CH Vijayashankar: ಬಯಸದೇ ಬಂದ ಭಾಗ್ಯ: ಮೇಘಾಲಯ ನೂತನ ರಾಜ್ಯಪಾಲ ಸಿಎಚ್‌ ವಿಜಯಶಂಕರ್ - Vistara News

ಪ್ರಮುಖ ಸುದ್ದಿ

CH Vijayashankar: ಬಯಸದೇ ಬಂದ ಭಾಗ್ಯ: ಮೇಘಾಲಯ ನೂತನ ರಾಜ್ಯಪಾಲ ಸಿಎಚ್‌ ವಿಜಯಶಂಕರ್

ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರು ಸ್ವತಃ ಕರೆ ಮಾಡಿ ಶುಭ ಕೋರಿದ್ದಾರೆ. ಕೆಲವೇ ನಿಮಿಷಗಳ ಹಿಂದೆ ಅಧಿಕೃತ ನೇಮಕಾತಿ ಪತ್ರವೂ ದೊರಕಿದೆ. ನಮ್ಮಲ್ಲಿ ಪ್ರಾಮಾಣಿಕತೆ ಇದ್ದರೆ ಯಾವುದೂ ಸವಾಲು ಅಲ್ಲ. ನಾನು ಮೇಘಾಲಯಕ್ಕೆ ರಾಜ್ಯಪಾಲ ಆಗಿರಬಹುದು. ಆದರೆ ಹುಣಸೂರು, ಮೈಸೂರು ಈ ನೆಲದ ಋಣ ನನ್ನ ಮೇಲೆ ಇದೆ ಎಂದು ಸಿ.ಎಚ್.ವಿಜಯಶಂಕರ್ (CH Vijayashankar) ಹೇಳಿದ್ದಾರೆ.

VISTARANEWS.COM


on

CH Vijayashankar2
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮೈಸೂರು: ಇದು ನನಗೆ ಇದು ಬಯಸದೇ ಬಂದ ಭಾಗ್ಯ. ರಾಷ್ಟ್ರೀಯ ಸ್ವಯಂಸೇವಕ ಸಂಘ (Rashtriya Swayamsevak Sangh) ಮತ್ತು ಭಾರತೀಯ ಜನತಾ ಪಕ್ಷ (BJP) ನನ್ನನ್ನು ಗುರುತಿಸಿ ಅವಕಾಶ ನೀಡಿದೆ ಎಂದು ಮೇಘಾಲಯದ (Meghalaya) ನೂತನ ರಾಜ್ಯಪಾಲರಾಗಿ (Governor) ನೇಮಕವಾಗಿರುವ ಮೈಸೂರಿನ ಮಾಜಿ ಸಂಸದ (Mysore Ex MP) ಸಿಎಚ್ ವಿಜಯಶಂಕರ್ (CH Vijayashankar) ಹೇಳಿದ್ದಾರೆ.

ವಿಸ್ತಾರ ನ್ಯೂಸ್ ಜತೆ ಮಾತನಾಡಿದ ಸಿಎಚ್‌ವಿ, ರಾಜ್ಯಪಾಲರಾಗಿ ನೇಮಕವಾಗಿರುವ ಬಗ್ಗೆ ಪ್ರತಿಕ್ರಿಯೆ ನೀಡಿದರು. ನಾನು ಹುಣಸೂರು ಕ್ಷೇತ್ರದ ಶಾಸಕ, ಮೈಸೂರು ಲೋಕಸಭೆ ಕ್ಷೇತ್ರದ ಸಂಸದ ಆಗಿದ್ದವನು. 2014ರಲ್ಲಿ ಲೋಕಸಭೆ ಚುನಾವಣೆಗೆ ಪಕ್ಷದ ಟಿಕೆಟ್ ತಪ್ಪಿತು. ಹಾಸನಕ್ಕೆ ಹೋಗಿ ದೇವೇಗೌಡರ ಎದುರು ಸ್ಪರ್ಧಿಸಿ ಸೋತಿದ್ದೆ. ಅಲ್ಲಿಂದ ಸತತ ವನವಾಸ ಅನುಭವಿಸಿದ್ದೆ. ಈಗ ಅತ್ಯಂತ ದೊಡ್ಡ ಹುದ್ದೆ ದೊರಕಿದೆ ಎಂದು ಸಂಭ್ರಮ ವ್ಯಕ್ತಪಡಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರು ಸ್ವತಃ ಕರೆ ಮಾಡಿ ಶುಭ ಕೋರಿದ್ದಾರೆ. ಕೆಲವೇ ನಿಮಿಷಗಳ ಹಿಂದೆ ಅಧಿಕೃತ ನೇಮಕಾತಿ ಪತ್ರವೂ ದೊರಕಿದೆ. ನಮ್ಮಲ್ಲಿ ಪ್ರಾಮಾಣಿಕತೆ ಇದ್ದರೆ ಯಾವುದೂ ಸವಾಲು ಅಲ್ಲ. ನಾನು ಮೇಘಾಲಯಕ್ಕೆ ರಾಜ್ಯಪಾಲ ಆಗಿರಬಹುದು. ಆದರೆ ಹುಣಸೂರು, ಮೈಸೂರು ಈ ನೆಲದ ಋಣ ನನ್ನ ಮೇಲೆ ಇದೆ ಎಂದು ಸಿ.ಎಚ್.ವಿಜಯಶಂಕರ್ ಹೇಳಿದ್ದಾರೆ.

ನಿನ್ನೆ ನೇಮಕ

ಕೇಂದ್ರ ಸರ್ಕಾರದ ಶಿಫಾರಸ್ಸಿನಂತೆ ವಿಜಯಶಂಕರ್‌ ಅವರನ್ನು ಮೇಘಾಲಯದ ರಾಜ್ಯಪಾಲರಾಗಿ ನೇಮಕ ಮಾಡಿ ರಾಷ್ಟ್ರಪತಿ ದ್ರೌಪದಿ ಮುರ್ಮು (President Draupadi Murmu) ನಿನ್ನೆ ತಡರಾತ್ರಿ ಆದೇಶ ಹೊರಡಿಸಿದ್ದಾರೆ. 6 ಮಂದಿ ನೂತನ ರಾಜ್ಯಪಾಲರ ನೇಮಕ ಮಾಡಲಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರ ನಿಕಟವರ್ತಿಯಾಗಿರುವ ಗುಜರಾತ್‌ನ ಮಾಜಿ ಮುಖ್ಯ ಕಾರ್ಯದರ್ಶಿ ಕೆ. ಕೈಲಾಸನಾಥನ್ ಅವರನ್ನು ಪುದುಚೇರಿಯ ಲೆಫ್ಟಿನೆಂಟ್ ಗವರ್ನರ್ ಆಗಿ ನೇಮಿಸಲಾಗಿದೆ. ಹರಿಭಾವು ಬಾಗಡೆ ಅವರನ್ನು ರಾಜಸ್ಥಾನದ ರಾಜ್ಯಪಾಲರನ್ನಾಗಿ ನೇಮಿಸಲಾಗಿದ್ದು, ಸಂತೋಷ್‌ ಗಂಗ್ವಾರ್ ಅವರು ಜಾರ್ಖಂಡ್‌ಗೆ ಹಾಗೂ ಒ.ಪಿ ಮಾಥುರ್ ಅವರನ್ನು ಸಿಕ್ಕಿಂನ ರಾಜ್ಯಪಾಲರನ್ನಾಗಿ ನೇಮಿಸಲಾಗಿದೆ. ತ್ರಿಪುರಾ ಮಾಜಿ ಮುಖ್ಯಮಂತ್ರಿ ಜಿಷ್ಣು ದೇವ್ ವರ್ಮಾ ಅವರನ್ನು ತೆಲಂಗಾಣದ ರಾಜ್ಯಪಾಲರನ್ನಾಗಿ ನೇಮಿಸಲಾಗಿದ್ದು, ರಮೆನ್ ದೇಕಾ ಅವರು ಛತ್ತೀಸಗಢಕ್ಕೆ ರಾಜ್ಯಪಾಲರಾಗಿ ನೇಮಕಗೊಂಡಿದ್ದಾರೆ.

ವಿಜಯಶಂಕರ್‌ ರಾಜಕೀಯ ಏಳುಬೀಳು

ಹಾವೇರಿ ಜಿಲ್ಲೆಯ ರಾಣೆಬೆನ್ನೂರು ತಾಲ್ಲೂಕಿನ ಮಾಕನೂರಿನಲ್ಲಿ 1956ರ ಅಕ್ಟೋಬರ್‌ 21ರಂದು ಜನಿಸಿದ ವಿಜಯಶಂಕರ್‌, ಬದುಕು ಕಟ್ಟಿಕೊಂಡದ್ದು ಮೈಸೂರಿನಲ್ಲಿ. ಅವರ ಶಿಕ್ಷಣ ಆಗಿದ್ದು ಬ್ಯಾಡಗಿಯಲ್ಲಿ. ಬಿಎಸ್ಸಿ ಪದವೀಧರರರಾದ ವಿಜಯಶಂಕರ್‌, ಹುಣಸೂರಿನಲ್ಲಿದ್ದ ತಮ್ಮ ಸಹೋದರಿಯ ಮನೆಗೆ ಬಂದವರು ಇಲ್ಲಿ ಆ ಕುಟುಂಬದವರು ನಡೆಸುತ್ತಿದ್ದ ಸಿಮೆಂಟ್‌ ವ್ಯಾಪಾರದಲ್ಲಿ ತೊಡಗಿಸಿಕೊಂಡರು. ವೃತ್ತಿಯಲ್ಲಿ ಗುರುತಿಸಿಕೊಂಡ ವಿಜಯಶಂಕರ್‌ ನಂತರ ರಾಜಕೀಯ ಸೇರಿದರು.

90ರ ದಶಕದ ಆರಂಭದಲ್ಲಿ ಕಾಂಗ್ರೆಸ್‌ನೊಂದಿಗೆ ಗುರುತಿಸಿಕೊಂಡ ಅವರು ನಂತರ ಬಿಜೆಪಿಯನ್ನು ಸೇರಿಕೊಂಡರು. 1991ರಲ್ಲಿ ನಡೆದ ಹುಣಸೂರು ಕ್ಷೇತ್ರದ ವಿಧಾನಸಭೆ ಉಪ ಚುನಾವಣೆಯಲ್ಲಿ ಬಿಜೆಪಿಯಿಂದ ಸ್ಪರ್ಧಿಸಿ ಚಿಕ್ಕಮಾದು ವಿರುದ್ಧ ಸೋತರು. 1994ರಲ್ಲಿ ನಡೆದ ವಿಧಾನಸಭೆ ಚುನಾವಣೆಯಲ್ಲಿ ಹುಣಸೂರು ಕ್ಷೇತ್ರದಿಂದ ಬಿಜೆಪಿಯಿಂದ ಗೆದ್ದು ಶಾಸಕರಾದರು. 1998ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾದ ಅವರು, ಲೋಕಸಭೆ ಸದಸ್ಯರಾಗಿ ಚುನಾಯಿತರಾದರು. ಮರು ವರ್ಷ ನಡೆದ ಲೋಕಸಭೆ ಚುನಾವಣೆಯಲ್ಲಿ ರಾಜವಂಶಸ್ಥ ಶ್ರೀಕಂಠದತ್ತ ನರಸಿಂಹರಾಜ ಒಡೆಯರ್‌ ವಿರುದ್ಧ ಸೋತರು. 2004ರಲ್ಲಿ ಅವರನ್ನೇ ಮಣಿಸಿ ಎರಡನೇ ಬಾರಿಗೆ ಲೋಕಸಭೆ ಸದಸ್ಯರಾದರು. ಆಗ ಎನ್‌ಡಿಎ ಸರ್ಕಾರದಲ್ಲಿ ಮಂತ್ರಿಯಾಗುವ ಅವಕಾಶ ಸಿಕ್ಕಿತು.

ಮೈಸೂರಿನ ವಿಮಾನ ನಿಲ್ದಾಣ, ರೈಲ್ವೆ ನಿಲ್ದಾಣ ಸಹಿತ ಹಲವಾರು ಕೆಲಸಗಳನ್ನು ವಿಜಯಶಂಕರ್‌ ಮಾಡಿಸಿದ್ದಾರೆ. 2009ರಲ್ಲಿ ಕಾಂಗ್ರೆಸ್‌ನ ವಿಶ್ವನಾಥ್‌ ವಿರುದ್ಧ ವಿಜಯಶಂಕರ್‌ ಸೋಲು ಕಂಡರು. ಆನಂತರ ರಾಜ್ಯ ರಾಜಕಾರಣಕ್ಕೆ ಮರಳಿದ ಅವರು ಯಡಿಯೂರಪ್ಪ ಸರಕಾರದ ವೇಳೆ ಎಂಎಲ್ಸಿ ಆದರು. ಕೊಡಗು ಹಾಗೂ ಚಾಮರಾಜನಗರ ಉಸ್ತುವಾರಿ, ಅರಣ್ಯ, ಹಾಗೂ ಸಣ್ಣ ಕೈಗಾರಿಕೆ ಸಚಿವರೂ ಆದರು. 2014ರಲ್ಲಿ ವಿಜಯಶಂಕರ್‌ ಅವರನ್ನು ಮೈಸೂರಿನ ಬದಲು ಹಾಸನ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯನ್ನಾಗಿ ಬಿಜೆಪಿ ನಿಯೋಜಿಸಿತು. ಅಲ್ಲಿ ದೇವೇಗೌಡರ ವಿರುದ್ಧ ವಿಜಯಶಂಕರ್‌ ಸೋತರು.

ಬಿಜೆಪಿಯಲ್ಲಿ ತಮಗೆ ಅನ್ಯಾಯವಾಗಿದೆ ಎಂದು ಕಾಂಗ್ರೆಸ್‌ಗೆ ವಿಜಯಶಂಕರ್‌ ಸೇರಿಕೊಂಡರು. 2019ರಲ್ಲಿ ಮೈಸೂರು ಕ್ಷೇತ್ರದಿಂದ ಮೈತ್ರಿ ಅಭ್ಯರ್ಥಿಯಾಗಿ ಸೋತರು. ಒಂದೇ ವರ್ಷಕ್ಕೆ ಬಿಜೆಪಿಗೆ ಮರಳಿದರು. ಕಳೆದ ವರ್ಷ ಪಿರಿಯಾಪಟ್ಟಣ ವಿಧಾನಸಭೆ ಕ್ಷೇತ್ರದಿಂದ ಸ್ಪರ್ಧಿಸಿ ಸೋಲುಂಡರು. ಈ ಬಾರಿ ಲೋಕಸಭೆ ಚುನಾವಣೆಗೂ ಆಕಾಂಕ್ಷಿಯಾಗಿದ್ದರೂ ಟಿಕೆಟ್‌ ಸಿಕ್ಕಿರಲಿಲ್ಲ.

ಇದನ್ನೂ ಓದಿ: CH Vijayashankar: ಮೇಘಾಲಯ ರಾಜ್ಯಪಾಲರಾಗಿ ಸಿ.ಎಚ್. ವಿಜಯಶಂಕರ್ ನೇಮಕ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

BJP-JDS Padayatra: ರಾಜ್ಯ ಸರ್ಕಾರದ ವಿರುದ್ಧ ಆ.3ರಿಂದ ಬೆಂಗಳೂರು-ಮೈಸೂರು ಪಾದಯಾತ್ರೆ: ಬಿ.ವೈ.ವಿಜಯೇಂದ್ರ

BJP Padayatra: ವಾಲ್ಮೀಕಿ ನಿಗಮ ಅಕ್ರಮ, ಮುಡಾ ನಿವೇಶನ ಹಗರಣ, ಎಸ್‌ಸಿಎಸ್‌ಪಿ, ಟಿಎಸ್‌ಟಿ ಹಣ ಗ್ಯಾರಂಟಿಗಳಿಗೆ ಬಳಕೆ ವಿರೋಧಿಸಿ ಬೆಂಗಳೂರಿನಿಂದ ಮೈಸೂರಿನವರೆಗೂ ಪಾದಯಾತ್ರೆ ಮಾಡಲಿದ್ದೇವೆ. ಆ.3ರಂದು ಮಾಜಿ ಸಿಎಂಗಳಾದ ಬಿ.ಎಸ್‌. ಯಡಿಯೂರಪ್ಪ, ಎಚ್‌.ಡಿ. ಕುಮಾರಸ್ವಾಮಿ ಅವರು ಪಾದಯಾತ್ರೆಗೆ ಚಾಲನೆ ನೀಡಲಿದ್ದಾರೆ ಎಂದು ಬಿಜೆಪಿ ರಾಜ್ಯ ಅಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದ್ದಾರೆ.

VISTARANEWS.COM


on

Koo

ಬೆಂಗಳೂರು: ಬಿಜೆಪಿ-ಜೆಡಿಎಸ್ ಎರಡೂ ಪಕ್ಷದ ಮುಖಂಡರು ಸುದೀರ್ಘ ಚರ್ಚೆ ಮಾಡಿ ಆ.3ರಿಂದ 10ರವರೆಗೆ ಬೆಂಗಳೂರಿನಿಂದ ಮೈಸೂರಿಗೆ ಪಾದಯಾತ್ರೆ ನಡೆಸಲು ತೀರ್ಮಾನಿಸಿದ್ದೇವೆ. ವಾಲ್ಮೀಕಿ ನಿಗಮ ಅಕ್ರಮ, ಮುಡಾ ನಿವೇಶನ ಹಗರಣ, ಎಸ್‌ಸಿಎಸ್‌ಪಿ, ಟಿಎಸ್‌ಟಿ ಹಣ ಗ್ಯಾರಂಟಿಗಳಿಗೆ ಬಳಕೆ ವಿರೋಧಿಸಿ ಬೆಂಗಳೂರಿನಿಂದ ಮೈಸೂರಿನವರೆಗೂ ಬಿಜೆಪಿ-ಜೆಡಿಎಸ್‌ ಪಾದಯಾತ್ರೆ ಮಾಡಲಿದ್ದೇವೆ. ಆ.3ರಂದು ಮಾಜಿ ಸಿಎಂಗಳಾದ ಬಿ.ಎಸ್‌. ಯಡಿಯೂರಪ್ಪ, ಎಚ್‌.ಡಿ. ಕುಮಾರಸ್ವಾಮಿ ಅವರು ಪಾದಯಾತ್ರೆಗೆ ಚಾಲನೆ ನೀಡಲಿದ್ದಾರೆ. ಆ.10 ರಂದು ನಡೆಯುವ ಸಮಾರೋಪ ಸಮಾರಂಭಕ್ಕೆ ಕೇಂದ್ರದ ನಾಯಕರು ಬರಲಿದ್ದಾರೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದರು.

ಪಾದಯಾತ್ರೆ ಸಂಬಂಧ ನಡೆದ ಬಿಜೆಪಿ ಮತ್ತು ಜೆಡಿಎಸ್ ಸಮನ್ವಯ ಸಭೆ ಬಳಿಕ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಮಾತನಾಡಿದ್ದಾರೆ. ಸಮನ್ವಯ ಸಭೆಗೂ ಮುನ್ನ ಬಿಜೆಪಿ ಪ್ರಮುಖರ ಸಭೆ ನಡೆದಿದ್ದು, ಸಭೆಯಲ್ಲಿ ಅತಿವೃಷ್ಟಿ ಬಗ್ಗೆ ಚರ್ಚೆಯಾಗಿದೆ. ಕಾರವಾರದಲ್ಲಿ ಭಾರಿ ಮಳೆ ಹಿನ್ನೆಲೆಯಲ್ಲಿ ಹಲವು ಸಮಸ್ಯೆ ಉಂಟಾಗಿವೆ. ಹೀಗಾಗಿ ಪಾದಯಾತ್ರೆಗೂ ಮೊದಲು ಮಳೆ ಹಾನಿ ಪ್ರದೇಶಕ್ಕೆ ಭೇಟಿ ನೀಡಲು ನಿರ್ಧರಿಸಲಾಗಿದೆ. ಇದಕ್ಕಾಗಿ ಬಿಜೆಪಿ ನಿಯೋಗ ರಚನೆ ಮಾಡಲಾಗಿದೆ.

ಇದನ್ನೂ ಓದಿ | Manu Bhaker : ಪ್ಯಾರಿಸ್ ಒಲಿಂಪಿಕ್ಸ್ ನಲ್ಲಿ ಐತಿಹಾಸಿಕ ಪದಕ ಗೆದ್ದ ಮನು ಭಾಕರ್ ಗೆ ಪ್ರಧಾನಿ ಮೋದಿ ಅಭಿನಂದನೆ

ಪಾದಯಾತ್ರೆ ಬಗ್ಗೆ ಮಾಜಿ ಸಿಎಂ ಬಿ.ಎಸ್‌. ಯಡಿಯೂರಪ್ಪ ಪ್ರತಿಕ್ರಿಯಿಸಿ, ಭ್ರಷ್ಟ ಸರ್ಕಾರ ಕಿತ್ತೊಗೆಯಬೇಕಾಗಿದೆ. ಬಿಜೆಪಿ-ಜೆಡಿಎಸ್ ಹೋರಾಟಕ್ಕೆ ಹತ್ತಾರು ಸಾವಿರ ಜನ ಬರಲಿದ್ದಾರೆ. ಸಿಎಂ ರಾಜೀನಾಮೆ ಕೊಡುವವರೆಗೆ ವಿರಮಿಸಲ್ಲ. ಸಿಎಂಗೆ ಗೌರವ ಇದ್ದರೆ ತಕ್ಷಣ ರಾಜೀನಾಮೆ ಕೊಡಲಿ ಎಂದು ಒತ್ತಾಯಿಸಿದರು.

ಸುದ್ದಿಗೋಷ್ಠಿ ನಡೆಸುವಾಗಲೇ ಎಚ್‌.ಡಿ. ಕುಮಾರಸ್ವಾಮಿ ಮೂಗಿನಿಂದ ರಕ್ತಸ್ರಾವ; ಆಸ್ಪತ್ರೆಗೆ ದಾಖಲು

ಬೆಂಗಳೂರು: ಸುದ್ದಿಗೋಷ್ಠಿ ನಡೆಸುವಾಗಲೇ ಮಾಜಿ ಸಿಎಂ ಎಚ್‌.ಡಿ.ಕುಮಾರಸ್ವಾಮಿ ಅವರ ಮೂಗಿನಿಂದ ರಕ್ತಸ್ರಾವ ಆಗಿರುವ ಘಟನೆ ಭಾನುವಾರ ನಡೆದಿದೆ. ಮುಡಾ ನಿವೇಶನ ಹಗರಣ ವಿರೋಧಿಸಿ ಆ.3ರಿಂದ ಪಾದಯಾತ್ರೆ ಹಮ್ಮಿಕೊಂಡಿರುವ ಹಿನ್ನೆಲೆಯಲ್ಲಿ ನಗರದ ಜೆಡಿಎಸ್‌ ಕಚೇರಿಯಲ್ಲಿ ಬಿಜೆಪಿ-ಜೆಡಿಎಸ್‌ ನಾಯಕರ ಸಮನ್ವಯ ಸಭೆ ಏರ್ಪಡಿಸಲಾಗುತ್ತು. ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡುವ ವೇಳೆ ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ (HD Kumaraswamy) ಅವರ ಮೂಗಿನಿಂದ ರಕ್ತಸ್ರಾವವಾಗಿದೆ.

ಸುದ್ದಿಗಾರರೊಂದಿಗೆ ಮಾತನಾಡುವ ವೇಳೆ ಮೂಗಿನಿಂದ ರಕ್ತಸ್ರಾವವಾಗಿದೆ. ಈ ವೇಳೆ ಬಟ್ಟೆಯಿಂದ ಮೂಗನ್ನು ಎಚ್‌ಡಿಕೆ ಒರೆಸಿಕೊಂಡರು. ಅದರೂ ರಕ್ತಸ್ರಾವ ನಿಲ್ಲಲಿಲ್ಲ. ಮತ್ತೆ ಮೂಗಿನಿಂದ ರಕ್ತಸ್ರಾವ ಹೆಚ್ಚಾದ ಹಿನ್ನೆಲೆ ಪುತ್ರ ನಿಖಿಲ್‌ ಕುಮಾರಸ್ವಾಮಿ ಅವರು ತಂದೆಯನ್ನು ಜಯನಗರ ಅಪೋಲೋ ಆಸ್ಪತ್ರೆಗೆ ಕರೆದೊಯ್ದರು. ಮೂಗಿನಿಂದ ರಕ್ತಸ್ರಾವ ಹಿನ್ನೆಲೆಯಲ್ಲಿ ಬಿಳಿ ಶರ್ಟ್ ರಕ್ತಮಯವಾಗಿದೆ.

ಇದನ್ನೂ ಓದಿ | Dog Meat Controversy: ಬೆಂಗಳೂರಿನಲ್ಲಿ ಸಿಕ್ಕಿರೋದು ನಾಯಿ ಮಾಂಸ ಅಲ್ಲ, ಮೇಕೆ ಮಾಂಸ: ಗೃಹ ಸಚಿವ ಪರಮೇಶ್ವರ್‌

ಈ ಬಗ್ಗೆ ಸಂಸದ ಡಾ.ಸಿ.ಎನ್‌.ಮಂಜುನಾಥ್‌ ಪ್ರತಿಕ್ರಿಯಿಸಿ, ಕುಮಾರಸ್ವಾಮಿ ಅವರಿಗೆ ಎರಡನೇ ಬಾರಿ ಈ ರೀತಿ ಆಗುತ್ತಿದೆ. ರಕ್ತ ಹೆಪ್ಪುಗಟ್ಟಬಾರದು ಎಂದು ಥಿನ್ನರ್‌ ತೆಗೆದುಕೊಳ್ಳುತ್ತಿದ್ದರು. ಅವರಿಗೆ ಬಿಪಿ ನಾರ್ಮಲ್‌ ಇದೆ, ನಿತ್ಯ ಶುಗರ್‌ ಲೆವೆಲ್‌ ಚೆಕ್‌ ಮಾಡಿಕೊಳ್ಳುತ್ತಿದ್ದರು. ಪ್ರವಾಸ ಹೆಚ್ಚಾಗಿ ಓವರ್‌ ಹೀಟ್‌ನಿಂದ ರಕ್ತಸ್ರಾವ ಆಗಿರಬಹುದು ಎಂದು ತಿಳಿಸಿದ್ದಾರೆ.

Continue Reading

ಪ್ರಮುಖ ಸುದ್ದಿ

Manu Bhaker: ಭಾರತದ ಹೆಮ್ಮೆಯ ಪುತ್ರಿ ; ಮನು ಭಾಕರ್​ಗೆ ಪದಕ ಗೆಲ್ಲಲು ಭಗವದ್ಗೀತೆಯೇ ಪ್ರೇರಣೆ

Manu Bhaker : 2012ರ ಲಂಡನ್ ಒಲಿಂಪಿಕ್ಸ್​ನಲ್ಲಿ ರ್ಯಾಲಿ ಫೈರ್ ಪಿಸ್ತೂಲ್ ಶೂಟರ್ ವಿಜಯ್ ಕುಮಾರ್ ಮತ್ತು 10 ಮೀಟರ್ ಏರ್ ರೈಫಲ್ ನಲ್ಲಿ ಗಗನ್ ನಾರಂಗ್ ಕ್ರಮವಾಗಿ ಬೆಳ್ಳಿ ಮತ್ತು ಕಂಚಿನ ಪದಕ ಗೆದ್ದಿದ್ದರು. ನಾರಂಗ್ ಇದೀಗ ಪ್ಯಾರಿಸ್ ತಂಡದ ಚೆಫ್ ಡಿ ಮಿಷನ್ ಆಗಿದ್ದಾರೆ.

VISTARANEWS.COM


on

Manu Bhaker
Koo

ನವದೆಹಲಿ: ಒಲಿಂಪಿಕ್ಸ್ ಪದಕ ಗೆದ್ದ ಭಾರತೀಯ ಮಹಿಳಾ ಶೂಟರ್ ಎಂಬ ಹೆಗ್ಗಳಿಕೆಗೆ ಮನು ಭಾಕರ್ (Manu Bhaker) ಭಾನುವಾರ ಪಾತ್ರರಾಗಿದ್ದಾರೆ. ಪ್ಯಾರಿಸ್: ಪ್ಯಾರಿಸ್​ನಲ್ಲಿ ನಡೆದ 10 ಮೀಟರ್ ಏರ್ ಪಿಸ್ತೂಲ್ ಸ್ಪರ್ಧೆಯಲ್ಲಿ ಅವರು ಕಂಚಿನ ಪದಕ ಗೆದ್ದು ಇತಿಹಾಸ ನಿರ್ಮಿಸಿದ್ದಾರೆ. ಇದು ಭಾರತಕ್ಕೆ ಹಾಲಿ ಕ್ರೀಡಾಕೂಟದಲ್ಲಿ ಮೊದಲ ಪದಕವಾಗಿದೆ. ಹೀಗಾಗಿ ಭಾರತದ ಸಂಭ್ರಮ ಹೆಚ್ಚಾಗಿದೆ. ಇದೇ ವೇಳೆ ಪದಕ ಗೆದ್ದ ಖುಷಿಯಲ್ಲಿರುವ ಭಾಕರ್​ ಎಲ್ಲರಿಗೂ ಅಭಿನಂದನೆ ಸಲ್ಲಿಸಿದ್ದಾರೆ. ಆದರೆ, ಹೆಚ್ಚಾಗಿ ನೆನಪಿಸಿಕೊಂಡಿರುವುದು ಹಿಂದೂಗಳ ಶ್ರೇಷ್ಠ ಗ್ರಂಥವಾದ ಭಗವದ್ಗೀತೆಯನ್ನು. ಅದರಲ್ಲೂ ಅದಲ್ಲಿರುವ ಕರ್ಮಫಲ ಸಿದ್ಧಾಂತವನ್ನು.

2012ರ ಲಂಡನ್ ಒಲಿಂಪಿಕ್ಸ್​ನಲ್ಲಿ ರ್ಯಾಲಿ ಫೈರ್ ಪಿಸ್ತೂಲ್ ಶೂಟರ್ ವಿಜಯ್ ಕುಮಾರ್ ಮತ್ತು 10 ಮೀಟರ್ ಏರ್ ರೈಫಲ್ ನಲ್ಲಿ ಗಗನ್ ನಾರಂಗ್ ಕ್ರಮವಾಗಿ ಬೆಳ್ಳಿ ಮತ್ತು ಕಂಚಿನ ಪದಕ ಗೆದ್ದಿದ್ದರು. ನಾರಂಗ್ ಇದೀಗ ಪ್ಯಾರಿಸ್ ತಂಡದ ಚೆಫ್ ಡಿ ಮಿಷನ್ ಆಗಿದ್ದಾರೆ.

ಇದು ಭಾರತಕ್ಕೆ ಅನಿವಾರ್ಯ ದೀರ್ಘಕಾಲದ ಪದಕವಾಗಿತ್ತು. ಸಾಧನೆಯ ಹಾದಿಯಲ್ಲಿ ನಾನು ಕೇವಲ ನೆಪವಷ್ಟೇ. ಭಾರತ ಇನ್ನೂ ಹೆಚ್ಚಿನ ಪದಕಗಳಿಗೆ ಅರ್ಹವಾಗಿದೆ. ನಾವು ಈ ಬಾರಿ ಸಾಧ್ಯವಾದಷ್ಟು ಪದಕಗಳನ್ನು ಗೆಲ್ಲಲು ಎದುರು ನೋಡುತ್ತಿದ್ದೇವೆ. ವೈಯಕ್ತಿಕವಾಗಿ ನನಗೆ ಈ ಭಾವನೆ ಅತಿವಾಸ್ತವಿಕವಾಗಿದೆ. ನಾನು ಸಾಕಷ್ಟು ಪ್ರಯತ್ನ ಮಾಡಿದ್ದೇನೆ. ಕೊನೆಯ ಶಾಟ್ ವರೆಗೂ ನಾನು ಎಲ್ಲಾ ಶಕ್ತಿಯೊಂದಿಗೆ ಹೋರಾಡುತ್ತಿದ್ದೆ ಎಂದು ಮನು ಹೇಳಿದ್ದಾರೆ.

10 ಮೀಟರ್ ಏರ್ ಪಿಸ್ತೂಲ್ ಫೈನಲ್​​ನ ಕೊನೇ ಕ್ಷಣದ ಹೋರಾಟದ ಬಗ್ಗೆ ಕೇಳಿದ್ದಕ್ಕೆ, . “ಪ್ರಾಮಾಣಿಕವಾಗಿ ನನಗೆ ನೆರವಾಗಿದ್ದು ಭಗವದ್ಗೀತೆ. ನಾನು ಬಹಳಷ್ಟು ಬಾರಿ ಓದಿದ್ದೇನೆ, ಆದ್ದರಿಂದ ನನ್ನ ಮನಸ್ಸಿನಲ್ಲಿ ಅದೇ ಇತ್ತು ‘ನೀವು ಏನನ್ನು ಮಾಡಬೇಕೋ ಅದನ್ನು ಮಾಡಿ, ಫಲವನ್ನು ನನಗೆ ಬಿಟ್ಟು ಬಿಡಿ ಎಂಬ ಸಾರ ನೆನಪಾಗುತ್ತಿತ್ತು. ವಿಧಿಯನ್ನು ನೀವು ನಿಯಂತ್ರಿಸಲು ಯಾರಿಂದಲೂ ಸಾಧ್ಯವಿಲ್ಲ. ಎಂಬುದು, ಇನ್ನು ಗೀತೆಯಲ್ಲಿ ಕೃಷ್ಣನು ಅರ್ಜುನನಿಗೆ ಹೇಳುವ “ನೀವು ಕರ್ಮದ ಮೇಲೆ ಗಮನವಿಡಿ. ಫಲಿತಾಂಶದ ಮೇಲೆ ಅಲ್ಲ, ಉವಾಚ ನನ್ನ ತಲೆಯಲ್ಲಿ ಓಡುತ್ತಿತ್ತು ಎಂದು ಮನು ಹೇಳಿದ್ದಾರೆ,

ಇದನ್ನೂ ಓದಿ: Manu Bhaker : ಪ್ಯಾರಿಸ್ ಒಲಿಂಪಿಕ್ಸ್ ನಲ್ಲಿ ಐತಿಹಾಸಿಕ ಪದಕ ಗೆದ್ದ ಮನು ಭಾಕರ್ ಗೆ ಪ್ರಧಾನಿ ಮೋದಿ ಅಭಿನಂದನೆ

ಟೋಕಿಯೊ ಒಲಿಂಪಿಕ್ಸ್​ನಲ್ಲಿ ನಾನು ತುಂಬಾ ನಿರಾಶೆಗೊಂಡಿದ್ದೆ. ಅದರಿಂದ ಚೇತರಿಸಿಕೊಳ್ಳಲು ಬಹಳ ಸಮಯ ಹಿಡಿಯಿತು. ಮುಗಿದು ಹೋಗಿದ್ದು ಹೋಯಿತು. ನಾವು ವರ್ತಮಾನದ ಮೇಲೆ ಕೇಂದ್ರೀಕರಿಸೋಣ. ಈ ಪದಕವು ಯಾವಾಗಲೂ ತಂಡದ ಕೆಲಸವಾಗಿದೆ. ನಾನು ಅದನ್ನು ಮಾಡಲು ಒಂದು ನೆಪವಾಗಿದ್ದೆ ಎಂದು ಅವರು ಹೇಳಿದ್ಧಾರೆ.

Continue Reading

ಪ್ರಮುಖ ಸುದ್ದಿ

Womens Asia Cup : ಭಾರತದ ಮಹಿಳೆಯರನ್ನು ಸೋಲಿಸಿ ಚೊಚ್ಚಲ ಏಷ್ಯಾ ಕಪ್​ ಗೆದ್ದ ಶ್ರೀಲಂಕಾ ತಂಡ

Womens Asia Cup : ಇಲ್ಲಿನ ಪಲ್ಲೆಕೆಲೆ ಕ್ರಿಕೆಟ್​ ಸ್ಟೇಡಿಯಮ್​ನಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಲಂಕಾ ತಂಡ ನಿಗದಿತ 20 ಓವರ್​ಗಳಲ್ಲಿ 5 ವಿಕೆಟ್​ಗೆ 165 ರನ್ ಬಾರಿಸಿತು. ಪ್ರತಿಯಾಗಿ ಬ್ಯಾಟಿ್​ ಮಾಡಿದ ಲಂಕಾ 18.4 ಓವರ್​ಗಳಲ್ಲೇ 2 ವಿಕೆಟ್​ ನಷ್ಟಕ್ಕೆ 167 ರನ್​ ಬಾರಿಸಿ ಗೆಲುವಿನ ನಗೆ ಬೀರಿತು.

VISTARANEWS.COM


on

Women's Asia Cup
Koo

ಪಲ್ಲೆಕೆಲೆ: ಫೈನಲ್ ಪಂದ್ಯದಲ್ಲಿ ವೈಫಲ್ಯ ಕಂಡ ಭಾರತ ಮಹಿಳೆಯರ ತಂಡ ಆತಿಥೇಯ ಶ್ರೀಲಂಕಾ ವಿರುದ್ಧ 8 ವಿಕೆಟ್​ಗಳ ಸೋಲು ಕಂಡಿದ್ದು, ಮಹಿಳೆಯರ ಏಷ್ಯಾ ಕಪ್​ (Womens Asia Cup) ಟ್ರೋಫಿ ಉಳಿಸಲು ವಿಫಲಗೊಂಡಿದೆ. ಕಳೆದ ಬಾರಿ ಭಾರತ ಚಾಂಪೊಯನ್ ಆಗಿತ್ತು, ಅಲ್ಲದೆ, ಈ ಬಾರಿಯೂ ತಂಡ ಉತ್ತಮವಾಗಿತ್ತು. ಆದರೆ, ಕಪ್ ಗೆಲ್ಲುವಲ್ಲಿ ಕೊನೇ ಕ್ಷಣದಲ್ಲಿ ಎಡವಿತು. ಇದೇ ವೇಳೆ ಚಾಮರಿ ಅಟ್ಟಪಟ್ಟು ನೇತೃತ್ವದ ಲಂಕಾ ವನಿತೆಯರು ಮೊದಲ ಬಾರಿಗೆ ಏಷ್ಯಾ ಕಪ್​ ಟ್ರೋಫಿಗೆ ಮುತ್ತಿಟ್ಟಿದ್ದಾರೆ. ಫೈನಲ್​ ಪಂದ್ಯದಲ್ಲಿ ಸಂಪೂರ್ಣವಾಗಿ ಪಾರಮ್ಯ ಮೆರೆದ ಲಂಕಾ ತಂಡ ಟ್ರೋಫಿ ಗೆದ್ದು ಸಂಭ್ರಮಿಸಿತು.

ಭಾರತ ತಂಡ ಹಾಲಿ ಆವೃತ್ತಿಯಲ್ಲೂ ಬಲಾಢ್ಯ ತಂಡವಾಗಿತ್ತು. ಈ ಹಿಂದಿನ ಎಂಟು ಆವೃತ್ತಿಗಳಲ್ಲಿ 7 ಟ್ರೋಫಿ ಗೆದ್ದಿತ್ತು. ಅಂತೆಯೇ 8ನೇ ಕಪ್​ ಗೆಲ್ಲುವ ನಿರೀಕ್ಷೆಯಲ್ಲಿತ್ತು. ಆದರೆ, ಅದಕ್ಕೆ ಲಂಕಾ ವನಿತೆಯರು ಅವಕಾಶ ಕೊಡಲಿಲ್ಲ. ಕಳೆದ 8 ಆವೃತ್ತಿಗಳಲ್ಲಿ 5 ಬಾರಿ ಫೈನಲ್​​ನಲ್ಲಿ ಪ್ರವೇಶಿಸಿದ್ದ ದ್ವೀಪರಾಷ್ಟ್ರ, ಕೊನೆಗೂ 6ನೇ ಪ್ರಯತ್ನದಲ್ಲಿ ಗೆಲುವಿನ ಕನಸು ನನಸಾಗಿಸಿಕೊಂಡಿದೆ.

ಇಲ್ಲಿನ ಪಲ್ಲೆಕೆಲೆ ಕ್ರಿಕೆಟ್​ ಸ್ಟೇಡಿಯಮ್​ನಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಲಂಕಾ ತಂಡ ನಿಗದಿತ 20 ಓವರ್​ಗಳಲ್ಲಿ 5 ವಿಕೆಟ್​ಗೆ 165 ರನ್ ಬಾರಿಸಿತು. ಪ್ರತಿಯಾಗಿ ಬ್ಯಾಟಿ್​ ಮಾಡಿದ ಲಂಕಾ 18.4 ಓವರ್​ಗಳಲ್ಲೇ 2 ವಿಕೆಟ್​ ನಷ್ಟಕ್ಕೆ 167 ರನ್​ ಬಾರಿಸಿ ಗೆಲುವಿನ ನಗೆ ಬೀರಿತು.

ಸವಾಲಿನ ಗುರಿ ಬೆನ್ನಟ್ಟಿದ ಶ್ರೀಲಂಕಾ 7 ರನ್ ಗಳಿಸಿ ಮೊದಲ ವಿಕೆಟ್​ ಕಳೆದುಕೊಂಡು ಆತಂಕಕ್ಕೆ ಬಿತ್ತು. ಆರಂಭಿಕ ಹಿನ್ನಡೆ ಮಧ್ಯೆಯೂ ನಾಯಕಿ ಚಾಮರಿ ಅಟ್ಟಪಟ್ಟು ಭಾರತೀಯ ಬೌಲರ್​ಗಳನ್ನು ಹಿಮ್ಮೆಟ್ಟಿಸಿದರು. ಅವರಿಗೆ ಹರ್ಷಿತಾ ಸಮರವಿಕ್ರಮ ಬೆಂಬಲವಾಗಿನಿಂತರು. ಹೀಗಾಗಿ ಎರಡನೇ ವಿಕೆಟ್​ಗೆ ಲಂಕಾ ತಂಡ 87 ರನ್ ಗಳಿಸಿತು. ಇದೇ ವೇಳೆ ಚಾಮರಿ ಅರ್ಧ ಶತಕ ಬಾರಿಸಿದರು.
43 ಎಸೆತಗಳಲ್ಲಿ 9 ಬೌಂಡರಿ, 2 ಸಿಕ್ಸರ್​ ಸಹಿತ 61 ರನ್ ಗಳಿಸಿದ್ದ ಚಾಮರಿ ಔಟಾದರೂ ಹರ್ಷಿತಾ ಗೆಲುವಿನ ಕಡೆಗೆ ಮುನ್ನುಗ್ಗಿದರು. ಹರ್ಮನ್ ಪಡೆಯ ವಿರುದ್ಧ ಸವಾರಿ ಮಾಡಿ ಗೆಲುವಿನತ್ತ ಮುನ್ನಡೆಸಿದರು. ಹಾಗೆಯೇ ಅರ್ಧಶತಕ ಪೂರೈಸಿದರು.

ಇದನ್ನೂ ಓದಿ: Manu Bhaker : ಪ್ಯಾರಿಸ್ ಒಲಿಂಪಿಕ್ಸ್ ನಲ್ಲಿ ಐತಿಹಾಸಿಕ ಪದಕ ಗೆದ್ದ ಮನು ಭಾಕರ್ ಗೆ ಪ್ರಧಾನಿ ಮೋದಿ ಅಭಿನಂದನೆ

ಮಂಧಾನ ಏಕಾಂಗಿ ಹೋರಾಟ

ಬ್ಯಾಟಿಂಗ್ ಆರಂಭಿಸಿದ ಭಾರತ ಉತ್ತಮ ಆರಂಭ ಪಡೆಯಿತು. ಮೊದಲ ವಿಕೆಟ್​ಗೆ 44 ರನ್ ಬಂದರೂ ಶಫಾಲಿ ವರ್ಮಾ 16 ರನ್​ಗಳಿಗೆ ಆಟ ಮುಗಿಸಿದರು. ಫೈನಲ್​ಗೆ ಎಂಟ್ರಿ ಪಡೆದ ಉಮಾ ಚೆಟ್ರಿ 9 ರನ್​ಗೆ ನಿರ್ಗಮಿಸಿದರು. ಹರ್ಮನ್​ಪ್ರೀತ್​ ಕೌರ್​ (11) ಬೇಗನೆ ಔಟಾದ ಕಾರಣ ದೊಡ್ಡ ಮೊತ್ತ ಪೇರಿಸುವ ಕನಸಿಗೆ ಬ್ರೇಕ್ ಬಿತ್ತು. ಸತತ ವಿಕೆಟ್​ ಪತನದ ಮಧ್ಯೆಯೂ ಮಂಧಾನ ಅರ್ಧಶತಕ ಸಿಡಿಸಿ ಆಸರೆಯಾದರು.

ಮಂಧಾನ 47 ಎಸೆತಗಳಲ್ಲಿ 10 ಬೌಂಡರಿ ಸಹಿತ 60 ರನ್ ಗಳಿಸಿ ತಂಡವನ್ನು 150ರ ಗಡಿ ದಾಟಿಸಲು ನೆರವಾದರು. ಜೆಮಿಮಾ ರೊಡ್ರಿಗಸ್ 29 ರನ್ ಗಳಿಸಿದರು. ಕೊನೆಯಲ್ಲಿ ರಿಚಾ ಘೋಷ್ ಅಬ್ಬರದ 30 ರನ್ ಕಲೆ ಹಾಕಿದರು. ಪೂಜಾ ವಸ್ತ್ರಾಕರ್ 5, ರಾಧಾ ಯಾದವ್ 1 ರನ್ ಗಳಿಸಿದರು.

Continue Reading

ಪ್ರಮುಖ ಸುದ್ದಿ

HD Kumaraswamy: ಸುದ್ದಿಗೋಷ್ಠಿ ನಡೆಸುವಾಗಲೇ ಎಚ್‌.ಡಿ. ಕುಮಾರಸ್ವಾಮಿ ಮೂಗಿನಿಂದ ರಕ್ತಸ್ರಾವ; ಆಸ್ಪತ್ರೆಗೆ ದಾಖಲು

HD Kumaraswamy: ಬೆಂಗಳೂರಿನ ಜೆಡಿಎಸ್‌ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡುವ ವೇಳೆ ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಅವರ ಮೂಗಿನಿಂದ ರಕ್ತಸ್ರಾವವಾಗಿದೆ. ಈ ವೇಳೆ ಬಟ್ಟೆಯಿಂದ ಮೂಗನ್ನು ಒರೆಸಿಕೊಂಡರೂ ರಕ್ತಸ್ರಾವ ನಿಲ್ಲದ ಹಿನ್ನೆಲೆಯಲ್ಲಿ ಅವರನ್ನು ಪುತ್ರ ನಿಖಿಲ್‌ ಕುಮಾರಸ್ವಾಮಿ ಜಯನಗರ ಅಪೋಲೋ ಆಸ್ಪತ್ರೆಗೆ ಕರೆದೊಯ್ದರು.

VISTARANEWS.COM


on

HD Kumaraswamy
Koo

ಬೆಂಗಳೂರು: ಸುದ್ದಿಗೋಷ್ಠಿ ನಡೆಸುವಾಗಲೇ ಮಾಜಿ ಸಿಎಂ ಎಚ್‌.ಡಿ.ಕುಮಾರಸ್ವಾಮಿ ಅವರ ಮೂಗಿನಿಂದ ರಕ್ತಸ್ರಾವ ಆಗಿರುವ ಘಟನೆ ಭಾನುವಾರ ನಡೆದಿದೆ. ಮುಡಾ ನಿವೇಶನ ಹಗರಣ ವಿರೋಧಿಸಿ ಆ.3ರಿಂದ ಪಾದಯಾತ್ರೆ ಹಮ್ಮಿಕೊಂಡಿರುವ ಹಿನ್ನೆಲೆಯಲ್ಲಿ ನಗರದ ಜೆಡಿಎಸ್‌ ಕಚೇರಿಯಲ್ಲಿ ಬಿಜೆಪಿ-ಜೆಡಿಎಸ್‌ ನಾಯಕರ ಸಮನ್ವಯ ಸಭೆ ಏರ್ಪಡಿಸಲಾಗುತ್ತು. ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡುವ ವೇಳೆ ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ (HD Kumaraswamy) ಅವರ ಮೂಗಿನಿಂದ ರಕ್ತಸ್ರಾವವಾಗಿದೆ.

ಸುದ್ದಿಗಾರರೊಂದಿಗೆ ಮಾತನಾಡುವ ವೇಳೆ ಮೂಗಿನಿಂದ ರಕ್ತಸ್ರಾವವಾಗಿದೆ. ಈ ವೇಳೆ ಬಟ್ಟೆಯಿಂದ ಮೂಗನ್ನು ಎಚ್‌ಡಿಕೆ ಒರೆಸಿಕೊಂಡರು. ಅದರೂ ರಕ್ತಸ್ರಾವ ನಿಲ್ಲಲಿಲ್ಲ. ಮತ್ತೆ ಮೂಗಿನಿಂದ ರಕ್ತಸ್ರಾವ ಹೆಚ್ಚಾದ ಹಿನ್ನೆಲೆ ಪುತ್ರ ನಿಖಿಲ್‌ ಕುಮಾರಸ್ವಾಮಿ ಅವರು ತಂದೆಯನ್ನು ಜಯನಗರ ಅಪೋಲೋ ಆಸ್ಪತ್ರೆಗೆ ಕರೆದೊಯ್ದರು. ಮೂಗಿನಿಂದ ರಕ್ತಸ್ರಾವ ಹಿನ್ನೆಲೆಯಲ್ಲಿ ಬಿಳಿ ಶರ್ಟ್ ರಕ್ತಮಯವಾಗಿದೆ.

ಈ ಬಗ್ಗೆ ಸಂಸದ ಡಾ.ಸಿ.ಎನ್‌.ಮಂಜುನಾಥ್‌ ಪ್ರತಿಕ್ರಿಯಿಸಿ, ಕುಮಾರಸ್ವಾಮಿ ಅವರಿಗೆ ಎರಡನೇ ಬಾರಿ ಈ ರೀತಿ ಆಗುತ್ತಿದೆ. ರಕ್ತ ಹೆಪ್ಪುಗಟ್ಟಬಾರದು ಎಂದು ಥಿನ್ನರ್‌ ತೆಗೆದುಕೊಳ್ಳುತ್ತಿದ್ದರು. ಅವರಿಗೆ ಬಿಪಿ ನಾರ್ಮಲ್‌ ಇದೆ, ನಿತ್ಯ ಶುಗರ್‌ ಲೆವೆಲ್‌ ಚೆಕ್‌ ಮಾಡಿಕೊಳ್ಳುತ್ತಿದ್ದರು. ಪ್ರವಾಸ ಹೆಚ್ಚಾಗಿ ಓವರ್‌ ಹೀಟ್‌ನಿಂದ ರಕ್ತಸ್ರಾವ ಆಗಿರಬಹುದು ಎಂದು ತಿಳಿಸಿದ್ದಾರೆ.

ಇದನ್ನೂ ಓದಿ | Dog Meat Controversy: ಬೆಂಗಳೂರಿನಲ್ಲಿ ಸಿಕ್ಕಿರೋದು ನಾಯಿ ಮಾಂಸ ಅಲ್ಲ, ಮೇಕೆ ಮಾಂಸ: ಗೃಹ ಸಚಿವ ಪರಮೇಶ್ವರ್‌

ಸದನದಲ್ಲಿ ಉತ್ತರ ಕೊಡದೆ ಸಿಎಂ ಪಲಾಯನ

ಇಂದು ಬಿಜೆಪಿ-ಜೆಡಿಎಸ್ ಪಕ್ಷದ ಶಾಸಕರು, ಮಾಜಿ ಶಾಸಕರು, ಕೇಂದ್ರ ಸಚಿವರು ಹಾಗೂ ಬಿ.ಎಸ್‌. ಯಡಿಯೂರಪ್ಪ ಅವರ ಸಮ್ಮುಖದಲ್ಲಿ ಸಭೆ ಮಾಡಿದ್ದೇವೆ. ರಾಜ್ಯದಲ್ಲಿ ಜನರನ್ನು ಸುಳ್ಳು ಮಾತಿನ ಮೂಲಕ ದಾರಿ ತಪ್ಪಿಸಿ, ಕಾಂಗ್ರೆಸ್ ಅಧಿಕಾರಕ್ಕೆ ಬಂದ ಮೊದಲ ತಿಂಗಳಿಂದಲೇ ಇವರ ಭ್ರಷ್ಟಾಚಾರ ಆರಂಭವಾಯಿತು. ವರ್ಗಾವಣೆ ವಿಚಾರದಿಂದ ಭ್ರಷ್ಟಾಚಾರ ಆರಭವಾಗಿದೆ. ಸದನದ ಕಲಾಪ ಎದುರಿಸಲಾಗದೆ ಮಾಧ್ಯಮದ ಮೂಲಕ ಹೇಳಿಕೆ ಪ್ರಾರಂಭ ಮಾಡಿದ್ದಾರೆ. ವಿಧಾನಸಭೆ ಅಷ್ಟು ವರ್ಷದ ಅನುಭವ ಇರುವ ಸಿಎಂ, ವಿಧಾನಸಭೆಯಲ್ಲಿ ಉತ್ತರ ಕೊಡದೆ ಪಲಾಯನ ಮಾಡಿದ ಘಟನೆ ಎಂದೂ ನಡೆದಿರಲಿಲ್ಲ ಎಂದು ಮಾಜಿ ಸಿಎಂ ಎಚ್‌.ಡಿ.ಕುಮಾರಸ್ವಾಮಿ ಕಿಡಿಕಾರಿದರು.

HD Kumaraswamy
HD Kumaraswamy

ವಿಧಾನಸಭೆ, ವಿಧಾನಪರಿಷತ್‌ನಲ್ಲಿ ದಾಖಲೆ ಸಹಿತ ವಾಲ್ಮೀಕಿ ಹಗರಣ ಕುರಿತು ಮಾಹಿತಿ ನೀಡಲಾಗಿದೆ. ಆದರೆ, SC, ST ಸಮುದಾಯಕ್ಕೆ ಯಾವುದೇ ಸರ್ಕಾರ ಕೊಡದ ಭರವಸೆ ಕೊಟ್ಟು, ಪರಿಶಿಷ್ಟರ ಹಣವನ್ನೇ ಲೂಟಿ ಹೊಡೆಯಲಾಗುತ್ತಿದೆ. ಅದರ ನಾಯಕತ್ವ ಸಿದ್ದರಾಮಯ್ಯ ವಹಿಸಿದ್ದಾರೆ . ಮೊದಲ ಬಾರಿಗೆ ಉತ್ತರ ಕೊಡುವ ನೈತಿಕತೆ ಕಳೆದುಕೊಂಡಿದ್ದಾರೆ. ಯಾರೋ ಬರೆದುಕೊಟ್ಟ ಭಾಷಣ ಓದಿದ್ದಾರೆ. ಸಿಎಂ ಪತ್ನಿ 14 ಸೈಟಿಗೆ ನಮ್ಮ ತಕರಾರು ಇಲ್ಲ. ಇನ್ನೂ 50 ಸೈಟು ಖರೀದಿ ಮಾಡಲಿ. ಅವರವರ ಸಾಮರ್ಥ್ಯದ ಆಸ್ತಿ ಹೊಂದಲು ಅಂಬೇಡ್ಕರ್ ಅವಕಾಶ ಮಾಡಿಕೊಟ್ಟಿದ್ದಾರೆ. ಆದರೆ, ಆ ಜಮೀನು ಯಾರಿಗೆ ಸೇರಿದ್ದು ಅನ್ನೋದು ಪ್ರಶ್ನೆ.. ಅಂತಿಮ ಅಧಿಸೂಚನೆಯಲ್ಲಿ 3 ಲಕ್ಷ ಹಣವನ್ನು ಕೋರ್ಟಿನಲ್ಲಿ ಸಂದಾಯ ಮಾಡಿದ್ದಾರೆ ಎಂದು ಎಚ್‌ಡಿಕೆ ತಿಳಿಸಿದರು.

Continue Reading
Advertisement
ಕರ್ನಾಟಕ11 seconds ago

BJP-JDS Padayatra: ರಾಜ್ಯ ಸರ್ಕಾರದ ವಿರುದ್ಧ ಆ.3ರಿಂದ ಬೆಂಗಳೂರು-ಮೈಸೂರು ಪಾದಯಾತ್ರೆ: ಬಿ.ವೈ.ವಿಜಯೇಂದ್ರ

Manu Bhaker
ಪ್ರಮುಖ ಸುದ್ದಿ8 mins ago

Manu Bhaker: ಭಾರತದ ಹೆಮ್ಮೆಯ ಪುತ್ರಿ ; ಮನು ಭಾಕರ್​ಗೆ ಪದಕ ಗೆಲ್ಲಲು ಭಗವದ್ಗೀತೆಯೇ ಪ್ರೇರಣೆ

Women's Asia Cup
ಪ್ರಮುಖ ಸುದ್ದಿ32 mins ago

Womens Asia Cup : ಭಾರತದ ಮಹಿಳೆಯರನ್ನು ಸೋಲಿಸಿ ಚೊಚ್ಚಲ ಏಷ್ಯಾ ಕಪ್​ ಗೆದ್ದ ಶ್ರೀಲಂಕಾ ತಂಡ

karnataka weather Forecast
ಮಳೆ57 mins ago

Karnataka Weather : ಕೂಲ್‌ ಆದ ಬೆಂಗಳೂರು; ನಾಳೆಗೆ ಉತ್ತರ ಕನ್ನಡ ಜಿಲ್ಲೆಗೆ ಭಾರಿ ಮಳೆ ಎಚ್ಚರ

HD Kumaraswamy
ಪ್ರಮುಖ ಸುದ್ದಿ1 hour ago

HD Kumaraswamy: ಸುದ್ದಿಗೋಷ್ಠಿ ನಡೆಸುವಾಗಲೇ ಎಚ್‌.ಡಿ. ಕುಮಾರಸ್ವಾಮಿ ಮೂಗಿನಿಂದ ರಕ್ತಸ್ರಾವ; ಆಸ್ಪತ್ರೆಗೆ ದಾಖಲು

Tungabhadra Dam
ಕೊಪ್ಪಳ2 hours ago

Tungabhadra Dam: ಕಾಲುವೆಯಲ್ಲಿ ಬಾಲಕರ ಈಜಾಟ; ಅಧಿಕಾರಿಗಳಿಗೆ ಪೀಕಲಾಟ!

Decline of Vultures
ಆರೋಗ್ಯ2 hours ago

Indian Vultures : ಹದ್ದುಗಳೇ ಜೀವರಕ್ಷಕ; ಭಾರತದಲ್ಲಿ ರಣಹದ್ದುಗಳ ಸಂಖ್ಯೆ ಕುಸಿತದಿಂದ 5 ಲಕ್ಷ ಮಂದಿ ಸಾವು ಎಂದಿದೆ ಅಧ್ಯಯನ ವರದಿ

KRS Dam
ಕರ್ನಾಟಕ2 hours ago

KRS Dam: ಕೆಆರ್‌ಎಸ್, ಕಬಿನಿ ಜಲಾಶಯ ಭರ್ತಿ ಹಿನ್ನೆಲೆ ನಾಳೆ ಸಿಎಂ ಬಾಗಿನ ಅರ್ಪಣೆ

Sugar Vs Jaggery In Tea
ಆರೋಗ್ಯ2 hours ago

Sugar Vs Jaggery In Tea: ಸಕ್ಕರೆ ಬದಲು ಬೆಲ್ಲ ಹಾಕಿ ಚಹಾ ಕುಡಿದರೆ ಆರೋಗ್ಯಕ್ಕೆ ನಿಜಕ್ಕೂ ಲಾಭ ಇದೆಯೆ?

Manu Bhaker
ಪ್ರಮುಖ ಸುದ್ದಿ2 hours ago

Manu Bhaker : ಪ್ಯಾರಿಸ್ ಒಲಿಂಪಿಕ್ಸ್ ನಲ್ಲಿ ಐತಿಹಾಸಿಕ ಪದಕ ಗೆದ್ದ ಮನು ಭಾಕರ್ ಗೆ ಪ್ರಧಾನಿ ಮೋದಿ ಅಭಿನಂದನೆ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Tungabhadra Dam
ಕೊಪ್ಪಳ2 hours ago

Tungabhadra Dam: ಕಾಲುವೆಯಲ್ಲಿ ಬಾಲಕರ ಈಜಾಟ; ಅಧಿಕಾರಿಗಳಿಗೆ ಪೀಕಲಾಟ!

Elephant attack
ಮಳೆ4 hours ago

Elephant attack : ಮಳೆ ಮಧ್ಯೆ ಮಲೆನಾಡಿನಲ್ಲಿ ಕಾಡಾನೆಗಳ ಕಾಟ; ಪ್ರವಾಹಕ್ಕೆ ಸಿಲುಕಿದ ಪಟಗುಂದಿ ಗ್ರಾಮ

karnataka Rain
ಮಳೆ6 hours ago

Karnataka Rain : ಮಳೆ ನಿಂತರೂ ಕಡಿಮೆಯಾಗದ ಅನಾಹುತ; ಮಾದಪುರ ಟೌನ್ ಸಮೀಪ ಗುಡ್ಡ ಕುಸಿತ

karnataka Rain
ಮಳೆ7 hours ago

Karnataka Rain : ರಭಸವಾಗಿ ಬೀಸಿದ ಗಾಳಿಗೆ ಮನೆ ಮೇಲೆ ಬಿದ್ದ ತೆಂಗಿನ ಮರ; ನದಿ ನೀರು ಸೇವಿಸದಂತೆ ಸೂಚನೆ

Karnataka weather Forecast
ಮಳೆ1 day ago

Karnataka Weather : ವೀಕೆಂಡ್‌ ಮೋಜಿಗೆ ಮಳೆರಾಯ ಅಡ್ಡಿ; ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ

ramanagara news
ರಾಮನಗರ1 day ago

Ramanagar News : ರಾಮನಗರದಲ್ಲಿ ಎರಡು ಜಡೆ ಹಾಕಿಲ್ಲವೆಂದು ವಿದ್ಯಾರ್ಥಿನಿಯರ ಕೂದಲು ಕತ್ತರಿಸಿದ ಶಿಕ್ಷಕರು ಅಮಾನತು

karnataka rain
ಮಳೆ1 day ago

Karnataka Rain : ಕಾವೇರಿ ನದಿ ತೀರದಲ್ಲಿ ಪ್ರವಾಹ ಭೀತಿ; ಮುತ್ತತ್ತಿಗೆ ಪ್ರವಾಸಿಗರ ನಿಷೇಧ, ಶ್ರೀರಂಗಪಟ್ಟಣದಲ್ಲಿ ಪಿಂಡ ಪ್ರದಾನಕ್ಕೆ ಬ್ರೇಕ್

Ankola landslide
ಉತ್ತರ ಕನ್ನಡ2 days ago

Ankola landslide: ಅಂಕೋಲಾ-ಶಿರೂರು ಗುಡ್ಡ ಕುಸಿತ; ನಾಳೆಯಿಂದ ಪ್ಲೋಟಿಂಗ್ ಪ್ಲಾಟ್‌ಫಾರಂ ಕಾರ್ಯಾಚರಣೆ

karnataka rain
ಮಳೆ2 days ago

Karnataka Rain : ಉಕ್ಕಿ ಹರಿಯುವ ನೇತ್ರಾವತಿ ನದಿಯಲ್ಲಿ ತೇಲಿ ಬಂದ ಜೀವಂತ ಹಸು

Karnataka Rain
ಮಳೆ2 days ago

Karnataka Rain: ವಿದ್ಯುತ್‌ ದುರಸ್ತಿಗಾಗಿ ಪ್ರಾಣದ ಹಂಗು ತೊರೆದು ಉಕ್ಕಿ ಹರಿಯುವ ನೀರಿಗೆ ಧುಮುಕಿದ ಲೈನ್‌ ಮ್ಯಾನ್‌!

ಟ್ರೆಂಡಿಂಗ್‌