Shiradi Landslide: ಹಳಿ ಮೇಲೆ ಭೂಕುಸಿತ, ಬೆಂಗಳೂರು- ಮಂಗಳೂರು ರೈಲುಗಳು 15 ದಿನ ಬಂದ್, 400 ಕಾರ್ಮಿಕರಿಂದ ತೆರವು ಕಾರ್ಯಾಚರಣೆ - Vistara News

ಪ್ರಮುಖ ಸುದ್ದಿ

Shiradi Landslide: ಹಳಿ ಮೇಲೆ ಭೂಕುಸಿತ, ಬೆಂಗಳೂರು- ಮಂಗಳೂರು ರೈಲುಗಳು 15 ದಿನ ಬಂದ್, 400 ಕಾರ್ಮಿಕರಿಂದ ತೆರವು ಕಾರ್ಯಾಚರಣೆ

Shiradi Landslide: ಶಿರಾಡಿ ಘಾಟಿಯ ಎಡಕುಮೇರಿ- ಕಡಗರವಳ್ಳಿ ಮಧ್ಯೆ ಭೂಕುಸಿತವಾಗಿ ರೈಲ್ವೆ ಹಳಿ ಮುಚ್ಚಿಹೋಗಿದೆ. ಆಗಸ್ಟ್ 10ರವರೆಗೆ ಈ ಮಾರ್ಗದಲ್ಲಿ ರೈಲು ಸಂಚಾರ ಅಸಾಧ್ಯ ಎಂದು ರೈಲ್ವೆ ಇಲಾಖೆ ಹೇಳಿದೆ. 14 ರೈಲುಗಳ ಸಂಚಾರ ರದ್ದುಪಡಿಸಲಾಗಿದೆ. 400 ಮಂದಿಯಿಂದ ರೈಲು ಹಳಿ ತೆರವು ಕಾಮಗಾರಿ ನಡೆಯುತ್ತಿದೆ. ಅದರೆ ಕಾಮಗಾರಿಗೆ ಭಾರಿ ಮಳೆ ಅಡ್ಡಿಯಾಗಿದೆ.

VISTARANEWS.COM


on

shiradi landslide railway track
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಶಿರಾಡಿ ಘಾಟಿಯಲ್ಲಿ (Shiradi Ghat) ರೈಲ್ವೇ ಹಳಿ (Railway Track) ಮೇಲೆ ಭಾರಿ ಭೂಕುಸಿತ (Shiradi Landslide) ಆಗಿರುವ ಪರಿಣಾಮ, ಬೆಂಗಳೂರು- ಮಂಗಳೂರು (Bengaluru Mangaluru Trains) ನಡುವೆ ಸಂಚರಿಸುವ ರೈಲುಗಳನ್ನು 15 ದಿನಗಳ ಕಾಲ ಬಂದ್ ಮಾಡಲಾಗಿದೆ. ಆಗಸ್ಟ್‌ 10ರವರೆಗೆ ಇಲ್ಲಿ ರೈಲು ಸಂಚಾರ (Trains Cancelled) ಇರುವುದಿಲ್ಲ.

ಶಿರಾಡಿ ಘಾಟಿಯ ಎಡಕುಮೇರಿ- ಕಡಗರವಳ್ಳಿ ಮಧ್ಯೆ ಭೂಕುಸಿತವಾಗಿ ರೈಲ್ವೆ ಹಳಿ ಮುಚ್ಚಿಹೋಗಿದೆ. ಆಗಸ್ಟ್ 10ರವರೆಗೆ ಈ ಮಾರ್ಗದಲ್ಲಿ ರೈಲು ಸಂಚಾರ ಅಸಾಧ್ಯ ಎಂದು ರೈಲ್ವೆ ಇಲಾಖೆ ಹೇಳಿದೆ. 14 ರೈಲುಗಳ ಸಂಚಾರ ರದ್ದುಪಡಿಸಲಾಗಿದೆ. 400 ಮಂದಿಯಿಂದ ರೈಲು ಹಳಿ ತೆರವು ಕಾಮಗಾರಿ ನಡೆಯುತ್ತಿದೆ. ಅದರೆ ಕಾಮಗಾರಿಗೆ ಭಾರಿ ಮಳೆ ಅಡ್ಡಿಯಾಗಿದೆ.

ರೈಲು ಸಂಚಾರ ರದ್ದಾದ ಬೆನ್ನಲ್ಲೇ ಬೆಂಗಳೂರು – ಮಂಗಳೂರು ನಡುವಿನ ಫ್ಲೈಟ್ ಟಿಕೇಟ್ ದರ ದುಪ್ಪಟ್ಟಾಗಿದೆ. ಸಾಮಾನ್ಯವಾಗಿ ಇರುತ್ತಿದ್ದ 3000- 3500 ರೂ. ದರ ಇದೀಗ 6604 ರೂಪಾಯಿಗೆ ಏರಿಕೆಯಾಗಿದೆ.

ಎಡಕುಮೇರಿ– ಕಡಗರವಳ್ಳಿ ನಡುವಿನ ದೋಣಿಗಲ್‌ನಲ್ಲಿ ಉಂಟಾಗಿರುವ ಗಂಭೀರ ಸ್ವರೂಪದ ಭೂಕುಸಿತದಿಂದ ಹಾನಿಗೀಡಾಗಿರುವ ರೈಲು ಮಾರ್ಗದ ದುರಸ್ತಿ ಕಾರ್ಯ ಹಗಲು ರಾತ್ರಿ ಸಮರೋಪಾದಿಯಲ್ಲಿ ನಡೆಯುತ್ತಿದೆ. ನಿರಂತರ ಮಳೆಯ ಸವಾಲಿನ ನಡುವೆಯೂ ದುರಸ್ತಿ ಕಾರ್ಯ ನಡೆಸಲಾಗುತ್ತಿದೆ. ಅಗತ್ಯ ಸಲಕರಣೆಗಳೊಂದಿಗೆ ಕಾರ್ಮಿಕರನ್ನು ಸ್ಥಳದಲ್ಲಿ ನಿಯೋಜಿಸಲಾಗಿದೆ. ಹಗಲು ಪಾಳಿಯಲ್ಲಿ 200, ರಾತ್ರಿ ಪಾಳಿಯಲ್ಲಿ 120 ಹಾಗೂ ಇತರ 110 ಸಿಬಂದಿಯನ್ನು ನಿಯೋಜಿಸಲಾಗಿದೆ. ಸುರಕ್ಷೆಗೆ ಆದ್ಯತೆ ನೀಡಿ ಕಾಮಗಾರಿ ನಿರ್ವಹಿಸಲಾಗುತ್ತಿದೆ.

ಶುಕ್ರವಾರ ಸಂಜೆ ವೇಳೆ ಭಾರೀ ಪ್ರಮಾಣದಲ್ಲಿ ಭೂ ಕುಸಿತ ಉಂಟಾಗಿ ರೈಲು ಹಳಿಗೆ ಅಪಾಯ ಉಂಟಾಗಿತ್ತು. ಆರು ಹಿಟಾಚಿ ಯಂತ್ರಗಳು, ಐದು ಪೋಕ್ಲೈನ್‌ ಯಂತ್ರಗಳೂ ತೆರವು ಕಾರ್ಯಾಚರಣೆಯಲ್ಲಿ ಭಾಗಿಯಾಗಿವೆ. ಭೂಕುಸಿತವಾದ ಜಾಗದಲ್ಲಿ ಮಣ್ಣನ್ನು ತಡೆದಿಡುವ ಕೆಲಸ ನಡೆಯುತ್ತಿದ್ದು, ಕಲ್ಲು ಬಂಡೆ, ಮರಳಿನ ಚೀಲ ಜೋಡಿಸಲಾಗುತ್ತಿದೆ. ಅದಕ್ಕೆ ಕಬ್ಬಿಣದ ನೆಟ್‌ (ಗೇಬಿಯನ್‌ ಮೆಷ್‌) ಮೂಲಕ ತಡೆಗೋಡೆ ನಿರ್ಮಿಸಲಾಗುತ್ತಿದೆ.

ಆಹಾರ ತಯಾರಿ, ಪೂರೈಕೆ ಹಾಗೂ ವೈದ್ಯಕೀಯ ತಂಡಗಳೂ ಸ್ಥಳದಲ್ಲಿವೆ. ಸುಬ್ರಹ್ಮಣ್ಯ ನಿಲ್ದಾಣದಿಂದ ಆಹಾರ, ನೀರು ಸರಬರಾಜು ಮಾಡಲಾಗುತ್ತಿದೆ. ದುರಸ್ತಿಗೆ ಬೇಕಾಗಿರುವ 8 ಜನರೇಟರ್‌ಗಳು, ಸಮರ್ಪಕ ಬೆಳಕಿನ ವ್ಯವಸ್ಥೆಯೊಂದಿಗೆ ಸಂಪರ್ಕ ನೆಟ್‌ವರ್ಕ್‌, ಇಂಟರ್‌ನೆಟ್‌ ವ್ಯವಸ್ಥೆಯನ್ನೂ ಮಾಡಲಾಗಿದೆ. ಸಂವಹನ ವ್ಯವಸ್ಥೆಗಳಾದ ಆಟೋ ಫೋನ್‌ಗಳು, ಕಂಟ್ರೋಲ್‌ ಫೋನ್‌, ಸ್ಯಾಟಲೈಟ್‌ ಫೋನ್‌, ವಿಎಸ್‌ಟಿಎ ಸಂವಹನ (ಲೈವ್‌ ಸ್ಟ್ರೀಮಿಂಗ್‌ಗಾಗಿ) ವ್ಯವಸ್ಥೆಗಳನ್ನು ಬಳಸಲಾಗುತ್ತಿದ್ದು, ಹುಬ್ಬಳ್ಳಿಯ ಕೇಂದ್ರ ಕಚೇರಿಯ ವಾರ್‌ ರೂಮ್‌ನಿಂದ ಸಂವಹನ ನಡೆಸಲಾಗುತ್ತಿದೆ.

ಯಾವ್ಯಾವ ರೈಲು ರದ್ದು?

ಮಂಗಳೂರು: ನಂ.16511 ಕೆಎಸ್‌ಆರ್‌ ಬೆಂಗಳೂರು- ಕಣ್ಣೂರು ಎಕ್ಸ್‌ಪ್ರೆಸ್‌ ರೈಲನ್ನು ಜು.29ರಿಂದ ಆ.3ರ ವರೆಗೆ ಸಂರ್ಪೂವಾಗಿ ರದ್ದು ಮಾಡಲಾಗಿದೆ.
ನಂ.16512 ಕಣ್ಣೂರು- ಕೆಎಸ್‌ಆರ್‌ ಬೆಂಗಳೂರು ಎಕ್ಸ್‌ಪ್ರೆಸ್‌ ರೈಲನ್ನು ಜು.30ರಿಂದ ಆ.4ರ ವರೆಗೆ ರದ್ದುಪಡಿಸಲಾಗಿದೆ.
ನಂ.07378 ಮಂಗಳೂರು ಸೆಂಟ್ರಲ್‌- ವಿಜಯಪುರ ವಿಶೇಷ ಎಕ್ಸ್‌ಪ್ರೆಸ್‌ ರೈಲನ್ನು ಜು.30ರಿಂದ ಆ.4 ವರೆಗೆ ಸಂಪೂರ್ಣ ರದ್ದುಪಡಿಸಲಾಗಿದೆ.
ನಂ.07377 ವಿಜಯಪುರ- ಮಂಗಳೂರು ಸೆಂಟ್ರಲ್‌ ರೈಲನ್ನು ಜು. 29ರಿಂದ ಆ. 3ರ ವರೆಗೆ ಸಂಪೂರ್ಣ ರದ್ದುಪಡಿಸಲಾಗಿದೆ.
ನಂ.16585 ಎಸ್‌ಎಂವಿಟಿ ಬೆಂಗಳೂರು – ಮುರುಡೇಶ್ವರ ಎಕ್ಸ್‌ಪ್ರೆಸ್‌ ರೈಲು ಜು. 29ರಿಂದ ಆ. 3ರ ವರೆಗೆ ಸಂಪೂರ್ಣ ರದ್ದಾಗಿದೆ.
ನಂ.16586 ಮುರುಡೇಶ್ವರ – ಎಸ್‌ಎಂವಿಟಿ ಬೆಂಗಳೂರು ಎಕ್ಸ್‌ಪ್ರೆಸ್‌ ರೈಲು ಜು.30ರಿಂದ ಆ. 4ರ ವರೆಗೆ ಸಂಪೂರ್ಣ ರದ್ದಾಗಿದೆ.
ನಂ.16595 ಕೆಎಸ್‌ಆರ್‌ ಬೆಂಗಳೂರು – ಕಾರವಾರ ವಿಶೇಷ ಎಕ್ಸ್‌ಪ್ರೆಸ್‌ ರೈಲು ಜು. 29 ರಿಂದ ಆ. 3ರ ವರೆಗೆ ರದ್ದಾಗಿದೆ.
ನಂ.16596 ಕಾರವಾರ -ಕೆಎಸ್‌ಆರ್‌ ಬೆಂಗಳೂರು ವಿಶೇಷ ಎಕ್ಸ್‌ಪ್ರೆಸ್‌ ರೈಲು ಜು.30ರಿಂದ ಆ.4ರ ವರೆಗೆ ಸಂಪೂರ್ಣ ರದ್ದಾಗಿದೆ.
ನಂ.16576 ಮಂಗಳೂರು ಜಂಕ್ಷನ್‌ – ಯಶವಂತಪುರ ಜಂಕ್ಷನ್‌ ಎಕ್ಸ್‌ಪ್ರಸ್‌ ರೈಲನ್ನು ಜು. 30 ಮತ್ತು ಆ. 1ರಂದು ರದ್ದುಗೊಳಿಸಿದೆ.
ನಂ.16575 ಯಶವಂತಪುರ ಜಂಕ್ಷನ್‌-ಮಂಗಳೂರು ಜಂಕ್ಷನ್‌ ಆ. 31 ಮತ್ತು ಜು. 2ರಂದು ರದ್ದುಪಡಿಸಲಾಗಿದೆ.
ನಂ.16539 ಯಶವಂತಪುರ ಜಂಕ್ಷನ್‌ – ಮಂಗಳೂರು ಜಂಕ್ಷನ್‌ ಎಕ್ಸ್‌ ಪ್ರಸ್‌ ರೈಲನ್ನು ಆ.3ರಂದು ರದ್ದುಪಡಿಸಿದೆ.
ನಂ.16540 ಮಂಗಳೂರು ಜಂಕ್ಷನ್‌ – ಯಶವಂತಪುರ ಜಂಕ್ಷನ್‌ ರೈಲನ್ನು ಆ.4ರಂದು ರದ್ದುಪಡಿಸಲಾಗಿದೆ.
ನಂ.16515 ಯಶವಂತಪುರ ಜಂಕ್ಷನ್‌- ಕಾರವಾರ ಎಕ್ಸ್‌ಪ್ರೆಸ್‌ ರೈಲನ್ನು ಜು. 29, 31 ಮತ್ತು ಆ.2ರಂದು ರದ್ದುಪಡಿಸಲಾಗಿದೆ.
ನಂ.16516 ಕಾರವಾರ -ಯಶವಂತಪುರ ಜಂಕ್ಷನ್‌ ರೈಲನ್ನು ಜು. 30, ಆ. 1 ಮತ್ತು ಆ.3ರಂದು ಸಂಪೂರ್ಣ ರದ್ದುಪಡಿಸಲಾಗಿದೆ.

ಇದನ್ನೂ ಓದಿ: Shiradi Ghat: ಭೂಕುಸಿತ; ಶಿರಾಡಿ ಘಾಟ್​ನಲ್ಲಿ ಸಂಚಾರ ನಿಷೇಧ ​; ಬೆಂಗಳೂರು- ಮಂಗಳೂರು ಸಂಪರ್ಕ ಬಹುತೇಕ ಕಟ್​

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Ranbir Kapoor: ಮೋದಿಯದ್ದು ‘ಆಯಸ್ಕಾಂತದಂಥ ವ್ಯಕ್ತಿತ್ವ’ ಎಂದ ರಣಬೀರ್‌ ಕಪೂರ್;‌ ಕನ್ನಡಿಗನಿಗೆ ನಟ ಹೇಳಿದ ಕತೆ ಏನು?

Ranbir Kapoor: ರಾಜಕೀಯದ ಕುರಿತು ನಿಮ್ಮ ಅಭಿಪ್ರಾಯವೇನು ಎಂದು ನಿಖಿಲ್‌ ಕಾಮತ್‌ ಕೇಳಿದ ಪ್ರಶ್ನೆಗೆ ರಣಬೀರ್‌ ಕಪೂರ್‌ ಉತ್ತರಿಸಿದರು. ರಣಬೀರ್‌ ಕಪೂರ್‌ ಸೇರಿ ಹಲವು ನಟರು, ನಿರ್ದೇಶಕರು ಮೋದಿ ಅವರನ್ನು ಭೇಟಿಯಾಗಲು ಹೋದಾಗ ಮೋದಿ ಅವರು ಹೇಗೆ ಪ್ರತಿಕ್ರಿಯಿಸಿದರು ಎಂಬುದು ಸೇರಿ ಹಲವು ವಿಷಯಗಳ ಕುರಿತು ರಣಬೀರ್‌ ಕಪೂರ್‌ ಪ್ರಸ್ತಾಪಿಸಿದರು.

VISTARANEWS.COM


on

Ranbir Kapoor
Koo

ಮುಂಬೈ: ಪ್ರಧಾನಿ ನರೇಂದ್ರ ಮೋದಿ (Narendra Modi) ಅವರಿಗೆ ಭಾರತ ಸೇರಿ ಜಗತ್ತಿನಾದ್ಯಂತ ಅಭಿಮಾನಿಗಳಿದ್ದಾರೆ. ರಾಜಕೀಯ ಭಿನ್ನಾಭಿಪ್ರಾಯದ ಹೊರತಾಗಿಯೂ ಮೋದಿ ಅವರ ಶ್ರಮ, ವ್ಯಕ್ತಿತ್ವವನ್ನು ಮೆಚ್ಚುವವರಿದ್ದಾರೆ. ಇದಕ್ಕೆ ನಿದರ್ಶನ ಎಂಬಂತೆ, ನರೇಂದ್ರ ಮೋದಿ ಅವರ ಕುರಿತು ಬಾಲಿವುಡ್‌ ನಟ ರಣಬೀರ್‌ ಕಪೂರ್‌ (Ranbir Kapoor) ಅವರು ಮೆಚ್ಚುಗೆಯ ಮಾತುಗಳನ್ನಾಡಿದ್ದಾರೆ. ಜೆರೋದಾ ಸಂಸ್ಥಾಪಕ, ಕನ್ನಡಿಗ ನಿಖಿಲ್‌ ಕಾಮತ್‌ (Nikhil Kamath) ಅವರೊಂದಿಗಿನ ಪಾಡ್‌ಕಾಸ್ಟ್‌ ವೇಳೆ ರಣಬೀರ್‌ ಕಪೂರ್‌ ಅವರು ಮೋದಿ ಕುರಿತು ಶ್ಲಾಘನೆ ವ್ಯಕ್ತಪಡಿಸಿದ್ದಾರೆ.

ರಾಜಕೀಯದ ಕುರಿತು ನಿಮ್ಮ ಅಭಿಪ್ರಾಯವೇನು ಎಂದು ನಿಖಿಲ್‌ ಕಾಮತ್‌ ಕೇಳಿದ ಪ್ರಶ್ನೆಗೆ ರಣಬೀರ್‌ ಕಪೂರ್‌ ಉತ್ತರಿಸಿದರು. “ನಾನು ರಾಜಕೀಯದ ಬಗ್ಗೆ ಜಾಸ್ತಿ ಯೋಚಿಸುವುದಿಲ್ಲ. ಆದರೆ, 4-5 ವರ್ಷಗಳ ಹಿಂದೆ ನಾನು ಸೇರಿ ಹಲವು ನಟರು ಹಾಗೂ ನಿರ್ದೇಶಕರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಲು ಹೋಗಿದ್ದೆವು. ನೀವು ಮೋದಿ ಅವರು ಹೇಗೆ ಮಾತನಾಡುತ್ತಾರೆ ಎಂಬುದನ್ನು ಟಿ.ವಿಯಲ್ಲಿ ನೋಡಿರುತ್ತೀರಿ. ನಮಗೂ ಕೂಡ ಅವರ ಆಯಸ್ಕಾಂತದಂತಹ ವ್ಯಕ್ತಿತ್ವದ ಅರಿವಾಯಿತು” ಎಂಬುದಾಗಿ ರಣಬೀರ್‌ ಕಪೂರ್‌ ಹೇಳಿದರು.

“ನಾವು ಅವರನ್ನು ಭೇಟಿಯಾಗಲು ಹೋಗಿದ್ದೆವು. ನಾವು ಕುಳಿತಿದ್ದಾಗ ಅವರು ಬಂದು ನಮ್ಮ ಜತೆ ಕುಳಿತರು. ಅವರು ಪ್ರತಿಯೊಬ್ಬರ ಜತೆಗೂ ಮಾತನಾಡಿದರು. ಪ್ರತಿಯೊಬ್ಬರ ವೈಯಕ್ತಿಕ ವಿಚಾರಗಳ ಬಗ್ಗೆ ಕೇಳಿದರು. ಆಗ ನನ್ನ ತಂದೆಯು ಚಿಕಿತ್ಸೆ ಪಡೆಯುತ್ತಿದ್ದರು. ಅದರ ಬಗ್ಗೆಯೂ ಮೋದಿ ಅವರು ಕೇಳಿದರು. ವಿಕ್ಕಿ ಕೌಶಲ್‌, ಕಿರಣ್‌ ಜೋಹರ್‌ ಸೇರಿ ಹಲವರ ವೈಯಕ್ತಿಕ ವಿಚಾರಗಳ ಕುರಿತು ಕೂಡ ಮೋದಿ ಮಾತನಾಡಿದರು. ಅದ್ಭುತ ವ್ಯಕ್ತಿಗಳು, ಸಾಧಕರು ಮಾತ್ರ ಇಷ್ಟೊಂದು ಶ್ರಮ ವಹಿಸಲು ಸಾಧ್ಯ. ಶಾರುಖ್‌ ಖಾನ್‌ ಸೇರಿ ಹಲವು ಸಾಧಕರು ಇಷ್ಟು ಶ್ರಮ ಹಾಕಲು ಸಾಧ್ಯ” ಎಂಬುದಾಗಿ ರಣಬೀರ್‌ ಕಪೂರ್‌ ಅವರು ಮೋದಿ ಕುರಿತು ಮೆಚ್ಚುಗೆಯ ಮಾತುಗಳನ್ನಾಡಿದ್ದಾರೆ.

ನಿಖಿಲ್‌ ಕಾಮತ್‌ ಕೂಡ ಬಣ್ಣನೆ

ನರೇಂದ್ರ ಮೋದಿ ಅವರ ಜತೆಗೆ ಸಮಯ ಕಳೆದ ಅನುಭವದ ಕುರಿತು ನೀವು ಹೇಳಿ ಎಂಬುದಾಗಿ ರಣಬೀರ್‌ ಕಪೂರ್‌ ಅವರು ಕೇಳಿದಾಗ ನಿಖಿಲ್‌ ಕಾಮತ್‌ ಕೂಡ ಮೋದಿ ಬಗ್ಗೆ ಮೆಚ್ಚಗೆಯ ಮಾತುಗಳನ್ನಾಡಿದ್ದರು. “ನರೇಂದ್ರ ಮೋದಿ ಅವರ ಜತೆ ಎರಡು ಕಾರ್ಯಕ್ರಮಗಳಲ್ಲಿ ಭಾಗಿಯಾದೆ. ನಾವು ಅಮೆರಿಕದಲ್ಲಿದ್ದಾಗ ಮೋದಿ ಅವರು ನಿರಂತರವಾಗಿ ಕಾರ್ಯಕ್ರಮಗಳಲ್ಲಿ ಭೇಟಿಯಾಗುತ್ತಿದ್ದರು. ಅವರು ಬೆಳಗ್ಗೆಯಿಂದ ರಾತ್ರಿವರೆಗೆ ಒಂದಲ್ಲ ಒಂದು ಕಾರ್ಯಕ್ರಮ, ಚಟುವಟಿಕೆಯಲ್ಲಿ ತೊಡಗಿರುತ್ತಿದ್ದರು. ಅವರ ವಯಸ್ಸಿನಲ್ಲಿ, ಅವರಷ್ಟು ಶ್ರಮ ವಹಿಸುವುದು ನನಗೆ ಅಚ್ಚರಿಯಾಯಿತು. ಅವರು ಕೂಡ ನನಗೆ ಸ್ಫೂರ್ತಿ” ಎಂದು ನಿಖಿಲ್‌ ಕಾಮತ್‌ ತಿಳಿಸಿದ್ದಾರೆ.

ಇದನ್ನೂ ಓದಿ: Manu Bhaker : ಪ್ಯಾರಿಸ್ ಒಲಿಂಪಿಕ್ಸ್ ನಲ್ಲಿ ಐತಿಹಾಸಿಕ ಪದಕ ಗೆದ್ದ ಮನು ಭಾಕರ್ ಗೆ ಪ್ರಧಾನಿ ಮೋದಿ ಅಭಿನಂದನೆ

Continue Reading

ಉದ್ಯೋಗ

BPNL Recruitment 2024: ಭಾರತೀಯ ಪಶುಪಾಲನಾ ನಿಗಮದಲ್ಲಿದೆ 2,250 ಹುದ್ದೆ; 10ನೇ ತರಗತಿ ಪಾಸಾದವರೂ ಅಪ್ಲೈ ಮಾಡಿ

BPNL Recruitment 2024: ಭಾರತೀಯ ಪಶುಪಾಲನಾ ನಿಗಮ ಲಿಮಿಟೆಡ್‌ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಬರೋಬ್ಬರಿ 2,250 ಹುದ್ದೆಗಳನ್ನು ಭರ್ತಿ ಮಾಡಲು ಅಧಿಸೂಚನೆ ಪ್ರಕಟಿಸಲಾಗಿದ್ದು, ಎಸ್ಸೆಸ್ಸೆಲ್ಸಿ, ದ್ವಿತೀಯ ಪಿಯುಸಿ, ಪದವಿ ವಿದ್ಯಾರ್ಹತೆಯ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಆಸಕ್ತರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕು. ಕೊನೆಯ ದಿನ ಆಗಸ್ಟ್‌ 5.

VISTARANEWS.COM


on

BPNL Recruitment 2024
Koo

ಬೆಂಗಳೂರು: ಭಾರತೀಯ ಪಶುಪಾಲನಾ ನಿಗಮ ಲಿಮಿಟೆಡ್‌ (Bhartiya Pashupalan Nigam Limited) ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ (BPNL Recruitment 2024). ಬರೋಬ್ಬರಿ 2,250 ಹುದ್ದೆಗಳನ್ನು ಭರ್ತಿ ಮಾಡಲು ಅಧಿಸೂಚನೆ ಪ್ರಕಟಿಸಲಾಗಿದ್ದು, ಎಸ್ಸೆಸ್ಸೆಲ್ಸಿ, ದ್ವಿತೀಯ ಪಿಯುಸಿ, ಪದವಿ ವಿದ್ಯಾರ್ಹತೆಯ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಆಸಕ್ತರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕು. ಕೊನೆಯ ದಿನ ಆಗಸ್ಟ್‌ 5 (Job Alert).

ಹುದ್ದೆಗಳ ವಿವರ ಮತ್ತು ವಿದ್ಯಾರ್ಹತೆ

ಗೋ ಸಂವರ್ಧನಾ ವಿಸ್ತಾರಕ (Cow Promotion Extender)- 225 ಹುದ್ದೆ, ವಿದ್ಯಾರ್ಹತೆ: ಪದವಿ
ಕೌ ಬ್ರೀಡಿಂಗ್‌ ಅಸಿಸ್ಟಂಟ್‌ (Cow Breeding Assistant)- 675 ಹುದ್ದೆ, ವಿದ್ಯಾರ್ಹತೆ: 12ನೇ ತರಗತಿ
ಗೋ ಸೇವಕ (Cow Servant)- 1,350 ಹುದ್ದೆ, ವಿದ್ಯಾರ್ಹತೆ: 10ನೇ ತರಗತಿ

ವಯೋಮಿತಿ

ಗೋ ಸಂವರ್ಧನಾ ವಿಸ್ತಾರಕ ಹುದ್ದೆಗೆ 25 – 45 ವರ್ಷ, ಕೌ ಬ್ರೀಡಿಂಗ್‌ ಅಸಿಸ್ಟಂಟ್‌ ಹುದ್ದೆಗೆ 21 – 40 ವರ್ಷ, ಗೋ ಸೇವಕ ಹುದ್ದೆಗೆ 18 – 40 ವರ್ಷದವರು ಅರ್ಜಿ ಸಲ್ಲಿಸಬಹುದು. ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಲಭ್ಯ. ಒಬಿಸಿ ವರ್ಗಕ್ಕೆ 3 ವರ್ಷ ಮತ್ತು ಎಸ್‌ಸಿ / ಎಸ್‌ಟಿ ವರ್ಗಕ್ಕೆ 5 ವರ್ಷಗಳ ರಿಯಾಯಿತಿ ಇದೆ.

ಅರ್ಜಿ ಶುಲ್ಕ ಮತ್ತು ಆಯ್ಕೆ ವಿಧಾನ

ವಿವಿಧ ಹುದ್ದೆಗಳಿಗೆ ಅನುಗುಣವಾಗಿ ಅರ್ಜಿ ಶುಲ್ಕದಲ್ಲಿ ವ್ಯತ್ಯಾಸವಿದೆ. ಗೋ ಸಂವರ್ಧನಾ ವಿಸ್ತಾರಕ ಹುದ್ದೆಗೆ – 944 ರೂ., ಕೌ ಬ್ರೀಡಿಂಗ್‌ ಅಸಿಸ್ಟಂಟ್‌ ಹುದ್ದೆಗೆ – 826 ರೂ. ಮತ್ತು ಗೋ ಸೇವಕ ಹುದ್ದೆಗೆ – 708 ರೂ. ಅರ್ಜಿ ಶುಲ್ಕ ಪಾವತಿಸಬೇಕು. ಎಲ್ಲ ವರ್ಗದ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ಒಂದೇ ತೆರನಾಗಿದ್ದು, ಆನ್‌ಲೈನ್‌ ಮೂಲಕ ಪಾವತಿಸಬೇಕು. ಆನ್‌ಲೈನ್‌ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

ಮಾಸಿಕ ವೇತನ

ಆಯ್ಕೆಯಾದವರಿಗೆ ಗೋ ಸಂವರ್ಧನಾ ವಿಸ್ತಾರಕ ಹುದ್ದೆಗೆ – 26,000 ರೂ., ಕೌ ಬ್ರೀಡಿಂಗ್‌ ಅಸಿಸ್ಟಂಟ್‌ ಹುದ್ದೆಗೆ – 23,000 ರೂ. ಮತ್ತು ಗೋ ಸೇವಕ ಹುದ್ದೆಗೆ – 18,000 ರೂ. ಮಾಸಿಕ ವೇತನ ಲಭ್ಯ.

BPNL Recruitment 2024 ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್‌ ಮಾಡಿ.

ಅರ್ಜಿ ಸಲ್ಲಿಸುವ ವಿಧಾನ

  • ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್‌ ಮಾಡಿ (https://pay.bharatiyapashupalan.com/onlinerequirment)
  • ಅಗತ್ಯ ಮಾಹಿತಿಗಳನ್ನು ತುಂಬಿ.
  • ಅಗತ್ಯವಾದ ಡಾಕ್ಯುಮೆಂಟ್‌, ಫೋಟೊ ಅಪ್‌ಲೋಡ್‌ ಮಾಡಿ.
  • ಆನ್‌ಲೈನ್‌ ಮೂಲಕ ಅರ್ಜಿ ಶುಲ್ಕ ಪಾವತಿಸಿ.
  • ಮತ್ತೊಮ್ಮೆ ವಿವರಗಳನ್ನು ಪರಿಶೀಲಿಸಿ ಎಲ್ಲವೂ ಸರಿ ಇದೆ ಎಂದು ಖಚಿತಪಡಿಸಿ Submit ಬಟನ್‌ ಕ್ಲಿಕ್‌ ಮಾಡಿ.
  • ಅಪ್ಲಿಕೇಷನ್‌ ಫಾರಂನ ಪ್ರಿಂಟ್‌ಔಟ್‌ ತೆಗೆದಿಡಿ.

ಹೆಚ್ಚಿನ ವಿವರಗಳಿಗೆ ಭಾರತೀಯ ಪಶುಪಾಲನಾ ನಿಗಮ ಲಿಮಿಟೆಡ್‌ನ ವೆಬ್‌ಸೈಟ್‌ ವಿಳಾಸ: bharatiyapashupalan.comಗೆ ಭೇಟಿ ನೀಡಿ ಎಂದು ಪ್ರಕಟಣೆ ತಿಳಿಸಿದೆ.

Continue Reading

ಕರ್ನಾಟಕ

BJP-JDS Padayatra: ಬಿಜೆಪಿ-ಜೆಡಿಎಸ್‌ ಪಾದಯಾತ್ರೆಗೆ ಅನುಮತಿ ಕೊಡಲ್ಲ: ಗೃಹ ಸಚಿವ ಪರಮೇಶ್ವರ್‌

BJP-JDS Padayatra: ಈ ಹಿಂದೆ ನಮಗೂ ಅನುಮತಿ ಕೊಟ್ಟಿರಲಿಲ್ಲ, ಆದರೂ ನಾವು ಪಾದಯಾತ್ರೆ ಮಾಡಿದ್ದೆವು. ಅವರು ಪ್ರತಿಭಟನೆ ಮಾಡಲಿ, ತಡೆ ಹಾಕಲು ಹೋಗುವುದಿಲ್ಲ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ತಿಳಿಸಿದ್ದಾರೆ.

VISTARANEWS.COM


on

BJP-JDS Padayatra
Koo

ಬೆಂಗಳೂರು: ಬಿಜೆಪಿ, ಜೆಡಿಎಸ್ ಪಾದಯಾತ್ರೆಗೆ (BJP-JDS Padayatra) ನಾವು ಅನುಮತಿ ಕೊಡುವುದಿಲ್ಲ, ಬೇಕಿದ್ದರೆ ಪ್ರತಿಭಟನೆ ಮಾಡಿಕೊಳ್ಳಲಿ. ಈ ಹಿಂದೆ ನಮಗೂ ಅನುಮತಿ ಕೊಟ್ಟಿರಲಿಲ್ಲ, ಆದರೂ ನಾವು ಪಾದಯಾತ್ರೆ ಮಾಡಿದ್ದೆವು. ಅವರು ಪ್ರತಿಭಟನೆ ಮಾಡಲಿ, ತಡೆ ಹಾಕಲು ಹೋಗುವುದಿಲ್ಲ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ತಿಳಿಸಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾವು ಪಕ್ಷದ ವತಿಯಿಂದ ರಾಜಕೀಯ ಮಾಡುತ್ತೇವೆ. ಆದರೆ ಸರ್ಕಾರ ಉಪಯೋಗಿಸಿ ರಾಜಕೀಯ ಮಾಡಲ್ಲ. ಅವರು ರಾಜಕೀಯ ಮಾಡುತ್ತಿದ್ದಾರೆ, ನಾವೂ ರಾಜಕೀಯ ಮಾಡಬೇಕಾಗುತ್ತದೆ. ಮುಡಾ ಹಗರಣ ತನಿಖೆಗೆ ಆಯೋಗ ರಚನೆ ಮಾಡಿದ್ದೇವೆ. ವರದಿಯಲ್ಲಿ ತಪ್ಪು ಅಂತ ಬಂದರೆ ಕ್ರಮ ತೆಗೆದುಕೊಳ್ಳುತ್ತೇವೆ. ಬಿಜೆಪಿ, ಜೆಡಿಎಸ್ ಪಾದಯಾತ್ರೆಗೆ ಮಾತ್ರ ಅನುಮತಿ ಕೊಡುವುದಿಲ್ಲ, ಆದರೂ ಪಾದಯಾತ್ರೆ ಮಾಡಲು ಮುಂದಾದರೆ ತಡೆಯಲು ಹೋಗಲ್ಲ ಎಂದು ಹೇಳಿದ್ದಾರೆ.

ಕಾಂಗ್ರೆಸ್‌ನಿಂದ ಕೌಂಟರ್ ಪಾದಯಾತ್ರೆ ಬಗ್ಗೆ ಪ್ರತಿಕ್ರಿಯಿಸಿ, ಆ ಬಗ್ಗೆ ಪಕ್ಷದ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ರಣನೀತಿ ಮಾಡುತ್ತಿದ್ದಾರೆ ಎಂದು ಹೇಳಿದರು.

ಇದನ್ನೂ ಓದಿ | OBC Reservation: ಒಬಿಸಿ ಮೀಸಲಾತಿ ಹೆಚ್ಚಳಕ್ಕೆ ಸುಪ್ರೀಂ ಕೋರ್ಟ್‌ ತಡೆ; ನಿತೀಶ್‌ ಕುಮಾರ್‌ಗೆ ಮುಖಭಂಗ!ಇದನ್ನೂ ಓದಿ |

ರಾಜ್ಯದಲ್ಲಿ ಭಯದ ವಾತವರಣದ ಕಾರಣ ಬಂಡವಾಳ ಬರುತ್ತಿಲ್ಲ ಎಂಬ ನಿರ್ಮಲಾ ಸೀತಾರಾಮನ್ ಹೇಳಿಕೆಗೆ ಪ್ರತಿಕ್ರಿಯಿಸಿ, ಅನೇಕ ಕಾರಣಗಳಿಂದ ಕಂಪನಿಗಳು, ಆಯ್ಕೆಗಳನ್ನು ಇಟ್ಟುಕೊಂಡೇ ಬರುತ್ತವೆ. ಚೆನ್ನೈ, ಕರ್ನಾಟಕ, ಮಹಾರಾಷ್ಟ್ರ ಅಂತ ಆಯ್ಕೆ ಇರುತ್ತವೆ. ಅವರಿಗೆ ಎಲ್ಲಿ ಹೆಚ್ಚು ಸೌಲಭ್ಯಗಳು ಸಿಗುತ್ತವೋ ಅದರ ಪ್ರಕಾರ ತೀರ್ಮಾನ ಮಾಡುತ್ತಾರೆ. ಇಲ್ಲಿಯವರೆಗೆ ಯಾರು ಬಂದು ಹೊರಗೆ ಹೋಗುತ್ತೇವೆ ಎಂದು ಹೇಳಿಲ್ಲ. ಸುಮ್ಮನೆ ಇಲ್ಲಸಲ್ಲದ ಆಪಾದನೆ ಮಾಡುವುದು ಸರಿಯಲ್ಲ ಎಂದರು.

ಬಜೆಟ್‌ನಲ್ಲಿ ಆಂಧ್ರ ಸಿಎಂ ಚಂದ್ರಬಾಬು ನಾಯ್ಡುಗೆ 15 ಸಾವಿರ ಕೋಟಿ ಕೊಟ್ಟಿದ್ದಾರೆ. ಕೊಡಬೇಡಿ ಎನ್ನಲ್ಲ, ಆದರೆ ಎಲ್ಲರಿಗೂ ಸರಿ ಸಮಾನವಾಗಿ ಕೊಡಬೇಕು. ನಮ್ಮ ಪಾಲನ್ನು ನಮಗೆ ಕೊಡಿ ಅಂತ ದೆಹಲಿ, ಸುಪ್ರೀಂ ಕೋರ್ಟ್‌ವರೆಗೆ ತಲುಪಿದ್ದೇವೆ. ಕೊಟ್ಟಿದ್ದೀವಿ, ಕೊಟ್ಟಿದ್ದೀವಿ ಎನ್ನುತ್ತಾರೆ. ಏನು ಕೊಟ್ಟಿದ್ದೀವಿ ಅಂತ ಹೇಳಬೇಕಲ್ಲವೇ? ಭದ್ರಾ ಯೋಜನೆಗೆ ಹಣಕೊಡಬೇಕಿತ್ತು, ಕೊಟ್ಟಿಲ್ಲ. ಈ ರೀತಿ ಮಲತಾಯಿ ದೋರಣೆ ತೋರಿಸಿ, ಬೆಂಗಳೂರಿಗೆ ಬಂದು ಎಲ್ಲಾ ಕೊಟ್ಟಿದ್ದೀವಿ ಎಂದರೆ ಹೇಗೆ ಎಂದು ಪ್ರಶ್ನಿಸಿದರು.

ಬೆಂಗಳೂರು ದೇಶದ ಪ್ರತಿಷ್ಠಿತ ನಗರ, ಇದನ್ನ ಪ್ರಪಂಚಕ್ಕೆ ತೋರಿಸಬೇಕಲ್ವಾ? ನೀತಿ ಆಯೋಗಕ್ಕೆ ಮಮತಾ ಹೋಗಿ ವಾಕ್ ಔಟ್ ಮಾಡಿ ಬಂದಿದ್ದಾರೆ. ನಾವು ಹೋಗಿ ವಾಕ್ ಔಟ್ ಮಾಡಬೇಕಿತ್ತಾ? ರಾಜ್ಯ-ಕೇಂದ್ರದ ನಡುವಿನ ಸಂಬಂಧ ಚೆನ್ನಾಗಿರಬೇಕು. ಅದಕ್ಕೆ ರಾಜ್ಯವನ್ನು ಚೆನ್ನಾಗಿ ನಡೆಸಿಕೊಳ್ಳಬೇಕಲ್ವಾ ಎಂದರು.

ಬೆಂಗಳೂರಿನಲ್ಲಿ ನಾಯಿ ಮಾಂಸ ದಂಧೆ ಆರೋಪದ ಬಗ್ಗೆ ಪ್ರತಿಕ್ರಿಯಿಸಿ, ರೈಲ್ವೆ ನಿಲ್ದಾಣದಲ್ಲಿ ಗಲಾಟೆ ಆಗಿದೆ. ಇದಾದ ಮೇಲೆ ಆರೋಗ್ಯ ಇಲಾಖೆಯವರು, ಪೊಲೀಸರು ಸ್ಯಾಂಪಲ್‌ ಅನ್ನು ಲ್ಯಾಬ್‌ಗೆ ಕಳುಹಿಸಿದ್ದರು. ವರದಿಯಲ್ಲಿ ಮೇಕೆ ಮಾಂಸ ಎಂದು ಬಂದಿದೆ. ಸುಳ್ಳು ಆರೋಪ ಮಾಡಿದ್ದ ಪುನೀತ್ ಕೆರೆಹಳ್ಳಿ ಮತ್ತು ತಂಡದ ಮೇಲೆ ಕ್ರಮ ತೆಗೆದುಕೊಂಡಿದ್ದೇವೆ. ಗೊಂದಲ ಸೃಷ್ಟಿ ಮಾಡಬಾರದು ಎಂದು ಕ್ರಮ ಆಗಿದೆ. ಹೊರ ರಾಜ್ಯದಿಂದ ಮಾಂಸ ತಂದು ಮಾರೋದು ಹೊಸದಲ್ಲ, ಜನರಿಗೆ ಗೊಂದಲ ಬೇಡ, ಬಂದಿದ್ದು ಮೇಕೆ ಮಾಂಸ ಎಂದು ಸ್ಪಷ್ಟನೆ ನೀಡಿದರು.

Continue Reading

ದೇಶ

Physical Abuse: ತಂಗಿ ಮೇಲೆ 13 ವರ್ಷದ ಬಾಲಕನಿಂದ ಅತ್ಯಾಚಾರ, ಕೊಲೆ; ಕೇಸ್‌ ಮುಚ್ಚಲು ತಾಯಿಯೇ ಸಾಥ್!

Physical Abuse: ಬಾಲಕಿ ಮೇಲೆ ಸಹೋದರನೇ ಅತ್ಯಾಚಾರ ಎಸಗಿ, ಕೊಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಸುಮಾರು 50ಕ್ಕೂ ಅಧಿಕ ಜನರನ್ನು ವಿಚಾರಣೆ ನಡೆಸಿದ್ದಾರೆ. ವಿಚಾರಣೆ ವೇಳೆ ಕುಟುಂಬಸ್ಥರ ಹೇಳಿಕೆಯಲ್ಲಿ ವ್ಯತ್ಯಾಸವಾದ ಕಾರಣ ಕೂಲಂಕಷ ತನಿಖೆ ನಡೆಸಿದ್ದಾರೆ. ಆಗ ಸ್ಫೋಟಕ ಮಾಹಿತಿ ಲಭ್ಯವಾಗಿದೆ.

VISTARANEWS.COM


on

Physical Abuse
Koo

ಭೋಪಾಲ್:‌ ಮಧ್ಯಪ್ರದೇಶದ ರೇವಾದಲ್ಲಿ (Reva Case) 9 ವರ್ಷದ ತಂಗಿಯ ಮೇಲೆ 13 ವರ್ಷದ ಅಣ್ಣನು ಅತ್ಯಾಚಾರ ಎಸಗಿ, ಕೊಲೆ ಮಾಡಿದ ಪ್ರಕರಣ (Physical Abuse) ದೇಶಾದ್ಯಂತ ಸುದ್ದಿಯಾಗಿದೆ. ಅಶ್ಲೀಲ ವಿಡಿಯೊ ವೀಕ್ಷಿಸಿದ ಬಳಿಕ ಆತನು ತಂಗಿಯ ಮೇಲೆ ಅತ್ಯಾಚಾರ ಎಸಗಿ, ಕತ್ತುಹಿಸುಕಿ ಕೊಲೆ ಮಾಡಿರುವ ಕೇಸ್‌ಗೆ ಈಗ ಹೊಸದೊಂದು ತಿರುವು ಸಿಕ್ಕಿದೆ. ಬಾಲಕನು ಅತ್ಯಾಚಾರ ಎಸಗಿದ ಬಳಿಕ ಬಾಲಕಿಯನ್ನು ಕತ್ತು ಹಿಸುಕುವ ವೇಳೆ ಆತನ ತಾಯಿ ಹಾಗೂ ಇಬ್ಬರು ಅಕ್ಕಂದಿರು ಕೂಡ ಇದ್ದರು. ಹತ್ಯೆಯ ಬಳಿಕ ಪ್ರಕರಣ ಮುಚ್ಚಿಹಾಕಲು ಪ್ರಯತ್ನಿಸಿದರು ಎಂಬ ಭೀಕರ ಮಾಹಿತಿ ಲಭ್ಯವಾಗಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಸುಮಾರು 50ಕ್ಕೂ ಹೆಚ್ಚು ಜನರು ವಿಚಾರಣೆ ನಡೆಸಿದ್ದು, ತನಿಖೆಯ ಬಳಿಕ ಸ್ಫೋಟಕ ಮಾಹಿತಿ ಹೊರಬಿದ್ದಿದೆ. ಏಪ್ರಿಲ್‌ 24ರಂದೇ ಪ್ರಕರಣ ನಡೆದಿದೆ. ಮೊದಲು ಬಾಲಕನು ಅಶ್ಲೀಲ ವಿಡಿಯೊ ನೋಡಿದ್ದಾನೆ. ಇದಾದ ಬಳಿಕ ಕಾಮೋದ್ರೇಕಗೊಂಡ ಆತನು 9 ವರ್ಷದ ಸಹೋದರಿ ಮೇಲೆ ಅತ್ಯಾಚಾರ ಎಸಗಿದ್ದಾನೆ. ಬಾಲಕನ ಕೃತ್ಯವು ಆತನ ತಾಯಿ ಹಾಗೂ 17 ಮತ್ತು 18 ವರ್ಷದ ಸಹೋದರಿಯರಿಗೆ ಗೊತ್ತಿದೆ. ತಾಯಿಯ ಎದುರೇ ಬಾಲಕನು ಕತ್ತು ಹಿಸುಕಿದ್ದಾನೆ ಎಂಬುದಾಗಿ ಪೊಲೀಸ್‌ ಮೂಲಗಳು ತಿಳಿಸಿವೆ.

Crime News
Crime News

ಪೊಲೀಸರು ಹೇಳುವುದಿಷ್ಟು…

“ಬಾಲಕನು ಅಶ್ಲೀಲ ವಿಡಿಯೊ ವೀಕ್ಷಿಸಿದ ಬಳಿಕ ತಂಗಿಯ ಮೇಲೆ ಅತ್ಯಾಚಾರ ಎಸಗಿದ್ದಾನೆ. ಇದಾದ ಬಳಿಕ ಬಾಲಕಿಯು ತಂದೆ ಹೇಳುತ್ತೇನೆ ಎಂದು ಹೆದರಿಸಿದ್ದಾಳೆ. ಆಗ ಬಾಲಕಿಯ ಮೇಲೆ ಆತ ಹಲ್ಲೆ ನಡೆಸಿದ್ದಾನೆ. ಅಷ್ಟೇ ಅಲ್ಲ, ಬೆದರಿಕೆಯಿಂದ ವಿಚಲಿತನಾದ ಬಾಲಕನು ಮಲಗಿದ್ದ ತಾಯಿಯನ್ನು ಎಬ್ಬಿಸಿದ್ದಾನೆ. ಆಗ ತಾಯಿಯ ಎದುರೇ ಬಾಲಕಿಯ ಕತ್ತುಹಿಸುಕಿ ಕೊಲೆ ಮಾಡಿದ್ದಾನೆ. ಕೊಲೆಯ ಬಳಿಕ ತಾಯಿ ಹಾಗೂ ಆತನ ಇಬ್ಬರು ಸಹೋದರಿಯರು ಕೇಸ್‌ ಮುಚ್ಚಿಹಾಕಲು ಸಹಾಯ ಮಾಡಿದ್ದಾರೆ” ಎಂಬುದಾಗಿ ಪೊಲೀಸರು ತಿಳಿಸಿದ್ದಾರೆ.

ಕೊಲೆ ಬಳಿಕ ಕತೆ ಕಟ್ಟಿದರು

ಬಾಲಕಿಯ ಕೊಲೆಯ ಬಳಿಕ ಬಾಲಕನ ತಾಯಿ ಹಾಗೂ ಇಬ್ಬರು ಸಹೋದರಿಯರು ಕತೆ ಕಟ್ಟಿದ್ದಾರೆ. ಬಾಲಕಿಗೆ ವಿಷಕಾರಿ ಕೀಟವೊಂದು ಕಚ್ಚಿದೆ ಎಂಬುದಾಗಿ ಖಾಸಗಿ ಆಸ್ಪತ್ರೆಯೊಂದಕ್ಕೆ ಶವ ತೆಗೆದುಕೊಂಡು ಹೋಗಿದ್ದಾರೆ. ಖಾಸಗಿ ಆಸ್ಪತ್ರೆಯಲ್ಲಿ ತಪಾಸಣೆ ನಡೆಸಲು ನಿರಾಕರಿಸಿದಾಗ ಸರ್ಕಾರಿ ಆಸ್ಪತ್ರೆಗೆ ಸಾಗಣೆ ಮಾಡಿದ್ದಾರೆ. ಸರ್ಕಾರಿ ಆಸ್ಪತ್ರೆಯಲ್ಲಿ ಸುಳ್ಳು ವರದಿ ನೀಡದೆ, ಬಾಲಕಿಯನ್ನು ಅತ್ಯಾಚಾರದ ಬಳಿಕ ಕೊಲೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ. ಇದಾದ ಬಳಿಕ ಪ್ರಕರಣ ಬಯಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಕ ಸೇರಿ ಆತನ ಕುಟುಂಬಸ್ಥರನ್ನು ಬಂಧಿಸಿರುವ ಪೊಲೀಸರು ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ.

ಇದನ್ನೂ ಓದಿ: Sexual Harassment: ರಿಕ್ಷಾದಲ್ಲಿ ಹೋಗುತ್ತಿದ್ದ ಬಾಲಕನ ಮೇಲೆ ಅತ್ಯಾಚಾರ ಎಸಗಿದ ಚಾಲಕ

Continue Reading
Advertisement
karnataka rain
ಮಳೆ3 mins ago

Karnataka rain: ಪ್ರವಾಹದ ಭೀಕರತೆ; ಹಳ್ಳದಲ್ಲಿ ತೇಲಿಬಂದ ಎಮ್ಮೆಗಳ ಕಳೇಬರ

Tharun Sudhir and Sonal modeled by eco-friendly invitations
ಸ್ಯಾಂಡಲ್ ವುಡ್7 mins ago

Tharun Sudhir: ಪರಿಸರ ಸ್ನೇಹಿ ಇನ್ವಿಟೇಷನ್ ಮೂಲಕ ಮಾದರಿಯಾದ ಸೋನಾಲ್ ಮತ್ತು ತರುಣ್!

Ranbir Kapoor
ದೇಶ14 mins ago

Ranbir Kapoor: ಮೋದಿಯದ್ದು ‘ಆಯಸ್ಕಾಂತದಂಥ ವ್ಯಕ್ತಿತ್ವ’ ಎಂದ ರಣಬೀರ್‌ ಕಪೂರ್;‌ ಕನ್ನಡಿಗನಿಗೆ ನಟ ಹೇಳಿದ ಕತೆ ಏನು?

Viral News
ವೈರಲ್ ನ್ಯೂಸ್26 mins ago

Viral News: ಮನೆಯೊಳಗೆ ವಿಚಿತ್ರ ವಾಸನೆ, ಇಡೀ ಕುಟುಂಬ ಅಸ್ವಸ್ಥ; ರಹಸ್ಯ ಕೆಮೆರಾದಲ್ಲಿತ್ತು ಶಾಕಿಂಗ್‌ ದೃಶ್ಯ!

Actor Dhanush Shares FIRST Post After Speech
ಕಾಲಿವುಡ್43 mins ago

Actor Dhanush: ಮನೆ ಬಗ್ಗೆ ಮಾತಾಡಿ ಸಿಕ್ಕಾಪಟ್ಟೆ ಟ್ರೋಲ್ ಆದ ಬೆನ್ನಲ್ಲೇ ಹೊಸ ಪೋಸ್ಟ್‌ ಹಂಚಿಕೊಂಡ ನಟ ಧನುಷ್‌!

Curry Leaves
ಆರೋಗ್ಯ45 mins ago

Curry Leaves: ಇದರ ಮಹತ್ವ ತಿಳಿದರೆ ನೀವು ಇನ್ನೆಂದೂ ಕರಿ ಬೇವಿನ ಎಲೆಯನ್ನು ಪಕ್ಕಕ್ಕೆ ಎತ್ತಿಡುವುದಿಲ್ಲ!

BPNL Recruitment 2024
ಉದ್ಯೋಗ53 mins ago

BPNL Recruitment 2024: ಭಾರತೀಯ ಪಶುಪಾಲನಾ ನಿಗಮದಲ್ಲಿದೆ 2,250 ಹುದ್ದೆ; 10ನೇ ತರಗತಿ ಪಾಸಾದವರೂ ಅಪ್ಲೈ ಮಾಡಿ

BJP-JDS Padayatra
ಕರ್ನಾಟಕ1 hour ago

BJP-JDS Padayatra: ಬಿಜೆಪಿ-ಜೆಡಿಎಸ್‌ ಪಾದಯಾತ್ರೆಗೆ ಅನುಮತಿ ಕೊಡಲ್ಲ: ಗೃಹ ಸಚಿವ ಪರಮೇಶ್ವರ್‌

Physical Abuse
ದೇಶ1 hour ago

Physical Abuse: ತಂಗಿ ಮೇಲೆ 13 ವರ್ಷದ ಬಾಲಕನಿಂದ ಅತ್ಯಾಚಾರ, ಕೊಲೆ; ಕೇಸ್‌ ಮುಚ್ಚಲು ತಾಯಿಯೇ ಸಾಥ್!

train service
ಹಾಸನ1 hour ago

Train services: ಎಡಕುಮೇರಿಯಲ್ಲಿ ಭೂಕುಸಿತ; ಆಗಸ್ಟ್‌ 4ರವರೆಗೆ 14 ರೈಲುಗಳ ಸಂಚಾರ ರದ್ದು

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka rain
ಮಳೆ3 mins ago

Karnataka rain: ಪ್ರವಾಹದ ಭೀಕರತೆ; ಹಳ್ಳದಲ್ಲಿ ತೇಲಿಬಂದ ಎಮ್ಮೆಗಳ ಕಳೇಬರ

Tungabhadra Dam
ಕೊಪ್ಪಳ20 hours ago

Tungabhadra Dam: ಕಾಲುವೆಯಲ್ಲಿ ಬಾಲಕರ ಈಜಾಟ; ಅಧಿಕಾರಿಗಳಿಗೆ ಪೀಕಲಾಟ!

Elephant attack
ಮಳೆ22 hours ago

Elephant attack : ಮಳೆ ಮಧ್ಯೆ ಮಲೆನಾಡಿನಲ್ಲಿ ಕಾಡಾನೆಗಳ ಕಾಟ; ಪ್ರವಾಹಕ್ಕೆ ಸಿಲುಕಿದ ಪಟಗುಂದಿ ಗ್ರಾಮ

karnataka Rain
ಮಳೆ24 hours ago

Karnataka Rain : ಮಳೆ ನಿಂತರೂ ಕಡಿಮೆಯಾಗದ ಅನಾಹುತ; ಮಾದಪುರ ಟೌನ್ ಸಮೀಪ ಗುಡ್ಡ ಕುಸಿತ

karnataka Rain
ಮಳೆ1 day ago

Karnataka Rain : ರಭಸವಾಗಿ ಬೀಸಿದ ಗಾಳಿಗೆ ಮನೆ ಮೇಲೆ ಬಿದ್ದ ತೆಂಗಿನ ಮರ; ನದಿ ನೀರು ಸೇವಿಸದಂತೆ ಸೂಚನೆ

Karnataka weather Forecast
ಮಳೆ2 days ago

Karnataka Weather : ವೀಕೆಂಡ್‌ ಮೋಜಿಗೆ ಮಳೆರಾಯ ಅಡ್ಡಿ; ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ

ramanagara news
ರಾಮನಗರ2 days ago

Ramanagar News : ರಾಮನಗರದಲ್ಲಿ ಎರಡು ಜಡೆ ಹಾಕಿಲ್ಲವೆಂದು ವಿದ್ಯಾರ್ಥಿನಿಯರ ಕೂದಲು ಕತ್ತರಿಸಿದ ಶಿಕ್ಷಕರು ಅಮಾನತು

karnataka rain
ಮಳೆ2 days ago

Karnataka Rain : ಕಾವೇರಿ ನದಿ ತೀರದಲ್ಲಿ ಪ್ರವಾಹ ಭೀತಿ; ಮುತ್ತತ್ತಿಗೆ ಪ್ರವಾಸಿಗರ ನಿಷೇಧ, ಶ್ರೀರಂಗಪಟ್ಟಣದಲ್ಲಿ ಪಿಂಡ ಪ್ರದಾನಕ್ಕೆ ಬ್ರೇಕ್

Ankola landslide
ಉತ್ತರ ಕನ್ನಡ3 days ago

Ankola landslide: ಅಂಕೋಲಾ-ಶಿರೂರು ಗುಡ್ಡ ಕುಸಿತ; ನಾಳೆಯಿಂದ ಪ್ಲೋಟಿಂಗ್ ಪ್ಲಾಟ್‌ಫಾರಂ ಕಾರ್ಯಾಚರಣೆ

karnataka rain
ಮಳೆ3 days ago

Karnataka Rain : ಉಕ್ಕಿ ಹರಿಯುವ ನೇತ್ರಾವತಿ ನದಿಯಲ್ಲಿ ತೇಲಿ ಬಂದ ಜೀವಂತ ಹಸು

ಟ್ರೆಂಡಿಂಗ್‌