Israel Palestine War: ಹಿಜ್ಬುಲ್ಲಾ ದಾಳಿಗೆ 12 ಮಂದಿ ಸಾವು; ಇಸ್ರೇಲ್‌ನಿಂದ ಪ್ರತೀಕಾರದ ಎಚ್ಚರಿಕೆ - Vistara News

ವಿದೇಶ

Israel Palestine War: ಹಿಜ್ಬುಲ್ಲಾ ದಾಳಿಗೆ 12 ಮಂದಿ ಸಾವು; ಇಸ್ರೇಲ್‌ನಿಂದ ಪ್ರತೀಕಾರದ ಎಚ್ಚರಿಕೆ

Israel Palestine War: ಶನಿವಾರ ಇಸ್ರೇಲ್‌ ನಿಯಂತ್ರಣದಲ್ಲಿರುವ ಗೋಲಾನ್‌ ಹೈಟ್ಸ್‌ ಪ್ರದೇಶದ ಮೇಲೆ ಹಿಜ್ಬುಲ್ಲಾ ಭಯೋತ್ಪಾದಕ ಸಂಘಟನೆ ನಡೆಸಿದ ರಾಕೆಟ್‌ ದಾಳಿಯಲ್ಲಿ ಮಕ್ಕಳು ಸೇರಿದಂತೆ 12 ಮಂದಿ ಸಾವನ್ನಪ್ಪಿದ್ದು, ಇದಕ್ಕೆ ಪ್ರತಿಕಾರ ತೀರಿಸುವುದಾಗಿ ಇಸ್ರೇಲ್‌ ಶಪಥ ಕೈಗೊಂಡಿದೆ. ಲೆಬನಾನ್‌ನಿಂದ ಹಾರಿಸಲಾದ ರಾಕೆಟ್ ಗೋಲನ್ ಹೈಟ್ಸ್‌ನ ಉತ್ತರದ ಡ್ರೂಜ್ ಪಟ್ಟಣವಾದ ಮಜ್ಡಾಲ್ ಶಾಮ್ಸ್‌ನಲ್ಲಿರುವ ಫುಟ್‌ಬಾಲ್ ಮೈದಾನಕ್ಕೆ ಅಪ್ಪಳಿಸಿ ಅಲ್ಲಿ ಆಟವಾಡುತ್ತಿದ್ದ ಮಕ್ಕಳು ಸೇರಿದಂತೆ ಹಲವರನ್ನು ಬಲಿ ಪಡೆದುಕೊಂಡಿದೆ.

VISTARANEWS.COM


on

Israel Palestine War
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಜೆರುಸಲೇಂ: 2023ರ ಅಕ್ಟೋಬರ್‌ನಿಂದ ಹಮಾಸ್‌ ಉಗ್ರರು ಮತ್ತು ಇಸ್ರೇಲ್‌ ನಡುವೆ ನಿರಂತರ ಯುದ್ಧ ನಡೆಯುತ್ತಿದೆ (Israel Hamas War). ಈ ಮಧ್ಯೆ ಶನಿವಾರ ಇಸ್ರೇಲ್‌ ನಿಯಂತ್ರಣದಲ್ಲಿರುವ ಗೋಲಾನ್‌ ಹೈಟ್ಸ್‌ ಪ್ರದೇಶದ ಮೇಲೆ ಹಿಜ್ಬುಲ್ಲಾ (Hezbollah) ಭಯೋತ್ಪಾದಕ ಸಂಘಟನೆ ನಡೆಸಿದ ರಾಕೆಟ್‌ ದಾಳಿಯಲ್ಲಿ ಮಕ್ಕಳು ಸೇರಿದಂತೆ 12 ಮಂದಿ ಸಾವನ್ನಪ್ಪಿದ್ದು, ಇದಕ್ಕೆ ಪ್ರತಿಕಾರ ತೀರಿಸುವುದಾಗಿ ಇಸ್ರೇಲ್‌ ಶಪಥ ಕೈಗೊಂಡಿದೆ.

ಲೆಬನಾನ್‌ನಿಂದ ಹಾರಿಸಲಾದ ರಾಕೆಟ್ ಗೋಲನ್ ಹೈಟ್ಸ್‌ನ ಉತ್ತರದ ಡ್ರೂಜ್ ಪಟ್ಟಣವಾದ ಮಜ್ಡಾಲ್ ಶಾಮ್ಸ್‌ನಲ್ಲಿರುವ ಫುಟ್‌ಬಾಲ್ ಮೈದಾನಕ್ಕೆ ಅಪ್ಪಳಿಸಿ ಅಲ್ಲಿ ಆಟವಾಡುತ್ತಿದ್ದ ಮಕ್ಕಳು ಸೇರಿದಂತೆ ಹಲವರನ್ನು ಬಲಿ ಪಡೆದುಕೊಂಡಿದೆ. ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿರುವ ಇಸ್ರೇಲ್‌ ಪ್ರಧಾನಿ ಬೆಂಜಮಿನ್‌ ನೆತನ್ಯಾಹು (Benjamin Netanyahu), ಇದಕ್ಕೆ ಹೆಜ್ಬುಲ್ಲಾ ಸಂಘಟನೆ ಭಾರಿ ಬೆಲೆ ತೆರೆಬೇಕಾಗುತ್ತದೆ ಎಂದು ಖಡಕ್‌ ಎಚ್ಚರಿಕೆಯ ಸಂದೇಶ ರವಾನಿಸಿದ್ದಾರೆ. ಆದರೆ ಹಿಜ್ಬುಲ್ಲಾ ಈ ರಾಕೆಟ್ ದಾಳಿಯನ್ನು ನಿರಾಕರಿಸಿದೆ.

ದಾಳಿಯ ಹಿನ್ನೆಲೆಯಲ್ಲಿ ಅಮೆರಿಕ ಪ್ರವಾಸದಲ್ಲಿದ್ದ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರು ತಮ್ಮ ಪ್ರವಾಸವನ್ನು ಅರ್ಧದಲ್ಲೇ ಮೊಟಕುಗೊಳಿಸಿ ಇಸ್ರೇಲ್‌ಗೆ ಧಾವಿಸಿದ್ದಾರೆ. ಮುಂದಿನ ನಡೆಯ ಬಗ್ಗೆ ಚರ್ಚಿಸಲು ಅವರು ಭದ್ರತಾ ಕ್ಯಾಬಿನೆಟ್ ಕರೆದಿದ್ದಾರೆ.

ಶನಿವಾರ ಸಂಜೆ ಫುಟ್‌ಬಾಲ್‌ ಮೈದಾನದ ಮೇಲೆ ರಾಕೆಟ್‌ ದಾಳಿ ನಡೆದಿತ್ತು. ಇಸ್ರೇಲ್‌ ಮಿಲಿಟರಿ ನೆಲೆಗಳ ಮೇಲೆ ರಾಕೆಟ್‌ ಹಾರಿಸಿರುವುದಾಗಿ ಹಿಜ್ಬುಲ್ಲಾ ಈ ಹಿಂದೆ ಘೋಷಿಸಿತ್ತು. ಆದರೆ ಮಜ್ಡಾಲ್ ಶಾಮ್ಸ್‌ನಲ್ಲಿರುವ ಫುಟ್‌ಬಾಲ್ ಮೈದಾನದ ಮೇಲಿನ ದಾಳಿಯಲ್ಲಿ ನಿರಾಕರಿಸಿದೆ. “ಈ ಘಟನೆಯೊಂದಿಗೆ ತನಗೆ ಯಾವುದೇ ಸಂಬಂಧವಿಲ್ಲʼʼ ಎಂದು ಹೇಳಿದೆ.

ರಾಕೆಟ್ ಇರಾನ್ ನಿರ್ಮಿತ ಫಲಾಕ್ -1 ಎನ್ನುವುದು ಖಚಿತವಾಗಿದೆ ಎಂದು ಎಂದು ಇಸ್ರೇಲ್ ಮಿಲಿಟರಿ ವಕ್ತಾರರು ತಿಳಿಸಿದ್ದಾರೆ. ಇಸ್ರೇಲ್‌ ಸೇನಾ ಪ್ರಧಾನ ಕಚೇರಿಯನ್ನು ಗುರಿಯಾಗಿಸಿಕೊಂಡು ಫಲಾಕ್ -1 ಕ್ಷಿಪಣಿಯನ್ನು ಹಾರಿಸುವುದಾಗಿ ಹಿಜ್ಬುಲ್ಲಾ ಶನಿವಾರ ಘೋಷಿಸಿತ್ತು. ಇಸ್ರೇಲ್‌ ರಕ್ಷಣಾ ಸಚಿವ ಯೋವ್ ಶೌರ್ಯ್ ಮಜ್ದಾಲ್ ಶಮ್ಸ್‌ಗೆ ಭೇಟಿ ನೀಡಿ, “ನಾವು ಶತ್ರುಗಳಿಗೆ ತಕ್ಕ ಪಾಠ ಕಲಿಸುತ್ತೇವೆʼʼ ಎಂದು ಹೇಳಿದ್ದಾರೆ. ದಕ್ಷಿಣ ಲೆಬನಾನ್‌ನ ಚೆಬಾ ಗ್ರಾಮದ ಉತ್ತರಕ್ಕಿರುವ ಪ್ರದೇಶದಿಂದ ರಾಕೆಟ್ ಉಡಾವಣೆ ನಡೆಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಅಮೆರಿಕ ಹೇಳಿದ್ದೇನು?

ಸಂಘರ್ಷವನ್ನು ಕಡಿಮೆ ಮಾಡುವ ಉದ್ದೇಶದಿಂದ ರಾಜತಾಂತ್ರಿಕ ಪ್ರಯತ್ನಗಳನ್ನು ಮುನ್ನಡೆಸುತ್ತಿರುವ ಅಮೆರಿಕ ಇದನ್ನು ಭಯಾನಕ ದಾಳಿ ಎಂದು ಖಂಡಿಸಿದೆ ಆದರೆ ಹೆಜ್ಬುಲ್ಲಾವನ್ನು ನೇರವಾಗಿ ಹೆಸರಿಸಿಲ್ಲ. ಇಸ್ರೇಲ್ ನಡೆಸಿದ ದಾಳಿಯಲ್ಲಿ ಇದುವರೆಗೆ ಲೆಬನಾನ್‌ನಲ್ಲಿ ಸುಮಾರು 350 ಹಿಜ್ಬುಲ್ಲಾ ಭಯೋತ್ಪದಕರು ಸೇರಿದಂತೆ 100ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ. ಇತ್ತ ಲೆಬನಾನ್‌ ವಿರುದ್ಧ ಯಾವುದೇ ಕಾರ್ಯಾಚರಣೆ ನಡೆಸದಂತೆ ಇರಾನ್ ಭಾನುವಾರ ಇಸ್ರೇಲ್‌ಗೆ ಎಚ್ಚರಿಕೆ ನೀಡಿದೆ ಎಂದು ಮೂಲಗಳು ತಿಳಿಸಿವೆ.

ಇತ್ತೀಚೆಗೆ ಗಾಜಾ ಪಟ್ಟಿಯ ಖಾನ್‌ ಯೌನಿಸ್‌ (Khan Younis) ಪ್ರದೇಶದ ಮೇಲೆ ಇಸ್ರೇಲ್‌ ಭೀಕರ ದಾಳಿ ನಡೆಸಿದ್ದು, ಹಮಾಸ್‌ ಮಿಲಿಟರಿ ವಿಭಾಗದ ಮುಖ್ಯಸ್ಥ ಮೊಹಮ್ಮದ್‌ ಡೈಫ್ (Mohammed Deif)‌ ಎಂಬಾತನನ್ನು ಹತ್ಯೆ ಮಾಡಿತ್ತು.

ಇದನ್ನೂ ಓದಿ: Israel-Hamas Conflict: ಇಸ್ರೇಲ್‌ ಏರ್‌ಸ್ಟ್ರೈಕ್- ಹಮಾಸ್‌ ಕಮಾಂಡರ್‌ ಹತ್ಯೆ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ವೈರಲ್ ನ್ಯೂಸ್

ದೇಶಗಳ ಗಡಿ ಮೀರಿದ ಮತ್ತೊಂದು ಲವ್‌ಸ್ಟೋರಿ; ಪ್ರಿಯತಮನೊಂದಿಗೆ ಬಾಳಲು ರಾಜಸ್ಥಾನಕ್ಕೆ ಬಂದ ಪಾಕ್‌ ಮಹಿಳೆ

Indo-Pak Romance: ಪಾಕಿಸ್ತಾನದ ಮೆಹ್ವಿಶ್ ಎಂಬ ಮಹಿಳೆ ಗಡಿಯನ್ನು ದಾಟಿ, ಫೇಸ್‌ಬುಕ್‌ನಲ್ಲಿ ಪರಿಚಯವಾದ ತನ್ನ ವಿವಾಹಿತ ಪ್ರೇಮಿ ರೆಹಮಾನ್‌ನೊಂದಿಗೆ ಬಾಳಲು ರಾಜಸ್ಥಾನದ ಬಿಕಾನೇರ್ ಜಿಲ್ಲೆಗೆ ಆಗಮಿಸಿದ್ದಾರೆ. ವಿಶೇಷ ಎಂದರೆ ಮೆಹ್ವಿಶ್ ಮತ್ತು ರೆಹಮಾನ್‌ಗೆ ಈಗಾಗಲೇ ಬೇರೆ ಬೇರೆ ಮದುವೆಯಾಗಿದ್ದು ತಲಾ ಇಬ್ಬರು ಮಕ್ಕಳಿದ್ದಾರೆ. ಈ ಪೈಕಿ ಮೆಹ್ವಿಶ್ ವಿಚ್ಛೇಧನ ಪಡೆದುಕೊಂಡಿದ್ದರೆ ಸದ್ಯ ರೆಹಮಾನ್‌ ಪತ್ನಿ ಠಾಣೆ ಮೆಟ್ಟಿಲೇರಿದ್ದಾರೆ.

VISTARANEWS.COM


on

Indo-Pak Romance
Koo

ಜೈಪುರ: ಪ್ರೀತಿಗೆ ಕಣ್ಣಿಲ್ಲ ಎನ್ನುವ ಮಾತಿದೆ. ಜತೆಗೆ ಗಡಿಯ ಹಂಗೂ ಇಲ್ಲ. ಈಗಾಗಲೇ ಎರಡು ದೇಶಗಳ ಪ್ರೇಮಿಗಳು ಭಾಷೆ, ಧರ್ಮದ ಗಡಿಯನ್ನು ಮೀರಿ ಒಂದಾಗಿರುವುದನ್ನು ನೋಡಿದ್ದೇನೆ. ಬಹುತೇಕ ಸಂದರ್ಭದಲ್ಲಿ ಇದಕ್ಕೆ ಸೋಷಿಯಲ್‌ ಮೀಡಿಯಾವೇ ತಳಹದಿ ಎನ್ನುವುದು ವಿಶೇಷ. ಇಷ್ಟೆಲ್ಲ ಪೀಠಿಕೆ ಯಾಕೆಂದರೆ ಪಾಕಿಸ್ತಾನದ ಮಹಿಳೆ, ಎರಡು ಮಕ್ಕಳ ತಾಯಿ ಫೇಸ್‌ಬುಕ್‌ನಲ್ಲಿ ಪರಿಚಯವಾದ ತನ್ನ ಪ್ರಿಯತಮನ್ನು ಹುಡುಕಿಕೊಂಡು ರಾಜಸ್ಥಾನಕ್ಕೆ ಆಗಮಿಸಿದ್ದಾರೆ (Indo-Pak Romance). ಸದ್ಯ ಈ ವಿಚಾರ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದೆ (Viral News).

ಆನ್‌ಲೈನ್‌ ಪಬ್‌ ಜಿ ಗೇಮ್‌ ಆಡುವಾಗ ಪರಿಚಯವಾದ ಗ್ರೇಟರ್‌ ನೊಯ್ಡಾದ ಸಚಿನ್‌ ಮೀನಾ ಎಂಬ ಯುವಕನಿಗಾಗಿ ಪಾಕಿಸ್ತಾನದಿಂದ ಭಾರತಕ್ಕೆ ಬಂದ ಸೀಮಾ ಹೈದರ್‌ ವರ್ಷಗಳ ಹಿಂದೆ ಸಂಚಲನ ಮೂಡಿಸಿದ್ದರು. ಇದು ಕೂಡ ಅದನ್ನೇ ಹೋಲುವ ಘಟನೆ. ಇದೀಗ ಭಾರತಕ್ಕೆ ಬಂದ ಮಹಿಳೆಯ ಹೆಸರು 25 ವರ್ಷದ ಮೆಹ್ವಿಶ್. ಮೆಹ್ವಿಶ್ ಗಡಿಯನ್ನು ದಾಟಿ, ಫೇಸ್‌ಬುಕ್‌ನಲ್ಲಿ ಪರಿಚಯವಾದ ತನ್ನ ವಿವಾಹಿತ ಪ್ರೇಮಿ ರೆಹಮಾನ್‌ನೊಂದಿಗೆ ಬಾಳಲು ರಾಜಸ್ಥಾನದ ಬಿಕಾನೇರ್ ಜಿಲ್ಲೆಗೆ ಬಂದಿರುವುದು ಮತ್ತೊಮ್ಮೆ ಸದ್ದು ಮಾಡುತ್ತಿದೆ.

ಲಾಹೋರ್‌ ಮೂಲದ ಮೆಹ್ವಿಶ್ ಮಾಧ್ಯಮಗಳೊಂದಿಗೆ ತಮ್ಮ ಲವ್‌ಸ್ಟೋರಿಯನ್ನು ಬಿಚ್ಚಿಟ್ಟಿದ್ದಾರೆ. ಮೆಹ್ವಿಶ್‌ಗೆ 2 ವರ್ಷ ತುಂಬುವಷ್ಟರಲ್ಲಿ ತಾಯಿ ನಿಧನ ಹೊಂದಿದ್ದರು. 10ನೇ ವರ್ಷದಲ್ಲಿ ಅವರು ತಂದೆಯನ್ನು ಕಳೆದುಕೊಂಡರು. ಬಳಿಕ ಅವರು ಇಸ್ಲಾಮಾಬಾದ್‌ಗೆ ತೆರಳಿ ಸಹೋದರಿ ಶಹಿಮಾ ಅವರೊಂದಿಗೆ ವಾಸಿಸತೊಡಗಿದರು. ಬ್ಯೂಟಿ ಪಾರ್ಲರ್‌ ಕೋರ್ಸ್‌ ಮಾಡಿರುವ ಅವರು ಕಳೆದ ಒಂದು ದಶಕದಿಂದ ಸ್ವಂತ ಉದ್ಯಮ ನಡೆಸುತ್ತಿದ್ದಾರೆ.

ಇಬ್ಬರು ಮಕ್ಕಳು

ಅಚ್ಚರಿ ಎಂದರೆ ಮೆಹ್ವಿಶ್‌ ವಿವಾಹಿತೆ. ಬಾದಮಿ ಬಾಘ್‌ ಎನ್ನುವವರನ್ನು ಅವರು ಕೆಲವು ವರ್ಷಗಳ ಹಿಂದೆ ವರಿಸಿದ್ದರು. ಈ ದಂಪತಿಗೆ 12 ಮತ್ತು 7 ವರ್ಷದ ಇಬ್ಬರು ಮಕ್ಕಳಿದ್ದಾರೆ. 2018ರಲ್ಲಿ ಈ ದಂಪತಿ ವಿಚ್ಚೇಧನ ಪಡೆದುಕೊಂಡಿದ್ದು, ಬಾದಮಿ ಬಾಘ್‌ ಮರುಮದುವೆಯಾಗಿದ್ದಾರೆ. ಬಳಿಕ ಮೆಹ್ವಿಶ್‌ಗೆ ಫೇಸ್‌ಬುಕ್‌ನಲ್ಲಿ ರೆಹಮಾನ್‌ ಪರಿಚಯವಾಗಿತ್ತು. 2022ರಂದು ಮೆಹ್ವಿಶ್‌ ತನ್ನ ಸಹೋದರಿಯೊಂದಿಗೆ ಚರ್ಚೆ ನಡೆಸಿ ಕುವೈತ್‌ನಲ್ಲಿ ಕೆಲಸ ಮಾಡುವ ರೆಹಮಾನ್‌ ಬಳಿ ಮದುವೆಯ ಪ್ರಸ್ತಾವ ಇಟ್ಟಿದ್ದರು. 2022ರ ಮಾರ್ಚ್‌ 16ರಂದು ಇಬ್ಬರು ವಿಡಿಯೊ ಕಾನ್ಫರೆನ್ಸ್‌ ಮೂಲಕ ವಿವಾಹಿತರಾಗಿದ್ದರು. ನಂತರ ಅವರು 2023ರಲ್ಲಿ ಉಮ್ರಾ ತೀರ್ಥಯಾತ್ರೆಯ ಸಮಯದಲ್ಲಿ ಮೆಕ್ಕಾದಲ್ಲಿ ಭೇಟಿಯಾಗಿ ತಮ್ಮ ಮದುವೆಯನ್ನು ಸಾಮಾಜಿಕ ಮಾಧ್ಯಮದಲ್ಲಿ ಘೋಷಿಸಿದ್ದರು.

ಸ್ವಾಗತ

ಮೆಹ್ವಿಶ್ ಜುಲೈ 25ರಂದು ತನ್ನ ಕುಟುಂಬದೊಂದಿಗೆ ಇಸ್ಲಾಮಾಬಾದ್‌ನಿಂದ ವಾಘಾ ಗಡಿಗೆ ಆಗಮಿಸಿದರು. ಪಾಕಿಸ್ತಾನ ಮತ್ತು ಭಾರತೀಯ ಅಧಿಕಾರಿಗಳು ದಾಖಲೆಗಳನ್ನು ಪರಿಶೀಲಿಸಿದ ನಂತರ 45 ದಿನಗಳ ಪ್ರವಾಸಿ ವೀಸಾದಲ್ಲಿ ಅವರು ಭಾರತ ಪ್ರವೇಶಿಸಿದ್ದರು. ರೆಹಮಾನ್ ಕುಟುಂಬವು ಆಕೆಯನ್ನು ಪಿಥಿಸರ್ ಗ್ರಾಮಕ್ಕೆ ಅದ್ದೂರಿಯಾಗಿ ಸ್ವಾಗತಿಸಿದೆ.

ಮೆಹ್ವಿಶ್ ಆಗಮನವು ಎಲ್ಲೆಡೆ ಸುದ್ದಿಯಾದ ಹಿನ್ನೆಲೆಯಲ್ಲಿ ಗುಪ್ತಚರ ಮತ್ತು ಭದ್ರತಾ ಸಂಸ್ಥೆಗಳ ಅಧಿಕಾರಿಗಳು ತನಿಖೆ ನಡೆಸುತ್ತಿವೆ. ಸ್ಥಳೀಯ ಪೊಲೀಸರು ಕೂಡ ಪ್ರಶ್ನಿಸಿದ್ದಾರೆ ಹಾಗೂ ಪಾಸ್‌ಪೋರ್ಟ್‌ ಮತ್ತು ವೀಸಾವನ್ನು ಪರಿಶೀಲಿಸಿದ್ದಾರೆ. ರೆಹಮಾನ್‌ 2011ರಲ್ಲಿ ಭದ್ರಾ ಮೂಲದ ಫರೀದಾ ಎಂಬಾಕೆಯನ್ನು ವಿವಾಹವಾಗಿದ್ದು, ಈತನಿಗೆ ಇಬ್ಬರು ಮಕ್ಕಳಿದ್ದಾರೆ. ಆದರೆ ದಂಪತಿ ನಡುವೆ ಮನಸ್ತಾಪ ಉಂಟಾಗಿದ್ದು, ಫರೀದಾ ತನ್ನ ಮಕ್ಕಳೊಂದಿಗೆ ಪೋಷಕರೊಂದಿಗೆ ವಾಸಿಸುತ್ತಿದ್ದಾರೆ. ಆದರೆ ಕಾನೂನು ಪ್ರಕಾರ ಇವರು ವಿಚ್ಛೇಧನ ಪಡೆದುಕೊಂಡಿಲ್ಲ. ಇದೀಗ ತನ್ನ ಗಂಡನ ಪ್ರಿಯತಮೆ ಪಾಕಿಸ್ತಾನದಿಂದ ಬಂದಿರುವುದನ್ನು ತಿಳಿದು ಫರೀದಾ ಆಕೆಯ ಬಗ್ಗೆ ಪೊಲೀಸ್ ಠಾಣೆಗೆ ತೆರಳಿ ದೂರು ದಾಖಲಿಸಿದ್ದಾರೆ. ಮೆಹ್ವಿಶ್ ಗೂಢಚಾರಿಯಾಗಿರಬಹುದು ಆರೋಪಿಸಿದ್ದಾರೆ. ಒಟ್ಟಿನಲ್ಲಿ ಈ ಘಟನೆ ಸಿನಿಮಾ ಕಥೆಯನ್ನು ಹೋಲುತ್ತದೆ ಎಂದಿದ್ದಾರೆ ನೆಟ್ಟಿಗರು.

ಇದನ್ನೂ ಓದಿ: Seema Haider: ಮತ್ತೆ ಸುದ್ದಿಯಾದ ಸೀಮಾ ಹೈದರ್‌; ಇದು ಗಡಿಯಾಚೆಗಿನ ಪ್ರೇಮ ಕಥೆಯೋ ಅಥವಾ ಪಾಕ್‌ ಗೂಢಚಾರಿಕೆಯೋ?

Continue Reading

ದೇಶ

Pervez Musharraf: ಭಾರತ ವಿರೋಧಿ ಪರ್ವೇಜ್‌ ಮುಷರ‍್ರಫ್‌ಗೆ ಕೇರಳ ಬ್ಯಾಂಕ್‌ ಗೌರವ; ಭುಗಿಲೆದ್ದ ವಿವಾದ

Pervez Musharraf: ಕಾರ್ಗಿಲ್‌ ಯುದ್ಧದ ವಿಜಯಕ್ಕೆ 25 ವರ್ಷ ತುಂಬಿದ ಹಿನ್ನೆಲೆಯಲ್ಲಿ ಬಾಂಕ್‌ ಆಫ್‌ ಇಂಡಿಯಾದ ಉದ್ಯೋಗಿಗಳ ಒಕ್ಕೂಟವು ಜುಲೈ 27ರಂದು ಆಲಪ್ಪುಳದಲ್ಲಿ ಕಾರ್ಯಕ್ರಮ ಆಯೋಜಿಸಿತ್ತು. ಇದೇ ವೇಳೆ, ರಾಜ್ಯ ಸಮಾವೇಶವೂ ನಡೆದಿದೆ. ಸಮಾವೇಶದಲ್ಲಿ ಹಲವು ಮಹನೀಯರಿಗೆ ಗೌರವ ಸಲ್ಲಿಸುವ ಪಟ್ಟಿಯಲ್ಲಿ ಪರ್ವೇಜ್‌ ಮುಷರ‍್ರಫ್‌ ಹೆಸರು ಕೂಡ ಸೇರಿದೆ. ಇದು ಈಗ ಭಾರಿ ವಿವಾದಕ್ಕೆ ಕಾರಣವಾಗಿದೆ.

VISTARANEWS.COM


on

Pervez Musharraf
Koo

ತಿರುವನಂತಪುರಂ: ಭಾರತ ವಿರೋಧಿಯಾಗಿದ್ದ, 1999ರಲ್ಲಿ ಕಾರ್ಗಿಲ್‌ ಯುದ್ಧಕ್ಕೆ ಕಾರಣನಾದ, ಜಮ್ಮು-ಕಾಶ್ಮೀರಕ್ಕೆ ಉಗ್ರರನ್ನು ಛೂ ಬಿಟ್ಟು ಅಶಾಂತಿಗೆ ಕಾರಣನಾದ ಪಾಕಿಸ್ತಾನದ (Pakistan) ಮಾಜಿ ಅಧ್ಯಕ್ಷ ಪರ್ವೇಜ್‌ ಮುಷರ‍್ರಫ್‌ಗೆ (Pervez Musharraf) ಕೇರಳದ ಬ್ಯಾಂಕ್‌ ಆಫ್‌ ಇಂಡಿಯಾ (BOI) ನೌಕರರ ಒಕ್ಕೂಟದಲ್ಲಿ ಗೌರವ ನಮನ ಸಲ್ಲಿಸಲು ತೀರ್ಮಾನಿಸಿದ್ದು ಈಗ ಭಾರಿ ವಿವಾದಕ್ಕೆ ಕಾರಣವಾಗಿದೆ. ಜುಲೈ 27ರಂದು ಕೇರಳದ ಆಲಪ್ಪಳದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪರ್ವೇಜ್‌ ಮುಷರ‍್ರಫ್‌ಗೆ ಗೌರವ ಸಲ್ಲಿಸಲು ಕಾರ್ಯಕ್ರಮಕ್ಕೂ ಮೊದಲೇ ತೀರ್ಮಾನಿಸಿತ್ತು ಎಂದು ತಿಳಿದುಬಂದಿದೆ.

ಕಾರ್ಗಿಲ್‌ ಯುದ್ಧದ ವಿಜಯಕ್ಕೆ 25 ವರ್ಷ ತುಂಬಿದ ಹಿನ್ನೆಲೆಯಲ್ಲಿ ಬಾಂಕ್‌ ಆಫ್‌ ಇಂಡಿಯಾದ ಉದ್ಯೋಗಿಗಳ ಒಕ್ಕೂಟವು ಜುಲೈ 27ರಂದು ಆಲಪ್ಪುಳದಲ್ಲಿ ಕಾರ್ಯಕ್ರಮ ಆಯೋಜಿಸಿತ್ತು. ಇದೇ ವೇಳೆ, ರಾಜ್ಯ ಸಮಾವೇಶವೂ ನಡೆದಿದೆ. ಸಮಾವೇಶದಲ್ಲಿ ಹಲವು ಮಹನೀಯರಿಗೆ ಗೌರವ ಸಲ್ಲಿಸುವ ಪಟ್ಟಿಯಲ್ಲಿ ಪರ್ವೇಜ್‌ ಮುಷರ‍್ರಫ್‌ ಹೆಸರು ಕೂಡ ಸೇರಿಸಿತ್ತು. ಇದರಿಂದಾಗಿ ಬ್ಯಾಂಕ್‌ ಆಫ್‌ ಇಂಡಿಯಾದ ವಿರುದ್ಧ ಭಾರಿ ಆಕ್ರೋಶ ವ್ಯಕ್ತವಾಗಿದೆ. ಬ್ಯಾಂಕ್‌ಗಳ ಎದುರು ಜನ ಪ್ರತಿಭಟನೆ ನಡೆಸಿದ್ದಾರೆ. ಇದಾದ ನಂತರ, ಒಕ್ಕೂಟವು ಗೌರವಕ್ಕೆ ಪಾತ್ರರಾಗುವವರ ಪಟ್ಟಿಯಿಂದ ಪರ್ವೇಜ್‌ ಮುಷರ‍್ರಫ್‌ ಹೆಸರು ತೆಗೆದಿದ್ದಾರೆ ಎಂದು ತಿಳಿದುಬಂದಿದೆ.

ಪಾಲಿ ಜಾರ್ಜ್‌ ನಗರದಲ್ಲಿ ಬ್ಯಾಂಕ್‌ ಆಫ್‌ ಇಂಡಿಯಾದ 23ನೇ ರಾಜ್ಯ ಸಮಾವೇಶ ನಡೆದಿದೆ. ಕಾಂಗ್ರೆಸ್‌ ಸಂಸದ ಕೆ.ಸಿ.ವೇಣುಗೋಪಾಲ್‌ ಅವರು ಸಮಾವೇಶವನ್ನು ಉದ್ಘಾಟಿಸಿದರು. ಇದೇ ವೇಳೆ, ಕಾರ್ಗಿಲ್‌ ಯುದ್ಧದ ವಿಜಯ, ಯೋಧರ ತ್ಯಾಗ, ಬಲಿದಾನವನ್ನು ಸ್ಮರಿಸಲಾಯಿತು. ಅಲ್ಲದೆ, ನಟರು, ಗಾಯಕರು, ನೃತ್ಯಪಟುಗಳು, ಕ್ರೀಡಾಪಟುಗಳು, ಹೋರಾಟಗಾರರು ಸೇರಿ ಹಲವು ಸಾಧಕರನ್ನು ಸನ್ಮಾನಿಸಲಾಯಿತು.

ಪರ್ವೇಜ್‌ ಮುಷರ‍್ರಫ್‌ಗೆ ಗೌರವ ಸಲ್ಲಿಸಲು ಮುಂದಾಗಿದ್ದ ಬ್ಯಾಂಕ್‌ ಆಫ್‌ ಇಂಡಿಯಾದ ವಿರುದ್ಧ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಬ್ಯಾಂಕ್‌ ಎದುರು ಪ್ರತಿಭಟನೆ ನಡೆಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲೂ ಬ್ಯಾಂಕ್‌ ಆಫ್‌ ಇಂಡಿಯಾ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದು ದೇಶದ್ರೋಹದ ಕೃತ್ಯ ಎಂದೆಲ್ಲ ಜನ ಟೀಕಿಸಿದ್ದಾರೆ. ರಾಜ್ಯ ಬಿಜೆಪಿ ಘಟಕದ ನಾಯಕರು ಕೂಡ ಇದನ್ನು ಖಂಡಿಸಿದ್ದಾರೆ.

ಇದನ್ನೂ ಓದಿ: Narendra Modi: ಮೋದಿ ಎಚ್ಚರಿಕೆಗೆ ಪಾಕಿಸ್ತಾನ ಥಂಡಾ; ಗಡಿಯಲ್ಲಿ ಹೆಚ್ಚುವರಿ ಸೈನಿಕರ ನಿಯೋಜನೆ!

Continue Reading

ದೇಶ

Infiltration: ಭಾರತಕ್ಕೆ ನುಗ್ಗುವುದು ಹೇಗೆ ಎಂದು ವಿಡಿಯೊ ಮಾಡಿದ ಬಾಂಗ್ಲಾ ವ್ಯಕ್ತಿ; ದೀದಿ ಆಹ್ವಾನದ ಬೆನ್ನಲ್ಲೇ ವಿಡಿಯೊ ವೈರಲ್‌

Infiltration: “ಬಾಂಗ್ಲಾದೇಶದ ನಿರಾಶ್ರಿತರು ಪಶ್ಚಿಮ ಬಂಗಾಳಕ್ಕೆ ಬಂದರೆ ಆಶ್ರಯ ನೀಡುತ್ತೇವೆ” ಎಂಬುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಹೇಳಿಕೆ ನೀಡಿದ ಬೆನ್ನಲ್ಲೇ, ಬಾಂಗ್ಲಾದ ವ್ಲಾಗರ್‌ ಒಬ್ಬ, ಹೇಗೆ ಭಾರತಕ್ಕೆ ಅಕ್ರಮವಾಗಿ ಪ್ರವೇಶಿಸಬಹುದು ಎಂಬುದರ ವಿಡಿಯೊ ಪೋಸ್ಟ್‌ ಮಾಡಿದೆ. ಇದರಿಂದಾಗಿ, ಗಡಿಯಲ್ಲಿ ಈಗ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.

VISTARANEWS.COM


on

Infiltration
Koo

ಢಾಕಾ: ಬಾಂಗ್ಲಾದೇಶದಲ್ಲಿ (Bangladesh) ಅರಾಜಕತೆ, ನಾಗರಿಕ ದಂಗೆ ಭುಗಿಲೆದ್ದಿದೆ. ವಿವಾದಿತ ಮೀಸಲಾತಿ ವಿರುದ್ಧ ಜನ ಹಿಂಸಾಚಾರದಲ್ಲಿ ತೊಡಗಿದ್ದು, 200ಕ್ಕೂ ಅಧಿಕ ಮಂದಿ ಮೃತಪಟ್ಟು, ಸಾವಿರಾರು ಜನ ಗಾಯಗೊಂಡಿದ್ದಾರೆ. ಇದರ ಬೆನ್ನಲ್ಲೇ, ಬಾಂಗ್ಲಾದೇಶದ ವ್ಲಾಗರ್‌ (Vlogger) ಒಬ್ಬ, ಭಾರತಕ್ಕೆ ಹೇಗೆ ಅಕ್ರಮವಾಗಿ ನುಗ್ಗಬಹುದು (Infiltration) ಎಂಬುದನ್ನು ತೋರಿಸುವ ವಿಡಯೊವನ್ನು ಹರಿಬಿಟ್ಟಿದ್ದಾನೆ. ಈ ವಿಡಿಯೊ ಈಗ ಭಾರಿ ವೈರಲ್‌ ಆಗಿದೆ. ಅದರಲ್ಲೂ, “ಬಾಂಗ್ಲಾದೇಶದ ನಿರಾಶ್ರಿತರು ಪಶ್ಚಿಮ ಬಂಗಾಳಕ್ಕೆ ಬಂದರೆ ಆಶ್ರಯ ನೀಡುತ್ತೇವೆ” ಎಂಬುದಾಗಿ ಮಮತಾ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ (Mamata Banerjee) ಅವರು ಹೇಳಿಕೆ ನೀಡಿದ ಬೆನ್ನಲ್ಲೇ ವಿಡಿಯೊ ಹರಿದಾಡುತ್ತಿರುವುದು ಭಾರಿ ಚರ್ಚೆಗೆ ಕಾರಣವಾಗಿದೆ.

ಬಾಂಗ್ಲಾದೇಶದ ಗಡಿಗೆ ತೆರಳಿದ ವ್ಲಾಗರ್‌ ಒಬ್ಬನು, ಅಕ್ರಮವಾಗಿ ಹೇಗೆ ಭಾರತವನ್ನು ಪ್ರವೇಶಿಸಬಹುದು, ನುಸುಳಬಹುದು ಎಂಬುದನ್ನು ವಿಡಿಯೊ ಸಮೇತ ಪೋಸ್ಟ್‌ ಮಾಡಿದ್ದಾನೆ. ಕಾಲುವೆಯ ಪುಟ್ಟದಾದ ಪೈಪ್‌ಗಳ ಮೂಲಕ ಬಾಂಗ್ಲಾದೇಶದ ಗಡಿಯಿಂದ ಭಾರತದ ಗಡಿಯೊಳಗೆ ನುಗ್ಗಬಹುದು, ಆ ಮೂಲಕ ಸುಲಭವಾಗಿ ಭಾರತದಲ್ಲಿ ಅಕ್ರಮವಾಗಿ ನೆಲೆಸಬಹುದು ಎಂಬುದನ್ನು ಕೆಲ ಸ್ನೇಹಿತರೊಂದಿಗೆ ಆತ ಪ್ರಾತ್ಯಕ್ಷಿಕೆ ತೋರಿಸಿದ್ದಾನೆ. ಇದು ಈಗ ಗಡಿಯಲ್ಲಿ ಭಾರಿ ಆತಂಕ ಸೃಷ್ಟಿಸಿದೆ. ಆದಾಗ್ಯೂ, ಭಾರತ-ಬಾಂಗ್ಲಾ ಗಡಿಯಲ್ಲಿ ಸೈನಿಕರು ಕಟ್ಟೆಚ್ಚರ ವಹಿಸಿದ್ದಾರೆ ಎಂದು ತಿಳಿದುಬಂದಿದೆ.

ಬಾಂಗ್ಲಾದಲ್ಲಿ ನಿಲ್ಲದ ಗಲಭೆ

ಸರ್ಕಾರಿ ಉದ್ಯೋಗಗಳಲ್ಲಿನ ಮೀಸಲಾತಿ ವ್ಯವಸ್ಥೆಯಲ್ಲಿ ಸುಧಾರಣೆಗೆ ಒತ್ತಾಯಿಸಿ ಬಾಂಗ್ಲಾದೇಶ ದಲ್ಲಿ ಹಲವು ದಿನಗಳಿಂದ ನಡೆಯುತ್ತಿರುವ ಪ್ರತಿಭಟನೆ ಹಿಂಸಾಸ್ವರೂಪ ಪಡೆದಿರುವ ಮಧ್ಯೆಯೇ ಅಲ್ಲಿನ ಸರ್ವೋಚ್ಚ ನ್ಯಾಯಾಲಯ ಮಹತ್ವದ ತೀರ್ಪು ನೀಡಿದೆ. ಕೋಲಾಹಲಕ್ಕೆ ಕಾರಣವಾದ ಬಾಂಗ್ಲಾ ವಿಮೋಚನೆ ಹೋರಾಟದಲ್ಲಿ ಭಾಗಿಯಾಗಿದ್ದವರ ಕುಟುಂಬದವರಿಗೆ ಸರ್ಕಾರಿ ಉದ್ಯೋಗದಲ್ಲಿ ಶೇ. 30ರಷ್ಟು ಮೀಸಲಾತಿ ನೀಡುವ ನಿಯಮವನ್ನು ಕೋರ್ಟ್‌ ಹಿಂತೆಗೆದುಕೊಂಡಿದೆ. ಆದರೆ ಸಂಪೂರ್ಣ ರದ್ದುಗೊಳಿಸಲಿಲ್ಲ. ಶೇ. 30ರಷ್ಟಿದ್ದ ಮೀಸಲಾತಿಯನ್ನು ಶೇ. 5ಕ್ಕೆ ಇಳಿಸಲಾಗಿದೆ. ಹಾಗಾಗಿ, ಬಾಂಗ್ಲಾದೇಶದಲ್ಲಿ ಗಲಭೆ ನಿಂತಿಲ್ಲ. ಇದರಿಂದಾಗಿ ಭಾರತದ ಗಡಿಯಲ್ಲೂ ಆತಂಕದ ವಾತಾವರಣ ನಿರ್ಮಾಣವಾದಂತಾಗಿದೆ.

ಮಮತಾ ಬ್ಯಾನರ್ಜಿ ಹೇಳಿದ್ದೇನು?

ಜುಲೈ 21ರಂದು ಪಶ್ಚಿಮ ಬಂಗಾಳದಲ್ಲಿ ತೃಣಮೂಲ ಕಾಂಗ್ರೆಸ್‌ ನಡೆಸಿದ ಮೆಗಾ ರ‍್ಯಾಲಿಯಲ್ಲಿ ಮಾತನಾಡಿದ್ದ ಮಮತಾ ಬ್ಯಾನರ್ಜಿ, “ಹಿಂಸಾಚಾರ ಪೀಡಿತ ಬಾಂಗ್ಲಾದೇಶದ ಜನರು ನಮ್ಮ ಬಾಗಿಲನ್ನು ತಟ್ಟಿದರೆ ಸರ್ಕಾರ ಅವರಿಗೆ ಆಶ್ರಯ ನೀಡುತ್ತದೆ” ಎಂದಿದ್ದರು. ಪಶ್ಚಿಮ ಬಂಗಾಳದಲ್ಲಿ ಈಗಾಗಲೇ ಬಾಂಗ್ಲಾದೇಶದ ಅಕ್ರಮ ವಲಸೆಗಾರರಿಗೆ ಮಮತಾ ಬ್ಯಾನರ್ಜಿ ಆಶ್ರಯ ನೀಡಿದ್ದಾರೆ ಎಂಬ ಆರೋಪಗಳು ಕೇಳಿಬರುತ್ತಿರುವ ಹೊತ್ತಿನಲ್ಲೇ ಅವರು ಬಾಂಗ್ಲಾ ವಲಸಿಗರಿಗೆ ಆಶ್ರಯ ನೀಡುತ್ತೇನೆ ಎಂಬುದಾಗಿ ನೀಡಿದ ಹೇಳಿಕೆ ವಿರುದ್ಧ ಭಾರಿ ಟೀಕೆಗಳು ವ್ಯಕ್ತವಾಗಿದ್ದವು.

ಇದನ್ನೂ ಓದಿ: Mamata Banerjee: ಮಾತನಾಡಲು 5 ನಿಮಿಷ ಮಾತ್ರ ಅವಕಾಶ ನೀಡಿದರು: ನೀತಿ ಆಯೋಗದ ಸಭೆಯಿಂದ ಹೊರ ಬಂದ ಮಮತಾ ಬ್ಯಾನರ್ಜಿ ಕಿಡಿ

Continue Reading

ದೇಶ

ಪಾಕ್‌ಗೆ ಮೋದಿ ಎಚ್ಚರಿಕೆ ಬೆನ್ನಲ್ಲೇ ಗಡಿಯಲ್ಲಿ 2 ಸಾವಿರ ಹೆಚ್ಚುವರಿ ಸೈನಿಕರ ನಿಯೋಜಿಸಿದ ಕೇಂದ್ರ; ಏನಿದರ ಮರ್ಮ?

ಜಮ್ಮು-ಕಾಶ್ಮೀರದ ಗಡಿಯಲ್ಲಿ ಹೆಚ್ಚುವರಿಯಾಗಿ 2 ಸಾವಿರ ಗಡಿ ಭದ್ರತಾ ಪಡೆಯ (BSF) ಸಿಬ್ಬಂದಿಯನ್ನು ನಿಯೋಜಿಸಲು ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ. ಪಾಕಿಸ್ತಾನಕ್ಕೆ ಮೋದಿ ಎಚ್ಚರಿಕೆಯ ಬೆನ್ನಲ್ಲೇ ಕೇಂದ್ರ ಸರ್ಕಾರ ಇಂತಹದ್ದೊಂದು ಕ್ರಮ ತೆಗೆದುಕೊಂಡಿದೆ.

VISTARANEWS.COM


on

Indian Army
Koo

ನವದೆಹಲಿ: ಭಯೋತ್ಪಾದನೆಯನ್ನು ನಿಗ್ರಹಿಸುವ ಬದಲು, ಉಗ್ರರಿಗೆ ಆಶ್ರಯ ನಡುತ್ತಿರುವ ಪಾಕಿಸ್ತಾನಕ್ಕೆ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಕಾರ್ಗಿಲ್‌ ವಿಜಯ ದಿವಸದಂದೇ (Kargil Vijay Diwas 2024) (ಜುಲೈ 26) ಎಚ್ಚರಿಕೆ ನೀಡಿದ್ದಾರೆ. ಇನ್ನು, ಜಮ್ಮು-ಕಾಶ್ಮೀರ ಗಡಿಯಲ್ಲಿ ಇತ್ತೀಚೆಗೆ ಉಗ್ರರ ದಾಳಿ ಜಾಸ್ತಿಯಾಗಿದ್ದು, ಸೈನಿಕರು, ವಲಸಿಗರನ್ನು ಗುರಿಯಾಗಿಸಿ ದಾಳಿ ನಡೆಸುತ್ತಿದ್ದಾರೆ. ಇದರ ಬೆನ್ನಲ್ಲೇ, ಜಮ್ಮು-ಕಾಶ್ಮೀರ (Jammu Kashmir Border) ಗಡಿಯಲ್ಲಿ ಹೆಚ್ಚುವರಿಯಾಗಿ 2 ಸಾವಿರ ಸೈನಿಕರನ್ನು ನಿಯೋಜಿಸಲು ಕೇಂದ್ರ ಸರ್ಕಾರ (Central Government) ಆದೇಶ ನೀಡಿದೆ ಎಂದು ತಿಳಿದುಬಂದಿದೆ.

ಜಮ್ಮು-ಕಾಶ್ಮೀರದ ಗಡಿಯಲ್ಲಿ ಹೆಚ್ಚುವರಿಯಾಗಿ 2 ಸಾವಿರ ಗಡಿ ಭದ್ರತಾ ಪಡೆಯ (BSF) ಸಿಬ್ಬಂದಿಯನ್ನು ನಿಯೋಜಿಸಲು ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ. ಇತ್ತೀಚೆಗೆ, ಗಡಿಯಲ್ಲಿ ಉಗ್ರರ ಉಪಟಳ, ಒಳನುಸುಳುವಿಕೆ, ದಾಳಿ, ಶಸ್ತ್ರಾಸ್ತ್ರ ಸಾಗಣೆ ಸೇರಿ ಹಲವು ಕೃತ್ಯಗಳು ಹೆಚ್ಚಾಗಿರುವ ಕಾರಣ ಹೆಚ್ಚಿನ ಭದ್ರತೆಗಾಗಿ ಬಿಎಸ್‌ಎಫ್‌ ಯೋಧರನ್ನು ನಿಯೋಜಿಸಲು ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ ಎಂಬುದಾಗಿ ಮೂಲಗಳು ತಿಳಿಸಿವೆ.

ಪಾಕ್‌ನಿಂದಲೂ ಹೆಚ್ಚುವರಿ ಸೈನಿಕರ ನಿಯೋಜನೆ

ಮೋದಿ ಎಚ್ಚರಿಕೆ ಬೆನ್ನಲ್ಲೇ ಪಾಕಿಸ್ತಾನವು ಗಡಿಯಲ್ಲಿ ಎರಡು ಹೆಚ್ಚುವರಿ ಬ್ರಿಗೇಡ್‌ಗಳು, 3 ಪಿಒಕೆ ಬ್ರಿಗೇಡ್‌ ಹಾಗೂ 2 ಹೆಚ್ಚುವರಿ ಪಿಒಕೆ ಬ್ರಿಗೇಡ್‌ಗಳನ್ನು ಹೆಚ್ಚುವರಿಯಾಗಿ ನಿಯೋಜಿಸಿದೆ ಎಂದು ತಿಳಿದುಬಂದಿದೆ. ಇತ್ತೀಚೆಗೆ ಪಾಕಿಸ್ತಾನ ಸೈನಿಕರು ಭಾರತದೊಳಗೆ ಉಗ್ರರನ್ನು ನುಸುಳಿಸಲು ಮಾರ್ಗದರ್ಶನ, ನೆರವು ನೀಡುತ್ತಿದೆ ಎಂಬ ಚಿತ್ರಗಳು ಲಭ್ಯವಾದ ಬೆನ್ನಲ್ಲೇ ಮೋದಿ ಎಚ್ಚರಿಕೆ ನೀಡಿದ್ದರು. ಇದಾದ ಕೆಲ ಹೊತ್ತಿನಲ್ಲೇ ಪಾಕಿಸ್ತಾನ ಸೈನಿಕರು ಗಡಿಯಲ್ಲಿ ನಿಯೋಜನೆಗೊಂಡಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ.

ಮೋದಿ ಎಚ್ಚರಿಕೆ ಏನಾಗಿತ್ತು?

ಕಾರ್ಗಿಲ್‌ ವಿಜಯ ದಿವಸ(Kargil Vijay Diwas 2024)ಕ್ಕೆ ಜುಲೈ 26ಕ್ಕೆ 25ವರ್ಷ ಸಂದಿದೆ. ಈ ಹಿನ್ನೆಲೆ ಪ್ರಧಾನಿ ನರೇಂದ್ರ ಮೋದಿ ಡ್ರಾಸ್‌ನಲ್ಲಿರುವ ಕಾರ್ಗಿಲ್‌ ಯುದ್ಧ ಸ್ಮಾರಕಕ್ಕೆ ಭೇಟಿ ಕೊಟ್ಟು ಹುತಾತ್ಮ ಯೋಧರಿಗೆ ಗೌರವ ನಮನ ಸಲ್ಲಿಸಿದರು. ಇದೇ ವೇಳೆ ಮಾತನಾಡಿದ ಅವರು, ಕಳೆದ ಯುದ್ಧಗಳಲ್ಲಿ ಸೋಲುಂಡಿದ್ದರೂ ಬುದ್ಧಿ ಕಲಿಯದ ಪಾಕಿಸ್ತಾನ ಭಯೋತ್ಪಾದನೆಗೆ ಉತ್ತೇಜನ ನೀಡುತ್ತಿದೆ. ಇದುವರೆಗೆ ಪಾಕಿಸ್ತಾನ ತನ್ನ ತಪ್ಪಿನ ಪಾಠ ಕಲಿತಿಲ್ಲ ಎಂದು ಗುಡುಗಿದ್ದರು.

ಭಯೋತ್ಪಾದನೆ ಮೂಲಕ ಭಾರತವನ್ನು ಗೆಲ್ಲುವ ಪಾಕಿಸ್ತಾನದ ಉದ್ದೇಶ ಎಂದಿಗೂ ಯಶಸ್ವಿ ಆಗುವುದಿಲ್ಲ ಎಂದು ಖಡಕ್‌ ವಾರ್ನಿಂಗ್‌ ಕೊಟ್ಟಿದ್ದಾರೆ. ಇನ್ನು ಇದೇ ವೇಳ ಅಗ್ನಿಪಥ್‌ ಯೋಜನೆ ಬಗ್ಗೆ ಪ್ರತಿಕ್ರಿಯಿಸಿದ್ದು, ಸೇನೆಯ ಈ ಸುಧಾರಣೆಯಲ್ಲೂ ಕೆಲವರು ತಮ್ಮ ವೈಯಕ್ತಿಕ ಲಾಭಕ್ಕಾಗಿ ಸುಳ್ಳಿನ ರಾಜಕಾರಣ ಮಾಡುತ್ತಿದ್ದಾರೆ ಎಂದು ಅವರು ವಿರೋಧ ಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸಿದ್ದರು.

ಭಾರತದ ವಿರುದ್ಧ ಪಾಕಿಸ್ತಾನವು ಇದುವರೆಗೆ ನಾಲ್ಕು ಯುದ್ಧಗಳಲ್ಲಿ ಹೀನಾಯವಾಗಿ ಸೋಲನುಭವಿಸಿದೆ. ಅದರಲ್ಲೂ, ನರೇಂದ್ರ ಮೋದಿ ಅವರು ಪ್ರಧಾನಿಯಾದ ಬಳಿಕ ಉರಿ ದಾಳಿಗೆ ಪ್ರತಿಯಾಗಿ ಸರ್ಜಿಕಲ್‌ ಸ್ಟ್ರೈಕ್‌, ಪುಲ್ವಾಮಾ ಉಗ್ರರ ದಾಳಿಗೆ ಪ್ರತಿಯಾಗಿ ಬಾಲಾಕೋಟ್‌ ದಾಳಿ ನಡೆಸಿದೆ. ಹಾಗೆಯೇ, ಪಾಕಿಸ್ತಾನವು ಉಗ್ರ ಪೋಷಣೆಯ ರಾಷ್ಟ್ರವಾಗಿದೆ ಎಂಬುದಾಗಿ ಜಾಗತಿಕ ವೇದಿಕೆಯಲ್ಲಿ ಭಾರತವು ಪ್ರತಿಪಾದಿಸಿದೆ.

ಇದನ್ನೂ ಓದಿ: Kargil Vijay Diwas 2024: ಕಾರ್ಗಿಲ್‌ ಯುದ್ಧಭೂಮಿಗೆ ಅಂದೇ ಕಾಲಿಟ್ಟಿದ್ರು ಮೋದಿ- ಹಳೆಯ ಫೊಟೋ ವೈರಲ್‌

Continue Reading
Advertisement
karnataka weather Forecast
ಮಳೆ6 mins ago

Karnataka Weather : ಕೂಲ್‌ ಆದ ಬೆಂಗಳೂರು; ನಾಳೆಗೆ ಉತ್ತರ ಕನ್ನಡ ಜಿಲ್ಲೆಗೆ ಭಾರಿ ಮಳೆ ಎಚ್ಚರ

HD Kumaraswamy
ಪ್ರಮುಖ ಸುದ್ದಿ12 mins ago

HD Kumaraswamy: ಸುದ್ದಿಗೋಷ್ಠಿ ನಡೆಸುವಾಗಲೇ ಎಚ್‌.ಡಿ. ಕುಮಾರಸ್ವಾಮಿ ಮೂಗಿನಿಂದ ರಕ್ತಸ್ರಾವ!

Tungabhadra Dam
ಕೊಪ್ಪಳ43 mins ago

Tungabhadra Dam: ಕಾಲುವೆಯಲ್ಲಿ ಬಾಲಕರ ಈಜಾಟ; ಅಧಿಕಾರಿಗಳಿಗೆ ಪೀಕಲಾಟ!

Decline of Vultures
ಆರೋಗ್ಯ58 mins ago

Indian Vultures : ಹದ್ದುಗಳೇ ಜೀವರಕ್ಷಕ; ಭಾರತದಲ್ಲಿ ರಣಹದ್ದುಗಳ ಸಂಖ್ಯೆ ಕುಸಿತದಿಂದ 5 ಲಕ್ಷ ಮಂದಿ ಸಾವು ಎಂದಿದೆ ಅಧ್ಯಯನ ವರದಿ

KRS Dam
ಕರ್ನಾಟಕ1 hour ago

KRS Dam: ಕೆಆರ್‌ಎಸ್, ಕಬಿನಿ ಜಲಾಶಯ ಭರ್ತಿ ಹಿನ್ನೆಲೆ ನಾಳೆ ಸಿಎಂ ಬಾಗಿನ ಅರ್ಪಣೆ

Sugar Vs Jaggery In Tea
ಆರೋಗ್ಯ1 hour ago

Sugar Vs Jaggery In Tea: ಸಕ್ಕರೆ ಬದಲು ಬೆಲ್ಲ ಹಾಕಿ ಚಹಾ ಕುಡಿದರೆ ಆರೋಗ್ಯಕ್ಕೆ ನಿಜಕ್ಕೂ ಲಾಭ ಇದೆಯೆ?

Manu Bhaker
ಪ್ರಮುಖ ಸುದ್ದಿ2 hours ago

Manu Bhaker : ಪ್ಯಾರಿಸ್ ಒಲಿಂಪಿಕ್ಸ್ ನಲ್ಲಿ ಐತಿಹಾಸಿಕ ಪದಕ ಗೆದ್ದ ಮನು ಭಾಕರ್ ಗೆ ಪ್ರಧಾನಿ ಮೋದಿ ಅಭಿನಂದನೆ

theft case
ಚಿತ್ರದುರ್ಗ2 hours ago

Theft Case : ಹಂದಿ ಕಳವು ವೇಳೆ ಪೊಲೀಸರಿಗೆ ಕಲ್ಲು ತೂರಿ ಎಸ್ಕೇಪ್‌ ಆಗಿದ್ದ ಆಂಧ್ರ ಗ್ಯಾಂಗ್‌ನ ಸದಸ್ಯ ಅರೆಸ್ಟ್‌

Paris Olympics boxing
ಕ್ರೀಡೆ2 hours ago

Paris Olympics Boxing: 16ರ ಸುತ್ತಿಗೇರಿದ​ ಬಾಕ್ಸರ್​​ ನಿಖತ್ ಜರೀನ್; ಮುಂದಿನ ಪಂದ್ಯದಲ್ಲಿ ಕಠಿಣ ಸವಾಲು

Unveiling of IPT 12 Cricket Trophy, Jersey by N1 Cricket Academy
ಕ್ರಿಕೆಟ್2 hours ago

IPT 12: ಎನ್ 1 ಕ್ರಿಕೆಟ್ ಅಕಾಡೆಮಿಯ ವತಿಯಿಂದ ʻIPT 12ʼ ಕ್ರಿಕೆಟ್ ಟ್ರೋಫಿ, ಜೆರ್ಸಿ ಅನಾವರಣ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Tungabhadra Dam
ಕೊಪ್ಪಳ43 mins ago

Tungabhadra Dam: ಕಾಲುವೆಯಲ್ಲಿ ಬಾಲಕರ ಈಜಾಟ; ಅಧಿಕಾರಿಗಳಿಗೆ ಪೀಕಲಾಟ!

Elephant attack
ಮಳೆ3 hours ago

Elephant attack : ಮಳೆ ಮಧ್ಯೆ ಮಲೆನಾಡಿನಲ್ಲಿ ಕಾಡಾನೆಗಳ ಕಾಟ; ಪ್ರವಾಹಕ್ಕೆ ಸಿಲುಕಿದ ಪಟಗುಂದಿ ಗ್ರಾಮ

karnataka Rain
ಮಳೆ5 hours ago

Karnataka Rain : ಮಳೆ ನಿಂತರೂ ಕಡಿಮೆಯಾಗದ ಅನಾಹುತ; ಮಾದಪುರ ಟೌನ್ ಸಮೀಪ ಗುಡ್ಡ ಕುಸಿತ

karnataka Rain
ಮಳೆ6 hours ago

Karnataka Rain : ರಭಸವಾಗಿ ಬೀಸಿದ ಗಾಳಿಗೆ ಮನೆ ಮೇಲೆ ಬಿದ್ದ ತೆಂಗಿನ ಮರ; ನದಿ ನೀರು ಸೇವಿಸದಂತೆ ಸೂಚನೆ

Karnataka weather Forecast
ಮಳೆ1 day ago

Karnataka Weather : ವೀಕೆಂಡ್‌ ಮೋಜಿಗೆ ಮಳೆರಾಯ ಅಡ್ಡಿ; ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ

ramanagara news
ರಾಮನಗರ1 day ago

Ramanagar News : ರಾಮನಗರದಲ್ಲಿ ಎರಡು ಜಡೆ ಹಾಕಿಲ್ಲವೆಂದು ವಿದ್ಯಾರ್ಥಿನಿಯರ ಕೂದಲು ಕತ್ತರಿಸಿದ ಶಿಕ್ಷಕರು ಅಮಾನತು

karnataka rain
ಮಳೆ1 day ago

Karnataka Rain : ಕಾವೇರಿ ನದಿ ತೀರದಲ್ಲಿ ಪ್ರವಾಹ ಭೀತಿ; ಮುತ್ತತ್ತಿಗೆ ಪ್ರವಾಸಿಗರ ನಿಷೇಧ, ಶ್ರೀರಂಗಪಟ್ಟಣದಲ್ಲಿ ಪಿಂಡ ಪ್ರದಾನಕ್ಕೆ ಬ್ರೇಕ್

Ankola landslide
ಉತ್ತರ ಕನ್ನಡ2 days ago

Ankola landslide: ಅಂಕೋಲಾ-ಶಿರೂರು ಗುಡ್ಡ ಕುಸಿತ; ನಾಳೆಯಿಂದ ಪ್ಲೋಟಿಂಗ್ ಪ್ಲಾಟ್‌ಫಾರಂ ಕಾರ್ಯಾಚರಣೆ

karnataka rain
ಮಳೆ2 days ago

Karnataka Rain : ಉಕ್ಕಿ ಹರಿಯುವ ನೇತ್ರಾವತಿ ನದಿಯಲ್ಲಿ ತೇಲಿ ಬಂದ ಜೀವಂತ ಹಸು

Karnataka Rain
ಮಳೆ2 days ago

Karnataka Rain: ವಿದ್ಯುತ್‌ ದುರಸ್ತಿಗಾಗಿ ಪ್ರಾಣದ ಹಂಗು ತೊರೆದು ಉಕ್ಕಿ ಹರಿಯುವ ನೀರಿಗೆ ಧುಮುಕಿದ ಲೈನ್‌ ಮ್ಯಾನ್‌!

ಟ್ರೆಂಡಿಂಗ್‌