PARIS OLYMPICS 2024 : ಪ್ಯಾರಿಸ್ ಒಲಿಂಪಿಕ್ಸ್​​ ಗ್ರಾಮದಲ್ಲೇ ಮದುವೆ ನಿಶ್ಚಿತಾರ್ಥ ಮಾಡಿಕೊಂಡ ಅಥ್ಲೀಟ್​ಗಳು - Vistara News

ಪ್ರಮುಖ ಸುದ್ದಿ

PARIS OLYMPICS 2024 : ಪ್ಯಾರಿಸ್ ಒಲಿಂಪಿಕ್ಸ್​​ ಗ್ರಾಮದಲ್ಲೇ ಮದುವೆ ನಿಶ್ಚಿತಾರ್ಥ ಮಾಡಿಕೊಂಡ ಅಥ್ಲೀಟ್​ಗಳು

PARIS OLYMPICS 2024 : ಈ ಸುದ್ದಿ ಮತ್ತು ಪೋಸ್ಟ್ ಅನ್ನು ಒಲಿಂಪಿಕ್ಸ್​​ ಅಧಿಕೃತ ಎಕ್ಸ್ ಹ್ಯಾಂಡಲ್ ಹಂಚಿಕೊಂಡಿದೆ “ಪ್ಯಾರಿಸ್​ 2024 ಒಲಿಂಪಿಕ್ ಗ್ರಾಮದಲ್ಲಿ ನಡೆದ ಮೊದಲ ಮದುವೆ ಪ್ರಸ್ತಾಪ. ಪಾಬ್ಲೊ ಸಿಮೊನೆಟ್ ಮತ್ತು ಪಿಲಾರ್ ಕ್ಯಾಂಪೊಯ್ ಅರ್ಜೆಂಟೀನಾದ ತಮ್ಮ ಹ್ಯಾಂಡ್​​ಬಾಲ್​ ಮತ್ತು ಹಾಕಿ ತಂಡದ ಸದಸ್ಯರಿಂದ ಅಭಿನಂದನೆಗಳನ್ನು ಪಡೆದುಕೊಂಡರು.

VISTARANEWS.COM


on

PARIS OLYMPICS 2024
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಪ್ಯಾರಿಸ್ : ಪ್ರೇಮಿಗಳ ನಗರ ಪ್ಯಾರಿಸ್​​ನಲ್ಲಿ 2024ರ (PARIS OLYMPICS 2024) ಒಲಿಂಪಿಕ್ ಕ್ರೀಡಾಕೂಟ ಉದ್ಘಾಟನೆಯಾಗುವ ಮೊದಲೇ ಅಥ್ಲೀಟ್​ಗಳಿಬ್ಬರು ಮದುವೆ ಪ್ರಸ್ತಾಪವನ್ನು ಹಂಚಿಕೊಂಡಿದ್ದಾರೆ. ಅರ್ಜೆಂಟೀನಾ ಪುರುಷರ ಹ್ಯಾಂಡ್​​ಬಾಳ್​ ತಂಡದ ಸ್ಟಾರ್ ಆಟಗಾರ ಪಾಬ್ಲೊ ಸಿಮೊನೆಟ್ ಮತ್ತು ಅರ್ಜೆಂಟೀನಾ ಮಹಿಳಾ ಹಾಕಿ ತಂಡದ ಆಟಗಾರ್ತಿ ಮಾರಿಯಾ ಕ್ಯಾಂಪೊಯ್ ಪ್ರಪೋಸ್ ಮಾಡಿದರು. ಗ್ರೂಪ್ ಫೋಟೋ ಸೆಷನ್ ಸಮಯದಲ್ಲಿ, ಸಿಮೊನೆಟ್ ಬಗ್ಗಿ ನಿಂತು ಮಾರಿಯಾ ಕ್ಯಾಂಪೊಯ್ ಗೆ ಉಂಗುರ ತೊಡಿಸಿ ಪ್ರಪೋಸ್​ ಮಾಡಿದ್ದಾರೆ. ಆಕೆಯ ಕಣ್ಣುಗಳು ಖುಷಿಯಿಂದ ಅರಳುತ್ತಿದ್ದಂತೆ ತಂಡದ ಸದಸ್ಯರು ಹರ್ಷೋದ್ಘಾರ ಮಾಡಿದರು. ಉಳಿದವರು ಈ ಕ್ಷಣವನ್ನು ಸಂಭ್ರಮದಿಂದ ಆಚರಿಸಿದರು.

ಈ ಸುದ್ದಿ ಮತ್ತು ಪೋಸ್ಟ್ ಅನ್ನು ಒಲಿಂಪಿಕ್ಸ್​​ ಅಧಿಕೃತ ಎಕ್ಸ್ ಹ್ಯಾಂಡಲ್ ಹಂಚಿಕೊಂಡಿದೆ “ಪ್ಯಾರಿಸ್​ 2024 ಒಲಿಂಪಿಕ್ ಗ್ರಾಮದಲ್ಲಿ ನಡೆದ ಮೊದಲ ಮದುವೆ ಪ್ರಸ್ತಾಪ. ಪಾಬ್ಲೊ ಸಿಮೊನೆಟ್ ಮತ್ತು ಪಿಲಾರ್ ಕ್ಯಾಂಪೊಯ್ ಅರ್ಜೆಂಟೀನಾದ ತಮ್ಮ ಹ್ಯಾಂಡ್​​ಬಾಲ್​ ಮತ್ತು ಹಾಕಿ ತಂಡದ ಸದಸ್ಯರಿಂದ ಅಭಿನಂದನೆಗಳನ್ನು ಪಡೆದುಕೊಂಡರು.

ಅಧಿಕೃತ ವೆಬ್​ಸೈಟ್​ ವರದಿಯ ಪ್ರಕಾರ, ಪಾಬ್ಲೊ ಸಿಮೊನೆಟ್ ಅವರ ಮದುವೆ ಪ್ರಸಾಪದ ಸಮಯವು ಇದಕ್ಕಿಂತ ಉತ್ತಮವಾಗಿರಲು ಸಾಧ್ಯವಿಲ್ಲ. ಸ್ಯಾಂಟಿಯಾಗೊ 2023 ಪ್ಯಾನ್ ಅಮೆರಿಕನ್ ಕ್ರೀಡಾಕೂಟದಲ್ಲಿ ಪ್ಯಾರಿಸ್ 2024 ರಲ್ಲಿ ತಮ್ಮ ತಂಡಗಳು ತಮ್ಮ ಸ್ಥಾನಗಳನ್ನು ಭದ್ರಪಡಿಸಿದ ಕೆಲವೇ ನಿಮಿಷಗಳಲ್ಲಿ, ಸಿಮೊನೆಟ್ ತನ್ನ ಪ್ರಣಯದ ಕತೆಯನ್ನು ಬಹಿರಂಗಪಡಿಸಿದ್ದಾರೆ.

ಇದನ್ನೂ ಓದಿ: Paris Olympics 2024 : ಒಲಿಂಪಿಕ್ಸ್​ಗೆ ಕೆಲವೇ ಗಂಟೆಗಳ ಮೊದಲು ಫ್ರಾನ್ಸ್​ನ ರೈಲ್ವೆ ವ್ಯವಸ್ಥೆ ಮೇಲೆ ವಿಧ್ವಂಸಕ ದಾಳಿ

2015ರಿಂದ, ಸಿಮೊನೆಟ್ ಮತ್ತು ಕ್ಯಾಂಪೊಯ್ ತಮ್ಮ ಅಥ್ಲೆಟಿಕ್ ವೃತ್ತಿಜೀವನದ ನಡುವೆಯೂ ಪ್ರೇಮಕಥೆ ಮುಂದುವರಿಸಿದ್ದಾರೆ. ರಿಯೋ 2016ರಲ್ಲಿ ಒಟ್ಟಿಗೆ ಒಲಿಂಪಿಕ್ ಪಯಣ ಆರಂಭಿಸಿದ್ದರು. ಈಗ, ಎಂಟು ವರ್ಷಗಳ ನಂತರ, ಪ್ಯಾರಿಸ್ ಎಂದರೆ ಪ್ರೀತಿಯ ನಗರದಲ್ಲಿ ಅವರ ಪ್ರೇಮ ಬಹಿರಂಗವಾಗಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

ಕೊಲೆಯಾದ ರೌಡಿಯ ಮೈಮೇಲಿದ್ದ ಟ್ಯಾಟೂ ನೆರವಿನಿಂದ ಆರೋಪಿಗಳ ಬಂಧನ; ಹೇಗಂತೀರಾ? ಇಲ್ಲಿದೆ ರೋಚಕ ಕತೆ

ಮಹಾರಾಷ್ಟ್ರದಲ್ಲಿ ವ್ಯಕ್ತಿಯ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಪಾ ಮಾಲೀಕ ಸಂತೋಷ್‌ ಶೆರೆಕರ್‌ ಸೇರಿ ಮೂವರು ಆರೋಪಿಗಳನ್ನು ಪೊಲೀಸರು ಸಿನಿಮೀಯ ರೀತಿಯಲ್ಲಿ ತನಿಖೆ ನಡೆಸಿ ಬಂಧಿಸಿದ್ದಾರೆ. ಇನ್ನಿಬ್ಬರನ್ನು ವಶಪಡಿಸಿಕೊಂಡು ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ. ಬುಧವಾರ ಬೆಳಗಿನ ಜಾವ ಮುಂಬೈನ ವೊರ್ಲಿಯಲ್ಲಿರುವ ಸಾಫ್ಟ್‌ ಟಚ್‌ ಸ್ಪಾದಲ್ಲಿ 48 ವರ್ಷದ ಗುರು ವಾಘ್ಮರೆಯನ್ನು ಕೊಲೆ ಮಾಡಲಾಗಿದೆ ಎಂದು ತಿಳಿದುಬಂದಿದೆ.

VISTARANEWS.COM


on

Mumbai Spa
Koo

ಮುಂಬೈ: ಮಹಾರಾಷ್ಟ್ರದ ಮುಂಬೈನಲ್ಲಿರುವ (Mumbai) ವೊರ್ಲಿ ಪ್ರದೇಶದ ಸ್ಪಾ (Spa) ಒಂದರಲ್ಲಿ ಕೊಲೆಯಾದ ವ್ಯಕ್ತಿಯ ಮೈಮೇಲೆ ಇದ್ದ ಟ್ಯಾಟೂ, ಟ್ಯಾಟೂ ಹಾಕಿಸಿಕೊಂಡ ಹೆಸರುಗಳು ಕೊಲೆ ಆರೋಪಿಗಳನ್ನು ಬಂಧಿಸಲು ಸಾಧ್ಯವಾಗಿದೆ. ಟ್ಯಾಟೂ (Tattoo) ಹೆಸರುಗಳೇ ಹಿಸ್ಟರಿ ಶೀಟರ್‌ ಗುರು ವಾಘ್ಮರೆಯ ಕೊಲೆ ಆರೋಪಿಗಳನ್ನು ಪೊಲೀಸರು ಸಿನಿಮೀಯ ರೀತಿಯಲ್ಲಿ ತನಿಖೆ ನಡೆಸಿ, ಇದುವರೆಗೆ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಈ ಪ್ರಕರಣವೀಗ ದೇಶಾದ್ಯಂತ ಸುದ್ದಿಯಾಗಿದೆ.

ಗುರು ವಾಘ್ಮರೆಯನ್ನು ಜುಲೈ 24ರಂದು ಸ್ಪಾನಲ್ಲಿ ಕೊಲೆ ಮಾಡಲಾಗಿದೆ. ಸ್ಪಾ ಮಾಲೀಕ ಸಂತೋಷ್‌ ಶೆರೆಕರ್‌ ಸೇರಿ ಮೂವರು ಆರೋಪಿಗಳನ್ನು ಪೊಲೀಸರು ಸಿನಿಮೀಯ ರೀತಿಯಲ್ಲಿ ತನಿಖೆ ನಡೆಸಿ ಬಂಧಿಸಿದ್ದಾರೆ. ಇನ್ನಿಬ್ಬರನ್ನು ವಶಪಡಿಸಿಕೊಂಡು ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ. ಬುಧವಾರ ಬೆಳಗಿನ ಜಾವ ಮುಂಬೈನ ವೊರ್ಲಿಯಲ್ಲಿರುವ ಸಾಫ್ಟ್‌ ಟಚ್‌ ಸ್ಪಾದಲ್ಲಿ 48 ವರ್ಷದ ಗುರು ವಾಘ್ಮರೆಯನ್ನು ಕೊಲೆ ಮಾಡಲಾಗಿದೆ ಎಂದು ತಿಳಿದುಬಂದಿದೆ.

Mumbai Spa
Mumbai Spa

ಟ್ಯಾಟೂ ಹೆಸರುಗಳೇ ಕೇಸ್‌ ಭೇದಿಸಲು ಕಾರಣ

ಗುರು ವಾಘ್ಮರೆಯು ಆರ್‌ಟಿಇ ಕಾರ್ಯಕರ್ತನೂ ಆಗಿದ್ದು, ಆತನ ವಿರುದ್ಧ ಹಲವು ಪ್ರಕರಣಗಳು ದಾಖಲಾಗಿವೆ. ಈತನು ಹಿಸ್ಟರಿ ಶೀಟರ್‌ ಕೂಡ ಆಗಿದ್ದಾನೆ. ಆದರೆ, ಹತ್ಯೆಗೀಡಾಗುವ ಮುನ್ನ ಅಪಾಯದ ಮುನ್ಸೂಚನೆ ಅರಿತಿದ್ದ ಗುರು ವಾಘ್ಮರೆಯು ತನಗಿದ್ದ 22 ವೈರಿಗಳ ಹೆಸರುಗಳನ್ನು ತೊಡೆಯ ಮೇಲೆ ಹಚ್ಚೆ ಹಾಕಿಸಿಕೊಂಡಿದ್ದ. ಪೋಸ್ಟ್‌ ಮಾರ್ಟಮ್‌ ಮಾಡುವ ವೇಳೆ ತೊಡೆಯ ಮೇಲೆ ಕಾಣಿಸಿದ ಹೆಸರುಗಳ ಜಾಡು ಹಿಡಿದು ಹೊರಟ ಪೊಲೀಸರಿಗೆ ಕೊಲೆ ಆರೋಪಿಗಳನ್ನು ಬಂಧಿಸಲು ಸಾಧ್ಯವಾಗಿದೆ ಎಂದು ಮೂಲಗಳು ತಿಳಿಸಿವೆ.

ಮೂಲಗಳ ಪ್ರಕಾರ, ಗುರು ವಾಘ್ಮರೆಯು ಸ್ಪಾ ಮಾಲೀಕ ಸಂತೋಷ್‌ ಶೆರೆಕರ್‌ಗೆ ಹಣಕ್ಕಾಗಿ ಪೀಡಿಸುವುದು, ಬೆದರಿಕೆ ಹಾಕುವುದು ಸೇರಿ ಹಲವು ರೀತಿಯಲ್ಲಿ ಕಿರುಕುಳ ನೀಡುತ್ತಿದ್ದ. ಇದರಿಂದ ಬೇಸತ್ತಿದ್ದ ಸಂತೋಷ್‌, ಗುರು ವಾಘ್ಮರೆಯ ಹತ್ಯೆಗೆ ಸುಪಾರಿ ನೀಡಿದ್ದ ಎಂದು ತಿಳಿದುಬಂದಿದೆ. ಗುರು ವಾಘ್ಮರೆಯನ್ನು ಕೊಲ್ಲಲು ಮೊಹಮ್ಮದ್‌ ಫಿರೋಜ್‌ ಅನ್ಸಾರಿಗೆ ಸಂತೋಷ್‌ 6 ಲಕ್ಷ ರೂ. ನೀಡಿದ್ದ ಎನ್ನಲಾಗಿದೆ.

ಮೊಹಮ್ಮದ್‌ ಫಿರೋಜ್‌ ಅನ್ಸಾರಿಗೂ ಗುರು ಮೇಲೆ ಸೇಡಿತ್ತು. ಕಳೆದ ವರ್ಷ ಮುಂಬೈನ ನಲ್ಲಾಸೋಪರ ಬಳಿಯಲ್ಲಿದ್ದ ಮೊಹಮ್ಮದ್‌ ಫಿರೋಜ್‌ ಅನ್ಸಾರಿ ಒಡೆತನದ ಸ್ಪಾ ಮೇಲೆ ಪೊಲೀಸರು ದಾಳಿ ನಡೆಸಿ, ಅದನ್ನು ಸ್ಥಗಿತಗೊಳಿಸಿದ್ದರು. ಗುರು ವಾಘ್ಮರೆ ನೀಡಿದ ದೂರಿನಿಂದಾಗಿಯೇ ಸ್ಪಾ ಸ್ಥಗಿತಗೊಂಡಿತ್ತು. ಹಾಗಾಗಿ, ಅನ್ಸಾರಿಯು ಕೆಲವರೊಂದಿಗೆ ಸೇರಿ ಗುರು ವಾಘ್ಮರೆಯನ್ನು ಕೊಲೆ ಮಾಡಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ: Murder in PG: ಗೆಳತಿಗಾಗಿ ಕೊಲೆಯಾಗಿ ಹೋದ ಕೃತಿ ಕುಮಾರಿ; ಪ್ರೇಯಸಿಯನ್ನು ಬಂಧನದಲ್ಲಿಟ್ಟು ಕ್ರೌರ್ಯ ಮೆರೆದ ಪಾತಕಿ

Continue Reading

ಪ್ರಮುಖ ಸುದ್ದಿ

Paris Olympics 2024 : ಪ್ಯಾರಿಸ್​ ಒಲಿಂಪಿಕ್ಸ್​ನಲ್ಲಿ ಭಾಗಿಯಾಗಿರುವ ಭಾರತದ ಅಥ್ಲೀಟ್​ಗಳಿಗೆ ಶುಭ ಕೋರಿದ ಪ್ರಧಾನಿ ಮೋದಿ

Paris Olympics 2024 : ಬಿಲ್ಲುಗಾರಿಕೆ, ಅಥ್ಲೆಟಿಕ್ಸ್, ಬ್ಯಾಡ್ಮಿಂಟನ್, ಬಾಕ್ಸಿಂಗ್, ಈಕ್ವೆಸ್ಟ್ರಿಯನ್, ಗಾಲ್ಫ್, ಹಾಕಿ, ಜೂಡೋ, ರೋಯಿಂಗ್, ಸೇಲಿಂಗ್, ಶೂಟಿಂಗ್, ಈಜು, ಟೇಬಲ್ ಟೆನಿಸ್ ಮತ್ತು ಟೆನಿಸ್ ಸೇರಿದಂತೆ 16 ಕ್ರೀಡೆಗಳಲ್ಲಿ 117 ಕ್ರೀಡಾಪಟುಗಳು 69 ಪದಕ ಸ್ಪರ್ಧೆಗಳಲ್ಲಿ ಭಾಗವಹಿಸಲಿದ್ದಾರೆ.

VISTARANEWS.COM


on

Paris Olympics 2024
Koo

ಬೆಂಗಳೂರು: 2024 ರ ಪ್ಯಾರಿಸ್ ಒಲಿಂಪಿಕ್ಸ್​ನ (Paris Olympics 2024) ಉದ್ಘಾಟನಾ ಸಮಾರಂಭವು ನಡೆಯುತ್ತಿರುವುದರಿಂದ ಫ್ರಾನ್ಸ್​​ನ ರಾಜಧಾನಿಯಲ್ಲಿ ಸಂಭ್ರಮ ಜೋರಾಗಿದೆ. ಸಾವಿರಾರು ಕ್ರೀಡಾಪಟುಗಳು ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಳ್ಳುವ ಜತೆಗೆ ಕ್ರೀಡಾಪ್ರೇಮಿಗಳು ಹಾಗೂ ಆಯೋಜಕರ ದೊಡ್ಡ ದಂಡು ಅಲ್ಲಿ ನೆರೆದಿದೆ. ಅಂತೆಯೇ ಭಾರತದಿಂದ ಬಿಲ್ಲುಗಾರಿಕೆ, ಅಥ್ಲೆಟಿಕ್ಸ್, ಬ್ಯಾಡ್ಮಿಂಟನ್, ಬಾಕ್ಸಿಂಗ್, ಈಕ್ವೆಸ್ಟ್ರಿಯನ್, ಗಾಲ್ಫ್, ಹಾಕಿ, ಜೂಡೋ, ರೋಯಿಂಗ್, ಸೇಲಿಂಗ್, ಶೂಟಿಂಗ್, ಈಜು, ಟೇಬಲ್ ಟೆನಿಸ್ ಮತ್ತು ಟೆನಿಸ್ ಸೇರಿದಂತೆ 16 ಕ್ರೀಡೆಗಳಲ್ಲಿ 117 ಕ್ರೀಡಾಪಟುಗಳು 69 ಪದಕ ಸ್ಪರ್ಧೆಗಳಲ್ಲಿ ಭಾಗವಹಿಸಲಿದ್ದಾರೆ.

ಬಹುನಿರೀಕ್ಷಿತ ಕ್ರೀಡಾಕೂಟದ ಪ್ರಾರಂಭಕ್ಕೆ ಮುಂಚಿತವಾಗಿ, ಭಾರತದ ಪ್ರಧಾನಿ ನರೇಂದ್ರ ಮೋದಿ ರಾಷ್ಟ್ರವನ್ನು ಪ್ರತಿನಿಧಿಸುವ 117 ಅಥ್ಲೀಟ್​ಗಳ ಭಾರತದ ನಿಯೋಗಕ್ಕೆ ಶುಭಾಶಯಗಳನ್ನು ಕಳುಹಿಸಿದ್ದಾರೆ.

ಪ್ಯಾರಿಸ್ ಒಲಿಂಪಿಕ್ಸ್​ ಆರಂಭವಾಗುತ್ತಿದ್ದು ಭಾರತೀಯ ತಂಡಕ್ಕೆ ನನ್ನ ಶುಭ ಹಾರೈಕೆಗಳು. ಪ್ರತಿಯೊಬ್ಬ ಕ್ರೀಡಾಪಟುವೂ ಭಾರತದ ಹೆಮ್ಮೆ.. ಅವರೆಲ್ಲರೂ ತಮ್ಮ ಅಸಾಧಾರಣ ಪ್ರದರ್ಶನಗಳು ನಮಗೆ ಸ್ಫೂರ್ತಿ ನೀಡುವ ಮೂಲಕ ನಿಜವಾದ ಕ್ರೀಡಾ ಮನೋಭಾವವನ್ನು ಬೆಳಗಿಸಲಿ ಮತ್ತು ಸಾಕಾರಗೊಳಿಸಲಿ ಎಂದು ಪ್ರಧಾನಿ ತಮ್ಮ ಅಧಿಕೃತ ಎಕ್ಸ್ ಹ್ಯಾಂಡಲ್​ನಲ್ಲಿ ಪೋಸ್ಟ್ ಮಾಡಿದ್ದಾರೆ.

ಇದನ್ನೂ ಓದಿ: ICC Champions Trophy : ಪಾಕಿಸ್ತಾನದ ಕ್ರಿಕೆಟ್​ ಮಂಡಳಿಯ ಮಾಧ್ಯಮ ಹಕ್ಕುಗಳನ್ನು ಕೇಳುವವರೇ ಇಲ್ಲ!

ಟೇಬಲ್ ಟೆನಿಸ್ ತಾರೆ ಶರತ್ ಕಮಲ್ ಮತ್ತು ಬ್ಯಾಡ್ಮಿಂಟನ್ ತಾರೆ ಪಿ.ವಿ.ಸಿಂಧು ಅವರು ಭಾರತದ ಧ್ವಜಧಾರಿಯಾಗಿ ಉದ್ಘಾಟನಾ ಸಮಾರಂಭದ ಪಥ ಸಂಚಲನದಲ್ಲಿ ಪಾಲ್ಗೊಳ್ಳಲಿದ್ದಾರೆ. ಪರೇಡ್​ನಲ್ಲಿ 7,500 ಸ್ಪರ್ಧಿಗಳು ಸೀನ್ ನದಿಯ ಆರು ಕಿಲೋಮೀಟರ್ (ನಾಲ್ಕು ಮೈಲಿ) ಉದ್ದದ ಉದ್ದಕ್ಕೂ 85 ದೋಣಿಗಳಲ್ಲಿ ಪ್ರಯಾಣಿಸಲಿದ್ದಾರೆ.

ಕೋವಿಡ್-19 ಕಾರಣದಿಂದಾಗಿ ಒಂದು ವರ್ಷ ವಿಳಂಬವಾಗಿ ಖಾಲಿ ಕ್ರೀಡಾಂಗಣದಲ್ಲಿ ತೆರೆಯಲ್ಪಟ್ಟ 2020 ರ ಟೋಕಿಯೊ ಒಲಿಂಪಿಕ್ಸ್​ಗೆ ಹೋಲಿಸಿದರೆ, ಪ್ಯಾರಿಸ್​​ನ ಮಹತ್ವಾಕಾಂಕ್ಷೆಯ ನಡಿಗೆ 300,000 ಉತ್ಸಾಹಭರಿತ ಪ್ರೇಕ್ಷಕರು ಮತ್ತು ವಿಶ್ವದಾದ್ಯಂತದ ವಿಐಪಿಗಳು ಮತ್ತು ಸೆಲೆಬ್ರಿಟಿಗಳ ಪ್ರೇಕ್ಷಕರ ಮುಂದೆ ನಡೆಯಲಿದೆ. ಸ್ಪರ್ಧೆಗಳು ಜುಲೈ 27 ರಿಂದ ಪ್ರಾರಂಭವಾಗಲಿದ್ದು, ಆರಂಭಿಕ ದಿನದಂದು ಭಾರತವು 16 ಸ್ಪರ್ಧೆಗಳಲ್ಲಿ 6ರಲ್ಲಿ ಭಾಗವಹಿಸಲಿದೆ. ಅವುಗಳೆಂದರೆ, ರೋಯಿಂಗ್, ಬ್ಯಾಡ್ಮಿಂಟನ್, ಶೂಟಿಂಗ್, ಟೇಬಲ್ ಟೆನಿಸ್, ಟೆನಿಸ್ ಮತ್ತು ಹಾಕಿ.

Continue Reading

ದೇಶ

Vijay Mallya: ವಿಜಯ್‌ ಮಲ್ಯಗೆ ಸೆಬಿ ಶಾಕ್;‌ 3 ವರ್ಷ ಸೆಕ್ಯುರಿಟೀಸ್‌ ಟ್ರೇಡಿಂಗ್‌ನಿಂದ ನಿಷೇಧ

Vijay Mallya: ಸೆಬಿಗೆ ನೋಂದಣಿ ಮಾಡಿದ ಕಂಪನಿಗಳು ವಿಜಯ್‌ ಮಲ್ಯ ಜತೆ ವಹಿವಾಟು ಮಾಡದಂತೆ ಸೂಚನೆ ನೀಡಲಾಗಿದೆ. ಅಷ್ಟೇ ಅಲ್ಲ, ಮುಂದಿನ ಮೂರು ವರ್ಷಗಳವರೆಗೆ ವಿಜಯ್‌ ಮಲ್ಯ ಅವರ ಎಲ್ಲ ಸೆಕ್ಯುರಿಟಿ ಹೋಲ್ಡಿಂಗ್‌ಗಳು, ಮ್ಯುಚುವಲ್‌ ಫಂಡ್‌ ಯುನಿಟ್‌ಗಳನ್ನು ತಡೆಹಿಡಿಯುವಂತೆಯೂ ಸೆಬಿ ಸೂಚನೆ ನೀಡಿದೆ.

VISTARANEWS.COM


on

Vijay Mallya
Koo

ನವದೆಹಲಿ: ಭಾರತದ ಬ್ಯಾಂಕ್‌ಗಳಿಗೆ ಸಾವಿರಾರು ಕೋಟಿ ರೂ. ವಂಚಿಸಿ ವಿದೇಶಕ್ಕೆ ಪರಾರಿಯಾಗಿರುವ ದೇಶಭ್ರಷ್ಟ ಆರ್ಥಿಕ ಅಪರಾಧಿ ವಿಜಯ್‌ ಮಲ್ಯ (Vijay Mallya) ಅವರಿಗೆ ಭಾರತದ ಷೇರು ಮಾರುಕಟ್ಟೆ ನಿಯಂತ್ರಕ ಸಂಸ್ಥೆಯಾದ ಸೆಬಿಯು (SEBI) ಶಾಕ್‌ ನೀಡಿದೆ. ಭಾರತದ ಸೆಕ್ಯುರಿಟೀಸ್‌ ಮಾರುಕಟ್ಟೆಯಿಂದ ವಿಜಯ್‌ ಮಲ್ಯ ಅವರನ್ನು ಸೆಬಿ ನಿರ್ಬಂಧಿಸಿದೆ. ಇದರಿಂದಾಗಿ ಭಾರತದ ಸೆಕ್ಯುರಿಟೀಸ್‌ ಮಾರುಕಟ್ಟೆಯಲ್ಲಿ ವಿಜಯ್‌ ಮಲ್ಯ ಯಾವುದೇ ವಹಿವಾಟು ಮಾಡದಂತೆ ತಡೆಹಿಡಿಯಲಾಗಿದೆ.

ಸೆಬಿಗೆ ನೋಂದಣಿ ಮಾಡಿದ ಕಂಪನಿಗಳು ವಿಜಯ್‌ ಮಲ್ಯ ಜತೆ ವಹಿವಾಟು ಮಾಡದಂತೆ ಸೂಚನೆ ನೀಡಲಾಗಿದೆ. ಅಷ್ಟೇ ಅಲ್ಲ, ಮುಂದಿನ ಮೂರು ವರ್ಷಗಳವರೆಗೆ ವಿಜಯ್‌ ಮಲ್ಯ ಅವರ ಎಲ್ಲ ಸೆಕ್ಯುರಿಟಿ ಹೋಲ್ಡಿಂಗ್‌ಗಳು, ಮ್ಯುಚುವಲ್‌ ಫಂಡ್‌ ಯುನಿಟ್‌ಗಳನ್ನು ತಡೆಹಿಡಿಯುವಂತೆಯೂ ಸೆಬಿ ಸೂಚನೆ ನೀಡಿದೆ. ವಿಜಯ್‌ ಮಲ್ಯ ಅವರು ಇದುವರೆಗೆ ಫಾರಿನ್‌ ಇನ್‌ಸ್ಟಿಟ್ಯೂಷನಲ್‌ ಇನ್ವೆಸ್ಟರ್‌ (FII) ವ್ಯವಸ್ಥೆ ಮೂಲಕ ಭಾರತದ ಸೆಕ್ಯುರಿಟೀಸ್‌ ಮಾರುಕಟ್ಟೆಯಲ್ಲಿ ಹಣ ಹೂಡಿಕೆ, ಸ್ಟಾಕ್‌ಗಳ ಮಾರಾಟ ಸೇರಿ ಹಲವು ಆರ್ಥಿಕ ಚಟುವಟಿಕೆಯಲ್ಲಿ ತೊಡಗಿಕೊಂಡಿದ್ದರು.

ಏನಿದು ಸೆಕ್ಯುರಿಟೀಸ್‌ ಮಾರುಕಟ್ಟೆ?

ಸೆಕ್ಯುರಿಟೀಸ್‌ ಮಾರುಕಟ್ಟೆಯು ವ್ಯಕ್ತಿಗಳು ಅಥವಾ ಕಂಪನಿಗಳು ಷೇರುಗಳು, ಬಾಂಡ್‌ಗಳು ಮತ್ತು ಉತ್ಪನ್ನಗಳಂತಹ ಸೆಕ್ಯುರಿಟೀಸ್‌ಅನ್ನು ಖರೀದಿಸುವ ಮತ್ತು ಮಾರಾಟ ಮಾಡುವ ಹಣಕಾಸು ಮಾರುಕಟ್ಟೆಯಾಗಿದೆ. ಸ್ಟಾಕ್‌ಗಳು, ಬಾಂಡ್‌ಗಳು, ಮ್ಯೂಚುವಲ್‌ ಫಂಡ್‌ಗಳು, ಎಕ್ಸ್‌ಚೇಂಜ್‌-ಟ್ರೇಡೆಡ್‌ ಫಂಡ್‌ಗಳ ಖರೀದಿ ಹಾಗೂ ಮಾರಾಟ ಮಾಡುವ ಮಾರುಕಟ್ಟೆಯಾಗಿದೆ.

ಭಾರತದ ಬ್ಯಾಂಕ್‌ಗಳಿಗೆ ಸುಮಾರು 9 ಸಾವಿರ ಕೋಟಿ ರೂ. ವಂಚನೆ ಪ್ರಕರಣದಲ್ಲಿ ವಿಜಯ್‌ ಮಲ್ಯ ಲಂಡನ್‌ಗೆ ಹಾರಿದ್ದಾರೆ. ಇವರನ್ನು 2019ರಲ್ಲಿ ದೇಶ ಭ್ರಷ್ಟ ಆರ್ಥಿಕ ಅರಪಾಧಿ ಎಂದು ಘೋಷಿಸಲಾಗಿದೆ. 2016ರ ಮಾರ್ಚ್‌ನಲ್ಲಿ ವಿಜಯ್‌ ಮಲ್ಯ ಭಾರತದಿಂದ ಪರಾರಿಯಾಗಿದ್ದು, ಈಗ ಬ್ರಿಟನ್‌ನಲ್ಲಿ ನೆಲೆಸಿದ್ದಾರೆ. ಇತ್ತೀಚೆಗೆ, ವಿಜಯ್‌ ಮಲ್ಯ ಪುತ್ರ ಸಿದ್ಧಾರ್ಥ್‌ ಮಲ್ಯ ಅವರ ಮದುವೆಯು ಅದ್ಧೂರಿಯಾಗಿ ನೆರವೇರಿತ್ತು. ವಿಜಯ್‌ ಮಲ್ಯ ಅವರನ್ನು ಭಾರತಕ್ಕೆ ಕರೆತರಲು ಕೇಂದ್ರ ಸರ್ಕಾರ ಪ್ರಯತ್ನ ಮಾಡುತ್ತಿದ್ದು, ಪ್ರಕರಣವು ಕೋರ್ಟ್‌ನಲ್ಲಿದೆ.

ವಿಜಯ್‌ ಮಲ್ಯ ಈಗಲೂ ಕಿಂಗ್‌ಫಿಶರ್‌ ಬಿಯರ್‌ ಉತ್ಪಾದನೆ ಮಾಡುವ ಯುನೈಟ್‌ ಬ್ರೆವರೀಸ್‌ನಲ್ಲಿ ಶೇ.8.1ರಷ್ಟು ಷೇರುಗಳನ್ನು ಹೊಂದಿದ್ದಾರೆ. ಅಷ್ಟೇ ಅಲ್ಲ, ಸ್ಮಿರ್ನಾಫ್‌ ವೋಡ್ಕಾ ತಯಾರಿಯಾ ಸಂಸ್ಥೆಯಾದ ಯುನೈಟೆಡ್‌ ಸ್ಪರಿಟ್ಸ್‌ನಲ್ಲಿ 0.01ರಷ್ಟು ಷೇರುಗಳನ್ನು ಹೊಂದಿದ್ದಾರೆ.

ಇದನ್ನೂ ಓದಿ: RCB: ಆರ್​ಸಿಬಿಯ ನಂಟು ಬಿಡದ ವಿಜಯ್​ ಮಲ್ಯ; ಟ್ವೀಟ್​ ಮೂಲಕ ಅಭಿನಂದನೆ

Continue Reading

ಪ್ರಮುಖ ಸುದ್ದಿ

ICC Champions Trophy : ಪಾಕಿಸ್ತಾನದ ಕ್ರಿಕೆಟ್​ ಮಂಡಳಿಯ ಮಾಧ್ಯಮ ಹಕ್ಕುಗಳನ್ನು ಕೇಳುವವರೇ ಇಲ್ಲ!

ICC Champions Trophy: 2024-2026ರ ಅವಧಿಯಲ್ಲಿ ಪಾಕಿಸ್ತಾನ ಕ್ರಿಕೆಟ್ ತಂಡವು ಎಲ್ಲಾ ಸ್ವರೂಪಗಳಲ್ಲಿ 61 ಪಂದ್ಯಗಳನ್ನು ಆಡಲಿದೆ. 11 ಟೆಸ್ಟ್, 26 ಏಕದಿನ ಹಾಗೂ 24 ಟಿ20 ಪಂದ್ಯಗಳನ್ನಾಡಲಿದೆ. ಅಂತಾರಾಷ್ಟ್ರೀಯ ದೂರದರ್ಶನ ಹಕ್ಕುಗಳನ್ನು ಮಾರಾಟ ಮಾಡಲು ಮುಂದಾಗಿದೆ.

VISTARANEWS.COM


on

Pakistan Cricket Board
Koo

ಬೆಂಗಳೂರು: ಬಿಸಿಸಿಐ ಶಾಲಾ ಮಕ್ಕಳ ಕ್ರಿಕೆಟ್​ನ ಸಣ್ಣ ಟೂರ್ನಿಯನ್ನು ಆಯೋಜಿಸಿದರೂ ಮಾಧ್ಯಮಗಳು ಅದರ ಪ್ರಸಾರದ ಹಕ್ಕನ್ನು ಪಡೆಯಲು ಕ್ಯೂ ನಿಲ್ಲುತ್ತಾರೆ. ಕೊಟ್ಯಂತರ ರೂಪಾಯಿ ಸುರಿದು ಅದರ ಹಕ್ಕನ್ನು ಪಡೆಯಲು ಮುಂದಾಗುತ್ತಾರೆ. ಆದರೆ, ಪಾಕಿಸ್ತಾನ ಕ್ರಿಕೆಟ್​ ಮಂಡಳಿಯು ಹಾಕಿದ ಅಂತಾರಾಷ್ಟ್ರೀಯ ಬಿಡ್​ ಕೇಳುವವರೇ ಇಲ್ಲದಂತಾಗಿದೆ. ಹೀಗಾಗಿ ಮಂಡಳಿ (PCB) ತನ್ನ ನಿರೀಕ್ಷೆಗಳನ್ನು ಪೂರೈಸದ ಕಾರಣ ಅಂತರರಾಷ್ಟ್ರೀಯ ಮಾಧ್ಯಮ ಹಕ್ಕುಗಳನ್ನು ಪಡೆಯುವಲ್ಲಿ ಮತ್ತೊಮ್ಮೆ ಹಿನ್ನಡೆಯನ್ನು ಎದುರಿಸಿದೆ. ಐಸಿಸಿ ಚಾಂಪಿಯನ್ಸ್ ಟ್ರೋಫಿಗೆ (ICC Champions Trophy) ಮುನ್ನ ಇದು ದೊಡ್ಡ ಹಿನ್ನಡೆಯಾಗಿದೆ.

ಆಗಸ್ಟ್ 2024 ರಿಂದ ಡಿಸೆಂಬರ್ 2026 ರವರೆಗೆ ದೂರದರ್ಶನ, ಡಿಜಿಟಲ್, ಆಡಿಯೋ, ವೆಬ್ ಮತ್ತು ಮೊಬೈಲ್ ಪ್ಲಾಟ್​ಫಾರ್ಮ್​​ಗಳಲ್ಲಿ ಕ್ರಿಕೆಟ್ ಪಂದ್ಯಗಳನ್ನು ಪ್ರಸಾರ ಮಾಡಲು ಪಿಸಿಬಿ ಇತ್ತೀಚೆಗೆ ಎಲ್ಲಾ ಜಾಗತಿಕ ಟೆಂಡರ್​ಗಳನ್ನು ಪ್ರಕಟಿಸಿತ್ತು. ಪಾಕಿಸ್ತಾನ ಕ್ರಿಕೆಟ್ ತಂಡದ ತವರು ಸರಣಿಯು ಆಗಸ್ಟ್ 21 ರಿಂದ ಬಾಂಗ್ಲಾದೇಶ ವಿರುದ್ಧದ ಎರಡು ಪಂದ್ಯಗಳ ಟೆಸ್ಟ್ ಸರಣಿಯೊಂದಿಗೆ ಪ್ರಾರಂಭವಾಗಲಿದೆ. ಪಾಕಿಸ್ತಾನವು ಅಕ್ಟೋಬರ್​ನಲ್ಲಿ ಇಂಗ್ಲೆಂಡ್ ವಿರುದ್ಧ ಟೆಸ್ಟ್ ಸರಣಿಗೆ ಆತಿಥ್ಯ ವಹಿಸಲಿದೆ. ತಂಡದ ಫ್ಯೂಚರ್ ಟೂರ್ ಪ್ರೋಗ್ರಾಮ್ಸ್ (ಎಫ್​ಟಿಪಿ) ವೇಳಾಪಟ್ಟಿಯ ಪ್ರಕಾರ ಆಸ್ಟ್ರೇಲಿಯಾ, ದಕ್ಷಿಣ ಆಫ್ರಿಕಾ ಮತ್ತು ವೆಸ್ಟ್ ಇಂಡೀಸ್ ಪಾಕಿಸ್ತಾನ ಪ್ರವಾಸ ಕೈಗೊಳ್ಳಲಿವೆ.

2024-2026ರ ಅವಧಿಯಲ್ಲಿ ಪಾಕಿಸ್ತಾನ ಕ್ರಿಕೆಟ್ ತಂಡವು ಎಲ್ಲಾ ಸ್ವರೂಪಗಳಲ್ಲಿ 61 ಪಂದ್ಯಗಳನ್ನು ಆಡಲಿದೆ. 11 ಟೆಸ್ಟ್, 26 ಏಕದಿನ ಹಾಗೂ 24 ಟಿ20 ಪಂದ್ಯಗಳನ್ನಾಡಲಿದೆ. ಅಂತಾರಾಷ್ಟ್ರೀಯ ದೂರದರ್ಶನ ಹಕ್ಕುಗಳನ್ನು ಮಾರಾಟ ಮಾಡಲು ಮುಂದಾಗಿದೆ.

ಭಾರೀ ನಿರಾಸೆ

ಅಂತರರಾಷ್ಟ್ರೀಯ ಮಾಧ್ಯಮ ಹಕ್ಕುಗಳನ್ನು ಮಾರಾಟ ಮಾಡುವಲ್ಲಿ ಪಾಕಿಸ್ತಾನ ಕ್ರಿಕೆಟ್ ಮಂಡಳಿಯ ನಿರೀಕ್ಷೆಗಳನ್ನು ಪೂರೈಸಲಾಗಲಿಲ್ಲ. ಅವರಿಗೆ ಸಲ್ಲಿಕೆಯಾದ ಬಿಡ್​ ಮೂಲ ಮೌಲ್ಯದ ಅರ್ಧದಷ್ಟು ಮಾತ್ರ ಇತ್ತು. ಕ್ರಿಕೆಟ್ ಮಂಡಳಿಯು ಮೂರು ವರ್ಷಗಳ ಅಂತಾರರಾಷ್ಟ್ರೀಯ ಮಾಧ್ಯಮ ಹಕ್ಕುಗಳಿಗಾಗಿ ಸುಮಾರು 584 ಕೋಟಿ ರೂಪಾಯಿ (ಪಾಕಿಸ್ತಾನ) ನಿಗದಿ ಮಾಡಿತ್ತು. ಆದರೆ, ಪ್ರಸಾರಕು ಅದರ ಅರ್ಧದಷ್ಟು ಮೊತ್ತಕ್ಕೆ ಪ್ರಸ್ತಾಪ ಸಲ್ಲಿಸಿದೆ.

ಪಾಕ್ ಕಂಪನಿಯಿಂದ ಸಲ್ಲಿಕೆ

ಪಾಕಿಸ್ತಾನದ ಮಾಧ್ಯಮ ಸಮೂಹ ಮತ್ತು ಖಾಸಗಿ ಕಂಪನಿಯ ಒಕ್ಕೂಟವು ವಿದೇಶಿ ಬಿಡ್ದಾರರಾದ ವಿಲ್ಲೋ ಮತ್ತು ಸ್ಪೋರ್ಟ್ಸ್ ಫೈವ್ ಅವರೊಂದಿಗೆ ಹರಾಜಿನಲ್ಲಿ ಭಾಗವಹಿಸಿತು. ಈ ಪೈಕಿ ಸ್ಪೋರ್ಟ್ಸ್ ಫೈವ್ 218 ಡಾಲರ್​ಗೆ ಬಿಡ್ ಸಲ್ಲಿಸಿದೆ. ಪಾಕಿಸ್ತಾನದ ಕಂಪನಿಯು ಸುಮಾರು 114 ಕೋಟಿ ಪಾಕಿಸ್ತಾನ ರೂಪಾಯ ಬಿಡ್ ಮಾಡಿದರೆ, ವಿಲ್ಲೋ ಸಂಸ್ಥೆಯು 62 ಕೋಟಿ ರೂಪಾಯಿ ಬಿಡ್ ಮಾಡಿತು. ಮೀಸಲು ಬೆಲೆಯನ್ನು ತಲುಪದ ಕಾರಣ ಮಂಡಳಿಯು ಬಿಡ್ದಾರರಿಗೆ ಬೆಲೆಯನ್ನು ಹೆಚ್ಚಿಸಲು ಸೂಚಿಸಿದೆ.

ಇದನ್ನೂ ಓದಿ: Dinesh Karthik : ಇಷ್ಟದ ಐಪಿಎಲ್​ ತಂಡ ಯಾವುದೆಂದು ಬಹಿರಂಗಪಡಿಸಿದ ದಿನೇಶ್ ಕಾರ್ತಿಕ್​

ಎರಡನೇ ಸುತ್ತಿನಲ್ಲಿ, ಸ್ಪೋರ್ಟ್ಸ್ ಫೈವ್ ತಮ್ಮ ಬಿಡ್ ಅನ್ನು ಅದೇ ಮೊತ್ತ ಉಳಿಸಿಕೊಂಡರೆ, ಪಾಕಿಸ್ತಾನಿ ಕಂಪನಿಯು ತಮ್ಮ ಬಿಡ್ ಅನ್ನು ಸ್ವಲ್ಪ ಏರಿಸಿತು. ಆದಾಗ್ಯೂ, ಪಾಕಿಸ್ತಾನ ಕ್ರಿಕೆಟ್ ಮಂಡಳಿ ಇನ್ನೂ ಮೀಸಲು ಬೆಲೆಯನ್ನು ಪೂರೈಸದ ಕಾರಣ ಎರಡೂ ಪ್ರಸ್ತಾಪಗಳನ್ನು ತಿರಸ್ಕರಿಸಿದೆ.

ಹೊಸ ಟೆಂಡರ್​

ನ್ಯೂಜಿಲೆಂಡ್ ವಿರುದ್ಧದ ತವರು ಸರಣಿ ಮತ್ತು ವೆಸ್ಟ್ ಇಂಡೀಸ್ ವಿರುದ್ಧದ ಮಹಿಳಾ ಸರಣಿಗೆ ಹೊಸ ಟೆಂಡರ್ ನೀಡಲಾಗಿದೆ. ಈ ಸುತ್ತಿನಲ್ಲಿ, ಪಾಕಿಸ್ತಾನಿ ಕಂಪನಿಗಳು ಒಟ್ಟಾಗಿ 2.7 ಕೋಟಿ ಪಾಕಿಸ್ತಾನಿ ರೂಪಾಯಿಗಳು), ವಿಲ್ಲೋ 2 ಕೋಟಿ ರೂಪಾಟಿ ಮತ್ತು ಸ್ಪೋರ್ಟ್ಸ್ ಫೈವ್ 1.39 ಕೋಟಿ ರೂಪಾಯಿ ಬಿಡ್ ಮಾಡಿದವು.

Continue Reading
Advertisement
Mumbai Spa
ಪ್ರಮುಖ ಸುದ್ದಿ9 mins ago

ಕೊಲೆಯಾದ ರೌಡಿಯ ಮೈಮೇಲಿದ್ದ ಟ್ಯಾಟೂ ನೆರವಿನಿಂದ ಆರೋಪಿಗಳ ಬಂಧನ; ಹೇಗಂತೀರಾ? ಇಲ್ಲಿದೆ ರೋಚಕ ಕತೆ

Paris Olympics 2024
ಪ್ರಮುಖ ಸುದ್ದಿ39 mins ago

Paris Olympics 2024 : ಪ್ಯಾರಿಸ್​ ಒಲಿಂಪಿಕ್ಸ್​ನಲ್ಲಿ ಭಾಗಿಯಾಗಿರುವ ಭಾರತದ ಅಥ್ಲೀಟ್​ಗಳಿಗೆ ಶುಭ ಕೋರಿದ ಪ್ರಧಾನಿ ಮೋದಿ

Vijay Mallya
ದೇಶ51 mins ago

Vijay Mallya: ವಿಜಯ್‌ ಮಲ್ಯಗೆ ಸೆಬಿ ಶಾಕ್;‌ 3 ವರ್ಷ ಸೆಕ್ಯುರಿಟೀಸ್‌ ಟ್ರೇಡಿಂಗ್‌ನಿಂದ ನಿಷೇಧ

Pakistan Cricket Board
ಪ್ರಮುಖ ಸುದ್ದಿ2 hours ago

ICC Champions Trophy : ಪಾಕಿಸ್ತಾನದ ಕ್ರಿಕೆಟ್​ ಮಂಡಳಿಯ ಮಾಧ್ಯಮ ಹಕ್ಕುಗಳನ್ನು ಕೇಳುವವರೇ ಇಲ್ಲ!

assistance from Ramchandrapur Matha for Shiruru landslide victims
ಉತ್ತರ ಕನ್ನಡ2 hours ago

Uttara Kannada News: ಶಿರೂರು ಗುಡ್ಡಕುಸಿತ ಸಂತ್ರಸ್ತರಿಗೆ ರಾಮಚಂದ್ರಾಪುರ ಮಠದ ಸಹಾಯಹಸ್ತ

Inauguration of Kannada learning classes for Malayali speakers
ಕರ್ನಾಟಕ2 hours ago

Bengaluru News: ಕನ್ನಡ-ಮಲೆಯಾಳಿ ಸಾಹಿತ್ಯ ಸಮ್ಮೇಳನ ಆಯೋಜಿಸಿ: ಸ್ಪೀಕರ್‌ ಯು.ಟಿ.ಖಾದರ್‌ ಸೂಚನೆ

Viral News
ಪ್ರಮುಖ ಸುದ್ದಿ2 hours ago

Viral News: ಜೈಲಿಂದ ಹೊರಬಂದ ಖುಷಿಗೆ ರೌಡಿಯ ಬೃಹತ್ ಮೆರವಣಿಗೆ; ಮತ್ತೆ ಜೈಲಿಗೇ ಕಳುಹಿಸಿದ ಪೊಲೀಸರು!

Viral Video
Latest3 hours ago

Viral Video: ಕೈದಿಗೆ ಕೈಕೋಳ ಹಾಕಿ ತಾಜ್ ಮಹಲ್‌ ತೋರಿಸಲು ಹೋಗಿದ್ದ ಪೊಲೀಸರು! ವಿಡಿಯೊ ನೋಡಿ

Dog meat
ಕರ್ನಾಟಕ3 hours ago

Dog Meat: ಬೆಂಗಳೂರಿಗೆ ಬಂತು ಟನ್‌ಗಟ್ಟಲೇ ನಾಯಿ ಮಾಂಸ; ಅಬ್ದುಲ್ ರಜಾಕ್ ವಿರುದ್ಧ ಆರೋಪ!

Teacher Suspended
Latest3 hours ago

Teacher Suspended: ಮಹಿಳೆಯರು ಸಿಂಧೂರ, ಮಂಗಳಸೂತ್ರ ಧರಿಸಬಾರದು ಎಂದ ಶಿಕ್ಷಕಿ ಅಮಾನತು!

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Ankola landslide
ಉತ್ತರ ಕನ್ನಡ5 hours ago

Ankola landslide: ಅಂಕೋಲಾ-ಶಿರೂರು ಗುಡ್ಡ ಕುಸಿತ; ನಾಳೆಯಿಂದ ಪ್ಲೋಟಿಂಗ್ ಪ್ಲಾಟ್‌ಫಾರಂ ಕಾರ್ಯಾಚರಣೆ

karnataka rain
ಮಳೆ7 hours ago

Karnataka Rain : ಉಕ್ಕಿ ಹರಿಯುವ ನೇತ್ರಾವತಿ ನದಿಯಲ್ಲಿ ತೇಲಿ ಬಂದ ಜೀವಂತ ಹಸು

Karnataka Rain
ಮಳೆ7 hours ago

Karnataka Rain: ವಿದ್ಯುತ್‌ ದುರಸ್ತಿಗಾಗಿ ಪ್ರಾಣದ ಹಂಗು ತೊರೆದು ಉಕ್ಕಿ ಹರಿಯುವ ನೀರಿಗೆ ಧುಮುಕಿದ ಲೈನ್‌ ಮ್ಯಾನ್‌!

Karnataka rain
ಮಳೆ9 hours ago

Karnataka Rain : ಹಾಸನದಲ್ಲಿ ಹೇಮಾವತಿ, ಚಿಕ್ಕಮಗಳೂರಲ್ಲಿ ಭದ್ರೆಯ ಅಬ್ಬರಕ್ಕೆ ಜನರು ತತ್ತರ

karnataka Rain
ಮಳೆ1 day ago

Karnataka Rain : ಮನೆಯೊಳಗೆ ನುಗ್ಗಿದ ಮಳೆ ನೀರು; ಕಾಲು ಜಾರಿ ಬಿದ್ದು ವೃದ್ಧೆ ಸಾವು

Actor Darshan
ಸ್ಯಾಂಡಲ್ ವುಡ್1 day ago

Actor Darshan: ನಟ ದರ್ಶನ್ ಇರುವ ಜೈಲು ಕೋಣೆ ಹೇಗಿದೆ?

Actor Darshan
ಸಿನಿಮಾ1 day ago

Actor Darshan : ಹೆಂಡ್ತಿ ಮಕ್ಕಳೊಟ್ಟಿಗೆ ಚೆನ್ನಾಗಿರು.. ಸಹಕೈದಿ ಜತೆಗೆ 12 ನಿಮಿಷ ಕಳೆದ ನಟ ದರ್ಶನ್‌

Actor Darshan
ಸಿನಿಮಾ2 days ago

Actor Darshan: ಆಧ್ಯಾತ್ಮದತ್ತ ವಾಲಿದ ದರ್ಶನ್‌; ಜೈಲಲ್ಲಿ ಹೇಗಿದೆ ಗೊತ್ತಾ ನಟನ ಬದುಕು

karnataka Weather Forecast
ಮಳೆ3 days ago

Karnataka Weather : ರಭಸವಾಗಿ ಸುರಿಯುವ ಮಳೆ; 50 ಕಿ.ಮೀ ವೇಗದಲ್ಲಿ ಬೀಸುತ್ತೆ ಗಾಳಿ

karnataka weather Forecast
ಮಳೆ3 days ago

Karnataka Weather : ರಾಜ್ಯದಲ್ಲಿ ಮುಂದುವರಿದ ಮಳೆ ಅವಾಂತರ; ನಾಳೆಯೂ ಇರಲಿದೆ ಅಬ್ಬರ

ಟ್ರೆಂಡಿಂಗ್‌