Bengaluru South District: ರಾಮನಗರ ಮರು ನಾಮಕರಣಕ್ಕೆ ಹಿಂದು ಜನಜಾಗೃತಿ ಸಮಿತಿ ತೀವ್ರ ವಿರೋಧ; ಉಗ್ರ ಪ್ರತಿಭಟನೆ ಎಚ್ಚರಿಕೆ - Vistara News

ಕರ್ನಾಟಕ

Bengaluru South District: ರಾಮನಗರ ಮರು ನಾಮಕರಣಕ್ಕೆ ಹಿಂದು ಜನಜಾಗೃತಿ ಸಮಿತಿ ತೀವ್ರ ವಿರೋಧ; ಉಗ್ರ ಪ್ರತಿಭಟನೆ ಎಚ್ಚರಿಕೆ

Bengaluru South District: ಶ್ರೀರಾಮನ ಭೂಮಿಯೆಂದೇ ಖ್ಯಾತಿ ಪಡೆದಿರುವ ಭಾರತದಲ್ಲಿ ಶ್ರೀರಾಮನ ಹೆಸರನ್ನು ಅಳಿಸಿ ಹಾಕಿದರೆ ಅದನ್ನು ಹಿಂದು ಸಮಾಜ ಎಂದಿಗೂ ಸಹಿಸುವುದಿಲ್ಲ ಹೆಸರು ಬದಲಾವಣೆಯ ನಿರ್ಧಾರ ಹಿಂಪಡೆಯದಿದ್ದರೆ, ಹಿಂದು ಸಮಾಜ ಬೀದಿಗಿಳಿಯದೆ ಎಂದು ಹಿಂದು ಜನಜಾಗೃತಿ ಸಮಿತಿ ಎಚ್ಚರಿಕೆ ನೀಡಿದೆ.

VISTARANEWS.COM


on

Bengaluru South District
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: 500 ವರ್ಷಗಳ ನಂತರ, ಅಯೋಧ್ಯೆಯಲ್ಲಿ ಭಗವಾನ್ ಶ್ರೀರಾಮನ ಭವ್ಯ ಮಂದಿರವನ್ನು ನಿರ್ಮಿಸಿದ ಬಳಿಕ ದೇಶಾದ್ಯಂತ ರಾಮನದ್ದೇ ಗುಣಗಾನವಿರುವಾಗ ಕರ್ನಾಟಕದಲ್ಲಿ ಮಾತ್ರ ‘ರಾಮನಗರ’ ಜಿಲ್ಲೆಯನ್ನು ‘ಬೆಂಗಳೂರು ದಕ್ಷಿಣ’ ಎಂದು ಮರುನಾಮಕರಣ ಮಾಡಲು ಕಾಂಗ್ರೆಸ್ ಸರ್ಕಾರ ನಿರ್ಣಯ ತೆಗೆದುಕೊಂಡಿದೆ. ಇದನ್ನು ನಾವು ತೀವ್ರವಾಗಿ ಖಂಡಿಸುತ್ತೇವೆ. ಶ್ರೀರಾಮನ ಭೂಮಿಯೆಂದೇ ಖ್ಯಾತಿ ಪಡೆದಿರುವ ಭಾರತದಲ್ಲಿ ಶ್ರೀರಾಮನ ಹೆಸರನ್ನು ಅಳಿಸಿ ಹಾಕಿದರೆ ಅದನ್ನು ಹಿಂದು ಸಮಾಜ ಎಂದಿಗೂ ಸಹಿಸುವುದಿಲ್ಲ ಎಂದು ಹಿಂದು ಜನಜಾಗೃತಿ ಸಮಿತಿ ರಾಜ್ಯ ವಕ್ತಾರ ಮೋಹನ ಗೌಡ ತಿಳಿಸಿದ್ದಾರೆ.

ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ಅವರು, ರಾಜ್ಯ ಸರ್ಕಾರದ ಈ ನಿರ್ಧಾರ, ಹಿಂದುಗಳ ಗಾಯಕ್ಕೆ ಉಪ್ಪು ಸವರಿದಂತಿದೆ. ಕಾಂಗ್ರೆಸ್ ಈ ಹಿಂದೆ ಶ್ರೀರಾಮನನ್ನು ಕಾಲ್ಪನಿಕ ಎಂದಿತ್ತು, ನಂತರ ಶ್ರೀರಾಮಲಲ್ಲಾನ ಮೂರ್ತಿ ಪ್ರಾಣಪ್ರತಿಷ್ಠಾಪನೆಯ ಕಾರ್ಯಕ್ರಮಕ್ಕೆ ಹೋಗಲಿಲ್ಲ ಮತ್ತು ಈಗ ರಾಮನಗರದ ಹೆಸರು ಬದಲಾಯಿಸಿದೆ. ಇದರಿಂದ ಕಾಂಗ್ರೆಸ್‌ಗೆ ‘ಶ್ರೀರಾಮ’ನ ಬಗ್ಗೆ ವಿರೋಧವಿರುವುದು ಸ್ಪಷ್ಟವಾಗಿದೆ ಎಂದು ಟೀಕಿಸಿದ್ದಾರೆ.

ರಾಮನಗರದ ಹೆಸರನ್ನು ಬದಲಾಯಿಸಲು ನಿರ್ಧರಿಸಿದ ಕಾಂಗ್ರೆಸ್ ಪಕ್ಷವು ಮತಾಂಧ ಕ್ರೂರಿ ಔರಂಗಜೇಬನ ಹೆಸರಿರುವ ದೆಹಲಿಯ ಔರಂಗಜೇಬ ರಸ್ತೆ, ತುಘಲಕ್ ರಸ್ತೆ ಇತ್ಯಾದಿ ಆಕ್ರಮಣಕಾರಿಗಳ ಹೆಸರನ್ನು ಬದಲಾಯಿಸಲು ಪ್ರಯತ್ನಿಸಿದೆಯೇ? ಕರ್ನಾಟಕದಲ್ಲಿರುವ ಮಹಾನಗರಗಳು ಮತ್ತು ನಗರಗಳ ಇಸ್ಲಾಮಿಕ್ ಹೆಸರುಗಳನ್ನು ಬದಲಾಯಿಸಲು ರಾಜ್ಯ ಸರ್ಕಾರ ಧೈರ್ಯ ತೋರುವುದೇ? ರಾಮನಗರ ಹೆಸರು ಬದಲಾವಣೆಗೆ ಹಿಂದುಗಳು ತೀವ್ರ ವಿರೋಧ ವ್ಯಕ್ತಪಡಿಸುತ್ತಿದ್ದು, ಹೆಸರು ಬದಲಾವಣೆಯ ನಿರ್ಧಾರ ಹಿಂಪಡೆಯದಿದ್ದರೆ, ಹಿಂದು ಸಮಾಜ ಬೀದಿಗಿಳಿಯದೆ ಎಂದು ಎಚ್ಚರಿಕೆ ನೀಡಿದ್ದಾರೆ.

ಇದನ್ನೂ ಓದಿ | DK Shivakumar: ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡುವಂತೆ ಸಚಿವರಿಗೆ ಡಿಸಿಎಂ ಡಿಕೆಶಿ ಮನವಿ

ರಾಮನಗರ ಹೆಸರು ಬದಲಾವಣೆಗೆ ಸಚಿವ ಸಂಪುಟ ಒಪ್ಪಿಗೆ

ತೀವ್ರ ವಿರೋಧದ ನಡುವೆ ರಾಮನಗರ ಜಿಲ್ಲೆಯ ಹೆಸರನ್ನು ಬೆಂಗಳೂರು ದಕ್ಷಿಣ ಜಿಲ್ಲೆ (Ramanagara as Bengaluru South District) ಎಂದು ಬದಲಾವಣೆ ಮಾಡಲು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಜು.26ರಂದು ನಡೆದ ಸಚಿವ ಸಂಪುಟ (cabinet meeting) ಒಪ್ಪಿಗೆ ನೀಡಿತ್ತು. ರಾಮನಗರ ಜಿಲ್ಲೆಯ ಹೆಸರು (Bengaluru South District) ಮಾತ್ರ ಬದಲಾವಣೆಯಾಗಲಿದೆ, ಜಿಲ್ಲಾ ಕೇಂದ್ರ (ರಾಮನಗರ) ಸೇರಿ ಉಳಿದ ಎಲ್ಲವೂ ಹಾಗೆ ಉಳಿಯಲಿದೆ ಎಂದು ರಾಜ್ಯ ಸರ್ಕಾರ ತಿಳಿಸಿತ್ತು.

ಸಚಿವ ಸಂಪುಟ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ್ದ ಕಾನೂನು ಸಚಿವ ಎಚ್.ಕೆ. ಪಾಟೀಲ್ ಅವರು, ರಾಮನಗರ ಜಿಲ್ಲೆಯ ಹೆಸರನ್ನು ಬೆಂಗಳೂರು ದಕ್ಷಿಣ ಎಂದು ಬದಲಾವಣೆ ಮಾಡಲು ಸಚಿವ ಸಂಪುಟ ಒಪ್ಪಿಗೆ ನೀಡಿದೆ. ಬ್ರ್ಯಾಂಡ್ ಬೆಂಗಳೂರು ನಿರ್ಮಾಣದ ದೃಷ್ಟಿಯಿಂದ ಈ ತೀರ್ಮಾನವನ್ನು ಸರ್ಕಾರ ಕೈಗೊಂಡಿದೆ. ಜಿಲ್ಲಾ ಕೇಂದ್ರ ಸೇರಿದಂತೆ ಉಳಿದ ಎಲ್ಲವೂ ಹಾಗೇ ಉಳಿಯಲಿದೆ. ಚುನಾವಣಾ ದೃಷ್ಟಿಯಿಂದ ಹೀಗೆ ಮಾಡಿಲ್ಲ. ಜನರ ಹಿತಾಸಕ್ತಿ ಕಾಪಾಡಲು ಜೊತೆಗೆ ಬ್ರ್ಯಾಂಡ್ ಬೆಂಗಳೂರು ದೃಷ್ಟಿಯಿಂದ ಹೀಗೆ ಮಾಡಲಾಗಿದೆ ಎಂದು ತಿಳಿಸಿದ್ದರು.

ಇದನ್ನೂ ಓದಿ | Income Tax : ವಿದೇಶ ಪ್ರಯಾಣಕ್ಕೆಹೊರಟವರೇ ಇಲ್ಲಿ ಕೇಳಿ; ಆದಾಯ ತೆರಿಗೆ ಕ್ಲಿಯರೆನ್ಸ್ ಪ್ರಮಾಣಪತ್ರ ಎಲ್ಲರಿಗೂ ಕಡ್ಡಾಯವಲ್ಲ ಎಂದಿದೆ ಕೇಂದ್ರ ಸರ್ಕಾರ

ರಾಮನಗರದವರೂ ಬ್ರ್ಯಾಂಡ್ ಬೆಂಗಳೂರಿಗೆ ಬರಬೇಕು ಎನ್ನುತ್ತಾರೆ. ಜನರ ಅಭಿಪ್ರಾಯ, ಶಾಸಕರ ಅಭಿಪ್ರಾಯ , ಕೆಲ ನಾಯಕರ ಅಭಿಪ್ರಾಯ ತೆಗೆದುಕೊಂಡು ತೀರ್ಮಾನ ಮಾಡಿದ್ದೇವೆ. ನೋಟಿಫೈ ಮಾಡಬೇಕು, ಆಮೇಲೆ ಹೆಸರು ಬದಲಾವಣೆ ಪ್ರಕ್ರಿಯೆ ಶುರುವಾಗುತ್ತೆ. ಇದಕ್ಕೆ ಒಂದು ಸಮಿತಿಯನ್ನು ಮಾಡಲಾಗುತ್ತದೆ ಎಂದು ರಾಮನಗರ ಹೆಸರು ಬದಲಾವಣೆಗೆ ಸಚಿವ ಎಚ್.ಕೆ ಪಾಟೀಲ್ ಸಮರ್ಥನೆ ಮಾಡಿಕೊಂಡಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೈಂ

Shirur landslide: ಶಿರೂರು ಭೂಕುಸಿತ; ಇನ್ನೂ ಪತ್ತೆಯಾಗದವರ ಶೋಧ ಕಾರ್ಯಾಚರಣೆ ಕೈಬಿಟ್ಟ ಜಿಲ್ಲಾಡಳಿತ

Shirur landslide: ಜುಲೈ 16 ರಂದು ಶಿರೂರು ಬಳಿ ನಡೆದ ಗುಡ್ಡಕುಸಿತ ದುರಂತದಲ್ಲಿ 11 ಮಂದಿ ನಾಪತ್ತೆಯಾಗಿದ್ದರು. ಅವರಲ್ಲಿ 8 ಮಂದಿ ಶವವಾಗಿ ಸಿಕ್ಕಿದ್ದರು. ನಾಪತ್ತೆಯಾಗಿದ್ದ ಜಗನ್ನಾಥ ನಾಯ್ಕ, ಲೋಕೇಶ, ಅರ್ಜುನ್‌‌ ಸೇರಿ ಮೂವರಿಗಾಗಿ ಹುಡುಕಾಟ ನಡೆಸಲಾಗುತ್ತಿತ್ತು. ಆದರೂ ಪತ್ತೆಯಾಗದ ಹಿನ್ನೆಲೆಯಲ್ಲಿ ಕಾರ್ಯಾಚರಣೆಯನ್ನು ಜಿಲ್ಲಾಡಳಿತ ಸ್ಥಗಿತಗೊಳಿಸಿದೆ.

VISTARANEWS.COM


on

Shirur landslide
ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ.ಕೆ
Koo

ಕಾರವಾರ: ಅಂಕೋಲಾದ ಶಿರೂರು ಭೂಕುಸಿತ ಪ್ರಕರಣದಲ್ಲಿ (Shirur landslide) ನಾಪತ್ತೆಯಾದ 11 ಮಂದಿ ಪೈಕಿ 8 ಮಂದಿ ಮೃತದೇಹ ಸಿಕ್ಕಿದ್ದವು. ಆದರೆ, ಉಳಿದ ಮೂವರ ಶವಗಳು, 13ನೇ ದಿನದ ಕಾರ್ಯಾಚರಣೆಯಲ್ಲೂ ಸಿಗದ ಹಿನ್ನೆಲೆಯಲ್ಲಿ ಕಾರ್ಯಾಚರಣೆ ಸ್ಥಗಿತಗೊಂಡಿದೆ. ಮುಳುಗು ತಜ್ಞ ಈಶ್ವರ ಮಲ್ಪೆ ನೇತೃತ್ವದಲ್ಲಿ ಭಾನುವಾರ ಹುಡುಕಾಟ ನಡೆಸಲಾಗಿದೆ. ಆದರೂ ಮೂವರ ಮೃತದೇಹ ಪತ್ತೆಯಾಗದ ಹಿನ್ನೆಲೆಯಲ್ಲಿ ಕಾರ್ಯಾಚರಣೆಯನ್ನು ಜಿಲ್ಲಾಡಳಿತ ಸ್ಥಗಿತಗೊಳಿಸಿದೆ.

ಜುಲೈ 16 ರಂದು ಶಿರೂರು ಬಳಿ ನಡೆದ ಗುಡ್ಡಕುಸಿತ ದುರಂತದಲ್ಲಿ 11 ಮಂದಿ ನಾಪತ್ತೆಯಾಗಿದ್ದರು. ಅವರಲ್ಲಿ 8 ಮಂದಿ ಶವವಾಗಿ ಸಿಕ್ಕಿದ್ದರು. ನಾಪತ್ತೆಯಾಗಿದ್ದ ಜಗನ್ನಾಥ ನಾಯ್ಕ, ಲೋಕೇಶ, ಅರ್ಜುನ್‌‌ ಸೇರಿ ಮೂವರಿಗಾಗಿ ಹುಡುಕಾಟ ನಡೆಸಲಾಗುತ್ತಿತ್ತು. ಹಲವರು ಮಣ್ಣಿನಡಿ ಸಿಲುಕಿದ್ದರು, ಇನ್ನೂ ಕೆಲವರು ಗಂಗಾವಳಿ ನದಿಗೆ ಬಿದ್ದ ಹಿನ್ನೆಲೆಯಲ್ಲಿ ನದಿಯಲ್ಲೂ ಹುಡುಕಾಟ ನಡೆಸಲಾಗುತ್ತಿದೆ. ನೀರಿನ ವೇಗ ಹೆಚ್ಚಿರುವುದು ಹಾಗೂ ನದಿಯಲ್ಲಿರುವ ಮಣ್ಣು, ಕಲ್ಲು ಬಂಡೆ ಹಾಗೂ ಮರದ ದಿಮ್ಮಿಗಳಿಂದಾಗಿ ಕಾರ್ಯಾಚರಣೆಗೆ ಅಡ್ಡಿಯಾಗಿದೆ. ಅಲ್ಲದೇ ಕಾರ್ಯಾಚರಣೆಯಲ್ಲಿ ಲಾರಿಯನ್ನು ಮೇಲಕ್ಕೆ ಎತ್ತಲೂ ಸಾಧ್ಯವಾಗಿಲ್ಲ.

ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ.ಕೆ ಪ್ರತಿಕ್ರಿಯಿಸಿ, ನಿನ್ನೆ ಮೂರು ಹಾಗೂ ಇವತ್ತು ಒಂದು ಪಾಯಿಂಟ್‌ನಲ್ಲಿ ಹುಡುಕಾಟ ಮಾಡಲಾಗಿದೆ. ಆದರೆ ಎಲ್ಲೂ ಲಾರಿ ಸಿಕ್ಕಿಲ್ಲ, ಕಣ್ಮರೆಯಾಗಿರುವರೂ ಪತ್ತೆಯಾಗಿಲ್ಲ. ಕಾರ್ಯಾಚರಣೆ ವೇಳೆ ಕಲ್ಲು, ಮರದ ತುಂಡುಗಳು ಅಡ್ಡಿಯಾಗಿದ್ದಾಗಿ ಮುಳುಗು ತಜ್ಞ ಈಶ್ವರ್ ಮಲ್ಪೆ ತಿಳಿಸಿದ್ದಾರೆ. ನೀರಿನ ಹರಿವು ಸಹ ಹೆಚ್ಚಾಗಿರುವುದರಿಂದ ಶೋಧ ಕಾರ್ಯ ನಡೆಸಲಾಗಿಲ್ಲ. ಮುಂದಿನ ಕಾರ್ಯಾಚರಣೆ ಬಗ್ಗೆ ಜಿಲ್ಲಾ‌ ಉಸ್ತುವಾರಿ ಸಚಿವರ ಜೊತೆ ಚರ್ಚಿಸಿ ತೀರ್ಮಾನಿಸುತ್ತೇವೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ | Karnataka Rain : ರಭಸವಾಗಿ ಬೀಸಿದ ಗಾಳಿಗೆ ಮನೆ ಮೇಲೆ ಬಿದ್ದ ತೆಂಗಿನ ಮರ; ನದಿ ನೀರು ಸೇವಿಸದಂತೆ ಸೂಚನೆ

ಕಾಣೆಯಾದವರ ಪತ್ತೆಗೆ ಶತ ಪ್ರಯತ್ನ: ಶಾಸಕ ಸತೀಶ್ ಸೈಲ್

ಕಾರ್ಯಾಚರಣೆ ಸ್ಥಗಿತ ಕುರಿತು ಶಾಸಕ ಸತೀಶ್ ಸೈಲ್ ಪ್ರತಿಕ್ರಿಯಿಸಿ, ಈಶ್ವರ ಮಲ್ಪೆ ತಂಡ ನೆನ್ನೆಯಿಂದ ಶತ ಪ್ರಯತ್ನ ಮಾಡಿದೆ. ನದಿಯ ಪರಿಸ್ಥಿತಿ ನೋಡಿ ಕಾರ್ಯಾಚರಣೆ ಸಾಧ್ಯವಿಲ್ಲ ಎಂದು ಭಾವಿಸಲಾಗಿತ್ತು. ಆದರೂ ಅವರು ನಾಲ್ಕನೇ ಪಾಯಿಂಟ್‌ನಲ್ಲಿ ಹುಡುಕಾಡಿದ್ದಾರೆ. ಇವತ್ತು ಮಣ್ಣು ಮಿಶ್ರಿತ ನೀರು ಹೆಚ್ಚಾಗಿ ಹರಿಯುತ್ತಿದ್ದ ಹಿನ್ನೆಲೆ ಹುಡುಕಾಟ ಸಾಧ್ಯವಾಗಿಲ್ಲ. ಕಣ್ಮರೆಯಾದವರ ಶೋಧಕ್ಕೆ ತಿರುಚ್ಚಿಯಲ್ಲಿ ಕ್ರೇನ್ ಇರುವ ಬೋಟ್ ಇದೆ. ಆದರೆ ಅದನ್ನು ಅಲ್ಲಿಂದ ತರಿಸಲು ತಡವಾಗಬಹುದು. ಸರ್ಕಾರದೊಂದಿಗೆ ಮಾತನಾಡಿ ಸಾಧ್ಯವಾದ ಪ್ರಯತ್ನ ಮಾಡುತ್ತೇವೆ. ಜಿಲ್ಲಾ ಉಸ್ತುವಾರಿ ಸಚಿವರ ಜತೆ ಚರ್ಚಿಸಿ ಮುಂದಿನ ಕಾರ್ಯಾಚರಣೆ ಬಗ್ಗೆ ನಿರ್ಧರಿಸುತ್ತೇವೆ ಎಂದು ಹೇಳಿದ್ದಾರೆ.

ಇದನ್ನೂ ಓದಿ | Karnataka Rain : ಮಳೆ ನಿಂತರೂ ಕಡಿಮೆಯಾಗದ ಅನಾಹುತ; ಮಾದಪುರ ಟೌನ್ ಸಮೀಪ ಗುಡ್ಡ ಕುಸಿತ

ಕಾರ್ಯಾಚರಣೆ ನಡೆಸಲು ಸಾಧ್ಯವಾಗುತ್ತಿಲ್ಲ ಎಂದ ಜಿಲ್ಲಾ ಉಸ್ತುವಾರಿ ಸಚಿವ

ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ ಮಾತನಾಡಿ, ಒಂದು ಕಡೆ ಮಣ್ಣಿನಡಿ ಲಾರಿ ಇದೆ ಎಂದಿದ್ದರು, ಒಂದು ವಾರದಲ್ಲಿ ಕಾರ್ಯಾಚರಣೆ ನಡೆಸಿ ಮಣ್ಣು ತೆಗೆದೆವು. ಈಗ ನೀರಿನಲ್ಲಿ ಇದೆ ಎಂದಾಗ ನದಿಯಲ್ಲಿ ಕಾರ್ಯಾಚರಣೆ ಮಾಡಿದ್ದೇವೆ. ಎಲ್ಲಾ ಪ್ರಯತ್ನ ಮಾಡಿದರೂ ಮೂವರ ಮೃತ ದೇಹ ಸಿಗದಿರುವುದು ಬೇಸರ ತಂದಿದೆ. ದೇಹ ಸಿಗದೇ ಇದ್ದವರಿಗೂ ಅವರ ಅವಲಂಬಿತರ ಬಳಿ ಅಗ್ರಿಮೆಂಟ್ ಮಾಡಿಕೊಂಡು ಪರಿಹಾರ ನೀಡುತ್ತೇವೆ. ಮೃತರ ಮಕ್ಕಳ ಶಿಕ್ಷಣಕ್ಕೆ ಸಮಸ್ಯೆಯಾದರೆ ಅವರ ಜೊತೆ ನಾವು ಇರುತ್ತೇವೆ. ಕಾರ್ಯಾಚರಣೆ ಸ್ಥಗಿತ ಆಗಿಲ್ಲ, ಆದರೆ ಮಾಡಲು ಸಾಧ್ಯವಾಗುತ್ತಿಲ್ಲ. ನೀರಿನ ಪ್ರಮಾಣ ಕಡಿಮೆಯಾದ ನಂತರ ಕಾರ್ಯಾಚರಣೆ ಮಾಡುತ್ತೇವೆ. ಮುಳುಗಿರುವ ಟ್ರಕ್ ಮೇಲಕ್ಕೆ ಎತ್ತುವ ಪ್ರಯತ್ನ ಮಾಡುತ್ತೇವೆ. ಗುಡ್ಡ ಕುಸಿತದ ಬಗ್ಗೆ ಮಾಹಿತಿ ಪಡೆದು ಸಂಚಾರಕ್ಕೆ ಅನುವು ಮಾಡಿಕೊಡುತ್ತೇವೆ ಎಂದು ತಿಳಿಸಿದ್ದಾರೆ.

Continue Reading

ಕರ್ನಾಟಕ

BJP-JDS Padayatra: ರಾಜ್ಯ ಸರ್ಕಾರದ ವಿರುದ್ಧ ಆ.3ರಿಂದ ಬೆಂಗಳೂರು-ಮೈಸೂರು ಪಾದಯಾತ್ರೆ: ಬಿ.ವೈ.ವಿಜಯೇಂದ್ರ

BJP-JDS Padayatra: ವಾಲ್ಮೀಕಿ ನಿಗಮ ಅಕ್ರಮ, ಮುಡಾ ನಿವೇಶನ ಹಗರಣ, ಎಸ್‌ಸಿಎಸ್‌ಪಿ, ಟಿಎಸ್‌ಟಿ ಹಣ ಗ್ಯಾರಂಟಿಗಳಿಗೆ ಬಳಕೆ ವಿರೋಧಿಸಿ ಬೆಂಗಳೂರಿನಿಂದ ಮೈಸೂರಿನವರೆಗೂ ಪಾದಯಾತ್ರೆ ಮಾಡಲಿದ್ದೇವೆ. ಆ.3ರಂದು ಮಾಜಿ ಸಿಎಂಗಳಾದ ಬಿ.ಎಸ್‌. ಯಡಿಯೂರಪ್ಪ, ಎಚ್‌.ಡಿ. ಕುಮಾರಸ್ವಾಮಿ ಅವರು ಪಾದಯಾತ್ರೆಗೆ ಚಾಲನೆ ನೀಡಲಿದ್ದಾರೆ ಎಂದು ಬಿಜೆಪಿ ರಾಜ್ಯ ಅಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದ್ದಾರೆ.

VISTARANEWS.COM


on

BJP-JDS Padayatra
Koo

ಬೆಂಗಳೂರು: ಬಿಜೆಪಿ-ಜೆಡಿಎಸ್ ಎರಡೂ ಪಕ್ಷದ ಮುಖಂಡರು ಸುದೀರ್ಘ ಚರ್ಚೆ ಮಾಡಿ ಆ.3ರಿಂದ 10ರವರೆಗೆ ಬೆಂಗಳೂರಿನಿಂದ ಮೈಸೂರಿಗೆ ಪಾದಯಾತ್ರೆ ನಡೆಸಲು ತೀರ್ಮಾನಿಸಿದ್ದೇವೆ. ವಾಲ್ಮೀಕಿ ನಿಗಮ ಅಕ್ರಮ, ಮುಡಾ ನಿವೇಶನ ಹಗರಣ, ಎಸ್‌ಸಿಎಸ್‌ಪಿ, ಟಿಎಸ್‌ಟಿ ಹಣ ಗ್ಯಾರಂಟಿಗಳಿಗೆ ಬಳಕೆ ವಿರೋಧಿಸಿ ಬೆಂಗಳೂರಿನಿಂದ ಮೈಸೂರಿನವರೆಗೂ ಬಿಜೆಪಿ-ಜೆಡಿಎಸ್‌ ಪಾದಯಾತ್ರೆ ಮಾಡಲಿದ್ದೇವೆ. ಆ.3ರಂದು ಮಾಜಿ ಸಿಎಂಗಳಾದ ಬಿ.ಎಸ್‌. ಯಡಿಯೂರಪ್ಪ, ಎಚ್‌.ಡಿ. ಕುಮಾರಸ್ವಾಮಿ ಅವರು ಪಾದಯಾತ್ರೆಗೆ ಚಾಲನೆ ನೀಡಲಿದ್ದಾರೆ. ಆ.10 ರಂದು ನಡೆಯುವ ಸಮಾರೋಪ ಸಮಾರಂಭಕ್ಕೆ ಕೇಂದ್ರದ ನಾಯಕರು ಬರಲಿದ್ದಾರೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದರು.

ಪಾದಯಾತ್ರೆ ಸಂಬಂಧ ನಡೆದ ಬಿಜೆಪಿ ಮತ್ತು ಜೆಡಿಎಸ್ ಸಮನ್ವಯ ಸಭೆ ಬಳಿಕ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಮಾತನಾಡಿದ್ದಾರೆ. ಸಮನ್ವಯ ಸಭೆಗೂ ಮುನ್ನ ಬಿಜೆಪಿ ಪ್ರಮುಖರ ಸಭೆ ನಡೆದಿದ್ದು, ಸಭೆಯಲ್ಲಿ ಅತಿವೃಷ್ಟಿ ಬಗ್ಗೆ ಚರ್ಚೆಯಾಗಿದೆ. ಕಾರವಾರದಲ್ಲಿ ಭಾರಿ ಮಳೆ ಹಿನ್ನೆಲೆಯಲ್ಲಿ ಹಲವು ಸಮಸ್ಯೆ ಉಂಟಾಗಿವೆ. ಹೀಗಾಗಿ ಪಾದಯಾತ್ರೆಗೂ ಮೊದಲು ಮಳೆ ಹಾನಿ ಪ್ರದೇಶಕ್ಕೆ ಭೇಟಿ ನೀಡಲು ನಿರ್ಧರಿಸಲಾಗಿದೆ. ಇದಕ್ಕಾಗಿ ಬಿಜೆಪಿ ನಿಯೋಗ ರಚನೆ ಮಾಡಲಾಗಿದೆ.

ಇದನ್ನೂ ಓದಿ | Manu Bhaker : ಪ್ಯಾರಿಸ್ ಒಲಿಂಪಿಕ್ಸ್ ನಲ್ಲಿ ಐತಿಹಾಸಿಕ ಪದಕ ಗೆದ್ದ ಮನು ಭಾಕರ್ ಗೆ ಪ್ರಧಾನಿ ಮೋದಿ ಅಭಿನಂದನೆ

ಪಾದಯಾತ್ರೆ ಬಗ್ಗೆ ಮಾಜಿ ಸಿಎಂ ಬಿ.ಎಸ್‌. ಯಡಿಯೂರಪ್ಪ ಪ್ರತಿಕ್ರಿಯಿಸಿ, ಭ್ರಷ್ಟ ಸರ್ಕಾರ ಕಿತ್ತೊಗೆಯಬೇಕಾಗಿದೆ. ಬಿಜೆಪಿ-ಜೆಡಿಎಸ್ ಹೋರಾಟಕ್ಕೆ ಹತ್ತಾರು ಸಾವಿರ ಜನ ಬರಲಿದ್ದಾರೆ. ಸಿಎಂ ರಾಜೀನಾಮೆ ಕೊಡುವವರೆಗೆ ವಿರಮಿಸಲ್ಲ. ಸಿಎಂಗೆ ಗೌರವ ಇದ್ದರೆ ತಕ್ಷಣ ರಾಜೀನಾಮೆ ಕೊಡಲಿ ಎಂದು ಒತ್ತಾಯಿಸಿದರು.

ಸುದ್ದಿಗೋಷ್ಠಿ ನಡೆಸುವಾಗಲೇ ಎಚ್‌.ಡಿ. ಕುಮಾರಸ್ವಾಮಿ ಮೂಗಿನಿಂದ ರಕ್ತಸ್ರಾವ; ಆಸ್ಪತ್ರೆಗೆ ದಾಖಲು

ಬೆಂಗಳೂರು: ಸುದ್ದಿಗೋಷ್ಠಿ ನಡೆಸುವಾಗಲೇ ಮಾಜಿ ಸಿಎಂ ಎಚ್‌.ಡಿ.ಕುಮಾರಸ್ವಾಮಿ ಅವರ ಮೂಗಿನಿಂದ ರಕ್ತಸ್ರಾವ ಆಗಿರುವ ಘಟನೆ ಭಾನುವಾರ ನಡೆದಿದೆ. ಮುಡಾ ನಿವೇಶನ ಹಗರಣ ವಿರೋಧಿಸಿ ಆ.3ರಿಂದ ಪಾದಯಾತ್ರೆ ಹಮ್ಮಿಕೊಂಡಿರುವ ಹಿನ್ನೆಲೆಯಲ್ಲಿ ನಗರದ ಜೆಡಿಎಸ್‌ ಕಚೇರಿಯಲ್ಲಿ ಬಿಜೆಪಿ-ಜೆಡಿಎಸ್‌ ನಾಯಕರ ಸಮನ್ವಯ ಸಭೆ ಏರ್ಪಡಿಸಲಾಗುತ್ತು. ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡುವ ವೇಳೆ ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ (HD Kumaraswamy) ಅವರ ಮೂಗಿನಿಂದ ರಕ್ತಸ್ರಾವವಾಗಿದೆ.

ಸುದ್ದಿಗಾರರೊಂದಿಗೆ ಮಾತನಾಡುವ ವೇಳೆ ಮೂಗಿನಿಂದ ರಕ್ತಸ್ರಾವವಾಗಿದೆ. ಈ ವೇಳೆ ಬಟ್ಟೆಯಿಂದ ಮೂಗನ್ನು ಎಚ್‌ಡಿಕೆ ಒರೆಸಿಕೊಂಡರು. ಅದರೂ ರಕ್ತಸ್ರಾವ ನಿಲ್ಲಲಿಲ್ಲ. ಮತ್ತೆ ಮೂಗಿನಿಂದ ರಕ್ತಸ್ರಾವ ಹೆಚ್ಚಾದ ಹಿನ್ನೆಲೆ ಪುತ್ರ ನಿಖಿಲ್‌ ಕುಮಾರಸ್ವಾಮಿ ಅವರು ತಂದೆಯನ್ನು ಜಯನಗರ ಅಪೋಲೋ ಆಸ್ಪತ್ರೆಗೆ ಕರೆದೊಯ್ದರು. ಮೂಗಿನಿಂದ ರಕ್ತಸ್ರಾವ ಹಿನ್ನೆಲೆಯಲ್ಲಿ ಬಿಳಿ ಶರ್ಟ್ ರಕ್ತಮಯವಾಗಿದೆ.

ಇದನ್ನೂ ಓದಿ | Dog Meat Controversy: ಬೆಂಗಳೂರಿನಲ್ಲಿ ಸಿಕ್ಕಿರೋದು ನಾಯಿ ಮಾಂಸ ಅಲ್ಲ, ಮೇಕೆ ಮಾಂಸ: ಗೃಹ ಸಚಿವ ಪರಮೇಶ್ವರ್‌

ಈ ಬಗ್ಗೆ ಸಂಸದ ಡಾ.ಸಿ.ಎನ್‌.ಮಂಜುನಾಥ್‌ ಪ್ರತಿಕ್ರಿಯಿಸಿ, ಕುಮಾರಸ್ವಾಮಿ ಅವರಿಗೆ ಎರಡನೇ ಬಾರಿ ಈ ರೀತಿ ಆಗುತ್ತಿದೆ. ರಕ್ತ ಹೆಪ್ಪುಗಟ್ಟಬಾರದು ಎಂದು ಥಿನ್ನರ್‌ ತೆಗೆದುಕೊಳ್ಳುತ್ತಿದ್ದರು. ಅವರಿಗೆ ಬಿಪಿ ನಾರ್ಮಲ್‌ ಇದೆ, ನಿತ್ಯ ಶುಗರ್‌ ಲೆವೆಲ್‌ ಚೆಕ್‌ ಮಾಡಿಕೊಳ್ಳುತ್ತಿದ್ದರು. ಪ್ರವಾಸ ಹೆಚ್ಚಾಗಿ ಓವರ್‌ ಹೀಟ್‌ನಿಂದ ರಕ್ತಸ್ರಾವ ಆಗಿರಬಹುದು ಎಂದು ತಿಳಿಸಿದ್ದಾರೆ.

Continue Reading

ಮಳೆ

Karnataka Weather : ಕೂಲ್‌ ಆದ ಬೆಂಗಳೂರು; ನಾಳೆಗೆ ಉತ್ತರ ಕನ್ನಡ ಜಿಲ್ಲೆಗೆ ಭಾರಿ ಮಳೆ ಎಚ್ಚರ

Karnataka Weather Forecast : ಬೆಂಗಳೂರಿನಲ್ಲಿ ಜೋರಾಗಿ ಗಾಳಿ ಬೀಸಲಿದ್ದು, ವಾತಾವರಣ ಕೂಲ್‌ ಆಗಿರಲಿದೆ. ನಾಳೆಯೂ ಉತ್ತರ ಕನ್ನಡ ಸೇರಿದಂತೆ ಹಲವೆಡೆ ಮಳೆಯಾಗುವ (Rain News) ನಿರೀಕ್ಷೆ ಇದೆ.

VISTARANEWS.COM


on

By

karnataka weather Forecast
Koo

ಬೆಂಗಳೂರು: ರಾಜ್ಯದಲ್ಲಿ ನೈರುತ್ಯ ಮುಂಗಾರು (Karnataka Weather Forecast) ದುರ್ಬಲವಾಗಿತ್ತು. ಕರಾವಳಿ ಬಹುತೇಕ ಕಡೆಗಳಲ್ಲಿ (Rain News) ಮಳೆಯಾಗಿದೆ. ಉತ್ತರ ಒಳನಾಡಿನ ಕೆಲವು ಸ್ಥಳಗಳಲ್ಲಿ ಮತ್ತು ದಕ್ಷಿಣ ಒಳನಾಡು ಮೂಲಕ ಒಂದೆರಡು ಕಡೆಗಳಲ್ಲಿ ಮಳೆಯಾಗಿದೆ. ಉತ್ತರ ಕನ್ನಡ ಜಿಲ್ಲೆಯ ಕ್ಯಾಸಲ್ ರಾಕ್‌ನಲ್ಲಿ 7 ಸೆಂ.ಮೀ ಮಳೆಯಾಗಿದೆ. ಜಗಲಬೆಟ್, ಲೋಂಡಾದಲ್ಲಿ 6, ಕದ್ರಾ 5 ಸೆಂ.ಮೀ ಮಳೆಯಾಗಿದೆ.

ಯಲ್ಲಾಪುರ, ಸಿದ್ದಾಪುರ, ಬೆಳಗಾವಿ ಪಿಟಿಒ, ಕಮ್ಮರಡಿ 3 ಸೆಂ.ಮೀ, ಮಂಕಿ, ಗೇರ್ಸೊಪ್ಪ, ಕಾರವಾರ ವೀಕ್ಷಣಾಲಯ, ಬನವಾಸಿಯಲ್ಲಿ 2 ಸೆಂ.ಮೀ ಮಳೆಯಾಗಿದೆ. ಸಿದ್ದಾಪುರ, ಗೋಕರ್ಣ, ಧರ್ಮಸ್ಥಳ, ಬೆಳ್ತಂಗಡಿ, ಹಳಿಯಾಳ, ಉಪ್ಪಿನಂಗಡಿ, ಔರಾದ್ , ಬೆಳಗಾವಿ ವಿಮಾನ ನಿಲ್ದಾಣ ವೀಕ್ಷಣಾಲಯ, ಸೋಮವಾರಪೇಟೆ, ಶೃಂಗೇರಿ ಎಚ್‌ಎಂಎಸ್, ಲಿಂಗನಮಕ್ಕಿ ಎಚ್‌ಎಂಎಸ್‌ನಲ್ಲಿ 1 ಸೆಂ.ಮೀ ಮಳೆಯಾಗಿದೆ.

ಮುಂದುವರಿಯಲಿದೆ ಮಳೆ ಅಬ್ಬರ

ಉತ್ತರ ಕನ್ನಡ ಜಿಲ್ಲೆಯಲ್ಲಿ ಪ್ರತ್ಯೇಕವಾಗಿ ಭಾರೀ ಮಳೆಯೊಂದಿಗೆ ನಿರಂತರ ಗಾಳಿಯ ವೇಗ 30-40 ಕಿ.ಮೀ ಬೀಸುವ ಸಾಧ್ಯತೆ ಇದೆ. ಕರಾವಳಿಯ ದಕ್ಷಿಣ ಕನ್ನಡ, ಉಡುಪಿಯ ಬಹುತೇಕ ಕಡೆಗಳಲ್ಲಿ ಗಾಳಿ ಸಹಿತ ಲಘುವಾಗಿ ಮಧ್ಯಮ ಮಳೆಯಾಗಲಿದೆ. ಒಳನಾಡಿನ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ.

ಬೆಂಗಳೂರಲ್ಲಿ ಹಗುರ ಮಳೆ

ಮುಂದಿನ 24 ಗಂಟೆಯಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ. ಹಗುರ ಮಳೆಯಾಗುವ ಸಾಧ್ಯತೆ ಇದೆ. ನಿರಂತರ ಗಾಳಿಯ ವೇಗವು 40-50 ಕಿ.ಮೀ ತಲುಪುವ ಸಾಧ್ಯತೆಯಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 27 ಮತ್ತು 21 ಡಿ.ಸೆ ಇರಲಿದೆ.

ಇದನ್ನೂ ಓದಿ: Elephant attack : ಮಳೆ ಮಧ್ಯೆ ಮಲೆನಾಡಿನಲ್ಲಿ ಕಾಡಾನೆಗಳ ಕಾಟ; ಪ್ರವಾಹಕ್ಕೆ ಸಿಲುಕಿದ ಪಟಗುಂದಿ ಗ್ರಾಮ

ಶೀಲಹಳ್ಳಿ ಸೇತುವೆ ಸಂಪೂರ್ಣ ಮುಳುಗಡೆ

ರಾಯಚೂರು ಜಿಲ್ಲೆಯ ಲಿಂಗಸಗೂರು ತಾಲೂಕಿನ ಶೀಲಹಳ್ಳಿ ಸೇತುವೆ ಮುಳುಗಡೆಯಾಗಿದೆ. ನಾರಾಯಣಪುರ ಡ್ಯಾಂನಿಂದ ಕೃಷ್ಣಾ ನದಿಗೆ ಹೊರ ಹರಿವು ಹೆಚ್ಚಳ ಹಿನ್ನೆಲೆಯಲ್ಲಿ ಕೃಷ್ಣಾ ನದಿಗೆ ಅಡ್ಡಲಾಗಿರುವ ಶೀಲಹಳ್ಳಿ ಸೇತುವೆ ಸಂಪೂರ್ಣ ಮುಳುಗಡೆಯಾಗಿದೆ. ಸೇತುವೆ ಮೇಲೆ ಸಂಚಾರ ನಿರ್ಬಂಧಿಸಲಾಗಿದ್ದು, ಪೊಲೀಸರ ಸರ್ಪಗಾವಲು ಹಾಕಲಾಗಿದೆ. ಹಂಚಿನಾಳ, ಯರಗೋಡಿ, ಕಡದರಗಡ್ಡಿ, ಯಳಗುಂದಿ ಸೇರಿದಂತೆ ಹಲವು ಗ್ರಾಮಗಳಿಗೆ ಸಂಪರ್ಕ ಕಡಿತವಾಗಿದೆ. ನಡುಗಡ್ಡೆಯಲ್ಲಿ ವಾಸಿಸುವ ಜನರಿಗೆ ಸಂಪೂರ್ಣ ಜಲದಿಗ್ಭಂಧನ ಹಾಕಲಾಗಿದೆ. ರೈತರ ಪಂಪ್ ಸೆಟ್, ಪೈಪ್‌ಗಳು ಮುಳುಗಡೆಯಾಗಿದೆ.

ಇದೇ ಕೃಷ್ಣಾ ನದಿಯ ನಡುಗಡ್ಡೆಯಲ್ಲಿ ಸಿಲುಕಿಕೊಂಡು ಕುರಿಗಾಹಿಗಳು ಪೇಚಿಗೆ ಸಿಲುಕಿದರು. ಮುಳುಗಡೆಯಾದ ಶೀಲಹಳ್ಳಿ ಸೇತುವೆ ಬಳಿಯ ಗುಡ್ಡದಲ್ಲಿ ಕುರಿಗಳನ್ನು ಮೇಯಲುಬಿಟ್ಟು,ಮೂವರು ಕುರಿಗಾಹಿಗಳು ಬೆಟ್ಟ ಇಳಿದಿದ್ದರು. ಈ ವೇಳೆ ಧುಮ್ಮಿಕ್ಕಿ ಹರಿಯಿತ್ತಿರುವ ನದಿ ನೋಡಿ‌ ಬೆಚ್ಚಿ ಬಿದ್ದರು. ಕೆಲಹೊತ್ತು ಹೇಗೆ ಸುರಕ್ಷಿತವಾಗಿ ಸ್ಥಳ ತಲುಪ ಬೇಕೆಂದು ಗೊತ್ತಾಗದೇ ಕಂಗಾಲಾಗಿದ್ದರು. ಸುಮಾರು ಒಂದು ಗಂಟೆ ಬೆಟ್ಟದಲ್ಲೇ ಅತ್ತಿತ್ತ ಓಡಾಡಿ, ಬಳಿಕ ಮತ್ತೊಂದು ದಡದಲ್ಲಿ ವ್ಯಕ್ತಿಯೊಬ್ಬ ಸೂಚಿಸಿದ ದಿಕ್ಕಿನತ್ತ ಹೊರಟು ಹೋದರು.

ಇತ್ತ ತುಂಗಭದ್ರಾ ಡ್ಯಾಂನಿಂದ 1,50,000 ಕ್ಯೂಸೆಕ್ ನೀರು ಬಿಡುಗಡೆ ಮಾಡುತ್ತಿರುವುದರಿಂದ ರಾಯಚೂರಿನ ಎಲೆಬಿಚ್ಚಾಲಿ ಗ್ರಾಮದಲ್ಲಿರುವ ಇತಿಹಾಸ ಪ್ರಸಿದ್ಧ ರಾಯರ ಜಪದ ಕಟ್ಟೆಗೆ ಮುಳುಗಿದೆ. ಜಪದ ಕಟ್ಟೆ ಬಳಿ ತೆರಳದಂತೆ ಆಡಳಿತ ಮಂಡಳಿ ಬ್ಯಾರಿಕೇಡ್ ಅಳವಡಿಸಿ-ಭದ್ರತಾ ಸಿಬ್ಬಂದಿಗಳನ್ನು ನಿಯೋಜಿಸಿ. ರಾಯಚೂರಿನ ಕೃಷ್ಣಾ ತೀರದ ಮತ್ತೊಂದು ದೇವಸ್ಥಾನ ಜಲಾವೃತಗೊಂಡಿದೆ. ಕೊಪ್ಪರದಲ್ಲಿರೊ ಲಕ್ಷ್ಮೀ ನರಸಿಂಹ ದೇವಸ್ಥಾನ ಮುಳುಗುಡೆಯಾಗಿದೆ. ದೇವಸ್ಥಾನ ಜಲಾವೃತ ಹಿನ್ನೆಲೆ ಅರ್ಚಕರು ನೀರಲ್ಲೇ ನಡೆದುಕೊಂಡು ಹೋಗಿ ಪೂಜಾ ಕೈಂಕರ್ಯ ನಡೆಸಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಪ್ರಮುಖ ಸುದ್ದಿ

HD Kumaraswamy: ಸುದ್ದಿಗೋಷ್ಠಿ ನಡೆಸುವಾಗಲೇ ಎಚ್‌.ಡಿ. ಕುಮಾರಸ್ವಾಮಿ ಮೂಗಿನಿಂದ ರಕ್ತಸ್ರಾವ; ಆಸ್ಪತ್ರೆಗೆ ದಾಖಲು

HD Kumaraswamy: ಬೆಂಗಳೂರಿನ ಜೆಡಿಎಸ್‌ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡುವ ವೇಳೆ ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಅವರ ಮೂಗಿನಿಂದ ರಕ್ತಸ್ರಾವವಾಗಿದೆ. ಈ ವೇಳೆ ಬಟ್ಟೆಯಿಂದ ಮೂಗನ್ನು ಒರೆಸಿಕೊಂಡರೂ ರಕ್ತಸ್ರಾವ ನಿಲ್ಲದ ಹಿನ್ನೆಲೆಯಲ್ಲಿ ಅವರನ್ನು ಪುತ್ರ ನಿಖಿಲ್‌ ಕುಮಾರಸ್ವಾಮಿ ಜಯನಗರ ಅಪೋಲೋ ಆಸ್ಪತ್ರೆಗೆ ಕರೆದೊಯ್ದರು.

VISTARANEWS.COM


on

HD Kumaraswamy
Koo

ಬೆಂಗಳೂರು: ಸುದ್ದಿಗೋಷ್ಠಿ ನಡೆಸುವಾಗಲೇ ಮಾಜಿ ಸಿಎಂ ಎಚ್‌.ಡಿ.ಕುಮಾರಸ್ವಾಮಿ ಅವರ ಮೂಗಿನಿಂದ ರಕ್ತಸ್ರಾವ ಆಗಿರುವ ಘಟನೆ ಭಾನುವಾರ ನಡೆದಿದೆ. ಮುಡಾ ನಿವೇಶನ ಹಗರಣ ವಿರೋಧಿಸಿ ಆ.3ರಿಂದ ಪಾದಯಾತ್ರೆ ಹಮ್ಮಿಕೊಂಡಿರುವ ಹಿನ್ನೆಲೆಯಲ್ಲಿ ನಗರದ ಜೆಡಿಎಸ್‌ ಕಚೇರಿಯಲ್ಲಿ ಬಿಜೆಪಿ-ಜೆಡಿಎಸ್‌ ನಾಯಕರ ಸಮನ್ವಯ ಸಭೆ ಏರ್ಪಡಿಸಲಾಗುತ್ತು. ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡುವ ವೇಳೆ ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ (HD Kumaraswamy) ಅವರ ಮೂಗಿನಿಂದ ರಕ್ತಸ್ರಾವವಾಗಿದೆ.

ಸುದ್ದಿಗಾರರೊಂದಿಗೆ ಮಾತನಾಡುವ ವೇಳೆ ಮೂಗಿನಿಂದ ರಕ್ತಸ್ರಾವವಾಗಿದೆ. ಈ ವೇಳೆ ಬಟ್ಟೆಯಿಂದ ಮೂಗನ್ನು ಎಚ್‌ಡಿಕೆ ಒರೆಸಿಕೊಂಡರು. ಅದರೂ ರಕ್ತಸ್ರಾವ ನಿಲ್ಲಲಿಲ್ಲ. ಮತ್ತೆ ಮೂಗಿನಿಂದ ರಕ್ತಸ್ರಾವ ಹೆಚ್ಚಾದ ಹಿನ್ನೆಲೆ ಪುತ್ರ ನಿಖಿಲ್‌ ಕುಮಾರಸ್ವಾಮಿ ಅವರು ತಂದೆಯನ್ನು ಜಯನಗರ ಅಪೋಲೋ ಆಸ್ಪತ್ರೆಗೆ ಕರೆದೊಯ್ದರು. ಮೂಗಿನಿಂದ ರಕ್ತಸ್ರಾವ ಹಿನ್ನೆಲೆಯಲ್ಲಿ ಬಿಳಿ ಶರ್ಟ್ ರಕ್ತಮಯವಾಗಿದೆ.

ಈ ಬಗ್ಗೆ ಸಂಸದ ಡಾ.ಸಿ.ಎನ್‌.ಮಂಜುನಾಥ್‌ ಪ್ರತಿಕ್ರಿಯಿಸಿ, ಕುಮಾರಸ್ವಾಮಿ ಅವರಿಗೆ ಎರಡನೇ ಬಾರಿ ಈ ರೀತಿ ಆಗುತ್ತಿದೆ. ರಕ್ತ ಹೆಪ್ಪುಗಟ್ಟಬಾರದು ಎಂದು ಥಿನ್ನರ್‌ ತೆಗೆದುಕೊಳ್ಳುತ್ತಿದ್ದರು. ಅವರಿಗೆ ಬಿಪಿ ನಾರ್ಮಲ್‌ ಇದೆ, ನಿತ್ಯ ಶುಗರ್‌ ಲೆವೆಲ್‌ ಚೆಕ್‌ ಮಾಡಿಕೊಳ್ಳುತ್ತಿದ್ದರು. ಪ್ರವಾಸ ಹೆಚ್ಚಾಗಿ ಓವರ್‌ ಹೀಟ್‌ನಿಂದ ರಕ್ತಸ್ರಾವ ಆಗಿರಬಹುದು ಎಂದು ತಿಳಿಸಿದ್ದಾರೆ.

ಇದನ್ನೂ ಓದಿ | Dog Meat Controversy: ಬೆಂಗಳೂರಿನಲ್ಲಿ ಸಿಕ್ಕಿರೋದು ನಾಯಿ ಮಾಂಸ ಅಲ್ಲ, ಮೇಕೆ ಮಾಂಸ: ಗೃಹ ಸಚಿವ ಪರಮೇಶ್ವರ್‌

ಸದನದಲ್ಲಿ ಉತ್ತರ ಕೊಡದೆ ಸಿಎಂ ಪಲಾಯನ

ಇಂದು ಬಿಜೆಪಿ-ಜೆಡಿಎಸ್ ಪಕ್ಷದ ಶಾಸಕರು, ಮಾಜಿ ಶಾಸಕರು, ಕೇಂದ್ರ ಸಚಿವರು ಹಾಗೂ ಬಿ.ಎಸ್‌. ಯಡಿಯೂರಪ್ಪ ಅವರ ಸಮ್ಮುಖದಲ್ಲಿ ಸಭೆ ಮಾಡಿದ್ದೇವೆ. ರಾಜ್ಯದಲ್ಲಿ ಜನರನ್ನು ಸುಳ್ಳು ಮಾತಿನ ಮೂಲಕ ದಾರಿ ತಪ್ಪಿಸಿ, ಕಾಂಗ್ರೆಸ್ ಅಧಿಕಾರಕ್ಕೆ ಬಂದ ಮೊದಲ ತಿಂಗಳಿಂದಲೇ ಇವರ ಭ್ರಷ್ಟಾಚಾರ ಆರಂಭವಾಯಿತು. ವರ್ಗಾವಣೆ ವಿಚಾರದಿಂದ ಭ್ರಷ್ಟಾಚಾರ ಆರಭವಾಗಿದೆ. ಸದನದ ಕಲಾಪ ಎದುರಿಸಲಾಗದೆ ಮಾಧ್ಯಮದ ಮೂಲಕ ಹೇಳಿಕೆ ಪ್ರಾರಂಭ ಮಾಡಿದ್ದಾರೆ. ವಿಧಾನಸಭೆ ಅಷ್ಟು ವರ್ಷದ ಅನುಭವ ಇರುವ ಸಿಎಂ, ವಿಧಾನಸಭೆಯಲ್ಲಿ ಉತ್ತರ ಕೊಡದೆ ಪಲಾಯನ ಮಾಡಿದ ಘಟನೆ ಎಂದೂ ನಡೆದಿರಲಿಲ್ಲ ಎಂದು ಮಾಜಿ ಸಿಎಂ ಎಚ್‌.ಡಿ.ಕುಮಾರಸ್ವಾಮಿ ಕಿಡಿಕಾರಿದರು.

HD Kumaraswamy
HD Kumaraswamy

ವಿಧಾನಸಭೆ, ವಿಧಾನಪರಿಷತ್‌ನಲ್ಲಿ ದಾಖಲೆ ಸಹಿತ ವಾಲ್ಮೀಕಿ ಹಗರಣ ಕುರಿತು ಮಾಹಿತಿ ನೀಡಲಾಗಿದೆ. ಆದರೆ, SC, ST ಸಮುದಾಯಕ್ಕೆ ಯಾವುದೇ ಸರ್ಕಾರ ಕೊಡದ ಭರವಸೆ ಕೊಟ್ಟು, ಪರಿಶಿಷ್ಟರ ಹಣವನ್ನೇ ಲೂಟಿ ಹೊಡೆಯಲಾಗುತ್ತಿದೆ. ಅದರ ನಾಯಕತ್ವ ಸಿದ್ದರಾಮಯ್ಯ ವಹಿಸಿದ್ದಾರೆ . ಮೊದಲ ಬಾರಿಗೆ ಉತ್ತರ ಕೊಡುವ ನೈತಿಕತೆ ಕಳೆದುಕೊಂಡಿದ್ದಾರೆ. ಯಾರೋ ಬರೆದುಕೊಟ್ಟ ಭಾಷಣ ಓದಿದ್ದಾರೆ. ಸಿಎಂ ಪತ್ನಿ 14 ಸೈಟಿಗೆ ನಮ್ಮ ತಕರಾರು ಇಲ್ಲ. ಇನ್ನೂ 50 ಸೈಟು ಖರೀದಿ ಮಾಡಲಿ. ಅವರವರ ಸಾಮರ್ಥ್ಯದ ಆಸ್ತಿ ಹೊಂದಲು ಅಂಬೇಡ್ಕರ್ ಅವಕಾಶ ಮಾಡಿಕೊಟ್ಟಿದ್ದಾರೆ. ಆದರೆ, ಆ ಜಮೀನು ಯಾರಿಗೆ ಸೇರಿದ್ದು ಅನ್ನೋದು ಪ್ರಶ್ನೆ.. ಅಂತಿಮ ಅಧಿಸೂಚನೆಯಲ್ಲಿ 3 ಲಕ್ಷ ಹಣವನ್ನು ಕೋರ್ಟಿನಲ್ಲಿ ಸಂದಾಯ ಮಾಡಿದ್ದಾರೆ ಎಂದು ಎಚ್‌ಡಿಕೆ ತಿಳಿಸಿದರು.

Continue Reading
Advertisement
Shirur landslide
ಕ್ರೈಂ15 mins ago

Shirur landslide: ಶಿರೂರು ಭೂಕುಸಿತ; ಇನ್ನೂ ಪತ್ತೆಯಾಗದವರ ಶೋಧ ಕಾರ್ಯಾಚರಣೆ ಕೈಬಿಟ್ಟ ಜಿಲ್ಲಾಡಳಿತ

CUET UG Result 2024
ಪ್ರಮುಖ ಸುದ್ದಿ42 mins ago

CUET UG Result 2024: ಸಿಯುಇಟಿ ಸ್ನಾತಕೋತ್ತರ ಪ್ರವೇಶ ಪರೀಕ್ಷೆ ಫಲಿತಾಂಶ ಪ್ರಕಟ

BJP-JDS Padayatra
ಕರ್ನಾಟಕ1 hour ago

BJP-JDS Padayatra: ರಾಜ್ಯ ಸರ್ಕಾರದ ವಿರುದ್ಧ ಆ.3ರಿಂದ ಬೆಂಗಳೂರು-ಮೈಸೂರು ಪಾದಯಾತ್ರೆ: ಬಿ.ವೈ.ವಿಜಯೇಂದ್ರ

Manu Bhaker
ಪ್ರಮುಖ ಸುದ್ದಿ1 hour ago

Manu Bhaker: ಭಾರತದ ಹೆಮ್ಮೆಯ ಪುತ್ರಿ ; ಮನು ಭಾಕರ್​ಗೆ ಪದಕ ಗೆಲ್ಲಲು ಭಗವದ್ಗೀತೆಯೇ ಪ್ರೇರಣೆ

Women's Asia Cup
ಪ್ರಮುಖ ಸುದ್ದಿ2 hours ago

Womens Asia Cup : ಭಾರತದ ಮಹಿಳೆಯರನ್ನು ಸೋಲಿಸಿ ಚೊಚ್ಚಲ ಏಷ್ಯಾ ಕಪ್​ ಗೆದ್ದ ಶ್ರೀಲಂಕಾ ತಂಡ

karnataka weather Forecast
ಮಳೆ2 hours ago

Karnataka Weather : ಕೂಲ್‌ ಆದ ಬೆಂಗಳೂರು; ನಾಳೆಗೆ ಉತ್ತರ ಕನ್ನಡ ಜಿಲ್ಲೆಗೆ ಭಾರಿ ಮಳೆ ಎಚ್ಚರ

HD Kumaraswamy
ಪ್ರಮುಖ ಸುದ್ದಿ2 hours ago

HD Kumaraswamy: ಸುದ್ದಿಗೋಷ್ಠಿ ನಡೆಸುವಾಗಲೇ ಎಚ್‌.ಡಿ. ಕುಮಾರಸ್ವಾಮಿ ಮೂಗಿನಿಂದ ರಕ್ತಸ್ರಾವ; ಆಸ್ಪತ್ರೆಗೆ ದಾಖಲು

Tungabhadra Dam
ಕೊಪ್ಪಳ3 hours ago

Tungabhadra Dam: ಕಾಲುವೆಯಲ್ಲಿ ಬಾಲಕರ ಈಜಾಟ; ಅಧಿಕಾರಿಗಳಿಗೆ ಪೀಕಲಾಟ!

Decline of Vultures
ಆರೋಗ್ಯ3 hours ago

Indian Vultures : ಹದ್ದುಗಳೇ ಜೀವರಕ್ಷಕ; ಭಾರತದಲ್ಲಿ ರಣಹದ್ದುಗಳ ಸಂಖ್ಯೆ ಕುಸಿತದಿಂದ 5 ಲಕ್ಷ ಮಂದಿ ಸಾವು ಎಂದಿದೆ ಅಧ್ಯಯನ ವರದಿ

KRS Dam
ಕರ್ನಾಟಕ3 hours ago

KRS Dam: ಕೆಆರ್‌ಎಸ್, ಕಬಿನಿ ಜಲಾಶಯ ಭರ್ತಿ ಹಿನ್ನೆಲೆ ನಾಳೆ ಸಿಎಂ ಬಾಗಿನ ಅರ್ಪಣೆ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Tungabhadra Dam
ಕೊಪ್ಪಳ3 hours ago

Tungabhadra Dam: ಕಾಲುವೆಯಲ್ಲಿ ಬಾಲಕರ ಈಜಾಟ; ಅಧಿಕಾರಿಗಳಿಗೆ ಪೀಕಲಾಟ!

Elephant attack
ಮಳೆ5 hours ago

Elephant attack : ಮಳೆ ಮಧ್ಯೆ ಮಲೆನಾಡಿನಲ್ಲಿ ಕಾಡಾನೆಗಳ ಕಾಟ; ಪ್ರವಾಹಕ್ಕೆ ಸಿಲುಕಿದ ಪಟಗುಂದಿ ಗ್ರಾಮ

karnataka Rain
ಮಳೆ7 hours ago

Karnataka Rain : ಮಳೆ ನಿಂತರೂ ಕಡಿಮೆಯಾಗದ ಅನಾಹುತ; ಮಾದಪುರ ಟೌನ್ ಸಮೀಪ ಗುಡ್ಡ ಕುಸಿತ

karnataka Rain
ಮಳೆ8 hours ago

Karnataka Rain : ರಭಸವಾಗಿ ಬೀಸಿದ ಗಾಳಿಗೆ ಮನೆ ಮೇಲೆ ಬಿದ್ದ ತೆಂಗಿನ ಮರ; ನದಿ ನೀರು ಸೇವಿಸದಂತೆ ಸೂಚನೆ

Karnataka weather Forecast
ಮಳೆ1 day ago

Karnataka Weather : ವೀಕೆಂಡ್‌ ಮೋಜಿಗೆ ಮಳೆರಾಯ ಅಡ್ಡಿ; ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ

ramanagara news
ರಾಮನಗರ1 day ago

Ramanagar News : ರಾಮನಗರದಲ್ಲಿ ಎರಡು ಜಡೆ ಹಾಕಿಲ್ಲವೆಂದು ವಿದ್ಯಾರ್ಥಿನಿಯರ ಕೂದಲು ಕತ್ತರಿಸಿದ ಶಿಕ್ಷಕರು ಅಮಾನತು

karnataka rain
ಮಳೆ1 day ago

Karnataka Rain : ಕಾವೇರಿ ನದಿ ತೀರದಲ್ಲಿ ಪ್ರವಾಹ ಭೀತಿ; ಮುತ್ತತ್ತಿಗೆ ಪ್ರವಾಸಿಗರ ನಿಷೇಧ, ಶ್ರೀರಂಗಪಟ್ಟಣದಲ್ಲಿ ಪಿಂಡ ಪ್ರದಾನಕ್ಕೆ ಬ್ರೇಕ್

Ankola landslide
ಉತ್ತರ ಕನ್ನಡ2 days ago

Ankola landslide: ಅಂಕೋಲಾ-ಶಿರೂರು ಗುಡ್ಡ ಕುಸಿತ; ನಾಳೆಯಿಂದ ಪ್ಲೋಟಿಂಗ್ ಪ್ಲಾಟ್‌ಫಾರಂ ಕಾರ್ಯಾಚರಣೆ

karnataka rain
ಮಳೆ2 days ago

Karnataka Rain : ಉಕ್ಕಿ ಹರಿಯುವ ನೇತ್ರಾವತಿ ನದಿಯಲ್ಲಿ ತೇಲಿ ಬಂದ ಜೀವಂತ ಹಸು

Karnataka Rain
ಮಳೆ2 days ago

Karnataka Rain: ವಿದ್ಯುತ್‌ ದುರಸ್ತಿಗಾಗಿ ಪ್ರಾಣದ ಹಂಗು ತೊರೆದು ಉಕ್ಕಿ ಹರಿಯುವ ನೀರಿಗೆ ಧುಮುಕಿದ ಲೈನ್‌ ಮ್ಯಾನ್‌!

ಟ್ರೆಂಡಿಂಗ್‌