Tourist Place in Tamilnadu : ತಮಿಳುನಾಡಿಗೆ ಹೋದರೆ ಈ ಅದ್ಭುತ ತಾಣಗಳಿಗೆ ಭೇಟಿ ನೀಡುವುದನ್ನು ತಪ್ಪಿಸಬೇಡಿ! - Vistara News

Latest

Tourist Place in Tamilnadu : ತಮಿಳುನಾಡಿಗೆ ಹೋದರೆ ಈ ಅದ್ಭುತ ತಾಣಗಳಿಗೆ ಭೇಟಿ ನೀಡುವುದನ್ನು ತಪ್ಪಿಸಬೇಡಿ!

Tourist Place in Tamilnadu: ಪ್ರವಾಸಕ್ಕೆ ಹೋದಾಗ ಸಿಗುವ ಆನಂದ ಬೇರೆ ಯಾವುದರಲ್ಲಿಯೂ ಸಿಗುವುದಿಲ್ಲ ಎನ್ನಬಹುದೇನೋ. ಒಂದೊಳ್ಳೆ ಪ್ರವಾಸ ಮಾಡಿ ಬಂದಾಗ ಮನಸ್ಸಿಗೂ ಹಿತವಾಗಿರುತ್ತದೆ. ನಮ್ಮ ನೆರೆ ರಾಜ್ಯವಾದ ತಮಿಳುನಾಡಿನಲ್ಲಿ ಸಾಕಷ್ಟು ಅದ್ಭುತವಾದ ಸ್ಥಳಗಳಿವೆ. ರಜೆ ಸಿಕ್ಕಾಗ ತಮಿಳುನಾಡಿನ ಈ ಸ್ಥಳಗಳಿಗೆ ಮರೆಯದೇ ಭೇಟಿ ನೀಡಿ. ಈ ತಾಣಗಳ ಸೊಬಗನ್ನು ಕಣ್ತುಂಬಿಸಿಕೊಳ್ಳಿ. ತಮಿಳುನಾಡಿನ ಪ್ರಮುಖ ಪ್ರವಾಸಿ ತಾಣಗಳ ಮಾಹಿತಿ ಇಲ್ಲಿದೆ.

VISTARANEWS.COM


on

Tourist Place
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo


ಕುಟುಂಬದವರ ಜೊತೆ, ಸ್ನೇಹಿತರ ಜೊತೆ ಪ್ರವಾಸಕ್ಕೆ ಹೋಗುವುದೆಂದರೆ ಎಲ್ಲರಿಗೂ ಬಹಳ ಇಷ್ಟ. ಹಾಗಾಗಿ ದೂರದ ಊರಿಗೆ ಪ್ರಯಾಣ ಮಾಡಲು ಕೆಲವರು ಯೋಜನೆಗಳನ್ನು ಹಾಕಿಕೊಳ್ಳುತ್ತಾರೆ. ನೀವು ನಿಮ್ಮ ಕುಟುಂಬ, ಸ್ನೇಹಿತರು ಅಥವಾ ಸಂಗಾತಿಯೊಂದಿಗೆ ತಮಿಳುನಾಡಿಗೆ ಪ್ರವಾಸ (Tourist Place in Tamilnadu) ಮಾಡಲು ಬಯಸಿದ್ದರೆ ತಮಿಳುನಾಡಿನ ಈ ಅತ್ಯಾಕರ್ಷಕ ಸ್ಥಳಗಳಿಗೆ ಭೇಟಿ ನೀಡಿ. ತಮಿಳುನಾಡಿನಲ್ಲಿ ಬಹಳ ಸುಂದರವಾದ, ರಮಣೀಯವಾದ ಸ್ಥಳಗಳಿವೆ. ಇದು ನಿಮ್ಮ ಪ್ರವಾಸದ ಅನುಭವವನ್ನು ಸ್ಮರಣೀಯವಾಗಿಸುತ್ತದೆ.

Tourist Place
Tourist Place

ಕನ್ಯಾಕುಮಾರಿಯ ಮೂರು ಸಾಗರಗಳ ಸಂಗಮ ಸ್ಥಳ

ಭಾರತದ ದಕ್ಷಿಣ ತುದಿಯಲ್ಲಿರುವ ಕನ್ಯಾಕುಮಾರಿ ತಮಿಳುನಾಡಿನಲ್ಲಿ ಭೇಟಿ ನೀಡಲೇಬೇಕಾದ ಅದ್ಭುತ ತಾಣವಾಗಿದೆ. ಈ ಸುಂದರವಾದ ಪಟ್ಟಣವು ಹಿಂದೂ ಮಹಾಸಾಗರ, ಬಂಗಾಳ ಕೊಲ್ಲಿ ಮತ್ತು ಅರೇಬಿಯನ್ ಸಮುದ್ರ ಎಂಬ ಮೂರು ಸಾಗರಗಳಿಂದ ಸುತ್ತುವರೆದಿದೆ. ಇಲ್ಲಿ ಮೂರು ಸಾಗರಗಳ ಸಂಗಮ ಸ್ಥಳವಿದ್ದು ಇದು ಕನ್ಯಾಕುಮಾರಿಯನ್ನು ಒಂದು ಅನನ್ಯ ಸ್ಥಳವನ್ನಾಗಿ ಮಾಡುತ್ತದೆ. ಇಲ್ಲಿ ನೀವು ಕನ್ಯಾಕುಮಾರಿ ದೇವಾಲಯ, ವಿವೇಕಾನಂದ ರಾಕ್ ಮೆಮೋರಿಯಲ್ ಮತ್ತು ತಿರುವಳ್ಳುವರ್ ಪ್ರತಿಮೆಗೆ ಭೇಟಿ ನೀಡಬಹುದು.

Tourist Place
Tourist Place

ಊಟಿ

ನೀಲಗಿರಿ ಬೆಟ್ಟಗಳಲ್ಲಿ ನೆಲೆಸಿರುವ ಊಟಿ ಭಾರತದ ಅತ್ಯಂತ ಜನಪ್ರಿಯ ಗಿರಿಧಾಮಗಳಲ್ಲಿ ಒಂದಾಗಿದೆ. ಈ ಆಕರ್ಷಕ ಪಟ್ಟಣವು ಕುಟುಂಬ ಅಥವಾ ಸ್ನೇಹಿತರೊಂದಿಗೆ ವಿಶ್ರಾಂತಿ ಪಡೆಯಲು ಸೂಕ್ತವಾಗಿದೆ. ಆಟಿಕೆ ರೈಲು ಸವಾರಿ ಮಾಡುವ ಮೂಲಕ, ಬೊಟಾನಿಕಲ್ ಗಾರ್ಡನ್ ಗೆ ಭೇಟಿ ನೀಡುವ ಮೂಲಕ ಅಥವಾ ಊಟಿ ಸರೋವರದಲ್ಲಿ ದೋಣಿ ಸವಾರಿಯನ್ನು ಆನಂದಿಸುವ ಮೂಲಕ ನೀವು ಊಟಿಯ ರಮಣೀಯ ಸೌಂದರ್ಯವನ್ನು ಸವಿಯಬಹುದು.

Tourist Place
Tourist Place

ರಾಮೇಶ್ವರಂ

ಬಂಗಾಳಕೊಲ್ಲಿಯಿಂದ ಸುತ್ತುವರೆದಿರುವ ರಾಮೇಶ್ವರಂ ತಮಿಳುನಾಡಿನ ಒಂದು ಪವಿತ್ರ ಪಟ್ಟಣವಾಗಿದೆ. ಈ ಪಟ್ಟಣವು ಭಾರತದ ಹನ್ನೆರಡು ಜ್ಯೋತಿರ್ಲಿಂಗಗಳಲ್ಲಿ ಒಂದಾದ ರಾಮನಾಥಸ್ವಾಮಿ ದೇವಾಲಯ ಸೇರಿದಂತೆ ಐತಿಹಾಸಿಕ ದೇವಾಲಯಗಳಿಗೆ ಹೆಸರುವಾಸಿಯಾಗಿದೆ. ನೀವು ಗಾಂಧಿ ಸೇತು, ಪಂಬನ್ ಸೇತುವೆ ಮತ್ತು ಧನುಷ್ಕೋಡಿ ಬೀಚ್ ಗೆ ಭೇಟಿ ನೀಡಬಹುದು.

Tourist Place
Tourist Place

ಕೊಡೈಕೆನಾಲ್

ದಿಂಡಿಗಲ್ ಜಿಲ್ಲೆಯಲ್ಲಿರುವ ಕೊಡೈಕೆನಾಲ್ ಪ್ರಕೃತಿ ಪ್ರಿಯರಿಗೆ ಸ್ವರ್ಗದ ತಾಣವಾಗಿದೆ. ಈ ರಮಣೀಯ ಪಟ್ಟಣವು ಸೊಂಪಾದ ಹಸಿರು ಕಾಡುಗಳು, ಜಲಪಾತಗಳು ಮತ್ತು ಸರೋವರಗಳಿಂದ ಆವೃತವಾಗಿದೆ. ನೀವು ಕೊಡೈಕೆನಾಲ್ ಸರೋವರ, ಕೋಕರ್ಸ್ ವಾಕ್ ಮತ್ತು ಬ್ರ್ಯಾಂಟ್ ಪಾರ್ಕ್ ಇತರ ಆಕರ್ಷಕ ಸ್ಥಳಗಳಿಗೆ ಭೇಟಿ ನೀಡಬಹುದು.

ಇದನ್ನೂ ಓದಿ: ವಿಚ್ಛೇದನ ಸಿಕ್ಕಿದ ಖುಷಿಗೆ ʼಡಿವೋರ್ಸ್‌ ಪಾರ್ಟಿʼ ಮಾಡಿ ಕುಣಿದು ಕುಪ್ಪಳಿಸಿದ ಯುವತಿ! ವಿಡಿಯೊ ನೋಡಿ

ಒಟ್ಟಾರೆ ತಮಿಳುನಾಡಿನಲ್ಲಿ ಭೇಟಿ ನೀಡಲು ರೋಮಾಂಚಕ ಸ್ಥಳಗಳಿವೆ. ಇದು ನಿಮ್ಮ ಪ್ರೀತಿಪಾತ್ರರೊಂದಿಗೆ ಸ್ಮರಣೀಯ ಪ್ರವಾಸಕ್ಕೆ ಸೂಕ್ತ ತಾಣವಾಗಿದೆ. ನೀವು ರಮಣೀಯ ಸೌಂದರ್ಯ, ಐತಿಹಾಸಿಕ ದೇವಾಲಯಗಳು ಅಥವಾ ವಿಶ್ರಾಂತಿ ಸ್ಥಳಗಳನ್ನು ಹುಡುಕುತ್ತಿದ್ದರೆ, ತಮಿಳುನಾಡು ಇವೆಲ್ಲದಕ್ಕೂ ಸೂಕ್ತವಾಗಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪರಿಸರ

International Tiger Day 2024: 150 ವರ್ಷಗಳಲ್ಲಿ ಹುಲಿಗಳ ಸಂಖ್ಯೆ ಶೇ. 95ರಷ್ಟು ಕುಸಿತ!

ಜಗತ್ತಿನಲ್ಲಿ ಇಂದು ಶೇ. 97ಕ್ಕಿಂತ ಹೆಚ್ಚು ಸ್ಥಳೀಯ ಹುಲಿಗಳು ಕಣ್ಮರೆಯಾಗಿವೆ. ಇದು ಮೊದಲ ಬಾರಿಗೆ 2010 ರಲ್ಲಿ ಅಂತಾರಾಷ್ಟ್ರೀಯ ಹುಲಿ ದಿನವನ್ನು ಆಚರಿಸಲು (International Tiger Day 2024) ಪ್ರೇರೇಪಿಸಿತ್ತು. ಇದರ ಮುಖ್ಯ ಉದ್ದೇಶ ಹುಲಿಗಳ ಸಂಖ್ಯೆಯಲ್ಲಿ ಇಳಿಮುಖವಾಗುವುದನ್ನು ತಡೆಯುವ ಗುರಿಯನ್ನು ಹೊಂದಿದೆ. ವಿಶೇಷವೆಂದರೆ ಹುಲಿಗಳು ಭಾರತದಲ್ಲೇ ಹೆಚ್ಚಿನ ಸಂಖ್ಯೆಯಲ್ಲಿವೆ.

VISTARANEWS.COM


on

By

International Tiger Day 2024
Koo

ವಿನಾಶದ ಅಂಚಿನಲ್ಲಿರುವ ಹುಲಿಗಳ ಸಂರಕ್ಷಣೆಗೆ (save tiger) ಜಾಗೃತಿ ಮೂಡಿಸುವ ಸಲುವಾಗಿ (public awareness) ಪ್ರತಿ ವರ್ಷ ಜುಲೈ 29ರಂದು ಅಂತಾರಾಷ್ಟ್ರೀಯ ಹುಲಿ ದಿನವನ್ನು (International Tiger Day 2024) ಆಚರಿಸಲಾಗುತ್ತದೆ. ಹುಲಿ ಸಂರಕ್ಷಣಾ ಪ್ರಯತ್ನಗಳ ಬಗ್ಗೆ ಜನರಲ್ಲಿ ಅರಿವು ಮೂಡಿಸುವುದು ಈ ದಿನಾಚರಣೆಯ ಮುಖ್ಯ ಉದ್ದೇಶವಾಗಿದೆ.

ಜಗತ್ತಿನಲ್ಲಿ ಇಂದು ಶೇ. 97ಕ್ಕಿಂತ ಹೆಚ್ಚು ಸ್ಥಳೀಯ ಹುಲಿಗಳು ಕಣ್ಮರೆಯಾಗಿವೆ. ಇದು ಮೊದಲ ಬಾರಿಗೆ 2010ರಲ್ಲಿ ಅಂತಾರಾಷ್ಟ್ರೀಯ ಹುಲಿ ದಿನವನ್ನು ಆಚರಿಸಲು ಪ್ರೇರೇಪಿಸಿತ್ತು. ಇದರ ಮುಖ್ಯ ಉದ್ದೇಶ ಹುಲಿಗಳ ಸಂಖ್ಯೆಯಲ್ಲಿ ಇಳಿಮುಖವಾಗುವುದನ್ನು ತಡೆಯುವ ಗುರಿಯನ್ನು ಹೊಂದಿದೆ. ಅಂತಾರಾಷ್ಟ್ರೀಯ ಹುಲಿ ದಿನವು ಹುಲಿಗಳ ನೈಸರ್ಗಿಕ ಆವಾಸಸ್ಥಾನಗಳನ್ನು ರಕ್ಷಿಸುವ ಮತ್ತು ಅವುಗಳ ಸಂರಕ್ಷಣೆಯ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಜಾಗತಿಕವಾಗಿ ಜಾಗೃತಿ ಮೂಡಿಸುವ ದಿನವಾಗಿದೆ.

International Tiger Day 2024
International Tiger Day 2024


ಭಾರತದಲ್ಲಿ ಹುಲಿಗಳ ಸಂಖ್ಯೆ

2023ರ ಏಪ್ರಿಲ್ ನಲ್ಲಿ ಬಿಡುಗಡೆಯಾದ ಹುಲಿ ಗಣತಿಯ ಪ್ರಕಾರ ಭಾರತದಲ್ಲಿ ಕೇವಲ 3,167 ಹುಲಿಗಳಿವೆ. ಆಘಾತಕಾರಿ ಸಂಗತಿಯೆಂದರೆ ಈ ಸಂಖ್ಯೆಯು ಜಾಗತಿಕ ಹುಲಿ ಜನಸಂಖ್ಯೆಯ ಶೇ. 75ರಷ್ಟಾಗಿದೆ.

ಹುಲಿಯು ಭಾರತದ ರಾಷ್ಟ್ರೀಯ ಪ್ರಾಣಿಯಾಗಿದೆ. ಆದರೆ ಕ್ಷೀಣಿಸುತ್ತಿರುವ ಸಂಖ್ಯೆಯು ಆತಂಕವನ್ನು ಉಂಟು ಮಾಡಿದೆ. ಯಾಕೆಂದರೆ ಹುಲಿಗಳು ಭಾರತದ ಸಾಂಸ್ಕೃತಿಕ ಪರಂಪರೆಯ ಅತ್ಯಗತ್ಯ ಭಾಗವಾಗಿದ್ದು ಅದು ಪರಿಸರ ವ್ಯವಸ್ಥೆಗಳನ್ನು ಸಮತೋಲನಗೊಳಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ.

ಹುಲಿಗಳ ಸಂಖ್ಯೆ ಕ್ಷೀಣಿಸಲು ಕಾರಣವೇನು?

ಹುಲಿಗಳು ಪ್ರಾಣಿ ಸಾಮ್ರಾಜ್ಯದ ಭವ್ಯ ಜೀವಿಗಳು. ಬಿಳಿ ಹುಲಿ, ರಾಯಲ್ ಬೆಂಗಾಲ್ ಹುಲಿ ಮತ್ತು ಸೈಬೀರಿಯನ್ ಹುಲಿಗಳಂತಹ ಜಾತಿಗಳನ್ನು ಇವು ಒಳಗೊಂಡಿವೆ. ಹವಾಮಾನ ಬದಲಾವಣೆ, ಅಕ್ರಮ ವನ್ಯಜೀವಿ ಮಾರಾಟ ಮತ್ತು ಆವಾಸಸ್ಥಾನದ ನಷ್ಟ ಸೇರಿದಂತೆ ಹಲವಾರು ತೊಂದರೆಗಳು ಅವುಗಳ ಸಂಖ್ಯೆಯಲ್ಲಿ ತ್ವರಿತ ಕುಸಿತಕ್ಕೆ ಕಾರಣವಾಗಿದೆ.

International Tiger Day 2024
International Tiger Day 2024


ಅಂತಾರಾಷ್ಟ್ರೀಯ ಹುಲಿ ದಿನದ ಸಂದೇಶವೇನು?

2024ರ ಜುಲೈ 29ರಂದು ವಿಶ್ವದಾದ್ಯಂತ ಅಂತಾರಾಷ್ಟ್ರೀಯ ಹುಲಿ ದಿನವನ್ನು ಆಚರಿಸಲಾಗುತ್ತದೆ. ಹುಲಿ ಸಂರಕ್ಷಣೆ ಮತ್ತು ಈ ಪ್ರಾಣಿಗಳು ಎದುರಿಸುತ್ತಿರುವ ತುರ್ತು ಬೆದರಿಕೆಗಳಾದ ಆವಾಸಸ್ಥಾನದ ನಷ್ಟ, ಬೇಟೆಯಾಡುವುದು ಮತ್ತು ಮಾನವ-ವನ್ಯಜೀವಿ ಸಂಘರ್ಷದ ಬಗ್ಗೆ ಜಾಗೃತಿ ಮೂಡಿಸುವ ಗುರಿಯನ್ನು ಹೊಂದಿದೆ.

ಹುಲಿಗಳ ಸಂರಕ್ಷಿತ ಪ್ರದೇಶಗಳನ್ನು ವಿಸ್ತರಿಸುವುದು- ಹುಲಿಗಳು ಅಭಿವೃದ್ಧಿ ಹೊಂದಲು ಮತ್ತು ಮುಕ್ತವಾಗಿ ತಿರುಗಾಡಲು ಸುರಕ್ಷಿತ ಆವಾಸಸ್ಥಾನಗಳನ್ನು ಖಚಿತಪಡಿಸಿಕೊಳ್ಳುವುದು, ಸುಸ್ಥಿರ ಜೀವನೋಪಾಯವನ್ನು ಉತ್ತೇಜಿಸುವುದು- ವನ್ಯಜೀವಿಗಳನ್ನು ಸಂರಕ್ಷಿಸುವಾಗ ಆರ್ಥಿಕ ಪ್ರಯೋಜನಗಳನ್ನು ಖಾತರಿಪಡಿಸುವ ಹುಲಿ- ಸ್ನೇಹಿ ಅಭ್ಯಾಸಗಳಲ್ಲಿ ತೊಡಗಿಸಿಕೊಳ್ಳಲು ಸ್ಥಳೀಯ ಸಮುದಾಯಗಳನ್ನು ಉತ್ತೇಜಿಸುವ ಥೀಮ್ ಅನ್ನು ಈ ವರ್ಷದ ಅಂತಾರಾಷ್ಟ್ರೀಯ ಹುಲಿ ದಿನ ಹೊಂದಿದೆ.

ಅಂತಾರಾಷ್ಟ್ರೀಯ ಹುಲಿ ದಿನದ ಇತಿಹಾಸ

2010ರಲ್ಲಿ ರಷ್ಯಾದ ಸೇಂಟ್ ಪೀಟರ್ಸ್ಬರ್ಗ್ ಶೃಂಗಸಭೆಯ ಸಂದರ್ಭದಲ್ಲಿ ಅಂತಾರಾಷ್ಟ್ರೀಯ ಹುಲಿ ದಿನವನ್ನು ಆಚರಿಸಲು ನಿರ್ಧರಿಸಲಾಯಿತು. ಇದಕ್ಕೆ ವಿಶ್ವದ ಬಹುತೇಕ ರಾಷ್ಟ್ರಗಳು, ಅಂತಾರಾಷ್ಟ್ರೀಯ ಸಂಸ್ಥೆಗಳು ಮತ್ತು ಹುಲಿ ಸಂರಕ್ಷಣೆಗೆ ಮೀಸಲಾಗಿರುವ ಸಂರಕ್ಷಣಾ ಗುಂಪುಗಳು ಬೆಂಬಲವನ್ನು ಸೂಚಿಸಿತ್ತು.

ಹುಲಿಗಳು ಮತ್ತು ಅವುಗಳ ಆವಾಸಸ್ಥಾನಗಳನ್ನು ರಕ್ಷಿಸಲು ಸಂಘಟಿತ ಪ್ರಯತ್ನಗಳ ತುರ್ತು ಅಗತ್ಯವನ್ನು ಗುರುತಿಸಿ ಟೈಗರ್ ರೇಂಜ್ ದೇಶಗಳು ಹುಲಿ ಸಂರಕ್ಷಣೆ ಮತ್ತು ಅದು ಎದುರಿಸುತ್ತಿರುವ ಸವಾಲುಗಳ ಬಗ್ಗೆ ಜಾಗೃತಿ ಮೂಡಿಸಲು ಪ್ರತಿ ವರ್ಷ ಒಂದು ದಿನವನ್ನು ಮೀಸಲಿಡಲು ನಿರ್ಧರಿಸಿದೆ. ಅವರು ಜುಲೈ 29 ಅನ್ನು ಅಂತಾರಾಷ್ಟ್ರೀಯ ಹುಲಿ ದಿನಕ್ಕಾಗಿ ಆಯ್ಕೆ ಮಾಡಿದರು. ಇದು ಶೃಂಗಸಭೆಯ ಮೊದಲ ಮತ್ತು ಕೊನೆಯ ದಿನಗಳ ನಡುವಿನ ಮಧ್ಯಭಾಗವನ್ನು ಗುರುತಿಸುತ್ತದೆ. ಇದು ಹುಲಿಗಳನ್ನು ಉಳಿಸಲು ನಡೆಯುತ್ತಿರುವ ಜಾಗತಿಕ ಪ್ರಯತ್ನವನ್ನು ಸಂಕೇತಿಸುತ್ತದೆ.

International Tiger Day 2024
International Tiger Day 2024


ಅಂತಾರಾಷ್ಟ್ರೀಯ ಹುಲಿ ದಿನಾಚರಣೆ 2024ರ ಮಹತ್ವ

ಹುಲಿಗಳು ವಿಶ್ವದ ಅತಿದೊಡ್ಡ ಮತ್ತು ಅತ್ಯಂತ ಸಾಂಪ್ರದಾಯಿಕ ಪ್ರಾಣಿಯಾಗಿದೆ. ಆದರೆ ಇವುಗಳು ಗಂಭೀರ ಬೆದರಿಕೆಗಳನ್ನು ಎದುರಿಸುತ್ತಿವೆ ಮತ್ತು ಅಂತಾರಾಷ್ಟ್ರೀಯ ಹುಲಿ ದಿನವು ಅವುಗಳ ದುರವಸ್ಥೆಯ ಬಗ್ಗೆ ಜಾಗೃತಿ ಮೂಡಿಸಲು ಮೀಸಲಾಗಿದೆ. ಈ ದಿನದಂದು ಹುಲಿ ಸಂರಕ್ಷಣೆಯ ತುರ್ತು ಅಗತ್ಯವನ್ನು ಒತ್ತಿಹೇಳಲು ಸಮಾಜದ ಎಲ್ಲಾ ವರ್ಗಗಳ ಜನರು ಒಟ್ಟಾಗಿ ಸೇರುತ್ತಾರೆ.

ಇದನ್ನೂ ಓದಿ: Shiradi Landslide: ಹಳಿ ಮೇಲೆ ಭೂಕುಸಿತ, ಬೆಂಗಳೂರು- ಮಂಗಳೂರು ರೈಲುಗಳು 15 ದಿನ ಬಂದ್, 400 ಕಾರ್ಮಿಕರಿಂದ ತೆರವು ಕಾರ್ಯಾಚರಣೆ

ಹುಲಿಗಳ ಬಗೆಗಿನ ಆಸಕ್ತಿದಾಯಕ ಸಂಗತಿಗಳು

  • – ಸುಮಾರು ಎರಡು ಮಿಲಿಯನ್ ವರ್ಷಗಳಿಂದ ಹುಲಿಗಳು ಭೂಮಿ ಮೇಲೆ ಇವೆ.
  • – ಕಳೆದ 150 ವರ್ಷಗಳಲ್ಲಿ ಹುಲಿಗಳ ಸಂಖ್ಯೆ ಸುಮಾರು ಶೇ. 95ರಷ್ಟು ಕಡಿಮೆಯಾಗಿದೆ.
  • – ಭಾರತವು 3000ಕ್ಕೂ ಹೆಚ್ಚು ಹುಲಿಗಳನ್ನು ಹೊಂದಿದ್ದು, ಇದು ವಿಶ್ವದಲ್ಲೇ ಅತಿ ಹೆಚ್ಚು.
  • – ಹುಲಿಗಳು ಹೆಚ್ಚಾಗಿ ನಿಧಾನವಾಗಿ ಹೆಚ್ಚು ದೂರದವರೆಗೆ ನಡೆಯುತ್ತವೆ.
  • – ಒಂದು ಹುಲಿ ಸಾಮಾನ್ಯವಾಗಿ ರಾತ್ರಿ ಬೇಟೆಯಾಡಲು ಸುಮಾರು 6ರಿಂದ 12 ಮೈಲುಗಳಷ್ಟು ದೂರದವರೆಗೆ ಪ್ರಯಾಣಿಸುತ್ತದೆ.
  • – ಹುಲಿಗಳು ಸಾಮಾನ್ಯವಾಗಿ ತಮ್ಮ ಬೇಟೆಯನ್ನು ಕೊಲ್ಲುವ ಸ್ಥಳದಲ್ಲಿ ತಿನ್ನುವುದಿಲ್ಲ. ಅದನ್ನು ದೂರದವರೆಗೆ ಕೊಂಡು ಹೋಗಿ ಗೌಪ್ಯವಾದ ಪ್ರದೇಶದಲ್ಲಿ ತಿನ್ನುತ್ತದೆ.
Continue Reading

Latest

Fraud Case: ಪತ್ನಿಗೆ ಮಕ್ಕಳಾಗಿಲ್ಲ ಎಂದು ಮಾವನ ಕುಟುಂಬದವರ ವಿರುದ್ಧ ಪ್ರಕರಣ ದಾಖಲಿಸಿದ!

Fraud Case: ಮದುವೆಯಾಗಿ ಒಂದು ವರ್ಷಕ್ಕೂ ಹೆಚ್ಚು ಕಾಲವಾದರೂ ತನ್ನ ಪತ್ನಿಗೆ ಗರ್ಭಧರಿಸಲು ಸಾಧ್ಯವಾಗದಿದ್ದಾಗ ಆಕೆಯನ್ನು ವೈದ್ಯರ ಬಳಿಗೆ ಕರೆದೊಯ್ದ 34 ವರ್ಷದ ವ್ಯಕ್ತಿ, ಇದಕ್ಕೆ ಕಾರಣ ಪತ್ತೆ ಹಚ್ಚಿದ್ದಾನೆ. ಇದೀಗ ಆತ ಪತ್ನಿಯ ಕುಟುಂಬದವರ ವಿರುದ್ಧ ವಂಚನೆ (Fraud Case) ದಾಖಲಿಸಿದ್ದಾನೆ.

VISTARANEWS.COM


on

Fraud Case
Koo


ಅಹ್ಮದಾಬಾದ್: ಕೆಲವೊಮ್ಮೆ ದಂಪತಿಗಳಿಗೆ ಮದುವೆಯಾಗಿ ಹಲವು ವರ್ಷಗಳೇ ಕಳೆದರೂ ಮಕ್ಕಳಾಗುವುದಿಲ್ಲ. ಇದಕ್ಕೆ ವಯಸ್ಸು, ಹಾರ್ಮೋನ್ ಸಮಸ್ಯೆ, ಅಥವಾ ಸಂತಾನೋತ್ಪತ್ತಿ ಅಂಗಗಳಲ್ಲಿನ ಸಮಸ್ಯೆ ಕಾರಣವಾಗಿರುತ್ತದೆ. ಹಾಗಾಗಿ ತಮಗೆ ಮಕ್ಕಳಾಗಬೇಕೆಂದು ಹಲವು ವೈದ್ಯರ ಬಳಿ ಚಿಕಿತ್ಸೆ ಪಡೆಯುತ್ತಾರೆ. ಇದೀಗ ಮದುವೆಯಾಗಿ ಒಂದು ವರ್ಷಕ್ಕೂ ಹೆಚ್ಚು ಕಾಲವಾದರೂ ತನ್ನ ಪತ್ನಿಗೆ ಗರ್ಭಧರಿಸಲು ಸಾಧ್ಯವಾಗದಿದ್ದಾಗ ಆಕೆಯನ್ನು ವೈದ್ಯರ ಬಳಿಗೆ ಕರೆದೊಯ್ದ 34 ವರ್ಷದ ವ್ಯಕ್ತಿ, ಇದಕ್ಕೆ ಕಾರಣ ಪತ್ತೆ ಹಚ್ಚಿದ್ದಾನೆ. ಇದೀಗ ಆತ ಪತ್ನಿಯ ಕುಟುಂಬದವರ ವಿರುದ್ಧ ವಂಚನೆ (Fraud Case) ದಾಖಲಿಸಿದ್ದಾನೆ.

ಈ ಘಟನೆ ಅಹಮದಾಬಾದ್‍ನಲ್ಲಿ ನಡೆದಿದ್ದು, ಸೋನೋಗ್ರಫಿ ಮಾಡಿದ ವೈದ್ಯರು, ಆ ದಂಪತಿ ನೈಸರ್ಗಿಕವಾಗಿ ಗರ್ಭಧರಿಸಲು ಸಾಧ್ಯವಿಲ್ಲ ಎಂದು ತಿಳಿಸಿದ್ದಾರೆ. ಆಕೆಯ ವಯಸ್ಸು 40 ದಾಟಿದ್ದರಿಂದ ಮಕ್ಕಳಾಗುವ ಸಾಧ್ಯತೆ ಇಲ್ಲ ಎಂದಿದ್ದಾರೆ. ಈ ವಿಚಾರ ತಿಳಿದು ಕೋಪಗೊಂಡ ವ್ಯಕ್ತಿ ವೆಜಲ್ಪುರ ಪೊಲೀಸರನ್ನು ಸಂಪರ್ಕಿಸಿ ತನ್ನ ಪತ್ನಿ, ಆಕೆಯ ತಂದೆ ಮತ್ತು ಸಂಬಂಧಿಕರು ಸೇರಿದಂತೆ ಎಂಟು ಜನರ ವಿರುದ್ಧ ಎಫ್ಐಆರ್ ದಾಖಲಿಸಿದ್ದಾರೆ. ನಂಬಿಕೆ ದ್ರೋಹ, ಫೋರ್ಜರಿ, ವಂಚನೆ, ಕ್ರಿಮಿನಲ್ ಪಿತೂರಿ ಮತ್ತು ಬೆದರಿಕೆಗೆ ಸಂಬಂಧಿಸಿದ ಐಪಿಸಿಯ ಅನೇಕ ವಿಭಾಗಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂಬುದಾಗಿ ತಿಳಿದುಬಂದಿದೆ.

ಮದುವೆ ನಿಶ್ಚಯವಾಗುವ ಮೊದಲು ಆಕೆಯ ಬಯೋಡೇಟಾದಲ್ಲಿ ಆಕೆಯ ಜನ್ಮ ದಿನಾಂಕವನ್ನು ಮೇ 18, 1991 ಎಂದು ತೋರಿಸಲಾಗಿತ್ತು. ಇದರಿಂದಾಗಿ ಅವಳು ತನಗಿಂತ 18 ತಿಂಗಳು ಚಿಕ್ಕವಳಾಗಿದ್ದಾಳೆ ಎಂದು ತಿಳಿದ ವ್ಯಕ್ತಿ ಆಕೆಯ ಕುಟುಂಬವನ್ನು ಭೇಟಿಯಾದ ನಂತರ ಜೂನ್ 19, 2023ರಂದು ಮದುವೆಯಾಗಿದ್ದರು. ಮದುವೆಯ ದಿನದಂದು, ಅವರು ಅವಳ ಶಾಲಾ ಪ್ರಮಾಣಪತ್ರ ಮತ್ತು ಪಾಸ್‍ಪೋರ್ಟ್‌ ಪ್ರತಿಗಳನ್ನು ಸಲ್ಲಿಸಿದ್ದರು. ಮದುವೆ ರಿಜಿಸ್ಟರ್‌ನಲ್ಲಿ ಆಕೆಯ ಜನ್ಮ ದಿನಾಂಕವನ್ನು ಮೇ 18, 1991ಎಂದು ನಮೂದಿಸಿದ್ದರು. ಆದರೆ ಅವಳು ಗರ್ಭಧರಿಸಲು ಸಾಧ್ಯವಾಗದಿದ್ದಾಗ ವ್ಯಕ್ತಿಯ ತಾಯಿ ಮತ್ತು ಸಹೋದರಿ ತಪಾಸಣೆಗಾಗಿ ಜುಹಾಪುರದ ವೈದ್ಯರ ಬಳಿಗೆ ಕರೆದೊಯ್ದರು. ನಂತರ, ಸೆಪ್ಟೆಂಬರ್ 2023ರಲ್ಲಿ ಅವರು ಪಾಲ್ಡಿಯ ಸ್ತ್ರೀರೋಗತಜ್ಞರನ್ನು ಸಂಪರ್ಕಿಸಿದರು.

ಇದನ್ನೂ ಓದಿ: ಬೀದಿ ನಾಯಿ ದಾಳಿಯಿಂದ ಮಗುವನ್ನು ರಕ್ಷಿಸಿದ ಸಾಕು ನಾಯಿ! ಅಪರೂಪದ ವಿಡಿಯೊ

ವೈದ್ಯರ ಪ್ರಕಾರ, ಸೋನೋಗ್ರಫಿ ವರದಿಯಲ್ಲಿ ಅವರ ಹೆಂಡತಿಗೆ 40ರಿಂದ 42 ವರ್ಷ ವಯಸ್ಸಾಗಿರುವುದಾಗಿ ತಿಳಿಸಲಾಗಿದೆ. ಹಾಗಾಗಿ ಅವಳು ಸ್ವಾಭಾವಿಕವಾಗಿ ಗರ್ಭ ಧರಿಸಲು ಸಾಧ್ಯವಿಲ್ಲ ಎಂದು ವೈದ್ಯರು ತಿಳಿಸಿದ್ದಾರೆ. ನಂತರ ಆತ ಆಕೆಯ ಮನೆಯವರನ್ನು ಭೇಟಿ ಮಾಡಿ ವಿಚಾರಿಸಿದಾಗ ಆಕೆಯ ಸಹೋದರರು ಅಧಿಕೃತ ದಾಖಲೆಗಳಲ್ಲಿ ಆಕೆಯ ಜನ್ಮ ದಿನಾಂಕವನ್ನು ತಿರುಚಿದ್ದು ಕಂಡು ಬಂತು. ಅದನ್ನು ಮೇ 18, 1985ರಿಂದ ಮೇ 18, 1991ಕ್ಕೆ ಬದಲಾಯಿಸಲಾಗಿತ್ತು ಎಂಬುದು ತಿಳಿದು ಬಂತು. ಹಾಗಾಗಿ ಆತ ಆಕೆಯ ಕುಟುಂಬದವರ ವಿರುದ್ಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

Continue Reading

Latest

Viral Video: ಬೀದಿ ನಾಯಿ ದಾಳಿಯಿಂದ ಮಗುವನ್ನು ರಕ್ಷಿಸಿದ ಸಾಕು ನಾಯಿ! ಅಪರೂಪದ ವಿಡಿಯೊ

Viral Video: ಬೀದಿಯಲ್ಲಿ ಆಡುತ್ತಿದ್ದ ಮಗುವಿನ ಮೇಲೆ ಬೀದಿ ನಾಯಿಯೊಂದು ದಾಳಿ ನಡೆಸಿದ್ದಾಗ ಆ ಮನೆಯ ಸಾಕು ನಾಯಿ ಬೀದಿ ನಾಯಿಯ ಮೇಲೆ ದಾಳಿ ಮಾಡಿ ಮಗುವನ್ನು ರಕ್ಷಿಸಿದೆ. ಹೃದಯವನ್ನೇ ನಡುಗಿಸುವಂತಹ ಈ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಇದು ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ. ಪುಟ್ಟ ಕಂದನನ್ನು ಬೀದಿ ನಾಯಿಯ ದಾಳಿಯಿಂದ ರಕ್ಷಿಸಿದ ಸಾಕು ನಾಯಿಗೆ ಜನರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

VISTARANEWS.COM


on

Viral Video
Koo


ನಿಯತ್ತಿಗೆ ಉತ್ತಮ ಉದಾಹರಣೆ ನಾಯಿ ಎನ್ನುವುದನ್ನು ಎಲ್ಲರೂ ಒಪ್ಪುತ್ತಾರೆ. ಯಾಕೆಂದರೆ ಈ ಕಾಲದಲ್ಲಿ ನಾಯಿಗಿರುವ ನಿಯತ್ತು ಮನುಷ್ಯನಿಗೂ ಕೂಡ ಇಲ್ಲ. ನಾಯಿ ಅನ್ನ ಹಾಕಿ ಸಾಕಿದ ಮಾಲೀಕನ ಮನೆ ಕಾಯುವುದರ ಜೊತೆಗೆ ಅವು ಮಾಲೀಕ ಹಾಗೂ ಅವರ ಕುಟುಂಬದ ರಕ್ಷಣೆ ಕೂಡ ಮಾಡುತ್ತದೆ. ಇದೀಗ ನಾಯಿ ನಿಯತ್ತಿಗೆ ಸಾಕ್ಷಿ ಎಂಬಂತೆ ಘಟನೆಯೊಂದು ನಡೆದಿದ್ದು, ಅದಕ್ಕೆ ಸಂಬಂಧಪಟ್ಟ ವಿಡಿಯೊ ಸೋಶಿಯಲ್ ಮೀಡಿಯಾ ಸಖತ್ ವೈರಲ್ (Viral Video) ಆಗಿದೆ.

ಬೀದಿಯಲ್ಲಿ ಆಡುತ್ತಿದ್ದ ಮಗುವಿನ ಮೇಲೆ ಬೀದಿ ನಾಯಿಯೊಂದು ದಾಳಿ ನಡೆಸಿದ್ದಾಗ ಆ ಮನೆಯ ಸಾಕು ನಾಯಿ ಬೀದಿ ನಾಯಿಯ ಮೇಲೆ ದಾಳಿ ಮಾಡಿ ಮಗುವನ್ನು ರಕ್ಷಿಸಿದೆ. ಹೃದಯವನ್ನೇ ನಡುಗಿಸುವಂತಹ ಈ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಇದು ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ.

ವಿಡಿಯೊದಲ್ಲಿ ಇಬ್ಬರು ಮಹಿಳೆಯರು ತಮ್ಮ ಮೂವರು ಮಕ್ಕಳ ಜೊತೆ ಮಾತನಾಡುತ್ತಾ ಬೀದಿಯ ಬದಿಯಲ್ಲಿ ಕುಳಿತಿದ್ದರು. ಅವರ ಪಕ್ಕದಲ್ಲಿ ಅವರ ಸಾಕು ನಾಯಿ ಕೂಡ ಕುಳಿತಿದೆ. ಆಗ ಅದರಲ್ಲಿ ಒಂದು ಮಗು ಪುಟ್ಟ ಹೆಜ್ಜೆ ಇಡುತ್ತಾ ರಸ್ತೆಗೆ ಓಡಿದೆ. ಆಗ ಬೀದಿಯಲ್ಲಿ ಬರುತ್ತಿದ್ದ ನಾಯಿ ಒಂದೇ ಸಮನೆ ಮಗುವಿನ ಮೇಲೆ ಎರಗಿ ದಾಳಿ ನಡೆಸಿ ಮಗುವನ್ನು ಕೆಳಗುರುಳಿಸಿದೆ. ಆಗ ಅಲ್ಲಿದ್ದವರೆಲ್ಲಾ ಮಗುವನ್ನು ಕಾಪಾಡಲು ಓಡಿ ಬರುತ್ತಿರುವಾಗ ಅಲ್ಲಿ ಕುಳಿತಿದ್ದ ಸಾಕು ನಾಯಿ ಬೀದಿ ನಾಯಿಯ ಮೇಲೆ ಪ್ರತಿದಾಳಿ ನಡೆಸಿ ಮಗುವನ್ನು ರಕ್ಷಿಸಿದೆ. ಇದರಿಂದ ಮಗು ಪ್ರಾಣಾಪಾಯದಿಂದ ಪಾರಾಗಿದೆ ಎನ್ನಲಾಗಿದೆ.

ಇದನ್ನೂ ಓದಿ: ಅನಂತ್ ಅಂಬಾನಿ ಅರಿಶಿನ ಶಾಸ್ತ್ರದ ವಿಡಿಯೋ ವೈರಲ್; ಕುಣಿದು ಕುಪ್ಪಳಿಸಿದ ಹಾರ್ದಿಕ್ ,ರಣವೀರ್ ಸಿಂಗ್!

ಈ ದೃಶ್ಯ ಅಲ್ಲಿ ಅಳವಡಿಸಲಾದ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಈ ಘಟನೆ ನಡೆದ ಸ್ಥಳ ಮತ್ತು ಸಮಯದ ಬಗ್ಗೆ ಮಾಹಿತಿ ಇಲ್ಲ. ಆದರೆ ಈ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಅನೇಕರು ಕಾಮೆಂಟ್ ಮಾಡಿದ್ದಾರೆ. ಪುಟ್ಟ ಕಂದನನ್ನು ಬೀದಿ ನಾಯಿಯ ದಾಳಿಯಿಂದ ರಕ್ಷಿಸಿದ ಸಾಕು ನಾಯಿಗೆ ಜನರು ಚಪ್ಪಾಳೆ ಹಾಗೂ ಹಾರ್ಟ್ ಎಮೋಜಿಯೊಂದಿಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ನಾಯಿಗಳಿಗೆ ತುಂಬಾ ನಿಯತ್ತಿದೆ ಎಂದು ಒಬ್ಬರು ಕಾಮೆಂಟ್ ಮಾಡಿದರೆ, ಮತ್ತೊಬ್ಬರು ಅದಕ್ಕಾಗಿಯೇ ನಾಯಿಗಳನ್ನು ತುಂಬಾ ಪ್ರೀತಿಸುತ್ತಾರೆ ಎಂದು ಬರೆದಿದ್ದಾರೆ. ಹಾಗೇ ಇನ್ನೊಬ್ಬರು ನಾಯಿಯಿಂದ ಮಗುವನ್ನು ಕಾಪಾಡಿದ್ದಕ್ಕೆ ದೇವರಿಗೆ ಧನ್ಯವಾದ ತಿಳಿಸಿದ್ದಾರೆ.

Continue Reading

ಆರೋಗ್ಯ

Health Tips: ಗ್ಯಾಸ್ಟ್ರಿಕ್‌, ಅಜೀರ್ಣ ಸಮಸ್ಯೆಗೆ ನಿಮ್ಮ ಮನೆಯಲ್ಲೇ ಇದೆ ಪರಿಣಾಮಕಾರಿ ಮದ್ದು!

ದೇಹವು ಆಹಾರವನ್ನು ಸರಿಯಾಗಿ ಜೀರ್ಣಿಸಿಕೊಳ್ಳಲು ಸಾಧ್ಯವಾಗದಿದ್ದರೆ ಜೀರ್ಣಕ್ರಿಯೆಗೆ ಸಂಬಂಧಿಸಿದ ಸಮಸ್ಯೆಗಳನ್ನು ಉಂಟು ಮಾಡುತ್ತದೆ. ಫೈಬರ್ ಭರಿತ ಆಹಾರಗಳು ಜೀರ್ಣಕ್ರಿಯೆಗೆ ಸಹಾಯ ಮಾಡುತ್ತದೆ. ಇದಲ್ಲದೆ ಕೆಲವು ಸಾಮಾನ್ಯ ಅಡುಗೆ ಪದಾರ್ಥಗಳಿಂದ ಜೀರ್ಣಕ್ರಿಯೆಗೆ ಸಂಬಂಧಿಸಿದ ಸಮಸ್ಯೆಗಳಿಂದ (Health Tips) ಮುಕ್ತಿ ಪಡೆಯಬಹುದು. ನಮ್ಮನ್ನು ಹೆಚ್ಚಾಗಿ ಕಾಡುವ ಹಲವು ಸಮಸ್ಯೆಗಳಿಗೆ ಇರುವ ಮನೆಮದ್ದಿನ ಮಾಹಿತಿ ಇಲ್ಲಿದೆ.

VISTARANEWS.COM


on

By

Health Tips
Koo

ಎದೆಯುರಿ (heartburn), ಅಜೀರ್ಣ (indigestion) ಮತ್ತು ಗ್ಯಾಸ್ಟ್ರಿಕ್ (gastric) ಮೊದಲಾದ ಆರೋಗ್ಯ (Health Tips) ಸಮಸ್ಯೆಗಳು ನಾವು ಸಾಮಾನ್ಯ ಎಂದುಕೊಂಡಿರುತ್ತೇವೆ. ಆದರೆ ಇದನ್ನು ನಿರ್ಲಕ್ಷಿಸುವುದು ಅಪಾಯಕಾರಿಯಾಗಬಹುದು. ಜೀರ್ಣಕಾರಿ ಸಮಸ್ಯೆಗಳು (Digestive issues) ಅನೇಕ ಜನರಿಗೆ ಸಾಮಾನ್ಯ ಸಮಸ್ಯೆಗಳಾಗಿವೆ. ದುರ್ಬಲ ಜೀರ್ಣಾಂಗ ವ್ಯವಸ್ಥೆಯಿಂದಾಗಿ ಇದು ಉಂಟಾಗುತ್ತದೆ. ಇದರಿಂದ ಹೊಟ್ಟೆ ಉಬ್ಬುವುದು, ಹೊಟ್ಟೆ ಭಾರ ಮತ್ತು ಊಟದ ಅನಂತರ ಎದೆಯುರಿ ಮೊದಲಾದವುಗಳು ಕಾಣಿಸಿಕೊಳ್ಳುತ್ತವೆ.

ದೇಹವು ಆಹಾರವನ್ನು ಸರಿಯಾಗಿ ಜೀರ್ಣಿಸಿಕೊಳ್ಳಲು ಮತ್ತು ಹೀರಿಕೊಳ್ಳಲು ಸಾಧ್ಯವಾಗದಿದ್ದರೆ ಪೋಷಕಾಂಶಗಳ ಕೊರತೆಗೆ ಕಾರಣವಾಗುವುದರಿಂದ ಈ ಸಮಸ್ಯೆಗಳನ್ನು ಪರಿಹರಿಸುವುದು ಮುಖ್ಯವಾಗಿದೆ. ಫೈಬರ್ ಭರಿತ ಆಹಾರಗಳು ಜೀರ್ಣಕ್ರಿಯೆಗೆ ಸಹಾಯ ಮಾಡುತ್ತದೆ. ಅಲ್ಲದೆ ಹೆಚ್ಚುವರಿಯಾಗಿ ಕೆಲವು ಸಾಮಾನ್ಯ ಅಡುಗೆ ಪದಾರ್ಥಗಳಿಂದ ಈ ಸಮಸ್ಯೆಗಳಿಂದ ಮುಕ್ತಿ ಪಡೆಯಬಹುದು.

ಜೀರ್ಣಕಾರಿ ಅಸ್ವಸ್ಥತೆಯನ್ನು ನಿವಾರಿಸಲು ಸಹಾಯ ಮಾಡುವ ನಾಲ್ಕು ಪರಿಹಾರಗಳು ಇಲ್ಲಿವೆ.

Health Tips
Health Tips


ಸೋಂಪು ಕಾಳು

ಸೋಂಪು ಕಾಳುಗಳು ಜೀರ್ಣಕ್ರಿಯೆಯನ್ನು ಸುಧಾರಿಸಲು ಸಾಂಪ್ರದಾಯಿಕ ಪರಿಹಾರವಾಗಿದೆ. ಊಟದ ಅನಂತರ ಉಬ್ಬುವುದು ಮತ್ತು ಅಸ್ವಸ್ಥತೆಯನ್ನು ನಿವಾರಿಸಲು ಅವುಗಳನ್ನು ಶತಮಾನಗಳಿಂದ ಬಳಸಲಾಗುತ್ತದೆ. ಊಟದ ಅನಂತರ ಸೋಂಪು ಕಾಳುಗಳನ್ನು ಅಗಿಯುವುದು ಉತ್ತಮ ಜೀರ್ಣಕ್ರಿಯೆಗೆ ಸಹಾಯ ಮಾಡುತ್ತದೆ ಮತ್ತು ಗ್ಯಾಸ್ಟ್ರಿಕ್ ಸಮಸ್ಯೆಯನ್ನು ಕಡಿಮೆ ಮಾಡುತ್ತದೆ.

ಬಳಸುವುದು ಹೇಗೆ ?

ಊಟದ ಅನಂತರ ಒಂದು ಟೀಚಮಚ ಸೋಂಪು ಕಾಳನ್ನು ಜಗಿದು ತಿನ್ನಿ. ಅಥವಾ ಒಂದು ಲೋಟ ನೀರಿನಲ್ಲಿ ಒಂದು ಟೀಚಮಚ ಸೋಂಪು ಕಾಳುಗಳನ್ನು ಕುದಿಸಿ, ಸೋಸಿಕೊಂಡು ಬೆಚ್ಚಗೆ ಕುಡಿಯಬಹುದು.

Health Tips
Health Tips


ಅಜ್ವೈನ್

ಅಜ್ವೈನ್ ಬೀಜಗಳು ಜೀರ್ಣಕ್ರಿಯೆಯನ್ನು ಸುಧಾರಿಸುವ ಗುಣ ಹೊಂದಿದೆ. ಆಮ್ಲೀಯತೆ, ಉಬ್ಬುವುದು ಮತ್ತು ಹೊಟ್ಟೆ ನೋವಿಗೆ ಇದು ಪರಿಹಾರವನ್ನು ನೀಡಬಹುದು. ಅಜ್ವೈನ್ ಗ್ಯಾಸ್ಟ್ರಿಕ್ ಜ್ಯೂಸ್ ಸ್ರವಿಸುವಿಕೆಯಲ್ಲಿ ಸಹಾಯ ಮಾಡುತ್ತದೆ, ಹೀಗಾಗಿ ಜೀರ್ಣಕ್ರಿಯೆಯನ್ನು ಸುಧಾರಿಸುತ್ತದೆ.

ಬಳಸುವುದು ಹೇಗೆ?

ಅಜ್ವೈನ್ ನ ಕೆಲವು ಬೀಜಗಳನ್ನು ಊಟದ ಅನಂತರ ಜಗಿಯಬಹುದು ಅಥವಾ ಒಂದು ಟೀ ಚಮಚ ಅಜ್ವೈನ್ ಬೀಜಗಳನ್ನು ಒಂದು ಕಪ್ ನೀರಿನಲ್ಲಿ ಕುದಿಸಿ ಮತ್ತು ಅದನ್ನು ಕುಡಿಯಬಹುದು.

Health Tips
Health Tips


ಏಲಕ್ಕಿ

ಏಲಕ್ಕಿಯನ್ನು ಸಾಮಾನ್ಯವಾಗಿ ಖಾರ ಮತ್ತು ಸಿಹಿ ತಿನಿಸುಗಳಲ್ಲಿ ಬಳಸಲಾಗುತ್ತದೆ. ಇದು ನೈಸರ್ಗಿಕ ಮೌತ್ ಫ್ರೆಶ್ನರ್ ಆಗಿ ಕಾರ್ಯನಿರ್ವಹಿಸುತ್ತದೆ ಮತ್ತು ಜೀರ್ಣಕ್ರಿಯೆಗೆ ಸಹಾಯ ಮಾಡುತ್ತದೆ. ಏಲಕ್ಕಿಯು ಗ್ಯಾಸ್ ಮತ್ತು ಅಜೀರ್ಣವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ ಮತ್ತು ಹೊಟ್ಟೆಯುಬ್ಬರಕ್ಕೆ ಪರಿಹಾರವನ್ನು ನೀಡುತ್ತದೆ.

ಬಳಸುವುದು ಹೇಗೆ?

ಊಟದ ಅನಂತರ ಏಲಕ್ಕಿಯನ್ನು ಅಗಿಯಿರಿ. ಇದು ರುಚಿಯನ್ನು ಹೆಚ್ಚಿಸಲು ಮತ್ತು ಜೀರ್ಣಕ್ರಿಯೆಯನ್ನು ಸುಧಾರಿಸಲು ಸಹಾಯ ಮಾಡುತ್ತದೆ.

Health Tips
Health Tips


ಇಂಗು

ಇಂಗು ಕಟುವಾದ ಪರಿಮಳ ಮತ್ತು ಜೀರ್ಣಕ್ರಿಯೆಗೆ ಪ್ರಯೋಜನಕಾರಿಯಾಗಿದೆ. ಇದು ಗ್ಯಾಸ್ಟ್ರಿಕ್, ಹೊಟ್ಟೆ ಉಬ್ಬರವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಇಂಗು ಜೀರ್ಣಕಾರಿ ಕಿಣ್ವಗಳ ಬಿಡುಗಡೆಯನ್ನು ಉತ್ತೇಜಿಸುತ್ತದೆ ಮತ್ತು ಜೀರ್ಣಕಾರಿ ಪ್ರಕ್ರಿಯೆಯನ್ನು ಸುಧಾರಿಸುತ್ತದೆ.

ಬಳಸುವುದು ಹೇಗೆ?

ಒಂದು ಚಿಟಿಕೆ ಇಂಗನ್ನು ಬೆಚ್ಚಗಿನ ನೀರಿನಲ್ಲಿ ಕರಗಿಸಿ ಮತ್ತು ಊಟದ ಅನಂತರ ಕುಡಿಯಿರಿ ಅಥವಾ ಉತ್ತಮ ಜೀರ್ಣಕ್ರಿಯೆಗಾಗಿ ಇದನ್ನು ಒಗ್ಗರಣೆಯಲ್ಲಿ ಸೇರಿಸಬಹುದು.

ಇದನ್ನೂ ಓದಿ: Sugar Vs Jaggery In Tea: ಸಕ್ಕರೆ ಬದಲು ಬೆಲ್ಲ ಹಾಕಿ ಚಹಾ ಕುಡಿದರೆ ಆರೋಗ್ಯಕ್ಕೆ ನಿಜಕ್ಕೂ ಲಾಭ ಇದೆಯೆ?

ಉತ್ತಮ ಜೀರ್ಣಕ್ರಿಯೆಗೆ ಸಲಹೆಗಳು

ಜೀರ್ಣಕ್ರಿಯೆಗೆ ಸಹಾಯ ಮಾಡಲು ದಿನವಿಡೀ ಸಾಕಷ್ಟು ನೀರು ಕುಡಿಯಿರಿ.

ಜೀರ್ಣಾಂಗ ವ್ಯವಸ್ಥೆ ಉತ್ತಮವಾಗಿರಲು ಸುಲಭವಾಗಿ ಜೀರ್ಣವಾಗುವ ಆಹಾರವನ್ನು ಸರಿಯಾಗಿ ಜಗಿದು ತಿನ್ನಿ.
ಜೀರ್ಣಾಂಗ ವ್ಯವಸ್ಥೆಯನ್ನು ಓವರ್‌ಲೋಡ್ ಮಾಡಬೇಡಿ. ಚಿಕ್ಕ ಪ್ರಮಾಣದಲ್ಲಿ ಆಗಾಗ್ಗೆ ಸೇವಿಸಿ.

ದೈಹಿಕ ಚಟುವಟಿಕೆಯು ಜೀರ್ಣಕಾರಿ ಪ್ರಕ್ರಿಯೆಯನ್ನು ಉತ್ತೇಜಿಸಲು ಮತ್ತು ಉಬ್ಬುವಿಕೆಯನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.

Continue Reading
Advertisement
BJP-JDS Padayatra
ಕರ್ನಾಟಕ45 seconds ago

BJP-JDS Padayatra: ಬಿಜೆಪಿ-ಜೆಡಿಎಸ್‌ ಪಾದಯಾತ್ರೆಗೆ ಅನುಮತಿ ಕೊಡಲ್ಲ: ಗೃಹ ಸಚಿವ ಪರಮೇಶ್ವರ್‌

Physical Abuse
ದೇಶ4 mins ago

Physical Abuse: ತಂಗಿ ಮೇಲೆ 13 ವರ್ಷದ ಬಾಲಕನಿಂದ ಅತ್ಯಾಚಾರ, ಕೊಲೆ; ಕೇಸ್‌ ಮುಚ್ಚಲು ತಾಯಿಯೇ ಸಾಥ್!

train service
ಹಾಸನ6 mins ago

Train services: ಎಡಕುಮೇರಿಯಲ್ಲಿ ಭೂಕುಸಿತ; ಆಗಸ್ಟ್‌ 4ರವರೆಗೆ 14 ರೈಲುಗಳ ಸಂಚಾರ ರದ್ದು

International Tiger Day 2024
ಪರಿಸರ7 mins ago

International Tiger Day 2024: 150 ವರ್ಷಗಳಲ್ಲಿ ಹುಲಿಗಳ ಸಂಖ್ಯೆ ಶೇ. 95ರಷ್ಟು ಕುಸಿತ!

puncture mafia viral video
ವೈರಲ್ ನ್ಯೂಸ್10 mins ago

Viral video: ರಸ್ತೆಯಿಂದ ರಾಶಿಗಟ್ಟಲೆ ಮೊಳೆ ಹೆಕ್ಕಿ ತೆಗೆದ ಟ್ರಾಫಿಕ್‌ ಪೊಲೀಸರು; ಪಂಕ್ಚರ್‌ ಮಾಫಿಯಾ ಸಕ್ರಿಯ?

Fraud Case
Latest19 mins ago

Fraud Case: ಪತ್ನಿಗೆ ಮಕ್ಕಳಾಗಿಲ್ಲ ಎಂದು ಮಾವನ ಕುಟುಂಬದವರ ವಿರುದ್ಧ ಪ್ರಕರಣ ದಾಖಲಿಸಿದ!

Shraddha Srinath Love tattoo on chest What does that mean
ಸ್ಯಾಂಡಲ್ ವುಡ್19 mins ago

Shraddha Srinath: ಶ್ರದ್ಧಾ ಶ್ರೀನಾಥ್‌ ಎದೆ ಮೇಲೆ ʻLove’ ಟ್ಯಾಟೂ ; ಏನಿದರ ಅರ್ಥ?

OBC Reservation
ದೇಶ43 mins ago

OBC Reservation: ಒಬಿಸಿ ಮೀಸಲಾತಿ ಹೆಚ್ಚಳಕ್ಕೆ ಸುಪ್ರೀಂ ಕೋರ್ಟ್‌ ತಡೆ; ನಿತೀಶ್‌ ಕುಮಾರ್‌ಗೆ ಮುಖಭಂಗ!

Rajendra Nagar Tragedy
ದೇಶ45 mins ago

Rajendra Nagar Tragedy: ದೆಹಲಿ ಕೋಚಿಂಗ್‌ ಸೆಂಟರ್‌ನಲ್ಲಿ ವಿದ್ಯಾರ್ಥಿಗಳ ಸಾವಿನ ಪ್ರಕರಣ; 7 ಮಂದಿಯ ಬಂಧನ

cm siddaramaiah mallikarjun kharge dk shivakumar
ಪ್ರಮುಖ ಸುದ್ದಿ57 mins ago

CM Siddaramaiah: ನಾಳೆ ದಿಲ್ಲಿಗೆ ಸಿಎಂ- ಡಿಸಿಎಂ ದೌಡು; ಸಚಿವ ಸಂಪುಟದಲ್ಲಿ ಬದಲಾವಣೆ ಫಿಕ್ಸ್?

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Tungabhadra Dam
ಕೊಪ್ಪಳ19 hours ago

Tungabhadra Dam: ಕಾಲುವೆಯಲ್ಲಿ ಬಾಲಕರ ಈಜಾಟ; ಅಧಿಕಾರಿಗಳಿಗೆ ಪೀಕಲಾಟ!

Elephant attack
ಮಳೆ21 hours ago

Elephant attack : ಮಳೆ ಮಧ್ಯೆ ಮಲೆನಾಡಿನಲ್ಲಿ ಕಾಡಾನೆಗಳ ಕಾಟ; ಪ್ರವಾಹಕ್ಕೆ ಸಿಲುಕಿದ ಪಟಗುಂದಿ ಗ್ರಾಮ

karnataka Rain
ಮಳೆ23 hours ago

Karnataka Rain : ಮಳೆ ನಿಂತರೂ ಕಡಿಮೆಯಾಗದ ಅನಾಹುತ; ಮಾದಪುರ ಟೌನ್ ಸಮೀಪ ಗುಡ್ಡ ಕುಸಿತ

karnataka Rain
ಮಳೆ1 day ago

Karnataka Rain : ರಭಸವಾಗಿ ಬೀಸಿದ ಗಾಳಿಗೆ ಮನೆ ಮೇಲೆ ಬಿದ್ದ ತೆಂಗಿನ ಮರ; ನದಿ ನೀರು ಸೇವಿಸದಂತೆ ಸೂಚನೆ

Karnataka weather Forecast
ಮಳೆ2 days ago

Karnataka Weather : ವೀಕೆಂಡ್‌ ಮೋಜಿಗೆ ಮಳೆರಾಯ ಅಡ್ಡಿ; ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ

ramanagara news
ರಾಮನಗರ2 days ago

Ramanagar News : ರಾಮನಗರದಲ್ಲಿ ಎರಡು ಜಡೆ ಹಾಕಿಲ್ಲವೆಂದು ವಿದ್ಯಾರ್ಥಿನಿಯರ ಕೂದಲು ಕತ್ತರಿಸಿದ ಶಿಕ್ಷಕರು ಅಮಾನತು

karnataka rain
ಮಳೆ2 days ago

Karnataka Rain : ಕಾವೇರಿ ನದಿ ತೀರದಲ್ಲಿ ಪ್ರವಾಹ ಭೀತಿ; ಮುತ್ತತ್ತಿಗೆ ಪ್ರವಾಸಿಗರ ನಿಷೇಧ, ಶ್ರೀರಂಗಪಟ್ಟಣದಲ್ಲಿ ಪಿಂಡ ಪ್ರದಾನಕ್ಕೆ ಬ್ರೇಕ್

Ankola landslide
ಉತ್ತರ ಕನ್ನಡ3 days ago

Ankola landslide: ಅಂಕೋಲಾ-ಶಿರೂರು ಗುಡ್ಡ ಕುಸಿತ; ನಾಳೆಯಿಂದ ಪ್ಲೋಟಿಂಗ್ ಪ್ಲಾಟ್‌ಫಾರಂ ಕಾರ್ಯಾಚರಣೆ

karnataka rain
ಮಳೆ3 days ago

Karnataka Rain : ಉಕ್ಕಿ ಹರಿಯುವ ನೇತ್ರಾವತಿ ನದಿಯಲ್ಲಿ ತೇಲಿ ಬಂದ ಜೀವಂತ ಹಸು

Karnataka Rain
ಮಳೆ3 days ago

Karnataka Rain: ವಿದ್ಯುತ್‌ ದುರಸ್ತಿಗಾಗಿ ಪ್ರಾಣದ ಹಂಗು ತೊರೆದು ಉಕ್ಕಿ ಹರಿಯುವ ನೀರಿಗೆ ಧುಮುಕಿದ ಲೈನ್‌ ಮ್ಯಾನ್‌!

ಟ್ರೆಂಡಿಂಗ್‌