದ ಪ್ರಧಾನಿ ನರೇಂದ್ರ ಮೋದಿ (PM Narendra Modi), ಆರ್ಥಿಕ ಕುಸಿತದಿಂದ ತತ್ತರಿಸಿರುವ ಪಾಕಿಸ್ತಾನ ಬಳೆಗಳನ್ನು ಧರಿಸದಿದ್ದರೆ ಭಾರತವು ಅದನ್ನು ಕೊಡುತ್ತದೆ ಎಂದು ಲೇವಡಿ ಮಾಡಿದರು.

VISTARANEWS.COM


on

pm Narendra Modi
Koo

ಹೊಸದಿಲ್ಲಿ: “ಪಾಕಿಸ್ತಾನ (Pakistan) ಬಳೆ (Bangals) ತೊಡದಿದ್ದರೆ ಅದನ್ನು ತೊಡುವಂತೆ ನಾವು ಮಾಡುತ್ತೇವೆ” ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ (PM Narendra Modi) ಹೇಳಿದ್ದಾರೆ. ಇತ್ತೀಚೆಗೆ ನ್ಯಾಷನಲ್‌ ಕಾನ್ಫರೆನ್ಸ್‌ ನಾಯಕ ಫಾರೂಕ್‌ ಅಬ್ದುಲ್ಲಾ (Farooq Abdullah) ಹಾಗೂ ಕಾಂಗ್ರೆಸ್‌ ಮುಖಂಡ ಮಣಿಶಂಕರ ಅಯ್ಯರ್‌ (Mani Shankar Aiyar) ಆಡಿರುವ ಮಾತುಗಳಿಗೆ ಪ್ರತಿಯಾಗಿ ಅವರು ಹೀಗೆಂದಿದ್ದಾರೆ.

ಫಾರೂಕ್ ಅಬ್ದುಲ್ಲಾ ಮತ್ತು ಮಣಿಶಂಕರ್ ಅಯ್ಯರ್ ಮಾಡಿದ ಟೀಕೆಗಳ ಬಗ್ಗೆ ತೀವ್ರ ವ್ಯಂಗ್ಯವಾಡಿದ ಪ್ರಧಾನಿ ನರೇಂದ್ರ ಮೋದಿ (PM Narendra Modi), ಆರ್ಥಿಕ ಕುಸಿತದಿಂದ ತತ್ತರಿಸಿರುವ ಪಾಕಿಸ್ತಾನ ಬಳೆಗಳನ್ನು ಧರಿಸದಿದ್ದರೆ ಭಾರತವು ಅದನ್ನು ಕೊಡುತ್ತದೆ ಎಂದು ಲೇವಡಿ ಮಾಡಿದರು.

ಪಾಕಿಸ್ತಾನ ಆಕ್ರಮಿತ ಕಾಶ್ಮೀರವನ್ನು (POK) ಹಿಂಪಡೆಯುತ್ತೇವೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮಾಡಿದ ಶಪಥಕ್ಕೆ ಪ್ರತಿಕ್ರಿಯಿದ್ದ ನ್ಯಾಷನಲ್ ಕಾನ್ಫರೆನ್ಸ್ ನಾಯಕ ಫಾರೂಕ್ ಅಬ್ದುಲ್ಲಾ, “ನೆರೆಯ ದೇಶವು ಬಳೆಗಳನ್ನು ಧರಿಸಿಲ್ಲ ಮತ್ತು ಭಾರತಕ್ಕೆ ಹಾನಿ ಮಾಡುವ ಪರಮಾಣು ಬಾಂಬ್‌ಗಳನ್ನು ಹೊಂದಿದೆ” ಎಂದು ಹೇಳಿದ್ದರು. ಮಣಿಶಂಕರ್ ಅಯ್ಯರ್ ಕೂಡ ಇತ್ತೀಚೆಗೆ ಒಂದು ಹೇಳಿಕೆ ನೀಡಿ, “ಭಾರತ ಸರ್ಕಾರ ಪಾಕಿಸ್ತಾನವನ್ನು ಗೌರವಿಸಬೇಕು. ಏಕೆಂದರೆ ಅದು ಪರಮಾಣು ಬಾಂಬ್‌ಗಳನ್ನು ಹೊಂದಿದೆ” ಎಂದಿದ್ದರು. ಈ ವೀಡಿಯೊ ಕಳೆದ ವಾರ ವೈರಲ್ ಆಗಿತ್ತು.

ಇದಕ್ಕೆ ಪ್ರತಿಕ್ರಿಯಿಸಿರುವ ಪ್ರಧಾನಿ ಮೋದಿ, ಪಾಕಿಸ್ತಾನ ಎದುರಿಸುತ್ತಿರುವ ಆರ್ಥಿಕ ಸಮಸ್ಯೆಗಳನ್ನು ಎತ್ತಿ ತೋರಿಸಿದ್ದಾರೆ. “ಪಾಕಿಸ್ತಾನ ಬಳೆಗಳನ್ನು ಧರಿಸದಿದ್ದರೆ, ನಾವು ಅವುಗಳನ್ನು ಕೊಡಿಸುತ್ತೇವೆ. ಅವರ ಬಳಿ ಬಳೆಗಳಿಲ್ಲ, ಅವರ ಬಳಿ ವಿದ್ಯುತ್ ಇಲ್ಲ, ಈಗ ಅವರಿಗೆ ಬಳೆಗಳ ಕೊರತೆಯಿದೆ ಎಂದು ನಮಗೆ ತಿಳಿದಿದೆ” ಎಂದು ಬಿಹಾರದ ಮುಜಾಫರ್‌ಪುರದಲ್ಲಿ ಪ್ರಧಾನಿ ಮೋದಿ ಅಬ್ದುಲ್ಲಾ ಅಥವಾ ಅಯ್ಯರ್ ಹೆಸರನ್ನು ಉಲ್ಲೇಖಿಸದೆ ಹೇಳಿದರು.

ಅಯ್ಯರ್‌ ಮಾತಿಗೆ ಪ್ರತಿಕ್ರಿಯಿಸಿದ ಮೋದಿ, “ಕಾಂಗ್ರೆಸ್ ದೇಶದ ಜನರನ್ನು ಬೆದರಿಸಲು ಪ್ರಯತ್ನಿಸುತ್ತಿದೆ” ಎಂದು ಕಳೆದ ವಾರ ಹೇಳಿದ್ದರು. ಇಂತಹ ದುರ್ಬಲ ಧೋರಣೆ ಈ ಹಿಂದೆ ಗಡಿಯಾಚೆಗಿನ ಭಯೋತ್ಪಾದನೆಗೆ ಉತ್ತೇಜನ ನೀಡಿತ್ತು. ಭಾರತದ ವಿಚ್ಛೇದಿತ ನೆರೆಯ ದೇಶವು ತನ್ನ ಬಾಂಬ್‌ಗಳನ್ನು ಮಾರಾಟ ಮಾಡಲು ಪ್ರಯತ್ನಿಸುತ್ತಿದೆ. ಆದರೆ ಅವುಗಳ ಕಳಪೆ ಗುಣಮಟ್ಟದ ಕಾರಣ ಯಾರೂ ಆಸಕ್ತಿ ವಹಿಸುತ್ತಿಲ್ಲ ಎಂದು ಹೇಳಿದರು.

ಕಳೆದ 10 ವರ್ಷಗಳಲ್ಲಿ ತಮ್ಮ ಸರ್ಕಾರ ₹ 2200 ಕೋಟಿ ಅಕ್ರಮ ಹಣವನ್ನು ವಶಪಡಿಸಿಕೊಂಡಿದೆ. ಆರ್‌ಜೆಡಿ ಮತ್ತು ಕಾಂಗ್ರೆಸ್ ಬಿಹಾರದ ಜನರ ಕಲ್ಯಾಣಕ್ಕಿಂತ ತಮ್ಮ ಮತ ಬ್ಯಾಂಕ್‌ಗೆ ಆದ್ಯತೆ ನೀಡುತ್ತವೆ. ಆರ್‌ಜೆಡಿ ರಾಜ್ಯಕ್ಕೆ ಜಂಗಲ್ ರಾಜ್ ತಂದಿದೆ ಎಂದು ಮೋದಿ ಆರೋಪಿಸಿದರು.

ಲಾಲು ಪ್ರಸಾದ್ ಯಾದವ್ ಅವರ “ಮುಸ್ಲಿಮರು ಮೀಸಲಾತಿ ಪಡೆಯಬೇಕು” ಎಂಬ ಹೇಳಿಕೆಯನ್ನು ಉಲ್ಲೇಖಿಸಿದ ಪ್ರಧಾನಿ ನರೇಂದ್ರ ಮೋದಿ, ಕಾಂಗ್ರೆಸ್ ಮತ್ತು ಆರ್‌ಜೆಡಿ ದಲಿತರು, ಹಿಂದುಳಿದವರು ಮತ್ತು ಬುಡಕಟ್ಟು ಜನಾಂಗದವರಿಗೆ ಸಂವಿಧಾನದಿಂದ ಒದಗಿಸಿದ ಮೀಸಲಾತಿಯನ್ನು ಕಿತ್ತುಕೊಳ್ಳಲಿವೆ ಎಂದು ಹೇಳಿದರು. ಕಾಂಗ್ರೆಸ್ ಮತ್ತು ಆರ್‌ಜೆಡಿ ನಾಯಕರು ತಮ್ಮ ಸ್ವಂತ ಮಕ್ಕಳನ್ನು ಅಭಿವೃದ್ಧಿಪಡಿಸುವಲ್ಲಿ ನಿರತರಾಗಿದ್ದಾರೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: PM Nanrendra Modi: ನಾಳೆ ವಾರಾಣಸಿಯಲ್ಲಿ ಮೋದಿ 3ನೇ ಬಾರಿ ನಾಮಪತ್ರ ಸಲ್ಲಿಕೆ, ಇಂದು ವೈಭವದ ರೋಡ್‌ ಶೋ

Continue Reading

ರಾಜಕೀಯ

POK Explainer in Kannada: ಪಾಕ್ ಆಕ್ರಮಿತ ಕಾಶ್ಮೀರ ಕುರಿತ 15 ಕುತೂಹಲಕಾರಿ ಸಂಗತಿಗಳು

POK Explainer in Kannada: ಕಾಶ್ಮೀರದ ಭಾಗವಾಗಿರುವ ಪಾಕ್ ಆಕ್ರಮಿತ ಕಾಶ್ಮೀರ (Pakistan Occupied Kashmir) ನಿರಂತರ ಚರ್ಚೆಯಲ್ಲಿರುವ ಪ್ರದೇಶ. ಸುಮಾರು 52 ಲಕ್ಷ ಜನಸಂಖ್ಯೆಯನ್ನು ಹೊಂದಿರುವ ಪಿಒಕೆ ಅಭಿವೃದ್ಧಿ ವಿಚಾರದಲ್ಲಿ ಇನ್ನೂ ಹಿಂದುಳಿದಿದೆ. ಇದಕ್ಕೆ ಮುಖ್ಯ ಕಾರಣ ಈ ಪ್ರದೇಶದ ಆಡಳಿತವನ್ನು ಪಾಕಿಸ್ತಾನ ಸರ್ಕಾರ ನಿಯಂತ್ರಿಸುತ್ತಿರುವುದು. ಆದರೂ ಇಲ್ಲಿನ ಕುರಿತು ತಿಳಿದುಕೊಳ್ಳಬೇಕಾದ ಹಲವಾರು ಪ್ರಮುಖ ಅಂಶಗಳಿವೆ. ಪಿಒಕೆ ಕುರಿತ ಮಹತ್ವದ ಮಾಹಿತಿ ಇಲ್ಲಿದೆ.

VISTARANEWS.COM


on

By

POK Explainer in Kannada
Koo

ಪಾಕಿಸ್ತಾನವು (pakistan) 1947ರಲ್ಲಿ ಅಕ್ರಮವಾಗಿ ಆಕ್ರಮಿಸಿಕೊಂಡಿರುವ (POK Explainer in Kannada) ಕಾಶ್ಮೀರದ (kashmir) ಭಾಗಗಳನ್ನು ಪಾಕಿಸ್ತಾನ ಆಕ್ರಮಿತ ಕಾಶ್ಮೀರ (Pakistan Occupied Kashmir) ಎಂದು ಕರೆಯಲಾಗುತ್ತದೆ. ಪಾಕಿಸ್ತಾನವು ಪಿಒಕೆಯನ್ನು (POK) ಎರಡು ಭಾಗಗಳಾಗಿ ವಿಂಗಡಿಸಿದೆ. ಒಂದು ಆಜಾದ್ ಕಾಶ್ಮೀರ (Azad Kashmir) ಹಾಗೂ ಮತ್ತೊಂದು ಗಿಲ್ಗಿಟ್-ಬಾಲ್ಟಿಸ್ತಾನ್ (Gilgit-Baltistan). ಪಾಕಿಸ್ತಾನ ಆಕ್ರಮಿತ ಕಾಶ್ಮೀರದ ಜನಸಂಖ್ಯೆ 2020ರಲ್ಲಿ ಸುಮಾರು 52 ಲಕ್ಷ ಇತ್ತು. ಪಾಕ್‌ ಆಕ್ರಮಿತ ಕಾಶ್ಮೀರದಲ್ಲಿ ಈಗ ದಂಗೆ ಭುಗಿಲೆದ್ದಿದೆ. ಅಲ್ಲಿಯ ಜನ, ಭಾರತದ ಜತೆ ವೀಲೀನವಾಗಬೇಕು ಎಂದು ಆಗ್ರಹಿಸುತ್ತಿದ್ದಾರೆ.

ಕಾಶ್ಮೀರದಲ್ಲಿ 370ನೇ ವಿಧಿಯನ್ನು ರದ್ದುಗೊಳಿಸಿದ ಅನಂತರ ಈಗ ಭಾರತೀಯ ಜನರು ಪಾಕ್ ಆಕ್ರಮಿತ ಕಾಶ್ಮೀರವನ್ನು ವಶಪಡಿಸಿಕೊಳ್ಳುವಂತೆ ಭಾರತ ಸರ್ಕಾರವನ್ನು ಒತ್ತಾಯಿಸುತ್ತಿದ್ದಾರೆ. ಇದಕ್ಕೆ ಕಾರಣಗಳೂ ಇವೆ. ಪಾಕಿಸ್ತಾನ ಆಕ್ರಮಿತ ಕಾಶ್ಮೀರಕ್ಕೆ ಸಂಬಂಧಿಸಿದ ಅನೇಕ ಆಸಕ್ತಿದಾಯಕ ಸಂಗತಿಗಳು ಇಲ್ಲಿವೆ.


ಪಿಒಕೆ ಎಂದರೇನು?

ಪಿಒಕೆ ಭಾರತದ ಅವಿಭಾಜ್ಯ ಅಂಗವಾಗಿದ್ದು, 1947ರಲ್ಲಿ ಪಾಕಿಸ್ತಾನದಿಂದ ಆಕ್ರಮಣಕ್ಕೊಳಗಾದ ಜಮ್ಮು ಮತ್ತು ಕಾಶ್ಮೀರದ ಭಾಗವಾಗಿದೆ.

1. ಪಿಒಕೆಯನ್ನು ಆಡಳಿತಾತ್ಮಕವಾಗಿ ಎರಡು ಭಾಗಗಳಾಗಿ ವಿಂಗಡಿಸಲಾಗಿದೆ. ಇದನ್ನು ಅಧಿಕೃತವಾಗಿ ಜಮ್ಮು ಮತ್ತು ಕಾಶ್ಮೀರ ಮತ್ತು ಗಿಲ್ಗಿಟ್- ಬಾಲ್ಟಿಸ್ತಾನ್ ಎಂದು ಕರೆಯಲಾಗುತ್ತದೆ. ಪಾಕಿಸ್ತಾನದಲ್ಲಿ ‘ಆಜಾದ್ ಜಮ್ಮು ಮತ್ತು ಕಾಶ್ಮೀರ’ವನ್ನು ಆಜಾದ್ ಕಾಶ್ಮೀರ ಎಂದೂ ಕರೆಯುತ್ತಾರೆ.

2. ಪಾಕ್ ಆಕ್ರಮಿತ ಕಾಶ್ಮೀರದ ಮುಖ್ಯಸ್ಥರು ಅಧ್ಯಕ್ಷರಾಗಿದ್ದರೆ, ಪ್ರಧಾನಮಂತ್ರಿಗಳು ಮಂತ್ರಿಗಳ ಮಂಡಳಿಯಿಂದ ಬೆಂಬಲಿತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿದ್ದಾರೆ.

3. ಪಾಕಿಸ್ತಾನ ಆಕ್ರಮಿತ ಕಾಶ್ಮೀರ ತನ್ನ ಸ್ವ-ಆಡಳಿತ ಅಸೆಂಬ್ಲಿ ಎಂದು ಹೇಳಿಕೊಂಡಿದೆ. ಆದರೆ ವಾಸ್ತವವೆಂದರೆ ಅದು ಪಾಕಿಸ್ತಾನದ ನಿಯಂತ್ರಣದಲ್ಲಿ ಕಾರ್ಯನಿರ್ವಹಿಸುತ್ತದೆ.

4. ಪಾಕಿಸ್ತಾನ ಆಕ್ರಮಿತ ಕಾಶ್ಮೀರ ಮೂಲ ಕಾಶ್ಮೀರದ ಒಂದು ಭಾಗವಾಗಿದೆ. ಇದರ ಗಡಿಗಳು ಪಾಕಿಸ್ತಾನದ ಪಂಜಾಬ್ ಪ್ರದೇಶ, ವಾಯವ್ಯ, ಅಫ್ಘಾನಿಸ್ತಾನದ ವಖಾನ್ ಕಾರಿಡಾರ್, ಚೀನಾದ ಕ್ಸಿನ್‌ಜಿಯಾಂಗ್ ಪ್ರದೇಶ ಮತ್ತು ಭಾರತದ ಕಾಶ್ಮೀರದ ಪೂರ್ವಕ್ಕೆ ಸ್ಪರ್ಶಿಸುತ್ತವೆ.

5. ಗಿಲ್ಗಿಟ್- ಬಾಲ್ಟಿಸ್ತಾನ್‌ವನ್ನು ತೆಗೆದುಹಾಕಿದರೆ, ಆಜಾದ್ ಕಾಶ್ಮೀರದ ಪ್ರದೇಶವು 13,300 ಚದರ ಕಿಲೋಮೀಟರ್‌ಗಳಷ್ಟು ಅಂದರೆ ಸರಿಸುಮಾರು ಭಾರತದ ಕಾಶ್ಮೀರದ ಸುಮಾರು 3 ಪಟ್ಟು ವಿಶಾಲವಾಗಿದೆ ಮತ್ತು ಅದರ ಜನಸಂಖ್ಯೆಯು ಸುಮಾರು 52 ಲಕ್ಷ.

6. ಆಜಾದ್ ಕಾಶ್ಮೀರದ ರಾಜಧಾನಿ ಮುಜಫರಾಬಾದ್. ಇದು 10 ಜಿಲ್ಲೆಗಳು, 33 ತೆಹಸಿಲ್‌ಗಳು ಮತ್ತು 182 ಫೆಡರಲ್ ಕೌನ್ಸಿಲ್‌ಗಳನ್ನು ಹೊಂದಿದೆ.

7. ಪಾಕ್ ಆಕ್ರಮಿತ ಕಾಶ್ಮೀರದ ದಕ್ಷಿಣ ಭಾಗದಲ್ಲಿ 8 ಜಿಲ್ಲೆಗಳಿವೆ. ಮಿರ್ ಪುರ್, ಭಿಂಬರ್, ಕೋಟ್ಲಿ, ಮುಜಫರಾಬಾದ್, ಬಾಗ್, ನೀಲಂ, ರಾವಲಕೋಟ್ ಮತ್ತು ಸುಧಾನೋತಿ.

8. ಪಾಕ್ ಆಕ್ರಮಿತ ಕಾಶ್ಮೀರದ ಹುಂಜಾ-ಗಿಲ್ಗಿಟ್, ಶಕ್ಸ್‌ಗಾಮ್ ಕಣಿವೆ, ರಕ್ಸಾಮ್ ಮತ್ತು ಬಾಲ್ಟಿಸ್ತಾನ್ ಪ್ರದೇಶವನ್ನು 1963ರಲ್ಲಿ ಪಾಕಿಸ್ತಾನವು ಚೀನಾಕ್ಕೆ ಹಸ್ತಾಂತರಿಸಿತು. ಈ ಪ್ರದೇಶವನ್ನು ಸೆಡೆಡ್ ಪ್ರದೇಶ ಅಥವಾ ಟ್ರಾನ್ಸ್-ಕಾರಕೋರಂ ಟ್ರ್ಯಾಕ್ಟ್ ಎಂದು ಕರೆಯಲಾಗುತ್ತದೆ.

9. ಪಿಒಕೆಯ ಜನರು ಮುಖ್ಯವಾಗಿ ಕೃಷಿ ಮಾಡುತ್ತಾರೆ. ಅವರ ಮುಖ್ಯ ಆದಾಯದ ಮೂಲಗಳು ಜೋಳ, ಗೋಧಿ, ಅರಣ್ಯ ಮತ್ತು ಜಾನುವಾರುಗಳು.

10. ಈ ಪ್ರದೇಶದಲ್ಲಿ ಕಡಿಮೆ ದರ್ಜೆಯ ಕಲ್ಲಿದ್ದಲು ನಿಕ್ಷೇಪಗಳಿವೆ, ಸೀಮೆಸುಣ್ಣದ ನಿಕ್ಷೇಪಗಳು, ಬಾಕ್ಸೈಟ್ ನಿಕ್ಷೇಪಗಳು ಕಂಡುಬರುತ್ತವೆ. ಕೆತ್ತಿದ ಮರದ ವಸ್ತುಗಳು, ಜವಳಿ ಮತ್ತು ಕಾರ್ಪೆಟ್‌ಗಳ ತಯಾರಿಕೆಯು ಈ ಪ್ರದೇಶಗಳಲ್ಲಿ ನೆಲೆಗೊಂಡಿರುವ ಕೈಗಾರಿಕೆಗಳ ಮುಖ್ಯ ಉತ್ಪನ್ನಗಳಾಗಿವೆ.

11. ಈ ಪ್ರದೇಶದಲ್ಲಿನ ಕೃಷಿ ಉತ್ಪನ್ನಗಳಲ್ಲಿ ಅಣಬೆ, ಜೇನು, ವಾಲ್ನಟ್, ಸೇಬು, ಚೆರ್ರಿ, ಔಷಧೀಯ ಗಿಡಮೂಲಿಕೆ ಮತ್ತು ಸಸ್ಯಗಳು, ರಾಳ, ಮೇಪಲ್ ಮರಗಳು ಸೇರಿವೆ.

12. ಈ ಪ್ರದೇಶದಲ್ಲಿ ಶಾಲೆಗಳು ಮತ್ತು ಕಾಲೇಜುಗಳ ಕೊರತೆಯಿದೆ. ಆದರೆ ಈ ಪ್ರದೇಶವು ಶೇ. 72ರಷ್ಟು ಸಾಕ್ಷರತೆಯನ್ನು ಹೊಂದಿದೆ.

13. ಪಾಷ್ಟೋ, ಉರ್ದು, ಕಾಶ್ಮೀರಿ ಮತ್ತು ಪಂಜಾಬಿಯಂತಹ ಭಾಷೆಗಳನ್ನು ಇಲ್ಲಿನ ಜನರು ಪ್ರಮುಖವಾಗಿ ಮಾತನಾಡುತ್ತಾರೆ.

14. ಪಾಕ್ ಆಕ್ರಮಿತ ಕಾಶ್ಮೀರ ತನ್ನದೇ ಆದ ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್ ಅನ್ನು ಸಹ ಹೊಂದಿದೆ.


ವಿವಾದದ ಮೂಲ ಏನು?

1947ರಲ್ಲಿ ಪಾಕಿಸ್ತಾನದ ಪಷ್ಟೂನ್ ಬುಡಕಟ್ಟು ಜನಾಂಗದವರು ಜಮ್ಮು ಮತ್ತು ಕಾಶ್ಮೀರದ ಮೇಲೆ ದಾಳಿ ಮಾಡಿದರು. ಇವರಿಗೆ ಪಾಕ್‌ ಸೇನೆಯ ಕುಮ್ಮಕ್ಕು ಇತ್ತು. ಆಗ ಈ ನಿರ್ಣಾಯಕ ಪರಿಸ್ಥಿತಿಯನ್ನು ನಿಭಾಯಿಸಲು ಆ ಕಾಲದ ಆಡಳಿತಗಾರ ಜಮ್ಮು ಮತ್ತು ಕಾಶ್ಮೀರದ ಮಹಾರಾಜ ಹರಿ ಸಿಂಗ್ ಅವರು ಭಾರತ ಸರ್ಕಾರದಿಂದ ಮಿಲಿಟರಿ ಸಹಾಯವನ್ನು ಕೋರಿದರು ಮತ್ತು ಅಂದಿನ ಭಾರತದ ಗವರ್ನರ್ ಜನರಲ್ ಮೌಂಟ್ ಬ್ಯಾಟನ್ ಅವರು 26 ಅಕ್ಟೋಬರ್ 1947ರಂದು ಒಪ್ಪಂದಕ್ಕೆ ಸಹಿ ಹಾಕಿದರು. ಇದರಲ್ಲಿ ಮೂರು ವಿಷಯಗಳು ರಕ್ಷಣೆ, ವಿದೇಶಾಂಗ ವ್ಯವಹಾರಗಳು ಮತ್ತು ಸಂವಹನಗಳು ಭಾರತಕ್ಕೆ ಹಸ್ತಾಂತರಿಸಲಾಯಿತು. ಈ ವಿಷಯಗಳನ್ನು ಹೊರತುಪಡಿಸಿ, ಜಮ್ಮು ಮತ್ತು ಕಾಶ್ಮೀರವು ತನ್ನ ಎಲ್ಲಾ ನಿರ್ಧಾರಗಳಿಗೆ ಮುಕ್ತವಾಗಿತ್ತು.

ಒಪ್ಪಂದದ ಈ ಸೇರ್ಪಡೆಯ ಆಧಾರದ ಮೇಲೆ ಭಾರತ ಸರ್ಕಾರವು ಜಮ್ಮು ಮತ್ತು ಕಾಶ್ಮೀರಕ್ಕೆ ಸಂಬಂಧಿಸಿದ ವಿಷಯಗಳಲ್ಲಿ ಮಧ್ಯಪ್ರವೇಶಿಸುವ ಸಂಪೂರ್ಣ ಹಕ್ಕನ್ನು ಹೊಂದಿದೆ ಎಂದು ಹೇಳುತ್ತದೆ. ಮತ್ತೊಂದೆಡೆ ಪಾಕಿಸ್ತಾನ ಇದನ್ನು ಒಪ್ಪುವುದಿಲ್ಲ.

ಪಾಕಿಸ್ತಾನದ ವಾದ ಏನು?

ಕಾಶ್ಮೀರದ ಮೇಲಿನ ಪಾಕಿಸ್ತಾನದ ಹಕ್ಕು 1993ರ ಘೋಷಣೆಯನ್ನು ಆಧರಿಸಿದೆ. ಈ ಘೋಷಣೆಯ ಪ್ರಕಾರ ಪಾಕಿಸ್ತಾನ ಸರ್ಕಾರದ ಆಡಳಿತವನ್ನು ಸ್ಥಾಪಿಸಬೇಕಾದ 5 ರಾಜ್ಯಗಳಲ್ಲಿ ಜಮ್ಮು ಮತ್ತು ಕಾಶ್ಮೀರವೂ ಸೇರಿದೆ. ಆದರೆ ಪಾಕಿಸ್ತಾನದ ಈ ಹೇಳಿಕೆಯನ್ನು ಭಾರತ ಎಂದಿಗೂ ಒಪ್ಪಲಿಲ್ಲ.

ಎರಡು ಭಾಗಗಳಾಗಿ ವಿಂಗಡಣೆ

ಭಾರತ ಮತ್ತು ಪಾಕಿಸ್ತಾನದ ನಡುವಿನ 1947ರ ಯುದ್ಧದ ಅನಂತರ ಕಾಶ್ಮೀರ ಆಡಳಿತವನ್ನು ಎರಡು ಭಾಗಗಳಾಗಿ ವಿಂಗಡಿಸಲಾಯಿತು. ಭಾರತದಿಂದ ಬೇರ್ಪಟ್ಟ ಕಾಶ್ಮೀರದ ಭಾಗವು ಜಮ್ಮು ಮತ್ತು ಕಾಶ್ಮೀರದ ಉಪಖಂಡವಾಯಿತು ಮತ್ತು ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನದ ಗಡಿಯಿಂದ ಸಮೀಪದಲ್ಲಿದ್ದ ಕಾಶ್ಮೀರದ ಭಾಗವನ್ನು ಪಾಕಿಸ್ತಾನ ಆಕ್ರಮಿತ ಕಾಶ್ಮೀರ ಎಂದು ಕರೆಯಲಾಯಿತು.

ಆಜಾದ್ ಕಾಶ್ಮೀರ

ಭಾರತದ ಕಾಶ್ಮೀರದ ಪಶ್ಚಿಮ ಭಾಗಕ್ಕೆ ಹೊಂದಿಕೊಂಡಿದೆ. 2011ರ ಹೊತ್ತಿಗೆ, ಆಜಾದ್ ಕಾಶ್ಮೀರದ ಜಿಡಿಪಿ 3.2 ಶತಕೋಟಿ ಡಾಲರ್ ಎಂದು ಅಂದಾಜಿಸಲಾಗಿದೆ. ಐತಿಹಾಸಿಕವಾಗಿ ಆಜಾದ್ ಕಾಶ್ಮೀರದ ಆರ್ಥಿಕತೆಯು ಕೃಷಿಯ ಮೇಲೆ ಅವಲಂಬಿತವಾಗಿದೆ. ಕಡಿಮೆ ಎತ್ತರದ ಪ್ರದೇಶಗಳಲ್ಲಿ ಹೆಚ್ಚಿನ ಜನಸಂಖ್ಯೆಯು ಗೋಧಿ, ಬಾರ್ಲಿ, ಕಾರ್ನ್ (ಮೆಕ್ಕೆಜೋಳ) ಮಾವು, ರಾಗಿ ಮುಂತಾದ ಬೆಳೆಗಳನ್ನು ಬೆಳೆಯುತ್ತದೆ.

ದಕ್ಷಿಣ ಜಿಲ್ಲೆಗಳಲ್ಲಿ, ಪಾಕಿಸ್ತಾನಿ ಸಶಸ್ತ್ರ ಪಡೆಗಳಿಗೆ ಅನೇಕ ಪುರುಷರನ್ನು ನೇಮಿಸಿಕೊಳ್ಳಲಾಗಿದೆ. ಇತರ ಸ್ಥಳೀಯರು ಯುರೋಪ್ ಅಥವಾ ಮಧ್ಯಪ್ರಾಚ್ಯದ ದೇಶಗಳಿಗೆ ಪ್ರಯಾಣಿಸುತ್ತಾರೆ. ಅಲ್ಲಿ ಅವರು ಕಾರ್ಮಿಕ-ಆಧಾರಿತ ಉದ್ಯೋಗಗಳಲ್ಲಿ ಕೆಲಸ ಮಾಡುತ್ತಾರೆ.

ಇದನ್ನೂ ಓದಿ: PoK Crisis: ಪಾಕ್‌ ಆಕ್ರಮಿತ ಕಾಶ್ಮೀರದಲ್ಲಿ ದಂಗೆಯೆದ್ದ ಜನ, ಗಲಾಟೆ; ಭಾರತದ ಜತೆ ವಿಲೀನಕ್ಕೆ ಆಗ್ರಹ!

ಉತ್ತರ ಪ್ರದೇಶ

ಗಿಲ್ಗಿಟ್ ಪ್ರದೇಶವನ್ನು ಕಾಶ್ಮೀರದ ಮಹಾರಾಜರು ಬ್ರಿಟಿಷ್ ಸರ್ಕಾರಕ್ಕೆ ಗುತ್ತಿಗೆ ನೀಡಿದರು. ಬಾಲ್ಟಿಸ್ತಾನ್ 1947ರಲ್ಲಿ ಪಾಕಿಸ್ತಾನದಿಂದ ಆಕ್ರಮಿಸಲ್ಪಟ್ಟ ಪಶ್ಚಿಮ ಲಡಾಖ್ ಪ್ರಾಂತ್ಯದ ಪ್ರದೇಶವಾಗಿತ್ತು. ಈ ಪ್ರದೇಶವು ವಿವಾದಿತ ಜಮ್ಮು ಮತ್ತು ಕಾಶ್ಮೀರ ಪ್ರದೇಶದ ಭಾಗವಾಗಿದೆ. ಪಾಕ್ ಆಕ್ರಮಿತ ಕಾಶ್ಮೀರ (ಪಿಒಕೆ) ಅತ್ಯಂತ ಕಳಪೆ ಸ್ಥಿತಿಯಲ್ಲಿದೆ. ಪಾಕಿಸ್ತಾನವು ಈ ಪ್ರದೇಶದ ಮೇಲೆ ಹಿಡಿತ ಹೊಂದಿದೆ. ಆದರೆ ಈ ಪ್ರದೇಶವನ್ನು ಪಾಕಿಸ್ತಾನವು ಉದ್ದೇಶಪೂರ್ವಕವಾಗಿ ಅಭಿವೃದ್ಧಿಪಡಿಸಿಲ್ಲ. ಆದ್ದರಿಂದ ಈ ಪ್ರದೇಶದ ಬಡ ಜನರನ್ನು ಭಯೋತ್ಪಾದಕರಂತೆ ತರಬೇತಿ ನೀಡಲು ಮತ್ತು ಭಾರತವನ್ನು ಅಸ್ಥಿರಗೊಳಿಸಲು ಬಳಸಿಕೊಳ್ಳುತ್ತಿದೆ.

Continue Reading

ವಿದೇಶ

Gold Heist Case: ಬಹುಕೋಟಿ ಚಿನ್ನ, ವಿದೇಶಿ ಕರೆನ್ಸಿ ದರೋಡೆ; ಭಾರತೀಯ ಮೂಲದ ವ್ಯಕ್ತಿ ಲಾಕ್‌!

Gold Heist Case: ಕಳೆದ ವರ್ಷ ಏಪ್ರಿಲ್‌ 17ರಂದು 22 ಕೆನಾಡಿಯನ್‌ ಡಾಲರ್ಸ್‌ ಮೌಲ್ಯದ ವಿದೇಶಿ ಕರೆನ್ಸಿ ಮತ್ತು ಗೋಲ್ಡ್‌ ಬಿಸ್ಕೇಟ್ಸ್‌ ಇದ್ದ ಏರ್‌ ಕಾರ್ಗೋ ಕಂಟೈನರ್‌ ಅನ್ನು ನಕಲಿ ದಾಖಲೆ ಬಳಸಿ ದರೋಡೆ ಮಾಡಲಾಗಿತ್ತು. ಈ ಕಂಟೈನರ್‌ ಏರ್‌ ಕೆನಡಾ ವಿಮಾನದ ಮೂಲಕ ಸ್ವಿಡ್ಜರ್‌ಲ್ಯಾಂಡ್‌ನ ಜೂರಿಚ್‌ ಇಂದ ಟೊರೊಂಟೋ ವಿಮಾನ ನಿಲ್ದಾಣಕ್ಕೆ ಬಂದಿತ್ತು. ವಿಮಾನ ಲ್ಯಾಂಡ್‌ ಆಗ್ತಿದ್ದಂತೆ ಕಾರ್ಗೋವನ್ನು ವಿಮಾನ ನಿಲ್ದಾಣದ ಬೇರೆ ಪ್ರದೇಶಕ್ಕೆ ಸಾಗಿಲಾಗಿತ್ತು. ಇದಾದ ಬಳಿಕ ಅದು ನಿಗೂಡವಾಗಿ ಕಣ್ಮರೆ ಆಗಿತ್ತು.

VISTARANEWS.COM


on

Koo

ಒಟ್ಟವಾ: ಕೆನಡಾ(Canada)ದಲ್ಲಿ ಬಹುಕೋಟಿ ಡಾಲರ್‌ ಮೌಲ್ಯದ ಚಿನ್ನ ದರೋಡೆ ಪ್ರಕರಣ(Gold Heist Case)ಕ್ಕೆ ಸಂಬಂಧಿಸಿದಂತೆ ಭಾರತೀಯ ಮೂಲದ ವ್ಯಕ್ತಿಯನ್ನು ಟೊರೊಂಟೋ ವಿಮಾನ ನಿಲ್ದಾಣ(Pearson International Airport)ದಲ್ಲಿ ಅರೆಸ್ಟ್‌ ಮಾಡಲಾಗಿದೆ. ದೇಶದ ಇತಿಹಾಸದಲ್ಲೇ ಇದೊಂದು ಅತಿ ದೊಡ್ಡ ದರೋಡೆ ಪ್ರಕರಣವಾಗಿದ್ದು, ಈಗಾಗಲೇ ಪೊಲೀಸರು ಪ್ರಕರಣಕ್ಕೆ ಸಂಬಂಧಿಸಿದಂತೆ ಐವರನ್ನು ಅರೆಸ್ಟ್‌ ಮಾಡಿದೆ. ಇನ್ನು ಬಂಧಿತನನ್ನು ಅರ್ಚಿತ್‌ ಗ್ರೋವರ್‌ ಎಂದು ಗುರುತಿಸಲಾಗಿದ್ದು, ಈತನ ಬಂಧನಕ್ಕಾಗಿ ಕೆನಡಾದಾದ್ಯಂತ ವಾರೆಂಟ್‌ ಜಾರಿಗೊಳಿಸಲಾಗಿತ್ತು. ಗ್ರೋವರ್‌ ವಿರುದ್ಧ 5,000ಡಾಲರ್‌ ಕಳ್ಳತನ ಮತ್ತು ದರೋಡೆಗೆ ಸಂಚು ರೂಪಿಸಿದ ಪ್ರಕರಣ ದಾಖಲಾಗಿದೆ. ಅಲ್ಲದೇ ಅಮೆರಿಕದ ಮಿಲಿಟರಿ ಶಸ್ತ್ರಾಸ್ತ್ರ ಸಾಗಾಟ ಪ್ರಕರಣದಲ್ಲೂ ಈತನ ಹೆಸರು ಕೇಳಿ ಬಂದಿದೆ.

ಏನಿದು ದರೋಡೆ ಪ್ರಕರಣ?

ಕಳೆದ ವರ್ಷ ಏಪ್ರಿಲ್‌ 17ರಂದು 22 ಕೆನಾಡಿಯನ್‌ ಡಾಲರ್ಸ್‌ ಮೌಲ್ಯದ ವಿದೇಶಿ ಕರೆನ್ಸಿ ಮತ್ತು ಗೋಲ್ಡ್‌ ಬಿಸ್ಕೇಟ್ಸ್‌ ಇದ್ದ ಏರ್‌ ಕಾರ್ಗೋ ಕಂಟೈನರ್‌ ಅನ್ನು ನಕಲಿ ದಾಖಲೆ ಬಳಸಿ ದರೋಡೆ ಮಾಡಲಾಗಿತ್ತು. ಈ ಕಂಟೈನರ್‌ ಏರ್‌ ಕೆನಡಾ ವಿಮಾನದ ಮೂಲಕ ಸ್ವಿಡ್ಜರ್‌ಲ್ಯಾಂಡ್‌ನ ಜೂರಿಚ್‌ ಇಂದ ಟೊರೊಂಟೋ ವಿಮಾನ ನಿಲ್ದಾಣಕ್ಕೆ ಬಂದಿತ್ತು. ವಿಮಾನ ಲ್ಯಾಂಡ್‌ ಆಗ್ತಿದ್ದಂತೆ ಕಾರ್ಗೋವನ್ನು ವಿಮಾನ ನಿಲ್ದಾಣದ ಬೇರೆ ಪ್ರದೇಶಕ್ಕೆ ಸಾಗಿಲಾಗಿತ್ತು. ಇದಾದ ಬಳಿಕ ಅದು ನಿಗೂಡವಾಗಿ ಕಣ್ಮರೆ ಆಗಿತ್ತು. ಇನ್ನು ಕಾರ್ಗೋದಲ್ಲಿ 400 ಕೆಜಿ ತೂಕದ 6600 ಚಿನ್ನದ ಗಟ್ಟಿ ಇದ್ದಿದ್ದು, ಅದರ ಮೌಲ್ಯ ಸುಮಾರು 20 ಮಿಲಿಯನ್‌ ಡಾಲರ್‌ ಎಂದು ಅಂದಾಜಿಸಲಾಗಿದೆ. ಇನ್ನು ಕಾರ್ಗೋದಲ್ಲಿ 2.5 ಮಿಲಿಯನ್‌ ಡಾಲರ್‌ ಮೌಲ್ಯದ ವಿದೇಶಿ ಕರೆನ್ಸಿ ಇತ್ತು ಎನ್ನಲಾಗಿದೆ.

ಇದನ್ನೂ ಓದಿ: Lok Sabha election 2024: 4ನೇ ಹಂತದ ಮತದಾನ..ಮೈತ್ರಿಕೂಟದಲ್ಲಿ ಬಿಕ್ಕಟ್ಟು ನೂರು.. ಗೆಲುವಿನ ಲೆಕ್ಕಾಚಾರದಲ್ಲಿ ಎನ್‌ಡಿಎ ಮತ್ತು ಇಂಡಿಯಾ

ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ ತಿಂಗಳು ಭಾರತ ಮೂಲದ ಪರಂಪಾಲ್‌ ಸಿಧು, ಅಮಿತ್‌ ಜಲೋಟಾ, ಅಮ್ಮದ್‌ ಚೌಧರಿ, ಅಲಿರಾಝಾ ಮತ್ತು ಪ್ರಶಾಂತ್‌ ಪರಮಲಿಂಗಂ ಎಂಬುವವರನ್ನು ಪೊಲೀಸರು ಅರೆಸ್ಟ್‌ ಮಾಡಿದ್ದರು. ಇನ್ನು ನಾಪತ್ತೆಯಾಗಿರುವ ಸಿಮ್ರನ್‌ ಪ್ರಿತ್‌ ಪನೇಸರ್‌ ಮತ್ತು ಅರ್ಸಲನ್‌ ಚೌಧರಿ ಪತ್ತೆಗೆ ಪೊಲೀಸರರು ಕೆನಡಾದಾದ್ಯಂತ ಅರೆಸ್ಟ್‌ ವಾರೆಂಟ್‌ ಜಾರಿಗೊಳಿಸಿದ್ದಾರೆ. ಇನ್ನು ಈ ಭಾರೀ ದರೋಡೆಗೆ ಕೆನಡಾ ಏರ್‌ಲೈನ್‌ ನೌಕರರು ಸಹಾಯ ಮಾಡಿರುವ ಆರೋಪ ಕೇಳಿ ಬಂದಿತ್ತು. ಒಬ್ಬನನ್ನು ಈಗಾಗಲೇ ಅರೆಸ್ಟ್‌ ಮಾಡಿದ್ದು, ಇನ್ನೊಬ್ಬನ ಬಂಧನಕ್ಕೆ ವಾರೆಂಟ್‌ ಹೊರಡಿಸಿದೆ. ಪೊಲೀಸರ ಮಾಹಿತಿ ಪ್ರಕಾರ ತನಿಖಾಧಿಕಾರಿಗಳು ಸುಮಾರು ಕೆನಡಾದ ಡಾಲರ್ 89,000 ಮೌಲ್ಯದ ಒಂದು ಕಿಲೋಗ್ರಾಂ ಚಿನ್ನ, ಸುಮಾರು 434,000 ಡಾಲರ್‌ ಮೌಲ್ಯದ ಕೆನಡಾದ ಕರೆನ್ಸಿಯನ್ನೂ ವಶಕ್ಕೆ ಪಡೆಯಲಾಗಿದೆ.

Continue Reading
Advertisement
Karnataka Weather Forecast
ಮಳೆ1 min ago

Karnataka Weather : ನಾಳೆ ಮುಕ್ಕಾಲು ಕರ್ನಾಟಕದಲ್ಲಿ ಬಿರುಗಾಳಿ ಜತೆಗೆ ವಿಪರೀತ ಮಳೆ

Overweight man suffering from chest pain, high blood pressure, cholesterol level
ಆರೋಗ್ಯ5 mins ago

Health Tips Kannada: ಅನಾರೋಗ್ಯದ ಮೂಲ ಕೊಲೆಸ್ಟ್ರಾಲ್‌ ತಗ್ಗಿಸಬೇಕೆ? ಬೆಳಗ್ಗೆ ಈ ಪೇಯ ಕುಡಿಯಿರಿ

Prajwal Revanna Case HD Revanna bail plea arguments and counter arguments
ಕ್ರೈಂ12 mins ago

Prajwal Revanna Case: ಎಚ್‌.ಡಿ. ರೇವಣ್ಣ ಜಾಮೀನು ಅರ್ಜಿಯ ರೋಚಕ ವಾದ – ಪ್ರತಿವಾದ; ಇಲ್ಲಿದೆ ಇಂಚಿಂಚು ಡಿಟೇಲ್ಸ್‌

IPL 2024
ಪ್ರಮುಖ ಸುದ್ದಿ15 mins ago

IPL 2024 : ಡೆಲ್ಲಿ ವಿರುದ್ದ ಗೆದ್ದ ಆರ್​ಸಿಬಿ ತಂಡದ ಸಂಭ್ರಮ ಹೀಗಿತ್ತು, ಇಲ್ಲಿದೆ ವಿಡಿಯೊ

Modi Roadshow Live
ದೇಶ20 mins ago

Modi Roadshow Live: ವಾರಾಣಸಿಯಲ್ಲಿ ಮೋದಿ ಭರ್ಜರಿ ರೋಡ್‌ ಶೋ; ಲೈವ್‌ ಇಲ್ಲಿ ವೀಕ್ಷಿಸಿ

Viral Video
ದೇಶ24 mins ago

Viral Video: ಜೊತೆಗಿದ್ದ ಬೆಂಬಲಿಗನನ್ನೇ ವೇದಿಕೆಯಿಂದ ತಳ್ಳಿದ ಲಾಲೂ ಪುತ್ರ; ಎಲ್ಲೆಡೆ ಭಾರೀ ಖಂಡನೆ

Naxals
ದೇಶ43 mins ago

Naxals: ಮತ್ತೆ ಮೂವರು ನಕ್ಸಲರ ಹತ್ಯೆ, ಎನ್‌ಕೌಂಟರ್‌ನಲ್ಲಿ ಈ ವರ್ಷ ಶತಕ ಬಾರಿಸಿದ ಭದ್ರತಾ ಸಿಬ್ಬಂದಿ!

sslc result
ಶಿಕ್ಷಣ46 mins ago

SSLC Result : ರಾಜ್ಯ ಶಿಕ್ಷಣ ಗುಣಮಟ್ಟ ಕುಸಿತ, ICSE-CBSE ಕಡೆ ವಲಸೆ; ಇಲಾಖೆ ವಿರುದ್ಧ ಕ್ಯಾಮ್ಸ್‌ ಕಟು ಟೀಕೆ

Pavithra Jayaram died in the accident may alive if the ambulance arrived
ಸಿನಿಮಾ50 mins ago

Pavithra Jayaram: ಪವಿತ್ರ ಜಯರಾಂಗೆ ಅಂತಿಮ ವಿದಾಯ; ಭಯದಲ್ಲೇ ಪ್ರಾಣ ಬಿಟ್ರಾ ನಟಿ?

Sequins partywear fashion
ಫ್ಯಾಷನ್51 mins ago

Sequins Partywear Fashion: ಪಾರ್ಟಿಪ್ರಿಯರಿಗೆ ಬಂತು ಮಿರಮಿರ ಮಿನುಗುವ ಸಿಕ್ವೀನ್ಸ್‌ ಔಟ್‌ಫಿಟ್ಸ್‌

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Weather Forecast
ಮಳೆ2 mins ago

Karnataka Weather : ನಾಳೆ ಮುಕ್ಕಾಲು ಕರ್ನಾಟಕದಲ್ಲಿ ಬಿರುಗಾಳಿ ಜತೆಗೆ ವಿಪರೀತ ಮಳೆ

Modi Roadshow Live
ದೇಶ20 mins ago

Modi Roadshow Live: ವಾರಾಣಸಿಯಲ್ಲಿ ಮೋದಿ ಭರ್ಜರಿ ರೋಡ್‌ ಶೋ; ಲೈವ್‌ ಇಲ್ಲಿ ವೀಕ್ಷಿಸಿ

Karnataka Rain
ಮಳೆ7 hours ago

Karnataka Rain : ಕುರಿಗಾಹಿಗಳ ಪ್ರಾಣ ಕಸಿದ ಸಿಡಿಲು; 20ಕ್ಕೂ ಹೆಚ್ಚು ಕುರಿಗಳು ಸಾವು

karnataka weather forecast karnataka rains
ಮಳೆ11 hours ago

Karnataka Weather : ವಾಯುಭಾರ ಕುಸಿತ; ಕರಾವಳಿ, ಮಲೆನಾಡು ಸೇರಿ ಹಲವೆಡೆ ಭಾರಿ ಮಳೆ ಎಚ್ಚರಿಕೆ

Dina Bhavishya
ಭವಿಷ್ಯ13 hours ago

Dina Bhavishya : ಇಂದು ಹೂಡಿಕೆ ಮಾಡಿದರೆ ಗಳಿಸುವಿರಿ ಭಾರಿ ಲಾಭ; ಅನಿರೀಕ್ಷಿತ ಸುದ್ದಿಯಿಂದ ಸಂತಸ

Prajwal Revanna Case I was never kidnapped and son has made a false complaint Video of victim goes viral
ಕ್ರೈಂ23 hours ago

Prajwal Revanna Case: ರೇವಣ್ಣ ಕೇಸ್‌ಗೆ ಟ್ವಿಸ್ಟ್‌! ನನ್ನ ಕಿಡ್ನ್ಯಾಪ್‌ ಮಾಡಿಯೇ ಇಲ್ಲ; ಮಗ ತಪ್ಪು ದೂರು ಕೊಟ್ಟಿದ್ದಾನೆ; ಸಂತ್ರಸ್ತೆಯ ವಿಡಿಯೊ ವೈರಲ್

Karnataka Weather Forecast Heavy rain in chikkmagalur
ಮಳೆ24 hours ago

Karnataka Weather : ಚಿಕ್ಕಮಗಳೂರಲ್ಲಿ ಅಬ್ಬರಿಸುತ್ತಿರುವ ಮಳೆ; ಬೃಹತ್‌ ಮರ ಬಿದ್ದು ಮಹಿಳೆ ಸ್ಥಳದಲ್ಲೇ ಸಾವು

Prajwal Revanna Case Naveen Gowda post against MLA A Manju
ರಾಜಕೀಯ1 day ago

Prajwal Revanna Case: ಪ್ರಜ್ವಲ್‌ ಪೆನ್‌ಡ್ರೈವ್‌ ವಿಡಿಯೊ ವೈರಲ್‌ಗೆ ಟ್ವಿಸ್ಟ್‌; ಶಾಸಕ ಎ. ಮಂಜು ವಿರುದ್ಧ ನವೀನ್‌ ಗೌಡ ಪೋಸ್ಟ್‌!

Prajwal Revanna Case: Beware of making a statement Parameshwara warns to HD Kumaraswamy
ಕ್ರೈಂ1 day ago

Prajwal Revanna Case: ಪ್ರಜ್ವಲ್‌ ರೇವಣ್ಣ ಕೇಸ್‌; ನಿಮ್ಮನ್ನೂ ವಿಚಾರಣೆಗೆ ಕರೆಯಬೇಕಾಗುತ್ತದೆ: ಎಚ್‌ಡಿಕೆಗೆ ಪರಮೇಶ್ವರ್‌ ವಾರ್ನಿಂಗ್‌!

Prajwal Revanna Case Two people of pen drive allottees arrested
ಕ್ರೈಂ1 day ago

Prajwal Revanna Case: ಪ್ರಜ್ವಲ್‌ ರೇವಣ್ಣ ಅಶ್ಲೀಲ ವಿಡಿಯೊ ಕೇಸ್‌; ಇಬ್ಬರು ಪೆನ್‌ಡ್ರೈವ್‌ ಹಂಚಿಕೆದಾರರ ಅರೆಸ್ಟ್‌

ಟ್ರೆಂಡಿಂಗ್‌